ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅಂಕಣ ಸಂಗಾತಿ, ವೀಣಾ-ವಾಣಿ

“ಶಿಕ್ಷಣ ಪದ್ಧತಿ ಹಾಗೂ ಶಾಲೆಗಳ ಪ್ರಸ್ತುತತೆ” ವೀಣಾ ಹೇಮಂತ್‌ ಗೌಡ‌ ಪಾಟೀಲ್

ಶಿಕ್ಷಣ ಸಂಗಾತಿ ವೀಣಾ ಹೇಮಂತ್‌ ಗೌಡ‌ ಪಾಟೀಲ್ “ಶಿಕ್ಷಣ ಪದ್ಧತಿ ಹಾಗೂ ಶಾಲೆಗಳ ಪ್ರಸ್ತುತತೆ” ಶಿಕ್ಷಣ ಪದ್ಧತಿ ಹಾಗೂ ಶಾಲೆಗಳ ಪ್ರಸ್ತುತತೆ ಎಲ್ಲವೂ ಆನ್ಲೈನ್ ನಲ್ಲಿ ದೊರೆಯುತ್ತಿರುವ ಇಂದಿನ ದಿನಗಳಲ್ಲಿ ಶಿಕ್ಷಣ ಕೂಡ ಆನ್ಲೈನ್ ನಲ್ಲಿ ಕಲಿಯುವ ದಿನಗಳು ಈಗಾಗಲೇ ಬಂದಿದ್ದು ಇನ್ನೇನು ಪೂರ್ಣ ಪ್ರಮಾಣದಲ್ಲಿ ದೊರೆಯುವ ದಿನಗಳು ದೂರವಿಲ್ಲ…. ಹಾಗಾದರೆ ಶಾಲೆಗಳ ಔಚಿತ್ಯವೇನು? ಎಂದು ನೀವು ಕೇಳಬಹುದು ಅಲ್ಲವೇ ? ಇದರ ಮುನ್ನ ನಮ್ಮ ದೇಶದಲ್ಲಿ ಶಿಕ್ಷಣ ಪದ್ಧತಿ ನಡೆದು ಬಂದ ರೀತಿಯನ್ನು ಅವಲೋಕಿಸೋಣ. ನಮ್ಮ ಭರತ ಖಂಡದಲ್ಲಿ ಪ್ರಾಚೀನ ಕಾಲದಿಂದಲೂ ಶಿಕ್ಷಣಕ್ಕೆ ಅತಿ ಹೆಚ್ಚಿನ ಮಹತ್ವವನ್ನು ನೀಡಲಾಗುತ್ತಿದ್ದು ಶಿಕ್ಷಣದಲ್ಲಿ ಎರಡು ವಿಧಗಳನ್ನು ನಾವು ಕಾಣಬಹುದಾಗಿತ್ತು. ಒಂದು ಕೌಟುಂಬಿಕ ಶಿಕ್ಷಣವಾದರೆ ಮತ್ತೊಂದು ಗುರುಕುಲ ಪದ್ಧತಿಯ ಶಿಕ್ಷಣ. ಕೌಟುಂಬಿಕ ಶಿಕ್ಷಣದಲ್ಲಿ ಪ್ರತಿಯೊಂದು ಮಗುವಿಗೂ ಆ ಮನೆಯ ರೀತಿ-ನೀತಿ, ಸಂಪ್ರದಾಯಗಳ ಜೊತೆ ಜೊತೆಗೆ ಸಾಮಾಜಿಕ ನಿಯಮಗಳನ್ನು ಪಾಲಿಸುವ ಕುರಿತು ಇಡೀ ಕುಟುಂಬವೇ ಗುರುವಾಗಿ ಪಾಠ ಕಲಿಸುತ್ತಿತ್ತು. ಇಲ್ಲಿ ಕುಟುಂಬದ ಹಿರಿಯರಾಗಲಿ, ಪಾಲಕರಾಗಲಿ, ತಂದೆ-ತಾಯಿಗಳಾಗಲಿ ಕೈಯಲ್ಲಿ ಬಳಪ ಹಿಡಿಸಿ ಪಾಟಿಯ ಮೇಲೆ ಬರೆಸಿ ಇಲ್ಲವೇ ಉರು ಹೊಡೆಸಿ  ಪಾಠಗಳನ್ನು ಹೇಳಿಕೊಡಲಿಲ್ಲ…. ಬದಲಾಗಿ ತಮ್ಮ ನಡೆ ನುಡಿಗಳ ಮೂಲಕ ತಮ್ಮ ಮಕ್ಕಳಿಗೆ ಕೌಟುಂಬಿಕ, ಧಾರ್ಮಿಕ, ಸಾಮಾಜಿಕ ಬದುಕಿನ ಪರಿಚಯವನ್ನು ಮಾಡಿಕೊಟ್ಟರು. ಇದರ ಜೊತೆ ಜೊತೆಗೆ ಗಂಡು ಮಕ್ಕಳಿಗೆ ಕುಟುಂಬದ ಕುಲ ಕಸುಬನ್ನು ಹಾಗೂ ಹೆಣ್ಣು ಮಕ್ಕಳಿಗೆ ಮನೆ ವಾರ್ತೆಯನ್ನು ಹೇಳಿಕೊಟ್ಟರು. ಒಕ್ಕಲುತನವೇ ಮೂಲ ಉದ್ಯೋಗವಾಗಿದ್ದ ನಮ್ಮ ಭಾರತ ದೇಶದಲ್ಲಿ ಕೃಷಿಗೆ ಸಂಬಂಧಿಸಿದ ಉದ್ಯೋಗ ಹಾಗೂ ಅದರ ಉಪ ಕಸುಬುಗಳಾದ ಕುಂಬಾರ, ಕಮ್ಮಾರ, ಬಡಿಗ, ಅಕ್ಕಸಾಲಿ, ಉಪ್ಪಾರ, ಚಮ್ಮಾರ, ಮ್ಯಾದಾರ ಹೀಗೆ ಹತ್ತು ಹಲವು ಉದ್ಯೋಗಗಳನ್ನು ಕೈಗೊಂಡಿದ್ದು ಅದನ್ನೇ ತಮ್ಮ ಮಕ್ಕಳಿಗೆ ಕಲಿಸುತ್ತಿದ್ದರು. ಇನ್ನು ರಾಜ ಮಹಾರಾಜರು, ಪಂಡಿತರು, ಜ್ಞಾನಿಗಳು, ಬ್ರಾಹ್ಮಣರು 64 ವಿದ್ಯೆಗಳಲ್ಲಿ ಕೆಲವಷ್ಟನ್ನಾದರೂ ಗುರುಕುಲಗಳಲ್ಲಿ ಇದ್ದು ಕಲಿಯುತ್ತಿದ್ದರು. ಊರಿನಿಂದ ತುಸು ದೂರ ಯಾವುದಾದರೂ ಕಾಡಿನ ಪ್ರಶಾಂತ ವಾತಾವರಣದಲ್ಲಿ ನದಿಯ ಪಕ್ಕದಲ್ಲಿ ತಮ್ಮ ಆಶ್ರಮವನ್ನು ಕಟ್ಟಿಕೊಂಡು ನೆಲೆಸಿರುತ್ತಿದ್ದ ಗುರುಗಳಿಗೆ ಋಷಿಮುನಿಗಳಿಗೆ ರಾಜ ಮಹಾರಾಜರುಗಳು ಗುರುಕುಲವನ್ನು ನಡೆಸಲು ತಕ್ಕಮಟ್ಟಿಗೆ ಅನುಕೂಲ ಮಾಡಿಕೊಡುತ್ತಿದ್ದರು. ಇನ್ನು ಗುರುಕುಲಕ್ಕೆ ಬರುವ ವಿದ್ಯಾರ್ಥಿಗಳು ರಾಜನ ಮಗನಾದರೂ ಸರಿಯೇ ಸೈನಿಕನ ಇಲ್ಲವೇ ಬಡ ಬ್ರಾಹ್ಮಣನ ಮಗನಾದರೂ ಎಲ್ಲರಿಗೂ ಒಂದೇ ನಿಯಮ. ಪ್ರತಿದಿನ ಆಶ್ರಮದ ನಿಯಮದಂತೆ ದೈನಂದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಿ ಅದರ ಜೊತೆಗೆ ಶಾಸ್ತ್ರೋಕ್ತವಾಗಿ ವಿವಿಧ ವಿದ್ಯೆಗಳನ್ನು ಕಲಿಯುವುದು ಅತ್ಯವಶ್ಯಕವಾಗಿತ್ತು.ವಿದ್ಯಾರ್ಥಿಗಳ ಆಸಕ್ತಿಗೆ ಅನುಗುಣವಾಗಿ ಅವರಿಗೆ ವಿಜ್ಞಾನ, ಗಣಿತ, ಸಮಾಜಶಾಸ್ತ್ರ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ವ್ಯಾಕರಣ, ಛಂದಸ್ಸು, ಕಾವ್ಯ, ಪುರಾಣ ಮತ್ತಿತರ ವಿದ್ಯೆಗಳನ್ನು ಕಲಿಸಿದರೆ ರಾಜ ಮಹಾರಾಜರ,  ಮಂತ್ರಿಗಳ, ಸೇನಾಪತಿಗಳ ಹಾಗೂ ಸೈನಿಕರ ಮಕ್ಕಳುಶಸ್ತ್ರಾಸ್ತ್ರ ವಿದ್ಯೆಗಳಾದ ಧನುರ್ವಿದ್ಯೆ, ಕತ್ತಿ ವರಸೆ, ಭಲ್ಲೆ ಹಾಗೂ ಮತ್ತಿತರ ಆಯುಧಗಳ ಬಳಕೆಯ ಜೊತೆಗೆ ಕಾನೂನು ರಾಜಕೀಯ ನೀತಿಶಾಸ್ತ್ರ ಮುಂತಾದ ರಾಜ್ಯದ ಆಡಳಿತಕ್ಕೆ ಅತ್ಯವಶ್ಯಕವಾದ ವಿದ್ಯೆಗಳನ್ನು ಕಲಿಯುತ್ತಿದ್ದರು.  ಗುರುಗಳು ಹೇಳಿದ ಮಾತುಗಳನ್ನು ವೇದ ವಾಕ್ಯದಂತೆ ಭಾವಿಸುವ, ಆಶ್ರಮದ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸುವ ಎಲ್ಲರೊಂದಿಗೆ ಹೊಂದಾಣಿಕೆಯ ಬದುಕನ್ನು ನಡೆಸುವ ಈ ಗುರುಕುಲ ಶಿಕ್ಷಣ ಪದ್ಧತಿಯಲ್ಲಿ ಸುಮಾರು 6 ರಿಂದ 12 ವರ್ಷಗಳ ಕಾಲ ಶಾಸ್ತ್ರ ವಿದ್ಯೆಯ ಜೊತೆಗೆ ವೃತ್ತಿ ಶಿಕ್ಷಣವು ಕೂಡ ದೊರೆಯುತ್ತಿತ್ತು ಎಂದರೆ ತಪ್ಪಿಲ್ಲ. ಇದರ ಜೊತೆಗೆ ಕೋಶವನ್ನು ಓದುವ ಹಾಗೂ ದೇಶವನ್ನು ಸುತ್ತುವ ಕೆಲಸವನ್ನು ಅಂತಿಮವಾಗಿ ವಿದ್ಯಾರ್ಥಿಯು ಮಾಡುವ ಮೂಲಕ ಭೌಗೋಳಿಕ, ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ವ್ಯತ್ಯಾಸಗಳನ್ನು ಅರಿಯುವ ಅವಕಾಶ ಕೂಡ ಅವರಿಗೆ ದೊರೆಯುತ್ತಿತ್ತು. ನಂತರದ ಕಳೆದೆರಡು ಶತಮಾನಗಳವರೆಗೆ ಒಂದು ನಿರ್ದಿಷ್ಟ ಪ್ರದೇಶದಲ್ಲಿ ಅದರಲ್ಲೂ ಮಠಗಳಲ್ಲಿ, ಅಗ್ರಹಾರಗಳಲ್ಲಿ ಆಯಾ ಊರಿನ ಪಂಡಿತರು ಜ್ಞಾನಿಗಳು ಮಕ್ಕಳಿಗೆ ಶಿಕ್ಷಣ ನೀಡುವ ಪದ್ಧತಿ ಚಾಲ್ತಿಯಲ್ಲಿತ್ತು. ಇಲ್ಲೂ ಕೂಡ ಅದೇ ಕಟ್ಟುನಿಟ್ಟಿನ ನಿಯಮಗಳಿದ್ದರೂ ಮಕ್ಕಳು ತಮ್ಮ ಮನೆಯ ವಾತಾವರಣದಲ್ಲಿ ಮುಂಜಾನೆ ಮತ್ತು ರಾತ್ರಿಗಳನ್ನು ಕಳೆಯುತ್ತಿದ್ದರು. ಮುಂಜಾನೆಯಿಂದ ಸಾಯಂಕಾಲದ ವರೆಗೆ ಶಿಕ್ಷಣ ನಂತರ ಕುಟುಂಬದ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಾ ಪಾಲಕರೊಂದಿಗೆ ವಾಸ ಇರುತ್ತಿತ್ತು. ಅದರ ನಂತರ ಕಳೆದ ಎರಡು ಶತಮಾನಗಳಿಂದ ಆರಂಭವಾಗಿದ್ದು ಇಂದಿಗೂ ಚಾಲ್ತಿಯಲ್ಲಿ ಇರುವುದು ಇಂದಿನ ಪದ್ಧತಿ. ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಪ್ರೌಢಶಾಲೆ ಕಾಲೇಜು ಸ್ನಾತಕೋತ್ತರ ಹೀಗೆ ವಿವಿಧ ಹಂತಗಳಲ್ಲಿ ಶಿಕ್ಷಣವನ್ನು ನೀಡುವ ಪದ್ಧತಿ ಆರಂಭವಾಯಿತು. ಮೊದಲ ಹತ್ತು ವರ್ಷಗಳವರೆಗೆ ಸಾಂಪ್ರದಾಯಿಕವಾಗಿ ಆಯಾ ಪ್ರದೇಶದ ಆಡಳಿತ ಭಾಷೆ, ವಿಜ್ಞಾನ, ಗಣಿತ, ಸಮಾಜಶಾಸ್ತ್ರ ಗಳ ಜೊತೆ ಜೊತೆಗೆ ರಾಷ್ಟ್ರೀಯ ಭಾಷೆ ಎಂದು ಪರಿಗಣಿತವಾಗಿದ್ದ ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳನ್ನು ಪರಿಚಯಿಸಲಾಯಿತು. ಭಾಷೆಗಳ ಪಟ್ಟಿಯಲ್ಲಿ ನಮ್ಮ ಕರ್ನಾಟಕದಲ್ಲಿ ಕನ್ನಡ ನಮ್ಮ ಮಾತೃಭಾಷೆಯಾಗಿದ್ದು ಆ ಭಾಷೆಯ ಕಥೆ,ಕಾವ್ಯ, ಕವನ, ಗದ್ಯ, ಪದ್ಯ, ಹಳಗನ್ನಡ, ನಡುಗನ್ನಡ ನವ್ಯ ಸಾಹಿತ್ಯ, ನಾಟಕ ಇತಿಹಾಸ ವ್ಯಾಕರಣ, ಕವಿ ಕರ್ತೃಗಳ ಪರಿಚಯ, ಬದುಕು ಬರಹ ಇವುಗಳ ಕುರಿತು ಮಕ್ಕಳಿಗೆ ಆಯಾ ತರಗತಿಗಳಿಗೆ ಅನುಸಾರವಾಗಿ ಪಠ್ಯವನ್ನು ಇಡಲಾಗುತ್ತದೆ. ಗಣಿತದಲ್ಲಿ ಅಂಕಿಗಳನ್ನು ಬರೆಯುವ, ಓದುವ  ಎಣಿಸುವ ಹೇಳುವುದರಿಂದ ಆರಂಭಿಸಿ ಕೂಡಿಸುವ ಕಳೆಯುವಾಗ ಗುಣಾಕಾರ ಮಾಡುವ ಭಾಗಿಸುವ ಲೆಕ್ಕಗಳನ್ನು ಇದರ ಮುಂದಿನ ಭಾಗವಾಗಿ ಗಣಿತದ ಮತ್ತೆ ವಿಷಯಗಳಾದ ದಶಮಾಂಶ ಪದ್ಧತಿ ಭಿನ್ನರಾಶಿ ಸಮೀಕರಗಳು ಪ್ರಮೇಯಗಳನ್ನು ಹಂತ ಹಂತವಾಗಿ ಕಲಿಸುವ ಯೋಜನೆಗಳು ರೂಪುಗೊಂಡವು. ಗಣಿತದಲ್ಲಿ ಅಂಕಗಣಿತ ಬೀಜಗಣಿತ ಹಾಗೂ ರೇಖಾಗಣಿತ ಎಂಬ ಮೂರು ವಿಭಾಗಗಳನ್ನು ಮಾಡಿದರು. ಸಮಾಜಶಾಸ್ತ್ರದಲ್ಲಿ ಇತಿಹಾಸ,ಭೂಗೋಳ ಹಾಗೂ ನಮ್ಮ ಸಂವಿಧಾನದ ನೀತಿಗಳನ್ನು ಅರಿಯುವ ಪೌರನೀತಿ ಎಂಬ ಮೂರು ವಿಭಾಗಗಳನ್ನು ಮಾಡಿ ಭೂಗೋಳದಲ್ಲಿ ಭೂಮಿಯ ಸಂರಚನೆಯ ಕುರಿತು ವೈವಿಧ್ಯಮಯ ಪ್ರದೇಶಗಳ ಕುರಿತು ಪ್ರಸ್ಥಭೂಮಿ ಮರುಭೂಮಿ ಕಾಡು ಹುಲ್ಲುಗಾವಲು ಮುಂತಾದ ಪ್ರಾದೇಶಿಕ ವೈವಿಧ್ಯತೆಗಳನ್ನು ಪಠ್ಯದ ಭಾಗವಾಗಿಸಿದರು.  ಹೀಗೆ ಎಲ್ಲ ವಿಷಯಗಳು ಕುರಿತು ನುರಿತ ಭಾಷಾ ತಜ್ಞರನ್ನು, ವಿದ್ವಾಂಸರನ್ನು  ಸಂಶೋಧಕರನ್ನು ಹಾಗೂ ಬುದ್ಧಿಜೀವಿಗಳನ್ನು ಒಳಗೊಂಡ ಸಮಿತಿಗಳನ್ನು ರಚಿಸಿ  ಆಯಾ ತರಗತಿಗಳಿಗೆ ಅನುಗುಣವಾಗಿ ಪಠ್ಯಗಳನ್ನು  ಮೂಲಭೂತ ವಿಷಯಗಳ ಪಟ್ಟಿಯಲ್ಲಿ ಅಡಕಗೊಳಿಸಿ ವಯೋಮಿತಿಗೆ ತಕ್ಕಂತೆ ಅವುಗಳನ್ನು ಮಕ್ಕಳ ಕಲಿಕೆಯಲ್ಲಿ ಅಳವಡಿಸಿದರು.  ಇದೀಗ ಆನ್ಲೈನ್ ನಲ್ಲಿ ಕೂಡ ವೈವಿಧ್ಯಮಯ ಕೋರ್ಸುಗಳ ವಿಷಯಗಳ ಕುರಿತು ನಾವು ಕಲಿಯಬಹುದು. ಈ ಎಲ್ಲಾ ಕಲಿಕೆಗೆ ಮೂಲ ನಮ್ಮ ಆಸಕ್ತಿ ಆಗಿರಬೇಕು. ಇಂತಹ ಕಲಿಕೆಯನ್ನು ಕಲಿಸಲು ಶಾಲೆ ಪುಸ್ತಕ ಗುರುಗಳು ಬೇಕಾಗಿಲ್ಲ. ಮುಂದಿನ ಕೆಲವೇ ದಿನಗಳಲ್ಲಿ ಭೌತಿಕವಾಗಿ ಶಾಲೆಗಳ ಅಸ್ತಿತ್ವ ಇರುತ್ತದೆಯೇ ಎಂಬ ಪ್ರಶ್ನೆ ಕೇಳಿದರೆ ಬಹುಶಹ ಇಲ್ಲ ಎಂದು ಹೇಳಬಹುದು. ಎಲ್ಲರೂ ತಮ್ಮ ತಮ್ಮ ಮನೆಗಳಲ್ಲಿ ತಮ್ಮದೇ ಆದ ಅನುಕೂಲಕರ ವಾತಾವರಣದಲ್ಲಿ ಕುಳಿತು ನಿಂತು ಮಲಗಿ ಆನ್ಲೈನ್ ನಲ್ಲಿ ಶಿಕ್ಷಕರ ಪಾಠಗಳನ್ನು ಕೇಳಿ ಪರೀಕ್ಷೆಗಳನ್ನು ಬರೆದು ಪದವಿಗಳಿಸಬಹುದಾದ ದಿನಗಳು ಮುಂದೊಂದು ದಿನ ಬರಬಹುದು. ಹಾಗಾದರೆ ಶಿಕ್ಷಣ ಎಷ್ಟರಮಟ್ಟಿಗೆ ಪ್ರಸ್ತುತ ? ಶಾಲೆಗಳ ಅವಶ್ಯಕತೆ ಇದೆಯೇ ? ಎಂಬ ಪ್ರಶ್ನೆ ಉದ್ಭವಿಸಬಹುದು  ಖಂಡಿತವಾಗಿಯೂ ಶಾಲೆಗಳ ಅವಶ್ಯಕತೆ ಇದೆ. ಮಕ್ಕಳು ಚಿಕ್ಕಂದಿನಿಂದಲೂ ಒಂದು ಸಾಂಫಿಕ ವ್ಯವಸ್ಥೆಯನ್ನು, ಸಾಮಾಜಿಕ ಜೀವನವನ್ನು, ಬದುಕಿನಲ್ಲಿ ಮೌಲ್ಯಗಳ ಅಳವಡಿಕೆಯ ಪಾಠವನ್ನು ಕಲಿಯಲು ಶಿಕ್ಷಣ ಬೇಕು. ಆದರೆ ಅಂತಹ ಶಿಕ್ಷಣ ದೊರೆಯುವುದು ಕೇವಲ ಶಾಲೆಗಳಲ್ಲಿ ಮಾತ್ರ. ಸತ್ಯ,ಧರ್ಮ,ನ್ಯಾಯ, ನೀತಿ, ಕರುಣೆ, ದಯೆ,ಪ್ರೀತಿ, ವಿಶ್ವಾಸ, ನಂಬಿಕೆ, ದೇಶಪ್ರೇಮ, ದೇಶದ ಕುರಿತು ಅಭಿಮಾನ, ರಾಷ್ಟ್ರೀಯ ಜಾಗೃತಿ ಸಂವಿಧಾನದ ಪರಿಕಲ್ಪನೆ  ನಮ್ಮ ರಾಷ್ಟ್ರೀಯ ನಾಯಕರ ಕುರಿತ ಕಥೆಗಳು, ಭಾವೈಕ್ಯತೆಯನ್ನು ಎತ್ತಿ ಹಿಡಿಯುವ ಬದುಕಿನ ಪಾಠಗಳು, ಆಟಗಳು ಆಟದ ಮೂಲಕ ಒಪ್ಪಿಕೊಳ್ಳಲು ಮಕ್ಕಳ ಚಾರಿತ್ರ್ಯ ನಿರ್ಮಾಣಕ್ಕೆ ಅತ್ಯವಶ್ಯಕವಾದ ಎಲ್ಲಾ ಬಗೆಯ ಉತ್ತಮ ಮೌಲ್ಯಗಳನ್ನು ಮಕ್ಕಳಲ್ಲಿ ತುಂಬಲು ನಮಗೆ ಶಾಲೆಗಳು ಅತ್ಯವಶ್ಯಕ.  ಶಿಕ್ಷಣವನ್ನು ಬೇಕಾದರೆ ಆನ್ಲೈನ್ ನಲ್ಲಿ ಪಡೆಯಬಹುದು… ಮಕ್ಕಳಲ್ಲಿ ವ್ಯಕ್ತಿತ್ವದ ವಿಕಸನವನ್ನು ಚಾರಿತ್ರ್ಯ ನಿರ್ಮಾಣವನ್ನು ಶಿಕ್ಷಣದಂತೆ ಕೇವಲ ಒಂದು ಇಲ್ಲವೇ ಎರಡು ವರ್ಷಗಳಲ್ಲಿ ಕಲಿಸಿ ಮುಗಿಸಲು ಸಾಧ್ಯವಿಲ್ಲ ಅದೊಂದು ನಿರಂತರ ಪ್ರಕ್ರಿಯೆ…. ಅದಕ್ಕೆ ತನ್ನದೇ ಆದ ಗತಿಯಿದ್ದು ಆ ಗತಿಯಲ್ಲಿಯೇ ಮಕ್ಕಳು ತಮ್ಮ ಬದುಕಿನಲ್ಲಿ ಶಾಲೆಗಳ ಮೂಲಕ, ಶಿಕ್ಷಕರ ಮೂಲಕ, ಸಹಪಾಠಿಗಳ ಜೊತೆಗೆ, ಹಿರಿಕಿರಿಯ ವಿದ್ಯಾರ್ಥಿಗಳ ಜೊತೆಯಲ್ಲಿ ಶಾಲೆ ಎಂಬ ದೊಡ್ಡ ಆವರಣದ ಆಟದ ಮೈದಾನದಲ್ಲಿ, ನಾಲ್ಕು ಗೋಡೆಗಳ ನಡುವಿನ ತರಗತಿಗಳಲ್ಲಿ ನಿರಂತರವಾಗಿ ಕಲಿಯಬೇಕು ಇದಕ್ಕೆ ಶಾಲೆ ಅತ್ಯಂತ ಸೂಕ್ತವಾದ ಸ್ಥಳ.  ಜನನೀ ಜನ್ಮ ಭೂಮಿಶ್ಚ.. ಸ್ವರ್ಗಾದಪಿ ಗರೀಯಸಿ ಎಂಬ ಪರಿಕಲ್ಪನೆಯನ್ನು ನಮಗೆ ಕಟ್ಟಿಕೊಡುವುದು ಶಾಲೆ ಎಂಬ ಪವಿತ್ರ ದೇಗುಲ. ನಾಗರಿಕರಾಗಿ ನಮ್ಮ ದೇಶದ ಸಂವಿಧಾನದ ಮೂಲಕ ನಾವೆಲ್ಲರೂ ಒಂದು ಎಂಬ ವಿವಿಧತೆಯಲ್ಲಿ ಏಕತೆಯ ಪಾಠವನ್ನು ಹೇಳಿಕೊಡುವುದು ಶಾಲೆಯೇ. ಸಿರಿವಂತರ ಮಗನಾಗಲಿ ಗುರು ಪುತ್ರನಾಗಲಿ ಸಮಾಜದ ಅತ್ಯಂತ ಕಟ್ಟ ಕಡೆಯ ವ್ಯಕ್ತಿಯ ಮಗನಾಗಲಿ ಶಾಲೆಯ ವಾತಾವರಣದಲ್ಲಿ ಏಕರೂಪದ ಸಮವಸ್ತ್ರವನ್ನು ಧರಿಸಿ ಮೇಲು-ಕೀಳು, ಬಡವ-ಬಲ್ಲಿದ, ವರ್ಗ-ವರ್ಣ ಎಂಬ ಯಾವುದೇ ಭೇದಗಳಿಲ್ಲದೆ ಕಲಿಯುವ ವಾತಾವರಣವನ್ನು ಕಲ್ಪಿಸಿ ಕೊಡುವುದು ಶಾಲೆ ಎಂಬ ಪವಿತ್ರ ದೇಗುಲ. ಶಾಲೆಗಳೇ ಮಕ್ಕಳ ವ್ಯಕ್ತಿತ್ವ ವಿಕಸನದ ಅದ್ಭುತವಾದ ಕಾರ್ಯ ಆಧಾರಗಳು ಅಂತಹ ಶಾಲೆಗಳಲ್ಲಿ ಮಕ್ಕಳು ತಮ್ಮ ಬದುಕಿನಲ್ಲಿ ಮುಂದೆ ಹೇಗೆ ಇರಬೇಕು ಎಂಬುದರ ಪ್ರಾಥಮಿಕ ಪಾಠವನ್ನು ಕಲಿಯುತ್ತಾ ಮುಂದಿನ ಬದುಕನ್ನು ರೂಪಿಸಿಕೊಳ್ಳಲು ಬೇಕಾದ ಒಂದೊಂದೇ ಹಂತದ ನೈತಿಕ, ಮೌಲಿಕ, ಸಾಮಾಜಿಕ ಐತಿಹಾಸಿಕ ಸಾಂಸ್ಕೃತಿಕ ಜೀವನ ಪಠ್ಯಗಳನ್ನು ಪ್ರಾಯೋಗಿಕವಾಗಿ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುತ್ತಾ ಸಾಗುತ್ತಾರೆ. ಧೈರ್ಯ, ಸಾಹಸ, ರಾಷ್ಟ್ರೀಯವಾದ, ಸೇವಾ ಮನೋಭಾವ, ಶಿಸ್ತು, ಸಂಯಮ, ಸಮಯ ಪ್ರಜ್ಞೆ ಯುವ ಮಕ್ಕಳ ಬದುಕಿನಲ್ಲಿ ಮೂಡುವುದು ಶಾಲೆಯ ಮೂಲಕವೇ ಮುಂದೆ ಮಕ್ಕಳು ತಮ್ಮ ಬದುಕಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ರಂಗಗಳಲ್ಲಿ ಮಿಂಚಿ ಯಶಸ್ವಿ ಬದುಕನ್ನು ಕಟ್ಟಿಕೊಳ್ಳಬಹುದು.. ಆದರೆ ಅದೆಲ್ಲಕ್ಕೂ ಮುಖ್ಯವಾದ ಮೂಲಭೂತವಾದ ಅಡಿಪಾಯವನ್ನು ಶಾಲೆಗಳು ಹಾಕಿಕೊಡುತ್ತವೆ. ಸೋಲು ಗೆಲುವಿನ ನೋವು ನಲುವಿನ ನೂರಾರು ಪಾಠಗಳನ್ನು ಕೂಡ ಶಾಲೆಗಳು ಕಲಿಸಿಕೊಡುತ್ತವೆ. ಹೀಗಾಗಿ ಮಕ್ಕಳ ಚಾರಿತ್ರ್ಯ ನಿರ್ಮಾಣದಲ್ಲಿ ವ್ಯಕ್ತಿತ್ವ ವಿಕಸನದಲ್ಲಿ ಶಾಲೆಗಳು ಬೇಕೇ ಬೇಕು ಅಂತಹ ಶಾಲೆಗಳ ಅಸ್ತಿತ್ವವನ್ನು ಗುರುತಿಸುವ ಸಂವೇದನಾಶೀಲ ಸಶಕ್ತ ಸಮಾಜದ ಹರಿಕಾರರು ನಾವಾಗಬೇಕು. ಆ ಮೂಲಕ ಶಿಕ್ಷಣ ಪದ್ಧತಿಯನ್ನು ಹಿಂದೆಂದಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಉನ್ನತೀಕರಿಸಬೇಕಾದ ಅವಶ್ಯಕತೆ ಇದ್ದು ಈ ನಿಟ್ಟಿನಲ್ಲಿ ಸಮಾಜದ ನಾವೆಲ್ಲರೂ ಒಂದುಗೂಡಿ ಕಾರ್ಯ ನಿರ್ವಹಿಸೋಣ ಎಂಬ ಆಶಯದೊಂದಿಗೆ ವೀಣಾ ಹೇಮಂತ್ ಗೌಡ ಪಾಟೀಲ್

“ಶಿಕ್ಷಣ ಪದ್ಧತಿ ಹಾಗೂ ಶಾಲೆಗಳ ಪ್ರಸ್ತುತತೆ” ವೀಣಾ ಹೇಮಂತ್‌ ಗೌಡ‌ ಪಾಟೀಲ್ Read Post »

ಅಂಕಣ ಸಂಗಾತಿ, ವೀಣಾ-ವಾಣಿ

“ಒಂಟಿ ಧ್ವನಿಗೆ… ಜಂಟಿಯಾದ ನೂರಾರು ಧ್ವನಿಗಳು”ವೀಣಾ ಹೇಮಂತ್‌ ಗೌಡ ಪಾಟೀಲ್

ಮಹಿಳಾ ಸಂಗಾತಿ ವೀಣಾ ಹೇಮಂತ್ ಗೌಡ ಪಾಟೀಲ್ ಒಂಟಿ ಧ್ವನಿಗೆ… ಜಂಟಿಯಾದ ನೂರಾರು ಧ್ವನಿಗಳು(ಶಾ ಬಾನು ಹಾಗೂ ತೀನ್ ತಲಾಕ್ ಮೊಕದ್ದಮೆ ) ಒಂಟಿ ಧ್ವನಿಗೆ… ಜಂಟಿಯಾದ ನೂರಾರು ಧ್ವನಿಗಳು(ಶಾ ಬಾನು ಹಾಗೂ ತೀನ್ ತಲಾಕ್ ಮೊಕದ್ದಮೆ ) ನನಗೆ ವಯಸ್ಸಾಗಿರಬಹುದು ಆದರೆ ನನ್ನ ಧ್ವನಿ ಉಡುಗಿಲ್ಲ…. ಎಂದು ಆಕೆ ಹೇಳಿದಾಗ ಆಕೆಯ ದುರ್ಬಲವಾದ ಕೈಗಳು ನಡುಗುತ್ತಿದ್ದರೂ ಧ್ವನಿಯಲ್ಲಿ ಹರಿತವಾದ ಪ್ರಖರತೆ ಇತ್ತು ಕಾರಣ… ಆಕೆಯ ಉದ್ದೇಶ ಅತ್ಯಂತ ಸ್ಥಿರವಾಗಿತ್ತು. ಇಂದೋರ್ ನ ಆ ಹೆಣ್ಣು ಮಗಳ ವಯಸ್ಸು 62 ವರ್ಷವಾಗಿದ್ದು ತನ್ನ ಬದುಕಿನ ಬಹು ಭಾಗವನ್ನು ಮನೆಯ ನಾಲ್ಕು ಗೋಡೆಗಳ ಒಳಗೆ ಆಕೆ ಕಳೆದಿದ್ದಳು. ಮದುವೆಯಾಗಿ ಹಲವಾರು ದಶಕಗಳ ನಂತರ ಆಕೆಯ ಪತಿ ಆಕೆಗೆ ವಿಚ್ಛೇದನ ನೀಡಿದ್ದಲ್ಲದೆ ಆಕೆಗೆ ಯಾವುದೇ ರೀತಿಯ ಸಹಾಯವನ್ನು ನೀಡಲು ನಿರಾಕರಿಸಿದನು. ಆಕೆಯ ಮನದ ಮೂಲೆಯಲ್ಲಿನ ಅಗೋಚರ ಭಾವವೊಂದು ಮಿಸುಕಿತ್ತು. ದಾಂಪತ್ಯದ ಹಲವಾರು ದಶಕಗಳನ್ನು ಕಳೆದ ಆಕೆ ಅತಿಯಾದ ತಿರಸ್ಕಾರದ ಭಾವದಿಂದ ನೊಂದು ತನ್ನ ಕಾಲ ಕೆಳಗಿನ ನೆಲವೇ ಕುಸಿದು ಹೋದಂತೆ ಭಾಸವಾಗಿ ಒದ್ದಾಡಿದಳು.  ತನ್ನ ಬದುಕಿನಲ್ಲಿ ಒಂದು ದಿನ ತಾನು ನ್ಯಾಯಾಲಯದ ಕಟ-ಕಟೆಯಲ್ಲಿ ನಿಲ್ಲಬಹುದು, ನ್ಯಾಯಾಧೀಶರ ಮುಂದೆ ಮೈಕ್ರೋಫೋನ್ ಗಳ ಮುಂದೆ ತನ್ನ ಅಹವಾಲನ್ನು ಮಂಡಿಸುತ್ತೇನೆ  ಎಂಬ ಯೋಚನೆಯನ್ನೇ ಆಕೆ ಮಾಡಿರಲಿಲ್ಲ.ತನ್ನ ಹೆಸರು ಮನೆಯ ನಾಲ್ಕು ಗೋಡೆಗಳ, ತಾನಿರುವ ಪರಿಸರದ ಆಚೆಗೆ ದೇಶದ ಮೂಲೆ ಮೂಲೆಯನ್ನು ತಲುಪಬಹುದು ಎಂದು ಆಕೆ ಖಂಡಿತವಾಗಿಯೂ ಭಾವಿಸಿರಲಿಲ್ಲ. ಆದರೆ ಹಸಿವಿಗೆ ಎಲ್ಲರನ್ನೂ, ಎಲ್ಲವನ್ನು ನಡುಗಿಸುವ ಶಕ್ತಿ ಇದೆ. ಬಡತನಕ್ಕೆ ಅದರದ್ದೇ ಆದ ಅಂತಃಶಕ್ತಿ ಇದೆ.ಆಕೆಯ ಬಳಿ ಹಣವಿರಲಿಲ್ಲ, ಭದ್ರತೆ ಇರಲಿಲ್ಲ ಹಾಗೂ ಒಬ್ಬಳೇ ದುಡಿದುಕೊಂಡು ತಿಂದು ಬದುಕಬಲ್ಲೆ ಎಂದು ಹೇಳಲು ಸಾಧ್ಯವಾಗುವ ದೈಹಿಕ ಶಕ್ತಿಯಂತೂ ಮೊದಲೇ ಇರಲಿಲ್ಲ.ಆದ್ದರಿಂದಲೇ ಆಕೆ ತನ್ನ ತಲೆಮಾರಿನ ಜನರು ಯೋಚಿಸಲು ಸಾಧ್ಯವಾಗದ ರೀತಿಯಲ್ಲಿ ಪ್ರತಿಕ್ರಿಯಿಸಿದಳು… ಆಕೆ ತನ್ನ ಹಕ್ಕಿಗಾಗಿ ಹೋರಾಡಿದಳು. ತನ್ನ ಕುಟುಂಬದ ನಿರ್ವಹಣೆಗಾಗಿ ಅದರಲ್ಲೂ ಮುಖ್ಯವಾಗಿ ತನ್ನ ಔಷಧಿಯ ಖರ್ಚಿಗಾಗಿ ಪ್ರತಿ ತಿಂಗಳು ತನಗೆ ಇಂತಿಷ್ಟು ಹಣವನ್ನು ದೊರಕಿಸಿಕೊಡಿ ಎಂದು ಆಕೆ ನ್ಯಾಯಾಲಯದ ಮೊರೆ ಹೋದಳು. ತನ್ನ ವೃದ್ದಾಪ್ಯದ ವಯಸ್ಸಿನಲ್ಲಿ ದುಡಿಯಲು ಸಾಧ್ಯವಿಲ್ಲದ ಕಾರಣ ಗೌರವಯುತವಾಗಿ ಬದುಕಲು ಅತ್ಯವಶ್ಯಕವಾದ ಆರ್ಥಿಕ ಅನುಕೂಲವನ್ನು ಮಾತ್ರ ಆಕೆ ಬಯಸಿದ್ದಳು.. ಆದರೆ ಆಕೆಯ ಈ ಬಯಕೆ ಇಡೀ ದೇಶದ ಸಮಾಜದ ಹೆಣ್ಣು ಮಕ್ಕಳ ಅಸ್ತಿತ್ವದ ಪ್ರಶ್ನೆಯಾಗಿ ಬದಲಾಯಿತು. ಆಕೆಯ ಕೌಟುಂಬಿಕ ನಿರ್ವಹಣೆಯ ಪ್ರಶ್ನೆ ಇಡೀ ಭಾರತ ದೇಶದ ರಾಷ್ಟ್ರೀಯ ವಿಷಯವಾಗಿ ಬದಲಾಯಿತು. ಆಕೆಯ ಕೇಸ್ ಸುಪ್ರೀಂ ಕೋರ್ಟ್ ನ ಮೆಟ್ಟಿಲನ್ನು ಏರಿತು. ಪ್ರತಿಯೊಂದು ಪತ್ರಿಕೆಯಲ್ಲಿಯೂ ಆಕೆಯ ಹೆಸರು ಹಾಗೂ ಕೇಸಿನ ವಿವರಗಳು ಪ್ರಕಟವಾದವು. ರಾಜಕೀಯ ನೇತಾರರು ಆಕೆಯ ಬದುಕು ತಮಗೆ ಸಂಬಂಧಿಸಿದ ವಿಷಯ ಎಂಬಂತೆ ಆಕೆಯ ಕುರಿತು ಮಾತನಾಡಿದರು. ಮಾಧ್ಯಮಗಳಲ್ಲಿ ಚರ್ಚೆಗಳು, ವಾಗ್ವಾದಗಳು ಕಾಳ್ಗಿಚ್ಚಿನಂತೆ ಹರಡಿದವು. ಇದೆಲ್ಲದರ ಹಿಂದೆ ಇದ್ದ ವ್ಯಕ್ತಿ ಕೇವಲ ತನಗೆ ಸಾಮಾಜಿಕ ನ್ಯಾಯವನ್ನು ದೊರಕಿಸಿಕೊಡಲು ಕೇಳಿಕೊಂಡಿದ್ದಳುಶಾ ಭಾನು ಎಂಬ ಆಕೆ ಅತ್ಯಂತ ಸ್ಥಿತಪ್ರಜ್ಞತೆಯಿಂದ ತನ್ನ ಸುತ್ತ ಹರಡುತ್ತಿದ್ದ ಈ ಎಲ್ಲ ವಿದ್ಯಮಾನಗಳನ್ನು ಗಮನಿಸುತ್ತಿದ್ದಳು… ದಿಗ್ಬ್ರಮೆಗೊಂಡ, ದಣಿದ ಮನಸ್ಥಿತಿಯಲ್ಲೂ ಕೂಡ ಆಕೆ ಹಿಂದೇಟು ಹಾಕಲಿಲ್ಲ. ಆಕೆ ತನ್ನ ಮನೆಯ ಕಿಟಕಿಯಲ್ಲಿ ಕುಳಿತುಕೊಂಡು ಪಕ್ಕದಲ್ಲಿಯೇ ಹರಡಿರುವ ನ್ಯಾಯಾಲಯದ ಕಾಗದ ಪತ್ರಗಳನ್ನು ಆಗಾಗ ನಿರುಕಿಸುತ್ತಿದ್ದ ಆಕೆ ತನಗೆ ತಾನೇ ಹೇಳಿಕೊಳ್ಳುತ್ತಿದ್ದುದು ಕೇವಲ ಒಂದೇ ಒಂದು ಮಾತು ಈಗ ನಾನು ಮಾತನಾಡದಿದ್ದರೆ, ನನ್ನಂತಹ ಹೆಣ್ಣು ಮಕ್ಕಳ ಪರವಾಗಿ ಮತ್ತಿನ್ನಾರು ಮಾತನಾಡಲು ಸಾಧ್ಯ ಎಂದು.  ಹಲವಾರು ವರ್ಷಗಳ ಕಾಲ ವಾದ ವಿವಾದಗಳು ನಡೆದು ಅಂತಿಮವಾಗಿ ಆಕೆಯ ಪರವಾಗಿ ಸುಪ್ರೀಂ ಕೋರ್ಟ್ ನಲ್ಲಿ ತೀರ್ಪು ಬಂತು. ವಿಚ್ಛೇದನದ ನಂತರವೂ ಕೂಡ ಆಕೆಯ ಪೋಷಣೆಯ ಜವಾಬ್ದಾರಿಯನ್ನು ಆಕೆಯ ಪತಿ ತೆಗೆದುಕೊಳ್ಳಬೇಕು ಎಂಬ ಸುಪ್ರೀಂ ಕೋರ್ಟ್ ನ ನಿರ್ಣಯವನ್ನು ಅತ್ಯಂತ ಸ್ತಬ್ದವಾಗಿ ಇಡೀ ದೇಶದ ಜನರು ಆಲಿಸಿದರು. ಓರ್ವ ವೃದ್ಧ, ಅಸಹಾಯಕ ಮುಸ್ಲಿಂ ಹೆಣ್ಣು ಮಗಳು  ಹೆಣ್ಣು ಮಕ್ಕಳ ಸಂಭಾಷಣೆಯ, ಮಾತುಕತೆಯ ದಿಕ್ಕನ್ನೇ ಬದಲಾಯಿಸಿ ಹೆಣ್ಣು ಮಕ್ಕಳ ಹಕ್ಕುಗಳ ಹೋರಾಟದ ರಕ್ಷಕಿಯಾಗಿ ನಿಂದಳು. ತನ್ನ ವೈಯುಕ್ತಿಕ ಆರ್ಥಿಕ ನಿರ್ವಹಣೆಯ ಕುರಿತಾಗಿ ಆಕೆ ಹಚ್ಚಿದ ಪುಟ್ಟದೊಂದು ಕಿಡಿ ಬೆಂಕಿಯಾಗಿ ಪ್ರಜ್ವಲಿಸಿತ್ತು. ಬಹಳಷ್ಟು ಜನ ಇದನ್ನು ವಿರೋಧಿಸಿದರು. ಧಾರ್ಮಿಕ ಮುಖಂಡರು ಒಂದೆಡೆ ಸೇರಿ ಭಾಷಣಗಳನ್ನು ಮಾಡಿದರು. ಸರ್ಕಾರವು ಕೂಡ ಒತ್ತಡದಲ್ಲಿ ಸಿಲುಕಿತು ಆದರೆ ಇನ್ನೇನು ಗೆಲುವು ಆಕೆಯ ಕೈಗೆ ದೊರಕಿತು ಎಂಬಷ್ಟರಲ್ಲಿ ಅದು ಆಕೆಯ ಕೈಯಿಂದ ನುಣುಚಿಕೊಳ್ಳಲಾರಂಭಿಸಿತು  ತನ್ನ ಮನೆಯ ಪುಟ್ಟ ಕೋಣೆಯಲ್ಲಿ ಶಾ ಬಾನು ಅತ್ಯಂತ ಮೌನವಾಗಿ ಕುಳಿತಿದ್ದ ಸಮಯದಲ್ಲಿ ಇಡೀ ಜಗತ್ತು ಆಕೆಯ ಬದುಕಿನ ಕುರಿತು ಚರ್ಚೆಯಲ್ಲಿ ತೊಡಗಿತು. ಯಾರೊಬ್ಬರೂ ಆಕೆಯ ಕಣ್ಣಲ್ಲಿ ಕಣ್ಣಿಟ್ಟು ಆಕೆಯ ನೋವು ಏನಿರಬಹುದು ಎಂಬುದನ್ನು ಅರಿಯುವ ಪ್ರಯತ್ನ ಮಾಡಲಿಲ್ಲ. ತಾನು ಒಬ್ಬಂಟಿ ಮೋಸ ಹೋದ ಹಾಗೂ ಭಯ ಪಟ್ಟ ಏಕೈಕ ಹೆಣ್ಣುಮಗಳು ಎಂಬ ಭಾವ ಮಾತ್ರ ಆಕೆಯನ್ನು ಸತಾಯಿಸುತ್ತಿತ್ತು…. ಇದೇ ಸಮಯದಲ್ಲಿ ಚಮತ್ಕಾರದ ರೀತಿಯಲ್ಲಿ ಇಡೀ ಭಾರತ ದೇಶದಾದ್ಯಂತ ಹಿಂದೂ ಮಹಿಳೆಯರ ಗುಂಪುಗಳು ಆಕೆಯನ್ನು ಬೆಂಬಲಿಸಲು ಆರಂಭಿಸಿದವು.  ಶಿಕ್ಷಕರು, ಸಾಮಾಜಿಕ ಕಾರ್ಯಕರ್ತರು, ನ್ಯಾಯವಾದಿಗಳು, ಕಾಲೇಜ್ ವಿದ್ಯಾರ್ಥಿನಿಯರು ಹೀಗೆ ಆಕೆ ಎಂದೂ ಭೇಟಿಯಾಗದ ನೂರಾರು ಸಾವಿರಾರು ಸಂಖ್ಯೆಯ ಮಹಿಳೆಯರು ಆಕೆಯ ಬೆಂಬಲಕ್ಕೆ ನಿಂತರು. ಬೇರೊಂದು ಧರ್ಮದ, ಬೇರೊಂದು ಜಗತ್ತಿನ ಹೆಣ್ಣು ಮಕ್ಕಳು ಆಕೆಯ ಚಿತ್ರವನ್ನು ಅಂಟಿಸಿದ ಭಿತ್ತಿ ಪತ್ರಗಳನ್ನು ಹಿಡಿದು ಆಕೆಯ ಪರವಾಗಿ ಘೋಷಣೆ ಕೂಗಿದರು. ಕೋರ್ಟ್ ನಲ್ಲಿ ಪಿಟಿಷನ್ ಕರೆಯಲಾಯಿತು ಹಾಗೂ ಸಾಮೂಹಿಕ ನಡಿಗೆಯ ಮೂಲಕ ತಾಲೂಕಿನ ತಹಸೀಲ್ದಾರ್ ಕಚೇರಿಗಳಲ್ಲಿ ಆಕೆಯ ಪರವಾಗಿ ನ್ಯಾಯ ದಾನ ಮಾಡಲು ಕೇಳಿಕೊಳ್ಳಲಾಯಿತು. ಆಕೆಯ ಹೆಸರಿನಲ್ಲಿ ಜಾತಾಗಳನ್ನು ಹಮ್ಮಿಕೊಳ್ಳಲಾಯಿತು. ಆಕೆಯ ಪರವಾಗಿ ನ್ಯಾಯದ ಹೋರಾಟ ನಡೆಯಿತು. ಮೊಟ್ಟ ಮೊದಲ ಬಾರಿ ತಿಂಗಳುಗಟ್ಟಲೆ ಏಕಾಂತ ವಾಸದ ನಂತರ ಕೂಡ ಶಾ ಬಾನು ತಾನು ಒಬ್ಬಂಟಿ ಎಂಬ ಭಾವವನ್ನು ತೊರೆದು ಹಾಕಲು ಜನರ ಈ ಸಂಘಟಿತ ಪ್ರಯತ್ನ ಕಾರಣವಾಯಿತು.  ಅದೊಮ್ಮೆ ತನ್ನನ್ನು ಭೇಟಿಯಾಗಲು ಬಂದ ವ್ಯಕ್ತಿಗೆ ಆಕೆ ಹೇಳಿದ್ದು ಹೀಗೆ ನಾನು ನನ್ನ ವೈಯುಕ್ತಿಕ ನ್ಯಾಯಕ್ಕಾಗಿ ಹೋರಾಡಲು ಕಾರಣ ನನಗೆ ಬೇರೆ ಯಾವುದೇ ಆಯ್ಕೆಗಳು ಇರಲಿಲ್ಲ… ಯಾವೊಬ್ಬ ವ್ಯಕ್ತಿಯು ಕೂಡ ಹೋರಾಟದಲ್ಲಿ ಹಿಂದೆ ಉಳಿಯಬಾರದು ಎಂಬ ಕಾರಣಕ್ಕಾಗಿ ಅವರೆಲ್ಲರೂ ಮಹಿಳೆಯಾದರೂ ಕೂಡ ನನ್ನನ್ನು ಬೆಂಬಲಿಸಿದರು…. ಉಳಿಯುವಿಕೆಗಾಗಿನ ನನ್ನ ಹೋರಾಟಕ್ಕಿಂತ, ನನ್ನ ಉಳಿಯುವಿಕೆಗಾಗಿ ಅವರು ಮಾಡಿದ ಹೋರಾಟ ದೊಡ್ಡದು ಎಂದು ಆಕೆ ಹೇಳಿದಳು.  ಧರ್ಮ, ಜಾತಿ, ರಾಜಕೀಯಗಳಿಂದ ವಿಭಾಗಿಸಲ್ಪಟ್ಟ ಭಾರತ ದೇಶದಲ್ಲಿ ಆಕೆಗೆ ಪರಿಚಯವೇ ಇಲ್ಲದ ಅಪರಿಚಿತ ಜನರ ಗುಂಪು ಮಾನವೀಯ ಪ್ರಜ್ಞೆಯಿಂದಆಕೆಯ ರಕ್ಷಣೆಗಾಗಿ ಮಂಚೂಣಿಯಲ್ಲಿ ನಿಂತದ್ದು ಆಕೆಗೆ ಹೆಮ್ಮೆಯ ವಿಷಯವಾಗಿ ತೋರಿತು. ಅವರಾರೂ ಆಕೆಯ ರಕ್ತ ಹಂಚಿಕೊಂಡು ಹುಟ್ಟಿದ ಒಡಹುಟ್ಟಿದವರಲ್ಲ, ಆಕೆಯ ಭಾಷೆಯನ್ನು ಅರಿಯದವರು ಆಕೆಯ ಸಂಸ್ಕೃತಿಯ ಗಂಧ ದಾಳಿ ತಿಳಿಯದವರು ಹಾಗೂ ಆಕೆಯ ಪ್ರಾರ್ಥನೆಯ ಅರಿವನ್ನು ಹೊಂದಿರದ ಆದರೆ ಆಕೆಯ ಮೂಕವೇದನೆಯನ್ನು ಅತ್ಯಂತ ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಬಲ್ಲ ಶಕ್ತಿ, ಸಾಮರ್ಥ್ಯಗಳು ಅವರಲ್ಲಿತ್ತು. ಕೆಲವೊಮ್ಮೆ ಯಾವುದೇ ಕಾನೂನಿಗೆ ಸಾಧ್ಯವಾಗದ ಅತ್ಯಂತ ಬಲವಾದ ಬಂಧವನ್ನು ಮಾನವೀಯ ಬಂಧನ ಉಂಟುಮಾಡುತ್ತದೆ ಎಂಬುದಕ್ಕೆ ಇದುವೇ ಸಾಕ್ಷಿ. ತಾನಂದುಕೊಂಡ ರೀತಿಯಲ್ಲಿ ಶಾ ಬಾನು ಗೆಲ್ಲಲಿಲ್ಲ ನಿಜ ಕಠಿಣ ಕಾನೂನುಗಳು ಬದಲಾಗುವುದಿಲ್ಲ. ಆಕೆಯ ಸಾಮಾಜಿಕ ಗೆಲುವು ಮುಂದಿನ ದಿನಗಳಲ್ಲಿ ಮತ್ತೆ ಹಿಂತೆಗೆದುಕೊಳ್ಳಲಾಯಿತು… ಆದರೆ ಶಾಶ್ವತವಾಗಿ ಉಳಿದದ್ದು ಆಕೆ ಸೋಲದಂತೆ ಆಕೆಯ ವಾದವನ್ನು ಎತ್ತಿ ಹಿಡಿಯಲಾಗಿದ್ದು. ಇಂದೋರ್ ನಂತಹ ಪುಟ್ಟ ಶಹರದಲ್ಲಿ ವಾಸಿಸುತ್ತಿರುವ  ಓರ್ವ ವೃದ್ಧ ಹೆಣ್ಣು ಮಗಳು ತನ್ನ ಅಚಲ ವಿಶ್ವಾಸದಿಂದ ಇಡೀ ದೇಶದ ಕಾನೂನನ್ನು ಪ್ರಶ್ನಿಸಬಲ್ಲಳು ಎಂಬ ಸಂದೇಶ ಇಡೀ ಜಗತ್ತಿಗೆ ಸಾರಲ್ಪಟ್ಟಿತು. ಅದಷ್ಟೇ ಏಕೆ ? ಹುಟ್ಟಿ ಬೆಳೆದ ಆಕೆಯದ್ದೇ ಧರ್ಮದ ಸಮಾಜವು ಆಕೆಯನ್ನು ಮೌನವಾಗಿರಿಸಲು ಪ್ರಯತ್ನಿಸಿ ಆಕೆಯ ಮೇಲೆ ಒತ್ತಡವನ್ನು ಹೇರಿದರೂ ಕೂಡ ಇಡೀ ಜಗತ್ತಿನ ಮಹಿಳೆಯರು ಆಕೆಯ ಬೆಂಬಲಕ್ಕೆ ನಿಂತದ್ದು ಮಾನವೀಯ ಮೌಲ್ಯಗಳ ಪುನರುತ್ಥಾನಕ್ಕೆ ಕಾರಣವಾಯಿತು.  ಹಲವಾರು ವರ್ಷಗಳ ನಂತರ ಇಂದಿಗೂ ಕೂಡ ಆಕೆಯ ಕುರಿತು ತರಗತಿಯ ಕೋಣೆಗಳಲ್ಲಿ ನ್ಯಾಯಾಲಯದ ಚರ್ಚೆಗಳಲ್ಲಿ ಮಹಿಳೆಯರ ಹಕ್ಕುಗಳ ಕುರಿತಾದ ಸಭೆಗಳಲ್ಲಿ ಮಾತನಾಡಲಾಗುತ್ತದೆ.. ಇದಕ್ಕೆ ಕಾರಣ ಆಕೆ ಮಹಿಳೆಯರ ಹಕ್ಕುಗಳ ಕುರಿತಾಗಿ ಮಾತನಾಡಿದ್ದಲ್ಲ ಅದೆಷ್ಟೇ ತೊಂದರೆಯಾದರೂ ಕೂಡ ಒಬ್ಬಂಟಿಯಾಗಿ ನಿಂತು ಆಕೆ ಈ ಸಮಾಜವನ್ನು ಎದುರಿಸಿದ್ದು.  ರಾಜಕೀಯದ ಗಂಧ ಕೂಡ ಸೋಕದ ಇಂದೋರ್ ನ ಪುಟ್ಟ ಮನೆಯಲ್ಲಿ ಕುಳಿತಿದ್ದ ಆ ವೃದ್ಧ ಹೆಣ್ಣು ಮಗಳು ತನ್ನ ಎರಡು ಕೈಗಳನ್ನು ಜೋಡಿಸಿ ಅತ್ಯಂತ ಸೌಮ್ಯವಾಗಿ ಹೇಳಿದ್ದಳು “ನ್ಯಾಯಾಲಯದಲ್ಲಿ ನಾನು ಸಂಪೂರ್ಣವಾಗಿ ಗೆಲುವನ್ನು ಸಾಧಿಸಿಲ್ಲ ನಿಜ ಆದರೆ ನಾನು ಸೋತಿಲ್ಲ ಕೂಡ ” ಎಂದು. ನೋಡಿದಿರಾ ಸ್ನೇಹಿತರೆ, ಪ್ರತಿಯೊಂದು ನದಿಯು ತನ್ನ ಉಗಮದಲ್ಲಿ ಪುಟ್ಟ ಝರಿಯಾಗಿ ಇರುತ್ತದೆ. ಅಂತೆಯೇ ಪ್ರತಿ ಸೂರ್ಯೋದಯವೂ ಕೂಡ ಚಿಕ್ಕದೊಂದು ಕಿರಣದ ಹರಡುವಿಕೆಯಿಂದ ಆರಂಭವಾಗುತ್ತದೆ ಅಂತೆಯೇ ಪ್ರತಿಯೊಂದು ದೊಡ್ಡ ಹೋರಾಟಕ್ಕೆ ಚಿಕ್ಕದೊಂದು ನೋವಿನ, ಅಸಮಾನತೆಯ ಕುರಿತಾದ ಅಸಹಾಯಕ ಅತೃಪ್ತಿಯ ಕಿಡಿ ಕಾರಣವಾಗುತ್ತದೆ. ಇಂದಿಗೂ ಕೂಡ ನಮ್ಮ ಸಮಾಜದಲ್ಲಿ ಶಾ ಬಾನುವಿನಂತಹ ನೂರಾರು ಸಾವಿರಾರು ಜನರನ್ನು ನಾವು ಕಾಣುತ್ತಿದ್ದೇವೆ. ಒಂದಷ್ಟು ಪರಿಹಾರದ ಹಣವನ್ನು ನೀಡಿ ಕೈ ತೊಳೆಯುವ ಇಲ್ಲವೇ ಕೇಸನ್ನು ಮುಚ್ಚಿ ಹಾಕುವ ಮುನ್ನ ಸಾಮಾಜಿಕ ನ್ಯಾಯವನ್ನು ನಿರೀಕ್ಷಿಸುವ ಪ್ರತಿಯೊಬ್ಬರಿಗೂ ಅವರವರ ಧಾರ್ಮಿಕ, ಸಾಮಾಜಿಕ ನ್ಯಾಯಗಳು ದೊರೆಯಲೇಬೇಕು ಎಂಬ ಆಶಯದೊಂದಿಗೆ ವೀಣಾ ಹೇಮಂತ್ ಗೌಡ ಪಾಟೀಲ್

“ಒಂಟಿ ಧ್ವನಿಗೆ… ಜಂಟಿಯಾದ ನೂರಾರು ಧ್ವನಿಗಳು”ವೀಣಾ ಹೇಮಂತ್‌ ಗೌಡ ಪಾಟೀಲ್ Read Post »

ಅಂಕಣ ಸಂಗಾತಿ, ವೀಣಾ-ವಾಣಿ

“ಬದುಕಿನ ಬಣ್ಣಗಳ ಅರಿವು” ವೀಣಾ ಹೇಮಂತ್‌ ಗೌಡ ಪಾಟೀಲ್

ಜೀವನ ಸಂಗಾತಿ ವೀಣಾ ಹೇಮಂತ್‌ ಗೌಡ ಪಾಟೀಲ್ “ಬದುಕಿನ ಬಣ್ಣಗಳ ಅರಿವು” ಸದಾ ಕಾಲೇಜು, ಸ್ನೇಹಿತರು, ಪ್ರೀತಿಸಿದ ಹುಡುಗಿ ಎಂದು ಬಿಂದಾಸ್ ಆಗಿ ಓಡಾಡುತ್ತಿದ್ದ ಮೊಮ್ಮಗನನ್ನು ಕಂಡು ಆತನ ಅಜ್ಜಿ ತಾತನಿಗೆ ತುಸು ಹೆಚ್ಚೇ ಬೇಸರವಾಗಿತ್ತು. ಅವರ ಏಕೈಕ ಪುತ್ರ ಮತ್ತು ಸೊಸೆ ಅಪಘಾತದಲ್ಲಿ ತೀರಿಹೋದ ಮೇಲೆ ಇರುವ ಒಬ್ಬ ಮೊಮ್ಮಗನನ್ನು ಅತ್ಯಂತ ಪ್ರೀತಿಯಿಂದ ಜೋಪಾನ ಮಾಡುತ್ತಿದ್ದ ಅವರು ತಮ್ಮ ವೃದ್ಧಾಪ್ಯವನ್ನು ಸಂಪೂರ್ಣವಾಗಿ ಆತನನ್ನು ಬೆಳೆಸುವುದರಲ್ಲಿ ಕಳೆದಿದ್ದರು. ಒಳ್ಳೆಯ ಅಂಕಗಳನ್ನು ಗಳಿಸುವಲ್ಲಿ ಅವನೇನು ಹಿಂದೆ ಬಿದ್ದಿರಲಿಲ್ಲ, ನಿಜ ಆದರೆ ಕಾಲೇಜು ಕಟ್ಟೆ ಹತ್ತಿದ ಮೇಲೆ ಸದಾ ಸ್ನೇಹಿತರ ಹಿಂಡಿನೊಂದಿಗೆ ಅಲೆಯುತ್ತಿದ್ದ ಆತ ಮನೆಗೆ ಬರುವುದು ರಾತ್ರಿ ಮಲಗಲು ಮಾತ್ರ ಎಂಬಂತೆ ಆಗಿದ್ದು ಸದಾ ಆತನ ನಿರೀಕ್ಷೆಯಲ್ಲಿ ಇರುತ್ತಿದ್ದ ಅಜ್ಜಿ ತಾತನಿಗೆ ಇದರಿಂದ ಬೇಸರವಾಗಿತ್ತು. ತಮ್ಮ ಜೀವಿತದ ಬಹುಕಾಲವನ್ನು ಮೊಮ್ಮಗನ ಹಿಂದೆ ಮುಂದೆ ಓಡಾಡಿ ಆತನಿಗೆ ತಾಯಿ, ತಂದೆ ಇಲ್ಲದ ನೋವು ಬಾರದಂತೆ ಸಾಕಿ ಸಲಹಿದ ಅವರಿಗೆ ಇದೀಗ ಮೊಮ್ಮಗ ತಮ್ಮನ್ನು ಕಡೆಗಣಿಸುತ್ತಿದ್ದಾನೆ ಎಂಬ ಭಾವ. ಅದು ಎರಡನೇ ಪಿಯುಸಿಯ ಕಾಲ. ಕಳೆದ ವರ್ಷ ಅತ್ಯಂತ ಕಡಿಮೆ ಅಂಕಗಳನ್ನು ತೆಗೆದುಕೊಂಡು ಜಸ್ಟ್ ಪಾಸ್ ಆಗಿದ್ದ ಆತನಿಗೆ ಆ ದಿನ ಅಜ್ಜಿ ಮನೆಯಲ್ಲಿಯೇ ಇರಲು ಹೇಳಿದ್ದರು. ಐದು ನಿಮಿಷದಲ್ಲಿ ಬರುತ್ತೇನೆ ಎಂದು ಹೋದವನು ಸ್ನೇಹಿತರ ಜೊತೆಯಲ್ಲಿ ಸಿನಿಮಾ ನೋಡಿ ಹೋಟೆಲಿನಲ್ಲಿ ತಿಂದು ಮನೆಗೆ ಬಂದಾಗ ಸಂಜೆಯ ಆರು ಗಂಟೆ ಆಗಿತ್ತು. ಮನೆಯ ಕರೆ ಗಂಟೆಯನ್ನು ಆತ ಒತ್ತಿದ ಕೂಡಲೇ ಅಜ್ಜ ಬಾಗಿಲು ತೆರೆದರು. ಇನ್ನೇನು ಆತ ಒಳಗೆ ಬರಬೇಕು ಎನ್ನುವಷ್ಟರಲ್ಲಿ ಅಜ್ಜಿ ಬಾಗಿಲಿಗೆ ಅಡ್ಡಲಾಗಿ ನಿಂತು “ಈ ಮನೆಯಲ್ಲಿ ಇನ್ನು ನಿನಗೆ ಜಾಗವಿಲ್ಲ, ಹೊರಟು ಹೋಗು” ಎಂದು ಹೇಳಿದರು. ಅಜ್ಜಿಯ ಮಾತುಗಳು ಅರ್ಥವಾದರೂ ಏನೂ ತೋಚದೆ ಆತ ಕಕ್ಕಾಬಿಕ್ಕಿಯಾಗಿ ನಿಂತಿರುವುದನ್ನು ನೋಡಿದ ಅಜ್ಜ ಅಜ್ಜಿಯ ಹೆಗಲ ಮೇಲೆ ಕೈ ಇಟ್ಟು ಆಕೆಗೆ ಸಮಾಧಾನ ಮಾಡಲು ನೋಡಿದರು. ಕೂಡಲೇ ಪತಿಯ ಕೈಯನ್ನು ಕೊಸರಿದ ಆಕೆ ಹಿಂದೆ ಸರಿದು ಆತನಿಗೆ ಈ ಮನೆಯಲ್ಲಿ ಜಾಗ ಇಲ್ಲ…..ಇದೇ ಕೊನೆಯ ಮಾತು ಎಂದು ಹೇಳಿ ಆತನ ಮುಖಕ್ಕೆ ರಾಚುವಂತೆ ಬಾಗಿಲನ್ನು ಹಾಕಿಕೊಂಡು ಒಳಗೆ ಹೊರಟು ಹೋದರು. ಒಮ್ಮಿಂದೊಮ್ಮೆಲೆ ಎಲ್ಲವನ್ನು ಕಳೆದುಕೊಂಡ ಹತಾಶ ಭಾವ ಮೊಮ್ಮಗನನ್ನು ಆವರಿಸಿತು. ಮುಂದೇನು ಎಂದು ತೋಚದೆ ಇದ್ದರೂ ನಿಧಾನವಾಗಿ ಮನೆಯ ಮೆಟ್ಟಿಲಿಳಿದು ರಸ್ತೆಗೆ ಬಿದ್ದನು. ಹಾಗೆ ನಡೆಯುತ್ತಾ ಮುಂದೆ ಹೋಗುವಾಗ ತಾನು ಕಾಯಂ ಆಗಿ ಸ್ನೇಹಿತರ ಜೊತೆ ಕೂಡುತ್ತಿದ್ದ ದೂರದ ರಸ್ತೆಯಂಚಿನ ಆಲದ ಮರದ ಬಳಿ ಸಾರಿದನು. ನಿಧಾನವಾಗಿ ಕಾಲೆಳೆದುಕೊಂಡು ಹೋಗಿ ಅಲ್ಲಿ ಆತ ಕುಳಿತಾಗ ಆತನ ಒಂದಿಬ್ಬರು ಸ್ನೇಹಿತರು ಮಾತನಾಡುತ್ತಾ ಅಲ್ಲಿಗೆ ಬಂದರು. ಈತನ ಜೋತು ಬಿದ್ದ ಮುಖವನ್ನು ನೋಡಿ ಏನಾಯ್ತು ಬ್ರೋ? ಯಾಕೆ ಹೀಗೆ ಕುಳಿತಿದ್ದೀಯಾ? ಮನೆಯಲ್ಲಿ ಏನಾದರೂ ಪ್ರಾಬ್ಲಮ್ಮಾ? ಎಂದು ಕೇಳಿದರು. ಕೂಡಲೇ ಯುವಕ “ಅಜ್ಜಿ ನನ್ನನ್ನು ಮನೆಯಿಂದ ಹೊರಗೆ ಹಾಕಿದರು.. ಎಲ್ಲಿ ಹೋಗಬೇಕೆಂದು ನನಗೆ ತೋಚುತ್ತಿಲ್ಲ. ನನಗೆ ಒಂದೆರಡು ದಿನಗಳ ಕಾಲ ನಿಮ್ಮ ಯಾರದಾದರೂ ಮನೆಯಲ್ಲಿ ಇರೋಕೆ ಅವಕಾಶ ಕೊಡ್ತೀರಾ? ಎಂದು ಅವರಿಬ್ಬರನ್ನು ಕೇಳಿದ. ಪರಸ್ಪರ ಮುಖ ನೋಡಿಕೊಂಡ ಅವರಲ್ಲಿ ಒಬ್ಬ ಸ್ನೇಹಿತ ಇಲ್ಲ ಕಣೋ ನಮ್ಮ ಮನೆಯಲ್ಲಿ ಜಾಗ ಸಾಲೋದಿಲ್ಲ… ಅದು ಅಲ್ದೆ ನನ್ನ ಅಪ್ಪ ಅಮ್ಮ ಒಪ್ಪಲ್ಲ ಎಂದು ಹೇಳಿದ. ಮತ್ತೊಬ್ಬ ಆತನ ಮಾತಿಗೆ ಗೋಣು ಹಾಕುತ್ತಾ“ಸಾರಿ ಕಣೋ ನಮ್ಮನೇಲೂ ಬಹುಶಃ ಇದೇ ಕಥೆ. ಬೆಟರ್ ನೀನು ನಿಮ್ಮ ಅಜ್ಜಿ ಹತ್ರ ಹೋಗಿ ಸಾರಿ ಕೇಳು… ಅವರು ನಿನ್ನನ್ನು ಕ್ಷಮಿಸುತ್ತಾರೆ” ಎಂದು ಈತನ ಮನೆಯ ಹಿನ್ನೆಲೆ ಗೊತ್ತಿದ್ದ ಅವರು ಆತನಿಗೆ ಹೇಳಿದರು. ಆಯ್ತು ಎಂದು ನಿಟ್ಟುಸಿರಿಟ್ಟ ಆತ ತಾನು ಸದಾ ತನ್ನ ಗರ್ಲ್ ಫ್ರೆಂಡ್ ಜೊತೆ ಕೂಡುತ್ತಿದ್ದ ಕೆಫೆಯತ್ತ ಹೆಜ್ಜೆ ಹಾಕಿದ. ಆತನ ಕರೆಯ ಮೇರೆಗೆ ಅಲ್ಲಿಗೆ ಬಂದಿದ್ದ ಗರ್ಲ್ ಫ್ರೆಂಡ್ ಈತನ ಪೇಲವ ಮುಖವನ್ನು ನೋಡಿ ಏನಾಯಿತು ಎಂದು ಕೇಳಿದಳು. ಮನೆಯಲ್ಲಿ ನಡೆದ ವಿಷಯವನ್ನು ಆಕೆಗೆ ಹೇಳಿದ ಆತಕೆಲ ದಿನಗಳ ಕಾಲ ನಿನ್ನ ಮನೆಯಲ್ಲಿ ನನ್ನನ್ನು ಇರಿಸಿಕೊಳ್ಳುತ್ತೀಯಾ? ಎಂದು ಕೇಳಿದಾಗ ತುಸು ಗಾಬರಿ ಬಿದ್ದ ಆಕೆ ನನ್ನ ಪಾಲಕರನ್ನು ಕೇಳಿ ಹೇಳುತ್ತೇನೆ ಎಂದು ಹೇಳಿದಳು. ನಂತರ ಅವರಿಬ್ಬರೂ ಆಕೆಯ ಮನೆಯೆಡೆ ನಡೆದರು. ಆತನನ್ನು ಮನೆಯ ಹೊರಗೆ ಗೇಟ್ ನ ಬಳಿ ನಿಲ್ಲಿಸಿದ ಆಕೆ ಮನೆಯ ಒಳಗೆ ಹೋಗಿ ತನ್ನ ಅಪ್ಪ ಅಮ್ಮನಿಗೆ ವಿಷಯವನ್ನು ತಿಳಿಸಿ ಆತನಿಗೆ ಕೆಲ ದಿನಗಳ ಕಾಲ ತಮ್ಮ ಮನೆಯಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗುತ್ತದೆಯೇ ಎಂದು ಕೇಳಿದಳು. ಪಾಲಕರು ಒಪ್ಪಲಿಲ್ಲ. ಆಕೆ ಮನೆಯ ಹೊರಗೆ ಬಂದು ಗೇಟಿನ ಬಳಿ ನಿಂತಿದ್ದ ಯುವಕನಿಗೆ “ಸಾರಿ ಕಣೋ… ನನ್ನ ಅಪ್ಪ ಅಮ್ಮ ಒಪ್ತಾ ಇಲ್ಲ ನಾನು ನಿನಗೆ ಯಾವ ರೀತಿನೂ ಸಹಾಯ ಮಾಡೋಕೆ ಆಗುತ್ತಿಲ್ಲ. ಐ ಯಾಮ್ ರಿಯಲಿ ಸಾರಿ ಏನೂ ತಿಳ್ಕೋಬೇಡ” ಎಂದು ಹೇಳಿದಳು.ನಿಟ್ಟುಸಿರಿಟ್ಟ ಆತ ನನ್ನ ಪರಿಸ್ಥಿತಿಯೇ ಹಾಗೆ ಇರುವಾಗ ನೀನಾದರೂ ಏನು ಮಾಡ್ತೀಯಾ? ಇರಲಿ ಬಿಡು ಹೊರಡುತ್ತೇನೆ ಎಂದು ಹೇಳಿ ತನ್ನ ಮನೆಯ ಕಡೆ ನಡೆದನು. ಮನೆಗೆ ಹೋಗಲು ಆತನಿಗೆ ಮನಸ್ಸು ಇರಲಿಲ್ಲ ಆದರೆ ಅನಾಯಾಸವಾಗಿ ಆತನ ಕಾಲುಗಳು ಮನೆಯ ಹತ್ತಿರ ಇರುವ ಪಾರ್ಕಿನ ಬಳಿ ಆತನನ್ನು ಕರೆದೊಯ್ದವು. ಪಾರ್ಕಿನ ಕಲ್ಲು ಬೆಂಚೊಂದರ ಮೇಲೆ ಕುಳಿತ ಆತನಿಗೆ ತಾನು ಚಿಕ್ಕಂದಿನಲ್ಲಿ ಅಜ್ಜ ಅಜ್ಜಿಯರ ಜೊತೆ ಈ ಪಾರ್ಕಿಗೆ ಬಂದು ಆಟವಾಡುತ್ತಿದ್ದುದು ಅವರ ಕೈ ಹಿಡಿದು ವಾಕಿಂಗ್ ಮಾಡುತ್ತಿದ್ದುದು, ಕಣ್ಣಾಮುಚ್ಚಾಲೆ ಆಡುತ್ತಿದ್ದುದು ಎಲ್ಲವೂ ಒಂದರ ಹಿಂದೆ ಒಂದರಂತೆ ಮೆರವಣಿಗೆ ಹೊರಟವು. ಮಗ ಮತ್ತು ಸೊಸೆಯನ್ನು ಕಳೆದುಕೊಂಡ ಅಪಾರ ದುಃಖದ ನಡುವೆಯೂ ಅಜ್ಜಿ ತಾತ ತನಗಾಗಿ ತಮ್ಮ ಬದುಕನ್ನು ಮೀಸಲಿಟ್ಟಿದ್ದು ನೆನಪಾಗಿ ದುಃಖ ಒತ್ತರಿಸಿ ಬಂತು. ಜೋರಾಗಿ ಬಿಕ್ಕಿ ಬಿಕ್ಕಿ ಆತ ಅಳುತ್ತಿರುವಾಗ ಹೆಗಲ ಮೇಲೆ ಕೈಯೊಂದು ಬಿತ್ತು. ತಲೆಯೆತ್ತಿ ನೋಡಿದಾಗ ಅಲ್ಲಿ ಅಜ್ಜ ನಿಂತಿದ್ದರು. ಮೊಮ್ಮಗನನ್ನು ಗಟ್ಟಿಯಾಗಿ ತಬ್ಬಿದ ಅಜ್ಜ ಬೇಸರವಾಯಿತೆ ? ಎಂದು ಕೇಳಿದರು. ಇಲ್ಲ ಅಜ್ಜ, ನೀವು ನನಗಾಗಿ ಅದೆಷ್ಟು ಕಷ್ಟಪಟ್ಟಿರಿ… ಆದರೆ ಅದರ ಅರಿವಿಲ್ಲದ ನಾನು ನಿಮ್ಮಿಬ್ಬರ ಮನಸ್ಸನ್ನು ನೋಯಿಸಿದೆ, ಅದನ್ನು ನೆನೆದು ದುಃಖವಾಯಿತು ಎಂದು ಹೇಳಿದಾಗ ಆತನ ಹೆಗಲ ಮೇಲೆ ಮೆಲುವಾಗಿ ತಟ್ಟಿದ ಅಜ್ಜ ನಡೆ ಮನೆಗೆ ಹೋಗೋಣ ಎಂದು ಹೇಳಿದರು. ಅಯೋಮಯನಾಗಿ ಯುವಕ “ಅಜ್ಜಿ ಬೈತಾರೆ…ನಾನು ಬರಲ್ಲ” ಎಂದು ಹೇಳಿದಾಗ “ಬಾ ಬಾ ನಿನ್ನ ಅಜ್ಜಿ ನಿನಗಿಂತಲೂ ನೋಯುತ್ತಿದ್ದಾಳೆ” ಎಂದು ಹೇಳಿ ಅಜ್ಜ ಆತನ ಕೈ ಹಿಡಿದು ಮನೆಯೆಡೆ ನಡೆದರು. ಅಜ್ಜಿಗೆ ಏಕೆ ನೋವಾಗಿದೆ ಎಂದು ಕುತೂಹಲದಿಂದ ಅಜ್ಜನನ್ನು ಹಿಂಬಾಲಿಸಿದ ಯುವಕ. ಮನೆಯ ಬಾಗಿಲನ್ನು ತೆಗೆಸಲು ಕರೆಗಂಟೆ ಒತ್ತಲೇ ಬೇಕಾಗಿರಲಿಲ್ಲ. ತೆರೆದ ಬಾಗಿಲ ಮುಂದೆ ಗಲ್ಲಕ್ಕೆ ಕೈಕೊಟ್ಟು ಕುಳಿತ ಅಜ್ಜಿಯ ಮ್ಯಾನವದನ ಮೊಮ್ಮಗನ ಮುಖ ನೋಡುತ್ತಲೇ ನೂರು ಕ್ಯಾಂಡಲ್ ಬಲ್ಬು ಬೆಳಗಿದಂತೆ ಆಯಿತು. ಓಡಿಬಂದು ಮೊಮ್ಮಗನನ್ನು ತಬ್ಬಿದ ಆಕೆ ಎಲ್ಲಿ ಹೋಗಿದ್ದೆ ನೀನು? ಎಂದು ಆಕ್ಷೇಪಿಸಿದಳು. ತಪ್ಪಾಯ್ತು ಅಜ್ಜಿ! ನನಗೆ ಈಗ ನಿಜವಾಗಿಯೂ ನನ್ನ ತಪ್ಪಿನ ಅರಿವಾಗಿದೆ…. ಹರೆಯದ ಹುಮ್ಮಸ್ಸಿನಲ್ಲಿ ಯಾರು ನನ್ನವರು, ನನಗಾಗಿ ಮಿಡಿಯುವವರು ತಮ್ಮ ಬದುಕಿನ ಸುಖ ಸಂತೋಷಗಳನ್ನು ನನ್ನಲ್ಲಿ ಕಾಣುವರು ಎಂಬುದರ ಅರಿವಿಲ್ಲದೆ ಸ್ನೇಹಿತರು, ಮೋಜು ಮಸ್ತಿಗಳಲ್ಲಿ ಮುಳುಗಿ ನಿಮ್ಮನ್ನು ಕಡೆಗಣಿಸಿಬಿಟ್ಟಿದ್ದೆ.ಇಂದು ನೀನು ನನ್ನನ್ನು ಮನೆಯಿಂದ ಹೊರಗೆ ಹಾಕದೆ ಹೋಗಿದ್ದರೆ ನನಗೆ ನನ್ನ ತಪ್ಪಿನ ಅರಿವಾಗುತ್ತಿರಲಿಲ್ಲ. ಯಾರು ನನ್ನವರು ಎಂಬುದರ ಅರಿವು ನನಗೀಗ ಆಗಿದೆ. ಇನ್ನು ಮುಂದೆ ಯಾವತ್ತೂ ಇಂತಹ ತಪ್ಪು ಮಾಡುವುದಿಲ್ಲ. ನನ್ನನ್ನು ನೀವಿಬ್ಬರೂ ಕ್ಷಮಿಸಿಬಿಡಿ ಎಂದು ಅವರಿಬ್ಬರ ಕಾಲಿನ ಮೇಲೆ ಬಿದ್ದನು. ನಿಧಾನವಾಗಿ ಆತನನ್ನು ಮೇಲಕ್ಕೆತ್ತಿದ ಅಜ್ಜಿ “ಕಂದ ಬದುಕಿನಲ್ಲಿ ನಮಗೆ ಸ್ವಾತಂತ್ರ್ಯ ಇರುವಷ್ಟೇ ಜವಾಬ್ದಾರಿಗಳು ಇರುತ್ತವೆ. ಬಹಳಷ್ಟು ಬಾರಿ ಸ್ವಾತಂತ್ರ್ಯವನ್ನು ಅನುಭವಿಸುವುದಕ್ಕಿಂತ ಹೆಚ್ಚು ಜವಾಬ್ದಾರಿಯನ್ನು ನಾವು ಹೊರಬೇಕಾಗುತ್ತದೆ. ಸ್ನೇಹಿತರ ಒಡನಾಟ ತಪ್ಪಲ್ಲ ಆದರೆ ಎಲ್ಲವೂ ಇತಿಮಿತಿಯಲ್ಲಿ ಇರಬೇಕು. ಈ ಪಾಠವನ್ನು ನಿನಗೆ ಕಲಿಸಲೆಂದೇ ನಾನು ನಿನ್ನನ್ನು ಮನೆಯಿಂದ ಹೊರಗೆ ಹಾಕಿದ್ದು. ಆದರೆ ಇದರಿಂದ ನಿನಗೆ ಎಷ್ಟು ದುಃಖವಾಯಿತೋ ಅದರ ಹತ್ತು ಪಟ್ಟು ಹೆಚ್ಚು ದುಃಖ ನನಗಾಗಿದೆ ಎಂದರೆ ನೀನು ನಂಬಲೇಬೇಕು. ನೀನಿಲ್ಲದೆ ನಮಗೆ ಬದುಕೇ ಇಲ್ಲ, ನಿನ್ನ ಸಂತಸದಲ್ಲಿ ನಮ್ಮ ಬದುಕಿನ ಸಾರ್ಥಕತೆ ಅಡಗಿದೆ” ಎಂದು ಅಜ್ಜಿ ಹೇಳಿದಾಗ ಹೌದೆಂಬಂತೆ ಅಜ್ಜ ತಲೆ ಆಡಿಸಿದರು. ಅಜ್ಜಿಯ ತೊಡೆಯ ಮೇಲೆ ತಲೆ ಆನಿಸಿದ ಮೊಮ್ಮಗ“ನಾನು ಕೂಡ ಇನ್ನು ಮುಂದೆ ಸರಿಯಾದ ಹಾದಿಯಲ್ಲಿ ಸಾಗುತ್ತೇನೆ ಏನಾದರೂ ತಪ್ಪು ಮಾಡಿದರೆ ಕಿವಿ ಹಿಂಡಿ ಬುದ್ದಿ ಕಲಿಸಲು ನೀವಿಬ್ಬರು ಹಿಂಜರಿಯಬೇಡಿ” ಎಂದು ಹೇಳಿದಾಗ ಎಲ್ಲರೂ ಜೋರಾಗಿ ನಕ್ಕು ಆ ನಗುವಿನ ಮಂಜುಳ ದನಿ ಮನೆಯೆಲ್ಲ ತುಂಬಿತು. ಎಷ್ಟು ಸುಂದರವಾದ ಕಥೆಯಲ್ಲವೇ ಸ್ನೇಹಿತರೆ! ಎಷ್ಟೋ ಬಾರಿ ಬದುಕಿನ ನಾಗಾಲೋಟದಲ್ಲಿ ಹರೆಯದ ಹುಮ್ಮಸ್ಸಿನಲ್ಲಿ ನಾವು ನಮ್ಮವರನ್ನು ಕಡೆಗಣಿಸಿ ಮುಂದೆ ಸಾಗುತ್ತೇವೆ. ನಮ್ಮ ಬದುಕಿನಲ್ಲಿ ಕೊನೆಯವರೆಗೂ ನಮ್ಮೊಂದಿಗೆ ಉಳಿಯುವುದು ನಮ್ಮ ಹೆತ್ತವರು, ಒಡಹುಟ್ಟಿದವರು, ಸಂಗಾತಿ ಮತ್ತು ಮಕ್ಕಳು ಮಾತ್ರ. ಉಳಿದೆಲ್ಲರಿಗೂ ಗೌರವವನ್ನು ನೀಡುವ ನಾವು ಕುಟುಂಬದ ಸದಸ್ಯರನ್ನು ಮಾತ್ರ ಅಸಡ್ಡೆಯಿಂದ ಕಾಣುತ್ತೇವೆ. ಮುಂಜಾನೆ ಮನೆಯನ್ನು ಬಿಟ್ಟು ಅದೆಷ್ಟೆ ಊರು ಸುತ್ತಿ ನಮ್ಮ ಕೆಲಸ ಕಾರ್ಯಗಳನ್ನು ಮುಗಿಸಿ ಅಂತಿಮವಾಗಿ ಮತ್ತೆ ನಾವು ಬರುವುದು ನಮ್ಮ ಮನೆಗೆಯೇ. ನಮ್ಮ ಕಷ್ಟ ಸುಖಗಳನ್ನು ಹಂಚಿಕೊಳ್ಳುವುದು ನಮ್ಮ ಕುಟುಂಬದ ಸದಸ್ಯರೊಂದಿಗೆ ಮಾತ್ರ. ತಡವಾಗಿಯಾದರೂ ಸರಿ ನಮ್ಮವರು ನಮಗೆ ಬೇಕೇ ಬೇಕು ಎಂಬುದನ್ನು ಅರಿತು ನಾವು ಅವರಿಗೆ ಬೇಕಾಗುವಂತೆ ವರ್ತಿಸುವ, ಅವರೊಂದಿಗೆ ಸೌಹಾರ್ದಯುತವಾಗಿ ಬಾಳುವ ಎಂದು ಆಶಿಸುವ ವೀಣಾ ಹೇಮಂತ್ ಗೌಡ ಪಾಟೀಲ್

“ಬದುಕಿನ ಬಣ್ಣಗಳ ಅರಿವು” ವೀಣಾ ಹೇಮಂತ್‌ ಗೌಡ ಪಾಟೀಲ್ Read Post »

ಅಂಕಣ ಸಂಗಾತಿ, ವೀಣಾ-ವಾಣಿ

“ಬಾಲ್ಯ ವಿವಾಹ ನಿಷೇಧದ ಕಾನೂನು ಮತ್ತು ರುಕ್ಮಾಬಾಯಿ ಎಂಬ ದಿಟ್ಟ ಮಹಿಳೆ”ಹೇಮಂತ್‌ ಗೌಡ ಪಾಟೀಲ್

ಕಾವ್ಯ ಸಂಗಾತಿ ಹೇಮಂತ್‌ ಗೌಡ ಪಾಟೀಲ್ “ಬಾಲ್ಯ ವಿವಾಹ ನಿಷೇಧದ ಕಾನೂನು ಮತ್ತು ರುಕ್ಮಾಬಾಯಿ ಎಂಬ ದಿಟ್ಟ ಮಹಿಳೆ” ಕಾಲ್ಪನಿಕ ಚಿತ್ರ(ಗೂಗಲ್ ಕೃಪೆ) ಅದು 1887ರ ಸಮಯ. ಮುಂಬೈಯ ಹೈಕೋರ್ಟ್ ಆ ಮಹಿಳೆಗೆ ಎರಡು ಆಯ್ಕೆಗಳನ್ನು ನೀಡಿತು. ಬಾಲ್ಯದಲ್ಲಿ ನಿನ್ನನ್ನು ವಿವಾಹವಾದ ವ್ಯಕ್ತಿಯೊಂದಿಗೆ ಹೋಗಿ ಬದುಕನ್ನು ಕಟ್ಟಿಕೋ, ಇಲ್ಲವೇ ಜೈಲಿಗೆ ಹೋಗು ಎಂದು. ಆಕೆ ಜೈಲಿಗೆ ಹೋಗಲು ತಯಾರಾದಳು.  ಆಕೆಯ ಉತ್ತರ ಎಲ್ಲರಿಗೂ ದಿಗ್ಬ್ರಾಂತಿಯನ್ನು ಉಂಟು ಮಾಡಿತು. ಕೇವಲ ಭಾರತ ದೇಶವನ್ನು ಮಾತ್ರವಲ್ಲದೆ ಅಂದಿನ ಭಾರತ ದೇಶವನ್ನು ಆಳುತ್ತಿದ್ದ ಇಂಗ್ಲೆಂಡ್ ದೇಶದವರೆಗೆ ಈ ವಿಷಯದ ಕುರಿತ ಚರ್ಚೆ ಮುಂದುವರೆದು ಕಾನೂನಿನ ಕ್ರಮದಲ್ಲಿ ಬದಲಾವಣೆಯನ್ನು ಕೈಗೊಂಡು ನಂತರದ ಕೋಟ್ಯಾಂತರ ಹೆಣ್ಣುಮಕ್ಕಳ ಪಾಲಿಗೆ ವರದಾನವಾಯಿತು. ಕೇವಲ ಒಬ್ಬ ಹೆಣ್ಣುಮಗಳ ದಿಟ್ಟ ನಿರ್ಧಾರ ಒಂದು ಇಡೀ ಬ್ರಿಟೀಷ್ ಸಾಮ್ರಾಜ್ಯವನ್ನು ಮೊಳಕಾಲೂರಿ ನಿಲ್ಲುವಂತೆ ಮಾಡಿತು. ಆ ಹೆಣ್ಣು ಮಗಳೇ ರುಕ್ಮಾಬಾಯಿ.  1864 ರಲ್ಲಿ ಮುಂಬೈಯಲ್ಲಿ ಜಯಂತಿ ಬಾಯಿ ಎಂಬ ಹೆಣ್ಣು ಮಗಳನ್ನು ಕೇವಲ 14 ವರ್ಷ ವಯಸ್ಸಿನಲ್ಲಿಯೇ ಮದುವೆ ಮಾಡಿಕೊಡಲಾಯಿತು. ತನ್ನ 15ನೇ ವಯಸ್ಸಿಗೆ ಆಕೆ ಹೆಣ್ಣು ಮಗುವೊಂದನ್ನು ಹಡೆದಳು ಹಾಗೂ 17ನೇ ವಯಸ್ಸಿಗೆ ಗಂಡನನ್ನು ಕಳೆದುಕೊಂಡು ವಿಧವೆಯಾದಳು. ಮುಂದೆ ತನ್ನ ಮಗಳು ಎಂಟು ವರ್ಷದವಳಿದ್ದಾಗ ಆಕೆಯ ತಾಯಿ ಡಾ. ಸಖಾರಾಮ್ ಅರ್ಜುನ್ ಎಂಬ ವೃತ್ತಿಯಿಂದ ತಜ್ಞ ವೈದ್ಯ ಹಾಗೂ ಪ್ರವೃತ್ತಿಯಿಂದ ಸಮಾಜ ಸುಧಾರಕರಾಗಿದ್ದ ವ್ಯಕ್ತಿಯನ್ನು ವಿವಾಹವಾದಳು. ತನ್ನ ಕಾಲದ ಪುರುಷ ಸಮಾಜದ ಯೋಚನೆಗಳಿಗಿಂತ ವಿಭಿನ್ನವಾಗಿ ಯೋಚಿಸುತ್ತಿದ್ದ ಡಾ. ಸಖಾರಾಮ್ ಹೆಣ್ಣು ಮಕ್ಕಳು ಸುಶಿಕ್ಷಿತರಾಗಬೇಕು ಎಂದು ಬಯಸುತ್ತಿದ್ದರು. ತನ್ನ ಮನೆಯ ತುಂಬಾ ಪುಸ್ತಕಗಳನ್ನು ಜೋಡಿಸಿದ್ದ ಆತ ರುಕ್ಮ ಬಾಯಿಗೆ ಓದಿನಲ್ಲಿ ಆಸಕ್ತಿಯನ್ನು ವಹಿಸಲು ಪ್ರೋತ್ಸಾಹಿಸಿದ.ಸಮಾಜ ಸುಧಾರಕನಾದರೂ ಕೂಡ ಆತನಿಗೂ ಕೂಡ ತನ್ನದೇ ಆದ ಕೆಲವು ಸಾಮಾಜಿಕ ಮಿತಿಗಳು ಇದ್ದವು.  ಅಂತೆಯೇ ರುಕುಮಾ ಬಾಯಿ 11 ವರ್ಷದವಳಾದಾಗ ಆಕೆಗೆ 19ರ ಹರಯದ ದಾದಾ ಜೀ ಭಿಕಾಜಿ ಎಂಬ ವ್ಯಕ್ತಿಯೊಡನೆ ಜಯಂತಿ ಬಾಯಿಯ ತಂದೆ ಸನಾತನ ಕಾಲದಿಂದಲೂ ಆಚರಿಸುತ್ತಿದ್ದ ರೀತಿಯಲ್ಲಿ ಎಲ್ಲ ಭಾರತೀಯ ಸಂಪ್ರದಾಯಗಳನ್ನು ಪಾಲಿಸಿ ಮದುವೆ ಮಾಡಿದರು. ಪುಟ್ಟ ಬಾಲಕಿಯಾದ ಆಕೆಗೆ ಯಾವುದೇ ರೀತಿಯ ಆಯ್ಕೆಗಳಾಗಲಿ, ಮದುವೆ ಮಾಡಿಕೊಳ್ಳಲು ಒಲ್ಲೆ  ಎಂದು ಹೇಳುವ ಧೈರ್ಯವಾಗಲಿ ಇರಲಿಲ್ಲ. ಮೌನ ಒಪ್ಪಿಗೆ ಆಕೆಯದಾಗಿತ್ತು.ಅಂದಿನ ಸಮಾಜದ ನಿಯಮಾವಳಿಗಳ ಪ್ರಸಾರ ಮದುವೆ ಆದ ನಂತರವೂ ಕೂಡ ಋತುಮತಿಯಾಗುವವರೆಗೆ ತನ್ನ ತವರು ಮನೆಯಲ್ಲಿಯೇ ಉಳಿಯಬೇಕಾದ ಕಾರಣ ಆಕೆ ತನ್ನ ಶಿಕ್ಷಣವನ್ನು ರಹಸ್ಯವಾಗಿಯೇ ಮುಂದುವರಿಸಿದಳುಆಕೆಯನ್ನು ಮದುವೆಯಾದ ವ್ಯಕ್ತಿ ಅಂದಿನ ಸಾಮಾಜಿಕ ನೀತಿ ನಿಯಮಾವಳಿಗೆ ಬದ್ಧನಾಗಿದ್ದ. ತನ್ನ ಶಿಕ್ಷಣವನ್ನು ಪೂರೈಸಿದ ರುಕ್ಮಭಾಯಿ ಅತ್ಯಂತ ಜಾಣ ಹಾಗೂ ಸಂಸ್ಕಾರವಂತ ಹೆಣ್ಣುಮಗಳಾಗಿ ಪರಿವರ್ತಿತಳಾಗಿದ್ದರು. ಆಕೆಯಲ್ಲಿ ಆಧುನಿಕ ವಿಚಾರಧಾರೆಗಳ ಪ್ರಭಾವದಿಂದ ತನ್ನದೇ ಆದ ವೈಯುಕ್ತಿಕ ಅಭಿಪ್ರಾಯಗಳು ಹರಳುಗಟ್ಟಿದ್ದವು. ಅಂದಿನ ಕಾಲದ ಇತರ ಸಮಾಜ ಸುಧಾರಕರೊಂದಿಗಿನ ಭೇಟಿ, ಅಭಿಪ್ರಾಯ, ವಿಚಾರ ವಿನಿಮಯಗಳು, ಚರ್ಚೆಗಳು, ಭಾಷಣಗಳು, ಉಪನ್ಯಾಸಗಳು ಆಕೆಯ ಮೇಲೆ ಪರಿಣಾಮವನ್ನು ಬೀರಿದ್ದವು. ಆಕೆಯ ಪತಿ ದಾದಾಜಿ ತನ್ನ ಸೋಮಾರಿತನದ ಕಾರಣದಿಂದ ಶಾಲೆಯಿಂದ ಹೊರ ಹಾಕಲ್ಪಟ್ಟಿದ್ದ ಹಾಗೂ ಸಾಲದ ಸುಳಿಯಲ್ಲಿ ಸಿಲುಕಿದ್ದ. ದುಶ್ಚಟಗಳಿಗೆ ದಾಸನಾದ ಆತನ ಚಿಕ್ಕಪ್ಪನ ಕುಮ್ಮಕ್ಕು ಕೂಡ ಆತನಿಗಿತ್ತು.ತನ್ನೆಲ್ಲ ಆರ್ಥಿಕ ತೊಂದರೆಗಳನ್ನು ನಿವಾರಿಸಲು ತನ್ನ ಪತ್ನಿಯ ತವರು ಮನೆ ಆತನ ಪಾಲಿಗೆ ಅಲ್ಲಾವುದ್ದೀನನ ದೀಪವಾಗಲಿ ಎಂಬುದು ಆತನ ಬಯಕೆಯಾಗಿತ್ತು.  1884 ರಲ್ಲಿ 20 ವರ್ಷದ ರುಕುಮಾಬಾಯಿಯನ್ನು ಆತ ತನ್ನೊಂದಿಗೆ ಬಂದು ವಾಸಿಸಲು ಕೇಳಿಕೊಂಡ… ಆದರೆ ಆತನ ಕೆಟ್ಟ ಚಟಗಳ ಕುರಿತು ಅರಿವಿದ್ದ ಆಕೆ ಆತನ ಕೋರಿಕೆಯನ್ನು ಸಾರಾಸಗಟಾಗಿ ನಿರಾಕರಿಸಿದಳು.ಆಕೆಯನ್ನು ಪತ್ನಿಯಾಗಿ ಮನೆ ತುಂಬಿಸಿಕೊಂಡು ತನ್ನೆಲ್ಲ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬೇಕು ಎಂದು ಆಶಿಸಿದ್ದ ದಾದಾಜಿ ಶತಾಯಗತಾಯ ಆಕೆಯನ್ನು ಹೊಂದಲೇಬೇಕೆಂಬ ಹಟದಿಂದ ನ್ಯಾಯಾಲಯದ ಮೊರೆ ಹೊಕ್ಕ. 19ನೇ ಶತಮಾನದಲ್ಲಿ ಸಾರ್ವಜನಿಕವಾಗಿ ಅತ್ಯಂತ ಚರ್ಚೆಗೆ ಒಳಗಾದ ಕಾನೂನು ಹೋರಾಟ ದಾದಾಜಿ ಮತ್ತು ರುಕ್ಮಬಾಯಿ ಅವರದಾಗಿತ್ತು. ದಾದಾ ಜೀ ದಾಂಪತ್ಯದ ಹಕ್ಕುಗಳ ಮರುಸ್ಥಾಪನೆಯ ಪ್ರಾಸ್ಟಿಟ್ಯೂಷನ್ ಆಫ್ ಕಾಂಜುಗಲ್ ರೈಟ್ಸ್ ದಾವೆಯನ್ನು ಪತ್ನಿಯ ಮೇಲೆ ಹೂಡಿದ್ದ. ಈ ಹಕ್ಕಿನ ಪ್ರಕಾರ ಪತ್ನಿ ಆತನ ಸೊತ್ತಾಗಿದ್ದು ಕಾನೂನು ಆಕೆ ತನ್ನ ಪತಿಯ ಜೊತೆಯಲ್ಲಿ ಬಾಳುವೆ ಮಾಡಬೇಕು ಎಂದು ಸೂಚಿಸಿತು. ಇದಕ್ಕೆ ರುಕ್ಮಾ ಬಾಯಿಯ ಉತ್ತರ ಹೀಗಿತ್ತು… ಅರಿಯದ ಅಬೋಧ ವಯಸ್ಸಿನಲ್ಲಿ ತನಗೆ ಮದುವೆ ಮಾಡಿಕೊಡಲಾಗಿದ್ದು ತಾನು ಅಸಹಾಯಕಳಾಗಿದ್ದೆ. ಮದುವೆ ಎಂದರೆ ಏನು ಎಂಬುದೇ ತನಗೆ ಗೊತ್ತಿರಲಿಲ್ಲ. ಅದೂ ಅಲ್ಲದೆ ಹೆಣ್ಣುಮಕ್ಕಳನ್ನು ಹೊಲ ಮನೆ,ದನ ಕರು ಒಡವೆಗಳ ರೀತಿಯಲ್ಲಿ ಆಸ್ತಿಯಂತೆ ಭಾವಿಸಬಾರದು ಎಂದು ಆಕೆ ವಾದ ಹೂಡಿದಳು. ಹೆಣ್ಣು ಮಕ್ಕಳು ಪುರುಷರಷ್ಟೇ ಸರಿ ಸಮಾನವಾಗಿ ಬದುಕುವ ಕಣ್ಣು ಹೊಂದಿದ್ದಾರೆ ಅವರನ್ನು ತಮ್ಮ ಹಕ್ಕಿನ ಸೊತ್ತಾಗಿ ಬೇರೆಯವರು ಭಾವಿಸಬಾರದು ಎಂದು ಆಕೆ ನ್ಯಾಯಾಲಯವನ್ನು ಒತ್ತಾಯಿಸಿದಳು. ಇದಕ್ಕೂ ಮುನ್ನ ಈ ರೀತಿ ಹೆಣ್ಣು ಮಕ್ಕಳ ಹಕ್ಕಿನ ಕುರಿತಾಗಿ ನ್ಯಾಯಾಲಯದ ಮುಂದೆ ಯಾರೂ ಹಕ್ಕೊತ್ತಾಯವನ್ನು ಮಂಡಿಸಿರಲಿಲ್ಲ. 1885ರಲ್ಲಿ ಜಸ್ಟಿಸ್ ರಾಬರ್ಟ್ ಪಿನ್ಹೇ ಆಕೆಯ ಅಭಿಪ್ರಾಯಕ್ಕೆ ಮನ್ನಣೆ ನೀಡಿ ತಾವು ಪಾಲಿಸುತ್ತಿರುವ ಬ್ರಿಟಿಷ್ ಕಾನೂನು ಬಾಲ್ಯ ವಿವಾಹ ಮಾಡಲ್ಪಟ್ಟ  ಅಬೋಧ ರುಕ್ಮಭಾಯಿಗೆ ಸಂಬಂಧ ಪಡುವುದಿಲ್ಲ ಎಂದು ತೀರ್ಪು ನೀಡಿತು. ಸಂಪ್ರದಾಯವಾದಿ ಭಾರತೀಯರು ಸಿಡಿದೆದ್ದರು. ಹಿಂದೂ ರೀತಿ ರಿವಾಜುಗಳನ್ನು ಪ್ರಶ್ನಿಸುವ ನ್ಯಾಯಾಲಯದ ವಿರುದ್ಧ ಸನಾತನವಾದಿಗಳು ದನಿಯೆತ್ತಿದರು.ಉಕ್ಕಿನ ಮನುಷ್ಯ ಎಂದೇ ಭಾರತೀಯ ಸ್ವತಂತ್ರ ಇತಿಹಾಸದಲ್ಲಿ ಹೆಸರಾದ ಬಾಡೋಲಿಯ ಸರದಾರ ಬಾಲಗಂಗಾಧರನಾಥ ತಿಲಕ್ ಅವರು ರುಕ್ಮಾಭಾಯಿಯ ಆಂಗ್ಲ ಶಿಕ್ಷಣದ ಪರಿಣಾಮವೇ ಆಕೆಯ ಈ ತೀರ್ಮಾನಕ್ಕೆ ಕಾರಣ ಎಂದು ಹೇಳಿದರು   ಭಾರತದ ಹಿಂದುತ್ವ ಅಪಾಯದಲ್ಲಿದೆ ಎಂದು ಸಾರ್ವಜನಿಕರು ಕೂಗು ಹಾಕಿದರು . 1886 ರಲ್ಲಿ ಮತ್ತೆ ಮರುಪರಿಶೀಲನೆಗೆ ಒಳಪಟ್ಟ ತೀರ್ಪನ್ನು ಹೆಚ್ಚುವರಿ ನ್ಯಾಯಾಲಯದ ಅಂದಿನ ಜಡ್ಜ್ ಆಗಿದ್ದ ಜಸ್ಟಿಸ್ ಫರಾನ್ ಅವರು ರುಕ್ಮಬಾಯಿ ಮರಳಿ ತನ್ನ ಪತಿಯ ಮನೆಗೆ ಹೋಗಬೇಕು ಇಲ್ಲವೇ ಆರು ತಿಂಗಳ ಕಾಲ ಕಾರಾಗ್ರಹ ವಾಸವನ್ನು ಅನುಭವಿಸುವ ನಿಟ್ಟಿನಲ್ಲಿ ಜೈಲಿಗೆ ಹೋಗಬೇಕು ಎಂದು ಆದೇಶವನ್ನು ಹೊರಡಿಸಿದರು.  ಇದೀಗ ರುಕ್ಮಭಾಯಿತಾನು ಜೈಲಿಗೆ ಹೋದರೂ ಪರವಾಗಿಲ್ಲ, ಆದರೆ ತನ್ನ ಒಪ್ಪಿಗೆ ಇಲ್ಲದೆ ಮಾಡಿದ ವಿವಾಹವನ್ನು ಹಾಗೂ ವಲ್ಲದ ಗಂಡನೊಂದಿಗಿನ ಬದುಕನ್ನು ನಡೆಸಲಾರೆ ಎಂಬ ಹೇಳಿಕೆ ನೀಡಿದ್ದು ಐತಿಹಾಸಿಕ ಸಮರ್ಥನೆಯಾಯಿತು. ಆಕೆಯ ಮಾತುಗಳು, ಕೇಸಿನ ವಿವರಗಳು ಸಮುದ್ರಗಳನ್ನು ದಾಟಿ ಬ್ರಿಟಿಷ್ ವರ್ತಮಾನ ಪತ್ರಿಕೆಗಳಲ್ಲಿ ಪ್ರಕಟವಾದವು. ಇಂಗ್ಲೆಂಡಿನ ಪ್ರಸಿದ್ಧ ಮಹಿಳಾ ನಿಯತಕಾಲಿಕವೊಂದು ರುಕ್ಮಾಬಾಯಿಯ ನಿಲುವನ್ನು ಸಮರ್ಥಿಸಿತು, ಮಾತ್ರವಲ್ಲದೇ ಪ್ರಸಿದ್ಧ ತತ್ವಜ್ಞಾನಿಯಾಗಿದ್ದ ಮ್ಯಾಕ್ಸ್ ಮುಲ್ಲರ್ ರುಕ್ಮಾಭಾಯಿಯ ಆಂಗ್ಲ ಶಿಕ್ಷಣವು ಆಕೆಗೆ ತನ್ನ ಆಯ್ಕೆಗಳ ಕುರಿತು ಸ್ಪಷ್ಟ ನಿಲುವನ್ನು ಹೊಂದಲು ಮತ್ತು ನಿರ್ಣಯಗಳನ್ನು ಕೈಗೊಳ್ಳಲು ಅತ್ಯುತ್ತಮ ನ್ಯಾಯಾಧೀಶನಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿಕೆ ನೀಡಿದರು. ಇದೇ ಸಮಯದಲ್ಲಿ ರುಕ್ಮಾ ಬಾಯಿ ಅನಾಮಿಕವಾಗಿದಿ ಹಿಂದೂ ಲೇಡಿ ಎಂಬ ಹೆಸರಿನಲ್ಲಿ ಟೈಮ್ಸ್ ಆಫ್ ಇಂಡಿಯಾ ನಿಯತಕಾಲಿಕಕ್ಕೆ ಬಾಲ್ಯ ವಿವಾಹವನ್ನು ವಿರೋಧಿಸುವ ನಿಟ್ಟಿನಲ್ಲಿ ಲೇಖನಗಳನ್ನು ಬರೆಯಲು ಆರಂಭಿಸಿದ್ದಳು. ತನ್ನ 14ನೇ ಹುಟ್ಟುಹಬ್ಬಕ್ಕೆ ಮುನ್ನವೇ ಮಕ್ಕಳನ್ನು ಪಡೆಯಲು ಹೆಣ್ಣು ಮಕ್ಕಳನ್ನು ಒತ್ತಾಯಿಸುವ ಸಂಪ್ರದಾಯವನ್ನು ವಿರೋಧಿಸಿ ಆಕೆ ಬರೆದಳು. ಕನಸುಗಳ ಸಾವಿನ ಕುರಿತು ಹೆಣ್ಣು ಮಕ್ಕಳ ಅಂತಃಸತ್ವವನ್ನು ಹೀರಿ ಎಸೆಯುವ, ಅವರ ಬಾಲ್ಯವನ್ನು ಕಸಿಯುವ ಕುರಿತು ಆಕೆ ಬರೆದ ಲೇಖನಗಳು ಬುದ್ಧಿವಂತರ, ವಿಚಾರ ಜೀವಿಗಳ ಮನಸ್ಸನ್ನು ತಾಕಿದವು. ಬಾಲ್ಯವಿವಾಹದಂತಹ ಕೆಟ್ಟ ಸಂಪ್ರದಾಯವು ನನ್ನ ಜೀವನದ ಎಲ್ಲಾ ಸಂತೋಷಗಳನ್ನು ಕಸಿದುಕೊಂಡಿತ್ತು ಎಂದು ಆಕೆ ಬರೆದಳು. ನನ್ನ ಬದುಕಿನಲ್ಲಿ ವಿವಾಹವು ನನ್ನ ವಿದ್ಯೆ ಮತ್ತು ಮಾನಸಿಕ ಬೆಳವಣಿಗೆಗೆ ಅಡ್ಡ ಬಂದಿತು ಎಂದು ಹೇಳಿದ ಆಕೆ ಅಂದು ಬ್ರಿಟನ್ ಸಾಮ್ರಾಜ್ಯವನ್ನು ಆಳುತ್ತಿದ್ದ ರಾಣಿ ವಿಕ್ಟೋರಿಯಾಗೆ ಪತ್ರ ಬರೆದು ತನಗೆ ನ್ಯಾಯ ದೊರಕಿಸಿಕೊಡಲು ಕೇಳಿಕೊಂಡಳು. ಹಿಂದೂ ಕಾನೂನಿನಲ್ಲಿ ವೈವಾಹಿಕ ವಯಸ್ಸನ್ನು ಹೆಣ್ಣು ಮಕ್ಕಳಿಗೆ 15 ವರ್ಷ ಮೇಲ್ಪಟ್ಟು ಹಾಗೂ ಗಂಡು ಮಕ್ಕಳಿಗೆ 20 ವರ್ಷ ಮೇಲ್ಪಟ್ಟ ವಯಸ್ಕರಿಗೆ ಮಾಡುವ ಮೂಲಕ ಬಾಲ್ಯ ವಿವಾಹವನ್ನು ನಿಷೇಧಿಸಲು ಕೋರಿಕೊಂಡಳು.ಬಾಲ್ಯ ವಿವಾಹವನ್ನು ನಿಷೇಧಿಸುವ ಮೂಲಕ ಹಿಂದೂ ಯುವತಿಯರಿಗೆ ಮಹದುಪಕಾರ ಮಾಡಿ ಎಂದು ಕೇಳಿಕೊಂಡಳು. 1888 ರಲ್ಲಿ ಅಂತಿಮವಾಗಿ ಒಂದು ಒಪ್ಪಂದಕ್ಕೆ ಬರಲಾಯಿತು.2 ಸಾವಿರ ರೂ ಹಣವನ್ನು ದಾದಾಜಿಗೆ ನೀಡುವ ಮೂಲಕ ಮದುವೆಯನ್ನು ರದ್ದುಗೊಳಿಸುವ ಹಾಗೂ ರುಕ್ಮಾಭಾಯಿಯ ಮೇಲೆ ಹೊರಿಸಿರುವ ಎಲ್ಲ ಮೊಕದ್ದಮೆಗಳನ್ನು ಹಿಂತೆಗೆದುಕೊಳ್ಳುವ ಒಪ್ಪಂದವಾಗಿತ್ತದು. ಅಂತಿಮವಾಗಿ ಆಕೆ ಪಂಜರದಿಂದ ಹೊರ ಬಿಟ್ಟ ಪಕ್ಷಿಯಾದಳು.ಇಲ್ಲಿಗೆ ಆಕೆಯ ಕಥೆ ಮುಗಿಯಲಿಲ್ಲ.  ಇಂಗ್ಲೆಂಡಿನ ಡಾಕ್ಟರ್ ಎಡಿತ್ ಪೆಚ್ಚಿ ಎಂಬ ತಜ್ಞ ವೈದ್ಯರ ಸಹಾಯ ಮತ್ತು ಸಹಕಾರದಿಂದ 1894 ರಲ್ಲಿ ಆಕೆ ವೈದ್ಯಕೀಯ ಪದವಿ ಪಡೆಯಲು ಇಂಗ್ಲೆಂಡಿಗೆ ತೆರಳಿದಳು. ಮಹಿಳೆಯರಿಗಾಗಿಯೇ ಇದ್ದ ಲಂಡನ್ ಸ್ಕೂಲ್ ಆಫ್ ಮೆಡಿಸಿನ್ ನಲ್ಲಿ ಆಕೆ ಓದಿ ವೈದ್ಯಕೀಯ ಪದವಿಯನ್ನು ಪಡೆದಳು. ಮುಂದೆ ಮರಳಿ ಭಾರತಕ್ಕೆ ಬಂದ ಆಕೆ ವೈದ್ಯಕೀಯ ಚಿಕಿತ್ಸಕಳಾಗಿ ಕರ್ತವ್ಯ ನಿರ್ವಹಿಸುವ ಮಹಿಳಾ ವೈದ್ಯೆ ಎಂದು ರಾಷ್ಟ್ರದ ಇತಿಹಾಸದಲ್ಲಿ ದಾಖಲಾದಳು.  ಮುಂದಿನ 35 ವರ್ಷಗಳ ಕಾಲ ರುಕ್ಮಭಾಯಿ ಸೂರತ್ ಮತ್ತು ರಾಜಕೋಟ್ಗಳಲ್ಲಿ ಮುಖ್ಯ ವೈದ್ಯಕೀಯ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಎಲ್ಲ ಜಾತಿ, ವರ್ಗಗಳ ಜನರ ಚಿಕಿತ್ಸೆಯನ್ನು ಕೈಗೊಂಡ ಆಕೆ ಸಾಕಷ್ಟು ಹೆಣ್ಣು ಮಕ್ಕಳಿಗೆ ನರ್ಸಿಂಗ್ ಕ್ಷೇತ್ರದಲ್ಲಿ ತರಬೇತಿ ನೀಡಿದಳು. ಮತ್ತೆ ನೂರಾರು ಹೆಣ್ಣು ಮಕ್ಕಳಿಗೆ ಶುಶ್ರೂಷೆ ಮತ್ತು ಸ್ವಚ್ಛತೆಯ ಕುರಿತು ತರಬೇತಿ ನೀಡಿ ಅವರನ್ನು ಆಯಕಟ್ಟಿನ ಸ್ಥಳಗಳಲ್ಲಿ ಕಾರ್ಯನಿರ್ವಹಿಸಲು ಪ್ರೋತ್ಸಾಹಿಸಿದರು. ಮಾರಣಾಂತಿಕ ಕಾಯಿಲೆಗಳು ದೇಶದಲ್ಲಿ ತಾಂಡವವಾಡುತ್ತಿದ್ದಾಗಲೂ ಆಕೆ ಸಾವಿಗೆ ಅಂಜದೆ, ರೋಗಕ್ಕೆ ಹಿಂಜರಿದು ಧೈರ್ಯಗೆಡದೆ ತಾನೇ ಮುಂಚೂಣಿಯಲ್ಲಿ ನಿಂತು ರೋಗಿಗಳನ್ನು ತಪಾಸಿಸಿ ಸೂಕ್ತ ಚಿಕಿತ್ಸೆ ನೀಡಿ ಗುಣಮುಖರನ್ನಾಗಿಸಿದಳು. ಹೋರಾಟ ಆಕೆಯ ಬದುಕಿನ ಅವಿಭಾಜ್ಯ ಅಂಗವಾಗಿದ್ದು ತನ್ನ ವೃತ್ತಿ ಜೀವನದಿಂದ ನಿವೃತ್ತಿಯಾದ ನಂತರವೂ ಕೂಡ ಆಕೆ ಪರ್ದಾ ಪದ್ಧತಿಯನ್ನು ವಿರೋಧಿಸಿ ಹೆಣ್ಣು ಮಕ್ಕಳಲ್ಲಿ ಜಾಗೃತಿಯನ್ನು ಮೂಡಿಸಿದರು. ಭಾರತೀಯ ಸಭ್ಯತೆಯ ಹೆಸರಿನಲ್ಲಿ ಹೆಣ್ಣು ಮಕ್ಕಳನ್ನು ಬಲವಂತದಿಂದ ಮನೆಯಲ್ಲಿ ಕೂಡಿ ಹಾಕುವುದನ್ನು ವಿರೋಧಿಸಿ ಆಕೆ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವಂತಹ ಶಾಲೆಯನ್ನು ತೆರೆಯಲು ತನ್ನ ಮನೆಯನ್ನೇ ಬಿಟ್ಟುಕೊಟ್ಟಳು.  ಅಂದು ತನ್ನ ಇಪ್ಪತ್ತನೇ ವಯಸ್ಸಿನಲ್ಲಿ ರುಕ್ಮಬಾಯಿ ತೆಗೆದುಕೊಂಡ ಒಂದು ದಿಟ್ಟ ನಿರ್ಧಾರದ ಪರಿಣಾಮವಾಗಿ ತಲೆ ತಲೆಮಾರುಗಳ ಹೆಣ್ಣು ಮಕ್ಕಳು ನೆಮ್ಮದಿಯ ಬಾಲ್ಯವನ್ನು ಕಳೆಯಲು ಸಾಧ್ಯವಾಗಿದೆ. 1888 ರ ರುಕುಮಾಬಾಯಿ ಮೊಕದ್ದಮೆಯ ಐತಿಹಾಸಿಕ ತೀರ್ಪಿನ ಮೂರು ವರ್ಷಗಳ ನಂತರ 1891ರಲ್ಲಿ ಬ್ರಿಟಿಷ್ ಸರ್ಕಾರವು ‘ ದ ಏಜ್ ಆಫ್ ಕನ್ಸೆಂಟ್ ಆಕ್ಟ್’ ಅನ್ನು ಜಾರಿ ಮಾಡಿತು. ನಿರ್ದಿಷ್ಟ ವಿಷಯಗಳ ಕುರಿತು ತೀರ್ಮಾನವನ್ನು ಕೈಗೊಳ್ಳುವ ಹಕ್ಕನ್ನು ನೀಡಲಾಯಿತು. ವೈವಾಹಿಕ ವಯಸ್ಸಿನ ಮಿತಿಯನ್ನು ಹೆಚ್ಚಿಸಲಾಯಿತು. ರುಕ್ಮಾಭಾಯಿಯ ಮೊಕದ್ದಮೆಯು ಮೊಟ್ಟಮೊದಲ ಬಾಲ್ಯ ವಿವಾಹ ವಿರುದ್ಧದ ಪ್ರಕರಣ ಎಂದು ದಾಖಲಾಯಿತು, ಆದರೆ ಅದುವೇ ಕೊನೆಯ ಪ್ರಕರಣವಾಗಬೇಕಿತ್ತು… ದುರ್ದೈವವಶಾತ್ ಇಂದಿಗೂ ಕೂಡ ಬಾಲ್ಯ ವಿವಾಹ ತೆರೆ ಮರೆಯಲ್ಲಿ ನಡೆಯುತ್ತಲೇ ಇವೆ ಹಾಗೂ ಅದರ ಪರಿಣಾಮವಾಗಿ ಹೆಣ್ಣು ಮಕ್ಕಳು ಅಪ್ರಾಪ್ತ ವಯಸ್ಸಿನಲ್ಲಿ ಅನಿರೀಕ್ಷಿತ ಗರ್ಭ ಧರಿಸುವಿಕೆ, ಹೆರಿಗೆಯಲ್ಲಿ ಸಾವು, ತಾನೇ ಒಂದು ಮಗುವಾಗಿ ತನ್ನಲ್ಲಿ ಆ ಸಾಮರ್ಥ್ಯ ಇಲ್ಲದೆ ಇದ್ದಾಗಲೂ ಕೂಡ ತನ್ನದೇ ಮಗುವನ್ನು ಹೆರುವ, ಹೊರುವ ಜವಾಬ್ದಾರಿಯನ್ನು ನಿರ್ವಹಿಸುತ್ತಲೇ

“ಬಾಲ್ಯ ವಿವಾಹ ನಿಷೇಧದ ಕಾನೂನು ಮತ್ತು ರುಕ್ಮಾಬಾಯಿ ಎಂಬ ದಿಟ್ಟ ಮಹಿಳೆ”ಹೇಮಂತ್‌ ಗೌಡ ಪಾಟೀಲ್ Read Post »

ಅಂಕಣ ಸಂಗಾತಿ, ವೀಣಾ-ವಾಣಿ

“ಓ ಆರ್ ಎಸ್ ಎಂಬ ಜೀವರಕ್ಷಕ.. ಒಂದು ಕಾನೂನು ಹೋರಾಟ” ವೀಣಾ ಹೇಮಂತ್‌ ಗೌಡ‌ ಪಾಟೀಲ್

“ಓ ಆರ್ ಎಸ್ ಎಂಬ ಜೀವರಕ್ಷಕ.. ಒಂದು ಕಾನೂನು ಹೋರಾಟ” ವೀಣಾ ಹೇಮಂತ್‌ ಗೌಡ‌ ಪಾಟೀಲ್

“ಓ ಆರ್ ಎಸ್ ಎಂಬ ಜೀವರಕ್ಷಕ.. ಒಂದು ಕಾನೂನು ಹೋರಾಟ” ವೀಣಾ ಹೇಮಂತ್‌ ಗೌಡ‌ ಪಾಟೀಲ್ Read Post »

ಅಂಕಣ ಸಂಗಾತಿ, ವೀಣಾ-ವಾಣಿ

“ಸಹಕಾರ ಸಪ್ತಾಹ…ಒಂದು ವಿಶ್ಲೇಷಣೆ”ವಿಶೇಷಬರಹ, ವೀಣಾ ಹೇಮಂತಗೌಡ ಪಾಟೀಲ್ 

“ಸಹಕಾರ ಸಪ್ತಾಹ…ಒಂದು ವಿಶ್ಲೇಷಣೆ”ವಿಶೇಷಬರಹ, ವೀಣಾ ಹೇಮಂತಗೌಡ ಪಾಟೀಲ್ 
ಹಾಲು ಒಕ್ಕೂಟ, ಸಹಕಾರಿ ಶಿಕ್ಷಣ ಸಂಸ್ಥೆಗಳು ಮುಂತಾದ ಅತಿ ದೊಡ್ಡ ಸಂಸ್ಥೆಗಳು ಇಂದಿಗೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಲು ಕಾರಣ ಅವುಗಳ ಹಿಂದಿರುವ ಸಹಕಾರ ತತ್ವದ ನಿಖರ ಪರಿಪಾಲನೆ. ಸಹಕಾರದಲ್ಲಿ ಸಂಘಟನೆ ಮತ್ತು ಸಂಘಟನೆಯಲ್ಲಿ ಸಹಕಾರ ತತ್ವಗಳು ಮಿಳಿತಗೊಂಡಿವೆ.

“ಸಹಕಾರ ಸಪ್ತಾಹ…ಒಂದು ವಿಶ್ಲೇಷಣೆ”ವಿಶೇಷಬರಹ, ವೀಣಾ ಹೇಮಂತಗೌಡ ಪಾಟೀಲ್  Read Post »

ವೀಣಾ-ವಾಣಿ

“ಯಾರಿಗೆ ಹೇಳೋಣ ನಮ್ಮ ಪ್ರಾಬ್ಲಮ್ಮು… ಶಿಕ್ಷಕರ ಅಳಲು” ವೀಣಾ ಹೇಮಂತ್‌ ಗೌಡ ಪಾಟೀಲ್

“ಯಾರಿಗೆ ಹೇಳೋಣ ನಮ್ಮ ಪ್ರಾಬ್ಲಮ್ಮು… ಶಿಕ್ಷಕರ ಅಳಲು” ವೀಣಾ ಹೇಮಂತ್‌ ಗೌಡ ಪಾಟೀಲ್
ಅಚ್ಚ ಕನ್ನಡದಾಗ್ ಪಾಠ ಮಾಡಿದ್ರ… ಕನ್ನಡ ಸಾಲಿ ಮಾಸ್ತರ ಇವ್ರು ಇವಕ್ಕ ಎಲ್ಲಿ ಬರಬೇಕ ಇಂಗ್ಲೀಷು ಅಂತಾರ… ಹೆಂಗ್ ಹೇಳಿದ್ರ ಇವರಿಗೆ ಸಮಾಧಾನ ಆಕ್ಕೇತ್ರಿ ಇವರಿಗೆ.

“ಯಾರಿಗೆ ಹೇಳೋಣ ನಮ್ಮ ಪ್ರಾಬ್ಲಮ್ಮು… ಶಿಕ್ಷಕರ ಅಳಲು” ವೀಣಾ ಹೇಮಂತ್‌ ಗೌಡ ಪಾಟೀಲ್ Read Post »

ಅಂಕಣ ಸಂಗಾತಿ, ವೀಣಾ-ವಾಣಿ

“ಜೆನ್ ಜೀ ಮಕ್ಕಳು ಮತ್ತು ವಿಪರೀತ ಪಾಲಕತ್ವ”ವಿಶೇಷ ಲೇಖನ ವೀಣಾ ಹೇಮಂತ್‌ ಗೌಡ ಪಾಟೀಲ್

“ಜೆನ್ ಜೀ ಮಕ್ಕಳು ಮತ್ತು ವಿಪರೀತ ಪಾಲಕತ್ವ”ವಿಶೇಷ ಲೇಖನ ವೀಣಾ ಹೇಮಂತ್‌ ಗೌಡ ಪಾಟೀಲ್

“ಜೆನ್ ಜೀ ಮಕ್ಕಳು ಮತ್ತು ವಿಪರೀತ ಪಾಲಕತ್ವ”ವಿಶೇಷ ಲೇಖನ ವೀಣಾ ಹೇಮಂತ್‌ ಗೌಡ ಪಾಟೀಲ್ Read Post »

ಅಂಕಣ ಸಂಗಾತಿ, ವೀಣಾ-ವಾಣಿ

ಇದನ್ನು ನೀವು ನಂಬಲೇಬೇಕು. ಸ್ಟೀವ್ ಜಾಬ್ ತನ್ನದೇ ಆಪಲ್ ಕಂಪನಿಯಿಂದ ಹೊರ ಬಂದ..

ದೈನಂದಿನ ಸಂಗಾತಿ

ವೀಣಾ ವಾಣಿ

ವೀಣಾ‌ ಹೇಮಂತ್‌ ಗೌಡ ಪಾಟೀಲ್

ಸ್ಟೀವ್ಸ್‌ ಜಾಬ್‌ ಇತಿಹಾಸ ಸೃಷ್ಠಿಸಿದವನು

Read Post »

ಅಂಕಣ ಸಂಗಾತಿ, ವೀಣಾ-ವಾಣಿ

ದೈನಂದಿನ ಸಂಗಾತಿ

ವೀಣಾ ವಾಣಿ

ವೀಣಾ‌ ಹೇಮಂತ್‌ ಗೌಡ ಪಾಟೀಲ್

ಖಲೀಲ್ ಗಿಬ್ರಾನರ ದೃಷ್ಟಿಯಲ್ಲಿ ಪಾಲಕರ ಮನೆ
ಇರುವಾಗ ಗೌರವ, ಆದರ, ಪ್ರೀತಿ ತೋರದೆ ಸತ್ತ ಮೇಲೆ ನೊಂದು ಹಾಡಾಡಿಕೊಂಡು ಅತ್ತು ಕರೆಯುವುದರಲ್ಲಿ ಯಾವುದೇ ಅರ್ಥವಿಲ್ಲ. ಅಲ್ಲವೇ ಸ್ನೇಹಿತರೆ?

Read Post »

You cannot copy content of this page

Scroll to Top