ಕಾವ್ಯಯಾನ
ಜಾಗವೊಂದು ಬೇಕಾಗಿದೆ! ಪ್ರಮೀಳಾ ಎಸ್.ಪಿ. ಬೇಕಿದೆ ನನಗೊಂದು ಜಾಗ ಮನೆ ಮಂದಿರ ಕಟ್ಟಲಲ್ಲ! ಮಸೀದಿ ಚರ್ಚು ಕಟ್ಟಿ ವಿವಾದ ಹುಟ್ಟು ಹಾಕಲಲ್ಲ! ಬ್ಯಾಂಕು ಬಂಕು ಮಾಲ್ ಹಾಲ್ ನಿರ್ಮಿಸಲಲ್ಲ! ಒಂದಿಷ್ಟು ಕುಳಿತು ಅಳಲು ಏಕಾಂತ ಸಿಗುವ ಜಾಗ! ಮನೆಯಲ್ಲಿ ಮಕ್ಕಳು ನೋಡಿಯಾರು ಬೀದಿಯಲಿ ಜನ ನಕ್ಕಾರು! ಗುಡಿಯ ಪೂಜಾರಿದುರುಗುಟ್ಟಿಯಾನುಕಚೇರಿಯಲ್ಲಿ ನಗೆಗೆಆಹಾರವಾದೇನು! ಅದಕೆಯಾರೂ ನೋಡದ, ಯಾರಿಗೂಕಾಣದ ಏಕಾಂತದ ಜಾಗವೊಂದು ಬೇಕಿದೆಕಣ್ಣೀರ ಕಟ್ಟೆ ಒಡೆಯಲು.









