ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಮಧುಕುಮಾರ್ ಸಿ.ಹೆಚ್. ನೂತನ ಪ್ರಜ್ಞಾ ದೀಪಿಕೆ ನಿರ್ಗಮಿಸು ಸಾಕ್ಷಿಪ್ರಜ್ಞೆಯೆ, ಅಂತರಂಗದ ದನಿಯೆದುರು ಮಂಡಿಯೂರಿ ನಿಲ್ಲಬೇಡ: ಯಾರದೋ ಬಹಿರಂಗ ತಲ್ಲಣಕೆ ಮನ ತೆರೆಯಬೇಡ ತಪ್ಪು-ಒಪ್ಪುಗಳ ಕಂತೆಯನು ಅಡ್ಡಗೋಡೆಯ ಮೇಲಿಟ್ಟು ಸುಮ್ಮನೆ- ತಣ್ಣಗೆ ಪಲಾಯನ ಮಾಡು ಪ್ರತಿಕ್ರಿಯೆ – ಸ್ಪಂದನದ ಗೊಡವೆ ನಿನಗೇತಕೆ? ಭೂತದ ಬೆನ್ನು ಹತ್ತಿ; ವರ್ತಮಾನವ ಕಟ್ಟಿಡು ಸತ್ಯದರ್ಶನಕೆ ಗಾಂಧಾರಿ- ಧೃತರಾಷ್ಡçರ ಸಾಲಲ್ಲಿ ನಿಲ್ಲು ನಮ್ಮವ ನಮ್ಮವರೆಂಬ ದಾರಿಯಲಿ ಸದ್ದುಮಾಡದೆ ನುಸುಳಿ ನುಸುಳಿ ಮುಂದೆ ಸಾಗು. ಅನುಭವ ಮಂಟಪದ ಮಹಾನುಡಿಗಳನು ಅನ್ಯರಿಗೆ ಅನ್ವಯಿಸಿ ಗುಣಿಸಿಬಿಡು ಅಹಮಹಮಿಕೆಯ ಆಪ್ಯಾಯನದೊಡನೆ ಲೋಕದೆದುರು ಸರ್ವಗುಣ ಸಂಪನ್ನತೆಯ ಪೋಷಾಕು ಧರಿಸಿ ಯಾರ ಜಪ್ತಿಗೂ ಸಿಗದ ನಗೆಯ ನವಿಲನ್ನೆÃರಿ ಆ ಭಾವ ಈ ಭಾವ ಎಲ್ಲ ಭಾವಗಳ ಹಿಮ್ಮೆಟ್ಟಿಸಿ ಸುಮ್ಮನೆ- ತಣ್ಣಗೆ ಪಲಾಯನ ಮಾಡು ಸುಮ್ಮನೆ- ತಣ್ಣಗೆ ಪಲಾಯನ ಮಾಡು ======================= ಪರಿಚಯ: ಕನ್ನಡಭಾಷಾ ಶಿಕ್ಷಕರು-ಬರಹಗಾರರು

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಕವಿ ಕೆ.ಬಿ.ಸಿದ್ದಯ್ಯನವರ ನೆನಪಿನಲ್ಲಿ ಕೊನೆಯ ಅ.. ಆ.. ಮಂಟಪ ಡಾ.ಆನಂದ ಕುಮಾರ್ ಮೈಸೂರು ಹಿಂದೆ ಮುಂದೆ ಒಂದಾಕ್ಷರದ ಬದಲಿಕೆ ಒಂದಾಕ್ಷರ ಸೇರೊ ಆಳಿಸೋ ಹಾಗಿಲ್ಲವೆಂದು ಪ್ರಕಟಿಸೋಕೊ ತಾಕೀತು ಮಾಡೋ ಹಾಗೆ ಅ.. ಆ.. ಮಂಟಪದ ಮಾರ್ಗದ ಸ್ವೀಕಾರಕ್ಕೆ ಕಾಲನ ಒಪ್ಪಿಸಿದ ತಂಟೆಕೋರ ಮುದ್ದು ಮಾದಪ್ಪನ ಕುಡಿಯೇ ಕೆಲಹೊತ್ತು ಇನಿಯ ಮೋಹ ಪಾಶ ಕಳಚಿ ಸಿದ್ದಾರ್ಥ ರೂಪ ಧರಿಸಿಯೂ ಪತಿ ಧರ್ಮ ಪಾಲಕನಾಗಿಯೂ ಆಲ್ಲಮ.. ಅಲ್ಲ..ಹೌದು ಅಪ್ಪ ಭಾವ ಬಂಧನ ಕಳಚದಾ ಕಹಿ ಸಿಹಿ ಊಣ್ಣೋ ವ್ಯಾಮೋಹ ವ್ಯಾಕುಲತೆ ಇಲ್ಲದಾಗಿ ಸಂಸಾರ ಸಾಗರ ಈಜಿ ತಾವರೆ ಪುಷ್ಪಧಾರಿ ಆದಿಜಾಂಭವನಾದೆ ಅಡ್ಡಿ ಅತಂಕ ಆಗಾಧಗಳೊಳಗಿಂದ ಎದ್ದು ಮರೆವಿನಂದು ಪೂಜಿಸುವಿಕೆಗೆ ನಿನ್ನ ಕೈನ ಸುರೆ ಮದ್ದು ನೀಡೆಂದು ಬೇಡಿ ಪಡೆದಿಹ ಐಭೋಗ ಸಂತನಂತೆ ಸಂಗಡಿಗನಾಗಿ ಎಲ್ಲರೊಂದಿಗೆ ಹಂಚಿಕೊಂಡು ಸೇವಿಸಿದ್ದ ಮಾತಂಗಿ ಮಗನೇ ನಾಡ ಮಣ್ಣಲ್ಲಿ ಮಣ್ಣಾದವರ ಕತೆಯ ಕರಳು ಕಿವಚುವಂತೆ ಹಾಡು ಕಟ್ಟಿದ್ದ ಮೋಡಿಗಾರ ಅಲ ಆಕಾಶೆ ಮರದ ನಡು ಮಧ್ಯೆ ಮಲಗಿದ್ದ ಬಾಧ್ಯತೆಗೆ ಕಟ್ಟು ಬಿದ್ದಯೊ ಮಾನ್ಯತೆಗಾಗಿ ಚರಮರಾಗವನ್ನು ಗುನುಗಿ ಹೋಗಿ ಬಿಟ್ಟಯಾ ಗುರುವೇ. ============================. ಪರಿಚಯ: ಕಳೆದ ಇಪ್ಪತ್ತೇಳು ವರುಷದಿಂದ ದಲಿತ ಚಳುವಳಿ ಹಾಗೂ ಅಲೆಮಾರಿ & ಅರೆ ಅಲೆಮಾರಿ ಮತ್ತು ಕೊಳಚೆ ನಿವಾಸಿಗಳ ಹಕ್ಕುಗಳ ಪರ ಕೆ ಕೆ ಎನ್ ಎಸ್ ಸಹಿತ ಅನೇಕ ಸಂಘಟನೆಗಳೊಂದಿಗೆ ಕೆಲಸ ಮಾಡುತ್ತ ಹಾಗೂ ಜಾತಿ ಸಮನ್ವಯಕ್ಕಾಗಿ ಸಾಮರಸ್ಯ ವೇದಿಕೆಯಲ್ಲಿ ಪಾಲ್ಗೊಂಡಿದ್ದಾರೆ

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಪ್ರಮಿಳಾ ಎಸ್.ಪಿ. ಹಬ್ಬ ದೀಪಾವಳಿಯ ಸಡಗರಕ್ಕೆ ಮಗಳು ಮನೆಗೆ ಬಂದಂತೆ ಮೇಕೆಯೂ ಸಂತೆಗೆ ಬಂದಿತು. ಯಾರದ್ದೋ ಮನೆ ಸೇರಿ ರಾತ್ರಿ ಇಡೀ ಮಾವಿನ ಎಲೆ ತಿಂದು ನಗುತ್ತಿತ್ತು. ತುಂಬಿದ ಮೊಲೆಗಳು ಜೋತು ಬಿದ್ದಿದ್ದ ಕಂಡು ಆಡಿನ ಹಾಲು ಶ್ರೇಷ್ಟ ವಂತೆ ಎಂದೇ ನನ್ನೆದೆಯೊಳಗೆ. ಮಾವಿನ ಎಲೆ ಮೆಲುಕಿ ಮಲಗಿದ್ದ ಮೇಕೆ ಬೆಳಗಿನ ಜಾವಕ್ಕೆ ಹಾಲು ಕಕ್ಕಿತ್ತು. ಒಂದಾಡು ಮೂರು ಪಾಲಾಗಿ ನೇತಾಡುತ್ತಿದ್ದ ನೋಡಿ ಮನ ಹೋಳಾಗಿತ್ತು. ಮಹಾವೀರ ನ ನಾಡಲ್ಲಿ ಅಣ್ಣ ನ ವಚನ ನೆನೆದು.. ಮಗಳ ಊಟ ಮುಗಿಯಿತು. ಆಕಳಿಕೆ ಬಂತೆಂದು ನೆಪದಲ್ಲಿ ಕಣ್ಣ ನೀರು ಹೊರ ಹರಿಯಿತು.. ========== ಪರಿಚಯ: ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ವೃತ್ತಿಯಲ್ಲಿ ಶಿಕ್ಷಕಿ,ನೋವುಗಳ ನಡುವೆಯೂ ಖುಶಿಯಾಗಿರುವ ಬಯಸುವ ವ್ಯಕ್ತಿತ್ವ

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಮನದ ಹನಿಗಳು ಅನಿತ ಕೃಷ್ಣಮೂರ್ತಿ ಸಿದ್ದವಾದ ಸೆಳೆತದ ಹೊಸ್ತಿಲು ಸದ್ದಿರದೆ ಸುಳಿದಾಡಿದೆ ಸ್ನೇಹ ಸೇತುವೆ ಹತ್ತಲು ಸಾಧಿಸಲು ಗುರಿ ಮುಂದಿನ ಹಾದಿ ನೂರಾರು ಬಾಧಿಸಲು ಕಾಯಬಹುದು ಆಲೋಚನೆಯ ಕರಾರು ಮನಸಲಿ ಕತ್ತಲಿರುವಾಗ ಕಣ್ಣಿನ ಹೊಳಪು ಬೆಳಕಾಗಿ ಸುತ್ತಲಾಗಲಿಲ್ಲ ನಾನೇಕೆ ಹುಡಕಲಿ ನಿನ್ನ ಅಲ್ಲಿ ಇಲ್ಲಿ ಮಾಸದಂತೆ ಉಳಿದಿದೆ ನಿನ್ನದೇ ಚಿತ್ರ ಮನದ ಭಿತ್ತಿಯಲಿ ಹಟದ ಬೇಲಿಯನ್ನೇ ಸುತ್ತಿಕೊಂಡಿದ್ದ ಮನಸು ದಾಟಿ ಬಂದಿತ್ತು ಕಂಡು ನಿನ್ನ ಮಂದಸ್ಮಿತದ ಸೊಗಸು ಕಾದಿದೆ ತೆಪ್ಪವೊಂದು ಸೇರಿಸಲು ದೂರ ತೀರವನು ಕಾಡಿದೆ ನೆನಪೊಂದು ಹೊರಲಾರದೆ ದೂರಿನ ಭಾರವನು ನಾನೇಕೆ ಸ್ಪರ್ಧಿಸಲಿ ನಿನ್ನೊಂದಿಗೆ ಹೂವೇ ನಮ್ಮಿಬ್ಬರ ಗುರಿ ಒಂದೇ… ಒಲವೇ… ಅಲ್ಲವೆ! ಬೊಗಸೆಯಲ್ಲಿ ಹಿಡಿದ ಪ್ರೀತಿಗೂ ಕಣ್ಣ ರೆಪ್ಪೆಯಂತೆ ಕಾಪಾಡುವ ಮಮತೆಗೂ ಪೈಪೋಟಿಯೇ?  ಎಷ್ಟು ಮಾತನಾಡಿದೆನೋ ಹೊರಗೆ ಅಷ್ಟು ಮುಚ್ಚಿಟ್ಟಿರುವೆನು ಮೌನದೊಳಗೆ

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಮುಖವಾಡ ಸುಜಾತ ರವೀಶ್ ಮುಖವಾಡ *** ಕಿತ್ತೊಗೆಯಬೇಕೆನಿಸುತಿದೆ ಅಂಟಿಕೊಂಡಿರುವ ಈ ಮುಖವಾಡಗಳ ಬಿಸಿ ಧಗೆಯ ಕುಲುಮೆಯಲ್ಲಿ ಉಬ್ಬೆಗೆ ಹಾಕಿದಂತಿದೆ ನೈಜತೆಯ ಶುದ್ದ ಹವೆಯಲ್ಲಿ ಮನ ಉಸಿರಾಡಬಯಸುತಿದೆ. ಮನದಲ್ಲಿ ಜ್ವಾಲಾಮುಖಿ ಸಿಡಿಯುವಂತಿದ್ದರೂ ಲಾವಾರಸ ಹೊರಚಿಮ್ಮದಂತೆ ಜಾಗೃತಿ ವಹಿಸಬೇಕಾಗಿದೆ ಶಾಂತತೆಯ ಮುಖವಾಡ ತೊಟ್ಟು ಬದುಕು ದೂಡಬೇಕಾಗಿದೆ. ಗೋಸುಂಬೆಯ ಹಾಗೆ ಬಣ್ಣ ಬದಲಿಸುತಿರುವವರ ನೋಡಿದಾಗೆಲ್ಲ ಮುಖಕ್ಕೆ ರಾಚುವಂತೆ ಬೈದುಬಿಡಬೇಕೆಂದೆನಿಸಿದರೂ ಸಭ್ಯತೆಯ ಮುಖವಾಡ ಧರಿಸಬೇಕಾಗಿದೆˌನಟಿಸಬೇಕಾಗಿದೆ. ಪರಂಪರಾನುಗತ ಉರುಳುಗಳಿಂದ ಬಿಡಿಸಿಕೊಳ್ಳಬೇಕೆನಿಸಿದರೂ ಹಕ್ಕಿಯಂತೆ ಸ್ವೇಚ್ಛೆಯಾಗಿ ನೀಲನಭದಿ ವಿಹರಿಸಬೇಕೆಂದರೂ ಮತ್ತೆ ಸಂಪ್ರದಾಯದ ಮುಖವಾಡದ ಹಿಂದೆ ನಿಲ್ಲಬೇಕಾಗಿದೆ. ಆಸೆ ಅಕಾಂಕ್ಷೆ ಅಭಿಪ್ರಾಯದ ಹೊರೆ ಬಲವಂತವಾದಾಗಲೆಲ್ಲಾ ಎಲ್ಲವನೂ ಬಿಸುಟು ಸ್ವಚ್ಛಂದವಾಗಿಬಿಡಬೇಕೆನ್ನಿಸಿದರೂ ಸಂಬಂಧಗಳ ಮುಖವಾಡದ ಮರೆಯಲಿ ನಗಲೇಬೇಕಾಗಿದೆ. ಇದು ನಮಗೇನೂ ಹೊಸದಲ್ಲˌಕಷ್ಟವೂ ಅಲ್ಲ ಬಿಡಿ ಮುಖವಾಡಗಳ ತಯಾರಿˌಧರಿಸಲು ತರಬೇತಿ ಬಾಲ್ಯದಿಂದಲೇ ತೊಟ್ಟಿದ್ದೇವೆ ತೊಡುತ್ತಲೇ ಇರುತ್ತೇವೆ ಮುಖವಾಡಗಳ ಬೇಡಿ. ಕನ್ನಡಿಯ ಮುಂದೆ ಮುಖವಾಡವಿರದೆ ನಿಂತಾಗಲೆಲ್ಲಾ ನನ್ನ ಮುಖ ನನದೆನಿಸುವುದಿಲ್ಲˌಯಾವುದೋ ಅಪರಿಚಿತತೆ ನನ್ನತನ ಉಳಿಯಲು ಸಮಯವೇ ಇಲ್ಲವೆಂಬ ವಿಷಣ್ಣತೆ ಬರುತಿದೆ ಕರೆˌಮುಖವಾಡ ಧರಿಸಿ ಹೊರಟೆˌಬರಲೇ? ===============================

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಪ್ರಕಾಶ್ ಕೋನಾಪುರ ಬಟ್ಟೆಗೆ ಮುಕ್ತಿ ಬೇಕಿದೆ! ಈಗೀಗ ಕತ್ತಲಲ್ಲಿಯೇ ಬೆತ್ತಲಾಗಬೇಕೆಂದೇನಿಲ್ಲಬೆಳಕಿನಲ್ಲೂ ಬೆತ್ತಲಾಗಬಹುದುಬಟ್ಟೆ ಕಳಚುವವರಿದ್ದರೆ ಬೆತ್ತಲಾಗಲು ಕತ್ತಲಿಗೆ ಕಾಯುವ ಮೂರ್ಖರೇಕತ್ತಲಲ್ಲಿ ಬೆತ್ತಲಾಗುವವರನ್ನೂ ನೋಡಬಹುದೀಗತ್ರಿನೇತ್ರಿಗರು ಗೋರಿಯೊಳಗೆ ಬೆತ್ತಲಾಗಿ ಮಲಗಿದವನಿಗೆ ಪದವಿಬಿರುದುಬಾವಲಿ ಅಷ್ಟೈರ್ಯಗಳು ಬಟ್ಟೆ ಹೊದಿಸಲಾಗಲಿಲ್ಲ ಹೆರಿಗೆನೋವಿನಿಂದ ನರಳುತ್ತಿರುವ ಹೆಣ್ಣೇನಾಚದಿರು ಬೆತ್ತಲಾಗಿಹೆನೆಂದು ಹೊಸಜೀವದ ಸೃಷ್ಟಿಗೆಬಟ್ಟೆ ತೊಟ್ಟ ನೀಚರೆದರು   ಬಟ್ಟೆಗೆ ಬಸಿರು ಮುಚ್ಚಿಡಲಾಗುವುದಿಲ್ಲಹಾಗೆಯೇ ಮನುಷ್ಯನ ಹೊಲಸನ್ನೂ ಓ ಮನುಷ್ಯನೇ ಬೆತ್ತಲಾಗದಿರುನಿನ್ನ ಕೊಳಕು ದೇಹವನ್ನು ನೋಡಲಾಗುವುದಿಲ್ಲಕೊಳಕನ್ನು ಮುಚ್ಚಿಟ್ಟು ಸುಸ್ತಾದಬಟ್ಟೆಗೆ ಮುಕ್ತಿ ಬೇಕಿದೆ  ============= ಪರಿಚಯ: ಬಿ.ಎಸ್ಸಿ(ಕೃಷಿ) ಪದವೀಧರ, ಶಿಕಾರಿಪುರದಲ್ಲಿ ವಾಸ, ಜಿಲ್ಲಾ ಉಪಾಧ್ಯಕ್ಷ,ಆಮ್ ಆದ್ಮಿ ಪಾರ್ಟಿ,ಶಿವಮೊಗ್ಗ ಜಿಲ್ಲೆ

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ನಚಂ ವಯಸಲ್ಲದ ವಯಸ್ಸಲ್ಲಿ ಹೊತ್ತಲ್ಲದ ಹೊತ್ತಲ್ಲಿ ಕತ್ತಲೆಯ ಬೆನ್ನತ್ತಿ ಬಂದ ಓ ಬೇಳಕೆಂಬ ಕನಸೇ ಹೇಳು ನಿನೆಲ್ಲಿಗೆ ಹೋದೆ ಮನದ ಇರುಳು ತೊಲಗಲೇ ಇಲ್ಲ ನಿನ್ನ ಹೆಜ್ಜೆ ಮೂಡಲೇ ಇಲ್ಲ ಕಣ್ಣಬಿಟ್ಟು ನೋಡಿದೊಡೆ ಕಾಲವೇ ಕೇಳೇದಿತ್ತು ಕತ್ತಲೇ ಮಾತ್ರ ಉಳಿದಿತ್ತು! ಕರುಣೇ ಇಲ್ಲದ ಕಾಲದ ಬೇಳಕೇ ನೀನಾಗದಿರು ಮರಭೂಮಿಯ ನಿರ್ಗುಳ ಹುಡುಕುತ್ತಿರುವೆ ಹುಡುಕುತ್ತಿರುವೆ ನಿನ್ನ ಬಾ ಬೇಳಗೊಮ್ಮೆ ಬದುಕ ಹಬ್ಬವೆಂಬ ನೆಪಹೂಡಿ…. ಬಂದು ನಿಲ್ಲು ಬೇಳಕೇ ಕಾಲದ ಬಿರುಗಾಳಿಗೆ ಆರದೆ ನಿನ್ನ ಹಸಿವು ನನಗೂ ಇದೆ ಅರಿತು ಬಾ ನಿನೊಮ್ಮೆ ದೀಪಾವಳಿಯ ನೆಪವೊಡ್ಡಿ!?==========================

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಬಿದಲೋಟಿ ರಂಗನಾಥ್ ಮೌನದ ಗೆರೆಯ ನಡುವೆ.. ಒಡಲುರಿಯ ಕನಸೊಂದು ಚುಕ್ಕಿಗಳತ್ತ ಮುಖ ಮಾಡಿ ಭಾವದಗೂಡಿನಲಿ ಅರಳಿ ಮುತ್ತಾಗಿ ಸಮುದ್ರದ ಮೇಲೆ ಬರೆದ ಕವನದ ಕರುಳ ತಂತಿಯಲಿ ಸುತ್ತಿಕೊಂಡ ಸಂಬಂಧ ಕಿತ್ತಾಡಿ ತಿನ್ನಲಿಲ್ಲ ಒಟ್ಟಾಗಿ ಬೆಳೆಯಲಿಲ್ಲ ಅತ್ತು ಕರೆದು ಕಣ್ಣೀರ ಕಡೆಯಲಿಲ್ಲ ಅದೆಂಥದ್ದೋ ಭಾವದ ಸೆಳೆತ ಹತ್ತಿರ ನಿಂತೆ ಹಾಡುತ್ತಿದೆ ಕಣ್ಣ ಕನ್ನಡಿಯ ಬಿಂಬದಲಿ ಕಟ್ಟಿದ ಕನಸುಗಳ ಕಂತೆ ಬಿಚ್ಚಿ ನೋಡುವ ಬಯಲ ಕುದುರೆ ಈ ಜಗದ ಮಿಣುಕು ಬೆಳಕು ಎಲ್ಲೋ ನಿಂತು ನೋಡಿ ಬೆಸೆದ ಅನುಬಂಧ ಮೀಟುತ್ತಿದೆ ನನ್ನೊಳಗು ನಿನ್ನೊಳಗು ನಿಷ್ಕಲ್ಮಶದ ದೀಪ ಉರಿಯುವಂತೆ ತಿಳಿನೀರು ಬೊಗಸೆ ತುಂಬುವಂತೆ ನಿನ್ನ ಕಣ್ಣೊಳಗು ಕಸ ಕಡ್ಡಿಯಿಲ್ಲ ನನ್ನ ಕಣ್ಣೋ ಮೊದಲೇ ಕರುಳು ಕಲೆತ ಭಾವದ ನಾಡಿ ಭಯವಿಲ್ಲದ ಬೆಳದಿಂಗಳ ಬಯಲು ತೆರೆದ ಕಣ್ಣಿನಲಿ ಬೆಳೆದ ನಮ್ಮಗಳ ಮಾತು ಶಾಂತವಲ್ಲದ ನದಿಯ ಮೇಲೆ ಕೂತ ಹಕ್ಕಿಗೆ ಪಾಠವಾಗುತ್ತಿದೆ ಮೌನದ ಗೆರೆಯ ನಡುವೆ ಬರೆದ ಹಕ್ಕಿಯ ರೆಕ್ಕೆಗೆ ಜೀವ ಬಂದಿದೆ. ಯಾರೆನಂದರೇನಂತೆ ಕೂತ ತಾವು ಕತ್ತನು ಕೊಂಕಿಸಿಲ್ಲ ಬಾಹುಗಳ ಚಾಚಿಲ್ಲ ಒಡೆದ ಕನ್ನಡಿ ನನ್ನದೆನ್ನ ಅಕ್ಕರೆಯ ಹಣೆ ಮುತ್ತು ಅಕ್ಕನೊಡಲಿಗೆ ಬೆಂಗಾವಲು ============

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಬದುಕೆಂಬ ವಂಚಕ! ಸೌಜನ್ಯ ದತ್ತರಾಜ ಪರಿಚಿತರಾಗುತ್ತಾ ಆಗುತ್ತಾ ಪರಕೀಯತೆಯ ಭಾವವೇ ಹೆಚ್ಚಾಗಿ ಆಗೀಗ ಪೆಚ್ಚಾಗಿ ಕಾಡುತಿದೆ ಹತ್ತಿರವಾದಷ್ಟೂ ಒಬ್ಬರನೊಬ್ಬರು ದೂರುತ್ತಲೇ ದೂರವಾಗುತ್ತಿರುವ ವಿಪರ್ಯಾಸ ವಿಚಲಿತರನ್ನಾಗಿಸುತಿದೆ ಏಕೆ…. ಏನಾಯ್ತು……ಹೇಗಾಯ್ತು ಪ್ರಶ್ನಿಸಿಕೊಳ್ಳಲೇ ಭಯವಾಗುತ್ತಿದೆ ಅನುಮಾನದ ಹೆಡೆಯೊಂದು ಸದ್ದಿಲ್ಲದೆ ಆಗಾಗ ತಲೆಯೆತ್ತುತಿದೆ ಆಡಬಾರದ ಹೇಳಬಾರದ ಮಾತುಗಳನೆಲ್ಲಾ ಆಡುವ ಬಾಯಿ ಇತ್ತೀಚೆಗೆ ಇಬ್ಬದಿಯಲೂ ಬಿಗಿಯುವ ಇಕ್ಕಳದಂತಾಗಿದೆ ಇರಿಯುತ್ತಲಿದೆ ಮನದಲೊಂದು ಮುಗಿಯದ ಭಾವ ಹೊಂದಾಣಿಕೆ ಆಗದ ಸ್ವಭಾವ ಒಗ್ಗಿಕೊಳ್ಳಲಾರದೆ ಒದ್ದಾಡುತಿರುವ ಜೀವ ಪ್ರೀತಿ ಸ್ನೇಹಗಳ ಹೆಸರಲ್ಲಿ ಪ್ರತಿದಿನವೂ ನಡೆಯುತಿವೆ ಹೊಸ ಹೊಸ ನಾಟಕ ಗೆಲ್ಲುವುದು ಕಡೆಗೆ ಅದೇ………….ಬದುಕೆಂಬ ವಂಚಕ

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ನಮ್ಮಳಗೊಬ್ಬ ಸಂತೆಬೆನ್ನೂರು ಫೈಜ್ನಟ್ರಾಜ್ ಮನಸಲ್ಲಿ ಕೋಟಿ ಕೋಟಿ ಯುದ್ಧ  ಸಾಮಗ್ರಿಗಳನ್ನು ಹೊತ್ತು ಕಡಲ ದಡದಿ ನೆಮ್ಮದಿ ಹುಡುಕ್ತಿದ್ದ! * ಎದುರಿಗೇ ಎಲ್ಲಾ ಐತೆ ಏನೋ ಮಿಸ್ಸಾಗಿದೆ ಅಂತ ಎದ್ದು ನಡೆದ ಇದ್ದುದನ್ನ ಬಿಟ್ಟು! * ಕಣ್ಣೆದುರು ಇದ್ರೆ ಕಣ್ ಕೆಂಪು..ಉರಿ ಉರಿ ಮರೆಯಾದ್ರೆ ಕಳ್ಕಂಡೋರ ತರ ಅಂಡ್ ಸುಟ್ ಬೆಕ್ಕು! * ಹಾಡ್ತಾನೆ,ಕುಣಿತಾನೆ,ನಗ್ತಾನೆ,ಅಳ್ತನೆ ಎಲ್ಲಾ ಸರಿ ಮತ್ ಎದುರಿರೋ ಬಳಿ ಏನೈತ್ರಿ ಈ ಬಾಳ್ನಾಗೆ….ರಾಗ * ನಾಯಿ ಬಾಲ ನೇರ ಮಾಡಬಹುದಂತೆ ಹೆಂಗೋ ನಮ್ಮೊಳಗಿದ್ದಾನಲ್ಲಾ ಅವನ್ನ ಊಹ್ಞುಂ….ಗುಂಡ್ಕಲ್ಲದು!!

ಕಾವ್ಯಯಾನ Read Post »

You cannot copy content of this page

Scroll to Top