ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅಂಕಣ ಸಂಗಾತಿ, ಮನದ ಮಾತುಗಳು

ಅಂಕಣ ಸಂಗಾತಿ ಮನದ ಮಾತುಗಳು ಜ್ಯೋತಿ ಡಿ ಬೊಮ್ಮಾ ಯುದ್ದಕಾಲೇ ವಿಪರೀತ ಬುದ್ದಿ. ನಮ್ಮ ಕಡಿ ಬಿಸಿಲಿನ ಕಾವು ಏರಲತರ ಆ ಕಡಿ ಯುದ್ದದ ಕಾವು ಎರಲತದ.ಯುದ್ದ ಅಂದ್ರ ನಾವು ಸಣ್ಣವರಾಗಿದ್ದಾಗ ಪುಸ್ತಕದಾಗ ಓದಿದ್ದು ಒಬ್ಬ ರಾಜ ಮತ್ತೊಬ್ಬ ರಾಜನ ಮ್ಯಾಲ ಯುದ್ದ ಮಾಡಿ ಅವನ ರಾಜ್ಯ ವಶಪಡಿಸಿಕೊಳ್ಳೊದು ಅಂತ ಓದಿದ್ದೆವು. ಕಲ್ಪನೆ ಮಾಡಕೊಳ್ಳಕೊ ಆಗದ ವಯಸ್ಸು ಅದು. ಆಮ್ಯಾಲ ರಾಮಾಯಣ ಮಹಾಭಾರತ ಧಾರಾವಾಹಿಗಳದಾಗ ಯುದ್ದ ಅಂದ್ರ ಹಿಂಗಿರತದ ಅಂತ ತಿಳಕೊಂಡೆವು.ಆ ಕಡೆಯಿಂದ ಸಾವಿರಾರು ಜನ ಈ ಕಡಿಯಿಂದ ಸಾವಿರಾರು ಜನ , ಯಾರು ಯಾರಿಗಿ ಹೊಡಿಲತಾರ ಕಡಿಲತಾರ ಎಂದು ತಿಳಕೊಳ್ಳೊವಷ್ಟರಲ್ಲಿ ಯುದ್ದ ಮುಗಿದಿರತಿತ್ತು. ಕತ್ತಿ , ಚೂರಿ , ಕೊಡಲಿ ಇಂತಹ ಆಯುಧಗಳಿಂದ ಯುದ್ದ ಮಾಡತಾರ ಅಂದಕೊಂಡಿದ್ದೆವು.ಪೌರಾಣಿಕ ಸಿನಿಮಾದೊಳಗ , ಇತಿಹಾಸ ತಿಳಸೋ ಸಿನಿಮಾದೊಳಗೆಲ್ಲ ಇಂತಹ ಯುದ್ದ ತೊರಿಸ್ತಿದ್ರು. ಮತ್ತ ನಮೂನಿ ನಮೂನಿ ಬಿಲ್ಲು ಬಾಣಗಳು.ರಾಮಾಯಣ ಮಹಾಭಾರತ ಧಾರಾವಾಹಿದೊಳಗ ಅದೇಷ್ಟು ನಮೂನಿ ಬಾಣಗಳು ತೊರಿಸ್ತಿದ್ರು ಅಂದ್ರ , ಬೆಂಕಿ ಉಗೊಳೋ ಬಾಣಗಳು , ಕಬ್ಬಿಣದ ಮಳಿ ಉಗೊಳೊ ಬಾಣಗಳು , ಹುಲಿ ಮುಖದ ಬಾಣಗಳು , ಹಾವಿನ ಮುಖದ ಬಾಣಗಳು. ಅವುಗಳನ್ನು ನೋಡ್ತ ಎಷ್ಟು ಕೂತುಹಲದಿಂದ ಕೂಡ್ತಿದ್ದಿವಂದ್ರ ಧಾರಾವಾಹಿ ಮುಗದ ಮ್ಯಾಲ ಬಾಳ ಬ್ಯಾಸರ ಆಗ್ತಿತ್ತು. ಹೈಸ್ಕೂಲ್ ಗೆ ಬಂದ ಮ್ಯಾಲ ಸಮಾಜ ವಿಜ್ಞಾನ ಪಠ್ಯ ದಾಗ ಓದಿದ ಯುದ್ದಗಳ ಕಲ್ಪನೆ ಸ್ವಲ್ಪ ಅಪ್ಗ್ರೆಡ್ ಆಗಿತ್ತು.ಮೊದಲನೆ ಮಹಾಯುದ್ದದಲ್ಲಿ ಮೊಟ್ಟಮೊದಲ ಬಾರಿಗೆ ಯುದ್ದ ವಿಮಾನಗಳು,  ಯುದ್ದ ನೌಕೆಗಳು , ಟ್ಯಾಂಕರ್ ಗಳು , ಜಲಾಂತರ್ಗಾಮಿ ಗಳು ಬಳಸಲಾಯಿತು . ಅಲ್ಲಿವರೆಗೂ ಯುದ್ದಗಳೆಂದರೆ ಎರಡು ಪಡೆಗಳು ಕೈಯಿಂದ ಹೊಡೆದಾಡಿಕೊಳ್ಳುವದು ಎಂದು ತಿಳಿದಿದ್ದ ನಮಗೆ ಹೊಸ ಯುದ್ಧ ರೀತಿ ತಿಳಿಯಿತು. ಒಂದನೆ ಮಹಾಯುದ್ದ , ಎರಡನೇ ಮಹಾಯಯದ್ದ , ಹಿರೋಷಿಮಾ ನಾಗಾ ಸಾಕಿ ಮೇಲೆ ಹಾಕಿದ ಅಣುಬಾಂಬ್ ಅದರ ಪರಿಣಾಮಗಳು ಇವೆಲ್ಲವೂ ಪಠ್ಯ ದಲ್ಲಿ ಓದಿ ತಿಳಿದ ವಯಸ್ಸಿನಲ್ಲಿ ಯುದ್ದ ಯಾತಕ್ಕಾಗಿ ಮಾಡ್ತಾರೆ ಎಂಬ ಯೋಚನೆ ಅಷ್ಟು ಕಾಡ್ತಿರಲಿಲ್ಲ. ಯುದ್ದ ಮಾಡುವದರ ಮುಖ್ಯ ಉದ್ದೇಶ ಮಹತ್ವಾಕಾಂಕ್ಷೆ ಮತ್ತು ಹಕ್ಕಿನ ಹೋರಾಟಕ್ಕಾಗಿ.ಎರಡೂ ಪಡೆಗಳು ತಮ್ಮ ತಮ್ಮ ಜಾಗದಾಗ ಸರಿ ಅಂತ ನಿರ್ಣಯಿಸಿದ ಮ್ಯಾಲ ಯುದ್ದಕ್ಕ ಮಾಡ್ಲಕ್ಕ ಕಾರಣಗಳು ಬೇಕಾದಷ್ಟು ಸಿಗತಾವ. ನಮ್ಮ ಮನುಕುಲಕ್ಕ ಅಣುಬಾಂಬ್ ಯಾಕ್ ಬೇಕು.ಇದರಿಂದ ಉಪಯೋಗ ಏನು. ಇದು ಜಗತ್ತಿಗಿ ಘಾತಕ ಅಂತ ಗೊತ್ತಿದ್ರು ದೇಶಗಳು ಇದನ್ನು ಯಾಕ ತಯ್ಯಾರಿಸ್ತಾರ. ಎಲ್ಲಾ ದೇಶದವ್ರಿಗೂ ತಮ್ಮ ತಮ್ಮ ದೇಶದ ಬಲ ತೋರಿಸಿಕೊಳ್ಳಕ್ಕ.ದೊಡ್ಡಸ್ತಿಕೆಗಾಗಿ ಮಾತ್ರ. ಒಂದು ದುರ್ಬಲ ಸಂದರ್ಭದಲ್ಲಿ ಅಣುಬಾಂಬ್ ಪ್ರಯೋಗಿಸಿದ್ರು ಅಂತಿಟ್ಟಕೊಳ್ಳೊಣ.ಅದರ ಪರಿಣಾಮ ಎಲ್ರಿಗೂ ಗೊತ್ತು.ಜಪಾನಿನ ನಾಗಾಸಾಕಿ ಪ್ರದೇಶ ಇನ್ನೂ ಆ ಘಟನೆಯಿಂದ ಚೇತರಿಸಿಕೊಳ್ಳತಿಲ್ಲ.ಎಷ್ಟು ತಲೆಮಾರು ದಾಟಿದ್ರು ಅಂಗವಿಕಲತೆ ತೊಲಗಸಲ್ಕಿಕ್ಕೆ ಆಗತಿಲ್ಲ. ಇಂತಹ ಒಡಲೊಳಗೆ ಕೆಂಡ ಇಟ್ಟಕೊಂಡ ದೇಶಗಳು ಎನನ್ನ ಸಾಧಿಸಬಹುದು. ಯುದ್ದಗಳು ನಮ್ಮ ಜಗತ್ತಿನ ಪ್ರಗತಿಯನ್ನು ಐವತ್ತು ವರ್ಷ ಹಿಂದಕ್ಕ ದೂಡತಾವ.ಮನುಷ್ಯ ತನ್ನ ಬುದ್ದಿ ಉಪಯೋಗಿಸಿ ಏನೆಲ್ಲ ಸಾಧಿಸಿ ಗಳಿಸಿದ್ದ ಎಲ್ಲವೂ ಯುದ್ದ ನಾಶ ಮಾಡ್ತದ.ಆದ್ರು ದೇಶಗಳಿಗೆ ತಮ್ಮ ಪ್ರತಿಷ್ಟೆ ಮುಖ್ಯ. ಒಬ್ಬರ ಮೇಲೊಬ್ಬರು ಬಾಂಬ್ ಎಸೆದು ಎಲ್ಲಾ ನೆಲಸಮ ಮಾಡಿ ಹೆಮ್ಮೆಯಿಂದ ಬೀಗತಾರ.ಅದು ಪರಿಣಮ ಬೀರೋದು ಜನಸಾಮಾನ್ಯರ ಮ್ಯಾಲ. ನೆಲ ಆಸ್ತಿ ಜೀವ ಕಳಕೊಂಡವರ ಪಾಡು ಯಾರಿಗೂ ಕಾಣಲ್ಲ.ಬರೀ ದೇಶಗಳ ಸೋಲು ಗೆಲವು ಮಾತ್ರ ವಿಷಯ ಆಗ್ತದ. ಈ ವಿಶ್ವ ಸಂಸ್ಥೆ ಇರುವದು ಎಲ್ಲಾ ದೇಶಗಳು ಪರಸ್ಪರ ಶಾಂತಿ ಸಹಬಾಳ್ವೆಯಿಂದ ತಂಟೆ ತಕರಾರು ಇಲ್ಲದೆ ಬದುಕಲು ತಿಳಿಸುವದಕ್ಕಾಗಿ ಇರತದ. ಈಗ ಈ ಸಂಸ್ಥೆ ಏನು ಮಾಡ್ತಿದೆ ಅಂತ ಪ್ರಶ್ನೆ ಕಾಡತದ.ಒಂದಿಲ್ಲೊಂದು ಯುದ್ದ ನಡಿತಾನೆ ಅವ. ಸುಮ್ಮನೆ ಇದ್ದ ಇರಾನ್ ಮ್ಯಾಲ್ ಅದ್ಯಾಕ ಅಮೇರಿಕಾ ಕಾಲಕೆರಕೊಂಡು ಜಗಳಕ್ಕ ನಿಂತು. ಅಣುಬಾಂಬ್ ಇರಾನ ದೇಶದಾಗಷ್ಟೆ ಅದ ಏನು. ಬೇರೆ ಅದೇಷೋ ದೇಶಗಳದಾಗೂ ಅವ.ಇಸ್ರೆಲ್ , ಪ್ಯಾಲೆಸ್ಟೈನ್ ಜಗಳಕ್ಕ ಒಂದು ಕಾರಣ ಇತ್ತು.ಸಮರ್ಥನೆ ಅವರವರು ಯಾವಾಗ್ಲೂ ಮಾಡಿಕೊಳ್ಳತಾನೆ ಇರತಾರ.ಇದು ಎಲ್ಲಾ ಜಗಳದಾಗೂ ಇರತದ . ಆದ್ರ ಸ್ವಲ್ಪ ವಿವೇಚನೆ ಯಿಂದ ವಿಚಾರ ಮಾಡ್ದರ ಪ್ರಬಲರು ದುರ್ಬಲರ ಮ್ಯಾಲ ಯುದ್ದ ಮಾಡೋದು ಪೌರುಷ ಅನಿಸಿಕೊಳ್ಳಲ್ಲ.ಭಯೋತ್ಪಾದಕ ದಂತ ಕೃತ್ಯ ತಡೆಗಟ್ಟಬೇಕಾದ್ರ ಕೆಲವೊಮ್ಮೆ ಮಾರಕ ನಿರ್ಣಯ ಗಳನ್ನು ತಗೋಬೇಕಾಗತದ.ಭಯೋತ್ಪಾದ ನೆ ತಡೆಗಟ್ಟಲು ಪ್ರಯತ್ನಿಸತಿದ್ದರಂದ್ರೆ ಬೆಂಬಲಿಸೊಣ. ಆದ್ರ ಈ ಅಮೇರಿಕಾ ಕಾಲ ಕೆರದು ಜಗಳಕ್ಕ ಬರೊದು ಖಂಡಿಸಲೇಬೇಕು. ಯುದ್ದ ಗಳು ಎರಡು ದೇಶದ ನಡುವೆ ನಡೆದ್ರು ಪರಿಣಾಮ ಇಡೀ ಜಗತ್ತು ಎದುರಿಸಬೇಕಾಗತದ.ದೇಶಗಳು ಖಂಡಗಳು ದೂರ ದೂರ ಇದ್ರೂ ಗಾಳಿ ಬೆಳಕು ಎಲ್ಲ ಕಡೆ ಹಬ್ಬಿದಂಗ ನಮ್ಮ ದೈನಂದಿನ ಕೆಲಸಗಳಿಗಿ ಬೇಕಾದ ವಸ್ತುಗಳು ಇಡೀ ಜಗತ್ತಿನ ಎಲ್ಲಾ ಭಾಗಗಳಿಗೂ ಹರಿದಾಡತಾವ.ಯುದ್ದಗಳಿಂದ ಇಂತಹ ವಸ್ತು ಗಳ ಆಮದು ರಪ್ತು ಕಾರ್ಯಗಳು ನಿಂತು ಜನಸಾಮಾನ್ಯರು ಹೈರಾಣ ಆಗಬೇಕಾಗತದ. ಯುದ್ದ ನಡಿತಿರೋ ದೇಶಗಳ ಚಿತ್ರಣ ನೋಡಿದ್ರ ಮನಸ್ಸು ವಿಷಾದ ಆಗತದ.ಎಂತೆಂಥ ದೊಡ್ಡ ದೊಡ್ಡ ಕಡ್ಡಡಗಳೆಲ್ಲ ನೆಲಸಮ ಮಾಡ್ತಿದ್ದಾರ.ಈಗ ಒಂದು ಸಮಾಧಾನ ಅಂದ್ರ ಯುದ್ದದ ಸೂಚನೆ ಸಿಗ್ತಂದ್ರ ಜನರಿಗೆ ತಾವಿರುವ ಸ್ಥಳ ಖಾಲಿ ಮಾಡ್ಸಿ ಬ್ಯಾರೆ ಸುರಕ್ಷಿತ ಸ್ಥಳ ಕ್ಕ ಕಳ್ಸತಾರಂತ.ಜೀವ ಉಳದ್ರ ಸಾಕು ಅನ್ನಕೊಂಡ್ರ ತಮ್ಮ ಎಲ್ಲಾ ಜೀವಮಾನದ ಗಳಿಕಿ ಕಳಕೊಂಡು ಅವ್ರ ಬದುಕು ಉಹಿಸಿಕೊಳ್ಳಕ್ಕ ಆಗಲ್ಲ.ಕ್ಷೀಪಣಿಗಳು ಒಬ್ಬರ ದೇಶದ ಮ್ಯಾಲ ಒಬ್ಬರು ಹಾರಿಸಿ ಇಡೀ ಊರೆಲ್ಲ ನೆಲಸಮ ಮಾಡೊದ್ರಾಗ ಯಾವ ಪುರುಷಾರ್ಥ ಅದ..ಸಣ್ಣ ಮಕ್ಕಳು ಕಲಿಯೋ ಸಾಲಿಮ್ಯಾಲ್ ಬಾಂಬ್ ಹಾಕಿ ಮಕ್ಕಳ ಸಾವಿಗಿ ಕಾರಣ ಆಗೊ ದೇಶಗಳ ವಿಕೃತಿಗೆ ಧಿಕ್ಕಾರ. ಅಲ್ಲೆಲ್ಲೊ ಯುದ್ದ ಆಗತಿದ್ರ ಅದರ ಪರಿಣಾಮ ನಮ್ಮ ದೇಶದವ್ರು ಅನುಭವಿಸಬೇಕಾಗ್ಯಾದ.ಬರಿ ನಮ್ಮ ದೇಶ ಅಷ್ಟೇ ಅಲ್ಲ. ಇಡೀ ಮನುಕುಲಕ್ಕೆ ತೊಂದರೆ ಆಗಲತದ.ನಮ್ಮ ಜನರು ಸಿಲಿಂಡರ್ ಸಲುವಾಗಿ ಕಷ್ಡಪಡತಿದ್ದಾರ.ಕಾಡು ಕಡದು ಕಟ್ಟಿಗಿ ಉಪಯೊಗಿಸಿ ಕಾಡು ಹಾಳು ಮಾಡಬ್ಯಾಡ್ರಿ ಅಂತ ಕಾಡಿನ ಅಕ್ಕಪಕ್ಕದ ಜನಕ್ಕ ಸರ್ಕಾರ ಉಚಿತ ಗ್ಯಾಸ ಸಿಲಿಂಡರ್ ವ್ಯವಸ್ಥೆ ಮಾಡಿತ್ತು. ಈಗ ಬಹುತೇಕ ಮನಿ ಗಳಲ್ಲಿ ಕಟ್ಟಗಿ ಉಪಯೋಗಿಸೋದು ಕಮ್ಮಿ ಆಗ್ಯಾದ  ಈ ಯುದ್ದದ ಪರಿಣಾಮದಿಂದ ಗ್ಯಾಸ್ ಅಭಾವವಾಗಿ ಮತ್ತ ಜನ ಕಟ್ಟಿಗಿಗಿ ಮೊರೆ ಹೋಗಬೇಕಾಗ್ಯಾದ.ಈಗ ಮತ್ತೊಮ್ಮೆ ಕೋವಿಡ್ ದಾಗ ಅನುಭವಿಸಿದ ಸಂಕಟ ನೆನಪಿಗೆ ಬರಲತದ.ಈ ಯುದ್ದಗಳು ಹಿಂಗ ಮುಂದುವರೆದ್ರ ಇನ್ನೂ ಎನೇನು ಅಭಾವ ಎದುರಿಸಬೇಕೋ ಎನೋ. ಈ ಯುದ್ದಗಳಿಂದ ಜಗತ್ತಿಗೆ ಉಪಯೋಗ ಇಲ್ಲ.ಆದ್ರೂ ಮತ್ತೊಬ್ಬರ ಜೋಡಿ ಜಗಳ ಆಡೋದೇ ದೊಡ್ಡಸ್ತಿಕೆ ಅನ್ನಕೊಳ್ಳೋ ಮೂರ್ಖರು ಇರೊ ತನಕ ಇವು ಹಿಂಗ ನಡಿತಾವ.ಎಲ್ಲೊ ಕುಂತು ಯುದ್ದಕ್ಕ ಪ್ರೇರಣೆ ನಿಡೋರು ಸುರಕ್ಷಿತ ವಾಗೆ ಇರತಾರ.ಸಾಮಾನ್ಯರ ಪಾಡು ಅನ್ನಲಕ್ಕ ಆಗಲ್ಲ ಆಡಲಕ್ಕ ಆಗಲ್ಲ.ದೇಶಗಳು ದೊಡ್ಡಸ್ತಿಕಿಯಿಂದ ಬೆನ್ನತಟ್ಟಕೊಳ್ಳತಾವ , ದೇಶವಾಸಿಗಳು ಯುದ್ಧದ ಕಾರ್ಮೊಡದೊಳಗ ಕಾಣೆಯಾಗತಾರ. ಜ್ಯೋತಿ , ಡಿ.ಬೊಮ್ಮಾ. ಜ್ಯೋತಿ ಡಿ , ಬೊಮ್ಮಾ ಅವರು ಕಲಬುರಗಿ ಜಿಲ್ಲೆಯವರು. ನಾಲ್ಕು ಕವನ ಸಂಕಲನಗಳು , ಎರಡು ಪ್ರಭಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ.ಪ್ರತಿ ತಿಂಗಳು ಸಂಗಾತಿ ಪತ್ರಿಕೆಗಾಗಿ ಅವರ ದೇಸಿ ನುಡಿಗಟ್ಟಿನಲ್ಲಿ ಅಂಕಣ ಬರಹವನ್ನು ಪ್ರಕಟಿಸುತ್ತಾರೆ.

Read Post »

ಅಂಕಣ ಸಂಗಾತಿ, ವೃತ್ತಿ ವೃತ್ತಾಂತ

ಅಂಕಣ ಸಂಗಾತಿ ವೃತ್ತಿ ವೃತ್ತಾಂತ ಸುಜಾತಾ ರವೀಶ್ ವೃತ್ತಿ ಬದುಕಿನ ಹಿನ್ನೋಟ–32 ನಮ್ಮ ಆಫೀಸಿನ ಮುಂದಿನ ರಸ್ತೆಯಲ್ಲಿಯೇ ಒಂದು ಎಂಟು ನಿಮಿಷ ನಡೆದರೆ ಸಂತೆ ನಡೆಯುವ ಸಂತೆ ಮಾಳ ಅಥವಾ ಬಯಲು. ನಾವು ಮಧ್ಯಾಹ್ನ ಭೋಜನ ವಿರಾಮ ವೇಳೆಯಲ್ಲಿ ಬೇಗ ಬೇಗ ಊಟ ಮುಗಿಸಿ ಸಂತೆಗೆ ಹೋಗುತ್ತಿದ್ದೆವು. ಸಾಮಾನ್ಯವಾಗಿ ನಾನು ಇಂದುಮತಿ ಮತ್ತು ಶಶಿಕಲಾ ಹೋಗುತ್ತಿದ್ದೆವು.. ನಂತರ ಗಂಗಾ ಮತ್ತು ಫಾತಿಮಾ ವರ್ಗವಾಗಿ ಬಂದಮೇಲೆ ಅವರೂ ಬರುತ್ತಿದ್ದರು.ಮೊದಲಿಗೆ ಸಂತೆಯಲ್ಲಿದ್ದ ಮೂರು ನಾಲ್ಕು ಸಾಲುಗಳನ್ನು ಒಂದು ಬಾರಿ ಕಣ್ಣಾಡಿಸಿ ಬರುವುದು. ನಂತರ ಎಲ್ಲಿ ಚೆನ್ನಾಗಿದೆಯೋ ಹಾಗೂ ಬೆಲೆ ಕಡಿಮೆ ಇರುತ್ತದೆಯೋ ಅಲ್ಲಿ ತೆಗೆದುಕೊಳ್ಳುವುದು.. ನಾನು ಅಮ್ಮನ ಮನೆಗೂ ಸೇರಿಸಿ ತರಕಾರಿ ತೆಗೆದುಕೊಂಡು ಬರುತ್ತಿದ್ದೆ .ಸಾಮಾನ್ಯ ನನ್ನ ಬ್ಯಾಗ್ ತೂಕವಾಗಿ ಇರುತ್ತಿತ್ತು. ಈಗಾದರೆ ಅಷ್ಟು ಭಾರ ಹೊತ್ತು ಎಂಟು ನಿಮಿಷ ನಡೆಯಲು ಆಗುತ್ತಿತ್ತೋ ಇಲ್ಲವೋ ಹಾಗಂತು ನಿರಾಯಾಸವಾಗಿ ತೆಗೆದುಕೊಂಡು ಬರುತ್ತಿದ್ದೆವು. ಸಂಜೆ ಮಾತ್ರ ಆಟೋ ಹಿಡಿದು ಹೋಗುತ್ತಿದ್ದೆವು. ಸಾಮಾನ್ಯ ಅಲ್ಲಿ ತರಕಾರಿ ಬೆಳೆದವರೇ ತಂದು ಮಾರುತಿದ್ದುದರಿಂದ ತುಂಬಾ ತಾಜಾ ಆಗಿಯೂ ಇರುತ್ತಿತ್ತು ಅಲ್ಲದೆ ಮೈಸೂರಿಗಿಂತ ಬಹಳ ಕಡಿಮೆ ದರದಲ್ಲಿಯೇ ಸಿಗುತ್ತಿದ್ದುದಿ ಒಂದು ಕಾರಣ. ಸೊಪ್ಪಂತೂ ತುಂಬಾ ಚೆನ್ನಾಗಿರುತ್ತಿತ್ತು. ಆದರೆ ನಾವು ಸಂತೆಯಲ್ಲಿ ಸೊಪ್ಪನ್ನು ತೆಗೆದುಕೊಳ್ಳುತ್ತಿರಲಿಲ್ಲ. ಮಧ್ಯಾಹ್ನ ತೆಗೆದುಕೊಂಡು ಸಂಜೆಯ ವೇಳೆಗೆ ಬಾಡಿ ಹೋಗುತ್ತದೆ ಎನ್ನುವುದು ಒಂದು ಕಾರಣವಾದರೆ ರೈಲ್ವೆ ಸ್ಟೇಷನ್ ಪಕ್ಕದಲ್ಲಿಯೇ ಒಂದು ತರಕಾರಿ ಮಾರುಕಟ್ಟೆ ಇತ್ತು. ಅಲ್ಲಿ ತುದಿಯಲ್ಲಿಯೇ ಒಂದು ಅಜ್ಜಿ ಸೊಪ್ಪು ಮಾರುತ್ತಾ ಕುಳಿತಿರುತ್ತಿತ್ತು. ಸಾಮಾನ್ಯ ಆಕೆಯ ಬಳಿಯೇ ತೆಗೆದುಕೊಂಡು ರೈಲು ಹತ್ತುತ್ತಿದ್ದುದು. ಅದು ಶುಕ್ರವಾರ ಮಾತ್ರ ಸೊಪ್ಪು ತೆಗೆದುಕೊಳ್ಳದೆ ಬೇರೆ ದಿನಗಳಲ್ಲಿ ತೆಗೆದುಕೊಳ್ಳುತ್ತಿದ್ದೆವು.. ಕಸಿ ಮಾಡಿದ ದೊಡ್ಡ ಗಾತ್ರದ ಬದನೆಕಾಯಿ ಒಳಗೆ ಒಂದು ಬೀಜವು ಇರದೆ ಬೆಣ್ಣೆಯಂತೆ ಕರಗಿ ಹೋಗುತ್ತಿತ್ತು. ಎಳೆ ಹುರಳಿ ಕಾಯಿ ಗೋರಿಕಾಯಿ ಹೀರೆಕಾಯಿಗಳು ನೋಡಿದರೆ ತಿನ್ನುವಷ್ಟು ಆಸೆ ಆಗುತ್ತಿತ್ತು. ಕ್ಯಾರೆಟ್ ಸಹ ಚೆನ್ನಾಗಿಯೇ ಸಿಗುತ್ತಿತ್ತು. ಹೀಗಾಗಿ ಎಲ್ಲ ತರಕಾರಿಗಳನ್ನು ತೆಗೆದುಕೊಂಡು ಹೋಗುತ್ತಿದ್ದೆವು. ಅವರೇ ಕಾಯಿ ಮತ್ತು ಸೊಪ್ಪು ಮಾತ್ರ ರೈಲ್ವೆ ಸ್ಟೇಷನ್ ಬಳಿಯಲ್ಲಿಯೇ ತೆಗೆದುಕೊಳ್ಳುತ್ತಿದ್ದು ಹೊತ್ತುಕೊಂಡು ಹೋಗಬೇಕಲ್ಲ ಎನ್ನುವುದು ಒಂದಾದರೆ ಅಲ್ಲೂ ಸಹ ಇದೇ ದರದಲ್ಲಿ ಸಿಗುತ್ತಿದ್ದುದು ಮತ್ತೊಂದು ವಿಶೇಷ. ಮತ್ತೊಂದು ಬಾರಿ ವರ್ಗಾವಣೆ ಚಕ್ರ ಉರುಳಿತು. ಈ ಬಾರಿ ಸುಲೋಚನಾ ಅವರಿಗೆ ಚಾಮರಾಜನಗರದಿಂದ ನಂಜನಗೂಡಿಗೆ ವರ್ಗ ಸಿಕ್ಕಿತ್ತು .ಅದರ ಜೊತೆಯಲ್ಲಿ ಈ ಮೊದಲು ನನ್ನ ಜೊತೆ ವಿಭಾಗೀಯ ಕಚೇರಿಯಲ್ಲಿ ಇದ್ದ ಸುಮಾ ಸಹ ಕೆಆರ್ ಪೇಟೆಯಿಂದ ನಂಜನಗೂಡಿಗೆ ವರ್ಗವಾಗಿ ಬಂದಳು. ನಮ್ಮ ರೈಲಿನಲ್ಲಿ ಓಡಾಡುವ ಬಳಗಕ್ಕೆ ಮತ್ತಷ್ಟು ಬಲ ಸಿಕ್ಕಿದಂತಾಯಿತು. ಫಾತಿಮಾ ಹಾಗೂ ವೈದೇಹಿ ಅವರು ಅದರ ಮುಂದಿನ ಸುತ್ತಿನಲ್ಲಿ ವರ್ಗವಾಗಿ ಬಂದರು. ಅವರಿಬ್ಬರೂ ಬಸ್ ನಲ್ಲಿ ಓಡಾಡುತ್ತಿದ್ದರು.ಸುಲೋಚನ ಬಂದದ್ದು ಒಂದು ಅನುಕೂಲ ಏನಾಯಿತೆಂದರೆ ಮೈಸೂರಿನಿಂದ ನೀರು ಹೊತ್ತುಕೊಂಡು ಹೋಗುವುದು ತಪ್ಪಿತು. ಅವರ ಮನೆಯಿಂದ ಆಟೋದಲ್ಲಿ ಬರುತ್ತಿದ್ದುದರಿಂದ  ದಿನಾ ನಾನೇ ನೀರು  ತರುತ್ತೇನೆ ಎಂದು ಹೇಳಿದ್ದರು. ರಜೆ ತೆಗೆದುಕೊಳ್ಳದ ಚಿಕ್ಕ ಪುಟ್ಟ ಹಬ್ಬಗಳು ನಂಜನಗೂಡಿನ ದೊಡ್ಡ ಜಾತ್ರೆ ಇಂತಹ ದಿನಗಳೆಲ್ಲ ಅವರ ಮನೆಗೆ ಆಟೋದಲ್ಲಿ ಹೋಗಿ ಊಟ ಮಾಡಿ ಬರುತ್ತಿದ್ದೆವು. ಅವರಿಗೆ ಕಚೇರಿ ಸೇವಾ ವಿಭಾಗವನ್ನು ಕೊಟ್ಟಿದ್ದರು. ಸುಮಾಗೆ ಲೆಕ್ಕ ಪತ್ರ ವಿಭಾಗ. ಈ ಸುತ್ತಿನಲ್ಲಿ ನನಗೆ ಮೊದಲೇ ಹೇಳಿದಂತೆ ಪಾಲಿಸಿ ಸೇವಾ ವಿಭಾಗಕ್ಕೆ ಬದಲಾವಣೆ ಕೊಟ್ಟರು .ಅಲ್ಲಿ ನಾನು ಲೋನ್ಸ್ ಅಂದರೆ ಸಾಲ ವಿಭಾಗಕ್ಕೆನಿಯುಕ್ತಳಾದೆ. ಅಲ್ಲಿ ಆಗ ನಾರಾಯಣಸ್ವಾಮಿ ಅವರು ನಮಗೆ ಆಡಳಿತ ಅಧಿಕಾರಿಗಳಾಗಿ ಇದ್ದರು. ಆಗೆಲ್ಲ ಒಂದೇ ಸಾವಿರದ ಒಳಗೆ ಸಾಲ ಇದ್ದಾಗ ಅದನ್ನು ನಗದು ರೂಪದಲ್ಲಿಯೇ ಕೊಡುತ್ತಿದ್ದರು .ಹಾಗಾಗಿ ಒಂದು ರೀತಿಯ ಒತ್ತಡದಲ್ಲಿಯೇ ಕೆಲಸ ಮಾಡಬೇಕಿತ್ತು ಆದರೂ ಖುಷಿ ಕೊಡುತ್ತಿತ್ತು. ತುಂಬಾ ಅನಿವಾರ್ಯ ಸ್ಥಿತಿಯಲ್ಲಿ ಸಾಲ ಬೇಕಾದವರಿಗೆ ತಕ್ಷಣ ಮಾಡಿಕೊಟ್ಟಾಗ ಅವರು ತೋರಿಸುತಿದ್ದ ಕೃತಜ್ಞತಾ ಭಾವ ಸಾರ್ಥಕ ಭಾವನೆ ಮೂಡಿಸುತ್ತಿತ್ತು. ಹೋದ ಕೆಲವು ದಿನಗಳಲ್ಲೇ ಅಲ್ಲಿನ ನಿಯತಕಾಲಿಕೆಗಳ ವಿತರಣೆ ಕೆಲಸ ಮತ್ತೆ ಈ ಶಾಖೆಯಲ್ಲಿಯೂ ನನ್ನನ್ನೇ ಅರಸಿ ಬಂದಿತ್ತು ಅದು ತುಂಬಾ ಇಷ್ಟದ ಕೆಲಸವಾದ್ದರಿಂದ ಒಪ್ಪಿಕೊಳ್ಳಲು ನಿರಾಕರಿಸಲಿಲ್ಲ.  ಆಗ ಪಾಲಿಸಿ ಸೇವಾ ವಿಭಾಗದಲ್ಲಿನ ನಮ್ಮ ತಂಡ ತುಂಬಾ ಚೆನ್ನಾಗಿತ್ತು ನಾಗಮಣಿ ಗಿರಿಜಾ ಮತ್ತು ನಾನು ಉನ್ನತ ದರ್ಜೆ ಸಹಾಯಕಿಯರು.  ಈ ಸಮಯದಲ್ಲಿ ತುಂಬಾ ದುಃಖಕರ ಘಟನೆ ಒಂದು ನಡೆಯಿತು .ಹೊಸ ವ್ಯವಹಾರ ವಿಭಾಗದಲ್ಲಿ ನನ್ನ ಜೊತೆಗೆ ಸಹಾಯಕರಾಗಿ ಇದ್ದ ಮಹಾದೇವನ್ ಅವರ ಆಘಾತಕಾರಿ ಸಾವು. ಉತ್ತರ ಭಾರತಕ್ಕೆ ಪತ್ನಿಯೊಂದಿಗೆ ಪ್ರವಾಸ ಹೋಗಿದ್ದಾಗ ಗಂಗಾನದಿಯ ನೀರಿನ ಸೆಳೆತಕ್ಕೆ ಅವರ ಪತ್ನಿ ಕೊಚ್ಚಿ ಹೋದರು .ಅವರನ್ನು ಹಿಡಿಯಲು ಇವರು ಅವರ ಹಿಂದೆಯೇ ಧುಮುಕಿದರು. ಬೇರೆ ನುರಿತ ಈಜುಗಾರರು ಅವರಿಬ್ಬರನ್ನು ದಡಕ್ಕೆ ಎಳೆದು ತರುವಷ್ಟರ ಮಹದೇವನ್ ಅವರ  ಪ್ರಾಣ ಹೋಗಿಬಿಟ್ಟಿತ್ತು. ನಂತರ ಅವರ ಪತ್ನಿಗೆ ಅವರ ಕೆಲಸ ಸಿಕ್ಕಿತು ಇತ್ತೀಚೆಗೆ ಅವರ ಮಗಳ ಮದುವೆಯೂ ಆಯಿತು. ಆದರೂ ಬಹಳ ದಿನಗಳ ಕಾಲ ಕಾಡಿದ ಸಾವು ಅದು. ಮತ್ತೆ ಸಂತೆಯ ವಿಷಯಕ್ಕೆ ಬರುತ್ತೇನೆ. ಈ ಮೊದಲೇ ಹೇಳಿದಂತೆ ಹುಲ್ಲಹಳ್ಳಿ ಸರ್ಕಲ್ ನಿಂದ ಸಂತೆಗೆ ಹೋಗುವ ದಾರಿಯಲ್ಲಿ ಮಧ್ಯೆ ನಮ್ಮ ಆಫೀಸ್ ಇರುವುದು. ಸಂತೆ ನಡೆಯುತ್ತಿರುವುದು ಶುಕ್ರವಾರ. ನಮ್ಮ ಶಾಖೆಯಲ್ಲಿ ಮಹಿಳೆಯರ ಶೌಚಾಲಯ ಕ್ಯಾಶ್ ಕೌಂಟರ್ ನ ಎದುರಿಗೆ ಎಲ್ಲರ ಕಣ್ಣಿಗೆ ಬೀಳುವಂತೆಯೇ ಇತ್ತು .ಸಂತೆಯ ದಿನ ಸಂತೆಗೆ ಹೋಗುವ ಹೆಂಗಸರು ಸಂತೆಯ ಮಾರಾಟಗಾರ್ತಿ ಹೆಂಗಸರು ಎಲ್ಲರಿಗೂ ನಮ್ಮ ಶಾಖೆಯ ಶೌಚಾಲಯ ಒಂದು ಸಾರ್ವಜನಿಕ ಶೌಚಾಲಯದ ತರಹ ಆಗಿ ಹೋಗಿತ್ತು. ಸದಾ ತೆರೆದೇ ಇರುತ್ತಿದುದರಿಂದ ಮುಂಬಾಗಿಲಿನಿಂದ ಪ್ರವೇಶಿಸಿ ನೇರ ಅಲ್ಲಿಗೆ ಹೋಗಿ ಬಿಡುತ್ತಿದ್ದರು .ಪ್ರವೇಶ ನಿಷೇಧ ಎಂಬ ಬೋರ್ಡ್ ಹಾಕಿಸಿದರೂ ಪ್ರಯೋಜನವಾಗಲಿಲ್ಲ. ಮಕ್ಕಳನ್ನು ಕರೆದುಕೊಂಡು ಬಂದು ತುಂಬಾ ಗಲೀಜು ಮಾಡಿ ಇಡೀ ಮಧ್ಯಾಹ್ನ ನಮಗೂ ಅದನ್ನು ಉಪಯೋಗಿಸಲು ಸಾಧ್ಯವಾಗದೆ ಮಹಡಿಯ ಮೇಲಿದ್ದ ಬೇರೊಂದು ಶೌಚಾಲಯವನ್ನು ನಾವು ಸಿಬ್ಬಂದಿಯವರು ಉಪಯೋಗಿಸಿಬೇಕಾಗಿತ್ತು. ಮಾರನೆಯ ದಿನ ಬಂದ ಸ್ವಚ್ಛತಾ ಸಿಬ್ಬಂದಿಯವರು ಶಾಖಾಧಿಕಾರಿಗಳ ಬಳಿ ಅದನ್ನು ಹೇಳಿ ನಂತರದಲ್ಲಿ ಅಲ್ಲಿಗೆ ಬೀಗ ಹಾಕಿ ಬೀಗದ ಕೈ ಸಿಬ್ಬಂದಿಗಳಿಗೆ ಮಾತ್ರ ಗೊತ್ತಿರುವ ಜಾಗದಲ್ಲಿ ಇಡಿಸಲಾಯಿತು .ಒಂದೆರಡು ಮೂರು ವಾರ ಬಂದವರು ಮುಚ್ಚಿದ ಬಾಗಿಲನ್ನು ನೋಡಿ ನಮ್ಮನ್ನು ಕೇಳಿದರು .ಆದರೆ ಅದು ಎಲ್ಲರ ಉಪಯೋಗಕ್ಕೆ ಅಲ್ಲ ಎಂದು ತಿಳಿದ ಮೇಲೆ ನಂತರದಲ್ಲಿ ಜನ ಹಾಗೆ ಬರುವುದು ಕಡಿಮೆಯಾಯಿತು. ಆದರೆ ನಾನು ವಾಪಸ್ ಮೈಸೂರಿಗೆ ಬರುವವರೆಗೂ ಶುಕ್ರವಾರದ ದಿನ ಅದಕ್ಕೆ ಬೀಗ ಹಾಕಿಯೇ ಇಡುತ್ತಿದ್ದೆವು.ಅದು ತಪ್ಪು ನಾವು ಹಾಗೆ ಮಾಡಬಾರದಿತ್ತು ಎಂದೆನಿಸಿದರೂ ಬಂದವರು ಕನಿಷ್ಠ ಸ್ವಚ್ಛತೆಯ ನಿಯಮಗಳನ್ನು ಪಾಲಿಸದೆ ತುಂಬಾ ಗಲೀಜು ಮಾಡಿ ಬಿಡುವುದರಿಂದಲೂ, ಮಧ್ಯಾಹ್ನದ ವೇಳೆ ನಾವು ಆ ಮಹಿಳಾ ಕೊಠಡಿಯಲ್ಲಿ ಊಟ ಮಾಡಬೇಕಾಗಿದ್ದರಿಂದ ಆ ಕೊಳಕನ್ನು ಸಹಿಸಲು ಸಾಧ್ಯವಾಗದಿದ್ದುದು ಈ ನಡೆಗೆ ಕಾರಣವಾಗಿತ್ತು .‌ನಂತರ ಸ್ವಚ್ಛತಾ ಸಿಬ್ಬಂದಿ ವಿರೋಧ ಬಂದ ಮೇಲಂತೂ ನಮ್ಮ ಅಪರಾಧಿ ಮನೋಭಾವ ಸ್ವಲ್ಪ ಮಟ್ಟಿಗೆ ಕಡಿಮೆಯಾಯಿತು. ನಾವು ಮಹಿಳಾ ಬೋಗಿಯಲ್ಲೇ ದಿನ ಓಡಾಡುತ್ತಿದ್ದುದು ಎಂದು ಹೇಳಿದೆನಲ್ಲ ಅಲ್ಲಿ ನಮಗೆ ಬೇರೆ ಬ್ಯಾಂಕಿನ ಮತ್ತು ರಾಜ್ಯ ಸರ್ಕಾರಿ ನೌಕರಿಯ ಗೆಳತಿಯರು ಸಿಕ್ಕಿದರು. ಕೆನರಾ ಬ್ಯಾಂಕಿನ ನನ್ನದೇ ಹೆಸರಿನ ಸುಜಾತ ಎನ್ನುವವರು ಅಲ್ಲದೆ ಕಮರ್ಷಿಯಲ್ ಟ್ಯಾಕ್ಸ್ ಆಫೀಸಿನ ಗೀತಾ ಮತ್ತು ಸರಸ್ವತಿ ರಾಜ್ಯ ಸರ್ಕಾರದ ನೌಕರಿಯಲ್ಲಿದ್ದ ಉಮಾ ಮತ್ತು ಇನ್ನೊಬ್ಬರು ಹೆಸರು ಮರೆತು ಹೋಗಿದೆ. ಮತ್ತೆ ಕಡ ಕೊಳದ ಹಿಟ್ಟಿನ ಕಾರ್ಖಾನೆಯಲ್ಲಿ ಕೆಲಸದಲ್ಲಿದ್ದ ಪೂರ್ಣಿಮಾ ಮತ್ತು ಅನಿತಾ  ನಾವೆಲ್ಲ ಒಟ್ಟಿಗೆ ಪ್ರಯಾಣಿಸುತ್ತಿದ್ದೆವು. ಉಮಾ ಅವರ ಮನೆಯಲ್ಲಿ ಜಾಜಿ ಹೂ  ಬಿಡುತ್ತಿದ್ದುದರಿಂದ ಅವರು ತರುತ್ತಿದ್ದರು. ಆದರೆ ಕಟ್ಟಲು ಸಮಯವಾಗುತ್ತಿರಲಿಲ್ಲ . ದಿನಾ ರೈಲಿನಲ್ಲಿ ನಾನೇ ಕಟ್ಟಿಕೊಡುತ್ತಿದ್ದೆ . ನನಗೂ  ಅದರಲ್ಲಿ ಪಾಲು ಇರುತ್ತಿತ್ತು ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ ಅಲ್ಲವೇ? ನಾನು ಮನೆಯಲ್ಲಿ ತಿನ್ನಲು ಸಮಯವಾಗದಿದ್ದದರಿಂದ ಹಾಗೂ ಬೇಗ ಆಗುತ್ತಿದುದರಿಂದ ತಿಂಡಿಯನ್ನು ಸಹ ರೈಲಿನಲ್ಲಿ ತೆಗೆದುಕೊಂಡು ಹೋಗಿ ತಿನ್ನುತ್ತಿದ್ದೆ. ಆ ಸಮಯದಲ್ಲಿ ಪೂರ್ಣಿಮಾ ಅವರು ಗರ್ಭಿಣಿಯಾಗಿದ್ದರು. ಅವರಿಗೆ ನಮ್ಮ ಮನೆಯ ಮೆಂತ್ಯದ ಹಿಟ್ಟಿನ ಗೊಜ್ಜು ಹಾಗೂ ಹುಳಿ ಅನ್ನ ತುಂಬಾ ಇಷ್ಟವಾಗುತ್ತಿತ್ತು. ಸಾಮಾನ್ಯ ತೆಗೆದುಕೊಂಡು ಹೋಗಿ ಕೊಡುತ್ತಿದ್ದೆ. ಅವರು ಹೆರಿಗೆ ರಜೆ ಹೋಗುವ ಮೊದಲು ನಾವು ನಮ್ಮ ಬೋಗಿಯಲ್ಲಿ  ಅವರಿಗೆ ಒಂದು ಸೀರೆ ಬಳೆ ಮಲ್ಲಿಗೆ ಹೂವು ಕೊಟ್ಟು ಅಂದಿನ ದಿನ ಸಿಹಿ ತಿನಿಸು ಮಾಡಿ ತೆಗೆದುಕೊಂಡು ಹೋಗಿ ಕೊಟ್ಟಿದ್ದೆವು. ಆನಂತರದಲ್ಲಿ ಅವರು ನನ್ನ ತಂಗಿಯ ಪತಿ ಮುರಳಿ ಅವರ ಸಂಬಂಧಿ ಎಂದು ತಿಳಿಯಿತು. ಈಗಲೂ ಅವರ ಸಂಪರ್ಕ ಇದೆ ಸರಸ್ವತಿ ಅವರ ಮಗನ ಮದುವೆಗೆ ಆಹ್ವಾನಿಸಿದ್ದರು. ಅದಕ್ಕೂ ಹೋಗಿದ್ದೆ .ಈಗ ಅವರು ಎಲ್ಲ ನಿವೃತ್ತರಾಗಿರಬಹುದು. ಇತ್ತೀಚೆಗೆ ನನ್ನ ಗೆಳತಿ ಸಹೋದ್ಯೋಗಿ ಮಂಗಳಾಂಬ ಅವರ ಮಗನ ಮದುವೆಯಲ್ಲಿ ಉಮಾ ಮತ್ತು ಪರಮೇಶ್ವರ ಅವರು ಸಿಕ್ಕಿದ್ದರು. ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡೆವು ಈಗ ಅವರು ಸಹ ಸಂಪರ್ಕದಲ್ಲಿ ಇದ್ದಾರೆ.ತುಂಬಾ ಚೆನ್ನಾಗಿ ಬಾಂಧವ್ಯ ಇತ್ತು. ರೈಲಿನಲ್ಲಿ ಓಡಾಡುವುದೆಂದರೆ ತುಂಬಾ ಸಂತೋಷವಾಗುತ್ತಿತ್ತು. ಗೆಳತಿಯರು ಅಷ್ಟೇ ಅನ್ಯೋನ್ಯವಾಗಿದ್ದೆವು. ಅದನ್ನೆಲ್ಲ ನೆನೆದರೆ ತುಟಿ ಅಂಚಿನಲ್ಲಿ ಮುಗುಳ್ನಗೆ ಬಿರಿಯುತ್ತದೆ. ಖುಷಿಯ ಕ್ಷಣಗಳು ನೆನಪಾಗುತ್ತದೆ. ಸವಿ ನೆನಪುಗಳು ಬೇಕು ಸವಿಯಲೀ ಬದುಕು ಅಲ್ಲವೇ?(ಮುಂದುವರೆಯುವುದು) ಸುಜಾತಾ ರವೀಶ್

Read Post »

ಅಂಕಣ ಸಂಗಾತಿ, ಜಯದೇವಿ ತಾಯಿ ಲಿಗಾಡೆ ಜೀವನ

ಧಾರಾವಾಹಿ ಸಂಗಾತಿ-12 ಜಯದೇವಿತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಮಹಾನ್‌ ಚೇತನ *೧೯೪೪-೪೫*ರ ಸಮಯ….. ಸೋಲ್ಲಾಪುರದಲ್ಲಿ ಕಾಲರಾ ರೋಗ ಭೀಕರವಾಗಿ ಹರಡಲಾರಂಭಿಸಿತು…ಜನರು ಭಯದಿಂದ ನಡುಗುತ್ತಿದ್ದರು. ಮನೆಮನೆಯಲೂ ಅಳಲು, ಆತಂಕ, ನಿರಾಶೆಯ ಕತ್ತಲೆ ಆವರಿಸಿತ್ತು.ಜಯದೇವಿ ತಾಯಿಯವರು ಮತ್ತು ಅವರ ತಾಯಿ ಸಂಗವ್ವ ಬಾಯಿಯವರು ಇನ್ನುಳಿದ ಮಹಿಳೆಯರನ್ನು ಕರೆದುಕೊಂಡು ರೋಗ ಪೀಡಿತರಿಗೆ ಸಹಾಯ ಹಸ್ತ ಚಾಚಲಾರಂಭೀಸಿದರು. ಅವರ ಸಹಾಯಕ್ಕಾಗಿ ಅಕ್ಕನ ಬಳಗದ ಹೆಣ್ಣು ಮಕ್ಕಳನ್ನೆಲ್ಲ ಕರೆದುಕೊಂಡು ಹೋಗುತ್ತಿದ್ದರು. ಅಂಥ ಸಮಯದಲ್ಲಿ ಜಯದೇವಿತಾಯಿಯವರು ಮಾಡಿದ ಸೇವೆ ಕೇವಲ ಸಹಾಯವಲ್ಲ… ಅದು ಮಾನವೀಯತೆಯ ಜೀವಂತ ರೂಪ.ರೋಗಿಗಳ ಬಳಿ ಹೋಗುವುದಕ್ಕೂ ಜನ ಹೆದರುತ್ತಿದ್ದಾಗ…ಜಯದೇವಿ ತಾಯಿಯವರು…. ಅವರ ಮನೆಗಳಿಗೆ ಹೋಗಿ ಧೈರ್ಯ ತುಂಬಿದವರು.ಅವರು ತಮ್ಮ ಕೈಯಿಂದಲೇ ಔಷಧಿ ಕೊಡುತ್ತಿದ್ದರು, ಪೌಷ್ಟಿಕ ಆಹಾರ  ರೋಗಿಗಳಿಗೆ ಒದಗಿಸುತಿದ್ದರು.ಕಾಲರಾ ಹರಡುವುದನ್ನು ತಡೆಯಲು ಸ್ವಚ್ಛತೆಯ ಮಹತ್ವವನ್ನು ಜನರಿಗೆ ತಿಳಿಸುತ್ತಿದ್ದರು.ನೀರನ್ನು ಕುದಿಸಿ ಕುಡಿಯಬೇಕು, ಪರಿಸರ ಸ್ವಚ್ಛವಾಗಿರಬೇಕು ಎಂದೆಲ್ಲಿ ತಿಳಿಸಿ ಹೇಳುತಿದ್ದರು. ಈ ರೋಗದಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳನ್ನು ಅವರು ಒಬ್ಬ ತಾಯಿಯಾಗಿ ಅಪ್ಪಿಕೊಂಡರು. ರೋಗದ ಬಗ್ಗೆ ಭಯಾನಕವಾದ ಆತಂಕವು ಎಲ್ಲರಲ್ಲಿ ನೆಲ ಮಾಡಿತು.ಆ ಕರಾಳಭಯ ನೀಗಿಸಿ ಧೈರ್ಯ ಹೇಳಿದವರು.ಅನಾಥ ಮಕ್ಕಳಿಗೆ ಇರಲು ವ್ಯವಸ್ಥೆ ಮಾಡಿ ಬಟ್ಟೆ ಪುಸ್ತಕವನ್ನು ಕೊಟ್ಟು ಶಾಲೆ ಕಲಿಸಿದರು. ರೋಗ ಪೀಡೆತರಿಗಾಗಿ ,ಬಡ ಮಕ್ಕಳಿಗಾಗಿ, ಅನಾಥರಿಗಾಗಿ ಸಿದ್ದರಾಮನ ದೇವಸ್ಥಾನಕ್ಕೆ ಹೋಗಿ ಬೇಡಿಕೊಂಡು ಬರುತ್ತಿದ್ದರು. *ಬಡ ಮಕ್ಕಳಿಗೆ ಹಾಲು,ಉಡಲು ತಾಯಿಗೆ ಸೀರೆ, ಒಡಲ ತುಂಬ ಅನ್ನ ನೀಡುತ್ತ, ರೋಗಗಳಓಡಿಸಲು ಕರುಣಿಸ ಬೇಕಯ್ಯ ಸಿದ್ದೇಶ!!*ಎಂದು ಹಾಡಿ ಕಳಕಳಿಯಿಂದ ಪ್ರಾರ್ಥನೆ ಮಾಡಿದವರು..“ನಾವು ಒಟ್ಟಿಗೆ ಇದನ್ನು ಎದುರಿಸೋಣ” ಎಂದು ಜನರಿಗೆ ಮನೋಬಲ ತುಂಬುತ್ತಿದ್ದರು.ಆ ದಿನಗಳಲ್ಲಿ… ತಮ್ಮ ವೈಯುಕ್ತಿಕ ಜೀವದ ಹಂಗು ಹರಿದು… ಇತರರ ಜೀವ ಉಳಿಸಲು ಓಡಾಡುತ್ತಿದ್ದರು.ರಾತ್ರಿ-ಹಗಲು ಎನ್ನದೆ…ಅವರ ಕಣ್ಣುಗಳಲ್ಲಿ ನಿದ್ರೆ ಮರೆತರು…ಹೃದಯದಲ್ಲಿ ಒಂದೇ ಉದ್ದೇಶವಿತ್ತು.“ಯಾರೂ ಸಹಾಯವಿಲ್ಲದೆ ನಿಸ್ಸಾಯಕರು ನಿರ್ಗತಿಕರಾಗಿ ರೋಗಿಗಳುಸಾಯಬಾರದೆಂದು …!!! ಸೋಲಾಪುರದ ಜನರು ನಂತರ ಹೇಳುತ್ತಿದ್ದರು…“ಆ ಕಾಲರಾ ಕಾಲದಲ್ಲಿ… ದೇವರು ನಮ್ಮನ್ನು ಕಾಪಾಡಲು ಜಯದೇವಿಯವರನ್ನು ತಾಯಿ ರೂಪದಲ್ಲಿ…ಕಳುಹಿಸಿದನೆಂದು…ಅವರ ಸೇವೆ ಕೇವಲ ರೋಗವನ್ನು ಎದುರಿಸುವುದು ಅಷ್ಟೇ ಅಲ್ಲ..ಅದರ ಜೊತೆಗೆ ಉದ್ಭವಿಸುತ್ತಿರುವ ಅನೇಕ ಸಮಸ್ಯೆಗಳನ್ನು ಪರಿಹರಿಸಿದರು.!! ಆದರೂ ಅದೆಷ್ಟೋ ಜನರ ಜೀವವನ್ನು ಉಳಿಸಲು ಆಗಲಿಲ್ಲ. ಅನ್ನುವ ಕಳವಳ ಅವರಲ್ಲಿ ಇತ್ತು.ಮನೆಯಲ್ಲಿ ಪತಿಯ  ಆರೋಗ್ಯ ಕೂಡ ಸರಿ ಇರಲಿಲ್ಲ ಆದರೂ ಅಂಥ ನೋವಿನಲ್ಲಿಯೂ ಇನ್ನೊಬ್ಬರ ಕಣ್ಣೀರನ್ನು ಒರಿಸಲು ತಾಯಿಯವರು ಸದಾ ಬದ್ಧರಾಗಿರುತ್ತಿದ್ದರು. ಇದು ಒಂದು ಮಾನವೀಯ ಐತಿಹಾಸಿಕ ಪುಟದಲ್ಲಿ ಮರೆಯಲಾಗದ ಘಟನೆ. *೧೯೪೬ ರ *ಸಮಯದಲ್ಲಿ  ಕಾಂಗ್ರೆಸ್ಸಿಗರು ಕರ್ನಾಟಕ ಪರಿಷತ್ತು, ಮಹಾರಾಷ್ಟ್ರ ಪರಿಷತ್ತು ಮತ್ತು ಆಂಧ್ರ ಸಭೆಗಳು ಸೇರಿ ಸ್ಥಳೀಯವಾಗಿ ಪ್ರಬಲವಾಗಿ ರಾಜಕಿಯೇತರ ಸಂಘಟನೆಗಳಾಗಿ ಬೆಳೆದು ನಿಂತಿದ್ದವು.ಗಾಂಧಿ ತತ್ವ ಆದರ್ಶಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರಾಂತೀಯ ಸರ್ಕಾರಗಳು ರಚನೆಗೊಂಡಿತು.  ಇದನ್ನೆಲ್ಲಾ ಗಮನಿಸುತ್ತಿದ್ದ ಆಗಿನ ನಿರಂಕುಶ ರಾಜನಾದ ನಿಜಾಮನಲ್ಲಿ ಭಯವ ಹುಟ್ಟಿಸಿದ್ದವು.ಕಾಂಗ್ರೆಸ್ ಚಳುವಳಿಗಳು ಹೈದರಾಬಾದ್ ಪ್ರಾಂತದ ಮೇಲೆ ಹೆಚ್ಚು ಪರಿಣಾಮ ಬೀರಲಾರಂಭಿಸಿದ್ದು ನಿಜಾಮನಿಗೆ ಸಹನೆ ಆಗಲಿಲ್ಲ.  ಹೈದರಾಬಾದ್ ನಿಜಾಮ ಸರ್ಕಾರವು ಕಾಂಗ್ರೆಸ್ ಚಟುವಟಿಕೆಗಳನ್ನು ವಿರೋಧಿಸುತ್ತಿತ್ತು. ಭಾರತದ ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ ಗಾಂಧೀಜಿಯವರ ನೇತೃತ್ವದಲ್ಲಿ ಕಾಂಗ್ರೆಸ್ ಹೈದರಾಬಾದ್ ಪ್ರಾಂಥದಲ್ಲಿ ತನ್ನದೇ ಆದ ಅಸ್ತಿತ್ವವನ್ನು ಕಂಡುಕೊಂಡಿತ್ತು. ಅಲ್ಲಿ ಹೈದರಾಬಾದ್ ಸ್ಟೇಟ್ ಕಾಂಗ್ರೆಸ್ ಆರಂಭವಾಗಿತ್ತು ಇದಕ್ಕೆ ಸ್ವಾಮಿ *ರಮಾನಂದ ತೀರ್ಥರು* ಅಧ್ಯಕ್ಷರಾಗಿದ್ದರು.  ಬ್ರಿಟಿಷರ ಪರವಾಗಿದ್ದ ನಿಜಾಮನು ತನ್ನ ಜನತೆ ಕಾಂಗ್ರೆಸ್ ಜೊತೆಗೆ ಬಲವಾದ ಯಾವ ರೀತಿಯ ವ್ಯವಹಾರಗಳನ್ನಾಗಲಿ ಅಥವಾ ಸಂಬಂಧವನ್ನಾಗಿ ಇಟ್ಟುಕೊಳ್ಳಬಾರದೆಂದು ಅದಕ್ಕೆ ಬದಲಾಗಿ *ಇಂಡಿಯನ್ ಪೆಟ್ರಿಯಾಟಿಕ್ ಅಸೋಶಿಯೇಶನ್* ಜೊತೆ ಸಹಕರಿಸಬೇಕೆಂದು ತಿಳಿಸಿದಾ. ಅದರಂತೆ ನಿಜಾಮನು  ತನ್ನ ಪ್ರಾಂತ್ಯದಲ್ಲಿ ತಿಲಕರು ಜಾರಿಗೆ ತಂದಿದ್ದ ಗಣೇಶ ಶಿವಾಜಿ ಉತ್ಸವವನ್ನು ನಿಶೇಸಿದ್ದ…ಯಾವುದೇ ಚಟುವಟಿಕೆಗಳು ನಡೆಯಬಾರದೆಂದು ಕಟ್ಟಪ್ಪಣೆ ಮಾಡಿದ್ದ….. ನಿಜಾಮನ ನಿರಂಕುಶ ಪ್ರಭುತ್ವದ ವಿರುದ್ಧ ಮಾತನಾಡುವದು, ಹೋರಾಡುವುದು ಅವಶ್ಯಕವಾಗಿತ್ತು…ಜಯದೇವಿ ತಾಯಿಯವರು ಕಾಂಗ್ರೆಸ್ ಸದಸ್ಯರಾಗಿದ್ದರು.ತಮ್ಮ ವಿಚಾರಗಳನ್ನು ಮುಕ್ತವಾಗಿ ಯಾರ ಭಯವಿಲ್ಲದೆ ಪ್ರಸ್ತಾಪಿಸುತ್ತಿದ್ದರು. ಆಗಿನ ಕಾಲದಲ್ಲಿ ಮಹಿಳೆಯರು ತಮ್ಮ ಧ್ವನಿಯನ್ನು ಎತ್ತುವುದು ಅಷ್ಟು ಸುಲಭದ ವಿಷಯವಾಗಿರಲಿಲ್ಲ. ಆದರೆ ಜಯದೇವಿ ತಾಯಿಯವರು  ಅನ್ಯಾಯವನ್ನು ಸಹಿಸುವ ಮೌನವನ್ನು ಒಪ್ಪಿಕೊಂಡವರಲ್ಲ, ಸತ್ಯವನ್ನು ನಿಂತು ಹೇಳುವ ಶಕ್ತಿಯುಳ್ಳವರಾಗಿದ್ದರು.ಕಾಂಗ್ರೆಸಿನ ಸದಸ್ಯೆಯಾಗಿದ್ದ .. ಹೆಸರಿಗಾಗಿ ಅಲ್ಲ ಮನಸ್ಸಿನ ಆಳದಿಂದ ನಂಬಿದ ಮೌಲ್ಯಗಳಿಗಾಗಿ ಆ ಸಂಘಟನೆಯೊಂದಿಗಿದ್ದರು.ದೇಶದ ಸ್ವಾತಂತ್ರ್ಯ, ಸಮಾನತೆ, ಹಾಗೂ ಸಾಮಾಜಿಕ ನ್ಯಾಯ ಎಂಬ ತತ್ವಗಳು ಅವರ ಹೃದಯದಲ್ಲಿ ಬೆಳೆದ ಮರದಂತೆ ಬೇರೂರಿದ್ದವು.ಯಾರೇ ಎದುರು ಬಂದರೂ, ಯಾವ ಪರಿಸ್ಥಿತಿ ಬಂದರೂ, ತಮ್ಮ ಮಾತು ಹೇಳಲು ಅವರು ಹೆದರಲಿಲ್ಲ. ಅವರ ಧ್ವನಿಯಲ್ಲಿ ತಾಳ್ಮೆ ಇತ್ತಾದರು  ಹೆಚ್ಚು ದೃಢತೆ ಇತ್ತು…..“ಸತ್ಯದ ಮಾರ್ಗದಲ್ಲಿ ನಡೆಯುವವನಿಗೆ ಭಯವೇ ಇಲ್ಲ” ಎಂಬ ನಂಬಿಕೆ ಅವರ ಜೀವನದ ದೀವಿಗೆಯಾಗಿತ್ತು.ಸಮಾಜದಲ್ಲಿ ನಡೆಯುತ್ತಿದ್ದ ಅನ್ಯಾಯಗಳನ್ನು ನೋಡಿ ಕಣ್ಣೀರಿಟ್ಟು ಕುಳಿತುಕೊಳ್ಳುವವರಲ್ಲ ಅವರು. ಅದರ ವಿರುದ್ಧ ನಿಲ್ಲುವ ಧೈರ್ಯ ಅವರ ರಕ್ತದಲ್ಲೇ ಹರಿಯುತ್ತಿತ್ತು. ತಮ್ಮ ನಂಬಿಕೆಗಳಿಗಾಗಿ ಹೋರಾಡುವುದು ಅವರಿಗೊಂದು ಕರ್ತವ್ಯವಾಗಿತ್ತು…ಅವರ ಮನಸ್ಸು ಒಂದು ಹೋರಾಟದ ಮೈದಾನವಾಗಿತ್ತು .  ಯಾವ ಸಂಕಷ್ಟ ಬಂದರೂ, “ನಾನು ನನ್ನ-ಸತ್ಯ ನನ್ನ ಜೊತೆ ಇದೆ” ಎಂಬ ಆತ್ಮವಿಶ್ವಾಸದಿಂದ ಮುಂದೆ ಸಾಗುತ್ತಿದ್ದವರು ಜಯದೇವಿ ತಾಯಿಯವರು.ಅವರ ಜೀವನವೇ ಒಂದು ಸಂದೇಶ: “ದಿಟ್ಟತನದಿ ಮಾತನಾಡಿ, ನಂಬಿಕೆಯೊಂದಿಗೆ ಹೋರಾಡಿ, ಸತ್ಯದೊಂದಿಗೆ ಸ್ಥಿರವಾಗಿ ನಿಲ್ಲಿರಿ ಅನ್ನುವ ಕರೆ ಕೊಡುತ್ತಿದ್ದರು.ಇಂತಹ ದೈರ್ಯ ಮತ್ತು ದೃಢ ನಂಬಿಕೆ ಅವರ ವ್ಯಕ್ತಿತ್ವವನ್ನು ಅಸಾಧಾರಣವಾಗಿಸಿದೆ.  ಈ ಕಾರಣಕ್ಕಾಗಿ 1946ರಲ್ಲಿ ಜಹೀರಾಬಾದಿನ   ಕಾಂಗ್ರೆಸ್ ಪ್ರಾಂತೀಯ ಪರಿಷತ್ತಿನ ಮೂರನೆ ಅಧೀವೇಶನಕ್ಕೆ ಜಯದೇವಿ ತಾಯಿಯವರನ್ನು ಆಹ್ವಾನಿಸಿದ್ದರು. ಅಧಿವೇಶನದ ದ್ವಾರಕ್ಕೆ” ಜಯದೇವಿ ತಾಯಿ ದ್ವಾರ “ಅಂತ ಹೆಸರಿಡಲಾಯಿತು. ಜಯದೇವಿ ತಾಯಿಯವರು ಆ ಸಮಾರಂಭಕ್ಕೆ ಬರುತ್ತಿರುವರು ಎನ್ನುವದ ಕೇಳಿದ ನಿಜಾಮನು ಕೋಪದಿಂದ ಜಯದೇವಿತಾಯಿಯವರು ತನ್ನ ಭೂಮಿಯಲ್ಲಿ ಬರೆದಿದ್ದಂತೆ ಫರ್ಮಾನ್  ಹೊರಡಿಸಿದ್ದ.ಅವರು ಬರಬಾರದು” ಎಂಬುದೇ ಆ ಆದೇಶದ ಅರ್ಥ. ನಿಜಾಮನ ಆದೇಶ“ಪರ್ಮಾನ್”—ಎಂದರೆ ಸಾಮಾನ್ಯರಿಗೆ ಅದು ಒಂದು ಗಡಿ, ಒಂದು ಭೀತಿ, ಒಂದು ತಡೆಯ ಗೋಡೆ. ಆ ಮಣ್ಣಿನಲ್ಲಿ ಕಾಲಿಡುವುದು ಎಂದರೆ ಆ ಆದೇಶವನ್ನು ಮೀರಿ ನಿಲ್ಲುವವರಿಗೆ ಎಂಟೆದೆಯ ಧೈರ್ಯ ಬೇಕಾಗಿತ್ತು.ಆದರೆ ಜಯದೇವಿ ತಾಯಿಯವರಿಗೆ ಭಯ ಎನ್ನುವುದು ಅಡ್ಡಿಯಾಗಲಿಲ್ಲ… ಅದು ಅವರ ಹೆಜ್ಜೆಗಳ ಕೆಳಗೆ ಬಿದ್ದ ನೆರಳಷ್ಟೇ….. ಸರಳವಾಗಿ ಆ ಭೂವಿಯಲ್ಲಿ ಕಾಲಿಟ್ಟರು.ಸತ್ಯದ ದಾರಿಯಲ್ಲಿ ನಡೆಯುವವರನ್ನು ಯಾರ ಆದೇಶ ತಡೆಯಬಲ್ಲದು?ಅಂದು… ಆ ಬೆಳಗಿನ ಹೊತ್ತಿನಲ್ಲಿ, ಹೈದರಾಬಾದಿನ ಜೈರಾಬಾದಿನ ಮಣ್ಣಿನ ಮೇಲೆ ಮೊದಲ ಹೆಜ್ಜೆಯನ್ನು ಇಡುವಾಗ, ಜಯದೇವಿ ತಾಯಿಯವರ ಕಾಲುಗಳು ನಡುಗಲಿಲ್ಲ ಇನ್ನಷ್ಟು ದೃಢತೆ ಇತ್ತು, ಧೈರ್ಯ ಇತ್ತು, ನಂಬಿಕೆಯ ಶಕ್ತಿ ಇತ್ತು.ಅವರ ಹೆಜ್ಜೆಗಳು ನಿಧಾನವಾಗಿರಲಿಲ್ಲ… ಪ್ರತಿ ಹೆಜ್ಜೆಯೂ ಒಂದು ಘೋಷಣೆಯಂತಿತ್ತು. “ನ್ಯಾಯಕ್ಕಾಗಿ ನಾನು ಬಂದಿದ್ದೇನೆ” ಎಂದು. ಅಲ್ಲಿ ನೆರೆದಂಥ ಜನರ ಕಣ್ಣುಗಳಲ್ಲಿ ಆಶ್ಚರ್ಯ, ಭಯ, ಮತ್ತು ಗೌರವ ಮಿಶ್ರವಾಗಿತ್ತು. ಆದರೆ ತಾಯಿಯವರ ಮುಖದಲ್ಲಿ ಮಾತ್ರ ಶಾಂತಿ ಹೊಳೆಯುತ್ತಿತ್ತು ಒಂದು ಸಣ್ಣ ನಗು, ಆದರೆ ಅದರಲ್ಲಿ ಅನೇಕ ಹೋರಾಟಗಳ ಶಕ್ತಿ ಅಡಗಿತ್ತು.ಪರ್ಮಾನ್ ಎಂಬುದು ಕಾಗದದ ಮೇಲೆ ಬರೆದ ಅಕ್ಷರ ಮಾತ್ರ… ಆದರೆ ಅವರ ನಂಬಿಕೆ ಕಲ್ಲಿನಂತೆ ಗಟ್ಟಿತನ ಹೊಂದಿತ್ತು.ಆ ಕ್ಷಣದಲ್ಲಿ, ಜ್ಯೆರಾಬಾದ್‌ನ ಮಣ್ಣು ಕೂಡ ಅವರ ಹೆಜ್ಜೆಗಳಿಗೆ ಹೆಮ್ಮೆಪಟ್ಟಂತೆ ಕಾಣಿಸಿತು… ಯಾಕೆಂದರೆ ಅದು ಸಾಮಾನ್ಯ ಹೆಜ್ಜೆಯಲ್ಲ, ಒಬ್ಬ ಧೈರ್ಯಶಾಲಿ ಮಹಿಳೆಯು ಇಟ್ಟ ಹೆಜ್ಜೆಯಾಗಿತ್ತು. *ಆ ಸನ್ನಿವೇಶವೇ ಒಂದು ಇತಿಹಾಸ* ಒಬ್ಬ ಮಹಿಳೆ, ಒಂದು ಆದೇಶವನ್ನು ಅಲ್ಲ, ಒಂದು ಅನ್ಯಾಯವನ್ನು ಮೀರಿ ನಿಂತ ಕ್ಷಣ…..ಜಯದೇವಿ ತಾಯಿಯವರು ಆ ದಿನ ಹೈದರಾಬಾದ್‌ಗೆ ಬಂದಿದ್ದು ಭಾರತ ಮಾತೆಯ ವೀರ ಮಹಿಳೆಯ ಧೈರ್ಯ ಸಾಹಸದ ಪತಾಕೆ ಹಾರಿಸಿದ್ದರು. ಸಬಲೆಯರ ವ್ಯಕ್ತಿತ್ವಕ್ಕೆ ಹೊಸ ಅರ್ಥ ಕೊಟ್ಟರು. ಜಯದೇವಿ ತಾಯಿಯವರು ಜೇಹರಾಬಾದ್ ನಿಜಾಮನ “ಪರ್ಮನ್” (ಅಂದರೆ ನಿರ್ಬಂಧ ಆದೇಶ) ವನ್ನು ಲೆಕ್ಕಿಸದೇ ಹೈದರಾಬಾದ್‌ನ ಮಣ್ಣಿನಲ್ಲಿ ಕಾಲಿಟ್ಟ ಘಟನೆ ಧೀಮಂತ ಮಹಿಳೆಯ ಮನೋಬಲವನ್ನು ಸ್ಪಷ್ಟವಾಗಿ ತೋರಿಸುತ್ತದೆ. ಆ ಕಾಲದಲ್ಲಿ ನಿಜಾಮನ ಆಡಳಿತದಲ್ಲಿ ಇಂತಹ ನಿರ್ಬಂಧವನ್ನು ಉಲ್ಲಂಘಿಸುವುದು ಅತಿ ದೊಡ್ಡ ಅಪಾಯದ ಮುನ್ಸೂಚನೆಯಾಗಿತ್ತು  ನಿಜಾಮನು ಯಾವ ಕಾಲಕ್ಕಾದರೂ ಬಂಧನ, ಶಿಕ್ಷೆ, ಅಥವಾ ಜೀವ ಹಾನಿಯೂ ಎಡೆ ಮಾಡಬಹುದಾಗಿತ್ತು. ಯಾವುದನ್ನು ಲೆಕ್ಕಿಸದೆ ಅವರು ಮುಂದುವರಿದದ್ದು ಅವರ ಧೀರೋದ್ಯಾಥ್ಯ ವ್ಯಕ್ತಿತ್ವದ ಮೆರಗಿನ ಮಹತ್ವವನ್ನು ತೋರಿಸುತ್ತದೆ.ಜಯದೇವಿ ತಾಯಿಯವರ  ಅಚಲ ಧೈರ್ಯದಲಿನಿಜಾಮನ ಭಯದ ನೆರಳು ಕೂಡ ಅವರನ್ನು ತಟ್ಟಲಿಲ್ಲ. ಸತ್ಯ ಮತ್ತು ನ್ಯಾಯಕ್ಕಾಗಿ ಅವರು ಯಾವ ಅಪಾಯವನ್ನೂ ಎದುರಿಸಲು ಸಿದ್ಧರಾಗಿದ್ದರು.  *ಅವರಲ್ಲಿದ್ದ ರಾಷ್ಟ್ರಪ್ರೇಮ,ಹೃದಯದಲ್ಲಿ  ದೇಶದ ಮೇಲೆದ್ದ ಅಪಾರ ಪ್ರೀತಿ,. ದೇಶದ ಸ್ವಾತಂತ್ರ್ಯ ಮತ್ತು ಜನರ ಹಕ್ಕುಗಳಿಗಾಗಿ ತಮ್ಮ ವೈಯಕ್ತಿಕ ಭದ್ರತೆಯನ್ನೇ ತ್ಯಜಿಸಿದರು.* ಒಮ್ಮೆ ತೀರ್ಮಾನ ಮಾಡಿದ ಮೇಲೆ ಹಿಂದಿರುಗುವ ಸ್ವಭಾವ ಅವರದಾಗಿರಲಿಲ್ಲ… ನಿರ್ಧಾರಾತ್ಮಕತೆ ಎಂಥದ್ದು ಅಂದರೆ ನಿಜಾಮನ ಆದೇಶವೂ ಅವರ ನಿರ್ಧಾರವನ್ನು ತಡೆಯಲಿಲ್ಲ….!!ರಜಾಕಾರರ ನಿರಂತರ ಶೋಷಣೆಯಿಂದ ಜನರನ್ನು ಮುಕ್ತಗೊಳಿಸಲು ಅಲ್ಲಿಯ ಸಮಸ್ಯೆ ಮತ್ತು ಪರಿಹಾರವನ್ನು ಕುರಿತು ಚರ್ಚಿಸುವ ಸಮಾವೇಶ ಅದಾಗಿತ್ತು .ಅಲ್ಲಿ ಹತ್ತರಿಂದ ಹನ್ನೆರಡು ಸಾವಿರ ಜನ ಪಾಲ್ಗೊಂಡಿದ್ದರು. ಜಯದೇವಿ ತಾಯಿಯವರು. ಸಭಾಮಂಟಪವನ್ನು ಪ್ರವೇಶಿಸಿ ಭಾಷಣ ಮಾಡಿದರು….ಅವರ ವ್ಯಕ್ತಿತ್ವ ಎಂಥ ಮೆರಗುಗೊಳಿಸುವಂಥದ್ದು ಅಂದರೆ ಅವರನ್ನು ನೋಡುತ್ತಿದ್ದಂತೆ ಜನರೆಲ್ಲರೂ ಮಂತ್ರ ಮುಗ್ಧರಾಗುತ್ತಿದ್ದರು.ಕಣ್ಣು ಕಿವಿಗಳು‌ ಅರಳಿಸಿ ಎಚ್ಚೆತ್ತು ತದೇಕಚಿತದಿಂದ ಭಾಷಣ ಕೇಳಲು ಅಣಿಯಾಗುತ್ತಿದ್ದರು. ಜಯದೇವಿ ತಾಯಿಯವರು ಭಾಷಣವನ್ನು ಕೇಳಿದವರು ಹೇಳುತ್ತಿದ್ದರು…. ತಾಯಿಯವರ ಭಾಷಣಕ್ಕೆ ಎದ್ದು ನಿಂತರೆ   ಸಭಾಂಗಣದಲ್ಲಿ ಅದೆಂಥ ಶಾಂತಿ ನೆಲೆಗೊಳ್ಳುತ್ತಿತು ಅಂದರೆ ಜನಜಂಗುಳಿಯ ಮಧ್ಯದಲ್ಲಿ ಒಂದು ಸೂಜಿ ಕೂಡ ಬಿದ್ದರೂ ಅದರ ಸಪ್ಪಳ ಕೇಳಬಹುದಾಗಿತ್ತು. ಅನ್ನುವ ಮಟ್ಟಿಗೆ ಜನರು ಮೈ ಮನ ಮರೆತು ಕುಳಿತುಕೊಳ್ಳುತ್ತಿದ್ದರು ಅಂತ ಹೇಳುತಿದ್ದರು. ನಿಜಾಮನ ನಿರಂಕುಶ ಆಡಳಿತದ ವಿರುದ್ಧ ಜ್ವಾಲಾಮುಖಿಯಂತೆ ಉಕ್ಕಿ ಬಂದ ಜಯದೇವಿ ತಾಯಿಯವರ ಧ್ವನಿ ಕೇವಲ ವಿರೋಧದ ಧ್ವನಿ ಮಾತ್ರವಲ್ಲ ಅದು ಸ್ವಾತಂತ್ರ್ಯದ ಕಿರುಚಾಟ, ನ್ಯಾಯದ ಹೋರಾಟ, ದೇಶಭಕ್ತಿಯ ಮಹಾ ಘೋಷವಾಗಿತ್ತು.ದೇಶಭಕ್ತಿಯ ಘೋಷಣೆದಂತೆ ಜಯದೇವಿ ತಾಯಿಯವರ ಭಾಷಣ…ಮೊಟ್ಟ ಮೊದಲಿಗೆ ಶಿವಯೋಗಿ ಸಿದ್ದರಾಮನನ್ನು ನೆನೆಯುವುದು,“ಯೋಗಿ ಬಂದಿದಾರೇನ…..ಯೋಗದ ಕೀಲ ತಿಳಿಸುವರೇನ ಯೋಗಿ ಬಂದಿದಾರೇನ….!!ರಾಗಭೋಗದ ಆಚೆ ಒಯ್ಯುವರೇನಾ…ಯೋಗಿ ಬಂದಿದಾರೇನ …!!”“ನನ್ನ ಪ್ರಿಯ ಸಹೋದರ ಸಹೋದರಿಯರೇ…ನಾನು ವೀರ ಗಣಾಚಾರಿ ಶ್ರೀ ಯೋಗಿ ಸಿದ್ದರಾಮನ ಭೂಮಿಯ ಅಲ್ಲಿ ಹುಟ್ಟಿದವಳು ಸಿದ್ದರಾಮನ ಕರುವೆಯ ಕೂಸಾಗಿ ನಿಮ್ಮೊಂದಿಗೆ ಜೊತೆಯಾಗಲು ಬಂದಿದ್ದೇನೆ ಈ ಭಾರತದ ಮಣ್ಣಿನಲ್ಲಿ ಹುಟ್ಟಿದ ನಾವು, ಈ ಮಣ್ಣೇ ನಮ್ಮ ತಂದೆ ತಾಯಿಯೆಂದು ಬದುಕುತ್ತಿರುವ ನಾವು, ಯಾವ ಕಾರಣಕ್ಕೂ ದಾಸ್ಯವನ್ನು ಒಪ್ಪಿಕೊಳ್ಳಲಾರೆವು!ನಿಜಾಮನ ನಿರಂಕುಶ ಪ್ರಭುತ್ವದ ಉಚ್ಛಾಟನೆ ಆಗಲೇಬೇಕು!ಇದು ಕೇವಲ ನಮ್ಮ ಬೇಡಿಕೆ ಅಲ್ಲ….ಇದು ನಮ್ಮ ಹಕ್ಕು!ಬಹು ಸಂಖ್ಯಾತರಾದ ಹಿಂದೂ ಪ್ರಜೆಗಳು ಜಾತ್ಯಾಂಧತೆಯ ಜುಗ್ಗಿನಲ್ಲಿ ಬದುಕುವುದನ್ನು ಇನ್ನೂ ಸಹಿಸಲಾರರು.ಧರ್ಮದ ಹೆಸರಿನಲ್ಲಿ ದಬ್ಬಾಳಿಕೆ, ಅಧಿಕಾರದ ಹೆಸರಿನಲ್ಲಿ ಅನ್ಯಾಯ….ಇವು ನಮ್ಮ ಭೂಮಿಯಲ್ಲಿ ಮುಂದುವರಿಯಲಾರವು!ನಾವು ಶಾಂತಿಯ ಪ್ರಜೆಯಾದರೂ, ನಮ್ಮ ಸಹನೆಯನ್ನು ದುರ್ಬಲತೆ ಎಂದು ಯಾರೂ ಭಾವಿಸಬಾರದು.ನಮ್ಮ ಸಹನೆಗೆ ಒಂದು ಮಿತಿ ಇದೆ… ಆ ಮಿತಿಯನ್ನು ದಾಟಿದಾಗ, ನಮ್ಮ ಪ್ರತಿಯೊಂದು ಉಸಿರು ಕ್ರಾಂತಿಯ ಕಿಡಿಯಾಗುತ್ತದೆ!ಈ ಮಣ್ಣಿನಲ್ಲಿ ಸ್ವಾತಂತ್ರ್ಯವೇ ನಮ್ಮ ಉಸಿರು, ಸಮಾನತೆಯೇ ನಮ್ಮ ಹಕ್ಕು!ನಾವು ಯಾರಿಗೂ ದಾಸರಲ್ಲ… ನಾವು ಈ ದೇಶದ ಯಜಮಾನರು!ನಾವು ಒಂದಾಗಿ ನಿಂತರೆ, ಯಾವ ಶಕ್ತಿ ನಮ್ಮನ್ನು ತಡೆಯಲು ಸಾಧ್ಯವಿಲ್ಲ!ನಮ್ಮ ಏಕತೆಯೇ ನಮ್ಮ ಬಲ, ನಮ್ಮ ಧೈರ್ಯವೇ ನಮ್ಮ ಶಕ್ತಿ!ಇಂದು ನಾನು ನಿಮ್ಮ ಮುಂದೆ ಒಂದು ಮಾತು ಮಾತ್ರ ಹೇಳುತ್ತೇನೆ……!!!!ಭಯವನ್ನು

Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಸಾವಿಲ್ಲದ ಶರಣರು ಮಾಲಿಕೆ, “ಶಿವಯೋಗ ಪರಂಪರೆಯ ಸಮಾಜ ಮುಖಿ ಶ್ರೀಬಂಥನಾಳ ಸಂಗನಬಸವ ಸ್ವಾಮಿಗಳು”ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ

ಶರಣ ಸಂಗಾತಿ ಸಾವಿಲ್ಲದ ಶರಣರು ಮಾಲಿಕೆ, “ಶಿವಯೋಗ ಪರಂಪರೆಯ ಸಮಾಜ ಮುಖಿ ಶ್ರೀಬಂಥನಾಳ ಸಂಗನಬಸವ ಸ್ವಾಮಿಗಳು ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ ಹನ್ನೆರಡನೆಯ ಶತಮಾನದ  ಶರಣರು  ಜಗತ್ತಿಗೆ ಸತ್ಯ ಸಮತೆ ಶಾಂತಿ ಪ್ರೀತಿ ನೀಡಿ ಸಾರ್ವಕಾಲಿಕ ಸಮಾನತೆ ಸಾರಿಧ ದಾರ್ಶನಿಕರು.  ಬಸವಯುಗ ವಚನಸಾಹಿತ್ಯದ ಸುಗ್ಗಿಕಾಲ. 12ನೆಯ ಶತಮಾನದ ಮಧ್ಯಭಾಗದಲ್ಲಿ ಮೈಮುರಿದು ಎದ್ದ ಲಿಂಗಾಯತ ಆಂದೋಲನ ಕನ್ನಡ ಸಮಾಜಕ್ಕೆ ಹೊಸ ತಿರುವು ಕೊಟ್ಟಿತು. ಆಚಾರ-ವಿಚಾರ, ಭಾಷೆ-ಸಾಹಿತ್ಯ ಮುಂತಾದ ಹಲವು ಕ್ಷೇತ್ರಗಳಲ್ಲಿ ಹೊಸತನ್ನು ತುಂಬಿತು. ಬಸವಣ್ಣ, ಚನ್ನಬಸವಣ್ಣ, ಪ್ರಭುದೇವ, ಅಕ್ಕಮಹಾದೇವಿ, ಸಿದ್ಧರಾಮ, ಮಡಿವಾಳ ಮಾಚಿದೇವ ಇವರು ಸ್ಥಾಪಿಸಿದ ಜನಮುಖಿ ಸಾಮಾಜಿಕ ಸೇವೆಯ ಪರಂಪರೆಯನ್ನು ಮುಂದಿನ ಶರಣ ಧರ್ಮದ ಸ್ವಾಮಿಗಳು   ನಿರಂತವಾಗಿ ನಡೆಸಿಕೊಂಡು ಬಂದಿದ್ದಾರೆ. ಅಂತಹವರ ಸಾಲಿನಲ್ಲಿ ಪರಮ ಪೂಜ್ಯ ತೋಂಟದ ಎಡೆಯೂರಿ ಶ್ರೀ ಸಿದ್ಧಲಿಂಗ ಶಿವಯೋಗಿಗಳು, ಜೇವರಗಿ ಷಣ್ಮುಖ ಶಿವಯೋಗಿಗಳು ಅಥಣಿಯ ಶ್ರೀ ಮುರುಗೇಂದ್ರ ಶ್ರೀಗಳು, ಮುರುಗೋಡ ಶ್ರೀ ಮಹಾಂತಪ್ಪಜ್ಜನವರು,  ಗಚ್ಚಿನ ಮಠದ ಶ್ರೀ ಸಿದ್ಧಲಿಂಗಪ್ಪನವರು ಜಯದೇವ ಜಗದ್ಗುರುಗಳು , ಇಂತವರ ಸಾಲಿನಲ್ಲಿ ನಿಲ್ಲುವವರು ನಮ್ಮ ಬಂಥನಾಳ ಶ್ರೀ ಸಂಗನಬಸವ ಸ್ವಾಮಿಗಳು.  ಬಾರದ ನೆಲದಲ್ಲಿ ಬದುಕಿನ ಭರವಸೆಯನ್ನು ನೀಡಿದ ಅಪ್ರತಿಮ ಶಿವಯೋಗ ಸಾಧಕರು.   ಜನನಮತ್ತುಬಾಲ್ಯ————————————ಬಂಥನಾಳ ಸಂಗನಬಸವ ಶಿವಯೋಗಿಗಳ ಜನನವು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮಸೂತಿ ಗ್ರಾಮದಲ್ಲಿ ಶರಣ ದಂಪತಿಗಳಾದ ಗೌರಾಂಬೆ ಮತ್ತು ಪರುತಯ್ಯ ನವರ ಪುತ್ರರಾಗಿ 1900 ರ ಜುಲೈ 27ರಂದು ಜನಿಸಿದರು. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಇವರು ಬಾಲ್ಯದಲ್ಲೆ ಪುರಾಣ ಪ್ರವಚಣ ಪೌರಾಣಿಕ ನಾಟಕಗಳಲ್ಲಿ ಆಸಕ್ತಿ ಹೊಂದಿದ್ದರು. ‘ಬೆಳೆಯುವ ಸಿರಿ ಮೊಳಕೆಯಲ್ಲಿ’ ಎಂಬಂತೆ ಬಾಲ್ಯದಲ್ಲಿಯೇ ಅಪೂರ್ವ ತೇಜಸ್ಸು, ಹಸನ್ಮುಖತೆಗೂಡಿಸಿಕೊಂಡು ಬೆಳೆದರು.ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿಯಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿದರು. 6ನೇ ತರಗತಿಯಲ್ಲಿ‘ರಾಜಾ ಸತ್ಯಹರಿಶ್ಚಂದ್ರ’ ಎಂಬ ಪೌರಾಣಿಕ ನಾಟಕದಲ್ಲಿ ತಾರಾಮತಿ ಪಾತ್ರಧಾರಿಯಾಗಿ ಅಭಿನಯಿಸಿ ಸುತ್ತಲ ಗ್ರಾಮಸ್ಥರ ಮೆಚ್ಚುಗೆ ಪಡೆದರು. 1913ರಲ್ಲಿ ಯರನಾಳ ಮಠದ ಪಂಪಾಪತಿ ಸ್ವಾಮೀಜಿ ಅವರು 11 ವರ್ಷದ ಸಂಗನಬಸವ ಶಿವಯೋಗಿಗಳನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಸ್ವಿಕರಿಸಿದರು. ಮುಂದೆ ವಿಜಯಪುರ ಜಿಲ್ಲೆಯ ಬಬಲೇಶ್ವರ ಮಠದ ಶಾಂತವೀರ ಶ್ರೀಗಳ ಸಮ್ಮುಖದಲ್ಲಿ ಸಂಸ್ಕೃತ ಭಾಷೆ, ಸಾಹಿತ್ಯದ ಮೇಲೆ ಅಪಾರ ಪಾಂಡಿತ್ಯ ಸಂಪಾದಿಸಿದರು. ಕೆಲವು ದಿನಗಳು ಗತಿಸಿದ ನಂತರ ಬಂಥನಾಳ ಮಠದ ಹಿಂದಿನ ಪೀಠಾಧಿಪತಿ ಚನ್ನಬಸವ ಶ್ರೀಗಳ ಅಪ್ಪಣೆಯಂತೆ ಸಂಗನಬಸವ ಶ್ರೀಗಳು 1916ರಲ್ಲಿ ಬಂಥನಾಳ ಮಠದ 4ನೇ ಪೀಠಾಧಿಪತಿಗಳನ್ನಾಗಿ ನಿಯೋಜಿಸುವಲ್ಲಿ ಲಚ್ಯಾಣ ಸಿದ್ದಲಿಂಗ ಮಹಾರಾಜರು ಶ್ರಮಿಸಿದರು. ನಂತರ ಕೆಲವು ದಿನ ಭೀಮಾ ತೀರದ ಭೀಮೇಶ್ವರ ಬೆಟ್ಟದಲ್ಲಿ ಶಿವಧ್ಯಾನ, ಶಿವಚಿಂತನೆ, 30 ದಿನ ಮೌನಾಚರಣೆ ವ್ರತ ಕೈಗೊಂಡರು. ಪೀಠಾಧಿಪತಿಯಾಗಿಆಯ್ಕೆ—————————————ವೃಷವಲಿಂಗ ಸ್ವಾಮಿಗಳಿಂದ ಸ್ಥಾಪಿತವಾದ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬಂಥನಾಳ ಗ್ರಾಮದ ಶ್ರೀಮಠವು ಧಾರ್ಮಿಕ ಮತ್ತು ರಾಷ್ಟ್ರಧರ್ಮದ ಕಾರ್ಯಗಳಿಂದ ಇತಿಹಾಸ ಪುಟದಲ್ಲಿ ಅಚ್ಚಳಿಯದೆ ಉಳಿದಿದೆ. ಶ್ರೀಮಠ ಪೀಠಾಧಿಪತಿಗಳಾದ ಶ್ರೀ ಸಂಗನಬಸವ ಸ್ವಾಮೀಜಿ ಈ ಭಾಗದ ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ ಬರೆದರು. ವಿಜಯಪುರ ಜಿಲ್ಲೆಯ ವಿಜಯಪುರ ತಾಲ್ಲೂಕಿನ ಬಬಲೇಶ್ವರದ ಶ್ರೀ ಶಾಂತವೀರ ಸ್ವಾಮಿಗಳಿಂದ ಸಂಸೃತ ಕಲಿತು 1916ರಲ್ಲಿ ಬಂಥನಾಳ ಮಠಕ್ಕೆ ನಾಲ್ಕನೇ ಪೀಠಾಧಿಪತಿಯಾಗಿ ನಿಯೊಜನೆಗೊಂಡರು. ಶಿಕ್ಷಣಸೇವೆ————————-ಶೈಕ್ಷಣಿಕವಾಗಿ ಹಿಂದೆ ಉಳಿದಿದ್ದ ವಿಜಯಪುರದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿದರು ಅವುಗಳು ಇಂದು ಶತಮಾನ ಸಂಭ್ರಮದಲ್ಲಿದ್ದು ಶ್ರೀಗಳ ಕೀರ್ತಿ ಕಿರೀಟಗಳು. ವಿಜಯಪುರ ಜಿಲ್ಲೆಯಲ್ಲಿ ಇಂದು‌ ಹಲವಾರು ಶಿಕ್ಷಣ ಸಂಸ್ಥೆಗಳು ಶಾಲಾ ಕಾಲೇಜು ತಲೆ ಎತ್ತಲು ಕಾರಣವಾದವು.   ಅವರು ಅಂದು ಕೊಟ್ಟ ಸ್ಪೂರ್ತಿಯ ಕರೆ. ಶೈಕ್ಷಣಿಕ ಕ್ರಾಂತಿ ಮಾಡಿ ಮಠಗಳ ‌ಮೂಲಕ ರಾಷ್ಟ್ರಾಭಿಮಾನ ಹೆಚ್ಚಿಸಿದ, ಸ್ವಾತಂತ್ರ್ಯ ಹೋರಾಟಗಾರರ ಬೆಂಬಲಕ್ಕೆ ನಿಂತು ಅವರಿಗೆ ಆಶ್ರಯ ನೀಡಿ ಹೋರಾಟಕ್ಕೆ ಅಣಿಯಾದ ಧೀರ ಸನ್ಯಾಸಿ ಈ ನಮ್ಮ ಬಂಥನಾಳ ಸಂಗನವಸವ ಶಿವಯೋಗಿಗಳು. 1923ರಲ್ಲಿ ಕರ್ನಾಟಕದ ಗಾಂದಿ ಹರ್ಡೆಕರ್ ಮಂಜಪ್ಪನವರಿಂದ ರಾಷ್ಟ್ರದೀಕ್ಷೆ ಪಡೆದರು. ಹರ್ಡೆಕರ್ ಮಂಜಪ್ಪನವರು ಒಂದು ರಾಷ್ಟ್ರ ಬೆಳೆಯಬೇಕಾದರೆ ಉತ್ತಮ ಸಮಾಜ ನಿರ್ಮಾಣವಾಗಬೇಕಾದರೆ ಉತ್ತಮ ಶಿಕ್ಷಣ ಅವಶ್ಯ ಎಂದು ಹೇಳಿದರು. ಅಂದಿನಿಂದ ಖಾದಿ ಧರಿಸಿ ಮಠದ ಕಾರ್ಯಕ್ರಮಕ್ಕೂ ಮುನ್ನ ರಾಷ್ಟ್ರದ್ವಜಾರೋಹಣ ಮಾಡಲು ಪ್ರಾರಂಬಿಸಿದರು.ಸಮಾಜಸೇವೆ1925ರಲ್ಲಿ ವಚನ ಪಿತಾಮಹ ಫ.ಗು.ಹಳಕಟ್ಟಿಯವರು ಕಟ್ಟಿದ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷರಾಗಿ  ಶೈಕ್ಷಣಿಕ‌ ಕೇಂದ್ರ ಮತ್ತು ದಾಸೋಹ ನಿಲಯ ಸ್ಥಾಪಿಸಿದರು. 1950 ರಲ್ಲಿ ಲಚ್ಯಾಣ  ಗ್ರಾಮದಲ್ಲಿ ಸರ್ವಧರ್ಮ ಸಮ್ಮೇಳನ, ಸೊನ್ನದಲ್ಲಿ 1953 ಮತ್ತು  1963ರಲ್ಲಿ ಮಂಟಪ‌ ಪೂಜೆ ಮಾಡಿದ್ದಾರೆ. ವಿಜಯಪುರ ನಗರದಲ್ಲಿ 1954ರಲ್ಲಿ 770 ಅಮರಗಣಾಧೀಶ್ವರರ ಪೂಜೆ ನೇರವೇರಿಸಿದರು ಈ ಮಹಾತ್ಕಾರ್ಯದ ಸ್ಮರಣಾರ್ಥ ಬ್ರಹತ್   ಲಿಂಗದಾಕಾರದ ಮಂದಿರಲ್ಲಿ 770 ಲಿಂಗಗಳನ್ನು ಸ್ಥಾಪಿಸಿ ಕೀರ್ತಿ ಗಳಿಸಿದ್ದಾರೆ. ಈ ಲಿಂಗದ ಗುಡಿ ಇಂದು ಲಕ್ಷಾಂತರ ಭಕ್ತರ ಶೃದ್ಧಾಕೇಂದ್ರವೆನಿಸಿದೆ. ಲಚ್ಯಾಣದಲ್ಲಿ ಅಮರಗಣಾಧೀಶ್ವರ ಪೂಜೆ ಲಕ್ಷದೀಪೋತ್ಸವದಂತ ದೊಡ್ಡ ಮಟ್ಟದ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಜನರನ್ನು ಧಾರ್ಮಿಕ ಕೇದ್ರಗಳತ್ತ ಸೆಳೆದಿದ್ದಾರೆ. ತಾವು ಮಾಡಿದ ಪ್ರವಚನಗಳಿಂದ ಬಂದ ಹಣವನ್ನು ಶಿಕ್ಷಣ ಕ್ಷೇತ್ರ ಬೆಳವಣಿಗೆಗಾಗಿ ಬಳಿಸಿದ್ದಾರೆ ಹಲವಾರು ಶಾಲೆಗಳನ್ನು ಕಟ್ಟಿ ಬೆಳೆಸಿದ್ದಾರೆ. ನಿತ್ಯ ನಿರಂತರ ದಾಸೂಹ ಮಾಡಿ ದಾಸೋಹ ಮೂರ್ತಿಯಾಗಿದ್ದಾರೆ. ಸ್ವಾತಂತ್ರ ಹೋರಾಟಗಾರರಿಗೆ ಶ್ರೀ ಮಠದಲ್ಲಿ ಆಶ್ರಯ, ನೆಲೆ ನೀಡಿ ರಕ್ಷಿಸಿದ್ದಾರೆ. ಶ್ರೀಗಳು ದಾಸೋಹ, ಶೈಕ್ಷಣಿಕ, ರಾಷ್ಟ್ರಭಕ್ತಿ, ಧರ್ಮಜಾಗೃತಿ ನಡೆಸಿದ್ದಾರೆ.ಶೈಕ್ಷಣಿಕಕ್ರಾಂತಿಯಹರಿಕಾರ——————————————ವಿದ್ಯಾರ್ಥಿಗಳೇ ದೇವರ, ವಿದ್ಯಾಲಯವೇ ದೇವಾಲಯ ಎಂಬ ಮಂತ್ರ ಪಠಣದೊಂದಿಗೆ ಭಕ್ತರು ಕೊಟ್ಟ ಕಾಣಿಕೆಯಲ್ಲೇ ಬಡ ಮಕ್ಕಳ ಅಕ್ಷರ ದಾಹ ನೀಗಿಸಿದ ಸಂತ ಬಂಥನಾಳದ ಸಂಗನಬಸವ ಮಹಾಶಿವಯೋಗಿಗಳು. ನಾಡಿನೆಲ್ಲೆಡೆ ವಿದ್ಯಾಕೇಂದ್ರಗಳನ್ನು ಸ್ಥಾಪಿಸಿ, ಶೈಕ್ಷಣಿಕ ಕ್ರಾಂತಿ ಮಾಡಿದ ಶ್ರೀಗಳು, ಬಡ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿದ್ದಾರೆ. 18ನೇ ಶತಮಾನದಲ್ಲಿ ವೃಷಭಲಿಂಗ ಮಹಾಶಿವಯೋಗಿಗಳಿಂದ ಸ್ಥಾಪಿತವಾದ ಬಂಥನಾಳ ಮಠದ ಕೊಡುಗೆ ಅನನ್ಯ. ಮಠದ ಈ ಹಿಂದಿನ ಪೀಠಾಧಿಪತಿಗಳಾದ ಶಂಕರಲಿಂಗ ಶಿವಯೋಗಿಗಳು, ಚನ್ನಬಸವ ಶಿವಯೋಗಿಗಳು ಕುಗ್ರಾಮವನ್ನು ಸುಕ್ಷೇತ್ರವನ್ನಾಗಿಸಲು ಶ್ರಮಿಸಿದರು. ಬಸವಾದಿ ಪ್ರಮತರ ದಾರಿ ಕ್ರಮಿಸಿದರು. ತದನಂತರ ಬಂದ ಪೀಠಾಧಿಪತಿ ಸಂಗನಬಸವ ಮಹಾಶಿವಯೋಗಿಗಳ ಸಮಾಜ ಮುಖಿ ಕಾರ್ಯಗಳಿಂದ ಮಠದ ಕೀರ್ತಿ ಮುಗಿಲೆತ್ತರಕ್ಕೆರಿದೆ. ಪ್ರವಚನದ ಮೂಲಕ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಲವು ಕಾರ್ಯಕ್ರಮಗಳನ್ನು ಕೈಗೊಂಡರು. ಅವಿರತ ಪ್ರಯತ್ನದಿಂದ ಶೈಕ್ಷಣಿಕವಾಗಿ ಬರಡಾಗಿದ್ದ ವಿಜಯಪುರ ಜಿಲ್ಲೆಯನ್ನು ಶಿಕ್ಷಣದ ತವರೂರನ್ನಾಗಿಸಿದರು. ಪರಿಣಾಮ ವಿಜಯಪುರ ಜಿಲ್ಲೆಯಾದ್ಯಂತ ಅನೇಕ ಶಿಕ್ಷಣ ಸಂಸ್ಥೆಗಳು ತಲೆ ಎತ್ತಿ ನಿಂತವು. ಈ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದ ಅನೇಕ ಬಡ ವಿದ್ಯಾರ್ಥಿಗಳು ನಾಡಿನ ನಾನಾ ಭಾಗದಲ್ಲಿ ಸರ್ಕಾರಿ ನೌಕರಿ ಪಡೆದು ಸ್ವಾವಲಂಬಿಯಾಗಿ ಬದುಕುತ್ತ, ತಮ್ಮ ಜೀವನವನ್ನು ಪಾವನಗೊಳಿಸಿಕೊಂಡಿದ್ದಾರೆ. ಲಿಂಗೈಕ್ಯ ಬಂಥನಾಳ ಶ್ರೀ ಸಂಗನಬಸವ ಶಿವಯೋಗಿಗಳು 1972 ಮೇ 7ರಂದು ಲಿಂಗೈಕ್ಯರಾದರು. *ಪ್ರಮುಖಘಟನಾವಳಿಗಳು* 1923 ರಲ್ಲಿ ಕರ್ನಾಟಕದ ಗಾಂಧಿ ಹರ್ಡೇಕರ ಮಂಜಪ್ಪ ನೇತೃತ್ವದಲ್ಲಿ ರಾಷ್ಟ್ರೀಯ ದೀಕ್ಷೆ ಸ್ವೀಕಾರ. 1925 ರಲ್ಲಿ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಅವರು ಸ್ಥಾಪಿಸಿದ ವಿಜಯಪುರ ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಅಧ್ಯಕ್ಷರಾಗಿ ಸೇವೆ. 1950 ರಲ್ಲಿ ಸರ್ವಧರ್ಮ ಸಮ್ಮೇಳನ ಆಯೋಜನೆ.1953 ರಲ್ಲಿ ಸೊನ್ನದಲ್ಲಿ 63 ಪುರಾತನ ಮಂಟಪ ಪೂಜೆ. 1954 ರಲ್ಲಿ ವಿಜಯಪುರ ನಗರದಲ್ಲಿ 770 ಅಮರಗಣಾಧೀಶ್ವರರ ಪೂಜೆ. 1968 ರಲ್ಲಿ ವೃಷಭಲಿಂಗ ಮಹಾಶಿವಯೋಗಿಗಳನ್ನು ಬಂಥನಾಳ – ಲಚ್ಯಾಣ ಮಠದ ಪೀಠಾಧಿಪತಿಗಳನ್ನಾಗಿ ನೇಮಕ. 1969 ರಲ್ಲಿ ಲಚ್ಯಾಣದಲ್ಲಿ ಲಕ್ಷದ ಮೇಲೆ ತೊಂಬತ್ತಾರು ಸಾವಿರ ಅಮರಗಣದಿಶ್ವರರ ಪೂಜೆ, ಲಕ್ಷದೀಪೋತ್ಸವದಂತಹ ಮಹಾನ್ ಧಾರ್ಮಿಕ ಕಾರ್ಯಕ್ರಮ ಆಯೋಜನೆ. 1972 ರ ಮೇ 7 ರಂದು ಬಂಥನಾಳದಲ್ಲಿ ಲಿಂಗೈಕ್ಯ.  ಬಡತನ ಅಕ್ಷರವಂಚಿತ ಬರಗಾಲ ಪೀಡಿತ ಪ್ರದೇಶವೆಂದು ಕೆಟ್ಟ ಹೆಸರಿಗೆ ಕಾರಣವಾದ ವಿಜಯಪುರಕ್ಕೆ ಹೊಸ ಕಾಯಕಲ್ಪ ಕಲ್ಪಿಸಿಕೊಟ್ಟವರು ಶ್ರೀ ಬಂಥನಾಳ ಸಂಗನ ಬಸವ ಸ್ವಾಮಿಗಳು. ಇಂತಹ  ಪರಮ ಪೂಜ್ಯರ ಮೆಟ್ಟಿದಾನೆಲವೆ ಪಾವನ. ಪೂಜ್ಯರ ಕನಸುಗಳು ನನಸಾಗಿ ವಿಜಯಪುರವು ಸಕಲ  ಐಭೋಗಳ ಐಸಿರಿಯ ರಾಜಧಾನಿಯಾಗಲಿ. ಶ್ರೇಷ್ಠ ಶಿವಯೋಗ ಸಾಧಕರಾದ ಪರಮ ಪೂಜ್ಯ ಶ್ರೀ ಬಂಥನಾಳ ಸಂಗನ ಬಸವ ಸ್ವಾಮಿಗಳಲ್ಲಿ ಭಕ್ತಿ ಪೂರ್ವಕ ಶರಣಾರ್ಥಿಗಳು ಡಾಶಶಿಕಾಂತಪಟ್ಟಣರಾಮದುರ್ಗಪುಣೆ

ಸಾವಿಲ್ಲದ ಶರಣರು ಮಾಲಿಕೆ, “ಶಿವಯೋಗ ಪರಂಪರೆಯ ಸಮಾಜ ಮುಖಿ ಶ್ರೀಬಂಥನಾಳ ಸಂಗನಬಸವ ಸ್ವಾಮಿಗಳು”ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ Read Post »

ಅಂಕಣ ಸಂಗಾತಿ, ಒಬ್ಬ ಅಮ್ಮನ ಕಥೆ

ಧಾರಾವಾಹಿ ಸಂಗಾತಿ-115 ಒಬ್ಬ ಅಮ್ಮನ ಕಥೆ ರುಕ್ಮಿಣಿ ನಾಯರ್ ಸುಮತಿಯ ಆರೋಗ್ಯದಲ್ಲಿ ವ್ಯತ್ಯಾಸ ಲೋಟದ ತುಂಬಾ ನೀರನ್ನು ತುಂಬಿಕೊಂಡು ಬಂದು ಆ ಹುಡುಗಿ ಸುಮತಿಯ ಕೈಕೆ ಕೊಟ್ಟಳು. ಸುಮತಿ ನೀರನ್ನು ಗಟಗಟನೆ ಕುಡಿದಳು ಆದರೆ ಒಮ್ಮೆಲೇ ವಾಕರಿಕೆ ಬಂದಂತಾಗಿ ಮುಖ ಕಿವುಚಿಕೊಂಡಳು. ಒಂದೇ ಸಮನೆ ನೀರನ್ನು ಕುಡಿದಿದ್ದಕ್ಕಾಗಿ ತಾಯಿಗೆ ಹೀಗೆ ಆಗುತ್ತಿರಬೇಕು ಎಂದು ಮಗಳು ತಾಯಿಯ ಬೆನ್ನನ್ನು ಮೆತ್ತಗೆ ಸವರಿದಳು. ಸುಮತಿಯ ಪರಿಸ್ಥಿತಿಯನ್ನು ಕಂಡು ಮಗಳಿಗೆ ಒಳಗೊಳಗೆ ಏನೋ ಚಿಂತೆ. ಅಮ್ಮನಿಗೆ ಆರೋಗ್ಯದಲ್ಲಿ ಏನೋ ವ್ಯತ್ಯಾಸವಾಗಿದೆ ಎಂದು ಮಗಳಿಗೆ ಅನಿಸಿತು. ಸುಮತಿಯನ್ನು ಒಮ್ಮೆ ಸೂಕ್ಷ್ಮವಾಗಿ ಗಮನಿಸಿದಳು. ಮುಖ ಸ್ವಲ್ಪ ಊದಿರುವಂತೆ ಕಾಣಿಸಿತು. ಕಣ್ಣಿನ ಸುತ್ತಲೂ ಸ್ವಲ್ಪ ಬಾತು ಕೊಂಡಂತೆ ಇದೆ. ಕೈಕಾಲು ಸಹ ಸ್ವಲ್ಪ ಊದಿಕೊಂಡಿದೆ. ಆದಷ್ಟು ಬೇಗ ತಾಯಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕೆಂದು ತೀರ್ಮಾನಿಸಿ.,…. ಅಮ್ಮ ನಾನು ಬೇಗ ಸ್ನಾನ ಮುಗಿಸಿ ಬರುತ್ತೇನೆ…. ಎಂದು ಹೇಳಿ, ಹತ್ತನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳನ್ನು ಕರೆದು….”ಬೇಗ ತಿಂಡಿ ಮಾಡಿ, ನಾನು ನನ್ನ ತಾಯಿಯನ್ನು ಕರೆದುಕೊಂಡು ಆಸ್ಪತ್ರೆಗೆ ಹೋಗಬೇಕಿದೆ”…. ಎಂದಳು. ಮಕ್ಕಳು ಸರಿ ಎಂದು ತಲೆ ಆಡಿಸಿ ತಿಂಡಿ ಮಾಡಲು ಅಡುಗೆ ಮನೆಗೆ ಹೋದರು. ಅಡುಗೆಯವರು ಊರಿಗೆ ಹೋಗಿದ್ದ ಕಾರಣ ಸದ್ಯಕ್ಕೆ ಮಕ್ಕಳೇ ತಿಂಡಿ ಮಧ್ಯಾಹ್ನಕ್ಕೆ ಅಡುಗೆ ಮಾಡಿಕೊಳ್ಳುತ್ತಿದ್ದರು. ಜೊತೆಗೆ ಸುಮತಿ ಮಗಳು ಸಹಾಯ ಕೂಡ ಸಹಾಯ ಮಾಡುತ್ತಿದ್ದಳು. ಮನಸ್ಸಿನಲ್ಲಿ ಸ್ವಲ್ಪ ಆತಂಕವನ್ನು ತುಂಬಿಕೊಂಡೇ ಮಗಳು ಬೇಗನೆ ಸ್ನಾನ ಮುಗಿಸಿದಳು. ಅನಾಥಾಶ್ರಮದ ಮಕ್ಕಳು ತಾಯಿ ಮಗಳು ಇಬ್ಬರಿಗೂ ಚಪಾತಿ ಟೊಮೇಟೊ ಚಟ್ನಿ ಮಾಡಿ ತಿನ್ನಲು ಕೊಟ್ಟರು. ಸುಮತಿಗೆ ಹೆಚ್ಚು ನಡೆಯಲು ಸಾಧ್ಯವಿಲ್ಲ ಎಂದು ಮಗಳಿಗೆ ಅನಿಸಿತು. ಅನಾಥಾಶ್ರಮದ ಹುಡುಗನೊಬ್ಬನನ್ನು ಕರೆದು ದಾರಿಯಲ್ಲಿ ಹೋಗುವ ಯಾವುದಾದರೂ ಆಟೋರಿಕ್ಷಾವನ್ನು ನಿಲ್ಲಿಸಿ ಅನಾಥಾಶ್ರಮ ಅಂಗಳಕ್ಕೆ ಕರೆದುಕೊಂಡು ಬರುವಂತೆ ಹೇಳಿದಳು. ಸ್ವಲ್ಪ ಹೊತ್ತಿನಲ್ಲೇ ಆಟೋ ಬಂದಿತು. ತಾಯಿಯನ್ನು ಕರೆದುಕೊಂಡು ಮಗಳು ಆಟೋ ಹತ್ತಿದಳು. ದೊಡ್ಡ ಮಕ್ಕಳನ್ನು ಉದ್ದೇಶಿಸಿ…. “ಎಲ್ಲರಿಗೂ ತಿಂಡಿಯನ್ನು ಕೊಟ್ಟು ರೆಡಿಯಾಗಿ, ಬಾಗಿಲಿಗೆ ಬೀಗ ಹಾಕಿಕೊಂಡು ಹತ್ತಿರದಲ್ಲಿರುವ ಡಮ್ ಅಂಡ್ ಢಫ್ ಶಾಲೆಯ ಮೇಲ್ವಿಚಾರಕರ ಕೈಲಿ ಕೀಲಿಯನ್ನು ಕೊಟ್ಟು ಶಾಲೆಗೆ ಹೋಗಿ”…. ಎಂದು ತಿಳಿಸಿದಳು. ಹತ್ತಿರದಲ್ಲಿಯೇ ಸಕಲೇಶಪುರದ ಸರ್ಕಾರಿ ಆಸ್ಪತ್ರೆ ಇದ್ದ ಕಾರಣ ಆಟೋ ಬೇಗನೆ ಆಸ್ಪತ್ರೆಯನ್ನು ತಲುಪಿತು. ಸುಮತಿಯನ್ನು ಆಟೋದಿಂದ ನಿಧಾನವಾಗಿ ಇಳಿಸಿ, ಆಸ್ಪತ್ರೆಯ ವರಾಂಡದ ಬೆಂಚಿನ ಮೇಲೆ ಕುಳ್ಳಿರಿಸಿ, ಕಂಪೌಂಡರ್ ಹತ್ತಿರ ಹೋಗಿ ಚೀಟಿಯನ್ನು ಬರೆಸಿಕೊಂಡು ಬಂದಳು. ನಂತರ ಸುಮತಿಯ ಕೈ ಹಿಡಿದು ನಿಧಾನವಾಗಿ ನಡೆಸಿಕೊಂಡು ಫಿಜಿಷಿಯನ್ ವೈದ್ಯರ ಕೊಠಡಿಯ ಬಳಿಗೆ ಹೋದಳು. ಅಲ್ಲಿಯೇ ಇದ್ದ ಬೆಂಚಿನ ಮೇಲೆ ಸುಮತಿಗೆ ಕುಳಿತುಕೊಳ್ಳಲು ಹೇಳಿ ಸರತಿಯ ಸಾರಿನಲ್ಲಿ ತಾನು ನಿಂತಳು. ಅಟೆಂಡರ್ ಕರೆದಾಗ ತಾಯಿಯನ್ನು ನಿಧಾನವಾಗಿ ಎಬ್ಬಿಸಿ ಒಳಗೆ ಕರೆದುಕೊಂಡು ಹೋದಳು. ಸುಮತಿಯನ್ನು ಕಂಡ ಕೂಡಲೇ ವೈದ್ಯರು…. “ಏನು ಸುಮತಿಯವರೇ ಹೇಗಿದ್ದೀರಾ?… ಎಂದು ಕೇಳಿದರು. ಸುಮತಿ ವೈದ್ಯರ ಮುಖವನ್ನು ನೋಡಿದಳು. ಅವಳಿಗೆ ವೈದ್ಯರ ಮುಖ ಅಸ್ಪಷ್ಟವಾಗಿ ಕಾಣಿಸಿತು. ಕನ್ನಡಕವನ್ನು ತೆಗೆದು ಸೀರೆಯ ಸರಗಿನಿಂದ ಒರಸಿಕೊಂಡು ಪುನಃ ಹಾಕಿಕೊಂಡಳು… “ಸರ್ ಕೆಲವು ದಿನಗಳಿಂದ ನನ್ನ ಆರೋಗ್ಯ ಸರಿ ಇಲ್ಲ…. ತುಂಬಾ ಆಯಾಸವಾಗುತ್ತಿದೆ… ಏನನ್ನೂ ತಿನ್ನಲು ಸಾಧ್ಯವಾಗುತ್ತಿಲ್ಲ…. ಆಹಾರವನ್ನು ತಿಂದರೆ, ನೀರು ಕುಡಿದರೆ ವಾಂತಿ ಬರುವ ಹಾಗೆ ಆಗುತ್ತಿದೆ”…. ಎಂದಳು. ಸುಮತಿಯನ್ನು ಪರಿಶೀಲಿಸಿದ ವೈದ್ಯರು ಮಗಳನ್ನು ನೋಡುತ್ತಾ…. “ನಾನು ಕೆಲವು ರಕ್ತ ಪರೀಕ್ಷೆ ಹಾಗೂ ಎಕ್ಸರೇ ಪರೀಕ್ಷೆಗೆ ಈ ಚೀಟಿಯಲ್ಲಿ ಬರೆದು ಕೊಡುತ್ತೇನೆ…. ಅಮ್ಮನನ್ನು ಕರೆದುಕೊಂಡು ಹೋಗಿ ಈ ಪರೀಕ್ಷೆಗಳನ್ನು ಮಾಡಿಸಿಕೊಂಡು ಅವುಗಳ ವರದಿಯನ್ನು ತಂದು ನನಗೆ ತೋರಿಸಮ್ಮ”….. ಎಂದು ಹೇಳಿದರು. ಮಗಳು…”ಸರಿ ಸರ್”…. ಎಂದು ಹೇಳುತ್ತಾ ಸುಮತಿಯ ಕೈ ಹಿಡಿದುಕೊಂಡು ನಿಧಾನವಾಗಿ ನಡೆಸಿಕೊಂಡು ರಕ್ತ ಪರೀಕ್ಷೆ ಕೇಂದ್ರದ ಬಳಿಗೆ ಕರೆದುಕೊಂಡು ಹೋದಳು. ರಕ್ತ ಪರೀಕ್ಷೆ ಮಾಡಿಸಿದ ನಂತರ ಎಕ್ಸರೇ ಪರೀಕ್ಷೆ ಮಾಡುವಲ್ಲಿಗೆ ಕರೆದುಕೊಂಡು ಹೋದಳು. ಎಕ್ಸರೇ ಪರೀಕ್ಷಿಸುವಾತ ಎಕ್ಸರೇ ಯಂತ್ರದ ಮುಂದೆ ಸುಮತಿಯನ್ನು ನಿಲ್ಲಿಸಿ, ಪರೀಕ್ಷೆ ಮಾಡಲು ಪ್ರಾರಂಭಿಸಿದರು…. “ಅಮ್ಮಾ ನೀವು ಸೀರೆಯ ಸೆರಗಲ್ಲಿ ಏನನ್ನು ಇಟ್ಟುಕೊಂಡಿದ್ದೀರಿ?…. ಅದನ್ನು ಮಗಳ ಕೈಗೆ ಕೊಡಿ”…. ಎಂದರು. ಆತನ ಮಾತನ್ನು ಕೇಳಿ ಸುಮತಿ…” ಸರ್ ನನ್ನ ಕೈಲಿ ಏನೂ ಇಲ್ಲ”… ಎಂದಳು. ಎಕ್ಸರೇ ಪರೀಕ್ಷಿಸುವಾತ ಸಂಶಯ ಬಂದು ಮತ್ತೆ ಪರೀಕ್ಷಿಸಿದನು. ಏಕೆ ಏನೋ ಅಡ್ಡ ಇರುವಂತೆ ಕಾಣಿಸುತ್ತಿದೆಯಲ್ಲಾ ಎಂದುಕೊಳ್ಳುತ್ತಾ ಮತ್ತೆ ಮತ್ತೆ ಪರೀಕ್ಷಿಸಿದನು. ಎಕ್ಸರೇ ಪರೀಕ್ಷೆ ಮುಗಿದ ನಂತರ ಸ್ವಲ್ಪ ಹೊತ್ತು ಅಲ್ಲಿಯೇ ಹೊರಗೆ ಕಾದು ಕುಳಿತುಕೊಳ್ಳಲು ಹೇಳಿದರು. ಎಕ್ಸರೇ ಪರೀಕ್ಷಿಸುವಾತ ಹೇಳಿದ ಮಾತೇ ಮಗಳ ಕಿವಿಯಲ್ಲಿ ಗುಂಯ್ ಗುಡುತ್ತಿತ್ತು. ಆತ ಏಕೆ ಹಾಗೆ ಹೇಳಿರಬಹುದು? ಎಂದು ಯೋಚಿಸುತ್ತಾ ತಾಯಿಯ ಕೈ ಮೇಲೆ ಕೈ ಇಟ್ಟು…. ಏನು ಇರೋದಿಲ್ಲ ಅಮ್ಮಾ…. ಎಂದು ಹೇಳಿ, ಆತ ಏಕೆ ಹಾಗೆ ಹೇಳಿರಬಹುದು? ಎಂದು ಆಲೋಚಿಸುತ್ತಾ ಕುಳಿತಳು. ಸ್ವಲ್ಪ ಹೊತ್ತು ಕಾದು ಕುಳಿತ ನಂತರ ಎಕ್ಸರೇ ವರದಿ ಬಂದಿತು. ಆತ ಮಗಳನ್ನು ಒಳಗೆ ಕರೆದು…. “ಆದಷ್ಟು ಬೇಗ ನಿನ್ನ ಅಮ್ಮನ ವರದಿಯನ್ನು ವೈದ್ಯರಿಗೆ ತೋರಿಸು… ಹೆಚ್ಚು ತಡ ಮಾಡಬೇಡ”…. ಎಂದು ಹೇಳಿದರು. ಅವರು ಹೇಳಿದ ಮಾತಿನಿಂದ ಮಗಳಿಗೆ ಆತಂಕವಾಯಿತು. ಎಕ್ಸರೇ ಪರೀಕ್ಷಿಸುವವನ ಮುಖವನ್ನು ನೋಡಿದಳು…. “ನಾನು ಇಲ್ಲಿ ಏನನ್ನು ಹೇಳಲು ಸಾಧ್ಯವಿಲ್ಲ…. ಬೇಗ ತೆಗೆದುಕೊಂಡು ಹೋಗಿ ವೈದ್ಯರಿಗೆ ತೋರಿಸು ಅವರು ಎಲ್ಲವನ್ನೂ ನಿಮಗೆ ತಿಳಿಸುತ್ತಾರೆ”…. ಎಂದರು. ಅವರು ಹೇಳಿದ ಮಾತನ್ನು ಕೇಳಿ ಆತಂಕದಿಂದಲೇ ತಾಯಿಯ ಕೈಯನ್ನು ಹಿಡಿದು ನಿಧಾನವಾಗಿ ಎಬ್ಬಿಸಿ ವೈದ್ಯರ ಕೊಠಡಿಯ ಬಳಿಗೆ ಕರೆದುಕೊಂಡು ಹೋದಳು. ಅಟೆಂಡರ್ ಕೈಲಿ ವರದಿಯನ್ನು ಕೊಟ್ಟಾಗ ಆತ ಆ ವರದಿಯನ್ನು ತೆಗೆದುಕೊಂಡು ಹೋಗಿ ವೈದ್ಯರಿಗೆ ತೋರಿಸಿದನು. ಅಟೆಂಡರ್ ಹೊರಗೆ ಬಂದು ತಾಯಿ ಮಗಳು ಇಬ್ಬರನ್ನೂ ವೈದ್ಯರು ಕರೆಯುತ್ತಿದ್ದಾರೆ ಎಂದು ತಿಳಿಸಿದನು. ಇಬ್ಬರೂ ವೈದ್ಯರ ಕೊಠಡಿಯ ಒಳಗೆ ಪ್ರವೇಶಸಿದರು. ಒಳಗೆ ಹೋದಾಗ ವೈದ್ಯರು ಎಕ್ಸರೇ ಫಿಲಂ ಅನ್ನು ಕೂಲಂಕುಶವಾಗಿ ಪರೀಕ್ಷಿಸಿ ನೋಡುತ್ತಿದ್ದರು.ತಾಯಿ ಮತ್ತು ಮಗಳು ಒಳಗೆ ಬಂದಾಗ ಕುಳಿತುಕೊಳ್ಳುವಂತೆ ಹೇಳಿ, ಸುಮತಿಯನ್ನು ಉದ್ದೇಶಿಸಿ…. “ಸುಮತಿ…ಯಾವಾಗನಿಂದ ನಿಮಗೆ ಅಸ್ವಸ್ಥತೆ ಅನಿಸುತ್ತಿತ್ತು? ಎಂದು ಕೇಳಿದರು…. “ಬಹಳ ದಿನಗಳಿಂದ ನನ್ನನ್ನು ಸ್ವಲ್ಪ ಅಸ್ವಸ್ಥತೆ ಕಾಡುತ್ತಿದೆ…. ನಿಮ್ಮ ಸೂಚನೆಯಂತೆ ಇನ್ಸುಲಿನ್ ತೆಗೆದುಕೊಳ್ಳುತ್ತಿದ್ದೇನೆ…. ಮಾತ್ರೆಯನ್ನು ತೆಗೆದುಕೊಳ್ಳುತ್ತಿದ್ದೇನೆ…. ಕೆಲವೊಮ್ಮೆ ಊಟದಲ್ಲಿ ಪಥ್ಯ ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ”…. ಎಂದಳು.

Read Post »

ಅಂಕಣ ಸಂಗಾತಿ, ವೀಣಾ-ವಾಣಿ

“ಯುಥನೇಶಿಯ…. ದಯಾಮರಣಕ್ಕೆ ಅಸ್ತು” ವೀಣಾ ಹೇಮಂತ್‌ ಗೌಡ ಪಾಟೀಲ್.

ಬದುಕಿನ ಸಂಗಾತಿ ವೀಣಾ ಹೇಮಂತ್‌ ಗೌಡ ಪಾಟೀಲ್. “ಯುಥನೇಶಿಯ…. ದಯಾಮರಣಕ್ಕೆ ಅಸ್ತು”  ಕಳೆದ ಹಲವಾರು ದಶಕಗಳಿಂದ ಭಾರತ ದೇಶದಲ್ಲಿ ದಯಾಮರಣ ಎಂಬ ಕಾನೂನನ್ನು ಜಾರಿಗೆ ತರಲು ಒತ್ತಾಯಿಸಲಾಗುತ್ತಿತ್ತು. ಇದೀಗ ಆ ಕಾನೂನನ್ನು ಕೆಲ ನಿರ್ದಿಷ್ಟ ನಿರ್ದೇಶನಗಳೊಂದಿಗೆ ಆದೇಶ ಮಾಡಲಾಗಿದೆ. ಏನಿದು ದಯಾ ಮರಣ? ವ್ಯಕ್ತಿಯು ಬದುಕಿದ್ದಾಗಲೇ ಆತನ ದೇಹದ ಎಲ್ಲಾ ಅಂಗಗಳು ನಿಷ್ಕ್ರಿಯಗೊಂಡು ಮುಂದೆ ಆತ ಯಾವುದೇ ರೀತಿಯ ಚಟುವಟಿಕೆಗಳನ್ನು ನಡೆಸಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಆತನನ್ನು ಜೋಪಾನ ಮಾಡುವವರು ಅಸಹಾಯಕತೆಯಿಂದ ಕೈ ಚೆಲ್ಲಿದಾಗ, ಇನ್ನೆಂದೂ ಆತ ವಾಸಿ ಹೊಂದುವುದಿಲ್ಲ ಎಂಬ ಪರಿಸ್ಥಿತಿಯಲ್ಲಿ ಔಷಧಿ ಇಲ್ಲವೇ ಇಂಜೆಕ್ಷನ್ ನೀಡುವ ಮೂಲಕ ಆತನಿಗೆ ಮರಣವನ್ನು ದಯಪಾಲಿಸುವ ಕಾನೂನಾತ್ಮಕ ಒಪ್ಪಿಗೆಯನ್ನು ದಯಾ ಮರಣ ಎಂದು ಹೇಳಬಹುದು.  ಈ ಹಿಂದೆ ಸಾಕಷ್ಟು ಬಾರಿ ಬಹಳಷ್ಟು ಜನ ತಮ್ಮ ಆರೋಗ್ಯ ಸಮಸ್ಯೆಗಳಿಂದ ಬೇಸತ್ತು ಇನ್ನೆಂದೂ ವಾಸಿಯಾಗದ ಕಾಯಿಲೆಗಳಿಂದ ನೊಂದು ದಯಾ ಮರಣಕ್ಕೆ ಅರ್ಜಿ ಹಾಕಿ ರಾಷ್ಟ್ರಪತಿಗಳವರೆಗೆ ಪತ್ರಗಳು ಹೋಗಿದ್ದ ಪ್ರಕರಣಗಳು ಉಂಟು… ಆದರೆ ಭಾರತದ ಜೀವಪರ ಸಂಘಟನೆಗಳು ಈ ದಯಾಮರಣ ಪ್ರಕ್ರಿಯೆಯ ವಿರುದ್ಧ ಹೋರಾಟವನ್ನು ಆರಂಭಿಸಿತ್ತು. ಗೊತ್ತಿದ್ದು ಕೂಡ ಯಾವುದೇ ಒಂದು ಜೀವಿಯ ಬದುಕನ್ನು ಕಸಿದುಕೊಳ್ಳುವ ಹಕ್ಕು ಯಾರಿಗೂ ಇಲ್ಲ ಎಂಬುದು ಅವರ ವಾದವಾಗಿತ್ತು…. ಇದು ನಿಜ ಕೂಡ.ಬದುಕಿನಲ್ಲಿ ಏನನ್ನಾದರೂ ಸಾಧಿಸಬೇಕು ಎಂದು ಕನಸುಗಳನ್ನು ಹೊತ್ತು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಅರುಣ ಶಾಮ್ ಭಾಗ್ ಎಂಬ  ಯುವತಿ ಮುಂಬೈಯ ಕೆ ಎಂ ಆಸ್ಪತ್ರೆಗೆ ನರ್ಸ್ ಆಗಿ ಕೆಲಸಕ್ಕೆ ಸೇರಿದಳು.1973ರ ನವಂಬರ್ 27 ರಂದು ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅರುಣಾಳನ್ನು ವಾರ್ಡ್ ಬಾಯ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸೋಹನ್ ಲಾಲ್ ಭಾರ್ತಾ ಎಂಬ ಯುವಕ ಅತ್ಯಾಚಾರ ಮಾಡಲು ಪ್ರಯತ್ನಿಸಿ ಪ್ರತಿರೋಧಿಸಿದ ಆಕೆಯ ಕೊರಳಿಗೆ ಕಬ್ಬಿಣದ ಸರಪಳಿಯಿಂದ ಬಿಗಿದ ಆತ ಆಕೆಯ ಮೇಲೆ ಅತ್ಯಾಚಾರ ಎಸಗಿದ. ಕುತ್ತಿಗೆಗೆ ಬಿಗಿದ ಸರಳಿನಿಂದಾಗಿ ಆಕೆಯ ಮೆದುಳಿಗೆ ಸಂಪರ್ಕ ತಪ್ಪಿ ಆಕೆ ಕೋಮಾಕ್ಕೆ ಜಾರಿದಳು. ಆಸ್ಪತ್ರೆಯ ವೈದ್ಯರ ಸಿಬ್ಬಂದಿಗಳ ಅವಿರತ ಪ್ರಯತ್ನದ ಹೊರತಾಗಿಯೂ ಕೂಡ ಆಕೆ ಚೇತರಿಸಿಕೊಳ್ಳಲಿಲ್ಲ. ಕುಟುಂಬದವರು ಕೂಡ ಹಿಂದೆ ಸರಿದರು.1980 ರಲ್ಲಿ ಆಕೆಯನ್ನು ಆಸ್ಪತ್ರೆಯಿಂದ ಹೊರ ಹಾಕುವ ಪ್ರಯತ್ನವನ್ನು ಮುಂಬೈ ಮಹಾನಗರ ಪಾಲಿಕೆ ಮಾಡಿದರೂ ಅದರ ವಿರುದ್ಧ ಉಗ್ರವಾಗಿ ಧ್ವನಿಯೆತ್ತಿದ ಆಸ್ಪತ್ರೆಯ ನರ್ಸ್ ಗಳ ದೆಸೆಯಿಂದಾಗಿ ಆ ಕಾರ್ಯ ಸ್ಥಗಿತವಾಯಿತು. ಆಸ್ಪತ್ರೆಯ ಒಂದು ಕೋಣೆಯಲ್ಲಿ ಸರಿ ಸುಮಾರು 42 ವರ್ಷಗಳ ಕಾಲ ಆಕೆಯನ್ನು ಮಗುವಿನಂತೆ ಅಲ್ಲಿಯ ನರ್ಸ್ ಗಳು ಜೋಪಾನ ಮಾಡಿದರು.  ಆಕೆಯ ಪರಿಸ್ಥಿತಿಯನ್ನು ಕಂಡು ಕೇಳಿ ನೊಂದ ಪಿಂಕಿ ವಿರಾನಿ ಎಂಬ ವಕೀಲರು ಆಕೆಗೆ ದಯಾಮರಣವನ್ನು ನೀಡಬೇಕಾಗಿ ನ್ಯಾಯಾಲಯದ ಮೊರೆ ಹೋದರು. ಆದರೆ ಹಲವಾರು ಪರ ವಿರೋಧಗಳ ಕಾರಣಕ್ಕೆ ದಯಾಮರಣದ ವಿಷಯ ಜನರ ಗಮನವನ್ನು ಸೆಳೆದಿತ್ತು. ಸುಮಾರು 42 ವರ್ಷಗಳ ಕಾಲ ಕೋಮಾದಲ್ಲಿಯೇ ಇದ್ದ ಅರುಣ 2015ರಲ್ಲಿ ನ್ಯೂಮೋನಿಯಾಗೆ ತುತ್ತಾಗಿ ಸಹಜ ಸಾವನ್ನು ಅಪ್ಪಿದರು ಇದೀಗ ಮತ್ತೆ ದಯಾಮರಣದ ಕುರಿತ ವಿಷಯ ಮುನ್ನೆಲೆಗೆ ಬರಲು ಕಾರಣವಾಗಿದ್ದು ಹಾಗೂ ದಯಾಮರಣವನ್ನು ಕಾನೂನು ಬದ್ಧವಾಗಿ ನೀಡಲು ಮುಂದಾಗಿದ್ದು ಕಳೆದ 13 ವರ್ಷಗಳಿಂದ ಕೋಮದಲ್ಲಿದ್ದು ಮುಂದಿನ ದಿನಮಾನಗಳಲ್ಲಿಯೂ ಕೂಡ ಆರೋಗ್ಯದಲ್ಲಿ ಚೇತರಿಕೆ ಕಾಣುವ ಯಾವುದೇ ಲಕ್ಷಣಗಳು ಇಲ್ಲದ ಕಾರಣ ದೆಹಲಿಯ ಸುಪ್ರೀಂ ಕೋರ್ಟ್ ಅವರಿಗೆ ದಯಾಮರಣವನ್ನು ನೀಡಲು ಒಪ್ಪಿಕೊಂಡಿದ್ದು ಈಗಾಗಲೇ ಎಲ್ಲಾ ಪ್ರಕ್ರಿಯೆಗಳು ಆರಂಭವಾಗಿವೆ. .ಮೂಲತಃ ದೆಹಲಿಯವರಾದ ಹರೀಶ್ ರಾಣಾ ಅವರು ಚಂಡಿಗಡದ ವಿಶ್ವವಿದ್ಯಾಲಯದಲ್ಲಿ ಸಿವಿಲ್ ಇಂಜಿನಿಯರಿಂಗ್ ಕೊನೆಯ ವರ್ಷದಲ್ಲಿ ಓದುತ್ತಿದ್ದರು. 2013 ಆಗಸ್ಟ್ 20ರಂದು ರಕ್ಷಾಬಂಧನದ ದಿನ ಆಕಸ್ಮಿಕವಾಗಿ ತಾವು ಉಳಿದುಕೊಂಡಿದ್ದ ಹಾಸ್ಟೆಲ್ನ ವಸತಿಗೃಹದ ನಾಲ್ಕನೇ ಮಹಡಿಯಿಂದ ನೆಲಕ್ಕೆ ಬಿದ್ದ ಅವರ ದೇಹದ ಎಲ್ಲ ಭಾಗಗಳು ನಿಷ್ಕ್ರಿಯಗೊಂಡಿದ್ದು ಕಳೆದ 13 ವರ್ಷಗಳಿಂದ ಅವರು ಹಾಸಿಗೆಯಲ್ಲಿಯೇ ಇದ್ದಾರೆ. ಮುಂದೆ ಯಾವುದೇ ಚೇತರಿಕೆಯನ್ನು ಕಾಣುವ ಅವಕಾಶವೇ ಇಲ್ಲದ ಅವರ ಪರಿಸ್ಥಿತಿಯನ್ನು ಕಂಡ ಅವರ ಪಾಲಕರು ಹಲವಾರು ವೈದ್ಯಕೀಯ ಮಂಡಳಿಗಳ ದಾಖಲೆಗಳನ್ನು ಹೊತ್ತು ತಮ್ಮ ಮಗನಿಗೆ ದಯಾಮರಣವನ್ನು ದಯಪಾಲಿಸುವ ಅನುಮತಿ ನೀಡಿ ಎಂದು ಸುಪ್ರೀಂಕೋರ್ಟ್ನ ಮೊರೆ ಹೋಗಿದ್ದರು.  ಹಲವಾರು ಪರಿಶೀಲನೆಗಳ ನಂತರ ಅಂತಿಮವಾಗಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಜೆಪಿ ಪರ್ದಿ ವಾಲಾ ಮತ್ತು ಕೆ ವಿ ವಿಶ್ವನಾಥನ್ ಅವರು ಕುಟುಂಬದ ಒಪ್ಪಿಗೆ ಹಾಗೂ ವೈದ್ಯಕೀಯ ಮಂಡಳಿಗಳ ವರದಿಯನ್ನು ಆಧರಿಸಿ ಮೊನ್ನೆ ಮಾರ್ಚ್ 11, 2026 ರಂದು ಸಂಪೂರ್ಣ ಜೀವಚ್ಚವವಾಗಿರುವ ಹರೀಶ್ ರಾಣಾ ಅವರಿಗೆ ನಿಷ್ಕ್ರಿಯ ದಯಾ ಮರಣ ನೀಡಲು ರಾಷ್ಟ್ರ ರಾಜಧಾನಿ ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯರಿಗೆ ಆದೇಶ ನೀಡಿದ್ದಾರೆ.  ಈಗಾಗಲೇ ಕೋರ್ಟ್ ಆದೇಶದಂತೆ ಮೊದಲ ಪ್ರಕ್ರಿಯೆ ಆರಂಭವಾಗಿದ್ದು ಅವರಿಗೆ ಬಾಹ್ಯವಾಗಿ ಆಹಾರವನ್ನು ಸೇವಿಸಲು ಬಾಯಿಗೆ ಹಾಕಿರುವ ನಳಿಕೆಗಳನ್ನು ತೆಗೆದು ಹಾಕಿದ್ದು ಹಾಗೂ ದೇಹಕ್ಕೆ ಅಳವಡಿಸಲ್ಪಟ್ಟ ವಿಸರ್ಜನಾ ವ್ಯವಸ್ಥೆಗಳನ್ನು  ತೆಗೆದುಹಾಕಲಾಗಿದೆ.ಆತನಿಗೆ ಪಾಲಕರು ಹಾಗೂ ಕುಟುಂಬದವರು ಅಂತಿಮ ವಿದಾಯ ಹೇಳಿದ್ದಾರೆ. ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಸಹೋದರಿಯರು ಅವರನ್ನು ಕುರಿತು ಎಲ್ಲರನ್ನೂ ಕ್ಷಮಿಸು, ಎಲ್ಲರಿಗೂ ಕ್ಷಮೆ ಕೇಳು ಹಾಗೂ ಶಾಂತಿಯಿಂದ ಹೊರಟುಬಿಡು ಎಂಬ ಅಂತಿಮ ವಾಕ್ಯಗಳನ್ನು ಹೇಳಿ ಅತ್ಯಂತ ಕರುಣಾಪೂರ್ವಕ ಪ್ರೀತಿಯಿಂದ ಬೀಳ್ಕೊಟ್ಟಿದ್ದಾರೆ. ಹತ್ತು ಹಲವಾರು ಕಾಯಿಲೆಗಳಿಂದ ಸಂಪೂರ್ಣ ದೇಹಗಳು ನಿಷ್ಕ್ರಿಯಗೊಂಡು ಮನೋ ದೈಹಿಕ ಯಾತನೆಯನ್ನು ಅನುಭವಿಸುತ್ತಿರುವ, ಬದುಕಿರುವಾಗಲೇ ಸತ್ತಂತೆ ಇರುವ ಹಲವಾರು ಜನರು ಆಸ್ಪತ್ರೆಯ ಮೂಲೆಯ ಬೆಡ್ಗಳಲ್ಲಿ, ಮನೆಗಳಲ್ಲಿ ಇದ್ದು ಅವರಿಗೆ ಮತ್ತು ಅವರ ಯಾತನೆಯನ್ನು ಕಂಡು ಏನೂ ಮಾಡಲಾಗದ ಅಸಹಾಯಕ ಪರಿಸ್ಥಿತಿಯನ್ನು ಅನುಭವಿಸುತ್ತಿರುವ ಅವರ ಕುಟುಂಬದವರಿಗೆ ಸರ್ವೋಚ್ಚ ನ್ಯಾಯಾಲಯದ ಈ ತೀರ್ಪು ನೆಮ್ಮದಿಯ ನಿಟ್ಟುಸಿರನ್ನು ತಂದಿದೆ. ಯಾವುದೇ ಕಾನೂನುಗಳು ದುರ್ಬಳಕೆಯಾಗಬಾರದು ಎಂಬುದಷ್ಟೇ ಸಮಾಜದ ಕಳಕಳಿ. ಹರೀಶ್ ರಾಣಾಗೆ ಭಾವಪೂರಿತ ವಿದಾಯವನ್ನು ಕೋರುತ್ತಾ ವೀಣಾ ಹೇಮಂತ್ ಗೌಡ ಪಾಟೀಲ್

“ಯುಥನೇಶಿಯ…. ದಯಾಮರಣಕ್ಕೆ ಅಸ್ತು” ವೀಣಾ ಹೇಮಂತ್‌ ಗೌಡ ಪಾಟೀಲ್. Read Post »

ಅಂಕಣ ಸಂಗಾತಿ, ಜಯದೇವಿ ತಾಯಿ ಲಿಗಾಡೆ ಜೀವನ

ಧಾರಾವಾಹಿ ಸಂಗಾತಿ-11 ಜಯದೇವಿತಾಯಿ ಲಿಗಾಡೆ ಜೀವನಗಾಥೆ ಸವಿತಾ ದೇಶಮುಖ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆಗಣನೀಯಕೊಡುಗೆ ನೀಡಿದ ಹಿರಿಯ ಚೇತನ ಜಯದೇವಿ ತಾಯಿಯವರ ಜೀವನ ತ್ಯಾಗದ ಮತ್ತೊಂದು ಹೆಸರು.ಸಮಾಜ ಸೇವೆಯ ಪಥದಲ್ಲಿ ನಡೆದುಹೋಗುತ್ತಿದ್ದ ಅವರ ಹೆಜ್ಜೆಗಳು ಎಷ್ಟು ದೃಢವಾಗಿದ್ದವೋ, ಅಷ್ಟೇ ಮನೆಯ ಹೊಣೆಗಾರಿಕೆಯನ್ನು ಹೊತ್ತಿದ್ದ  ಹೃದಯ ಅಷ್ಟೇ ಮೃದುವಾಗಿತ್ತು. ೧೯೪೨ರ ವೇಳೆ ಅಷ್ಟರಲ್ಲಿ ತಾಯಿಯವರು ಇನ್ನೂ ಮೂರು ಮಕ್ಕಳಿಗೆ ಜನ್ಮ ನೀಡಿದರು…ಇಗ ತಾಯಿಯವರಿಗೆ‌‌ ಐದು ಜನ ಮಕ್ಕಳಾದರು… ಅತ್ಯಂತ ಸದೃಢ ಸದ್ೃಪಿ ಎರಡು ಗಂಡು ಮಕ್ಕಳು ಪ್ರಭುರಾಜ ಹಾಗು ಬಸವರಾಜ ಜನಿಸಿದರು. ನಂತರ ಒಂದು ಸುಂದರ  ಹೆಣ್ಣು ಮಗು ಲಲ್ಲೇಶ್ವರಿ(ನನ್ನ ತಾಯಿ )ಜನ್ಮ ಕೊಟ್ಟರು. ಒಂದೆಡೆ ಸಮಾಜದ ನೋವುಗಳನ್ನು ಕೇಳಿ ಪರಿಹರಿಸಲು ಓಡಾಡುತ್ತಿದ್ದ ತಾಯಿಯವರು, ಮತ್ತೊಂದೆಡೆ ತಮ್ಮ ಪುಟ್ಟ ಮಕ್ಕಳ ಅಳುವಿನಲ್ಲೂ, -ನಗುಮುಖದಲ್ಲೂ ಜೀವನದ ಅರ್ಥವನ್ನು ಕಂಡುಕೊಳ್ಳುತ್ತಿದ್ದರು.ಹಗಲು ಜನರ ನಡುವೆ ತಿರುಗಿ, ರಾತ್ರಿ ಮಕ್ಕಳೊಡನೆ ಸಮಯ ತೆಗೆಯುತ್ತಿದ್ದರು.ಅವರಿಗೆ ವಿಶ್ರಾಂತಿ ಅನ್ನುವುದು ಇರಲಿಲ್ಲ. ಸಮಾಜ ಸೇವೆಎಂಥ ಪವಿತ್ರ ದಾರಿ ಒಂದೆಡೆ ಇದ್ದರೆ, ತಾಯಿಯ ಹೃದಯದ ಕರ್ತವ್ಯ ಮತ್ತೊಂದೆಡೆ ಇತ್ತು. ಆದರೆ ಜಯದೇವಿ ತಾಯಿಯವರು ಯಾವತ್ತೂ ದಣಿಯಲಿಲ್ಲ. ಸಮಾಜದ ಸೇವೆಯ ಜೊತೆಗೆ ಕುಟುಂಬದ ಪ್ರೀತಿಯನ್ನೂ ಸಮಾನವಾಗಿ ಪಾಲಿಸಿಕೊಂಡು ಹೋಗುತ್ತಿದ್ದ ಅವರ ಜೀವನ ನಿಜಕ್ಕೂ ಆದರ್ಶಮಯವಾಗಿತ್ತು.ಒಂದೇ ಸಮಯದಲ್ಲಿ ಸಮಾಜಕ್ಕೆ ದೀಪವಾಗಿಯೂ, ತಮ್ಮ ಮಕ್ಕಳಿಗೆ ಮಮತೆಯ ನೆರಳಾಗಿಯೂ ಬದುಕಿದ ಜಯದೇವಿ ತಾಯಿಯವರ ಜೀವನಗಾಥೆ ತಾಯಿತನದ ಮಹತ್ವವನ್ನು ಹೇಳುವ ಅಮರ ಕಥೆಯಾಗಿದೆ. ಯಾಕೆಂದರೆ ಅವರ ಗಂಡ ಚನ್ನ ಮಲ್ಲಪ್ಪನವರ ಆರೋಗ್ಯವು ಆಗಲೇ ಹದಗೆಡಲಾರಂಭಿಸಿತ್ತು.ಮಧ್ಯ ಮಧ್ಯದಲ್ಲಿ ತಾಯಿಯವರ ಆರೋಗ್ಯವು ಕೈಕೊಡುತ್ತಿತ್ತು.ಗಂಡನ ಸೇವೆ, ಮಕ್ಕಳ ಪೋಷಣೆ,ಸಮಾಜ ಪರ ಕೆಲಸಗಳು, ಸಾಹಿತ್ಯದ ಸೇವೆ, ಸಿದ್ದರಾಮನ ಆರಾಧನೆಯು ಸತತವಾಗಿ ನಡೆದಿರುತ್ತಿತ್ತು. ಎಲ್ಲ ಮನೆಗಳಲ್ಲಿ ಕಂಡುಬರುವಂತೆ, ಜಯದೇವಿ ತಾಯಿಯವರ ಮನೆಯಲ್ಲಿಯೂ  ಅಣ್ಣತಮ್ಮಂದಿರ ಮನಸ್ತಾಪಗಳು ಬೆಳೆಯುತ್ತಾ ನಡೆದವು.ಸಣ್ಣಸಣ್ಣ ಮಾತುಗಳಿಂದ ಆರಂಭವಾದ ಭಿನ್ನಾಭಿಪ್ರಾಯಗಳು. ಅಣ್ಣ ತಮ್ಮಂದಿರು ಬೇರೆಯಾಗುವ ಸಂದರ್ಭ ಬಂದಿತು. ಪಾಲು ಮಾಡಲಾಗಿ ಲಿಗಾಡೆಯವರ ದೊಡ್ಡವಾಡಿಯು ಸಣ್ಣ ತಮ್ಮನ ಪಾಲಿಗೆ ಬಂದಿತ್ತು. ಮನೆಯ ಶಾಂತಿ ನಿಧಾನವಾಗಿ ಕರಗುತ್ತ ಹೋಗಿತು. ಒಂದು ದಿನ ಆ ಮನೆಯ ಮೌನವೇ ಹೃದಯವನ್ನು ಕಲುಕುವಂತಾಯಿತು…….ಅತ್ತೆ ಪ್ರಯಾಗಬಾಯಿಯು ಯಾವುದೋ ಕೆಲಸಕ್ಕೆ ಬೇರೆ ಊರಿಗೆ ಹೋಗಿದ್ದರು. ಹಾಗೆ ಗಂಡ ವೈದ್ಯರಿಗೆ ತೋರಿಸಿಕೊಂಡು ಬರಲು ಕೋಲ್ಕತ್ತಾಗೆ ಹೋಗಿದ್ದರು,ಜಯದೇವಿ ತಾಯಿಯವರ ಪುಟ್ಟ ಮಗು ಜ್ವರದಿಂದ ಕಂಗೆಟ್ಟು ಮಲಗಿತ್ತು. ತಾಯಿಯ ಕಣ್ಣುಗಳಲ್ಲಿ ಆತಂಕ, ಹೃದಯದಲ್ಲಿ ಕಳವಳ. ಮಗು ಜ್ವರದಲ್ಲಿ ಮೈ ಸುಡುತ್ತಿತ್ತು……ಆದರೆ ಆ ಮನೆಯಲ್ಲಿದ್ದ ಕೆಲವು ಹೃದಯಗಳು ಆ ನೋವನ್ನು ಅರ್ಥಮಾಡಿಕೊಳ್ಳಲಿಲ್ಲ. ಜ್ವರದಿಂದ ನರಳುತ್ತಿದ್ದ ಆ ಮಗುವಿನ ಕಡೆಗೆ ನಿರ್ಲಕ್ಷ್ಯದ ಕಣ್ಣುಗಳು ತಿರುಗಿದವೇ…….. ಹೊರತು ಮಗುವಿಗೇನು ಆಗಿದೆ ಅಂತ ಕೇಳದೇ  ಹೊರಗಡೆ ಹೊರಟು ಹೋದರು. ತಾಯಿಯವರಿಗೆ ಏನು ಮಾಡಬೇಕು ಅನ್ನುವುದು ತಿಳಿಯಲಿಲ್ಲ…. ಹೀಗಾಗಿ ಮನೆಯಲ್ಲಿ  ಯಾವುದಾದರೂ ಔಷದವನ್ನು ತರಬೇಕು ಎಂದು ಮೇಲೆಗಡೆ ಕೋಣೆಗೆ ಹೋದಾಗ ಆ ಕೋಣೆಗಳಿಗೆಲ್ಲ ಬೀಗ ಹಾಕಿದ್ದು ನೋಡಿ ಎದೆ  ಝಲ್ಲೆಂದಿತ್ತು…….!!?? ತಾಯಿಗೆ ಆ ಕ್ಷಣ ಸ್ಪಷ್ಟವಾಯಿತು — ಇಲ್ಲಿ ಉಳಿದರೆ ತನ್ನ ಮಕ್ಕಳಿಗೆ ಬೇಕಾದ ಮಮತೆ ಮತ್ತು ಆರೈಕೆ ಸಿಗುವುದಿಲ್ಲ ಎಂಬ ಸತ್ಯತಿಳಿದು ಕಣ್ಣೀರು ತಡೆದುಕೊಂಡು, ತನ್ನ ಮಕ್ಕಳನ್ನು ಮುದ್ದಾಗಿ ತಬ್ಬಿಕೊಂಡರು, ಹೊಸ ನಿರ್ಧಾರವನ್ನು ತೆಗೆದುಕೊಂಡರು.  ತನ್ನ ಮಕ್ಕಳಿಗಾಗಿ ಒಂದು ಬೇರೆ ಮನೆ ಕಟ್ಟಬೇಕೆಂಬ ಮನಸ್ಸು ಮಾಡಿದರು. ಆ ನಿರ್ಧಾರದಲ್ಲಿ ನೋವು ಇತ್ತು…ಕುಟುಂಬದವರೆಲ್ಲರೂ ಒಂದಾಗಿ ಒಂದು ಕಡೆ ಸಂತೋಷದಿಂದ ನಗುನಗುತ ನಲುವಿನಲಿ ನಲಿಯುತ ಬಾಳಬೇಕೆಂಬುವ ಆಶೆಯಗಳ ವಿಚ್ಛೇದನೆಯ ವೇದನೆ ಅದಾಗಿತ್ತು…….!!! ಹೀಗಾಗಿ ಜಯದೇವಿ ತಾಯಿಯವರು ತಮ್ಮ ನೋವನ್ನು ಮನದಾಳದಲ್ಲಿ ಮರೆಮಾಡಿಕೊಂಡು, ಮಕ್ಕಳ ಭವಿಷ್ಯಕ್ಕಾಗಿ ಹೊಸ ಜೀವನದ ದಾರಿಯನ್ನು ಆರಿಸಿಕೊಂಡರು.ಜ್ವರದಲ್ಲಿದ್ದ ಮಗುವನ್ನು ಎತ್ತಿಕೊಂಡು ತವರು ಮನೆ ಕಡೆ ಹೆಜ್ಜೆ ಹಾಕಿದರು.ಆ ದಿನದಿಂದ ಅವರ ಜೀವನದಲ್ಲಿ ಮತ್ತೊಂದು ಹೊಸ ಹೋರಾಟ ಪ್ರಾರಂಭವಾಯಿತು… ಆದರೆ ಆ ಹೋರಾಟದ ಹಿಂದಿದ್ದ ಶಕ್ತಿ — ತಾಯಿತನದಾಗಿತ್ತು. ತವರು ಮನೆಯಲ್ಲಿ ತಂದೆ ತಾಯಿ ಅತ್ಯಂತ ಆತ್ಮೀಯತೆಯಿಂದ ಬರಮಾಡಿಕೊಂಡು. ಅವರನ್ನು ಸಂತೈಸಿ ಅಳಿಯ ಬಂದ ಮೇಲೆ ಬೇರೆ ಮನೆಗೆ ಹೋಗಲು  ಬಿಡದೆ ತಮ್ಮ ಮನೆಯಲ್ಲಿಯೇ ಕೆಳಗಡೆ ಇರಲು ಅನು ಮಾಡಿಕೊಟ್ಟರು. ಅವರ ಮನೆಯ ಎದುರುಗಡೆ ವಾರದ ಮಲ್ಲಪ್ಪನವರ ಮನೆಯಿತ್ತು. ಅವರ ವಾಡೆಯ ಎದುರುಗಡೆ ಜಗ ಖಾಲಿ ಇತ್ತು. ಆ ಜಗವನ್ನು ಖರೀದಿ ಮಾಡಿ ಅಲ್ಲಿಯೇ ಮನೆ ಕಟ್ಟಲು ಪ್ರಾರಂಭಿಸಿದರು.ಆ ಮನೆಗೆ ಅತ್ಯಂತ ಪ್ರೀತಿಯಿಂದ *ಜಯನೀಕೆತನ* ಅಂತ ತಾಯಿಯವರ ಹೆಸರಲ್ಲಿ ಗಂಡ ಚೆನ್ನಮಲ್ಲಪ್ಪನವರು ಮನೆ ಕಟ್ಟಿಸಿದರು. ಇಪ್ಪತ್ತೆರಡು ಕೋಣೆಗಳನ್ನು ಹೊಂದಿರುವ ಭವ್ಯವಾದ ಮನೆ…. ಅರಮನೆಯಂತೆ ವಿಶಾಲವಾಗಿ ಕಟ್ಟಿದರು. ದೂರದಿಂದ  ನೋಡಿದವರಿಗೆ ಅದು ಸಾಮಾನ್ಯ ಮನೆ ಅಲ್ಲ, ಒಂದು ದೊಡ್ಡ ಸಂಸ್ಕೃತಿಯ ಸಂಕೇತದಂತೆ ಕಾಣುತ್ತಿತ್ತು.ಮನೆಯ ಒಳಗೆ ಕಾಲಿಟ್ಟ ತಕ್ಷಣ ದೊಡ್ಡ ವಿಶಾಲವಾದ ಶಿವಯೋಗಿ ಸಿದ್ದರಾಮನ ಭಾವಚಿತ್ರದ ದರ್ಶನ ಮಾಡಿ ಒಳಗೆ ಹೋಗಬೇಕಾಗುತಿತ್ತು….._ಸಿದ್ದರಾಮನ ಭಾವ ಚಿತ್ರ ಒಳಗೆ ಹೋದರೆ ವಿಶಾಲವಾದ ಅಂಗಳ ಕಣ್ಣಿಗೆ ಬೀಳುತ್ತಿತ್ತು . ಮನೆಯಲ್ಲಿ ಚೆನ್ನಾಗಿ ಬೆಳಕು ಗಾಳಿ ಆಡಲೆಂದು ಮಧ್ಯದಲ್ಲಿ ತೆರೆದ ಅಂಗಳವಿತ್ತು.ಮನೆಯ ವಿವಿಧ ದಿಕ್ಕುಗಳಿಗೆ ಕೊಣೆಗಳು. ಪ್ರತಿಯೊಂದು ಕೋಣೆಯೂ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿತ್ತು—ಕೆಲವು ವಿಶ್ರಾಂತಿಗಾಗಿ, ಕೆಲವು ಅತಿಥಿಗಳಿಗಾಗಿ, ಇನ್ನೊಂದು ದೇವರ ಮನೆಗಾಗಿ ಮೀಸಲಿದ್ದರೆ ಒಂದು ದೊಡ್ಡ ಅಡಿಗೆಯ ಮನೆ  ಇನ್ನೊಂದು ಚಿಕ್ಕ ಅಡಿಗೆ ಮನೆ ಇತ್ತು .ಇನ್ನೊಂದು ಕಾಳುಗಳ ಸಂಗ್ರಹಣೆ ಮಾಡುವ ಕೋಣೆ, ಊಟದ ಮನೆ ಇನ್ನೊಂದು ಮನೆಯ ವಸ್ತ ಒಡವೆಗಳನ್ನು  ಕಾಗದ ಪತ್ರಗಳನ್ನು ಬಂಗಾರ ಬೆಳ್ಳಿಯ ಸಾಮಗ್ರಿಗಳನ್ನು ಇಡುವ ಟ್ರೆಝರಿ ಕೋಣೆ ಬೇರೆಯಾಗಿತ್ತು.  ಒಂದು ವಿಶಾಲವಾದ ಕೋಣೆ ಬಡ್ಡಿ ವ್ಯವಹಾರದಲ್ಲಿ ಅಡವಿ ಇಟ್ಟುಕೊಂಡ ಸಾಮಗ್ರಿಗಳದ್ದು.(ಈ ಕೋಣೆ ತಾಯಿಯವರಿಗೆ ಇಷ್ಟವಾಗುತ್ತಿರಲಿಲ್ಲ ಏಕೆಂದರೆ ಜನರು ಅನಿವಾರ್ಯತೆಯಲ್ಲಿ ತಂದಿಡುವ ಸಾಮಗ್ರಿಗಳನ್ನು ನೋಡಿದರೆ ಅವರಿಗೆ ಬಹಳ ಕಳಗಳಾಗುತ್ತಿತ್ತು) ಹಾಗೇ ನೆಲಮನೆಯಲ್ಲಿ ಸುಮಾರು  14 ಮುನಿಮರು(ಕಾರಭಾರಿಗಳು )ಕುಳಿತುಕೊಂಡು ಇಡೀ ಆಸ್ತಿಯ ವಹಿವಾಟದ ಲೆಕ್ಕಾಚಾರವನ್ನು ಇಡಲು ಬರುತ್ತಿದ್ದರು .ಅವರಿಗಾಗಿ ಕೆಳಮನೆಯಲ್ಲಿ ಒಂದು ದೊಡ್ಡ ಮನೆ ಕಟ್ಟಲಾಗಿತ್ತು. ಅದರ ಮೇಲ್ಗಡೆ ಇನ್ನೊಂದು ರೂಮು ಹೊರಗಡೆಯಿಂದ ಬಂದು ಹೋಗುವರಿಗಾಗಿ ಆಫೀಸ್ ರೂಮ್ ಅನ್ನು ಮಾಡಲಾಗಿತ್ತು.ಮೊದಲನೇ ಅಂತಸ್ತಿನ ಕೋಣೆಗಳೆಲ್ಲ ಮಕ್ಕಳು- ಸೊಸೆಯಂದಿರಗಾಗಿ ತಮಗಾಗಿ ಮೀಸಲಿದ್ದವು .ಅಲ್ಲಿ ಒಂದು ದೊಡ್ಡ ಹಾಲ್ ಕಟ್ಟಲಾಗಿತ್ತು. ಕೆಳಗಡೆ ಒಂದು ಕೂಡಾ ದೊಡ್ಡ ಹಾಲ್   ಇತ್ತು……ಮನೆಗೆ ಬಂದು ಹೋಗುವ ಅತಿಥಿಗಳಾಗಿ … ಸಂಪತ್ ಭರಿತವಾದ ಮನೆ……..!! ಜಯದೇವ ತಾಯಿಯವರ ವಾಡೆ ಮೊದಲನೇ ಅಂತಸ್ತಿಗೆ ಹೋದರೆ ಎದುರುಗಡೆ ಜಯದೇವಿ ತಾಯಿಯವರ ಕೋಣೆ, ಎಡ ಭಾಗಕ್ಕೆ ಚಿಕ್ಕದೊಂದು ಹೂವೂ ತೋಟವನ್ನು ನಿರ್ಮಿಸಿಕೊಂಡಿದ್ದರು. ಅದಕ್ಕಾಗಿ  ಗಾಳಿ ಬೆಳಕು ಆಡಲೆಂದು ಮೇಲೆ ಸ್ಥಳ ಬಿಟ್ಟಿದ್ದರು. ಸುಂದರ ಚಿಕ್ಕ ತೋಟದಲಿ‌ ಹಸಿರು ಗಿಡಗಳು, ಬಣ್ಣ ಬಣ್ಣದ ಹೂಗಳು ಅವುಗಳಲ್ಲಿ ಮುಖ್ಯವಾಗಿ ಟ್ಯೂಬ್ ರೊಜ ಅಂದರೆ ನಿಶಿಗಂಧ ಹೂಗಳು ಬಹಳ ಪ್ರಿಯವಾದ ಹೂಗಳು ತಾಯಿಯವರಿಗೆ … ಇನ್ನೂ ‘ರಾತ‌ರಾಣಿ’ಹೂವುಗಳು ‘..ರಾತ್ರಿ ಸುಗಂಧ ಸುಸೂವ ಗಿಡಗಳಿದ್ದವು. ರಾತ್ರಿ ಪರಿಮಳವು  ಗಾಳಿಯಲ್ಲಿ ಹರಡಿ  ಮನೆಯ ವಾತಾವರಣವನ್ನು ಇನ್ನಷ್ಟು ಮನಮೋಹರ ವಾಗಿಸುತ್ತಿತ್ತು. ‘ಜಯನಿಕೇತನವು’  ಕೇವಲ ಸುಂದರ ಕಟ್ಟಡ ಮಾತ್ರವಲ್ಲ;ಅದು ವೈಭವ, ಸಂಸ್ಕೃತಿ ಮತ್ತು ಆತಿಥ್ಯವನ್ನು ಹೊತ್ತು ನಿಂತಿರುವ ಒಂದು ಜೀವಂತ ಅರಮನೆ ಎಂಬ ಭಾವನೆಯನ್ನು ಮೂಡಿಸುತ್ತಿತ್ತು.*ಜಯನಿಕೇತನ್*ಒಂದು ನಂದನ ವನದಂತೆ ರಾರಾಜಿಸಲಾರಂಭಿಸಿತ್ತು. ಜಯದೇವಿ ತಾಯಿಯವರು ಬಳಸುತ್ತಿದ್ದ ಕನ್ನ ಹಿರಿಯ ಮಗಳು ಮತ್ತು ತಂಗಿಯಂದಿರೇಲ್ಲ ಸೇರಿ ಶಾಲೆಗೆ ಹೋಗಿ ಬರುತ್ತಿದ್ದರು. ಹಿರಿಯ ಮಗಳು ಶಶಿಕಲಾ ತುಂಬಾ ಸುಂದರ ಹಾಗೂ ಜಾಣ ತಾಯಿಯಂತೆ ನಿರ್ಗಳವಾಗಿ ಹಾಡುವ ಹಾಗೂ ಭಾಷಣ ಮಾಡುತ್ತಿದ್ದರು. ಜಯದೇವಿ ತಾಯಿಯವರು ಬಾಲ ಸಿದ್ದರಾಮ ಅಕ್ಕಮಹಾದೇವಿ ಮುಂತಾದ ಶರಣರ ನಾಟಕಗಳನ್ನು ತಾವೇ ಬರೆದು ಮಕ್ಕಳ ಕೈಯಲ್ಲಿ ನಾಡಹಬ್ಬದಲ್ಲಿ ನಟನೆ ಮಾಡಿಸುತ್ತಿದ್ದರು ಮುಖ್ಯ ಪಾತ್ರದಲ್ಲಿ ಮಗಳು ಶಶಿಕಲಾ ಭಾಗವಹಿಸುತಿದ್ದರು. ಸಿದ್ದರಾಮನು ಮಲ್ಲಯ್ಯ ನೀನು ಎಲ್ಲಿ ಅಡಗಿದಿಯಾ ಎಂದು ಪರಿಪರಿಯಾಗಿ ಹಂಬಲಿಸಿ….ನಟನೆ ಮಾಡುತ್ತಿದ್ದ ದೃಶ್ಯವನ್ನು ನೋಡಿ ಧಾರಾಕಾರವಾಗಿ ತಾಯಿಯವರ ಕಣ್ಣೀರು ಹರಿಯಲಾರಂಭಿಸುತ್ತಿತ್ತು. ಭಾವುಕರಾಗುತ್ತಿದ್ದರು. ಅಕ್ಕನ ಪಾತ್ರದಲ್ಲಿ ಮಗಳು……. “ಅಳಿಸಂಕುಲವೇ ಮಾಮರವೇ ನೀವು ಕಣ್ಣಂಡಿರಾ ಎನ್ನ ಚೆನ್ನಮಲ್ಲಿಕಾರ್ಜುನನ್ನು ನೀವು ಕಂಡಿರಾ” ಅಂತ ಅತ್ಯಂತ ಭಾವಕಳಾಗಿ ಮಗಳು ನಟಿಸುತ್ತಿರುವದ ನೋಡಿ ಶರಣೆ ಅಕ್ಕನನ್ನು ನೆನೆದು ಹನಿಗಣ್ಣ ಆಗುತ್ತಿದ್ದರು.ಮಗಳನ್ನು ಅತ್ಯಂತ ಅಭಿಮಾನದಿಂದ ಎದೆಗಪ್ಪಿ ಕೊಳ್ಳುತ್ತಿದ್ದರು.ತಮ್ಮ ಸಂಸ್ಕಾಗಳ ಗೂಡಿನಲಿ ಮಕ್ಕಳಿಗೆ ಬೆಳಿಸಲಾರಂಭೀಸಿದರು. ಜಯದೇವಿ ತಾಯಿಯವರು ತಮ್ಮ ಬದುಕಿನ ಅನುಭವಗಳಿಂದ ಒಂದು ಮಹತ್ವದ ಸತ್ಯವನ್ನು ಅರಿತುಕೊಂಡಿದ್ದರು – ಸಮಾಜದ ಬದಲಾವಣೆ ಮನೆಯೊಳಗೇ ಆರಂಭವಾಗಬೇಕು ಎಂದು. ಅದಕ್ಕಾಗಿಯೇ ಅವರು ತಮ್ಮ ಮಕ್ಕಳನ್ನು ಶರಣ ಸಂಸ್ಕೃತಿಯ ಮೌಲ್ಯಗಳಲ್ಲಿ ಬೆಳೆಸಲು ಆರಂಭಿಸಿದರು. ಮನೆಯೊಳಗೆ ಒಮ್ಮೆ ಇದ್ದ ಮೂಢನಂಬಿಕೆಗಳು, ಅನಾವಶ್ಯಕ ಆಚರಣೆಗಳು ನಿಧಾನವಾಗಿ ಕಣ್ಮರೆಯಾಗಲು ಆರಂಭಿಸಿದವು. ಜಯದೇವಿ ತಾಯಿಯವರು ಯಾವ  ಮಡಿ ಮೈಲಿಗೆಯನ್ನು ಒಪ್ಪುತ್ತಿರಲಿಲ್ಲ…. ಜಾತಿ ಧರ್ಮ ನೀಚ ಸಂಕೋಲನದಿಂದ ಹೊರಗಿದ್ದರು.“ಮನುಷ್ಯನಿಗೆ ಮಾನವೀಯತೆಯೇ ದೊಡ್ಡ ಧರ್ಮ” ಎಂದು ತಾಯಿ ಮಕ್ಕಳಿಗೆ ಹೇಳುತ್ತಿದ್ದರು. ಹೆಣ್ಣು ಗಂಡೆಂದು  ದೇವರು ಭೇಧ ತೋರಲಾರ ಎನ್ನುತ್ತಿದ್ದರು. ಮುಟ್ಟಾದರೆ ಹೆಣ್ಣನ್ನು ಕೀಳಾಗಿ ನೋಡುವುದು ಖಂಡಿಸುತ್ತಿದ್ದರು ಏಕೆಂದರೆ ತಾಯಿ ಜಗದಂಬೆಯು ಕೂಡ ಹೆಣ್ಣಲ್ಲವೇ ಅಂತ ಕೇಳುತ್ತಿದ್ದರು. ಅದಕ್ಕೆ ದೇವರನ್ನು ಆ ಸಮಯದಲ್ಲಿ  ಯಾಕೆ ಮುಟ್ಟಬಾರದು  ಅನ್ನುವ ಪ್ರಶ್ನೆ ಅವರದಾಗಿತ್ತು…!!??? ಅವರ ಮಾತುಗಳಲ್ಲಿ ಕೇವಲ ಉಪದೇಶವಿರಲಿಲ್ಲ; ಬದುಕಿನಲ್ಲಿ ಅವರು ಅದನ್ನು ಅನುಸರಿಸುತ್ತಿದ್ದರು. ಮಕ್ಕಳು ಏನನ್ನಾದರೂ ಪ್ರಶ್ನಿಸಿದಾಗ,“ಹೀಗೆ ಮಾಡಬೇಕು ಎಂದು ಹೇಳಿತಿದ್ದರು  ಅದರ ಒಳ ಅಡಕವಾದ ಅರ್ಥ ಏನು ಎಂದು ತಿಳಿದುಕೊಳ್ಳಿ  ಮೊದಲು ಎಂದು ಪ್ರೋತ್ಸಾಹಿಸುತ್ತಿದ್ದರು. ಹೀಗಾಗಿ ಅವರ ಮನೆ ನಿಧಾನವಾಗಿ ಜ್ಞಾನ, ಸಮಾನತೆ ಮತ್ತು ಪ್ರೀತಿ ತುಂಬಿದ ಶರಣ ಸಂಸ್ಕೃತಿಯ ಮನೆ ಆಗಿ ರೂಪುಗೊಂಡಿತು.ಅತ್ಯಂತ ಸಾಂಪ್ರದಾಯಸ್ತ ಮನೆಯಾದ ಲಿಗಾಡೆ ಮನೆತನದವರು ವೈಚಾರಿಕತೆಯ ಶರಣ ಆಚರಣೆ ಅತ್ತ ತಿರುಗಲಾರಂಭಿಸಿದರು. *ಮೂಢನಂಬಿಕೆಗಳು ಮನುಷ್ಯನ ಮನಸ್ಸನ್ನು ಬಂಧಿಸುತ್ತವೆ… ಶರಣರ ಮಾರ್ಗ ಮನುಷ್ಯನ ಮನಸ್ಸನ್ನು ಮುಕ್ತಗೊಳಿಸುತ್ತದೆ.”* ಆ ಮಾತುಗಳು ಮಕ್ಕಳ ಮನಸ್ಸಿನಲ್ಲಿ ಆಳವಾಗಿ ಬೇರುರರಾಲಂಭೀಸಿದವು.ಅವರು ಕೇವಲ  ಮಕ್ಕಳಿಗೆ ತಾಯಿಯಾಗಿರಲಿಲ್ಲ ಮಾನವೀಯತೆಯ ಮೌಲ್ಯಗಳನ್ನು ಅಳವಡಿಸಿಕೊಂಡ ಶರಣ ಸಂಸ್ಕೃತಿಯ ವಾರಸುದಾರರು ಆಗಿ ಬೆಳೆಯಲು ಆರಂಭಿಸಿದರು.ಹೀಗೆ, ಜಯದೇವಿ ತಾಯಿಯ ಮನೆಅದು ಸಮಾನತೆ, ಜ್ಞಾನ ಮತ್ತು ಮಾನವೀಯತೆಯನ್ನು ಬೆಳೆಸುವ ಒಂದು ಚಿಕ್ಕ ಸಮಾಜ ಆಗಿತ್ತು. ಇದಕ್ಕೆ ಉದಾಹರಣೆ ಎಂದರೆ ಜಯದೇವಿತಾಯಿಯವರ ಐದು ಅತ್ತೆಯಂದಿರು ಸಾಂಪ್ರದಾಯಸ್ಥರು …..ಪಡಸಾಲೆಯಲ್ಲಿ ನಿಂತು ಮಾತನಾಡಿದರೆ ,ಅಂಗಳದಲ್ಲಿ ನಿಂತು ಕುಂಕುಮವನ್ನು ಇಟ್ಟಿರೆ ಸಾವಿರ ಸಲ ಬೈದ  ಅತ್ತೆಯಂದರು ….ಮುಂದೆ ತಾಯಿಯವರನ್ನು ಸಭೆ ಸಮಾರಂಭಗಳಿಗೆ ಅತ್ಯಂತ ಆನಂದಭರಿತರಾಗಿ ಕಳುಹಿಸಿ ಕೊಡಲಾರಂಭಿಸಿದರು .ಗಂಡನ ಅನಾರೋಗ್ಯದಲ್ಲಿ ತಾಯಿಯವರಿಗೆ  ಸಮಾರಂಭಗಳಿಗೆ ಹೋಗಲು ಮನಸ್ಸಿಇಲ್ಲದಿದ್ದರು …. ಗಂಡ ತಮ್ಮ ಕಾರುಗಳನ್ನು ಕೊಟ್ಟು ಬೇರೆ ಊರುಗಳಿಗೆ ಹೋಗಿ ಭಾಷಣ ಮಾಡಿ ಬರಲು ಒತ್ತಾಯಿಸುತ್ತಿದ್ದರು. ” ಇಲ್ಲಿ ನನ್ನ ನೋಡಿಕೊಳ್ಳಲು ಅನೇಕ ಜನರಿದ್ದಾರೆ…… ಅಲ್ಲಿ ನೀನು ಇಡೀ ಸಮಾಜಕ್ಕೆ ಬೇಕಾಗಿದ್ದೀಯಾ ನೀನು ಹೋಗು “ಅನ್ನುವಷ್ಟರ ಮಟ್ಟಿಗೆ ಅವರು ವೈಶಾಲ್ಯ ಮನೋಭಾವನೆಯನ್ನು ಹೊಂದಿದ್ದರು. ಚೆನ್ನ ಮಲ್ಲಪ್ಪನವರು ಕಾಯಿಲೆಯಲ್ಲಿ ಬಳಲಾರಂಭಿಸಿದ ವೇದನೆಯ ದಿನಗಳು ಅವು….  ವೈದ್ಯರಿಗೆ ತೋರಿಸಲು ದೊಡ್ಡ ದೊಡ್ಡ ಊರುಗಳಿಗೆ ಕಲ್ಕತ್ತಾ ಬೊಂಬೆ  ಊರುಗಳಿಗೆ ಹೋಗುವಾಗ ಇಡೀ ರೈಲ್ವೆ ಒಂದು ಬಂಡಿಯಲ್ಲಿ ಅವರಿಗಾಗಿ ಮೀಸಲಾಗಿಡಲಾಗುತ್ತಿತ್ತು. ಹಾಗೇ ಊರುಗಳಿಗೆ ಹೋದಲ್ಲೆಲ್ಲ ಹೆಂಡತಿಗೆ‌ ಅಪ್ಪಟ ರೇಷ್ಮೆ ಸೀರೆ ಹಾಗೂ ವಜ್ರಗಳ ‌ಆಭರಣಗಳನ್ನು ತಂದು

Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಸಾವಿಲ್ಲದ ಶರಣರು ಮಾಲಿಕೆ”ಕ್ರಾಂತಿಕಾರ ಸಂತ ಶ್ರೇಷ್ಠ ತತ್ವ ಪದಕಾರ ಶ್ರೀ ತಿಂಥಣಿ ಮೌನೇಶ್ವರರು”ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ

ಶರಣರ ಸಂಗಾತಿ ಸಾವಿಲ್ಲದ ಶರಣರು ಮಾಲಿಕೆ “ಕ್ರಾಂತಿಕಾರ ಸಂತ ಶ್ರೇಷ್ಠ ತತ್ವ ಪದಕಾರ ಶ್ರೀ ತಿಂಥಣಿ ಮೌನೇಶ್ವರರು” ಕರ್ನಾಟಕವು ಹಲವು ಶರಣರ ಸಂತರ ದಾರ್ಶನಿಕರ ನೆಲೆಬೀಡು.  ಸಂಪ್ರದಾಯಸ್ಥ ವಿಶ್ವ ಕರ್ಮರ  ಕುಟುಂಬದಲ್ಲಿ ಜನಿಸಿ ಅತ್ಯಂತ ವೈಚಾರಿಕತೆಯ ವಚನಗಳನ್ನು ರಚಿಸಿ ಸಾಮಾಜಿಕ ಧಾರ್ಮಿಕ ಅಂಕು ಡೊಂಕುಗಳನ್ನು ತಿದ್ದಿ ಟೀಕಿಸುವ ವಿಡಂಬಿಸುವ ತನ್ನ ಹುಟ್ಟು ಕುಲದ ಜನರನ್ನೇ ಟೀಕಿಸಿ ಎಚ್ಚರಿಸುವ ದಿಟ್ಟ ಶರಣ ಸಂಸ್ಕೃತಿಯ ವಾರಸುದಾರ ತಿಂಥಣಿ ಮೌನೇಶ್ವರ ಅಥವಾ ಮೌನಪ್ಪ ಮೌನೋದ್ದಿನ ಎಂಬ ಬೇರೆ ಬೇರೆ ಸಮುದಾಯದ ಪ್ರೀತಿಗೆ ಭಕ್ತಿಗೆ ಪಾತ್ರರಾದವರು ಮೌನೇಶ್ವರರು. ಪೌರಾಣಿಕ ಹಿನ್ನೆಲೆ ಅಂದಿನ ಗುಲಬರ್ಗಾ ಜಿಲ್ಲೆಯ ಇವತ್ತಿನ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ದೇವರಗೋನಾಳ  ಎಂಬ ಗ್ರಾಮದ ಪಂಚಾಳ ಅಥವಾ ವಿಶ್ವಕರ್ಮ ಕುಲದಂಪತಿಗಳಾದ ಶೇಷಪ್ಪ ಆಚಾರ್ಯ ಮತ್ತು ಶೇಷಮ್ಮರೆಂಬ  (ಇವರಿಗೆ ಹಾವಪ್ಪ ಮತ್ತು ಹಾವಕ್ಕ ಎಂದು ಕರೆಯಲಾಗುತ್ತಿತ್ತು) ದಂಪತಿಗಳಿದ್ದರು. ಅವರಿಗೆ ಬಹಳಕಾಲ ಮಕ್ಕಳಾಗಿರಲಿಲ್ಲ. ಶೀಲೆ ಶೇಷಮ್ಮಳು ಆ ಊರಿನ ಆದಿಲಿಂಗೇಶ್ವರ ದೈವಕ್ಕೆ 12 ವರ್ಷಗಳ ಕಾಲ ದಿನನಿತ್ಯವೂ ಬೆಳಗ್ಗೆ ಪೂಜೆಗೈದು ಬರುತ್ತಿದ್ದಳು. ಕೊನೆಗೊಂದುದಿನ ಗಂಡನಿಗೆ ಸಂಶಯ ಬಂದು ಅವಳನ್ನು ಹಿಂಬಾಲಿಸಿದಾಗ ಅವನಿಗೆ ದೃಗ್ಗೋಚರವೇ ಎದುರಾಯಿತು. ಏನೆಂದರೆ ಶೇಷಮ್ಮಳು ಆದಿಲಿಂಗೇಶ್ವರನಿಗೆ ಎಂದಿನಂತೆ ಪೂಜೆಗೈದು ‘ತಂದೆ ಹನ್ನೆರಡು ವರ್ಷಗಳ ಕಾಲ ನಿನ್ನ ಪೂಜೆಗೈದಿರುವೆ ಈಗಲಾದರೂ ಮಕ್ಕಳ ಭಾಗ್ಯವನೀತ್ತು ಸಲಹು ತಂದೆ’ ಎಂದಾಗ ಸಾಕ್ಷಾತ್ ಶಿವನೇ ಪ್ರತ್ಯಕ್ಷವಾಗಿ “ಮಗಳೇ ಶೇಷಮ್ಮ ನೀನು ನನ್ನ ಪನ್ನಂಗಾಭರಣವಾದ್ದರಿಂದ ಆ ಬ್ರಹ್ಮನು ನಿನ್ನ ದೈವದಲ್ಲಿ ಸೃಷ್ಟಿ ಬೆಳೆಸುವ ಸಂತಾನ ಭಾಗ್ಯ ಫಲವನ್ನಿಡುವ ಸಾಹಸ ಮಾಡಲಿಲ್ಲ. ಆದಕಾರಣ ನಾನೇ ನಿನ್ನ ಮಗನಾಗಿ ನಾಳೆಯ ಉಷಾ ಕಾಲದಲ್ಲಿ ನಿನ್ನ ಮಗ್ಗುಲಲ್ಲಿ ಮಲಗಿರುವೆ” ಎಂದು ಹೇಳಿ ಪರಮಾತ್ಮನು ಅಂತರ್ಗತನಾಗುತ್ತಾನೆ. ಇದನ್ನೆಲ್ಲ ಪ್ರತ್ಯಕ್ಷವಾಗಿ ದೇಗುಲದ ಒಂದು ಕಂಬದ ಮರೆಯಲ್ಲಿ ನಿಂತು  ನೋಡುತ್ತಿದ್ದ ಶೇಷಮ್ಮಳ ಗಂಡ ಶೇಷಪ್ಪನ ಸಂಶಯವೆಲ್ಲವೂ ದೂರವಾಗಿ ಭಕ್ತಿಯ ಮಹಾಪೂರವು ಅವನ ಮನದಲ್ಲಿ ನೆಲೆಯಾಗುತ್ತದೆ ಎಂಬ ಐತಿಹ್ಯ ಪೌರಾಣಿಕ ಕಥೆಗಳಿಂದ ಮೌನೇಶ್ವರನ ಚಿತ್ರಣ ವ್ಯಕ್ತವಾಗಿದೆ. ನಂತರ ಪರಶಿವನೇ ಅಯೋನಿಜನಾಗಿ ಮೌನೇಶ್ವರರ ಅವತಾರದಿ ಚೆಲುವಿನ, ಚೆಂದದ, ಮುದ್ದಾದ ಮಗುವಿನ ರೂಪದಲ್ಲಿ ವರಪ್ರಸಾದವಾಗಿ ಧರೆಗಿಳಿದು ಬರುತ್ತಾನೆ ಎನ್ನುವ ಐತಿಹ್ಯವೂ ಇದೆ. ಜಗದ್ಗುರು ಶ್ರೀ ಮೌನೇಶ್ವರರು ಬರೀ ಮಹಿಮಾಪುರುಷರಲ್ಲದೆ ಕಾಲಜ್ಞಾನಿಗಳು, ವಚನಕಾರರು, ಸಮನ್ವತಾವಾದಿಗಳು, ಮಹಾನ್ ಮಾನವತಾವಾದಿಗಳೂ ಆಗಿದ್ದಾರೆ.  16ನೇ ಶತಮಾನದಲ್ಲಿ ಬರುವ ಶರಣರ, ವಚನಕಾರರ, ಸಂತರ ಸಾಲಿನಲ್ಲಿ ಮೌನೇಶ್ವರರು ಪ್ರಮುಖ ವಚನಕಾರರಾಗಿ ಕಂಡುಬರುತ್ತಾರೆ.  ಮೌನೇಶ್ವರರು ಒಟ್ಟು 796ಕ್ಕೂ ಅಧಿಕ ವಚನಗಳನ್ನು ಬರೆದಿದ್ದಾರೆ. ಮೌನೇಶ್ವರರು ತಮ್ಮ ಎಲ್ಲ ವಚನಗಳಲ್ಲಿ 12ನೇ ಶತಮಾನದ ಜಗಜ್ಯೋತಿ ಬಸವಣ್ಣನವರ ಹೆಸರನ್ನು ಅಂಕಿತನಾಮವಾಗಿ ಬರೆದಿರುವುದನ್ನು ಕಾಣಬಹುದು. *ಭಾವೈಕ್ಯತೆಯ ಸಂತ* ಮೌನೇಶ್ವರರು ಹಿಂದೂ ಮುಸಲ್ಮಾನ ಧರ್ಮದ ಭಾವೈಕ್ಯತಾ ಸೂಚಕವಾಗಿ ಹೀಗೆ ಹೇಳಿದ್ದಾರೆ: “ಹಿಂದೂ ತುರುಕರಿಗೆ ಚಂದ್ರಮನೊಬ್ಬನೆ ನಿಂದಿಸಿದವನೇ ಅಧಮನು” ಎಂದು ತಮ್ಮ ವಚನವೊಂದರಲ್ಲಿ ಹೇಳಿದ್ದಾರೆ. ಹಿಂದೂ-ಮುಸ್ಲಿಂ ಸಾಮರಸ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ತಿಂಥಿಣಿಯ ಮೌನೇಶ್ವರರು ತಮ್ಮ ಸರಳ ಸಜ್ಜನಿಕೆಯ ಆಚಾರ ವಿಚಾರಗಳಿಂದಲೇ ಎಲ್ಲರನ್ನೂ ಆಕರ್ಷಿಸಿದ್ದರು. ಇವರು ಲಕ್ಷ್ಮೇಶ್ವರ, ಉಳವಿ, ಕಲ್ಯಾಣ, ವಿಜಯಪುರ, ಶಾಹಪುರ, ಸುರಪುರ, ದೇವದುರ್ಗ, ಲಿಂಗನಬಂಡಿ, ವರವಿ, ಛಬ್ಬಿ, ರಾಚೋಟಿ, ಶಿರಸಂಗಿ, ತಿರುಪತಿ, ಕಾಶಿ, ಮುಂತಾದೆಡೆ ತಿರುಗಾಡಿ, ಸಾಮಾಜಿಕ ಸುಧಾರಣೆಯನ್ನು  ಮೆರೆದವರೆಂಬುದು ಇತಿಹಾಸ.  ವರವಿ ಮತ್ತು ತಿಂಥಿಣಿ ಸ್ಥಳಗಳಲ್ಲಿ ಇವರ ಹೆಸರಿನ ದೇವಾಲಯಗಳಿವೆ. ಬಿಜಾಪುರದ ಸುತ್ತಮುತ್ತ ಅನೇಕ ಗುಡಿಗಳಿವೆ. ಇವು ಹಿಂದೂ-ಮುಸ್ಲಿಂ ಬೆರೆತ ಶೈಲಿಗಳಲ್ಲಿವೆ. ಮೌನೇಶ್ವರರು ವಿಶ್ವಕರ್ಮ ಸಮಾಜದಿಂದ ಬಂದವರು. ದಕ್ಷಿಣ ಭಾರತದಲ್ಲಿ ಹಿಂದೂ-ಮುಸ್ಲಿಂ ಐಕ್ಯತೆಯನ್ನು ಜೀವನದುದ್ದಕ್ಕೂ ಸಾರಿದವರು ಮೌನೇಶ್ವರರೇ. ಅವರ ಒಂದು ಪದ್ಯ ಹೀಗಿದೆ- ‘|| ಓಂ ಏಕಲಾಖ್ ಐಂಸಿ ಹಜಾರ್ ಪಾಂಚೋ ಪೀರ್ ಪೈಗಂಬರ್ ಮೌನಾಧೀನ್ ಜಿತಾಪೀರ್ ಪೈಗಂಬರ್ ಮಾಧೀದೀ ಕಾಶೀಶೀಪತಿ ಗಂಗಾಧರ ಹರ ಹರ ಮಹಾದೇವ||’ ಮಹಮ್ಮದ್ ಪೈಗಂಬರ ಮತ್ತು ಗಂಗಾಧರ ಒಬ್ಬರೇ ಎಂದು ಮೌನೇಶ್ವರರು ಇದರಲ್ಲಿ ಸಾರಿದ್ದಾರೆ. ಈ ಮಾತಿನ ಅಖಂಡಾರ್ಥ ಮೌನೇಶ್ವರರ ಪದ್ಯದಲ್ಲಿದೆ. ಓಂ ಮತ್ತು ಅಲ್ಲಾ ಒಂದೇ ಎಂಬ ಅದ್ವಯಭಾವದ ಸಾಂಸ್ಕೃತಿಕ ಸಿದ್ಧಿಯನ್ನು ಮೊಳಗಿಸಿದ ಮಹಾಮಾನವತಾವಾದಿ, ಸಾಮಾಜಿಕ ಸಂತ ತಿಂಥಿಣಿ ಮೋನಪ್ಪಯ್ಯ! ಜನನ ತಿಂಥಿಣಿ ಮೌನೇಶ್ವರ ಎಂಬ ಹೆಸರಿನಲ್ಲಿ ಪ್ರಸಿದ್ಧಿಪಡೆದ ಇವರು ‘ಬಸವಣ್ಣ’ ಎಂಬ ಅಂಕಿತದಲ್ಲಿ ಹಲವಾರು ವಚನಗಳನ್ನು ಬರೆದಿದ್ದಾರೆ, ಹಂಪೆಯ ಎಮ್ಮೆ ಬಸವಣ್ಣನನ್ನು (ಕ್ರಿ.ಶ. 1510-1570) ವಚನದಲ್ಲಿ ನೆನೆದಿದ್ದಾರೆ. ವಿಜಯಪುರ ಜಿಲ್ಲೆಯ ಗೋಲಗೇರಿ ಎಂಬಲ್ಲಿದ್ದ 16ನೇ ಶತಮಾನದ ಕುರುಬಗೊಲ್ಲಾಳ ನನ್ನು ಮತ್ತೊಂದು ವಚನದಲ್ಲಿ ಸ್ಮರಿಸಿದ್ದಾರೆ. ಇವರೊಂದು ವಚನದಲ್ಲಿ, ಬಿಜಾಪುರದ ಮೊದಲನೆಯ ಆದಿಲ್​ಶಾಹನಿಗೆ (ಕ್ರಿ.ಶ. 1557-1580) ಪಟ್ಟಕಟ್ಟಿದ ಪ್ರಸಂಗವನ್ನು ಉಲ್ಲೇಖಿಸಿದ್ದಾರೆ. ಕ್ರಿ.ಶ. 1612ರಲ್ಲಿ ಬಿಜಾಪುರದ ಸುಲ್ತಾನರ ಸುಬೇದಾರ್ ಆಗಿದ್ದ ಅಂಕುಶ ಖಾನನು ಬಾವಿಯೊಂದನ್ನು ಕಟ್ಟಿಸಲು ಯತ್ನಿಸುತ್ತಾನಷ್ಟೆ. ಆದರೆ ಅಲ್ಲಿ ಜಲ ಬರುವುದಿಲ್ಲ. ಆಗ ಮೌನೇಶ್ವರರು ಬಾವಿಗಿಳಿದು ಜಲ ತಂದುದರ ವಿವರಣೆ ಅವರ ವಚನವೊಂದರಲ್ಲಿ ಬರುತ್ತದೆ. ಇವೆಲ್ಲದರ ಆಧಾರದ ಮೇಲೆ ಇವರು 16ನೇ ಶತಮಾನದ ಮಧ್ಯಭಾಗದಿಂದ 17ನೇ ಶತಮಾನದ ಉತ್ತರಾರ್ಧದವರೆಗೆ ಇದ್ದರೆಂಬುದು ರುಜುವಾತು ಆಗುತ್ತದೆ! *ಜೀವನ ಮತ್ತು ಬಾಲ್ಯ ಮೌನೇಶ್ವರರ ತಂದೆ-ತಾಯಿ ಶೇಷಪ್ಪ (ಹಾವಪ್ಪ), ಶೇಷಕ್ಕ (ಹಾವಕ್ಕ) ಎಂಬ ಉಲ್ಲೇಖ ಐತಿಹ್ಯವಾಗಿ ದೊರಕುತ್ತದೆ. ಜಾನಪದದಲ್ಲೂ ಮೌನೇಶ್ವರರ ಬಾಲ್ಯದ ವಿವರಗಳು ತುಂಬಾ ಕಡಿಮೆ. ಅವರ ಬಗ್ಗೆ    ಕಥೆ ಐತಿಹ್ಯ ಏನೇ ಇದ್ದರೂ  ಮೌನೇಶ್ವರರು- ‘ಇಂದ್ರಿ ಸೂತಕದಿಂದ ಅಂದೆ ನಾನು ಜನಿಸಿದೆನು /ಇಂದು ನಾನು ಕೊಳೆಯಲೆ ಪ್ರಭುದೇವ ನಾ/ ಬಂದಂಥ ಭವಕೆ ಮಿತಿಯಿಲ್ಲ ಪ್ರಭುದೇವರ ನಾ/ ಹಿಂದಿಗಿಂತ ಕಡಿಮೆಯಯ್ಯ ಬಸವಣ್ಣ’/ -ಎಂದು ವಚನವೊಂದರಲ್ಲಿ ಹೇಳಿಕೊಂಡಿದ್ದಾರೆ.  ಜಾನಪದ-ಪುರಾಣ ಮುಂತಾದುವು ಅಯೋನಿಜರೆಂದರೆ, ಮೌನೇಶ್ವರರ ವಚನವು ‘ಯೋನಿಜ’ರೆಂದು ಸಾರುತ್ತದೆ. ಎಲ್ಲ ಶರಣರು ಹೊಲೆಯೊಳಗಿಂದಲೇ ಜನ್ಮಿಸಿದರೆಂದು ಹೇಳುವ ಮೌನೇಶ್ವರರು ‘ಕುಲವನೆಲ್ಲಿ ಅರಸುವುದು?’ ಎಂಬ ಪ್ರಶ್ನೆಯನ್ನು ನಮಗೆ ಹಾಕುತ್ತಾರೆ ಶರಣರೇ ನಿಜವಾದ ತಾಯ್ತಂದೆಗಳೆಂಬುದು ಇಲ್ಲಿ ಪ್ರಸಿದ್ಧಾರ್ಥ. ಸಾಹಿತ್ಯ ಸಂಪದ ಮೌನೇಶ್ವರರು ವಚನವೊಂದರಲ್ಲಿ ತನ್ನ ಗುರುಮನೆ ಗೋಗಿನ ಎಂದೂ, ಗುಂಡಿ ಬಸವಯ್ಯ ತಮ್ಮ ಗುರುವೆಂದೂ ಹೇಳಿಕೊಂಡಿದ್ದಾರೆ. ಇಲ್ಲಿಯ ಸೂಚಿತಾರ್ಥಗಳನ್ನು ಗ್ರಹಿಸಿದರೆ ಮೌನೇಶ್ವರರು ಕೆಲವು ಗುರುಗಳ ಬಳಿ ಸಾಧನೆ ಮಾಡಿರಬೇಕು. ಗುರುವಿನ ಮಾರ್ಗದರ್ಶನ ಇಲ್ಲದೆ, ಯಾವೊಬ್ಬ ಶಿಷ್ಯನೂ ಸಾಧಕನಾಗಲಾರನಷ್ಟೆ. ಆದರೆ, ಅಲ್ಲಮಪ್ರಭುದೇವ ಮಾತ್ರ ಇದಕ್ಕೆ ಅಪವಾದ. ಮೌನೇಶ್ವರರು ಅನೇಕ ವಚನಗಳಲ್ಲಿ ಅಲ್ಲಮಪ್ರಭುವಿನ ಹೆಸರನ್ನು ಪದೇಪದೆ ಬಳಸುತ್ತಾರೆ. ಅಲ್ಲಮನು ಯಾವ ಮಾಯೆಗೂ ಸಿಗದೆ, ಎಲ್ಲರೊಳಗಿನ ಮಾಯೆಯನ್ನು ಕಿತ್ತೆಸೆದವನು. ಮೌನೇಶ್ವರರು ಇಂಥ ಅಲ್ಲಮನ ದಾರಿಯಲ್ಲಿ ನಡೆದಿದ್ದಾರೆ. ಒಂದಂತೂ ನಿಜ. ಮೌನೇಶ್ವರರು ಕಠೋರ ತಪಸ್ಸಾಧನೆ ಮಾಡಿ ಅಪೂರ್ವ ಸಿದ್ಧಿಗಳನ್ನು ಪಡೆದಿರಬೇಕು. ಅವುಗಳ ಮೂಲಕ ಪವಾಡಗಳನ್ನೂ ಮಾಡಿರಬೇಕು. ಈಗಲೂ ಜನರ ಬಾಯಲ್ಲಿ ಅವರ ಪವಾಡ, ಮಹಿಮೆಗಳು ರೂಢಿಯಲ್ಲಿವೆ. ಆ ಕಾಲದ ಜನರನ್ನೋ ಸುಲ್ತಾನರನ್ನೋ ಸುಬೇದಾರರನ್ನೋ ಪ್ರಭಾವ ಗೊಳಿಸಬೇಕಾದರೆ ಇಂಥ ಪವಾಡಗಳನ್ನು ಮಾಡಿಯೇ ಸೆಳೆಯಬೇಕಿತ್ತು. ಜನಹಿತಕಾರ್ಯಕ್ಕೆ ಇದೊಂದು ಪೂರ್ವ ಮೀಮಾಂಸೆಯೇ. ಮೌನೇಶ್ವರರಿಗೆ ಅಲೌಕಿಕ ಸಿದ್ಧಿಗಳಿದ್ದಂತೆ ಅಸಾಮಾನ್ಯ ಅನುಭಾವೀ ಜೀವನವೂ ಇತ್ತು. ಅವೆರಡು ಇವರಲ್ಲಿ ಹಾಳತವಾಗಿ ಸೇರಿದ್ದಕ್ಕೆ ಅವರ ಬರಹಗಳೇ ಸಾಕ್ಷಿ. *ಉಪನಯನ ವೈದಿಕ ಸಂಸ್ಕಾರ ಬಾಲ್ಯಾವಸ್ತೆಯಲ್ಲಿ ಜಗದ್ಗುರು ಮೌನೇಶ್ವರರಿಗೆ 8 ವರ್ಷ ತುಂಬಿದಾಗ ವಿಶ್ವಕರ್ಮ ಧರ್ಮದ ವೈದಿಕ ಪರಂಪರೆಯ ಅನುಸಾರ ಗಾಯತ್ರಿ ಮಂತ್ರೋಪದೇಶದೊಂದಿಗೆ ಉಪನಯನವಾಯಿತು. ಗಾಯತ್ರಿ ಮಂತ್ರೋಪದೇಶವಾಗಿ ಅದರ ರಹಸ್ಯಾರ್ಥಗಳು ದೃಗ್ಗೋಚರವಾದುವು. ನಂತರ ಮೌನೇಶ್ವರರು ಸುರಪುರದ ಗುರುಕುಲದಲ್ಲಿ ಶಿವಸ್ವಾಮಿ ಗುರುಗಳ ಬಳಿ 4 ವರ್ಷ, ಸಂಸ್ಕೃತ, ಉರ್ದು, ಕನ್ನಡ ಕಲಿತು ಹಲವಾರು ಶಾಸ್ತ್ರಗಳ ಪರಿಚಯ ಮಾಡಿಕೊಂಡರು. ಜತೆಗೆ ಸದಾನಂದ ಗುರುಗಳ ಸಂಪೂರ್ಣ ಅನುಗ್ರಹವೂ ಮೌನೇಶ್ವರರ ಮೇಲಿತ್ತು. ಈ ನಡುವೆ ಕಾಶೀಯಾತ್ರೆ ಮುಗಿಸಿಬಂದರು. ಆಂಧ್ರಪ್ರದೇಶದ ಕಡಪಾ ಜಿಲ್ಲೆಯ ರಾಚೋಟಿಗೆ ಹೋಗಿ ವೀರಭದ್ರದೇವರ ಆರಾಧನೆ ಮಾಡಿದ್ದು ವಿಶೇಷ. ನಂತರ ವರವಿ, ಲಿಂಗನಬಂಡಿಗಳಲ್ಲಿ ಅನೇಕ ಪವಾಡಗಳನ್ನು ಮಾಡಿದರೆಂದು ಪುರಾಣಗಳು ನಿರೂಪಿಸುತ್ತವೆ. ತಂದೆ-ತಾಯಿ ವೃದ್ಧರಾಗಿ ತೀರಿಕೊಂಡ ಮೇಲೆ ಮೌನೇಶ್ವರರು ದೇಶಸಂಚಾರ ಮಾಡುತ್ತ, ಎಲ್ಲ ಸಮುದಾಯದವರ ಕಷ್ಟ-ಕಾರ್ಪಣ್ಯ ನೀಗಿಸುತ್ತ ಸಮಾಜದ ಕೀಲಕಸ್ಥಾನದಲ್ಲಿ ಉಳಿದುಬಿಟ್ಟರು. *ಸಾಹಿತ್ಯ ಮೌನೇಶ್ವರರು ಶತಕಗಳನ್ನೂ ಕಾಲಜ್ಞಾನವನ್ನೂ ಬರೆದಿದ್ದಾರೆ. ದಂಡಕ, ಸುವ್ವಿಹಾಡು, ಜೋಗುಳಪದ, ಆರತಿಪದ, ಮೊಹರಂಗೀತೆ, ಕೋಲುಪದ, ಭಜನೆಹಾಡುಗಳನ್ನ್ನೂ ರಚಿಸಿದ್ದಾರೆ. ಇವರ ಪದಗಳಲ್ಲಿ ಉರ್ದು, ಪರ್ಷಿಯನ್ ಪದಗಳು ವಿಪುಲವಾಗಿವೆ. ಕನ್ನಡ, ಉರ್ದು ಕೂಡುನುಡಿಗಳಂತೂ ಬಹಳಷ್ಟಿವೆ- ಮೌನದೀನ ಪೀರ | ಸದ್ಗುರು ಜಿತಾ ಪೈಗಂಬರ ||ಪ|| ಹಿಂದೂ ಮುಸಲ್ಮೆ ಮನದ ಪ್ರಕಾರ/ ಬಲ್ಲಂಥ ಜ್ಞಾನಿಗೆ ನೀನೊಬ್ಬ ದೇವರ ಆಕಾರ ನಿರಾಕಾರ ಎರಡಕ್ಕೆ ನೀನೆ ಗಂಭೀರ/ ಶೇಕ್ ಸಯ್ಯದ ಮೊಗಲ ಪಠಾಣ ನಾಲ್ಕು ಅವತಾರ ತಾಳಿ ಮಾಡಿದಿ ಉದ್ಧಾರ ||2|| ಈ ಪದ್ಯವು ಮೌನೇಶ್ವರರ ರಚನೆಯ ಬಗೆಯನ್ನು ತಿಳಿಸುತ್ತದೆ. ಅವರು ಹಿಂದೂ-ಮುಸ್ಲಿಂ ಬಂಧುತ್ವವನ್ನು ಒಂದೆಡೆ ಸೇರಿಸಿದವರಷ್ಟೆ. ಹೀಗೆ ಭಾವೈಕ್ಯತೆ ಮತ್ತು ಮತೈಕ್ಯತೆಗಳ ಸಂಕೇತವಾಗಿ ಇವರು ಕಾಣಿಸಿಕೊಂಡರೆಂಬುದು ವಿಶೇಷ. ಮೌನೇಶ್ವರರು 17ನೇ ಶತಮಾನದ ಉತ್ತರ ಕರ್ನಾಟಕ ಭಾಷೆಯ ಸೊಗಡನ್ನು ಸಾಹಿತ್ಯದಲ್ಲಿ ಬಳಸಿಕೊಂಡರು. ಇವರ ಪದ್ಯಗಳಲ್ಲಿ ಉರ್ದುಭಾಷೆ, ಅಭಿವ್ಯಕ್ತಿಗೆ ಅನುಗುಣವಾಗಿ ಕಾಣಿಸಿಕೊಂಡಿದೆ. ಆಡುಮಾತಿನ ಪಲುಕು ಉದ್ದಕ್ಕೂ ಕಾಣಿಸುತ್ತದೆ. ಭಾಷೆಯ ದೃಷ್ಟಿಯಿಂದ ನೋಡಿದರೆ, ಎಷ್ಟೋ ಅಪಪ್ರಯೋಗಗಳು ಇವೆ. ಆದರೆ, ಮೌನೇಶ್ವರರು ಜನಸಾಮಾನ್ಯರಂತೆ ವಚನಗಳನ್ನು ಕಟ್ಟಿದ್ದಾರೆ. ಹಳ್ಳಿಗರು ಬಳಸುತ್ತಿದ್ದ ಹಾಡಿನ ಮಟ್ಟುಗಳ ಜಾಡುಹಿಡಿದು ಅನುಭವಗಳನ್ನು ಸಾರಿದ್ದಾರೆ. ಮೌನೇಶ್ವರರ ವಚನಗಳು ಬಹುತೇಕವಾಗಿ ಕನ್ನಡದ ಅಂಶಗಣಕ್ಕೆ ಹೆಚ್ಚು ಹೊಂದುತ್ತವೆ. ಇವು ಬರಹರೂಪದ ವಚನಗಳಲ್ಲ; ಅವರು ಹಾಡುತ್ತ, ಹೇಳುತ್ತ ಹೋದಂತೆ ಶಿಷ್ಯರು ಸಂಗ್ರಹಿಸಿ ಬರೆದಿಟ್ಟದ್ದೆಂದು ತೋರುತ್ತದೆ! ಮೌನೇಶ್ವರರು ತಮ್ಮ ಬಗೆಗೆ ಹೆಚ್ಚಿಗೇನೂ ಹೇಳಿಕೊಂಡಿಲ್ಲ. ತಾನು ಅಕ್ಕನಾಗಮ್ಮನ ಮಗ ಚೆನ್ನಬಸವಣ್ಣನ ಅವತಾರವೆಂದು ಮಾತ್ರ ವಚನಗಳಲ್ಲಿ ಹೇಳಿಕೊಂಡಿದ್ದಾರೆ. ತಮ್ಮ ಜನ್ಮ ಯಾವುದೋ ಮುಖ್ಯ ಉದ್ದೇಶಕ್ಕಾಗಿ ಆಗಿದೆಯೆಂದು ಅವರು ತಿಳಿದುಕೊಂಡಿದ್ದರು. ಆ ನಂಬುಗೆ ಅವರಲ್ಲಿ ಪ್ರಬಲವಾಗಿದ್ದುದು ಕಂಡುಬರುತ್ತದೆ. ಅವರ ಮಾತಿದು. ಅಕ್ಕ ನಾಗಲಿಯ ಮಗ ಚಿಕ್ಕ ಚನ್ನಬಸವಣ್ಣ/ ಅಕ್ಕಸಾಲೆಯರ ಒಡಲೊಳಗೆ ಜನಿಸಿ ನಿಂತು/ ರೆಕ್ಕ ಲೆಕ್ಕಕ್ಕೆ ಝುಡತಿಯ ಕೇಳಬೇಕೆಂದು/ ತಕ್ಕಡಿಯ ತ್ರಾಸು ಪಿಡಿದುಕೊಂಡು ನಿಂತಾತನ ಕೂಡ -ಈ ವಚನದಲ್ಲಿ ತಾನು ‘ಅಕ್ಕಸಾಲಿಗ’ ಎಂಬುದನ್ನು ಖಚಿತಪಡಿಸಿದ್ದಾರೆ. ‘ವಿಶ್ವಕರ್ಮ’ ಎಂದು ಪ್ರಸಿದ್ಧಿ ಪಡೆದ ಇವರು ಸಮಾಜದ ಕೀಲಕ ಸ್ಥಾನದಲ್ಲಿದ್ದವರೇ. ಮರದ ಕೆಲಸ ಮಾಡುವವರು ‘ಬಡಗಿ’ಯಾದರೆ ಕಬ್ಬಿಣದ ಕೆಲಸ ಮಾಡುವವರು ‘ಕಮ್ಮಾರ’ರು; ಕಂಚಿನ ಕೆಲಸ ಮಾಡುವವರು ‘ಕಂಚುಗಾರ’ರಾದರೆ, ಶಿಲೆಯ ಕೆಲಸ ಮಾಡುವವರು ‘ಶಿಲ್ಪಿಗರು’. ಇಷ್ಟು ಜನರನ್ನು ವಿಶ್ವಕರ್ಮರೆಂದೇ ಗ್ರಾಮ ಸಮುದಾಯ ಕರೆಯುತ್ತಿತ್ತು. ಸಮುದಾಯದಲ್ಲಿ ಇವರ ಸ್ಥಾನ ಮೇಲ್ಮಟ್ಟದ್ದಾಗಿತ್ತೆಂಬುದನ್ನು ಸಮಸ್ತರೂ ಗುರುತಿಸಿದ್ದಾರೆ. ಇವರ ವೃತ್ತಿಯು ಕೌಶಲಪ್ರಧಾನವಾದುದು. ಪಟ್ಟಣ, ಖೇಡ, ಖರ್ವಡ, ದ್ರೋಣಾಮುಖ ಎಂಬ ವಿವಿಧ ಬಗೆಯ ನಗರ ನಿರ್ವಣದಲ್ಲಿ ಇವರದು ಎತ್ತಿದ ಕೈ. ಅದಕ್ಕನುಗುಣವಾಗಿ ಬಡಿಗೇರ, ಕಮ್ಮಾರರು ಬಳಸುವ ಉಪಕರಣಗಳನ್ನು ವಚನದಲ್ಲಿ ಅಧ್ಯಾತ್ಮದ ಸಂಕೇತವಾಗಿಯೂ ಬಳಸಿ ಕೊಂಡಿದ್ದಾರೆ. ಗ್ರಾಮಜೀವನದ ಕಾಯಕವರ್ಗಕ್ಕೆ ಅನುಗುಣವಾದ ಅಡಿಗಲ್ಲು, ತ್ರಾಸು, ಮೂಸೆ, ಸುತ್ತಿಗೆಯಂಥ ಪರಿಕರಗಳನ್ನು ವಚನಗಳಲ್ಲಿ ಬಳಸಿದ್ದಾರೆ. ‘ಬಡಿಗ, ಕಮ್ಮಾರರು ಪೊಡವಿಗಕರ್ತರು’ ಎಂಬ ಮಾತು ಇದಕ್ಕೆ ಸಾಕ್ಷಿ. ಗುರು ಮೌನೇಶ್ವರ *ಬದುಕೆ ಅನುಭವ ಪಾಠ ಶಾಲೆ* ________________________ ನಮ್ಮ ಬಾಳು ಹೇಗಿರಬೇಕೆಂಬುದನ್ನು ಹಲವಾರು ವಚನಗಳಲ್ಲಿ ಮೌನೇಶ್ವರರು ಹೇಳುತ್ತಾರೆ. ಅವರ ವಚನಗಳು ಶರಣರ ಮಾರ್ಗವನ್ನು ಮುಂದುವರಿಸುತ್ತವೆ. ಅವರು ಹೆಜ್ಜೆಹೆಜ್ಜೆಗೂ ಹಿಂದಿನ ಶರಣರ ನುಡಿಗಡಣವನ್ನು ಮುಂದಿರಿಸಿಕೊಂಡು ಮಾತಾಡುತ್ತಾರೆ. ಅರಿವಿಲ್ಲದೆ ಬಾಳುವೆ ಮಾಡುವುದು ವ್ಯರ್ಥ. ಅಂಥವರಿಗೆ ಎಲ್ಲಿಯ ಗುರು, ಎಲ್ಲಿಯ ದೈವ? ಎಂದು ಒಂದೆಡೆ ಪ್ರಶ್ನಿಸುತ್ತಾರೆ. ಮೌನೇಶ್ವರರಿಗೆ ಹಳ್ಳಿಯ ಸರಳಜೀವನ ತುಂಬಾ ಇಷ್ಟ.

ಸಾವಿಲ್ಲದ ಶರಣರು ಮಾಲಿಕೆ”ಕ್ರಾಂತಿಕಾರ ಸಂತ ಶ್ರೇಷ್ಠ ತತ್ವ ಪದಕಾರ ಶ್ರೀ ತಿಂಥಣಿ ಮೌನೇಶ್ವರರು”ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ Read Post »

ಅಂಕಣ ಸಂಗಾತಿ, ಅರ್ಜುನ ಉವಾಚ

ಧಾರಾವಾಹಿ ಸಂಗಾತಿ-17 ಅರ್ಜುನ ಉವಾಚ ವಿಶ್ವನಾಥ್‌ ಎನ್‌ ನೇರಳೆಕಟ್ಟೆ ಕುದುರೆ ಸಂಚಾರಕ್ಕೆ ಸಂಚಕಾರವಾಯಿತು ಆ ಶಿಲೆ! ಈಗ ನಮ್ಮ ಜೊತೆ ನೀಲಧ್ವಜನೂ ಸೇರಿಕೊಂಡಿದ್ದ. ತೆಂಕುದಿಕ್ಕಿನೆಡೆಗೆ ಹೆಜ್ಜೆ ಹಾಕುತ್ತಿತ್ತು ಹಯ. ಮುಂದೆ ಕಾಣುತ್ತಿದ್ದದ್ದು ವಿಂಧ್ಯಾ ಪರ್ವತ. ನಮ್ಮ ಅವಿರತ ಚಲನೆಯನ್ನು ಕಂಡೂ ಚಲನೆಗೆ ಮನಸ್ಸು ಮಾಡದೆ ದೃಢತೆಯೇ ಮೈವೆತ್ತ ಬಗೆಯಲ್ಲಿತ್ತು ಅದರ ನಿಲುವು. ಶೃಂಗವಿತ್ತು. ಕಂದರವಿತ್ತು. ಮಂಜು ಮುಸುಕಿತ್ತು. ಕಾಡು ಬೆಳೆದಿತ್ತು. ಅರಣ್ಯವನ್ನೇ ಆಶ್ರಯಿಸಿಕೊಂಡಿದ್ದ ಜನರನ್ನು ಕಂಡೆವು. ಬಗೆಬಗೆಯ ಪಕ್ಷಿಗಳು ಅಲ್ಲಿದ್ದವು. ವಿಧವಿಧದ ಪ್ರಾಣಿಸಮೂಹಗಳಿದ್ದವು. ಹಾಗೆಯೇ ಮುಂದೆ ಹೋಗುತ್ತಿದ್ದಂತೆ ಋಷಿಗಳ ಆಶ್ರಮಗಳು ಕಣ್ಣಿಗೆ ಕಂಡವು.ವಿಂಧ್ಯಾ ಪರ್ವತದೊಳಗನ್ನು ಪ್ರವೇಶಿಸಿದೆವು. ಕುದುರೆಯನ್ನು ಕೂಡಿಕೊಂಡ ನಾವು, ಕೃಷ್ಣ ಕಿಂಕರರು, ಕಾಲಿಟ್ಟ ಒಡನೆಯೇ ಅಚ್ಚರಿ ಹುಟ್ಟಿಸುವ ಪರಿವರ್ತನೆಗೀಡಾಯಿತು ಆ ಪರ್ವತ ಪ್ರದೇಶ. ದುರ್ಗಮವಾಗಿದ್ದ ದಾರಿಯದು ಸುಗಮವಾಗಿ ತೋರಿತು. ಅದುವರೆಗೂ ನೆಲೆಸಿದ್ದ ಕತ್ತಲು ತೊಲಗಿ ಬೆಳ್ಳನೆಯ ಬೆಳಕು ಮೂಡಿಬಂತು. ನಾವೆಲ್ಲರೂ ಕುದುರೆಯ ಜೊತೆಜೊತೆಗೇ ಇದ್ದೆವು. ತನ್ನ ಇಚ್ಛೆಯನುಸಾರ ಸಾಗುತ್ತಿತ್ತು ಆ ಕುದುರೆ. ಮುಂದೆ ಮುಂದೆ ಹೋದಾಗ ಎದುರಾದದ್ದು ಅತೀವ ವಿಸ್ತಾರದ ಒಂದು ಶಿಲೆ. ಒಂದು ಯೋಜನದಷ್ಟು ಅಗಲವಿದ್ದಿರಬಹುದು ಅದು. ಅದರ ಮೇಲೆಯೂ ನಡೆಯುವೆ ತಾನು ಎಂಬAತೆ ಕಾಲುಗಳನ್ನಿಟ್ಟಿತು ಕುದುರೆ.ಸ್ವಚ್ಛಂದವಾಗಿ ಸಂಚರಿಸುತ್ತಿದ್ದ ಅಶ್ವದ ಸುಗಮ ಸಂಚಾರಕ್ಕೆ ಸಂಚಕಾರ ಎದುರಾದದ್ದು ಆಗಲೇ. ಕಾಲುಗಳನ್ನು ಮೇಲಕ್ಕೆ ಎತ್ತಲಾಗದ, ಎತ್ತಿ ಮುಂದಿಡಲಾಗದ ಸ್ಥಿತಿಯಲ್ಲಿ ಕುದುರೆ ಅಲ್ಲಿಯೇ ನಿಂತುಬಿಟ್ಟಿತು. ಆ ಶಿಲೆಗೆ ಅದರ ಕಾಲುಗಳು ಅಂಟಿಕೊAಡಿವೆಯೋ ಏನೋ ಎಂಬAತೆ ತೋರುತ್ತಿತ್ತು. ನಡೆಯುವುದನ್ನೇ ಮರೆತಂತೆ ಅದು ಅಲ್ಲಿಯೇ ನಿಂತಿತು. ಪೌರ್ಣಮಿಯಂದು ಚಂದ್ರಾಕೃತಿಯ ಒಳಗೆ ಮೊಲವೊಂದು ತಟಸ್ಥವಾಗಿ ತೋರುವಂತೆ ಅಗಲಗಲವಾಗಿದ್ದ ಶಿಲೆಯ ಮೇಲೆ ಈ ಕುದುರೆ ಅಚಲವಾಗಿ ನಿಂತಿತ್ತು. ಗಾಳಿಯ ವೇಗವನ್ನೂ ಮೀರಿ ನಡೆಯುವ ಕುದುರೆ ಈ ಬಗೆಯಲ್ಲಿ ನಿಂತುದನ್ನು ಕಂಡಾಗ ಆಶ್ಚರ್ಯವಲ್ಲದೆ ಇನ್ನೇನು ತಾನೇ ಆಗಲು ಸಾಧ್ಯ!ಕುದುರೆ ಚಲಿಸಲೇಬೇಕಿತ್ತು. ಅದು ಚಲಿಸದೆಯೇ ನಾವು ಚಲಿಸುವಂತಿರಲಿಲ್ಲ. ಚಲಿಸಿದರೂ ಅದಕ್ಕೇನೇನೂ ಸಾರ್ಥಕತೆಯಿರಲಿಲ್ಲ. ಬದುಕು ಎಂದರೆ ಕೆಲವೊಮ್ಮೆ ಹೀಗೆಯೇ. ಇನ್ನೊಬ್ಬರ ಚಲನೆಯಿದ್ದರೆ ಮಾತ್ರ ನಮ್ಮ ಚಲನೆಗೆ ಅರ್ಥವಿರುತ್ತದೆ.ಜೊತೆಗಿದ್ದ ಸೇವಕರನ್ನು ಕುದುರೆಯ ಬಳಿಗೆ ಅಟ್ಟಿದೆ. ಕುದುರೆಯ ಕಾಲುಗಳನ್ನು ಬಿಡಿಸಲು ಹೇಳಿದೆ. ಅಳವು ತೋರಿದ ಆಳುಗಳು ಸೋತು ಅಳುಮೋರೆ ಮಾಡಿದರು.ಏನಾಯಿತಿದು! ಕುದುರೆಗೇಕೆ ಇಂತಹ ದುರವಸ್ಥೆ! ಅದು ಚಲಿಸದಿದ್ದರೆ ಮುಂದಿನ ತಾಣವನ್ನು ಸೇರುವ ಬಗೆ ಹೇಗೆ! ಅಶ್ವಮೇಧ ಯಾಗದ ಗತಿಯೇನಾಯಿತು! ಎಂದೆಲ್ಲಾ ಚಿಂತೆ ಮಾಡಿದ ನನಗೆ ಹೊಳೆದ ಯೋಚನೆ ಮುನಿಶಾಪದ್ದು. ಯಾರೋ ಮುನಿಗಳ ಶಾಪದ ಫಲವೇ ಇದಾಗಿರಬೇಕು ಎನಿಸಿತು. ತಿಳಿದ ಹಿರಿಯರಲ್ಲಿ ಕೇಳಿದರೆ ಒಳಿತು ಎನಿಸಿತು.“ಈ ಸ್ಥಳದಲ್ಲಿ ಸುತ್ತಮುತ್ತ ಋಷಿಗಳ ಆಶ್ರಮವಿದೆಯೇ ಎಂದು ನೋಡಿಬನ್ನಿ” ಎಂದು ಸೇವಕರನ್ನು ಕಳುಹಿಸಿಕೊಟ್ಟೆ. ತಾಣವನ್ನು ಸುತ್ತಾಡಿದ ಅವರು ಸ್ವಲ್ಪ ಸಮಯದಲ್ಲಿಯೇ ನನ್ನ ಬಳಿಬಂದು ಹತ್ತಿರದಲ್ಲಿಯೇ ಒಂದು ಆಶ್ರಮ ಇರುವುದಾಗಿ ಹೇಳಿದರು. ಪ್ರದ್ಯುಮ್ನ, ವೃಷಕೇತು, ಸಾಲ್ವಪತಿ, ಯೌವನಾಶ್ವ, ನೀಲಧ್ವಜ ಇವರೆಲ್ಲರನ್ನೂ ಜೊತೆ ಸೇರಿಸಿಕೊಂಡು ಆ ಆಶ್ರಮವಿದ್ದೆಡೆಗೆ ಹೊರಟೆ. ಹೋಗಿ ತಲುಪಿದೆ.ಶ್ರೇಷ್ಠ ಋಷಿಗಳು ಇರುವ ಪ್ರದೇಶವದು ಎನ್ನುವುದು ಆ ಪರಿಸರವನ್ನು ಈಕ್ಷಿಸಿದಾಗಲೇ ಗೊತ್ತಾಗುವಂತಿತ್ತು. ಬಗೆಬಗೆಯ ಮೃಗಗಳು ಪಕ್ಷಿಗಳು ತಮ್ಮ ವೈರತ್ವವನ್ನು ಮರೆತು ಅನುರಾಗ ಭಾವದಲ್ಲಿ ಸೊಗ ಕಂಡುಕೊಂಡಿದ್ದವು. ಅಗ್ನಿ, ವಾಯು, ಚಂದ್ರ, ವರುಣ ಮೊದಲಾದ ದೇವಾನುದೇವತೆಗಳು ಅಲ್ಲಿ ನೆಮ್ಮದಿಯಿಂದ ನೆಲೆಸಿದ್ದರು. ಅಲ್ಲಿದ್ದ ಎಲ್ಲಾ ಗಿಡ ಮರಗಳಲ್ಲಿಯೂ ಕಾಯಿ ಹಣ್ಣುಗಳ ಸಮೃದ್ಧಿ. ಬಂದವರು ಬಯಸಿದ್ದನ್ನು ಯಾವಾಗಲೂ ನೀಡಲು ಸಿದ್ಧವಾಗಿ ನಿಂತಂತೆ ತೋರುತ್ತಿತ್ತು ವೃಕ್ಷ ತರುಗಳು ನಿಂತ ಭಂಗಿ. ಸದಾಕಾಲವೂ ಸುಗ್ಗಿಯ ಕಾಲ ಎಂಬAತೆ ಪ್ರಕೃತಿ ಕಾಣಿಸುತ್ತಿತ್ತು. ಸುಖದ ಕೊರತೆಯಿದ್ದರೆ ತಾನೇ ದುಃಖ ಹುಟ್ಟುವುದು! ದುಃಖ ಉದ್ಭವಿಸಲು ಅಲ್ಲಿ ಅವಕಾಶವೇ ಇರಲಿಲ್ಲ. ಸುಖವೇ ಎಲ್ಲಾ.ಆಶ್ರಮದ ಒಂದೆಡೆಯಲ್ಲಿ ಒಂದಷ್ಟು ಮುನಿಗಳು ವೇದ ಆಗಮ ಶಾಸ್ತç ಪುರಾಣಗಳ ಪ್ರವಚನ, ಅಧ್ಯಯನದಲ್ಲಿ ನಿರತರಾಗಿದ್ದರು. ಇನ್ನೊಂದಷ್ಟು ಋಷಿಗಳು ಜಪ ತಪಸ್ಸನ್ನು ಗೈಯ್ಯುತ್ತಾ, ಪರಮಾತ್ಮ ಸ್ಮರಣೆಯಲ್ಲಿ ಪವಿತ್ರಾನುಭವ ಪಡೆಯುತ್ತಿದ್ದರು. ಸೂರ್ಯ ನಮಸ್ಕಾರ, ಹರಿಹರ ಸಮಾರಾಧನೆ, ಯೋಗ ಸಾಧನೆ ಮೊದಲಾದವು ನಡೆಯುತ್ತಿದ್ದವು. ಅತಿಥಿಗಳನ್ನು ಆದರದಿಂದ ಸತ್ಕರಿಸುವುದರಲ್ಲಿ ತಲ್ಲೀನರಾಗಿದ್ದರು ಕೆಲವರು.ಆಗಲೇ ನನ್ನ ಕಣ್ಣನ್ನು ಕಾಡಿದ್ದು ತೇಜೋಮಯವಾದ ಒಂದು ದಿವ್ಯಕಾಯ. ಶಾಂತಭಾವವೇ ಮೂರ್ತರೂಪ ಪಡೆದಂತೆ ಕುಳಿತಿದ್ದರು ಮುನಿಶ್ರೇಷ್ಠರೆನಿಸಿಕೊಂಡ ಸೌಭರಿ ಮುನಿಗಳು. ಅಗ್ನಿಯಂತಹ ಪ್ರವರ್ಧಮಾನವಾದ ಬೆಳಕಿನಿಂದ ಕಂಗೊಳಿಸುತ್ತಿದ್ದರು. ಆದರೆ ಸುಡುವವರಲ್ಲ. ಸೂರ್ಯನಂತೆ ಕಾಂತಿಮಯವಾಗಿದ್ದರು. ಆದರೆ ಮೈಸುಡುವ ಬಿಸಿ ಅವರದ್ದಲ್ಲ. ಜಟೆಯನ್ನು ಹೊತ್ತಿದ್ದವರು ಶಿವನಂತೆ ತೋರುತ್ತಿದ್ದರು. ಆದರೆ ನಂಜಿನ ಕಂಠ ಅವರದ್ದಲ್ಲ.ಸಾಷ್ಟಾಂಗ ನಮಸ್ಕರಿಸಿದೆ ಅವರಿಗೆ. ಅಶ್ವಮೇಧ ಯಾಗದ ವಿಚಾರ ಅರುಹಿದೆ. ಈಗ ಕುದುರೆ ಶಿಲೆಯ ಮೇಲೆ ಕಾಲಿಟ್ಟು ತಟಸ್ಥವಾದ ವಿಷಯ ತಿಳಿಸಿದೆ. “ನಿಮ್ಮ ಮಾರ್ಗದರ್ಶನ ಬೇಕು” ಎಂದೆ.ನನ್ನನ್ನು ಲೇವಡಿ ಮಾಡುವ ನಗು ಅವರ ಮೊಗದಲ್ಲಿ ಮೂಡಿತು. ಈ ಪರಿಯ ನಗುವದೇತಕೆ! ಅರ್ಥವಾಗಲಿಲ್ಲ. ಅವರ ಮುಖವನ್ನೇ ನೋಡಿದೆ. ಡಾ. ವಿಶ್ವನಾಥ ಎನ್ ನೇರಳಕಟ್ಟೆ

Read Post »

ಅಂಕಣ ಸಂಗಾತಿ, ವೃತ್ತಿ ವೃತ್ತಾಂತ

ಅಂಕಣ ಸಂಗಾತಿ ವೃತ್ತಿ ವೃತ್ತಾಂತ ಸುಜಾತಾ ರವೀಶ್ ವೃತ್ತಿ ಬದುಕಿನ ಹಿನ್ನೋಟ-32 ಫೆಬ್ರವರಿ ಕಡೆಯ ವಾರದಲ್ಲಿ ನಮಗೆ ವರ್ಗಾವಣೆಯ ಆದೇಶ ಬಂದದ್ದು ಮಾರ್ಚ್ ಆರನೆಯ ತಾರೀಕು ರಿಲೀವ್ ಆಗಬೇಕಿತ್ತು. ಯಾವಾಗಲೂ ಶನಿವಾರ ಮಧ್ಯಾಹ್ನ ರಿಲೀಫ್ ಆಗುವಂತೆ ಬರುತ್ತಿದ್ದ ಆದೇಶ ಈ ಬಾರಿ ಸೋಮವಾರ ಸಂಜೆ ರಿಲೀವ್ ಆಗುವ ಹಾಗೆ ಬಂದಿತ್ತು. ಐದನೆಯ ತಾರೀಕು ಶಿವರಾತ್ರಿ ಬಂದಿದ್ದರಿಂದ ನಾವು ಮೈಸೂರಿಗೆ ಹೋಗಲೇಬೇಕಿತ್ತು. ಹಾಗಾಗಿ ಅಂದೇ ಬಂದು ಅಂದೆ ವಾಪಸ್ ಆಗುವ ಸರ್ಕಸ್ ಸಹ ಮಾಡಿ ಬಿಟ್ಟೆವು. ಆರನೆಯ ತಾರೀಕು ಬೆಳಿಗ್ಗೆ 5:30 ಬಸ್ಸಿಗೆ ಹೊರಟು ಸಕಲೇಶಪುರಕ್ಕೆ ಬಂದೆವು. ಅಂದೇ ನಾವು ಶಾಖಾ ಸಿಬ್ಬಂದಿಗೆ ಊಟ ಕೊಡಿಸುವ ಕಾರ್ಯಕ್ರಮ ಸಹ ಇತ್ತು .ಬೆಳಿಗ್ಗೆ ಹೋಟೆಲ್ನಲ್ಲಿ ತಿಂಡಿ ತಿಂದು ಮಧ್ಯಾಹ್ನ ನಮ್ಮದೇ ಆತಿಥ್ಯದ ಊಟ ಮಾಡಿ ಶಾಖಾಧಿಕಾರಿಗಳನ್ನು ವಿನಂತಿಸಿಕೊಂಡು ನಾಲ್ಕು ವರೆಗೆ ವಿದಾಯ ಸಮಾರಂಭವನ್ನು ಆಯೋಜಿಸಿಕೊಂಡು ಅಂತೂ ಇಂತೂ ಆರು ಗಂಟೆ ಬಸ್ಸಿಗೆ ಮೈಸೂರಿಗೆ ಹತ್ತಿದೆವು ಬಂದು ತಲುಪಿದಾಗ ರಾತ್ರಿ 11:00 ಗಂಟೆ. ಸುಲೋಚನ ಅವರ ಅಕ್ಕನ ಮನೆಯಲ್ಲಿ ಉಳಿದುಕೊಂಡು ಬೆಳಿಗ್ಗೆ ಎದ್ದು ನಂಜನಗೂಡಿಗೆ ಹೋಗಿ ಅಲ್ಲಿಂದ ಚಾಮರಾಜನಗರಕ್ಕೆ ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಬೇಕಿತ್ತು . ನಾನು ಸೋಮವಾರ ಬೆಳಿಗ್ಗೆ ಅಂದರೆ ಏಳನೆಯ ತಾರೀಕು ಮಾರ್ಚ್ 2000 ರಂದು ನಂಜನಗೂಡಿಗೆ ಡ್ಯೂಟಿ ರಿಪೋರ್ಟ್ ಮಾಡಿಕೊಂಡೆ. ಮಾಮೂಲಿನಂತೆ ಒಂದು ಕೈಯಲ್ಲಿ ಬ್ಯೂಟಿ ರಿಪೋರ್ಟ್ ಮತ್ತೊಂದು ಕೈಯಲ್ಲಿ ಮೈಸೂರಿಗೆ ವರ್ಗಾವಣೆಗೆ ಅರ್ಜಿ. ಅಶೋಕಪುರಂ ರೈಲ್ವೆ ಸ್ಟೇಷನ್ ಗೆ ಹೋಗಿ ಮೂರು ತಿಂಗಳ ಪಾಸ್ ರೆಡಿ ಮಾಡಿಸಿಕೊಂಡು ಹಿಂದಿನ ಕಹಿ ಅನುಭವದ ಆಧಾರದ ಮೇಲೆ ಅಲ್ಲಿಯೇ ಸಹಿ ಮಾಡಿ ಮಹಿಳಾ ಭೋಗಿಗೆ ಹತ್ತಿದೆ. ಅಲ್ಲಿಯೇ ನಮ್ಮ ಶಾಖೆಯ ಜಯಲಕ್ಷ್ಮಿ ಅವರ ಭೇಟಿಯು ಆಯಿತು. ಈಗ ಶಾಖೆ ಮೊದಲಿನಂತೆ ದೇವಸ್ಥಾನದ ಬಳಿಯ ಬಜಾರ್ ರಸ್ತೆಯಲ್ಲಿ ಇರದೆ ತನ ಸ್ವಂತ ಕಟ್ಟಡಕ್ಕೆ ಶಿಫ್ಟ್ ಆಗಿತ್ತು .ನಂತರ ಸಂತೆಗೆ ಹೋಗುವ ದಾರಿಯಲ್ಲಿ ಮಧ್ಯೆ ಬಲಗಡೆ ನಮ್ಮ ಶಾಖಾ ಕಚೇರಿ ಇತ್ತು. ಮುಖ್ಯ ರೈಲ್ವೆ ಸ್ಟೇಷನ್ ನಿಂದ ಶಾಖೆಗೆ ಬರಲು ತಡವಾಗುತ್ತಿದ್ದ ಕಾರಣ ಎಲ್ಲರೂ ಸುಜಾತಪುರಂ ರೈಲ್ವೆ ಸ್ಟೇಷನ್ ನಲ್ಲಿಯೇ ಇಳಿದು ಅಲ್ಲಿ ಓಡಾಡುತ್ತಿದ್ದ ಖಾಸಗಿ ಟೆಂಪೋಗಳಲ್ಲಿ ಹುಲ್ಲಹಳ್ಳಿ ಸರ್ಕಲ್ಗೆ ಬಂದು ಇಳಿಯುತ್ತಿದ್ದೆವು. ಆಗ ಆ ಟೆಂಪೋಗಳಲ್ಲಿ ಚಾರ್ಜ್ ಒಂದು ರೂಪಾಯಿ ಮಾತ್ರ ಇತ್ತು .ಹುಲ್ಲಹಳ್ಳಿ ಸರ್ಕಲ್ ನಿಂದ 3-4 ನಿಮಿಷದ ನಡಿಗೆ ನಮ್ಮ ಶಾಖೆಗೆ. ಸಂಜೆ ಮಾತ್ರ ಮುಖ್ಯ ಸ್ಟೇಶನ್ಗೆ ನಡೆದು ಹೋಗಲು ಸಮಯ ಇತ್ತು. ಕೆಲವೊಮ್ಮೆ ಸುಸ್ತಾಗಿದ್ದಾಗ ಹೊರಡಲು ತಡವಾದರೆ ಅಥವಾ ಸಂತೆಯಲ್ಲಿ ಕೊಂಡ ತರಕಾರಿಗಳಿದ್ದರೆ ಆಗ ಮೂರು ನಾಲ್ಕು ಜನ ಸೇರಿ ಆಟೋದಲ್ಲಿ ಸ್ಟೇಷನ್ನಿಗೆ ಬರುತ್ತಿದ್ದೆವು. ಮೊದಲಿನಿಂದ ಪರಿಚಯವಿದ್ದ ಜಯಲಕ್ಷ್ಮಿ ಮತ್ತು ನಾಗಮಣಿ ಜೊತೆಗೆ ಹೊಸ ಪರಿಚಯವಾದ ಕವಿತಾ ನಿಕ್ಕಮ್ ವಿದ್ಯಾ ಚಂದ್ರಶೇಖರ್ ಮೊದಲಾದವರು. ಆಂಧ್ರಪ್ರದೇಶದ ರಜನಿ ಸಹ ಇಲ್ಲಿಯೇ ಇದ್ದಳು .ಮುಂದೆ ಅವಳು ಪದೋನ್ನತಿ ತೆಗೆದುಕೊಂಡು ಈಗ ಹೈದರಾಬಾದ್ ನಲ್ಲಿ ದೊಡ್ಡ ಹುದ್ದೆಯಲ್ಲಿ ಇದ್ದಾಳೆ. ಅಲ್ಲಿಯೇ ಪರಿಚಯವಾದದ್ದು ನಮ್ಮದೇ ಯೂನಿಯನ್ ನಲ್ಲಿ ಇದ್ದ ಇಂದುಮತಿ. ಮೊದಲು ಬಸ್ ನಲ್ಲಿ ಓಡಾಡುತ್ತಿದ್ದಳು ನಂತರ ಅವರ ಸ್ವಂತ ಮನೆ ನಮ್ಮ ಮನೆಯ ಬಳಿಗೆ ಇದುದರಿಂದ ಅಲ್ಲಿಗೆ ಶಿಫ್ಟ್ ಆದ ಮೇಲೆ ನನ್ನ ಜೊತೆಗೆ ರೈಲಿನಲ್ಲಿ ಓಡಾಡಲು ಆರಂಭಿಸಿದಳು. ನನಗೆ ತುಂಬಾ ಆಪ್ತ ಗೆಳತಿ. ಈಗಲೂ ನಮ್ಮ ಸ್ನೇಹ ಅಷ್ಟೇ ಸದೃಢವಾಗಿದೆ ನಂಜನಗೂಡು ನನಗೆ ಕೊಟ್ಟ ಅನರ್ಘ್ಯ ಸ್ನೇಹ ರತ್ನಗಳಲ್ಲಿ ಅವಳು ಒಬ್ಬಳು. ಈ ಹಿಂದೆ ಮಂಡ್ಯದಲ್ಲಿ ನನ್ನೊಂದಿಗೆ ಕೆಲಸ ಮಾಡಿದ್ದ ಮಂಜುಳಾ ಮತ್ತು ಮೊದಲೇ ಪರಿಚಿತರಾಗಿದ್ದ ಶಶಿಕಲಾ ಗಿರಿಜಾ ಇವರೆಲ್ಲ ಇದೇ ಶಾಖೆಯಲ್ಲಿ ಇದ್ದರು ತುಂಬಾ ಸ್ನೇಹ ಮಯ ವಾತಾವರಣ ತುಂಬಾ ಖುಷಿಯಾಗಿತ್ತು.ಹುಲ್ಲಹಳ್ಳಿ ಸರ್ಕಲ್ ನಲ್ಲಿ ಇಳಿದ ತಕ್ಷಣ ಅಲ್ಲಿ ಒಬ್ಬ ಕಾಯಂ ಆಗಿ ಸೈಕಲ್ಲಿನಲ್ಲಿ ಹೂವ ಮಾರುತಿದ್ದ .ಅವನ ಬಳಿ ಹೂವು ಕೊಂಡು ಮುಂದೆ ನಮ್ಮ ಪ್ರಯಾಣ .ಅಲ್ಲೇ ಮಧ್ಯದಲ್ಲಿ ಇದ್ದದ್ದು ಸುಬ್ಬಣ್ಣನ ಹೋಟೆಲ್ ಇಡ್ಲಿ ಚಟ್ನಿ .ಜೊತೆಗೆ ಟೊಮ್ಯಾಟೋ ಗೊಜ್ಜು ಕೊಡುತ್ತಿದ್ದರು ತುಂಬಾ ರುಚಿಯಾಗಿರುತ್ತಿತ್ತು. ಕೆಲವೊಮ್ಮೆ ತಿಂಡಿ ಸರಿಯಾಗಿ ತಿನ್ನದೆ ಬರುತ್ತಿದ್ದಾಗ ಅಥವಾ ತಿಂಡಿ ತಿನ್ನದೇ ಬಂದಾಗ ಅಲ್ಲಿ ಇಡ್ಲಿ ತಿಂದು ಮುಂದುವರೆಯುವುದು. ಇಲ್ಲದಿದ್ದರೆ ವೈಟು ಕಾಫಿ ಕುಡಿದು ಹೋಗುತ್ತಿದ್ದೆವು. ಮಧ್ಯಾಹ್ನ 12 ಗಂಟೆ ಹಾಗೂ ಅಪರಾಹ್ನ ನಾಲ್ಕು ಗಂಟೆಯ ಕಾಫಿ ಅಲ್ಲಿಯೇ ಪಕ್ಕದಲ್ಲಿ ಇದ್ದ ಒಂದು ಮಲಯಾಳಿ ಬೇಕರಿಯಲ್ಲಿ ಬೇಸಿಗೆ ಕಾಲವಾದರೆ ವಿವಿಧ ಹಣ್ಣುಗಳ ಜ್ಯೂಸ್ ಸಹ ಸಿಗುತ್ತಿತ್ತು. ಅಲ್ಲದೆ ಶಾಖೆಯ ಮುಂದೆಯೇ ಒಬ್ಬ ಎಳನೀರು ಮಾರುತ್ತಾ ನಿಂತಿರುತ್ತಿದ್ದ. ಒಟ್ಟಿನಲ್ಲಿ ನಮ್ಮ ಹೊಟ್ಟೆ ಪೂಜೆಗೆ ಮೋಸ ಬಂತು ಇರಲಿಲ್ಲ. ಸ್ವಲ್ಪ ದಿನಗಳಾದ ನಂತರ ಟೆಂಡರ್ ಕರೆದು ನಮ್ಮ ಶಾಖೆಯಲ್ಲಿಯೇ ವಾಹನ ನಿಲುಗಡೆ ಜಾಗದಲ್ಲಿ ಒಂದು ಕ್ಯಾಂಟೀನ್ ಓಪನ್ ಆಯಿತು. ಸತೀಶ್ ಎನ್ನುವವರು ಅದನ್ನು ಆರಂಭಿಸಿದ್ದರು ಬೆಳಗಿನ ಹೊತ್ತು ಏನಾದರೂ ಒಂದು ತಿಂಡಿ ಮಧ್ಯಾಹ್ನ ಅಣ್ಣ ಸಾಂಬಾರ್ ಮಜ್ಜಿಗೆ ಹಾಗೂ ಸಂಜೆಯ ಹೊತ್ತು ಏನಾದರೂ ಕರಿದ ತಿಂಡಿ ಸಿಗುತ್ತಿತ್ತು ಕಾಫಿ ಟೀ ಮಜ್ಜಿಗೆ ಯಾವಾಗಲೂ ಸಿಗುತ್ತಿತ್ತು.ಯಾರಾದರೂ ಒಬ್ಬರು ಊಟ ತರದಿದ್ದರೆ ಕ್ಯಾಂಟೀನ್ ನಲ್ಲಿಯೇ ತರಿಸಿಕೊಳ್ಳುತ್ತಿದ್ದೆವು. ಇಬ್ಬರು ಮೂವರು ತಂದಿಲ್ಲದಿದ್ದಾಗ ಹುಲ್ಲಹಳ್ಳಿ ಸರ್ಕಲ್ ನಲ್ಲಿ ಇದ್ದ ರಾಮಪ್ರಸಾದ್ ಹೋಟೆಲಿಗೆ ಹೋಗುತ್ತಿದ್ದೆವು. ಶನಿವಾರ ಮಧ್ಯಾಹ್ನದ ಹೊತ್ತು ಮೂರು ಗಂಟೆಗೆ ರೈಲು ಇದ್ದುದರಿಂದ ಪ್ರತಿ ಶನಿವಾರ ಯಾವುದಾದರೂ ಹೋಟೆಲ್ ಗೆ ಅಥವಾ ಕ್ಯಾಂಟೀನ್ ನವರು ಚೆನ್ನಾಗಿರುವ ತಿಂಡಿ ಮಾಡಿದರೆ ಅದನ್ನೇ ತಿಳಿದುಕೊಳ್ಳುತ್ತಿದ್ದೆವು ಅಂದು ಡಬ್ಬಿ ತರುವುದು ನಮಗೆಲ್ಲಾ ನಿಷಿದ್ಧ. ಹೊಸ ವ್ಯವಹಾರಗಳ ವಿಭಾಗದಲ್ಲಿ ಇದ್ದ ಉನ್ನತ ದರ್ಜೆ ಸಹಾಯಕರು ವರ್ಗಾವಣೆಯಾಗಿ ಹೋಗಿದ್ದರಿಂದ ಮಾರ್ಚ್ ವರ್ಷಾಂತ್ಯದ ಬಿಜಿ ಸಮಯವೂ ಆಗಿದ್ದರಿಂದ ನನ್ನನ್ನು ಹೊಸ ವ್ಯವಹಾರ ವಿಭಾಗಕ್ಕೆ ನಿಯುಕ್ತಿಗೊಳಿಸಿದರು. ಅಲ್ಲಿ ಶ್ರೀವತ್ಸ ಮತ್ತು ಮಹಾದೇವನ್ ಅವರು ಸಹಾಯಕರು. ನಾಗರಾಜ್ ಅವರು ಸಹಾಯಕ ಆಡಳಿತ ಅಧಿಕಾರಿಗಳು ಆಗ ತುಂಬಾ ಪ್ರಪೋಸಲ್ಗಳು ಬರುತ್ತಿತ್ತು ಕೆಲಸವು ಹೆಚ್ಚು ಇರುತ್ತಿತ್ತು ವರ್ಷಾಂತ್ಯವಾದ್ದರಿಂದ ಕೆಲವೊಂದು ರಜೆಯ ದಿನ ಭಾನುವಾರಗಳಲ್ಲೂ ಬರಬೇಕಿತ್ತು. ಶನಿವಾರವಂತೂ ಸಂಜೆಯ ರೃಲಿಗೇ ವಾಪಸ್ ಆಗುತ್ತಿದ್ದುದು. ಆದರೂ ಸಹ ತುಂಬಾ ಖುಷಿಯ ವಾತಾವರಣ. ಎಲ್ಲರೂ ಹೊಂದಿ ಕೆಲಸ ಮಾಡುತ್ತಿದ್ದರಿಂದ ಹೆಚ್ಚು ಹೊರೆ ಎನಿಸುತ್ತಿರಲಿಲ್ಲ. ನಾಲ್ಕೈದು ತಿಂಗಳ ಬಳಿಕ ಶಾಖಾಧಿಕಾರಿಗಳು ಅವರ ಕೊಠಡಿಗೆ ಕರೆಸಿ ನನ್ನನ್ನು ವಿಕ್ರಯ ವಿಭಾಗದಲ್ಲಿ ಕೆಲಸ ಮಾಡಲು ಸೂಚಿಸಿದರು.  ಆಗ ಆ ವಿಭಾಗದಲ್ಲಿ ಒಬ್ಬರೇ ಉನ್ನತ ಶ್ರೇಣಿ ಸಹಾಯಕರು ಪ್ರಸಾದ್ ಎಂಬುವವರು ಇದ್ದು ಸಹಾಯಕರು ಯಾರು ಇರಲಿಲ್ಲ. ಹಾಗಾಗಿ ನನ್ನನ್ನು ಅಲ್ಲಿಯೇ ಕೆಲಸ ಮಾಡಲು ವಿನಂತಿಸಿರು. ನನಗೆ ಹೊಸ ವ್ಯವಹಾರ ಹಾಗೂ ವಿಕ್ರಯ ವಿಭಾಗಗಳಲ್ಲಿ ಕೆಲಸ ಮಾಡಿ ಅನುಭವ ಇದ್ದುದು .ಸಕಲೇಶಪುರದಲ್ಲಿ ಸ್ವಲ್ಪ ದಿನಗಳ ಕಾಲ ಕಚೇರಿ ಸೇವಾ ವಿಭಾಗದಲ್ಲಿ ಮಾಡಿದ್ದೆ. ಆದರೆ ಪಾಲಿಸಿ ಸೇವಾ ವಿಭಾಗದಲ್ಲಿ ಕೆಲಸ ಮಾಡುವ ಅವಕಾಶವೇ ದೊರೆತಿರಲಿಲ್ಲ .ಹಾಗಾಗಿ ಶಾಖಾಧಿಕಾರಿಗಳಿಗೆ ಮುಂದಿನ ಬದಲಾವಣೆಯ ಸಮಯದಲ್ಲಿ ನನಗೆ ಪಾಲಿಸಿ ಸೇವಾ ವಿಭಾಗವನ್ನೇ ಕೊಡಬೇಕು ಎಂದು ಕೋರಿಕೊಂಡೆ ಅವರು ಸಹ ಒಪ್ಪಿಕೊಂಡರು.ವಿಕ್ರಯ ವಿಭಾಗದಲ್ಲಿ ಪ್ರಸಾದ್ ಮತ್ತು ನಾನು ಒಳ್ಳೆಯ ಸೇವೆ ಸಲ್ಲಿಸಿದ್ದೆವು. ಇಬ್ಬರೂ ಒಳ್ಳೆಯ ಕೆಲಸಗಾರರಾದ್ದರಿಂದ ಹಂಚಿಕೊಂಡು ಮಾಡುತ್ತಿದ್ದೆವು. ೨೦೦೦ ನನಗೆ ಅಷ್ಟೇನೂ ಖುಷಿಯದ್ದಾಗಿರಲಿಲ್ಲ. ಅಮ್ಮನ ಆರೋಗ್ಯ ಆಗಾಗ್ಗೆ ಹದಗೆಟ್ಟು ಆಸ್ಪತ್ರೆಗೆ ಸೇರಿಸುವುದು ಕರೆದುಕೊಂಡು ಬರುವುದು ನಡೆದೇ ಇತ್ತು. ಆದರೂ ಛಾಯ ಮತ್ತು ಪ್ರಸನ್ನ ಅವರು ಪಿರಿಯಾಪಟ್ಟಣದಲ್ಲಿ ಮಾಡಿದ್ದ ಮನೆಗೆ ಹೋಗಿ ಸ್ವಲ್ಪ ದಿನ ಇದ್ದು ಬಂದಿದ್ದರು. ನಾವೂ ಒಂದೆರಡು ಬಾರಿ ಹೋಗಿ ಬಂದಿದ್ದೆವು. ಕೊನೆಗೆ ಯಾವ ಪ್ರಯತ್ನವೂ ಫಲ  ಕೊಡದೆ ಜನವರಿ ೬ ೨೦೦೦ ದಂದು ನಮ್ಮನ್ನೆಲ್ಲಾ ಬಿಟ್ಟು ಅಮ್ಮ ಹೊರಟೇ ಬಿಟ್ಟಳು. ಅಂದು ಸೋಮವಾರ . ಹಿಂದಿನವಾರ ರಜೆ ಹಾಕಿ ಅಮ್ಮನ ಜೊತೆಯಲ್ಲೇ ಇದ್ದೆ. ಅಂದು ರೈಲಿನಲ್ಲಿ ಹೊರಟು ಕಛೇರಿ ತಲುಪುವಷ್ಟರಲ್ಲಿ ಫೋನ್ ಬಂದಿದೆ. ನಾನು ತಲುಪಿದ ಕೂಡಲೇ ತುಂಬಾ ಸೀರಿಯಸ್  ವಾಪಸ್ ಹೋಗಿ ಎಂದು ಸ್ಕೂಟರ್ ನಲ್ಲಿ ಕರೆದುಕೊಂಡು ಬಂದು ಬಸ್ ಹತ್ತಿಸಿದರು. ಮೈಸೂರಲ್ಲಿ ರವೀಶ್ ಬಂದು ಮನೆಗೆ ಕರೆದುಕೊಂಡು ಬಂದರು.ಊರುಗಳಿಂದ ಎಲ್ಲಾ‌ ಬಂದು ಸೇರಿ ಅಮ್ಮನನ್ನು ಅಂತಿಮ ಬಾರಿಗೆ ಕರೆದುಕೊಂಡು ಹೊರಟಾಗ ಸಂಜೆ. ನಾನು ದಿನಾ ವಾಪಸಾಗುವ ರೈಲು ಕೂ ಅಂತ ಕೂಗ್ತಿತ್ತು.  ಶಾಖಾಧಿಕಾರಿಗಳು ಕೆಲವರು ಸ್ನೇಹಿತರು ಸುಲೋಚನಾ ಎಲ್ಲ ಬಂದಿದ್ದರು. ಈಗಲೂ ಸಂಜೆ ರೈಲಿನ ಕೂಗು ಕಿವಿಗೆ ಬಿದ್ದಾಗಲೆಲ್ಲಾ ಅಂದಿನ ಆ ಸಂಜೆಯ ಮಡುಗಟ್ಟಿದ ದುಃಖ ಮರುಕಳಿಸುತ್ತದೆ.ಈಗಲೂ ಇದನ್ನು ಬರೆಯುವಾಗ ಕಣ್ಣು ತುಂಬಿ ನೀರು ಹರಿದು ಮಂಜಾಗುತ್ತಿದೆ. ಸಧ್ಯಕ್ಕೆ ನಿಲ್ಲಿಸುವೆ.(ಮುಂದಿನ ವಾರಕ್ಕೆ ಮುಂದುವರೆಯುವುದು) ಸುಜಾತಾ‌ ರವೀಶ್

Read Post »

You cannot copy content of this page

Scroll to Top