ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅಂಕಣ ಸಂಗಾತಿ, ಒಬ್ಬ ಅಮ್ಮನ ಕಥೆ

ಧಾರಾವಾಹಿ ಸಂಗಾತಿ-114 ಒಬ್ಬ ಅಮ್ಮನ ಕಥೆ ರುಕ್ಮಿಣಿ ನಾಯರ್ ಸುಮತಿಯ ತಳಮಳ ಮಕ್ಕಳಿಗೆ ಊಟವನ್ನು ಬಡಿಸಿ ನಂತರ ತಾನು ತಟ್ಟೆಯಲ್ಲಿ ಅನ್ನ-ಸಾರು, ಹೀರೇಕಾಯಿ ಪಲ್ಯವನ್ನು ಬಡಿಸಿಕೊಂಡು ಅನ್ನಕ್ಕೆ ಸಾರನ್ನು ಹಾಕಿ ಕಲಸಿ ಪಲ್ಯ ಸೇರಿಸಿ ಮೂವರಿಗೂ ಒಂದೊಂದು ತುತ್ತು ತಿನಿಸಿ ತಾನು ಊಟ ಮಾಡಿದಳು. ಅಮ್ಮ ಊಟ ಮಾಡುವ ಮುನ್ನ ಅಮ್ಮನ ಕೈಯಿಂದ ಒಂದೊಂದು ತುತ್ತು ತಿನ್ನುವುದೆಂದರೆ ಮಕ್ಕಳಿಗೆ ಪಂಚಪ್ರಾಣ. ಸುಮತಿ ಮಾಡುತ್ತಿದ್ದ ಅಡುಗೆಯೂ ಅಷ್ಟೇ ರುಚಿಕರವಾಗಿರುತ್ತಿತ್ತು. ಒಮ್ಮೊಮ್ಮೆ ಮನೆಯಲ್ಲಿ ಏನೂ ಇಲ್ಲದಿದ್ದಾಗ ಒಣ ಮೆಣಸಿನಕಾಯಿಯನ್ನು ಕೆಂಡದ ಮೇಲೆ ಹಾಕಿ ಸುಟ್ಟು ಈರುಳ್ಳಿಯನ್ನು ಸಣ್ಣ ಸಣ್ಣದಾಗಿ ಹೆಚ್ಚಿ ಹುಣಸೆಹಣ್ಣನ್ನು ಸೇರಿಸಿ ಸ್ವಲ್ಪ ಉಪ್ಪು ಹಾಕಿ ಕಿವುಚಿ ಅಮ್ಮ ಮಾಡವ ಗೊಜ್ಜು ಬಹಳ ರುಚಿಕರವಾಗಿರುತ್ತದೆ ಎಂದು ಹೇಳುತ್ತಾ ಮಕ್ಕಳು ಬೆರಳುಗಳನ್ನು ಚಪ್ಪರಿಸಿ ನೆಕ್ಕುತ್ತಾ ಆಸ್ವಾದಿಸುತ್ತಿದ್ದರು. ಊಟದ ನಂತರ ಮಕ್ಕಳು ಚಾಪೆ ಹಾಸಿ ಸುಮತಿಯ ಕೈಯನ್ನು ದಿಂಬಾಗಿಸಿಕೊಂಡು ಮಲಗಿ ಅಮ್ಮ ಹೇಳುವ ಕಥೆಯನ್ನು ಕೇಳುತ್ತಾ ಮಕ್ಕಳು ನಿದ್ರೆಗೆ ಜಾರಿದರು. ಸುಮತಿ ಬೆಳಗ್ಗೆ ಬೇಗನೆ ಎದ್ದು ತಿಂಡಿ ಮಾಡಿದಳು. ಭಾನುವಾರ ಬೆಳಗ್ಗೆ ಸುಮತಿಯ ಜೊತೆ ಮೂವರು ಮಕ್ಕಳು ಶಾಲೆಗೆ ಹೊರಟರು. ಮಕ್ಕಳು ಬಂದರೆ ಸುಮತಿಗೆ ಸ್ವಲ್ಪ ನಿರಾಳವಾಗಿರುತ್ತಿತ್ತು. ತೋಟದ ಕೂಲಿ ಕೆಲಸಗಾರರ ಮಕ್ಕಳಿಗೆ ಅಕ್ಷರಭ್ಯಾಸ ಮಾಡಿಸಲು ಮಕ್ಕಳು ಅವಳಿಗೆ ನೆರವಾಗುತ್ತಿದ್ದರಿಂದ ಅಷ್ಟು ಆಯಾಸವಾಗುತ್ತಿರಲಿಲ್ಲ. ಶಾಲೆಗೆ ಹೊರಡುವ ಮುನ್ನ ಮಧ್ಯಾಹ್ನದ ಊಟಕ್ಕೆ ಬೇಕಾದ ಬುತ್ತಿ ತುಂಬಿಕೊಳ್ಳುತ್ತಿದ್ದರು. ಅಲ್ಲಿನ ಬಂಗಲೆಯ ಮೇಲ್ವಿಚಾರಕ ಬಂಗಲೆಯ ಸುತ್ತಲಿರುವ ಹಣ್ಣಿನ ಗಿಡಗಳಿಂದ ಹಣ್ಣುಗಳನ್ನು ಕಿತ್ತು ತಂದು ಕೊಡುವರು.. ಆ ಹಣ್ಣುಗಳನ್ನು ಶಾಲೆಯ ಮಕ್ಕಳಿಗೂ ಕೊಟ್ಟು ಸುಮತಿ ಮತ್ತು ಮಕ್ಕಳು ತಿನ್ನುತ್ತಿದ್ದರು.  ಸಂಜೆ ಹೊತ್ತಿಗೆ ಶಾಲೆಯಿಂದ ಹೊರಟು ಮಾತನಾಡುತ್ತಾ ಅಮ್ಮನ ಕೈಹಿಡಿದು ಮಕ್ಕಳು ಜೊತೆಗೆ ನಡೆಯುವರು. ದಾರಿ ಹೋಕರಿಗೆ ಈ ತಾಯಿ ಮಕ್ಕಳ ಬಾಂಧವ್ಯ ಕಂಡು ಸಂತಸವಾಗುತ್ತಿತ್ತು. ಸುಮತಿ ಟೀಚರಿಗೆ ಹಣ ಐಶ್ವರ್ಯ ಇಲ್ಲದಿದ್ದರೇನು, ಮಕ್ಕಳು ಆಕೆಗೆ ನೆರಳಾಗಿ ಇರುವರು ಎಂದು ಹೇಳಿಕೊಳ್ಳುತ್ತಿದ್ದರು. ಮಕ್ಕಳೊಂದಿಗೆ ಮಾತನಾಡುತ್ತಾ ನಡೆದರೆ ಸುಮತಿಗೆ ದಾರಿ ಸಾಗುವುದು ತಿಳಿಯುತ್ತಿರಲಿಲ್ಲ. ಮನೆ ತಲುಪಿದ ಮೇಲೆಯೂ ಮಕ್ಕಳು ಸುಮತಿಯ ಹಿಂದೆ ಮುಂದೆ ಸುಳಿದಾಡುತ್ತಾ ಕೀಟಲೆ ಮಾಡುತ್ತಾ ನಗಿಸುತ್ತಾ ಕಾಲ ಕಳೆಯುವರು. ಮಾರನೇ ದಿನ ಬೇಗನೆ ಎದ್ದು ಮಗಳು ಹೊರಡಲು ಅನುವಾದಳು. ವಾರಕ್ಕೊಮ್ಮೆ ಮಗಳು ಬರುವಾಗ ಎಷ್ಟು ಸಂಭ್ರಮಿಸುತ್ತಿದ್ದಳೋ ಅವಳನ್ನು ಕಳುಹಿಸಿಕೊಡುವಾಗ ಸುಮತಿಗೆ ಅಷ್ಟೇ ಸಂಕಟವಾಗುತ್ತಿತ್ತು. ಹೀಗೆ ಕೆಲವು ತಿಂಗಳುಗಳು ಕಳೆದವು. ಸುಮತಿಗೆ ಈಗ ಮೊದಲಿಗಿಂತ ಆಯಾಸ ಹೆಚ್ಚಾಗುತ್ತಿತ್ತು. ಒಂದು ದಿನ ಸುಮತಿ ಬೆಳಗಿನ ಬಸ್ಸಿನಲ್ಲಿ ಎರಡನೇ ಮಗಳು ಕೆಲಸ ಮಾಡುತ್ತಿದ್ದ ಅನಾಥಾಶ್ರಮದ ಕಡೆಗೆ ಹೊರಟಳು. ಮೂರನೇ ಮಗಳು ಬಸ್ಸು ಹತ್ತಲು ಅಮ್ಮನಿಗೆ ಸಹಾಯ ಮಾಡಿದಳು. ಸುಮತಿಯ ಬದಲಿಗೆ ಶಾಲೆಗೆ ಹೋಗಬೇಕಾಗಿದ್ದ ಕಾರಣ ಅವಳು ತಾಯಿಯೊಂದಿಗೆ ಸಕಲೇಶಪುರಕ್ಕೆ ಹೊರಡಲಿಲ್ಲ. ಒಂದು ದಿನವೂ ಶಾಲೆಯ ಕೆಲಸ ತಪ್ಪಿಸುವಂತೆ ಇರಲಿಲ್ಲ. ತಪ್ಪಿದರೆ ಎಲ್ಲಿ ಕೆಲಸ ಕೈಬಿಟ್ಟು ಹೋಗುವುದೋ ಎನ್ನುವ ಭಯ ಸುಮತಿಯನ್ನು ಸದಾ ಕಾಡುತ್ತಿತ್ತು. ವರಮಾನಕ್ಕೆ ಇದೊಂದೇ ಮಾರ್ಗವಿತ್ತು. ಎರಡನೇ ಮಗಳು ಈಗಷ್ಟೇ ಕೆಲಸಕ್ಕೆ ಸೇರಿಕೊಂಡಿದ್ದಾಳೆ. ಅವಳಿಗೆ ಸಿಗುವ ಸಂಬಳದಿಂದ ಮನೆಯ ಪೂರ್ತಿ ಖರ್ಚು ವೆಚ್ಚಗಳನ್ನು ಸರಿತೂಗಿಸಲು ಸಾಧ್ಯವಾಗುತ್ತಿರಲಿಲ್ಲ.  ಅದೂ ಅಲ್ಲದೇ ಇತ್ತೀಚೆಗೆ ಕೆಲವು ತಿಂಗಳುಗಳಿಂದ ತಾನೇ ಅವಳು ಕೆಲಸಕ್ಕೆ ಹೋಗುತ್ತಿರುವುದು. ಜೊತೆಗೆ ವಿದ್ಯಾಭ್ಯಾಸವನ್ನು ಮುಂದುವರಿಸುತ್ತಿದ್ದಾಳೆ. ಹಾಗಾಗಿ ನನ್ನ ಬದಲು ಈ ಮಗಳಾದರೂ ಶಾಲೆಗೆ ಹೋಗಲೇಬೇಕು ಎಂದು ಆಲೋಚಿಸಿ ಮೂರನೇ ಮಗಳನ್ನು ಶಾಲೆಗೆ ಹೋಗುವಂತೆ ತಿಳಿಸಿದಳು. ಸಕಲೇಶಪುರ ನನಗೆ ಗೊತ್ತಿಲ್ಲದ ಊರಲ್ಲ. ಮಗಳು ಕೆಲಸ ಮಾಡುತ್ತಿರುವ ಅನಾಥಾಶ್ರಮ ಹುಡುಕುವುದು ಕಷ್ಟವೇನಲ್ಲ ಎಂದೂ ಮಗಳಿಗೆ ತಿಳಿಸಿದಳು. ಆದರೆ ಸಕಲೇಶಪುರದ ಬಸ್ ನಿಲ್ದಾಣ ಬಂದಾಗ ಬಸ್ಸಿಂದ ಕೆಳಗಿಳಿಯಲು ಸುಮತಿ ಬಹಳ ಕಷ್ಟ ಪಡಬೇಕಾಯಿತು. ಒಂದೊಂದು ಹೆಜ್ಜೆ ಇಡುವುದೂ ಅವಳಿಗೆ ಕಷ್ಟಕರವೆನಿಸುತ್ತಿತ್ತು. ಬಸ್ ನಿಲ್ದಾಣದಿಂದ ಮಗಳು ಇರುವ ಅನಾಥಾಶ್ರಮದ ಬಳಿಗೆ ಹೋಗಲು ಹೆಚ್ಚು ದೂರವೇನೂ ಇರಲಿಲ್ಲ. ಎಂದಿಲ್ಲದ ಇಂದೇಕೋ ಅವಳ ಕಣ್ಣುಗಳಿಗೆ ಎಲ್ಲವೂ ಮಸುಕಾಗಿ ಕಾಣುತ್ತಿತ್ತು. ತಡವರಿಸುತ್ತಾ ಹೇಗೋ ಮಗಳು ವಾಸವಿದ್ದ ಅನಾಥಾಶ್ರಮದ ಬಾಗಿಲ ಮುಂದೆ ಬಂದು ನಿಂತಳು. ತಲೆ ಸುತ್ತು ಬಂದಂತೆ ಅನುಭವವಾಯಿತು. ಅಲ್ಲಿಯೇ ಮೆಟ್ಟಿಲ ಮೇಲೆ ಕುಳಿತಳು. ಸ್ವಲ್ಪ ಸುಧಾರಿಸಿದ ನಂತರ ಮೆಲ್ಲನೆ ಎದ್ದು ಬಾಗಿಲನ್ನು ತಟ್ಟಿದಳು. ಅನಾಥಾಶ್ರಮದ ಮಕ್ಕಳಲ್ಲಿ ಒಬ್ಬ ಹುಡುಗಿ ಬಂದು ಬಾಗಿಲು ತೆರೆದಳು…. ಯಾರು ನೀವು? ಯಾರು ಬೇಕಿತ್ತು ನಿಮಗೆ? ಎಂದು ಕೇಳಿದಳು. ಆ ಹುಡುಗಿಯ ಮುಖ ಸುಮತಿಗೆ ಸ್ಪಷ್ಟವಾಗಿ ಕಾಣುತ್ತಿರಲಿಲ್ಲ. ಹಾಗಾಗಿ ತನ್ನ ಮಗಳ ಹೆಸರನ್ನು ಹೇಳಿ…”ಅವರು ಇಲ್ಲಿದ್ದಾರೆಯೇ”…. ಎಂದು ಕೇಳಿದಳು. ಒಳಗೆ ಕುಳಿತು ಆಶ್ರಮಕ್ಕೆ ಬೇಕಾದ ದಿನಸಿಗಳ ಪಟ್ಟಿಯನ್ನು ಮಾಡುತ್ತಿದ್ದ ಸುಮತಿಯ ಎರಡನೇ ಮಗಳು ಅಮ್ಮನ ಧ್ವನಿ ಕೇಳಿದಂತಾಗಿ ಎದ್ದು ಹೊರಗೆ ಬಂದಳು.  ಓಹ್!! ಅಮ್ಮ ಬಂದಿದ್ದಾಳೆ…. ಎಂದು ಹೇಳುತ್ತಾ ಕೋಣೆಯಿಂದ ಹೊರ ಬಂದ ಮಗಳ ಮುಖದಲ್ಲಿ ಮಂದಹಾಸ ಮೂಡಿತು. ಆದರೆ ಮರುಕ್ಷಣವೇ ಅವಳ ಹಣೆಯಲ್ಲಿ ಗೆರೆಗಳು ಮೂಡಿದವು. ಅಮ್ಮ ಏಕೆ ಇಷ್ಟು ಬೆಳಗ್ಗೆ ನನ್ನನ್ನು ಹುಡುಕಿಕೊಂಡು ಬಂದಿದ್ದಾಳೆ? ನಾನು ಮನೆಗೆ ಹೋಗಿ ಬಂದು ಒಂದೆರಡು ದಿನಗಳಷ್ಟೇ ಆಗಿವೆ ಎಂದುಕೊಳ್ಳುತ್ತಾ ಅಚ್ಚರಿಯಿಂದ ಅಮ್ಮನನ್ನು ಒಮ್ಮೆ ನೋಡಿದಳು. ಓಡು ನಡಿಗೆಯಲ್ಲಿ ಸುಮತಿಯ ಬಳಿ ಬಂದು ಕೈಹಿಡಿದುಕೊಂಡು, … “ನಾನು ಇಲ್ಲೇ ಇರುವುದು…. ಅಮ್ಮ ಒಳಗೆ ಬಾ”…. ಎಂದಳು. ಮಗಳ ಧ್ವನಿ ಕೇಳಿ ಸುಮತಿ ಅವಳೆಡೆಗೆ ನೋಡಿದಳು. ಅವಳ ಮುಖ ಅಸ್ಪಷ್ಟವಾಗಿ ಕಂಡಿತು. ಕಣ್ಣುಗಳು ಹನಿಗೂಡಿದವು. ಮಗಳ ಕೈ ಹಿಡಿದು ತಡವರಿಸುತ್ತಾ ಅನಾಥಾಶ್ರಮದ ಒಳಗೆ ಹೆಜ್ಜೆ ಇಟ್ಟಳು. ಕುತೂಹಲದಿಂದ ಯಾರಿರಬಹುದೆಂದು ನೋಡಲು ಅನಾಥಾಶ್ರಮದ ಮಕ್ಕಳೆಲ್ಲ ಅಲ್ಲಿ ಬಂದು ಸೇರಿದರು….”ಇವರು ನನ್ನ ತಾಯಿ”…. ಎಂದು ಮಕ್ಕಳಿಗೆ ಪರಿಚಯಿಸಿದಳು. ಮಕ್ಕಳೆಲ್ಲರೂ….”ನಮಸ್ತೆ ಅಮ್ಮಾ”….ಎಂದು ಕೈ ಮುಗಿದರು. ಸುಮತಿ ಮುಗುಳ್ನಕ್ಕಳಷ್ಟೇ, ಮಾತನಾಡಲು ಅವಳಿಂದ ಸಾಧ್ಯವಾಗಲಿಲ್ಲ. ಇದನ್ನರಿತ ಮಗಳು ತನ್ನ ಕೋಣೆಯ ಕಡೆಗೆ ಅಮ್ಮನನ್ನು ಕರೆದುಕೊಂಡು ಹೋದಳು. ಸುಮತಿಯ ಕೈಗಳು ನಡುಗುತ್ತಿದ್ದವು. ಬಾಯಿ ಒಣಗಿತ್ತು. ಏನೋ ಹೇಳಲು ಮುಂದಾದಳು ಆದರೆ ಧ್ವನಿ ಗಂಟಲಿನಿಂದ ಆಚೆ ಬರಲಿಲ್ಲ. ಅಮ್ಮನ ಈ ಸ್ಥಿತಿಯನ್ನು ಕಂಡು ಮಗಳಿಗೆ ತುಂಬಾ ಗಾಬರಿಯಾಯಿತು. ಮೂರು ಬೆಂಚುಗಳನ್ನು ಸೇರಿಸಿ ಮಂಚದಂತೆ ಮಾಡಿಕೊಂಡಿದ್ದ ಹಾಸಿಯ ಮೇಲೆ ಅಮ್ಮನನ್ನು ಕುಳ್ಳಿರಿಸಿ, ಒಬ್ಬ ಹುಡುಗಿಯನ್ನು ಕರೆದು ಸ್ವಲ್ಪ ನೀರನ್ನು ತರುವಂತೆ ತಿಳಿಸಿದಳು. 

Read Post »

ಅಂಕಣ ಸಂಗಾತಿ, ಜಯದೇವಿ ತಾಯಿ ಲಿಗಾಡೆ ಜೀವನ

ಧಾರಾವಾಹಿ ಸಂಗಾತಿ-10 ಜಯದೇವಿ ತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯಕೊಡುಗೆ ನೀಡಿದ ಮಹಾಚೇತನ ಸವಿತಾ ದೇಶಮುಖ ಭಾಗ- 10ಜಯದೇವಿ ತಾಯಿಯವರ ಜೀವನ ವೃತ್ತಾಂತ ಜಯದೇವಿತಾಯಿಯವರು *೧೯೩೪ರಲ್ಲಿ ವೀರಶೈವ ಸಾಹಿತ್ಯ ಸಭೆಯ ಅಧ್ಯಕ್ಷರಾಗಿ …….ಸ್ತ್ರೀ ಜಾಗೃತಿ ,ಮಹಿಳೆಯರ ಪ್ರಗತಿಯ ಕುರಿತು ಮಾತನಾಡುತ್ತ …….“ಮಹಿಳೆಯರು ಮನೆ ಕೆಲಸದಲ್ಲಿ ಜೇಡರ ಹುಳುವಿನಂತೆ ಬಂಧಿಸಿಕೊಂಡಿದ್ದಾಳೆ….ಓದು ಬರಹಗಳಿಗೆ ಸಮಯ ಉಳಿಸಿಕೊಳ್ಳದೆ ದುಡಿಯುತ್ತಿರುತಾಳೆ ….,ಅವಳಿಗೆ ದುಡಿಮೆ ಆರ್ಥಿಕ ಆದಾಯವಿಲ್ಲದ ಕಾರಣ ಅವಳು ಪರಾವಲಂಬನೆ ಆಗಿ ಬದುಕುತ್ತಿದ್ದಾಳೆ ಕೀಳರಮಿಯ ಭಾವನೆಯಲ್ಲಿ ಬಳಲುತ್ತಿದ್ದಾಳೆ…..!!!! ಇಂಥ ಅವಹೇಳನಕರ ಭಾವನೆಗಳು ಅಜ್ಞಾನದಿಂದ ಉಂಟಾದದ್ದು…. ಈ ತಾರತಮ್ಯದ ಅಜ್ಞಾನವನ್ನು ಅತ್ಯಅಮೂಲ್ಯವಾದಂಥ ವಚನ ಸಾಹಿತ್ಯದ ಅಭ್ಯಾಸದಿಂದ ವಚನಗಳ ಸತತ ಮನನ ಗೊಳಿಸಿಕೊಳ್ಳುವುದರಿಂದ ದಾಸ್ಯತ್ವಭಾವನೆಗಳಿಂದ ದೂರಗೊಳ್ಳಬಹುದಾಗಿದೆ… !!! ಮಹಿಳೆಯರು ಶಿಕ್ಷಣ ಪಡೆದು ಸಾಹಿತ್ಯ ಬರವಣಿಗೆಯಲ್ಲಿ ತೊಡಗಿಕೊಂಡು ಸ್ವಾವಲಂಬನ ಬದುಕು ಸಾಗಿಸುವ ಮೂಲಕ ದಾಶ್ಯತ್ವದ ನೆಲೆಗಳ ಮಧ್ಯದಲ್ಲಿ ತನ್ನದೇ ಆದ ಬದುಕನ್ನು ಸ್ಥಾಪಿಸಬೇಕು . ಮಹಿಳೆಯರಲ್ಲಿ ಜಾಗೃತಿ ಉಂಟು ಮಾಡುವುದೇ ನಮ್ಮ ಸಭೆಗಳ ಉದ್ದೇಶವಾಗಿರಬೇಕು ಅಂತ ಹೇಳಿದರು .ಮಹಿಳೆಯರು ತಮ್ಮ ಗೌರವವನ್ನು …. ಕೇವಲ ಆಚರಣೆಗಳಿಗೆ ಸೀಮಿತ ಗೊಳಿಸಿಕೊಳ್ಳಬಾರದು ಸದಾ ತಮ್ಮ ಅಭಿವೃದ್ಧಿಗಾಗಿ ಕೆಲಸ ಮಾಡಬೇಕೆಂದು” ಜಯದೇವಿ ತಾಯಿಯವರು ಬಯಸುತ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅಂದಿನ ಸಂಪ್ರದಾಯಿಕ ಕುಟುಂಬ ವ್ಯವಸ್ಥೆಯಲ್ಲಿ ಹೆಣ್ಣು ಮಕ್ಕಳು ಪುರುಷ ಸಮಾಜದ ಸಮವಾಗಿ ಸಭೆ ಸಮಾರಂಭಗಳನ್ನು ಪಾಲ್ಗೊಳ್ಳುವುದೇ ವಿರಳವಾಗಿತ್ತು .ಹೆಣ್ಣು ಮಕ್ಕಳು ಶಿಕ್ಷಣ ಕಲಿತರೆ ಮನೆ ಕೆಲಸ ಮಾಡುವುದಿಲ್ಲ ಎಂದು ಅವಳನ್ನು ಹಿಂದಿಟ್ಟಿದ್ದರು. ಸಾಂಪ್ರದಾಯಿಕ ವ್ಯವಸ್ಥೆಯಲ್ಲಿ ಹೆಣ್ಣು ಮಕ್ಕಳನ್ನು ಸಾಮಾಜಿಕ ರಂಗದಿಂದ ಹಿಂದೆಸರಿಸುವ ಎಲ್ಲ ಗೊಡ್ಡು ಆಚರಣೆಗಳನ್ನು ಮೌಢ್ಯತೆಗಳನ್ನು ಹೇರಿ ಮಹಿಳೆಯರು ಭಯ ಬೀಳುವಂತೆ ಮಾಡುತ್ತಿದ್ದ ಕಾಲ ಅದಾಗಿತ್ತು.. ಶೈಕ್ಷಣಿಕವಾಗಿ ಎಷ್ಟೇ ಸಮಾನತೆಯನ್ನು ಒದಗಿಸಿತ್ತೇವೆ ಅಂತ ಬ್ರಿಟಿಷರು ಹೇಳುತ್ತಿದ್ದರು ಆಗಿನ ಕಾಲದಲ್ಲಿ ಹೆಣ್ಣು ಮಗಳು ನಾಲ್ಕು ಗೋಡೆಯ ಮಧ್ಯೆ ಅವಳ ಜೀವನವನ್ನು ನಡೆಸಬೇಕು ಕುಟುಂಬವನ್ನು ನಿಭಾಯಿಸಿಕೊಂಡು ಮಕ್ಕಳನ್ನು ಹೆತ್ತು ಬೆಳೆಸಬೇಕು ಅನ್ನುವ ಕಾಲ ಅದಾಗಿತ್ತು…. ಅಂತಹದರಲ್ಲಿ ತಾಯಿಯವರು ಹೆಣ್ಣು ಮಕ್ಕಳು ಜೇಡರ ಹುಳದಂತೆ ಬಲೆಯಲ್ಲಿ ಸಿಕ್ಕಿ ಬಿಳದೆ ಅದನ್ನು ಬಿಡಿಸಿ ಹೊರಗೆ ಬರಬೇಕು ಸಾಹಿತ್ಯವನ್ನು ಓದಬೇಕು.ಬರವಣಿಗೆ ಮಾಡಬೇಕು ತನ್ನ ಸರ್ವತೋ ಅಭಿವೃದ್ಧಿಯಲ್ಲಿ ತೊಡಗಿಕೊಳ್ಳಬೇಕು ,ತನ್ನದೇ ಆದ ಜೀವನವನ್ನು ನಿರ್ಮಿಸಬೇಕು ಅನ್ನುವ ದೀರೋದ್ಯಾತ ಕರೆಯನ್ನು ಜಯದೇವಿತಾಯಿಯವರು ಹೆಣ್ಣು ಮಕ್ಕಳಿಗೆ ಕೊಡುತ್ತಿದ್ದರು.‌…ಆಗಿನ ದಿನಗಳಲ್ಲಿ,!!! ಅವರು ತಮ್ಮ ಭಾಷಣಗಳಲ್ಲಿ ಹೆಣ್ಣು ಮಕ್ಕಳ ಅಭಿವೃದ್ಧಿ ಬಗ್ಗೆ ಪ್ರಸ್ತಾಪಿಸುವದಷ್ಟೇ ಅಲ್ಲದೆಸ್ವಂತ ಸೊಲ್ಲಾಪುರದಲ್ಲಿ ವೃದ್ಧಾಶ್ರಮ ಅನಾಥ ಆಶ್ರಮಗಳನ್ನು ಕೇವಲ ಹೆಣ್ಣು ಮಕ್ಕಳಿಗಾಗಿ ತೆರೆದರು. ಅವರಿಗೆ ಪೂಜೆ ಭಜನೆ ಅನೇಕ ಸಮಾಜಪರ ಚಟುವಟಿಗಳಿಗಾಗಿ ಅನುಕೂಲಗಳನ್ನು ಮಾಡಿಕೊಟ್ಟರು. ವೃದ್ಧರು… ಅನಾಥ ಹೆಣ್ಣು ಮಕ್ಕಳ ಮನಸ್ಸಿನ ನೆಮ್ಮದಿಗಾಗಿ ವಚನ ಸ್ಪರ್ಧೆಗಳನ್ನು ಅನೇಕ ವಿವಿಧ ರೀತಿಯ ಚಟುವಟಿಕೆಗಳನ್ನು ಏರ್ಪಡಿಸುತಿದ್ದರು. ೧೯೩೫ರಲ್ಲಿ ಶಿಕ್ಷಣಕ್ಕಾಗಿ ಹರಡೇಕರ್ ಮಂಜಪ್ಪನವರು ” ಅಕ್ಕಮಹಾದೇವಿ ಜಯಂತಿ* ಬಸವ ಜಯಂತಿ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾರಾರಂಭಿಸಿದರು ಅಕ್ಕನ ಬೆಳಗನ್ನು ಅಲ್ಲಲ್ಲಿ ಸ್ಥಾಪಿಸಿದ್ದರು. ಮಹಿಳೆಯರ ಪ್ರಚಲಿತ ವಿದ್ಯಮಾನಗಳನ್ನು ಅರಿತುಕೊಂಡು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳಲಿ ಅನ್ನುವ ಉದ್ದೇಶಕ್ಕಾಗಿ ಹರಡೇಕರ್ ಮಂಜಪ್ಪನವರ ಕನ್ನಡ ಪತ್ರಿಕೆಯನ್ನು ವೀರಶೈವ ಮಹಿಳಾ ಜ್ಞಾನ ಮಂದಿರಕ್ಕೆ ತರಿಸುತ್ತಿದ್ದರು. ಹೀಗಾಗಿ ತಾಯಿಯವರು ಕನ್ನಡಕ್ಕೆ ಚಿರಪಚಿತರಾಗಿದ್ದರು . ಹಾಗೆ ಹರಡೆಕರ ಮಂಜಪ್ಪನವರೊಂದಿಗೆ ಸ್ವಾತಂತ್ರದ ಹೋರಾಟ ಸ್ತ್ರೀ ವಿಮೋಚನೆಯ ಬಗ್ಗೆ ಅನೇಕ ಸಲ ಭೇಟಿ ಮಾಡಿದ್ದರು. ಜಯದೇವಿ ತಾಯಿಯವರು ಸ್ವಾತಂತ್ರ ಹೋರಾಟ ಹಾಗೂ ಹೆಣ್ಣು ಮಕ್ಕಳ ಸ್ವಾತಂತ್ರ್ಯಕ್ಕಾಗಿ ಆಯೋಜಿಸಲಾಗುವ ಎಲ್ಲ ಸಭೆಗಳಲ್ಲಿ ಪಾಲ್ಗೊಳ್ಳುತ್ತಿದ್ದರು .*೨೪-೪-೧೯೩೯ *ರಂದು ವೀರಶೈವ ಮಹಾಸಭೆಯ ಮಹಿಳಾ ಪರಿಷತ್ತಿನ ಅಧ್ಯಕ್ಷ ಯಾದರು. ಸಭೆಯಲ್ಲಿ ಮಾತನಾಡುತ್ತಾ…*ಎಲ್ಲ ಸ್ತ್ರೀ ಪುರುಷರು ಸಮಾನರು…… ಸ್ತ್ರೀಯು ಪತಿಯ ಅರ್ಧಾಂಗಿಣಿಯಾಗಿ ಮನೆ ಕೆಲಸವನ್ನೆಲ್ಲ ಮಾಡುವಂತೆ ಪತಿಯು ಸಹ ಅವಳಷ್ಟೇ ಜವಾಬ್ದಾರಿ ಹೊಂದಿರುತ್ತಾರೆ ಇಬ್ಬರು ಸರಿ ಹಂಚಿಕೊಂಡು ಕುಟುಂಬವನ್ನು ನಡೆಸಿಕೊಂಡು ಹೋದರೆ ಸ್ವರ್ಗವನ್ನೇ ಧರೆಗೆ ಇಳಿಸಬಹುದು.. ನಮ್ಮಹಿಂದಿನ ಸಂಸ್ಕೃತಿಯನ್ನು ಮರೆಯದೇ ಸಮಾನತೆ ಯೊಂದಿಗೆ ನಡೆಯಬೇಕು‌. ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರಿಗೆ ಶಿಕ್ಷಣದ ಅನುಕೂಲ ಸಾಕಷ್ಟು ಒದಗಿ ಬಂದಿದೆ ಅದನ್ನು ಸದುಪಯೋಗ ಪಡಿಸಿಕೊಂಡು ಶಿಕ್ಷಣ ಪಡೆದುಕೊಳ್ಳಬೇಕು ಎಂದು ಸಾರಿದರು. *೧೯೪೦ರಲ್ಲಿ * ಜಯದೇವಿ ತಾಯಿಯವರು ಸ್ವಂತ ಜಗವನ್ನು ಖರೀದಿಸಿ* ಜಯದೇವಿ ಕನ್ಯಾ ಶಾಲೆ*ಅಥವಾ *ಕನ್ನಡ ಕನ್ಯಾ ಶಾಲೆ *ಎಂದು ಆ ಶಾಲೆಗೆ ಮರು ನಾಮಕರಣ ಮಾಡಿದರು .ಮುಂದೆ ಮರಾಠಿ ಅಭಿಮಾನಿಗಳು ಕೆಲವರು ಈ ಶಾಲೆಯಲ್ಲಿ ಮರಾಠಿ ಕಲಿಸಲು ಇಚ್ಚಿಸಿದರು. ಕನ್ನಡ ಶಾಲೆ ತೆಗೆದು ಮರಾಠಿ ಆರಂಭಿಸುವುದಾದರೆ ನನ್ನ ಹೆಸರನ್ನು ತೆಗೆದು ಸಿದ್ದರಾಮನ ಹೆಸರು ಶಾಲೆಗೆ ಬರಲಿ ಎಂದು ಹೇಳುವ ಮೂಲಕ ಕನ್ನಡತನವನ್ನು ಎತ್ತಿ ಹಿಡಿಯುತ್ತಾರೆ. ಅಂತಯೇ ಅವರು ಕನ್ನಡದ ಮಾತೆ ಅಂತ ಕರೆಯಲಾಯಿತು. *೧೯೪೦ ರಲ್ಲಿ *ಆಂಧ್ರದ ಸದಾಶಿವಪೇಠದಲ್ಲಿ ಜರುಗಿದ ಬಸವ ಜಯಂತಿ ಕಾರ್ಯಕ್ರಮಕ್ಕೆ ಹೋಗಿ ಬಸವ ಶರಣರು ಶರಣೀಯರಲ್ಲಿ ಇದ್ದ ಸಮಾನತೆಯ ಬಗ್ಗೆ ಭಾಷಣ ಮಾಡಿದರು . *೧೯೪೧ರಲ್ಲಿ *ಉದುಗೀರದಲ್ಲಿ ನಡೆದ ಅಕ್ಕನ ಹುಣ್ಣಿಮೆಯ ಕಾರ್ಯಕ್ರಮಕ್ಕೆ ಹೋಗಿ ಮೂರು ದಿನ ಅಲ್ಲಿಯೇ ಉಳಿದು ಅಧ್ಯಕ್ಷತೆ ವಹಿಸಿ ಸ್ತ್ರೀ ಜಾಗೃತಿ, ಕಾರ್ಯಕ್ರಮ ಹಮ್ಮಿಕೊಂಡರು .ಅದೇ ಸಮಯದಲ್ಲಿ *ಪ್ರಭುರಾವ್ ಕಂಬಳಿ ಬಾಬಾ *ಅವರ ಪರಿಚಯ ಆಯಿತು. ಶರಣ ಸಂಸ್ಕೃತಿ ಮತ್ತು ಸಮಾಜಪರ ಕಾರ್ಯಗಳಲ್ಲಿ ಸಹಕಾರ ನೀಡುವವರಾಗಿದ್ದರು ಕಂಬಳಿಬಾಬಾರು. ೧೯೪೧ ರಲ್ಲಿ ಹೈದ್ರಾಬಾದಿನಲ್ಲಿ ನಡೆದ ನಾಲ್ಕನೇ *ವೀರಶೈವ ಮಹಾಸಭೆಯ ಪ್ರಾಂತೀಯ ಸಮ್ಮೇಳನದ *ಅಧ್ಯಕ್ಷತೆಯ ಸ್ಥಾನವನ್ನು ವಹಿಸಿದ್ದರು. *ಹೆಣ್ಣು ಬಾಲ್ಯದಲ್ಲಿ ತಂದೆಯ ಆಶ್ರಯದಲ್ಲಿ ಯೌವನದಲ್ಲಿ ಗಂಡನ ಆಶ್ರಯದಲ್ಲಿ ವಯಸ್ಸಾದ ನಂತರ ಮಗನ ಆಶ್ರಯದಲ್ಲಿ ಕಳೆಯುತ್ತಾಳೆ. ತಂದೆ ಇಲ್ಲದವರ ,ಮದುವೆಯಾದರು ಮಕ್ಕಳಿಲ್ಲದ ಮಹಿಳೆಯರ ಸಮಸ್ಯೆಗೆ ಪರಿಹಾರವೇನು??!ಹೆಣ್ಣಿಗೆ ಸೌರಕ್ಷಣೆ ಕೊಡುವುದು ಸಮಾಜದ ಹೊಣೆಯಲ್ಲವೇ….??!!!ವೃದ್ಧೆಯಾಗಿ ಅನಾಥರಾದವರಿಗೂ ಸಂರಕ್ಷಣೆ ಕೊಡುವುದು ಸಮಾಜದ ಹೊಣೆಅಲ್ಲವೇ??!! ಅನಾಥ ವಿಧವೆ ಅಸಹಾಯಕರ ಬದುಕಿಗೆ ಒಂದು ನೆಲೆಯನ್ನು ಒದಗಿಸಲು ಯಾವ ವ್ಯವಸ್ಥೆಯನ್ನು ಮಾಡಲಿದ್ದೀರಿ” ಎಂದು ಸಮಾಜವನ್ನು ಪ್ರಶ್ನಿಸಿದರು. ೧೯೪೫ ಜಾಗತಿಕ ಮಹಿಳಾ ವರ್ಷವನ್ನು ಸಾರಿತ್ತು.೧೨-೯-೧೯೪೫ರಂದು*ವಿಜಯಪುರದಲ್ಲಿ *ನಡೆದ ಮಹಿಳಾ ಪರಿಷತ್ತಿನ ಉದ್ಘಾಟನೆಯ ಭಾಷಣಕಾರ್ತಿಯಾಗಿ ಬಂದರು. ಹೆಣ್ಣುಮಕ್ಕಳು ಸ್ವಾಭಾವಿಕವಾಗಿ ಭಾವುಕರು ಭಾವನೆಯೇ ಜೀವನವೆಂದು ನಂಬಿಕೊಂಡವರು ಅವರು ಜೀವನದ ವಿವಿಧ ಸನ್ನಿವೇಶಗಳಲ್ಲಿ ಹೊಂದಾಣಿಕೆ ಮನೋಭಾವವುಳ್ಳವರು ತಮಗೆ ಒದಗಿ ಬರುವ ಕಷ್ಟದ ಅನುಭವಗಳನ್ನು ಅಭಿವ್ಯಕ್ತಗೊಳಿಸಲು ಸ್ವಾತಂತ್ರ್ಯವನ್ನು ಪಡೆದುಕೊಳ್ಳಬೇಕು ಎಂದು ಹೇಳುತ್ತಾ …..ಸಮಾಜದ ಮಹಿಳೆಯರ ಅಸಹಾಯಕತೆ ಸ್ಥಾನಮಾನ ಹಾಗೂ ಆಕೆಯ ಭದ್ರತೆಯ ಕುರಿತು ಜನರನ್ನು ಎಚ್ಚರಿಸಿದ್ದರು. ಆಗ ಧಾರವಾಡದಲ್ಲಿ ಕರ್ನಾಟಕ ಸಂಘದ ಆಚರಣೆ ಹಮ್ಮಿಕೊಂಡಾಗ…. ಮುಖ್ಯ ಅತಿಥಿಯಾಗಿ ಜಯದೇವಿ ತಾಯಿಯವರು ಪಾಲ್ಗೊಂಡಿದ್ದರು . “ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಯರನ್ನು ಗೌರವದಿಂದ ಕಾಣುವುದರ ಜೊತೆಗೆ ಶೋಷಣೆ ಮಾಡುತ್ತಾ ಬಂದಿರುವುದು ವಾಸ್ತವ್ಯ ಸಂಗತಿ. ಸದಾ ಕಾಲ ಮಹಿಳೆಯರನ್ನು ಹೀನವಾಗಿ ಕಂಡು ಶೋಷಣೆಯ ಬಲಿಪಶು ಮಾಡುತ್ತಾರೆ .ಇಂಥ ಸಂಸ್ಕೃತಿಯ ನೆಲೆಯಲ್ಲಿ ಬೆಳೆದು ಬಂದ ಭಾರತೀಯ ಕುಟುಂಬಗಳು ಸಾಕಷ್ಟಿವೆ .ಬ್ರಿಟಿಷರ ಶಿಕ್ಷಣ ಪ್ರಭಾವದ ಹಿನ್ನೆಲೆಯಲ್ಲಿ ವಿದ್ಯಾವಂತ ಹಾಗೂ ಶ್ರೀಮಂತ ವರ್ಗದ ಕುಟುಂಬದ ಸ್ತ್ರೀ ಪುರುಷರು ಶಿಕ್ಷಣವನ್ನು ಪಡೆದುಕೊಂಡು ಆಧುನಿಕ ಸಮಾಜದ ನಿರ್ಮಾಣಕ್ಕೆ ಕಾರಣರಾದವರು.ಉನ್ನತ ಶಿಕ್ಷಣ ಪಡೆದ ಮಹಿಳೆಯರು ಹಲವು ಭಾಷೆಗಳನ್ನು ಬಲ್ಲವರಾಗಿರುತ್ತಾರೆ. ಅವರು ನಮ್ಮನಾಡಿನ ಉತ್ತಮವಾದ ಸಾಹಿತ್ಯವನ್ನು ಅನ್ಯ ಭಾಷಿಗರಿಗೆ ತಿಳಿಸಬೇಕು‌. ಸ್ತ್ರೀಯರು ಪುರುಷರಂತೆ ಲೌಕಿಕ ಅಲೌಕಿಕ ಎರಡನ್ನು ಸಾಧಿಸಲು ಸಾಧ್ಯ. ಮಾನವ ಕುಲದ ಮುನ್ನಡೆಗೆ ಕಾರಣರಾಗಲು ಸಾಧ್ಯವೆನ್ನುತಿದ್ದರು. ಅದೇ ರೀತಿ ಪ್ರತಿಯೊಂದು ಹೆಣ್ಣು ಮಗಳು ಮುಂದೆ ಬಂದು ಸಮಾಜಕ್ಕಾಗಿ ಕೊಡುಗೆಯನ್ನು ಕೊಡಬೇಕು ಎಂದು ಕೇಳಿಕೊಂಡರು. ಜಯದೇವಿ ತಾಯಿಯವರು* ಪಂಡರಪುರದ ವಿಶ್ವ ಹಿಂದೂ ಪರಿಷತ್ತಿನಲ್ಲಿ *ಭಾಗವಹಿಸಿದಾಗ ಒಬ್ಬ ಭಾಷಣಗಾರರು “ಘೋರ ಕುಂಬಾರ್ ಗಡಗಿ ಕೊಡಲಿ…. ತುಕಾರಾಂ ಕಾಳು ಕೊಡಲಿ…..” ಎಂದು ಹೇಳುತ್ತಾ ಎಲ್ಲ ಸಂತರನ್ನು ಅವರವರ ಗುಣ ಕಾಯದಿಂದ ನೆನೆಯುತ್ತ ಕೇವಲ ಶ್ರೇಷ್ಠ ಪುರುಷ ಸಂತರದಷ್ಟೇ ನೆನೆದರು. ಆಗ ಜಯದೇವಿ ತಾಯಿಯವರು ತಮ್ಮ ಭಾಷಣದಲ್ಲಿ “ಸಕ್ಕೂಬಾಯಿಯನ್ನು ಕರೆಯಿರಿ ಕಾಳು ಬೀಸಿ ಕೊಡಲಿ….. ರುಕುಮಾಬಾಯಿಯನ್ನು ಕರೆಯಿರಿ ಟೊಂಕದ ಮೇಲೆ ಕೈ ಇಟ್ಟುಕೊಂಡು ಉಪಚಾರಗಳನ್ನು ನೋಡಿಕೊಳ್ಳಲಿ ……ಇಂಥ ಸಂತಿನಿಯರನ್ನು ನೀವು ಮರೆಯೋದೇಕೆ…??!!! ಎಂದು ಪ್ರಶ್ನಿಸಿದರು .ಮಹಿಳೆಯರ ಸಾಧನೆಯನ್ನು ಸ್ಮರಿಸುತ್ತ ಸಮಾಜದ ವ್ಯವಸ್ಥೆಯನ್ನು ತಾವಿದ್ದ ಸ್ಥಳದಲ್ಲಿ ಟೀಕಿಸುತ್ತಿದ್ದರು. ‌ಸಂತಿಣೀಯರ ಸಾಧನೆಯನ್ನು ಗೌಣ್ಯ ಮಾಡಿ ಅವಳನ್ನು ಮನೆ ಕೆಲಸಕ್ಕೆ ಸೀಮಿತಗೊಳಿಸುತ್ತಿದ್ದ ವ್ಯವಸ್ಥೆಯನ್ನು ಸಹಿಸುತ್ತಿರಲಿಲ್ಲ …….!! ಹರಸೀದೆ ನಿನದಾಟಿ ನಿನ್ಹಾಡಿ ತಾಯವ್ವಬರದೇನ ಮನತುಂಬಿ ಪಾಡಿ ನಮವ್ವಬರದೇನ ಮನೆ ತುಂಬಿ ನಿನ್ಹೆಸರಲೆಕರೆದೇನ ತಾಯಿ ಪದವೆಂದು…. ಎಂದು ಹಾಡುತ್ತಾ ತಾಯಿಯಂದಿರಿಗಾಗಿ ಪದಗಳನು ಬರೆದ ತಾಯಿಯ ಪದಗಳ ಎಂಬ ಕವನ ಸಂಕಲನವು ಪ್ರಚಲಿತವಾಯಿತು . ಹೆಣ್ಣು ಮಕ್ಕಳು ಹುಟ್ಟಿದರೆ ಮನೆಯಲ್ಲಿ ನಡುಗಂಬಗಳು ಸಹ ನಡುಗುತ್ತವೆ ……ಅದೇ ಗಂಡು ಮಕ್ಕಳು ಹುಟ್ಟಿದಾಗ ಗಜಭೀಮ ಹುಟ್ಟಿದನೆಂದು ಬಾಗಿಲಿನ ಚಿಲಕ ಬೋಧಿಗಳೆಲ್ಲ ನಗುತ್ತವೆ……. ಅನ್ನುವುದನ್ನು ತಾಯಿಯವರು ಖಡಾ ಖಂಡಿತವಾಗಿ ವಿರೋಧಿಸುತ್ತಿದ್ದರು. ಹೆಣ್ಣು ಮಕ್ಕಳು ಹುಟ್ಟಿದಾಗ ತಾಯಿ ಅಳಬಾರದು ನೊಂದುಕೊಳ್ಳಬಾರದು ಹೆಣ್ಣು ಜಗದ ಕಣ್ಣು ಎಂದು ತಮ್ಮ ಪದದಲ್ಲಿ ಹೇಳುತ್ತಾರೆ ‌. ಹೆಣ್ಣು ಹುಟ್ಟಿತೆಂದು| ಕಣ್ಣೀರ ಕರಿಬ್ಯಾಡ ಸಣ್ಣಗಾಗಬ್ಯಾಡ ಮನದಾಗ -ತಾಯವ್ವ ಹೆಣ್ಣಿನ ಜಗದ ಕಣ್ಣ!! ಅವರು ಹೋದ ಪ್ರತಿಯೊಂದು ಸಭೆಗಳಲ್ಲಿ“ಹೆಣ್ಣು ಹೆಣ್ಣಲ್ಲ ಹೆಣ್ಣು ರಕ್ಕಸಿಯಲ್ಲಹೆಣ್ಣು ಸಾಕ್ಷಾತ್ ಕಪಿಲಸಿದ್ಧಮಲ್ಲಿಕಾರ್ಜುನ ನೋಡ” ಎಂದು ಶಿವಯೋಗಿ ಸಿದ್ದರಾಮೇಶ್ವರರು ಹೇಳುವ ಮಾತು ಹೇಳಲು ಎಂದು ಮರೆಯುತ್ತಿರಲಿಲ್ಲ. ಶರಣ ಶ್ರೇಷ್ಠರಾದ ಸೊಲ್ಲಾಪುರದ ಶ್ರೀ ಸಿದ್ಧರಾಮರು ನುಡಿದ ಈ ವಚನದಲ್ಲಿ ಎರಡು ಮಾತುಗಳು ಎದ್ದು ಕಾಣುತ್ತವೆ ಹೆಣ್ಣಿನಲ್ಲಿದ್ದ ದೈವತ್ವವನ್ನು ಶರಣರು ಸ್ಪಷ್ಟಪಡಿಸಿದ್ದಾರೆ .ಅವಳ ಸತ್ಯ ಸೇವೆ ಪ್ರೇಮ ತ್ಯಾಗ ಅಹಿಂಸೆಗಳ ಸ್ವರೂಪ ಎಂದು ಸತ್ವ ಸಾಮರ್ಥ್ಯಗಳಿಂದಲೂ ಕ್ರಿಯಾಚಾರದಿಂದ ಕನ್ನಡ ನಾಡಿನಲ್ಲಿ ಪ್ರಸ್ತಾಪಿಸಿದ್ದಾಳೆ ಎಂದು ಈ ಪರಂಪರೆಯು ಜಾಗೃತಗೊಳ್ಳಬೇಕು. ಈ ತೇಜೋಮಯ ಬಲ ಮೈಮನದಲ್ಲೂ ಬೇರೂರಬೇಕು .ಈ ನಮ್ಮ ಶರಣ ಸಂಸ್ಕೃತಿಯು ಎಲ್ಲಡೆಯು ಹರಡಬೇಕೆಂದು ಪ್ರತಿಪಾದಿಸಿದರು. ಹೆಣ್ಣಿನ ಕಳವಳ ಕೇಳಿ ತಾ ಕರಗ್ಯಾನಅಣ್ಣ ಮಾಡ್ಯಾನ ಪಾವನ -ಹೆಣ್ಣಿನಪುಣ್ಯ ಕಟಕೊಂಡ ಬಸವಣ್ಣ !! ಹೆಣ್ಣು ಜೀವಕ ಅಕ್ಕ ಹೊಸಗಣ್ಣ ನೀ ಕೊಟ್ಟಿಎಣ್ಣ್ಯಾಗಿ ಬತ್ತಿಯಾಗಿ ದೀಪಾಗಿ -ದೀಪ್ತಿಯಾಗಿಅಣಿ ಮಾಡಿ ಕೊಟ್ಟೀನಿ ಕಿರು ನುಡಿ!! ಅಂತ ಹೀಗೆ ಅನೇಕ ಪದಗಳನ್ನು ಹೆಣ್ಣಿನ ಬಗ್ಗೆ ಬರೆದರು. ತಾಯಿಯವರು ಈಗಾಗಲೇ ತಮ್ಮ ನಿರ್ಗಳ ವಾಕ್ ವೈಖರಿಯಿಂದ ಮತ್ತು ನಿಷ್ಕಲ್ಮಶ ವ್ಯಕ್ತಿತ್ವದಿಂದ ನಾಡಿನ ಜನಮನದ ಮನೆಮಾತಾದರು. ಅದೇ ರೀತಿ ಸೊಲ್ಲಾಪುರದಲಿ ವಚನ ಸಾಹಿತ್ಯ ಹಾಗೂ ಗಾಂಧಿ ಪ್ರಭಾವದಿಂದ ಸುಶಿಕ್ಷಿತ ಶ್ರೀಮಂತ ಕುಟುಂಬದಲ್ಲಿ ಬೆಳೆದು ಬಂದ ಜಯದೇವಿ ತಾಯಿಯವರು ದಲಿತ ಅಭಿವೃದ್ಧಿ ಮಹಿಳಾ ಸ್ವಾತಂತ್ರ ಸಮಾನತೆ ಸಾಕ್ಷರತೆಗಾಗಿ ಶ್ರಮಿಸಿದರು . ಸವಿತಾ ದೇಶಮುಖ

Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಸಾವಿಲ್ಲದ ಶರಣರುಮಾಲಿಕೆ “ದಿಟ್ಟ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಮಹದೇವಪ್ಪ ರಾಂಪುರೆ”ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ

ಶರಣರ ಸಂಗಾತಿ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಸಾವಿಲ್ಲದ ಶರಣರು “ದಿಟ್ಟ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಮಹದೇವಪ್ಪ ರಾಂಪುರೆ” ಭವ್ಯ ಭಾರತದ ಇತಿಹಾಸವು ತೆರೆದಿಟ್ಟ ಅಪ್ಪಟ ರಾಷ್ಟ್ರ ಪ್ರೇಮಿ ಸೇನಾನಿ ಹೈದ್ರಾಬಾದ ಕರ್ನಾಟಕದ ಹುಲಿ ದಿಟ್ಟ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಮಹದೇವಪ್ಪ ರಾಂಪುರೆ.  ಮಹದೇವಪ್ಪ ರಾಂಪುರೆ (1920-1973) ಒಬ್ಬ ಭಾರತೀಯ ರಾಜಕಾರಣಿ, ಸ್ವಾತಂತ್ರ್ಯ ಹೋರಾಟಗಾರ ಮತ್ತು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಘದ (H.K.E. Society) ಸ್ಥಾಪಕರು, ಗುಲ್ಬರ್ಗಾದಲ್ಲಿ ಮಹದೇವಪ್ಪ ರಾಂಪುರೆ ಮೆಡಿಕಲ್ ಕಾಲೇಜ್ ಅನ್ನು 1963ರಲ್ಲಿ ಸ್ಥಾಪಿಸಿ, ಆ ಭಾಗದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ; ಅವರು ಮೈಸೂರು ವಿಧಾನ ಪರಿಷತ್ ಉಪಾಧ್ಯಕ್ಷರಾಗಿ, ಕಲಬುರಗಿ ಲೋಕಸಭಾ ಸದಸ್ಯರಾಗಿ ಮೂರು ಭಾರಿ ಸೇವೆ ಸಲ್ಲಿಸಿದ್ದಾರೆ.  ಸಂಕ್ಷಿಪ್ತ ಜೀವನ ಚರಿತ್ರೆ: ಜನನ ಮತ್ತು ಆರಂಭಿಕ ಜೀವನ: ಮಹದೇವಪ್ಪ ರಾಂಪುರೆ ಅವರು 1920ರಲ್ಲಿ ಜನಿಸಿದರು.ತಾಯಿ ಗುರುದೇವಿ ತಂದೆ ಯಶವಂತಪ್ಪ ರಾಂಪುರೆ  ಮಹದೇವಪ್ಪ ರಾಮಪುರೆ ಅವರು  6 ಜನ ಅಣ್ಣ – ತಮ್ಮಂದಿರು ಹಾಗೂ ಒಬ್ಬಳೆ  ಒಬ್ಬಳು ತಂಗಿ. ಆರಂಭಿಕ ಶಿಕ್ಷಣವನ್ನು ಸೊಲ್ಲಾಪುರದಲ್ಲಿ ಮುಗಿಸಿದರು. ಇವರ ಅಜ್ಜನವರು ಸುಮಾರು ನಾಲ್ಕು ನೂರು ಎಕರೆ ಭೂಮಿಯನ್ನು ಹೊಂದಿದ್ದರು. ಮೂಲತಃ ಸೋಲಾಪುರ ಜಿಲ್ಲೆಯ ಕುಂಬಾರಿ ಗ್ರಾಮದಲ್ಲಿ ಒಂದು ಅಡತಿ ಅಂಗಡಿ ಕೃಷಿ ವ್ಯಾಪಾರ ಮಾಡಿಕೊಂಡಂತಹ ಶ್ರೀಮಂತ ಮನೆತನವಾಗಿತ್ತು. ಶ್ರೀ ಮಹದೇವಪ್ಪ ರಾಮಪುರೆ ಅವರು ತಮ್ಮ ಶಿಕ್ಷಣವನ್ನು ಮೊಟಕುಗೊಳಿಸಿ ಸ್ವಾತಂತ್ರ್ಯ ಹೋರಾಟದೊಳಗೆ ಧುಮುಕಿದರು. ಮಹಾರಾಷ್ಟ್ರದಲ್ಲಿ ಇವರ ಮೇಲೆ ಬ್ರಿಟಿಷ್ ಸರ್ಕಾರ ವಾರಂಟ್ ಜಾರಿ ಮಾಡಿದ ಮೇಲೆ ಸಂಘರ್ಷವನ್ನು ಮುನ್ನಡೆದ ಬೇಕೆಂಬ ಯೋಚನೆ ಹಂಬಲದಿಂದ ಕಲಬುರ್ಗಿಗೆ ಬಂದರು . ತಮ್ಮ 26 ನೆಯ ವಯಸ್ಸಿನಲ್ಲಿ ಹೈದ್ರಾಬಾದ ಸರಕಾರದ ಎಂ ಎಲ್ ಸಿ ಆಗಿ ಆಯ್ಕೆಯಾದರು ಮುಂದೆ ಕರ್ನಾಟಕ ಏಕೀಕರಣವಾದ ಮೇಲೆ  ಕರ್ನಾಟಕದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ಉಪಸಭಾಪತಿಯಾಗಿ ಆಯ್ಕೆಯಾದರು. ರಾಜಕೀಯ ಜೀವನ: ಶ್ರೀ ಮಹದೇವಪ್ಪ ರಾಂಪುರೆ ಅವರು ಮೂಲತಃ ಸಮಾಜವಾದಿ ಎಡಪಂಥೀಯ ವೈಚಾರಿಕ ನೆಲೆಯಲ್ಲಿ ಬೆಳೆದವರು. ಡಾ ಎಂ ಎನ್ ರಾಯ್ ಅವರ ಸಿದ್ಧಾಂತದಲ್ಲಿ ನಂಬಿಕೆ ಇಟ್ಟವರು. ಕರ್ನಾಟಕದ ನವ ನಿರ್ಮಾಪಕ  ಶ್ರೀ ಎಸ್ ನಿಜಲಿಂಗಪ್ಪನವರ ಬಲಗೈ ಬಂಟನಾಗಿ ಕಾರ್ಯ ಮಾಡಿದವರು. ಶ್ರೀ ಚಂದ್ರಶೇಖರ ಪಾಟೀಲ ಶ್ರೀ ವೀರೇಂದ್ರ ಪಾಟೀಲ ಮುಂತಾದ ಯುವ ನಾಯಕರ ಜೊತೆಗೂಡಿ ಹೈದ್ರಾಬಾದ ಕರ್ನಾಟಕದ ಸಮಗ್ರ ಏಳ್ಗೆಗೆ ಕನಸು ಕಂಡವರಲ್ಲಿ ಪ್ರಮುಖರು  ಹಾಗೂ ರಜಾಕಾರ ಹಾವಳಿ ಎದುರಿಸಿದ ಸೇನಾನಿಯಾಗಿದ್ದರು. ಇವರು ಶ್ರೀಮತಿ ತಾರಾದೇವಿ ಅವರನ್ನು ವಿವಾಹವಾದರು.ಇವರಿಗೆ. 5  ಜನ ಗಂಡುಮಕ್ಕಳು  3 ಜನ ಹೆಣ್ಣುಮಕ್ಕಳು  ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ, ನಂತರ ರಾಜಕೀಯ ಪ್ರವೇಶಿಸಿದರು. ಮೈಸೂರು ವಿಧಾನ ಪರಿಷತ್ ಉಪಾಧ್ಯಕ್ಷರಾಗಿ (1956-1957) ಮತ್ತು ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ (1957-1970) ಸೇವೆ ಸಲ್ಲಿಸಿದರು. ಶ್ರೀ ಎಸ್ ನಿಜಲಿಂಗಪ್ಪನವರ ಮೊರಾರ್ಜಿ ದೇಸಾಯಿ ಡಾ ಎಂ.ಎನ್ ರಾಯ್ ಡಾ ನೀಲಂ ಸಂಜೀವ ರೆಡ್ಡಿ ಮುಂತಾದವರ ಜೊತೆಗೆ ರಾಜಕೀಯ ಒಡನಾಟವನ್ನು ಹೊಂದಿದ್ದರು. ತೀವ್ರಗಾಮಿ ಸತ್ಯ ಸಮತೆ ಶಾಂತಿ ಪ್ರೀತಿ ಮಂತ್ರ ಜಪಿಸಿದ ರಾಜಕೀಯ ಮುತ್ಸದ್ಧಿ. ಇವರ ಲೋಕ ಸಭೆಯಲ್ಲಿ ಮಾತನಾಡುವ ವೈಖರಿ ಕಂಡು ರಾಷ್ಟ್ರಪತಿ ಡಾ ಎಸ್ ರಾಧಾಕೃಷ್ಣ ಅವರು ಶ್ರೀ ಮಹದೇವಪ್ಪ ರಾಮಪುರೆ ಅವರನ್ನು ಶ್ರೇಷ್ಠ ಸಂಸತ್ತ ಪಟು ಎಂದು ಬಣ್ಣಿಸಿದ್ದಾರೆ. ಶಿಕ್ಷಣಕ್ಕೆ ಕೊಡುಗೆ: ಡಾ ಡಿ ಸಿ ಪಾವಟೆ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಕರ್ನಾಟಕ ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ.  ಹೈದರಾಬಾದ್ ಕರ್ನಾಟಕ ಭಾಗದ ಶಿಕ್ಷಣದ ಬೆಳವಣಿಗೆಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಇದರ ಫಲವಾಗಿ 1963ರಲ್ಲಿ ಗುಲ್ಬರ್ಗಾದಲ್ಲಿ ಮಹದೇವಪ್ಪ ರಾಂಪುರೆ  ವೈದ್ಯಕೀಯ  ಮಹಾವಿದ್ಯಾಲಯವನ್ನು ಸ್ಥಾಪಿಸಿದರು.  ಪ್ರಮುಖ ಕೊಡುಗೆಗಳು: H.K.E. ಸೊಸೈಟಿ: ಇದರ ಸಂಸ್ಥಾಪಕರು .ಇದಕ್ಕೂ ಮುಂಚೆ ದೊಡ್ಡಪ್ಪ ಅಪ್ಪ ಅವರ ಶ್ರೀ ಶರಣ ಬಸವೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಅದರ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. ನೂರಾರು  ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿದರು. M.R. ಮೆಡಿಕಲ್ ಕಾಲೇಜ್: ಭಾರತದ  ಖಾಸಗಿ ವೈದ್ಯಕೀಯ ಕಾಲೇಜಾಗಿ, ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ಮಾನ್ಯತೆ ಪಡೆದು, ಗುಣಮಟ್ಟದ ವೈದ್ಯಕೀಯ ಶಿಕ್ಷಣ ನೀಡುತ್ತಿದೆ. ದೂರದೃಷ್ಟಿ ಈ ಭಾಗದ ಜನರ ಕಲ್ಯಾಣಕ್ಕಾಗಿ ಶಿಕ್ಷಣ ಮತ್ತು ಆರೋಗ್ಯದ ಮೂಲಸೌಕರ್ಯಗಳನ್ನು ಕಲ್ಪಿಸಬೇಕೆಂಬ ದೂರದೃಷ್ಟಿಯನ್ನು ಹೊಂದಿದ್ದರು.  ವಂಶಪರಂಪರೆ: ಅವರ ದೂರದೃಷ್ಟಿ ಮತ್ತು ಶ್ರಮದಿಂದ ಸ್ಥಾಪಿಸಲಾದ ಸಂಸ್ಥೆಗಳು ಇಂದಿಗೂ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. ಇವರ ಮೂರು ಜನ ಗಂಡು ಮಕ್ಕಳು ವೈದ್ಯರಾಗಿ ರಾಷ್ಟ್ರ ಅಂತರಾಷ್ಟ್ರಮಟ್ಟದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಸಲ್ಲಿಸಿದ್ದಾರೆ. ಇಂತಹ ಒಬ್ಬ ಸೃಜನಶೀಲ ವೈಚಾರಿಕ ಚಿಂತಕ ಶಿಕ್ಷಣ ಪ್ರೇಮಿ ಅಪ್ಪಟ ದೇಶ ಭಕ್ತ 1973 ರಲ್ಲಿ ತಮ್ಮ 53 ನೆಯ  ವಯಸ್ಸಿನಲ್ಲಿ ಬಯಲಾದರು. ಇಂತಹ ದಿವ್ಯ ಜ್ಯೋತಿ ಇಂದಿಗೂ ಬೆಳಗುತ್ತಿದೆ ನಮ್ಮೆಲ್ಲರ ಮಧ್ಯೆ.  __________________________ *ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

ಸಾವಿಲ್ಲದ ಶರಣರುಮಾಲಿಕೆ “ದಿಟ್ಟ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಮಹದೇವಪ್ಪ ರಾಂಪುರೆ”ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ Read Post »

ಅಂಕಣ ಸಂಗಾತಿ, ವೃತ್ತಿ ವೃತ್ತಾಂತ

ಅಂಕಣ ಸಂಗಾತಿ ವೃತ್ತಿ ವೃತ್ತಾಂತ ಸುಜಾತಾ ರವೀಶ್ ವೃತ್ತಿ ಬದುಕಿನ ಹಿನ್ನೋಟ-31 ಈ ಮನೆಯ ಬಾಲ್ಕನಿಯಲ್ಲಿ ನಿಂತರೆ ಇಡೀ ಸಂತೆಯೇ ಕಾಣುತ್ತಿತ್ತು ಗುರುವಾರದ ದಿನ ಬಂತು ಬೆಳಗ್ಗೆ 6 ಗಂಟೆಯಿಂದಲೇ ಜನಗಳ ಗಾಡಿಗಳ ಓಡಾಟ ಮತ್ತೆ ಸಂಜೆಯವರೆಗೂ ಇದೇ ರೀತಿ ರಸ್ತೆ ಬ್ಯುಸಿ ಇರುತ್ತಿತ್ತು. ಸಂಜೆ ಸಂತೆ ಕೆ ಬಂದ ಕೆಲವು ಸಹೋದ್ಯೋಗಿಗಳು ಮನೆಗೆ ಬರುತ್ತಿದ್ದರು ಹಳೆಯ ಮನೆಯ ಬಳಿಯಿದ್ದ ಪರಿಚಿತರು ಬರುತ್ತಿದ್ದರು ಹಾಗಾಗಿ ಗುರುವಾರ ನಾವು ಸಂಜೆ ತುಂಬಾ ಬ್ಯುಸಿ ಆಗಿಬಿಡುತ್ತಿದ್ದೆವು. ಅದೇ ರಸ್ತೆಯ ಕೊನೆಯಲ್ಲಿ ಬಸ್ ಡಿಪೋ ಇದುದರಿಂದ ಬಹಳಷ್ಟು ಬಸ್ ಓಡಾಟ ಸದಾ ಇರುತ್ತಿತ್ತು .ಹೀಗಾಗಿ ಬಾಲ್ಕನಿ ಸದಾ ಧೂಳಾಗಿಯೇ ಇರುತ್ತಿತ್ತು . ಆಗ ಪುಟ್ಟ ಮಗುವಾಗಿದ್ದ ನನ್ನ ತಂಗಿಯ ಮಗ ನಿಶ್ಚಯ್ ಗಂತೂ ಓಡಾಡುತ್ತಿದ್ದ ಆ ಕೆಂಪು ಬಸ್ ಗಳನ್ನು ನೋಡುವುದೇ ಒಂದು ಖುಷಿ.ಈ ಮನೆಯಲ್ಲಿ ಇದ್ದಾಗಲೇ ನಮ್ಮ ಅತ್ತೆ ಮಾವ ಸಹ ಬಂದು ಒಂದು ವಾರ ಇದ್ದರು ನಮ್ಮ ಅತ್ತೆಯ ತಾಯಿಯ ಮನೆ ಸಕಲೇಶಪುರದ ಹತ್ತಿರದ ಊರೇ ಆದ್ದರಿಂದ ಅಲ್ಲಿಗೂ ಒಮ್ಮೆ ಹೋಗಿ ಬಂದರು. ನನ್ನ ಮೈದುನ ಹಾಗೂ ಓರಗಿತ್ತಿ ಸಹ ಒಮ್ಮೆ ಇಲ್ಲಿಗೆ ಬಂದಿದ್ದರು. ಅವರೊಂದಿಗೆ ನಾವು ಹೊರನಾಡು ಹೋಗಿ ದೇವಿ ದರ್ಶನ ಮಾಡಿ ಬಂದೆವು ದಿನವೇ ಐ ಆರ್ ಡಿ ಎ ಬಿಲ್ ಸಹ ಮಂಡಿಸಲ್ಪಟ್ಟು ಇದ್ದಕ್ಕಿದ್ದಂತೆ ಆ ದಿನ ಸ್ಟ್ರೈಕ್ ಕೊಟ್ಟಿದ್ದರು ಹಾಗಾಗಿ ರಜೆಯ ಬದಲು ಸ್ಟ್ರೈಕ್ ನಲ್ಲಿ ಭಾಗವಹಿಸುವ ಹಾಗೆ ಆಯಿತು. ಏನಿದು ಐಆರ್‌ಡಿಎ ಬಿಲ್? ಇದುವರೆಗೆ ಏಕಸ್ವಾಮ್ಯವಾಗಿ ಇದ್ದ ಭಾರತೀಯ ಜೀವವೀಮನಿಗಮ ಮತ್ತು ವಿಮಾ ವಲಯ ಈಗ ಒಂದು ಪ್ರಾಧಿಕಾರದ ಮಿತಿಗೆ ಒಳಪಟ್ಟು ಹೊರಗಿನ ಸಂಸ್ಥೆಗಳು ಸಹ ಜೀವವಿಮ ವಹಿವಾಟು ನಡೆಸಲು ಅರ್ಹವಾಗುತ್ತಿದ್ದವು. ಭಾರತೀಯ ಜೀವ ವಿಮಾ ನಿಗಮದ ಸಾರ್ವಭೌಮತ್ವಕ್ಕೆ ಉಂಟಾಯಿತು. IRDAI ಎನ್ನುವುದು ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಒಂದು ಸ್ವಾಯತ್ತ ಮತ್ತು ಶಾಸನಬದ್ಧ ಸಂಸ್ಥೆಯಾಗಿದೆ. ಇದು ಭಾರತದಲ್ಲಿ ವಿಮಾ ಕ್ಷೇತ್ರವನ್ನು (Insurance Sector) ನಿಯಂತ್ರಿಸುವ ಮತ್ತು ಅಭಿವೃದ್ಧಿಪಡಿಸುವ ಸರ್ವೋಚ್ಚ ಸಂಸ್ಥೆಯಾಗಿದೆ.​ಇದನ್ನು 1999 ರಲ್ಲಿ ‘IRDA ಕಾಯ್ದೆ’ಯ ಅಡಿಯಲ್ಲಿ ರಚಿಸಲಾಯಿತು.ಮಲ್ಹೋತ್ರಾ ಸಮಿತಿಯ ಶಿಫಾರಸಿನ ಮೇರೆಗೆ IRDAI ಅಸ್ತಿತ್ವಕ್ಕೆ ಬಂದಿತು.​ಕೇಂದ್ರ ಕಚೇರಿ ತೆಲಂಗಾಣ ರಾಜ್ಯದ ಹೈದರಾಬಾದ್ ನಲ್ಲಿದೆ. ​IRDAI ಸ್ಥಾಪನೆಯ ಹಿಂದೆ ಪ್ರಮುಖವಾಗಿ ಮೂರು ಉದ್ದೇಶಗಳಿವೆ:​ವಿಮಾದಾರರ ಹಿತರಕ್ಷಣೆ: ವಿಮೆ ಮಾಡಿಸಿದ ಗ್ರಾಹಕರಿಗೆ ಯಾವುದೇ ಅನ್ಯಾಯವಾಗದಂತೆ ನೋಡುವುದು.​ಕ್ಷೇತ್ರದ ನಿಯಂತ್ರಣ: ವಿಮಾ ಕಂಪನಿಗಳು ಸರಿಯಾದ ನಿಯಮಗಳನ್ನು ಪಾಲಿಸುತ್ತಿವೆಯೇ ಎಂದು ಮೇಲ್ವಿಚಾರಣೆ ಮಾಡುವುದು.​ಅಭಿವೃದ್ಧಿ: ವಿಮಾ ಕ್ಷೇತ್ರವು ವ್ಯವಸ್ಥಿತವಾಗಿ ಬೆಳೆಯಲು ಪೂರಕವಾದ ವಾತಾವರಣ ನಿರ್ಮಿಸುವುದು.​IRDAI ಈ ಕೆಳಗಿನ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸುತ್ತದೆ:​ಪರವಾನಗಿ ನೀಡುವುದು: ಹೊಸ ವಿಮಾ ಕಂಪನಿಗಳಿಗೆ ವ್ಯವಹಾರ ನಡೆಸಲು ಪರವಾನಗಿ (License) ನೀಡುವುದು ಮತ್ತು ಅದನ್ನು ನವೀಕರಿಸುವುದು.​ನಿಯಮಗಳ ರೂಪಣೆ: ವಿಮಾ ಪಾಲಿಸಿಗಳು ಹೇಗೆ ಇರಬೇಕು, ಪ್ರೀಮಿಯಂ ದರಗಳು ಮತ್ತು ಕ್ಲೈಮ್ (Claim) ಇತ್ಯರ್ಥದ ಬಗ್ಗೆ ನಿಯಮಗಳನ್ನು ರೂಪಿಸುವುದು.​ದೂರುಗಳ ಪರಿಹಾರ: ವಿಮಾ ಕಂಪನಿ ಮತ್ತು ಗ್ರಾಹಕರ ನಡುವೆ ವಿವಾದ ಉಂಟಾದಾಗ ಅದನ್ನು ಬಗೆಹರಿಸಲು ವೇದಿಕೆ ಕಲ್ಪಿಸುವುದು.​ಬಂಡವಾಳದ ಮೇಲ್ವಿಚಾರಣೆ: ವಿಮಾ ಕಂಪನಿಗಳು ಗ್ರಾಹಕರ ಹಣವನ್ನು ಹಿಂತಿರುಗಿಸಲು ಬೇಕಾದಷ್ಟು ಆರ್ಥಿಕ ಸಾಮರ್ಥ್ಯ ಹೊಂದಿವೆಯೇ ಎಂದು ಪರಿಶೀಲಿಸುವುದು.​ತರಬೇತಿ ಮತ್ತು ಶಿಕ್ಷಣ: ವಿಮಾ ಏಜೆಂಟ್‌ಗಳಿಗೆ ಬೇಕಾದ ಅರ್ಹತೆ ಮತ್ತು ತರಬೇತಿಯ ಮಾನದಂಡಗಳನ್ನು ನಿಗದಿಪಡಿಸುವುದು. ಅಂದಿನ ದಿನಗಳಲ್ಲಿ ಈ ವಿದ್ಯಮಾನಗಳು ತುಂಬಾ ಆತಂಕವನ್ನು ಹುಟ್ಟಿಸಿದ್ದು ಮುಂದಿನ ದಿನಗಳು ಹೇಗೋ ಏನೋ ಎಂಬ ದಿಗಿಲು ಸಹ ಉಂಟಾಗಿತ್ತು. ಆದರೆ ಜೀವ ವಿಮಾನ ನಿಗಮ ತನ್ನ ಸಮರ್ಥ ಆರ್ಥಿಕ ನೀತಿ ಹಾಗೂ ದಕ್ಷ ಆಡಳಿತ ವಿಧಾನಗಳಿಂದ ಈ ಹೊರಗಿನ ಸ್ಪರ್ಧೆಯನ್ನು ಸಮರ್ಪಕವಾಗಿ ನಿರ್ವಹಿಸುತ್ತಾ ಬಂದಿದೆ ಎಂದು ಹೆಮ್ಮೆಯಿಂದ ಹೇಳಬಹುದು. ಜೂನ್ 1999ರಲ್ಲಿ ನನ್ನ ತಂಗಿ ಪ್ರಯಾಣ ವಿವಾಹ ಆಯಿತು. 15 ದಿನಗಳ ಕಾಲ ರಜೆ ತೆಗೆದುಕೊಂಡು ಹೋಗಿ ಮದುವೆ ಮುಗಿಸಿ ಬಂದಾಯಿತು. ಮದುವೆ ತಿಂಡಿಗಳನ್ನು ಇಟ್ಟಿದ್ದ ಬ್ಯಾಗ್ ಸಕಲೇಶಪುರಕ್ಕೆ ಬರುವಾಗ ಮರೆತು ಬಂದಿದ್ದೆವು. ರವೀಶ್ ಸಹ ಅಂದು ನನ್ನ ಜೊತೆಗೆ ಬಂದುಬಿಟ್ಟಿದ್ದರು ಇನ್ನು ತಿಂಡಿಗಳು ಮಿಸ್ ಆಗುತ್ತದೆ ಎಂದು ಅಷ್ಟು ಆಯಾಸವಾಗಿದ್ದರು ಸಹ ಮಧ್ಯಾಹ್ನವೇ ನಮ್ಮ ತಂದೆ ಅದನ್ನೆಲ್ಲ ತೆಗೆದುಕೊಂಡು ಸಕಲೇಶಪುರಕ್ಕೆ ಬಂದಿದ್ದರು. ಅದನ್ನು ನೆನೆಸಿಕೊಂಡರೆ ಈಗಲೂ ಕಣ್ಣು ತುಂಬಿ ಬರುತ್ತದೆ ಆ ಪ್ರೀತಿಗೆ ಯಾವುದು ತಾನೇ ಸಾಟಿಯಾದೀತು?ಅಣ್ಣ ಅಲ್ಲಿದ್ದಾಗಲೇ ನವ ವಿವಾಹಿತ ಜೋಡಿಯು ಸಹ ಸಕಲೇಶಪುರಕ್ಕೆ ಬಂದಿದ್ದರು ಅಲ್ಲಿ ಸುತ್ತ ಮುತ್ತಲಿನ ಹಾರ್ಲೆ ಎಸ್ಟೇಟ್ ಟೀ ಫ್ಯಾಕ್ಟರಿ ಅವೆಲ್ಲವನ್ನು ಆಗ ಹೋಗಿ ನೋಡಿಕೊಂಡು ಬಂದೆವು. ಸುಲೋಚನಾ ಸಹ ನಮ್ಮೊಂದಿಗೆ ಆಗ ಬಂದಿದ್ದರು.ಮದ್ದೂರಿನಲ್ಲಿ ಸಹಾಯಕ ಆಡಳಿತ ಅಧಿಕಾರಿಯಾಗಿ ಇದ್ದ ನನ್ನ ತಂಗಿ ಔಅಯಳಿಗೆ ಮದುವೆಯ ನಂತರ ಹುಣಸೂರಿಗೆ ವರ್ಗ ಆಯಿತು. ಅವಳ ಪತಿ ಪ್ರಸನ್ನ ಅವರು ಸಹ ಜೀವವಿಮನಿಗಮದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಕೆಆರ್ ನಗರಕ್ಕೆ ಸೇರಿದಂತಿದ್ದ ಬೆಟ್ಟದ ಪುರದಲ್ಲಿ ಇದ್ದರು. ಅವರು ನಮಗೆ ಬ್ಯಾಚ್ ನ ಹಿಂದಿನ ಮೊದಲ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿ ಸಹಾಯಕರಾಗಿ ಆಯ್ಕೆಯಾದವರು ನಂತರ ಅಭಿವೃದ್ಧಿ ಅಧಿಕಾರಿಯಾಗಿ ಬದಲಾವಣೆ ತೆಗೆದುಕೊಂಡಿದ್ದರು .ಇಬ್ಬರಿಗೂ ಮಧ್ಯದ ಜಾಗವಾದ ಪಿರಿಯಾಪಟ್ಟಣದಲ್ಲಿ ಮನೆ ಮಾಡಿದ್ದರು.ಅಲ್ಲಿ ಕಚೇರಿ ಸೇವಾ ವಿಭಾಗಕ್ಕೆ ನನಗೆ ಬದಲಾವಣೆ ಸಿಕ್ಕಿತು ಆಗ ಹಿಂದಿ ದಿನಾಚರಣೆಯ ಸಂದರ್ಭ ಬಂದಿತ್ತು. ಆಗ ಸುಮಾರು ಸ್ಪರ್ಧೆಗಳನ್ನು ಏರ್ಪಡಿಸಿ ಎಲ್ಲರೂ ಭಾಗವಹಿಸಲು ಅನುಕೂಲವಾಗುವ ಹಾಗೆ ಒಂದು ಅಂತ್ಯಾಕ್ಷರಿ ಸ್ಪರ್ಧೆಯನ್ನು ಸಹ ಏರ್ಪಡಿಸಿದೆವು ನಾನು ಮತ್ತು ಸುಲೋಚನಾ ಸೇರಿ ಅದನ್ನು ನಡೆಸಿಕೊಟ್ಟವು ಅಲ್ಲಿ ಎಲ್ಲರಿಗೂ ಅದು ತುಂಬಾ ಇಷ್ಟವಾಗಿತ್ತು. ಹೀಗೆ ಒಂದು ಕನ್ನಡದ ಅಂತ್ಯಾಕ್ಷರಿ ಮಾಡಿ ಎಂದು ಹೇಳಿ ಅಲ್ಲಿನ ಅಭಿವೃದ್ಧಿ ಅಧಿಕಾರಿಗಳು ಬಹುಮಾನದ ಪ್ರಾಯೋಜಕತ್ವ ವಹಿಸಿಕೊಂಡರು. ಆಗೊಮ್ಮೆ ಕನ್ನಡ ಅಂತ್ಯಾಕ್ಷರಿಯನ್ನು ಸಹ ನಡೆಸಿಕೊಟ್ಟಿದ್ದೆವು. ವಿವಿಧ ಸ್ಪರ್ಧೆಗಳನ್ನು ಏರ್ಪಡಿಸುವುದು ಅವುಗಳಿಗೆ ಬಹುಮಾನಗಳನ್ನು ಆರಿಸಿ ತರುವುದು ಇವೆಲ್ಲವೂ ತುಂಬಾ ಖುಷಿ ಕೊಟ್ಟ ಕೆಲಸ. ನನಗೆ ಸಹಾಯಕ ಆಗಿದ್ದ ರಘು ಅವರು ಅಲ್ಲಿನ ಅಂಗಡಿಗಳ ಮಾಲೀಕರನ್ನು ಚೆನ್ನಾಗಿ ಬಲ್ಲವರಾದ್ದರಿಂದ ಒಳ್ಳೆಯ ಚೌಕಾಸಿ ನಡೆಸಿ ಗುಣಮಟ್ಟದ ಸಾಮಾನುಗಳನ್ನು ಆದಷ್ಟು ರಿಯಾಯಿತಿಯಲ್ಲಿ ಕೊಂಡು ಬರುತ್ತಿದ್ದೆವು.ನಾವು ಹೋಗಿದ್ದಾಗ ಉಮೇಶ್ ಭಟ್ ಎನ್ನುವವರು ಅಲ್ಲಿನ ಉಪ ಶಾಖಾಧಿಕಾರಿಗಳಾಗಿದ್ದವು ಅವರು ನಟಿ ವಿನಯ ಭಟ್ ಅವರ ಕುಟುಂಬ ಸ್ನೇಹಿತರು ಒಮ್ಮೆ ಸಕಲೇಶಪುರದ ಬಳಿ ಶೂಟಿಂಗ್ ಗೆ ಬಂದಿದ್ದ ವಿನಯ ಭಟ್ ಅವರು ಅವರ ಮನೆಗೆ ಬಂದಿದ್ದರಂತೆ. ಆಗ ನಮ್ಮ ಶಾಖೆಯ ಎಲ್ಲರೂ ಅವರ ಮನೆಗೆ ಹೋಗಿ ಆಕೆಯನ್ನು ಮಾತನಾಡಿಸಿಕೊಂಡು ಬಂದರಂತೆ ನಾನು ಸುಲೋಚನಾ ಆಗ ರಜೆ ಹಾಕಿ ಮೈಸೂರಿಗೆ ಬಂದು ಬಿಟ್ಟಿದ್ದೆವು. ಹಾಗಾಗಿ ನಮಗೆ ಆ ಭೇಟಿ ಸಾಧ್ಯವಾಗಲಿಲ್ಲ ನಮಗೆ ಪುಸ್ತಕದ ಮೇಲಿನ ಪ್ರೀತಿ ನೋಡಿ ಉಮೇಶ್ ಭಟ್ ಅವರು ಹಸ್ತ ಸಾಮುದ್ರಿಕೆಯ ಬಗ್ಗೆ ಇದ್ದ ಒಂದು ಇಂಗ್ಲಿಷ್ ಪುಸ್ತಕವನ್ನು ನಮಗೆ ಅವರು ವರ್ಗವಾಗಿ ಹೋಗುವಾಗ ಉಡುಗೊರೆಯಾಗಿ ಕೊಟ್ಟಿದ್ದರು. ಅವರು ಹೋದ ನಂತರ ಮೈಸೂರಿನ ಬ್ರಾಂಚ್ ಒಂದರಲ್ಲಿ ಅಭಿವೃದ್ಧಿ ಅಧಿಕಾರಿಯಾಗಿದ್ದ ರಾಜೇಂದ್ರ ಪ್ರಸಾದ್ ಎನ್ನುವವರು ಉಪಶಾಖಾಧಿಕಾರಿಗಳಾಗಿ ಬಂದಿದ್ದರು. ನಾವು ವಾಪಸ್ ಮನೆ ಶಿಫ್ಟ್ ಮಾಡುವ ಸಂದರ್ಭದಲ್ಲಿ ರವೀಶ್ ಅವರನ್ನು ಕರೆದುಕೊಂಡು ಹೋಗಿ ಸಕಲೇಶಪುರದ ವಿಶೇಷವಾದ ಕಾಫಿ ಬೊಡ್ಡೆಯ ಅಲಂಕಾರಿಕ ಸಾಮಗ್ರಿಗಳನ್ನು ಕೊಳ್ಳಲು ಸಹಾಯ ಮಾಡಿದ್ದರು. ಅವುಗಳಲ್ಲಿ ಒಂದು ಈಗಲೂ ನಮ್ಮ ಮನೆಯಲ್ಲಿ ಇದೆ ಸಕಲೇಶಪುರದಲ್ಲಿ ಕೆಲಸ ಮಾಡಿದ ದಿನಗಳ ನೆನಪಿನ ಕುರುಹಾಗಿ. ಛಾಯಾ ಮತ್ತು ಪ್ರಸನ್ನ ನಿರ್ಮಲ ಟ್ರಾವೆಲ್ಸ್ ನ ಮಧ್ಯ ಇಂಡಿಯಾ ಪ್ರವಾಸಕ್ಕೆ ಹೋಗಲು ಯೋಜನೆ ಮಾಡಿದರು. ನಮ್ಮ ತಂದೆ ತಾಯಿ ಹಾಗೂ ಪ್ರಸನ್ನ ಅವರ ತಂದೆ ತಾಯಿ ಅವರುಗಳನ್ನು ಜೊತೆಯಲ್ಲಿ ಕರೆದುಕೊಂಡು ಹೋಗುವ ಉದ್ದೇಶ ಇತ್ತು ನಮಗೂ ಹೇಗೂ ಎಲ್ ಟಿ ಸಿ ದೊರೆಯುತ್ತಿದ್ದರಿಂದ ನಾನು ಮತ್ತು ರವೀಶ್ ಸಹ ಹೊರಡಲು ನಿಶ್ಚಯಿಸಿದೆವು. ಭಾರತೀಯ ಜೀವವಿಮಾನ ನಿಗಮದಲ್ಲೇ ಅಭಿವೃದ್ಧಿ ಅಧಿಕಾರಿಯಾಗಿರುವ ಪ್ರಸನ್ನ ಅವರ ಅಣ್ಣ ಪ್ರಭಾಕರ್ ಹಾಗೂ ಅವರ ಪತ್ನಿ ಶಾಮಲಾ ಮತ್ತು ಮಗಳು ಪ್ರೇರಣಾ ಸಹ ನಮ್ಮ ಜೊತೆಗೆ ಸೇರಿಕೊಂಡರು. ಹೀಗೆ ಹನ್ನೆರಡು ಜನಗಳ ನಮ್ಮ ಗುಂಪು ಮಂಗಳೂರಿನಿಂದ ಹೊರಟ ಆ ಪ್ರವಾಸದಲ್ಲಿ ಸೇರಿದೆವು ತುಂಬಾ ಚೆನ್ನಾಗಿ ನಡೆದ ಪ್ರವಾಸ ಈಗಲೂ ಒಂದು ಸವಿ ನೆನಪು. ನಾವು ಸಕಲೇಶಪುರದಿಂದಲೇ ಮಂಗಳೂರಿಗೆ ಹೋಗಿದ್ದೆವು ಮತ್ತು ಮಂಗಳೂರಿನಿಂದಲೇ ಮತ್ತೆ ವಾಪಸ್ಸಾದೆವು. ಅವರೆಲ್ಲ ಹೊರಡುವಾಗ ಮಂಗಳೂರಿಗೆ ಬಂದಿದ್ದರು. ವಾಪಸ್ ಆಗುವಾಗ ಹುಬ್ಬಳ್ಳಿಯಿಂದಲೇ ಮೈಸೂರಿಗೆ ವಾಪಸ್ ಹೋದರು. ನನ್ನ ಕಡೆಯ ತಂಗಿ ವೈಶಾಲಿ ಮತ್ತು ಮುರಳಿ ಮಗು ಚಿಕ್ಕವನಿದ್ದುದರಿಂದ ಬರಿ ಮಂಗಳೂರು ಪ್ರವಾಸಕ್ಕೆ ಮಾತ್ರ ಜೊತೆಯಾಗಿ ನಂತರ ಮೈಸೂರಿಗೆ ವಾಪಸ್ ಆದರು. ಹಾಗೆ ಹೀಗೆ ಎನ್ನುವಂತೆ ದಿನಗಳು ಕಳೆದು ಮುಂದಿನ ಪದೋನ್ನತಿಗಳ ಸಮಯ ಬಂದೇ ಬಿಟ್ಟಿತು. ಆ ಬಾರಿ ಅದು ತಡವಾಗಿ ಮಾರ್ಚ್ ತಿಂಗಳ ತನಕ ಎಳೆದುಕೊಂಡು ಹೋಗಿದ್ದು. ಬಹಳ ಕಾಲದಿಂದ ನಿರೀಕ್ಷೆ ಇದ್ದ ವರ್ಗಾವಣೆ ಪಟ್ಟಿ ಪ್ರಕಟವಾಗಿತ್ತು ನನಗೆ ನಂಜನಗೂಡಿಗೆ ಸಿಕ್ಕಿತ್ತು ಸ್ವಲ್ಪವೇ ಅಂತರದಿಂದ ಸುಲೋಚನಾ ಅವರಿಗೆ ನಂಜನಗೂಡು ತಪ್ಪಿ ಹೋಗಿ ಚಾಮರಾಜನಗರಕ್ಕೆ ವರ್ಗಾವಣೆ ಸಿಕ್ಕಿತು. ಓಡಾಡಬಹುದಾಗಿತ್ತು ಅವರ ಮನೆ ನಂಜನಗೂಡಿನಲ್ಲಿ ಇದ್ದುದರಿಂದ. ಸ್ವಲ್ಪ ಸಮಾಧಾನ ಅಷ್ಟೇ. ಆದರೆ ಮತ್ತೊಂದು ಸಮಸ್ಯೆ ಎದುರಾಗಿತ್ತು.ನಾವಿದ್ದ ಮನೆಯ ಮಾಲೀಕ ತುಂಬಾ ಸಾಲದ ಸುಳಿಗಳಿಗೆ ಸಿಕ್ಕಿಕೊಂಡು ಮನೆ ಕೋರ್ಟ್ ಆದೇಶದಲ್ಲಿ ಇತ್ತು. ನಾವು ಕೊಟ್ಟಿದ್ದ ಮುಂಗಡ ಹಣ 15000 ವಾಪಸ್ ಮಾಡುವ ಸ್ಥಿತಿಯಲ್ಲಿ ಆತ ಇರಲಿಲ್ಲ .ಆದರೆ ನಾವು ಮನೆಯನ್ನು ಬಿಡಲೇಬೇಕಿತ್ತು.‌ ಕೆಲವರು ಕೊಟ್ಟ ಸಲಹೆಯಂತೆ ಒಂದೆರಡು ಹಳೆಯ ಸಾಮಾನುಗಳನ್ನು ಅಲ್ಲಿಯೇ ಬಿಟ್ಟು ಮನೆಯ ಬೀಗವನ್ನು ಸಕಲೇಶಪುರದಲ್ಲೇ ಇದ್ದ ರವೀಶ್ ಅವರ ಊರಿನವರೇ ಆದ ಸತ್ಯ ಮತ್ತು ಮೋಹನ್ ಅವರಿಗೆ ಕೊಟ್ಟು ಬಂದೆವು. ಆ ಕಾಲಕ್ಕೆ ೧೫೦೦೦ ಸಣ್ಣ ಮೊತ್ತವೇನಲ್ಲ. ವಾಪಸ್ಸು ಬಾರದಿದ್ದರೆ ಹೇಗಪ್ಪಾ ಅಂತಲೂ ಚಿಂತೆ. ಆದರೆ ನಮ್ಮ ತಂದೆ ಮಾತ್ರ ಭರವಸೆ ಇಟ್ಟುಕೊಂಡು ಹೇಳುತ್ತಿದ್ದರು ಕಷ್ಟಪಟ್ಟು ದುಡಿದ ಹಣ ಖಂಡಿತ ವಾಪಸ್ ಬಂದೆ ಬರುತ್ತದೆ ಎಂದು ಅವರ ಆಶೀರ್ವಾದದಂತೆ ಒಂದೆರಡು ತಿಂಗಳ ಬಳಿಕ ಆ ಮನೆಯನ್ನು ಬೇರೊಬ್ಬರು ಕೊಂಡುಕೊಂಡು ಮುಂಗಡ ಹಣ ವಾಪಸ್ ಕೊಟ್ಟು ಕೀ ಪಡೆದುಕೊಂಡರಂತೆ. ಫೋನ್ ಮಾಡಿ ತಿಳಿಸಿದ ಮೇಲೆ ರವೀಶ್ ಅವರು ಹೋಗಿ ಹಣ ತೆಗೆದುಕೊಂಡು ಬಂದರು ಮನಸ್ಸಿಗೆ ಸ್ವಲ್ಪ ನಿರಾಳವಾಯಿತು. ಮೊದಲು ನಾವಿದ್ದ ಮನೆ ಕಟ್ಟಿದ್ದಾಗ ವಾರ್ಡ್ರೋಬ್ ಕೆಲಸಗಳನ್ನು ಮಾಡಿರಲಿಲ್ಲ ಹೀಗಾಗಿ ನಾವು ವಾಪಸ್ ಬರುವಾಗ ಮತ್ತೆ ಮನೆಗೆ ಪೇಂಟ್ ಮಾಡಿಸಿ ವಾರ್ಡ್ರೋಬ್ ಗಳನ್ನು ಮಾಡಿಸಿಕೊಂಡು ಬಂದೆವು..(ಮುಂದಿನವಾರಕ್ಕೆ) ಸುಜಾತಾ ರವೀಶ್

Read Post »

ಅಂಕಣ ಸಂಗಾತಿ, ಜಯದೇವಿ ತಾಯಿ ಲಿಗಾಡೆ ಜೀವನ

ಧಾರಾವಾಹಿ ಸಂಗಾತಿ- ಒಂಭತ್ತು ಸವಿತಾ ದೇಶಮುಖ ಜಯದೇವಿತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಮಹಾನ್‌ ಚೇತನ ಭಾಗ- ಒಂಬತ್ತುಜಯದೇವಿ ತಾಯಿಯ ಜೀವನ ವೃತ್ತಾಂತ   ಜಯದೇವಿ ತಾಯಿಯವರ ಒಂದು ಅಪೂರ್ಣ ಕನಸು ……ನನಸಾಗಿತ್ತು…!!ಕಷ್ಟ ಕಾರ್ಪಣ್ಯಗಳನ್ನು ಮೌನವಾಗಿ ಸಹಿಸುತಮನದಾಳದ ಕಿಚ್ಚಿನಲಿ ಮಂಥನಗೊಂಡು ಉಲ್ಬಣಗೋಳ್ಳುತ್ತಿದ್ದ ಭಾವನೆಗಳನ್ನು ಮೊದಲ ಬಾರಿಗೆ ಕನ್ನಡ ಭಾಷೆಲ್ಲಿ ಬರೆದಾಗ ಆದ ಆನಂದ ಹೇಳತಿರದಾಗಿತ್ತು…..,!!.  ಕನ್ನಡ ನುಡಿಗಳು ಅವರಿಗೊಂದು ಹೊಸ ಲೋಕದ ಬಾಗಿಲು ತೆರೆದವು. ವರ್ಷಗಳ ಕಾಲ ಮನದೊಳಗೆ ಸಂಗ್ರಹವಾಗಿದ್ದ ನಿಶ್ಶಬ್ದ ನೋವುಗಳು,  ಪ್ರಾರ್ಥನೆಗಳು,ಮಾತನಾಡಲಾಗದ ಮಾತುಗಳು  ಪದಗಳಾಗಿ ಹರಿಯಲಾರಂಭೀಸಿದವು….!! ಅವರು ಕನ್ನಡವನ್ನು ಅಪ್ಪಿಕೊಂಡದ್ದು ಕೇವಲ ಕಲಿಕೆಯ ಕಥೆಯಲ್ಲ,ಇದು ಸಾಹಿತ್ಯ ಲೋಕದ ವಿಜಯಗಾಥೆ! ಹೊಸ ಬೆಳಗಿನ ಉದಯ ಗಾಥೆ..!!  ಕನ್ನಡ ಭಾಷೆಯನು ಗಾಢವಾಗಿ ಪ್ರೀತಿಸುತ್ತ….ಮುಂದೆ ಕನ್ನಡ ಸಾಹಿತ್ಯ ಪರಿಷತ್ತಿನ ಮೊದಲ ಮಹಿಳಾ ಅಧ್ಯಕ್ಷರಾಗಿ ನಡೆದರು ಕರ್ನಾಟಕ ವಿಶ್ವವಿದ್ಯಾಲಯವೇ ಅವರ ಬಳಿ ಬಂದು ಡಾಕ್ಟರೇಟ್ ಪದವಿಯನ್ನು ಕೊಡಮಾಡಿತು. ಸರ್ವಜ್ಞ ನಂತರ ಪ್ರಥಮ ಬಾರಿಗೆ ತ್ರಿಪದಿಯಲ್ಲಿ ಪುರಾಣವನ್ನು ನಿರ್ಮಿಸಿದರು… ಕನ್ನಡ ಸರಸ್ವತ ಲೋಕದ ಅನಘ್ನ ರತ್ನರಾಗಿ ಖ್ಯಾತಿ ಪಡೆದುಕೊಂಡವರು. ಕನ್ನಡ ಭಾಷೆಯನ್ನು ಕಲಿತ ಜಯದೇವಿ ತಾಯಿಯವರು ಅತ್ಯಂತ ವೇದಾವಿ ಭಾಷಣಕಾರ್ತಿಯಾಗಿ ಹೊರಹೊಮ್ಮಿದರು. ನಾಡಿನ ಮೂಲೆ ಮೂಲೆಗಳಿಂದ ಸುತ್ತಮುತ್ತಲು ಹಳ್ಳಿಗಳಿಂದ ಅವರಿಗೆ ಅವ್ಹಾನ ಬರಲು ಆರಂಭಿಸಿತು . ತಮ್ಮ ಮಾತುಗಳಿಂದ ಜನರ ಮನವನ್ನು ಪರಿವರ್ತಿಸಲಾರಂಭಿಸಿದರು. ಜೊತೆ ಜೊತೆಗೆಪತಿ ಮತ್ತು ಅತ್ತೆ ಸಂತಸದಿಂದ ಸಹಕರಿಸಲಾರಂಭಿಸಿದರು.  ಸರಸ್ವತಿ ಮಂದಿರ ಸ್ಥಾಪನೆಯೊಂದಿಗೆ ಸ್ತ್ರೀಯರಿಗೆ ಶಿಕ್ಷಣ ಕೊಡಲು ಸೊಲ್ಲಾಪುರದಲ್ಲಿ ಪ್ರಾರಂಭಿಸಿದ್ದು.. ಅದು ಮಂದಗತಿಯಲ್ಲಿ ನಡೆದಿತ್ತು….ಆದರೆ ಜಯದೇವಿ ತಾಯಿಯವರು ಅಧ್ಯಕ್ಷತೆಯನ್ನು ವಹಿಸಿದ ಮೇಲೆ ಮೊದಲು ಸ್ತ್ರೀ ಶಿಕ್ಷಣದ ಅವಶ್ಯಕತೆಯನ್ನು ಹೆಚ್ಚು ಒತ್ತು  ಕೊಡಲಾರಂಭಿಸಿದರು. ಅವರ ದೃಷ್ಟಿಯಲ್ಲಿ ಶಿಕ್ಷಣವೆಂದರೆ *ಒಂದೆರಡು ಭಾಷೆಗಳನ್ನು ಮಾತನಾಡಲು ಕಲಿಯುವುದು ಮಾತ್ರವಲ್ಲ ನಿತ್ಯ ಜೀವನದಲ್ಲಿ ಉಪಯೋಗವಾಗುವಂತಹ ಗೃಹ ಜ್ಞಾನ..ಸಾಯನ್ಯಕಲಿಕಯೊಂದಿಗೆ …,ಉಚ್ಚ ಶಿಕ್ಷಣವು ಮಹಿಳೆಗೆ ಸಿಗಬೇಕು. ಇಂಗ್ಲೀಷರು ತಮ್ಮ ಅನುಕುಲಕ್ಕೆ ಹಾಕಿದ ಗಿಳಿ ಪಾಠದ ಪದ್ಧತಿಯ ಶಾಲೆ ಬದಲಾಗಬೇಕು. ಸುಸಂಸ್ಕೃತ ಜೀವನ ನಡೆಸುವಂತಹ  ಶಿಕ್ಷಣ ಸಿಗಬೇಕು. ಜೀವನದ ಎಲ್ಲಾ ಹಂತಗಳ ಅಧ಼ಃಪತನಕ್ಕೆ ಕಾರಣವಾದ ಅಜ್ಞಾನವನ್ನು ಹೊಡೆದು ಓಡಿಸಲು …..ಸಾಕ್ಷರತೆಯ ಅಸ್ತ್ರದಿಂದಲೇ  ಸಾಧ್ಯ. ಹಸಿರು ಕ್ರಾಂತಿ ಹೊಟ್ಟೆಯ ಹಸಿವನ್ನು ಹಿಂಗಿಸಿದರೆ ಅಕ್ಷರದ ಕ್ರಾಂತಿಯು ಬುದ್ಧಿ ಹಸಿವನ್ನು ಅಡಗಿಸುವದೆಂದು*ಅಭಿಪ್ರಾಯ ಪಡುತ್ತಿದ್ದರು. 1930ರ ಸಮಯದಲ್ಲಿ ಸೊಲ್ಲಾಪುರದ ಕೋರ್ಟ್ ಮಾರ್ಷಲ್ ನಡೆದಿತ್ತು… ಹಲವಾರು ಜನರು ಬ್ರಿಟಿಷರ ಗುಂಡಿಗೆ ಬಲಿಯಾಗಿದ್ದರು. ಇದರಲ್ಲಿ ಮಹಿಳೆಯರು ಸೇರಿದ್ದರು. ಎಲ್ಲಿ ನೋಡಿದರಲ್ಲಿ ಅಸಹಕಾರ ಚಳುವಳಿಗೆ ಸಂಬಂಧಿಸಿದ ಗಲಭೆ ನಡೆದಿದ್ದವು ‌. ಇಬ್ಬರು ಪೊಲೀಸರು ಹತರಾಗಿದ್ದರೆಂದರೆ ಕೇಳಬೇಕೆ.,… ಬ್ರಿಟಿಷರ ಕ್ರೌರ್ಯವೂ  ಹೇಳತೀರದಾಗಿತ್ತು . ಧನಶೆಟ್ಟಿ ಹಾಗೂ ಇನ್ನು ಮೂರು ಜನರ ಮೇಲೆ ಮೊಕದಮೆ ಹುಡಿ ಗಲ್ಲಿಗೆರಿಸಲಾಗಿತ್ತು.ಈ ಶಿಕ್ಷೆಯನ್ನು ವಿರೋಧಿಸಿ ಪುಣೆ ಮುಂಬೈ, ಕನ್ನಡ ನಾಡಿನಲ್ಲಿಯೂ ಪ್ರತಿಭಟನೆಗಳು, ಉಪವಾಸ ಸತ್ಯಾಗ್ರಹಗಳು ನಡೆದಿದ್ದವು. ಈ ಹೋರಾಟಗಳಲ್ಲಿ ಜಯದೇವಿ ತಾಯಿಯವರ ತಾಯಿ ಸಂಗವ್ವನ ಜೊತೆ  ತಾಯಿಯವರು ಬೆಂಬಲಿಸಿ ಉಗ್ರವಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 1932 ರಲ್ಲಿ ಬ್ರಿಟಿಷ್ ಸೈನಿಕರು ರಾಷ್ಟ್ರಧ್ವಜವನ್ನು ಅಪಮಾನಿಸಿದ್ದರಿಂದ ದ್ವಜ ಸತ್ಯಾಗ್ರಹ ನಡೆದು ಅಲ್ಲಿ ದೇಶದ ವಿವಿಧ ಪ್ರಾಂತಗಳ ಜನರು ಸೇರಿದ್ದರು ಅಲ್ಲಿ ನಡೆದ ಗಲಿಬಿಯಲ್ಲಿ ನೂರಾರು ಜನ ಕನ್ನಡಿಗರು ಬಂದಿತ್ತರಾಗಿದ್ದರು.  ಈ ಸಂಘಟನೆಯು ಆರಂಭದಲ್ಲಿ ಹೆಚ್ಚಾಗಿ ಪುರುಷರೇ ಪಾಲ್ಗೊಳ್ಳುತ್ತಿದ್ದು ರಾಷ್ಟ್ರದ ಹಿತಕ್ಕಾಗಿ ಹೋರಾಡುವ ಮಹಿಳೆಯರಿಗೆ ಒಂದು ನಿರ್ದಿಷ್ಟವಾದ ಸಂಘಟನೆ ಇರ್ಲಿಲ್ಲ ನಂತರ ಮಹಿಳೆಯರನ್ನು ಸಂಘಟನೆಯಲ್ಲಿ ಸೇರಿಸಿಕೊಳ್ಳಲು ಜಯದೇವಿತಾಯಿ ಹಾಗೂ ಇನ್ನಿತರರು ರಾಷ್ಟ್ರೀಯ ಚಳುವಳಿ ತರಬೇತಿ ನೀಡುವ ಗುರಿಯನ್ನು ವಿಸ್ತರಿಸಿದರು . 1934ರಲ್ಲಿ ವೀರಶೈವ ಸಾಹಿತ್ಯ ಸಭೆಯ ಅಧ್ಯಕ್ಷಣೆಯಾಗಿ ಹೋದರು. 1939 ರಲ್ಲಿ ಜಯದೇವಿ ತಾಯಿಯವರು ವೀರಶೈವ ಮಹಾಸಭೆಯ ಮಹಿಳಾ ಪರಿಷತ್ತಿನ ಅಧ್ಯಕ್ಷರಾದರು 1938 ರಲ್ಲಿ ಜಯದೇವಿ ತಾಯಿಯವರು ಸೊಲ್ಲಾಪುರ .ಹುಬ್ಬಳ್ಳಿ ಧಾರವಾಡಗಳಲ್ಲಿ ಅಕ್ಕನ ಬಳಗವನ್ನು ಸ್ಥಾಪಿಸಿದರು ಆ ಮೂಲಕ ಶರಣರ  ವಿಚಾರಧಾರೆಯನ್ನು ಜನಮನಕ್ಕೆ ಮುಟ್ಟಿಸುವ ಕೆಲಸ ಪ್ರಾರಂಭಿಸಿದರು. ಶರಣರ ಸಾಹಿತ್ಯಕ್ಕೆ ತಮ್ಮನ್ನು ತಾವು  ಅರ್ಪಿಸಿಕೊಳ್ಳುತ್ತಾ ಸಮಾಜದವರೊಂದಿಗೆ ಅದನ್ನು ತಿಳಿಹೇಳುತ್ತ ಅನುಭವ ಪಥದಲ್ಲಿ ಸಾಗಿದ್ದರು. ಈ ಹಿನ್ನೆಲೆಯಲ್ಲಿ ಮಹಿಳೆಯರ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳಲು ಅವರಿಗೆ ರಾಷ್ಟ್ರದ ಆಗು-ಹೋಗುಗಳ ಅರಿವು ಮೂಡಿಸಿ  ರಾಷ್ಟ್ರೀಯತೆಯನ್ನು ಉತ್ತೇಜಿಸಲು ಅನೇಕ ಸಂಘ ಸಂಸ್ಥೆಗಳು ಹುಟ್ಟಿಕೊಂಡವು. ಜಯದೇವಿಯವರು ಮಹಿಳೆಯರ ಹೋರಾಟಕ್ಕೆ ಬೆಂಬಲಿಸಲು 1947ರಲ್ಲಿ ತಮ್ಮ ಮನೆಯಾದ ಜಯನಿಕೀತನದಲ್ಲಿ ಸೇವಾ ದಳದ ಪ್ರೌಢ ಶಾಖೆಯನ್ನು ಆರಂಭಿಸಿದರು.  ಎರಡನೆ ಮಹಾ ಯುಧ್ಧದ ಸಂದರ್ಭದಲ್ಲಿ ಬ್ರಿಟಿಷರಿಗೆ ಸೈನಿಕರ ಅವಶ್ಯಕತೆ ಎದುರಾದಾಗ ದೇಶದಾದ್ಯಂತ ಬೆಟಾಲಿಯನ್ ಕಟ್ಟಲು ಜನರನ್ನು ಮತ್ತು ಪ್ರಮುಖರನ್ನು ಪ್ರೋತ್ಸಾಹಿಸುತ್ತಿದ್ದರು. ಇದರ ಪರಿಣಾಮವಾಗಿ ವಾರದ ಮಲ್ಲಪ್ಪನವರಿಗೆ ರಾವ್ ಬಹದ್ದೂರ್ ಪದವಿ ಕೊಟ್ಟರೆ….ಮಡಿಕೆ ಚನ್ನಬಸಪ್ಪನವರಿಗೆ ಮ್ಯಾಜಿಸ್ಟ್ರೇಟ್ ಪದವಿಯನ್ನು ಕೊಟ್ಟರು. ಸೊಲ್ಲಾಪುರದಲ್ಲಿ ಲಿಂಗಾಯತರು ಹೆಚ್ಚು ಇರುವುದರಿಂದ ಲಿಂಗಾಯತ ಬೆಟಾಲಿಯನ್ ಕಟ್ಟಲು ಪ್ರೇರೇಪಿಸಿದರು ಬ್ರಿಟಿಷರು .ಅಲ್ಲಿಯ ಸ್ಥಳೀಯ ಮುಖಂಡರಾದ ವಾರದ, ಮಡಕಿ ಲಿಗಾಡೆ,ತಂಬಾಕಿ ಮನೆತನಗಳ ಮೇಲೆ ಒತ್ತಾಯ ಬೀರಲು ಪ್ರಯತ್ನಿಸಿದರು.  ಅದೇ ರೀತಿಯಾಗಿ ಲಿಗಾಡೆ ಅವರ ಆಸ್ತಿಯ ಮೇಲೆ ಋಣ ಭಾರ ಹೇರಿದ್ದೇವೆಂದು ಇದಕ್ಕಾಗಿ ಜಯದೇವಿ ತಾಯಿಯವರು ತಮ್ಮ ಕೆಲಸಕ್ಕೆ ಸಹಕರಿಸಬೇಕೆಂದು ಕೇಳಿಕೊಂಡರು.ಅಂದಿನ ದಿನಗಳಲ್ಲಿ ಪ್ರಭಾವಿ ಭಾಷಣ ಕಾರ್ತಿ ,ಪ್ರಸಿದ್ಧ‌ಸಮಾಜ ಸೇವೆವಕಿಯಾದ ತಾಯಿಯವರು ಲಿಂಗಾಯತರನ್ನು ಇಂಗ್ಲಿಷ್ ಸೇನಾ ಪಡೆಗೆ ಸೇರಿಸಲು ಹುರಿದುಂಬಿಸುವಂತೆ ಭಾಷಣ ಮಾಡಲು ಕೇಳಿಕೊಂಡರು…… ಬ್ರಿಟಿಷ್ ಸರ್ಕಾರವು ಪತಿ ಚೆನ್ನಮಲ್ಲಪ್ಪ ಲಿಗಾಡೆ ಅವರಿಗೆ ವ್ಯಾಪಾರದ ಋಣಭಾರ ಕಡಿಮೆ ಮಾಡುವುದಾಗಿ  ಆಮಿಷೆ ಒಡ್ಡಿತು….  ಪತ್ನಿ ಜಯದೇವಿ ತಾಯಿಯವರು ಲಿಂಗಾಯೆತರನ್ನು ಬ್ರಿಟಿಷ್ ಸೈನ್ಯಕ್ಕೆ ಸೇರುವಂತೆ ಪ್ರಯತ್ನಿಸುವಂತೆ ಕೇಳಿಕೊಂಡರು….. ಕೊನೆಗೆ ಲಿಂಗಾಯೆತರನ್ನು ಸಂಘಟಿಸಲೇಬೇಕೆನ್ನುವ   ಆದೇಶವಿತ್ತರು ..!!!!  ಚನ್ನಮಲ್ಲಪ್ಪನವರಿಗೆ ಚೆನ್ನಾಗಿ ಗೊತ್ತಿತ್ತು ….. ಬಲಾಡ್ಯ ಬ್ರಿಟಿಷರ ವಿರುದ್ಧ ಹಾಕಿಕೊಳ್ಳುವುದರಲ್ಲಿ ಅರ್ಥವಿಲ್ಲ … ದೇಶಪ್ರೇಮವೆನೋ ನಿಜ…..ದೇಶ ಸ್ವಾಭಿಮಾನ ,ದೇಶಮಾತೆಗಾಗಿ ಬಲಿದಾನ-ತ್ಯಾಗ ಇವೆಲ್ಲ ದುಷ್ಟ ಬ್ರಿಟಿಷರ ಎದುರು ನಿರರ್ಥಕ … ಬ್ರಿಟಿಷರ ಬಲದ ಎದುರು ನಾವು ತೃಣ ಸಮಾನರು  ವಿವೇಕತನವೆಂದರೆ ನಮ್ಮ ವ್ಯಾಪಾರವನ್ನು ನಮ್ಮ ಮನೆತನವನ್ನು ಉಳಿಸಿಕೊಳ್ಳುವುದರಲ್ಲಿ ಜಾಣತನವಿರುವದು ಇಲ್ಲದ್ದಿದರೆ ಹೇಳು ಹೆಸರಿಲ್ಲದಂತೆ ನಾಶವಾಗಿ ಹೋಗುವುದು ಖಚಿತ ಅನ್ನೋದು ದೃಢವಾಗಿ ನಂಬಿದವರು….ಹೀಗಾಗಿ  ವೈಯಕ್ತಿಕ ಹಿತಾಸಕ್ತಿಯುತರಾಗಿದ್ದರು, ತನ್ನ ವ್ಯಾಪಾರದತ್ತ ಹೆಚ್ಚು ಗಮನವನ್ನು ಕೊಡುತ್ತಿದ್ದರು. ಹಾಗೆ ಜಯದೇವಿತಾಯಿಯವರಿಗೆ ಸೈನ್ಯ ಕಟ್ಟುವುದಕ್ಕಾಗಿ ಕೇಳಿಕೊಂಡಿದ್ದರು ಕೂಡಾ ಪತಿ ಚೆನ್ನಲ್ಲಪ್ಪನವರು. ಬ್ರಿಟಿಷರು ಜಯದೇವಿ ತಾಯಿಯವರಿಗೆ ಕೇಸರಿ-ಇ- ಹಿಂದ್ ಪದವಿಯನ್ನು ಕೊಡುವುದಾಗಿ ಮುಂದೆ ಬಂದರು. ಇದ್ಯಾವದಕ್ಕೂ ಅವರು ವಿಚಲಿತರಾಗಲಿಲ್ಲ. ಅದಕ್ಕಾಗಿ ದೊಡ್ಡ ಮೊತ್ತದ *ವಾರ್ ಫಂಡ*ನ್ನು ಕಟ್ಟಬೇಕಾಯಿತು. ಮನೆಯವರ ಯಾವ ಒತ್ತಡಕ್ಕೂ ಮಣಿಯದ  ತಾಯಿಯವರು ರಾಷ್ಟ್ರೀಯ ಪ್ರೇಮ ಅಚಲವಾಗಿತು.. ಬ್ರಿಟಿಷರ  ಆಮಿಷದ ಪ್ರಸ್ತಾವನೆ, ಹೊರಗೆ ನೋಡಲು ಗೌರವದ ಹೊದಿಕೆ ಹೊದ್ದಿದ್ದರೂ, ಒಳಗೆ ದೇಶದ ಏಕತೆಯನ್ನು ಕುಗ್ಗಿಸುವ ಕುಯುಕ್ತಿಯೇ ಆಗಿತ್ತು…!!ಆ ಕ್ಷಣದಲ್ಲಿ ಜಯದೇವಿ ತಾಯಿಯವರು ಮೌನವಾಗಿರಲಿಲ್ಲ.ಅವರಲ್ಲಿ ಹೊತ್ತಿ ಉರಿದದ್ದು   ರಾಷ್ಟ್ರಪ್ರೇಮದ ಜ್ವಾಲೆ.“ಕೇಸರಿ-ಇ -ಹಿಂದ್” ಎಂಬ ಹೆಸರಿನಲ್ಲಿ ಅವರ ಗುಲಾಮರನ್ನಾಗಿ ಮಾಡಿಕೊಳ್ಳುವ ಹುನ್ನಾರ ಕುತಂತ್ರ ಅರಿತವರಾಗಿದ್ದರು. ದೇಶದ ಧ್ವಜಕ್ಕೆ ತೋರುವ ಆದರವು‌  ತ್ಯಾಗದ ಸಂಕೇತ, ಧೈರ್ಯದ ಪ್ರತೀಕ, ತಾಯ್ನಾಡಿನ ಗೌರವ.ಬ್ರಿಟಿಷರು ಅಧಿಕಾರದ ಸಿಂಹಾಸನವನ್ನು ತೋರಿಸಿದರು,ಸ್ಥಾನಮಾನಗಳ ಸಿಹಿ ಮಾತುಗಳನ್ನು ಹೇಳಿದರೂ ತಾಯಿಯ ಹೃದಯಕ್ಕೆ ಕೇಳಿಸಿಕೊಂಡದ್ದು ಒಂದೇ ಶಬ್ದ —“ಭಾರತಮಾತೆಯ ಹಿತಾಸಕ್ತಿ….“ನನ್ನ ದೇಶದ ಏಕತೆಯನ್ನು ಮಸುಕುಗೊಳಿಸುವ ಯಾವ ಒಪ್ಪಂದಕ್ಕೂ ನಾನು ಸಮ್ಮತಿಸುವುದಿಲ್ಲ,”ಎಂದು ಅವರು ಅಟಲ ಧೈರ್ಯದಿಂದ ಹೇಳಿದರು. ಆ ನಿರಾಕರಣೆ ಸಾಮಾನ್ಯ ಪದವಿರೋಧವಲ್ಲ —ಅದು ಮಣ್ಣಿನ ಮಗಳು ತನ್ನ ತಾಯ್ನಾಡಿಗೆ ಕೊಟ್ಟ ಶಪಥ.ಆ ದಿನ ಅವರು ಆಮಿಷವನ್ನು ತಳ್ಳಿಹಾಕಿದಾಗ,ದೇಶಪ್ರೇಮಿಗಳು ಸಾಕ್ಷಿಯಾಗಿ ನಿಂದರು. ಅವರ ಎತ್ತಿದ ಧ್ವನಿಯಲ್ಲಿ ರಾಷ್ಟ್ರಪ್ರೇಮವು ಘೋಷವಾಗಿ ಪ್ರತಿಧ್ವನಿಸಿತು.ಅವರು ತೋರಿಸಿದ ಧೈರ್ಯ  —ನಿಜವಾದ ದೇಶಭಕ್ತಿ ….ಹೃದಯದ ಆಳದಿಂದ ಹೊರಹೊಮ್ಮುವ ನಿಷ್ಠೆ; ಧೇಶಮಾತೆಗೆ ತೋರಿದ ಗೌರವ. . *ಬ್ರಿಟಿಷರ ಇಂಥ ಆಸೆ ಆಮಿಷಕ್ಕೆ ಒಳಗಾಗದೆ ಜಾತಿಯ ಹೆಸರಿನಲ್ಲಿ ಸೇನೆ ಕಟ್ಟುವುದು ದೇಶದ ಅಹಿತಕ್ಕೆ ಕಾರಣವಾಗುವುದೆಂದು…ಯಾವುದೇ ಭೀತಿಗೂ ತಲೆಬಾಗಲಿಲ್ಲ. ಬ್ರಿಟಿಷರ ಪ್ರತ್ತಸ್ಸಾವನೆಯನ್ನು ಖಡಾಖಂಡಿತವಾಗಿ ನಿರಾಕರಿಸಿದರು . *ನಡೆಯಣ್ಣ ಇಡು ಹೆಜ್ಜೆ ಮುಂದೆ ದೃಢತನದಿಂದೆ!! ಕದಳಿಯ ಬನಹೊಕ್ಕು ಚಣ ಮಜಗಜದ ತಾಣಎದುರಿಗೆ ಬರುವದು ಕಾಡಕೋಣ ತೆಗೆಯಲು ಪ್ರಾಣ ಕದಡಿಯ ಎಂಟು ದಿಕ್ಕು ಎಂಟಾನೇಗಳ ಸೊಕ್ಕು ಕಾನನದೊಳಗೆ ಪಕ್ಕು ಮುರಿಯಬೇಕಾದರೆ ಸೊಕ್ಕುಹೀಗೆ ಬ್ರಿಟಿಷರ ಸೊಕ್ಕನ್ನು ಮುರಿಯಬೇಕು ಅನ್ನುವ ಕರೆಯನ್ನು ಸಾರ್ವಜನಿಕರಿಗೆ ಕೊಡುತ್ತಿದ್ದರು *ನಡೆದಾರಿಗೆ ಅಡ್ಡ ಬಂದಿತಣ್ಣ ಹೆಡೆ ತೆಗೆದಾಚಣ ಬಿಡುವದು ತನ್ನು ಕೆಂಪುಗಣ್ಣ ಅದುವೆ ನಾಗಣ್ಣ ನಂಜೀನ ಅಂಜಿಕೆ ಹೊಲ್ಲ ಕೆಂಜೆಡೆಯವನ ಚಲ್ವ ಸಂಜೀವನಿ ಮದ್ದು ಬಲ್ಲ ಹಿಂಜರಿಯುವುದೇಕೆ ಇನ್ನು ಹಸಿದು ಹುಲಿ ಬರುವ ದಲ್ಲಿ ತಾಯಿ, ಪಸರಿಸಿ ಬಾಯಿ ವಸುಧೆ ನಡುಗುವ ಗುಡುಗಿನ ಛಾಯೆ ಅದುವೆ ಮಹಾಮಾಯಿ ಜಯ ಸಿದ್ದರಾಮನ ಸಿದ್ದಿ ಮಂತ್ರದ ಧ್ಯಾನ ಶುದ್ಧ ಮನದಿಂದಲೇ ಸಾಧನ ಇದ್ದುಗೆದೆ ಕದಳಿಯ ಬನ* ಹಸಿದು ಬರುವ ಬ್ರಿಟಿಷರನ್ನು ಬಗ್ಗು ಬಡಿಯಲೆಂದೆ ಅಂಜದೇ ಅಳುಕದೇ ಕೆಂಜಡಿಯವನ ಸಂಜೀವಿನಿ ಮದಿನ ಮೇಲೆ ನಂಬಿಕೆ ಇಟ್ಟು ಮುಂದೆ ನಡೆ ಅಂತ ಜನರಿಗೆ ಕರೆ ಕೊಡುತ್ತಿದ್ದರು.   ಭಾರತೀಯ ಸ್ವಾತಂತ್ರ ಹೋರಾಟ ಹಾಗೂ ಇನ್ನಿತರ ಚಳುವಳಿಗಳಲ್ಲಿ ಪುರುಷರೇ ಮುಖ್ಯ ಎದುರಿಸುತ್ತ ಬಂದಿದ್ದರು .ಅವರಿಗೆ ಭೌತಿಕವಾಗಿ ಮಹಿಳೆಯರ ಬೆಂಬಲವೂ ಇದ್ದಿತು. ಸ್ವಾತಂತ್ರ್ಯ ಚಳುವಳಿಯ ಸಂದರ್ಭದಲ್ಲಿ ಮಹಿಳೆಯರು ಅದಾಗಲೇ ಸಾಮಾಜಿಕ ಸುಧಾರಣೆ ಸ್ವಾತಂತ್ರ ಹೋರಾಟ ಶೈಕ್ಷಣಿಕ ಬೆಳವಣಿಗೆ ಹಾಗೂ ಮಹಿಳಾ ದಿನಾಚರಣೆ ಅಂತ ಕ್ಷೇತ್ರಗಳಲ್ಲಿ ಮುಖ್ಯ ವಾಹಿನಿಯಲ್ಲಿ ಬಂದಿದ್ದರು. ಇದರೊಂದಿಗೆ ಗ್ರಾಮೀಣ ಭಾಗದ ಮಹಿಳೆಯರು ಸಹ ತಮ್ಮ ಮನೆಯ ಪುರುಷರಿಗೆ  ರಾಷ್ಟ್ರೀಯ ಹೋರಾಟದಲ್ಲಿ ಪಾಲ್ಗೊಳ್ಳಲು ನೈತಿಕ ಹಾಗೂ ಭೌತಿಕ ಬೆಂಬಲವನ್ನು ನೀಡುತ್ತಿದ್ದರು.  ತಮ್ಮ ಮನೆಯವರ ಬೆಂಬಲದಿಂದ ರಾಷ್ಟ್ರೀಯ ಹೋರಾಟದಲ್ಲಿ ನೇರವಾಗಿ ಪಾಲ್ಗೊಂಡಿದ್ದರು .ಸ್ವಾತಂತ್ರ ಹೋರಾಟದಲ್ಲಿ ಎಲ್ಲ ವರ್ಗದ ಜನರು ಪಾಲ್ಗೊಳ್ಳಬೇಕೆಂಬುದೇ ಬಹು ಮುಖ್ಯ ಉದ್ದೇಶ ವಾಗಿತ್ತು..ಪುರುಷರು ಸೆರೆವಾಸವನ್ನು ಅನುಭವಿಸಿದಾಗ ಹೋರಾಟವನ್ನು ಮುಂದುವರಿಸಿಕೊಂಡು ಹೋಗುವ ಹೊಣೆ ಮಹಿಳೆಯರ ಮೇಲಿತ್ತು .ಸತ್ಯಾಗ್ರಹ ರಚನಾತ್ಮಕ ಕಾರ್ಯಕ್ರಮಗಳು…ಚಳುವಳಿಯ ರೂಪರೇಷೆಗಳು ಮಹಿಳೆಯರ ಮನೋಬಲಕ್ಕೆ ಸೂಕ್ತವಾಗಿದ್ದು ಎಂದು ಅವರನ್ನು ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಳ್ಳಲು ಸಭೆಗಳನ್ನು ಕರೆಯಲು ಹೇಳುತ್ತಿದ್ದರು .ಅಂತಹ ಸಮಿತಿಗಳಲಿ ಜಯದೇವಿ ತಾಯಿಯವರು ಮುಂಚೂಣಿಯಲ್ಲಿ ಇರುತ್ತಿದ್ದರು ಈ ಚಳುವಳಿಯ ಸಂದರ್ಭದಲ್ಲಿ ಮಹಿಳೆಯರು ಗೋಖಲೆ ,ಮಾರ್ಗರೇಟ್ ಕಸಿನ್ಸ ಹಾಗೂ ಅನಿಬೆಸೆಂಟರ ಪ್ರಭಾವಕ್ಕೆ ಒಳಗಾಗಿದ್ದನ್ನು ನಾವು ಗಮನಿಸಬಹುದಾಗಿದೆ.ಬಹು ವರ್ಷಗಳಿಂದ ಮಹಿಳೆಯರು ತಮ್ಮ ಆರಂಭದ ಹೋರಾಟವನ್ನು ರಚನಾತ್ಮಕ ಕಾರ್ಯಗಳಿಗೆ ಸೀಮಿತಗೊಳಿಸಿಕೊಂಡಿದ್ದರು ನಂತರ ತಮ್ಮ ಕಾರ್ಯ ವ್ಯಾಪ್ತಿಯನ್ನು ಉಪ್ಪಿನ ಸತ್ಯಾಗ್ರಹ ಸ್ವದೇಶಿ ಚಳುವಳಿ ಮಧ್ಯಪಾನ ನಿಷೇಧ ದಂತ ಚಟುವಟಿಕೆ ವಿಸ್ತರಿಸಿದರು. ಕಾನೂನು ಭಂಗ ಚಳುವಳಿಯಲ್ಲಿ ಮಹಿಳೆಯರು ಪಾಲ್ಗೊಳ್ಳದ ಕುರಿತು ರಾಷ್ಟ್ರೀಯ ನಾಯಕ ಯೋಚಿಸುವಂತಾಯಿತು.  ಕರ್ನಾಟಕದಲ್ಲಿ  ರಾಷ್ಟ್ರೀಯ ಚಳುವಳಿಯಲ್ಲಿ ಪಾಲ್ಗೊಂಡ ಪ್ರಮುಖ ಮಹಿಳೆಯರಲ್ಲಿ ಜಯದೇವಿತಾಯಿ ಲಿಗಾಡೆಯವರು ಒಬ್ಬರು ಇವರೊಂದಿಗೆ ಹಲವು ಮಹಿಳೆಯರು ಪಾಲ್ಗೊಂಡಿದ್ದರು…… ಮುಖ್ಯವಾಗಿ ಕಮಲಾದೇವಿ ಚಟ್ಟೋಪಾಧ್ಯಾಯ, ಉಮಾಬಾಯಿ ಕುಂದಾಪುರ, ಕೃಷ್ಣ ಬಾಯಿ ಪಣಜಿ ಕರ್, ಅವರಂಥ ಮಹಿಳೆಯರು ತಮ್ಮ ಚಟುವಟಿಕೆಗಳನ್ನು ಪ್ರೆಸಿಡೆನ್ಸಿಯಾಚೆ ವ್ಯಾಪಕಗೊಳಿಸಿದರು. ಇದರಿಂದಾಗಿ ಕರ್ನಾಟಕದ ಪ್ರತಿ ಭಾಗಗಳಿಂದಲೂ ಮಹಿಳೆಯರು ಚಳುವಳಿಯಲ್ಲಿ ಭಾಗವಹಿಸಹತ್ತಿದರು ಬಳ್ಳಾರಿ ಸಿದ್ದಮ್ಮ, ನಾಗಮ್ಮ ಪಾಟೀಲ, ಸುಬ್ಬಮ್ಮಾ ಜೋಯಿಸ್, ಟಿ. ಸುನಂದಮ್ಮ, ಯಶೋದಮ್ಮ ದಾಸಪ್ಪ, ನಾಗರತ್ನಮ್ಮ ಹಿರೇಮಠ, ಪದ್ಮಾವತಿ ಬಿದರಿ, ಜಯದೇವಿತಾಯಿ ಲಿಗಾಡಿ ಶಕುಂತಲಾ ಕುರ್ತುಕೋಟಿ, ಚೆನ್ನಮ್ಮ ಹಳ್ಳಿಕೇರಿ ಇನ್ನೂ ಅನೇಕ ಮಹಿಳೆಯರು ರಾಜಕೀಯ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿ

Read Post »

ಅಂಕಣ ಸಂಗಾತಿ, ಒಬ್ಬ ಅಮ್ಮನ ಕಥೆ

ಧಾರಾವಾಹಿ ಸಂಗಾತಿ-113 ಒಬ್ಬ ಅಮ್ಮನ ಕಥೆ ರುಕ್ಮಿಣಿ ನಾಯರ್ ಸುಮತಿಯ ಎರಡನೇ ಮಗಳು ತನ್ನ ಬಟ್ಟೆ ಬರೆ ಪುಸ್ತಕಗಳು ಹಾಗೂ ತನಗೆ ಅತ್ಯವಶ್ಯಕವಾಗಿ ಬೇಕಾದ ವಸ್ತುಗಳನ್ನು ತೆಗೆದುಕೊಂಡು ಅನಾಥಾಶ್ರಮಕ್ಕೆ ಹೊರಡಲು ಅನುವಾದಳು. ಸುಮತಿ ಹಾಗೂ ಮೂರನೇ ಮಗಳು ಒಲ್ಲದ ಮನಸ್ಸಿನಿಂದ ಅವಳನ್ನು ಬೀಳ್ಕೊಟ್ಟರು.  ಏಕೋ ಮಗಳನ್ನು ಬೀಳ್ಕೊಡುವಾಗ ಸುಮತಿಯ ಮನಸ್ಸು ಬಹಳ ಭಾರವಾಯಿತು. ಏನೋ ಅವ್ಯಕ್ತವಾದ ನೋವೊಂದು ಅವಳ ಹೃದಯವನ್ನು ಹಿಂಡಿತು….”ವಾರಕ್ಕೊಮ್ಮೆ ನಾನು ಬರುತ್ತೇನೆಲ್ಲವೇ ಅಮ್ಮಾ …. ವಾರದಲ್ಲಿ ಒಂದು ದಿನ ನಿಮ್ಮ ಜೊತೆ ಕಳೆಯುತ್ತೇನೆ….ದಯವಿಟ್ಟು ನೊಂದುಕೊಳ್ಳದೆ ನಸುನಗುತ್ತಾ ನನ್ನನ್ನು ಕಳುಹಿಸಿ ಕೊಡು”…. ಎಂದು ಮಗಳು ಹೇಳಿದಾಗ, ಅವಳನ್ನು ಅಪ್ಪಿ, ಹಣೆಗೊಂದು ಹೂಮುತ್ತನ್ನು ಕೊಟ್ಟಳು. ತಂಗಿಯು ಅವಳನ್ನು ಬಿಗಿಯಾಗಿ ಅಪ್ಪಿಕೊಂಡು ಸ್ವಲ್ಪ ಹೊತ್ತು ಹಾಗೇ ನಿಂತು ಬಿಟ್ಟಳು. ಗೇಟಿನ ಬಳಿ ಡ್ರೈವರ್ ಬಂದು….”ಬಾ ಮಗು ಹೊರಡೋಣ”…. ಅಮ್ಮ ಅಲ್ಲಿ ಕಾಯುತ್ತಿದ್ದಾರೆ… ಎಂದು ಹೇಳಲು, ಮಗಳು ಅವರ ಜೊತೆ ಹೊರಟಳು. ಮೆಟ್ಟಿಲುಗಳನ್ನು ಏರುತ್ತಾ ಅಮ್ಮನನ್ನು, ತಂಗಿಯನ್ನು ನೋಡಿ ಕೈಬೀಸಿದಳು. ಮಗಳು ಹೊರಟು ಹೋದ ನಂತರ ಸುಮತಿ ಮನೆ ಒಳಗೆ ಬಂದು ಕೆಲವು ನಿಮಿಷಗಳ ಕಾಲ ಸುಮ್ಮನೆ ಕುಳಿತುಬಿಟ್ಟಳು. ಮೂರನೇ ಮಗಳು ಸುಮತಿಯ ಪಕ್ಕ ಬಂದು ಕುಳಿತು ಹೆಗಲ ಮೇಲೆ ಕೈ ಇಟ್ಟು ತಾಯಿಗೆ ಸಮಾಧಾನ ಮಾಡುವಂತೆ ಹೆಗಲನ್ನು ತಟ್ಟಿದಳು. ದಿನಗಳು ಉರುಳಿದವು. ನಾಲ್ಕನೇ ಮಗಳು ಬೇಸಿಗೆ ರಜೆಯಲ್ಲಿ ಮನೆಗೆ ಬಂದಳು.  ಅವಳು ಬಂದ ಮೇಲೆ ಮೂರನೇ ಮಗಳು ಲವಲವಿಕೆಯಿಂದ ಇರುವಂತೆ ಆಯ್ತು. ಸುಮತಿಯ ಜೊತೆ ಇಬ್ಬರೂ ಶಾಲೆಗೆ ಹೋಗುತ್ತಿದ್ದರು. ಶಾಲೆಯ ಕೆಲಸದಲ್ಲಿ ಮತ್ತು ಮನೆಯ ಕೆಲಸಗಳಲ್ಲಿ ಸುಮತಿಗೆ ಸಹಾಯ ಮಾಡುತ್ತಿದ್ದರು. ಇತ್ತೀಚೆಗೆ ಯಾಕೋ ಸುಮತಿ ಇನ್ನೂ ಹೆಚ್ಚು ಬಳಲಿದಂತೆ ತೋರುತ್ತಿದ್ದಳು. ಶನಿವಾರ ಸಂಜೆಯಾದರೆ ಬಸ್ಸು ಬರುವ ವೇಳೆಗೆ ಮಗಳನ್ನು ಕಾಯುತ್ತಾ ಗೇಟಿನ ಬಳಿ ಇರುವ ಕಲ್ಲಿನ ಮೆಟ್ಟಿಲಿನ ಮೇಲೆ ಕುಳಿತುಕೊಳ್ಳುವಳು…. “ಅಮ್ಮಾ….ಅಕ್ಕ ಇಲ್ಲಿಗೇ ಬರುತ್ತಾಳಲ್ಲವೇ?…. ಮತ್ತೇಕೆ ನೀನು ಅಲ್ಲಿ ಗೇಟಿನ ಬಳಿ ಕುಳಿತಿರುವೆ…. ಬಾ ಒಳಗೆ”…. ಎಂದರೂ ಕೇಳದೇ ಸಂಜೆಯ ಬಸ್ಸು ಬರುವುದನ್ನೇ ಕಾಯುತ್ತಾ ಕುಳಿತುಕೊಳ್ಳುವಳು. ಬಸ್ಸು ಬರುವುದು ಕೊಂಚ ತಡವಾದರೂ ಚಡಪಡಿಸುವಳು. ಎಷ್ಟು ಬೇಗ ಮಗಳನ್ನು ನೋಡುವೆನೋ ಎನ್ನುವ ಕಾತರದಲ್ಲಿ ಅವಳ ಕಣ್ಣುಗಳು ಕಾಯುತ್ತಿದ್ದವು. ಬಸ್ಸು ಬಂದು ನಿಂತ ಕೂಡಲೇ ಎದ್ದು ನಿಂತು ಜನರು ಇಳಿಯುದನ್ನೇ ನೋಡುತ್ತಾ, ಮಗಳು ಇಳಿದು ಬಂದ ಕೂಡಲೇ ಅವಳನ್ನು ಅಪ್ಪಿಕೊಂಡು ಅವಳೊಂದಿಗೆ ನಿಧಾನವಾಗಿ ಮೆಟ್ಟಿಲು ಇಳಿಯುವಳು. ಅಕ್ಕ ಬಂದಿದ್ದು ತಿಳಿದುಕೊಡಲೆ ತಂಗಿಯರು ಒಳಗಿನಿಂದ ಓಡೋಡಿ ಬಂದು ಖುಷಿಯಿಂದ ಅಕ್ಕನನ್ನು ಅಪ್ಪಿಕೊಳ್ಳುತ್ತಿದ್ದರು. ಅವಳು ಸಕಲೇಶಪುರದಿಂದ ಬರುವಾಗ ತಂಗಿಯರಿಗಾಗಿ ತಿಂಡಿ ಮತ್ತು ಅಮ್ಮನಿಗೆ ಹಣ್ಣುಗಳನ್ನು ತರುವಳು. ಅವಳು ಬಂದಳೆಂದರೆ ಮನೆಯಲ್ಲಿ ಹಬ್ಬದಂತೆ ಸಂಭ್ರಮ ಪಡುವರು.  ರಾತ್ರಿ ಎಲ್ಲಾ ನಿದ್ರೆ ಮಾಡದೆ ನಾಲ್ವರೂ ಕುಳಿತು ಮಾತನಾಡುವರು. ಅವಳ ಕೆಲಸದ ಬಗ್ಗೆ, ಅವಳ ಓದಿನ ಬಗ್ಗೆ ಕೇಳಿ ತಿಳಿದುಕೊಳ್ಳುವರು. ಇವಳು ಕೂಡ ಎಲ್ಲರ ದಿನಚರಿಗಳನ್ನು ಕೇಳಿ ತಿಳಿದುಕೊಳ್ಳುವಳು. ಅಮ್ಮ ಇತ್ತೀಚೆಗೆ ಕ್ಷೀಣಿಸುತ್ತಿರುವುದನ್ನು ಗಮನಿಸಿ….. ಏಕಮ್ಮಾ… ಏನಾಯ್ತು?… ನಾನು ನಾಡಿದ್ದು ಹೊರಡುವಾಗ ನನ್ನ ಜೊತೆ ಬನ್ನಿ…. ನಾನು ಆಸ್ಪತ್ರೆಗೆ ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ…. ಎಂದರೆ, ನನಗೇನೂ ಆಗಿಲ್ಲಪ್ಪಾ…. ಸ್ವಲ್ಪ ಆಯಾಸ ಇದೆ ಅಷ್ಟೇ…, ಎಂದಿನಂತೆ ಪಥ್ಯದಲ್ಲಿದ್ದೇನೆ… ಇನ್ಸುಲಿನ್ ತೆಗೆದುಕೊಳ್ಳುತ್ತಿದ್ದೇನೆ…. ನನಗೇನಾಗಿದೆ? ನೀವು ಮೂವರೂ ನನ್ನ ಜೊತೆ ಇದ್ದರೆ ಅದೇ ನನಗೆ ಸ್ವರ್ಗ…. ಅದಕ್ಕಿಂತ ಹೆಚ್ಚಿನದು ನನಗೇನು ಬೇಡ…. ಎನ್ನುವಳು ಸುಮತಿ. ಅವಳ ತಂಗಿ….ಹೌದು ಅಕ್ಕ… ಅಮ್ಮ ಈ ನಡುವೆ ಮೊದಲಿನಂತೆ ಲವಲವಿಕೆಯಿಂದ ಇಲ್ಲ….ಯಾಕೋ ತುಂಬಾ ಆಯಾಸವಾದಂತೆ ಕಾಣಿಸುತ್ತಾರೆ…. ಶಾಲೆಗೆ ಹೋಗುವಾಗಲೂ ಅಷ್ಟೇ, ಇಲ್ಲಿಂದ ಅಷ್ಟು ದೂರ ಹೋಗಬೇಕು…. ನಾವು ಅಲ್ಲೇ ಇದ್ದಿದ್ದರೆ ಚೆನ್ನಾಗಿತ್ತು…. ಅಮ್ಮ ಅಷ್ಟೊಂದು ದೂರ ನಡೆದುಕೊಂಡು ಹೋಗಿ ಬರುವುದು ಕಷ್ಟವಾಗುತ್ತಿದೆ… ಅಲ್ಲಿ ಗುಡ್ಡ ಹತ್ತಿ ಬರುವಾಗ ಉಸಿರಾಡಲು ತುಂಬಾ ಕಷ್ಟಪಡುತ್ತಾರೆ…. ಸ್ವಲ್ಪ ಹೊತ್ತು ಅಲ್ಲಿ ದೇವಸ್ಥಾನದ ಆ ಮಾವಿನ ಮರದ ನೆರಳಲ್ಲಿ ಕುಳಿತು ದಣಿವಾರಿಸಿಕೊಂಡು ನಂತರ ನಿಧಾನವಾಗಿ ಹೆಜ್ಜೆ ಹಾಕುತ್ತಾರೆ”…. ಎಂದು ತಂಗಿ ಹೇಳಿದ್ದನ್ನು ಕೇಳಿ ಅವಳ ಮುಖ ಬಾಡಿತು…. ಇನ್ನೂ ಸ್ವಲ್ಪ ದಿನ ಅಷ್ಟೇ… ನನ್ನ ಓದು ಮುಗಿಯಲಿ ಯಾವುದಾದರೂ ಒಳ್ಳೆಯ ಕೆಲಸಕ್ಕೆ ಸಿಗುತ್ತದೆ…. ಅಮ್ಮನನ್ನು ಕೆಲಸಕ್ಕೆ ಕಳುಹಿಸುವುದು ಬೇಡ….ನಿಮ್ಮೆಲ್ಲರನ್ನು ನಾನು ನೋಡಿಕೊಳ್ಳುತ್ತೇನೆ….. ಎಷ್ಟೊಂದು ವರ್ಷಗಳಿಂದ ಅಮ್ಮ ಕಷ್ಟ ಪಟ್ಟು ದುಡಿದು ನಮ್ಮನ್ನು ಸಾಕುತ್ತಿದ್ದಾರೆ.  ಈಗ ನೀನು ಅಮ್ಮನ ಜೊತೆ ಇರುವುದು ನನಗೆ ದೊಡ್ಡ ಸಮಾಧಾನ…. ಅಮ್ಮನ ಸಹಾಯಕ್ಕೆ ಜೊತೆಗೆ ನೀನಿರುತ್ತೀಯ ಎನ್ನುವ ಧೈರ್ಯ….. ಇನ್ನೂ ಒಂದೆರಡು ವರ್ಷಗಳಷ್ಟೇ…. ನನ್ನ ಡಿಗ್ರಿ ಮುಗಿಯಲಿ….. ಸರ್ಕಾರಿ ಕೆಲಸ ಸಿಗಲಿ ಎಂದು ನಾನು ಕಾಯುವುದಿಲ್ಲ…. ಯಾವುದಾದರೂ ಸಣ್ಣ ಸಂಸ್ಥೆಯಲ್ಲಿ ಕಡಿಮೆ ಸಂಬಳ ಸಿಕ್ಕರೂ ಸೇರಿಕೊಳ್ಳುತ್ತೇನೆ…. ನಂತರ ನೀನು ಕಾಲೇಜಿಗೆ ಹೋಗುವೆಯಂತೆ…. ಕೆಲವು ವರ್ಷಗಳಲ್ಲಿ ನೀನೂ ದುಡಿಯಲು ಪ್ರಾರಂಭಿಸುತ್ತೀಯಾ…. ಆಗ ಅಮ್ಮನಿಗೆ ಸಂಪೂರ್ಣ ವಿಶ್ರಾಂತಿ ಸಿಕ್ಕಂತಾಗುತ್ತದೆ….. ಇವಳೂ ಕೂಡ ನವೋದಯ ಶಾಲೆಯಲ್ಲಿ ಪಿಯುಸಿ ಯವರೆಗೂ ವಿದ್ಯಾಭ್ಯಾಸ ಮುಗಿಸಿ ಬಂದರೆ, ನಂತರ ಇವಳ ಮುಂದಿನ ವಿದ್ಯಾಭ್ಯಾಸಕ್ಕೆ ನಾವಿಬ್ಬರೂ ಇರುತ್ತೇವೆ…. ಎಂದು ಮಗಳು ಹೇಳಿದಾಗ, ಸುಮತಿ ಮೂವರು ಮಕ್ಕಳನ್ನು ಅಪ್ಪಿಕೊಂಡು,….”ನೀವಿರುವಾಗ ನನಗೇನು ಚಿಂತೆ ಮಕ್ಕಳೇ….. ನನ್ನ ಕೈಲಿ ಆಗುವರೆಗೂ ನಾನು ದುಡಿಯುತ್ತೇನೆ…. ನಿಮ್ಮ ಈ ಮಾತುಗಳನ್ನು ಕೇಳಿ ನನ್ನ ಹೃದಯ ಹಗುರವಾಯಿತು…. ಇಷ್ಟು ವರ್ಷ ಕಷ್ಟಪಟ್ಟಿದ್ದು ಸಾಕಾಗಿದೆ…. ನಿಮ್ಮ ಕಾಲದಲ್ಲಾದರೂ ಒಂದಿಷ್ಟು ನೆಮ್ಮದಿಯಿಂದ ಕಳೆಯುವಂತಾದರೆ ಸಾಕು…. ಬನ್ನಿ ಎಲ್ಲರೂ ಊಟ ಮಾಡೋಣ…. ನಿಮಗೆಲ್ಲರಿಗೂ ಇಷ್ಟವಾದ ಅಡುಗೆಯನ್ನು ಮಾಡಿದ್ದೇನೆ”…. ಎಂದು ಹೇಳಿ ಸುಮತಿ ಅಡುಗೆ ಮನೆಯ ಕಡೆ ನಡೆದಳು. ಮೂವರು ಹೆಣ್ಣುಮಕ್ಕಳೂ ಅಮ್ಮನನ್ನು ಹಿಂಬಾಲಿಸಿದರು. 

Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಸಾವಿಲ್ಲದ ಶರಣರು ಮಾಲಿಕೆ “ರಾಜಯೋಗಿ ಶ್ರೀಬೀಳೂರುಗುರುಬಸವ ಸ್ವಾಮಿಗಳು”ಡಾ.ಶಶಿಕಾಂತ್ ಪಟ್ಟಣರಾಮದುರ್ಗ ಪುಣೆ

ಶರಣರ ಸಂಗಾತಿ “ಡಾ.ಶಶಿಕಾಂತ್ ಪಟ್ಟಣರಾಮದುರ್ಗ ಸಾವಿಲ್ಲದ ಶರಣರು ಮಾಲಿಕೆ “ರಾಜಯೋಗಿ ಶ್ರೀಬೀಳೂರುಗುರುಬಸವ ಸ್ವಾಮಿಗಳು ಬಸವೋತ್ತರ ಕಾಲದ  ಹತ್ತೊಂಬತ್ತನೆಯ ಶತಮಾನದ ಮಹಾತಪಸ್ವಿ ಶ್ರೀ ಅಥಣಿಯ ಮುರುಗೇಂದ್ರ ಸ್ವಾಮಿಗಳ ಪಡಿನೆರಳು ಅವರ ಕೃಪಾಕಟಾಕ್ಷದಲ್ಲಿ ಲಿಂಗ ಹಸ್ತದ  ಆಶೀರ್ವಾದದಿಂದ ಜಗವ ಬೆಳಗುವ ಧೈತ್ಯ ಚೇತನ ರಾಜಯೋಗಿ ಬೀಳೂರು ಗುರುಬಸವ ಸ್ವಾಮಿಗಳು.         ಕಲಬುರ್ಗಿ ಸಮೀಪದ  ಹತ್ತಿರವಿರುವ  ಹಂಗರಗಿ ಎಂಬ ಊರು ಇದೆ ಆ ಊರಿನ ಶ್ರೇಷ್ಠ ಸದ್ಗುಣ ಮಣಿಯಾದ ರಾಮನಗೌಡ ಮತ್ತು ಚೆನ್ನಮ್ಮ ಎಂಬ ಲಿಂಗಾಯತ ಬಣಜಿಗ ದಂಪತಿಗಳ   ಉದರದಿಂದ ಜನಿಸಿ  ಬಂದ ಶಿಶುವೇ ಶ್ರೀ ಗುರುಬಸವ ಶಿವಯೋಗಿಗಳು.1843ರಲ್ಲಿ ರಾಮನಗೌಡ ಮತ್ತು ಚೆನ್ನಮ್ಮನ ಉದರದಿಂದ ಜನಿಸಿದ ಮಗುವಿನ ಮೊದಲ ಹೆಸರು. ಈ   “ಜೀವಪ್ಪ” ಎಂಬ ಮಗು ಬಡ ಕುಟುಂಬದಲ್ಲಿ ನಾಲ್ಕನೆಯವ.   ಈ ಮಗು ಅತ್ಯಂತ ಚಿರದ್ರೂಪಿ, ಸುಗುಣ ಚಾಣಾಕ್ಷ ದಷ್ಟ ಪುಷ್ಟ ಚುರುಕಾಗಿದ್ದನು. ನೋಡುವವರ ಕಣ್ಮನಗಳನ್ನು ಸೆಳೆಯುವ ಆಕರ್ಷಕ ಬಾಲಕ ಜೀವಪ್ಪನದು. ಬಾಲ್ಯ ಮತ್ತು ಬಡತನ ——————-   ಬಾಲಕ ಜೀವಪ್ಪನು ಉಂಡು ತಿಂದು ಅಡ್ಡಾಡುವ ವಯಸ್ಸಿನಲ್ಲಿ (4-5 ವರ್ಷ) ಹಂಗರಗಿ ಗ್ರಾಮದಲ್ಲಿ ಭೀಕರ ಬರಗಾಲ ಕಾಲಿಟ್ಟಿತು. ಆ ಭಾಗದಲ್ಲಿಯ ಜೀವಿಗಳಿಗೆ ಊಟಕ್ಕೆ ಆಹಾರ ಇಲ್ಲದಾಯಿತು ಕುಡಿಯಲು ನೀರಿಲ್ಲದಾಯಿತು. ಅನ್ನ ನೀರಿಲ್ಲದೆ ಜೀವ ಬಿಡುವ ಪ್ರಸಂಗ ಬಂದೊದಗಿತು. ಆ ಬರಗಾಲ ಅತ್ಯಂತ ಭೀಕರವಾಗಿತ್ತು ಜನತೆಗೆ ಅನ್ನ, ನೀರು ಆಹಾರ ದೊರೆಯದೆ  ಕೆಲವರು ಪ್ರಾಣ ಕಳೆದುಕೊಂಡರು,ಹಲವರು ಊರು ಬಿಟ್ಟು ಹೋದರು. ಊರು ಬಿಟ್ಟು ಹೊರಟವರಲ್ಲಿ ರಾಮನಗೌಡರು ಒಬ್ಬರು, ಮಡದಿ ಮಕ್ಕಳನ್ನು ಕರೆದುಕೊಂಡು ಊರೂರ ಅಲೆಯುತ್ತಾ ಅಫ್ಜಲಪುರಕ್ಕೆ  ಬಂದು ನೆಲಿಸಿದರು. ಅಲ್ಲಿ ಕೆಲವು ದಿನ ಕಾಲ ಕಳೆದು, ಮತ್ತೆ ಕೆಲಸ ಹುಡುಕುತ್ತ  ಹೊಟ್ಟೆ ಪಾಡಿಗಾಗಿ ಮತ್ತೆ ಊರು ಅಲೆಯುತ್ತಾ ಸಿಂದಗಿ ಊರಿಗೆ ಬಂದು ತಲುಪುತ್ತಾರೆ. ಸಿಂದಗಿಯ ವಿರಕ್ತಮಠದ ಅಧಿಪತಿಗಳಾದ  ಶ್ರೀ ಷಣ್ಮುಖ ಸ್ವಾಮಿಗಳು ನೀವು ಯಾರು ಏತಕ್ಕಾಗಿ ಬಂದಿರಿ ಎಲ್ಲ ಸಮಾಚಾರವನ್ನು  ವಿಚಾರಿಸಿ ತನ್ನಲ್ಲೇ ಕೆಲವು ದಿನ ಉಳಿಯಲು ಹೇಳಿದರು. ಶ್ರೀಗಳ ಆಶ್ರಯ ಪಡೆದ ರಾಮನಗೌಡರು ನಾಲ್ಕಾರು ದಿನ ಇದ್ದು ಜೀವನದ ಮುಂದಿನ ದಾರಿಯನ್ನು ಚಿಂತಿಸುತ್ತಾ ಚೆನ್ನಮ್ಮನಿಗೆ ಹೇಳುತ್ತಾರೆ ಈ ಚಿಕ್ಕ ಮಗ ಜೀವನ ಈ ಅಲೆದಾಟ ಮತ್ತು ಕಷ್ಟದ ಜೀವನವನ್ನು ಹೇಗೆ ಸಹಿಸಿಯಾನು ಆದ್ದರಿಂದ ಅವನನ್ನು ಈ ಮಠದಲ್ಲಿಯೇ ಬಿಟ್ಟು ನಾವು ಮುಂದೆ ಹೋಗೋಣ ಎಂದು ಹೇಳುತ್ತಾರೆ ಆಗ ಒಪ್ಪದ ತಾಯಿ ಕರುಳಿನ ಕುಡಿಯನ್ನು ಬಿಟ್ಟು ಹೋದ ಮಹಾ ಪಾಪಿ ನಾನಾಗುವುದೇ ಎಂದು ಬಿಕ್ಕಿ ಬಿಕ್ಕಿ ಅತ್ತಳು.ಕೊನೆಗೆ ತನ್ನ  ನನ್ನ ಮಗ ಎಲ್ಲಿಯಾದರೂ ಇರಲಿ  ಸುಖವಾಗಿರಲಿ ಎಂದು ಗಂಡನ ನಿರ್ಧಾರವನ್ನು ಒಪ್ಪಿ  ಮಲಗಿದ ಕಿರಿ ಮಗನನ್ನು ಮಠದಲ್ಲಿ ಬಿಟ್ಟು ಮಕ್ಕಳೊಂದಿಗೆ ಮುಂದೆ  ಹೊರಟು ಹೋದರು.            ಇತ್ತ ಮರುದಿನ ಜೀವಪ್ಪ ತನ್ನ ಕುಟುಂಬದವರು  ತಂದೆ ತಾಯಿ ಕಾಣದಾಗಲು ಹೆದರಿ   ಮಠದಲ್ಲಿ ಹುಡುಕುತ್ತಾ ಅಳತೊಡಗಿದನು. ಅಂದಿನ ಮಠದೊಡೆಯರಾದ ಅಧಿಪತಿಗಳು ಶ್ರೀ  ಷಣ್ಮುಖ ಸ್ವಾಮಿಗಳು ಸಂತೈಷಿ ಸಮಾಧಾನಪಡಿಸಿ ಕೆಲಸಕ್ಕೆ ಬೇರೆ ಕಡೆಗೆ ಹೋಗಿದ್ದಾರೆ ಎಂಟು ದಿನಗಳಲ್ಲಿ ಬಂದು ನಿನ್ನನ್ನು ಕರೆದುಕೊಂಡು ಹೋಗುತ್ತಾರೆ ಎಂದು ಸಮಾಧಾನ ಪಡಿಸಿ   ತಮ್ಮ ಶ್ರೀ ಮಠದಲ್ಲಿ  ಇರಿಸಿಕೊಂಡರು.   ಕೆಲವು  ದಿನ ಕಳೆದ ನಂತರ ಮಗು ಜೀವಪ್ಪ ಗುರುವಿನ ಸೇವೆಯಲ್ಲಿ  ತಂದೆ ತಾಯಿಗಳನ್ನು ಮರೆತು  ಅಕ್ಷರ ಜ್ಞಾನ ಕಲಿಕೆ ಓದುವಿನಲ್ಲಿ ಕಾಲ ಕಳೆಯುತೊಡಗಿದನು. ಸುಂದರವಾದ  ಜೀವಪ್ಪನನ್ನು  ಚಿಕ್ಕವನಾಗಿದ್ದ ಕಾರಣ ಅವನ ಪಾಲನೆ ಪೋಷಣೆಗೆಂದು  ಗುರುಗಳು ಊರಿನ ಸೆಟ್ಟರ (ಪಟ್ಟಣಶೆಟ್ಟಿ )ಅವರ ಮನೆತನದವರಿಗೆ ಜೀವಪ್ಪನ ಜವಾಬ್ದಾರಿ  ಹೊರೆಯನ್ನು ವಹಿಸುತ್ತಾರೆ. ಮುಂದೆ ಜೀವಪ್ಪ  ಪಟ್ಟಣಶೆಟ್ಟಿಯವರ ಮನೆಯಲ್ಲಿ ಸುಖದಿಂದ ಬೆಳೆಯುತ್ತಾನೆ. ಮಠಗಳ ಉಸ್ತುವಾರಿ —————- ಜೀವಪ್ಪಾ ದೊಡ್ಡವನಾದನೆಂದು, ಮತ್ತು ಶ್ರೀ ಷಣ್ಮುಖಸ್ವಾಮಿಗಳಿಗೆ  ವಯಸ್ಸಾಯಿತು ಎಂದು  ತಮ್ಮ ಜೊತೆಗೆ ಜೀವಪ್ಪನನ್ನು ಮಠಗಳ ವ್ಯವಹಾರವನ್ನು ಕೊಡಲು ನಿರ್ಧರಿಸಿದರು.  ಜೀವಪ್ಪನನ್ನು ಮುಂದೆ ಇತ್ತು ಕೊಂಡು  ಪ್ರಶಸ್ತವಾದ ಹೊಸ ಕಲ್ಮಠದ    ಕಟ್ಟಡ ಕೆಲಸ ಸಂಪೂರ್ಣ ಮುಗಿಸುತ್ತಾರೆ. ಕಲ್ಮಠವು   ಪೂರ್ಣವಾದ ಮೇಲೆ ಹಲವಾರು ಮಠದ ಕೆಲಸಗಳಿಗೆ ಜೀವಪ್ಪನನ್ನು ಸ್ವಾಮಿಗಳು ಉಸ್ತುವಾರಿಗೆಂದು ನೇಮಿಸುತ್ತಾರೆ. ಗುರುಗಳು ಹೇಳಿದ ಎಲ್ಲಾ ಕೆಲಸಗಳನ್ನು ಅತ್ಯಂತ ನಿಷ್ಠೆಯಿಂದ ಶ್ರದ್ಧೆಯಿಂದ ಜೀವಪ್ಪ ಮಾಡುತ್ತಿದ್ದರು. ಇದನ್ನೆಲ್ಲಾ ನೋಡಿದ ಸಿಂಧಗಿ  ಊರಿನ ಭಕ್ತರು  ನೀಬ್ಬೆರಗಾಗಿ ಜೀವಪ್ಪನ ಕಾಯಕವನ್ನು ಶ್ಲಾಘಿಸುತ್ತಿದ್ದರು. ಗುರುಬಸವ ನಾಮಕರಣ ——————————-         ಜೀವಪ್ಪನ ಗುಣ ಸ್ವಭಾವವನ್ನು ಕಂಡು ಸಂತಸಗೊಂಡ ಪೂಜ್ಯರು ಅವನಲ್ಲಿ ಅತ್ಯಂತ ಪ್ರೀತಿಯ ಅದರ ಭಾವದಿಂದ  ಕಾಣಲಾರಂಭಿಸಿದರು. ಈಗ ಜೀವಪ್ಪನಿಗೆ 12 ವರ್ಷ .  12 ವರ್ಷದ ಬಾಲಕನನ್ನು ಗೆಳೆಯ ರಾಚಯ್ಯನ ಜೊತೆಗೆ ಷಣ್ಮುಖ ಸ್ವಾಮಿಗಳು ಸಂಖದ  ಗುರುಗಳ ಕಡೆಗೆ ಕಳುಹಿಸಿಕೊಡುತ್ತಾರೆ ಗೆಳೆಯ ರಾಚಯ್ಯನೊಂದಿಗೆ ಬಂದ ಜೀವಪ್ಪನವರು ಇಂದಿನ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಸಂಖ ಗ್ರಾಮದಲ್ಲಿರುವ ವಿರಕ್ತಮಠದಲ್ಲಿ ಗುರುಗಳ ಅಣತಿಯಂತೆ ಗುರು ದಿಕ್ಷೆಯನ್ನು ಪಡೆದು ಗುರು ಸೇವೆಯಲ್ಲಿ ತೊಡಗಿದರು. ಇವರ ಸೇವಾ ಮನೋಭಾವವನ್ನು, ಕಾಯಕ ನಿಷ್ಠೆ ಗುರುಭಕ್ತಿಯನ್ನು ಕಂಡು ಸಂಕದ ಗುರುಗಳು “ಗುರುಬಸವ” ಎಂದು ಹೊಸ ನಾಮಕರಣ ಮಾಡಿದರು. ಮತ್ತು ಮಠದ ಅಧಿಕಾರವನ್ನು ತೆಗೆದುಕೋ ಎಂದು ಗುರುಬಸವರಿಗೆ ಹೇಳಿದರು. ಆಗ ಸ್ವತಃ ಗುರುಬಸವರೇ ಮಠದ ಅಧಿಕಾರವನ್ನು ರಾಚಯ್ಯನಿಗೆ ಕೊಡಿರಿ ಎಂದು ನಸುನಗುತ್ತಾ ಹೇಳಿದರು. ಎಳೆ ಹರಿಯದ ಆ ಗುರುಬಸವ ದೇವರು ತನ್ನ ಗೆಳೆಯನಿಗಾಗಿ ಮಾಡಿದ ಉದಾರತೆಯ  ನಿಷ್ಕಾಮ ಭಾವ,ವಿರಕ್ತತೆ , ತ್ಯಾಗದ ವಿಷಯವನ್ನು ಅರಿತ ಸಂಖದ ಊರಿನ ಸಮಸ್ತರು ಆಶ್ಚರ್ಯದಿಂದ  ಬೆರಗಾದರು. ಗೆಳೆಯ ರಾಚಯ್ಯನಿಗೆ ಮಠದ ಅಧಿಕಾರವನ್ನು ಒಪ್ಪಿಸಿ ಗುರುಗಳ ಆಜ್ಞೆಯಂತೆ ಮುಚ್ಚಂಡಿ ಮತ್ತು ಬೀಳೂರಿಗೆ ಹೋಗುತ್ತಾರೆ. ಮೊದಲು ಮುಚ್ಚಂಡಿಯಲ್ಲಿ ಕೆಲವು ದಿನ ಇದ್ದು, ಮುಂದೆ ಬೀಳೂರಿಗೆ ಹೋಗುತ್ತಾರೆ. ಬೀಳೂರಿನಲ್ಲಿ ವಿರಕ್ತಮಠ ಹಾಳು ಬಿದ್ದಿರುತ್ತದೆ ಅದಕ್ಕೆಂದೆ ಬೀಳೂರು( ಬಿದ್ದ ಊರು – ಹಾಲು ಬಿದ್ದ ಮಠವೊಂದಿತ್ತು ) ಎಂದು ಹೇಸರು ಬಂದಿರಬಹುದು, ಹಾಳು ಬಿದ್ದ ವಿರಕ್ತ ಮಠವನ್ನು   ಅತ್ಯಂತ ಸುಪ್ರಸಿದ್ಧ ಮಾಡುವಲ್ಲಿ ಶ್ರೀ ಗುರುಬಸವ ಸ್ವಾಮಿಗಳು  ಹಗಲಿರುಳು ಅತ್ಯಂತ ಪರಿಶ್ರಮ, ಕಷ್ಟಪಟ್ಟು ಕಂತಿ  ಭಿಕ್ಷೆ ಬೇಡಿ, ಹೊಲ ಮೇಯುವ ಕೆಲಸ ಮಾಡಿ, ಅಲ್ಲಿಯ ಹಲವಾರು ಶರಣರ, ಶರಣೆಯರ ಸಹಕಾರ ಸಹಾಯದಿಂದ ಒಂದು ಹೆಸರಾಂತ ವಿರಕ್ತಮಠವನ್ನಾಗಿ ಮಾರ್ಪಡಿಸುತ್ತಾರೆ ಶ್ರೀ ಗುರುಬಸವ ಸ್ವಾಮಿಗಳು. ಅಥಣಿಯ ಶ್ರೀ ಮುರುಗೇಂದ್ರ  ಶಿವಯೋಗಿಗಳ ಸಂಪರ್ಕದಲ್ಲಿ —————————————————————————-    ಅಥಣಿಯ ಶ್ರೀ ಮುರುಗೇಂದ್ರ  ಶಿವಯೋಗಿಗಳ ಸಮಕಾಲೀನರಾದ ಶ್ರೀ ಗುರುಬಸವ ಸ್ವಾಮಿಗಳು ಸಮಾಜದ ಏಳಿಗೆಗಾಗಿ ಸಮಾಜದ ಉದ್ಧಾರಕ್ಕಾಗಿ ತಮ್ಮನ್ನು ತಾವು ಸಮಾಜಕ್ಕೆ ಅರ್ಪಿಸಿಕೊಂಡು ಹಲವಾರು ಸಮಾಜಮುಖಿ ಸೇವಾ ಕಾರ್ಯಗಳನ್ನು ಮಾಡುವಲ್ಲಿ ಸೈ ಎನಿಸಿಕೊಂಡ ಶ್ರೀ ಗುರುಬಸವ ಶಿವಯೋಗಿಗಳು ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆಗೈಯುವದರ ಮೂಲಕ  ಕಾರ್ಯ ಮಾಡುವುದನ್ನು ಕಂಡು ಅವರನ್ನು ಗಚ್ಚಿನ ಮಠಕ್ಕೆ ಬರ ಹೇಳುತ್ತಾರೆ. ಅಂದು ಅಥಣಿಯ ಗಚ್ಚಿನ ಮಠವೆಂದರೆ ಶ್ರೀ ಮುರುಗೇಂದ್ರ ಶಿವಯೋಗಿಗಳ ಸಮ್ಮುಖದಲ್ಲಿ ನಿತ್ಯ ಶಿವಯೋಗ ಅನುಭಾವ ಚಿಂತನಾ ಗೋಷ್ಠಿಗಳು ಜರುಗುತ್ತಿದ್ದವು.  ಬಿದರಿ ಶಿವಕುಮಾರಸ್ವಾಮಿಗಳು, ಹುಲ್ಯಾಳ ಶ್ರೀಗಳು, ಧಾರವಾಡದ ಮೃತ್ಯುಂಜಯ ಸ್ವಾಮಿಗಳು, ಅವರ ತಂಡದಲ್ಲಿ ದೊಡ್ಡ ಧಡೂತಿ ಮೈಕಟ್ಟನ್ನು ಹೊಂದಿದ ಶ್ರೀ ಗುರು ಬಸವ ಸ್ವಾಮಿಗಳು ಸೇರಿಕೊಳ್ಳುತ್ತಾರೆ.      ಶ್ರೀ ಗುರುಬಸವರ ದೈವಿಕ ಶಕ್ತಿಗೆ ಮಾರುಹೋದ ಭಕ್ತರು ಬೀಳೂರಿನ ಮೂರ ಅಂಕಣದ ಕೋಣೆಯ ಮುಂದೆ ಒಂದು ಮಠವನ್ನು ಕಟ್ಟಿಸುತ್ತಾರೆ. ಇವರ ಪ್ರಭಾವ ಕರ್ನಾಟಕ ಮಹಾರಾಷ್ಟ್ರಗಳಲ್ಲಿ ಬೆಳೆದಂತೆ ಇವರಿಗಾಗಿ ಕಟ್ಟಿಸಿದ ಮಠ ಸಣ್ಣದಾಗುತ್ತದೆ. ಅಥಣಿಯ ಮುರುಗೇಂದ್ರ ಶ್ರೀಗಳ ಮಾರ್ಗದರ್ಶನದ ಮೇರೆಗೆ ಭವ್ಯವಾದ ಮಠವನ್ನು ಕಟ್ಟಿಸುತ್ತಾರೆ. ಜತ್ತ ಮತ್ತು ಉಮರಾಣಿಯ ಸಂಸ್ಥಾನಿಕರು ಹತ್ತಾರು ಎಕರೆ ಭೂಮಿಗಳನ್ನು ಬೀಳೂರು ಮಠಕ್ಕೆ ದತ್ತಿಯಾಗಿ ಕೊಟ್ಟು ಪುನೀತರಾಗುತ್ತಾರೆ . ಅಸೂಹೆಯ  ಕಿಚ್ಚು ಆರಿತು —————————————    ಬೀಳೂರು ಶ್ರೀ ಗುರುಬಸವವರ ಸ್ವಾಮಿಗಳ  ಸಾಧನೆಯನ್ನು ಕಂಡು ದ್ವೇಷ ಮತ್ಸರದ ವ್ಯಕ್ತಿ  ಗಣಪತಿಯೆಂಬುವನು ಶ್ರೀ ಗುರುಬಸವರು ಒಬ್ಬರೇ  ಮಠದಲ್ಲಿದ್ದಾಗ  ಗುರುಬಸವವರ ಚಾರಿತ್ರ್ಯಕ್ಕೆ ಕುಂದುಂಟು ಮಾಡಲು ಚೆನ್ನವ್ವ ಎಂಬ ವೇಶ್ಯೆಗೆ  ಹಣ  ಕೊಟ್ಟು ಗುರುಬಸವರಿರುವ ಕೋಣೆಗೆ ಕಳುಹಿಸಿದ.  ಆ ವೇಶ್ಯೆಯ   ಕೈಗಳ ಬಳೆಯ ಸಪ್ಪಳವನ್ನು ಆಲಿಸಿದ  ಶ್ರೀ  ಗುರುಬಸವವರು ಯಾರು ತಾಯಿ ಅಲ್ಲಿಯೇ ನಿಲ್ಲು ನಾನೇ ಹೊರಗೆ ಬರುತ್ತೇನೆ ಅವ್ವ ಎಂದರಂತೆ . ವೇಶ್ಯೆಯನ್ನು  ತಾಯಿಯಾಗಿ ಸಂಭೋಧಿಸಿದಾಗ ತಾನು ತಪ್ಪು ದಾರಿ ತುಳಿಯುತ್ತಿದ್ದೇನೆ ಎಂದು ಚೆನ್ನವ್ವ ನಿಧಾನವಾಗಿ ಹೆದರಿ ದೈವದ ತೇಜೋವಧೆಗೆ  ಹೊರಟಿರುವುದು ತಪ್ಪು ಎಂದು ತಿಳಿದು ಪರಿತಪಿಸಿ  ಹಿಂದೆ ಸರಿದಳು. ಮುಂದೆ ವೇಶ್ಯೆಯ  ಕಣ್ಣು ಹೋಗಿ ಭಿಕ್ಷೆ ಬೇಡಿ ಬದುಕುವ ಕೆಟ್ಟ ಪರಿಸ್ಥಿತಿ ನಿರ್ಮಾಣವಾಯಿತು. ವೇಶ್ಯೆಯನ್ನು ಕಳಿಸಿದ ಆಗರ್ಭ ಶ್ರೀಮಂತ ಗಣಪತಿಯೆಂಬುವನ ವಂಶವು ನಿರ್ನಾಮವಾಯಿತು. ಗಣಪತಿಯ ಮಕ್ಕಳು ಅವನ ಕಣ್ಣ ಮುಂದೆ ತೀರಿಹೋದರು. ಬ್ರಹ್ಮ ರಾಕ್ಷಸ ಬಡೆದುಕೊಂಡ ಬಾಲಕನಿಂದ ಪಾಠ ಕಲಿತ ಶ್ರೀ ಗುರುಬಸವರು ———————————————————————————————-  ಒಂದೊಮ್ಮೆ ಅಥಣಿಯ ಶ್ರೀ ಮುರುಗೇಂದ್ರ ಶಿವಯೋಗಿಗಳು ತಮ್ಮ ಜೊತೆಗೆ ಬಿದರಿ ಶಿವ ಕುಮಾರಶಿವಯೋಗಿಗಳು  ಮತ್ತು ರಾಜಯೋಗಿ ಬೀಳೂರು  ಶ್ರೀ ಗುರುಬಸವ ಸ್ವಾಮಿಗಳನ್ನು ಕರೆದುಕೊಂಡು ಅಥಣಿಯ ಪಕ್ಕದ ಹಳ್ಳಿಗೆ  ಶ್ರಾವಣ ಮಾಸದ ಶಿವಾನುಭವ ಪ್ರವಚನಕ್ಕೆ ಹೋಗಿರುತ್ತಾರೆ. ಪ್ರವಚನ ಮುಗಿಸಿ ಮರಳಿ ಅಥಣಿಗೆ ಬರುವಾಗ ಕೃಷ್ಣಾ ನದಿ ತುಂಬಿ ಹರಿಯುತ್ತಿರುತ್ತದೆ.  ಎತ್ತು ಮತ್ತು ಬಂಡಿಯಲ್ಲಿದ್ದ ಸ್ವಾಮಿಗಳು ಕೊಂಚ ದಿಗ್ಭ್ರಾಂತರಾಗುತ್ತಾರೆ .   ನದಿ ಹೇಗೆ ದಾಟುವುದು. ಕೆಲ ಹೊತ್ತ ದಡದಲ್ಲಿಯೇ ಕುಳಿತು ಕೊಳ್ಳುತ್ತಾರೆ.  ಏನೋ ಅಥಣಿಯ ಶ್ರೀ ಮುರುಗೇಂದ್ರ ಶ್ರೀಗಳು ಚಕ್ಕಡಿಯನ್ನು ಅಲ್ಲಿಯೇ ದಡದಲ್ಲಿ ಬಿಟ್ಟು ನದಿಯನ್ನು ದಾಟೋಣ ಎನ್ನುತ್ತಾರೆ. ಆಗ ಬಿದರಿ ಶ್ರೀಶಿವಕುಮಾರ ಸ್ವಾಮಿಗಳು ಮತ್ತು ಇತರ ಶಿಷ್ಯರು ಅಥಣಿಯ ಶ್ರೀ ಮುರುಗರೇಂದ್ರ ಸ್ವಾಮಿಗಳ ಮಾತಿಗೆ ಸಮ್ಮತಿಸಿ ಅವರ ಹಿಂದೆ ಹೋಗಲು ನಿರ್ಧರಿಸುತ್ತಾರೆ. ಆದರೆ ಮೈತುಂಬ ರೇಷ್ಮೆ ಬಟ್ಟೆ ಪೇಠಾ ಬಂಗಾರ ಹೊಂದಿದ ರಾಜಯೋಗಿ   ಶ್ರೀ ಗುರುಬಸವ ಸ್ವಾಮಿಗಳು ಅಥಣಿಯ ಶ್ರೀ ಮುರುಗೇಂದ್ರ ಶಿವಯೋಗಿಗಳ ಜೊತೆಗೆ ಹೋಗುವದಿಲ್ಲ, ಚಕ್ಕಡಿಯ ಮಾಲಕನೊಂದಿಗೆ ದಡದಲ್ಲಿಯೇ ಕುಳಿತು ಮಧ್ಯ ರಾತ್ರಿ  ಕೃಷ್ಣ ನದಿಯು ಇಳಿದ ಮೇಲೆ ಅಥಣಿಗೆ ಬಂದು ತಲುಪುತ್ತಾರೆ. ಬೆಳಿಗ್ಗೆ ಎಂದಿನಂತೆ ಎದ್ದು ಶ್ರೀಗಳ ಜೊತೆಗೆ ಕುಶಲೋಪರಿ ಮಾತನಾಡಿ ಬಹಿರ್ದೆಸೆಗೆ  ಹೊರಟು ನಿಲ್ಲುತ್ತಾರೆ. ಆಗ ಅಥಣಿಯ ಶ್ರೀ ಮುರುಗೇಂದ್ರ ಶ್ರೀಗಳು ಅಪ್ಪವರೆ ನಿನ್ನೆ ನಿಮಗೆ ಅಸ್ತವ್ಯಸ್ತವಾಗಿದೆ ಬೇಗ ಹೋಗಿ ಬನ್ನಿ,ಸ್ನಾನ ಪೂಜೆ ಮುಗಿಸಿ ಪ್ರಸಾದವನ್ನು ಮಾಡೋಣ ಎನ್ನುತ್ತಾರೆ.   ಆಗಲಿ ಎಂದು ಒಬ್ಬ ಸೇವಕನೊಂದಿಗೆ ಊರ ಹೊರಗೆ ಹೊರಟು ನಿಲ್ಲುತ್ತಾರೆ. ದಾರಿಯಲ್ಲಿ ಹೋಗುವಾಗ ಬೆಳಿಗ್ಗೆ ಆರರ ಮುಂಜಾವು ಶ್ರಾವಣದ ತುಂತುರ ಮಳೆ ಹನಿಯ ತಂಪು, ಆಗ ಒಂದು ಬಂಡಿಯಲ್ಲಿ ಹಿಂದೆ ಕುಳಿತಿದ್ದ ಬಾಲಕ ಶ್ರೀ ಬೀಳೂರು ಗುರುಬಸವ ಸ್ವಾಮಿಗಳನ್ನು ನೋಡಿ ಅವಹೇಳನ ಮಾಡುತ್ತಾ ಕಿಸಿಕಿಸಿ ನಗುತ್ತಾನೆ, ಶ್ರೀಗಳು ಹೆಚ್ಚಿನ ಮಹತ್ವವನ್ನು ನೀಡದೆ ಮುಂದೆ ಸಾಗುತ್ತಾರೆ, ಆಗ ಹುಡುಗ ಮತ್ತೆ ಇವರತ್ತ ಕೇಕೆ ಹಾಕಿ ನಗುತ್ತಾನೆ, ಸ್ವಲ್ಪ ಮಟ್ಟಿಗೆ ವಿಚಲಿತರಾದ ಪೂಜ್ಯರು   ಅಲ್ಲಿರುವ ಜನರನ್ನು ವಿಚಾರಿಸುತ್ತಾರೆ, ಸಿಟ್ಟಿನ ಗುರುಬಸವ ಸ್ವಾಮಿಗಳು   ಜನರು ಅಂಜುತ್ತಲೇ ಅಪ್ಪಾರಾ ಹುಡುಗ ಗಾಳಿ ಶಕ ಆಗೈತಿ, ಬ್ರಹ್ಮ ರಾಕ್ಷಸ ಮೈಯೊಳಗ ಹೊಕ್ಕಾನ ಏನು ಮಾಡಿದರೂ

ಸಾವಿಲ್ಲದ ಶರಣರು ಮಾಲಿಕೆ “ರಾಜಯೋಗಿ ಶ್ರೀಬೀಳೂರುಗುರುಬಸವ ಸ್ವಾಮಿಗಳು”ಡಾ.ಶಶಿಕಾಂತ್ ಪಟ್ಟಣರಾಮದುರ್ಗ ಪುಣೆ Read Post »

ಅಂಕಣ ಸಂಗಾತಿ, ಅರ್ಜುನ ಉವಾಚ

ಧಾರಾವಾಹಿ-15 ಅರ್ಜುನ ಉವಾಚ ವಿಶ್ವನಾಥ್‌ ಎನ್‌ ನೇರಳೆಕಟ್ಟೆ ಕುಟುಂಬ ಕಲಹವದು ಕುದುರೆ ಕದನದಿಂದ… ಕುಟುಂಬ ಕಲಹವದು ಕುದುರೆ ಕದನದಿಂದ… ಸೂರ್ಯನಿನ್ನೂ ಉದಯಿಸಿರಲಿಲ್ಲ. ನನ್ನೊಳಗೆ ಕದನ ಸೆಳೆತ ಉದಯಿಸಿಯಾಗಿತ್ತು. ಮಾಹಿಷ್ಮತಿಯ ಸೇನೆಗೆ ಸಾಧ್ಯವಾದಷ್ಟು ಶೀಘ್ರ ಸೋಲುಣಿಸುತ್ತೇನೆ ಎಂಬ ತವಕ ತಲೆಯೇರಿ ಕುಳಿತಿತ್ತು. ನೇಸರನ ನಸುಬೆಳಕು ಮಾಹಿಷ್ಮತಿಯ ಬುವಿನಾರಿಯನ್ನು ಸ್ಪರ್ಶಿಸುವ ಮಧುರ ಗಳಿಗೆಗೂ ಮೊದಲೇ ಕುದುರೆಯನ್ನು ಕಟ್ಟಿಹಾಕಿದ್ದ ಕಟ್ಟಾಳುಗಳನ್ನು ಕದನದಲ್ಲಿ ಕೊನೆಗಾಣಿಸುವ ರುಧಿರ ಗಳಿಗೆ ನನ್ನನ್ನಪ್ಪಿತು.ನಮ್ಮ ಚತುರಂಗ ಬಲ ಮಾಹಿಷ್ಮತಿ ಪಟ್ಟಣಕ್ಕೆ ಮುತ್ತಿಗೆ ಹಾಕಿತು. ಎರಡೂ ಪಡೆಗಳ ಮಧ್ಯೆ ಬಿಡುವಿರದ, ಎಡೆಯಿರದ ಕಾದಾಟ. ಕಂಡ ಕಂಡ ಕಡೆಯಲ್ಲೆಲ್ಲಾ ಬಾಣಗಳ ಆರ್ಭಟ. ಆನೆ ಕುದುರೆ ರಥಗಳ ಎಡೆಬಿಡದ ಓಡಾಟ. ಯಮರಾಜನಿಗದೋ ಸೈನಿಕರ ಸಾವಿನ ರಸದೂಟ.ನಾನಂತೂ ಯಾವುದಕ್ಕೂ ಅಳುಕದವನಾಗಿದ್ದೆ. ಇಂದಂತೂ ಜಯ ನಮ್ಮ ಸೈನ್ಯಕ್ಕೆ ಒದಗಲೇಬೇಕು ಎಂಬ ಹಠ ನನ್ನೊಳಗಿತ್ತು. ನನ್ನ ಈ ಬಗೆಯ ವೀರಾವೇಶ ನೀಲಧ್ವಜನ ಅರಿವಿಗೂ ಬಂದಿತ್ತು. ನನ್ನ ರಭಸವನ್ನು ತಾಳಿಕೊಳ್ಳುವ ತ್ರಾಣವದು ಅವನ ಸೇನೆಗೆ ಅದೆಲ್ಲಿತ್ತು!ಸೈನಿಕರು ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಸಾವನ್ನಪ್ಪುತ್ತಲೇ ಇದ್ದರು. ರಥಗಳು ಮುರಿದವು. ಗಜಶಿರಗಳು ಒಡೆದವು. ಕುದುರೆಗಳು ಧರಾಶಾಯಿಯಾದವು.ಅನಾಥಪ್ರಜ್ಞೆ ನೀಲಧ್ವಜನನ್ನು ಬಂದು ಅಪ್ಪಿದ್ದು ಆ ಗಳಿಗೆಯಲ್ಲಿ, ಸಹೋದರ ಸುತರನ್ನು ಕಳೆದುಕೊಂಡ ಹೀನ ಕ್ಷಣದಲ್ಲಿ. ಕುಗ್ಗಿಹೋದ ನೀಲಧ್ವಜ. ಹಿಂದಣ ಯುದ್ದದಲ್ಲಿ ಕಾಣದ ಹತಾಶೆ ಅವನೊಳಗೆ. ಯುದ್ಧವೇ ಬೇಡ ಎಂಬ ವೈರಾಗ್ಯ ಆತನಲ್ಲಿ ಮೂಡಿದಂತೆನಿಸಿತು ನನಗೆ. ಕೆಲವೊಮ್ಮೆ ಹಾಗೆಯೇ. ಬಂಧುಗಳಿರುವಾಗ, ನಮ್ಮವರೆನಿಸಿಕೊಂಡವರು ನಮ್ಮ ಜೊತೆಗೇ ಇರುವಾಗ ಅವರ ಮೌಲ್ಯ ನಮ್ಮರಿವಿಗೆ ದಕ್ಕುವುದಿಲ್ಲ. ಆದರೆ ಅವರನ್ನು ಕಳೆದುಕೊಂಡಾಗ ಇಡಿಯ ಬದುಕೇ ಪೂರ್ಣಶೂನ್ಯವಾಗಿ ನಮ್ಮನ್ನು ಆವರಿಸಿ ಕಾಡತೊಡಗುತ್ತದೆ. ಅದೇ ಬಗೆಯ ಭಾವತೀವ್ರತೆ ನೀಲಧ್ವಜನಲ್ಲಿ ಮೂಡಿಬಂತು. ಅದು ನನ್ನ ತಿಳಿವಳಿಕೆಗೆ ನಿಲುಕಿತು.ಇದ್ದಕ್ಕಿದ್ದಂತೆಯೇ ರೋಷಾತಪ್ತನಾದ ಮಾಹಿಷ್ಮತಿಯ ಅರಸ. ಮಡಿದ ತನುಜ ಅನುಜರ ಸಾವಿಗೆ ಸೇಡು ತೀರಿಸಿಕೊಳ್ಳುವ ಕೆಚ್ಚು ಅವನಲ್ಲಿ ಮೂಡಿದ್ದಿರಬೇಕು. ಕೆರಳಿನಿಂತ. ಕಿಡಿಕಿಡಿಯಾದ. ವಿಚಿತ್ರವಾದ ಆವೇಶದಲ್ಲಿ ನನ್ನೊಡನೆ ಹೋರಾಟಕ್ಕಿಳಿದ. ನನ್ನಲ್ಲಿ ಈಗಲೂ ಕದನದ ಉಮೇದು ಅಳಿದಿರಲಿಲ್ಲ. ಬಾಣವನ್ನು ನಿರಂತರವಾಗಿ ಪ್ರಯೋಗಿಸಿದೆ. ಅದೊಂದು ಕ್ಷಣದಲ್ಲಿ ನೀಲಧ್ವಜ ಪೂರ್ಣಪ್ರಜ್ಞೆಯಿಂದ ವಿಮುಕ್ತನಾದ. ಮೂರ್ಛೆ ಹೋದ. ರಥದಲ್ಲಿಯೇ ಕುಸಿದು ಕೂತ. ಅವನ ಸಾರಥಿಗೆ ದೊರೆಯ ಸ್ಥಿತಿ ಮನದಟ್ಟಾಯಿತು. ರಥವನ್ನಲ್ಲಿಂದ ಓಡಿಸಿ ಅರಮನೆಯ ಬಳಿಗೆ ಒಯ್ದ.ರಾಜನೇ ಇಲ್ಲವಾದ ಮಾಹಿಷ್ಮತಿ ಸೇನೆಯಲ್ಲಿ ಗೊಂದಲ, ತಳಮಳ. ಒಡೆಯನಿಲ್ಲವಾದ ಸೈನಿಕರು ದೆಸೆದೆಸೆಗೆ ಓಡಿದರು. ಅವರ ಕಳವಳದ ಬೊಬ್ಬೆಯದು ನಮ್ಮ ಗೆಲುವನ್ನು ಸಾರಿಹೇಳುವ ವಿಜಯಘೋಷವಾಯಿತು. ನಾವು ಗೆದ್ದೆವು.ಅರಮನೆಯಲ್ಲಿ ಎಚ್ಚರಗೊಂಡ ನೀಲಧ್ವಜನಿಗೆ ಸೋಲಿನ ವಿಚಾರ ತಿಳಿಯಿತು. ಅವಮಾನವಾಯಿತು. ಮೊದಲೇ ಸಂಧಾನದ ಮೂಲಕ ಗೌರವಯುತವಾಗಿ ಕುದುರೆಯನ್ನು ಬಿಟ್ಟುಕೊಡುವ ನಿರ್ಧಾರ ಮಾಡಿದವನು ತಾನು. ಆದರೆ ಆ ಬಳಿಕ ಕದನಕ್ಕಿಳಿದು ಉಳಿಸಿಕೊಂಡ ಮರ್ಯಾದೆಯನ್ನು ಮಣ್ಣುಪಾಲು ಮಾಡಿಕೊಂಡೆ ಎಂಬ ಅಪಮಾನಸುಳಿ ಅವನನ್ನು ಕೀಳರಿಮೆ ಕೊಳದಲ್ಲಿ ಮುಳುಗಿಸಿತು. ಅದಕ್ಕೆ ಕಾರಣಳಾದ ರಾಣಿ ಜ್ವಾಲೆಯ ಮೇಲೆ ಕೋಪ ಉಕ್ಕಿಬಂತು. “ನಿನ್ನೆಯೇ ಕುದುರೆಯನ್ನು ಪಾರ್ಥನಿಗೆ ಬಿಟ್ಟುಕೊಡುವ ನಿರ್ಣಯ ತಳೆದವನು ನಾನು. ಬಿಡಬೇಡ ಎಂಬ ತಪ್ಪು ಸಲಹೆ ಕೊಟ್ಟು ನನ್ನನ್ನು ಹಾಳುಮಾಡಿದೆಯಲ್ಲಾ! ನಿನ್ನ ಮಾತು ಕೇಳಿ ನನ್ನವರನ್ನು ಕಳೆದುಕೊಂಡೆ. ದುಷ್ಟೆ ನೀನು. ನಿಕೃಷ್ಟೆ ನೀನು. ಅತಿಕಷ್ಟ ಕೊಟ್ಟೆಯೆನಗೆ” ಎಂದು ಅವಳನ್ನು ಪರಿಪರಿಯಾಗಿ ಜರಿದ. “ನನ್ನ ಅರಮನೆಯಲ್ಲಿ ನೀನು ಇರಕೂಡದು” ಎಂದು ಆಜ್ಞಾಪಿಸಿದ.ಹೀಗೆ ಜ್ವಾಲೆಯೊಂದಿಗೆ ಜಗಳವಾಡಿ ಅವಳೊಂದಿಗಿನ ಬಂಧವನ್ನು ಮುರಿದ ನೀಲಧ್ವಜ ಬಂದದ್ದು ನನ್ನ ಬಳಿಗೆ. ನಮ್ಮ ಗೆಲುವನ್ನವನು ಪೂರ್ಣ ಮನಸ್ಸಿನಿಂದ ಒಪ್ಪಿಕೊಂಡ. ಅಖಿಲ ವಸ್ತುಗಳನ್ನು ಸಮರ್ಪಿಸಿದ. ಅಶ್ವಮೇಧ ಯಾಗಕ್ಕಾಗಿ ಸಂಪದವನ್ನಿತ್ತ. ಬಗೆಬಗೆಯ ಧವಸಧಾನ್ಯಗಳನ್ನು ಬಂಡಿಬಂಡಿಗಳಲ್ಲಿ ತುಂಬಿಸಿ ತರಿಸಿ ಎದುರಿಗಿರಿಸಿದ. ಪಾಂಡವ ಸಾರ್ವಭೌಮತ್ವವನ್ನವನು ಸ್ವೀಕರಿಸಿದ. ಒಲವಿನಿಂದ ನನ್ನ ಬಳಿಗೆ ಬಂದು ನಮ್ಮದು ನಿಜ ಗೆಲುವು ಎನ್ನುವುದನ್ನು ಮನ್ನಿಸಿದ.ನನಗಂತೂ ಸಂತಸವಾಗಿತ್ತು. ಅಗ್ನಿಯ ಸಂಧಾನಕ್ಕೆ ಅನುಸಾರವಾಗಿ ಅವನು ಕುದುರೆಯನ್ನು ಬಿಟ್ಟು ಕಳುಹಿಸಿಕೊಟ್ಟಿದ್ದರೆ ಈ ಬಗೆಯ ಸಂಭ್ರಮ ಖಂಡಿತವಾಗಿಯೂ ನನ್ನದಾಗುತ್ತಿರಲಿಲ್ಲ. ಶಕ್ತಿಯನ್ನು ಪ್ರದರ್ಶಿಸಿ, ನೋವು ಬೇಗೆಗಳನ್ನು ದರ್ಶಿಸಿ ಪಡೆದ ಗೆಲುವಾದ್ದರಿಂದ ಇದಕ್ಕೆ ಮಹತ್ವ ಅಧಿಕ ಎನಿಸಿತು.ಆದರದಿಂದ ನೀಲಧ್ವಜನಿಗೆ ನಮಿಸಿದೆ. ಅಲ್ಲಿಂದ ಹೊರಡುತ್ತೇನೆಂದೆ. ಅವನೂ ನಮ್ಮ ಜೊತೆಗೆ ಬರುವುದಕ್ಕೆ ಸಿದ್ಧನಿದ್ದ. ಅವನನ್ನೂ ಜೊತೆಮಾಡಿಕೊಂಡು ನಾವು ಮುಂದೆ ಮುಂದೆ ಹೋದೆವು. ಹಯವದು ಚಲಿಸುತ್ತಿತ್ತು ನಮ್ಮ ಮುಂದೆ. ದಕ್ಷಿಣ ದಿಶೆಯೆಡೆಗೆ ಮುಖಮಾಡಿ ಹೊರಟಿತು ಆ ಕುದುರೆ.ನೀಲಧ್ವಜನಿಂದ ತಿರಸ್ಕೃತಳಾದ ಜ್ವಾಲೆಯೊಡಲಲ್ಲಿ ಅವಮಾನದ ಜ್ವಾಲೆಯೆದ್ದಿತ್ತು. ಇಷ್ಟೊಂದು ಅವಮಾನ ಮಾಡಿಸಿಕೊಂಡು ಇಲ್ಲಿರುವುದಾದರೂ ಏತಕ್ಕೆ ಎಂಬ ಭಾವ ತಳೆದ ಅವಳು ಅರಮನೆಯನ್ನು ಆ ಕ್ಷಣವೇ ತೊರೆದಳು. ಉನ್ಮುಖ ಹೆಸರಿನ ಸಹೋದರನಿದ್ದ ಅವಳಿಗೆ. ಅವನ ಮನೆಗೆ ಹೋದಳು.ಅಕ್ಕನನ್ನು ಅಕ್ಕರೆಯಿಂದ ಆದರಿಸಿದ ಉನ್ಮುಖ. ಅಕ್ಕನ ಆಕಸ್ಮಿಕ ಆಗಮನದ ಕಾರಣವೇನೆಂದು ಕೇಳಿದ. ನನ್ನೆದುರಿಗೆ ಕದನದಲ್ಲಿ ಮಕ್ಕಳನ್ನು ಕಳೆದುಕೊಂಡುದನ್ನು ತಮ್ಮನಿಗೆ ತಿಳಿಸಿದಳು. ಪತಿ ನೀಲಧ್ವಜ ಗೆಲುವಿಗೆ ಅಧಿಪತಿಯಾಗದಿರುವುದನ್ನು ನೋವಿನಿಂದ ಉಸುರಿದಳು. ತನ್ನ ಕುಟುಂಬದ ಹೀನಸ್ಥಿತಿಗೆ ಕಾರಣನಾದ ಅರ್ಜುನನ ಶಿರವನ್ನು ಕತ್ತರಿಸಿಹಾಕಬೇಕು ನೀನು ಎಂದು ಮನವಿ ಮಾಡಿಕೊಂಡಳು ತಮ್ಮನನ್ನು.ತನ್ನ ರೋಷದ ನುಡಿಗೆ ಅವನು ಸ್ಪಂದಿಸಿಯಾನು ಎಂಬ ನಿರೀಕ್ಷೆಯಿತ್ತು ಅವಳಲ್ಲಿ. ನಿರುಕಿಸಿದಳು ಜ್ವಾಲೆ ಉನ್ಮುಖನ ಮೊಗವನ್ನು “ನರನ ಶಿರವನ್ನು ನಾನು ತಂದೊಪ್ಪಿಸುವೆ ನಿನಗೆ” ಎಂಬ ಮಾತು ಅವನಿಂದ ಹೊರಹೊಮ್ಮುತ್ತದೆಂಬ ಭಾವದಲ್ಲಿ… ಡಾ. ವಿಶ್ವನಾಥ ಎನ್ ನೇರಳಕಟ್ಟೆ

Read Post »

ಅಂಕಣ ಸಂಗಾತಿ, ವೃತ್ತಿ ವೃತ್ತಾಂತ

ಅಂಕಣ ಸಂಗಾತಿ ವೃತ್ತಿ ವೃತ್ತಾಂತ ವೃತ್ತಿ ಬದುಕಿನ ಹಿನ್ನೋಟ-30 ಸುಜಾತಾ ರವೀಶ್ ವೃತ್ತಿ ವೃತ್ತಾಂತವೃತ್ತಿ ಬದುಕಿನ ಹಿನ್ನೋಟನೋಟ ~ ೩೦ ಬುಕ್ ಮಾಡಿದ್ದ ಬೈಕ್ ಬಂದಿದ್ದು ಅಷ್ಟರೊಳಗೆ ಪರ್ಮನೆಂಟ್ ಲೈಸೆನ್ಸ್ ಸಹ ಸಿಕ್ಕಿತ್ತು . ಆದರೆ ನನಗೆ ಗಾಡಿ ಓಡಿಸಲು ಬರುತ್ತಿರಲಿಲ್ಲ. ಬೈಕ್ ಪೂಜೆ ಮಾಡಿಸಿ ಮೈಸೂರಿನಿಂದ ರವೀಶ್ ಬೈಕ್ ಓಡಿಸಿಕೊಂಡು ಸಕಲೇಶಪುರಕ್ಕೆ ಬಂದಿದ್ದರು. ಕೆಲವೊಮ್ಮೆ ಹಾಗೆ ಶುಕ್ರವಾರ ಸಕಲೇಶಪುರಕ್ಕೆ ಬರುತ್ತಿದ್ದರು ಶನಿವಾರ ಮಧ್ಯಾಹ್ನ ಆಫೀಸ್ ಮುಗಿದ ನಂತರ ಅವರ ಊರಿಗೆ ಬೈಕ್ ನಲ್ಲೆ ಹೋಗುತ್ತಿದ್ದೆವು. ಕೆಲವೊಮ್ಮೆ ಅವರು ಮೊದಲೇ ಬಂದು ಮೈಸೂರಿಗೆ ಸಹ ಬೈಕ್ ನಲ್ಲಿ ನಾಲ್ಕು ಐದು ಬಾರಿ ಬಂದಿದ್ದೇವೆ .ಹಾಗೆ ಬರುವಾಗ ಒಮ್ಮೆ ಸಕಲೇಶಪುರದಿಂದ ರಾಮನಾಥಪುರದ ಬಳಿ ಇರುವ ಇವರ ಊರಿನ ತನಕವೂ ಒಂದೇ ಸಮ ಮಳೆ. ಪಕ್ಕದಲ್ಲಿ ನದಿ ಹರಿಯುತ್ತಿದ್ದು ಆ ಅನುಭವ ಇಂದಿಗೂ ಮರೆಯಲಾಗದಷ್ಟು ಮನಸ್ಸಿನಲ್ಲಿ ನಿಂತುಬಿಟ್ಟಿದೆ.ಇನ್ನು ಸಕಲೇಶಪುರದ ಮಳೆಯ ಬಗ್ಗೆ ಹೇಳದಿದ್ದರೆ ಖಂಡಿತ ಆಗುವುದಿಲ್ಲ. ಜೂನ್ ತಿಂಗಳಿನಲ್ಲಿ ಆರಂಭವಾಗುವ ಮಳೆ ಕೆಲವೊಮ್ಮೆ ರಭಸ ಕೆಲವೊಮ್ಮೆ ಮೆತ್ತಗೆ ಅಷ್ಟೇ ದಿನವಿಡೀ ಸುರಿಯುತ್ತಲೇ ಇರುತ್ತಿತ್ತು ಮಳೆ ಅಂದರೆ ಪ್ರಾಣ ಬಿಡುವ ನನಗಂತೂ ಅಲ್ಲಿದ್ದ ಎರಡು ವರ್ಷವೂ ಒಂದು ರೀತಿ ಖುಷಿ ಕೊಟ್ಟಿತ್ತು. ಆದರೆ ಬಟ್ಟೆಗಳು ಒಣಗುತ್ತಿರಲಿಲ್ಲ ಒರೆಸಿಕೊಂಡ ಟವಲ್ ಹರವದಿದ್ದರೆ ಸಂಜೆಯ ವೇಳೆಗೆ ಕಪ್ಪಗೆ ಬೂಸ್ಟು ಬರುತ್ತಿತ್ತು .ಸಾಮಾನುಗಳಂತೂ ಸ್ವಲ್ಪವೇ ತೆಗೆದುಕೊಂಡು ಬರಬೇಕಿತ್ತು. ಅಕಸ್ಮಾತ್ ಊರಿಗೆ ಹೋಗಿ ಬಿಟ್ಟರೆ ಬರುವ ವೇಳೆಗೆ ಅವೆಲ್ಲ ಬೂಸ್ಟ್ ಹಿಡಿದದ್ದೇ ಹೌದು. ತರಕಾರಿಗಳು ಅಷ್ಟೇ ಆಗ ಫ್ರಿಜ್ ಸಹ ಇರಲಿಲ್ಲ .ತಂದ ತರಕಾರಿಗಳನ್ನು ಕ್ಲೀನಾಗಿ ಒರೆಸಿ ಒಂದಕ್ಕೊಂದು ತಾಗದಂತೆ ಹರವಿ ಇಟ್ಟರೆ ಬಚಾವ್. ಇಲ್ಲದಿದ್ದರೆ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಬೆಳ್ಳನೆಯ ಬೂಸ್ಟು ಅವುಗಳನ್ನು ಅಲಂಕರಿಸಿ ಬಿಟ್ಟಿರುತ್ತಿತ್ತು.ಆ ಮಳೆಯ ಆರ್ಭಟಕ್ಕೆ ಎಲ್ಲೋ ಬಿದ್ದ ಮರ ವಿದ್ಯುತ್ ತಂತಿ ಕಟ್ಟಾಗಿ ದಿನವಿಡೀ ಏನು! ವಾರವಿಡೀ ವಿದ್ಯುತ್ ಸರಬರಾಜು ಬಂದಾಗುತ್ತಿತ್ತು. ಆಗೆಲ್ಲಾ ನೀರು ಹೊತ್ತು ಹೊತ್ತು ಸಾಕಾಗುತ್ತಿತ್ತು. ಮಹಡಿಯ ಮೇಲಿನ ಮನೆ ಎಂದು ಹೇಳಿದ್ದೆ ಅಲ್ಲವೇ ಆ ಮೆಟ್ಟಲುಗಳು ಸಹ ಪಾಚಿ ಕಟ್ಟಿಕೊಂಡು ಬಿಡುತ್ತಿದ್ದವು. ಸದ್ಯ ಒಂದು ಬಾರಿಯೂ ಬಿದ್ದಿಲ್ಲ ಅದು ನನ್ನ ಪುಣ್ಯ.ಈ ಎಲ್ಲಾ ತೊಂದರೆಗಳ ಮಧ್ಯೆಯೂ ಆ ಜಿಟಿ ಜಿಟಿ ಸುರಿಯುವ ಮಳೆಯ ಸದ್ದು ಒಂದು ರೀತಿ ಜೋಗುಳದ ಹಾಗೆ ಕೇಳಿಸುತ್ತಿತ್ತು. ಸದಾ ಕಚೇರಿಗೆ ಹೋಗುವಾಗ ಬರುವಾಗ ಛತ್ರಿ ಎಡೆಬಿಡದ ಆಪ್ತ ಸಂಗಾತಿಯಾಗಿ ಬಿಟ್ಟಿತ್ತು. ಆದರೆ ಮೈಸೂರಿನಲ್ಲಿ ಇದ್ದಾಗ ಆಗಾಗ ಕಾಡುತ್ತಿದ್ದ ಮೈಗ್ರೇನ್ ಸಕಲೇಶಪುರಕ್ಕೆ ಹೋದಮೇಲೆ ಎಲ್ಲೋ ಮಾಯವೇ ಆಗಿಬಿಟ್ಟಿತ್ತು . ಆ ಚಳಿ ಪ್ರದೇಶದಲ್ಲಿ ತಲೆನೋವು ಇನ್ನೂ ಹೆಚ್ಚಾಗಬಹುದು ಎಂದ ಎಂದು ಹೆದರಿದ್ದ ನನಗೆ ಇದೊಂದು ನಿರಾಳತೆ.ಊರಿನಿಂದ ಆಚೆ ಒಂದೆರಡು ಕಿಲೋಮೀಟರ್ ಹೋದರೆ ಸಾಕಿತ್ತು ಕಣ್ಣಿಗೆ ರಾಚುವಷ್ಟು ಹಸಿರು .ತುಂಬಾ ಸುಂದರ ವಾತಾವರಣ ಬೈಕಿನಲ್ಲಿ ಸುತ್ತೆಲ್ಲಾ ಓಡಾಡಿದ್ದೆವು.ಹೀಗೆ ಬಂದು ಶನಿವಾರ ಸುಲೋಚನಾ ಅವರು ಮೈಸೂರಿಗೆ ಹೋಗಿದ್ದರು. ರವೀಶ್ ಸಕಲೇಶಪುರಕ್ಕೆ ಬಂದು ನಾವು ಧರ್ಮಸ್ಥಳ ಸುಬ್ರಹ್ಮಣ್ಯಕ್ಕೆ ಹೋಗುವ ಪ್ರೋಗ್ರಾಮ್ ಆಗಿತ್ತು ಆದರೆ ಆ ಬುಧವಾರವೇ ನನಗೆ ಮದ್ರಾಸ್ ಐ ಬಂದು ವಕ್ಕರಿಸಿ ಬಿಟ್ಟಿತ್ತು. ಆಫೀಸಿನ ಬಳಿಯೇ ಇದ್ದ ಒಂದು ಡಾಕ್ಟರ್ ಶಾಪ್ ಗೆ ತೋರಿಸಿ ಔಷಧಿ ಅಯಿಂಟ್ಮೆಂಟ್ ತೆಗೆದುಕೊಂಡಿದ್ದೆ. ಅದೇನೋ ಭಂಡ ಧೈರ್ಯದಲ್ಲಿ ಕಣ್ಣಿಗೆ ಕೂಲಿಂಗ್ ಗ್ಲಾಸ್ ಧರಿಸಿ ಬಸ್ಸಿನಲ್ಲೇ ಧರ್ಮಸ್ಥಳಕ್ಕೆ ಹೋಗಿ ಬಂದಿದ್ದೆವು. ಅಲ್ಲೇ ಒಂದು ಮೂಲೆಯಲ್ಲಿ ಕುಟೀರದಂತೆ ಇದ್ದ ಹೋಟೆಲ್ ನಲ್ಲಿ ತಿಂದ ಮಂಗಳೂರು ಬಜ್ಜಿಯ ರುಚಿ ಇನ್ನು ಸ್ಮೃತಿ ಪಟಲದಲ್ಲಿ ಹಸಿರಾಗಿಯೇ ಇದೆ. ಅಲ್ಲಿ ದರ್ಶನ ಮುಗಿಸಿ ಸುಬ್ರಹ್ಮಣ್ಯಕ್ಕೆ ಬಂದು ಸಂಜೆಯ ವೇಳೆಗೆ ಸಕಲೇಶಪುರಕ್ಕೆ ವಾಪಸಾಗಿದ್ದೆವು. ಸುಬ್ರಹ್ಣಣ್ಯದ ಅವಲಕ್ಕಿ ತುಂಬಾ ಫೇಮಸ್. ತುಂಬಾ ರುಚಿಕರ ಕೂಡ. ಕಟ್ಡಿಸಿಕೊಂಡು ಬಂದಿದ್ದೆವು.ಒಂದು ಬಾರಿ ಮೈಸೂರಿಗೆ ಬಂದಾಗ ಅಮ್ಮನನ್ನು ಸ್ವಲ್ಪ ದಿನ ಇರಲು ಕರೆದುಕೊಂಡು ಬಂದಿದ್ದೆ ಬೆಂಗಳೂರಿಗೆ ಹೋಗಿದ್ದ ನಮ್ಮ ತಂದೆ ಅಲ್ಲಿಂದ ನೇರವಾಗಿ ಬಂದರು. ನಮ್ಮ ಸುಮಿತ್ರ ದೊಡ್ಡಮ್ಮ ಅವರ ಪತಿ ಶಿವಾನಂದ್ ದೊಡ್ಡಪ್ಪ ಸಹ ಬಂದು ನಮ್ಮೊಡನೆ ಹದಿನೈದು ದಿನಗಳ ಕಾಲ ಇದ್ದಿದ್ದು ನಿಜಕ್ಕೂ ಮರೆಯಲಾಗದ ಒಂದು ಸುಂದರ ನೆನಪು.ಬಂದು ರಿಪೋರ್ಟ್ ಮಾಡಿಕೊಂಡ ಮಾರನೆಯ ದಿನವೇ ಅಲ್ಲೇ ಮುಖ್ಯರಸ್ತೆಯಲ್ಲಿದ್ದ ಸಾರ್ವಜನಿಕ ಗ್ರಂಥಾಲಯಕ್ಕೆ ಹೋಗಿ 2 ಸದಸ್ಯ ಕಾರ್ಡುಗಳನ್ನು ಮಾಡಿಸಿಕೊಂಡಿದ್ದೆವು ಅಲ್ಲಿನ ಗ್ರಂಥಪಾಲಕರು ಚಂದ್ರಶೇಖರ್ ಧೂಲೇಕರ್ ಅನ್ನುವವರು. ಅವರು ಸಹ ಲೇಖಕರು. ನಮ್ಮ ಆಸಕ್ತಿ ನೋಡಿ ಅವರಿಗೂ ಖುಷಿಯಾಗಿತ್ತು. ಕೆಲವೊಮ್ಮೆ  ಪೇಯಿಂಗ್ ಗೆಸ್ಟ್ ನಲ್ಲಿ ಇದ್ದಾಗ ಮಾಡಲು ಬೇರೆ ಕೆಲಸವಿಲ್ಲದೆ ಓದುವುದೊಂದೇ ಹವ್ಯಾಸ. ಪ್ರತಿದಿನ ಪುಸ್ತಕ ಬದಲಾಯಿಸಿ ಕೊಂಡು ಬರುತ್ತಿದ್ದೆವು.  ಬಹಳಷ್ಟು ಪುಸ್ತಕಗಳನ್ನು ಅಲ್ಲಿ ಓದಿದ್ದೇವೆ. ಹಾಗೆಯೇ ಕಚೇರಿಯ ನಿಯತಕಾಲಿಕೆಗಳು ಸಹ ಬಸ್ಟ್ಯಾಂಡ್ ಎದುರಿಗೆ ಇದ್ದ ಒಂದು ಗೂಡಿನ ಅಂಗಡಿಯಿಂದ ತೆಗೆದುಕೊಳ್ಳುತ್ತಿದ್ದು ಒಂದು ಪುಸ್ತಕ ಇಟ್ಟು ಅದರಲ್ಲಿ ಎಂಟ್ರಿ ಮಾಡಿಸಿ ಸಹಿ ಹಾಕುತ್ತಿದ್ದು ಅಷ್ಟೇ, ಅಲ್ಲಿಯೂ ಬಹಳ ಜನ ಪುಸ್ತಕ ಓದುತ್ತಿದ್ದು ಒಂದು ರೀತಿ ಸಾಹಿತ್ಯಕ ವಾತಾವರಣ ಇತ್ತು. ಇನ್ನು ಸುಲೋಚನಾ ನಾನು ಅಂತೂ ಸರಿ ಒಂದೇ ತರಹದ ಪುಸ್ತಕದ ಹುಳುಗಳು ತುಂಬಾ ಚೆನ್ನಾಗಿತ್ತು. ಈ ವಿಷಯದಲ್ಲಿ ನಿಮ್ಮಿಬ್ಬರಿಗೂ ಒಂದೇ ಗುಣ ಎಂದು ಹೇಳಿ ಪದೋನ್ನತಿ ತೆಗೆದುಕೊಳ್ಳಲು ಕಾರಣರಾದ ಟಿ ಎಂ ಪರಶಿವಮೂರ್ತಿಯವರಿಗೆ ಧನ್ಯವಾದಗಳನ್ನು ತಿಳಿಸಲೇ ಬೇಕು.ಸುಲೋಚನಾ ಅವರು ಅಷ್ಟೇ ತುಂಬಾ ಹೊಂದಾಣಿಕೆಯ ಗುಣದವರು. ನಮ್ಮಿಬ್ಬರಿಗೂ ಒಂದೇ ಒಂದು ಬಾರಿಯಾದರೂ  ಬಿನ್ನಾಭಿಪ್ರಾಯ ಬರಲಿಲ್ಲ. ಕಡೆಯವರೆಗೂ ಮೊದಲ ದಿನದ ಸ್ನೇಹ ಮುಂದುವರೆದುಕೊಂಡು ಬಂದಿತು. ನಿಜಕ್ಕೂ ಅವರ ಅಗಲಿಕೆ ನನಗಂತೂ ಒಂದು ತುಂಬಲಾರದ ನಷ್ಟ .ಇದುವರೆಗೂ ಅವರ ಬಗ್ಗೆ ಬರೆಯಲೇ ಸಾಧ್ಯವಾಗಿರಲಿಲ್ಲ ಈಗಲೇ ಅವರ ವಿಷಯ ಕಣ್ಣೀರಿಲ್ಲದೆ ಬರೆಯಲು ಸಾಧ್ಯವಾಗುತ್ತಿರುವುದು.ನಮ್ಮ ಮನೆಯಿದ್ದ ಕುಶಾಲನಗರ ಬಡಾವಣೆ ಎತ್ತರದಲ್ಲಿ ಇದ್ದುದರಿಂದ ಊರಿನ ದೇವಸ್ಥಾನ ನದಿ ತೀರ ಎಲ್ಲಾ ಕಿಟಕಿಯಿಂದಲೇ ತುಂಬಾ ಚೆನ್ನಾಗಿ ಕಾಣಿಸುತ್ತಿತ್ತು ಆ ಹಸಿರು ಮೇಲೆ ಜಿಟಿಪಿಟಿ ಮಳೆ ಕಿಟಕಿಯ ಬಳಿ ಕುಳಿತರೆ ಸಾಕು ಒಳ್ಳೆಯ ಸುಮನೋಹರ ದೃಶ್ಯ.ಅಲ್ಲಿದ್ದಾಗಲೇ ಸೆಪ್ಟೆಂಬರ್ 1998ರಲ್ಲಿ ನನ್ನ ತಂಗಿ ವೈಶಾಲಿಯ ಮಗ ನಿಶ್ಚಯ್ ಹುಟ್ಟಿದ್ದು ಆ ಸಮಯದಲ್ಲಿ ನಾನು 15 ದಿನ ರಜೆ ಹಾಕಿ ಮೈಸೂರಿಗೆ ಬಂದಿದ್ದೆ. ನಮ್ಮ ಮನೆಯ ಮೊಟ್ಟ ಮೊದಲ ಮೊಮ್ಮಗು ಅವನು ಎಲ್ಲರಿಗೂ ತುಂಬಾ ಖುಷಿಯಾಗಿತ್ತು. ಗರ್ಭಿಣಿಯಾಗಿದ್ದಾಗ ವೈಶಾಲಿ ಒಮ್ಮೆ ಅವಳ ಪತಿಯೊಂದಿಗೆ ಬೈಕ್ ನಲ್ಲೆ ಸಕಲೇಶಪುರಕ್ಕೆ ಬಂದಿದ್ದಳು ಎಲ್ಲರಿಂದ ಬೈಗುಳಗಳನ್ನು ತಿಂದಿದ್ದಳು.ಇನ್ನು ಫೆಲೋಶಿಪ್ ಪರೀಕ್ಷೆಗಳ ವಿಷಯಕ್ಕೆ ಬಂದರೆ ಓದಲು ಮನಸೇ ಬಂದಿರಲಿಲ್ಲ ಆದರೆ ಮೂರು ಪರೀಕ್ಷೆಗಳನ್ನು ತೆಗೆದುಕೊಂಡಾಗ ಮಧ್ಯೆ ಸಕಲೇಶಪುರಕ್ಕೆ ಹೋಗಲು ಸಾಧ್ಯವಿರದ ಕಾರಣ ರಜೆ ಸಿಗುತ್ತಿತ್ತು ಹಾಗಾಗಿ ಒಂದು ವಾರ ಮೈಸೂರಿನಲ್ಲಿ ಇರಬಹುದು ಎಂಬ ಆಸೆಗೆ ಅಲ್ಲಿದ್ದ ಎರಡು ವರ್ಷವೂ ನಾಮಕಾವಸ್ತೆಗೆ ಪರೀಕ್ಷೆ ತೆಗೆದುಕೊಂಡು ಬಂದು ಅರ್ಧ ಗಂಟೆ ಪರೀಕ್ಷೆ ಅಟೆಂಡ್ ಮಾಡಿ ವಾಪಸ್ ಹೋಗುತ್ತಿದ್ದುದು.ಹೀಗೇ ನಡೆದುಕೊಂಡು ಹೋಗುವಾಗ ನಾವಿದ್ದ ಮನೆಯ ಓನರ್ ರಾಜಮ್ಮ ಅವರ ಕಿರಿಕ್ ಆರಂಭವಾಯಿತು ಯಾರೋ ಅವರಿಗೆ ಆಫೀಸಿನಿಂದ ಮನೆಯನ್ನು ಲೀಸ್ ಮಾಡಿಸಿದರೆ ಎಲ್ ಐ ಸಿ ಇಂದಲೇ ಬಾಡಿಗೆ ಪಾವತಿ ಆಗುತ್ತದೆ. ಈಗ ಇರುವವರು ಬಿಟ್ಟರೂ ತಕ್ಷಣ ಮತ್ತೆ ಎಲ್ಐಸಿಯವರೆ ಬರಬಹುದು ಎಂಬ ವಿಷಯ ತಿಳಿದಿತ್ತು .ಹಾಗಾಗಿ ಮನೆಯನ್ನು ಲೀಸ್ ಮಾಡಿಸಿ ಎಂದು ಒಂದೇ ವರಾತ ಹಚ್ಚಿದರು. ಹಾಗೆ ಲೀಸ್ ಮಾಡಿಸಿದರೆ ನಮಗೆ ತೊಂದರೆ ಆಗುತ್ತಿತ್ತು. ನಾವು ಕೊಡುವ ಬಾಡಿಗೆಗಿಂತ ಮನೆಭತ್ಯ ಹೆಚ್ಚು ಬರುತ್ತಿತ್ತು .ಆರ್ಥಿಕವಾಗಿ ನಷ್ಟವಾಗುತ್ತಿತ್ತು. ಆದರೆ ಅವರಿಗೆ ಬರುವ ಹಣಕ್ಕಂತೂ ಏನು ವ್ಯತ್ಯಯ ಆಗುತ್ತಿರಲಿಲ್ಲ ನಾವು ಕೊಟ್ಟರೆ ಏನು ಎಲ್ಐಸಿ ಇಂದ ಬಂದರೆ ಏನು? ಆದರೆ ಆಕೆ ಕೇಳಲೇ ಸಿದ್ಧವಿರಲಿಲ್ಲ. ಲೀಸ್ ಮಾಡಿಸದಿದ್ದಲ್ಲಿ ಮನೆ ಬಿಟ್ಟುಬಿಡಿ ಎಂದು ಖಡಾ ಖಂಡಿತವಾಗಿ ಹೇಳಿದರು .ಮತ್ತೆ ಮಾಡುವುದೇನು ಬೇರೆ ಮನೆಯ ಹುಡುಕಾಟಕ್ಕೆ ತೊಡಗಿದೆವು. ಈ ಬಾರಿ ರವೀಶ್ ಅವರೇ ಬಂದು ಮನೆ ಹುಡುಕಲು ಸಹಾಯ ಮಾಡಿದರು.ಸಕಲೇಶಪುರದ ದೇವಸ್ಥಾನದ ಬೀದಿ ಸಂತೆಗೆ ಹತ್ತಿರದ ಗಾಯತ್ರಿ ಟೆಂಟ್ ಪಕ್ಕದ ಬಿಲ್ಡಿಂಗ್. ಮುಖ್ಯರಸ್ತೆಯಲ್ಲಿ ಬೇಕರಿ ನಡೆಸುತ್ತಿದ್ದವರು ಈ ಮನೆಯನ್ನು ಕಟ್ಟಿಸಿದ್ದರು .ಎರಡನೆಯ ಅಂತಸ್ತಿನಲ್ಲಿ ಎರಡು ಮನೆಗಳು. ಎದುರು ಬದುರು. ಅದರಲ್ಲಿ ಬೀದಿಯ ಕಡೆಗೆ ಮುಖ ಮಾಡಿದ ಮನೆಗೆ ನಾವು ಹೋಗುವುದು ಎಂದು ನಿರ್ಧಾರವಾಯಿತು ಹೊಸ ಮನೆ ಚೆನ್ನಾಗಿತ್ತು. ಹೋಗುತ್ತಲೇ ಇದ್ದ ಹಾಲ್ ವರಾಂಡದಷ್ಟೇ ಚಿಕ್ಕದಿತ್ತು .ಒಂದು ರೂಮ್ ಸ್ವಲ್ಪ ಪರವಾಗಿಲ್ಲ ಅಡುಗೆ ಮನೆ ಮಾತ್ರ ಹಾಲ್ ನಷ್ಟೇ ದೊಡ್ಡದಾಗಿ ಇತ್ತು. ಪಾತ್ರೆ ತೊಳೆಯಲು ಸಿಂಕ್ ಕಟ್ಟೆ ಎಲ್ಲಾ ಒಂದು ರೀತಿ ಚೆನ್ನಾಗಿ ಅನುಕೂಲಕರವಾಗಿ ಈಗಿರುವ ಮನೆಗಿಂತ ಚೆನ್ನಾಗಿಯು ಇತ್ತು. ಮೈಸೂರಿನಿಂದ ಬರುವಾಗ ದೇವಸ್ಥಾನದ ಬಳಿಯೇ ತಿಳಿದುಕೊಂಡರೆ ಮನೆಗೆ ಹೋಗಿ ನಂತರ ಆಫೀಸಿಗೆ ಬರಲು ಅನುಕೂಲವಾಗಿತ್ತು. ಇಲ್ಲಿ ಕೊಡುತ್ತಿದ್ದಷ್ಟೇ ಬಾಡಿಗೆ ಅಷ್ಟೇ ಅಡ್ವಾನ್ಸ್ ಇದ್ದಿದ್ರಿಂದ ಆರ್ಥಿಕವಾಗಿಯೂ ಏನು ತೊಂದರೆ ಅನಿಸಲಿಲ್ಲ. ಮನೆ ಬಿಡುತ್ತೇವೆ ಎಂದು ಹೇಳಿದಾಗ ಆಕೆಗೆ ಒಂದು ತರಹ ಆಯಿತು ನಾವು ಅವಳು ಹೇಳಿದಂತೆ ನಡೆಯಲಿಲ್ಲ ಎಂದು ಬೇಸರ ಇದ್ದರೂ ತೋರ್ಪಡಿಸಿಕೊಳ್ಳದೆ ಅಡ್ವಾನ್ಸ್ ಅನ್ನು ಸಕಾಲಕ್ಕೆ ಕೊಟ್ಟು ಸಹಕರಿಸಿದರು ಪಾಪ. ಆದರೆ ಅವರ ಲೆಕ್ಕಾಚಾರ ತಪ್ಪಿತಲ್ಲ  ನಮಗೆ ಬೇಗ ಮನೆ ಸಿಕ್ಕಿತಲ್ಲ ಅದು ನಮ್ಮ ಪುಣ್ಯ. ಈ ಮನೆಗೆ ರಸ್ತೆಯ ಕಡೆ ಒಂದು ಸಣ್ಣ ಬಾಲ್ಕನಿ ಸಹ ಇದ್ದು ಸಂಜೆಯ ವೇಳೆ ಕುಳಿತುಕೊಳ್ಳಲು ಅಲ್ಲೇ ಕುಳಿತು ಓದಲು ಎಲ್ಲಾ ಅನುಕೂಲವಿತ್ತು. ಆದರೆ ಕರೆಂಟು ಇಲ್ಲದಿದ್ದಾಗ ಮಾತ್ರ ಎರಡೆರಡು ಅಂತಸ್ತು ನೀರು ಬರಬೇಕಾಗಿದ್ದು ಮಾತ್ರ ದೊಡ್ಡ ಪನಿಶ್ಮೆಂಟ್. 3 _ 4 ಬಾರಿ ಆ ರೀತಿ ವಿದ್ಯುತ್ ನಿಲುಗಡೆಯಾಗಿ ನೀರು ಹೊರುವಂತಾಗಿತ್ತು. ಈ ಸಮಯದಲ್ಲಿ ನಮ್ಮ ತಂದೆಯವರಿಗೆ 60 ವರ್ಷ ತುಂಬಿತು ಷಷ್ಠ್ಯಬ್ದಿ ಸಮಾರಂಭವನ್ನು ಸಹ ಮೈಸೂರಿನಲ್ಲಿ ನಾವು ಮೂರು ಜನ ಅಕ್ಕ-ತಂಗಿಯರು ಸೇರಿ ಆಚರಿಸಿದೆವು. ವೈಶಾಲಿ ಆಗ ೩ ತಿಂಗಳ ಬಾಣಂತಿ. ನಮ್ಮ ತಾಯಿಗಂತೂ ತುಂಬಾ ಸಂತೋಷವಾಗಿತ್ತು.ಆನಂತರ ನಿಶ್ಚಯ್ ನಾಮಕರಣ. ಹೀಗೆ ಒಂದರ ಹಿಂದೊಂದು ಶುಭ ಸಮಾರಂಭಗಳು ನಡೆಯುತ್ತಿದ್ದವು. ನಮ್ಮ ಸೋದರತ್ತೆಯ ಮಗ ಶ್ರೀನಾಥನ ಮದುವೆ  ಆಗಲೇ ನಡೆದದ್ದು. ಆ ಸಮಯದಲ್ಲಿ ನಮಗೆ ಆಡಿಟ್ ನಡೆಯುತ್ತಿದ್ದುದರಿಂದ ನಾನು ಮದುವೆಗೆ ಹೋಗಲಾಗಲಿಲ್ಲ. ಸೋದರಮಾವ ಸೋಮುಮಾವನ ಮಗಳು ನಂದಿನಿ ಮದುವೆಗೆ ಅಮ್ಮ ಹೋಗಲೇಬೇಕಿತ್ತು. ನನ್ನ ತಂಗಿ ಬಾಣಂತಿ. ನಾನು ರಜೆ ಹಾಕಿ ಮೈಸೂರಿಗೆ ಹೋಗಿ ಅಮ್ಮನನ್ನು ಮದುವೆಗೆ ಕಳಿಸಿದೆ.ಚಿಕ್ಕಪ್ಪನ ಮಗ ಸಂಜೀವನ ಮದುವೆ ಬೆಂಗಳೂರಲ್ಲಿ ಆಯಿತು. ಶನಿವಾರ ಮಧ್ಯಾಹ್ನ ಆಫೀಸು ಮುಗಿಸಿ ಹೊರಟಿದ್ದು. ಗೊತ್ತಾಗದೆ ಷಟಲ್ ಬಸ್ನಲ್ಲಿ ಕೂತು ತಡವಾಗಿ ಬೆಂಗಳೂರು ತಲುಪಿದ್ದೊಂದು ದೊಡ್ಡ ಸಾಹಸ. ನಮ್ಮ ನಿಗಮದಲ್ಲಿ ಹೊಸದಾಗಿ ಪದೋನ್ನತಿ ಹೊಂದಿದವರಿಗೆ ತರಬೇತಿ ಕಾರ್ಯಕ್ರಮ ಇರುತ್ತದೆ .ಹೀಗಾಗಿ ನನಗೆ 25 5 98 ರಿಂದ 28 5 98ರ ವರೆಗೆ ಹೈದರಾಬಾದಿನ ಡೆಕ್ಕನ್ ಕಾಂಟಿನೆಂಟಲ್ ಹೋಟೆಲ್ ನಲ್ಲಿ ತರಬೇತಿಗೆ ಕರೆ ಬಂದಿತ್ತು .ನನ್ನೊಂದಿಗೆ ನಂದ ಶ್ರೀ ಕಟ್ಟಿ ಅಂದರೆ ಈ ಮುಂಚೆ ವಿಭಾಗೀಯ ಕಚೇರಿಯಲ್ಲಿ ನನ್ನ ಜೊತೆಗಿದ್ದ ನನ್ನದೇ ಬ್ಯಾಚ್ನ ಗೆಳತಿ. ಅವಳಿಗೆ ಮದುವೆಯಾಗಿ ಬೆಳಗಾವಿಗೆ

Read Post »

ಅಂಕಣ ಸಂಗಾತಿ, ಜಯದೇವಿ ತಾಯಿ ಲಿಗಾಡೆ ಜೀವನ

ಧಾರಾವಾಹಿ ಸಂಗಾತಿ ಕಂತು-ಎಂಟು ಸವಿತಾ ದೇಶಮುಖ ಅವರಿಂದ ಜಯದೇವಿತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದಮಹಾನ್‌ ಚೇತನ ಲೇ-ಸವಿತಾ ದೇಶಮುಖಜಯದೇವಿತಾಯಿಲಿಗಾಡೆಯವರ ಮೊಮ್ಮಗಳು ೧೯೩೨ರ ಸಮಯ….. ಜಯದೇವಿ ತಾಯಿಯವರು ತಮ್ಮ 20ನೆಯ ವಯಸ್ಸಿನಲ್ಲಿ ಪಾದಾರ್ಪಣೆ ಮಾಡಿದ್ದರು…… ಮೂರು ಮಕ್ಕಳ ತಾಯಿಯಾಗಿ ಜೀವನದ ಕೆಲವು ಹಂತಗಳಲ್ಲಿ ತೇರ್ಗಡೆಯಾದ ನಂತರ…ಮನೆ, ಮಕ್ಕಳು, ಜವಾಬ್ದಾರಿಗಳ ಮಧ್ಯೆ … ಬಿಡುವಿನ ಸಮಯ ಸಿಕ್ಕಾಗಲೆಲ್ಲ ಜಯದೇವಿತಾಯಿಯ ಹೃದಯದಲ್ಲಿ ಒಂದು ಹೊಸ ಆಸೆ ಮೊಳಕೆಯೊಡೆದು ಅದು ಫಲ ಕೊಡುವ ಕಾಲ ಬಂದಿತ್ತು …ಮರಾಠಿ ಭಾಷೆ ಬರೆಯಲು ಓದಲು ಕಲಿತವರಾಗಿದ್ದರು .ಮನೆಯಲ್ಲಿ ಮಾತ್ರ ಕನ್ನಡದಲ್ಲಿ ಮಾತನಾಡಿದವರು,ಹಾಡುವರು.. ಮನೆಯ ಕೆಲಸ ಆಳುಗಳ ವಹಿವಾಟುವೂ ಕನ್ನಡದಲ್ಲಿ ನಡೆದಿರುತ್ತಿತ್ತು.ಮಕ್ಕಳೊಂದಿಗೂ ಕನ್ನಡ ಭಾಷೆಯಲಿ ಮಾತನಾಡುತಿದ್ದರು…….  ಆದರೆ ಮನದೊಳಗೊಂದು ಅತಿ ದೊಡ್ಡ ಕೊರಗು —“ಕನ್ನಡ ಭಾಷೆ ಓದಲು ಬರೆಯಲು ಬರದ ಕೊರಗು ….??!! ಆ ಸಮಯದಲ್ಲಿ ಪ್ರತಿದಿನ “ವಾರದ” ಪಾಠಶಾಲೆಯಿಂದ ಇಬ್ಬರು ಜಂಗಮರು ಪ್ರಸಾದಕ್ಕೆ ಎಂದು ಮನೆಗೆ ಬರುತ್ತಿದ್ದರು.   ಜಂಗಮ ವಿದ್ಯಾರ್ಥಿಳಿಗೆ ತಮಗೆ ಕನ್ನಡ ಭಾಷೆಯ ಜ್ಞಾನವನ್ನು ಕೊಡಬೇಕು ಎಂದು ಕೇಳಿದಾಗ ಅವರು ಸಂತಸದಿಂದ ಒಪ್ಪಿಕೊಂಡರು . *ಕೇವಲ ಎಂಟು ದಿನಗಳಲ್ಲಿ ಕನ್ನಡದ ಅಕ್ಷರ ಮಾಲೆಗಳನ್ನು ಅವರು ಕಲಿತರು ಮೂರು ಮಕ್ಕಳು ಆದ ನಂತರ…!!!* “ಜಂಗಮರು ಹಾಕಿ ಕೊಡುತ್ತಿದ್ದ  ಅಕ್ಷರವನ್ನು ಬಹಳ ಸರಾಗವಾಗಿ, ಸರಳ- ಸಹಜವಾಗಿ ಕನ್ನಡವನ್ನು ನಾನು ಕಲಿತೆ ಅದು ನನ್ನ ತಾಯಿ ಭಾಷೆಯ ಮರ್ಮ…. ಬಲು ಬೇಗ   ಒತ್ತಕ್ಷರಗಳನ್ನು ವರ್ಣಮಾಲೆಗಳನ್ನು ಬರೆಯಲು ಪ್ರಾರಂಭಿಸಿದೆ” ಅಂತ ಹೇಳ್ತಿದ್ದರು.   ಕಲಿತ ಕನ್ನಡ ಭಾಷೆಯನ್ನು ಅದೆಷ್ಟು ಸಂಭ್ರಮಿಸಿದರು ಅಂದರೆ ಕೈಗೆ ಸಿಕ್ಕ ಎಲ್ಲ ವಚನಗಳ ಪುಸ್ತಕಗಳನ್ನು ತೆಗೆದುಕೊಂಡು ಓದಲು ಶುರು ಮಾಡಿದರು ಅವುಗಳನ್ನು ಚೆನ್ನಾಗಿ ಓದುತ್ತಿದ್ದೇನಾ ಇಲ್ಲವಾ  ಅನ್ನೋದನ್ನ ತಿಳಿದುಕೊಳ್ಳಲು ಬಹಳ ಸಮಯವೇನು ಬೇಕಾಗಲಿಲ್ಲ ಅಂತ ಹೇಳುವರು… ಮೊದಲ ದಿನ ಕನ್ನಡದ “ಅ” ಅಕ್ಷರವನ್ನು ಬರೆಯುವಾಗ ಅವರ ಕೈ ಕಂಪಿಸಿತು…ವಯಸ್ಸು ಅಡ್ಡಬಂತು…ಮಕ್ಕಳು ನಗಬಹುದು ಅತ್ತೆ ಗಂಡ ಮುನಿಸಿಕೊಳ್ಳಬಹುದು ಎನ್ನುವ ಭಯವೂ ಬಂದಿತು…ಆದರೆ ಹೃದಯದ ಉತ್ಸಾಹ ಆ ಭಯಕ್ಕಿಂತ ದೊಡ್ಡದಾಗಿತ್ತು.“ಸಿದ್ದರಾಮ” ಎಂಬ ಪದವನ್ನು ಕನ್ನಡದಲ್ಲಿ ಓದಿದಾಗಅವರು ಕಣ್ಣೀರಿಟ್ಟರು…ಅದು ಕೇವಲ ಪದವಲ್ಲ,ಅದು ಅವರ “ಗುರುವಿನ ನಾಮ”…. “ಭಕ್ತಿಯ ರೂಪ ಒಡಮೂಡಿ ಕನ್ನಡ ಭಾಷೆಯಲ್ಲಿ ನೋಡಿ ಸಂತೋಷವಾಯಿತು…..ಆ ದಿನ ಅವರು ಮತ್ತೆ ಒಂದು ಬಾಲಕಿ ಆಗಿದ್ದರು —ಹೊಸ ಅಕ್ಷರಗಳ ಮುಂದೆ ಕುತೂಹಲದಿಂದಪ್ರತಿ ಪದವು ಮುತ್ತಿನಂತೆ ಸಂಗ್ರಹಿಸುತ್ತಿದ್ದರು.ಕನ್ನಡದಲ್ಲಿ ಮೊದಲ ಅಕ್ಷರ ಮಾಲೆಗಳ ನೋಡಿ ಕ್ಷಣಅವರ ಮುಖದಲ್ಲಿ ಮೂಡಿದ ಆ ನಗುಮಕ್ಕಳು ಹುಟ್ಟಿದಾಗ ಕಂಡ ನಗುವಿನಷ್ಟೇ ಪವಿತ್ರವಾಗಿತ್ತು.ಅದು ಕೇವಲ ಭಾಷೆ ಕಲಿತ ಸಂತಸವಲ್ಲ…ಅದು ತನ್ನ ಆತ್ಮವನ್ನು ಶರಣ ಸಂಸ್ಕೃತಿಗೆ- ಜೋಡಿಸಿದ ಸಂತಸ,ವಚನಗಳ ಹೆದ್ದಾರಿ,ತನ್ನ ಅನುಭಾವದ ಬಾಗಿಲು ತೆರೆದ ಸಂತಸ,…..ತಾನು ತಾಯಿಯಾಗಿದ್ದರೂ ತಾನೂ ಇನ್ನೂ ಕಲಿಯಬಲ್ಲೆ ಎಂಬ ಆತ್ಮವಿಶ್ವಾಸದ ಜಯಘೋಷ ಸಾರಿತ್ತು. ….ಅದೇಷ್ಟೋತ್ತು ಕಂಬನಿ ಸುರಿದವು ಅಂತ  ಅಭಿಮಾನದಿಂದ ಹೇಳುತಿದ್ದರು.ಕಣ್ಣೀರಿನಲ್ಲಿ ಹೆಮ್ಮೆ  ಇತ್ತು. ಮರಾಠಿಯ ಮಗಳಾಗಿ,,ಕನ್ನಡದ ಸೊಸೆಯಾಗಿ….,ಎರಡು ಭಾಷೆಗಳ ಸೇತುವೆಯಾದರು ಮುಂದೆ  ….ಕನ್ನಡಿಗರ ತಾಯಾಗಿ ನಿಂದರು ಅಂತೇನು ಹೇಳಬೇಕಾಗಿ ಆಗಿಲ್ಲವೇ..!! ಎಲ್ಲ‌ ಬಲ್ಲವಳೆಂಬ /ಇಲ್ಲವದು ಭ್ರಮೆಯೆನಗೆಬಲ್ಲವರ ಪಾದಹಿಡಿಯುವೆ -ಬಲ್ಲಿದರುಕಲಿಸಿರಿ ಮತ್ತು ನುಡಿಸಿರಿ!! ಅಂತ ಹೇಳತಾಬಲ್ಲವರಿಂದ‌ ಕಲಿಯುತ ಮುಂದೆ ನಡೆದರು. 16-09-1895 ರಲ್ಲಿ ಸೊಲ್ಲಾಪುರದ ಮಹಾದಾನಿಯಾದ ರಾವ್ ಬಹದ್ದೂರ್ ಮಲ್ಲಪ್ಪ ವಾರದರು “ಸರಸ್ವತಿ ಸದನ “.ಎಂಬ ಶೈಕ್ಷಣಿಕ ಸಂಸ್ಕೃತಿಕ ಸಂಸ್ಥೆ ಸ್ಥಾಪನೆ ಮಾಡಿದ್ದರು . ಸರಸ್ವತಿ ಸದನ ಇಲ್ಲಿ ಮಹಿಳೆಯರಲ್ಲಿ ಸ್ವಾವಲಂಬಿ ಜೀವನದ ಅರಿವು, ಶಿಕ್ಷಣದ ಮಹತ್ವ,ಆರೋಗ್ಯದ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯಕ್ರಮಗಳ ಅನುಷ್ಠಾನ ಮಾಡಲಾಗುತ್ತಿತ್ತು.  ೧೯೧೦ ರಲ್ಲಿ ಸರಸ್ವತಿ ಸದನ ಮೂರು ವಿಭಾಗದಲ್ಲಿ ತನ್ನ ಕೆಲಸ ಹಮ್ಮಿಕೊಂಡಿತ್ತು. ಕನ್ನಡ ಮಾತನಾಡುವವರಿಗಾಗಿ ವಾರದ ಮಲ್ಲಪ್ಪನವರ ಮನೆಯಲ್ಲಿ “ವೀರಶೈವ ಮಹಿಳಾ  ಜ್ಞಾನ” ಮಂದಿರ ಕಟ್ಟಲಾಗಿತ್ತು.  ಇನ್ನು ಮರಾಠಿ ಮಾತನಾಡುವವರಿಗಾಗಿ ಶ್ರೀ ಶಂಕರ ರಾವ ದೇವಾಂಕರ್ ಅವರ ಮನೆಯಲ್ಲಿ “ಸರಸ್ವತಿ ಮಂದಿರ “ಕಟ್ಟಲಾಗಿತ್ತು . ಗುಜರಾತಿ ಭಾಷಿಕರಿಗಾಗಿ ಹಿರಾಚಂದ್ರ ನೇಮಿಚಂದ್ರ ಮನೆಯಲ್ಲಿ ಶ್ರಾವೀಕಾಶ್ರಮ ಸಂಸ್ಥೆಗಳನ್ನು ಸ್ಥಾಪನೆ ಮಾಡಿದ್ದರು.ಮಹಿಳೆಯರ ಒಳತಿಗಾಗಿ ಪ್ರತಿ  ವಾರಕ್ಕೊಮ್ಮೆ ಸಭೆ ಸೇರಿ.. ಮೊದಮೊದಲಿಗೆ ಅರಿಶಿಣ ಕುಂಕುಮ ಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಂಡರು.ಎಡಬಿಡದೆ ಚಟುವಟಿಕೆಗಳು ನಡೆಯುತ್ತಿದ್ದವು. ಅಲ್ಲಿ ಪ್ರಾರ್ಥನೆ, ಕೀರ್ತನೆ ,ಪುರಾಣ ಪ್ರವಚನ ಸಂಪ್ರದಾಯ ಮಡಿ-ಮೈಲಿಗೆ ಅಂಥ ಮೂಢ ನಂಬಿಕೆಗಳಿಂದ ಮುಕ್ತರಾಗಿ ..ಧಾರ್ಮಿಕ ಸರಿಯಾದ ತಿಳುವಳಿಕೆ ಕೊಡುವುದು…ಅವರ ಕಾಳಜಿ‌ ಅವರೇ ವಹಿಸುವುದನ್ನು ಕಲಿಸುತ್ತಿದ್ದರು.  ಸ್ವಾವಲಂಬನೆಯ ಜೀವನ ನಡೆಸುವುದು ಬಗ್ಗೆ ತಿಳುವಳಿಕೆಯನ್ನು ಹೇಳಿಕೊಡಲಾಗುತ್ತಿತ್ತು .ವಾರದ ಮಲ್ಲಪ್ಪನವರ ಪತ್ನಿಯರಾದ ಗೌರವ್ವಬಾಯಿ ಮತ್ತು ಬಸವ್ವಬಾಯಿ ಹಾಗೂ ಅವರ ಮಗಳು ಸಂಗವ್ವನವರು ಮೇಲ್ವಿಚಾರಣೆ ವಹಿಸಿಕೊಂಡಿದ್ದರು.  ತಾಯಿಯೊಂದಿಗೆ ಜಯದೇವಿ ತಾಯಿಯವರು ಸರಸ್ವತಿ ಸದನದಲ್ಲಿ ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದರು.  ಮುಂದೆ 1932 ರಲ್ಲಿ ಮಹಿಳಾ ಜ್ಞಾನ ಮಂದಿರದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡರು ಏಕೆಂದರೆ ಪತಿ ಚೆನ್ನಮಲ್ಲಪ್ಪ ಲಿಗಾಡೆ ಅವರು ತಾಯಿಯವರ ಹೆಸರ ಮೇಲೆ ಜಗವನ್ನು ಖರೀದಿಸಿ ತಾಯಿಯವರ ಹೆಸರಿನಲ್ಲಿಯೇ ಕನ್ಯಾ ಶಾಲೆಯನ್ನು ಪ್ರಾರಂಭಿಸಿದರು. ಈ ಶಾಲೆಯು ಸೊಲ್ಲಾಪುರದಲ್ಲಿ 25 ವರ್ಷಗಳ ಕಾಲ ತಾಯಿಯವರ ಹೆಸರಿನಲ್ಲಿಯೇ ನಡೆದಿತ್ತು.  ತಾಯಿಯವರು ಈ ಶಾಲೆ ಗೆ ಸಿದ್ದರಾಮನ ಹೆಸರನ್ನೇ ಇಡಬೇಕೆಂದು ಒತ್ತಾಯಿಸಿದರು. “ಸಿದ್ದೇಶ್ವರ” ಶಾಲೆಯಾಗಿ ಪರಿವರ್ತನೆಗೊಂಡಿತು. ಈ ಶಾಲೆಯಲ್ಲಿ ಅವಿಶ್ರಾಂತವಾಗಿ ಓದುವುದನ್ನು ಕನ್ನಡದಲ್ಲಿ ಬರೆಯುವುದನ್ನು ರೂಢಿಸಿಕೊಂಡರು. ಸಿದ್ದೇಶ್ವರ ಕನ್ಯಾ ಪಾಠಶಾಲೆ ಸಿದ್ದೇಶ್ವರ ಕನ್ಯಾ ಪಾಠಶಾಲೆ ಜಯದೇವಿತಾಯಿಯವರ ಕಾರ್ಯ ಮಾಡುವ ಮುಖ್ಯವಾದ ಕಾರ್ಯ ಕ್ಷೇತ್ರಗಳು ಅಂದರೆ …ವಾರದ ಸಂಸ್ಕೃತ ಪಾಠಶಾಲೆ ,ಮಹಿಳಾ ಜ್ಞಾನ ಮಂದಿರ, ಸರಸ್ವತಿ ಸದನ ಹಾಗೂ ಸಿದ್ದೇಶ್ವರ ಕನ್ಯಾ ಶಾಲೆ, ಬಾಲ ಶ್ರಾವಿಕಾಶ್ರಮ ಮಂದಿರ  ಈ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ನಿರಂತರವಾಗಿ ದುಡಿದರು .ಮೂರು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದರು. ಮಹಿಳೆಯರಲ್ಲಿ ಶಿಕ್ಷಣದ ಅರಿವು ,ರಾಷ್ಟ್ರೀಯ ಚಿಂತನೆ ,ನಾಡ ನುಡಿ ಪ್ರಜ್ಞೆ ಸಮಾಜದ ಚಟುವಟಿಕೆಯ ಮೂಲಕ ಸ್ವಾವಲಂಬನೆಯ ಬದುಕು, ದೇಶಿಯ ಚಿಂತನೆಗಳನ್ನು ಬೆಳೆಸುತ್ತಿದ್ದರು.  ಈ ಕಾಲಕ್ಕೆ ಗಾಂಧೀಜಿಯವರು ಭಾರತಾರದಾದ್ಯಂತ ಸ್ವಾತಂತ್ರ್ಯದ ಹೋರಾಟದಲ್ಲಿ ಜನರನ್ನು ಒಂದು ಗುಡಿಸುತ್ತಿದ್ದರು ಅವರ ಅಹಿಂಸಾವಾದ ,ಸ್ವದೇಶಿ ಚಿಂತನೆಯ  ಚಟುವಟಿಕೆಗಳಲ್ಲಿ ಜಯದೇವಿ ತಾಯಿಯವರು ಸಕ್ರಿಯವಾಗಿ ಭಾಗಿಯಾಗುತ್ತಿದ್ದರು. ಗಾಂಧೀಜಿ ಚಿಂತನೆಗಳು ಜಯದೇವಿಯವರಿಗೆ ತುಂಬಾ ಆಕರ್ಷಣೆ ಮಾಡಿದ್ದವು . ಇದೇ ಕಾಲಕ್ಕೆ ತಿಲಕರು ಸ್ವದೇಶಿ ಚಳುವಳಿಯ ನಾಲ್ಕು ಅಂಕಗಳಾದ ಸ್ವರಾಜ್ಯ ,ರಾಷ್ಟ್ರೀಯ ಶಿಕ್ಷಣ, ಸ್ವದೇಶಿ ಚಳುವಳಿ ,ವಿದೇಶಿ ಬಹಿಷ್ಕಾರ …..ಮೌಲ್ಯಗಳ ಪ್ರಚಾರಕ್ಕಾಗಿ ಮುಂಬೈ ಕರ್ನಾಟಕದಲ್ಲಿ ಪ್ರವಾಸ ಕೈಗೊಂಡಿದ್ದರುಆ ಕಾಲದಲ್ಲಿ ತಿಲಕರು ವಾರದವರ ಮನೆತನದಲ್ಲಿ ಗಣೇಶೋತ್ಸವವನ್ನು ಬಹಳ ವಿಜೃಂಭಣೆಯಿಂದ ಮಾಡುತ್ತಿರುವುದನ್ನು ನೋಡಿ ತಿಲಕರು ಸಾಮೂಹಿಕವಾಗಿ ಈ ರೀತಿಯಲ್ಲಿ ಗಣೇಶನನ್ನು ಪೂಜಿಸಿದರೆ ಸ್ವಾತಂತ್ರ ಹೋರಾಟದಲಿ ಎಲ್ಲ ಮತೀಯರು ಎಲ್ಲ ಜಾತಿಯವರು ಒಂದು ಸೇರಿ ಭಾರತೀಯರು ಒಂದಾಗಿ ಬ್ರಿಟಿಷರ ವಿರುದ್ಧ ಹೋರಾಡಬಹುದು ಎನ್ನುವ ವೈಚಾರಿಕತೆಯನ್ನು ಪಡೆದುಕೊಳ್ಳುತ್ತಾರೆ. ಭಾರತದಾದ್ಯಂತ ಗಣೇಶ ಉತ್ಸವವನ್ನು ಪ್ರಾರಂಭಿಸುವುದನ್ನು ಶುರು ಮಾಡಿದರು. ತಿರಕರು ವಾರದ ಮಲ್ಲಪ್ಪನವರಿಗೆ ಧನ್ಯವಾದ ಹೇಳಿರುವ ಆಕರ‌ ಲಭ್ಯವಾಗಿವೆ. ಅಂತೆಯೇ  ಜಯದೇವಿ ತಾಯಿಯವರು ಕೂಡ ಗಣೇಶನ ಪೂಜೆಯನ್ನು ಅತಿ ಸಂಭ್ರಮದಿಂದ ಅನುಸರಿಸುತ್ತಿದ್ದರು ಹಾಗೆ ಗಾಂಧೀಜಿಯವರ  ಆಚಾರ ವಿಚಾರಗಳನ್ನು ಕಾರ್ಯರೂಪದಲ್ಲಿ ತರುತ್ತಿದ್ದರು .ಅವರಲ್ಲಿಯ ರಾಷ್ಟ್ರ ಪ್ರೇಮವು ಉತ್ಕಟವಾಗಿತ್ತು.  ರಾಷ್ಟ್ರೀಯ ಚಟುವಟಿಕೆ ಹಾಗೆ ಚರ್ಚೆಗಳಲ್ಲಿ ಭಾಗವಹಿಸುತ್ತಿದ್ದರು .   ಕರ್ನಾಟಕದಲ್ಲಿ ಸುಮಾರು 48 ರಾಷ್ಟ್ರೀಯ ಶಾಲೆಗಳದ್ದವು. ಜಯದೇವಿ ತಾಯಿಯವರು ರಾಷ್ಟ್ರೀಯ ಶಾಲೆಗಳನ್ನು ಪ್ರೋತ್ಸಾಹಿಸುತ್ತಿದ್ದರು…  ಸೊಲ್ಲಾಪುರದಲ್ಲಿ ಬಾಲ “ವಿದ್ಯಾ ಮಂದಿರ, ಶ್ರಾವಿಕಾಶ್ರಮ ಶಾಲೆ ,ಹುಬ್ಬಳ್ಳಿಯಲ್ಲಿ ‘ಭಾರತೀಯ ಹೈಸ್ಕೂಲ್,” ಧಾರವಾಡದಲ್ಲಿ “ಜಯದೇವಿತಾಯಿ ಲಿಗಾಡೆ” ಹೈಸ್ಕೂಲ್ ಶಾಲೆಗಳನ್ನು ಆರಂಭಿಸಿದ್ದರು. ಅಲ್ಲಿ ರಾಷ್ಟ್ರೀಯ ವಿಚಾರಗಳ ಕುರಿತು ಚರ್ಚೆಗಳು ನಡೆಯುತ್ತಿದ್ದವು. *ಸರಸ್ವತಿ ವಿದ್ಯಾ ಮಂದಿರ*  ತಾಯಿ ಸಂಗವ್ವ ಮಡಿಕೆ ,ಭಾಗೀರಥಿಬಾಯ್, ಪಂಚವ್ವಬಾಯಿ ಅವರು ಅಸಹಕಾರ ಚಳುವಳಿಯಲ್ಲಿ ಧುಮುಕಿದ್ದರೂ ಅದೇ ರೀತಿಯಾಗಿ ತಾಯಿಯವರು ಗಂಡನ ಮನೆಯಲ್ಲಿ ಇದ್ದುಕೊಂಡು ಗಾಂಧೀಜಿಯವರು ಕರೆ ಕೊಡುತ್ತಿದ್ದ ಎಲ್ಲ ರಾಷ್ಟ್ರೀಯ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದರು. ಕನ್ನಡವನ್ನು ಕಲಿಯುತ್ತಲೇ ಮುಂದೆ ಕನ್ನಡದ ವೇಧಾವಿ ಭಾಷಣಕಾರ್ತಿಯಾಗಿ ಪರಿವರ್ತಿಸಿದರು.ಮೊಟ್ಟ ಮೊದಲ ಬಾರಿ ಜಯದೇವಿ ತಾಯಿಯವರು ಭಾಷಣವನ್ನು ಮಾಡಿದ ನೆನಪನ್ನು ಮಾಡಿಕೊಳ್ಳುತ್ತಿದ್ದರು…… *ಮೊಟ್ಟ ಮೊದಲ ಬಾರಿ ಭಾಷಣ ಮಾಡಿದ ವಾರದ ವಾಡೆ* ಮೊದಲಸಲ ಬಾಷಣ ಮಾಡಿದ ವಾಡೆ ಮನೆಯ ಎದುರುಗಡೆ ಸ್ಥಿತವಾದ ವಾರದವರ ಮನೆಯಲ್ಲಿ ತಿಂಗಳಿಗೊಮ್ಮೆ  ಅಕ್ಕಮಹಾದೇವಿಯ  ಪುರಾಣ ಪಠಣ ಮಾಡಿದ ಗುರುಗಳು ಜಯದೇವಿ ತಾಯಿಯವರನ್ನು ಕರೆದು “ನಾಳೆ ನೀನೇ ಭಾಷಣವನ್ನು ಮಾಡಿ ಪುರಾಣದ ಸಮಾಪ್ತಿಯನ್ನು ಮಾಡಬೇಕು “ಎಂದು ಕೇಳಿಕೊಂಡರು…  ಜಯದೇವಿ ತಾಯಿಯವರಿಗೆ  ಕೈ ಕಾಲು ಕಂಪಿಸಿದವು ಹೊಟ್ಟೆಯಲ್ಲಿ ಚಿಟ್ಟೆ ಓಡಾಡಿದಂಗ ಆಯಿತುಅಂತ ಹೇಳುತ್ತಿದ್ದರು. ಮೊಟ್ಟ ಮೊದಲ ಬಾರಿಗೆ ಭಾಷಣ ಮಾಡುವುದು ಸಾಮಾನ್ಯ ಕೆಲಸವಾಗಿರಲಿಲ್ಲ ಏಕೆಂದರೆ ಕೇವಲ ತಾಯಿ ಭಾಷಣ ಮಾಡುವುದನ್ನು ಕೇಳುತ್ತಿದ್ದರು… ಆದರೆ ಭಾಷಣ ಮಾಡಿದವರಾಗಿರಲಿಲ್ಲ.. ತಂದೆಯ ಹತ್ತಿರ ಹೋಗಿ ಏನನ್ನು ಮಾತನಾಡಬೇಕು ಅನ್ನೋದನ್ನ ಸುಮಾರು 9 -10 ಪುಟಗಳಷ್ಟು ಭಾಷಣವನ್ನು ಬರೆದುಕೊಂಡು ಬಂದು…. ಪುಟಗಳಲ್ಲಿನ ಒಂದು ಅಕ್ಷರವನ್ನು ಕೂಡ ಬಿಡದಂತೆ ಮರು ದಿವಸವೇ  ಭಾಷಣ ಮಾಡಿದರು.ಆ ಭಾಷಣವು ಎಲ್ಲರ ಮೇಲೆ ಅತ್ಯಂತ ಪ್ರಭಾವ ಬೀರಿದ್ದು ಹಾಗೂ ಪೂರ್ತಿಯಾಗಿ ಎಲ್ಲರ ಮನ ಗೆದ್ದಿದ್ದರು.ತಾಯಿಯವರು ಮಾಡುತ್ತಿದ್ದ ಭಾಷಣವನ್ನು ಕೇಳಿದ ತಂದೆ ಕಣ್ಣುನೀರು ಉರಿದವು… ತಾಯಿ  ಮಗಳನ್ನು ತಬ್ಬಿಕೊಂಡಿದ್ದರು .ಹಾಗೆ ಗೌರವ್ವಬಾಯಿಯು   ಬೆರಳುಗಳಿಂದ ನಿವಾಳಿಸಿ ಲಟ್ಟಿ ಮುರದಿದ್ದರು.ಇನ್ನೂ ಸಮಾಜದ ಸ್ತ್ರೀಯರೆಲ್ಲರೂ …ಬಂದಂತಹ ಎಲ್ಲ ಅತಿಥಿಗಳು ಅತ್ಯಂತ ಹೆಮ್ಮೆಯಿಂದ ನೋಡುತ್ತಿರುವ ದೃಶ್ಯ ಮನಸ್ಸಿಗೆ ಬಹಳ ಪ್ರಫುಲ್ಲತೆ ತಂದಿದ್ದು ….. ಮನದಲ್ಲಿ ಸಾವಿರ ಬಾರಿ ಸಿದ್ದರಾಮಯ್ಯನವರು ನೆನೆಸಿ ಧನ್ಯವಾದಗಳು ಹೇಳಿದ್ದರು.ಹಾಗೆ ಅತ್ತೆಯು ಭಾಷಣಗಾರತೀಯ ಮಗಳು ಅಂತ  ಅಣುಕಿಸುತ್ತಿರುವ ಮಾತುಗಳು ಕೂಡ  ನೆನಪಿಗೆ ಬಾರದೇ ಇರಲಿಲ್ಲ ಅಂತ ಹೇಳಿದರು.  ಮುಂದೆ ಪ್ರಯಾಗಬಾಯಿ ಅತ್ತೆಯು ಕೂಡ ತಾಯಿಯವರು ಮಾಡುವ ಭಾಷಣದ ಅಭಿಮಾನಿಗಳಾದರು.ಗಂಡ ಚೆನ್ನಮಲ್ಲಪ್ಪನವರು ತುಂಬಾ ಅಭಿಮಾನ ಪಡುವಂತ ಆಯ್ತು. *ಶರಣರ ಕರುಣೆಯು ಕಾಸರಕವಲೊಡೆದು ಹರೆದು ಹಾಯದಿತ್ತಎನ ಮೇಲೆ ಸಿದ್ದನ ವರವಾಗಿತ್ತು ..*… ಮುಂದೆ ಅವರ ಜನಜಾಗೃತಿಯ ಕಾರ್ಯ-ಭಾಷಣ ಗಾರ್ತಿಯ ಪಯಣ ಸಾಗುತ್ತಲೇ ನಡೆಯಿತು. ಅಲ್ಲಲ್ಲಿ ಎಲ್ಲ ಸಮಾಜದಲ್ಲಿ ಭಾಷಣಗಳನ್ನು ಮಾಡುತ್ತಿದ್ದರು.  ಸುತ್ತಲಿನ ಹಳ್ಳಿಗಳಿಂದ ಊರುಗಳಿಂದ ಭಾಷಣ ಮಾಡುವುದಕ್ಕಾಗಿ ಆಮಂತ್ರಣ ಬರಲಾರಂಸಿದವು .ಅನೇಕ ಶರಣ ಅನುಭಾವಿಗಳ ಒಡನಾಟ ಬೆಳೆಯ ಲಾರಂಭಿಸಿತು. ಕನ್ನಡ ಮೇರು ಸಾಹಿತ್ಯದ ಅಧ್ಯಯನ, ಶರಣ ಸಂಸ್ಕೃತಿಯ ಪರಂಪರೆಯ ಆಚರಣೆಮಾಡುತ್ತಾ ನಾಡಿನ ಮೂಲೆ ಮೂಲೆಗಳಲ್ಲಿ ಹೋಗಿ ಭಾಷಣವನ್ನು ಕೊಡುವುದು ಸಮಾಜದ ಸೇವೆಯನ್ನು ಮಾಡುವುದು ರಾಜ್ಯದ ರಾಷ್ಟ್ರದ ಅನೇಕ ಸಂತರು ಮಹಾತ್ಮರು, ಶಿವಯೋಗಿಗಳು, ಮಹಾನುಭಾವರೊಂದಿಗೆ ಜೊತೆ ಗೂಡಿ ಅನೇಕ ಕಾರ್ಯಗಳನ್ನು ಹಮ್ಮಿಕೊಳ್ಳಲಾರಂಬಿಸಿದರು. ಜಯದೇವಿ ತಾಯಿ ಅವರ ಸರ್ವತೋಮುಖ ಸಮಾಜದ ಕಾರ್ಯಗಳಿಗೆ ಹೇಗೆ ಮುಂದುವರೆದವು ಅನ್ನುವದ ಮುಂದಿನ ವಾರ ನೋಡೋಣ ಬನ್ನಿ….. ಸವಿತಾ ದೇಶಮುಖ

Read Post »

You cannot copy content of this page

Scroll to Top