ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅಂಕಣ ಸಂಗಾತಿ, ಕೇರಿ ಕೊಪ್ಪಗಳ ನಡುವೆ

ಅಂಕಣ ಬರಹ . ರಾಮಕೃಷ್ಣ ಗುಂದಿ ಅವರ ಆತ್ಮಕಥೆ—23 ಆತ್ಮಾನುಸಂಧಾನ ಅಂಕೋಲೆಯ ಗೋಖಲೆ ಸೆಂಟನರಿ ಕಾಲೇಜಿಗೆ… ಬಿ.ಎ. ಪದವಿ ಶಿಕ್ಷಣ ಪಡೆಯುವುದಕ್ಕಾಗಿ ಅಂಕೋಲೆಯ ಗೋಖಲೆ ಸೆಂಟನರಿ ಕಾಲೇಜಿಗೆ ಸೇರಲು ಬಯಸಿದೆ. 1966ರಲ್ಲಿ ಮಾನ್ಯ ದಿನಕರ ದೇಸಾಯಿಯವರು ತಮ್ಮ ಕೆನರಾ ವೆಲ್ಫೇರ್ ಟ್ರಸ್ಟ್ ಶಿಕ್ಷಣ ಸಂಸ್ಥೆಯ ಮೂಲಕ ಸ್ಥಾಪಿಸಿದ ಗೋಖಲೆ ಸೆಂಟನರಿ ಕಾಲೇಜು ನನ್ನಂಥ ಸಾವಿರಾರು ಬಡ ವಿದ್ಯಾರ್ಥಿ ಗಳ ಪದವಿ ಶಿಕ್ಷಣದ ಕನಸನ್ನು ನನಸಾಗಿಸಿದ್ದು ಈಗ ಇತಿಹಾಸ. ನಾನು ವಿದ್ಯಾರ್ಥಿಯಾಗಿ ಕಾಲೇಜು ಸೇರುವ ಹೊತ್ತಿಗೆ ಪದವಿ ಅಭ್ಯಾಸ ಮುಗಿಸಿದ ಮೊದಲ ತಂಡ ಕಾಲೇಜಿನಿಂದ ಹೊರಗೆ ಹೋಗಲು ಅಣಿಯಾಗುತ್ತಿತ್ತು. ಕಾಲೇಜಿನ ಸಂಸ್ಥಾಪಕ ಪ್ರಾಚಾರ್ಯರಾಗಿದ್ದ ಪ್ರೊ.ಕೆ.ಜಿ. ನಾಯ್ಕ ಅವರು ಅತ್ಯಂತ ಶಿಸ್ತು ಮತ್ತು ದಕ್ಷತೆಯಿಂದ ಕಾಲೇಜಿನ ಆಡಳಿತವನ್ನು ನಡೆಸುತ್ತಿದ್ದರು. ಅವರ ಮತ್ತು ಮಾನ್ಯ ದಿನಕರ ದೇಸಾಯಿಯವರ ಮಾರ್ಗದರ್ಶನದಂತೆಯೇ ಅಹರ್ನಿಶಿ ಕಾರ್ಯ ನಿರ್ವಹಿಸುವ ಅಧ್ಯಾಪಕ ಮತ್ತು ಆಫೀಸು ಸಿಬ್ಬಂದಿಗಳ ತಂಡ ಕಾಲೇಜನ್ನು ಒಂದು ಮಾದರಿ ಶಿಕ್ಷಣ ಸಂಸ್ಥೆಯನ್ನಾಗಿ ರೂಪಿಸಲು ಕ್ರಿಯಾಶೀಲರಾಗಿದ್ದರು. ಎಲ್ಲ ವಿಭಾಗಗಳಲ್ಲಿ ಕಾರ್ಯನಿರತರಾಗಿದ್ದ ಪ್ರತಿಭಾ ಸಂಪನ್ನ ಅಧ್ಯಾಪಕ ವರ್ಗ ಕಾಲೇಜಿಗೆ ಒಂದು ವಿಶಿಷ್ಟ ಗಾಂಭೀರ್ಯವನ್ನು ತಂದುಕೊಟ್ಟಿತ್ತು. ಕಲಾ ವಿಭಾಗವಾಗಲಿ, ವಿಜ್ಞಾನ ವಿಭಾಗವಾಗಲಿ ಜ್ಞಾನದಿಂದ ಪರಿಪೂರ್ಣರೆನಿಸಿದ ಅಧ್ಯಾಪಕರಿಂದ ತುಂಬಿತ್ತು. ಪ್ರತಿ ಹಂತದ ಆಯ್ಕೆ ಅನುಷ್ಠಾನಗಳಲ್ಲಿ ಡಾ. ದಿನಕರ ದೇಸಾಯಿ ಮತ್ತು ಆಡಳಿತ ಮಂಡಳಿ ಹಾಗೂ ಪ್ರಾಚಾರ್ಯ ಕೆ.ಜಿ. ನಾಯ್ಕ ಅವರ ದೂರದರ್ಶಿತ್ವ ಉತ್ತಮ ಫಲಿತಾಂಶ ನೀಡಿತ್ತು. ಇದು ಮೂರ್ನಾಲ್ಕು ವರ್ಷಗಳ ಅಲ್ಪಾವಧಿಯಲ್ಲಿಯೇ ಕಾಲೇಜಿಗೆ ಸಾರ್ವಜನಿಕ ವಲಯದಲ್ಲಿ ಹೆಚ್ಚಿನ ಗೌರವಾದರಗಳನ್ನು ದೊರಕಿಸಿಕೊಟ್ಟಿತ್ತು. ಸಂಸ್ಕೃತ ವಿಭಾಗದಲ್ಲಿ ಪ್ರೊ. ಎಂ.ಪಿ. ಭಟ್, ಕನ್ನಡ ವಿಭಾಗದ ಪ್ರೊ. ವಿ.ಎ. ಜೋಷಿ, ಕೆ.ವಿ. ನಾಯಕ ಇತಿಹಾಸ ವಿಭಾಗದಲ್ಲಿ, ಪ್ರೊ. ಎ.ಎಚ್. ನಾಯಕ, ಟಿ.ಟಿ. ತಾಂಡೇಲ್ ಇಂಗ್ಲೀಷ್ ವಿಭಾಗದಲ್ಲಿ, ಪ್ರೊ. ಎನ್.ಜಿ. ಸಭಾಹಿತ, ದಿವಾಸ್ಪತಿ ಹೆಗಡೆ, ಎಂ.ಎನ್. ಡಂಬಳ, ಶ್ರೀಮತಿ ನಿರ್ಮಲಾ ಗಾಂವಕರ ಹಿಂದಿ ವಿಭಾಗದಲ್ಲಿ, ಪ್ರೊ. ಕೆ.ಪಿ. ಕುಲಕರ್ಣಿ ಅರ್ಥಶಾಸ್ತ್ರ ವಿಭಾಗಕ್ಕೆ, ಪ್ರೊ. ಡಿ.ಆರ್.ಪೈ, ಡಿ.ವ್ಹಿ. ಹೆಗಡೆ ರಾಜ್ಯಶಾಸ್ತ್ರದಲ್ಲಿ, ಪ್ರೊ. ಎಂ.ಡಿ. ರಾಣಿ ಮುಂತಾದ ಮಹನೀಯರು ಕಲಾ ವಿಭಾಗದ ಗೌರವಾನ್ವಿತಿ ಅಧ್ಯಾಪಕರಾಗಿದ್ದಾರೆ. ವಿಜ್ಞಾನ ವಿಭಾಗದ ಗಣಿತ ಶಾಸ್ತ್ರಕ್ಕೆ ಸ್ವತಃ ಪ್ರಾಚಾರ್ಯರಾಗಿದ್ದಾಗ ಕೆ.ಜಿ. ನಾಯ್ಕ, ಪಿ.ಎಂ. ರಾಣೆ, ಎಂ.ಜಿ. ಹೆಗಡೆ ಮುಖ್ಯವಾಗಿದ್ದರು. ಪ್ರೊ. ಸಿ.ಎನ್. ಶೆಟ್ಟಿ, ಪ್ರೊ ವಿ.ಆರ್. ವೆರ್ಣೆಕರ್ ರಸಾಯನಶಾಸ್ತ್ರ ವಿಭಾಗದಲ್ಲಿ, ಪ್ರೊ. ಬಿ.ಎನ್. ಭಟ್, ಪ್ರೊ. ಮೋಹನ ಹಬ್ಬು ಭೌತಶಾಸ್ತ್ರ ವಿಭಾಗದಲ್ಲಿ, ಪ್ರೊ. ಶ್ರೀಮತಿ ಶಾಂತಾ ಥಾಮಸ್, ಆರ್.ಬಿ. ನಾಯ್ಕ ಜೀವಶಾಸ್ತ್ರ, ಸಸ್ಯಶಾಸ್ತ್ರ ವಿಭಾಗದಲ್ಲಿ ಕರ್ತವ್ಯನಿಷ್ಠರಾಗಿ ಕಾರ್ಯನಿರ್ವಹಿಸುತ್ತ ವಿಜ್ಞಾನ ವಿಭಾಗದ ಘನತೆಯನ್ನು ಹೆಚ್ಚಿಸಿದ್ದರು. ಆಡಳಿತ ಕಚೇರಿಯ ಮುಖ್ಯಸ್ಥರಾಗಿ ಕೃಷ್ಣಾನಂದ ಶೆಟ್ಟಿ ಎಂಬುವವರು ಕಾರ್ಯನಿರ್ವಹಿಸುತ್ತಿದ್ದರೆ, ಆನಂದು ಶೆಟ್ಟಿಯವರು ಲೆಕ್ಕಪತ್ರ ವಿಭಾಗದ ಮುಖ್ಯಸ್ಥರಾಗಿದ್ದರು. ಇವರಿಗೆ ಸೈಯದ್ ಎಂಬ ಮುಸ್ಲಿಂ ತರುಣನೊಬ್ಬ ಗುಮಾಸ್ತರಾಗಿ ಸಹಕರಿಸುತ್ತಿದ್ದರು. ನನ್ನ ನೆನಪಿನಲ್ಲಿ ಉಳಿದಂತೆ, ಕಾಲೇಜಿನ ಗ್ರಂಥಾಲಯದ ಜವಾಬ್ದಾರಿಯನ್ನು ವಿಷ್ಣು ನಾಯ್ಕ ಎಂಬ ತರುಣ ಬರಹಗಾರರೊಬ್ಬರು ನೋಡಿಕೊಳ್ಳುತ್ತಿದ್ದು ಒಂದೆರಡು ವರ್ಷಗಳಲ್ಲಿಯೇ ಅವರು ಕೆನರಾ ವೆಲಫೇರ್ ಸಂಸ್ಥೆಯದ್ದೇ ಆದ ಹೈಸ್ಕೂಲಿಗೆ ಶಿಕ್ಷಕರಾಗಿ ನೇಮಕಗೊಂಡು ದಾಂಡೇಲಿಗೆ ವರ್ಗಾವಣೆಯಾದರು. ಆ ಬಳಿಕ ಎಸ್.ಆರ್. ಉಡುಪಿ ಎಂಬ ಗ್ರಂಥಾಲಯ ವಿಜ್ಞಾನ ಪದವೀಧರರು ಇಲ್ಲಿ ನೇಮಕಗೊಂಡು ಸುದೀರ್ಘಕಾಲ ಗ್ರಂಥಾಲಯ ಆಡಳಿತವನ್ನು ಸಮರ್ಥವಾಗಿ ನಡೆಸಿದರು. ವಿದ್ಯಾರ್ಥಿ ಸಮುದಾಯದಲ್ಲಿ ಬಹು ಸಂಖ್ಯೆಯ ನಾಡವರು, ಕೊಂಕಣಿಗರು, ನಾಮಧಾರಿಗಳು, ಸ್ವಲ್ಪ ಪ್ರಮಾಣದಲ್ಲಿ ಹಾಲಕ್ಕಿಗಳು, ಕ್ರೈಸ್ತರು, ಮುಸ್ಲಿಂರು, ದಲಿತರು ಓದುತ್ತಿದ್ದರು. ಆರ್ಥಿಕ ಅಭಿವೃದ್ಧಿ ಹೊಂದಿರದ ಅಂದಿನ ಸಾಮಾಜಿಕ ಜೀವನದ ಪರಿಣಾಮ ವಿದ್ಯಾರ್ಥಿಗಳ ವೇಷ ಭೂಷಣಗಳಲ್ಲಿಯೇ ಸ್ಪಷ್ಟವಾಗಿ ಗೋಚರಿಸುತ್ತಿತ್ತು. ಇನ್ನೂ ಸ್ಪಷ್ಟವಾಗಿ ಹೇಳಬಹುದೆಂದರೆ ಆರ್ಥಿಕ ಅನುಕೂಲತೆಯ ಕುಟುಂಬದ ಮಕ್ಕಳು ‘ಫುಲ್ ಪ್ಯಾಂಟ್’ ಧರಿಸಿ ಬರುತ್ತಿದ್ದರೆ, ಆರ್ಥಿಕ ಅನಾನುಕೂಲವಿದ್ದ ಕುಟುಂಬದ ಮಕ್ಕಳು ‘ಹಾಪ್ ಪ್ಯಾಂಟ್’ ಧರಿಸಿಯೇ ಕಾಲೇಜು ಪ್ರವೇಶಿಸಿದ್ದರು. ನಾನು, ನನ್ನ ಗೆಳೆಯರೆಲ್ಲ ಈ ಎರಡನೆಯ ದರ್ಜೆಯವರೇ ಆಗಿದ್ದು ಹಾಪ್ ಪ್ಯಾಂಟ್ ಧಾರಿಗಳಾಗಿ ಕಾಲೇಜಿನ ಮೆಟ್ಟಿಲೇರುತ್ತಿದ್ದಂತೆ ದಿಗಿಲುಗೊಂಡದ್ದು ಸಹಜ. ಹಿಂದಿನ ಎಲ್ಲ ಶಾಲೆ ಹೈಸ್ಕೂಲುಗಳಿಂದ ತೀರ ಭಿನ್ನವೇ ಆದಂತಿರುವ ಶಿಕ್ಷಣ ವ್ಯವಸ್ಥೆಗೆ ನಮ್ಮನ್ನು ಹೊಂದಿಸಿಕೊಳ್ಳುವುದಕ್ಕೆ ಬಹುಕಾಲವೇ ಬೇಕಾಯಿತು. ಅದರಲ್ಲಿಯೂ ಇಂಗ್ಲೀಷ್ ಭಾಷೆಯ ಅಲ್ಪ ಸ್ವಲ್ಪ ಅರಿವಿನಲ್ಲೇ ಪಿ.ಯು ಪರೀಕ್ಷೆ ಹೇಗೋ ದಾಟಿ ಬಂದ ನಮಗೆಲ್ಲ ಇಂಗ್ಲಿಷ್ ಮಾಧ್ಯಮದ ಪಾಠ ಪ್ರವಚನಗಳು ಅಕ್ಷರಶಃ ಗಾಬರಿ ಹುಟ್ಟಿಸಿದ್ದವ ಒಂದೊಂದು ತರಗತಿಯಲ್ಲಿ ತುಂಬಿ ತುಳುಕುವ ವಿದ್ಯಾರ್ಥಿ ಸಮುದಾಯ ಸೂಟು-ಬೂಟುಗಳಲ್ಲಿ ಗಂಭೀರವಾಗಿ ತರಗತಿಗಳನ್ನು ಪ್ರವೇಶಿಸಿ ನಿರರ್ಗಳವಾಗಿ ಇಂಗ್ಲೀಷ್ ಮಾಧ್ಯಮದಲ್ಲಿ (ಕನ್ನಡ ವಿಷಯ ಹೊರತಾಗಿ) ಉಪನ್ಯಾಸ ನೀಡುವ ಅಧ್ಯಾಪಕರ ವಾಗ್ ವೈಭವಕ್ಕೆ ಬೆರಗಾಗುತ್ತ ಹಿಂದಿನ ಸಾಲಿನ ಹುಡುಗರಾಗಿ ತರಗತಿಗೆ ಬಂದ ನಮ್ಮ ಗೆಳೆಯರ ಗುಂಪು ನಿಧಾನವಾಗಿ ಪುಸ್ತಕ ಪಾಠ ಇತ್ಯಾದಿಗಳನ್ನು ಅರಗಿಸಿಕೊಳ್ಳಲು ಪ್ರಯತ್ನಿಸುತ್ತ ಕಾಲೇಜ್ ಕ್ಯಾಂಪಸ್ ಬದುಕಿಗೆ ಹೊಂದಿಕೊಳ್ಳತೊಡಗಿದ್ದೆವು. ************************************************************* ರಾಮಕೃಷ್ಣ ಗುಂದಿ ಕನ್ನಡದ ಖ್ಯಾತ ಕತೆಗಾರ. ಅವಾರಿ, ಕಡಲಬೆಳಕಿನ ದಾರಿ ಗುಂಟ, ಅತಿಕ್ರಾಂತ, ಸೀತೆ ದಂಡೆ ಹೂವೇ …ಈ ನಾಲ್ಕು ಅವರ ಕಥಾ ಸಂಕಲನಗಳು. ಅವರ ಸಮಗ್ರ ಕಥಾ ಸಂಕಲನ ಸಹ ಈಚೆಗೆ ಪ್ರಕಟವಾಗಿದೆ.‌ಯಕ್ಷಗಾನ ಕಲಾವಿದ.‌ ಕನ್ನಡ ಉಪನ್ಯಾಸಕರಾಗಿ ಅಂಕೋಲಾದ ಜೆ.ಸಿ.ಕಾಲೇಜಿನಲ್ಲಿ ಸೇವೆ ಪ್ರಾರಂಭಿಸಿ, ಕಾರವಾರದ ದಿವೇಕರ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ. ಯಕ್ಷಗಾನ ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಮಗ ಅಮೆರಿಕಾದಲ್ಲಿ ಸಾಫ್ಟ್‌ವೇರ್ ಎಂಜಿನಿಯರ್. ಅಗೇರ ಸಮುದಾಯದಿಂದ ಬಂದ ಗುಂದಿ ಅವರು ಅದೇ ಜನಾಂಗದ ಬಗ್ಗೆ ಪಿಎಚ್ಡಿ ಪ್ರಬಂಧ ಮಂಡಿಸಿ, ಡಾಕ್ಟರೇಟ್ ಸಹ ಪಡೆದಿದ್ದಾರೆ‌ . ದಲಿತ ಜನಾಂಗದ ಕಷ್ಟ ನಷ್ಟ ನೋವು, ಅವಮಾನ, ನಂತರ ಶಿಕ್ಷಣದಿಂದ ಸಿಕ್ಕ ಬೆಳಕು ಬದುಕು ಅವರ ಆತ್ಮಕಥನದಲ್ಲಿದೆ. ಮರಾಠಿ ದಲಿತ ಸಾಹಿತಿಗಳ,‌ಲೇಖಕರ ಒಳನೋಟ , ಕನ್ನಡ ನೆಲದ ದಲಿತ ಧ್ವನಿಯಲ್ಲೂ ಸಹ ಇದೆ.‌ ರಾಮಕೃಷ್ಣ ಗುಂದಿ ಅವರ ಬದುಕನ್ನು ಅವರ ಆತ್ಮಕಥನದ ಮೂಲಕವೇ ಕಾಣಬೇಕು. ಅಂತಹ ನೋವಿನ ಹಾಗೂ ಬದುಕಿನ‌ ಚಲನೆಯ ಆತ್ಮಕಥನವನ್ನು ಸಂಗಾತಿ ..ಓದುಗರ ಎದುರು, ‌ಕನ್ನಡಿಗರ ಎದುರು ಇಡುತ್ತಿದೆ

Read Post »

ಅಂಕಣ ಸಂಗಾತಿ, ಕೇರಿ ಕೊಪ್ಪಗಳ ನಡುವೆ

ನಾಡು ಮಾಸ್ಕೇರಿಯಿಂದ ನಾನು, ಹಾರು ಮಾಸ್ಕೇರಿಯ ಕುಪ್ಪಯ್ಯ ಗೌಡ, ಮುಕುಂದ ಪ್ರಭು, ಗಂಗಾವಳಿಯ ಯುಸೂಫ್, ಸದಾನಂದ ಕೂರ್ಲೆ, ಬಾವಿಕೊಡ್ಲಿನ ರಮೇಶ ಗೌಡ ಮೊದಲಾಗಿ ಆರೆಂಟು ಜನ ಸೇರಿ ದಿನವೂ ಕಾಲ್ನಡಿಗೆಯಲ್ಲೇ ಗೋಕರ್ಣಕ್ಕೆ ಹೋಗಿ ಬರುತ್ತಿದ್ದೆವು.

Read Post »

ಅಂಕಣ ಸಂಗಾತಿ, ಕೇರಿ ಕೊಪ್ಪಗಳ ನಡುವೆ

ಅಂಕಣ ಬರಹ . ರಾಮಕೃಷ್ಣ ಗುಂದಿ ಅವರ ಆತ್ಮಕಥೆ—21 ಆತ್ಮಾನುಸಂಧಾನ ವಿದ್ಯಾರ್ಥಿ ನಿಲಯದಲ್ಲಿ ಪ್ರಪ್ರಥಮ ರಂಗಪ್ರವೇಶ ಅಂಕೋಲೆಯ ಲಕ್ಷ್ಮೇಶ್ವರ ಭಾಗದ ವಿದ್ಯಾರ್ಥಿ ನಿಲಯದಲ್ಲಿ ಮೊದಲ ಮಳೆಗಾಲ ಕಳೆದಿತ್ತು. ನವೆಂಬರ್ ತಿಂಗಳಲ್ಲಿ ವಿದ್ಯಾರ್ಥಿ ನಿಲಯವು ಅಂಬಾರಕೊಡ್ಲ ರಸ್ತೆಗೆ ಹೊಂದಿಕೊಂಡಿದ್ದ ಎರಡಂತಸ್ತಿನ ಕಟ್ಟಡಕ್ಕೆ ಸ್ಥಳಾಂತರಗೊಂಡಿತು. ವಿಶಾಲವಾದ ಕಂಪೌಂಡಿನಲ್ಲಿರುವ ಕಟ್ಟಡದ ನೆಲ ಅಂತಸ್ತಿನಲ್ಲಿ ಸಾಕಷ್ಟು ವಿಶಾಲವಾದ ಕೋಣೆಗಳು, ಮೊದಲ ಮಹಡಿಯಲ್ಲಿಯೂ ಅಷ್ಟೇ ವಿಶಾಲ ಕೋಣೆಗಳು ತುಂಬಾ ಅನುಕೂಲಕರವಾಗಿದ್ದವು. ಈ ಕಟ್ಟಡದ ಮಾಲಿಕರು ಯಾರೋ ನಮಗೆ ತಿಳಿದಿರಲಿಲ್ಲ. ಆದರೆ ಬಹುಕಾಲದಿಂದ ಈ ಭವ್ಯ ಬಂಗಲೆ ಯಂಥ ಮನೆಯಲ್ಲಿ ಯಾರೂ ವಾಸಿಸುತ್ತಿರಲಿಲ್ಲ. ಸುತ್ತ ಮುತ್ತಲ ಮನೆಯವರು ಇದು ‘ಭೂತ ಬಂಗಲೆ….. ಅಲ್ಲಿ ದೆವ್ವಗಳ ಕಾಟವಿದೆ…’ ಇತ್ಯಾದಿ ಮಾತನಾಡಿಕೊಳ್ಳುತ್ತಿದ್ದರು. ನಾವು ಬಂದು ನೆಲೆಸಿದ ಕೆಲದಿನಗಳವರೆಗೆ ನಮಗೂ ಅಂಥ ಭ್ರಮೆಯ ಅನುಭವಗಳೂ ಆದವು. ಮಧ್ಯರಾತ್ರಿಯ ನಂತರ ಯಾರೋ ಮಹಡಿಯ ಮೇಲೆ ನಡೆದಾಡಿದ… ಏನೋ ಮಾತಾಡಿದ ಸಪ್ಪಳ ಕೇಳಿ ಬಂತಾದರೂ ಕೆಲವೇ ದಿನಗಳಲ್ಲಿ ನಾವು ಅದಕ್ಕೆ ಹೊಂದಿಕೊಳ್ಳುತ್ತ ಕ್ರಮೇಣ ಮರೆತೇ ಬಿಟ್ಟೆವು. (ಈಗ ಅದೇ ಕಟ್ಟಡವನ್ನು ಬೇರೆ ಯಾರೋ ಕೊಂಡು ನವೀಕರಿಸಿ ‘ಹರ್ಷ ನಿವಾಸ’ ಎಂದು ಹೆಸರಿಟ್ಟು ವಾಸಿಸುತ್ತಿದ್ದಾರೆ). ನಾವು ಈ ಕಟ್ಟಡಕ್ಕೆ ಬಂದು ನೆಲೆ ನಿಂತ ಕೆಲವೇ ದಿನಗಳಲ್ಲಿ ವಸತಿನಿಲಯದ ಮೊದಲಿನ ಮೇಲ್ವಿಚಾರಕರಾಗಿದ್ದ ‘ಮಾಜಾಳಿಕರ’ ಎಂಬುವವರು ವರ್ಗವಾಗಿ ಬೇರೆ ಮೇಲ್ವಿಚಾರಕರು ಆಗಮಿಸಿದರು. ಹೊಸದಾಗಿ ನಮ್ಮ ವಸತಿನಿಲಯದ ಮೇಲ್ವಿಚಾರಕರಾಗಿ ಆಗಮಿಸಿದ ಲಿಂಗು ಹುಲಸ್ವಾರ ಎಂಬುವವರು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತುಂಬಾ ಆಸಕ್ತಿ ಹೊಂದಿದ್ದರು. ಮೂಲತಃ ಕಾರವಾರದವರಾದ ಲಿಂಗು ಹುಲಸ್ವಾರ ತಮ್ಮ ಯುವ ಸ್ನೇಹಿತರ ಸಂಘಟನೆ ಮಾಡಿಕೊಂಡು ಕಾರವಾರದಲ್ಲಿ ರಂಗ ಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿ ಇದ್ದವರು. ಅವರು ನಮ್ಮ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಲ್ಲಿ ರಂಗಾಸಕ್ತಿಯನ್ನು ಪ್ರೇರೆಪಿಸುವುದಕ್ಕಾಗಿ ಇಲ್ಲಿಯೂ ನಾಟಕವೊಂದನ್ನು ಆಡಿಸುವ ಆಸಕ್ತಿ ತೋರಿದರು. ಆದರೆ ಹಾಸ್ಟೆಲಿನ ಯಾವ ವಿದ್ಯಾರ್ಥಿಯೂ ಈ ಹಿಂದೆ ನಾಟಕಗಳಲ್ಲಿ ಅಭಿನಯಿಸಿದ ಅನುಭವ ಹೊಂದಿರಲಿಲ್ಲ. ಆದರೂ ಲಿಂಗು ಹುಲಸ್ವಾರ ಅವರು ಅಲ್ಪಸ್ವಲ್ಪ ಪ್ರತಿಭೆ ಮತ್ತು ಅಭಿನಯದ ಆಸಕ್ತಿಯುಳ್ಳ ವಿದ್ಯಾರ್ಥಿಗಳನ್ನು ಆಯ್ದು ತರಬೇತಿ ನೀಡುವ ಸಂಕಲ್ಪ ಮಾಡಿದರು. ಕಾರವಾರದ ತಮ್ಮ ಪರಿಚಯದ ಕೆಲವು ಯುವಕರನ್ನು ಕರೆಸಿಕೊಂಡು ನಾಟಕ ನಿರ್ದೇಶನದ ನೆರವು ಪಡೆದರು. ಹಾಸ್ಟೆಲಿನ ಆಯ್ದ ವಿದ್ಯಾರ್ಥಿಗಳ ತಂಡ ‘ಸಂಸಾರ’ ಎಂಬ ಸಾಮಾಜಿಕ ನಾಟಕವೊಂದನ್ನು ಪ್ರಯೋಗಿಸುವುದೆಂದು ತೀರ್ಮಾನವಾಯಿತು. ನನ್ನ ನೆನಪಿನಲ್ಲಿ ಉಳಿದಿರುವಂತೆ ಲಿಂಗು ಹುಲಸ್ವಾರ ಅವರೇ ನಾಟಕದ ಮುಖ್ಯ ಪಾತ್ರ ನಿರ್ವಹಿಸಿದ್ದರು. ಉಳಿದಂತೆ ನಾಗೇಶದೇವ ಅಂಕೋಲೆಕರ, ಲಕ್ಷ್ಮಣ ಹುಲಸ್ವಾರ, ಶಂಕರ ಹುಲಸ್ವಾರ, ಹುಲಿಯಪ್ಪ ನಾಯ್ಕ, ನಾರಾಯಣ ವೆಂಕಣ್ಣ ಆಗೇರ, ಲೋಕಪ್ಪ ಬರ‍್ಕರ್ ಮುಂತಾದವರು ನಾಟಕದಲ್ಲಿ ಪಾತ್ರ ನಿರ್ವಹಿಸಿದ್ದರು. ನನಗೆ ಒಂದು ಹಾಸ್ಯ ಸ್ತ್ರೀ ಪಾತ್ರದಲ್ಲಿ ಅಭಿನಯಿಸುವ ಅವಕಾಶ ನೀಡಿದ್ದರು. ಮಾರುತೇಶ ಬಾಬು ಮಾಂಡ್ರೆ ಎಂಬುವವರು ಬರೆದ ‘ಸಂಸಾರ’ ಎಂಬ ಸಾಮಾಜಿಕ ನಾಟಕವನ್ನು ಬನವಾಸಿಯಲ್ಲಿ ನಾನು ಮೂರನೆಯ ತರಗತಿಯಲ್ಲಿ ಓದುತ್ತಿರುವಾಗ ಗಮನಿಸಿದ್ದೆ. ಬನವಾಸಿಯಲ್ಲಿ ನಮ್ಮ ಗುರುಗಳಾದ ಪಿ.ಜಿ. ಪಾತಃಕಾಲ ಎಂಬುವವರ ನಾಯಕತ್ವದಲ್ಲಿ ಪ್ರಯೋಗಗೊಂಡ ‘ಸಂಸಾರ’ ನಾಟಕದಲ್ಲಿ ನಮ್ಮ ತಂದೆಯವರು ಮುಖ್ಯ ಸ್ತ್ರೀ ಪಾತ್ರಧಾರಿಯಾಗಿದ್ದರು ಎಂಬುದನ್ನು ಹಿಂದೆ ಪ್ರಸ್ತಾಪಿಸಿದ್ದೇನೆ. ಈ ನಾಟಕವು ಅಲ್ಲಿ ಜನಾಗ್ರಹದ ಮೂಲಕ ಎರಡು-ಮೂರು ಬಾರಿ ಪ್ರಯೋಗಗೊಂಡಿತ್ತು. ಹೀಗಾಗಿ ಪ್ರಸ್ತುತ ನಾಟಕದ ಸ್ಥೂಲ ಚಿತ್ರಣವೊಂದು ನನ್ನ ಮನಸ್ಸಿನ ಮೂಲೆಯಲ್ಲಿ ಸುಪ್ತವಾಗಿತ್ತು. ಇಷ್ಟಾಗಿಯೂ ನಾನು ಮೊಟ್ಟ ಮೊದಲ ಬಾರಿಯ ಸ್ತ್ರೀ ಪಾತ್ರ ನಿರ್ವಹಣೆಯಲ್ಲಿ ಸಫಲನಾಗಲಿಲ್ಲ ಎಂಬುದು ನಿಜ. ಮೂಲಭೂತವಾಗಿ ನನ್ನೊಳಗಿರುವ ಸಭಾ ಕಂಪ ಮತ್ತು ಕೀಳರಿಮೆಯ ಕಾರಣದಿಂದ ಅಂಜುತ್ತಲೇ ರಂಗ ಪ್ರವೇಶಿಸಿದ ನಾನು ಸಂದರ್ಭಕ್ಕೆ ಸರಿಯಾಗಿ ಕಂಠಪಾಠ ಮಾಡಿದ ಸಂಭಾಷಣೆಗಳನ್ನು ಒಪ್ಪಿಸಿದ್ದಲ್ಲದೆ ಹಾಸ್ಯ ಪಾತ್ರಕ್ಕೆ ತಕ್ಕಂತೆ ನಟಿಸುವುದು ಸಾಧ್ಯವೇ ಆಗಿರಲಿಲ್ಲ. ಬಹುತೇಕ ನನ್ನ ಸ್ನೇಹಿತರು ಕೂಡ ನನ್ನಂತೆಯೇ ಅಳುಕಿನಿಂದಲೇ ರಂಗ ಪ್ರವೇಶದ ಮೊದಲ ಅನುಭವ ಪಡೆದರಲ್ಲದೆ ನಾಟಕದ ಪಠ್ಯಕ್ಕೆ ನ್ಯಾಯ ನೀಡಲಾಗದೆ ಒಟ್ಟಾರೆ ನಾಟಕವು ಸಾಮಾನ್ಯ ರಂಗ ಪ್ರಯೋಗವಾಗಿಯೇ ಪ್ರದರ್ಶನಗೊಂಡಿತು. ವಿದ್ಯಾರ್ಥಿ ನಿಲಯದ ಎರಡು ವರ್ಷಗಳನ್ನು ಕಳೆಯುವಾಗ ನಾರಾಯಣ ವೆಂಕಣ್ಣ ಆಗೇರ ತನ್ನ ಎಸ್.ಎಸ್.ಎಲ್.ಸಿ ಪರೀಕ್ಷೆ ಮುಗಿಸಿದ ಕಾರಣ ಊರಲ್ಲಿಯೇ ಉಳಿದ. ತನ್ನ ತಂದೆ ತೀರಿಕೊಂಡುದರಿಂದ ಊರಿಗೆ ಹೋದ ಕೃಷ್ಣ ಆಗೇರ ಮರಳಿ ವಿದ್ಯಾರ್ಥಿ ನಿಲಯಕ್ಕೆ ಬಾರದೆ ಹನೇಹಳ್ಳಿಯ ಹೈಸ್ಕೂಲು ಸೇರಿಕೊಂಡ. ಉಳಿದ ನಾವು ಕೂಡ ವಿದ್ಯಾರ್ಥಿ ನಿಲಯದ ಆಶ್ರಯದಿಂದ ಹೊರಬಂದು ಮತ್ತೆ ನಮ್ಮ ನಮ್ಮ ಮನೆ ಸೇರಿಕೊಂಡು ಅಲ್ಲಿಂದಲೇ ಓದು ಮುಂದುವರಿಸಿದೆವು. ****************************************** ರಾಮಕೃಷ್ಣ ಗುಂದಿ ಕನ್ನಡದ ಖ್ಯಾತ ಕತೆಗಾರ. ಅವಾರಿ, ಕಡಲಬೆಳಕಿನ ದಾರಿ ಗುಂಟ, ಅತಿಕ್ರಾಂತ, ಸೀತೆ ದಂಡೆ ಹೂವೇ …ಈ ನಾಲ್ಕು ಅವರ ಕಥಾ ಸಂಕಲನಗಳು. ಅವರ ಸಮಗ್ರ ಕಥಾ ಸಂಕಲನ ಸಹ ಈಚೆಗೆ ಪ್ರಕಟವಾಗಿದೆ.‌ಯಕ್ಷಗಾನ ಕಲಾವಿದ.‌ ಕನ್ನಡ ಉಪನ್ಯಾಸಕರಾಗಿ ಅಂಕೋಲಾದ ಜೆ.ಸಿ.ಕಾಲೇಜಿನಲ್ಲಿ ಸೇವೆ ಪ್ರಾರಂಭಿಸಿ, ಕಾರವಾರದ ದಿವೇಕರ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ. ಯಕ್ಷಗಾನ ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಮಗ ಅಮೆರಿಕಾದಲ್ಲಿ ಸಾಫ್ಟ್‌ವೇರ್ ಎಂಜಿನಿಯರ್. ಅಗೇರ ಸಮುದಾಯದಿಂದ ಬಂದ ಗುಂದಿ ಅವರು ಅದೇ ಜನಾಂಗದ ಬಗ್ಗೆ ಪಿಎಚ್ಡಿ ಪ್ರಬಂಧ ಮಂಡಿಸಿ, ಡಾಕ್ಟರೇಟ್ ಸಹ ಪಡೆದಿದ್ದಾರೆ‌ . ದಲಿತ ಜನಾಂಗದ ಕಷ್ಟ ನಷ್ಟ ನೋವು, ಅವಮಾನ, ನಂತರ ಶಿಕ್ಷಣದಿಂದ ಸಿಕ್ಕ ಬೆಳಕು ಬದುಕು ಅವರ ಆತ್ಮಕಥನದಲ್ಲಿದೆ. ಮರಾಠಿ ದಲಿತ ಸಾಹಿತಿಗಳ,‌ಲೇಖಕರ ಒಳನೋಟ , ಕನ್ನಡ ನೆಲದ ದಲಿತ ಧ್ವನಿಯಲ್ಲೂ ಸಹ ಇದೆ.‌ ರಾಮಕೃಷ್ಣ ಗುಂದಿ ಅವರ ಬದುಕನ್ನು ಅವರ ಆತ್ಮಕಥನದ ಮೂಲಕವೇ ಕಾಣಬೇಕು. ಅಂತಹ ನೋವಿನ ಹಾಗೂ ಬದುಕಿನ‌ ಚಲನೆಯ ಆತ್ಮಕಥನವನ್ನು ಸಂಗಾತಿ ..ಓದುಗರ ಎದುರು, ‌ಕನ್ನಡಿಗರ ಎದುರು ಇಡುತ್ತಿದೆ

Read Post »

ಅಂಕಣ ಸಂಗಾತಿ, ಕೇರಿ ಕೊಪ್ಪಗಳ ನಡುವೆ

ಅಂಕಣ ಬರಹ . ರಾಮಕೃಷ್ಣ ಗುಂದಿ ಅವರ ಆತ್ಮಕಥೆ—20 ಆತ್ಮಾನುಸಂಧಾನ ಸಂಸ್ಕೃತವನ್ನು ಓದಗೊಡದ ಸಂಸ್ಕೃತ ಮೇಷ್ಟ್ರು ನಾನು ‘ಜೈಹಿಂದ್’ ಹೈಸ್ಕೂಲು ವಿದ್ಯಾರ್ಥಿಯಾಗಿ ಪ್ರವೇಶ ಪಡೆದ ಬಳಿಕ ವಿಷಯ ಆಯ್ಕೆಯ ಸಂದರ್ಭದಲ್ಲಿ ಒಂದು ತಪ್ಪು ಮಾಡಿದೆ. ಬಾಲ್ಯದಿಂದಲೂ ಯಕ್ಷಗಾನದ ಪ್ರಭಾವಕ್ಕೆ ಪಕ್ಕಾಗುವ ವಾತಾವರಣದಲ್ಲಿ ಬೆಳೆದ ನಾನು ಹಿರಿಯ ಅರ್ಥಧಾರಿಗಳು ಅರ್ಥ ಹೇಳುವಾಗ ಮಾತಿನ ಮಧ್ಯೆ ಅಲ್ಲಲ್ಲಿ ಬಳಸುವ ಸಂಸ್ಕೃತ ಶ್ಲೋಕಗಳನ್ನು ಕೇಳುವಾಗ ಅದು ತುಂಬ ಅದ್ಭುತವೆನ್ನಿಸುತ್ತಿತ್ತು. ಇಂಥ ಸಂಸ್ಕೃತ ಉಕ್ತಿಗಳನ್ನು ಮಾತಿನ ಮಧ್ಯೆ ಬಳಸುವವರು ತುಂಬಾ ಜಾಣರು, ಬಹಳಷ್ಟು ಓದಿಕೊಂಡ ಬುದ್ಧಿವಂತರು ಎಂದು ಬಲವಾಗಿ ನಂಬಿಕೊಂಡಿದ್ದೆ. ಇದರಿಂದಾಗಿ ಸಂಸ್ಕೃತ ಭಾಷೆಯ ಕುರಿತು ಗಂಭೀರವಾದ ವ್ಯಾಮೋಹವೊಂದು ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ ನನ್ನೊಳಗೆ ಜಾಗೃತವಾಗುತ್ತಿತ್ತು. ಮತ್ತು ಸಂಸ್ಕೃತ ಸುಲಭ ಓದಿಗೆ ದಕ್ಕುವ ವಿಷಯವಲ್ಲದೆಯೂ ಹೆಚ್ಚಿನ ಅಂಕಗಳನ್ನು ಪರೀಕ್ಷೆಯಲ್ಲಿ ಪಡೆಯುವುದು ಸಾಧ್ಯ ಎಂಬ ಗೆಳೆಯರ ನಡುವಿನ ವದಂತಿಯನ್ನು ನಿಜವೆಂದು ನಂಬಿ ಎಂಟನೆ ತರಗತಿಗೆ ವಿಷಯ ಆಯ್ಕೆಯ ಸಂದರ್ಭದಲ್ಲಿ ಸಂಸ್ಕೃತವನ್ನು ಎರಡನೆಯ ಭಾಷೆಯಾಗಿ ಆಯ್ಕೆ ಮಾಡಿಕೊಂಡೆ. ಆದರೆ ತರಗತಿಗಳು ಆರಂಭವಾದ ಬಳಿಕ ಸಂಸ್ಕೃತ ವಿಷಯ ಆಯ್ಕೆಯ ನನ್ನ ಒಲವು ತಪ್ಪು ಎಂಬುದರ ಅರಿವಾಗತೊಡಗಿತು. ನಾನು ನನ್ನೆಲ್ಲ ಪಠ್ಯಗಳ ಜೊತೆಯಲ್ಲಿ ಸಂಸ್ಕೃತ ಪಠ್ಯವನ್ನು ಖರೀದಿಸಿ ತರಗತಿಗೆ ಹೋಗಲಾರಂಭಿಸಿದೆ. ಆದರೆ ಅದು ಏಕೋ ಸಂಸ್ಕೃತ ತರಗತಿಯಲ್ಲಿ ನನ್ನ ಉಪಸ್ಥಿತಿ ನಮ್ಮ ತರಗತಿಯ ಸಂಸ್ಕೃತ ಮೇಷ್ಟ್ರಿಗೆ ಹಿತವಾಗಿ ಕಾಣಲಿಲ್ಲ. ಬಹುತೇಕ ಬ್ರಾಹ್ಮಣ, ಗೌಡ, ಸಾರಸ್ವತ ಬ್ರಾಹ್ಮಣ ಇತ್ಯಾದಿ ಮೇಲ್ಜಾತಿಯ ಬೆಳ್ಳುಂಬೆಳಗಿನ ವಿದ್ಯಾರ್ಥಿ ಸಮುದಾಯದ ನಡುವೆ ಕಪ್ಪು ಬಣ್ಣದ ಒಬ್ಬನೇ ಒಬ್ಬ ವಿದ್ಯಾರ್ಥಿ ಇಡಿಯ ತರಗತಿಗೆ ಕಳಂಕದ ‘ಕಪ್ಪು ಚುಕ್ಕೆ’ ಎಂಬಂತೆ ನಮ್ಮ ಗುರುಗಳ ಕಣ್ಣಿಗೆ ಕಂಡಿರಬೇಕು. ಅವರು ತರಗತಿಯಲ್ಲಿ ತುಂಬ ವಿಶಿಷ್ಟವೆನ್ನಿಸುವ ದೃಷ್ಟಿಯಲ್ಲಿ ನನ್ನನ್ನು ನೋಡತೊಡಗಿದರು. ಅವರು ನನ್ನೆಡೆಗೆ ಬೀರುವ ನೋಟದಲ್ಲಿಯೇ “ಎಲಾ ಶೂದ್ರ ಮುಂಡೇದೆ ನೀನೂ ಸಂಸ್ಕೃತವ ಕಲೀತಿಯೇನೋ…?” ಎಂಬ ತಿರಸ್ಕಾರದ ದೃಷ್ಟಿ ಇರುವುದು ನನ್ನ ಅರಿವಿಗೆ ನಿಲುಕಲಿಲ್ಲ. “ಈ ಶೂದ್ರನಿಗೆ ಸಂಸ್ಕೃತವನ್ನು ಹೇಳಿಕೊಟ್ಟು ತಾನು ಪೂಜ್ಯ ಮನು ಮಹರ್ಷಿಯ ಘನ ಶಾಪಕ್ಕೆ ಪಕ್ಕಾದೆನಲ್ಲಾ…” ಎಂಬ ಅವರೊಳಗಿನ ಚಡಪಡಿಕೆಯನ್ನು ಅರ್ಥ ಮಾಡಿಕೊಳ್ಳುವ ಬುದ್ಧವಂತಿಕೆಯೂ ಅಂದು ನನಗಿರಲಿಲ್ಲ. ಈ ಶ್ರೀಪಾದರೆಂಬ ಸಂಸ್ಕೃತ ಶಿಖಾಮಣಿಗಳು ನಾನು ಸಂಸ್ಕೃತವನ್ನು ಬಿಟ್ಟು ಬಿಡುವಂತೆ ಬಾಯಿಬಿಟ್ಟು ಹೇಳಲಾಗದ ಸಂಕಟಕ್ಕೆ ವಾಮ ಮಾರ್ಗವೊಂದನ್ನು ಹಿಡಿದರು. ಚಡಪಡಿಕೆ ಸಂಕಟಗಳ ನಡುವೆಯೇ ಸಂಸ್ಕೃತ ವಚನ ವಿಭಕ್ತಿಗಳ ಕುರಿತು ಪಾಠ ಆರಂಭಿಸಿ ಸಂಸ್ಕೃತದಲ್ಲಿರುವ ಏಕವಚನ, ದ್ವಿವಚನ, ಬಹುವಚನಗಳನ್ನು ತಿಳಿಸಿ ನಾಮಪದ, ಸರ್ವನಾಮಗಳನ್ನು ಮೂರು ವಚನಗಳಲ್ಲಿ ಮತ್ತು ಸಂಸ್ಕೃತದ ಎಂಟು ವಿಭಕ್ತಿಗಳಲ್ಲಿ ರೂಪಾಂತರಿಸಿ ನಡೆಸಲು ಶ್ರುತಿ ಸ್ಮೃತಿ ಪರಂಪರೆಯ ಮೂಲಕ ಗುರುಕುಲದ ವಿದ್ಯಾಭ್ಯಾಸಕ್ಕೆ ಅನುಕೂಲಕರವಾಗಿ ಬಳಸಿದ,“ರಾಮಃ ರಾಮೌ ರಾಮಾಃ…” (ರಾಮ, ಇಬ್ಬರು ರಾಮರು, ಅನೇಕ ರಾಮರು) ಇತ್ಯಾದಿ ಉದಾಹರಣೆಯ ಶ್ಲೋಕ ಮಾದರಿಯೊಂದನ್ನು ಕಂಠಪಾಠ ಮಾಡಲು ತಿಳಿಸಿದರು. ಮತ್ತು ಮರುದಿನವೇ ಪಾಠ ಒಪ್ಪಿಸಲು ತಾಕೀತು ಮಾಡಿದ್ದರು. ವಸತಿ ನಿಲಯದ ನಿರ್ಜನ ಮೂಲೆಯಲ್ಲಿ, ಆಟದ ಬಯಲಿನಲ್ಲಿ, ಸ್ನಾನಕ್ಕೆ ನಿಂತಾಗಲೂ ಈ “ರಾಮಃ ರಾಮೌ…” ಪಠ್ಯ ಹಿಡಿದು ಕಂಠಪಾಠ ಮಾಡಿದೆ. ಆದರೆ ತರಗತಿಯಲ್ಲಿ ಗುರುಗಳು ನನ್ನನ್ನೆ ಎದ್ದು ನಿಲ್ಲಿಸಿ ಪಾಠ ಒಪ್ಪಿಸಲು ತಿಳಿಸಿದಾಗ ಒಂದಕ್ಷರವೂ ನನ್ನ ಬಾಯಿಂದ ಹೊರ ಬಾರದೆ ನಗೆಪಾಟಲಾದೆ. ಗುರುಗಳು ಇದನ್ನೇ ಅಸ್ತçವಾಗಿ ನಿತ್ಯವೂ ಬಳಸತೊಡಗಿದರು. ಅದೇನೋ ಹೇಳುವಂತೆ “ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ” ಪ್ರಯೋಗಿಸುವಂತೆ ನಿಷ್ಕುರಣೆಯಿಂದ ಅಸ್ತ್ರ ಪ್ರಯೋಗ ಮಾಡಿದರು. ಅಷ್ಟಕ್ಕೆ ನಿಲ್ಲದೆ ವೈಷ್ಣವಾಸ್ತ್ರ,  ನೀಲಕಂಠಾಸ್ತ್ರಗಳನ್ನೂ ನೆರವಿಗೆ ತೆಗೆದುಕೊಂಡವರಂತೆ ಬೇರೆ ಬೇರೆ ದೃಷ್ಟಾಂತಗಳನ್ನು ಹೇಳಿ ನನ್ನನ್ನು ಹಿಂಸೆಗೀಡು ಮಾಡಿದರು. ಗುರುಗಳ ವ್ಯಂಗ್ಯೋಕ್ತಿಗಳು, ಸಹಪಾಠಿಗಳ ಅಪಹಾಸ್ಯದ ನಗುವಿನೊಡನೆ ಹತ್ತೆಂಟು ದಿನಗಳ ಕಾಲ ತೀವೃವಾದ ಹಿಂಸೆಯನ್ನು ಅನುಭವಿಸಿದೆ. ತರಗತಿ ಆರಂಭ ಆಗುತ್ತಿದ್ದಂತೆಯೇ ನನ್ನನ್ನು ಮೊದಲು ಎದ್ದು ನಿಲ್ಲಿಸುವುದು, ಹಲವು ಪ್ರಶ್ನೆಗಳನ್ನು ನನ್ನೊಬ್ಬನಿಗೇ ಕೇಳುವುದು… ಇತ್ಯಾದಿ ಆಕ್ರಮಣಗಳಿಂದ ಭಯ ನಾಚಿಕೆಯಲ್ಲಿ ನಾನು ನಿತ್ಯವೂ ಸಂಸ್ಕೃತ ತರಗತಿಯಲ್ಲಿ ಬೆವರಿಳಿದು ಬಸವಳಿಯುತಿದ್ದೆ. ಇದನ್ನು ನೋಡಿ ನೋಡಿ ಗುರುಗಳು ಹಿಂಸಾರತಿಯ ಆನಂದವನ್ನು ಅನುಭವಿಸುತ್ತಿದ್ದರು. ನನಗೆ ಸಂಸ್ಕೃತದ ಸಹವಾಸ ಸಾಕು ಅನಿಸಿತು. ಕೊಂಡು ತಂದ ಪುಸ್ತಕವನ್ನು ಸಹಪಾಠಿಯೊಬ್ಬನಿಗೆ ಅರ್ಧ ಬೆಲೆಗೆ ಮಾರಿ ಕೈತೊಳೆದುಕೊಂಡೆ. ಸಂಸ್ಕೃತವನ್ನು ಬಿಟ್ಟು ‘ಎಡಿಷನಲ್ ಕನ್ನಡ’ ಆಯ್ದುಕೊಂಡೆ ಗುರುಗಳು ನಿರಾಳವಾದರು. ಆದರೆ ಸಂಸ್ಕೃತದ ಕುರಿತಾದ ನನ್ನ ಪ್ರೀತಿ ನನ್ನೊಳಗೆ ಸುಪ್ತವಾಗಿ ಉಳಿದುಕೊಂಡಿತ್ತು. ಮುಂದೆ ಜಿ.ಸಿ. ಕಾಲೇಜಿನಲ್ಲಿ ಪದವಿ ತರಗತಿಯನ್ನು ಓದುವಾಗ ಪ್ರೊ.ಎಂ.ಪಿ.ಭಟರಲ್ಲಿ ವಿನಂತಿಸಿಕೊಂಡು ಸಂಸ್ಕೃತವನ್ನು ಮೈನರ್ ವಿಷಯವಾಗಿ ಆಯ್ದುಕೊಂಡೆ. ಮತ್ತು ಮೂರು ವರ್ಷಗಳಲ್ಲಿಯೂ ಸಂಸ್ಕೃತದಲ್ಲಿ ಪ್ರಥಮ ದರ್ಜೆಯಲ್ಲೇ ಉತ್ತೀರ್ಣನಾಗಿದ್ದೆ. ಹಾಗೆಂದು ಸಂಸ್ಕೃತದ ವಿಶೇಷ ಪಾಂಡಿತ್ಯವೇನೂ ದಕ್ಕಲಿಲ್ಲ. ಪರೀಕ್ಷೆಯಲ್ಲಿ ಕನ್ನಡದಲ್ಲಿಯೇ ಉತ್ತರಿಸುವ ಅವಕಾಶವಿದ್ದುದರಿಂದ ಹೆಚ್ಚಿನ ಅಂಕ ಗಳಿಕೆಗೆ ಪೂರಕವಾಯಿತು ಅಷ್ಟೆ. ಆದರೂ ಸಂಸ್ಕೃತದ ಒಂದಿಷ್ಟು ಕಾವ್ಯಾಭ್ಯಾಸ, ಅರಿವಿನ ವಿಸ್ತಾರವನ್ನು ಹೆಚ್ಚಿಸಿದ್ದು ನಿಜವೇ. ಯಕ್ಷಗಾನ ಕಲಾವಿದನಾಗಿ ಪಾತ್ರ ನಿರ್ವಹಿಸುವಾಗ ಒಂದಿಷ್ಟು ಶ್ಲೋಕಗಳನ್ನು ನಿರರ್ಗಳವಾಗಿ ಮಾತಿನ ಮಧ್ಯೆ ಪ್ರಯೋಗಿಸಲು ಅನುಕೂಲವಾದದ್ದು ಕೂಡ ಸಂಸ್ಕೃತದ ಕಲಿಕೆಯ ಪ್ರಯೋಜನ ಎಂಬುದನ್ನು ಮರೆಯಬಾರದು. ಅದಕ್ಕಾಗಿ ನನ್ನ ಪ್ರೀತಿಯ ಪ್ರಾಧ್ಯಾಪಕರಲ್ಲಿ ಒಬ್ಬರಾದ ಪ್ರೊ.ಎಂ.ಪಿ.ಭಟ್ ಅವರಿಗೆ ನಾನು ಸದಾ ಋಣಿಯಾಗಿರುವೆ. ********************** ರಾಮಕೃಷ್ಣ ಗುಂದಿ ಕನ್ನಡದ ಖ್ಯಾತ ಕತೆಗಾರ. ಅವಾರಿ, ಕಡಲಬೆಳಕಿನ ದಾರಿ ಗುಂಟ, ಅತಿಕ್ರಾಂತ, ಸೀತೆ ದಂಡೆ ಹೂವೇ …ಈ ನಾಲ್ಕು ಅವರ ಕಥಾ ಸಂಕಲನಗಳು. ಅವರ ಸಮಗ್ರ ಕಥಾ ಸಂಕಲನ ಸಹ ಈಚೆಗೆ ಪ್ರಕಟವಾಗಿದೆ.‌ಯಕ್ಷಗಾನ ಕಲಾವಿದ.‌ ಕನ್ನಡ ಉಪನ್ಯಾಸಕರಾಗಿ ಅಂಕೋಲಾದ ಜೆ.ಸಿ.ಕಾಲೇಜಿನಲ್ಲಿ ಸೇವೆ ಪ್ರಾರಂಭಿಸಿ, ಕಾರವಾರದ ದಿವೇಕರ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ. ಯಕ್ಷಗಾನ ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಮಗ ಅಮೆರಿಕಾದಲ್ಲಿ ಸಾಫ್ಟ್‌ವೇರ್ ಎಂಜಿನಿಯರ್. ಅಗೇರ ಸಮುದಾಯದಿಂದ ಬಂದ ಗುಂದಿ ಅವರು ಅದೇ ಜನಾಂಗದ ಬಗ್ಗೆ ಪಿಎಚ್ಡಿ ಪ್ರಬಂಧ ಮಂಡಿಸಿ, ಡಾಕ್ಟರೇಟ್ ಸಹ ಪಡೆದಿದ್ದಾರೆ‌ . ದಲಿತ ಜನಾಂಗದ ಕಷ್ಟ ನಷ್ಟ ನೋವು, ಅವಮಾನ, ನಂತರ ಶಿಕ್ಷಣದಿಂದ ಸಿಕ್ಕ ಬೆಳಕು ಬದುಕು ಅವರ ಆತ್ಮಕಥನದಲ್ಲಿದೆ. ಮರಾಠಿ ದಲಿತ ಸಾಹಿತಿಗಳ,‌ಲೇಖಕರ ಒಳನೋಟ , ಕನ್ನಡ ನೆಲದ ದಲಿತ ಧ್ವನಿಯಲ್ಲೂ ಸಹ ಇದೆ.‌ ರಾಮಕೃಷ್ಣ ಗುಂದಿ ಅವರ ಬದುಕನ್ನು ಅವರ ಆತ್ಮಕಥನದ ಮೂಲಕವೇ ಕಾಣಬೇಕು. ಅಂತಹ ನೋವಿನ ಹಾಗೂ ಬದುಕಿನ‌ ಚಲನೆಯ ಆತ್ಮಕಥನವನ್ನು ಸಂಗಾತಿ ..ಓದುಗರ ಎದುರು, ‌ಕನ್ನಡಿಗರ ಎದುರು ಇಡುತ್ತಿದೆ

Read Post »

ಅಂಕಣ ಸಂಗಾತಿ, ಕೇರಿ ಕೊಪ್ಪಗಳ ನಡುವೆ

ಸ್ವಾತಂತ್ರ್ಯದ ಪೂರ್ವಕಾಲದಲ್ಲಿಯೇ ಆರಂಭಗೊಂಡ ‘ಜೈಹಿಂದ್ ಎಜ್ಯುಕೇಶನ್ ಸೊಸೈಟಿ’ ಎಂಬ ಶಿಕ್ಷಣ ಸಂಸ್ಥೆಯು ೧೮೯೬ ರಲ್ಲಿ ಸ್ಥಾಪಿಸಿದ ‘ಎಡ್ವರ್ಡ್ ಹೈಸ್ಕೂಲು’ ಗುಣಮಟ್ಟದ ಶಿಕ್ಷಣಕ್ಕೆ ಜಿಲ್ಲೆಯಾದ್ಯಂತ ಹೆಸರುವಾಸಿಯಾಗಿತ್ತು

Read Post »

ಅಂಕಣ ಸಂಗಾತಿ, ಕೇರಿ ಕೊಪ್ಪಗಳ ನಡುವೆ

ಅಂಕಣ ಬರಹ . ರಾಮಕೃಷ್ಣ ಗುಂದಿ ಅವರ ಆತ್ಮಕಥೆ—18 ಆತ್ಮಾನುಸಂಧಾನ ಆಡುಂಬೊಲದಿಂದ ಅನ್ನದೇಗುಲಕ್ಕೆ! ನಾಡು ಮಾಸ್ಕೇರಿಯಲ್ಲಿ ಕಳೆದ ಪ್ರಾಥಮಿಕ ಶಿಕ್ಷಣದ ಕಾಲಾವಧಿ ಹಲವು ಬಗೆಯ ಜೀವನಾನುಭವಗಳಿಗೆ ಕಾರಣವಾಯಿತು. ಕೇರಿಯ ಯಾವ ಮನೆಯಲ್ಲಿ ಯಾರೂ ಹೊಟ್ಟೆ ತುಂಬ ಉಂಡೆವೆಂಬ ಸಂತೃಪ್ತಿಯನ್ನು ಕಾಣದಿದ್ದರೂ ಅಪರಿಮಿತವಾದ ಜೀವನೋತ್ಸಾಹಕ್ಕೆ ಕೊರತೆಯೆಂಬುದೇ ಇರಲಿಲ್ಲ. ಅಸ್ಪ್ರಶ್ಯತೆಯ ಬಗ್ಗಡವೊಂದು ಜಾತಿಗೇ ಅಂಟಿಕೊಂಡಿದ್ದರೂ ಅದನ್ನು ಅಷ್ಟೊಂದು ಗಂಭೀರವಾಗಿ ನಾವೆಂದೂ ಪರಿಗಣಿಸಲಿಲ್ಲ. ಊರಿನ ದೇವಾಲಯಗಳಿಗೆ ಹೋದರೆ ಕಂಪೌಂಡಿನ ಆಚೆಯೇ ನಮ್ಮ ನೆಲೆಯೆಂಬ ಅರಿವು ಮಕ್ಕಳಾದ ನಮಗೂ ಇತ್ತು. ಚಹಾದಂಗಡಿಗಳಲ್ಲಿ ಬೇಲಿಯ ಗೂಟಕ್ಕೆ ಸಿಗಿಸಿಟ್ಟ ಗ್ಲಾಸುಗಳನ್ನು ನಾವೇ ತೊಳೆದುಕೊಂಡು ಮೇಲಿಂದ ಹೊಯ್ಯುವ ಚಹಾ ಕುಡಿಯುವುದು ನಮಗೆ ಸಹಜ ಅಭ್ಯಾಸವಾಗಿತ್ತು. ಕಿರಾಣಿ ಅಂಗಡಿಗಳಲ್ಲೂ ಬೇಕಾದ ಸಾಮಾನು ಪಡೆಯಲು ಮೇಲ್ಜಾತಿಯ ಗ್ರಾಹಕರಿದ್ದರೆ ಅವರಿಂದ ಮಾರು ದೂರದ ಅಂತರವಿಟ್ಟುಕೊಂಡೇ ನಮಗೆ ಬೇಕಾದ ವಸ್ತುಗಳನ್ನು ಕೊಂಡು ಬರುವುದು ನಮಗೆ ಸಹಜ ರೂಢಿಯಾಗಿತ್ತು. ನಮ್ಮನ್ನು ಎಲ್ಲರಿಗಿಂತ ಭಿನ್ನವಾಗಿ ಪ್ರತ್ಯೇಕವಾಗಿ ಸಮಾಜವು ಪರಿಗಣಿಸುತ್ತದೆ ಎಂಬ ಅರಿವೇ ಮೂಡದ ಅಪ್ರಬುದ್ಧ ವಯಸ್ಸಿನ ಹಂತವದು. ಇದೊಂದು ಸಹಜ ಸಾಮಾಜಿಕ ಕ್ರಿಯೆ ಎಂದು ಒಪ್ಪಿಕೊಂಡಿರುವುದರಿಂದ ನಾವು ಬಹುಶಃ ಆ ದಿನಗಳಲ್ಲಿ ಯಾವುದನ್ನೂ ಪ್ರಶ್ನಿಸದೇ ನಿರಾಳವಾಗಿದ್ದುದೇ ಬಾಲ್ಯದ ಬದುಕು ಅಷ್ಟೊಂದು ಉಲ್ಲಾಸದಾಯಕವಾಗಿಯೇ ಕಳೆದು ಹೋಯಿತು. ಸಮಾನ ವಯಸ್ಸಿನ ನಾರಾಯಣ ವೆಂಕಣ್ಣ, ನಾರಾಯಣ ಮಾಣಿ, ಹೊನ್ನಪ್ಪ ವೆಂಕಣ್ಣ, ಗಣಪತಿ ಬುದ್ದು, ಕೃಷ್ಣ ಮಾಣಿ, ನಾನು ಮತ್ತು ನನ್ನ ತಮ್ಮ ನಾಗೇಶ ಎಲ್ಲರೂ ಸೇರಿ ಕಷ್ಟ ಸುಖಗಳನ್ನು ಹಂಚಿಕೊಂಡೇ ಬೆಳೆದೆವು. ಕೇರಿಯ ಎಲ್ಲರ ಮನೆಗಳಲ್ಲಿಯೂ ಕ್ಷೀಣವಾದ ಹಸಿವಿನ ಆಕ್ರಂದನವೊಂದು ಸಹಜವೆಂಬಂತೆ ನೆಲೆಸಿತ್ತು. ಹಾಗಾಗಿಯೇ ಬಹುಶಃ ನಮ್ಮ ಗೆಳೆಯರ ಬಳಗ ನಿತ್ಯವೂ ಹೊರಗೆ ಏನನ್ನಾದರೂ ತಿಂದು ಖಾಲಿ ಹೊಟ್ಟಗೆ ಕೆಲಸ ಕೊಡುವ ತವಕದಲ್ಲಿಯೇ ಇರುತ್ತಿತ್ತು. ಬೆಳೆದು ನಿಂತ ಯಾರದೋ ಶೇಂಗಾ ಗದ್ದೆಗಳಲ್ಲಿನ ಶೇಂಗಾ ಗಿಡಗಳನ್ನು ಕಿತ್ತು ತಂದು ಸುಟ್ಟು ತಿನ್ನುವುದಾಗಲಿ, ಗೆಣಸಿನ ಹೋಳಿಗಳಿಂದ ಗೆಣಸು ಕಿತ್ತು ಬೇಯಿಸಿ ತಿನ್ನುವುದಾಗಲಿ, ಕೊಯ್ಲಿಗೆ ಬಂದ ಭತ್ತದ ಕದಿರನ್ನು ಕೊಯ್ದು ತಂದು ಹುರಿದು ಕುಟ್ಟಿ ಅವಲಕ್ಕಿ ಮಾಡಿ ಮೇಯುವುದಾಗಲಿ, ಗೇರು ಹಕ್ಕಲಿಗೆ ನುಗ್ಗಿ ಗೇರು ಬೀಜಗಳನ್ನು ಕದ್ದು ತರುವುದಾಗಲಿ, ಯಾರದೋ ಮಾವಿನ ತೋಪಿನಲ್ಲಿಯ ಮಾವಿನ ಕಾಯಿ ಹಣ್ಣುಗಳನ್ನು ಉದುರಿಸಿ ತಿನ್ನುವುದಾಗಲಿ, ಹಳ್ಳದ ದಂಡೆಗುಂಟ ಬೆಳೆದು ನಿಂತ ತೆಂಗಿನ ಮರಗಳನ್ನು ಹತ್ತಿ ಎಳೆನೀರು ಕೊಯ್ದು ಕುಡಿಯುವುದಾಗಲಿ ನಮಗೆ ಅಪರಾಧವೆಂದೇ ಅನಿಸುತ್ತಿರಲಿಲ್ಲ. ಸಂಬಂಧಪಟ್ಟವರು ಒಂದಿಷ್ಟು ಬೈದಿರಬಹುದಾದರೂ ಅದರಾಚೆಗೆ ಯಾವ ದೊಡ್ಡ ಶಿಕ್ಷಯೇನನ್ನೂ ಕೊಡುತ್ತಿರಲಿಲ್ಲ. ಇದರಿಂದ ನಮಗೆಲ್ಲ ಇದೊಂದು ಮಕ್ಕಳಾಟಿಕೆಯ ಸಹಜ ಕ್ರಿಯೆ ಎಂದೇ ಅನಿಸುತ್ತಿತ್ತು. ಹಾಗಾಗಿಯೇ ನಾವು ನಮ್ಮ ದಾಂದಲೆ, ವಿನೋದಗಳನ್ನು ನಿರಾತಂಕವಾಗಿಯೇ ಮುಂದುವರಿಸಿದ್ದೆವು. ನಮ್ಮ ಏಳನೆಯ ತರಗತಿಯ ಅಭ್ಯಾಸ ಪರೀಕ್ಷೆಗಳು ಮುಗಿಯುವವರೆಗೂ ನಾಡು ಮಾಸ್ಕೇರಿಯ ನಮ್ಮ ಬಾಲ್ಯದ ಸುಂದರ ಬದುಕಿಗೆ ಮಾಸ್ಕೇರಿ ಮತ್ತು ಅಲ್ಲಿನ ಕೆರೆ, ತೋಟ, ಬೇಣ, ಬಯಲುಗಳೆಲ್ಲ ನಮ್ಮೆಲ್ಲರ ಆಡುಂಬೊಲವಾದದ್ದು ನಿಜವೇ! 1965 ನೇ ಇಸ್ವಿ ಎಂದು ನೆನಪು. ನನ್ನ ಪ್ರಾಥಮಿಕ ಶಿಕ್ಷಣದ ಅವಧಿ ಮುಗಿದಿತ್ತು. ಮುಂದೆ ಹೈಸ್ಕೂಲು ಸೇರಬೇಕಿತ್ತು. ಅದೇ ಸಂದರ್ಭದಲ್ಲಿ ನಮ್ಮ ತಂದೆಯವರಿಗೆ ಅಂಕೋಲೆಯ ತೆಂಕಣಕೇರಿ ಎಂಬಲ್ಲಿಯ ಪ್ರಾಥಮಿಕ ಶಾಲೆಗೆ ವರ್ಗವಾಯಿತು. ನಾನು ಅಂಕೋಲೆಯಲ್ಲಿ ಹೈಸ್ಕೂಲು ಓದುವುದು ಸುಲಭವೇ ಆಯಿತು. ಆದರೆ ನಮ್ಮ ತಂದೆಯವರಿಗೆ ನಮ್ಮ ಗೆಳೆಯರ ಇಡಿಯ ಗುಂಪು ಶಿಕ್ಷಣ ಮುಂದುವರಿಸಬೇಕು ಎಂಬ ಇಚ್ಛೆಯಿತ್ತು. ಇನ್ನೂ ಶಾಲೆಯ ಮೆಟ್ಟಿಲು ಹತ್ತದ ನಾರಾಯಣ ಮಾಣಿ ಎಂಬ ಗೆಳೆಯನನ್ನು ಬಿಟ್ಟು ಉಳಿದ ಎಲ್ಲರೂ ಪ್ರಾಥಮಿಕ ಶಿಕ್ಷಣದ ಕೊನೆಯ ಹಂತದಲ್ಲಿದ್ದರು. ನಾರಾಯಣ ವೆಂಕಣ್ಣ ಎಂಬುವವನು ಮಾತ್ರ ನನಗಿಂತ ಒಂದು ವರ್ಷ ಹಿರಿಯನಾಗಿದ್ದು ಹನೇಹಳ್ಳಿಯ ಆನಂದ್ರಾಶ್ರಮ ಹೈಸ್ಕೂಲು ಸೇರಿಕೊಂಡಿದ್ದ. ಆತನನ್ನು ಸೇರಿಸಿ ಎಲ್ಲರೂ ಅಂಕೋಲೆಯಲ್ಲಿ ಸರಕಾರಿ ವಿದ್ಯಾಥರ್ಿ ನಿಲಯಕ್ಕೆ ಸೇರಿ ಅಂಕೋಲೆಯಲ್ಲಿ ಶಿಕ್ಷಣ ಮುಂದುವರಿಸಿದರೆ ಸರಿಹೋಗಬಹುದು ಎಂಬುದು ತಂದೆಯವರ ಲೆಕ್ಕಾಚಾರವಾಗಿತ್ತು. ಅದಕ್ಕಾಗಿ ಅವರು ಎಲ್ಲ ಮಕ್ಕಳ ತಾಯಿ ತಂದೆಯರ ಮನ ಒಲಿಸಿ ಅಂಕೋಲೆಯ ಹಿಂದುಳಿದ ವರ್ಗ ವಸತಿನಿಲಯಕ್ಕೆ ಸೇರಿಕೊಳ್ಳಲು ಅನುಮತಿ ಪಡೆದುಕೊಂಡರು. ಮತ್ತು ಅವರೆಲ್ಲರ ಜೊತೆಯಲ್ಲಿ ನಾನು ಮತ್ತು ನನ್ನ ತಮ್ಮ ನಾಗೇಶನೂ ವಿದ್ಯಾಥರ್ಿ ನಿಲಯದಲ್ಲಿಯೇ ಉಳಿದು ಅಭ್ಯಾಸ ಮುಂದುವರಿಸಬೇಕೆಂದೂ ತೀಮರ್ಾನಿಸಿದರು. ಗೆಳೆಯರೆಲ್ಲರೂ ಒಟ್ಟಾಗಿ ಒಂದೇ ಕಡೆಯಲ್ಲಿ ನೆಲೆ ನಿಂತು ಓದುವ ಉತ್ಸಾಹದೊಂದಿಗೆ ನಾವೆಲ್ಲ ಸನ್ನದ್ಧರಾದೆವು. ಅದೇ ವರ್ಷದ ಜೂನ್ ತಿಂಗಳು ಶಾಲೆಗಳು ಆರಂಭವಾಗುವ ಹೊತ್ತಿಗೆ ಸರಿಯಾಗಿ ನಾವು ಹಾಸ್ಟೆಲ್ಲಿಗೆ ಹೊರಟು ನಿಂತೆವು. ಕೇರಿಯಲ್ಲಿ ಅದು ಒಂದು ಬಗೆಯಲ್ಲಿ ದುಗುಡ ಇನ್ನೊಂದು ಬಗೆಯಲ್ಲಿ ಉತ್ಸಾಹ ತುಂಬಿದ ದಿನ. ಕೇರಿಯ ಬಹುತೇಕ ಕುಟುಂಬಗಳಿಗೆ ಇದುವರೆಗೆ ತಮ್ಮ ಮಕ್ಕಳನ್ನು ಅಗಲಿ ಇದ್ದು ಅಭ್ಯಾಸ ಇರಲಿಲ್ಲ. ಇದೇ ಮೊದಲ ಬಾರಿಗೆ ಗಂಗಾವಳಿ ನದಿಯಾಚೆಗಿನ ಅಂಕೋಲೆಯಲ್ಲಿ ಬಿಟ್ಟು ಇರಬೇಕಾದ ಸಂಕಟದಲ್ಲಿ ತಾಯಿ ತಂದೆಯರು ನೊಂದುಕೊಂಡರು. ಆದರೆ ಅಕ್ಷರ ಕಲಿಕೆಯ ಆಸಕ್ತಿ ಎಲ್ಲ ತಾಯಂದಿರ ಹೃದಯದಲ್ಲಿ ಮೊಳಕೆಯೊಡೆಯುತ್ತಿದ್ದ ಕಾಲಮಾನದ ಪ್ರೇರಣೆ ಅವರೆಲ್ಲರ ಬಾಯಿ ಕಟ್ಟಿ ಹಾಕಿತ್ತು. ಅಂದು ಮುಂಜಾನೆ ಕಳೆದು, ಹೊತ್ತೇರುವ ಸಮಯಕ್ಕೆ ನಾವೆಲ್ಲ ನಮ್ಮ ನಮ್ಮ ಲಭ್ಯ ಬಟ್ಟೆ ಬರೆಗಳನ್ನು ಕೈ ಚೀಲದಲ್ಲಿ ತುಂಬಿ ಹೊರಟು ನಿಂತಾಗ ಕೇರಿಯ ಬಹುತೇಕ ಮಂದಿ ನಮ್ಮನ್ನು ಹಿಂಬಾಲಿಸಿ ಗಂಗಾವಳಿ ನದಿ ತೀರದವರೆಗೂ ನಡೆದು ಬಂದಿದ್ದರು. ಕಾಲುದಾರಿಯ ಪಯಣದುದ್ದಕ್ಕೂ ನಾವು ವಸತಿ ನಿಲಯದಲ್ಲಿ ಕೂಡಿ ಬಾಳುವ ಕುರಿತು ಓದಿನಲ್ಲಲ್ಲದೇ ಅನ್ಯ ವ್ಯವಹಾರಗಳಲ್ಲಿ ತೊಡಗದಿರುವಂತೆ, ಆರೋಗ್ಯದ ಕುರಿತು ಪರಸ್ಪರ ಕಾಳಜಿ ಪೂರ್ವಕ ಸಹಕರಿಸುವ ಸಲಹೆ ನೀಡುತ್ತಲೇ ಗಂಗಾವಳಿ ತೀರ ತಲುಪಿಸಿದ್ದರು. ನಾವೆಲ್ಲ ಒಂದು ಕತ್ತಲ ಲೋಕದ ಕರಾಳ ಬದುಕಿನಿಂದ ಬೆಳಕಿನ ಕಿರಣಗಳನ್ನು ಆಯ್ದುಕೊಳ್ಳಲು ನಕ್ಷತ್ರಲೋಕಕ್ಕೆ ಹೊರಟು ನಿಂತ ಯೋಧರೆಂಬಂತೆ ನಮ್ಮನ್ನು ಪ್ರೀತಿ ಅಭಿಮಾನ ಅಗಲಿಕೆಯ ವಿಷಾದ ತುಂಬಿದ ಕಣ್ಣುಗಳಿಂದ ನೋಡುತ್ತಲೆ ನಮ್ಮೆಲ್ಲರನ್ನು ದೋಣಿ ಹತ್ತಿಸಿ ನಾವೆಯು ಆಚೆ ದಡ ಸೇರುವವರೆಗೆ ಕಾದು ನಿಂತು, ನಾವು ಹತ್ತಿದ ಬಸ್ಸು ನಿರ್ಗಮಿಸುವವರೆಗೂ ನಮ್ಮ ಕಣ್ಣಳತೆಯಲ್ಲಿ ಕಾಣುತ್ತಲೇ ಇದ್ದರು. ಅಂಕೋಲೆಯ ಲಕ್ಷ್ಮೇಶ್ವರ ಎಂಬ ಭಾಗದಲ್ಲಿ ಇರುವ ‘ಆಯಿಮನೆ’ ಎಂಬ ಕಟ್ಟಡದ ಮಹಡಿಯ ಮೇಲೆ ಇರುವ ವಿದ್ಯಾಥರ್ಿ ನಿಲಯಕ್ಕೆ ಬಂದು ತಲುಪಿದ ಬಳಿಕ ಎಲ್ಲರಿಗೂ ಹೊಸತೊಂದು ಬದುಕಿನ ಮಗ್ಗಲು ಪ್ರವೇಶಿಸಿದಂತೆ ಮೂಕ ವಿಸ್ಮಿತರಾಗಿದ್ದೆವು. ಈಗ ‘ಆಯಿಮನೆ’ ಇರುವ ಸ್ಥಳದಲ್ಲಿ ‘ಅಮ್ಮ’ ಎಂಬ ಹೆಸರಿನ ಭವ್ಯ ಬಂಗಲೆಯೊಂದು ಎದ್ದು ನಿಂತಿದೆ. ವಸತಿ ನಿಲಯದ ಮೇಲ್ವಿಚಾರಕರು ಅಲ್ಲಿಯ ಸಹಾಯಕರು ಮತ್ತೆ ನಮಗಿಂತ ಮೊದಲೇ ಪ್ರವೇಶ ಪಡೆದಿದ್ದ ಸಹಪಾಠಿಗಳು ನಮ್ಮನ್ನು ಪ್ರೀತಿಯಿಂದಲೇ ಕಂಡರು. ನಮ್ಮ ನಮ್ಮ ಪಾಲಿಗೆ ದೊರೆತ ಹಾಸಿಗೆ ಹೊದಿಕೆ ಪಡೆದು ಕೊಠಡಿಗಳನ್ನು ಸೇರಿ ನಮ್ಮ ನಮ್ಮ ನೆಲೆಗಳನ್ನು ಗುರುತಿಸಿಕೊಂಡಾದ ಬಳಿಕ ಮಧ್ಯಾಹ್ನವೂ ಆಗಿ ಊಟದ ಪಂಕ್ತಿಯಲ್ಲಿ ಕುಳಿತು ಯಾವ ಸಂಕೋಚವೂ ಇಲ್ಲದೇ ಹೊಟ್ಟೆ ತುಂಬ ಉಣ್ಣುತ್ತಿದ್ದಂತೆ ನಮ್ಮೆಲ್ಲರ ಮನಸ್ಸಿನಲ್ಲಿಯೂ ನಾಡುಮಾಸ್ಕೇರಿಯ ಆಡೊಂಬಲದಿಂದ ನಿಜವಾಗಿಯೂ ಅನ್ನದೇಗುಲಕ್ಕೆ ಬಂದು ಸೇರಿದೆವು ಎಂಬ ಸಂತೃಪ್ತ ಭಾವ ಅರಳತೊಡಗಿತ್ತು. ********************************************* ರಾಮಕೃಷ್ಣ ಗುಂದಿ ಕನ್ನಡದ ಖ್ಯಾತ ಕತೆಗಾರ. ಅವಾರಿ, ಕಡಲಬೆಳಕಿನ ದಾರಿ ಗುಂಟ, ಅತಿಕ್ರಾಂತ, ಸೀತೆ ದಂಡೆ ಹೂವೇ …ಈ ನಾಲ್ಕು ಅವರ ಕಥಾ ಸಂಕಲನಗಳು. ಅವರ ಸಮಗ್ರ ಕಥಾ ಸಂಕಲನ ಸಹ ಈಚೆಗೆ ಪ್ರಕಟವಾಗಿದೆ.‌ಯಕ್ಷಗಾನ ಕಲಾವಿದ.‌ ಕನ್ನಡ ಉಪನ್ಯಾಸಕರಾಗಿ ಅಂಕೋಲಾದ ಜೆ.ಸಿ.ಕಾಲೇಜಿನಲ್ಲಿ ಸೇವೆ ಪ್ರಾರಂಭಿಸಿ, ಕಾರವಾರದ ದಿವೇಕರ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ. ಯಕ್ಷಗಾನ ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಮಗ ಅಮೆರಿಕಾದಲ್ಲಿ ಸಾಫ್ಟ್‌ವೇರ್ ಎಂಜಿನಿಯರ್. ಅಗೇರ ಸಮುದಾಯದಿಂದ ಬಂದ ಗುಂದಿ ಅವರು ಅದೇ ಜನಾಂಗದ ಬಗ್ಗೆ ಪಿಎಚ್ಡಿ ಪ್ರಬಂಧ ಮಂಡಿಸಿ, ಡಾಕ್ಟರೇಟ್ ಸಹ ಪಡೆದಿದ್ದಾರೆ‌ . ದಲಿತ ಜನಾಂಗದ ಕಷ್ಟ ನಷ್ಟ ನೋವು, ಅವಮಾನ, ನಂತರ ಶಿಕ್ಷಣದಿಂದ ಸಿಕ್ಕ ಬೆಳಕು ಬದುಕು ಅವರ ಆತ್ಮಕಥನದಲ್ಲಿದೆ. ಮರಾಠಿ ದಲಿತ ಸಾಹಿತಿಗಳ,‌ಲೇಖಕರ ಒಳನೋಟ , ಕನ್ನಡ ನೆಲದ ದಲಿತ ಧ್ವನಿಯಲ್ಲೂ ಸಹ ಇದೆ.‌ ರಾಮಕೃಷ್ಣ ಗುಂದಿ ಅವರ ಬದುಕನ್ನು ಅವರ ಆತ್ಮಕಥನದ ಮೂಲಕವೇ ಕಾಣಬೇಕು. ಅಂತಹ ನೋವಿನ ಹಾಗೂ ಬದುಕಿನ‌ ಚಲನೆಯ ಆತ್ಮಕಥನವನ್ನು ಸಂಗಾತಿ ..ಓದುಗರ ಎದುರು, ‌ಕನ್ನಡಿಗರ ಎದುರು ಇಡುತ್ತಿದೆ

Read Post »

ಅಂಕಣ ಸಂಗಾತಿ, ಕೇರಿ ಕೊಪ್ಪಗಳ ನಡುವೆ

ನಮ್ಮೂರಿನಲ್ಲಿ ಜಟ್ಟಿ ಮಾಣಿ ಆಗೇರ ಎಂಬಾತ ಇಂಥ ಎಲ್ಲ ಕೆಲಸದಲ್ಲಿ ಕುಶಲ ಕರ್ಮಿಯಾಗಿದ್ದು ಹಲವು ಬಗೆಯಲ್ಲಿ ನನ್ನ ಮೇಲೆ ಪ್ರಭಾವ ಬೀರಿದ ಹಿರಿಯರಲ್ಲಿ ಬಹಳ ಮುಖ್ಯ ವ್ಯಕ್ತಿಯಾಗಿದ್ದ. ಈತ ಉಪ್ಪಿನಾಗರದಲ್ಲಿ ಉಪ್ಪು ತೆಗೆಯುವ ಕೆಲಸದಲ್ಲಿಯೂ ಅತ್ಯಂತ ನಿಪುಣನಾಗಿದ್ದರೂ ಅದೇಕೋ ಆಗರದ ಕೆಲಸದಲ್ಲಿ ಬಹಳಕಾಲ ನಿಲ್ಲಲಿಲ್ಲ

Read Post »

ಅಂಕಣ ಸಂಗಾತಿ, ಕೇರಿ ಕೊಪ್ಪಗಳ ನಡುವೆ

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ-16 ಆತ್ಮಾನುಸಂಧಾನ ಗಂಗಾವಳಿಯಲ್ಲಿ ಮೂಲ್ಕಿ ಓದಿದ ದಿನಗಳು ನಮ್ಮ ಊರಿನಲ್ಲಿ ಪೂರ್ಣ ಪ್ರಾಥಮಿಕ ಶಾಲೆ ಇರಲಿಲ್ಲ. ಮುಂದಿನ ತರಗತಿಗಳಿಗಾಗಿ ಗಂಗಾವಳಿ ಭಾಗದ “ಜೋಗಣೆ ಗುಡ್ಡ” ಎಂಬಲ್ಲಿರುವ ಹಿರಿಯ ಪ್ರಾಥಮಿಕ ಶಾಲೆಗೆ ಸೇರಬೇಕಾಯಿತು. ಹಾರು ಮಾಸ್ಕೇರಿ ಶಾಲೆಯ ಕುಪ್ಪಯ್ಯ ಗೌಡ, ಗಣಪತಿ ಗೌಡ ಮುಂತಾದವರೊಡನೆ ಮಾಸ್ಕೇರಿಯ ದೇವರಾಯ ಇತ್ಯಾದಿ ಗೆಳೆಯರೊಂದಿಗೆ ಗಂಗಾವಳಿಯ ಶಾಲೆಗೆ ಸೇರಿಕೊಂಡೆವು.             ಅಲ್ಲಿ ಗಾಬಿತ ಸಮಾಜದ ರಾಧಾಕೃಷ್ಣ ಎಂಬುವವರು ಬಹುಶಃ ಮುಖ್ಯಾಧ್ಯಾಪಕರಾಗಿದ್ದರು ಎಂದು ನೆನಪು. ತುಂಬ ಶಾಂತ ಸ್ವಭಾವದ ಅವರು ಮಕ್ಕಳನ್ನು ಬಹಳ ಪ್ರೀತಿಯಿಂದ ಕಾಣುತ್ತಿದ್ದರು. ಶಾಲೆಯಲ್ಲಿ ನಮ್ಮ ಸಹಪಾಠಿಗಳಾಗಿದ್ದ ಗೋವಿಂದ ನಾಯ್ಕ, ಗಣಪತಿ ನಾಯ್ಕ, ವಿಶ್ವನಾಥ ನಾಯಕ, ಶಾರದಾ ನಾಯಕ, ಸರಸ್ವತಿ ಗುನಗಾ, ಉಲ್ಕಾ ನಾರ್ವೇಕರ್ ಮುಂತಾದವರು ಆತ್ಮೀಯ ಸ್ನೇಹಿತರಾಗಿ ದೊರೆತರು.             ಮೂಲ್ಕಿ (ಏಳನೆಯ ತರಗತಿ) ಓದುವ ಹೊತ್ತಿಗೆ ನಮಗೆ ತರಗತಿಯ ಶಿಕ್ಷಕರಾಗಿ ಅಬ್ದುಲ್ ಮಾಸ್ತರ್ ಎಂಬ ಮುಸ್ಲಿಂ ಯುವ ಅಧ್ಯಾಪಕರು ದೊರೆತರು. ಇನ್ನೂ ಅವಿವಾಹಿತರಾಗಿದ್ದ ಅವರು ಆಟ ವಿನೋದಗಳಲ್ಲಿ ಮಕ್ಕಳೊಡನೆ ಮಕ್ಕಳಂತೆ ಬೆರೆತು ವ್ಯವಹರಿಸುತ್ತಿದ್ದರಾದರೂ ತರಗತಿಯ ಪಾಠದಲ್ಲಿ ಕಟ್ಟುನಿಟ್ಟಿನ ಶಿಸ್ತುಪಾಲನೆ ಮಾಡುತ್ತಿದ್ದರು. ಅವರ ತಂದೆಯವರು ಊರಿನ ಗಣ್ಯ ವ್ಯಕ್ತಿಗಳೆನ್ನಿಸಿ ಹೆಸರು ಮಾಡಿದ್ದರು. ಬಹುಶಃ ಶಿಕ್ಷಕ ವೃತ್ತಿಯನ್ನೇ ಪೂರೈಸಿ ನಿವೃತ್ತಿ ಹೊಂದಿದವರಾಗಿರಬೇಕು. ಸಾಮಾನ್ಯವಾಗಿ ಊರಿನ ಎಲ್ಲರೂ ಮಾಸ್ತರ ಸಾಹೇಬರು ಎಂದೇ ಕರೆಯುವ ವಾಡಿಕೆ ಇತ್ತು. ಹೀಗಾಗಿ ಅವರ ನಿಜವಾದ ಹೆಸರು ಏನೆಂಬುದು ನಮಗೆ ತಿಳಿಯಲೇ ಇಲ್ಲ. ಮಾಸ್ತರ ಸಾಹೇಬರು ಊರಿನ ಮಸೀದಿಯ ಮೇಲ್ವಿಚಾರಣೆಗೆ ನೋಡಿಕೊಂಡು ಮಂತ್ರ ತಂತ್ರಗಳಿಗೂ ಖ್ಯಾತರಾಗಿದ್ದರು. ಭೂತ ಪಿಶಾಚಿ ಕಾಟದಿಂದ ಬಳಲುವವರಿಗೆ ಮಂತ್ರಿಸಿದ ಅಕ್ಷತೆ ಮತ್ತು ವಿಭೂತಿಯನ್ನು ನೀಡಿ ಗುಣಪಡಿಸುತ್ತಿದ್ದರು. ನಾಗರ ಹಾವುಗಳಿಗೆ ತಡೆ ಹಾಕುವುದರಲ್ಲಿಯೂ ಪರಿಣಿತರಾಗಿದ್ದರು. ನಾಗರ ಹಾವುಗಳಿಗೆ ಗಾಯ ಮಾಡಿದವರು, ನಾಗ ದೋಷಕ್ಕೆ ಗುರಿಯಾದವರು ಮಾಸ್ತರ ಸಾಹೇಬರ ಬಳಿಗೆ ಬಂದು ಅಕ್ಷತೆ ಪಡೆದು ತಡೆ ಹಾಕಿಸಿ ಪರಿಹಾರ ಕಾಣುತ್ತಿದ್ದರು. ಊರಿನಲ್ಲಿ ಮಾತ್ರವಲ್ಲದೆ ನೆರೆಯ ಅಂಕೋಲಾ, ಕುಮಟಾ, ಹೊನ್ನಾವರ ಇತ್ಯಾದಿ ಜಿಲ್ಲೆಯ ಬೇರೆ ಕಡೆಯಿಂದ ಜನರು ಇವರ ಬಳಿಗೆ ಬರುತ್ತಿದ್ದರಲ್ಲದೇ ಬೇರೆ ಬೇರೆ ಊರುಗಳಿಗೂ ಸಾಹೇಬರನ್ನು ಕರೆಸಿಕೊಳ್ಳುತ್ತಿದ್ದರು. ಇದರಿಂದಾಗಿ ಮಾಸ್ತರ ಸಾಹೇಬರ ಕುರಿತು ಆಗಲೇ ಎಳೆಯರಾಗಿರುವ ನಮ್ಮ ಮನಸ್ಸಿನಲ್ಲಿಯೂ ಗೌರವದ ಭಾವನೆ ಇತ್ತು. ಹಿಂದೂ, ಮುಸ್ಲಿಂ, ಕ್ರೈಸ್ತ ಎಲ್ಲ ಧರ್ಮಿಯರಿಗೂ ಅವರು ಪ್ರಿಯರಾಗಿದ್ದರು. ಅಬ್ದುಲ್ ಮಾಸ್ತರರು ಇಂಥವರ ಮಗನೆಂಬುದಕ್ಕಾಗಿ ಅವರ ಒಡನಾಟಕ್ಕೆ ಮುನ್ನವೇ ನಮ್ಮೆಲ್ಲರ ಪ್ರೀತಿಗೆ ಪಾತ್ರರಾದುದು ಸಹಜವೇ ಆಗಿತ್ತು.             ಅಬ್ದುಲ್ ಮಾಸ್ತರರು ನಮ್ಮ ವರ್ಗಶಿಕ್ಷಕರಾಗಿ ದೊರೆತಮೇಲೆ ಅವರ ಪಾಠದ ಶಿಸ್ತು, ಆಟದ ಅಕ್ಕರೆ ಇತ್ಯಾದಿಗಳು ಪರಿಚಯವಾಗುತ್ತ ಅವರ ವ್ಯಕ್ತಿತ್ವವು ಅಸಾಧಾರಣವೆಂಬುದು ನಮ್ಮ ಅರಿವಿಗೆ ಬರುತ್ತ ಬಹುಶಃ ನಮ್ಮೆಲ್ಲರ ಬದುಕಿನಲ್ಲಿ ಮರೆಯಲಾಗದ ಅವಿಸ್ಮರಣೀಯ ವ್ಯಕ್ತಿಯಾಗಿಯೇ ಸೃತಿಪಟಲದಲ್ಲಿ ನೆಲೆಗೊಂಡಿದ್ದಾರೆ.             ಹಗಲಿನ ತರಗತಿಯ ಪಾಠವಲ್ಲದೆ “ರಾತ್ರಿ ಶಾಲೆ”ಯ ಪದ್ಧತಿಯನ್ನು ಅವರು ಆರಂಭಿಸಿದ್ದರು. ಅಂದಿನ ದಿನಗಳಲ್ಲಿ ಶಾಲೆಯ ಬಹುತೇಕ ಮಕ್ಕಳು ತೀರ ಬಡ ಕುಟುಂಬದಿಂದ ಬರುತ್ತಿದ್ದರು. ಯಾರ ಮನೆಯಲ್ಲೂ ವಿದ್ಯುತ್ ಸಂಪರ್ಕವಾಗಲೀ ರಾತ್ರಿ ಓದಿಗೆ ಸಮರ್ಪಕ ಬೆಳಕಿನ ವ್ಯವಸ್ಥೆಯಾಗಲೀ ಇರಲಿಲ್ಲ. ಇದನ್ನು ಗೃಹಿಸಿದ ಅಬ್ದುಲ್ ಮಾಸ್ತರರು ಮೂಲ್ಕಿ ಪರೀಕ್ಷೆಗೆ ಕೂಡ್ರುವ ಎಲ್ಲ ಮಕ್ಕಳಿಗಾಗಿ ಶಾಲೆಯಲ್ಲಿಯೇ ಸಾಮೂಹಿಕ ಓದಿನ ಅನುಕೂಲ ಕಲ್ಪಿಸಿ ಬೆಳಕಿನ ವ್ಯವಸ್ಥೆ ಮಾಡಿದ್ದರು. ಸರಿರಾತ್ರಿಯ ಹೊತ್ತಿಗೆ ನಮ್ಮ ನಮ್ಮ ಪಾಲಕರು ಬಂದು ನಮ್ಮನ್ನು ಮನೆಗೆ ಕರೆದೊಯ್ದು ಸಹಕಾರ ನೀಡುತ್ತಿದ್ದರು.                     ಮೂಲ್ಕಿ ಪರೀಕ್ಷೆ ನಡೆಯುವ ಗೋಕರ್ಣಕಡೆಯ ಪರೀಕ್ಷೆ ಕೇಂದ್ರಕ್ಕೆ ನಮ್ಮನ್ನು ಕರೆದೊಯ್ಯುವವರೆಗಿನ ಕಾಳಜಿಯನ್ನು ತೋರಿದ ಅಬ್ದುಲ್ ಮಾಸ್ತರರ ಕರ್ತವ್ಯ ದಕ್ಷತೆ ಎಲ್ಲ ಮಕ್ಕಳ ಮನಸ್ಸನ್ನು ಗೆದ್ದುಕೊಂಡಿತ್ತು. ನಮ್ಮ ಪರೀಕ್ಷೆಯ ಸಮಯದಲ್ಲಿಯೇ ನಡೆಯಬೇಕಿದ್ದ ತಮ್ಮ ವಿವಾಹ ಸಮಾರಂಭವನ್ನೇ ಮುಂದೆ ಹಾಕಿದ ಮಾಸ್ತರರು ನಮ್ಮ ಪರೀಕ್ಷೆಗಳು ಮುಗಿದ ಮರುದಿನ ಎಲ್ಲ ವಿದ್ಯಾರ್ಥಿಗಳನ್ನು ಮದುವೆಗೆ ಆಮಂತ್ರಿಸಿ ಮದುವೆ ಮಾಡಿಕೊಂಡದ್ದು ಇನ್ನೊಂದು ವಿಶೇಷವೇ ಆಗಿದೆ!             ಗಂಗಾವಳಿ ಶಾಲೆಯ ಅಂದಿನ ದಿನಗಳು ನಮಗೆ ಅತ್ಯಂತ ಪ್ರೀತಿಯ ದಿನಗಳಾಗಿದುದ್ದಕ್ಕೆ ಮತ್ತೊಂದು ಪ್ರಬಲ ಕಾರಣವಿದೆ. ಅದು ಶಾಲೆಯಲ್ಲಿ ದೊರೆಯುವ ಉಪ್ಪಿಟ್ಟು-ಹಾಲು!             ಭಾರತದ ಬಡತನವನ್ನು ಗೃಹಿಸಿದ ಅಮೇರಿಕೆಯ ಸಂಸ್ಥೆಯೊಂದು ಶಾಲಾ ಮಕ್ಕಳಿಗಾಗಿ ಗೋವಿನ ಜೋಳದ ರವೆ ಮತ್ತು ಹಾಲಿನ ಪೌಡರ್ ಪಾಕೇಟ್‌ಗಳನ್ನು ಉಚಿತವಾಗಿ ಪೂರೈಸಿ ಮಕ್ಕಳಿಗೆ ಮಧ್ಯಾಹ್ನದ ಹೊತ್ತು ಉಪ್ಪಿಟ್ಟು-ಹಾಲು ಸೇವಿಸುವ ಅವಕಾಶ ಕಲ್ಪಿಸಿತ್ತು. ಈ ಸೌಲಭ್ಯವು ನಮ್ಮ ಗಂಗಾವಳಿಯ ಶಾಲೆಗೂ ದೊರೆತಿತ್ತು. ಅಂದು ಅಲ್ಲಿ ಓದುವ ಬಹುತೇಕ ಮಕ್ಕಳು ಬಡ ರೈತರ, ಕೂಲಿ ಕಾರ್ಮಿಕರ ಕುಟುಂಬದಿಂದಲೇ ಬಂದವರಾದುದರಿಂದ ಎಲ್ಲರಿಗೂ ಇದು ಅರ್ಧ ಹಸಿವು ಹಿಂಗಿಸಿಕೊಳ್ಳುವ ಸದವಕಾಶವೇ ಎನಿಸಿತ್ತು.!             ಉಪ್ಪಿಟ್ಟು – ಹಾಲು ಸಿದ್ಧ ಪಡಿಸುವುದಕ್ಕಾಗಿ ಪ್ರತಿದಿನವೂ ಮೈದಿನ್ ಸಾಬ್ ಎಂಬ ಮುಸ್ಲಿಂ ಗ್ರಹಸ್ಥರೊಬ್ಬರು ಬರುತ್ತಿದ್ದರು. ಶಿಕ್ಷಕರ ಅನುಮತಿಯಿಂದಲೇ ನಾಲ್ಕು ಜನ ವಿದ್ಯಾರ್ಥಿಗಳು ಪಾಳಿಯ ಪ್ರಕಾರ ಮೈದಿನ್ ಸಾಬರಿಗೆ ನೆರವಿಗೆ ನಿಲ್ಲುತ್ತಿದ್ದರು. ಹೀಗೆ ಸಹಕರಿಸುವ ನಾಲ್ವರಿಗೆ ಉಪ್ಪಿಟ್ಟಿನ ಒಂದು ವಿಶೇಷ ಹೆಚ್ಚುವರಿ ಪಾಲು ಲಭಿಸುತ್ತಿತ್ತು. ಆದರೆ ಈ ಹೆಚ್ಚುವರಿ ಪಾಲಿನ ಆಸೆಯಿಂದ ಈ ಕೆಲಸಕ್ಕೆ ತಾ ಮುಂದೆ ನಾ ಮುಂದೆ ಎಂದು ಪೈಪೋಟಿ ನಡೆಸುವ ನಮ್ಮ ಸ್ನೇಹಿತರು ಹೇಗೆ ಮೇಲಾಟ ನಡೆಸುತ್ತಿದ್ದರು ಎಂಬುದನ್ನು ಇಂದು ನೆನೆಯುವಾಗ ನಗುವೇ ಬರುತ್ತದೆ. ಆದರೆ ಅಂದಿನ ಆ ದಿನಗಳ ಹಸಿವಿನ ತೀವೃತೆಯ ಕುರಿತು ವಿಷಾದವೂ ಎನಿಸುತ್ತದೆ.             ಗಂಗಾವಳಿ ಶಾಲೆಯ ಓದಿನ ದಿನಗಳು ನಮ್ಮೆಲ್ಲರ ಮನಸ್ಸಿನ ಪುಟಗಳಲ್ಲಿ ಅವಿಸ್ಮರಣೀಯವಾಗಿರುವುದಕ್ಕೆ ಅಲ್ಲಿನ ಶಿಕ್ಷಕರು, ಸಹಪಾಠಿಗಳು, ಕಾರಣರಾಗಿದ್ದಾರೆ. ಅಂದು ಪರೀಕ್ಷೆ ಮುಗಿಸಿ ಶಾಲೆಯಿಂದ ನಿರ್ಗಮಿಸುವ ದಿನ ಅಪಾರವಾದ ನೋವು ನಮ್ಮೆಲ್ಲರ ಎದೆ ತುಂಬಿತ್ತು. ಇದಕ್ಕಿಂತ ಮುನ್ನ ಮತ್ತು ನಂತರವೂ ಹಲವು ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಮತ್ತು ಓದು ಮುಗಿಸಿ ನಿರ್ಗಮಿಸುವ ಸನ್ನಿವೇಶಗಳು ಎದುರಾಗಿವೆ. ಆದರೆ ಗಂಗಾವಳಿಯ ಹಿರಿಯ ಪ್ರಾಥಮಿಕ ಶಾಲೆಯ ಅಗಲುವಿಕೆಯಲ್ಲಿ ಉಂಟಾದ ನೋವಿನ ಅನುಭವ ಮತ್ತೆಂದೂ ನಮ್ಮನ್ನು ಬಾಧಿಸಲಿಲ್ಲ ****************************************************************** ರಾಮಕೃಷ್ಣ ಗುಂದಿ ಕನ್ನಡದ ಖ್ಯಾತ ಕತೆಗಾರ. ಅವಾರಿ, ಕಡಲಬೆಳಕಿನ ದಾರಿ ಗುಂಟ, ಅತಿಕ್ರಾಂತ, ಸೀತೆ ದಂಡೆ ಹೂವೇ …ಈ ನಾಲ್ಕು ಅವರ ಕಥಾ ಸಂಕಲನಗಳು. ಅವರ ಸಮಗ್ರ ಕಥಾ ಸಂಕಲನ ಸಹ ಈಚೆಗೆ ಪ್ರಕಟವಾಗಿದೆ.‌ಯಕ್ಷಗಾನ ಕಲಾವಿದ.‌ ಕನ್ನಡ ಉಪನ್ಯಾಸಕರಾಗಿ ಅಂಕೋಲಾದ ಜೆ.ಸಿ.ಕಾಲೇಜಿನಲ್ಲಿ ಸೇವೆ ಪ್ರಾರಂಭಿಸಿ, ಕಾರವಾರದ ದಿವೇಕರ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ. ಯಕ್ಷಗಾನ ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಮಗ ಅಮೆರಿಕಾದಲ್ಲಿ ಸಾಫ್ಟ್‌ವೇರ್ ಎಂಜಿನಿಯರ್. ಅಗೇರ ಸಮುದಾಯದಿಂದ ಬಂದ ಗುಂದಿ ಅವರು ಅದೇ ಜನಾಂಗದ ಬಗ್ಗೆ ಪಿಎಚ್ಡಿ ಪ್ರಬಂಧ ಮಂಡಿಸಿ, ಡಾಕ್ಟರೇಟ್ ಸಹ ಪಡೆದಿದ್ದಾರೆ‌ . ದಲಿತ ಜನಾಂಗದ ಕಷ್ಟ ನಷ್ಟ ನೋವು, ಅವಮಾನ, ನಂತರ ಶಿಕ್ಷಣದಿಂದ ಸಿಕ್ಕ ಬೆಳಕು ಬದುಕು ಅವರ ಆತ್ಮಕಥನದಲ್ಲಿದೆ. ಮರಾಠಿ ದಲಿತ ಸಾಹಿತಿಗಳ,‌ಲೇಖಕರ ಒಳನೋಟ , ಕನ್ನಡ ನೆಲದ ದಲಿತ ಧ್ವನಿಯಲ್ಲೂ ಸಹ ಇದೆ.‌ ರಾಮಕೃಷ್ಣ ಗುಂದಿ ಅವರ ಬದುಕನ್ನು ಅವರ ಆತ್ಮಕಥನದ ಮೂಲಕವೇ ಕಾಣಬೇಕು. ಅಂತಹ ನೋವಿನ ಹಾಗೂ ಬದುಕಿನ‌ ಚಲನೆಯ ಆತ್ಮಕಥನವನ್ನು ಸಂಗಾತಿ ..ಓದುಗರ ಎದುರು, ‌ಕನ್ನಡಿಗರ ಎದುರು ಇಡುತ್ತಿದೆ

Read Post »

ಅಂಕಣ ಸಂಗಾತಿ, ಕೇರಿ ಕೊಪ್ಪಗಳ ನಡುವೆ

ಇನ್ನೊಂದು ‘ಹಕ್ಕಿ-ಕಂಬಳ’. ನಮ್ಮೂರಿನ ಗದ್ದೆ ಬಯಲಿನಲ್ಲಿರುವ ಕೆರೆದಂಡೆ, ಹಳ್ಳದ ದಂಡೆಗಳ ಮೇಲೆ ಬೆಳೆದು ನಿಂತ ಮುಳ್ಳು ಪೊದೆಗಳಲ್ಲಿ, ಕೇದಗೆ ಹಿಂಡುಗಳಲ್ಲಿ ‘ಹುಂಡು ಕೋಳಿ’ ಎಂಬ ಹಕ್ಕಿಗಳ ಗುಂಪು ಸದಾ ನೆಲೆಸಿರುತ್ತಿದ್ದವು.

Read Post »

You cannot copy content of this page

Scroll to Top