ಧಾರಾವಾಹಿ ಸಂಗಾತಿ24 ಸವಿತಾ ದೇಶಮುಖ ಜಯದೇವಿ ತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣ ಮತ್ತು ಕನ್ನ ಡ ಸಾಹಿತ್ಯಕ್ಕೆ ಮಹತ್ತರ ಕೊಡುಗೆ ನೀಡಿದಮಹಾನ್ ಚೇತನ *ಜಯದೇವಿ ತಾಯಿಯವರ ಸಮಾಜಮುಖಿ, ಸಾಹಿತ್ಯಿಕ ಹಾಗೂ ಭಕ್ತಿಮಯ ಬದುಕು* ಜಯದೇವಿ ತಾಯಿಯವರ ವ್ಯಕ್ತಿತ್ವವು ಕೇವಲ ಕುಟುಂಬದ ಚೌಕಟ್ಟಿನೊಳಗೆ ಸೀಮಿತವಾಗಿರಲಿಲ್ಲ. ಸಂಸಾರದ ಹೊಣೆ ಹೊತ್ತು… ಸಿದ್ದರಾಮೇಶ್ವರರ ಶ್ರೇಷ್ಠ ಭಕ್ತಿಯಾಗಿ, ತ್ರಿಭಾಷಾ ಪಾಂಡಿತ್ಯವನ್ನು ಪಡೆದು ,ಕನ್ನಡ ಸರಸ್ವತ ಲೋಕದ ಕಣ್ಣಾಗಿ, ಕನ್ನಡಿಗರ ತಾಯಿಯಾಗಿ , ಶ್ರೇಷ್ಠ ಶಿವಶರಣಿಯಾಗಿ ಬದುಕಿ… ಜನಮನಗಳಲ್ಲಿ ಅಳಿಯದ ಛಾಪು ಮೂಡಿಸಿದ ಮುಂದಿನ ಬದುಕನ್ನು ನೋಡೋಣ ಬನ್ನಿ …… *ಸವಿಧಾನ ಜೀವನ| ನೋವು ನಾವುಗೆಲಿದು ಪಾವನ ಬದುಕಿ -ನಂದನವನಲಿದು ಬೇವು ಬೆಲ್ಲಾಗಿ ಸವಿದೇನ*|| ಎನ್ನುತ ಸಮಾಜದ ನೋವು-ನಲಿವುಗಳಿಗೆ ಸದಾ ಸ್ಪಂದಿಸುತ್ತಿದ್ದ ಜಯದೇವಿ ತಾಯಿಯವರು ಅನೇಕ ಜನಪರ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು. ಬಡವರು, ನಿರ್ಗತಿಕರು, ಮಹಿಳೆಯರು ಹಾಗೂ ಯುವಜನರ ಸಮಸ್ಯೆಗಳಿಗೆ ಸ್ಪಂದಿಸಿ, ಅವರಿಗೆ ಧೈರ್ಯ ತುಂಬುವ ಕಾರ್ಯ ಮಾಡುತ್ತಿದ್ದರು. ಸಮಾಜದಲ್ಲಿ ಮಾನವೀಯ ಮೌಲ್ಯಗಳು, ಶಿಕ್ಷಣ ಮತ್ತು ಸಂಸ್ಕಾರಗಳು ಬೆಳೆಯಬೇಕು ಎಂಬ ಆಶಯದಿಂದ ಹಲವು ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡುತ್ತಿದ್ದರು. ಸಾಹಿತ್ಯ ಕ್ಷೇತ್ರದಲ್ಲಿ ಅವರ ಸಾಧನೆ ವಿಶಿಷ್ಟವಾದುದು. ಜೀವನದ ಅನುಭವಗಳು, ಭಕ್ತಿ, ಸಾಮಾಜಿಕ ಚಿಂತನೆಗಳು ಮತ್ತು ಸ್ತ್ರೀ ಸಂವೇದನೆಗಳನ್ನು ತಮ್ಮ ಕೃತಿಗಳ ಮೂಲಕ ಜನರಿಗೆ ತಲುಪಿಸಿದರು. ಅವರ ಬರಹಗಳು ಕೇವಲ ಓದಿಗಾಗಿ ಅಲ್ಲ, ಬದುಕಿಗೆ ದಾರಿದೀಪವಾಗುವಂತಿದ್ದವು. ಕನ್ನಡ ಭಾಷೆ ಮತ್ತು ಸಾಹಿತ್ಯದ ಮೇಲಿನ ಅವರ ಅಪಾರ ಪ್ರೀತಿಯು ಅನೇಕ ಮೌಲಿಕ ಕೃತಿಗಳ ಸೃಷ್ಟಿಗೆ ಕಾರಣವಾಯಿತು. *ಬರದೇನೆನ್ನುವ ಭಾವ| ಬರಿತಾಯ್ತೆನಗವ್ವ ಕರೆದೇನೆನ್ನುವ ಭಕುತಿ ಬಯಲಾಯ್ತ- ತಾಯವ್ವಕೊರಗೇನೆಂಬುವ ಮನ ಮಾಯಾಯಿತು||* ಎನ್ನುತ ಶ್ರೀ ಸಿದ್ದರಾಮೇಶ್ವರಲಿ ಅಪಾರ ಭಕ್ತಿಯ ಲೀನರಾಗಿದ್ದರು. ಭಕ್ತಿ ಎಂದರೆ ಕೇವಲ ಪೂಜೆ-ಪುನಸ್ಕಾರಗಳಲ್ಲ, ಸಮಾಜ ಸೇವೆಯೇ ನಿಜವಾದ ದೇವರ ಸೇವೆ ಎಂಬ ತತ್ವವನ್ನು ಅವರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದರು .*ಕೃಪೆ ಮಾಡಿ ಎನಗೆ | ಶ್ರೀಪಾದವ ತೋರಿದನುಉಪಮೀಸ ಬಾರದ ಸಂತಸ -ಗೊಳಿಸಿದಆ ಪರಬ್ರಹ್ಮನಿಗೆ ಶರಣೆಂಬೆ||* ಎನ್ನುವಂತೆ ಸಮಾಜ ಸೇವೆಯೇ ದೇವರ ಸೇವೆಯಂತೆ ಸ್ವೀಕರಿಸಿದರು.ಸಿದ್ದರಾಮರ ಆದರ್ಶಗಳಾದ ದಾಸೋಹ, ಕಾಯಕ, ಸಮಾನತೆ ಮತ್ತು ಮಾನವ ಪ್ರೇಮವನ್ನು ತಮ್ಮ ಬದುಕಿನ ಮೂಲಕ ಸಾಕಾರಗೊಳಿಸಲು ಪ್ರಯತ್ನಿಸಿದರು. ಈಗ ಒಂದೊಂದಾಗಿ ತಿಳಿದುಕೊಳ್ಳೋಣ. ಅವರ ಬದುಕಿನ ಅಧ್ಯಾಯಗಳು ನಿಸ್ವಾರ್ಥ ಸೇವೆ, ಆಧ್ಯಾತ್ಮಿಕತೆ ಮತ್ತು ಜನಪರ ಕಾಳಜಿಯ ಅಮೂಲ್ಯ ಕಥನಗಳಾಗಿವೆ.ಆದರ್ಶ ಗೃಹಿಣಿ, ಸಮಾಜಸೇವಕಿ, ಸಾಹಿತಿ ಮತ್ತು ಶ್ರೇಷ್ಠ ಭಕ್ತೆಯಾಗಿ ಜಯದೇವಿ ತಾಯಿಯವರು ನಡೆಸಿದ ಬದುಕು ಬಹುಮುಖ ಸಾಧನೆಯ ಪ್ರತೀಕವಾಗಿದೆ. *ಬಿಂಕಿನ ಮಾತಿಲ್ಲ ಕೊಂಕೀನ ನುಡಿಯಲ್ಲಕಿಂಕರಳ ಕೂಗು ಕೇಳಿರಿ,- ಶರಣರಲೆಂಖಿನ ನಾ ನೋಡಿ ನಂಬೀದ* ಎನ್ನುತ ಕಿಂಕರರಲಿ ಕಿಂಕರಳಾಗಿ ಕನ್ನಡಾಂಬೆಯ ಸೇವೆಯಲ್ಲಿ ಜನಸೇವೆಯಲ್ಲಿ ತೊಡಗಿದರು. ೧೯೪೯ರಲ್ಲಿ ಕಲ್ಬುರ್ಗಿಯಲ್ಲಿ ಶರಣಬಸವೇಶ್ವರ ದೇವಾಲಯದ ಆವರಣದಲ್ಲಿ ೩೨ ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿತ್ತು* ಶ್ರೀ ಉತ್ತಂಗಿ ಚನ್ನಪ್ಪನವರು* ಅಧ್ಯಕ್ಷತೆ ವಹಿಸಿದ್ದರು. ಇಲ್ಲಿ ತಾಯಿಯವರು ಮಹಿಳಾ ಕಾರ್ಯಕ್ರಮಕ್ಕೆ ಅಧ್ಯಕ್ಷರಾಗಿದ್ದರು. ೧೯-೨-೧೯೫೦ ರಂದು ಸೊಲ್ಲಾಪುರದಲ್ಲಿ ೩೩ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿತ್ತು ಇಲ್ಲಿ ಶ್ರೀ ಎಂ ಆರ್ ಶ್ರೀ ಅವರ ಅಧ್ಯಕ್ಷತೆ ವಹಿಸಿದ್ದರು. ಅಲ್ಲಿ ಮಹಿಳಾಪರಗೋಷ್ಠಿಯಲ್ಲಿ ಅಧ್ಯಕ್ಷತೆ ವಹಿಸಿದ್ದರು. ಮುಂದೆ ೨೫-೧೨-೧೯೫೦ರಂದು ಮುಂಬೈಯಲ್ಲಿ ೩೪ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಿತ್ತು ಇಲ್ಲಿ ರಾಷ್ಟ್ರಕವಿ* ಶ್ರೀ ಮಂಜೇಶ್ವರ ಗೋವಿಂದ ಪೈ *ಅವರು ಅಧ್ಯಕ್ಷತೆ ವಹಿಸಿದ್ದರು. ಇಲ್ಲಿಯೂ ಕೂಡ ಮಹಿಳೆಯರ ಸಮಾರಂಭಕ್ಕೆ ಅಧ್ಯಕ್ಷತೆ ವಹಿಸಿದ್ದರು.ಈ ಮೂರು ಸಮ್ಮೇಳನಗಳ ಮಹಿಳಾ ಗೋಷ್ಟಿಯಲ್ಲಿ ಜಯದೇವಿ ತಾಯಿಯವರು ಅಧ್ಯಕ್ಷತೆ ವಹಿಸಿದ್ದರು. ಜಯದೇವಿ ತಾಯಿಯವರ ಶಿಕ್ಷಣ ಕ್ರಾಂತಿ ಸೊಲ್ಲಾಪುರದ ಇತಿಹಾಸದಲ್ಲೊಂದು ಸುವರ್ಣ ಅಧ್ಯಾಯ.೧೯೪೯ನೇ ವರ್ಷ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಇನ್ನೂ ಕೆಲವು ವರ್ಷಗಳಷ್ಟೇ ಆಗಿದ್ದವು. ಸಮಾಜದಲ್ಲಿ ಬಡತನ, ಅಸಮಾನತೆ ಮತ್ತು ನಿರಕ್ಷರತೆ ವ್ಯಾಪಕವಾಗಿದ್ದ ಕಾಲ ಅದು. ವಿಶೇಷವಾಗಿ ಗಿರಣಿಗಳಲ್ಲಿ ದುಡಿಯುತ್ತಿದ್ದ ಸಾವಿರಾರು ಕಾರ್ಮಿಕರು ಹಾಗೂ ದಲಿತ ಸಮುದಾಯದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದರು. ಜೀವನೋಪಾಯಕ್ಕಾಗಿ ದಿನವಿಡೀ ದುಡಿಯಬೇಕಾಗಿದ್ದ ಕಾರಣ ಅವರಿಗೆ ಶಾಲೆಯ ಮುಖವೇ ಕಾಣುತ್ತಿರಲಿಲ್ಲ. ಇಂತಹ ಸಂದರ್ಭದಲ್ಲಿ ಜಯದೇವಿ ತಾಯಿಯವರು ಸಮಾಜದ ತಳಮಳವನ್ನು ಕಂಡು “ಶಿಕ್ಷಣವೇ ಬದುಕಿನ ಬೆಳಕು” ಎಂಬ ದೃಢ ನಂಬಿಕೆಯೊಂದಿಗೆ ಅವರು ಒಂದು ಮಹತ್ತರ ಸಾಮಾಜಿಕ ಚಳವಳಿಗೆ ಚಾಲನೆ ನೀಡಿದರು….. ಯಾವುದೇ ದೊಡ್ಡ ಕಟ್ಟಡವಿಲ್ಲ, ಸರ್ಕಾರದ ನೆರವಿಲ್ಲ. ಆದರೆ ಶಿಕ್ಷಣದ ಬಗ್ಗೆ ಅಪಾರ ಕಾಳಜಿ ಮತ್ತು ಮಾನವೀಯತೆ ಅವರಲ್ಲಿತ್ತು.ತಮ್ಮ ಮನೆಯ ಆವರಣದಲ್ಲಿಯೇ ಒಂದು ಸಣ್ಣ ಶಾಲೆಯನ್ನು ಆರಂಭಿಸುವ ಮೂಲಕ ಅವರು ಶಿಕ್ಷಣ ಯಜ್ಞಕ್ಕೆ ನಾಂದಿ ಹಾಡಿದರು. ಗಿರಣಿಯಲ್ಲಿ ದುಡಿಯುತ್ತಿದ್ದ ಸುಮಾರು ೩೦,೦೦೦ ಕಾರ್ಮಿಕರ ಕುಟುಂಬಗಳ ಮಕ್ಕಳು ಹಾಗೂ ದಲಿತ ಸಮುದಾಯದ ಮಕ್ಕಳಿಗೆ ಶಿಕ್ಷಣದ ಅವಕಾಶ ಕಲ್ಪಿಸುವ ಕನಸನ್ನು ಕಂಡರು.ಆರಂಭದಲ್ಲಿ ಕೆಲವು ಅಡೆತಡೆಗಳು ಬಂದರೂ ತಾಯಿಯವರ ಪ್ರೀತಿ, ತಾಳ್ಮೆ ಮತ್ತು ಸೇವಾ ಭಾವದಿಂದ ಆ ಪ್ರಯತ್ನ ಬೇಗನೆ ಜನಮನ ಗೆದ್ದಿತು. ನಂತರ* ಕಾರ್ಮಿಕ ಸಾಕ್ಷರತಾ ಸಮಿತಿಯ* ಸಹಯೋಗದೊಂದಿಗೆ ವಿವಿಧ ಪ್ರದೇಶಗಳಲ್ಲಿ ಶಿಕ್ಷಣ ಕೇಂದ್ರಗಳನ್ನು ಸ್ಥಾಪಿಸಲು ಮುಂದಾದರು. ಮೊದಲಿಗೆ ೨೫ ಕೇಂದ್ರಗಳು ಆರಂಭವಾದವು. ಕೇಂದ್ರಗಳಲ್ಲಿ ಮಕ್ಕಳ ಜೊತೆಗೆ ಅಕ್ಷರಜ್ಞಾನವಿಲ್ಲದ ಕಾರ್ಮಿಕರಿಗೂ ಓದು-ಬರಹ ಕಲಿಸಲಾಗುತ್ತಿತ್ತು. ಶಿಕ್ಷಣವನ್ನು ಸಮಾಜದ ಕೊನೆಯ ವ್ಯಕ್ತಿಗೂ ತಲುಪಿಸಬೇಕು ಎಂಬುವದು ಅವರ ಉದ್ದೇಶವಾಗಿತ್ತು. ತಾಯಿಯವರ ಪರಿಶ್ರಮ ಮತ್ತು ಜನರ ವಿಶ್ವಾಸದಿಂದ ಈ ಚಳವಳಿ ದಿನದಿಂದ ದಿನಕ್ಕೆ ವಿಸ್ತರಿಸಿತು. ೨೫ ಕೇಂದ್ರಗಳಾಗಿದ್ದವು ಮುಂದೆ ೧೨೫ ಶಿಕ್ಷಣ ಕೇಂದ್ರಗಳಾಗಿ ಬೆಳೆದವು. ಸಾವಿರಾರು ಮಕ್ಕಳು ಮತ್ತು ವಯಸ್ಕರು ಈ ಕೇಂದ್ರಗಳ ಮೂಲಕ ಅಕ್ಷರಜ್ಞಾನ ಪಡೆದರು. ಶಿಕ್ಷಣದ ಬೆಳಕು ಮನೆಮನೆಗೂ ಹರಡಿತು.ಈ ಕಾರ್ಯ ಶಾಲೆಗಳನ್ನು ಆರಂಭಿಸಿದ ಸಾಧನೆಯೊಂದಿಗೆ….*ಅದು ಸಮಾಜ ಪರಿವರ್ತನೆಯ ಚಳವಳಿಯಾಗಿತ್ತು. * ಶಿಕ್ಷಣದಿಂದ ವಂಚಿತರಾಗಿದ್ದ ಮಕ್ಕಳಿಗೆ ಹೊಸ ಭವಿಷ್ಯಕೆ ದಾರಿ ಮಾಡಿಕೊಟ್ಟರು ಬಡವರ ಮನೆಗಳಲ್ಲಿ ಆಶಾಕಿರಣ ಮೂಡಿಸಿದ ಪ್ರಯತ್ನವಾಗಿತ್ತು. ಅನೇಕ ಕುಟುಂಬಗಳ ಬದುಕಿನ ದಿಕ್ಕನ್ನೇ ಬದಲಿಸಿದ ಮಹಾನ ಸೇವೆಯಾಗಿತ್ತು.ಆದ್ದರಿಂದಲೇ ಜಯದೇವಿ ತಾಯಿಯವರು ಕೈಗೊಂಡ ಶೈಕ್ಷಣಿಕ ಅಭಿಯಾನ ಸೊಲ್ಲಾಪುರದ ಶೈಕ್ಷಣಿಕ ಇತಿಹಾಸದಲ್ಲೇ ಒಂದು ದಾಖಲೆಯ ಸಾಧನೆಯಾಗಿ ಗುರುತಿಸಲ್ಪಟ್ಟಿದೆ. ಒಬ್ಬ ಮಹಿಳೆ ತನ್ನ ಮನೆಯ ಆವರಣದಲ್ಲಿ ಆರಂಭಿಸಿದ ಸಣ್ಣ ಶಿಕ್ಷಣ ಸೇವೆ ಮುಂದೆ ೧೨೫ ಕೇಂದ್ರಗಳ ಮಹಾ ಚಳವಳಿಯಾಗಿ ಬೆಳೆದು ಸಾವಿರಾರು ಜನರ ಬದುಕನ್ನು ಬೆಳಗಿಸಿತು ಎಂಬುದು ನಿಜಕ್ಕೂ ಅಪೂರ್ವ ಸಾಧನೆ.ಜಯದೇವಿ ತಾಯಿಯವರ ಈ ಕಾರ್ಯ ನಮಗೆ ಶಿಕ್ಷಣದ ಮಹತ್ವವನ್ನು ಯಾವ ರೀತಿಯಲ್ಲಿ, ಒಬ್ಬ ವ್ಯಕ್ತಿಯ ಸಂಕಲ್ಪ ಸಮಾಜದ ಇತಿಹಾಸವನ್ನೇ ಬದಲಾಯಿಸಬಲ್ಲದು ಎಂಬುದನ್ನೂ ಸಾರುತ್ತದೆ. ಅವರ ಜೀವನವು ಸೇವೆ, ತ್ಯಾಗ ಮತ್ತು ಶಿಕ್ಷಣದ ಮೂಲಕ ಸಮಾಜೋತ್ಥಾನ ಮಾಡಿದ ಆದರ್ಶದ ಪ್ರತೀಕವಾಗಿದೆ. ಶಿಕ್ಷಣವು ಎಲ್ಲರಿಗೂ ಲಭಿಸಬೇಕು, ಸಮಾನತೆಯನ್ನು ಮೂಡಿಸಬೇಕು ಅನ್ನುವ ಉದ್ದೇಶ ಶಿಕ್ಷಣದ ತಳಹದಿಯಾಗಿರಬೇಕು ಅನ್ನುತ್ತಿದ್ದರು. *ಜಗವು ಒಂದಾಗಲಿ |ನಗುತ ಕೈಗೂಡಿಸಿರಿಬಗೆಯಲಿ ಅಣ್ಣತಮ್ಮರಂತೆ ಲೋಕದಿಹಗೆ ಎಂಬ ಭಾವ ಅಳಿಯಲಿ||* (ಮುಂದುವರೆಯುವುದು) ಸವಿತಾ ದೇಶಮುಖ
ಧಾರಾವಾಹಿ ಸಂಗಾತಿ-23 ಸವಿತಾ ದೇಶಮುಖ ಜಯದೇವಿತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಮಹಾನ್ ಚೇತನ ಜಯದೇವಿ ತಾಯಿಯವರ ಜೀವನವೆಂಬ ಮಹಾಗ್ರಂಥದಲ್ಲಿ ಅವರ ಮಕ್ಕಳು ಒಂದೊಂದು ಅಮೂಲ್ಯ ಅಧ್ಯಾಯಗಳಾಗಿದ್ದರೆ…. ಮುಖ್ಯ ಪಾತ್ರಧಾರಿಯಾಗಿ ಆಗಮಿಸಿದ ಅಳಿಯ ಡಾ. ಶಂಕರಣ್ಣ ಮೂಗಿ ಸುಪ್ರೀಂ ಕೋರ್ಟಿನ ನ್ಯಾಯವಾದಿಗಳು (ನನ್ನ ತಂದೆ). ಜಯದೇವಿ ತಾಯಿಯವರ ಪಡೆದ ಹಿರಿಯ ಮಗನಾಗಿ ಪಾತ್ರವನ್ನು ವಹಿಸಿದ್ದು ಅತ್ಯಂತ ವಿಶಿಷ್ಟವಾದುದು. ತಾಯಿಯ ಬದುಕಿನ ಕಷ್ಟ-ಸುಖಗಳ ನಡುವೆ ಮಗನಾಗಿ, ತಾಯಿಯ ನೆರಳಾಗಿ, ಬೆನ್ನೆಲುಬಾಗಿ, ಮಾರ್ಗದರ್ಶಕರಾಗಿ ನಿಂತವರು.ಗಂಡನ ವಿಯೋಗದ ನಂತರ ಮನೆಯ ಜವಾಬ್ದಾರಿಗಳ ಭಾರವು ಹೇರಿಕೊಳ್ಳಲಾರದಷ್ಟು ಭಾರವಾಗಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲು ಪ್ರಾರಂಭಿಸಿದ್ದವು…. ಆ ಸಮಯದಲ್ಲಿ “ಶಿವಯೋಗಿ ಸಿದ್ದರಾಮನು ಕಳಿಸಿಕೊಟ್ಟ ಕೈಯಾಗಿ ಶಂಕರಣ್ಣನವರು.. ಬಂದರೆಂದು” ತಾಯಿ ಯಾವಾಗಲು ಹೇಳುತಿದ್ದರು. ಡಾ. ಶಂಕ್ರಣ್ಣ. ಡಿ .ಮೂಗಿ.ಸುಪ್ರೀಂ ಕೋರ್ಟ್ ನ್ಯಾಯವಾದಿಗಳು (ಸೋವಿಯತ್ ಲ್ಯಾಂಡ್ ನೆಹರು ಅವಾರ್ಡ್ ವಿಜೇತರು) ಶಂಕರ ಮೂಗಿ ಅವರದು ಬೈಲ್ಹೊಂಗಲದ ಪ್ರತಿಷ್ಠಿತ ಮನೆತನ ಹಾಗೂ ಕಿತ್ತೂರು ಇತಿಹಾಸದ ಮೊದಲ ಇತಿಹಾಸಕಾರೆಂದು ಪ್ರಸಿದ್ಧಿಗೊಂಡ ಶ್ರೀ ದೊಡ್ಡಭಾವೆಪ್ಪ ಚನ್ನಬಸಪ್ಪ ಮೂಗಿಯವರ ಮಗನಾಗಿದ್ದರು… ಕಾರಣಾಂತರದಿಂದ ಬೈಲ್ಹೊಂಗಲವನ್ನು ಬಿಟ್ಟು ಸೊಲ್ಲಾಪುರದಲ್ಲಿ ಕೆಲಸಕ್ಕಾಗಿ ಬರಬೇಕಾದ ಸಂದರ್ಭ ಬಂತು… ಸೊಲ್ಲಾಪುರದ ಗಡಿನಾಡಿನ ಮಣ್ಣಿನಲ್ಲಿ ಕನ್ನಡದ ಕಂಪು ಹರಡುತ್ತಿದ್ದ ದಿನಗಳಲ್ಲಿ, “ಜಯದೇವಿ ತಾಯಿ” ಎಂಬ ಹೆಸರೇ ಅನೇಕರ ಹೃದಯದಲ್ಲಿ ಗೌರವದ ಸ್ಥಾನ ಪಡೆದಿತ್ತು. ಕನ್ನಡ ನಾಡು, ನುಡಿ, ಸಂಸ್ಕೃತಿಯ ಮೇಲಿನ ಅವರ ಅಪಾರ ಪ್ರೀತಿ, ಸಮಾಜಸೇವೆಯಲ್ಲಿನ ಅವರ ತ್ಯಾಗ ಮತ್ತು ಸಂಕಷ್ಟಗಳ ಎದುರು ತಲೆಬಾಗದ ಧೈರ್ಯವು ಎಲ್ಲೆಡೆ ಹರಡಿತ್ತು.ಅಂತಹ ಸಮಯದಲ್ಲಿ, “ಗಡಿನಾಡಿನಲ್ಲಿ ಜಯದೇವಿ ತಾಯಿ ಎಂಬ ಕನ್ನಡತಿ ಇದ್ದಾರೆ. ನಿಷ್ಠಾವಂತೆ, ಧೈರ್ಯವಂತೆ, ಜನರ ಕಷ್ಟಗಳಿಗೆ ಸ್ಪಂದಿಸುವ ಅಪರೂಪದ ಮಹಿಳೆ” ಎಂಬ ಮಾತುಗಳನ್ನು ಕೇಳಿದ ಶಂಕರಣ್ಣನವರ ಮನಸ್ಸಿನಲ್ಲಿ ಅವರನ್ನು ಒಮ್ಮೆ ಭೇಟಿಯಾಗಬೇಕೆಂಬ ಹಂಬಲ ಮೂಡಿತು. ಶಂಕ್ರಣ್ಣ ಮತ್ತು ಲಲ್ಲೇಶ್ವರಿಯವರ ಮದುವೆ ಸಂದರ್ಭ ಒಂದು ದಿನ ಅವರು ಜಯದೇವಿ ತಾಯಿಯವರನ್ನು ಕಾಣಲು ಬಂದರು. ಮೊದಲ ಭೇಟಿಯಲ್ಲಿಯೇ ಅವರ ಸರಳತೆ, ವಿನಯತೆ, ದೃಢ ಸಂಕಲ್ಪ ಮತ್ತು ಕನ್ನಡದ ಮೇಲಿನ ಅಭಿಮಾನ ಕಂಡು ಮಂತ್ರ ಮುಗ್ಧರಾದರು.ತಾಯಿಯವರ ಮಾತುಗಳಲಿ ಬದುಕಿನ ಅನುಭವಗಳಿದ್ದವು. ಅವರ ನಗುವಿನಲ್ಲಿ ಸೌಮ್ಯತೆ ಇತ್ತು ದೈವಿ ಖಳೆಯಿತು …..ಸಾವಿರ ನೋವುಗಳ ಗೆದ್ದ ಆತ್ಮವಿಶ್ವಾಸವಿತ್ತು.ತಾಯಿಯವರು ಸಮಾಜದ ಏಳಿಗೆಗಾಗಿ ನಡೆಸುತ್ತಿದ್ದ ಕಾರ್ಯಗಳು, ಬಡವರ ಮತ್ತು ನಿರ್ಗತಿಕರ ಪರವಾಗಿ ತೋರಿಸುತ್ತಿದ್ದ ಕಾಳಜಿ, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಉಳಿವಿಗಾಗಿ ಮಾಡುತ್ತಿದ್ದ ಸೇವೆಯನ್ನು ಕಂಡು ಶಂಕರಣ್ಣನವರು ತುಂಬಾ ಸಂತೋಷಪಟ್ಟರು.“ಇಂತಹ ಮಹಿಳೆಯರು ಒಂದು ಕುಟುಂಬಕ್ಕೆ ಅಷ್ಟೇ ಇಡೀ ಸಮಾಜದ ಆಸ್ತಿ” ಎಂದು ಅವರು ಮನಸಾರೆ ಹೊಗಳಿದರು ಹಾಗೂ ತಾಯಿಯವರ ಕೈಜೋಡಿಸಲು ಪ್ರಾರಂಭಿಸಿದರು.ಅಂದಿನ ಭೇಟಿ ಕನ್ನಡ ಪ್ರೀತಿ, ಸಮಾಜಸೇವೆ ಮತ್ತು ಮಾನವೀಯತೆಯ ಎರಡು ಮಹಾನ ಮನಸ್ಸುಗಳ ಸಂಗಮವಾಗಿತ್ತು.ಗಡಿನಾಡಿನಲ್ಲಿ ಕನ್ನಡದ ದೀಪವನ್ನು ಆರದಂತೆ ಕಾಪಾಡುತ್ತಿರುವ ಜಯದೇವಿ ತಾಯಿಯವರ ಜೊತೆಯಾದರು…. ಕಿರಿಯ ಮಗಳು ಲಲ್ಲೇಶ್ವರಿತಾಯಿ ಮೂಗಿ(ಲೇಖಕಿ) ಜಯದೇವಿ ತಾಯಿಯವರ ವ್ಯಕ್ತಿತ್ವವನ್ನು ಕಂಡ ಶಂಕರಣ್ಣನವರು, “ಧೈರ್ಯ, ನಿಷ್ಠೆ ಮತ್ತು ಭಕ್ತಿ ಎಲ್ಲವು ರೂಪ ತಾಳಿದರೆ ಅದು ಜಯದೇವಿ ತಾಯಿಯವರ ರೂಪವಾಗುತ್ತದೆ” ಎಂದು ಪ್ರಶಂಸಿಸಿದ್ದರೆ ಅಚ್ಚರಿಯೇನಿಲ್ಲ. ತಾಯಿಯಲಿ ಮೂಡುತ್ತಿದ್ದ ಆತಂಕವನ್ನು ಅರ್ಥಮಾಡಿಕೊಂಡು, ಅವರ ಮನಸ್ಸಿಗೆ ಧೈರ್ಯದ ಮಾತುಗಳನ್ನು ತುಂಬುತ್ತಿದ್ದರು. ತಾಯಿಯ ಕನಸುಗಳು ಕುಸಿಯದಂತೆ, ಅವರ ಸಂಕಲ್ಪಗಳು ಮಂಕಾಗದಂತೆ ಎಚ್ಚರಿಕೆಯಿಂದ ಕಾಪಾಡುತ್ತಿದ್ದರು.ಸಾಹಿತ್ಯ ಸೇವೆಯಲ್ಲಿ ಜಯದೇವಿ ತಾಯಿಯವರು ಬೆಳಗುತ್ತಿದ್ದ ದೀಪವಾದರೆ, ಆ ದೀಪಕ್ಕೆ ಎಣ್ಣೆ ಸುರಿದು ಬೆಳಕು ಕಡಿಮೆಯಾಗದಂತೆ ನೋಡಿಕೊಂಡವರು… ಶಂಕರಣ್ಣನವರು. ಅವರ ಹಿರಿಯ ಮಗನಂತೆ ತಾಯಿಯ ಬರಹಗಳು, ವಿಚಾರಗಳು, ಸಮಾಜಮುಖಿ ಚಿಂತನೆಗಳು ಜನರಿಗೆ ತಲುಪಲು ಬೇಕಾದ ಎಲ್ಲ ಸಹಕಾರವನ್ನು ನೀಡುತ್ತಿದ್ದರು. ತಾಯಿಯ ಪ್ರತಿಯೊಂದು ಸಾಧನೆಯನ್ನು ತಮ್ಮದೇ ಸಾಧನೆಯೆಂದು ಭಾವಿಸಿ ಹೆಮ್ಮೆಪಡುತ್ತಿದ್ದರು.ಆಸ್ತಿಯ ಸಂರಕ್ಷಣೆಯ ವಿಷಯದಲ್ಲಿಯೂ ಅವರ ಪಾತ್ರ ಅಪಾರ. ಪೂರ್ವಜರು ಕಟ್ಟಿದ ಆಸ್ತಿಯನ್ನು ಸಂಪತ್ತು……..ಅದು ಕುಟುಂಬದ ಗೌರವ ಮತ್ತು ಪರಂಪರೆಯ ಸಂಕೇತವೆಂದು ಭಾವಿಸಿ ಅತ್ಯಂತ ಪ್ರಾಮಾಣಿಕತೆಯಿಂದ ಕಾಪಾಡಿದರು. ಅನೇಕ ಸವಾಲುಗಳು ಎದುರಾದರೂ ಧೈರ್ಯ ಕಳೆದುಕೊಳ್ಳದೆ, ವಿವೇಕದಿಂದ ಎಲ್ಲವನ್ನು ನಿರ್ವಹಿಸಿದರು. ತಾಯಿಯ ಮಾತಿಗೆ ಓಗೊಟ್ಟು, ಬಂದ ಸಂಕಟಗಳಿಗೆ ಪರಿಹಾರವಾಗಿ ನಿಂತ ಮಗನಾದರು.ಜಯದೇವಿ ತಾಯಿಯವರ ಹೆಜ್ಜೆ ಗುರುತುಗಳು ಸಮಾಜದಲ್ಲಿ ಉಳಿಯಬೇಕೆಂಬ ಉದ್ದೇಶದಿಂದ ತಮ್ಮ ಶಕ್ತಿ, ಸಮಯ ಮತ್ತು ಜೀವನವನ್ನೇ ಸಮರ್ಪಿಸಿದ ಅಪರೂಪದ ಪಡೆದ ಪುತ್ರರಾದರು ಡಾ. ಶಂಕರಣ್ಣ ಮೂಗಿಯವರು. ತಾಯಿಯ ಜೀವನದ ರಥ ಎರಡು ಚಕ್ರಗಳ ಮೇಲೆ ಸಾಗಿದ್ದರೆ, ಒಂದು ಚಕ್ರ ತಾಯಿಯ ಅಚಲ ಸಂಕಲ್ಪವಾಗಿದ್ದರೆ, ಮತ್ತೊಂದು ಚಕ್ರ ಅವರ ಪಡೆದ ಮಗನ ನಿಸ್ವಾರ್ಥ ಸಹಕಾರವಾಗಿತ್ತು.ತಾಯಿಯ ಯಶಸ್ಸಿನ ಹಿಂದೆ ಕಾಣದ ಶಕ್ತಿಯಾಗಿ, ಮಾತಿಲ್ಲದ ತ್ಯಾಗಿಯಾಗಿ, ಅಚಲ ಬೆಂಬಲವಾಗಿ ನಿಂತ ಅವರ ಪಾತ್ರ ಸದಾ ಸ್ಮರಣೀಯ.ಅವರಂತಹ ಅಪರೂಪದ ವ್ಯಕ್ತಿ ದೊರೆತದ್ದು ನನ್ನ ಪುಣ್ಯ ವೆಂದು,…..ತಾಯಿಯವರು ಹೇಳು ವರು…ಅಂತಹ ತಾಯಿಗೆ ಸೇವೆ ಸಲ್ಲಿಸುವುದು ನನ್ನ ಭಾಗ್ಯ ಎಂದು ಶಂಕರಣ್ಣನವರು ಹೇಳುವರು…..!!! ಶಂಕರಣ್ಣನವರ ಒಡನಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿತ್ತು. ಅವರ ಸರಳತೆ, ಸಜ್ಜನಿಕೆ, ಹಿರಿಯರ ಮೇಲಿನ ಗೌರವ, ಸಮಾಜದ ಬಗ್ಗೆ ಇರುವ ಕಾಳಜಿ ಹಾಗೂ ಕುಟುಂಬದ ಜವಾಬ್ದಾರಿ ವಹಿಸಿಕೊಳ್ಳವ ಗುಣಗಳನ್ನು ಜಯದೇವಿ ತಾಯಿಯವರು ಹತ್ತಿರದಿಂದ ಗಮನಿಸುತ್ತಿದ್ದರು.ಅವರ ಮಾತಿನಲ್ಲಿ ವಿನಯವಿತ್ತು, ನಡವಳಿಕೆಯಲ್ಲಿ ಸಂಸ್ಕಾರವಿತ್ತು, ಹೃದಯದಲ್ಲಿ ಸಾಹಿತ್ಯ ಪ್ರೇಮವಿತು.. , ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿಪ್ರಖಂಡ ಪಾಂಡಿತ್ಯವನ್ನು ಹೊಂದಿದ್ದರು ಇಂತಹ ಗುಣವಂತ ಯುವಕನನ್ನು ಕಂಡ ತಾಯಿಯವರ ಮನಸ್ಸಿನಲ್ಲಿ ಒಂದು ಆಶಯ ಮೂಡಿತು.ಒಂದು ದಿನ ಪ್ರೀತಿಯಿಂದ ಶಂಕರಣ್ಣನವರನ್ನು ಕರೆದು, “ನನ್ನ ಕಿರಿಯ ಮಗಳು ಲಲ್ಲೇಶ್ವರಿಯನ್ನು ನಿಮಗೆ ಕೊಡಲು ನನ್ನ ಮನಸ್ಸಿದೆ. ನೀವು ನಮ್ಮ ಕುಟುಂಬದ ಮಗನಾಗಬೇಕು” ಎಂದು ಹೇಳಿದರು. ತಾಯಿಯವರ ಮಾತು ಕೇಳಿದ ಶಂಕರಣ್ಣನವರ ಮುಖದಲ್ಲಿ ಸಂತಸದ ಹೊಳಪು ಮೂಡಿತು. ಅದು ಅವರಿಗೆ ಸಿಕ್ಕ ಅತ್ಯಂತ ದೊಡ್ಡ ಆಶೀರ್ವಾದವಾಗಿತ್ತು. ತಾಯಿಯವರು ಈ ವಿಷಯವನ್ನು ಲಲ್ಲೇಶ್ವರಿ ತಾಯಿಯವರ ಮುಂದೆ ಹೇಳಿದಾಗ, ತಾಯಿಯ ಮಾತೇ ದೇವರ ಮಾತು ಎಂದು ಭಾವಿಸುತ್ತಿದ್ದ ಲಲ್ಲೇಶ್ವರಿ ತಾಯಿಯವರು ವಿನಮ್ರವಾಗಿ ತಲೆಬಾಗಿದರು.*ನುಡಿಸಿದಂತೆ ನುಡೆವೆನ| ನಡಿಸಿದಂತೆ ನಡೆವೆನನೀ ಇರಿಸಿದಂತೆ ಇರುವೆನ -ನನ್ನವ್ವನಿನ್ನ ಪಾದದ ಧೂಳಿಯಾಗಿ ಹಾರೈನ||* ಎನ್ನುತ ತಮ್ಮ ಜೀವನದ ನಿರ್ಧಾರವನ್ನು ತಾಯಿಯವರ ಕೈಯಲ್ಲಿ ಇಟ್ಟಿದ್ದ ಅವರು, “ನೀವು ಹೇಳಿದಂತೆ ಆಗಲಿ ತಾಯಿ” ಎಂದು ಗೌರವದಿಂದ ಒಪ್ಪಿಗೆ ಸೂಚಿಸಿದರು. ಶುಭ ಸುದ್ದಿ ಎರಡು ಕುಟುಂಬಗಳಲ್ಲೂ ಸಂತಸದ ಅಲೆಯನ್ನು ಹರಡಿಸಿತು. ನಂತರ ಬೈಲಹೊಂಗಲದಲ್ಲಿ ಮದುವೆಯ ಸಿದ್ಧತೆಗಳು ಆರಂಭವಾದವು. ಊರಿನ ಬೀದಿಗಳು ಹಬ್ಬದ ವಾತಾವರಣದಿಂದ ಕಂಗೊಳಿಸಿದವು. ಬಂಧು-ಬಳಗ, ಸ್ನೇಹಿತರು, ಶರಣರು, ಭಕ್ತರು ಎಲ್ಲರೂ ಮದುವೆಯ ಸಂಭ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದರು. ಮದುವೆಯ ದಿನ ಬೈಲಹೊಂಗಲವೇ ಒಂದು ಪುಣ್ಯಕ್ಷೇತ್ರದಂತೆ ಕಂಗೊಳಿಸುತ್ತಿತ್ತು. ನಾದಸ್ವರದ ಮಧುರ ಸ್ವರಗಳು ಗಾಳಿಯಲ್ಲಿ ತೇಲುತ್ತಿದ್ದವು. ಮಂಗಳ ವಾದ್ಯಗಳ ಘೋಷದ ನಡುವೆ ವಧುವರರು ಕಲ್ಯಾಣ ಮಂಟಪಕ್ಕೆ ಆಗಮಿಸಿದರು. ಲಲ್ಲೇಶ್ವರಿ ತಾಯಿಯವರು ಸಾಂಪ್ರದಾಯಿಕ ವಸ್ತ್ರಾಭರಣಗಳಲ್ಲಿ ಲಕ್ಷ್ಮೀದೇವಿಯಂತೆ ಕಂಗೊಳಿಸುತ್ತಿದ್ದರು. ಶಂಕರಣ್ಣನವರು ಗಂಭೀರತೆ ಮತ್ತು ವಿನಯದ ಪ್ರತಿರೂಪವಾಗಿ ಕಾಣುತ್ತಿದ್ದರು.ಹಿರಿಯರ ಆಶೀರ್ವಾದಗಳ ನಡುವೆ ಮಂಗಳಸೂತ್ರ ಧಾರಣೆ ನಡೆದ ಕ್ಷಣದಲ್ಲಿ ಎಲ್ಲರ ಕಣ್ಣಲ್ಲೂ ಸಂತಸದ ಮಿನುಗಿತು. ಜಯದೇವಿ ತಾಯಿಯವರ ಹೃದಯವು ಆನಂದದಿಂದ ತುಂಬಿ ತುಳುಕಿತು. ತಮ್ಮ ಮಗಳ ಜೀವನ ಒಬ್ಬ ಸಜ್ಜನನ ಕೈಯಲ್ಲಿ ಸುರಕ್ಷಿತವಾಗಿದೆ ಎಂಬ ಸಮಾಧಾನ ಅವರ ಮುಖದಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿತ್ತು.ಆ ಮದುವೆ ಕೇವಲ ಇಬ್ಬರ ಹೃದಯಗಳ…ಎರಡು ಸಂಸ್ಕಾರವಂತ ಕುಟುಂಬಗಳ , ಆದರ್ಶಗಳ ಪವಿತ್ರ ಮಿಲನವಾಗಿತ್ತು. ಬೈಲಹೊಂಗಲದ ಜನರು ಇಂದಿಗೂ ಆ ಕಲ್ಯಾಣ ಮಹೋತ್ಸವವನ್ನು ನೆನಪಿಸಿಕೊಂಡು, “ಅದು ನಿಜವಾಗಿಯೂ ದೇವರ ಅನುಗ್ರಹದಿಂದ ನಡೆದ ದಿವ್ಯ ವಿವಾಹ” ಎಂದು ಭಾವಪೂರ್ಣವಾಗಿ ಹೇಳಿಕೊಳ್ಳುತ್ತಾರೆ. ಅತಿಥಿಗಳ ಆತಿಥ್ಯವೂ ಅಷ್ಟೇ ಅದ್ದೂರಿಯಾಗಿತ್ತು. ಬಂದ ಪ್ರತಿಯೊಬ್ಬರನ್ನೂ ಗೌರವದಿಂದ ಸ್ವಾಗತಿಸಿ, ಪ್ರೀತಿಯಿಂದ ಊಟೋಪಚಾರ ಮಾಡಲಾಯಿತು. ಮದುವೆ ಮುಗಿದ ನಂತರವೂ ಹಲವಾರು ದಿನಗಳ ಕಾಲ ಬೈಲಹೊಂಗಲದ ಜನರು ಆ ವಿವಾಹದ ಬಗ್ಗೆ ಮಾತನಾಡುತ್ತಲೇ ಇದ್ದರು.“ಮದುವೆ ಅಂದರೆ ಹೀಗೆ ಇರಬೇಕು! ನಾವು ಇಂತಹ ವಿಜೃಂಭಣೆಯ ಕಲ್ಯಾಣವನ್ನು ಜೀವನದಲ್ಲಿ ನೋಡಿಲ್ಲ!” ಎಂದು ಜನರು ಹೇಳಿಕೊಳ್ಳುತ್ತಿದ್ದರು. ಆ ದಿನವನ್ನು ಕಂಡವರು ಇಂದಿಗೂ ನೆನಪಿಸಿಕೊಂಡಾಗ ಅವರ ಕಣ್ಮುಂದೆ ಹೂವಿನ ತೋರಣಗಳಿಂದ ಸಿಂಗರಿಸಲ್ಪಟ್ಟ ಬೈಲಹೊಂಗಲದ ಓಣಿ ಓಣಿಯ ತುಂಬಾ ಕಟ್ಟಿದ ಹಂದರಗಳ ನೆನಪು ಬಾರದೇ ಇರದು.. ಸತಿಪತಿಗಳ ಪವಿತ್ರ ಬಂಧವನ್ನು ಗೌರವಿಸಿ, ಪ್ರೀತಿ, ಕಾಳಜಿ ಮತ್ತು ಸೇವಾಭಾವದಿಂದ ನಡೆದುಕೊಂಡರು. ಸುಖದಲ್ಲೂ ದುಃಖದಲ್ಲೂ ಅವರ ನೆರಳಾಗಿ ನಿಂತು, ಪ್ರತಿಯೊಂದು ಹೆಜ್ಜೆಯಲ್ಲಿಯೂ ಜೊತೆಗಿದ್ದು, ಆದರ್ಶ ದಂಪತಿಗಳಾಗಿ ತಮ್ಮ ಕರ್ತವ್ಯವನ್ನು ನಿಭಾಯಿಸಿದರು.ಅವರಿಬ್ಬರ ಜೀವನವು ಪರಸ್ಪರ ತ್ಯಾಗ ಮತ್ತು ಧರ್ಮನಿಷ್ಠೆಯ ಪ್ರತೀಕವಾಗಿತ್ತು.ಜೀವನದ ಎಲ್ಲಾ ಏಳುಬೀಳುಗಳನ್ನು ಕೈಹಿಡಿದು ದಾಟಿದರು.ಅತ್ಯಂತ ವೈಶಿಷ್ಟ ಪೂರ್ಣ ಜೀವನವು ಇವರದಾಗಿತ್ತುಶಂಕ್ರಣ್ಣ ಮೂಗಿ ಹಾಗೂ ಲಲ್ಲೇಶ್ವರಿ ತಾಯಿಯವರು ಜೀವನದ ಒಂದು ಹಂತದಲ್ಲಿ ಸಂಸಾರದ ಬಂಧನಗಳನ್ನು ಮೀರಿ ಸನ್ಯಾಸತ್ವವನ್ನು ಸ್ವೀಕರಿಸಿದರು. ಆ ಬಳಿಕ ಅವರು ದಾಂಪತ್ಯ ಜೀವನದ ಭಾವನೆಗಿಂತಲೂ ಉನ್ನತವಾದ ಆಧ್ಯಾತ್ಮಿಕ ಸಂಬಂಧವನ್ನು ಅಳವಡಿಸಿಕೊಂಡರು. ಒಬ್ಬರನ್ನೊಬ್ಬರು ತಂದೆ-ತಾಯಿಯರಂತೆ ಗೌರವದಿಂದ ಕಾಣುತ್ತಿದ್ದರು. ಲಲ್ಲೇಶ್ವರಿ ತಾಯಿಯವರು ಕೈಯಲ್ಲಿ ರುದ್ರಾಕ್ಷಿ ಕಂಕಣವನ್ನು ಕಟ್ಟಿಕೊಂಡರು.ಸಂಬಂಧದಲ್ಲಿ ಮೋಹ ಮರೆತು ಮಮತೆ, ನಿಸ್ವಾರ್ಥ ಸೇವೆಯಲಿ ತೊಡಗಿದರು. ಪರಸ್ಪರರ ಯೋಗಕ್ಷೇಮವನ್ನು ಕಾಪಾಡುತ್ತ, ತಾಯಿ ಸೇವೆಗಾಗಿ ತಮ್ಮ ಬದುಕನ್ನು ಸಮರ್ಪಿಸಿದರು. ಅವರ ಪ್ರತಿಯೊಂದು ಹೆಜ್ಜೆಯೂ ಶರಣ ತತ್ವದ ಪ್ರತಿಬಿಂಬವಾಗಿತ್ತು.ಸನ್ಯಾಸ ಮಾರ್ಗದಲ್ಲಿ ನಡೆದು, ಭಕ್ತಿ, ಜ್ಞಾನ ಮತ್ತು ಸೇವೆಯ ಮೂಲಕ ತಮ್ಮ ಅಂತರಂಗವನ್ನು ಶುದ್ಧಗೊಳಿಸಿಕೊಂಡರು. ಅಂತಿಮವಾಗಿ ನಿರ್ವಾಣದತ್ತ ಪಯಣ ಬೆಳೆಸಿದರು. ಅವರ ಜೀವನವು ಸಂಸಾರಿಕ ಮಿತಿಯನ್ನು ದಾಟಿ, ಆತ್ಮಮದ ಶ್ರೇಷ್ಠ ಮಟ್ಟವನ್ನು ತಲುಪಿದ ಉದಾತ್ತ ಉದಾಹರಣೆಯಾಗಿದೆ. ತಾಯಿಯನ್ನೇ ಗುರುವಾಗಿ ಸ್ವೀಕರಿಸಿ ಶರಣರ ವೈರಾಗ್ಯವನ್ನು ಕಂಡ ಮಹಾತ್ಮರಾದರು” ಎಂದು ಭಕ್ತಿಭಾವದಿಂದ ಸ್ಮರಿಸ ಬಹುದಾಗಿದೆ.ಅವರ ಜೀವನಗಾಥೆ ಇಂದಿಗೂ ಸೇವೆ, ತ್ಯಾಗ ಮತ್ತು ಆಧ್ಯಾತ್ಮಿಕ ಸಾಧನೆಯ ಆದರ್ಶವಾಗಿ ಉಳಿದಿದೆ. *ಸತಿಪತಿಯ ಭಾವ| ತೊರೆದು ನಿರತಸತೀಶರಣ ಲಿಂಗಪತಿ ಬಾವದಿ- ರಮಿಸಿಭಕ್ತಿ ಭವನದ ವಾಸವಾದೆವು|| * ಎನ್ನುತ ನಂತರ ಬಸವಕಲ್ಯಾಣದಲ್ಲಿ ಜಯದೇವಿ ತಾಯಿಯವರೊಂದಿಗೆ ಶರಣರು ನಡೆದಾಡಿದ ಭೂಮಿಯಲ್ಲಿ ಅವರು ವಾಸವಿದ್ದು, ತಮ್ಮ ಆಧ್ಯಾತ್ಮಿಕ ಮತ್ತು ಸಾಹಿತ್ಯ ಸೇವೆಯನ್ನು ಮುಂದುವರಿಸಿದರು. *ಕರೆದ್ಧ್ಯೊದರು ಕೈಹಿಡಿದು| ಅರಮನೆ ಆಧ್ಯಾತ್ಮಚಿರ ಪರ ಪದವೀಯ ಅರಿತು ನೀಡಿ-ಪತಿದೇವ ಶರಣರ ನಿಜ ನಿವಾಸಕ್ಕೆ ಕರೆದರು ||* ಗಂಡ ಹೆಂಡಂದಿರು ಇಬ್ಬರು ಸನ್ಯಾಸತ್ವವನ್ನು ಪಡೆದು ಬಸವಭೂಮಿಯಲ್ಲಿ ನೆಲೆಸಿದರು ಸತಿಪತಿಗಳ ಜೀವನದ ಕೊನೆಯ ಅಧ್ಯಾಯವೂ ಅವರ ಬದುಕಿನಂತೆಯೇ ಸೇವೆ, ಭಕ್ತಿ ಮತ್ತು ತ್ಯಾಗದ ಸುಗಂಧದಿಂದ ತುಂಬಿಕೊಂಡಿತ್ತು. ಕಿರಿ ಮಗಳು ಮತ್ತು ಅಳಿಯನೊಂದಿಗೆ ಜಯದೇವಿ ತಾಯಿಯವರು ಅನೇಕ ವರ್ಷಗಳ ಕಾಲ ಸಮಾಜಸೇವೆ, ಶರಣ ಸಂಸ್ಕೃತಿಯ ಪ್ರಚಾರ ಮತ್ತು ಮಾನವೀಯ ಮೌಲ್ಯಗಳ ಬಿತ್ತನೆ ಮಾಡುತ್ತಾ ಬದುಕಿದರು.ಬಸವಣ್ಣನವರ ಪವಿತ್ರ ಭೂಮಿಯಾದ ಬಸವಕಲ್ಯಾಣದಲ್ಲಿ ಈ ಮಹನೀಯರು ತಮ್ಮ ಉಸಿರಿನವರೆಗೂ ಧರ್ಮದ ದಾರಿಯಲ್ಲಿ ನಡೆದರು. ಕಾಲಚಕ್ರದ ನಿಯಮದಂತೆ ದೇಹವು ಮಣ್ಣಿನಲ್ಲಿ ಲೀನವಾದರೂ, ಅವರು ಬಿತ್ತಿದ ಆದರ್ಶಗಳು ಇಂದಿಗೂ ಜೀವಂತವಾಗಿವೆ. ಬಸವಣ್ಣನವರ ಪಾವನ ಮಣ್ಣಿನಲ್ಲಿ ಈ ಮೂವರು ಮಹಾತ್ಮರು ಮಣ್ಣಲ್ಲಿ ಮಣ್ಣಾಗಿ, ಶಿವನಲ್ಲಿ ಶಿವವಾಗಿ ಲೀನರಾದರು. ಬಸವಕಲ್ಯಾಣದಲ್ಲಿ ಅವರ ಸಮಾಧಿಗಳನ್ನು ಕಾಣಬಹುದಾಗಿದೆ.ಬಸವಕಲ್ಯಾಣದಲ್ಲಿ ಅವರ ಜೀವನದ ನೆನಪುಗಳನ್ನು ಸಾರುವ ಮೂರು ಸಮಾಧಿಗಳು ಭಕ್ತರ ಕಣ್ಮನ ಸೆಳೆಯುತ್ತವೆ. ಆ ಸಮಾಧಿಗಳು ಅವು ಅವರ ತ್ಯಾಗ, ಸೇವೆ, ಶರಣ ಸಂಸ್ಕೃತಿ ಮತ್ತು ಮಾನವೀಯ ಮೌಲ್ಯಗಳ ಜೀವಂತ ಸಾಕ್ಷಿಗಳಾಗಿವೆ.ಅಲ್ಲಿಗೆ ಭೇಟಿ ನೀಡುವ ಪ್ರತಿಯೊಬ್ಬರ
ಧಾರಾವಾಹಿ ಸಂಗಾತಿ-22 ಸವಿತಾ ದೇಶಮುಖ ಜಯದೇವಿ ತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಮಹಾನ್ ಚೇತನ ಜನ ಸೇವೆಯೇ ಜೀವನದ ಧ್ಯೇಯವಾಗಿದ್ದ ಜಯದೇವಿ ತಾಯವರ ಜೀವನವು ತ್ಯಾಗ, ಸೇವೆ ಮತ್ತು ಮಾತೃತ್ವದ ಅದ್ಭುತ ಸಂಗಮ.ಅವರು ತಮ್ಮ ವೈಯಕ್ತಿಕ ಸುಖದುಃಖಗಳನ್ನು ಮರೆತು ಸಮಾಜದ ಒಳಿತಿಗಾಗಿ ಸದಾ ಶ್ರಮಿಸುತ್ತಿದ್ದರು. ಕುಟುಂಬದ ಜವಾಬ್ದಾರಿ ಹೊತ್ತು ಮಕ್ಕಳನ್ನು ಪ್ರೀತಿಯಿಂದ ಸಾಕಿ ಸಲಹುತ್ತಾ….. ಬಡವರು, ನಿರ್ಗತಿಕರು ಹಾಗೂ ಸಹಾಯದ ನಿರೀಕ್ಷೆಯಲ್ಲಿದ್ದ ಜನರಿಗೆ ಆಶಾಕಿರಣವಾಗಿದ್ದರು. ಪತಿಯ ವಿಯೋಗದ ನಂತರ ಜೀವನದ ಭಾರ ಇನ್ನಷ್ಟು ಹೆಚ್ಚಾದರೂ ಅವರು ಎಂದಿಗೂ ಕುಗ್ಗಲಿಲ್ಲ…ಐದು ಮಕ್ಕಳನ್ನು ಬೆಳೆಸಿ ಅವರಿಗೆ ಉತ್ತಮ ಸಂಸ್ಕಾರ, ಶಿಕ್ಷಣ ಮತ್ತು ಜೀವನ ಮೌಲ್ಯಗಳನ್ನು ಕಲಿಸುವ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದರು. ಮಕ್ಕಳ ಮನಸ್ಸುಗಳಲಿ ಪ್ರೀತಿ, ಕರುಣೆ ಮತ್ತು ಮಾನವೀಯತೆಯತೆ ತುಂಬಿಸಿದರು. ತಾಯಿಯವರ ಮನೆ ಎಂದರೆ…. ನೆರವು ಕೇಳಿ ಬರುವವರಿಗೆ ಸದಾ ತೆರೆದ ಬಾಗಿಲಾಗಿತ್ತು. ಹಸಿದವರಿಗೆ ಅನ್ನ, ಸಂಕಷ್ಟದಲ್ಲಿರುವವರಿಗೆ ಧೈರ್ಯ, ನಿರಾಶೆಯಲ್ಲಿರುವವರಿಗೆ ಆಶ್ವಾಸನೆ ನೀಡುವುದು ಅವರ ಸಹಜ ಗುಣವಾಗಿತ್ತು. ಊರಿನಲ್ಲಿ ಯಾರಿಗಾದರೂ ಕಷ್ಟ ಬಂದರೆ ಮೊದಲು ನೆನಪಾಗುತ್ತಿದ್ದ ಹೆಸರು ಜಯದೇವಿ ತಾಯಿಯವರದ್ದೇ.ತಮ್ಮ ಮಕ್ಕಳಿಗೆ ತಮ್ಮ ಜೀವನದ ಮೂಲಕವೇ ಪಾಠ ಕಲಿಸಿದರು. “ಮನುಷ್ಯನ ಬದುಕಿನ ನಿಜವಾದ ಅರ್ಥ ಇನ್ನೊಬ್ಬರ ಕಣ್ಣೀರು ಒರೆಸುವುದರಲ್ಲಿ ಇದೆ” ಎಂಬ ಸಂದೇಶವನ್ನು ತಮ್ಮ ನಡೆನುಡಿಗಳ ಮೂಲಕ ತೋರಿಸಿದರು. ಮಕ್ಕಳಲ್ಲು ಕೂಡ ಸೇವಾಭಾವವನ್ನು ಜೀವನದ ಮೌಲ್ಯವಾಗಿ ಅಳವಡಿಸಿದರು. ಅವರ ಜೀವನ ಶಕ್ತಿಯ, ಸಹನೆಯ ಮತ್ತು ನಿಸ್ವಾರ್ಥ ಪ್ರೀತಿಯ ಮಹಾಕಾವ್ಯ. ತಮ್ಮ ಜೀವನದ ಪ್ರತಿಯೊಂದು ಕ್ಷಣವನ್ನು ಕುಟುಂಬ ಮತ್ತು ಸಮಾಜದ ಒಳಿತಿಗಾಗಿ ಅರ್ಪಿಸಿದ ಅವರು ನಿಜಕ್ಕೂ “ತಾಯಿ” ಎಂಬ ಪದಕ್ಕೆ ಅರ್ಥ ತುಂಬಿದ ಮಹನೀಯರು. *ಬೇಡಿಲ್ಲ ಫಲ ಪದವಿ |ಬೇಡಿಲ್ಲ ಸ್ಥಾನಮಾನಬೇಡಿಲ್ಲ ಮಂತ್ರಿ ತಂತ್ರಿಯಾಗಲು -ಜಯದೇವಿತಾಯಿ ಆದಳು ಕನ್ನಡದ* || ಎನ್ನುವಂತೆ ಕನ್ನಡದ ತಾಯಿಯಾಗಿ ನಿಸ್ಸಹಾಯಕರ ಬಂಧುವಾಗಿ,ತಮ್ಮ ಮಕ್ಕಳಿಗೆ ನೆರಳಾಗಿ ನಿಂತ ತಾಯಿ, ಸಮಾಜದ ನೋವಿಗೆ ಮದ್ದಾಗಿ ಬದುಕಿದ ತಾಯಿ!!!!, ಇನ್ನೂ ಜಯದೇವಿ ತಾಯಿಯವರ ಮೂರನೇ ಮಗ *ಬಸವರಾಜ* ಚಿಕ್ಕಂದಿನಿಂದಲೇ ಎಲ್ಲರಲ್ಲೂ ವಿಭಿನ್ನವಾಗಿದ್ದರು. ಮನೆಯಲ್ಲಿದ್ದ ಇತರ ಮಕ್ಕಳಂತಲ್ಲ…..ಮಗುವಾಗಿದ್ದಾಗ ಶಾಂತವಾಗಿ ಮಲಗಿರುತ್ತಿದ್ದರು ಹಸಿವೆ ಆದಾಗ ಮಾತ್ರ ಅಳುತ್ತಿದ್ದರು ಹೀಗಾಗಿ ತಾಯಿಯವರಿಗೆ ಹೆಚ್ಚಾಗಿ ಮಗನ ಕಾಳಜಿ ಮಾಡದು ಬೇಕಾಗಿ ಬರಲಿಲ್ಲ ಅಂತ ಹೇಳುತಿದ್ದರು. ಡಾ. ಬಸವರಾಜ್ ಲಿಗಾಡಿ ಮಧ್ಯದಲ್ಲಿ ಲಲ್ಲೇಶ್ವರಿ ತಾಯಿ, ಬಸವರಾಜರ ಧರ್ಮಪತ್ನಿ ಡಾ. ಮಧುಮಾಲ ಇತರರಂತೆ ಗಲಾಟೆ, ಹಠ, ಆಟ-ಪಾಟಗಳಲ್ಲಿ ಮುಳುಗದೆ ಶಾಂತವಾಗಿದ್ದರು. ಅವರ ಕಣ್ಣುಗಳಲ್ಲಿ ಒಂದು ವಿಚಿತ್ರ ಶಾಂತಿ ಇತ್ತು. ಮುಖದಲ್ಲಿ ಸದಾ ಮೃದುವಾದ ನಗು. ತಾಯಿಯವರು ಎಷ್ಟೇ ದುಃಖದಲ್ಲಿದ್ದರೂ ಬಸವರಾಜನ ಆ ಶಾಂತ ವದನವನ್ನು ನೋಡಿದ ಕ್ಷಣ ಮನಸ್ಸಿಗೆ ಒಂದು ನೆಮ್ಮದಿಗೆ ಇಳಿಯುತ್ತಿದ್ದರು. ಮನೆಯಲ್ಲಿ ಯಾರಿಗಾದರೂ ನೋವಾದರೆ ಮೊದಲಿಗೆ ಓಡಿ ಹೋಗಿ “ಏನಾಯ್ತು?” ಎಂದು ಕೇಳುವ ಕರುಣೆ ಅವರೋಳಗೆ ಬೆಳೆದಿತ್ತು. ಚಿಕ್ಕವರಿದ್ದಾಗಲೇ “ನಾನು ದೊಡ್ಡವನಾದ ಮೇಲೆ ಡಾಕ್ಟರ್ ಆಗಬೇಕು… ನೋವಿನಲ್ಲಿರುವ ಮಕ್ಕಳನ್ನು ಉಳಿಸಬೇಕು…” ಎಂದು ತಾಯಿಯವರ ಬಳಿ ಹೇಳುತ್ತಿದ್ದ. ಅವರ ಆಟಿಕೆಯ ಸಾಮಾನುಗಳೆಂದರೆ ಇಂಜೆಕ್ಷನ್ ತೆತಸ್ಕೋಪ್ಗಳೇ ಆಗಿದ್ದವು ಅಂತ ತಾಯಿಯವರು ಹೇಳುತ್ತಿದ್ದರು.ನಾವು ಬಯಸಿದ್ದನ್ನೇ ಮುಂದೆ ಆಗುತ್ತೇವೆ ಅನ್ನುವದು ಬಲು ಸತ್ಯ ಎನ್ನುವರು!!…..ಸಕಾರಾತ್ಮಕವಾಗಿ ಅಥವಾ ನಕಾರಾತ್ಮಕತೆಯಿಂದಾಗಲಿ ನಾವು ಏನನ್ನು ಬಯಸುತ್ತೇವೋ ಜೀವನದಲ್ಲಿ ಅದೇ ಆಗುವದು ಅನ್ನುವ ಸ್ಥಿತಿ ಗತಿಗಳ ಬಗ್ಗೆ ಹೇಳುಲು.. ಈ ಉದಾಹರಣೆಯನ್ನು ಹೇಳುತ್ತಿದ್ದರು. ಬಸವರಾಜರು ಬೆಳೆದಂತೆ , ವೈದ್ಯಕೀಯ ಶಿಕ್ಷಣಕ್ಕೆ ಸೇರಿದರು..ಆ ದಿನ ತಾಯಿಯವರು ಸಂತೋಷದಿಂದ “ನನ್ನ ಮಗ ಇನ್ನು ಜೀವ ಉಳಿಸುವ ದೇವರ ಕೈ ಆಗ್ತಾನೆ” ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದರು. ಡಾ. ಬಸವರಾಜರ ಇನ್ನೋರ್ವ ಪತ್ನಿ ಮಧ್ಯದಲ್ಲಿ ಶೈಲಜಾ ಮುಂದೆ ಬಸವರಾಜ ಮಕ್ಕಳು ಆಗದವರಿಗೆ ಉಪಚಾರವನ್ನು ಮಾಡಲಾರಂಭಿಸಿದರು. ಬಂಜೆತನ ನಿವಾರಣೆ ತಜ್ಞರಾದರು. *ನುಡಿಗಳ ಸ್ಮರಿಸುವೆ| ನಡೆಯಲಿ ಅಳವಡಿಸಿ ಎಡವಿದರೆ ಕೈಹಿಡಿದೆತ್ತು – ಹಡೆದವ್ವದಡೆಗೆ ಕರೆದೊಯ್ಯೇ ಮಗುವಿಗೆ*||ಎನ್ನುವ ಮನೋಭಾವವನ್ನು ಬಸವರಾಜರು ಹೊಂದಿದ್ದರುಅಂತೇಯೇ ಜಯದೇವಿ ತಾಯಿಯವರ ವೃದ್ಧಾಪ್ಯದಲ್ಲಿ ಬಸವರಾಜರು ನೆರಳಾಗಿ ನಿಂತರು. ತಾಯಿಯವರಿಗೆ ನೋವಾಗದಂತೆ ಪ್ರತಿಯೊಂದು ಹೆಜ್ಜೆಯಲ್ಲೂ ಕಾಳಜಿ ವಹಿಸಿದರು. ರಾತ್ರಿ ಎಷ್ಟೇ ಕೆಲಸ ಇದ್ದರೂ ತಾಯಿಯ ಕೋಣೆಗೆ ಹೋಗಿ “ಅಮ್ಮ ಆರೋಗ್ಯ ಹೇಗಿದೆ?” ಎಂದು ಕೇಳದೇ ನಿದ್ರೆ ಮಾಡುತ್ತಿರಲಿಲ್ಲ. *ಹೊತ್ತು ಇಳಿಯುತಿದ್ದಂತೆ |ಗೊತ್ತು ಗುರಿಕಾಣು ಮತ್ತೆ ಹುಟ್ಟಿ ಬರದು- ಜನುಮಹೆತ್ತವ್ವನ ಬಿಡದೆ ಜಪಿಸು* ||ಎನ್ನುವಂತೆ ತಾಯಿಯವರ ಕೊನೆಯ ದಿನಗಳಲ್ಲಿಯೂ ಬಸವರಾಜ ಅವರ ಕೈ ಹಿಡಿದುಕೊಂಡೇ ಇದ್ದರು. ಮಗನ ಆ ಮಮತೆಯ ಸ್ಪರ್ಶದಲ್ಲಿ ಜಯದೇವಿ ತಾಯಿಯವರು ತಮ್ಮ ಜೀವನದ ಎಲ್ಲಾ ಹೋರಾಟಗಳಿಗೂ ಅರ್ಥ ಸಿಕ್ಕಂತಾಗಿತ್ತು. *ತಾಯಿಯೇ ದೇವರು| ತಾಯಿಯೇ ಗುರಿತಾಯಿ ಕಲಸಿದರು ನಡೆ ನುಡಿ -ಚೆನ್ನಆಯಿತು ಅದು ಮುಕ್ತಿಯ ಧಾಮ *|| ಎನ್ನುವಂತೆ ಬದುಕಿದವರು ಲಲ್ಲೇಶ್ವರಿ ತಾಯಿಯವರು (ನನ್ನ ತಾಯಿ) ತಾಯಿಯವರ ನೆರಳಲಿ ಬದುಕಿದ ಬಾಳಿದ ಮಗಳ ಮಹಾ ಸೇವೆಯ ಬಗ್ಗೆ ಜಯದೇವಿ ತಾಯಿಯವರು ಎಲ್ಲರೆದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದರು. ಅವರ ಉಸಿರಾಗಿ, ಅವರ ಹೆಜ್ಜೆಯ ಮೇಲೆ ಹೆಜ್ಜೆ ಹಾಕುತ್ತ ಬದುಕಿದವರು ಕೊನೆಯ ಮಗಳು ಲಲ್ಲೇಶ್ವರಿ ತಾಯಿ. ತಾಯಿಯಲ್ಲಿಯೇ ತಮ್ಮ ಲೋಕವನ್ನು ಕಂಡವರು. *ಅಂದಾಜು ಮೃದ ನುಡಿ |ಚಂದಾದ ಮುಖಮಂದಿರ ಮಂದಮತಿಗೆ -ಲಭಿಸಿ ಸೇವೆಮಾತಾಯಿ ಎಂದೆಂದೂ ಬಿಡೇನು ಪಾದ*|| ಎನ್ನುತ ಲಲ್ಲೇಶ್ವರಿಯವರಿಗೆ ತಾಯಿಯ ಒಂದು ಕಣ್ಣೋಟ ಸಾಕು, ಅವರ ಮನದ ಮಾತನ್ನು ಅರಿಯುತ್ತಿದ್ದರು. ಏನನ್ನೂ ಕೇಳುವ ಮುನ್ನವೇ ಅವರ ಅವಶ್ಯಕತೆಗಳನ್ನು ಪೂರೈಸುತ್ತಿದ್ದರು. ತಾಯಿಯವರ ನಗು ಅವರ ಸಂತೋಷವಾಗಿತ್ತು; ಅವರ ನೋವು ಅವರ ಹೃದಯದ ನೋವಾಗಿತ್ತು. ಹಗಲು ರಾತ್ರಿ ಎನ್ನದೆ, ಸುಖ ದುಃಖ ಎನ್ನದೆ, ತಮ್ಮ ಬದುಕನ್ನೇ ತಾಯಿಯ ಸೇವೆಗೆ ಅರ್ಪಿಸಿಕೊಂಡಿದ್ದರು. *ತನು ಮನದ ಸೇವೆ| ಉಸಿರಿರುವ ತನಕಬೇಸರವಿಲ್ಲ ಕಿಂಚಿತ್ತ -ಹಡೆದವ್ವಉಸಿರು ಹಾಕಲಾರೆ ಕಡೆ ತನಕ* || ಎನ್ನುತ್ತಿದ್ದರು ನನ್ನ ತಾಯಿ ಲಲ್ಲೇಶ್ವರಿಯವರುತಾಯಿಯವರು. ಪ್ರತಿ ಘಳಿಗೆಯಲ್ಲೂ ಅವರ ಕೈ ಹಿಡಿದು ನಡೆಸುತ್ತಿದ್ದರು. ತಾಯಿಯವರು ಆಯಾಸಗೊಂಡಾಗ ತಮ್ಮ ಮಡಿಲನ್ನೇ ಆಸರೆಯನ್ನಾಗಿ ಮಾಡುತ್ತಿದ್ದರು. ತಾಯಿಯವರ ಆರೋಗ್ಯದಲ್ಲಿ ಏರಿಳಿತಗಳು ಬಂದಾಗ, ಅವರ ಕಣ್ಣಲ್ಲಿ ನಿದ್ರೆ ಇರುತ್ತಿರಲಿಲ್ಲ… ಒಂದೇ ಸಮನೆ ದೇವರಲ್ಲಿ ತಾಯಿಗೆ ನೋವು ಕೊಡಬೇಡವೆಂದು ಬೇಡಿಕೊಳ್ಳುತ್ತಿದ್ದರು. *ಅರೆ ನಿಮಿಷ ಬಿಟ್ಟಿಲ್ಲ |ನೆರಳಾಗಿ ಬೆಳೆದೆವುಬೇರೆ ಸ್ವತಂತ್ರ ಪಡೆದಿಲ್ಲ -ತಾಯಿಯಹರಣ ಒಂದು ದೇಹವೆರಡು*|| ಎನ್ನುವಂತೆ ಲಲ್ಲೇಶ್ವರಿಯವರು ತಾಯಿ ಇಲ್ಲದೆ ಒಂದು ಕ್ಷಣವೂ ಬದುಕಿರಲಾರಿ ಅನ್ನುವ ಸ್ಥಿತಿಯಲ್ಲಿ ಅವರು ಬದುಕುತ್ತಿದ್ದರು.ತಾಯಿಯವರ ಕೊನೆಯ ದಿನಗಳಲ್ಲಿ ಲಲ್ಲೇಶ್ವರಿ ತಾಯಿಯವರ ಸೇವೆ ಇನ್ನಷ್ಟು ಅಪೂರ್ವವಾಯಿತು. ಅವರು ಮಗಳಾಗಿ , ತಾಯಿಗೆ ತಾಯಿಯಾಗಿ ಮಗುವನ್ನು ನೋಡಿಕೊಳ್ಳುವಂತೆ ಮಮತೆಯಿಂದ ಜಯದೇವಿ ತಾಯಿಯವರನ್ನು ನೋಡಿಕೊಂಡರು. ಔಷಧಿ ನೀಡುವುದರಿಂದ ಹಿಡಿದು, ಊಟ ಮಾಡಿಸುವವರೆಗೂ, ರಾತ್ರಿ ನಿದ್ರೆಯಲ್ಲೂ ಎಚ್ಚರವಿದ್ದು ಅವರ ಆರೋಗ್ಯವನ್ನು ಗಮನಿಸುತ್ತಿದ್ದರು. *ಅಹೋರಾತ್ರಿ ನೆನೆದೆ| ಮಹಾತಾಯಿ ಸೇವೆಇಹಪರವ ಗೆಲಿದೆ ಕಟಾಕ್ಷ -ಸೇವೆಯಲಿಗೆಲಿದೆ ಜನನ ಮರಣವನು* ||ಎನ್ನುತ್ತಿದ್ದರು ಲಲ್ಲೇಶ್ವರಿಯವರು. ಇಲ್ಲಿ ಜಯದೇವಿ ತಾಯಿಯವರು ಒಂದು ಘಟನೆಯನ್ನು ಯಾವಾಗಲೂ ನೆನಪಿಸುತ್ತಿದ್ದರು . ಆಗ ಲಲ್ಲೇಶ್ವರಿ ಅವರಿಗೆ ಕೇವಲ ಮೂರು ಅಥವಾ ನಾಲ್ಕು ವರ್ಷಗಳಿರಬಹುದು…..ಜಯದೇವಿ ತಾಯಿಯವರ ಆರೋಗ್ಯ ಹುಷಾರಿಲ್ಲದೆ ಹಾಸ್ಪಿಟಲ್ ನಲ್ಲಿ ಅಡ್ಮಿಟ್ ಆದ ದಿನಗಳಲ್ಲಿ ನಡೆದ ಈ ಘಟನೆ ಕೇಳಿದರೆ ಹೃದಯವೂ ಕರಗುತ್ತದೆ.ಆಸ್ಪತ್ರೆಯ ಹಾಸಿಗೆಯ ಮೇಲೆ ಜಯದೇವಿ ತಾಯಿಯವರು ಅಸಹನೀಯ ನೋವಿನಿಂದ ನರಳುತ್ತಿದ್ದರು. ದೇಹದ ಯಾತನೆ ಹೆಚ್ಚಾದಾಗ ಆ ಕ್ಷಣದಲ್ಲಿ ತಮ್ಮನ್ನು ತಾವು ಮರೆತು, ಪುಟ್ಟ ಮಗುವಿನಂತೆ,“ಅವ್ವಾ… ಅವ್ವಾ…”ಎಂದು ತಮ್ಮ ಜನ್ಮದಾತೆಯನ್ನು ಕರೆಯುತ್ತಿದ್ದರು. ಆ ಕರೆಯಲ್ಲಿ ನೋವಿತ್ತು, ಹಂಬಲವಿತ್ತು, ತಾಯಿಯ ಮಡಿಲಿಗಾಗಿ ಹಾತೊರೆಯುವ ಮಗುವಿನ ಹೃದಯವಿತ್ತು. ಆ ದೃಶ್ಯವನ್ನು ಕಂಡ ಲಲ್ಲೇಶ್ವರಿಯವರ ಹೃದಯ ಕರಗಿತು. ಆ ಕ್ಷಣದಲ್ಲಿ ತಾಯಿಯಾಗಿ ನಿಂತರು..ತನ್ನ ತಾಯಿಯ ಕಣ್ಣೀರನ್ನು ಒರೆಸುತ್ತಾ, ತಲೆಯನ್ನು ಮೃದುವಾಗಿ ಸವರುತ್ತಾ, ಮೂರು ವರ್ಷದ ಮಗುವೊಂದು ತನ್ನ ತಾಯಿಯನ್ನು ಸಮಾಧಾನಪಡಿಸಲು ಮುಗ್ಧತೆಯಿಂದ,“ಅವ್ವಾ, ಅಳಬೇಡ. ನಿನ್ನ ತಾಯಿ ಬರುವವರೆಗೂ ನಾನೇ ನಿನ್ನ ತಾಯಿಯಾಗಿರುತ್ತೇನೆ. ಏನು ಬೇಕಾದರೂ ನನಗೆ ಹೇಳು…”ಎಂದು ಹೇಳಿದರು.ಆ ಮಾತು ಕೇಳಿದಾಗ ಅಲ್ಲಿ ಇದ್ದವರ ಕಣ್ಣುಗಳಲ್ಲೂ ನೀರು ತುಂಬಿತು…. ಸಂಬಂಧಗಳೆಲ್ಲ ತಲೆಕೆಳಗಾಗಿದ್ದವು. ತಾಯಿ ಮಗುವಾಗಿದ್ದರು,ಮಗಳು ತಾಯಿಯಾಗಿದ್ದರು.ಲಲ್ಲೇಶ್ವರಿ ತಾಯಿಯವರು ತಮ್ಮ ಕೈಯಿಂದ ನೀರು ಕುಡಿಸಿದರು. ನೋವಿನಿಂದ ನಲುಗಿದ್ದ ತಾಯಿಯ ಬೆವರನ್ನು ಒರೆಸಿದ್ದರು. ಅಂದಿನದಿನದಿಂದ ಕೊನೆಯ ದಿನ ವರೆಗೂ ತಾಯಿಯಾಗಿಯೇ ಅವರು ಜಯದೇವಿ ತಾಯಿಯವರಿಗೆ ಆಸರೆಯಾದರು.ಅವರ ಪ್ರತಿಯೊಂದು ಸ್ಪರ್ಶದಲ್ಲೂ ಮಮತೆಯಿರುತಿತ್ತು.ಪ್ರತಿಯೊಂದು ಮಾತಿನಲ್ಲೂ ಧೈರ್ಯವಿತ್ತು, ಸೇವೆಯಲ್ಲೂ ಭಕ್ತಿಯಿತ್ತು.ಒಂದು ಸಮಯದಲಿ ಜಯದೇವಿ ತಾಯಿಯವರು ಲಲ್ಲೇಶ್ವರಿಯನ್ನು ಮಡಿಲಲ್ಲಿ ಹೊತ್ತು ಬೆಳೆಸಿದ್ದರು. ಈಗ ಕಾಲಚಕ್ರ ತಿರುಗಿ, ಲಲ್ಲೇಶ್ವರಿಯವರೇ ಜಯದೇವಿ ತಾಯಿಯವರನ್ನು ಮಮತೆಯ ಮಡಿಲಲ್ಲಿ ಹೊತ್ತುಕೊಂಡಿದ್ದರು. *ತನು ಸವಿಸಿ ಸೇವೆಯಲ್ಲಿ| ಮನನಿಲಿಸಿ ಧ್ಯಾನದಿ ತನುಮನ ಒಂದಾಗಿ ದುಡಿಸಿದೆ -ನನ್ನವ್ವನಾನೆಂಬುದು ಅಳಿದು ನೀನಾದೆ*|| ತಾಯಿಯ ನೋವನ್ನು ತಮ್ಮ ನೋವನ್ನಾಗಿ, ತಾಯಿಯ ಕಣ್ಣೀರನ್ನು ತಮ್ಮ ಕಣ್ಣೀರನ್ನಾಗಿ, ಪ್ರತಿ ಉಸಿರಿನ ಪ್ರಾರ್ಥನೆಯಾದರು. *ಕಡೆತನ ಭಂಗ |ಬರದೇ ಅಡಿಗಡಿಗೆ ಎಚ್ಚರಬಿಡದಂತೆ ತವ ಸೇವೆ -ನನ್ನವ್ವಮೂಡಿಗೆ ಧರಿಸಿರಿ ತವ ಪಾದ*|| ಜನ್ಮ ನೀಡಿದ ತಾಯಿಗೆ ಮರಳಿ ತಾಯಿಯಾಗುವ ಭಾಗ್ಯ ಕೆಲವೇ ಆತ್ಮಗಳಿಗೆ ಸಿಗುತ್ತದೆ. ಅಪರೂಪದ ಭಾಗ್ಯವನ್ನು ಲಲ್ಲೇಶ್ವರಿ ತಾಯಿಯವರು ತಮ್ಮ ಪ್ರೀತಿ, ಸೇವೆ ಮತ್ತು ತ್ಯಾಗದ ಮೂಲಕ ಸಾರ್ಥಕಗೊಳಿಸಿದರು. ಜಯದೇವಿ ತಾಯಿಯವರ ಕೊನೆಯ ದಿನಗಳಲ್ಲಿ ಮಮತೆಯ ಮೂರ್ತಿ, ಸೇವೆಯ ಮಗಳಾಗಿ, ತಾಯಿಯ ಬದುಕಿನ ಆಶ್ರಯವಾಗಿದ್ದರು. ಅವರ ಜೀವನವನ್ನು ನೋಡಿದಾಗ, “ಮಗಳು ಎಂದರೆ ಕೇವಲ ಜನ್ಮ ನೀಡಿದ ಸಂತಾನವಲ್ಲ….ತಾಯಿಯ ಹೃದಯದ ತುಂಡು” ಎಂಬ ಮಾತು ನೆನಪಾಗುತ್ತದೆ.ತಾಯಿಯವರ ಜೀವನದ ಕೊನೆಯ ಕ್ಷಣಗಳಲ್ಲೂ ಲಲ್ಲೇಶ್ವರಿ ತಾಯಿಯವರ ಕಾಳಜಿ ಮತ್ತು ಸೇವೆ ಗಂಗೆಯಂತೆ ನಿರಂತರವಾಗಿ ಹರಿಯುತ್ತಿತ್ತು… ಅಪಾರ ಪ್ರೀತಿ, ಭಕ್ತಿ ಮತ್ತು ಕೃತಜ್ಞತೆಯಿಂದ ಮೂಡಿದ ಅಮೃತಧಾರೆ.*ನೀನಿಲ್ಲದ ತಾಣ |ಇಲ್ಲ ಇನ್ನೆಲ್ಲಿನೀನೆ ತುಳುಕಿರುವೆ ಒಳ ಹೊರಗೆ -ತಾಯವ್ವನಾನು ನೀನು ಬೆರೆತು ಒಂದಾಗಿ*|| ಎನ್ನುವಂತೆ ಜಯದೇವಿ ತಾಯಿಯವರು ಮತ್ತು ಲಲ್ಲೇಶ್ವರಿ ತಾಯಿಯವರ ನಡುವಿನ ಬಾಂಧವ್ಯ ಸಾಮಾನ್ಯ ತಾಯಿಮಗಳ ಸಂಬಂಧವಾಗಿರಲಿಲ್ಲ. ಅದು ಎರಡು ದೇಹಗಳಲ್ಲಿ ನೆಲೆಸಿದ್ದ ಒಂದೇ ಆತ್ಮದ ಪ್ರೀತಿಯಾಗಿತ್ತು. ಕೊನೆಯ ದಿನಗಳಲ್ಲಿ ಜಯದೇವಿ ತಾಯಿಯವರ ಆರೋಗ್ಯ ಹದಗೆಟ್ಟ ದಿನಗಳಲ್ಲಿ ವೈದ್ಯರು, ಸಿಬ್ಬಂದಿ ಮತ್ತು ಅವರ ಹತ್ತಿರದವರು ಒಂದು ವಿಷಯವನ್ನು ಗಮನಿಸಿದ್ದರು. ಲಲ್ಲೇಶ್ವರಿ ತಾಯಿಯವರ ಜೀವನವೇ ಜಯದೇವಿ ತಾಯಿಯವರ ಸುತ್ತ ಸುತ್ತುತ್ತಿತ್ತು. .ಆ ಕಾರಣದಿಂದಲೇ ತಾಯಿಯವರ ಸ್ಥಿತಿಯನ್ನು ಕಂಡ ವೈದ್ಯರು ಕೂಡ ಒಂದು ತುರ್ತು ಸಭೆ ಕರೆದು“ತಾಯಿಯವರ ಬಗ್ಗೆ ನಮ್ಮ ಕಾಳಜಿ ಎಷ್ಟಿದೆಯೋ, ಅಷ್ಟೇ ಕಾಳಜಿ ಲಲ್ಲೇಶ್ವರಿ ತಾಯಿಯವರ ಬಗ್ಗೆಯೂ ಇದೆ. ಇವರಿಬ್ಬರ ಪ್ರೀತಿ ಎಷ್ಟು ಆಳವಾಗಿದೆ ಎಂದರೆ, ತಾಯಿಯವರ ಅಗಲಿಕೆಯ ಆಘಾತವನ್ನು ಅವರು ಹೇಗೆ ತಡೆದುಕೊಳ್ಳುತ್ತಾರೆ ಎಂಬ ಚಿಂತೆ ನಮಗಿದೆ. ಅವರನ್ನು ಸ್ವಲ್ಪವಾದರೂ ಮಾನಸಿಕವಾಗಿ ಸಿದ್ಧಗೊಳಿಸಬೇಕು…”ಎಂದು ಮಾತನಾಡಿದ್ದರೆಂದು ಕೇಳಿದಾಗ ಅನೇಕರಿಗೆ ಆಶ್ಚರ್ಯವಾಗುತ್ತಿತ್ತು.ಅದು ಸಾಮಾನ್ಯ ಪ್ರೀತಿಯಲ್ಲ…ಅದು ಉಸಿರಿಗೂ ಉಸಿರಿನ ಸಂಬಂಧವಾಗಿತ್ತು.ಜಯದೇವಿ ತಾಯಿಯವರು ಕೂಡ ಈ ವಿಷಯವನ್ನು ಅರಿತಿದ್ದರು. ಆದ್ದರಿಂದ ಅವರು ಆಗಾಗ ಲಲ್ಲೇಶ್ವರಿ ತಾಯಿಯವರನ್ನು ಕರೆದು ಪ್ರೀತಿಯಿಂದ,“ಮಗಳೇ, ನಾನು ಯಾವಾಗಲೂ ದೇಹದಲ್ಲಿ ಇರಲಾರೆ. ನಾನು ಹೋದ ಮೇಲೂ ನೀನು ಕುಗ್ಗಬಾರದು. ಗಟ್ಟಿಯಾಗಿ ನಿಲ್ಲಬೇಕು. ನಮ್ಮ ಪರಂಪರೆಯನ್ನು, ನಮ್ಮ ಮೌಲ್ಯಗಳನ್ನು, ನಮ್ಮ ಸೇವೆಯ ಮಾರ್ಗವನ್ನು ಮುಂದುವರಿಸಬೇಕು…”ಎಂದು ಹೇಳುತ್ತಿದ್ದರು.ಆದರೆ ಆ ಮಾತು ಕೇಳಿದ ಕೂಡಲೇ ಲಲ್ಲೇಶ್ವರಿ ತಾಯಿಯವರ ಮನಸ್ಸು ತಲ್ಲಣಗೊಳ್ಳುತ್ತಿತ್ತು.“ಅವ್ವಾ, ಆ ಮಾತು ಹೇಳಬೇಡ! ನೀನು ಇಲ್ಲದಿರುವುದನ್ನು ನಾನು
ಧಾರಾವಾಹಿ ಸಂಗಾತಿ-21 ಸವಿತಾ ದೇಶಮುಖ ಜಯದೇವಿತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಮಹಾನ್ ಚೇತನ ಜಯದೇವಿ ತಾಯಿಯವರು ಕೋರ್ಟ್ ಕೇಸ್ನ್ನ ಗೆದ್ದು…..“ನ್ಯಾಯಕ್ಕೆ ಜೀವ ತುಂಬಿದರು.*ಆಗಿನ ಕಾಲದಲ್ಲಿ ಜಯದೇವಿ ತಾಯಿಯವರ ಪತಿಯು ಬಾಲಕರೆಂದು ಬ್ರಿಟಿಷರ ಮೇಲ್ವಿಚಾರಣೆಯಲ್ಲಿದ್ದ ದೊಡ್ಡ ಆಸ್ತಿ, ಜಮೀನು, ಮನೆ, ವ್ಯವಹಾರ—ಎಲ್ಲವು ಒಂದೇ ಕ್ಷಣದಲ್ಲಿ ತಾಯಿ ಯ ಹೆಗಲ ಮೇಲೆ ಬಿದ್ದವು.ಪುರುಷರೇ ಹೆದರಿಬಿಡುವಂತಹ ಜವಾಬ್ದಾರಿಯನ್ನು ಒಬ್ಬ ಹೆಣ್ಣು ಮಗಳು ಒಬ್ಬಳೇ ಹೊತ್ತು ನಿಲ್ಲುವುದು ಅಂದಿನ ಸಮಾಜದಲ್ಲಿ ಅಸಾಧ್ಯವೆಂದು ಎಲ್ಲರೂ ಭಾವಿಸಿದ್ದರು.ಆದರೆ ಜಯದೇವಿ ತಾಯಿ ಒಬ್ಬ ಸಬಲ ತಾಯಿತನದ ಶಕ್ತಿಯಾಗಿ ನಿಂದರು.ಒಂದೆಡೆ ಗಂಡನ ಅಗಲಿಕೆಯ ನೋವು ಹೃದಯದಿ ಮುಚ್ಚಿಟ್ಟು ಮತ್ತೊಂದೆಡೆ ಐದು ಮಕ್ಕಳ ಭವಿಷ್ಯ ಅವರ ಕಣ್ಣೆದುರಿಗೆ ನಿಂತಿತ್ತು ಬೆಳಗ್ಗೆ ಉದಯಿಸುವ ಸೂರ್ಯನಿಗಿಂತ ಮುಂಚೆಯೇ ಎದ್ದು ಮನೆಯ ಕೆಲಸ, ಮಕ್ಕಳ ಆರೈಕೆ, ಕಾರ್ಮಿಕರ ನೋಡಿಕೊಳ್ಳುವುದು, ಆಸ್ತಿಯ ಲೆಕ್ಕಪತ್ರ, ನ್ಯಾಯದ ವಿಚಾರ …..ಎಲ್ಲವನ್ನೂ ನಿರ್ವಹಿಸುತ್ತಿದ್ದರು. ಅವರಲ್ಲಿ ಆವರಿಸಿದ ಖಾಲಿತನವನು ಸಿದ್ದರಾಮನ ನೆನಹುನಲಿ ನಮ್ಮೆದೆಯ ತುಂಬಲಾರಂಭಿಸಿದರು. ಇಚ್ಛೆಯಿಂದಲೇ ಸರ್ವ|ತುಚ್ಚಿೀಕರಿಸಿ ಬೇಗ ಎಚ್ಚರದಿಂದ ಇರಬೇಕು- ನಮ್ಮಲಿಯಸಚ್ಚಿದಾನಂದನ ಸ್ಮರಿಸೂತ||*B ಸಚ್ಚಿದಾನಂದ ಶಿವಮಯನಾದ ಸಿದ್ದರಾಮನು ನೆನೆಯುತ ಐದು ಮಕ್ಕಳ ಬದುಕನ್ನು ಕಟ್ಟುವ ಉಕ್ಕಿನ ಮನೋಬಲವಿತ್ತು. ಮಕ್ಕಳ ಬದುಕು ಅರಳಬೇಕೆಂಬು ಕನಸು ಹೊತಿದ್ದರು… ಮಕ್ಕಳಿಗೆ ಪರ್ವತದಂತೆ ಬಲವಾಗಿ ನಿಂತರು.ಅದರಲ್ಲೇ ಅವರ ತಾಯಿತನದ ದಿವ್ಯತೆ ಇತ್ತು. ಇಲ್ಲಿ ಒಂದೆರಡು ಘಟನೆಗಳನ್ನು ನೆನಪಿಸಿಕೊಳ್ಳಲೇ ಬೇಕು ತಾಯಿಯವರು ಆಗಿಂದ್ದಾಂಗ ಹೇಳುತ್ತಿದ್ದರು. ಮೊದಲ ಮಗಳು ಶಶಿಕಲಾ ಅವರಿಗೆ ರಾಜಶೇಖರ ಮಡಕಿ ಸ್ವಂತ ತಮ್ಮನಿಗೆ ಕೊಟ್ಟು ಮದುವೆ ಮಾಡಲಾಗಿತ್ತು . ಅವರು ಸುಖ ಸಂಸಾರದಲ್ಲಿ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾ ಸಾಹಿತ್ಯವನ್ನು ರಚಿಸುತ್ತಾ ಸುಖವಾಗಿ ಇದ್ದರು. ತಾಯಿಯವರ ಹಿರಿಯ ಮಗಳು ಶಶಿಕಲಾ ಮಡಕಿ ಅಳಿಯ ರಾಜಶೇಖರ್ ಮಡಿಕೆ ಎರಡನೇ ಮಗ ಶ್ರೀಕಂಠ ಮೂರನೇ ಮಗ ಪ್ರಭುರಾಜ ಇವರಿಬ್ಬರನ್ನು ಪಂಚಗಣಿಯ ಶಾಲೆಯಲ್ಲಿ ಓದಲು ಕಳಿಸಿಕೊಟ್ಟಿದ್ದರು .ಸುಖದ ಸುಪತ್ತಿನಲ್ಲಿ ಬೆಳೆದು ಬಂದ್ದಿದ್ದ ಮಕ್ಕಳಿಗೆ ಅಲ್ಲಿಯ ಕಠಿಣವಾದ ಶಿಸ್ತು ಬದ್ಧತೆ ,ಕಟ್ಟುನಿಟ್ಟಾದ ನಿಯಮಗಳು, ಶಾಲೆಯ ಅಭ್ಯಾಸದ ಭಾರವು ಅವರಿಗೆ ಸರಿ ಹೊಂದಲಿಲ್ಲ, ಊಟದಲಿ ವ್ಯತ್ಯಾಸ ಸಹಿಸಲಾಗಲಿಲ್ಲ. ಹೀಗಾಗಿ ಅವರು ಅಲ್ಲಿ ಇರಲು ಒಪ್ಪಿಕೊಳ್ಳಲಿಲ್ಲ… ಹಿರಿಯ ಮಗ ಶ್ರೀಕಂಠ ಆದರೂ ತಾಯಿಗೆ ಹೆದರಿ ಮೊದಲು ಮಗ ಶ್ರೀಕಂಠ ಶಾಲೆಯ ರಜೆ ಪ್ರಾರಂಭವಾಗುವವರೆಗೂ ಇದ್ದು ರಜೆಗೆಂದು ಮನೆಗೆ ಬಂದಾಗ ಹಿಂತಿರುಗಿ ಹೋಗಲು ಸಾಧ್ಯವೇ ಇಲ್ಲವೆಂದು ತನ್ನ ಅಭಿರುಚಿಯು ಕೃಷಿಯಲ್ಲಿ ಹಾಗೂ ಅಂಗಡಿ ಮನೆ ನೋಡಿಕೊಂಡು ಹೋಗುವದರಲ್ಲಿ ಇದೆ ಎಂದು ತಿಳಿಸಿದಾಗ ತಾಯಿಯವರು ಅವರ ವಿಚಾರದ ವಿರುದ್ಧ ಹೋಗಲು ಒಪ್ಪಲಿಲ್ಲ ಏಕೆಂದರೆ ಶ್ರೀಕಂಠವರಿಗೆ ಕೃಷಿಯಲ್ಲಿ ಅಭಿರುಚಿ ಹೆಚ್ಚಿಗೆ ಇರುವುದನ್ನು ಗಮನಿಸಿದ್ದ ತಾಯಿಯವರು ಅವರಂತೆ ಒಪ್ಪಿಕೊಂಡರು.ಇಲ್ಲಿ ತಾಯಿಯವರು ಮಕ್ಕಳಿಗೆ ಯಾವುದೇ ರೀತಿಯಾದ ಒತ್ತಾಯದಿಂದ ಯಾವ ಶಿಕ್ಷಣವನ್ನು ಕೊಡಬಾರದು ಅನ್ನುವುದನ್ನು ಮನಗಂಡಿದ್ದರು ಅವರವರ ಅಭಿರುಚಿಯಂತೆ ಅವರವರ ಜೀವನದ ದಾರಿಯನ್ನು ತೊರಿ ಕೊಡಬೇಕು ಅನ್ನುವ ಅಭಿಪ್ರಾಯ ಹೊಂದಿದ್ದರು. ಇನ್ನು ಎರಡನೇ ಮಗ ಪ್ರಭುರಾಜ ಅತ್ಯಂತ ಮೃದು ಹೃದಯ, ಜಾಣ ಬುದ್ಧಿವಂತನು ಇವರಿಗೆ ದೊಡ್ಡ ಶಿಕ್ಷಣವನ್ನು ಕೊಡಿಸಬೇಕೆನ್ನುವ ಆಸೆ ತಾಯಿಯವರು ಹೊತ್ತಿದ್ದರು .ಅವರು ಕೂಡ ತಿರುಗಿ ಹೋಗಲು ಒಪ್ಪದಿದ್ದಾಗ ತಾಯಿಯವರು ನನಗಾಗಿ ನೀನು ಹೋಗಲೇ ಬೇಕು ಅನ್ನುವ ಪ್ರಮಾಣ ತೆಗೆದುಕೊಂಡರು… ಏಕೆಂದರೆ ಅವರಲ್ಲಿ ಮುಂದೆ ಕಲಿಯುವ ಯೋಗ್ಯತೆ ಇದೆ ಅನ್ನುವುದನ್ನು ಅರೆತಿದ್ದರು …..ಅನಿವಾರ್ಯವಾಗಿ ಪ್ರಭುರಾಜರಿಗೆ ಹೋಗ ಬೇಕಾಗಿ ಬಂತು. ಎರಡನೆ ಮಗ ಪ್ರಭುರಾಜ ಪ್ರಭುರಾಜ್ ಅವರ ಪ್ರತ್ನಿ ಪ್ರಮೀಳಾ (ಗದಗಿನ ಎಳೆಮಲಿ ಶಾಂತಪ್ಪನವರ ಮಗಳು) ತಾಯಿಯವರನ್ನು ಒಂದು ಕ್ಷಣವು ಬಿಟ್ಟಿರದಿದ್ದ ಪ್ರಭು ರಾಜರು ತಾಯಿಯ ನೆರಳಲ್ಲಿದವರು ಹಾಗೂ ಕರುಳಿನ ಸಂಬಂಧ ಗಾಡವಾಗಿತ್ತು. ತಾಯಿಯ ಮೇಲೆ ಅಪಾರ ಪ್ರೀತಿ ಹೊಂದಿದ ಅವರಿಗೆ ತಾಯಿಯಿಂದ ದೂರಿರುವುದು ಬಹಳ ಅಸಹನಿಯವಾಗಿತ್ತು ಹಿಂಸೆ ಕೊಡಲಾರಂಭಿಸಿತ್ತು …. ತಾಯಿಗೆ ಪತ್ರ ಬರೆದು ಹಿಂತಿರುಗಿ ಬರುವುದಾಗಿ ಒತ್ತಾಯಿಸುತ್ತಿದ್ದರು. ಮನೆಯಲ್ಲಿ ಇದ್ದಾಗ ಕೂಡ ಪ್ರಭುರಾಜರಿಗೆ ತಾಯಿಯವರು ಅವನ ಸಮೀಪದಲ್ಲಿ ಇದ್ದರೆ ಮಾತ್ರ ಮನಸ್ಸಿಗೆ ಶಾಂತಿ….ತಾಯಿ ಕಣ್ಣೆದುರಿನಿಂದ ಸ್ವಲ್ಪ ದೂರವಾದರೂ ಅವನ ಹೃದಯ ಖಾಲಿಯಾಗಿಬಿಡುತ್ತಿತ್ತು. ಇನ್ನು ದೂರದ ಊರಲ್ಲಿ ಇದ್ದರೆ ಕೇಳಬೇಕೆ ಅವರ ಸ್ಥಿತಿ ಹೇಳಲಾಗಿತ್ತುಶಾಲೆಯಲ್ಲಿ ಕುಳಿತಿದ್ದರು ಪ್ರಭುರಾಜ್ ಮನಸ್ಸು ಅಲ್ಲಿ ನೆಲಸಲೇ ಇಲ್ಲ. ಸುತ್ತಲೂ ವಿದ್ಯಾರ್ಥಿಗಳು ಕುಳಿತು ಶಿಕ್ಷಕರು ಪಾಠ ಮಾಡುತ್ತಿದ್ದರೆ ಅವನ ಕಿವಿಯಲ್ಲಿ ಕೇಳಿಸುತ್ತಿದ್ದದ್ದು ತಾಯಿಯ ಧ್ವನಿಯೇ. ಊಟಕ್ಕೆ ಕೂತರೂ ತಾಯಿಯ ಕೈತುತ್ತಿನ ನೆನಪು, ರಾತ್ರಿ ಮಲಗಿದರೂ ತಾಯಿಯ ಮುಖವೇ ಕಣ್ಣಮುಂದೆ ತೇಲುತ್ತಿತ್ತು. ದಿನದಿಂದ ದಿನಕ್ಕೆ ತಾಯಿಯ ನೆನಪು ಅವನ ಮನಸ್ಸನ್ನು ಕಾಡಲಾರಂಭಿಸಿತು …..!!ಪ್ರಿಯ ಓದುಗರೆಇದೆಲ್ಲಾ ಏನೋ ನಾನು ಅತಿಶೋಯುಕ್ತಿಯಾಗಿ ಬರೆಯುತ್ತಿದ್ದೇನೆ ಅಂತ ಏನು ತಿಳಿಯಬೇಡಿ…. ಪ್ರಭು ರಾಜರ ತಾಯಿಯ ಮೇಲಿದ್ದ ಅಗಾಧವಾದ ಪ್ರೀತಿ ಯಾವದಕ್ಕೂ ಸಾಟಿಯಾಗದು….!!!!ಏನು ಹೇಳಿದರೂ ತಾಯಿಯು ಯಾವುದಕ್ಕೂ ಒಪ್ಪದಾದಾಗ ಕೊನೆಗೆ ತಾಳಲಾರದೆ ತಾಯಿಗೆ ಪತ್ರ ಬರೆದನು.“ಅವ್ವಾ… ನನಗೆ ಇಲ್ಲಿ ಇರಲು ಆಗುತ್ತಿಲ್ಲ. ನಿಮ್ಮನ್ನು ಬಿಟ್ಟು ಒಂದು ಕ್ಷಣವೂ ಇರಲಾಗುತ್ತಿಲ್ಲ. ನಾನು ಹಿಂದಿರುಗಿ ಬರುತ್ತೇನೆ. ಇಲ್ಲವಾದರೆ ಇಲ್ಲಿಯೇ ಗುಡ್ಡು ಪರ್ವತಗಳನ್ನು ಏರಿ, ಬಿದ್ದು ಸಾಯ್ತೀನಿ…” ಎಂದು ಕಣ್ಣೀರಿನಿಂದ ಬರೆದ ಆ ಮಾತುಗಳಲ್ಲಿ ಮಗನ ಅತಿಯಾದ ಮಮತೆ ಮತ್ತು ಅಧೈರ್ಯ ಎರಡೂ ತುಂಬಿಕೊಂಡಿದ್ದವು.ಆ ಪತ್ರ ಓದಿದ ತಾಯಿಯವರು ಕ್ಷಣಕಾಲ ಮೌನವಾಗಿದ್ದರು. ಮಗನ ಪ್ರೀತಿಯ ತೀವ್ರತೆ ಅವರಿಗೆ ಗೊತ್ತಿತ್ತು. ಆದರೆ ಜೀವನವೆಂದರೆ *ಕೇವಲ ಭಾವನೆಗಳಿಗೆ ತಲೆಬಾಗುವುದಲ್ಲ, ಧೈರ್ಯದಿಂದ ಎದುರಿಸುವ ಪಥ ಎನ್ನುವರು…… *ಕಣ್ಣೊಳಗಿನ ಕಸ |ಸಣ್ಣಾಗಿದ್ದರೆ ಏನುಕಣ್ಣು ಚುಚ್ಚಿ ನೀರು ಸುರಿವುದು- ಮಾಯೆಯುಸಣ್ಣಲ್ಲ ಕಣ್ಣಿನ ವಿಸ್ತಾರ ||* ಈ ರೀತಿಯ ಮನಸ್ಸಿನ ಪ್ರವೃತ್ತಿಯು ಚಿಕ್ಕದಲ್ಲ ಅನ್ನುವುದು ಅರ್ಥವಾಯಿತು ಹೀಗಾಗಿ ತಾಯಿಗೆ ಕಠಿಣವಾದರೂ ಜೀವನದ ಪಾಠವಾಗುವ ಉತ್ತರ ಬರೆದರು… *ಬಾಳಿನಲ್ಲಿ ಕೆಟ್ಟ |ಕೀಳತನಕ್ಕೆ ಜಾಗಎಳ್ಳಿನ ಮನೆಯಷ್ಟು ಕೊಡದಿರು- ನಿನ್ನಲ್ಲಿಒಳ್ಳೆತನದಿ ಗಟ್ಟಿತನವು ಬೆಳೆಯಲಿ||* ಎನ್ನುತ….. ಹೀಗೆ ಬರೆದರು“ನನ್ನ ಹೊಟ್ಟೆಯಲ್ಲಿ ಹುಟ್ಟಿದವನು ಇಂಥ ಹೇಡಿಯೇ.. ಇಂಥ ಅಧೈರ್ಯ ಹೇಗೆ ಬಂತು? ಜೀವನದಲ್ಲಿ ಸಾಧನೆ ಮಾಡಲು ದೂರದ ಊರಿಗೆ ಹೋದರೆ ಕಷ್ಟಗಳು ಬರುತ್ತವೆ, ಏಕಾಂತ ಕಾಡುತ್ತದೆ. ಅದಕ್ಕೆ ಓಡಿ ಮನೆಗೆ ಬರಬೇಕೆಂದರೆ ಬದುಕಿನಲ್ಲಿ ಏನನ್ನೂ ಸಾಧಿಸಲಾಗದು. ಧೈರ್ಯವಾಗಿ ನಿಂತು ಹೋರಾಡಬೇಕು.‘ನಾನು ಅಲ್ಲೇ ಬಿದ್ದು ಸಾಯ್ತೀನಿ’ ಅಂತ ಹೇಳುವಷ್ಟು ದುರ್ಬಲನಾಗಿ ನನ್ನ ಮಗ ಹುಟ್ಟಿಲ್ಲ.ಸಾಯಬೇಕೆಂದರೆ ಅಲ್ಲೇ ಸಾಯಿ… ಆದರೆ ಓಡಿ ಬರುವ ಹೇಡಿತನದ ಮಾತು ಬೇಡ!” ಎಂದು ಕಡಾ ಖಂಡಿತವಾಗಿ ಪತ್ರವನ್ನು ಬರೆದರು. *ಹಿರಿಯರಲ್ಲಿ ಶ್ರದ್ಧೆ |ಸ್ಥಿರವಾಗಿ ಇರಲಿಹರಕೆ ಕೊಡುವವರು ನಿನಗೆ -ಈ ಮಾತುಪರಕಿಸಿ ನೋಡು ಬಾಳಲಿ ||*ಎನ್ನುವಂತೆ ತಾಯಿಯವರ ಆ ಮಾತುಗಳು ಪ್ರಭುರಾಜ್ ಹೃದಯಕ್ಕೆ ಮಿಂಚಿನಂತೆ ತಾಕಿದವು. ಮೊದಲಿಗೆ ಅವರ ಕಣ್ಣು ತುಂಬಿ ಬಂದರೂ, ತಾಯಿಯವರ ಮಾತಿನೊಳಗಿನ ಕಠೋರ ಪ್ರೀತಿಯನ್ನು ಅವರು ಅರ್ಥ ಮಾಡಿಕೊಂಡರು.ಆ ದಿನದಿಂದ ತನ್ನ ಕಲಿಕೆಯಲ್ಲಿ ಶ್ರದ್ಧೆಯಿಂದ ಓದಲಾರಂಭಿಸಿದರು ಮುಂದೆ ಎಲ್ ಎಲ್ ಬಿ…. ಕಲಿತು ವಕೀಲರಾದರು.. ಮುಂದೆ ದೊಡ್ಡ ರಾಜಕಾರಣಿ ಕೂಡ ಆದರು…ಮಮಕಾರದ ತಾಯಿಯಾಗಿ ಜೀವನದ ಬಿರುಗಾಳಿಯನ್ನು ಎದುರಿಸಲು ಮಕ್ಕಳ ಮನಸ್ಸನ್ನು ಉಕ್ಕಿನಂತೆ ಗಟ್ಟಿಗೊಳಿಸುವ ಗುರು ಕೂಡಾ ಆಗಿದ್ದರು. ಹೀಗೆ ಅತ್ಯಂತ ಧೈರ್ಯದಿಂದ ಆಸ್ತಿಯ ವ್ಯವಹಾರಗಳನ್ನು ನೋಡಿಕೊಳ್ಳುತ್ತಾ. ಸಿದ್ದರಾಮನ ಅಪ್ಪಟ ಭಕ್ತಿಯಾಗಿ, ಅನ್ಯಾಯದ ವಿರುದ್ಧ ಹೋರಾಡುವ ಮನೋಭಾವ ಹೊಂದಿದ ತಾಯಿಯವರು ಬಹಳ ಸುಭದ್ದವಾಗಿ ಭಧ್ಧತೆಯಿಂದ ತಾಯಿತನದ ಜವಾಬ್ದಾರಿಯನ್ನು, ಆಸ್ತಿಯ ಮಾಲೀಕತ್ವತೆಯನು ಹಾಗೂ ಜನ ಸೇವಕಿಯಾಗಿ ಕೆಲಸ ನಿರ್ವಹಿಸಲಾರಂಭಿಸಿದರು…. ಬಹಳ ಜನರು “ಹೆಂಗಸು ಒಬ್ಬಳೇ ಇಷ್ಟು ದೊಡ್ಡ ಜವಾಬ್ದಾರಿ ನಿಭಾಯಿಸಲಾರಳು” ಎಂದು ಮಾತಾಡಿದವರಿಗೆ ಉತ್ತರವಾಗಿ ತಮ್ಮ ಬದುಕನ್ನು ಬದುಕಿ ತೋರಿಸಿದರು.ಅವರ ಜೀವನ ಒಂದು ಅಳಲಿನ ಕಥೆಯನು ಒರಸಿ ಅದು ತಾಯಿತನದ ಮಹಾಕಾವ್ಯವನು ಬರೆದರು. *ದುಃಖ ದುಮ್ಮಾನಗಳು |ಸಿಕ್ಕಿ ಒದ್ದಾಡದಿರುಸುಖ ಬಂದಿತ್ತೆಂದು ಹಿಗ್ಗದಿರು -ಮನವೇಸುಖ ದುಃಖ ಅರ್ಪಿಸು ಶಿವನಡಿಗೆ ||*ಎಂದು ಬಾಳನು ಆರಂಭಿಸಿದರು. ಸವಿತಾ ದೇಶಮುಖ್
ಧಾರಾವಾಹಿ ಸಂಗಾತಿ-20 ಸವಿತಾ ದೇಶಮುಖ ಜಯದೇವಿತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಮಹಾನ್ ಚೇತನ ಭಾಗ- 20*ಜಯದೇವಿತಾಯಿ ಜೀವನ ವೃತ್ತಾಂತ*ಪತಿಯನ್ನು ದಿನರಾತ್ರಿ ಕಾಳಜಿಯಿಂದ ನೋಡಿಕೊಳ್ಳುತ್ತ ಜಯದೇವಿ ತಾಯಿಯವರು ತಮ್ಮ ಆರೋಗ್ಯವನ್ನು ಸಂಪೂರ್ಣವಾಗಿ ಮರೆತಿದ್ದರು. ತಮ್ಮ ದೇಹದ ನೋವನ್ನು ಕಡೆಗಣಿಸಿದ್ದರು. ಆ ಸಮಯದಲ್ಲಿ ಅವರಿಗೆ ಬೇನೆಯ ಅರಿವು ಆಗಲಿಲ್ಲ…. ನಂತರದ ದಿನಗಳಲ್ಲಿ ಒಳಗಿದ್ದ ನೋವುಗಳು ಒಂದೊಂದಾಗಿ ತಲೆ ಎತ್ತಲು ಶುರುಮಾಡಿದವು.ಆ ನಡುವೆ ಪತಿಯ ಸೇವೆ ಮಾಡುವಾಗ ಮೆಟ್ಟಲು ಏರಲು ಹೋಗಿ ಬಿದ್ದು ಬೆನ್ನಿನ ಎಲುಬಿಗೆ ಗಂಭೀರ ಹಾನಿ ಮಾಡಿತ್ತು. ಅವರು ತಾತ್ಕಾಲಿಕ ಚಿಕಿತ್ಸೆ ಪಡೆದು ಪತಿಗೆ ತನ್ನ ಆರೋಗ್ಯದ ಬಗ್ಗೆ ತಿಳಿಯದ ಹಾಗೆ ದಿನಗಳನ್ನು ಕಳೆಯುತ್ತಿದ್ದರು. ಪತಿಯ ಆರೈಕೆಯೇ ಅವರ ಪ್ರಪಂಚವಾಗಿತ್ತು. ಮೊದಲಿಗೆ ಅದು ಸಾಮಾನ್ಯವಾಗಿ ಕಂಡರೂ, ದಿನದಿಂದ ದಿನಕ್ಕೆ ತೀವ್ರವಾಗತೊಡಗಿತು. ತಲೆ ಸುತ್ತುವುದು, ನಿಶಕ್ತತೆ ಹೆಚ್ಚಾಗುತ್ತಿರುವುದು ಕಂಡುಬಂದಿತು…ದೇಹದಲ್ಲಿ ವಿಚಿತ್ರವಾದ ದುರ್ಬಲತೆ,.. ನಿಂತುಕೊಳ್ಳಲು ಸಾಧ್ಯವಾಗದಷ್ಟು ನೋವು ಕೊಡತೊಡಗಿತು. .. ಕೊನೆಗೆ ಮಕ್ಕಳು ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ವೈದ್ಯರು ಪರಿಶೀಲಿಸಿದಾಗ, ಬಹಳ ದಿನಗಳಿಂದ ನಿರ್ಲಕ್ಷ್ಯಗೊಂಡ ಆರೋಗ್ಯ ಸಮಸ್ಯೆಗಳು ಗಂಭೀರ ಹಂತಕ್ಕೆ ಬಂದಿವೆ ಎಂದು ತಿಳಿದುಬಂತು.ಮುಂಬೈಯಲ್ಲಿರುವ ದೊಡ್ಡ ಆಸ್ಪತ್ರೆಗೆ ಸೇರಿಸಲಾಯಿತು .ಪರೀಕ್ಷೆಗಳ ನಂತರ ವೈದ್ಯರು ಗಂಭೀರವಾಗಿ ಹೇಳಿದರು…..“ಇದು ತುಂಬಾ ದಿನಗಳಿಂದ ಇದ್ದ ಸಮಸ್ಯೆ. ಈಗ ಆಪರೇಷನ್ ಮಾಡಲೇಬೇಕು. ಆದರೆ…”“ಆದರೆ” ಎಂಬ ಒಂದು ಪದವೇ ಮಕ್ಕಳ ಮನಸ್ಸನ್ನು ನಡುಗಿಸಿತು.ವೈದ್ಯರು ಮುಂದುವರೆದು ಹೇಳಿದರು….“ಆಪರೇಷನ್ ಮಾಡಿದರೂ ಅವರು ಮತ್ತೆ ಸಹಜವಾಗಿ ಓಡಾಡುತ್ತಾರೆ ಎಂಬ ಗ್ಯಾರಂಟಿ ಕೊಡಲು ಸಾಧ್ಯವಿಲ್ಲ. ” ದೀರ್ಘಕಾಲದ ನಿರ್ಲಕ್ಷ್ಯ, ಮತ್ತು ಎಲುಬಿನ ಹಾನಿ….ಇವುಗಳ ಕಾರಣದಿಂದ ಫಲಿತಾಂಶ ಅನಿಶ್ಚಿತ.”ಎಂದರು.ಆ ಮಾತು ಕೇಳಿ ಮಕ್ಕಳ ಕಣ್ಣು ನೀರಾಯಿತು. ಆದರೆ ತಾಯಿಯವರು ಮಾತ್ರ ಶಾಂತವಾಗಿದ್ದರು.“ನನಗೆ ಭಯ ಇಲ್ಲ… ನಾನು ನನ್ನ ಜೀವನವನ್ನು ನನ್ನವರಿಗಾಗಿ ಬದುಕಿದ್ದೇನೆ. ಈಗ ಏನಾದರೂ ಆಗಲಿ, ನಾನು ಒಪ್ಪಿಕೊಂಡಿದ್ದೇನೆ…” ಎಂದು ವಿಶ್ವಾಸದಿಂದ ಹೇಳಿದರು.ಆಸ್ಪತ್ರೆಯ ಹಾಸಿಗೆಯಲ್ಲಿ ಇದ್ದಾಗಲೂ ಅವರು ತಮ್ಮ ನೋವನ್ನು ಹೇಳಿಕೊಳ್ಳಲಿಲ್ಲ. ಬದಲಾಗಿ ಮಕ್ಕಳ ಮುಖ ನೋಡುತ್ತಾ,“ನೀವು ಚೆನ್ನಾಗಿರಬೇಕು… ನಾನು ಹುಷಾರಾಗಿ ಬೇಗ ಬರುತ್ತೇನೆ…” ಅನ್ನುವ ಮನೋಬಲದ ಧೈರ್ಯ ತೋರುತ್ತಿದ್ದರು . ಆಪರೇಷನ್ ದಿನ ಬಂದಿತು. ವೈದ್ಯರು ತಮ್ಮ ಶ್ರೇಷ್ಠ ಪ್ರಯತ್ನ ಮಾಡಿದರು.ಐದು ಗಂಟೆಗಳ ಕಾಲ ನಡೆದ ಆ ಶಸ್ತ್ರಚಿಕಿತ್ಸೆ ಕುಟುಂಬದವರಿಗೆ ಯುಗದಷ್ಟು ಉದ್ದವಾಗಿತ್ತು.ಆಪರೇಷನ್ ನಂತರ, ಹಾಸಿಗೆಯಲ್ಲಿದ್ದರೂ ಅವರು ಮಕ್ಕಳಿಗೆ ಆಶೀರ್ವಾದ ಕೊಡುತ್ತಾ,“ನೀವು ಖುಷಿಯಾಗಿ ಇರಿ… ಅದೇ ನನ್ನ ಗೆಲುವು…”ಎಂದು ಹೇಳುತ್ತಿದ್ದರು.ತಾಯಿಯವರಿಗಾದ ಈ ಅನುಭವದಿಂದ ನಮ್ಮೆಲ್ಲರಿಗೂ ಒಂದು ಮಾತನ್ನು ಹೇಳುತ್ತಿದ್ದರು…. “ನಮ್ಮ ಆರೋಗ್ಯವನ್ನು ಕಡೆಗಣಿಸುವ… ತ್ಯಾಗ ಒಂದು ದಿನ ನೋವಿನ ರೂಪದಲ್ಲಿ ಹಿಂದಿರುಗುತ್ತದೆ. ಹೀಗಾಗಿ ದೇಹದ ಆರೋಗ್ಯದತ್ತ ಯಾವಾಗಲೂ ನಾವು ಅಲಕ್ಷಿಸಬಾರದು ದೇಹದಲ್ಲಿ ಸ್ವಲ್ಪಾದರೂ ಏರುಪೇರಾದರೆ ತಕ್ಷಣ ವೈದ್ಯರನ್ನು ಭೇಟಿಯಾಗಿ ಅದರ ಚಿಕಿತ್ಸೆಯನ್ನು ಪಡೆದುಕೊಳ್ಳಲೇಬೇಕು. ದೇವರು ದಯಪಾಲಿಸಿದ ಅತ್ಯ ಅಮೂಲ್ಯವಾದ ನಮ್ಮ ಆತ್ಮ- ನಮ್ಮ ದೇಹದ ಕಾಳಜಿಯನ್ನು ನಾವೇ ತೆಗೆದುಕೊಳ್ಳಲೇ ಬೇಕೆನ್ನುವ ವೈಚಾರಿಕತೆಯಿಂದ ತಿಳಿ ಹೇಳುತ್ತಿದ್ದರು. ಆಪರೇಷನ್ ಆದ ನಂತರದ ದಿನಗಳು….. ತಾಯಿಯವರ ಜೀವನದಲ್ಲಿ ಅತ್ಯಂತ ಕಠಿಣವಾದ ಅಧ್ಯಾಯವಾಗಿತ್ತು. ವೈದ್ಯರು ಸ್ಪಷ್ಟವಾಗಿ ಸೂಚಿಸಿದ್ದರು…“ಇನ್ನೂ ಕೆಲವು ವಾರಗಳು, ಬೋರಲಾಗಿಯೇ (ಹಾಸಿಗೆಯ ಮೇಲೆಯೇ) ಮಲಗಿರಬೇಕು… ಚಲನವಲನ ಬಹಳ ಕಡಿಮೆ ಇರಬೇಕು.”ದಿನವಿಡೀ ಓಡಾಡುತ್ತಿದ್ದ…ಎಲ್ಲರಿಗೂ ಆಧಾರವಾಗಿದ್ದ ತಾಯಿಯವರು ಈಗ ಹಾಸಿಗೆಯ ಮೇಲೆ ಮಲಗಬೇಕಾದ ಪರಿಸ್ಥಿತಿ…ಅದು ದೇಹ- ಮನಸ್ಸಿಗೂ ದೊಡ್ಡ ಪರೀಕ್ಷೆ.ಬೆನ್ನು ನೋವು ಇನ್ನೂ ತೀವ್ರವಾಗಿತ್ತು. ಪ್ರತಿಯೊಂದು ತಿರುಗಾಟವೂ ನೋವಿನ ಅಲೆ ತರಿಸುತ್ತಿತ್ತು. ಆದರೆ ಆ ನೋವನ್ನೂ ಅವರು ತಮ್ಮ ಮುಖದಿ ತೋರಿಸಲಿಲ್ಲ.ಡಾಕ್ಟರ್ಗಳು, ನರ್ಸ್ಗಳು ಭೇಟಿ ನೀಡಿದಾಗ“ನೋವು ಹೇಗಿದೆ?” ಎಂದು ಕೇಳಿದರೆ,ಅವರು ತುಂಟ ನಗೆಯೊಂದಿಗೆ,“ಚೆನ್ನಾಗಿದೆ… ನಾನು ಬಲವಾಗಿದ್ದೇನೆ…” ಎಂದು ಉತ್ತರಿಸುತ್ತಿದ್ದರು. *ಗಟ್ಟಿಕೊಂಡಿದೆ ಮನ| ಬೆಟ್ಟದ ಎತ್ತರವಾಗಿಪೆಟ್ಟಿಗೆ ಮಣೆಯಾದ ನಿಶ್ಚಲ- ನಿಲ್ಲುವದುಕಟ್ಟು ಕಾವಲು ಇಲ್ಲದಲೆ||* ಎನ್ನುತ ತಾಯಿಯ ಮೊಗದ ನಗು …. ಅವರ ಮನೋಬಲದ ಪ್ರತಿಬಿಂಬವಾಗಿತ್ತು……!! ಒಳಗೆ ಎಷ್ಟೇ ನೋವು ಇದ್ದರೂ, ಹೊರಗೆ ಅವರು ಪ್ರಸನ್ನ ಚಿತ್ತರಾಗಿ ಇರುತ್ತಿದ್ದರು.ಮಕ್ಕಳು ಅವರ ನೋವನ್ನು ಅರಿತುಕೊಳ್ಳುತ್ತಿದ್ದರು. ಕೆಲವೊಮ್ಮೆ ಕಣ್ಣೀರು ತಡೆಯಲಾಗದೆ ಹೊರಬಂದಾಗ, ತಾಯಿಯವರು ಅವರನ್ನು ಸಮಾಧಾನಪಡಿಸುತ್ತಿದ್ದರು..“ನೀವು ಅಳಬೇಡಿ… ನಾನು ಚೆನ್ನಾಗುತ್ತೇನೆ…”ಎನ್ನುವ ಸಕಾರಾತ್ಮಕತೆಯ ಭಾವನೆ ಬಲವೇ ಅವರನ್ನು ಬೇಗನೆ ಚೇತರಗೊಳಿಸಿತು ಅನ್ನುತ್ತಿದ್ದರು. ದಿನಗಳು ಕಳೆದಂತೆ, ವೈದ್ಯರು ಕೂಡ ಆಶ್ಚರ್ಯಪಟ್ಟಿದರು.ಅವರ ಚೇತರಿಕೆಯ ವೇಗ, ಅವರ ಸ್ಥಿತಿಗಿಂತ ಹೆಚ್ಚು ಉತ್ತಮವಾಗಿತ್ತು.“ಇದು ನಮ್ಮ ಚಿಕಿತ್ಸೆಕಿಂತ… ಅವರ ಮನೋಬಲವೇ ಅವರನ್ನು ಗುಣಪಡಿಸಿದೆ,” ಎಂದು ವೈದ್ಯರು ಹೇಳಿದರು.ಹೌದು, ದೇಹದ ಗಾಯಗಳನ್ನು ಔಷಧಿಗಳು ಗುಣಪಡಿಸಿದಂತೆ….. ನಮ್ಮಲ್ಲಿ ಬಲವಾಗಿದ್ದ ಸಕಾರಾತ್ಮಕತೆಯೇ ಅದೇ ನಿಜವಾದ ಚಿಕಿತ್ಸಕ ಎನ್ನುವರು ತಾಯಿಯವರು. *ಬಿದ್ದು ಹೋಗುವ| ದೇಹಕ್ಕೆ ಕಾದಿಡುವುದೆತಕ್ಕೆಸಾಧಿಸಬೇಕು ಅದರಿಂದ- ಮಾಕಾರ್ಯಶೋಧಿಸಬೇಕು ತನ್ನಿರುವ|| ಎನ್ನುವಂತೆ ತಮ್ಮ ಮುಂದಿನ ಕಾರ್ಯಕ್ಕೆ ಅಣೆಯಾಗಲು ಸಿದ್ದರಾದರು. ಸ್ವಲ್ಪ ಸ್ವಲ್ಪವಾಗಿ ಅವರು ಕುಳಿತುಕೊಳ್ಳಲು ಆರಂಭಿಸಿದರು… ನಂತರ ನಿಧಾನವಾಗಿ ಹೆಜ್ಜೆ ಇಡಲು ಪ್ರಯತ್ನಿಸಿದರು. ಪ್ರತಿಯೊಂದು ಹೆಜ್ಜೆಯಲ್ಲೂ ನೋವು ಇದ್ದರೂ, ಅವರ ಮುಖದಲ್ಲಿ ನಗು ಕಡಿಮೆಯಾಗಲಿಲ್ಲ.ಅವರ ಚೇತರಿಕೆ ವೈದ್ಯಕೀಯ ಸಾಧನೆ ಜೊತೆಗೆಅವರ ಅಜೇಯ ಮನೋಬಲದ ಜಯವಾಗಿತ್ತು….!! ದೇಹ ದುರ್ಬಲವಾದರೂ, ಮನಸ್ಸು ಬಲವಾಗಿದ್ದರೆ ಅಸಾಧ್ಯವೂ ಸಾಧ್ಯವಾಗುತ್ತದೆ…. ಎನ್ನುವುದನ್ನು ಸ್ಪಷ್ಟವಾಗಿ ತೋರಿಸಿಕೊಟ್ಟರು ತಾಯಿಯವರು ಅಂತ ವೈದ್ಯರು ಹೊಗಳುತ್ತಿದ್ದರು. *ಎಲೆ ಎಲೆ ಮಾನವ |ಏನಿದೆ ನಿನ್ನ ಕೈಯಲಿಕಾಲನ ಕೈವಾಡ ತಿಳಿದುಕೊ- ಮರ್ತ್ಯದಿಖಾಲಿ ಬಂದು ಖಾಲಿ ಹೋಗುವುದು||* ಅನ್ನುವಂತೆ ನನ್ನ ಕೈಯಲ್ಲಿ ಏನಿದೆ ಎಲ್ಲಾ ಸಿದ್ದರಾಮ ನಡೆಸಿದಂಗೆ …ಅವನ ಆಶೀರ್ವಾದದಿಂದಲೇ ನಾನು ಮತ್ತೆ ಎದ್ದು ಬದುಕಿ ಬಂದೆ ಅಂತ ಹೇಳುತಿದ್ದರು. ಇನ್ನು ಮಾಡುವ ಕೆಲಸ ನೂರಾರು ಇದೆ ಅದಕ್ಕೆ ಸಿದ್ದರಾಮನು ಮತ್ತೆ ನನಗೆ ಕರುಣಿಸಿದನು ಎನ್ನುವರು. ಎಲ್ಲ ನೋವುಗಳಿಗೂ ಗಟ್ಟಿಯಾಗಿ ನಿಂತ ದೇಹವು ಎಲ್ಲದಕ್ಕೂ ಅಣಿಯಾಗಿ ಆರೋಗ್ಯವಂತರಾಗಿ ಸೊಲ್ಲಾಪುರಕ್ಕೆ ಬರುತ್ತಿದ್ದಂತೆ ಅವರಿಗೆ ಇನ್ನೊಂದು ಆಘಾತ ಕಾಯಿದಿತ್ತು. ಬರುವಾಗ ತರಲಿಲ್ಲ| ಬರಿದಾಗಿ ಹೋಗುವೆವೈರಿತನ ಬೆಳೆಸಿ ಎಷ್ಟು ದಿನ- ಬಾಳುವಿಪರರ ಹೃದಯ ಕಮರಿಸಿ || ಎನ್ನುವಂತೆ ಹೃದಯವನ್ನು ಕಮರಿಸಿದ ಗಂಡನ ತಮ್ಮ ಜಯದೇವಪ್ಪ…. ತಾಯಿಯವರ ಮೇಲೆ ಕೋರ್ಟಿನಲ್ಲಿ ಕೇಸು ದಾಖಲೆ ಮಾಡಿದ್ದ. *ದೂಶಿಸುತ ಅನ್ಯರ |ರೋಷ ಹಿಡಿದು ನೀನುದ್ವೇಷ ಮಾಡುವಿ ಏ ಮರಳೇ ಆಸ್ಥಿರ,ಆಯುಷ್ಯ ಪಡೆದು ಬಂದಿರುವೆ ||* ಅನ್ನುವಂತೆ ತಾಯಿಯವರು ಮಾಡಿದ ಮಹಾನ್ ಕಾರ್ಯಗಳಲಿ ಒಂದಾದ ಬಡ್ಡಿ ವ್ಯವಹಾರವನ್ನು ನಿಲ್ಲಿಸಿ, ಜನರಿಂದ ಕಿತ್ತುಕೊಂಡ ಆಸ್ತಿಗಳನ್ನು ತಿರುಗಿ ಕೊಟ್ಟಿದ್ದೇ ಒಂದು ದೊಡ್ಡ ಅಪರಾಧವಾಗಿತ್ತು ಜಗದೇಪ್ಪನಿಗೆ….. ಜಗದೇವಪ್ಪನು ಅಣ್ಣನ ಹೆಸರಿನಲ್ಲಿ ಇರುವ ಆಸ್ತಿಯ ಮೇಲೆ ಕಣ್ಣಿಟ್ಟಿದ್ದವನು…. ತಾಯಿಯವರು ಅಸಹಾಯಕರ ಆಸ್ತಿಯನ್ನು ಹಿಂದಿರುಗಿಸುವ ತ್ಯಾಗವನ್ನು…. ದೌರ್ಬಲ್ಯವೆಂದು ಭಾವಿಸಿದ. “ಅಣ್ಣನ ಮಕ್ಕಳು ಚಿಕ್ಕವರು… ಆಸ್ತಿಯ ಜವಾಬ್ದಾರಿ ನನ್ನದು ಆಗಬೇಕು…” ಎಂಬ ದುರಾಸೆ ಅವನ ಮನಸ್ಸನ್ನು ಆವರಿಸಿತು. ತಾಯಿಯವರು ಎಲ್ಲ ಆಸ್ತಿಯನ್ನು ಜನರಿಗೆ ಹಿಂತಿರುಗಿಸುತ್ತಿರುವುದನ್ನು ನೋಡಿ, ಅವನ ಅಹಂಕಾರಕ್ಕೆ ಹೊಡೆತ ಬಂತು. *ಅಹಂಕಾರ ತಲೆಗೇರಿ| ಮಂಕನಂತೆ ಮಾತಾಡಿಬೆಂಕಿ ಉಡಿಯಲ್ಲಿ ಕಟ್ಟಿದಂತೆ ನೋಡಯ್ಯಬೆಂಕಿ ಆರಿಸುವದೇ ಬಲು ಲೇಸು ||* ಅಹಂಕಾರದ ಬೆಂಕಿಯ ಹುಡಿಯಲ್ಲಿ ಕಟ್ಟಿಕೊಂಡ ಜಗದೇವಪ್ಪನು ಅತ್ತಿಗೆಯು ಇನ್ನೂ ಎಲ್ಲಾ ಆಸ್ತಿಗಳನ್ನು ಹೀಗೆ ದಾನ ಮಾಡಿ ಕರಗಿಸಿ ಬಿಡುವಳು ಅಂತ ದಾವೇ ಮಾಡಿದ.ಆ ಸುದ್ದಿ ಕೇಳಿದ ಕ್ಷಣದಲ್ಲಿ, ತಾಯಿಯವರ ಹೃದಯ ಕ್ಷಣಮಾತ್ರ ಕಲುಕಿತು… ಆದರೆ ಮುಖದಲ್ಲಿ ಅದೇ ಶಾಂತಿ.*ಕಾಲನ ಕೈವಾಡ |ಅಲಗಿನಂತೆ ಕ್ರೂರಬಲ್ಲವರಿಗಿಲ್ಲ ಇಲ್ಲಿ ಸುಖವಿಲ್ಲ- ಪಾಪದಚೆಲ್ಲಾಟಕೆ ತಾಣವಾಗಿದೆ *||ಎನ್ನುವಂತಿದ್ದ ಸನ್ನಿವೇಶವನ್ನು ಎದುರಿಸುತ “ನಾನು ತಪ್ಪೇನೂ ಮಾಡಿಲ್ಲ… ಜನರ ಹಕ್ಕನ್ನು ಅವರಿಗೆ ತಿರುಗಿ ಕೊಟ್ಟಿದ್ದೇನೆ…” ಎಂದು ವಾದಿಸಿದರು ಆ ನಂಬಿಕೆ ಅವರಿಗೆ ಬಲ ನೀಡಿತು *ಅಂಜಿಕೆ ನನಗಿಲ್ಲ| ಹಿಂಜರಿಯಲಾರೆ ನಾಪಂಜು ಹಿಡಿದು ನಿಜ ತತ್ವ -ಸಾರುವೇ ಕೆಂಜಡೆಯವನ ಕೃಪೆಯಿಂದ ||*ಎಂದು ಎದೆಗುಂದದೆ ಕೋರ್ಟಿಗೆ ಹೋದರು… ಕೋರ್ಟ್ನ ವಾತಾವರಣ….ತಾಯಿಯವರು ಮೊದಲ ಬಾರಿಗೆ ಅಲ್ಲಿ ಕಾಲಿಟ್ಟರು.ಒಂದು ಕಡೆ ಜಗದೇವಪ್ಪನ ದುರಾಸೆಯ ಧ್ವನಿ,ಇನ್ನೊಂದು ಕಡೆ ತಾಯಿಯವರ ಸತ್ಯದ ಧರ್ಮ. ಜಗದೇವಪ್ಪ ತನ್ನ ವಾದಗಳನ್ನು ಜೋರಾಗಿ ಮಂಡಿಸುತ್ತಿದ….“ಆಸ್ತಿ ನಮ್ಮ ಕುಟುಂಬದವರದು… ಇವರಿಗೆ ಹಕ್ಕಿಲ್ಲ…ಅದನ್ನು ಬೇಕಾದ ಹಾಗೆ ದಾನವನ್ನು ಮಾಡುತ್ತಿರುವುದಾಗಿಯು… ಹಾಗೆ ತವರು ಮನೆಯವರು ಆಸ್ತಿಯನ್ನು ಲಪಟಾಯಿಸಲು ಕುಳಿತುಕೊಂಡಿದ್ದಾರೆ ಅನ್ನುವ ವಾದ ಮಂಡಿಸಿದ. ತಾಯಿಯವರು ತಲೆಯನ್ನು ತಗ್ಗಿಸದೆ, ಶಾಂತವಾಗಿ ನಿಂತಿದ್ದರು.ಅವರ ಕಣ್ಣುಗಳಲ್ಲಿ ನೋವು ಇದ್ದರೂ, ಅವುಗಳಲಿ ನೈತಿಕತೆಯ ಧೈರ್ಯ ಹೊಳೆಯುತ್ತಿತ್ತು.ಅವರು ಮಾತನಾಡಿದಾಗ, ಮಾತುಗಳು ಮೃದುವಾಗಿ ಅರ್ಥ ಗಂಭೀರವಾಗಿತ್ತು“ನಾವು ಜನರಿಂದ ಅನ್ಯಾಯವಾಗಿ ಪಡೆದಿದ್ದನ್ನು ನಾನು ಹಿಂತಿರುಗಿಸಿದೆ. ಅದರಲ್ಲಿ ತಪ್ಪೇನಿದೆ?”ಕೋರ್ಟ್ನಲ್ಲಿದ್ದವರ ಹೃದಯಕೆ ಆ ಮಾತುಗಳು ತಲುಪಿದವು. *ಗೊತ್ತಾಯಿತು ಲೋಕದ| ಗತ್ತುಗಾರಿಕೆಯಲ್ಲಬಿತ್ತುವರು ಮೋಸದ ಬೀಜವೂ ಜನಗಳುಸತ್ತು ಹೋಗುವರು ವಿಷವುಂಡು||*ಎನ್ನುವಂತೆಒಬ್ಬ ತಾಯಿ, ತನ್ನದೇ ಸೌಕರ್ಯವನ್ನು ಬಿಟ್ಟು, ಅನ್ಯಾಯದ ವಿರುದ್ಧ ನಿಂತಿದ್ದಳು…ದೇಹದ ನೋವು, ಆಪರೇಷನ್ನ ತೊಂದರೆ ಎಲ್ಲವನ್ನೂ ಮರೆತು, ತಾಯಿಯವರು ಧರ್ಮದ ಪರವಾಗಿ ನಿಂತ ದೃಶ್ಯ,ಎಲ್ಲರ ಮನಸ್ಸನ್ನೂ ಸ್ಪರ್ಶಿಸಿತು.ಜಗದೇವಪ್ಪನ ದುರಾಸೆ ಒಂದು ಕಡೆ,ತಾಯಿಯವರ ಧರ್ಮಬಲ ಇನ್ನೊಂದು ಕಡೆ… ಕೋರ್ಟ್ ಹಾಲ್ನಲಿ…ಎಲ್ಲರ ಕಣ್ಣುಗಳು ಒಂದೇ ದಿಕ್ಕಿನಲ್ಲಿ ನೆಟ್ಟಿದ್ದವು…ಅಲ್ಲಿ ಮೊದಲ ಬಾರಿಗೆ ನಿಂತಿದ್ದ ಜಯದೇವಿ ತಾಯಿಯವರ ಮೇಲೆ…ಚಿಕ್ಕ ವಯಸ್ಸಿನ ವಿಧವೆ ಬಿಳಿ ಸೀರೆ ತೊಟ್ಟು, ಕಪ್ಪು ಕೂದಲು,ನೊಸಲ ಮೇಲೆ ಬೆಳ್ಳಿಯ ಕಿರಣಗಳಂತೆ ಹೊಳೆ ಹೊಳೆವ ಮೂರು ಬಿಟ್ಟು ವಿಭೂತಿ ಬೊಟ್ಟು,ಅತ್ಯಂತ ಸೌಮ್ಯ ದೈವಿ ಕಳೆ ಹೊಂದಿದ… ಶಾಂತ ಮನಸ್ಸು ಆ ನೋವನ್ನು ಮೀರಿತ್ತು……ಅವರು ತ್ಯಾಗದ ಪ್ರತಿಮೆಯಂತೆ ನಿಂತಸಂಗಮರಮರಿಯ ಮೂರ್ತಿಯಂತೆ ಕಂಡರು……ನ್ಯಾಯವಾದಿಯು ತಾಯಿಯವರನ್ನು ದೀರ್ಘವಾಗಿ ಒಮ್ಮೆ ನೋಡಿ “ಏನಪ್ಪಾ ನಿನ್ನ ಸಮಸ್ಯೆ???”ಅಂತ ಜಗದೇವಪ್ಪನ ತತ್ತಿರುವಿ ಕೇಳದರು… ಜಗದೇವಪ್ಪ ತನ್ನ ಮಾತನ್ನು ಮಂಡಿಸಿದ.ಜಯದೇವಿ ತಾಯಿಯವರ ಕಣ್ಣು ನಿಧಾನವಾಗಿ ತಿರುಗಿ ಜಗದೇವಪ್ಪನ ಮೇಲೆ ಬಿದ್ದವು…ಆ ಕ್ಷಣ…ತಾಯಿಯ ಕಣ್ಣಲ್ಲಿ ಕೋಪ ಇರಲಿಲ್ಲ…ದ್ವೇಷ ಇರಲಿಲ್ಲ…ಇದ್ದದ್ದು ಮಾತ್ರ ಮಮತೆ…ತಮ್ಮ ಮಗನಂತೆ ನೋಡಿದ ಆ ವ್ಯಕ್ತಿ…ಇಂದು ಕೋರ್ಟ್ನಲ್ಲಿ ಎದುರಾಳಿ…!!!ಜಗದೇವಪ್ಪನನ್ನು ನೋಡಿ ಕನಿಕರ ಪಟ್ಟರು. ಜಗದೇವಪ್ಪ ತಲೆತಗ್ಗಿಸಿದ್ದ…ಆ ಕಣ್ಣೋಟವನ್ನು ಎದುರಿಸಲು ಅವನಿಗೆ ಧೈರ್ಯ ಇರಲಿಲ್ಲ… ನ್ಯಾಯವಾದಿಯು ತಿರುಗಿ ತಾಯಿ ಅವರಿಗೆ ಯಾವ ಪ್ರಶ್ನೆಯನ್ನು ಕೇಳದೆ” ಸರಿ ಹಾಗಿದ್ದರೆ ಇವರು ಯಾರು ??”ಅಂತ ಜಗದೇವಪ್ಪನಿಗೆ ಕೇಳಿದರು “ಇವರೇ ನನ್ನ ಅಣ್ಣನ ಹೆಂಡತಿ ಇವರೇ” ಅಂತ ಹೇಳಿದ .”ಆತುರ ಆತುರದಲಿ*ಹಾಗಿದ್ದರೆ ಅಣ್ಣನ ಹೆಂಡತಿ ಎಂದರೆ ತಾಯಿಯ ಸಮಾನ ಹೀಗಾಗಿ ಅವರಿಗೆ ನಿನ್ನ ಆಸ್ತಿಯನ್ನೆಲ್ಲಒಪ್ಪಿಸಿಬಿಡು….. ನಿನ್ನ ಮಕ್ಕಳು ದೊಡ್ಡವರಾದ ಮೇಲೆ ಅವರು ಎಲ್ಲವನ್ನು ನಿನಗೆ ಜೋಪಾನವಾಗಿ ಇಟ್ಟುಕೊಂಡು ಒಪ್ಪಿಸುತ್ತಾರೆ “ಅಂತ ತೀರ್ಪನ್ನು ಕೊಟ್ಟು …..ಮರು ಮಾತನಾಡದೆ ನ್ಯಾಯವಾದಿಗಳು ಅಲ್ಲಿಂದ ಎದ್ದು ಹೊರಟು ಹೋದರು.ಕೋರ್ಟ್ನಲಿ ಕ್ಷಣಕಾಲ ಎಲ್ಲರೂ ಬೆರಗಾದರು…ಜಗದೇವಪ್ಪ ನಿಬ್ಬೆರಗಾಗಿ ಮಾತಿಲ್ಲದೆ ನಿಂತುಬಿಟ್ಟ…ಆದರೆ ತಾಯಿಯವರು…ಹಿಂದಿರುಗಿ ನೋಡಲಿಲ್ಲ…ಅವರ ಹೆಜ್ಜೆಗಳು ನಿಧಾನವಾಗಿ ಹೊರಗೆ ನಡೆದವು…ಅದು ಜಯದ ಹೆಜ್ಜೆಗಳಾಗಿದ್ದವು…..“ಸ್ವಾರ್ಥದ ಮೇಲೆ ಮಾನವೀಯತೆಯ ಜಯ”… *ಹೇಸಿ ಈ ಲೌಕಿಕದ| ಆಸೆಯು ಎನಿತಿಲ್ಲಈಶ ಸಿದ್ದರಾಮನ ಚಿಂತನೆ -ನನಗೆಹೊಸ ಬೆಳಕು ನೀಡಿ ಸಲಹುವದು ||* ಲೌಕಿಕದ ಆಸೆಗಳಿಗೆ ಹೇಸಿದ ತಾಯಿಯವರು ಸಿದ್ದರಾಮನ ಚಿಂತೆಯಲ್ಲಿ ಅವರಿಗೆ ಯಾವ ಸೋಲು ಗೆಲುವಿಗೆ ಪ್ರಾಮುಖ್ಯತೆ ಇರುತ್ತಿರಲಿಲ್ಲ…. *ಈ ಸನ್ನಿವೇಶದಲ್ಲಿ ತಾಯಿಯವರು ಸೋಲಲಿಲ್ಲ“ನ್ಯಾಯಕ್ಕೆ ಜೀವ ತುಂಬಿದರು.(ಮುಂದುವರೆಯುವುದು) ಸವಿತಾ ದೇಶಮುಖ
ಧಾರಾವಾಹಿ ಸಂಗಾತಿ-19 ಸವಿತಾದೇಶಮುಖ ಜಯದೇವಿತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಮಹಾನ್ ಚೇತನ ಭಾಗ-೧೯*ಜಯದೇವಿ ತಾಯಿಯವರ ಜೀವನ ವೃತ್ತಾಂತ*(ಅಸಹಾಯಕರು ಒತ್ತಿಟ್ಟ ಆಸ್ತಿ ಹಿಂದಿರುವಿಕೆ) *ಅಮರವಾಗಲು | ಭ್ರಮೆಯು ನಿಕ್ಕರಿಸಿಸಮರ ಯೋಗ ದೊರೆಬೇಕು -ಮನದತಾಮಸಾದಿ ಗುಣ ಅಳಿಬೇಕು||* ಈ ಸಾಲುಗಳು ತುಂಬಾ ಆಳವಾದ ತತ್ವವನ್ನು ಒಳಗೊಂಡಿವೆ. ಜಯದೇವಿ ತಾಯಿಯವರ ಚಿಂತನೆ ಎಷ್ಟು ಶುದ್ಧ, ಎಷ್ಟು ಜೀವನಾನುಭವದಿಂದ ಬಂದದ್ದು ಎಂಬುದು ಇಲ್ಲಿ ಸ್ಪಷ್ಟವಾಗುತ್ತದೆ.“ಅಮರವಾಗಲು ಭ್ರಮೆಯು ನಿಕ್ಕರಿಸಿ” “ದೈಹಿಕವಾಗಿ ಅಮರವಾಗುವದು ಒಬ್ಬರ ಹೆಸರು, ಕಾರ್ಯ, ಮೌಲ್ಯಗಳು ಕಾಲಾಂತರಕ್ಕೂ ಉಳಿಯಬೇಕು ಎಂಬ ಅರ್ಥ. “ಭ್ರಮೆಯು ನಿಕ್ಕರಿಸಿ” ….. ಮನಸ್ಸಿನಲ್ಲಿರುವ ಅಜ್ಞಾನ, ಮಿಥ್ಯಾಭಾವನೆಗಳು, ಜೀವನದಲ್ಲಿ ನಾವು ಕಾಣುವ ಬಹುತೇಕ ದುಃಖಗಳಿಗೆ ಕಾರಣ ನಮ್ಮ ಭ್ರಮೆಗಳೇ—ಅಹಂಕಾರ, ಆಸೆ, ಮಮಕಾರ. “ಸಮರ ಯೋಗ ದೊರೆಬೇಕು – ಮನದ”ಇಲ್ಲಿ “ಸಮರ” ಇದು ಹೊರಗಿನ ಯುಧ್ಧ ಹಾಗೂ ನಮ್ಮೊಳಗಿನ ಯುದ್ಧ. ವಿರುದ್ಧ ನಡೆಯುವ ಆಂತರಿಕ ಸಮರ.“ಯೋಗ ದೊರೆಬೇಕು…. ಸಮರದಲ್ಲಿ ಜಯ ಸಾಧಿಸಲು ಮನಸ್ಸು ಶಾಂತವಾಗಿರಬೇಕು, ಏಕಾಗ್ರವಾಗಿರಬೇಕು. “ತಾಮಸಾದಿ ಗುಣ ಅಳಿಬೇಕು”ತಾಮಸ ಗುಣ ಬೇರೆಯವರಿಗೆ ನೋವು ಕೊಡುವುದು ಅವರ ಆಸ್ತಿಯ ಹಕ್ಕು ಪಡೆಯುವುದು ಇವು ನಮ್ಮನ್ನು ಕೆಳಕ್ಕೆಳೆಯುವ ಕೆಟ್ಟ ಗುಣಗಳನ್ನು ಸಂಪೂರ್ಣವಾಗಿ ನಾಶ ಮಾಡಬೇಕು. ಆಗ ಮಾತ್ರ ಮನಸ್ಸು ಶುದ್ಧವಾಗುತ್ತದೆ.ತನ್ನೊಳಗಿನ ಕೆಟ್ಟ ಗುಣಗಳ ವಿರುದ್ಧ ಹೋರಾಡಿ, ಶುದ್ಧ ಮನಸ್ಸಿನಿಂದ ಬದುಕಬೇಕು. ಇದೇ ನಿಜವಾದ “ಅಮರತ್ವ”ದ ಮಾರ್ಗ.ಇದು ಕವಿತೆಯ ಸಾಲುಗಳು ಬದುಕಿಗೆ ದಾರಿ ತೋರಿಸುವ ಮಾರ್ಗಗಳು ಹಾಗೆ ಜಯದೇವಿತಾಯಿಯವರು ಬದುಕಿದರು. ೩೬ನೇ ವಯಸ್ಸಿನಲ್ಲಿ ಪತಿಯನ್ನು ಕಳೆದುಕೊಳ್ಳುವುದು ಯಾವ ಸ್ತ್ರೀಯಿಗೂ ಜೀವನದ ದೊಡ್ಡ ಆಘಾತದ ನೋವನ್ನು ಅನುಭವಿಸಿದ ಜಯದೇವಿ ತಾಯಿಯವರ ಮನಸ್ಸಿನಾಳದಲ್ಲಿ ತುಂಬಿದ ಶೋಕವು ನಂದಿ ಹೋಗುವ ಮುನ್ನವೇ….. ಅನೇಕ ಕಾರ್ಯಗಳನ್ನು ಕೈಕೊಂಡರು…..ಅವರು ಶಾಂತರಾಗಿ ಕುಳಿತುಕೊಳ್ಳಲಿಲ್ಲ… ಜೀವನ ಇನ್ನೂ ಅನೇಕ ಹೊಣೆಗಾರಿಕೆಗಳನ್ನು ತಮ್ಮ ಕೈಯಲ್ಲಿ ಇಟ್ಟಿದೆ ಎಂಬ ಅರಿವು ಅವರಿಗೆ ಬಹಳ ಸ್ಪಷ್ಟವಾಗಿತ್ತು.ಪತಿ ಬಿಟ್ಟಿದ್ದ ಆಸ್ತಿಪಾಸ್ತಿಗಳು, ಗರ್ಭಶ್ರೀಮಂತಿಕೆ, ಹಾಗೂ ಬಡ್ಡಿ ವ್ಯವಹಾರವು ಮುಖ್ಯವಾಗಿ ಮಕ್ಕಳ ಲಾಲನೆ ಪಾಲನೆ ಬಹು ದೊಡ್ಡ ಹೊಣೆಗಾರಿಕೆಯಾಗಿ ಅವರ ಮುಂದೆ ನಿಂತವು. ಸಾಮಾನ್ಯವಾಗಿ ಇಂತಹ ಪರಿಸ್ಥಿತಿಯಲ್ಲಿ ಹೆಣ್ಣು ಮಕ್ಕಳು ದಿಕ್ಕುತೋಚದೆ ಇತರರ ಮೇಲೆ ಅವಲಂಬಿತರಾಗತಾರೆ. ಆದರೆ ಜಯದೇವಿ ತಾಯಿಯವರು ಅದಕ್ಕೆ ವಿರುದ್ಧವಾಗಿ ಸ್ವತಃ ಮುಂದೆ ಬಂದರು. *ಚಿಂತಿಸುವೆಕೆ ನೀ |ಶಾಂತವಾಗಿರುವ ಮನವೇಎಂಥ ವಿಪತ್ತು ಬಂದರರೂ- ಹೆದರದೆಧೈರ್ಯದಿ ಅಡಿ ಇಡು ಮುಂದೆ||* ಅಂತ ಹೇಳುತಅವರು ಮನೆಮಠದ ಆರ್ಥಿಕ ಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಲು ಪ್ರಾರಂಭಿಸಿದರು.ಅದರಿಂದಲೇ ಅವರು ಒಂದು ಮಹತ್ವದ ನಿರ್ಧಾರ ಕೈಗೊಂಡರು…… ಭರಾಟೆಯಲ್ಲಿ ನಡೆಯುತ್ತಿದ್ದ ಬಡ್ಡಿ ವ್ಯವಹಾರದಿಂದ ಬಂದ ಹಣ ಮತ್ತೊಬ್ಬರ ಕಣ್ಣೀರಿಗೆ ಕಷ್ಟಕ್ಕೆ ಕಾರಣವಾಗುತ್ತಿರುವುದನ್ನು ಗ್ರಹಿಸಿದರು. ತಾಯಿಯವರು “ಭ್ರಮೆಯು ನಿಕ್ಕರಿಸಿ, ತಾಮಸಾದಿ ಗುಣ ಅಳಿಬೇಕು” ಎಂದು ಬರೆದ್ದಂತೆ ಬದುಕಿನಲ್ಲಿ ನಡೆದು ತೋರಿಸಿದ ಸತ್ಯ. ಬಡ್ಡಿ ವ್ಯವಹಾರವನ್ನು ನೋಡಿದಾಗ ಅವರ ಮನಸ್ಸು ಒಳಗೆ ಒಳಗೆ ಕದಡಿತು. ಈ ವ್ಯವಹಾರವನ್ನು ಪೂರ್ತಿಯಾಗಿ ಇಲ್ಲಸಬೇಕು….. ಅಂತ ಪತಿಯಲ್ಲಿ ಬಹಳಷ್ಟು ಸಲ ಕೇಳಿಕೊಂಡಿದ್ದರು ಆದರೆ ಅದರಿಂದ ಹಿಂದೆತಿರುಗುವದು ಅಸಾಧ್ಯವಾದ ಮಾತು ಎನ್ನುತಿದ್ದರು ಪತಿ ಅದರಿಂದಾಗುವ ನಷ್ಟಗಳನ್ನು ಬಹಳಷ್ಟು ಸಲ ಹೇಳಿದ್ದರು. ಶ್ರೀಮಂತಿಕೆ ಹೆಚ್ಚಿದಂತೆಲ್ಲ ಬಡ್ಡಿಯ ವ್ಯವಹಾರವು ತನ್ನಿಂದತಾನಾಗಿ ಕುದುರಿಕೊಳ್ಳುವುದು ಸಹಜವಾಗಿತ್ತು….. ಇಂತ ಪರಿಸ್ಥಿತಿಯಲ್ಲಿ ಹಿಂದಿರುಗುವುದು ಬಹಳ ಕಠಿಣವಾಗಿರುತ್ತದೆ…. ಏಕೆಂದರೆ ಬಡ್ಡಿಯ ವ್ಯವಹಾರಗಳನ್ನು ನೋಡಿಕೊಂಡು ಹೋಗಲೇ 14 ಮುನಿಮರನ್ನು ಅವರು ನೇಮಿಸಿದ್ದರು….. ಅಂದರೆ ನಾವು ಊಹಿಸಬಹುದು ಅದು ಎಂಥ ದೊಡ್ಡ ಬಡ್ಡಿ ವಹಿವಾಟು ಅಲ್ಲಿ ನಡೆಯುತ್ತಿತ್ತು ಅನ್ನುವುದನ್ನು ಗಮನಿಸಬಹುದಾಗಿದೆ .ಒಮ್ಮಿಂದ ಒಮ್ಮಲೆ ವ್ಯವಹಾರವನ್ನು ಸ್ಥಗಿತಗೊಳಿಸಲಾಗದಂತ ಸ್ಥಿತಿ ಇತ್ತು ಅನ್ನುವುದು ಖಚಿತವಾಗಿತು. *ಬಾರೆ ಇಚ್ಛಾಶಕ್ತಿ |ತೋರೆ ಕ್ರಿಯಾ ಶಕ್ತಿಬೀರೆ ಮಂತ್ರಶಕ್ತಿ ಪ್ರಭಾವ -ಆದಿಶಕ್ತಿಪರಾಶಕ್ತಿ ನೀನು ದಾರಿ ತೋರೆ||* ಅಂತ ಜಯದೇವಿ ತಾಯಿಯವರು ತನ್ನ ಇಚ್ಛಾಶಕ್ತಿ- ಆತ್ಮ ಶಕ್ತಿಯನ್ನೇ ಆದಿಶಕ್ತಿಯನ್ನಾಗಿ ಮಾಡಿಕೊಂಡು ಕ್ಷಣಾರ್ಧದಲ್ಲಿ ಅವರು ಒಂದು ದೊಡ್ಡ ನಿರ್ಧಾರ ಕೈಗೊಂಡರು….ಮನೆಯಲ್ಲಿದ್ದ ಬಡ್ಡಿ ವ್ಯವಹಾರವನ್ನು ಸಂಪೂರ್ಣವಾಗಿ ನಿಲ್ಲಿಸುವುದಾಗಿ.ಒಂದು ದಿನ ಎಲ್ಲ ಮುನಿಮರನ್ನು ಕರೆಯಿಸಿ ಒಂದು ಇರ್ತ್ಯಾರ್ಥಕ್ಕೆ ಬಂದರು ….ಅಡವಿಇಟ್ಟ ಜನರನೇಲ್ಲ ಕರೆಸಿಕೊಂಡರು.ಯಾರು ಯಾರಿಗೆ ಎಷ್ಟು ಸಾಲವಿದೆ ಎಂಬುದನ್ನು ಲೆಕ್ಕ ಹಾಕಿ, ಪ್ರತಿಯೊಬ್ಬರನ್ನೂ ಪ್ರೀತಿಯಿಂದ ಕೂಡಿ ಮಾತನಾಡಿದರು.“ನೀವು ಕೊಟ್ಟಿದ್ದು ನಿಮ್ಮದೇ…ಇದು ನಿಮ್ಮ ಹಕ್ಕು… ತೆಗೆದುಕೊಳ್ಳಿ…”ಎಂದು ಹೇಳುತ್ತಾ, ಅವರ ಆಸ್ತಿಯ ಕಾಗದ ಪತ್ರಗಳನ್ನು, ಅಡಿವೆ ಇಟ್ಟ ವಿವಿಧ ರೀತಿಯ ಬಂಗಾರದ ಒಡೆಯ ,ಬೆಳ್ಳಿಯ ಸಾಮಗ್ರಿಗಳು, ತಾಮ್ರದ ಹಿತ್ತಾಳೆಯ ಅಡುಗೆ ಮಾಡುವ ದೊಡ್ಡ ದೊಡ್ಡ ಪಾತ್ರೆಗಳು ಕೂಡ ಇರುತ್ತಿದ್ದವು….ದನ ಕರುಗಳನ್ನು ತಿರುಗಿ ನೀಡಲು ಪ್ರಾರಂಭಿಸಿದರು. ಎಷ್ಟೋ ಜನರು ಅಮ್ಮ ನಮಗೆ ತಿರುಗಿಕೊಡಲು ನಮ್ಮತ್ರ ದುಡ್ಡ ಇಲ್ಲ ಅಂತ ಕಣ್ಣೀರು ಕರೆದರು… ” ಸರಿ ನಿಮಗೆ ಆದಾಗ ಸಾಧ್ಯವಾದಾಗ ತಂದು ಕೊಡಿ” ಅಂತ ಹೇಳಿ ಅವರ ಆಸ್ತಿ ತಿರುಗಿಸಿದರು.ಆ ಕ್ಷಣ ಕಣ್ಣುಗಳು ನಂಬಲಾರದ ಆಶ್ಚರ್ಯ, ಕೃತಜ್ಞತೆಯ ವಾತಾವರಣ ಹರಡಿತು ಕೆಲವರು ಕಣ್ಣೀರಿನಿಂದ ತಾಯಿಯವರ ಪಾದವನ್ನು ತೊಳೆದರೂ… ಹಿಂತಿರುಗಿಸುವ ಕಾರ್ಯವ ಒಂದು ಮನೆತನದ ಧರ್ಮದ ಪುನರ್ಜನ್ಮವಾಗಿತ್ತು. ಈ ಕಾರ್ಯದಿಂದ ತಾಯಿಯವರು ತಮ್ಮೊಳಗಿನ “ತಾಮಸ”ವನ್ನು ಅಳಿಸಿ, “ಸಮರ ಯೋಗ”ವನ್ನು ಸಾಧಿಸಿದವರಾಗಿ ಬೆಳಗಿದರು.ಅವರು ಹೊರಗಿನ ಯುದ್ಧಗಳೊಂದಿಗೆ, ಒಳಗಿನ ಯುದ್ಧವನ್ನು ಗೆದ್ದರು. ಇದೇ ಕಾರಣಕ್ಕೆ ಅವರು ಅಮರರಾದರು…ಜನರ ಮನಸ್ಸಿನಲ್ಲಿ, ಆಶೀರ್ವಾದಗಳಲ್ಲಿ, ಮತ್ತು ಅವರ ಮಾಡಿದ ಸತ್ಕಾರ್ಯಗಳಲ್ಲಿ….. ಅಜರಾಮರರಾದರು…!!! *ಗಳಿಸಿದ ಧನವನು | ಉಳಿಸಬೇಕಾದರೆ ಬಳಿಸಬೇಕಾಗುತ್ತದೆ ಎಚ್ಚರ- ಅಣ್ಣಯ್ಯ ಕಳೆಯಬೇಕಾದ ಅನಾಚಾರದಿ ||* ಹೌದು ಗಳಿಸಿದ ಧನವನ್ನು ಉಳಿಸಬೇಕಾದರೆ ಬಹಳ ಎಚ್ಚರದಿಂದ ಸಆಚಾರದಿಂದ ಉಳಿಸಿ ಬೆಳೆಸಿಕೊಂಡು ಹೋಗಬೇಕು ಅಂತ ಹೇಳುತ್ತಿದ್ದರು. ಅನಾಚಾರದಿಂದ ಗಳಿಸಿದ ದುಡ್ಡು ನಮ್ಮ ಕೈಗೆ ಎಟುಕದು ಅದು ಮುಂದಿನ ಪೀಳಿಗೆಗೆ ಅನಾಹುತ ಮಾಡುವುದು ಖಚಿತ ಅನ್ನೋದನ್ನ ಯಾವಾಗಲೂ ಜಯದೇವಿ ತಾಯಿಯವರು ಹೇಳುತ್ತಿದ್ದರು. ತಾಯಿಯವರು ಅದನ್ನು ನೆನಪಿಸಿಕೊಂಡಾಗ ಅವರ ಕಣ್ಣಲ್ಲಿ ನೀರು ತುಂಬಿಕೊಳ್ಳುತ್ತಿತ್ತು…“ನಮ್ಮ ಮನೆಯ ಹಿಂದಿನ ದಿನಗಳು ತುಂಬಾ ಐಶ್ವರ್ಯವಾಗಿದ್ದವು… ಆದರೆ ಆ ಐಶ್ವರ್ಯಕ್ಕೆ ನೆರಳಾಗಿ ನಿಂತದ್ದು ಬಡ್ಡಿ ವ್ಯಾಪಾರ,” ಎಂದು ಅವರು ನಿಧಾನವಾಗಿ ಹೇಳುತ್ತಿದ್ದರು. ಅವರ ಗಂಡನ ತಂದೆ, ಅಂದರೆ ಮನೆಯ ಅಜ್ಜ, ಬಡ್ಡಿ ವ್ಯಾಪಾರದಲ್ಲಿ ದೊಡ್ಡ ಹೆಸರು ಮಾಡಿದ್ದರು.ಆದರೆ ಅದು … ಕಠೋರವಾದ ಮಾರ್ಗವಾಗಿತ್ತು ಧಡೂತಿ ಜನರನ್ನು ಇಟ್ಟುಕೊಂಡು ಬಡವರ ಮನೆ ಬಾಗಿಲು ತಟ್ಟಿಸುತ್ತಿದ್ದರು. ಸಾಲ ತೀರಿಸಲಾಗದವರ ಕಣ್ಣೀರನ್ನು ಲೆಕ್ಕಿಸದೇ, ಅವರ ಆಸ್ತಿಪಾಸ್ತಿಯನ್ನು ಕಸಿದುಕೊಳ್ಳುತ್ತಿದ್ದರು. ಬಡವರ ಅಳಲು, ತಾಯಿಯರ ನೋವು, ಮಕ್ಕಳ ಭಯದ ನೆರಳು ನಮ್ಮಮನೆಯ ಗೋಡೆಗಳಲ್ಲಿ ಉಳಿದುಕೊಂಡಿದ್ದವೆಂದು…. ತಾಯಿಯವರು ಹೇಳುತ್ತಿದ್ದರು.“ಅವರು ತಮ್ಮ ಆಸ್ತಿಗಳನ್ನು ಬಿಟ್ಟು ಕೊಡುವಾಗ ಎಷ್ಟೊಂದು ಅಳಲುಗಳ ಶಾಪ ಇತ್ತರೋ ಏನೋ…”ಕಾಲ ಕಳೆಯಿತು… …..ಅಜ್ಜ ಕೂಡಿಟ್ಟ ಸಂಪತ್ತಿನ ವೈಭವದಲ್ಲಿ ನಾವೆಲ್ಲ ಇರಬಹುದು. ಆದರೆ ಆ ಪಾಪದ ಶಾಪ ಮನೆಯ ಮೇಲೆ ಹಬ್ಬುತ್ತಲೇ ಹೋಯಿತು.ಅದರ ಪರಿಣಾಮವಾಗಿ ನನ್ನ ಪತಿ ಹಾಗೂ ಅತ್ತೆಯಂದಿರು ಅನುಭವಿಸಬೇಕಾಯಿತು.“ನನ್ನ ಗಂಡ ಒಳ್ಳೆಯ ಮನಸ್ಸಿನವರು… ಯಾರಿಗೂ ನೋವು ಕೊಡದವರು…” ಎಂದು ಹೇಳುವಾಗ ತಾಯಿಯವರ ಧ್ವನಿ ನಡುಗುತ್ತಿತ್ತು.“ಆದರೂ… ಅವರ ಜೀವನ ಬಹಳ ಚಿಕ್ಕದಾಯಿತು… ಬೇಗನೇ ನನ್ನನ್ನು ಬಿಟ್ಟು ಹೋದರು…”ಅವರು ಹೇಳುತ್ತಿದ್ದಾಗ, ಆ ಸಾವು … ಕುಟುಂಬದ ಮೇಲೆ ಬಿದ್ದ ಪಾಪದ ಪ್ರತಿಫಲ ಎಂಬ ಭಾವನೆ ಮೂಡುತ್ತಿತ್ತು. “ಬೇರೆಯವರ ಕಣ್ಣೀರಿಂದ ಕಟ್ಟಿದ ಮನೆ, ಒಂದು ದಿನ ತನ್ನವರ ಕಣ್ಣೀರಿಂದಲೇ ಕರಗುತ್ತದೆ…”ಅವರ ಮಾತಿನಲ್ಲಿ ನೋವು ಇತ್ತು… ಆದರೆ ಅದರಲ್ಲಿ ಒಂದು ದೊಡ್ಡ ಪಾಠವೂ ಇತ್ತುಅನ್ಯಾಯದಿಂದ ಬಂದ ಹಣ ಸುಖ ಕೊಡದು…ಪಾಪದ ಬೀಜ ಯಾವಾಗಲಾದರೂ ಮೊಳೆಯುತ್ತದೆ… ಮತ್ತು ಅದರ ಫಲವನ್ನು ನಿರಪರಾಧಿಗಳೂ ಅನುಭವಿಸಬೇಕಾಗುತ್ತದೆ…ಎನ್ನುವ ಸತ್ಯವನು ಅನೇಕ ಉದಾಹರಣೆಗಳೊಂದಿಗೆ ಹೇಳುತ್ತಿದ್ದರು. ಅಂತಹ ಉದಾಹರಣೆಗಳಲ್ಲಿ ಒಂದು ಉದಾಹರಣೆಯನ್ನು ತಾಯಿಯವರು ಮೇಲಿಂದ ಮೇಲೆ ಹೇಳುತ್ತಿದ್ದರುಅಜ್ಜ ಬಹಳ ಕಾಯಿಲೆ ಇದ್ದಾಗ ಜ್ವರ ಹೆಚ್ಚಾಗಿ ಅವರು ತಾಯಿಯವರನ್ನು ಕರೆದು“ಅಲ್ಲಿ ಹೊರಗಡೆ ಯಾವುದು ಅಮಾಯಕ ಹೆಣ್ಣುಮಗಳು ನನ್ನನ್ನು ಶಪಿಮಿಸುತ್ತಿರುವಳು… ಅವಳನ್ನು ಇಲ್ಲಿಂದ ಕಳಿಸಿಕೊಡು “ಅನ್ನುತ್ತಿದ್ದರಂತೆ. ತಾಯಿಯವರು ನೋಡಿದರೆ ಅಲ್ಲಿ ಯಾರು ಇರುತ್ತಿರಲಿಲ್ಲ ಆದರೂ ಕೂಡ “ಅವಳು ಇಲ್ಲೇ ಇದ್ದಾಳೆ ಹೇಳು ಅವಳಿಗೆ ಹೋಗಲು ಹೇಳು ನೀನು ಹೇಳಿದರೆ ಮಾತ್ರ ಹೋಗುವಳು ಅವಳಿಗೆ ಬೆದರಿಸಿ ಹೇಳು…..”ಅನ್ನುತ್ತಿದ್ದರಂತೆ.ಅದೇ ರೀತಿಯಾಗಿ ತಾಯಿಯವರು “ನೀನು ಹೋಗಮ್ಮ ಇಲ್ಲಿಂದ” ಅಂತ ಬೆದರಿಸಿದಂತೆ ನಟಿಸುತ್ತಿದ್ದರಂತೆ ….ಆಗ ಅಜ್ಜ ಸಮಾಧಾನರಾಗಿ “ನೋಡು ಅವಳು ನಿನಗೆ ಹೆದರಿ ಹೋಗಿಬಿಟ್ಟ ನೋಡು “ಅನ್ನುತ್ತಿದ್ದರಂತೆ … ನಂತರ ಜಯದೇವಿ ತಾಯಿಯವರು ಸಿದ್ದರಾಮೇಶ್ವರನ ಪ್ರಸಾದವನ್ನು ಹಣೆಗಿಟ್ಟು ಮಲಗಿಸುತ್ತಿದ್ದರಂತೆ.ಇದೆಲ್ಲಾ ಕರ್ಮದ ಫಲಗಳು ಅಂತ ತಾಯಿಯವರು ಹೇಳುತ್ತಿದ್ದರು. ನಾವು ಮಾಡಿದ ಪಾಪ ಪುಣ್ಯಗಳ ಕರ್ಮವನ್ನು ನಮ್ಮ ಮುಂದಿನ ಪೀಳಿಗೆಯು ಭೋಗಿಸಬೇಕಾಗುತ್ತದೆ. ತಾಯಿಯವರು ಜೀವನವನ್ನು ಕೇವಲ ಘಟನೆಗಳ ಸರಣಿ ಹೇಳುತಿದ್ದರು…. ನಮ್ಮ ಕರ್ಮದ ಹಾದಿ ಎಂದು ಗಾಢವಾಗಿ ನಂಬಿದವರು…“ನಾವು ಮಾಡುವ ಪ್ರತಿಯೊಂದು ಕಾರ್ಯಕ್ಕೂ ಪ್ರತಿಫಲ ಇರುತ್ತದೆ… ಅದು ನಮ್ಮನ್ನು, ನಮ್ಮ ಮಕ್ಕಳನ್ನೂ ತಟ್ಟುತ್ತದೆ…” ಎಂದು ಅವರು ಮನಸ್ಸು ತುಂಬಿ ಹೇಳುತ್ತಿದ್ದರು.ಅವರ ಧ್ವನಿಯಲ್ಲಿ… ಅನುಭವದ ಕಿಡಿ ಹೊತ್ತಿತ್ತು… “ನಾವು ಮಾಡಿದ ಪಾಪ… ನಮ್ಮ ನೆರಳಾಗಿ ನಮ್ಮನ್ನು ಹಿಂಬಾಲಿಸುತ್ತದೆ…ನಾವು ಮಾಡಿದ ಪುಣ್ಯ… ನಮ್ಮ ಮಕ್ಕಳಿಗೆ ದಾರಿಯಾಗಿ ಬೆಳಗುತ್ತದೆ…”ಅವರು ನಿಧಾನವಾಗಿ ಮುಂದುವರಿಸುತ್ತಿದ್ದರು:“ಮಕ್ಕಳು ನಮ್ಮ ಸಂಪತ್ತಾದರೆ… ನಮ್ಮ ಕರ್ಮದ ಸಾಲಿಗೂ ವಾರಸುದಾರರಾಗುತ್ತಾರೆ…”ಈ ಮಾತು ಹೇಳುವಾಗ ಅವರ ಕಣ್ಣುಗಳಲ್ಲಿ ಒಂದು ಗಾಢ ನೋವು ಮೂಡುತ್ತಿತ್ತು… ನಾವು ಬದುಕುವ ಪ್ರತಿದಿನವೂ ಜಾಗ್ರತೆ ಇರಬೇಕು…” ಎಂದು ಅವರು ಹೃದಯದಿಂದ ಹೇಳುತ್ತಿದ್ದರು…ಅವರ ಮಾತುಗಳಲ್ಲಿ ಎಚ್ಚರಿಕೆ ಇತ್ತು…ಪ್ರಾರ್ಥನೆ ಇತ್ತು…ಒಂದು ಪಾಠ ಇತ್ತು…“ನಾವು ಬಿತ್ತಿದ ಬೀಜವೇ ಮರವಾಗಿ ನಮ್ಮ ಮಕ್ಕಳ ಮೇಲೆ ನೆರಳಾಗುತ್ತದೆ…ಅದು ನೆರಳೋ… ಇಲ್ಲ ಬೆಂಕಿಯೋ… ಅದು ನಮ್ಮಕ್ಯೆಯಲ್ಲಿದೆ……ಎಂದು ಯಾವಾಗಲೂ ತಿಳಿ ಹೇಳುತ್ತಿದ್ದರು. ನೈತಿಕವಾಗಿಯೂ ತಮ್ಮ ಮನೆತನವನ್ನು ಬಲಪಡಿಸಿದರು. ಅವರ ಈ ಕ್ರಮಶೀಲತೆ ಮತ್ತು ಧೈರ್ಯವು ಇತರ ಮಹಿಳೆಯರಿಗೂ ಮಾದರಿಯಾಗಿ ಪರಿಣಮಿಸಿತು.ಪತಿಯನ್ನು ಕಳೆದುಕೊಂಡ ದುಃಖವನ್ನು ಶಕ್ತಿಯಾಗಿ ಪರಿವರ್ತಿಸಿಕೊಂಡು, ಜಯದೇವಿ ತಾಯಿಯವರು ತಮ್ಮ ಜೀವನವನ್ನು ತಮ್ಮ ಸುತ್ತಲಿನ ಜನರ ಜೀವನವನ್ನೂ ಸುಧಾರಿಸುತ ಮಹಾನ್ ವ್ಯಕ್ತಿತ್ವವಾಗಿ ಬೆಳಗಿದರು. “ನೀರಿನಂತೆ ನಿರ್ಮಲ | ಹಿರಿದಾದ ಮನವಾಗಿ ಪರರಿಗಾಗಿ ಸವೆದು ತಣಿಬೇಕು -ದೇವನಬರುವಿಗಾಗಿ ದಾರಿ ಕಾಯಬೇಕು ||” ಎನ್ನುವಂತೆ ಜೀವನವನ್ನು ಸಮರ್ಪಿಸಿಕೊಂಡಿದ್ದರು. (ಮುಂದುವರೆಯುವುದು) ಸವಿತಾ ದೇಶಮುಖ
ಧಾರಾವಾಹಿ ಸಂಗಾತಿ -18 ಜಯದೇವಿತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣ ಮತ್ತು ಕನ್ನಡಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಮಹಾನ್ ಚೇತನ ಪತಿ ಚೆನ್ನಮಲ್ಲಪ್ಪನವರ ವಿಯೋಗ ೧೯೪೮೯ ಸಮಯ ….ಆಗಲೇ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಾಗಿತ್ತು….. ಸಂಸ್ಥಾನಗಳ ವಿಲೀನಿಕರಣವಾಗಿ, ನಿರಾಶ್ರಿತರು ತಮ್ಮ ತಮ್ಮ ತಾಣಕ್ಕೆ ಹೋಗಿ ಸೇರಿದ್ದರು.ಜಯದೇವಿ ತಾಯಿಯವರು ಅನೇಕ ಕುಟುಂಬಗಳ ಬದುಕಿಗೆ ಬೆಳಕಾಗಿದ್ದರು .. ಅವರಲ್ಲಿ ಆಶ್ರಯ ಪಡೆದ ಅನಾಥರಿಗೆ ಸಂಸಾರ ದೊರಕಿಸಿಕೊಟ್ಟರು…ತಾಯಿಯ ಮಮತೆಯಿಲ್ಲದೆ ಅಳುತ್ತಿದ್ದ ಮಕ್ಕಳಿಗೆ ತಾಯಿಯ ಅಕ್ಕರೆ ಸಿಕ್ಕಿತು…ಬಾಣಂತಿ ನೋವಿನಲ್ಲಿ ನರಳುತ್ತಿದ್ದ ಮಹಿಳೆಯರಿಗೆ ಅವರು ತಾಯಿ ಆಗಿ ಸೇವೆ ಸಲ್ಲಿಸಿದರು…ಅಜ್ಞಾನದಲ್ಲಿ ಕಳೆದು ಹೋಗುತ್ತಿದ್ದ ಮಕ್ಕಳಿಗೆ ಶಿಕ್ಷಣದ ದಾರಿ ತೋರಿಸಿದರು…ಬಡತನದ ಸಂಕೋಲೆಗಳನ್ನು ಕತ್ತರಿಸಿ ಅವರ ಬದುಕಿಗೆ ನಂಬಿಕೆ ತುಂಬಿದರು…!!!ಆದರೆಜಯದೇವಿ ತಾಯಿಯವರ ಮನಸ್ಸಿನಲ್ಲಿ ದುಃಖದ ಸಾಗರ ಉಕ್ಕುತ್ತಿತು……!!!ಎಲ್ಲರಿಗೂ ಬದುಕು ಕೊಟ್ಟ ಆ ಮಹಾತಾಯಿ,ಸ್ವಂತ ಮನಸ್ಸಿನಲಿ ನೋವನ್ನು ಹೋತ್ತು ಕೊಂಡಿದ್ದರು…..ತಮ್ಮಕಷ್ಟವನ್ನು ಮಾತ್ರ ಯಾರಿಗೂ ತೋರಿಸಲಿಲ್ಲ…ಬಾಹ್ಯವಾಗಿ ಅವರು ಸದಾ ನಗುತ್ತಿದ್ದರು…ಆದರೆ ಆ ನಗುವಿನ ಹಿಂದೆ ಅನೇಕ ಕಹಿ ಅನುಭವಗಳು, ತ್ಯಾಗಗಳ ಗಾಯಗಳು ಮರೆಮಾಚಿಕೊಂಡಿದ್ದವು…ಇತರರ ಕಣ್ಣೀರನ್ನು ಒರೆಸಿದ ಕೈಗಳು,ತಮ್ಮ ಕಣ್ಣೀರನ್ನು ತಾವೇ ಒರೆಸಿಕೊಳ್ಳುತ್ತಿದ್ದರು… ಎಲ್ಲರ ಸಂತೋಷವೇ ತನ್ನ ಸಂತೋಷ ಎಂದು ಕೊಂಡವರ ಬದುಕು ಒಂದು ತ್ಯಾಗದ ಗಾಥೆ,ತನ್ನ ನೋವನ್ನು ಮನದಲ್ಲಿ ಮಡಚಿಟ್ಟಕೊಂಡ ಮಹಾನ್ ಆತ್ಮವದು.ತಾಯಿಯವರ ಗಂಡ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದರು .ಮಲಗಿದ ಅವರ ನಿಶಕ್ತ ದೇಹದ… ಪ್ರತಿ ಉಸಿರು ಅವರ ಆಯುಷ್ಯದ ರೇಖೆಯನ್ನು ಕಡಿಮೆಗೊಳ್ಳಿಸುತ್ತಿರುವದ ತೋರುತ್ತಿತ್ತು. ಗಂಡನ ಕಣ್ಣಿನಲ್ಲಿ ಕಾಣುತ್ತಿದ್ದ ವೇದನೆ ಸಹಿಸದಾಗಿತ್ತು… ತಿಳಿಯದ ಅಜ್ಞಾತ ಭಯ ಕಾಡುತ್ತಿತ್ತು…..!!!! ಆದರೂ ಮುಖದಲ್ಲಿ ನೋವಿನ ಛಾಯೆ ತೋರಿಸಲಿಲ್ಲ. ಧೈರ್ಯವಾಗಿ ನಿಂತವರು. ಸಭೇ- ಸಮಾರಂಭ-ಜನರ ಮಧ್ಯೆ ಹಾಜರಾಗುತ್ತಿದ್ದರು. ಅವರಿಗೆ ಯಾವ ಸಮಾರಂಭಕ್ಕೆ ಹೋಗುವದು ಬೇಡವಾದರೂ ಗಂಡ ಮಾತ್ರ ಹರ್ಷದಿಂದಲೇ ಅವರಿಗೆ ಹೋಗಿ ಬರಲು ಹೇಳುತ್ತಿದ್ದರು. “ನನ್ನನ್ನು ನೋಡಿಕೊಳ್ಳಲು ಆಳುಗಳು ಇದ್ದಾರಲ್ಲ ಎರಡು ದಿನದಲ್ಲಿ ನನಗೇನಾಗತದ??!! ಹೋಗಿ ಬಾ” ಅಂತ ಉತ್ಸಾಹ ತುಂಬಿಸುತ್ತಿದ್ದರು. ಒಂದು ಕಡೆ ದೇಶದ ಸ್ವಾತಂತ್ರ್ಯದ ಸಂಭ್ರಮದ ಆಚರಣೆ ಮತ್ತೊಂದು ಕಡೆ ಅತ್ಯಂತ ಪ್ರೀತಿಯ ವ್ಯಕ್ತಿಯನ್ನು ಕಳೆದುಕೊಳ್ಳುವ ಭೀತಿ…ಈ ಎರಡರ ನಡುವೆ ತಾಯಿಯ ಮನಸ್ಸು ಹೋರಾಡುತ್ತಿತ್ತು.ತಮ್ಮ ವೈಯಕ್ತಿಕ ದುಃಖವನ್ನು ಮರೆತು, ಸಮಾಜದ ಹಿತಕ್ಕಾಗಿ ಸದಾ ಮುಂದೆ ಸಾಗಿದ ಅಜರಾಮರ ವ್ಯಕ್ತಿತ್ವ. *ಸಂಸಾರ ಸಾಗರವು|ಈಸಲು ಹೊರಟಾಗಏಸೊಂದು ಕಷ್ಟಗಳ ಮೊಸಳೆ -ಬಂದು ನುಸುಳೂತ ಹಾದಿ ಕಟ್ಟುವವು!! *.ಆ ಕ್ಷಣಗಳು ಅವರ ಜೀವನದ ಅತ್ಯಂತ ಕಠಿಣ ಅಧ್ಯಾಯವಾಗಿದ್ದರೂ, ತಾಯಿಯವರ ಅಂತರಂಗದ ಶಕ್ತಿಯನ್ನು ಮತ್ತಷ್ಟು ಗಾಢಗೊಳಿಸಿತು… ತಮ್ಮ ಆರೋಗ್ಯದ ಸ್ಥಿತಿ ಗೊತ್ತಿದ್ದ ಚನ್ನಲ್ಲಪ್ಪನವರು ತನ್ನ ಹಿರಿಯ ಮಗಳ ಮದುವೆಯನ್ನಾದರೂ ಮಾಡಬೇಕೆಂದು ಹಂಬಲ ಪಟ್ಟರು ಹಾಗೆ ತನ್ನ ಮಾವನಾದ ಚನ್ನಬಸಪ್ಪ ಮಡಿಕಿ ಅವರೊಂದಿಗೆ ಸಮಾಲೋಚನೆ ಮಾಡಿ ಇತ್ಯರ್ಥಕ್ಕೆ ಬಂದರು. ಅವರ ಮಗ ರಾಜಶೇಖರ ಮಡಿಕೇರಿ (ಜಯದೇವಿ ತಾಯಿಯವರ ತಮ್ಮ)ಅತ್ಯಂತ ಸುಶೀಲರು ಸುದ್ರೂಪಿಯು ಆಗಿದ್ದ ರಾಜಶೇಖರನಿಗೆ ಕೊಟ್ಟು ಮದುವೆ ಮಾಡಬೇಕು ಅನ್ನುವ ಹಂಬಲ ವ್ಯಕ್ತಪಡಿಸಿದರು……ಅದರಂತೆ ತಾಯಿಯವರು ಮನಸ್ಸಿನಿಂದ ಒಪ್ಪಿ ಮದುವೆ ಮಾಡಿ ಮುಗಿಸಿದರು. ಅತ್ಯಂತ ವಿಜೃಂಭಣೆಯಿಂದ ಮದುವೆಯನ್ನು ಮಾಡಿದರು. ಅಳಿಯನಿಗೆ ಕಾಲೇಜ್ ಹೋಗಿ ಬರಲು ಕುದುರೆಯನ್ನು ಕಾಣಿಕೆಯಾಗಿ ಕೊಟ್ಟರು. ಜಯದೇವಿ ತಾಯಿಯವರು ತಮ್ಮಗಂಡನ ಆರೋಗ್ಯದ ಸ್ಥಿತಿ ಸುಧಾರಿಸಲು ಅದೆಷ್ಟೊಂದು ವ್ರತಗಳನ್ನು ಉಪವಾಸ ತಪವಾಸಗಳನ್ನು ಮಾಡಲು ಪ್ರಾರಂಭಿಸಿದರು. ಹಾಗೆ ಸಿದ್ದರಾಮನ ದೇವಸ್ಥಾನಕ್ಕೆ ಬರಿಗಾಲಿನಿಂದ ನಡೆದುಕೊಂಡುಹೋಗುವರು… ,ಮನೆಯ ಹೂದೂಟದಲ್ಲಿ ಬೆಳೆದ ಹೂಗಳನ್ನು ತೆಗೆದುಕೊಂಡು ಸುಂದರವಾದ ಹಾರನ್ನು ಹೆಣೆದು ಸಿದ್ದರಾಮನಿಗೆ ಅರ್ಪಿಸಿ ನಂತರ ಮನೆಗೆ ಬಂದು ಪ್ರಸಾದ ತೆಗೆದುಕೊಳ್ಳುವರು .ಅಷ್ಟರೊಳಗಾಗಿ ಮೂರು ನಾಲ್ಕು ಗಂಟೆ ಆಗಿರುತ್ತಿತ್ತು ಅಲ್ಲಿಯವರೆಗೂ ಉಪವಾಸವಿರುತ್ತಿದ್ದರು. ಹೀಗಾಗಿ ಅವರ ಆರೋಗ್ಯದ ಮೇಲೆ ಬಹಳಷ್ಟು ದುಷ್ಪರಿಣಾಮಗಳು ಬೀಳಲು ಆರಂಭಿಸಿದವು ಅಂತ ತಾಯಿಯವರೇ ನಮಗೆ ಬಹಳಷ್ಟು ಸಲ ಹೇಳುತ್ತಿದ್ದ ನೆನಪು ……!!!ಹಾಗೆ ಮುಂಜಾನೆಯ ಫಲಹಾರ ಆರೋಗ್ಯದ ಗುಟ್ಟು ಅಂತನು ಹೇಳ್ತಾ ಇದ್ದರು . ಒಂದು ದಿನ ಸಿದ್ದರಾಮನ ಹಣೆಯ ಅಂಗಾರವ ತಂದು ಗಂಡನ ಮಸ್ತಕಕ್ಕೆ ಹಚ್ಚಲು ಲಗುಬಗೆಯಿಂದ ಮೆಟ್ಟಲು ಏರಲು ಹೋಗಿ ಕಾಲು ಜಾರಿ ಬಿದ್ದು ಸೊಂಟ ನೋವನ್ನು ಅನುಭವಿಸಿದ್ದರು. ಆದರೆ ಈ ಸಮಾಚಾರವನ್ನು ಗಂಡನಿಗೆ ಯಾರು ಹೇಳು ತಕ್ಕದ್ದಲ್ಲ ಅಂತ ಹೇಳಿದ್ದರು ಆ ನೋವಿನಲ್ಲಿ ಅವರು ಎದ್ದು ಮತ್ತೆ ಗಂಡನ ಸೂಶ್ರುಷಯದಲಿ ತೊಡಗಿದ್ದರು.ಪತಿ ಇಹಲೋಕವನ್ನು ಬಿಟ್ಟು ಹೋಗುವ ಸಮಯ ಸಮಿಪಿಸಿದಂತೆ…. ಗಂಡ ತಾಯಿಯವರಿಗೆ ಮಗುವಾದರು… ಮೇಲಿಂದ ಮೇಲೆ ತಾಯಿಯವರಿಗೆ ಕರೆದು ಹತ್ತಿರ ಕುಳಿತುಕೊಳ್ಳಲು ಕೇಳುತ್ತಿದ್ದರು. ಆತುರದಿಂದ |ಓತು ನೋಡುವ ಕಣ್ಣು,ಆತುಮಕ್ಕೆ ಶಾಂತಿ ನೀಡೂವ- ಪರಿಶುದ್ಧ ಮಾತುಗಳನ್ನು ಕೇಳಿಸುವ ತವಕ || ಸತತವಾಗಿ ಬಸವಣ್ಣನ ವಚನಗಳನ್ನು ಪಠಣ ಮಾಡಲು ಕೇಳಿಕೊಳ್ಳುತ್ತಿದ್ದರು .ಹಾಗೆ ಮಂತ್ರಗಳ ಉಚ್ಚರಣೆ ಮಾಡಲು ಹೇಳುತ್ತಿದ್ದರು .ಅವರ ಜೊತೆಗೆ ತಾನು ಕೂಡ ಆ ಮಂತ್ರ ಪಠಣವನ್ನು ಮಾಡುತ್ತಿದ್ದರು. “ನಿಮಗೆ ಆಯಾಸವಾಗಿತ್ತು ಜೋರಾಗಿ ಹೇಳಬೇಡಿ ನಾನು ಹೇಳ್ತೀನಿ ಕೇಳ್ರಿ “ಅಂತ ತಾಯಿಯವರು ಬಹಳಷ್ಟು ಸಲ ಹೇಳಿದರೂ ಅದಕ್ಕೆ ಅವರು ನಕ್ಕು “ದೇವರ ಹೆಸರು ಹೇಳಿದರೆ ಆಯಾಸ ಯಾತರದು” ಅಂದು ತಾವು ಕೂಡ ಜೋರ ಜೋರಾಗಿ ಮಂತ್ರಗಳನ್ನು ಹೇಳುತ್ತಿದ್ದರು. ಆ ದಿನ ಅದೇಕೋ ಪತಿಯ ಆರೋಗ್ಯ ಕ್ಷೀಣವಾಗ್ತಾ ಇದೆ ಅಂತ ಅನಿಸಿದಾಗ ತಾಯಿಯವರು ಒಂದು ನಿಮಿಷವೂ ಗಂಡನಿಂದ ದೂರ ಸರಿಯಲಿಲ್ಲ .ಕೊನೆಗೆ ಸಂಜೆ ಹೊತ್ತಿಗೆ ಸ್ವಲ್ಪ ಪ್ರಸಾದ ತೆಗೆದುಕೊಂಡು ಬರಲು ಒತ್ತಾಯಿಸಿದರೂ ಅವರು ಅಲ್ಲಿಂದ ಕದಲಲಿಲ್ಲ ….ತಾಯಿಯವರ ತಂದೆ ಬಂದಾಗ “ಈಗ ನಿಮ್ಮ ತಂದೆ ಬಂದಿದ್ದಾರೆ ಸ್ವಲ್ಪ ಹೋಗು ಹೊಟ್ಟೆ ಏನಾರು ತೆಗೆದುಕೊಂಡು ಬಾ”ಅಂತ ಒತ್ತಾಯಿಸಿದರು..ಆಗ ತಾಯಿಯವರು ಅಲ್ಲಿಂದ ಹೋಗಿ ಸ್ನಾನ ಪೂಜೆಯನ್ನು ಮುಗಿಸಿದರು . ಅವರಿಗೆ ಪ್ರಸಾದ ಸೇರಲೇ ಇಲ್ಲ ಅಂದೆಕೋ ಏನೋ ಕಳೆದು ಹೋಗುವ ತಳಮಳ ಅವರಲ್ಲಿ ಇತ್ತು . “ಗಂಡನನ್ನು ನೀನು ನೋಡಿಕೊಳ್ಳುವುದು ಹೇಗೆ ಸಾಧ್ಯ ಹೀಗೆ ಉಪವಾಸ ಇದ್ದರೆ “ಅಂತ ಅತ್ತಿಯಂದಿರ ಆಗ್ರಹಿಸಿದ್ದಕ್ಕೆ ಒಲ್ಲದ ಮನಸ್ಸಿನಿಂದ ಒಂದು ಬಟ್ಟಲು ಹಾಲನ್ನು ಕುಡಿದು…. ಸಿದ್ದರಾಮನ ಹಣೆಯ ಅಂಗಾರ ತೆಗೆದುಕೊಂಡು ಪತಿಯ ಹತ್ತಿರ ಬಂದರು. ಅವರ ಹತ್ತಿರವಿದ ಆಳ ಶಂಕರವನ್ನು ” ಇನ್ನು ನೀನು ಹೋಗಿ ಪ್ರಸಾದ ತೆಗೆದುಕೊಂಡು ಬಾ, ನಾನು ಇರುತ್ತೇನೆ ಅಂದರು ಎಂಥ ಪರಿಸ್ಥಿತಿಯಲಿಯೂ ಎಲ್ಲರ ಕಾಳಜಿಯನ್ನು ಮಾಡುವುದನ್ನು ಮಾತ್ರ ಜಯದೇವಿ ತಾಯಿಯವರು ಮರೆಯುತ್ತಿರಲಿಲ್ಲ .ಗಂಡ ಚನ್ಮಲ್ಲಪ್ಪನವರು ದೀರ್ಘವಾಗಿ ತಾಯಿಯವರನ್ನು ಒಮ್ಮೆ ನೋಡಿ ಮಂತ್ರ ಪಠಣ ಮಾಡಲು ಮತ್ತೇ ಹೇಳಿದರು *ಸಾವಿಗೆ ಅಂಜದಿರು |ನೋವಿಗೆ ಕುಗ್ಗದಿರುಭವ ಮಾಲೆಯಲ್ಲಿ ಸಿಗದಿರು- ಸುದೈವದೇವನ ಸ್ಮರಣೆಯ ಮರೆಯದಿರು !!* ಎನ್ನುವಂತೆ ಅಂತಿಮ ಕ್ಷಣಗಳು ಹತ್ತಿರವಾಗುತ್ತಿವೆ ಎಂಬುದನ್ನು ತಿಳಿಯಲು ತಡವಾಗಲಿಲ್ಲಮನೆಯಲ್ಲಿ ಒಂದು ವಿಚಿತ್ರ ವಾತಾವರಣ. ವಿದಾಯದ ಮುನ್ನದ ಭಾರವಾದ ನಿಶ್ಶಬ್ದ.ಮಂತ್ರ ಹೇಳುತ್ತಾ ಹೇಳುತ್ತಲೇ ತಾಯಿಯವರ ಸ್ವಲ್ಪ ಕಣ್ಣು ಕುಳಿತಲ್ಲಿಯೇ ಕಣ್ಣು ರೆಪ್ಪೆಗಳು ಮುಚ್ಚಿದ್ದವು…..ಪತಿ ತಾಯಿಯವರ ಹೆಸರನ್ನು ಜೋರಾಗಿ ಕೂಗಿ ಕರೆದರು ಗಡಿಬಿಡಿಸಿಕೊಂಡು ….. ಜಯದೇವಿ ತಾಯಿಯವರು” ಏನಾಯಿತು…. !!??ಅಂತ ಕೇಳಿದರು.ಪತಿ ನಿಧಾನವಾಗಿ ತಾಯಿಯವರ ಕೈ ಹಿಡಿದರು…, ಕಣ್ಣಲ್ಲಿ ಅನೇಕ ಕೇಳಬೇಕಾದ ಪ್ರಶ್ನೆಗಳಿಗೆ ಉತ್ತರವಿಲ್ಲದೆ ಸುಮ್ಮನೆ ನೋಡಿದರು.“ಮಂತ್ರ ಪಠಿಸು…”ಅಂದರುಆ ಮಾತು ಕೇಳುತ್ತಿದ್ದಂತೆ ತಾಯಿಯವರ ಹೃದಯ ನಡುಗಿತು…!!!ಆದರೂ ಅವರು ಕುಗ್ಗಲಿಲ್ಲ.ಕಣ್ಣೀರನ್ನು ಒಳಗೇ ನುಂಗಿ, ದೈರ್ಯವನ್ನು ಧರಿಸಿ ಮಂತ್ರಗಳನ್ನು ಜಪಿಸಲು ಆರಂಭಿಸಿದರು.“ಓಂ… ”ಅವರ ಧ್ವನಿ ಮೊದಲು ಸ್ವಲ್ಪ ನಡುಗಿತು…ಆದರೆ ನಂತರ ನಿಧಾನವಾಗಿ ಗಟ್ಟಿಯಾಗತೊಡಗಿತು.ವಚನಗಳನ್ನು ಹೇಳಲಾರಂಭಿಸಿದರು. ಒಂದು ಕಡೆ ದೇವರ ಸ್ಮರಣೆ, ಮತ್ತೊಂದು ಕಡೆ ಜೀವದ ಕೊನೆಯ ಹಂತ…ಆದರೆ ಅಚ್ಚರಿಯ ಸಂಗತಿಗಂಡನ ಧ್ವನಿಯೇ ಹೆಚ್ಚು ಜೋರಾಗಿ ಕೇಳಿಸತೊಡಗಿತಹಾಸಿಗೆಯ ಮೇಲೆ ನಿಶಕ್ತನಾಗಿ ಮಲಗಿದವರು, ತನ್ನ ಉಳಿದ ಶಕ್ತಿಯನ್ನೆಲ್ಲಾ ಸೇರಿಸಿಕೊಂಡು ತಾಯಿಯವರಿಗಿಂತಲೂ ಜೋರಾಗಿ ಮಂತ್ರಗಳನ್ನು ಉಚ್ಚರಿಸಲಾರಂಭಿಸಿದರು…… ಮಂತ್ರಪಠನವು..ಜೀವನದ ಅಂತಿಮ ಘೋಷಣೆಯಾಗಿತ್ತು….!!!!! ಒಂದು ಆತ್ಮ ತನ್ನ ಪಯಣವನ್ನು ಮುಗಿಸುವ ಮುನ್ನದ ಶುದ್ಧ ಸಂಕಲ್ಪ…ತಾಯಿಯವರ ಕಣ್ಣೀರು ತಡೆಯಲಾಗದೆ ಹರಿಯಲಾರಂಭೀಸಿದ್ದವು…ಆದರೂ ಜಪ ನಿಲ್ಲಿಸಲಿಲ್ಲ. *ಅತ್ತತ್ತು ಕಣ್ಣಿರು |ಬತ್ತಿ ಹೋಗಿವು ಇಂದುಹೊತ್ತಿಸಿದ ಒಲಿ ಆರುವದು-ನಿನಗಾಗಿಹೋತ್ತಿದ ಎದೆಯು ಆರದು||* ಪ್ರತಿ ಪದವೂ ಹೃದಯವನ್ನು ಕೀಳುತ್ತಿದ್ದರೂ, ಪಠಣ ನಿಲ್ಲಿಸಲಿಲ್ಲ ಅಂತಿಮ ಕ್ಷಣಗಳು ಸಮಿಪಿಸುತಿದ್ದಂತೆಗಂಡನ ಧ್ವನಿ ನಿಧಾನವಾಗಿ ಕುಂದುತ್ತಾ ಹೋಯಿತು…ಆದರೆ ಕೊನೆಯ ಉಸಿರಿನವರೆಗೂ ಮಂತ್ರವನ್ನು ಬಿಟ್ಟಿರಲಿಲ್ಲ…ಒಂದು ದೀರ್ಘ ಶ್ವಾಸ… ಶಾಂತ ಮುಖ…ಮತ್ತೊಂದು ಕ್ಷಣ…..ಎಲ್ಲವೂ ನಿಶ್ಶಬ್ದ… ಧ್ವನಿ ನಿಂತಿತು…ಆತ್ಮ ಶಾಂತವಾಗಿತ್ತು …!!!!! *ಕಣ್ಣೊಳಗಿನ ತೇಜ| ಬಣ್ಣಿಸಲಾಗುವುದುಹುಣ್ಣಿಮೆಯ ಚಂದ್ರನ ತಂಡವ -ಬೀರುತ್ತಾಕಣ್ಣು ಚಲಿಸದೆ ನಿಶ್ಚಲ||* ತಾಯಿಯವರ ಕೈಯಲ್ಲೇ ಅವರ ಜೀವ ಕೊನೆಯ ಬಾರಿ ನಡುಗಿ, ಶಾಂತವಾಗಿ ನಿಂತುಹೋಯಿತು… ಜೀವನದ ಅಂತ್ಯ… ಆತ್ಮದ ಪವಿತ್ರ ಮುಕ್ತಿಯ ಕ್ಷಣ…ತಾಯಿಯವರು ಕಣ್ಣೀರಿನಲ್ಲಿ ಮುಳುಗಿದರು . *ಸಮಾಧಾನವ ಹೇಳಿ| ರವಿಸುವ ಮಾತಿಲ್ಲ ಮಮತೆಯ ಬೀರುವ ನೋಟಿಲ್ಲ- ಓ ತಂದೆಆತುಮಕೆ ಶಾಂತಿ ಹೇಳವರ ಇನ್ನು ಇಲ್ಲ|| ಎಂದು ಅನ್ನಿಸಿದರೂ *ಆಯಾಸವಿಲ್ಲದೆ |ಕಾಯ ಬಯಲಾಯಿತು ಹಾಯಗೊಂಡಿತ್ತು ಎನಮನ- ಸಿದ್ದನ ಕರುಣೆಯಛಾಯೆ ಇದಂತೆ ತೋರಿತ್ತು||* ತಮ್ಮ ಜೀವನ ಸಂಗಾತಿ ದೇವರ ನಾಮಸ್ಮರಣೆಯಲ್ಲೇ ಕೊನೆಯ ಉಸಿರೆಳೆದಿದ್ದರು.ಅದು ದೇವರಲ್ಲಿ ಒಂದಾದ ಕ್ಷಣ ಶಾಂತಿಯಲಿ ಶಾಶ್ವತ ವಿದಾಯದ ಕ್ಷಣ…!!! ಮನಸ್ಸಿಗೆ ತುಸು ನೆಮ್ಮದಿ ತಂದಿತ್ತು. *ನೆನೆಯಲಿನ್ಯಾರಿಗೆ |ಮನ ಮಂದಿರದೊಳುಮನವೇ ಸಜ್ಜೆಯಾಗಿ ಪರಿಣಮಿಸಿ- ಎನ್ನಯ್ಯಮನವಿ ಲಿಂಗವಾಗಿ ಬೆಳಗಿತ್ತು||* ಪತಿಯ ವಿಯೋಗದಿಂದ ಪೂರ್ತಿಯಾಗಿ ಅವರು ಸಿದ್ದರಾಮನ ಭಕ್ತಿಯಲಿ ಲೀನವಾದರು. ಲಿಂಗಪತಿ ಶರಣಸತಿಯನ್ನಾಗಿಸಿ ಬಾಳಲಾರಂಭಿಸಿದರು . *ಹುಟ್ಟಿದ ಗುಣ ಕಳೆದು| ಕೊಟ್ಟರು ಲಿಂಗವನಟ್ಟಿತು ಎನ ಮನ ಪ್ರಾಣ -ಭಾವವಮುಟ್ಟಿ ಲಿಂಗ ಧ್ಯಾನ ಮಾಡುವದಕ||* ಸಂಸಾರದ ವ್ಯಾಮೋಹವನ್ನೆಲ್ಲ ಕಳಚಿ… ಶರಣರ ಆಣತಿಯಂತೆ ಇಂದು ಸಂಸಾರವನ್ನು ಮಾಡಿ ಜಗವ ಗೆದ್ದು ಲಿಂಗಯ್ಯನ ಪತಿಯಾಗಿ ಸ್ವೀಕರಿಸಿ ಬಾಳಹತ್ತಿದ್ದರು… ಈಗ ಪೂರ್ತಿಯಾಗಿ ಗುರು ಸಿದ್ದರಾಮನ ಕೂಸಾಗಿ ಬಾಳಲು ಪ್ರಾರಂಭಿಸಿದರು. *ಕರುಣೆಯ ಕಂಗಳ |ಅರುಣೋದಯವಾಯಿತು ಗುರುವಿನ ಗುರು ಸಿದ್ದರಾಮನ-ದಯೆಯಿಂದದುರಿತ ಕರ್ಮವು ಹರಿಯಿತು||*ಎನ್ನುವಂತೆಸೊನ್ನಲಿಗೆಯಗುರು ಸಿದ್ದರಾಮನಲಿ ಒಂದಾಗಿ ನಿಂದರು.ಚೆನ್ನ ಮಲ್ಲಪ್ಪನವರು ಹೀಗೆ ಐದು ಮಕ್ಕಳು ಐದು ಅತ್ತಿಯಂದಿರು ತಮ್ಮ- ತಮ್ಮನ ಹೆಂಡತಿ ಮಕ್ಕಳು ಹಾಗೂ ಅಪಾರವಾದ ಆಸ್ತಿಯ ಜವಾಬ್ದಾರಿ ಬಿಟ್ಟು ಭೂಲೋಕ ತೇಜಿಸಿದ್ದರು. ಚೆನ್ನ ಮಲ್ಲಪ್ಪನವರಿಗೆ ತಾಯಿಯವರ ಮೇಲೆ ಅಪಾರವಾದ ವಿಶ್ವಾಸವಿತ್ತು ,ಅಭಿಮಾನವಿತ್ತು “ಎಂತಹ ಕಷ್ಟಗಳು ಬಂದರೂ ನಿಭಾಯಿಸಿಕೊಂಡು ಹೋಗುವ,ಎಲ್ಲರ ಉದ್ಧಾರ ಮಾಡುವ ಕೈಗಳು ನಿನ್ನವು ನಾನು ನಿಶ್ಚಿತವಾಗಿ ಎಲ್ಲವನ್ನು ಬಿಟ್ಟು ಹೋಗುತ್ತಿದ್ದೇನೆ” ಅಂತ ಹೇಳಿದ್ದರು .ಹಾಗೆ ಮುಂದೆ ತಾಯಿಯವರು ಇಡೀ ಆಸ್ತಿಯ ಜವಾಬ್ದಾರಿಯನ್ನು ಹೊತ್ತು ಅದನ್ನು ಒಂದು ಇಂಚನ್ನು ಕೂಡ ಮಾರದೇ ಎಲ್ಲವನ್ನು ಉಳಿಸಿಕೊಂಡು ಬೆಳೆಸಿಕೊಂಡು ಬಂದರು.(ಮುಂದುವರೆಯುವುದು) ಸವಿತಾ ದೇಶಮುಖ
ಧಾರಾವಾಹಿ ಸಂಗಾತಿ-17 ಜಯದೇವಿತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ಸಲ್ಲಿಸಿದ ಮಹಾನ್ ಚೇತನ ಸವಿತಾ ದೇಶಮುಖ ರಜಾಕರರ ಹಾವಳಿಯಿಂದ ಮನೆಬಿಟ್ಟು ಓಡಿಬಂದ ನಿರಾಶ್ರಿತರ ದುಃಖವ ನೋಡಿ.,.., ತಾಯಿಯವರ ಹೃದಯದಲ್ಲಿ ಮೂಡಿದ ಕರುಣೆ.. ತಾಯಿತನದ ಕರೆಯಾಗಿ ಮೂಡಿದ ತ್ರಿಪದಿ…. *ಬಡ ಮಕ್ಕಳಿಗೆ ಹಾಲು|ತಾಯಿಗೆ ಸೀರೆಒಡಲ ತುಂಬ ಅನ್ನ ನೀಡುತ-ರೋಗಗಳಓಡಿಸ ಬೇಕಯ್ಯಾ ಸಿದ್ದೇಶ|| ಈ ಕವನದಲ್ಲಿ ಹಾಲಿಲ್ಲದೆ ಅಳುವ ಮಕ್ಕಳನ್ನು ನೋಡಿ ಅವರ ಮನಸು ಕರಗುತ್ತದೆ.ಬಟ್ಟೆಯಿಲ್ಲದೆ ನಾಚಿಕೆಪಡುವ ತಾಯಂದಿರ ನೋವ ಕಂಡು ಕಳವಳ ಗೊಂಡರು.ಹಸಿವಿನಿಂದ ಕಂಗೆಟ್ಟ ಜನರಿಗೆ ಅನ್ನ ಕೊಡಬೇಕೆಂಬ ಹಂಬಲ……“ಸೀರೆ ಒಡಲ ತುಂಬ” …. ತಾಯಂದಿರ ಗೌರವ, ಮಾನವನ್ನು ಕಾಪಾಡುವ ಕಾಳಜಿ.“ಅನ್ನ ನೀಡುತ” “ರೋಗಗಳ ಓಡಿಸಬೇಕಯ್ಯಾ” ಆರೋಗ್ಯ ಮತ್ತು ಸುರಕ್ಷತೆ ಕೂಡ ಅಗತ್ಯವೆಂಬ ಅರಿವು.ಕೊನೆಯಲ್ಲಿ “ಸಿದ್ದೇಶ” ಎಂದು ಕರೆಯುವ ತಾಯಿಯವರು, ತಮ್ಮ ಕರ್ತವ್ಯವನ್ನು ದೈವಿಕ ಶಕ್ತಿಗೆ ಅರ್ಪಿಸುತ್ತಿದ್ದಾರೆ. ಇದು ಅವರ ಭಕ್ತಿ, ವಿಶ್ವಾಸ ಮತ್ತು ಮಾನವೀಯತೆಯ ಸಂಕಲನ. ಈ ಕವನದ ಹಿನ್ನಲೆಯಲ್ಲಿ ಇರುವ ದೃಶ್ಯ ತುಂಬ ಹೃದಯವಿದ್ರಾವಕ….!!!ರಜಾಕರರ ಹಿಂಸೆಯಿಂದ ಓಡಿಬಂದ ಜನರು… ಭಯ, ಹಸಿವು, ನಿರಾಶ್ರಿತ ಜೀವನಕ್ಕೆ ತಾಯಿಯವರಂತಹ ಮಹಾನ್ ಹೃದಯಿ ಆಶ್ರಯ, ಆಹಾರ ಮತ್ತು ಆಶೆಯನ್ನು ನೀಡಿದರು. *ಸಿದ್ದನ ಛತ್ತರಕ್ಕ ಬೆಂದು ಬಂದ ಮಕ್ಕಳಎದ್ದು ಕಂಣ್ಣೀರ ಒರೆಸುವ ,ಭಾಗ್ಯವಸಿದ್ದ ನನಗೆ ನೀಡಿ ದುಡಿಸಿದಿ* ತಾಯಿಯವರಲಿದ್ದ ದಯೆ, ಕರುಣೆ ಮತ್ತು ಸೇವಾಭಾವ ತುಂಬ ಸ್ಪಷ್ಟವಾಗಿ ಕಾಣಿಸುತ್ತದೆ.ನಿಜಾಮನ ದಬ್ಬಾಳಿಕೆಯಿಂದ ಸಂಕಷ್ಟಕ್ಕೊಳಗಾದ ನಿರಾಶ್ರಿತರು ತಮ್ಮ ಊರುಗಳನ್ನು ಬಿಟ್ಟು, ಕಣ್ಣೀರನ್ನು ಹೊತ್ತುಕೊಂಡು ಸೊಲ್ಲಾಪುರಕ್ಕೆ ಬಂದಾಗ, ಅವರ ಪರಿಸ್ಥಿತಿ ತುಂಬ ದಯನೀಯವಾಗಿತ್ತು. ಮನೆ ಇಲ್ಲ, ಊರು ಇಲ್ಲ, ಬದುಕಿನ ಭರವಸೆ ಇಲ್ಲ….!! “ಬೆಂದು ಬಂದ ಮಕ್ಕಳ” ಎನ್ನುವ ಪದ ಬಹಳ ಗಂಭೀರ. ಇದು ಅವರ ನೋವನ್ನು ತಾಯಿಯವರು ಎಷ್ಟು ಆಳವಾಗಿ ಅನುಭವಿಸಿದ್ದಾರೆ ಎಂಬುದನ್ನು ತೋರಿಸುತ್ತದೆ. ತಾಯಿಗೆ ಮಕ್ಕಳಂತೆ ಅವರು…..“ಎದ್ದು ಕಣ್ಣೀರ ಒರೆಸುವ ಭಾಗ್ಯ” — ಇಲ್ಲಿ ತಾಯಿಯವರು ಸೇವೆಯನ್ನು ಕರ್ತವ್ಯವಾಗಿ ಮಾತ್ರ ನೋಡುತ್ತಿಲ್ಲ. ಅದನ್ನು “ಭಾಗ್ಯ” ಎಂದುಕೊಂಡಿದ್ದಾರೆ. “ಸಿದ್ದ ನನಗೆ ನೀಡಿ ದುಡಿಸಿದಿ” ದೇವರು ನನಗೆ ಈ ಕೆಲಸ ಕೊಟ್ಟಿದ್ದಾನೆ, ಈ ಜನರ ಸೇವೆ ಮಾಡುವ ಅವಕಾಶ ನೀಡಿದ್ದಾನೆ ಎಂದು ತಾಯಿಯವರು ಕೃತಜ್ಞತೆಯಿಂದ ಹೇಳುತ್ತಾರ. ತಾಯಿಯವರಲ್ಲಿ ಇರುವ ಮಾನವೀಯತೆ ಮತ್ತು ದೈವಭಕ್ತಿ ತೊರುವದು. ಅವರ ಸೇವೆಯನ್ನು ತಮ್ಮ ಕರ್ತವ್ಯ ತಮ್ಮ ಧರ್ಮದಂತೆ ಸ್ವೀಕರಿಸಿದ್ದು ಇಲ್ಲಿ ಗೋಚರಿಸುತ್ತದೆ. ಆಗಿನ ಕಾಲದಲ್ಲಿಶ್ರೀ ಚಂಡರಕಿ (ಬೆನಕೊಪ್ಪ) ಉರ್ದು ಭಾಷೆಯ ಕವಿಯೊಬ್ಬನು ವೀರಗಾಸೆ ಕುಣಿತದಲ್ಲಿ ಪ್ರಸಿದ್ಧರಾದವರು. ಸೊಲ್ಲಾಪುರಕ್ಕೆ ಬಂದ ನಿರಾಶ್ರಿತರಿಗೆ ಆಶ್ರಿತರಾಗಿ ನಿಂತ ತಾಯಿಯವರ ಬಗ್ಗೆ ಉರ್ದುನಲ್ಲಿ ಕವಿತೆ ಬರ್ತಾನೆ ಅದನ್ನು ಕನ್ನಡಕ್ಕೆ ತರ್ಜುಮೆ ಮಾಡಿದವರು ಡಾ. ಶಂಕರ. ಮೂಗಿ(ನನ್ನ ತಂದೆ)*ತಾಯಿ ನಿನಗೆ ಸಲಾಮು ನಿನಗೆ ಸಲಾಮು * ಅಟ್ಟಿ ಜಡಿಸಿದ ಕಾಸೀಮ ಗಜನಿಕಟ್ಟಿಕೊಂಡು ರಜಾಕಾರರ ದಂಡುಓಡಿ ಬಂದೆವು ನಾವಂದುತೋಳ ಕಂಡ ಕುರಿಯ ಹಿಂಡು ಉಟ್ಟಿದ ಸೀರೆ ತೊಟ್ಟಿದ್ದವಲ್ಲಬೆನ್ನು ಬಿರಿವ ಬಿಸಿಲಿನಲ್ಲಿಸೊನ್ನಲಿಗೆ ಭೂಮಿಗೆ ಬಂದುನಿಂದೆವು ಸಿದ್ದನ ಛತ್ರದಲ್ಲಿ….., ಅಂತ ತಾಯಿಯವರ ಬಗ್ಗೆ ಬರಿತಾನೆ…… ಸೊಲ್ಲಾಪುರ ರೈಲ್ವೆ ನಿಲ್ದಾಣಕ್ಕೆ ಒಲಸಿ ಬಂದ ಜನರ ಜಾತಿಭೇದ ಲೆಕ್ಕಿಸದೆ ಜಯದೇವಿ ತಾಯಿಯವರು ವಸತಿ ವ್ಯವಸ್ಥೆ ,ಆಹಾರ ಸೌಲಭ್ಯ ,ಮೂಲ ಸೌಕರ್ಯಗಳ ವ್ಯವಸ್ಥೆಯನ್ನು ಸಿದ್ಧ ಮಾಡಿದರು. ಇದರಿಂದ ಸ್ಥಳೀಯ ಸಂಘ-ಸಂಸ್ಥೆಗಳು ಅದರಲ್ಲೂ ಮಹಿಳಾ ಜ್ಞಾನ ಮಂದಿರ ,ಶ್ರಾವಿಕಾಶ್ರಮ, ಸರಸ್ವತಿ ಸದನಗಳ ಕಾರ್ಯಕರ್ತರು ಸೇರಿ ನಿರಾಶ್ರಿತರಿಗೆ ಊಟದ ಪಟ್ಟಣಗಳನ್ನು, ನೀರು, ಹಾಲು,. ನಿತ್ಯ ಉಪಯೋಗವಾಗುವ ವಸ್ತುಗಳನ್ನು ವಿತರಿಸಲಾರಂಭಿಸಿದರು .ಇಡೀ ಸೊಲ್ಲಾಪುರದ ಜನತೆ ಅವರ ಸಹಾಯಕ್ಕೆ ನಿಂತರು.ಇಲ್ಲಿ ವಾರದ ಬಾಬಾ ಸಾಹೇಬರು, ಕಾಡಾದಿ ನಾಗಪ್ಪನವರು ,ಜಯದೇವಿ ತಾಯಿಯವರು ನಿರಾಶ್ರಿತರಿಗೆ ಆಶ್ರಯ ಕೊಟ್ಟರು. ಹಾಗೂ ಭಾಲ್ಕಿ ಪಟ್ಟ ದೇವರನ್ನು ಕಂಡು ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡರು. ನಿರಾಶ್ರಿತ ಮಕ್ಕಳ ಜೊತೆ ಎಲ್ಲರನ್ನೂ ನೋಡಿಕೊಳ್ಳುವಂತೆ ಭರವಸೆ ಕೊಟ್ಟು ವಸತಿ ವ್ಯವಸ್ಥೆಯನ್ನು ಮಾಡಿದರು. *ಹೊಲದಲ್ಲಿ ಮನೆ ಕಟ್ಟಿಕೊಟ್ಟೀರಿಕೊಯ್ದಿರಿ ನಿಂತ ಫಸಲುಆ ವರುಷ ನಿಮಗಾಗಲಿಲ್ಲಬೆಳೆಯಲ್ಲಿ ಏನು ಅಸಲು ಕೂಸು ಕಂಡಿರಲಿಲ್ಲ ನೆತ್ತಿಗೆಣ್ಣೆಹೊಟ್ಟೆಗಿರಲಿಲ್ಲ ಹಾಲು ತೊಟ್ಟುಹೊದಿಕೆ ಹಾಸಿ, ಹಾಸು ಇರಲಿಲ್ಲತಂದು ಒಗಿಸಿದಿರಿ ಚಾದರದ ಕಟ್ಟು* ತಾಯಿಯವರು ತಮ್ಮ ನಲವತ್ತು ಎಕರೆ ಭೂಮಿಯಲ್ಲಿ ಬೆಳೆದು ನಿಂತ ಬೆಳೆಯನ್ನು ತೆಗೆಸಿ…ಸೆಡ್ ಹಾಕಿ ನಿರಾಶ್ರಿತರಿಗೆ ಇರಲು ಹೊಸ ವೆವ್ಯಸ್ತೆಯನ್ನು ಮಾಡಿದರು. ತಮ್ಮ ಮನೆಯಾದ ಜೈನಿಕೇತನದಿಂದಲೇ ನಿರಾಶ್ರಿತ ಜನರಿಗೆ ಬಟ್ಟೆಯನ್ನು ದಾನ ಮಾಡುತ್ತಿದ್ದರು ಇಷ್ಟೇ ಅಲ್ಲದೆ ಜಯದೇವಿ ತಾಯಿಯವರು ಶಿಬಿರಕ್ಕೆ ಆಗಾಗ ಭೇಟಿ ಕೊಟ್ಟು ಅವರ ಸಮಸ್ಯೆಗಳನ್ನು ಕೇಳುತ್ತಿದ್ದರು … ಬಡವರು ದಲಿತರು ನಿರಾಶ್ರಿತರು ಅದು ಯಾವುದೇ ಮತ ಕುಲಕ್ಕೆ ಸಂಬಂಧಿಸಿದ್ದರು ಎಲ್ಲರಿಗೂ ತಾಯಿ ಮಕ್ಕಳನ್ನು ನೋಡುವಂತೆ ನೋಡಿಕೊಂಡರು. *ಹಡೆದ ನಾರಿಯರ ಕರೆದುತಂದು ಮಾಡಿದಿರಿ ಆರೈಕೆತವರಿಗೆ ಕಡಿಮೆ ಅಲ್ಲದಂತೆಪಡೆದೆವು ಅಮ್ಮ ನಿನ್ನ ಹರಿಕೆ * ನಿರಾಶ್ರಿತ್ರಿರಗೆ ಆಶ್ರಯ ಕೊಡುವದು ಅಂಥ ಸುಲಭದ ಕೆಲಸವೇನು ಆಗಿರಲಿಲ್ಲ ಅದರಲ್ಲಿ ಬಾಣಂತಿಯರು ಗರ್ಭಿಣಿಯರಂಥ ಸ್ತ್ರೀಯರು ಕೂಡ ಇದ್ದರು ಅವರೆಲ್ಲರಿಗೂ ಕರೆದು ಬಾಣಂತನವನ್ನು ಮಾಡಿಸಿ ನವಜಾತ ಶಿಶುಗಳ ಆರೈಕೆ ಮಾಡಿಸಿದರು. ಗರ್ಭಿಣಿಯರಿಗೆ ವೈದ್ಯಕೀಯ ವ್ಯವಸ್ಥೆಯನ್ನು ಒದಗಿಸಿದರು.ವಿವಿಧ ಸಂಸ್ಥಾನಗಳ ವಿಲೀನಿಕರಣ ಸಂದರ್ಭದಲ್ಲಿ ದೇಶದ ಏಕೀಕರಣಕ್ಕಾಗಿ ಶಕ್ತಿಯಾಗಿ ನಿಂತ ನಾಯಕ ಸರ್ದಾರ್ ವಲ್ಲಭಾಯಿ ಪಟೇಲರು.ಸ್ಥಿತಿ ಹಿಡಿತದಿಂದ ತಪ್ಪುತ್ತಿರುವುದು ಕಂಡಾಗ, ಪಟೇಲರು ತಕ್ಷಣವೇ ಶೀಘ್ರ ಹಾಗೂ ದೃಢ ಕ್ರಮ ಕೈಗೊಂಡರು. ಅವರ ದೃಷ್ಟಿಯಲ್ಲಿ ದೇಶದ ಏಕತೆ ಮತ್ತು ಭದ್ರತೆ ಅತ್ಯಂತ ಮುಖ್ಯವಾಗಿತ್ತು.ಶೀಘ್ರ ಕಾರ್ಯಾಚರಣೆಯಲಿ(ಕ್ವಕ ಆಕ್ಷನ್)ಪಟೇಲರ ದೃಢ ನಿಲುವು ತೆಗೆದುಕೊಂಡರು.ಈ ಸಂದರ್ಭದಲ್ಲಿ ಪಟೇಲರು ಮಾತುಕತೆ ಜೊತೆಗೆ ಅಗತ್ಯವಾದರೆ ಶಕ್ತಿಯನ್ನೂ ಬಳಸಬೇಕು ಎಂಬ ನಿಲುವನ್ನು ತಾಳಿದರು.ಹೈದರಾಬಾದ್ ಸಂಸ್ಥಾನದಲ್ಲಿ ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ, ಅವರು “ಪೊಲೀಸ್ ಆಕ್ಷನ್” ಸೈನಿಕ ಕ್ರಮವನ್ನು ಜಾರಿಗೊಳಿಸಿದರು. ಇದನ್ನು *ಆಪರೇಷನ್ ಪೋಲೋ*ಎಂದು ಕರೆಯಲಾಗುತ್ತದೆ. ಈ ಕಾರ್ಯಾಚರಣೆಯ ಮೂಲಕ ಕೇವಲ ಐದು ದಿನಗಳಲ್ಲಿ ಹೈದರಾಬಾದ್ ಸಂಸ್ಥಾನವನ್ನು ಭಾರತದ ಭಾಗವನ್ನಾಗಿ ಮಾಡಲಾಯಿತು.ಪಟೇಲರ ನಾಯಕತ್ವದ ವೈಶಿಷ್ಟ್ಯದೃಢ ನಿರ್ಧಾರ ಶಕ್ತಿ,ತ್ವರಿತ ಕಾರ್ಯಾಚರಣೆ,ದೇಶದ ಏಕತೆಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧತೆಯಲಿ ಇದ್ದರು ಪಟೇಲರು….. ಈ ಶೀಘ್ರ ಮತ್ತು ದೃಢ ಕ್ರಮಗಳ ಫಲವಾಗಿ, ಭಾರತ ಒಂದು ಏಕೀಕೃತ ರಾಷ್ಟ್ರವಾಗಿ ರೂಪುಗೊಂಡಿತು. *” ದೇಶದ ಏಕತೆಯ ಕಗ್ಗತ್ತಲಲ್ಲಿ ಬೆಳಕಾಗಿ ಕಾಣಿಸಿಕೊಂಡವರು ಸರ್ದಾರ್ ವಲ್ಲಭಾಯಿ ಪಟೇಲರು…..“ಭಾರತದ ಕಬ್ಬಿಣ ಮನುಷ್ಯನು” ಎಂದು ಜಯದೇವಿ ತಾಯಿಯವರು ಬಹಳ ಹೆಮ್ಮೆಯಿಂದ ಎಲ್ಲ ಭಾಷಣಗಳಲ್ಲಿ ಹೇಳಿಕೊಳ್ಳುತ್ತಿದ್ದರು. ಕೊನೆಗೊಮ್ಮೆ… ಅನುಭವಿಸಿದ ನೋವು, ನಿರಾಶೆ, ಅಲೆಮಾರಿ ಜೀವನದ ನಂತರ, ನಿರಾಶ್ರಿತರು ಮತ್ತೆ ತಮ್ಮ ಆಶ್ರಯದ ನೆಲೆಗೆ ಹಿಂದಿರುಗುವ ಕ್ಷಣ ಬಂದಾಗ, ಅದು ಅವರ ಬದುಕಿನ ಪುನರ್ಜನ್ಮದಂತಿತ್ತು. ಆ ಸಂತಸದ ದಿನ ಬಂದು ಒದಗಿದ್ದು ೩೦-೯-೪೮ ರಂದು. ನಿರಾಶ್ರಿತರು ತಮ್ಮ ಆಶ್ರಿತ ಸ್ಥಾನಕ್ಕೆ ಹೊರಟು ನಿಂತರು….. ಸ್ವಸ್ಥಾನಕ್ಕೆ ಹಿಂದುತ್ತಿರುವಾಗ ಅವರಲ್ಲಿ ಇದ್ದ ಆನಂದ ಉತ್ಸಾಹ ಹೇಳುತೀರದಾಗಿತ್ತು ….. ಅವರಿಗೆ ನಿಜವಾದ ಸ್ವಾತಂತ್ರ ಈಗ ಬಂದಾಗಿತ್ತು ..,!!!.ಎಲ್ಲರೂ ತಾಯಿಯವರಿಗೆ ತುಂಬು ಹೃದಯದ ಧನ್ಯವಾದಗಳು ತಿಳಿಸ್ತಾ ಹಾಡಿ ಹರಿಸಿ ಹೊಗಳಿ ಅಲ್ಲಿಂದ ತೆರಳಿದರು. ತಮ್ಮ ಮನೆಗಳ ಬಾಗಿಲುಗಳನ್ನು ಮತ್ತೆ ತೆರೆಯುವ ತವಕ …ಕಣ್ಣಲ್ಲಿ ಆನಂದದ ಕಣ್ಣೀರು ತುಂಬಿಕೊಂಡವು…. ಆಸರೆ ಕೊಟ್ಟ ನೆಲವನ್ನು ಬಿಟ್ಟು ಹೋಗುವಾಗ. ..ಆ ಮಣ್ಣನ್ನು ಸ್ಪರ್ಶಿಸಿದಾಗ ಅವರ ಹೃದಯ ತುಂಬ ಒಂದು ಶಾಂತಿಯ ಅಲೆ ಹರಡಿತು.ಭೂಮಿಗೆ ನಮಿಸಿದರು.ಮಕ್ಕಳು ಸಂತೋಷದಿಂದ ಓಡಾಡುತ್ತಿದ್ದರು, .ಪ್ರತಿ ಹೆಜ್ಜೆ ಪ್ರತಿ ಉಸಿರು ಒಂದು ಕಥೆ ಹೇಳುವಂತೆ ಇತ್ತು…..ಆ ಕ್ಷಣದಲ್ಲಿ ಅವರು ತಮ್ಮ ಕಷ್ಟಕಾಲದಲ್ಲಿ ತಾಯಿಯಂತೆ ನೆರವಾದ ಆ ಮಹಾನ್ ವ್ಯಕ್ತಿಯ ಜಯದೇವಿ ತಾಯಿಯವರನ್ನು ನೆನೆಸಿಕೊಂಡರು“ತಾಯಿ… ನಮ್ಮ ಜೀವ ಉಳಿಸಿದವಳು ನೀವು… ನಾವು ಕಳೆದುಕೊಂಡ ವಿಶ್ವಾಸವನ್ನು ಮತ್ತೆ ನಮ್ಮೊಳಗೆ ತುಂಬಿದವಳು ನೀವು… ನಮ್ಮ ನೆರಳಿಲ್ಲದ ಬದುಕಿಗೆ ಆಶ್ರಯವಾದವಳು ನೀವು… ಇಂದು ನಾವು ಮತ್ತೆ ನಮ್ಮ ನೆಲಕ್ಕಹಿಂದಿರುಗುತ್ತಿದ್ದೇವೆಆದರೆ ಈ ಸಂತೋಷದ ಪ್ರತಿಯೊಂದು ಹನಿ ನಿಮ್ಮ ಆಶೀರ್ವಾದವೇ…ನಾವು ನಿಮ್ಮ ಋಣವನ್ನು ಯಾವತ್ತೂ ತೀರಿಸಲಾರೆವು… ನಮ್ಮ ಹೃದಯದ ತುಂಬು ಕೃತಜ್ಞತೆಗಳನ್ನು ನಿಮಗೆ ಅರ್ಪಿಸುತ್ತೇವೆ ಎನ್ನುತ ಹಾಡಿ ಹರಸಿದರು……. *ಹೇಗೆ ತೀರಿಸಬೇಕು ತಾಯಿನಿನ್ನ ಋಣವ ಒಟ್ಟುನೆನೆವೆವು ಹಡೆದ ಮಕ್ಕಳಿಗೆ*ನಿನ್ನ ಹೆಸರು ಇಟ್ಟು,*….!!! ಜಯಭೇರಿ ಕೇಳಿ ಕುಣಿದೆವುಆಯಿತು ರಜಾಕರರ ಹೋಮಮಕ್ಕಳು ಮರಿ ಹೋಗಿ ಬರುವೆವುತಾಯಿ ನಿನಗೆ ಸಲಾಂ.. ನಿನಗೆ ಸಲಾಮ* (ಚಂಡರಕಿ ಉರ್ದು ಕವಿ) ಅವರ ಮುಖದಲ್ಲಿ ಕಂಡ ಆ ಸಂತಸ ಅವರ ಹೃದಯದಲ್ಲಿ ಮೂಡಿದ ಆ ಶಾಂತಿ—ಅದು ತಾಯಿಯ ಸೇವೆಗೆ ದೊರಕಿದ ಅತ್ಯಂತ ಮಹತ್ತರ ಗೌರವ.ಈ ದೃಶ್ಯ… ನೋವಿನಿಂದ ಆರಂಭವಾಗಿ, ಕೃತಜ್ಞತೆಯಲ್ಲಿ ಮುಗಿಯುವ ಒಂದು ಬದುಕಿನ ಪಯಣ.ಮುಂದುವರಿಯುವುದು ಸವಿತಾ ದೇಶಮುಖ
ಧಾರಾವಾಹಿ ಸಂಗಾತಿ ಜಯದೇವಿತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಮಹಾನ್ ಚೇತನ ಸವಿತಾ ದೇಶಮುಖ ಭಾರತಕ್ಕೆ ಸ್ವಾತಂತ್ರವೇನೋ ದೊರೆತಿತ್ತು ನಿಜ ಆದರೆಅನೇಕ ಸ್ಥಿತ್ಯಂತರಗಳು ಹಾಗೂ ಸಮಸ್ಯಗಳ ಕುರಿತು ಪರಿಹಾರ ಹುಡುಕಬೇಕಾಗಿತ್ತು.ಇಂತಹ ಕಾಲದಲ್ಲಿ ಜನತೆಗಾಗಿ ದೇಶದ ಅಭಿವೃದ್ಧಿಗೆ ಪೂರಕವಾಗ ಬೇಕೆಂತಹ ಕಾರ್ಯಗಳನ್ನು ಹಮ್ಮಿಕೊಳ್ಳ ಬೇಕಾಗಿದನ್ನು ಅರಿತುಕೊಂಡಿದ್ದರು ಜಯದೇವಿ ತಾಯಿಯವರು ಹಾಗೂ ಅವರ ಸಂಘಟನಾ ಸದಸ್ಯರು. ೧೯೪೭ ರಲ್ಲಿ ಸ್ವಾತಂತ್ರ್ಯ ಸಿಕ್ಕಾಗ, ದೇಶದ ಮುಂದೆ ದೊಡ್ಡ ಸವಾಲಾಗಿ ನಿಂತದ್ದು ಸಂಸ್ಥಾನಗಳ ವಿಲೀನಿಕರಣ …… ಸುಮಾರ ೫೬೫ ಕ್ಕೂ ಹೆಚ್ಚು ಸಂಸ್ಥಾನಗಳು ಇದ್ದವು ಮತ್ತು ಅವುಗಳಿಗೆ ಸ್ವತಂತ್ರವಾಗಿರುವದೇ ಅಥವಾ ಭಾರತ ಇಲ್ಲವೇ ಪಾಕಿಸ್ತಾನಕ್ಕೆ ಸೇರೋದು ಎಂಬ ಆಯ್ಕೆ ನೀಡಲಾಗಿತ್ತು…..ಇದರಿಂದ ಅನೇಕ ಸಮಸ್ಯೆಗಳು ಉಂಟಾದವು. ಸ್ವಾತಂತ್ರ್ಯದ ಆಸೆ ಯಿಂದಾಗಿ ಕೆಲವು ರಾಜರು ಭಾರತಕ್ಕೆ ಅಥವಾ ಪಾಕಿಸ್ತಾನಕ್ಕೂ ಸೇರುವುದನ್ನು ಬಯಸದೇ, ಸ್ವತಂತ್ರ ರಾಷ್ಟ್ರವಾಗಿರಲು ಯತ್ನಿಸಿತ್ತು ಅದುವೇ* ಹೈದರಾಬಾದ ಸಂಸ್ಥಾನ*…..ಇದರಿಂದ ದೇಶ ತುಂಡಾಗಿ ಹೋಗುವ ಭೀತಿ ಉಂಟಾಯಿತು.ಧರ್ಮ ಮತ್ತು ಭೌಗೋಳಿಕವಾಗಿ ಕೆಲವು ಸಂಸ್ಥಾನಗಳಲ್ಲಿ ಜನಸಂಖ್ಯೆ ಮತ್ತು ರಾಜರ ಧರ್ಮ ಭಿನ್ನವಾಗಿತ್ತು.*ಜುನಾಗಢದ*ಲಿ….ಹಿಂದೂ ಜನರು…ಮುಸ್ಲಿಂ ನವಾಬ ಇದ್ದನು..ಅದೇ ರೀತಿ ಕಾಶ್ಮೀರದಲ್ಲಿಮುಸ್ಲಿಂ ಜನರು…ಹಿಂದೂ ರಾಜನಿದ್ದ….ಇದರಿಂದ ಗೊಂದಲ, ಹೋರಾಟಗಳು ನಡೆದವು. ಇಲ್ಲಿ ಮೈಸೂರು ಸಂಸ್ಥಾನ ಒಂದು ಪ್ರಮುಖ ಸಂಸ್ಥಾನವಾಗಿತ್ತು….ಮೈಸೂರು ಅರಸರು ಭಾರತ ಸೇರುವುದನ್ನು ವಿರೋಧಿಸಿದಾಗ ಜನರು ದಂಗೆ ಎದ್ದಾಗ ಅಲ್ಲಿ ಗೋಲಿಬಾರ್ ಆಗಿ ಕೆಲ ಜನರು ಅನಾಹುತಕ್ಕೆ ಇಡಾದರು…. ಇದನ್ನು ಖಂಡಿಸಿ *ಜಯದೇವಿ ತಾಯಿಯವರು* ಪತ್ರಿಕೆಯಲ್ಲಿ ಹೇಳಿಕೆ ಕೊಟ್ಟ ಧೀರ ಮಹಿಳೆ.ಅದರಂತೆ ಮುಂದೆ ಮಹಾರಾಜ ಜಯಚಾಮರಾಜೇಂದ್ರ ವಡಿಯರ. ೯ ಆಗಸ್ಟ್೧೯೪೭ ರಂದು ಭಾರತಕ್ಕೆ ಸೇರುವ ಒಪ್ಪಂದಕ್ಕೆ ಸಹಿ ಹಾಕಿದರು.ಮುಂದೆ ಮೈಸೂರು ಶಾಂತಿಯುತವಾಗಿ ಭಾರತಕ್ಕೆ ಸೇರಿತು. ಇಲ್ಲಿ ಸಮಸ್ಯೆ ಉದ್ಭವಿಸಿದ್ದು ಹೈದ್ರಾಬಾದ್ ನಿಜಾಮನ ಆಳ್ವಿಕೆಯಲ್ಲಿ……!!! ಹೈದರಾಬಾದ್ ಸಂಸ್ಥಾನವು ಭಾರತದ ಅತಿ ದೊಡ್ಡ ಮತ್ತು ಶ್ರೀಮಂತ ಸಂಸ್ಥಾನವಾಗಿತ್ತು.ಜನಸಂಖ್ಯೆಯಲ್ಲಿ ಬಹುಪಾಲು ಹಿಂದೂಗಳು, ಆದರೆ ಆಡಳಿತ ಮುಸ್ಲಿಂ ನಿಜಾಮನ ಕೈಯಲ್ಲಿ ಇತ್ತು.ನಿಜಾಮ್ ತನ್ನ ರಾಜ್ಯವನ್ನು “ಸ್ವತಂತ್ರ ದೇಶ”ವಾಗಿ ಉಳಿಸಿಕೊಳ್ಳಲು ಬಯಸಿದ “ಮಿರ್ ಒಸ್ಮಾನ್ ಅಲಿ ಖಾನನು ಭಾರತಕ್ಕೂ ಸೇರುವುದಿಲ್ಲ,ಪಾಕಿಸ್ತಾನಕ್ಕೂ ಸೇರುವುದಿಲ್ಲವೆಂದು…..“ಸ್ವತಂತ್ರ ಹೈದರಾಬಾದ್ ರಾಷ್ಟ್ರ” ನಿರ್ಮಿಸಲು ಬಯಸಿದ ಅವರು ಭಾರತ ಸರ್ಕಾರದ ಜೊತೆ “ಸ್ಟ್ಯಾಂಡ್ ಸ್ಟಿಲ್” ಒಪಂದ ಮಾಡಿಕೊಂಡು ಸಮಯ ಕಳೆಯಲು ಪ್ರಯತ್ನಿಸಿದ. ನಿಜಾಮನ ಆಡಳಿತದಲ್ಲಿ, ವಿಶೇಷವಾಗಿ ರಜಾಕಾರ್ ದಳದ ಕಾರಣದಿಂದ ಜನರು ತುಂಬಾ ಸಂಕಷ್ಟ ಅನುಭವಿಸಿದರು.ಕಾಸಿಂ ರಿಜ್ವಿ ನೇತೃತ್ವದಲ್ಲಿ ರಜಾಕಾರ ಸಂಘಟನೆಗ್ರಾಮಗಳಲ್ಲಿ ದಾಳಿ, ಹಿಂಸೆ, ಲೂಟಿ ಮಹಿಳೆಯರ ಮೇಲೆ ಅತ್ಯಾಚಾರಗಳಂಥ ದುಷ್ಕೃತ್ತಿಗಳು ನಡೆದವು..ಇದರಿಂದ ಸಾವಿರಾರು ಜನರು ಮನೆಬಿಟ್ಟು ಓಡಿನಿರಾಶ್ರಿತರ ಆಗಿ ಬೇರೆ ಪ್ರದೇಶಗಳಿಗೆ ಹೋದರುರೈತರು ಮತ್ತು ಸಾಮಾನ್ಯ ಜನರ ಸ್ಥಿತಿ ಹೇಳತೀರದಾಗಿತ್ತು….. ಜಮೀನ್ದಾರರು ದೌರ್ಜನ್ಯಕೆ ಒಳಪಟ್ಟು ಭಾರೀ ತೆರಿಗೆ ಕಟ್ಟಬೇಕಾಗಿ ಬಂತು…ಬಡ ರೈತರು ಹಿಂಸೆಗೆ ಒಳಗಾದರು…..ಇದಕ್ಕೆ ಪ್ರತಿಯಾಗಿಹೈದರಾಬಾದ್ ಜನರು ಸ್ವಾತಂತ್ರ್ಯ ಬಂದರೂ ಕೂಡಸ್ವಾತಂತ್ರ್ಯದ ಸುವಾಸನೆ ಅನುಭವಿಸಲಿಲ್ಲ… ನಿಜಾಮನ ಸ್ವತಂತ್ರವಾಗಿ ರಾಜ್ಯ ಕಟ್ಟುವ ಆಸೆ ಜನರಿಗೆ ಸಂಕಷ್ಟವಾಯಿತು…ಹೈದರಾಬಾದ್ ಸಂಸ್ಥಾನದಲ್ಲಿ ಮಿರ್ ಒಸ್ಮಾನ್ ಅಲಿ ಖಾನ್ ಅವರ ಆಡಳಿತದ ಕೊನೆಯ ದಿನಗಳಲ್ಲಿ, ವಿಶೇಷವಾಗಿ ರಜಾಕಾರ್ ಹಿಂಸಾಚಾರದ ಸಮಯದಲ್ಲಿ, ಸಾವಿರಾರು ಜನರು ನಿರಾಶ್ರಿತರಾಗಿ ಭಾರೀ ಸಂಕಷ್ಟ ಅನುಭವಿಸಿದರು. ರಜಾಕಾರ್ ದಾಳಿಗಳು ಹಠಾತಆಗಿ ನಡೆಯುತ್ತಿತ್ತುಗ್ರಾಮಗಳಲ್ಲಿ ಹತ್ಯೆ, ಬೆಂಕಿ ಹಚ್ಚುವುದು, ದೋಚಾಟ ಸಾಮಾನ್ಯವಾಗಿತ್ತು ಜನರು ಪ್ರಾಣ ಉಳಿಸಿಕೊಳ್ಳಲು ಓಡಿ ಹೋಗಬೇಕಾಯಿತು….ಮನೆಗಳನ್ನು ಸುಟ್ಟುಹಾಕುವುದು ಧಾನ್ಯ, ಪಶು, ಆಸ್ತಿ ದೋಚಿಕೊಳ್ಳುವಂಥ ದುಷ್ಕೃತ್ಯಗಳು ನಡೆದವು. ಒಂದೇ ರಾತ್ರಿಯಲ್ಲಿ ಜನರು ಎಲ್ಲವನ್ನೂ ಕಳೆದುಕೊಂಡರು. ಮಹಿಳೆಯರ ಮೇಲಿನ ಹಿಂಸೆ ಅತ್ಯಾಚಾರ, ಅವಮಾನಕಾರಿ ವರ್ತನೆಯಿಂದಾಗಿ ಕುಟುಂಬಗಳು ಭೀತಿಯಿಂದ ಊರು ಬಿಟ್ಟು ಹೋಗುವ ಪರಿಸ್ಥಿತಿ ಬಂದಿತು,ಆಹಾರ ಮತ್ತು ಆಶ್ರಯದ ಕೊರತೆಯಿಂದಾಗಿ ಓಡಿಹೋಗುವಾಗ ಆಹಾರ ಇಲ್ಲದೆ ನರಳಿದರು ….ಚಿಕ್ಕ ಮಕ್ಕಳೊಂದಿಗೆ ಕಾಡು, ಹೊಲಗಳಲ್ಲಿ ಅಲೆದಾಡಲಾರಂಭಿಸಿದರು.ಹಸಿವು, ದಾಹ, ರೋಗಗಳಿಂದ ನರಳಿದರು. ಓಡಾಟದಲ್ಲಿ ಕುಟುಂಬದವರು ಬೇರೆಯಾದರು ಮಕ್ಕಳು, ಮಹಿಳೆಯರು ಕಳೆದುಹೋಗುವ ಘಟನೆಗಳು ನಡೆದವು…. ಹೀಗಾಗಿಹೈದರಾಬಾದ್ ಸಂಸ್ಥಾನದ ಜನರು ಹತ್ತಿರದ *ಮೈಸೂರು ಪ್ರದೇಶ *…ಇಂದಿನ ಕರ್ನಾಟಕಕ್ಕೆ ಸುರಕ್ಷಿತ ಪ್ರದೇಶಗಳಿಗೆ ಕುಟುಂಬ ವನ್ನು ರವಾನಿಸಿದರು.ಬಳ್ಳಾರಿ,ರಾಯಚೂರು ಪ್ರದೇಶಗಳಿಗೆ ಹಲವರು ಹೋದರು……ಇಲ್ಲಿ ಜನರು ತಾತ್ಕಾಲಿಕ ಆಶ್ರಯ ಪಡೆದರು. ಇನ್ನು ಹಲವರು* ಬಾಂಬೆ ಪ್ರೆಸಿಡೆನ್ಸಿ* ಭಾಗಗಳು ಅಂದರೆ ಇಂದಿನ ಮಹಾರಾಷ್ಟ್ರ. ಸೋಲಾಪುರ,ಪೂಣೆಗಡಿ ಪ್ರದೇಶಗಳಿಗೆ ಹೆಚ್ಚಿನ ಜನರು ಹರಿದು ಬಂದರು. ಇನ್ನು ಹಲವರು *ಮದ್ರಾಸ್ ಪ್ರೆಸಿಡೆನ್ಸಿ *ಭಾಗಗಳು ಇಂದಿನ ಆಂಧ್ರಪ್ರದೇಶ ಮತ್ತು ತಮಿಳುನಾಡು, ಕುರ್ನೂಲ್,ಗುಂಟೂರು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಂಡರು…. ಎಲ್ಲ ಪ್ರದೇಶಗಳಲ್ಲಿ ಅಲ್ಲಲ್ಲಿ ನಿರಾಶ್ರಿತ್ರಿಗೆ ಶಿಬಿರಗಳಲ್ಲಿ ತಂಗಿದರು.ಸರ್ಕಾರ ಮತ್ತು ಸಮಾಜದಿಂದ ಸ್ವಲ್ಪ ಸಹಾಯ ದೊರೆತರೂ ಅನಿಶ್ಚಿತ ಭವಿಷ್ಯ “ನಮ್ಮ ಊರು ಯಾವಾಗ ಮರಳಿ ಸಿಗುತ್ತೆ?” ಎಂಬ ನೋವು ಹೊತ್ತು ಬಾಳುತ್ತಿದ್ದರು. *ಈ ಸಮಯದಲ್ಲಿ ಸಾವಿರಾರು ಜನರು ಸೊಲ್ಲಾಪುರದತ ಧಾವಿಸಿದರು ರಜಾಕಾರರ ರಕ್ಕಸಿಯ ದವಡೆಗೆ ಸಿಲುಕಿದ ನಿರಾಶ್ರಿತರಿಗೆ ಅನ್ನ ಅರಿವೆ ಆಶ್ರಯವನ್ನು ಜಯದೇವಿ ತಾಯಿಯವರು ಕೊಟ್ಟ ಸಲುಹಿದರು* ಮನೆಮಾರ ತೊರೆದಾರ, ಕನವರೆಸಿ ಬಂದಾರಅನ್ನ ನೀರಿಗೆ ದಿಕ್ಕಿಲ್ಲ ,ನನ್ನ ಜನಸೊನ್ನಲಿಗಿ ದಾರೀ ಹಿಡಿದಾರ !! ಸೊಲ್ಲಾಪುರ ರೈಲ್ವೆ ನಿಲ್ದಾಣಕ್ಕೆ ಒಲಸಿ ಬಂದ ಜನರ ಜಾತಿಭೇದ ಲೆಕ್ಕಿಸದೆ ಜಯದೇವಿ ತಾಯಿಯವರು ವಸತಿ ವ್ಯವಸ್ಥೆ ,ಆಹಾರ ಸೌಲಭ್ಯ ,ಮೂಲ ಸೌಕರ್ಯಗಳ ವ್ಯವಸ್ಥೆಯನ್ನು ಸಿದ್ಧ ಮಾಡಿದರು. ಇದರಿಂದ ಸ್ಥಳೀಯ ಸಂಘ-ಸಂಸ್ಥೆಗಳು ಅದರಲ್ಲೂ ಮಹಿಳಾ ಜ್ಞಾನ ಮಂದಿರ ,ಶ್ರಾವಿಕಾಶ್ರಮ, ಸರಸ್ವತಿ ಸದನಗಳ ಕಾರ್ಯಕರ್ತರು ಸೇರಿ ನಿರಾಶ್ರಿತರಿಗೆ ಊಟದ ಪಟ್ಟಣಗಳನ್ನು, ನೀರು, ಹಾಲು,. ನಿತ್ಯ ಉಪಯೋಗವಾಗುವ ವಸ್ತುಗಳನ್ನು ವಿತರಿಸಲಾರಂಭಿಸಿದರು .ಇಡೀ ಸೊಲ್ಲಾಪುರದ ಜನತೆ ಅವರ ಸಹಾಯಕ್ಕೆ ನಿಂತರು.ಇಲ್ಲಿಗೆ ವಾರದ ಬಾಬಾ ಸಾಹೇಬರು, ಕಾಡಾದಿ ನಾಗಪ್ಪನವರು ,ಜಯದೇವಿ ತಾಯಿಯವರು ನಿರಾಶ್ರಿತರಿಗೆ ಆಶ್ರಯ ಕೊಟ್ಟರು. ಹಾಗೂ ಭಾಲ್ಕಿ ಪಟ್ಟ ದೇವರನ್ನು ಕಂಡು ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡರು. ನಿರಾಶ್ರಿತ ಮಕ್ಕಳ ಜೊತೆ ಎಲ್ಲರನ್ನೂ ನೋಡಿಕೊಳ್ಳುವಂತೆ ಭರವಸೆ ಕೊಟ್ಟು ವಸತಿ ವ್ಯವಸ್ಥೆಯನ್ನು ಮಾಡಿದರು. ತಾಯಿಯವರು ತಮ್ಮ ನಲವತ್ತು ಎಕರೆ ಭೂಮಿಯಲ್ಲಿ ಸೆಡ್ ಹಾಕಿ ನಿರಾಶ್ರಿತರಿಗೆ ಇರಲು ಹೊಸ ವೆವ್ಯಸ್ತೆಯನ್ನು ಮಾಡಿದರು. ಬಡವರು ದಲಿತರ ಬದುಕನ್ನು ತಮ್ಮ ಹಿತಾಸಕ್ತಿಗಾಗಿ ನಾಶ ಮಾಡುತ್ತಿದ್ದಂತೆ ಜಮೀನ್ದಾರಿ ವರ್ಗಕ್ಕೆ ವೆತರಿಕ್ತವಾಗಿ ಜನಪರ ಕೆಲಸವನ್ನು ಮಾಡುತ್ತಾ ಬಂದರು. ಶಾಲಾ ವಿದ್ಯಾರ್ಥಿಗಳಿಗೆ ಕುಂಟೋಜಿ ಮಠದಲ್ಲಿ ಇವರಿಗೆ ವ್ಯವಸ್ಥೆ ಮಾಡಲಾಯಿತು. ನಿರಾಶ್ರಿತರಿಗೆ ಬೇಕಾದ ಸಾಮಾನುಗಳು ದವಸ ಧಾನ್ಯ ಪಟ್ಟಿಯನ್ನು ಮಾಡಿ ಉದ್ಯಮಿ ಪತಿಗಳು ನಿಗದಿತ ಸ್ಥಳಕ್ಕೆ ತಂದು ತಲುಪಿಸುವಂಥ ಯೋಜನೆಗಳನ್ನು ಹಾಕಿದರು. ಇಂಥ ಕೆಲಸಗಳಲ್ಲಿಜಯದೇವಿ ತಾಯಿಯವರ ಜೊತೆಗೂಡಿದವರು ಶ್ರೀಮತಿ ಘಾಟಿಗೆ ಸುಮಿತ್ರಾಬಾಯಿ ,ವಾರದ ಬಾಬಾ ಸಾಹೇಬ ,ನಾಗಪ್ಪ ಕಾಡದಿ, ಚಾಕುತಿ ಈರಮ್ಮ, ಸಂಗವ್ವ ಮಡಿಕೆ ಮೊದಲಾದ ಪ್ರಮುಖರು ಸಭೆಯೊಂದು ಸೇರಿ ಸೌಲಭ್ಯ ಒದಗಿಸುವ ನಿರ್ಣಯವನ್ನು ತೆಗೆದುಕೊಂಡರು .ಬೀದರ್ ರೈಚೂರ್ ಕಲ್ಬುರ್ಗಿಯಿಂದ ವಲಸಿ ಬಂದ ಮಕ್ಕಳಿಗೆ ಕಾಡದೇ ಹೈಸ್ಕೂಲ್ನಲ್ಲಿ ವಿದ್ಯಾಭ್ಯಾಸಕ್ಕೆ ಅವಕಾಶ ಮಾಡಿಕೊಟ್ಟರು . ಜಯದೇವಿ ತಾಯಿಯವರು ತಮ್ಮ ಮನೆಯಾದ ಜೈನಿಕೇತನದಿಂದಲೇ ನಿರಾಶ್ರಿತ ಜನರಿಗೆ ಬಟ್ಟೆಯನ್ನು ದಾನ ಮಾಡುತ್ತಿದ್ದರು ಇಷ್ಟೇ ಅಲ್ಲದೆ ಜಯದೇವಿ ತಾಯಿಯವರು ಶಿಬಿರಕ್ಕೆ ಆಗಾಗ ಭೇಟಿ ಕೊಟ್ಟು ಅವರ ಸಮಸ್ಯೆಗಳನ್ನು ಕೇಳುತ್ತಿದ್ದರು …ಅವರಿಗಾಗಿ ೫ ಲಕ್ಷ ೮೦೧೪ ರೂಪಾಯಿಗಳನ್ನು ಸಂಗ್ರಹಿಸಿದರು . ಸಾವಿರಾರು ಸೀರೆಗಳು ಮತ್ತು ಅಷ್ಟೇ ಬೆಲೆ ಬಾಳುವ ರಘ ಪಡೆದರು. ಸರಿಯಾಗಿ ಹಂಚಿ ಅವುಗಳನ್ನು ವಿತರಿಸಿದರು ವುಲನ್ ತಂದು ಶಾಲಾ ಶಿಕ್ಷಕಿಯರಿಂದ ಸ್ವೀಟರ್ ಗಳನ್ನು ಹೆಣಿಸಿ ನಿರಾಶೆತ್ರಿಗೆ ಕೊಡುತ್ತಿದ್ದರು. ಇನ್ನುಳಿದ ಮಕ್ಕಳಿಗೆ ಅನುಕೂಲವಾಗುವಂತೆ ಮಾಧ್ಯಮಿಕ ಶಾಲೆಯನ್ನು ಕೂಡ ಪ್ರಾರಂಭಿಸಿದರುತಾಯಿಯವರು ಹೇಳ್ತಾರೆ. *ಸಿದ್ದನ ಛತ್ತರಕ್ಕ ಬೆಂದು ಬಂದ ಮಕ್ಕಳಎದ್ದು ಕಂಣ್ಣೀರ ಒರೆಸುವ ,ಭಾಗ್ಯವಸಿದ್ದ ನನಗೆ ನೀಡಿ ದುಡಿಸಿದಿ* ಸವಿತಾ ದೇಶಮುಖ
ಧಾರಾವಾಹಿ ಸಂಗಾತಿ-15 ಜಯದೇವಿತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಮಹಾನ್ ಚೇತನ. ಲೇ:ಸವಿತಾ ದೇಶಮುಖ ೧೯೪೭ರ ಸಮಯ… ದೇಶಕ್ಕೆ ಸ್ವಾತಂತ್ರ್ಯದ ಸುಳಿವು ಸಿಗುತ್ತಿದ್ದಂತೆಯೇ, ಜಯದೇವಿ ತಾಯಿಯವರು ಸ್ತ್ರೀಯರನ್ನು ಒಗ್ಗೂಡಿಸಿ ಸಭೆಗಳನ್ನು ನಡೆಸಲಾರಂಭಿಸಿದರು.ಸ್ವಾಭಿಮಾನಿ ಸಮಾಜ, ಸ್ತ್ರೀಯರ ಕರ್ತವ್ಯ ಮತ್ತು ಸ್ವಾತಂತ್ರ ಭಾರತದ ಬದುಕಿನ ಬಗ್ಗೆ ಊರು-ಊರುಗಳಲ್ಲಿ ಜಾಗೃತಿ ಮೂಡಿಸಿದರು. ಮನೆಯಲ್ಲಿ ಗಂಡನ ಆರೋಗ್ಯ ಸರಿಯಿಲ್ಲದಿದ್ದರೂ, ಕುಟುಂಬದ ಬೆಂಬಲದೊಂದಿಗೆ ಅವರು ಸಮಾಜಸೇವೆಯಲ್ಲಿ ನಿರಂತರವಾಗಿ ತೊಡಗಿಕೊಂಡರು. ಕೊನೆಗೂ… ಆ ಮಹಾನ್ ಕ್ಷಣ ಬಂತು ಭಾರತ ಮಾತೆ ಬಿಡುಗಡೆ ಹೊಂದುವ ದಿನ ಬಂದೇಬಿಟ್ಟಿತು… ಭಾರತದ ಕೊನೆಯ ಬ್ರಿಟನ್ ವೈಸರಾಯ ಲೂಯಿಸ್ ಲಾರ್ಡ್ ಮೌಂಟ್ ಬೆಂಟನ್ ಭಾರತಕ್ಕೆ ಸ್ವಾತಂತ್ರ್ಯವನ್ನು ಘೋಷಿಸಿದ…… ೧೪-೮-೧೯೪೭ ರಂದು ದೇಶ ಸ್ವಾತಂತ್ರ್ಯವಾಗುವ ಸಂತಸದ ಮುನ್ನಾ ದಿನ…. ಅಂದು ಸಂಜೆ ತಾಯಿ ಸಂಗವ್ವನವರು, ಅಜ್ಜಿಯಂದಿರಾದ ಬಸವ್ವಬಾಯಿ ವಾರದ ಮತ್ತು ಗೌರವ್ವ ಬಾಯಿ ವಾರದ ಮುಂತಾದ ಹಿರಿಯರೊಡನೆ ಜಯದೇವಿ ತಾಯಿಯವರು ಶಿವಯೋಗಿ ಸಿದ್ದರಾಮೇಶ್ವರನ ಮಂದಿರದಲ್ಲಿ ಅವನ ಸನ್ನಿಧಿಗೆ ಬಂದರು …ಮೊಟ್ಟಮೊದಲ ಬಾರಿಗೆ ಸಿದ್ದರಾಮನ ದೇವಸ್ಥಾನದ ಗರ್ಭಗುಡಿಯನ್ನು ಪ್ರವೇಶಿಸಿದರು .ಇಡೀ ರಾತ್ರಿ ಅಲ್ಲಿಯೇ ಉಳಿದರು…. ಆ ಕಡೆ ದೇಶ ಸ್ವಾತಂತ್ರವಾಗುತ್ತಿದ್ದರೆ ಈಕಡೆ ಎಲ್ಲ ತಾಯಿಯಂದಿರು ಮಂದಿರದಲ್ಲಿ ಪೂಜೆ ಪುನಸ್ಕಾರ ಸಲ್ಲಿಸುತ್ತಿದ್ದರು. ಧ್ಯಾನ ಭಜನೆ ಜಾಗರಣೆಯು ಪ್ರಾರಂಭವಾಗಿತ್ತು. ೧೫-೮-೧೯೪೭ ರ ಸುಪ್ರಭಾತದಲ್ಲಿ ಗೌರವ್ವಬಾಯಿ ವಾರದ ಧ್ವಜಾರೋಹಣ ಮಾಡಿದರು. ಎಲ್ಲರೂ ಕೂಡಿ ಇಡೀ ಊರಿಗೆ ಊಟ ಕೊಟ್ಟರು .ಸ್ವಾತಂತ್ರದ ಸಂಭ್ರಮಾಚರಣೆ ಮಾಡಿದರು. ಸ್ವಾತಂತ್ರ್ಯ ಸಿಗುವ ಹಿಂದಿನ ದಿನದಿಂದ ಅಂದರೆ ೧೪ ರಿಂದ ೧೮ ತಾರೀಖಿನ ಮುಂಜಾನೆಯವರೆಗೂ ಮೂರು ದಿನ ಮತ್ತು ನಾಲ್ಕು ರಾತ್ರಿಗಳು ಸತತವಾಗಿ ಎಲ್ಲ ತಾಯಂದಿರು ದೇವಾಲಯದ ಆವರಣದಲ್ಲಿಯೇ ಹಗಲು ಹೊತ್ತು ಚರಕದ ಮೂಲಕ ನೂಲ ತೆಗೆಯುವ ನೇಯ್ಗಗೆ ಕಾಯಕ ಮತ್ತು ಅನ್ನದಾಸೋಹ ಮಾಡಿದರು….ರಾತ್ರಿ ಹೊತ್ತು ಸಿದ್ದರಾಮನ ಸನ್ನಿಧಿಯಲ್ಲಿ ಕಾಲ ಕಳೆದರು.ಊರಿನ ಎಲ್ಲರಿಗೂ ಅನ್ನದಾಸೋಹ ನಡೆಯಿತು.ಮೂರು ದಿನಗಳ ಕಾಲ ಸೇವೆ, ಭಕ್ತಿ ಮತ್ತು ಕಾಯಕ ಒಂದಾಗಿ ಬೆಸೆದವು. ಭಾರತಾಂಬೆಯ ಬಿಡುಗಡೆಯ ಸಂದರ್ಭವನ್ನು ಜಯದೇವಿ ತಾಯಿಯವರು ನಮ್ಮೆದುರಿಗೆ ಈ ರೀತಿಯಾಗಿ ವಿವರಿಸಿ ಹೇಳುತ್ತಿದ್ದರು……. ಭಾರತಭೂಮಿಯ ಇತಿಹಾಸದಲ್ಲಿ ಒಂದು ಹೊಸ ಬೆಳಗಿನ ಉದಯವಾಗಿತ್ತು. ಶತಮಾನಗಳ ದಾಸ್ಯದಿಂದ ಬಳಲಿದ ಜನರ ಹೃದಯಗಳಲ್ಲಿ, ಆ ದಿನ ಉದಯಿಸಿದ ಸೂರ್ಯ ಕೇವಲ ಬೆಳಕನ್ನ ಅಲ್ಲಸ್ವಾತಂತ್ರ್ಯದ ಉಸಿರಾಟಕ್ಕೆ ಉಸಿರು ತಂದನು. “ಭಾರತ ದೇಶಕ್ಕೆ ಸ್ವಾತಂತ್ರ್ಯ”……ಘೋಷಣೆ ಆಗುತ್ತಿದ್ದಂತೆ, ದೇಶದಾದ್ಯಂತ ಒಂದು ಅದ್ಭುತ ಭಾವನಾತ್ಮಕ ಅಲೆ ಹರಡಿತು.ಗ್ರಾಮದಿಂದ ನಗರವರೆಗೆ, ಶ್ರೀಮಂತರಿಂದ ಬಡವರವರೆಗೆ ಪ್ರತಿ ಹೃದಯದಲ್ಲೂ ಒಂದೇ ಮಾತು……“ನಾವು ಸ್ವತಂತ್ರರು!”ರಾತ್ರಿಯ ಮಧ್ಯದಲ್ಲಿ ರೇಡಿಯೋಗಳ ಮುಂದೆ ಕುಳಿತು ಜನರ ಕಣ್ಣುಗಳು ಕಣ್ಣೀರಿನಿಂದ ತುಂಬಿಕೊಂಡವು……ಆ ಕಣ್ಣೀರು… ಅನೇಕ ಶೂರರು ವೀರರ ತ್ಯಾಗ ಬಲಿದಾನದ ಕನಸು ನೆರವೇರಿದ ಸಂತಸದ ಕಣ್ಣೀರು……!!!ಎಲ್ಲಿ ನೋಡಿದರಲ್ಲಿ ಹಬ್ಬದ ಸಂಭ್ರಮದ ವಾತಾವರಣಮಕ್ಕಳು ಯುವಕರು ಹಿರಿಯರು ಓಡಾಡುತ್ತಾ “ವಂದೇ ಮಾತರಂ” ಎಂದು ಕೂಗುತ್ತಿದ್ದರು, ಮಹಿಳೆಯರು ಮನೆ ಮುಂಭಾಗ ರಂಗೋಲಿ ಹಾಕಿ, ದೀಪ ಬೆಳಗಿಸಿ ಹಬ್ಬ ಆಚರಿಸುತ್ತಿದ್ದರು, ಎಲ್ಲಹಳೆಯ ಕಷ್ಟಗಳನ್ನು ಮರೆತು ಎಲ್ಲರೂ ಪರಸ್ಪರ ಅಪ್ಪಿಕೊಂಡು ಹರ್ಷ ವ್ಯಕ್ತಪಡಿಸುತ್ತಿದ್ದರು. ರಸ್ತೆಗಳು ಜನಸಾಗರದಿಂದ ತುಂಬಿ ಹೋಗಿದ್ದವು.ತ್ರಿವರ್ಣ ಧ್ವಜವು ಗಾಳಿಯಲ್ಲಿ ಹಾರಾಡುತ್ತಿತ್ತು…… *ಜನರ ಹೃದಯದಲಿ ಗರ್ವದ ಬಾವುಟ ಹಾರಾಡುತಿತ್ತು..*ಜನರು ನೃತ್ಯ ಮಾಡಿ, ಹಾಡಿ, ಸಿಹಿ ಹಂಚಿಕೊಂಡು ಉಲ್ಲಾಸದಲ್ಲಿ ಮುಳುಗಿದ್ದರು. ಅಂದು ಕೆಲವರು ತಮ್ಮ ಜೀವವನ್ನು ತ್ಯಾಗ ಮಾಡಿದವರನ್ನು ನೆನೆದು ಮೌನವಾಗಿ ಕಣ್ಣೀರಿಟ್ಟರು.ಸುಭಾಷ್ ಚಂದ್ರ ಬೋಸ್- ಭಗತ್ ಸಿಂಗ್ ಹೀಗೆ ಅನೇಕ ವೀರರ ಬಲಿದಾನವೇ ಈ ಸ್ವಾತಂತ್ರ್ಯದ ಬೆಲೆ ಎಂಬ ಅರಿವು ಜನರಲ್ಲಿ ಗಾಢವಾಗಿತ್ತು.ಹೃದಯಗಳಲ್ಲಿ ಒಂದೇ ಭಾವನೆ….“ಇದು ನಮ್ಮ ದೇಶ… ನಮ್ಮ ಸ್ವಾತಂತ್ರ್ಯ… ನಮ್ಮ ಭವಿಷ್ಯ!”ಆ ದಿನದ ಹರುಷವನ್ನು ಪದಗಳಲ್ಲಿ ಸಂಪೂರ್ಣವಾಗಿ ಹಿಡಿಯಲು ಸಾಧ್ಯವಿಲ್ಲ.ಅದು ನಮ್ಮ ದೇಶದ ಪುನರ್ಜನ್ಮ ಸಂದರ್ಭ….ದೇಶದ ಆತ್ಮ ಪುನಃ ಹುಟ್ಟಿದ ಕ್ಷಣ…….ಆ ಕ್ಷಣದಲ್ಲೇ ಜನರು ಭವಿಷ್ಯದ ಕನಸುಗಳನ್ನು ಕಟ್ಟಿಕೊಂಡರು….ನಮ್ಮ ಭಾರತ ದೇಶವು ಅಂದಿನಿಂದಬಡತನವಿಲ್ಲದ ದೇಶ, ಸಮಾನತೆಯ ಸಮಾಜ, ಶಾಂತಿಯ ಭಾರತ ಕಟ್ಟವ ಕನಸು ಕಂಡುಕೊಳ್ಳಲಾರಂಭಿಸಿದ್ದೇವು…ಆದರೆ…ಆ ಹರುಷದ ನಡುವೆಯೇ ವಿಭಜನೆಯ ನೋವು ಕೂಡ ಎಲ್ಲ ಹೃದಯಗಳನ್ನು ಕಾಡುತ್ತಿತ್ತು. ಆದರೂ, ಆ ದಿನದ ಸಂತೋಷದ ಹೊಳೆಯು ಆ ನೋವನ್ನು ಸಹ ಮಸುಕಾಗಿಸಿತು.೧೯೪೭ ರ ಆ ದಿನ…ಭಾರತದ ಪ್ರತಿಯೊಂದು ಹೃದಯವೂ ಒಂದೇ ಲಯದಲ್ಲಿ ಹಾಡುತಿತ್ತು…….*ಜೈ ಹಿಂದ*.. ಜೈ ಹಿಂದ್… ಭಾರತ ಮಾತೆಗೆ ಜಯವಾಗಲಿ…. ಭಾರತ ಮಾತಾ ಕಿ ಜೈ ಎನ್ನುವ ಕೂಗು ಎಲ್ಲಡೇಗೂ ಕೇಳುತ್ತಿತ್ತು…….!!!! ಭಾರತೀಯರು ಸ್ವಾತಂತ್ರ್ಯದ ದಿನಗಳನ್ನು ಅನುಭವಿಸುವದ್ರಲ್ಲಿಯೇ ದೇಶಕ್ಕೆ ಒಂದು ದೊಡ್ಡ ಅಘಾತ ಕಾದಿತ್ತು ….ಸ್ವಾತಂತ್ರ ಲಭಿಸಿದ ಕೆಲವು ತಿಂಗಳೊಳಗೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಹತ್ತೆ ಆಗಿತ್ತು……..ಈ ದುರಂತ ಜಯದೇವಿ ತಾಯಿಯವರನ್ನು ಬಹಳ ದುಃಖಕ್ಕೆ ಇಡುಮಾಡಿತ್ತು… ತಾಯಿಯವರು ಹೇಳುತ್ತಿದ್ದಂತೆ ಗಾಂಧೀಜಿಯವರು ತೀರಿಕೊಂಡಾಗ ಇಡೀ ದೇಶವೇ ಸ್ಮಶಾಣದ ಮೌನದಲಿ ಮುಳಗಿತ್ತು.. ಅಘಾತಕ್ಕೆ ಒಳಗಾಗಿತ್ತು…ಗಾಂಧೀಜಿಯವರ ಹತ್ಯೆ (೧೯೪೮ ಜನವರಿ ೩0) ದೇಶದ ಇತಿಹಾಸದಲ್ಲಿ ಅತಿ ದುಃಖಭರಿತ ಕ್ಷಣವಾಗಿತ್ತು….. ಜನ- ಮನಗಳನ್ನು ತಲ್ಲಣಗೊಳಿಸಿತು. ಜಯದೇವಿ ತಾಯಿಯವರು ಈ ಸುದ್ದಿಯನ್ನು ಕೇಳಿದಾಗ ಅವರ ಮನ ಕುಸಿದುಹೋಯಿತು. ….“ದೇಶಕ್ಕೆ ಅಹಿಂಸೆಯ ದೀಪ ಹಚ್ಚಿದ ಮಹಾತ್ಮನನ್ನು ಕತ್ತಲೆಯು ನುಂಗಿದೆ. ಅಹಿಂಸೆಯ ಪಾಠ ಹೇಳಿಕೊಟ್ಟ ಮಹಾತ್ಮರು ಹಿಂಸೆಯ ಅಟ್ಟಹಾಸಕ್ಕೆಬಲಿಯಾದರು….ಅವರು ಬದುಕಿದ್ದರೆ ನಮ್ಮ ಹಾದಿ ಬೆಳಗುತ್ತಿತ್ತು… ಈಗ ನಮ್ಮೊಳಗೆ ನಾವು ಬೆಳಕಾಗಬೇಕು.ಗಾಂಧೀಜಿಯವರ ದೇಹ ಹೋಗಿರಬಹುದು, ಆದರೆ ಅವರ ತತ್ತ್ವಗಳು ಸಾಯುವುದಿಲ್ಲ” ಎಂದು ಜನರಿಗೆ ಧೈರ್ಯ ತುಂಬಿದರು.ಕಣ್ಣಲ್ಲಿ ನೀರು ಧಾರಾಕಾರವಾಗಿ ಹರಿಯಿತು.. ಜೊತೆಗೆ ಹೃದಯದಲ್ಲಿ ಒಂದು ದಿಟ್ಟ ಸಂಕಲ್ಪ ಹುಟ್ಟಿತು….. ಗಾಂಧೀಜಿಯ ಆಚಾರ ವಿಚಾರಗಳನ್ನು ಮುಂದುವರಿಸಿಕೊಂಡು ಹೋಗುವ ಪಣತೊಟ್ಟರು. ದೇಶದಾದ್ಯಂತ .. ಜನರ ನೋವು ಆಕ್ರೋಶದಲಿ ಮೂಳಗಿರುವುದನ್ನು ನೋಡಿದಾಗ….. ಗಾಂಧೀಜಿಯವರು ಜನರ ಮೇಲೆ ಅದೆಷ್ಟು ಪ್ರಭಾವ ಬೀರಿದ್ದರು ಎನ್ನುವುದು ತೋರುತ್ತಿತ್ತು….“ಇನ್ನು ಮುಂದೆ ದೇಶಕ್ಕೆ ದಾರಿ ತೋರುವರು ಯಾರು?! ಎಂಬ ಪ್ರಶ್ನೆ ಜನರನ್ನು ಕಾಡಿತು.ಹೊಸತಾಗಿ ಸಿಕ್ಕ ಸ್ವಾತಂತ್ರ್ಯದ ಸ್ಥಿರತೆಗೆ ಬಗ್ಗೆ ಯೋಚಿಸಿ ಜನರಲ್ಲಿ ಭಯ ಉಂಟಾಯಿತು. ಜೊತೆ ಜೊತೆಗೆ ಧರ್ಮ, ಜಾತಿ ಭೇದಗಳಿಂದ ದೂರ ಇರಬೇಕು ಎಂಬ ಅರಿವು ಮೂಡಿಸುವ ಸಲುವಾಗಿಗ್ರಾಮಗಳಲ್ಲಿ, ನಗರಗಳಲ್ಲಿ ಶೋಕ ಸಭೆಗಳು ನಡೆದಸಿದರು….. ಗಾಂಧೀಜಿಯವರು ಬೋಧಿಸಿದ ಅಹಿಂಸೆ, ಸತ್ಯದ ಮಾರ್ಗವನ್ನು ಮತ್ತೆ ನೆನಪಿಸಿಕೊಟ್ಟರು .ಜನರು ತಮ್ಮೊಳಗಿನ ನಾಯಕತ್ವವನ್ನು ಹುಡುಕಲು ಪ್ರೇರೇಪಿಸಿದರು.“ನಾವು ಗಾಂಧೀಜಿಯವರಂತೆ ಬದುಕಬೇಕು” ಎಂಬ ಮನೋಭಾವನ್ನು ಬೆಳೆಸಲು ಸತತವಾಗಿ ಪ್ರಯತ್ನಿಸಿದರು .ಜಯದೇವಿ ತಾಯಿಯವರು ಜನರನ್ನು ಉದ್ದೇಶಿಸಿ“ಗಾಂಧೀಜಿಯವರ ರಕ್ತದ ಪ್ರತಿಯೊಂದು ಹನಿ ನಮ್ಮ ಹೃದಯದಲ್ಲಿ ದೇಶಭಕ್ತಿಯ ಬೀಜವಾಗಬೇಕು.ಕೋಪದಿಂದ ಅಲ್ಲ, ಪ್ರೀತಿಯಿಂದ ಈ ದೇಶವನ್ನು ಕಟ್ಟೋಣ…..ಗಾಂಧೀಜಿಯವರ ಹತ್ಯೆ ಕೇವಲ ಒಬ್ಬ ಮಹಾನ್ ವ್ಯಕ್ತಿಯ ಮರಣವಲ್ಲ,ಅದು ಒಂದು ಯುಗದ ಅಂತ ಆದರೆ ಮತ್ತೊಂದು ಯುಗದ ಆರಂಭವೂ ಹೌದು …. ಜನರು ಅವರ ಮಾರ್ಗವನ್ನು ಅನುಸರಿಸಲು ಪ್ರೇರೇಪಿತವಾಗು ಕ್ಷಣ ಬಂದೋದಗಿದೆ .ನಾವೆಲ್ಲರೂ ಸೇರಿ ಭಾರತ ಮಾತೆಯ ಸೇವೆ ಗ್ಯ್ಯೋಣ ಎಂದು ಸಾರಿದರು. ಗಾಂಧೀಜಿಯವರ ಹತ್ಯೆಯಾದ ಸಮಯದಲ್ಲಿ ಜಾತಿ ಮತಗಳ ಮಧ್ಯೆ ಕಲಹ ಪ್ರಾರಂಭವಾಗಿತ್ತು ಸಾಮರಸ್ಯ ಕಳೆದು ಹೋಗಿದ್ದು ಬಹುತೇಕ ಜನರು ಜಾತಿಗಲಭೆ ನಡೆಯುತ್ತಿದ್ದವು ಅಲ್ಲಲ್ಲಿ ಭಾವಿಸಿ ತಾಯಿಯವರು ಸಹನೆ ಸಾಮರಸ್ಯದಂತ ವಿಚಾರಗಳನ್ನು ಜನರಿಗೆ ಮನದಟ್ಟು ಮಾಡಿಕೊಳ್ಳುವಲ್ಲಿ ಪ್ರಯತ್ನ ಪಟ್ಟರು. ಗಾಢ ದುಃಖ, ಆತಂಕ ಮತ್ತು ಜಾಗೃತಿ ತುಂಬಿದ ಒಂದು ಭಾಷಣವನ್ನು ಜತದೇವಿ ತಾಯಿಯವರು“ಸಹೋದರ ಸಹೋದರಿಯರೇ…”ಇಂದು ನಮ್ಮ ಹೃದಯಗಳು ಒಡೆದಿವೆ…ನಮ್ಮ ದೇಶದ ಆತ್ಮವೇ ಆಗಿದ್ದ ಮಹಾತ್ಮ ಗಾಂಧೀಜಿ ಅವರು ನಮ್ಮನ್ನೆ ಬಿಟ್ಟು ಹೋಗಿದ್ದಾರೆ.ಅವರ ದೇಹ ಕೊನೆಗೊಂಡಿರಬಹುದು… ಆದರೆ ಅವರ ಚಿಂತನೆ, ಅವರ ಅಹಿಂಸೆಯ ಮಾರ್ಗ ಯಾವತ್ತೂ ಸಾಯುವುದಿಲ್ಲ.ಇಂತಹ ಸಮಯದಲ್ಲಿ, ಕೆಲವರು ಜಾತಿ-ಧರ್ಮದ ಹೆಸರಿನಲ್ಲಿ ಮತ್ತೆ ಬೆಂಕಿ ಹಚ್ಚಲು ಪ್ರಯತ್ನಿಸುತ್ತಿದ್ದಾರೆ.ಆದರೆ ನಾನು ಒಂದು ಪ್ರಶ್ನೆ ಕೇಳುತ್ತೇನೆಗಾಂಧೀಜಿ ಅವರು ತಮ್ಮ ಪ್ರಾಣವನ್ನೇ ಕೊಟ್ಟದ್ದು ಏಕೆ?ಅವರು ಹಿಂದು, ಮುಸ್ಲಿಂ, ದಲಿತ, ಬ್ರಾಹ್ಮಣ… ಎನ್ನದೇ“ನಾವು ಎಲ್ಲರೂ ಭಾರತೀಯರು” ಎಂದು ಬದುಕಿದರು…ಅದೇ ಮಾತನ್ನು ಅವರು ಕೊನೆಯ ಉಸಿರಿನಲ್ಲೂ ಹೇಳಿ ಹೋಗಿದ್ದಾರೆ.ಇಂದು ನಾವು ಜಗಳ ಮಾಡಿದರೆ…ಅದು ಗಾಂಧೀಜಿಯವರ ಆತ್ಮಕ್ಕೆ ನೋವು ಕೊಡುತ್ತದೆ.ಅವರು ನಮಗೆ ತೋರಿಸಿದ ದಾರಿ — ಪ್ರೀತಿ, ಸಹನೆ, ಸೌಹಾರ್ದ — ಅದನ್ನೇ ನಾವು ಅನುಸರಿಸಬೇಕು.ಜಾತಿ ಎನ್ನುವುದು ನಮ್ಮ ನಡುವೆ ಗೋಡೆ ಕಟ್ಟಲು ಅಲ್ಲ…ಅದು ವೈವಿಧ್ಯದ ಸುಂದರತೆಯನ್ನು ಅರಿಯಲು.ಇಂದು ನಾನು ನಿಮಗೆ ವಿನಂತಿ ಮಾಡುತ್ತೇನೆ ಕೋಪ ದ್ವೇಷ ಕಲಹವನ್ನು ಬಿಡಿ…ಹೃದಯವನ್ನು ತೆರೆದುಕೊಳ್ಳಿ…ಒಬ್ಬರನ್ನೊಬ್ಬರು ಅಪ್ಪಿಕೊಳ್ಳಿ…ಗಾಂಧೀಜಿ ಜೀವಂತವಾಗಿರುವುದು ನಮ್ಮ ನಡೆ-ನುಡಿಯಲ್ಲಿ…ನಮ್ಮ ಒಗ್ಗಟ್ಟಿನಲ್ಲಿ… ನಮ್ಮ ಮಾನವೀಯತೆಯಲ್ಲಿ…ನಾವು ಒಟ್ಟಿಗೆ ನಿಂತರೆ… ಭಾರತ ಸದಾ ಶಕ್ತಿಶಾಲಿಯಾಗಿರುತ್ತದೆ. “ಸಿದ್ದರಾಮ ಬಸವ| ಬುದ್ಧ ಗಾಂಧೀಜಿಯುತಿದ್ದಲು ಜನ ಮನ ದುಡದಾರ- ಲೋಕವೂಶುದ್ಧ ಸದಾಚಾರಿ ಮಾಡಲು!!”


