ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ನಿಮ್ಮೊಂದಿಗೆ

ಸಂಪಾದಕೀಯ

ಗೆಳೆಯರೆ, ಸಂಗಾತಿ ಪತ್ರಿಕೆಯನ್ನು ಕೇವಲ ರಂಜನೆಗಾಗಿ ರೂಪಿಸಿಲ್ಲ-ಜೊತೆಗೆ ಕೇವಲ ಕತೆ-ಕತೆಗಳಿಗೆ ಮಾತ್ರ ಮೀಸಲಿರಿಸಿಯೂ ಇಲ್ಲ.ಪತ್ರಿಕೆಯಲ್ಲಿ ಪ್ರಖರವಾದ ವೈಚಾರಿಕ ಲೇಖನಗಳನ್ನು,ಸಮಕಾಲೀನ ಸಮಸ್ಯೆಗಳ ಬಗ್ಗೆ ವಸ್ತುನಿಷ್ಠ ವಿಮರ್ಶಾತ್ಮಕ, ಬರಹಗಳನ್ನು ಪ್ರಕಟಿಸಬೇಕೆಂಬುದು ನಮ್ಮಬಯಕೆ. ಈ ವಿಷಯಗಳಬಗ್ಗೆ ಬರೆಯುವವರು ಸಾಕಷ್ಟು ಜನ ಲೇಖಕರಿದ್ದರೂ ಅವರಿನ್ನೂ ನಮ್ಮ ಪತ್ರಿಕೆಗೆ ಬರೆಯುವ ಮನಸ್ಸು ಮಾಡಿಲ್ಲ. ಬಹುಶ: ಪತ್ರಿಕೆಯ ನಡೆಯನ್ನು ಕಾದುನೋಡುವ ಉದ್ದೇಶವಿದ್ದರೂ ಇರಬಹುದೇನೊ. ಈ ದಿಸೆಯಲ್ಲಿ ಬಹಳಷ್ಟು ಲೇಖಕರನ್ನು ಈಗಾಗಲೇ ಸಂಪರ್ಕಿಸಿ ಬರೆಯಲು ಕೋರಿದ್ದೇನೆ.ಜನಪ್ರಿಯತೆಗಾಗಿ ಸಂಗಾತಿ ತನ್ನಗುಣಮಟ್ಟ ಮತ್ತು ಸ್ವಂತಿಕೆಯನ್ನುಯಾವತ್ತಿಗೂ ಬಿಟ್ಟು ಕೊಡುವುದಿಲ್ಲೆಂದು ಈ ಮೂಲಕ ತಮಗೆ ಮನವರಿಕೆ ಮಾಡಿಕೊಡುತ್ತಿದ್ದೇನೆ. ಅದಕ್ಕೆ ತಕ್ಕಂತೆ ಹಿರಿಯ ಬರಹಗಾರರುಸಹ ನಮಗೆ ಬರೆಯುತ್ತಾರೆಂದು ಆಶಿಸುತ್ತೇನೆ ಕು.ಸ.ಮಧುಸೂದನರಂಗೇನಹಳ್ಳಿ

ಸಂಪಾದಕೀಯ Read Post »

ನಿಮ್ಮೊಂದಿಗೆ

ಕಾವ್ಯಯಾನ

ದಾರಿಯುದ್ದಕ್ಕೂ…… ಮುಗಿಲಕಾವ್ಯ ನೀ ಬರುವ ದಾರಿ ಉದ್ದಕ್ಕೂ ಒಲವಿನ ಹೂ ಹಾಸಿ ಗರಿಗೆದರಿದ ನನ್ನೊಳಗಿನ ಹೃದಯದ ಭಾವಗಳನ್ನು,,, ಒಪ್ಪವಾಗಿ ಜೋಡಿಸಿಕೊಳ್ಳುತ್ತಾ ಕಣ್ಣು ಕೀಲಿಸುತ್ತೇನೆ,, ಹಾದಿಯೂ ಒಮ್ಮೊಮ್ಮೆ ಸಿಟ್ಟಿಗೇಳುತ್ತದೆ ಅಲ್ಲಲ್ಲ ಕರುಬುತ್ತದೆ ನಿನ್ನ ಮೇಲಿನ ನನ್ನೊಲವಿನ ಕಂಡು ಇದರ ಮತ್ಸರ ಎಷ್ಟಿದೆ ಗೊತ್ತಾ? ಬೇಕೆಂತಲೇ ಭಾರವಾಗಿ ದೂರವಾಗಿ ಕ್ಷಣಗಳನ್ನು ಯುಗಗಳಾಗಿ ಮಾಡುತ್ತಾ,,, ಮತ್ತಷ್ಟು ನನ್ನ ಕಾಯಿಸಲು ಶುರುವಿಟ್ಟುಕೊಳ್ಳುತ್ತದೆ ಮೊದಮೊದಲಿಗೆ ನಾನು ಜಿದ್ದಿಗಿಳಿಯುತ್ತೇನೆ ಸೋಲಲಾರೆ ಎಂದೂ ನಿನ್ನ ಕಾಣುವ ತವಕ ಮೂಡಿದಂತೆಲ್ಲಾ ನಾನೇ ನಾನಾಗಿ ಸೋತುಬಿಡುತ್ತೇನೆ; ನಿನ್ನ ಸಂಧಿಸುವ ಗಳಿಗೆಯ ಮುಂದೆ ,,ನನ್ನ ಜಿದ್ದು ಮಂಡಿಯೂರಿ ಬಿಡುತ್ತದೆ,, ನಿನಗೋಸ್ಕರ ತಾನೇ ಎಂಬ ಭಾವ ಮೂಡಿ ಮನ ಸಮಾಧಾನಿಸಿಕೊಂಡು; ದಾರಿ ಉದ್ದಕ್ಕೂಕಣ್ಣು ಕೀಲಿಸುತ್ತದೆ ನೀನು ಈ ಹಾದಿಯಿಂದ ಎಂದೋ ಕವಲೊಡೆದು ಬಹುದೂರ ಸಾಗಿದ್ದರೂ ಮತ್ತೆ ದಾರಿಯಲಿ ಒಲವಿನ ಹೂ ಹಾಸಿ ಪ್ರೀತಿಸುವುದಷ್ಟೆ ಗೊತ್ತಿರುವ ಈ ಮನಸ್ಸು,,,, ದಾರಿ ಉದ್ದಕೂ ಕಣ್ಣುಕೀಲಿಸುತ್ತದೆ. ===========

ಕಾವ್ಯಯಾನ Read Post »

ನಿಮ್ಮೊಂದಿಗೆ

ಅನುವಾದ

ಮೂರು ಅನುವಾದಿತ ಗಜಲುಗಳು. ಉತ್ತಮ ಯಲಿಗಾರ ಗಜಲ್-ಒಂದು ಹೆಜ್ಜೆ ಶಬ್ದವೊಂದು ಕೇಳಿಸಿದರೆ ಅನಿಸುವದು ನೀನೆಂದು ನೆರಳೊಂದು ಬಳಿ ಸುಳಿದರೆ ಅನಿಸುವದು ನೀನೆಂದು ಹೂದೋಟದಲಿ ರೆಂಬೆಯೊಂದನು ಮುಟ್ಟಲು ನಾಚಿ ನಲಿದಾಡಿದರೆ ಅನಿಸುವದು ನೀನೆಂದು ಚಂದನದಿ ಸುವಾಸಿತ ಮದಭರಿತ ಗಾಳಿಯು ಅನಂದದಿ ಮೈಸೋಕಲು ಅನಿಸುವದು ನೀನೆಂದು ತಾರೆಗಳ ಮಿನುಗುವ ಹೊದಿಕೆ ಹೊದ್ದುಕೊಂಡು ನದಿಯೊಂದು ಹರಿದಾಡಿದರೆ ಅನಿಸುವದು ನೀನೆಂದು ಸರಿರಾತ್ರಿಯಲಿ ಬಂದು ಒಂದು ಹೊನ್ನ ರಶ್ಮಿ ನನ್ನೊಂದಿಗೆ ಉರುಳಾಡಿದರೆ ಅನಿಸುವದು ನೀನೆಂದು. ಮೂಲ: ಜಾನ್ ನಿಸ್ಸಾರ್ ಅಖತರ್ (ಉರ್ದು) ============================== ಗಜಲ್ -2 ದ್ವೇಷವೇ ಇರಲಿ, ಮನ ನೋಯಿಸಲಾದರೂ ಬಾ ಬಾ ಮತ್ತೆ ನನ್ನ ತೊರೆದು ಹೋಗಲಾದರೂ ಬಾ  ಇರಲಿ ಚೂರು ಭರವಸೆ ನನ್ನ ಹೆಮ್ಮೆಯ ಒಲವ ಮೇಲೆ ನನ್ನ ಮನವೊಲಿಸಲು ನೀ ಒಮ್ಮೆಯಾದರೂ ಬಾ ಮೊದಲಿನಂತಿಲ್ಲ ನಿಜ ನನ್ನ ನಿನ್ನ ಬಾಂಧವ್ಯ ಜಗದ ನಿಯಮವನ್ನೇ ಪಾಲಿಸಲಾದರೂ ಬಾ ವರ್ಷಗಳಿಂದ ವಂಚಿತ ನಾನು ಅಳುವಿನ ಆಹ್ಲಾದದಿಂದ ನನ್ನನು ಈ ಹೊತ್ತು ಅಳಿಸಲಾದರೂ ಬಾ ಯಾರ್ಯಾರಿಗೆ ವಿವರಿಸಲಿ ನೀ ಹೋದ ಕಾರಣ ನನ್ನ ಮೇಲೆ ಕೋಪವಿರಲು ಜಗಕಾಗಿಯಾದರೂ ಬಾ ಈ ಹುಚ್ಚು ಮನಸಿಗಿದೆ ಇನ್ನೂ ನಿನ್ನಿಂದ ಆಕಾಂಕ್ಷೆ ಆ ಅಂತಿಮ ಆಶಾದೀಪವನ್ನು ನಂದಿಸಲಾದರೂ ಬಾ. ಮೂಲ: ಅಹ್ಮದ್ ಫರಾಜ್ (ಉರ್ದು) ========================================= ಗಜಲ್ -3 ನೋವುಗಳೆಲ್ಲ ಹೀಗೆ ಒಳಗೊಳಗೇ ಚುಚ್ಚುವದಿಲ್ಲ ಹೃದಯದ ನೋವು ಇದು,  ವ್ಯರ್ಥವಾಗುವದಿಲ್ಲ ಯಾವ ಸ್ನೇಹಿತನೂ ಇಲ್ಲ, ರಹಸ್ಯ ಹಂಚಿಕೊಂಡವನಿಲ್ಲ ಹೃದಯವೊಂದಿತ್ತು ನನ್ನದು, ಅದೂ ದಯೆ ತೋರುವದಿಲ್ಲ ನನ್ನ ಆತ್ಮದ ನಿಜಾಂಶ , ನನ್ನ ಅಶ್ರುಗಳನು ಕೇಳು ನನ್ನ ತೋರಿಕೆಯ ನಗು,  ನನ್ನ ನಿಜಾನುವಾದವಲ್ಲ ಆ ಕೂದಲನ್ನು ಕೂಗು , ಆ ನಯನವನ್ನು ಕೋರು ತುಂಬಾ ಬಿಸಿಲು ಇಲ್ಲಿ, ಯಾವ ಸೂರು ಇಲ್ಲ ಈ ಕಲ್ಲುಗಳ ಮೇಲೆ ನಡೆದು ಬರುವದಾದರೆ ಹೊರಡು ನನ್ನ ಮನೆಯ ದಾರಿಯಲ್ಲಿ ಅಕಾಶಗಂಗೆ ಇಲ್ಲ ಮೂಲ : ಮುಸ್ತಫಾ ಜೈದಿ ================================== ಕವಿ ಪರಿಚಯ: ಉತ್ತಮ ಯಲಿಗಾರ ಬೆಳಗಾವಿಯಲ್ಲಿ ಹುಟ್ಟಿ ಅಲ್ಲೇ ಎಂಜಿನಿಯರಿಂಗ್ ವರೆಗೆ ಶಿಕ್ಷಣ ಪಡೆದು ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿ BSNL ನಲ್ಲಿ ಉಪಮಂಡಲ ಅಭಿಯಾತರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಕನ್ನಡ, ಹಿಂದಿ ಹಾಗೂ ಉರ್ದು ಭಾಷೆಯಲ್ಲಿ ಹವ್ಯಾಸಿಯಾಗಿ ಕೆಲಸ ಮಾಡುತ್ತಿದ್ದು ಮೂರೂ ಭಾಷೆಯಲ್ಲಿ ಕವನ ಸಂಕಲನ ಹೊರತರುವ ಕನಸು ಹೊತ್ತಿದ್ದಾರೆ.ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಕವನ ಹಂಚಿಕೊಳ್ಳುವ ಇವರಿಗೆ ಉರ್ದುವಿನ ಪ್ರಸಿದ್ಧ ಗಜಲ್ ಗಳನ್ನು ಕನ್ನಡಕ್ಕೆ ತರುವ ಹಂಬಲ. ವಿವಿಧ ವೇದಿಕೆಗಳಲ್ಲಿ (ಕಹಳೆ, ಯುವರಕೋಟ್, ರಾಸ್ಯಮ್ ಇತ್ಯಾದಿ) ವಿಭಿನ್ನ ಶೈಲಿಯಲ್ಲಿ ಕವನವಾಚನ ಮಾಡುವದು ಇವರ ಹವ್ಯಾಸ.

ಅನುವಾದ Read Post »

ನಿಮ್ಮೊಂದಿಗೆ

ಅನುವಾದ

ಹಿಂದಿ ಮೂಲ:    ಅದ್ನಾನ್ ಕಾಫೀಲ್ ದರ್ವೇಶ್ ಪರಿಚಯ: ಕವಿ ಅದ್ನಾನ್ ಕಾಫೀಲ್ ದರ್ವೇಶ್ ಉತ್ತರ ಪ್ರದೇಶದ ಬಾಲಿಯಾದವರು. ಪ್ರಸ್ತುತ ದೆಹಲಿಯ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದಲ್ಲಿ ಸಂಶೋಧಕರು. ಹಿಂದಿ ಮತ್ತು ಉರ್ದು ಭಾಷೆಯಲ್ಲಿ ಬರೆಯುತ್ತಾರೆ. ಹಿಂದಿಯ ಪ್ರಖ್ಯಾತ ಪತ್ರಿಕೆಗಳಲ್ಲಿ ಅವರ ಕವನಗಳು ಬೆಳಕು ಕಂಡಿವೆ. ಅವರು ಅನುವಾದದಲ್ಲಿಯೂ ತೊಡಗಿಕೊಂಡಿದ್ದಾರೆ. ಅವರ ಕಾವ್ಯಕ್ಕೆ ಈಗಾಗಲೇ ಮೂರು ಪ್ರತಿಷ್ಠಿತ ಪ್ರಶಸ್ತಿಗಳು ಸಂದಿವೆ. ಕನ್ನಡಕ್ಕೆ: ಕಮಲಾಕರ ಕಡವೆ ಪರಿಚಯ: ಕಮಲಾಕರ ಕಡವೆ, ಮೂಲತಃ ಉತ್ತರಕನ್ನಡದ ಶಿರಸಿಯ ಕಡವೆ ಗ್ರಾಮದವರು, ಈಗ ಮಹಾರಾಷ್ಟ್ರದ ಅಹಮದನಗರದಲ್ಲಿ ಕಾಲೇಜು ಪ್ರಾಧ್ಯಾಪಕರಾಗಿದ್ದಾರೆ. ಕನ್ನಡ ಮತ್ತು ಇಂಗ್ಲಿಷ ಭಾಷೆಗಳಲ್ಲಿ ಬರವಣಿಗೆ, ಅನುವಾದ ನಡೆಸುವ ಅವರು ಇವರೆಗೆ ಮೂರು ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ: ಚೂರುಪಾರು ರೇಶಿಮೆ (ಅಭಿನವ, 2006, ಪುತಿನ ಪ್ರಶಸ್ತಿ), ಮುಗಿಯದ ಮಧ್ಯಾಹ್ನ (ಅಕ್ಷರ, 2010). ಮತ್ತು, “ಜಗದ ಜತೆ ಮಾತುಕತೆ” (ಅಕ್ಷರ, 2017). ಮರಾಠಿ ದಲಿತ ಕಾವ್ಯದ ರೂವಾರಿ ಮತ್ತು ದಲಿತ ಪ್ಯಾಂಥರ್ಸ್ ಜನಕ ನಾಮದೇವ್ ಧಸಾಲ್ ಅವರ ಕವನಗಳನ್ನು ಅನುವಾದಿಸಿ “ನಾಮದೇವ್ ಧಸಾಲ್ ವಾಚಿಕೆ” ಪ್ರಕಟಿಸಿದ್ದಾರೆ (ಕುವೆಂಪು ಭಾಷಾ ಭಾರತಿ, 2018). ಕನ್ನಡದ ಸಮಕಾಲೀನ ಕಾವ್ಯದ ಇಂಗ್ಲೀಷ ಅನುವಾದಗಳ ಪುಸ್ತಕವೊಂದರ ತಯಾರಿಯಲ್ಲಿ ಇದ್ದಾರೆ. ಸಾವಿಗೀಡಾದ ಕವಿ ದುಃಖ ಯಾವಾಗ ನನ್ನ ಅಂತರಂಗದ ಸಂದುಗೊಂದುಗೊಳಗಿಂದೆಲ್ಲ ಜಿನುಗುತ್ತಿತ್ತೋ ನಾನು ಹುಚ್ಚನಂತೆ ತಲೆ ಚಚ್ಚಿಕೊಳ್ಳುತ್ತಿದ್ದೆ ಕನಸಿನಲ್ಲೂ ಎಲ್ಲೆಲ್ಲೋ ಓಡುತ್ತಿದ್ದೆ ಆಗಾಗ ಅಲ್ಲಿಲ್ಲಿ ಬೀಳುತ್ತಿದ್ದೆ ಕಗ್ಗತ್ತಲ ದ್ವೀಪದ ಕಿನಾರೆಯಲ್ಲಿ ನಿಂತು ನರಳುತ್ತಿದ್ದೆ ಗೊತ್ತಿತ್ತು ನನಗೆ ನನ್ನ ಈ ನರಕದ ಅಂತ ನಿನಗೆ ತಿಳಿಯ ಬೇಕಿರುವುದು ಇದು ಮಾತ್ರ: ನಾನೊಬ್ಬ ಕವಿ ಮತ್ತು ಕಾವ್ಯದ ಅನಂತ ಏಕಾಂತದಲ್ಲಿ ಸಾವಿಗೀಡಾಗಿದ್ದೆ ========================= ನಗುತಿರುವೆ ನಾನೀಗ ದೂರು ಇನಿತಿಲ್ಲ ನೋಡು ನಿನ್ನ ಮೇಲೆ ಕೋಪವೂ ಇನಿತಿಲ್ಲ ನಿಷ್ಠೆಯೂ ಇಲ್ಲ, ನೇಮವೂ ಉಳಿದಿಲ್ಲ ಈಗ ನಿನ್ನಿಂದಾಗಿ ಶಿಕ್ಷೆಯೂ ಇನಿತಿಲ್ಲ ಅವಳು ನನ್ನ ಜೊತೆಗೀಗ ಇಲ್ಲವೇನೋ ಹೌದು ನಿಜವೆಂದರೆ ನಮ್ಮ ನಡುವೆ ದೂರವೂ ಇನಿತಿಲ್ಲ ಸೊರಗಿ ಹೋದೆ ಉಸಿರೇ ನಿಂತಂತೆ ಅವಳ ಪವಾಡವೇ! ನನ್ನ ಚಲನೆಯೂ ಇನಿತಿಲ್ಲ ಎರಡೂ ಬದಿ ಶವವೊಂದು ಬಿದ್ದಿದೆ ಉಸಿರು ನಿಂತ ಗುರುತೂ ಇನಿತಿಲ್ಲ ತಲೆ ಚಚ್ಚಿ ಕೊಳುವ ದಿನಗಳು ಕಳೆದವು ದರವೇಶನಿಗೆ ದೇವದಯೆಯೂ ಇನಿತಿಲ್ಲ. ============================== ಕಮಲಾಕರ ಕಡವೆ

ಅನುವಾದ Read Post »

ನಿಮ್ಮೊಂದಿಗೆ

ನಿಮ್ಮೊಂದಿಗೆ

ನಿಮ್ಮೊಂದಿಗೆ……… ಕು.ಸ.ಮಧುಸೂದನರಂಗೇನಹಳ್ಳಿ ಪ್ರಿಯರೆ,          ‘ಸಂಗಾತಿ’ ಡಿಜಿಟಲ್  ಕನ್ನಡ ಸಾಹಿತ್ಯ ಪತ್ರಿಕೆಯನ್ನು ನಿಮ್ಮ ಮುಂದಿಡಲು ಸಂತೋಷವಾಗುತ್ತಿದೆ.          ಇವತ್ತು ಮುದ್ರಣ ಮಾಧ್ಯಮದಿಂದ ಜನ ದೂರ ಸರಿಯುತ್ತಿದ್ದರೆ, ಅದಕ್ಕೆ ಕಾರಣ ವೇಗ ಹೆಚ್ಚಿಸಿಕೊಳ್ಳುತ್ತಿರುವ ಜನರ ಜೀವನ ಶೈಲಿ ಮತ್ತು ಅಗ್ಗದ ದರದಲ್ಲಿ ದೊರೆಯುತ್ತಿರುವ ಅಂತರ್ಜಾಲ ಸಂಪರ್ಕಗಳು,ಪ್ರತಿಯೊಬ್ಬರ ಕೈಲೂ ಇರುವ ಸ್ಮಾರ್ಟ್ ಪೋನುಗಳೇ ಕಾರಣ. ಇದರ ಜೊತೆಗೆ ದುಬಾರಿಯಾಗುತ್ತಿರುವ ಪುಸ್ತಕಗಳ ಬೆಲೆಯೂ ಒಂದು ಕಾರಣ!      ಮೊದಲಿನ ಹಾಗೆ ಪುಸ್ತಕವೊಂದನ್ನು ಕೈಲಿಹಿಡಿದು  ಕೂತಲ್ಲೇ ಬೇರು ಬಿಟ್ಟು ಓದುವ ಪುರಸೊತ್ತು ಯಾರಿಗೂ ಇಲ್ಲ. ಆದರೆ ತಮ್ಮ ಟ್ಯಾಬು–ಫೋನುಗಳ ಮೂಲಕ,ಪ್ರಯಾಣ ಮಾಡುತ್ತಾ, ಮನೆಗೆಲಸ ಮಾಡುತ್ತಾ, ತಮ್ಮ ವೃತ್ತಿಯಲ್ಲಿತೊಡಗಿಸಿಕೊಂಡಿರುತ್ತಲೆ ಓದುವ ಅಭ್ಯಾಸಕ್ಕೆ ಜನ ಒಗ್ಗಿ ಹೋಗುತ್ತಿದ್ದಾರೆ.       ಇಂತಹ ಸನ್ನಿವೇಶದಲ್ಲಿ ಜನ ಮುದ್ರಿತ ಸಾಹಿತ್ಯವನ್ನೇ ಓದಬೇಕು, ಅದರಲ್ಲಿ ಸಿಗುವ ಓದಿನ ಸುಖವೇ ಬೇರೆ ಎಂಬ ಮಾತೂ ಹಳಹಳಿಕೆಯ ಮಾತು ಕೇಳಿಬರುತ್ತಿದೆಯಾದರೂ, ಜನರ ವೇಗದ ಬದುಕಿನಲ್ಲಿ ಡಿಜಿಟಲ್ ಪತ್ರಿಕೆಗಳು,ಇ–ಪುಸ್ತಕಗಳು ಸೇರಿ ಹೋಗುತ್ತಿವೆ.        ಜನರ ಇಂತಹ ಸಾಹಿತ್ಯದ ಓದಿನ ಅಗತ್ಯಕ್ಕಾಗಿಯೇ ಸಂಗಾತಿ ಪತ್ರಿಕೆಯನ್ನು ರೂಪಿಸಲಾಗಿದೆ. ಇದು ನಮ್ಮ ಮೊದಲ ಪ್ರಯತ್ನವಾಗಿದ್ದು ನಿಮಗಿಷ್ಟವಾಗಬಹುದೆಂದು ನಂಬಿದ್ದೇನೆ. ಈ ಮೊದಲ ಸಂಚಿಕೆಯಲ್ಲಿ ಆಗಿರಬಹುದಾದ ನ್ಯೂನತೆಗಳನ್ನು  ಸರಿಪಡಿಸಿಕೊಂಡು ಮುನ್ನಡೆಯ ಬೇಕೆಂಬ ಅರಿವು ನನಗಿದೆ. ಈನಿಟ್ಟಿನಲ್ಲಿ ನಿಮ್ಮ ಸಲಹೆ ಸಹಕಾರಗಳು ಬೇಕಿವೆ.   ಸಂಗಾತಿಗೆ ಹಿರಿಯರು ಕಿರಿಯರು ಎಂಬ ಬೇಧವಿಲ್ಲ.ಇಲ್ಲಿಎಲ್ಲರ ಬರಹಗಳೂ ಸಮಾನವಾಗಿ ಪ್ರಕಟವಾಗುತ್ತವೆ.  ಆದರೆ ಇಂತಹ ಹೊಸ ಪತ್ರಿಕೆಯಲ್ಲಿ ಬರೆಯುವ ಉಧಾರತೆಯನ್ನು ಪ್ರಸಿದ್ದಬರಹಗಾರರು ತೋರುತ್ತಾರೆಂದು ನಂಬಿಕೊಂಡಿದ್ದೇನೆ. ಈದಿಸೆಯಲ್ಲಿ ಹಿರಿಯ ಬರಹಗಾರರನ್ನು ಸಂಪರ್ಕಿಸಲಾಗುತ್ತಿದೆ…     ರಾಜ್ಯದ ಮಲೆನಾಡಿನ ಮೂಲೆಯ ಹಳ್ಲಿಯೊಂದರಲ್ಲಿ ಕೂತು  ಇಂತಹ ಪತ್ರಿಕೆ ನಡೆಸುವುದು ಕಷ್ಟವೇ ಸರಿ. ದಿನದ ಬಹುತಾಸು ವಿದ್ಯುತ್ ನಿಲುಗಡೆಯಾಗುವ,ಆಗಾಗ ಮೊಬೈಲ್ ಟವರುಗಳು ಕೈ ಕೊಡುವ  ಹಳ್ಲಿಯಲ್ಲಿ ಕೂತು ಪ್ರತಿದಿನ  ಈ   ಬ್ಲಾಗನ್ನು ಅಪ್ ಡೇಟ್ ಮಾಡುವುದು ಕಷ್ಟದ ಕೆಲಸ.  ಹಾಗಾಗಿ ಮೊದಲ ಕೆಲವು  ತಿಂಗಳುಗಳ ಕಾಲ ವಾರದಲ್ಲಿ ಒಂದು ದಿನ ಅಂದರೆ ಪ್ರತಿ  ಶನಿವಾರ ಅಪ್ ಡೇಟ್ ಮಾಡಲಾಗುವುದು…….      ಇದೆಲ್ಲಕ್ಕೂ ಮುಖ್ಯವಾಗಿ ನಿಮ್ಮಲ್ಲಿ ಹೇಳಬೇಕಾಗಿರುವುದು ಕ್ಷಮಿಸಿ, ಕೇಳಬೇಕಾಗಿರುವುದು ಸಹೃದಯ ಓದುಗರಾಗಿ ಸಂಗಾತಿಯನ್ನು ಓದಿ ನಿಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಿ. ಸೂಕ್ತ ಸಲಹೆಗಳನ್ನು ನೀಡಿ….     ನೀವುಗಳು ನಮ್ಮ ಜೊತೆಗಿರುತ್ತೀರೆಂಬ ನಂಬಿಕೆಯೇ ನಮ್ಮಿ ಪ್ರಯತ್ನದ ಹಿಂದಿರುವ ಪ್ರೇರಣೆ.

ನಿಮ್ಮೊಂದಿಗೆ Read Post »

ನಿಮ್ಮೊಂದಿಗೆ

ನಿಮ್ಮೊಂದಿಗೆ!

ಸಂಪಾದಕರ ಮಾತು….. ಕು.ಸ.ಮಧುಸೂದನರಂಗೇನಹಳ್ಳಿ ಪ್ರಿಯರೆ,          ‘ಸಂಗಾತಿ’ ಡಿಜಿಟಲ್  ಕನ್ನಡ ಸಾಹಿತ್ಯ ಪತ್ರಿಕೆಯನ್ನು ನಿಮ್ಮ ಮುಂದಿಡಲು ಸಂತೋಷವಾಗುತ್ತಿದೆ.          ಇವತ್ತು ಮುದ್ರಣ ಮಾಧ್ಯಮದಿಂದ ಜನ ದೂರ ಸರಿಯುತ್ತಿದ್ದರೆ, ಅದಕ್ಕೆ ಕಾರಣ ವೇಗ ಹೆಚ್ಚಿಸಿಕೊಳ್ಳುತ್ತಿರುವ ಜನರ ಜೀವನ ಶೈಲಿ ಮತ್ತು ಅಗ್ಗದ ದರದಲ್ಲಿ ದೊರೆಯುತ್ತಿರುವ ಅಂತರ್ಜಾಲ ಸಂಪರ್ಕಗಳು,ಪ್ರತಿಯೊಬ್ಬರ ಕೈಲೂ ಇರುವ ಸ್ಮಾರ್ಟ್ ಪೋನುಗಳೇ ಕಾರಣ. ಇದರ ಜೊತೆಗೆ ದುಬಾರಿಯಾಗುತ್ತಿರುವ ಪುಸ್ತಕಗಳ ಬೆಲೆಯೂ ಒಂದು ಕಾರಣ!      ಮೊದಲಿನ ಹಾಗೆ ಪುಸ್ತಕವೊಂದನ್ನು ಕೈಲಿಹಿಡಿದು  ಕೂತಲ್ಲೇ ಬೇರು ಬಿಟ್ಟು ಓದುವ ಪುರಸೊತ್ತು ಯಾರಿಗೂ ಇಲ್ಲ. ಆದರೆ ತಮ್ಮ ಟ್ಯಾಬು–ಫೋನುಗಳ ಮೂಲಕ,ಪ್ರಯಾಣ ಮಾಡುತ್ತಾ, ಮನೆಗೆಲಸ ಮಾಡುತ್ತಾ, ತಮ್ಮ ವೃತ್ತಿಯಲ್ಲಿತೊಡಗಿಸಿಕೊಂಡಿರುತ್ತಲೆ ಓದುವ ಅಭ್ಯಾಸಕ್ಕೆ ಜನ ಒಗ್ಗಿ ಹೋಗುತ್ತಿದ್ದಾರೆ.       ಇಂತಹ ಸನ್ನಿವೇಶದಲ್ಲಿ ಜನ ಮುದ್ರಿತ ಸಾಹಿತ್ಯವನ್ನೇ ಓದಬೇಕು, ಅದರಲ್ಲಿ ಸಿಗುವ ಓದಿನ ಸುಖವೇ ಬೇರೆ ಎಂಬ ಮಾತೂ ಹಳಹಳಿಕೆಯ ಮಾತು ಕೇಳಿಬರುತ್ತಿದೆಯಾದರೂ, ಜನರ ವೇಗದ ಬದುಕಿನಲ್ಲಿ ಡಿಜಿಟಲ್ ಪತ್ರಿಕೆಗಳು,ಇ–ಪುಸ್ತಕಗಳು ಸೇರಿ ಹೋಗುತ್ತಿವೆ.        ಜನರ ಇಂತಹ ಸಾಹಿತ್ಯದ ಓದಿನ ಅಗತ್ಯಕ್ಕಾಗಿಯೇ ಸಂಗಾತಿ ಪತ್ರಿಕೆಯನ್ನು ರೂಪಿಸಲಾಗಿದೆ. ಇದು ನಮ್ಮ ಮೊದಲ ಪ್ರಯತ್ನವಾಗಿದ್ದು ನಿಮಗಿಷ್ಟವಾಗಬಹುದೆಂದು ನಂಬಿದ್ದೇನೆ. ಈ ಮೊದಲ ಸಂಚಿಕೆಯಲ್ಲಿ ಆಗಿರಬಹುದಾದ ನ್ಯೂನತೆಗಳನ್ನು  ಸರಿಪಡಿಸಿಕೊಂಡು ಮುನ್ನಡೆಯ ಬೇಕೆಂಬ ಅರಿವು ನನಗಿದೆ. ಈನಿಟ್ಟಿನಲ್ಲಿ ನಿಮ್ಮ ಸಲಹೆ ಸಹಕಾರಗಳು ಬೇಕಿವೆ.   ಸಂಗಾತಿಗೆ ಹಿರಿಯರು ಕಿರಿಯರು ಎಂಬ ಬೇಧವಿಲ್ಲ.ಇಲ್ಲಿಎಲ್ಲರ ಬರಹಗಳೂ ಸಮಾನವಾಗಿ ಪ್ರಕಟವಾಗುತ್ತವೆ.  ಆದರೆ ಇಂತಹ ಹೊಸ ಪತ್ರಿಕೆಯಲ್ಲಿ ಬರೆಯುವ ಉಧಾರತೆಯನ್ನು ಪ್ರಸಿದ್ದಬರಹಗಾರರು ತೋರುತ್ತಾರೆಂದು ನಂಬಿಕೊಂಡಿದ್ದೇನೆ. ಈದಿಸೆಯಲ್ಲಿ ಹಿರಿಯ ಬರಹಗಾರರನ್ನು ಸಂಪರ್ಕಿಸಲಾಗುತ್ತಿದೆ…     ರಾಜ್ಯದ ಮಲೆನಾಡಿನ ಮೂಲೆಯ ಹಳ್ಲಿಯೊಂದರಲ್ಲಿ ಕೂತು  ಇಂತಹ ಪತ್ರಿಕೆ ನಡೆಸುವುದು ಕಷ್ಟವೇ ಸರಿ. ದಿನದ ಬಹುತಾಸು ವಿದ್ಯುತ್ ನಿಲುಗಡೆಯಾಗುವ,ಆಗಾಗ ಮೊಬೈಲ್ ಟವರುಗಳು ಕೈ ಕೊಡುವ  ಹಳ್ಲಿಯಲ್ಲಿ ಕೂತು ಪ್ರತಿದಿನ  ಈ   ಬ್ಲಾಗನ್ನು ಅಪ್ ಡೇಟ್ ಮಾಡುವುದು ಕಷ್ಟದ ಕೆಲಸ.  ಹಾಗಾಗಿ ಮೊದಲ ಕೆಲವು  ತಿಂಗಳುಗಳ ಕಾಲ ವಾರದಲ್ಲಿ ಒಂದು ದಿನ ಅಂದರೆ ಪ್ರತಿ  ಶನಿವಾರ ಅಪ್ ಡೇಟ್ ಮಾಡಲಾಗುವುದು…….      ಇದೆಲ್ಲಕ್ಕೂ ಮುಖ್ಯವಾಗಿ ನಿಮ್ಮಲ್ಲಿ ಹೇಳಬೇಕಾಗಿರುವುದು ಕ್ಷಮಿಸಿ, ಕೇಳಬೇಕಾಗಿರುವುದು ಸಹೃದಯ ಓದುಗರಾಗಿ ಸಂಗಾತಿಯನ್ನು ಓದಿ ನಿಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಿ. ಸೂಕ್ತ ಸಲಹೆಗಳನ್ನು ನೀಡಿ….     ನೀವುಗಳು ನಮ್ಮ ಜೊತೆಗಿರುತ್ತೀರೆಂಬ ನಂಬಿಕೆಯೇ ನಮ್ಮಿ ಪ್ರಯತ್ನದ ಹಿಂದಿರುವ ಪ್ರೇರಣೆ.

ನಿಮ್ಮೊಂದಿಗೆ! Read Post »

You cannot copy content of this page

Scroll to Top