ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಸಾವಿಲ್ಲದ ಶರಣರು ಮಾಲಿಕೆ-“ಶ್ರೇಷ್ಠ ನೀರಾವರಿ ತಜ್ಞ ಎಸ್ ಜಿ ಬಾಳೆಕುಂದ್ರಿ”ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ

ಶರಣರ ಸಂಗಾತಿ ಸಾವಿಲ್ಲದ ಶರಣರು ಮಾಲಿಕೆ- ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ “ಶ್ರೇಷ್ಠ ನೀರಾವರಿ ತಜ್ಞ ಎಸ್ ಜಿ ಬಾಳೆಕುಂದ್ರಿ” ದೇಶವುಕಂಡ ಅಪರೂಪದ ಶ್ರೇಷ್ಠ ನೀರಾವರಿ ತಜ್ಞ ಕರ್ನಾಟಕಕ್ಕೆ ನೀರಿನ ಹಕ್ಕಿನ ಹಕ್ಕಿನ. ಬಗ್ಗೆ ನಿರಂತರ ಹೋರಾಟ ಮಾಡುತ್ತಲೆ ನ್ಯಾಯ ಒದಗಿಸುತ್ತಿದ್ದ ಉತ್ತರ ಕರ್ನಾಟಕದ ಬೆಳಗಾವಿ ಮೂಲದ ಲಿಂಗೈಕ್ಯ ಶ್ರೀ ಎಸ್ ಜಿ ಬಾಳೆಕುಂದ್ರಿ ಅವರು. ಶಿವಪ್ಪ ಗುರುಸಿದ್ದಪ್ಪ ಬಾಳೆಕುಂದ್ರಿ ಎಸ್. ಜಿ. ಬಾಳೆಕುಂದ್ರಿಯವರು ಕರ್ನಾಟಕದ ಶ್ರೇಷ್ಠ ನೀರಾವರಿ ತಜ್ಞ ಇಂಜನಿಯರರು. ತಮ್ಮ ಬುದ್ದಿಮತ್ತೆ,ದಕ್ಷತೆ, ಪರಿಶ್ರಮ ಹಾಗು ಪ್ರಾಮಾಣಿಕ ಸೇವೆ ಇವುಗಳಿಗಾಗಿ ಬಾಳೆಕುಂದ್ರಿಯವರು ಕರ್ನಾಟಕದಲ್ಲಿ ಎರಡನೆಯ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದಾರೆ  ಕರ್ನಾಟಕ ಕಂಡ ಅತ್ಯಂತ ಶ್ರೇಷ್ಠ ನೀರಾವರಿ ತಜ್ಞರಲ್ಲಿ ನೆನಪಿಗೆ ಬರುವ ಒಂದೇ ಒಂದು ಹೆಸರೆಂದರೆ ಸರ್ ಎಂ ವಿಶ್ವೇಶ್ವರಯ್ಯನವರದು. ಆದರೆ ಅವರಷ್ಟೇ ಸಮರ್ಥರಾದ ಇಂಜಿನಿಯರೊಬ್ಬರು ಉತ್ತರ ಕರ್ನಾಟಕದಲ್ಲಿ ಕನ್ನಡಿಗರಿಗಾಗಿ ನೀರಿನ ಹೋರಾಟ ಮಾಡಿದ್ದರು ಎಂಬುದು ಅನೇಕರಿಗೆ ಗೊತ್ತಿಲ್ಲ. ಅವರೇ ಎಸ್ ಜಿ ಬಾಳೆಕುಂದ್ರಿ.  ಉತ್ತರ ಕರ್ನಾಟಕದ ಮಹಾದಾಯಿಯ ಬಗ್ಗೆ ಕೂಡ ಆಲೋಚನೆ ಅಧ್ಯಯನ ಮಾಡಿದ್ದರು. ಜನನ ಶಿವಪ್ಪ ಬಾಳೆಕುಂದ್ರಿಯವರು 1922  ಮೇ 5 ರಂದು ಬೆಳಗಾವಿಯಲ್ಲಿ ಜನಿಸಿದರು. ಇವರ ತಾಯಿ ಲಕ್ಷ್ಮೀದೇವಿ; ತಂದೆ ಗುರುಸಿದ್ದಪ್ಪ. ಶಿಕ್ಷಣ ಪ್ರಾಥಮಿಕ ವಿದ್ಯಾಭ್ಯಾಸವನ್ನು ಹುಬ್ಬಳ್ಳಿಯ ಅಕ್ಕಿಹೊಂಡದ ಮುನಿಸಿಪಾಲಿಟಿ ಕನ್ನಡ ಶಾಲೆಯಲ್ಲಿ ಮುಗಿಸಿ, ಕೊಪ್ಪೀಕರ ಪ್ರೌಢಶಾಲೆಯಲ್ಲಿ ಎರಡು ವರ್ಷ ಕಲಿತು, ತರವಾಯ ಬೆಳಗಾವಿಯ ಸರದಾರ ಹೈಸ್ಕೂಲ್ ಸೇರಿದರು.  ಲಿಂಗರಾಜ ಕಾಲೇಜಿನಿಂದ ಇಂಟರ ಸಾಯನ್ಸ್ ವಿಷಯದ ಮೇಲೆ ಅಧ್ಯಯನ ನಡೆಸಿ ತೇರ್ಗಡೆಯಾದರು. ಆ ಬಳಿಕ ಪುಣೆಯಲ್ಲಿದ್ದ ಸರಕಾರಿ ಇಂಜನಿಯರಿಂಗ್ ಕಾಲೇಜಿಗೆ ಪ್ರವೇಶ ಪಡೆದು 1944 ರಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದರು. 1947 ರಲ್ಲಿ ಎಡಿನ್ಬರೊ ವಿಶ್ವವಿದ್ಯಾಲಯದಿಂದ ಪ್ರಥಮ ಶ್ರೇಣಿಯಲ್ಲಿ ಪದವಿ ಸಂಪಾದಿಸಿಕೊಂಡರು. ವೃತ್ತಿ ಮತ್ತು ಉದ್ಯೋಗ 1945 ರಲ್ಲಿ ಆಗಿನ ಮುಂಬಯಿ ರಾಜ್ಯದ ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಇಂಜನಿಯರ ಆದರು. ಮುಂಬಯಿ ಸರಕಾರ ಇವರನ್ನು ನೀರಾವರಿ ವಿಷಯದಲ್ಲಿ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಎಡಿನ್ಬರೊ ವಿಶ್ವವಿದ್ಯಾಲಯಕ್ಕೆ ಕಳುಹಿಸಿತು. ಅನಂತರ ಹಾಲಂಡ್, ಸ್ವಿಡನ್, ಮತ್ತು ಇತರ ಕೆಲವು ಬಾಲ್ಟಿಕ್ ರಾಜ್ಯಗಳನ್ನು ಸಂದರ್ಶಿಸಿದರು. ವಿದೇಶದಿಂದ ಹಿಂದಿರುಗಿದ ನಂತರ ಪುಣೆ ವಿಭಾಗದ ನೀರಾವರಿ ಕಾಲುವೆಗಳ ಕೆಲಸವನ್ನುನಿರ್ವಹಿಸಿದರು. ನಂತರ ನಾಸಿಕ ಬಳಿ ನಿರ್ಮಾಣವಾಗುತ್ತಿದ್ದ ಗಂಗಾ ಆಣೆಕಟ್ಟಿನ ಉಸ್ತುವಾರಿ ಮಾಡಿದರು. ಆ ಬಳಿಕ ಧೂಲಿಯಾ ಆಣೆಕಟ್ಟು ಮತ್ತು ಅಹ್ಮದ ನಗರ ವಿಭಾಗದ ಉಸ್ತುವಾರಿ ನಿರ್ವಹಿಸಿದರು. 1956 ರಲ್ಲಿ ರಾಜ್ಯಗಳ ಪುನರ್ವಿಂಗಡಣೆಯ ನಂತರ ಕರ್ನಾಟಕಕ್ಕೆ ಬಂದ ಬಾಳೆಕುಂದ್ರಿಯವರು ಕೆಲಕಾಲ ಉಪಪ್ರಧಾನ ಇಂಜನಿಯರ ಆಗಿ ಸೇವೆ ಸಲ್ಲಿಸಿದರು. ಆ ನಂತರ ಇವರ ಸೇವೆಯನ್ನು ಕೇಂದ್ರ ಸರಕಾರಕ್ಕೆ ಎರವಲು ನೀಡಲಾಯಿತು. ಅಲ್ಲಿ ಇವರು ಭಾರತ ಸರಕಾರದ ಪ್ಲ್ಯಾನಿಂಗ್ ಕಮಿಶನ್ “ನೀರಾವರಿ ಮತ್ತು ಚೈತನ್ಯ” ತಂಡದ ಸಹಾಯಕರಾಗಿಕಾರ್ಯನಿರ್ವಹಿಸಿದರು. ಈ ಸಮಯದಲ್ಲಿ ನದಿ ನೀರಿನ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಆಗುತ್ತಿದ್ದ ಅನ್ಯಾಯವನ್ನು ಬಾಳೆಕುಂದ್ರಿಯವರು ಗಮನಿಸಿ ಕರ್ನಾಟಕದ ಲೋಕಸಭಾ ಸದಸ್ಯರ ಗಮನಕ್ಕೆ ತಂದರು. ಇದರಿಂದ ಪ್ರಭಾವಿತರಾದ ಕರ್ನಾಟಕದ ಮುಖ್ಯ ಮಂತ್ರಿ ಶ್ರೀ ಬಿ.ಡಿ.ಜತ್ತಿಯವರು ಬಾಳೆಕುಂದ್ರಿಯವರನ್ನು ರಾಜ್ಯಕ್ಕೆ ಮರಳಿ ಕರೆಯಿಸಿಕೊಂಡರು. 1959 ರಲ್ಲಿ ಮರಳಿ ರಾಜ್ಯಕ್ಕೆ ಬಂದ ನಂತರ ಅಂತರರಾಜ್ಯ ನದಿ ವಿವಾದ ವಿಷಯದ ಹೊಣೆ ಹೊತ್ತುಕೊಂಡ ಬಾಳೆಕುಂದ್ರಿಯವರು ಕರ್ನಾಟಕದ ನ್ಯಾಯಬದ್ಧ ಹಕ್ಕಿಗಾಗಿ ಸಮರ್ಥವಾಗಿ ಹೋರಾಡಿದರು. 1964 ರಲ್ಲಿ ಮುಖ್ಯ ಇಂಜನಿಯರ ಆಗಿ ಪದೋನ್ನತಿ ಪಡೆದು, ಬೃಹತ್ ನೀರಾವರಿ ಯೋಜನೆಗಳ ಸಹಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. 1967 ರಿಂದ 1972 ರ ವರೆಗೆ ನೀರಾವರಿ ಇಲಾಖೆಯ ಉತ್ತರ ವಿಭಾಗದ ಮುಖ್ಯ ಇಂಜನಿಯರ ಎಂದು ಸೇವೆ ಸಲ್ಲಿಸಿದರು. ಈ ಅವಧಿಯಲ್ಲಿ ಬಾಳೆಕುಂದ್ರಿಯವರು ಘಟಪ್ರಭಾ, ಮಲಪ್ರಭಾ ಹಾಗು ಕೃಷ್ಣಾ ನೀರಾವರಿ ಯೋಜನೆ ಹಾಗು ನಿರ್ಮಾಣಗಳಲ್ಲಿ ಮಹತ್ವದ ಪಾತ್ರ ವಹಿಸಿದರು. 1974 ರಿಂದ 1976 ರ ವರೆಗೆ ಮಲಪ್ರಭಾ ಮತ್ತು ಘಟಪ್ರಭಾ ಯೋಜನೆಗಳ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮತ್ತು ಆಡಳಿತಾಧಿಕಾರಿಯಾಗಿ ಹಾಗು 1976 ರಿಂದ 1977ರ ವರೆಗೆ ನೀರಾವರಿ ಇಲಾಖೆಯ ವಿಶೇಷ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ, 1977 ಮೇದಲ್ಲಿ, ಅಂದರೆ ತಮ್ಮ 55 ನೆಯ ವಯಸ್ಸಿನಲ್ಲಿ ಸರಕಾರಿ ಸೇವೆಯಿಂದ ನಿವೃತ್ತರಾದರು. ನಿವೃತ್ತಿಯ ನಂತರವೂ, ತುಂಗಭದ್ರಾ ಯೋಜನೆಯ ಮಾರ್ಪಾಡಿನ ತಜ್ಞ ಸಲಹಾ ಸಮಿತಿಯ ಅಧ್ಯಕ್ಷ, ಬಾಗಲಕೋಟೆ ಪುನರ್ನಿರ್ಮಾಣ ಮತ್ತು ಪುನರ್ವಸತಿ ಪರಿಶೀಲನಾ ಸಮಿತಿ ಅಧ್ಯಕ್ಷ, ಬೃಹತ್ ನೀರಾವರಿ ಯೋಜನೆಗಳ ನಿಯಂತ್ರಣ ಮಂಡಳದ ಅಧ್ಯಕ್ಷ ಕರ್ನಾಟಕದಲ್ಲಿ ತಾಂತ್ರಿಕ ವಿಶ್ವವಿದ್ಯಾಲಯ ಪ್ರಾರಂಭಿಸುವ ಕುರಿತು ನೇಮಿಸಿದ ಏಕಸದಸ್ಯ ಸಮಿತಿ ಅಧ್ಯಕ್ಷ ಹೀಗೆ ವಿವಿಧ ಸಾಮರ್ಥ್ಯಗಳಲ್ಲಿ ಕರ್ನಾಟಕಕ್ಕೆ ಸೇವೆಸಲ್ಲಿಸಿದರು. (ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು 1-4-1998 ರಲ್ಲಿ ಸಾಕಾರಗೊಂಡಿತು). ದುರಂತ ಮರಣ ದಿನಾಂಕ 4-1-1993 ರಂದು ಸಂಜೆ ಬಾಳೆಕುಂದ್ರಿಯವರು ವಾಯುವಿಹಾರಕ್ಕೆ ಹೋದ ಸಮಯದಲ್ಲಿ ಬೇಜವಾಬ್ದಾರಿ ಆಟೊ ಚಾಲಕನೊಬ್ಬ ಡಿಕ್ಕಿ ಹೊಡೆದ ಪರಿಣಾಮವಾಗಿ ಪ್ರಜ್ಞಾಹೀನ ಅವಸ್ಥೆಯಲ್ಲಿ ಅಸ್ಪತ್ರೆಗೆ ಸೇರಿಸಲ್ಪಟ್ಟರು. 1993 ಜನೆವರಿ 8 ರಂದು ಅದೇ ಅವಸ್ಥೆಯಲ್ಲಿಯೆ ಬಾಳೆಕುಂದ್ರಿಯವರು ಕೊನೆಯುಸಿರೆಳೆದರು. ಬಡ ವಿದ್ಯಾರ್ಥಿಗಳಿಗಾಗಿ ಶಿವಕಮಲ ಟ್ರಸ್ಟ್ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ, ವಿಶೇಷತಃ ತಾಂತ್ರಿಕ ಶಿಕ್ಷಣದಲ್ಲಿ ಧನಸಹಾಯ ಮಾಡಲು ಒಂದು ಟ್ರಸ್ಟ ಅನ್ನು ರೂಪಿಸುವದು ಶ್ರೀ ಬಾಳೆಕುಂದ್ರಿ ಹಾಗು ಶ್ರೀಮತಿ ಬಾಳೆಕುಂದ್ರಿಯವರ ಕನಸಾಗಿತ್ತು. ಶ್ರೀಬಾಳೆಕುಂದ್ರಿಯವರ ನಿಧನದ ನಂತರ ಶ್ರೀಮತಿ ಕಮಲಾ ಬಾಳೆಕುಂದ್ರಿಯವರು “ ಶಿವಕಮಲ ಟ್ರಸ್ಟ್ ” ಸ್ಥಾಪಿಸುವ ಮೂಲಕ ತಮ್ಮೀರ್ವರ ಕನಸನ್ನು ನನಸಾಗಿಸಿದರು. ಗೌರವ ಸನ್ಮಾನ ತಮ್ಮ ಪ್ರತಿಭೆ, ದಕ್ಷತೆ ಹಾಗು ಸಚ್ಚಾರಿತ್ರ್ಯದಿಂದ ಬಾಳೆಕುಂದ್ರಿಯವರು ಕರ್ನಾಟಕದ ನೀರಾವರಿ ಯೋಜನೆಗಳಿಗೆ ಮಹತ್ವಪೂರ್ಣ ಕಾಣಿಕೆ ನೀಡಿದ್ದಾರೆ ಹಾಗು ಕರ್ನಾಟಕ ನೀರಾವರಿ ಇಲಾಖೆಯಲ್ಲಿ ಎರಡನೆಯ ವಿಶ್ವೇಶ್ವರಯ್ಯ ಎಂದು ಹೆಸರಾಗಿದ್ದಾರೆ. ಮಲಪ್ರಭಾಎಡದಂಡೆಕಾಲುವೆಗೆಬಾಳೆಕುಂದ್ರಿಕಾಲುವೆಎಂದುಹೆಸರಿಟ್ಟುಸರಕಾರಇವರನ್ನುಗೌರವಿಸಿದೆ. 1987 ರಲ್ಲಿ ಕರ್ನಾಟಕ ಸರಕಾರದ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಯಿತು. 1998 ರಲ್ಲಿ ಬೆಂಗಳೂರಿನ ಇನ್ಸ್ಟಿಟ್ಯೂಶನ್ ಆಫ್ ಇಂಜನಿಯರ್ಸ್ ಸಂಸ್ಥೆಯ ಎದುರಿನ ವೃತ್ತಕ್ಕೆ ಬಾಳೆಕುಂದಿ ವೃತ್ತ ಎಂದು ನಾಮಕರಣ ಮಾಡಲಾಯಿತು. 1999ರಲ್ಲಿಘಟಪ್ರಭಾಜಲಾಶಯದಲ್ಲಿಬಾಳೆಕುಂದ್ರಿಯವರಪ್ರತಿಮೆಯನ್ನುಅನಾವರಣ ಮಾಡಲಾಯಿತು. 2004 ರಲ್ಲಿ ಧಾರವಾಡದ ಇನ್ಸ್ಟಿಟ್ಯೂಶನ್ ಆಫ್ ಇಂಜನಿಯರ್ಸ್ ಸಂಸ್ಥೆಯ ಮುಂದಿನ ರಸ್ತೆಗೆ ಎಸ್.ಜಿ.ಬಾಳೆಕುಂದ್ರಿ ಮಾರ್ಗ ಎಂದು ಹೆಸರಿಡಲಾಯಿತು. ಕರ್ನಾಟಕಸರಕಾರವು 2001 ರಿಂದ ಪ್ರತಿ ವರ್ಷನೀರಾವರಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಇಲಾಖೆಯ ಇಂಜನಿಯರರಿಗೆ ಬಾಳೆಕುಂದ್ರಿಯವರ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತಿದೆ. 5 ಮೇ , 2006 ರಂದು ಅಂದರೆ ಬಾಳೆಕುಂದ್ರಿಯವರ 85 ನೆಯ ಜನ್ಮದಿನದಂದು ಕೃಷ್ಣಾ ಮೇಲ್ದಂಡೆ ಯೋಜನೆಯ ಆಲಮಟ್ಟಿ ಆಣೆಕಟ್ಟಿನ ವೃತ್ತದಲ್ಲಿ ಅವರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು. ಘಟಪ್ರಭಾ, ಮಲಪ್ರಭಾ ಹಾಗು ಕೃಷ್ಣಾ ನೀರಾವರಿ ಯೋಜನೆ ಹಾಗು ಆಣೆಕಟ್ಟು ನಿರ್ಮಾಣದಲ್ಲಿ ಶ್ರೀ ಎಸ್ ಜಿ ಬಾಳೆಕುಂದ್ರಿ ಅವರ ಪಾತ್ರ ಬಹಳ ದೊಡ್ದದು. ಸಮಗ್ರಹಸಿರುಕ್ರಾಂತಿಯಹರಿಕಾರನೀರಾವರಿಯತಜ್ಞಸಾಮಾಜಿಕಚಿಂತಕಎಸ್ಜಿಬಾಳೆಕುಂದ್ರಿ ಅವರಿಗೆ ನಮ್ಮ ನೂರು ನಮನಗಳು. ________________________ *ಡಾ ಶಶಿಕಾಂತ ಪಟ್ಟಣ ರಾಮದುರ್ಗ 

ಸಾವಿಲ್ಲದ ಶರಣರು ಮಾಲಿಕೆ-“ಶ್ರೇಷ್ಠ ನೀರಾವರಿ ತಜ್ಞ ಎಸ್ ಜಿ ಬಾಳೆಕುಂದ್ರಿ”ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಸಾವಿಲ್ಲದ ಶರಣರು ಮಾಲಿಕೆ-ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಕರ್ನಾಟಕ ಗಾಂಧಿ ಶ್ರೀ ಹರ್ಡೇಕರ್ ಮಂಜಪ್ಪನವರು, ಡಾ ಶಶಿಕಾಂತ್ ಪಟ್ಟಣ ರಾಮದುರ್ಗ

ಶರಣ ಸಂಗಾತಿ ಸಾವಿಲ್ಲದ ಶರಣರು ಮಾಲಿಕೆ- ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಕರ್ನಾಟಕ ಗಾಂಧಿ ಶ್ರೀ ಹರ್ಡೇಕರ್ ಮಂಜಪ್ಪನವರು, ಡಾ ಶಶಿಕಾಂತ್ ಪಟ್ಟಣ ರಾಮದುರ್ಗ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಬಸವ ಭಕ್ತ ಲಿಂಗಾಯತ ಧರ್ಮದ ಪ್ರಚಾರಕ ಚಿಂತಕ ಸಾಹಿತಿ ಹರ್ಡೇಕರ ಮಂಜಪ್ಪನವರ ಕೊಡುಗೆ ಕರ್ನಾಟಕಕ್ಕೆ ಅಪಾರವಾಗಿದೆ. ಹರ್ಡೇಕರ ಮಂಜಪ್ಪನವರು ಕರ್ನಾಟಕದ ಸಾಮಾಜಿಕ, ಪತ್ರಿಕೋದ್ಯಮ ಶೈಕ್ಷಣಿಕ, ಸಾಹಿತ್ಯ ಕ್ಷೇತ್ರಗಳನ್ನೊಳಗೊಂಡಂತೆ ಅನೇಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಸಮಾಜಸೇವಕರು. ಆಮೂಲಕ ಕರ್ನಾಟಕದ ಗಾಂಧಿ ಎಂದು ಹೆಸರಾಗಿದ್ದವರು. ಕೌಟುಂಬಿಕ ಹಿನ್ನಲೆ ಮತ್ತು ಶಿಕ್ಷಣ 1886ರ ಫೆಬ್ರುವರಿ 18 ರಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ಬಡ ಕುಟುಂಬ ಒಂದರಲ್ಲಿ ಜನಿಸಿದರು. ಇವರ ಅಣ್ಣನೆ ಇವರ ಪಾಲನೆಯನ್ನು ಮಾಡಿದ್ದಲ್ಲದೆ, ಇವರ ಎಲ್ಲ ಧ್ಯೇಯ ಸಾಧನೆಗಳಿಗೆ ಒತ್ತಾಸೆಯಾಗಿ ನಿಂತನು. ಮಂಜಪ್ಪನವರು ಕಲಿತಿದ್ದು ಕೇವಲ ಕನ್ನಡ, 7ನೆಯ ತರಗತಿಯವರೆಗೆ. ತಮ್ಮ ಸ್ವಂತ ಪ್ರಯತ್ನಗಳಿಂದ ಇಂಗ್ಲಿಷ್ ಕಲಿಯಲು ಪ್ರಯತ್ನಿಸಿದರೂ ಸಹ ಅದರಲ್ಲಿ ಹೆಚ್ಚಿನ ಪ್ರಗತಿಯಾಗಲಿಲ್ಲ. 1903ರಲ್ಲಿ ಮುಲ್ಕಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಬಳಿಕ ಅವರು ಉದ್ಯೋಗಕ್ಕೆ ಹತ್ತಬೇಕಾಯಿತು. ಶಿರಸಿಯಲ್ಲಿ ತಾವು ಕಲಿತ ಶಾಲೆಯಲ್ಲಿಯೆ ಸಹಶಿಕ್ಷಕರಾದರು. 1905 ರಲ್ಲಿ ಪ್ರತ್ಯೇಕ ಶಾಲೆಯ ಏಕೋಪಾಧ್ಯಾಯರಾದರು. ಪತ್ರಿಕಾ ಜೀವನ ಮಂಜಪ್ಪನವರು ಅಂದಿನ ರಾಷ್ಟ್ರೀಯತೆ ವಾತಾವರಣದಿಂದ ಪ್ರಭಾವಿತರಾಗಿ ತಮ್ಮ ಶಿಕ್ಷಕ ವೃತ್ತಿಗೆ ರಾಜೀನಾಮೆ ಕೊಟ್ಟರು. ಇವರ ಅಣ್ಣನೂ ಸಹ ತಮ್ಮ ಕೆಲಸವನ್ನು ಬಿಟ್ಟುಬಿಟ್ಟರು. ಇವರಿಬ್ಬರೂ ಜೊತೆಯಾಗಿ 1906ರ ಸೆಪ್ಟಂಬರದಲ್ಲಿ “ಧನುರ್ಧಾರಿ” ಎನ್ನುವ ಪತ್ರಿಕೆಯನ್ನು ದಾವಣಗೆರೆಯಿಂದ ಪ್ರಕಟಿಸತೊಡಗಿದರು. ಈ ಪತ್ರಿಕೆಯು ಲೋಕಮಾನ್ಯ ತಿಲಕರು ಮಹಾರಾಷ್ಟ್ರದಲ್ಲಿ ಹೊರಡಿಸುತ್ತಿದ್ದ ಮರಾಠಿ ಪತ್ರಿಕೆ ಕೇಸರಿಯ ಲೇಖನಗಳ ಕನ್ನಡ ಅನುವಾದವನ್ನು ಪ್ರಕಟಿಸುತ್ತಿತ್ತು. ಪತ್ರಿಕೆಯ ಉಗ್ರಧೋರಣೆಯನ್ನು ಇಷ್ಟಪಡದ ಮುದ್ರಕರು ಬಾಡಿಗೆ ಹೆಚ್ಚಿಸಿದ್ದರಿಂದ ಪತ್ರಿಕೆ ನಿಂತುಹೋಯಿತು. 1908ರಲ್ಲಿ ಸ್ವಂತ ಮುದ್ರಣಯಂತ್ರ ಹೊಂದಿ ಪತ್ರಿಕೆಯನ್ನು ಮತ್ತೆ ಪ್ರಾರಂಭಿಸಿದರು. ಆದರೆ 1915ರಲ್ಲಿ ಧನುರ್ಧಾರಿ ಮತ್ತೆ ನಿಂತುಹೋಯಿತು. ಸತ್ಯಾಗ್ರಹ ಆಶ್ರಮ ಕಟ್ಟಿದರು _____________________ ಅಥಣಿ ಶ್ರೀ ಮುರುಗೇಂದ್ರ ಶಿವಯೋಗಿಗಳ ಪರಮ ಭಕ್ತರಾದ ಶ್ರೀ ಹರ್ಡೇಕರ ಮಂಜಪ್ಪನವರು ಅವರಿಂದ ಲಿಂಗ ದೀಕ್ಷೆಯನ್ನು ಪಡೆದರು. ಮುಂದೆ ವಿಜಯಪುರದ ಶ್ರೀ ಬಂಥನಾಳ ಸಂಗನಬಸವ ಸ್ವಾಮಿಗಳ ಆಜ್ಞೆಯಂತೆ ಅವರಿಂದ ಜಂಗಮ ದೀಕ್ಷೆ ಪಡೆದರು. ರಾಷ್ಟ್ರೀಯ ನಾಯಕರಿಂದ ಪ್ರಭಾವಿತರಾದ ಮಂಜಪ್ಪನವರು 1910ರಲ್ಲಿ ಬ್ರಹ್ಮಚರ್ಯ ವ್ರತದ ಪ್ರತಿಜ್ಞೆ ಮಾಡಿದರು. 1914ರಲ್ಲಿ ತಿಲಕರನ್ನು ಭೆಟ್ಟಿಯಾದರು. 1920 ಅಗಸ್ಟದಲ್ಲಿ ಖಾದಿವ್ರತ ಕೈಗೊಂಡರು. ಹರಿಹರ ರೇಲ್ವೆ ಸ್ಟೇಶನ್ದಿಂದ 5 ಕಿ.ಮಿ. ದೂರದಲ್ಲಿ, ತುಂಗಭದ್ರಾ ನದಿಯ ದಂಡೆಯ ಮೇಲೆ ಬಾಳಪ್ಪ ಎನ್ನುವ ತಮ್ಮ ಗೆಳೆಯರ ಭೂಮಿಯಲ್ಲಿ ಒಂದು ಆಶ್ರಮ ಕಟ್ಟಿಸಿಕೊಂಡರು. ಅದಕ್ಕೆ “ಸತ್ಯಾಗ್ರಹ ಆಶ್ರಮ” ಎಂದು ಹೆಸರಿಡಲಾಯಿತು. 1923 ರಲ್ಲಿ ಈ ಆಶ್ರಮವನ್ನು ಪ್ರವೇಶಿಸಿದರು. 1924ರಲ್ಲಿ ಸಾಬರಮತಿಗೆ ಹೋಗಿ ಗಾಂಧೀಜಿಯವರ ಜೊತೆಗೆ ಕೆಲ ದಿನ ಇದ್ದರು. 1924ರಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆದಾಗ ಬಸವೇಶ್ವರ ಸೇವಾದಳ ಎನ್ನುವ ಸ್ವಯಂಸೇವಕರ ಸಂಘಟನೆಯನ್ನು ರಚಿಸಿ ಅಧಿವೇಶನದ ಯಶಸ್ಸಿಗೆ ಕಾರಣರಾದರು. ಮಹಾತ್ಮಾ ಗಾಂಧಿಯವರಿಗೆ ಅಥಣಿ ಶ್ರೀ ಮುರುಗೇಂದ್ರ ಶಿವಯೋಗಿಗಳ ಆಜ್ಞೆಯಂತೆ ಶ್ರೀ ಲಕ್ಷ್ಮಣ ರಾವ್ ಬೀಡೆ ಅವರ ಸತ್ಯಾಗ್ರಹಿ ಬಸವೇಶ್ವರ ಎಂಬ ಪುಸ್ತಕವನ್ನು ಮಹಾತ್ಮಾ ಗಾಂಧಿ ಅವರ ಓದಿಗೆ ತಲುಪಿಸಿದರು. ವಿಧಾಯಕ ಯೋಜನೆಗಳು 1925 ರಲ್ಲಿ ಮಂಜಪ್ಪನವರ ತಾಯಿ ತೀರಿಕೊಂಡರು. ಆಬಳಿಕ ಮಂಜಪ್ಪನವರು ಕರ್ನಾಟಕದ ಉದ್ದಗಲಕ್ಕೂ ಹಳ್ಳಿಗಳಲ್ಲಿ ಸಂಚರಿಸಿದರು. ಗ್ರಾಮೋದ್ಧಾರದ ಅನೇಕ ವಿಧಾಯಕ ಕಾರ್ಯಕ್ರಮಗಳನ್ನು ನೆರವೇರಿಸಿದರು. “ರಾಟಿ ಸಂಘ”ಗಳನ್ನು ಸ್ಥಾಪಿಸಿದರು. ನೈತಿಕ ಪ್ರಚಾರ ಮಾಡಿದರು. 1927 ರ ಮೇ 13ರಂದು ಮಂಜಪ್ಪನವರು ಆಲಮಟ್ಟಿಯಲ್ಲಿ ವಿದ್ಯಾಲಯವನ್ನು ಸ್ಥಾಪಿಸಿದರು. ಈ ವಿದ್ಯಾಲಯದಲ್ಲಿ ಕೇವಲ ಔಪಚಾರಿಕ ಶಿಕ್ಷಣವನ್ನಲ್ಲದೆ , ಜೀವನ ಶಿಕ್ಷಣ ಎನ್ನುವ ಹೆಸರಿನಲ್ಲಿ ಕೈಕಸಬುಗಳನ್ನೂ ಸಹ ಕಲಿಸಲಾಗುತ್ತಿತ್ತು. ಗಾಂಧೀಜಿಯವರೂ ಸಹ ಆನಂತರದ ತಮ್ಮ ಶಿಕ್ಷಣಪದ್ಧತಿಯಲ್ಲಿ ಇಂತಹದೆ ನಯಿ ತಾಲೀಮ ಎನ್ನುವ ವಿಧಾನವನ್ನು ಅಳವಡಿಸಿಕೊಂಡರು. 1930 ರಲ್ಲಿ ಮಂಜಪ್ಪನವರು “ಉದ್ಯೋಗ” ಎನ್ನುವ ಮಾಸಪತ್ರಿಕೆಯನ್ನು ಹಾಗು ಮಕ್ಕಳ ಸಾಹಿತ್ಯಮಾಲೆಯನ್ನು ಪ್ರಾರಂಭಿಸಿದರು. 1931ರಲ್ಲಿ ಶರಣಸಂದೇಶ ಎನ್ನುವ ಮಾಸಪತ್ರಿಕೆಯನ್ನು ಹೊರಡಿಸತೊಡಗಿದರು. 1924 ರಲ್ಲಿ ಮತ್ತು 1934 ರಾಲಿ ಗಾಂಧೀಜಿ ಕರ್ನಾಟಕಕ್ಕೆ ಬಂದಾಗ ಮಂಜಪ್ಪನವರು ಅವರ ಜೊತೆಗಿನ ಸುತ್ತಾಟದಲ್ಲಿ ಪಾಲ್ಗೊಂಡರು. 1946ರಲ್ಲಿ ಮಂಜಪ್ಪನವರು ಪ್ರಗತಿ ಗ್ರಂಥಮಾಲೆಯನ್ನು ಪ್ರಾರಂಭಿಸಿದರು. ನಿಧನ 1947 ಜನೆವರಿ 3 ರಂದು ಹರ್ಡೇಕರ ಮಂಜಪ್ಪನವರು ನಿಧನರಾದರು. ಸಾಹಿತ್ಯ ಹರ್ಡೀಕರ ಮಂಜಪ್ಪನವರು ಅನೇಕ ಲೇಖನಗಳನ್ನು ಹಾಗು ಪುಸ್ತಕಗಳನ್ನು ರಚಿಸಿದ್ದಾರೆ. ಅವರ ಕೃತಿಗಳು ಇಂತಿವೆ: ಸ್ವಕರ್ತವ್ಯ ಸಿದ್ಧಾಂತ ಬುದ್ಧಿಯ ಮಾತು ವಾರದ ಮಲ್ಲಪ್ಪನವರ ಚರಿತ್ರೆ ಸ್ತ್ರೀನೀತಿ ಸಂಗ್ರಹ ಆರೋಗ್ಯ ಜೀವನ ಬುದ್ಧ ಚರಿತ್ರೆ ಗಾಂಧೀ ಚರಿತ್ರೆ ರಾಮತೀರ್ಥರ ಉಪನ್ಯಾಸ ಭಾರತೀಯರ ದೇಶಭಕ್ತಿ ಬಸವ ಚರಿತ್ರೆ ಆಧುನಿಕ ಜರ್ಮನಿ ವೀರಶೈವ ಸಮಾಜ ಸುಧಾರಣೆ ಕೇರ ಹಾರ್ಡಿ ಖಾದಿ ಬ್ರಹ್ಮಚರ್ಯ ಅಹಿಂಸೆ ಸತ್ಯಾಗ್ರಹ ಧರ್ಮ ಬಸವ ಬೋಧಾಮೃತ ಸುಬೋಧಸಾರ ಎಚ್ಚತ್ತ ಹಿಂದುಸ್ಥಾನ “ಕಳೆದ ನನ್ನ 30 ವರ್ಷಗಳ ಕಾಣಿಕೆ” 1936 ರಲ್ಲಿ ಪ್ರಕಟವಾದ ಇದು ಹರ್ಡೀಕರ ಮಂಜಪ್ಪನವರ ಆತ್ಮ ಚರಿತ್ರೆಯಾಗಿದೆ ಮತ್ತು ಕನ್ನಡದ ಮೊದಲ ಆತ್ಮ ಚರಿತ್ರೆ ಎಂದು ದಾಖಲೆಯಾಗಿದೆ. ಕರ್ನಾಟಕ ನಾಡು ನುಡಿ ಸಂಸ್ಕೃತಿಗಾಗಿ ಲಿಂಗಾಯತ ಧರ್ಮದ ತತ್ವ ಸಿದ್ಧಾಂತಗಳ ಪ್ರಸಾರಕ್ಕಾಗಿ ಬಸವ ಜಯಂತಿಯನ್ನು ಮೊಟ್ಟ ಮೊದಲು ಆರಂಭಿಸಿದ ಸರಳ ಸಜ್ಜನಿಕೆಯ ಸಾಕಾರ ಮೂರ್ತಿ ಶ್ರೀ ಹರ್ಡೇಕರ್ ಮಂಜಪ್ಪನವರು ನಾಡು ದೇಶ ಕಂಡ ಅಪರೂಪದ ಶಿವಯೋಗ ಸಾಧಕರು. ಇಂತಹ ದಿವ್ಯ ಚೇತನಕ್ಕೆ ನೂರು ನೂರು ನಮನಗಳು. _________________________ ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

ಸಾವಿಲ್ಲದ ಶರಣರು ಮಾಲಿಕೆ-ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಕರ್ನಾಟಕ ಗಾಂಧಿ ಶ್ರೀ ಹರ್ಡೇಕರ್ ಮಂಜಪ್ಪನವರು, ಡಾ ಶಶಿಕಾಂತ್ ಪಟ್ಟಣ ರಾಮದುರ್ಗ Read Post »

ಅಂಕಣ ಸಂಗಾತಿ, ನಿಮ್ಮೊಂದಿಗೆ, ಸಾವಿಲ್ಲದ ಶರಣರು

ಸಾವಿಲ್ಲದ ಶರಣರು ಮಾಲಿಕೆ,”ಅಮೋಘಸಿದ್ಧ ಪರಂಪರೆಯ ಶ್ರೇಷ್ಠ ಸಾಧಕ ಶಿವಯೋಗಿ ಶ್ರೀ ಯಲ್ಲಾಲಿಂಗರು.ಡಾ ಶಶಿಕಾಂತ್‌ ಪಟ್ಟಣ ರಾಮದುರ್ಗ

ಶರಣರ ಸಂಗಾತಿ ಡಾ ಶಶಿಕಾಂತ್‌ ಪಟ್ಟಣ ರಾಮದುರ್ಗ ಸಾವಿಲ್ಲದ ಶರಣರು ಮಾಲಿಕೆ, “ಅಮೋಘಸಿದ್ಧ ಪರಂಪರೆಯ ಶ್ರೇಷ್ಠ ಸಾಧಕ ಶಿವಯೋಗಿ ಶ್ರೀ ಯಲ್ಲಾಲಿಂಗರು. ಕುರುಬರ ಕುಲಗುರು ಒಡೆಯರ ಶಾಖೆಯೊಂದರ ಪ್ರಮುಖ ಸಿದ್ಧ ಅಮೋಘಸಿದ್ಧ ಅಪ್ಪಟ ಜನಪದರ ದೈವ. ಈತನ ಮಟ್ಟಿಗೆ ಜನಪದರ ನಂಬಿಕೆಯೇ ಚರಿತ್ರೆ; ಭಂಡಾರದ ಮಳೆ ಸುರಿದಲ್ಲೇ ಜಾತ್ರೆ. ಕರ್ನಾಟಕ-ಮಹಾರಾಷ್ಟ್ರ ಗಡಿಭಾಗದ ಜನಮಾನಸದಲ್ಲಿ ಕುರುಬರ ಇನ್ನೋರ್ವ ಕುಲಗುರುವಾದ ರೇವಣಸಿದ್ಧರಷ್ಟೇ ಪ್ರಖ್ಯಾತನಾಗಿದ್ದಾನೆ. ಆದರೆ ರೇವಣಸಿದ್ಧನಿಗಿರುವಂತೆ ಈತನ ಕುರಿತು ಶಾಸನಾಧಾರಗಳಾಗಲಿ, ಶಿಷ್ಟಕಾವ್ಯಗಳಾಗಲಿ ಇಲ್ಲ. ಈತನ ಜೀವಂತಿಕೆ ಇರುವುದು ಜನಪದರ ಮೌಖಿಕ ಸಾಮಗ್ರಿಗಳಲ್ಲಿ. ಅಮೋಘಸಿದ್ಧನ ಮೂಲ ನೆಲೆ ವಿಜಯಪುರದಿಂದ ಹತ್ತನ್ನೆರಡು ಕಿಲೋ ಮೀಟರ್ ದೂರದ ಅರಿಕೇರಿ ಸಮೀಪದ ಮುಮ್ಮೆಟಗುಡ್ಡ. ಇವನ ಜಾತ್ರೆಯನ್ನು ಜನ ಇಂದಿಗೂ ಮುಮ್ಮಡಪ್ಪನ ಜಾತ್ರೆ ಎಂದೇ ಕರೆಯುತ್ತಾರೆ. ಅಮೋಘಸಿದ್ಧನನ್ನು ಕೈಲಾಸದಲ್ಲಿ ಉದ್ಭವಿಸಿ ಭೂಲೋಕದಲ್ಲಿ ಅವತರಿಸಿದಂತೆ ಪಾರಂಪರಿಕ ಪುರಾಣ ಕಥನದಲ್ಲಿ ಕಲ್ಪಿಸಿಕೊಂಡಿರುವುದರಿಂದ ಈತ ಕಾಲಾತೀತನಾಗಿ ಗೋಚರಿಸುತ್ತಾನೆ. ಆ ಪ್ರಕಾರ ಈತ ಅವತರಿಸಿದ ನಂತರ ಉತ್ತರ ಭಾರತದ ಹಸ್ತಿನಾವತಿಯಲ್ಲಿ ಕೆಲ ದಿನವಿದ್ದು ಪಾಂಡವರು ಕೈಕೊಂಡ ಯಾಗದಲ್ಲಿ ಪಾಲ್ಗೊಳ್ಳುತ್ತಾನೆ. ಕುಂತಿಯಿಂದ ಸೇವೆ ಪಡೆದು ವಾರದ ಒಡೆಯ ಅನ್ನಿಸಿಕೊಳ್ಳುತ್ತಾನೆ.  ಅಮೋಘಸಿದ್ಧನ ಮಗನಾದ ಬಿಳಿಯಾನಿಸಿದ್ದನು ಕಲ್ಯಾಣಪಟ್ಟಣಕ್ಕೆ ಹೋಗಿ ಅಲ್ಲಿನ ಮಡಿವಂತ ಲಿಂಗಾಯತರಿಗೆ ನೀವೆಲ್ಲ ಕಟ್ಟುಲಿಂಗದವರಾದರೆ ನಾನು ಹುಟ್ಟುಲಿಂಗದವನು ಎಂಬುದನ್ನು ಸಾಬೀತುಪಡಿಸುತ್ತಾನೆ.  ಅಮೋಘಸಿದ್ಧನ ಮೊದಲ ಮಗನಾದ ಅವತಾರ ಅವಧೂಸಿದ್ಧ ವಿಜಾಪುರದ ಶೇಖಾಶಾಹಿಗಳೊಂದಿಗೆ ಕಾದಾಡಿದ್ದು ಹಾಗೂ ಅಮೋಘಸಿದ್ಧನ ಮೊಮ್ಮಗನಾದ ಮಲಕಾರಿಸಿದ್ಧನು ಆನೆಗುಂದಿ ಅರಸರೊಂದಿಗೆ ಹಾಗೂ ಸುರಪುರದ ದೊರೆಗಳೊಂದಿಗೆ ಹಸು ಮೇಯಿಸುವ ಜಾಗೆಯ ವಿಷಯದಲ್ಲಿ ಹಾಕ್ಯಾಡಿದ ವಿವರ ಜನಪದ ಮೌಖಿಕ ಸಾಮಗ್ರಿಗಳಲ್ಲಿ ನೈಜವಾಗಿ ದೊರೆಯುತ್ತವೆ.  …ಹೀಗೆ ತಂದೆ-ಮಗ-ಮೊಮ್ಮಗ ಮೂರು ತಲೆಮಾರುಗಳ ಈ ಕಥನದಲ್ಲಿ ಹಸ್ತಿನಾವತಿಯ ದ್ವಾಪರಯುಗ,  ಕಲ್ಯಾಣದ ಬಸವಯುಗ,  ವಿಜಾಪುರದ ಶಾಹಿಕಾಲ, ಆನೆಗುಂದಿಯ  ವಿಜಯನಗರದ ಕಾಲ ಹಾಗೂ ಸುರಪುರದ ಪಾಳೆಗಾರರ ಕಾಲ  ಸೇರಿದಂತೆ ವಿವಿಧ ಕಾಲಘಟ್ಟದಲ್ಲಿ ಇವರು ಗೋಚರಿಸುತ್ತಾರಾದ್ದರಿಂದ ಯಾವುದೇ ಕಾಲದ ಚೌಕಟ್ಟಿಗೆ ಸಿಗದೆ ಇಡೀ ಪರಂಪರೆ ಕಾಲಾತೀತವಾಗಿ ತೋರುತ್ತದೆ.  ಜನಪದರ ನಾಲಗೆಯ ನಂಬಿಕೆಗಳನ್ನೇ ನೆಚ್ಚಿ ತಲತಲಾಂತರಗಳಲ್ಲಿ ಹರಿದು ಬರುವ ಅಮೋಘಸಿದ್ದನ ಕಥನ ಪುರಾಣೀಕರಣಗೊಂಡು ಕಾಲದ ಹಂಗನ್ನು ಹರಿದುಕೊಳ್ಳುವ ಪರಿಯೇ ವಿಸ್ಮಯಕಾರಿಯಾದದ್ದು. ಈ ವಿಸ್ಮಯಕಾರಿ ಕಥನವನ್ನು ಅಮೋಘಸಿದ್ದ ಪರಂಪರೆಯ ಬಗ್ಗೆ ವ್ಯಾಪಕ ಸಂಶೋಧನೆ ನಡೆಸಿರುವ ಡಾ.ಚನ್ನಪ್ಪ ಕಟ್ಟಿಯವರು  ಕಟ್ಟಿಕೊಟ್ಟಿದ್ದಾರೆ.  ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ಶಿವಪ್ಪ-ಕಾಶಿಬಾಯಿ ದಂಪತಿಗಳ ಮಗನಾಗಿ ಶ್ರೀ ಯಲ್ಲಾಲಿಂಗರು ಜನಿಸಿದರು. ಬಾಲ್ಯದಿಂದಲೇ ಶಿವಧ್ಯಾನದಲ್ಲಿದ್ದ ಇವರು, ಮುಗಳಖೋಡದ ಸ್ಮಶಾನಭೂಮಿಯನ್ನು ಕರ್ಮಭೂಮಿಯನ್ನಾಗಿ ಮಾಡಿಕೊಂಡು, ಭಿಕ್ಷಾಟನೆ, ಸಮಾಜ ಸೇವೆ ಹಾಗೂ ದಾಸೋಹದ ಮೂಲಕ ಭಕ್ತರಿಗೆ ಮಾರ್ಗದರ್ಶನ ನೀಡಿದ ಮಹಾ ಸಿದ್ಧಿಪುರುಷರು.  ಯಲ್ಲಾಲಿಂಗ ಮಹಾರಾಜರ ಜೀವನದ ಪ್ರಮುಖಾಂಶಗಳು: ಬಾಲ್ಯ ಮತ್ತು ಕಾಯಕ  ಬಾಲ್ಯದಲ್ಲಿ ಕುರಿ ಕಾಯುವ ಕಾಯಕ ಮಾಡುತ್ತಿದ್ದ ಯಲ್ಲಪ್ಪ, ಇಪ್ಪತ್ತರ ಹರೆಯದಲ್ಲಿ ಕುಸ್ತಿಪಟುವಾಗಿದ್ದರು. ವೈವಾಹಿಕ ಜೀವನ:  ಮನೆಯವರ ಒತ್ತಾಯದ ಮೇರೆಗೆ ಹೊನ್ನಮ್ಮ ಎಂಬುವರೊಂದಿಗೆ ವಿವಾಹವಾದರು. ಕರ್ಮಭೂಮಿ:  ಮುಗಳಖೋಡ ಗ್ರಾಮದ ಸ್ಮಶಾನ ಭೂಮಿಯನ್ನು ಮುಕ್ತಿ ಮಂದಿರವನ್ನಾಗಿ ಮಾಡಿಕೊಂಡು, ಅಧ್ಯಾತ್ಮಿಕ ಜೀವನ ನಡೆಸಿದರು. *ಸಿದ್ಧಿ ಮತ್ತು ಸಮಾಜ ಸೇವೆ:  ಸಿದ್ಧಲಿಂಗರ ಆಶೀರ್ವಾದ ಪಡೆದಿದ್ದ ಯಲ್ಲಾಲಿಂಗರು, ಸುತ್ತಮುತ್ತಲಿನ ಗ್ರಾಮದ ಜನರಿಗೆ ಸತ್ಯದ ಮಾರ್ಗ ತೋರಿಸುತ್ತಿದ್ದರು. ಮುಗಳಖೋಡ ಮಠ:  ಯಲ್ಲಾಲಿಂಗ ಮಹಾರಾಜರ ಕರ್ತೃ ಗದ್ದುಗೆ ಮುಗಳಖೋಡದಲ್ಲಿದ್ದು, ಇದು ಭಕ್ತರ ಪ್ರಮುಖ ಧಾರ್ಮಿಕ ಕೇಂದ್ರವಾಗಿದೆ. ಇಲ್ಲಿ 24 ಗಂಟೆಗಳ ಕಾಲ ದಾಸೋಹ (ಅನ್ನದಾನ) ನಡೆಯುತ್ತದೆ.  ಮುಗಳಖೋಡದ ಶ್ರೀ ಯಲ್ಲಾಲಿಂಗ ಮಹಾರಾಜರು ಉತ್ತರದ ಕರ್ನಾಟಕದಲ್ಲಿ ಅತ್ಯಂತ ಪೂಜನೀಯರಾಗಿದ್ದು, ಅವರ ಜೀವನ ಸತ್ಯ, ಭಕ್ತಿ ಮತ್ತು ಸೇವಾ ಮನೋಭಾಕ್ಕೆ ಸಾಕ್ಷಿಯಾಗಿದೆ. ಅಮೋಘ ಸಿದ್ಧ ಪರಂಪರೆಯ ಶ್ರೀ ಸಿದ್ಧಲಿಂಗರ ಆಶೀರ್ವಾದ ಕೃಪೆಯಿಂದ ತಮ್ಮ ಬದುಕನ್ನು ಶಿವಯೋಗ ಸಾಧನಕ್ಕೆ ಮೀಸಲಿಟ್ಟವರು ಪೂಜ್ಯರಾದ ಶ್ರೀ ಯಲ್ಲಾಲಿಂಗರು. ಮುಗುಳುಖೋಡ ಮುತ್ಯಾ ಎಂದು ಜನರು ಕರೆಯುತ್ತಿದ್ದರು. ಮೈಲಾರಲಿಂಗ ಎಂದರೆ ಮೈಯಲ್ಲಿ ಆರು ಲಿಂಗ ಗುರು ಲಿಂಗ ಜಂಗಮ ಲಿಂಗ ಹೀಗೆ. ಆದರೆ ಯಲ್ಲಾಲಿಂಗವೆಂದರೆ ಇಡೀ ಕಾಯ ಶರೀರವೇ ಲಿಂಗ ಎಲ್ಲವೂ ಲಿಂಗ ಎಂಬಂತೆ ಬಸವ ತತ್ವಕ್ಕೆ ಅನುಗುಣವಾಗಿ ಬಾಳಿ ಬದುಕಿದ ನಾವು ಕಂಡ ಶ್ರೇಷ್ಠ ಶಿವಯೋಗ ಸಾಧಕರು. ಬಡವರ ಪಾಲಿನ ಆಶಾಕಿರಣ ಭಕ್ತರ ನಂಬಿಕೆಯ ಶ್ರೇಷ್ಠ ಶಿವಯೋಗ ಸಾಧಕರು ಯಲ್ಲಾಲಿಂಗರು. ಬಂದ ಭಕ್ತರಿಗೆ ಅಂಬಲಿ ನೀಡಿ ಪ್ರೀತಿ ಗೌರವ ವಿಶ್ವಾಸದಿಂದ ಮಾತನಾಡಿ ಅವರ ದುಗುಡು ದುಮ್ಮಾನಗಳನ್ನು ದೂರು ಮಾಡುತ್ತಿದ್ದರು. ಜಿಡಗಾ ಮುಗುಳುಖೋಡ ಬೆಳಗಾವಿಯ ಶ್ರೀನಗರದಲ್ಲಿ ಇವರ ಮಠವಿದೆ.  ಯಲ್ಲಾಲಿಂಗರ ನಂತರ ಶ್ರೀ ಸಿದ್ಧರಾಮಸ್ವಾಮಿಗಳು ಮತ್ತೆ ಈಗ ಶ್ರೀ ಡಾ ಮುರುಘರಾಜೇಂದ್ರ ಶ್ರೀಗಳು ತಮ್ಮ ದಿವ್ಯ ಪರಂಪರೆಯನ್ನು ಮುಂದುವರೆಸಿಕೊಂಡು ಹೊರಟಿದ್ದಾರೆ.ಇಂತಹ ಪೂಜ್ಯರನ್ನು ಹೊಂದಿದ ನಮ್ಮ ಕರ್ನಾಟಕದ ನೆಲವೇ ಪಾವನ ಸುಕ್ಷೇತ್ರ. ಇವರಿಗೆ ಭಕ್ತಿಪೂರ್ವಕ ಶರಣಾರ್ಥಿಗಳು. ________________________ ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

ಸಾವಿಲ್ಲದ ಶರಣರು ಮಾಲಿಕೆ,”ಅಮೋಘಸಿದ್ಧ ಪರಂಪರೆಯ ಶ್ರೇಷ್ಠ ಸಾಧಕ ಶಿವಯೋಗಿ ಶ್ರೀ ಯಲ್ಲಾಲಿಂಗರು.ಡಾ ಶಶಿಕಾಂತ್‌ ಪಟ್ಟಣ ರಾಮದುರ್ಗ Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

“ಸಾವಿಲ್ಲದಶರಣರು”ಸ್ವಾತಂತ್ರ್ಯ ಯೋಧ ಸಂತ ಸದ್ಗುರು ಶ್ರೀ ಮಹದೇವಪ್ಪ ಮುರುಗೋಡ ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ

ಶರಣರ ಸಂಗಾತಿ “ಸಾವಿಲ್ಲದಶರಣರು” ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ ಸ್ವಾತಂತ್ರ್ಯ ಯೋಧ ಸಂತ ಸದ್ಗುರು ಶ್ರೀ ಮಹದೇವಪ್ಪ ಮುರುಗೋಡ ಗಂಡು ಮೆಟ್ಟಿನ ಉತ್ತರ ಕರ್ನಾಟಕದ ಹುಬ್ಬಳಿಯ ಅನೇಕ ಸ್ವಾತಂತ್ರ್ಯ ಹೋರಾಟಗಾರರ ಜೀವನ ಚರಿತ್ರೆಗಳು ಬಹುಶಃ ಕರ್ನಾಟಕದ ಭಾರತದ ಇತಿಹಾಸಗಳ ಪುಟಗಳಲ್ಲಿ ಸೇರದೆ ಹೋಗಿದ್ದು ಅತ್ಯಂತ ನೋವಿನ ಸಂಗತಿ. ಇಂತಹ ಅಪ್ಪಟ ಗಾಂಧಿವಾದಿ ರಾಷ್ಟ್ರ ಭಕ್ತ ಸ್ವಾತಂತ್ರ್ಯ ಸೇನಾನಿ ಸಂತ ಸದ್ಗುರು ಶ್ರೀ ಮಹದೇವಪ್ಪ ಮುರುಗೋಡ ಇವರ ಜೀವನದ ಸಂಘರ್ಷ ಸಮನ್ವಯತೆಯ ಹಾದಿಯನ್ನು ನೋಡೋಣ. ಮಹಾದೇವರ ಮನೆತನದ ಹಿರಿಯರು ಮೂಲತಃ ಬೈಲಹೊಂಗಲ ತಾಲ್ಲೂಕಿನ ಮುರಗೋಡ ಗ್ರಾಮದವರು. ಅವರ ಮನೆತನದ ಹಿರಿಯರು ಮನೆತನದ ಮೂಲ ಉದ್ಯೋಗವಾದ  ಕಿರಾಣಿ ವ್ಯಾಪಾರ ಮಾಡುತ್ತ ಹುಬ್ಬಳ್ಳಿ ಪಟ್ಟಣದಲ್ಲಿ ಬಂದು ಅಲ್ಲಿಯೇ ನೆಲೆಸಿದರು. ಮನೆಯ ಯಜಮಾನ ಶಿವಪ್ರಭುಗಳು.ಅವರ ಧರ್ಮಪತ್ನಿ ಕಾಳಮ್ಮ. ಧಾರ್ಮಿಕ ಹಿನ್ನೆಲೆ, ಉತ್ತಮ ವ್ಯಕ್ತಿತ್ವ ಹೊಂದಿದ ಈ ದಂಪತಿಗಳು ಇಂಚಗೇರಿ ಮಠದ ಸದ್ಗುರುಗಳು ಶ್ರೀ ಗಿರಿಮಲ್ಲೇಶ್ವರ ಮಹಾರಾಜರಿಂದ ನಾಮ ಪಡೆದಿದ್ದರು. ಇಂಚಗೇರಿ ಸಂಪ್ರದಾಯದ ನಿತ್ಯನೇಮ, ಭಜನೆ,ಧ್ಯಾನದ ವಾತಾವರಣ ಅವರ ಮನೆತನದಲ್ಲಿ ಇತ್ತು. ಶಿವಪ್ರಭುಗಳು ಚೆನ್ನಾಗಿ ಇಂಗ್ಗೀಷ ಬಲ್ಲವರಾಗಿದ್ದರಿಂದ ಹುಬ್ಬಳ್ಳಿಯ ರಾಯಲಿ ಕಂಪನಿಯಲ್ಲಿ ಮ್ಯಾನೇಜರ ಹುದ್ದೆ ಪಡೆದಿದ್ದರು. ಬಾಲ್ಯ ಮತ್ತು ಶಿಕ್ಷಣ ಸತ್ಪುರುಷರು, ಮಹಾತ್ಮರು,ಜ್ಞಾನಿಗಳು ಜನ್ಮವೆತ್ತಿ ವಿಶ್ವವನ್ನೇ ಬೆಳಗಿದ್ದಾರೆ. ಅಂತಹ ಪುರುಷರು ಶ್ರೀ ಮಹಾದೇವರು.02.11.1915 ರಂದು ವೀರಾಪುರ ಓಣಿ  ಹುಬ್ಬಳ್ಳಿಯಲ್ಲಿ ತಂದೆ ಶಿವಪ್ರಭುಗಳು ತಾಯಿ ಕಾಳಮ್ಮ ಇವರ ಉದರದಲ್ಲಿಜನಿಸಿದರು. ಧ್ಯಾನಸ್ಥಿತಿಯಲ್ಲಿರುವ ಮಗು ಗುರು ಗಿರಿಮಲ್ಲೇಶ್ವರರು ಹಸ್ತ ಇರಿಸಿದ ನಂತರ ಕಣ್ಣು ತೆರೆಯಿತು.ಸಾತ್ವಿಕ ಕಳೆ ಹೊಂದಿರುವ ಮಗುವಿಗೆ “ಮಹಾದೇವ”ನೆಂದು ನಾಮಕರಣ ಮಾಡಿದರು. ಮಗು ಮಹಾದೇವನ ಬಾಲ್ಯವು ಸಾಹಸದ ಘಟನೆಗಳಿಂದ ಕೂಡಿತ್ತು. ಚಿಕ್ಕಂದಿನಲ್ಲಿಯೇ ಅಪಾರ ಧೈರ್ಯವನ್ನು, ಧ್ಯಾನಯೋಗವನ್ನು ಮೈಗೂಡಿಸಿಕೊಂಡಿದ್ದರು. ಮಹಾದೇವನ ತುಂಟಾಟ, ಬಾಲಲೀಲೆಗೆ ಬೇಸತ್ತು ವೀರಾಪೂರ ಓಣಿಯಲ್ಲಿಯ ಕನ್ನಡ ಶಾಲೆಗೆ ದಾಖಲಿಸುತ್ತಾರೆ. 4 ನೆಯ ಇಯತ್ತೆಯ ವರೆಗೆ ಶಿಕ್ಷಣ ಪೂರೈಸಿದ ಮಹಾದೇವರು.  ಗುರುಗಳು ಅ,ಆ,ಇ,ಈ…ಹೇಳಿದರೆ…..ಮಹಾದೇವನು..ಉ,ಊ,ಋ,ಎ ಮುಂದಿನ ಅಕ್ಷರಗಳನ್ನು ಬರೆಯುವ ವಿದ್ಯಾರ್ಥಿಯಾಗಿದ್ದರು. ಶಾಲೆಯಲ್ಲಿ ತಾನೇ ಮುಂದಾಳುತ್ವ ವಹಿಸುವುದು ವಿದ್ಯಾರ್ಥಿ ನಾಯಕತ್ವವನ್ನು ನಿರ್ವಹಿಸುವುದು ಅವರ ಗುಣಗಳಲ್ಲಿ ಸರ್ವ ಶ್ರೇಷ್ಠ. ಧ್ಯಾನಕ್ಕೆ ಹೊರಳಿದ ಶ್ರೀ ಮಹಾದೇವರು ಧ್ಯಾನವೇ ಅವರ ಆಟ, ಪಾಠವಾಗಿತ್ತು.ತನ್ನ ಸಂಗಡಿಗರಿಗೂ ಅದನ್ನು ಹೇಳಿಕೊಡುತ್ತಿದ್ದರು. ಬಾಲ್ಯದಲ್ಲಿಯೇ ಅಧ್ಯಾತ್ಮವನ್ನು ಉಸಿರನ್ನಾಗಿಸಿಕೊಂಡ ಮಹಾದೇವರು ಮುಂದೆ  ಇಂಚಗೇರಿ ಮಠದ ನಾಲ್ಕನೆಯ ಗುರುಗಳಾಗಿ ಸ್ಥಾನವನ್ನು ಅಲಂಕರಿಸುತ್ತಾರೆ.  ರಾಜಕೀಯ, ಸಾಮಾಜಿಕ, ಕೃಷಿ, ಧಾರ್ಮಿಕ, ಶೈಕ್ಷಣಿಕ,ಸಾಂಸ್ಕೃತಿಕ  ಸಾಧನೆಯನ್ನು ಗೈಯ್ಯುತ್ತಾರೆ. ಶ್ರೀ ಸದ್ಗುರು ಸಮರ್ಥ ಮಾಧವಾನಂದ ಪ್ರಭುಜಿಕ್ರಾಂತಿಕಾರಿ ಧ್ಯೇಯಗಳಿಂದ ರಾಸುರಿ ಆಯಾಮವನ್ನು ಪಡೆದು ಕಟು ಸಂಪ್ರದಾಯ ಕಂದಾಚಾರಗಳನ್ನು ಖಂಡಿಸುತ್ತಾ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಶೋಷಿತರ ಪರವಾಗಿ ಹಾಗೂ ಅನ್ಯಾಯಗಳ ವಿರುದ್ಧ ಹೋರಾಟ ನಡೆಸಿದ ಶ್ರೀ ಮಹಾದೇವಪ್ಪನವರಿಂದ ಶ್ರೀ ಕ್ಷೇತ್ರ ಇಂಚಗೇರಿ ಮಠ ದೀನದಲಿತರಿಗೆ ಆಶ್ರಯ ನೀಡಿದ ಆಶ್ರಮವಾಗಿ ಸ್ವತಂತ್ರ್ಯ ನ್ಯಾಯಾಲಯವಾಗಿ , ಸ್ವಯಂ ಉದ್ಯೋಗ ಕೇಂದ್ರವಾಗಿ ಕಾಯಕ ತತ್ವದ ಪ್ರತ್ಯೇಕ್ಷ ನಿದರ್ಶನವಾಗಿ ರೂಪುಗೊಂಡಿದ್ದು ಒಂದು ಅದ್ಭುತ ಸಾಧನೆ ಎಂದು ಹೇಳಬಹುದು. “ಯಾರು ಜನತಾ ಜನಾರ್ಧನ ಸೇವೆಯ ಮಡುವುನಲ್ಲಿ ದುಮುಕುವರೊ ಅವರ ಅಮೃತ ಪಾನ ಮಾಡಿ ಅಮರರಾಗುವರು “ಎಂಬುದು ಶ್ರೀ ಸ.ಸ.ಮಹಾದೇವರ ಅಮೃತವಾಣಿಯಾಗಿತ್ತು. ನಿಜವಾದ ಅರ್ಥದಲ್ಲಿ ಶ್ರಿ ಮಹಾದೇವರು ಅಮರ ಜೀವಿಗಳು. ಮಹಾತ್ಮಾಗಾಂಧೀಜಯವರ ಮೊಮ್ಮಗ ಅರುಣಗಾಂಧೀಯವರು ಇಂಪ್ರಿಂಟಿ ಎಂಬ ಪಾಕ್ಷಿಕ ಇಂಗ್ಲಿಷ್ ಪತ್ರಿಕೆಯಲ್ಲಿ ಇಂಚಗೇರಿ ಸಾಂಪ್ರದಾಯದ ಕುರಿತು ತತ್ವಗಳ ಈ ದಿಟ್ಟ ಪ್ರಯೋಗ ನಮ್ಮ ಭಾರತದಾದ್ಯಂತ ಅತಿ ಶೀಘ್ರವಾಗಿ ಕಾರ್ಯಗತವಾಗಲೆಂದು ಆಶಿಸಿ ಬರೆದಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮದ ಕೇಂದ್ರವೆನಿಸಿದ ಹುಬ್ಬಳ್ಳಿ ಗಿರೀಶಾಶ್ರಮ ಅಜಾನು ಬಾಹು ಶ್ರೀ ಮಹದೇವಪ್ಪ ಮುರುಗೋಡ ಇವರು ತಮ್ಮ ಜೊತೆಗೆ ಸುಮಾರು 6000 ಕ್ಕೂ ಅಧಿಕ ಸ್ವಾತಂತ್ರ ಸೇನಾನಿಗಳನ್ನು ಸಿದ್ಧ ಪಡಿಸಿ ಆಯುಧ ಬಡಿಗೆ ಕೋಲು ಮುಂತಾದ ಅಸ್ತ್ರಗಳನ್ನು ಹೊಂದಿ ಸ್ವಾತಂತ್ರ್ಯ ಹೋರಾಟಗಾರರ ತಂಡ ಕಟ್ಟಿ ಕೊಂಡರು ತಮ್ಮ ಇಂಚಿಗೇರಿ ಸಂಪ್ರದಾಯದಂತೆ ಜಾತಿ ವಿಮೋಚನೆ ಸ್ವಯಂ ಉದ್ಯೋಗ ಅಂತರ್ಜಾತಿಯ ಮದುವೆಗಳು ನಡೆಯುತ್ತಿದ್ದವು. ಜನತಾ ನ್ಯಾಯಾಲಯವನ್ನು ಎಲ್ಲಾ ತಾಲೂಕು ಮತ್ತು ಹಳ್ಳಿಗಳಲ್ಲಿ ಏರ್ಪಡಿಸಿ ತುಳಿತಕ್ಕೆ ಒಳಗಾಗಿದ್ದ ಬಡವರನ್ನು ಅಸ್ಪೃಶ್ಯರನ್ನು ಎತ್ತಿ ಹಿಡಿದು ನ್ಯಾಯ ಒದಗಿಸುತ್ತಿದ್ದರು.ಸಮಾಲೋಚನೆ  ತಿಳುವಳಿಕೆ ಪರಸ್ಪರ ಪೂರಕ ಸಂಬಂಧಗಳ ವೃದ್ಧಿಗೆ ಶ್ರಮಿಸುತ್ತಿದ್ದರು. ಇವುಗಳಿಗೆ ಬಗ್ಗದೆ ಇದ್ದವರಿಗೆ ಗಣಾಚಾರದ ರುಚಿಯನ್ನು ಶ್ರೀ ಮಹಾದೇವ ಪ್ರಭುಗಳು ತೋರಿಸುತ್ತಿದ್ದರು. ಇವರ ಕ್ರಾಂತಿಕಾರಕ ಮೌಲಿಕ ಚಿಂತನೆಗಳಿಗೆ ಮಾರು ಹೋಗಿದ್ದ ರಾಮದುರ್ಗ ಸಂಸ್ಥಾನದ ಸಿಂಹ ಶ್ರೀ ಮಹದೇವಪ್ಪ ಪಟ್ಟಣ .ಹಾವೇರಿಯ ಕ್ರಾಂತಿಕಾರಿ  ಮತ್ತು ಭಗತ ಸಿಂಗ್ ಏ ಆರ ಜೊತೆಗೆ ಬ್ರಿಟಿಷರ ವಿರುದ್ಧ ಹೋರಾಡುತ್ತಿದ್ದ ಶ್ರೀ ವಿರೂಪಾಕ್ಷಪ್ಪ ಅಂಗಡಿ ಮುಂತಾದ ಅನೇಕರು ಹುಬ್ಬಳ್ಳಿಯ ಶ್ರೀ ಗಿರಿಶಾಶ್ರಮದಲ್ಲಿ ಕ್ರಾಂತಿಕಾರಕ ಗುಪ್ತ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಬ್ರಿಟಿಷರ ಮತ್ತು ಪೊಲೀಸರ ಹದ್ದಿನ ಕಣ್ಣು ಗಿರಿಶಾಶ್ರಮದ ಮೇಲಿತ್ತು. 1956 ರ ಚುನಾವಣೆ ಸಂದರ್ಭದಲ್ಲಿ  ರಾಮದುರ್ಗದಲ್ಲಿ ಮೈಸೂರು ಪ್ರದೇಶ ಕಾಂಗ್ರೆಸಿನ ಅಧ್ಯಕ್ಷ ಶ್ರೀ ಹೂಲಿ ವೆಂಕಟರೆಡ್ಡಿ ಅವರು ಕಾಂಗ್ರೆಸ್ ಪಕ್ಷದ ಅಧಿಕೃತ ಹುರಿಯಾಳಾಗಿ ಚುನಾವಣೆಗೆ ಸ್ಪರ್ಧಿಸಿದ್ದರು. ಇವರ ವಿರುದ್ಧ ಲೋಕಸೇವಾ ಸಂಘದ ಕಾರ್ಯದರ್ಶಿ ರಾಮದುರ್ಗ ದುರಂತದ ನಾಯಕ ನೆಪೋಲಿಯನ್ ಎನಿಸಿಕೊಂಡ ಶ್ರೀ ಮಹದೇವಪ್ಪ ಪಟ್ಟಣ ಎದುರಿಸುತ್ತಾರೆ. ಡಾ ಬಿ ಡಿ ಜತ್ತಿ ಅವರ ರಾಜಕೀಯ ಗುರುಗಳೆನಿಸಿದ ಶ್ರೀ ಹೂಲಿ ವೆಂಕರೆಡ್ಡಿ ಅವರ ಚುನಾವಣೆಯ ಪ್ರಚಾರಕ್ಕೆ ಶ್ರೀ ಎಸ್ ನಿಜಲಿಂಗಪ್ಪನವರು ಆದಿಯಾಗಿ ರಾಜ್ಯ ಮತ್ತು ಕೇಂದ್ರ ಸರಕಾರದ ವರಿಷ್ಠ ನಾಯಕರು ಚುನಾವಣಾ ಪ್ರಚಾರಕ್ಕೆ ಬರುತ್ತಾರೆ. ಆದರೆ ಚುನಾವಣೆಯಲ್ಲಿ ಶ್ರೀ ಹೂಲಿ ವೆಂಕರೆಡ್ಡಿ ಅವರು ಶ್ರೀ ಮಹದೇವಪ್ಪ ಪಟ್ಟಣ ಅವರ ವಿರುದ್ಧ  ಸೋಲುತ್ತಾರೆ. ಇಡಿ ರಾಷ್ಟ್ರವೇ ರಾಮದುರ್ಗದ ಕಡೆಗೆ ನೋಡುತ್ತದೆ. ಆರಂಭದಿಂದಲೂ ಬಿ ಡಿ ಜತ್ತಿ ಅವರ ರಾಜಕೀಯ ಎದುರಾಳಿ ಎನಿಸಿದ ಮತ್ತು ಅವರ ವಿರುದ್ಧ ಚುನಾವಣೆಗಳನ್ನು ಎದುರಿಸುತ್ತಿದ್ದ ಶ್ರೀ ಸದ್ಗುರು ಸಮರ್ಥ ಮಹಾದೇವ ಪ್ರಭು ಅವರ ಮೇಲೆ ಕೆಲ ಕ್ರಿಮಿನಲ್ ಕೇಸ್ ಗಳಲ್ಲಿ ಶ್ರೀ ಮಹದೇವಪ್ಪ ಅವರ ಮೇಲೆ ನಿರಂತರ ಪೊಲೀಸ ತನಿಖೆಗೆ ಬಿ ಡಿ ಜತ್ತಿ ಅವರು ಮುಖ್ಯ ಮಂತ್ರಿ  ಆದ ಮೇಲೆ 1958 ರಲ್ಲಿ ಒತ್ತಾಯಿಸುತ್ತಾರೆ. ತಮ್ಮ ಆತ್ಮೀಯ ಸ್ವಾತಂತ್ರ್ಯ ಹೋರಾಟಗಾರ ಸಂಗಾತಿ ಶ್ರೀ ಮಹದೇವಪ್ಪ ಮುರುಗೋಡ ಇವರ ಮೇಲಿನ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಶಾಸಕ   ಶ್ರೀ ಮಹದೇವಪ್ಪ ಪಟ್ಟಣ ಅವರು ಸದನದ ಒಳಗೆ ಹಾಗೂ ಹೊರಗೆ ನಿರಂತರ ಹೋರಾಟ ಮಾಡುತ್ತಾರೆ. ಒಮ್ಮೆ ಸದನದ ಒಳಗೆ ಶ್ರೀ ಮುರುಗೋಡ ಮಹದೇವಪ್ಪ ಅವರ ಮೇಲಿನ ಪ್ರಕರಣಗಳನ್ನು ಸರಕಾರ ಹಿಂದೆ ಪಡೆಯಬೇಕೆಂದು ಶಾಸಕ   ಶ್ರೀ ಮಹದೇವಪ್ಪ ಪಟ್ಟಣ ಅವರು ಸಿಟ್ಟಿನಿಂದ ಮುಖ್ಯ ಮಂತ್ರಿಗಳ ಕಡೆಗೆ ಪೇಪರ್ ವೆಟ್ ತೋರಿದರಂತೆ ಸ್ವತಃ ಶಾಸಕ   ಶ್ರೀ ಮಹದೇವಪ್ಪ ಪಟ್ಟಣ ಅವರು ನನ್ನ ಮುಂದೆ ತಮ್ಮ ಅನುಭವವನ್ನು ಹಂಚಿಕೊಂಡಿದ್ದರು.ಕೊನೆಗೂ ಗೆಳೆಯನಿಗೆ ನ್ಯಾಯ ಒದಗಿಸುವ ಕಾರ್ಯದಲ್ಲಿ ಶಾಸಕ   ಶ್ರೀ ಮಹದೇವಪ್ಪ ಪಟ್ಟಣ ಯಶಸ್ವಿಯಾದರು.ಶ್ರೀ ಮಹದೇವಪ್ಪ ಮುರುಗೋಡ ಇವರು ಜೀವನ ಕೊನೆಯ ಉಸಿರಿನವರೆಗೆ ಸಾಮಾಜಿಕ ನ್ಯಾಯಪರವಾಗಿಹೋರಾಡುತ್ತಲೇ ಇದ್ದರು.ಇಂಚಿಗೇರಿ ಶ್ರೀಮಠದ ದಿಂಡಿ ಯಾತ್ರೆಯಲ್ಲಿ ಚಕ್ಕಡಿ ಟ್ರಾಕ್ಟರ್ ದನಕರುಗಳು ಹಸು ಮೇಕೆ ಅವುಗಳಿಗೆ ಬೇಕಾದ ಮೇವು ಭಕ್ತರಿಗೆ ಬೇಕಾದ ಆಹಾರ ಸಾಮಗ್ರಿಗಳನ್ನು ಹೊತ್ತು ಕೊಂಡು ಊರೂರು ತಿರುಗಿ ಸದ್ಭಾವನೆ ಸಾಮಾಜಿಕ ಸಾಮರಸ್ಯಗಳನ್ನುಮೂಡಿಸುವ ಭಜನೆ ಪ್ರಾರ್ಥನೆ ಕೀರ್ತನೆ ಏರ್ಪಡಿಸಿ ಮನುಷ್ಯರ ಮನವನ್ನು  ತಿಳಿಗೊಳಿಸುತ್ತಿದ್ದರು. ಅಲ್ಲಿಯೇ ಸಾಮಾಜಿಕ ನ್ಯಾಯ ಬಗೆ ಹರಿಸುವುದು ವಾಡಿಕೆಯಾಗಿತ್ತು. ಶ್ರೀ ವಿನೋಭಾ ಭಾವೆಯವರ ತಾಯಿಯ ತವರು ಮನೆ ಜಮಖಂಡಿ ಅವರೂ ಸಹ ಶ್ರೀ ಮಹದೇವಪ್ಪ ಮುರುಗೋಡ ಇವರ ಕಾರ್ಯಗಳ ಬಗ್ಗೆ ತಮ್ಮ ಅತೀವ ಸಂತಸ ವ್ಯಕ್ತ ಪಡಿಸಿದ್ದಾರೆ. ಬದುಕಿನ ತಪಸ್ಸಿಗೆ ಕೊನೆ ಹೇಳಿದ ಶಿವಯೋಗ ಸಾಧಕ ಬಾಲ ಬ್ರಹ್ಮಚಾರಿಯಾಗಿದ್ದ ಮಹಾದೇವರು ತದನಂತರ ದಿನಗಳಲ್ಲಿ ದೇವರು ಹಾಗೂ ಶ್ರೀ ಮಾಧವಾನಂದ ಪ್ರಭುಜೀ ಎಂದೆ ಪ್ರಚಲಿತರಾಗಿ ಭಕ್ತಿ ಪ್ರಚಾರದ ಜತೆಗೆ ಶ್ರೀ ಗುರು ಪುತ್ರೇಶ್ವರ ಮಹಾರಾಜರನ್ನು ತಮ್ಮ ಆಧ್ಯಾತ್ಮದ ಗರಡಿಯಲ್ಲಿ ಪಳಗಿಸಿ,ತಮ್ಮ ಬದುಕನ್ನು ಶೋಷಿತರ ಪರವಾಗಿ ನಿಂತು ನ್ಯಾಯ ಒದಗಿಸಿ ಭಾರತದ ಸ್ವಾತಂತ್ರ್ಯ ಹೋರಾಟ ಕರ್ನಾಟಕ ಏಕೀಕರಣ ಗೋವಾ ವಿಮೋಚನೆಗೆ ದುಡಿದು 1980 ರಲ್ಲಿ ದೈವಾದಿನರಾದರು . ಬಯಲಲ್ಲಿ ಬಯಲಾದರು.__________________________ ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

“ಸಾವಿಲ್ಲದಶರಣರು”ಸ್ವಾತಂತ್ರ್ಯ ಯೋಧ ಸಂತ ಸದ್ಗುರು ಶ್ರೀ ಮಹದೇವಪ್ಪ ಮುರುಗೋಡ ಡಾ.ಶಶಿಕಾಂತ್ ಪಟ್ಟಣ ರಾಮದುರ್ಗ Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಸಾವಿಲ್ಲದ ಶರಣರು ಮಾಲಿಕೆ,”ದಕ್ಷ ಆಡಳಿತಗಾರ ಪರಾಕ್ರಮಿ ಅರಸು ಶಿವಪ್ಪ ನಾಯಕ” ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಪುಣೆ

ಶರಣರ ಸಂಗಾತಿ ಸಾವಿಲ್ಲದ ಶರಣರು ಮಾಲಿಕೆ, ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಪುಣೆ “ದಕ್ಷ ಆಡಳಿತಗಾರ ಪರಾಕ್ರಮಿ ಅರಸು ಶಿವಪ್ಪ ನಾಯಕ” ಕರ್ನಾಟಕ ಮತ್ತು ಭಾರತದ ಇತಿಹಾಸದಲ್ಲಿ ಸುವರ್ಣಯುಗ ಎನ್ನುವುದು ಕೆಳದಿ ಅರಸರ ಕಾಲದಲ್ಲಿ. ಕೃಷಿ ವಾಣಿಜ್ಯ ತೆರಿಗೆ ಸುಧಾರಣೆಗಳನ್ನು ಅನುಷ್ಠಾನಗೊಳಿಸಿ ಸಮೃದ್ಧ ರಾಜ್ಯವನ್ನು ಮಾಡಿದ ಕೀರ್ತಿ ಕೆಳದಿ ಅರಸರಿಗೆ ಸಲ್ಲುತ್ತದೆ. ಶಿವಪ್ಪ ನಾಯಕ (ಶಿವಪ್ಪ ನಾಯಕ) (1645–1660), ಕೆಳದಿ ಶಿವಪ್ಪ ನಾಯಕ ಎಂದು ಜನಪ್ರಿಯವಾಗಿ ನಾಯಕರು, ಒಬ್ಬ ಭಾರತೀಯ ರಾಜ ಮತ್ತು ಕೆಳದಿ ನಾಯಕ ಸಾಮ್ರಾಜ್ಯದ ಆಡಳಿತಗಾರ. ಕೆಳದಿ ನಾಯಕರು 16 ನೇ ಶತಮಾನದ ಉತ್ತರಾರ್ಧದಲ್ಲಿ ಭಾರತದ ಕರ್ನಾಟಕದ ಕರಾವಳಿ ಮತ್ತು ಮಲೆನಾಡು (ಬೆಟ್ಟ) ಜಿಲ್ಲೆಗಳಲ್ಲಿ ವಿಜಯನಗರ ಸಾಮ್ರಾಜ್ಯದ ನಂತರದ ಲಿಂಗಾಯತ ಉತ್ತರಾಧಿಕಾರಿಗಳಾಗಿದ್ದರು. ಅವರ ಉತ್ತುಂಗದಲ್ಲಿ, ನಾಯಕರು 1763 ರಲ್ಲಿ ಮೈಸೂರು ಸಾಮ್ರಾಜ್ಯಕ್ಕೆ ಶರಣಾಗುವ ಮೊದಲು, ಆಧುನಿಕ ಕರ್ನಾಟಕದ ಕರಾವಳಿ, ಬೆಟ್ಟ ಮತ್ತು ಕೆಲವು ಆಂತರಿಕ ಜಿಲ್ಲೆಗಳನ್ನು ( ಬಯಲುಸೀಮೆ ) ಒಳಗೊಂಡ ಸ್ಥಾಪಿತ ಸಾಮ್ರಾಜ್ಯವನ್ನು ನಿರ್ಮಿಸಿದರು,   ಕೆಳದಿ ಅರಸರು ತೆರಿಗೆಯನ್ನು  ಪರಿಚಯಿಸಿದರು.  ಯುದ್ಧ ಮತ್ತು ವಿಜಯಗಳು ಶಿವಪ್ಪ ನಾಯ್ಕ ಒಬ್ಬ ಸಮರ್ಥ ಆಡಳಿತಗಾರ ಮತ್ತು  ಶೂರ ಸೈನಿಕ . ಅವರು 1645 ರಲ್ಲಿ ಸಿಂಹಾಸನವನ್ನು ಏರಿದರು. ಈ ಸಮಯದಲ್ಲಿ, ವೆಲ್ಲೂರಿನಿಂದ ಆಳಿದ ವಿಜಯನಗರ ಸಾಮ್ರಾಜ್ಯದ ಕೊನೆಯ ದೊರೆ ಶ್ರೀರಂಗರಾಯ III ಬಿಜಾಪುರ ಸುಲ್ತಾನರಿಂದ ಸೋಲಿಸಲ್ಪಟ್ಟರು ಮತ್ತು ಶಿವಪ್ಪನ ಆಶ್ರಯವನ್ನು ಪಡೆದರು. ಪೋರ್ಚುಗೀಸರ ಬೆದರಿಕೆಯನ್ನು 1653 ರ ಹೊತ್ತಿಗೆ ತೊಡೆದುಹಾಕಲಾಯಿತು ಮತ್ತು ಮಂಗಳೂರು, ಕುಂದಾಪುರ ಮತ್ತು ಹೊನ್ನಾವರ ಬಂದರುಗಳನ್ನು ಕೆಳದಿ ನಿಯಂತ್ರಣಕ್ಕೆ ತರಲಾಯಿತು.  ಕನ್ನಡ ಕರಾವಳಿಯನ್ನು ಗೆದ್ದ ನಂತರ, ಅವರು ಆಧುನಿಕ ಕೇರಳದ ಕಾಸರಗೋಡು ಪ್ರದೇಶಕ್ಕೆ ದಂಡೆತ್ತಿ ಹೋಗಿ ನೀಲೇಶ್ವರದಲ್ಲಿ ವಿಜಯಸ್ತಂಭವನ್ನು ಸ್ಥಾಪಿಸಿದರು. ಚಂದ್ರಗಿರಿ, ಬೇಕಲ್, ಅಡ್ಕ ಕೋಟೆ, ಆರಿಕ್ಕಾಡಿ ಮತ್ತು ಮಂಗಳೂರಿನ ಕೋಟೆಗಳನ್ನು ಶಿವಪ್ಪ ನಾಯಕ ನಿರ್ಮಿಸಿದ. ನಂತರ ಅವರು ತುಂಗಭದ್ರಾ ನದಿಯ ಉತ್ತರಕ್ಕೆ ದಾಳಿ ಮಾಡಿದರು ಮತ್ತು ಆಧುನಿಕ ಧಾರವಾಡ ಜಿಲ್ಲೆಯಲ್ಲಿ ಬಿಜಾಪುರ ಸುಲ್ತಾನರಿಂದ ಪ್ರದೇಶವನ್ನು ವಶಪಡಿಸಿಕೊಂಡರು. ದಕ್ಷಿಣದಲ್ಲಿ, ಆಧುನಿಕ ಮೈಸೂರು ಜಿಲ್ಲೆಯ ಶ್ರೀರಂಗಪಟ್ಟಣಕ್ಕೆ ಅವನು ಆಕ್ರಮಣ ಮಾಡಿ ಮುತ್ತಿಗೆ ಹಾಕಿದಾಗ, ಅವನ ಸೈನ್ಯದಲ್ಲಿ ಸಾಂಕ್ರಾಮಿಕ ರೋಗವು ಅವನನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿತು.  ದಕ್ಷಿಣದಲ್ಲಿ, ಅವರು ಕರಾವಳಿ ಪ್ರದೇಶದ ಎಲ್ಲಾ ಪೋರ್ಚುಗೀಸ್ ಕೋಟೆಗಳನ್ನು ವಶಪಡಿಸಿಕೊಳ್ಳುವ ಮೂಲಕ ಕೆನರಾ ಪ್ರದೇಶದಲ್ಲಿ ಪೋರ್ಚುಗೀಸ್ ರಾಜಕೀಯ ಶಕ್ತಿಯನ್ನು ನಾಶಪಡಿಸಿದರು.  ಶಿವಪ್ಪ ನಾಯಕ ಅವರು ಸಿಸ್ಟ್ ಎಂಬ ರಾಜಸ್ವ ಪರಿಹಾರ ಯೋಜನೆಯನ್ನು ಪರಿಚಯಿಸಿದರು , ಇದು ಮೊಗಲ್ ಚಕ್ರವರ್ತಿ ಅಕ್ಬರ್ ರೂಪಿಸಿದ ಕಂದಾಯ ಯೋಜನೆಗಳಿಗೆ ಅನುಕೂಲಕರ ಹೋಲಿಕೆಯನ್ನು ಕಂಡುಕೊಂಡಿದೆ.  ಈ ಯೋಜನೆಯ ಪ್ರಕಾರ, ಮಣ್ಣಿನ ಪ್ರಕಾರ ಮತ್ತು ಲಭ್ಯವಿರುವ ನೀರಾವರಿ ಸೌಲಭ್ಯಗಳ ಆಧಾರದ ಮೇಲೆ ಕೃಷಿ ಭೂಮಿಯನ್ನು ಐದು ವಿಧಗಳಾಗಿ ವಿಂಗಡಿಸಲಾಗಿದೆ. ಖಂಡುಗ ಎಂಬ ಬಿತ್ತನೆ ಸಾಮರ್ಥ್ಯದ ಘಟಕವನ್ನು ಅಭಿವೃದ್ಧಿಪಡಿಸಲಾಯಿತು ಮತ್ತು ಪ್ರತಿ ನೀರಾವರಿ ಭೂಮಿಗೆ ಈ ಘಟಕದ ಆಧಾರದ ಮೇಲೆ ವಿವಿಧ ಮೊತ್ತಗಳಲ್ಲಿ ತೆರಿಗೆ ವಿಧಿಸಲಾಯಿತು. ತೆರಿಗೆಯ ದರವು ಈ ಐದು ರೀತಿಯ ಭೂಮಿಯಲ್ಲಿ ಪ್ರತಿಯೊಂದರ ಇಳುವರಿಯನ್ನು ಅವಲಂಬಿಸಿದೆ, ದರವು ಹಳ್ಳಿಯಿಂದ ಗ್ರಾಮಕ್ಕೆ ಬದಲಾಗುತ್ತದೆ ಮತ್ತು ಒಟ್ಟು ಇಳುವರಿಯಲ್ಲಿ ಮೂರನೇ ಒಂದು ಭಾಗದಷ್ಟು ಇರುತ್ತದೆ. ಶಿವಪ್ಪ ನಾಯಕ ಅವರು ಕೃಷಿಗೆ ಪ್ರಾಮುಖ್ಯತೆಯನ್ನು ನೀಡಿದರು, ಇದು ಕೃಷಿ ಆರ್ಥಿಕತೆಯನ್ನು ವಿಸ್ತರಿಸಲು ಕಾರಣವಾಯಿತು.  *ಧಾರ್ಮಿಕ  ಸಹಿಷ್ಣು*  ಧಾರ್ಮಿಕ ಮತ್ತು ಸಹಿಷ್ಣು ವ್ಯಕ್ತಿ, ಶಿವಪ್ಪ ನಾಯಕ ಲಿಂಗಾಯತ   ಆಚರಣೆಗಳನ್ನು ಮಾಡಿದರು ಮತ್ತು ಶೃಂಗೇರಿಯ ಹಿಂದೂ ಅದ್ವೈತ ಕ್ರಮವನ್ನು ಪೋಷಿಸಿದರು. ಶೃಂಗೇರಿಯ ಮಠ ಗುಡಿ ಕಟ್ಟಿ ಕೊಟ್ಟರು. ಅವರು ಕ್ರಿಶ್ಚಿಯನ್ನರ ಬಗ್ಗೆ ಸಹಿಷ್ಣುರಾಗಿದ್ದರು ಮತ್ತು ಅವರಿಗೆ ಕೃಷಿ ಮಾಡಲು ಭೂಮಿ ನೀಡಿದರು. ಅವರು ದಕ್ಷಿಣ ಭಾರತದ ವಾಣಿಜ್ಯ ಸಮುದಾಯಗಳಾದ ಕೋಮಟಿಗಳು ವೈಶ್ಯರು ಮತ್ತು ಕೊಂಕಣಿಗಳನ್ನು ತಮ್ಮ ರಾಜ್ಯದಲ್ಲಿ ನೆಲೆಸಲು ಮತ್ತು ವ್ಯವಹಾರಗಳನ್ನು ಸ್ಥಾಪಿಸಲು ಪ್ರೋತ್ಸಾಹಿಸಿದರು.  ಕಾಶ್ಮೀರಿ ಪಂಡಿತರು ವಲಸೆ ಬಂದಾಗ ಅವರಿಗೆ ಹೊಸನಗರ ಪ್ರದೇಶದಲ್ಲಿ ಆಶ್ರಯ ನೀಡಿ ಪೋಷಿಸಿದರು. *ಸ್ವಾರಸ್ಯಕರ ಪ್ರಸಂಗ* ಶಿವಪ್ಪ ನಾಯಕನ ಆಳ್ವಿಕೆಯ ಕಾಲದ ಸ್ವಾರಸ್ಯಕರ ಪ್ರಸಂಗ ಹೀಗಿದೆ. ಗಣೇಶ್ ಮಲ್ಯ ಎಂಬ ಬಡ ಬ್ರಾಹ್ಮಣನು ಉದ್ಯೋಗ ಹುಡುಕುವ ಉದ್ದೇಶದಿಂದ ರಾಜಧಾನಿ ಕೆಳದಿಗೆ ಬಂದನು. ಹಣವಿಲ್ಲದ ಕಾರಣ ಮನೆಯಲ್ಲಿ ಬೆಳೆದ ತೆಂಗಿನಕಾಯಿ ತುಂಬಿದ ಚೀಲವನ್ನು ಹೊತ್ತೊಯ್ದರು. ನಗರವನ್ನು ಪ್ರವೇಶಿಸುವ ಮೊದಲು, ಪ್ರತಿಯೊಬ್ಬ ಪ್ರಯಾಣಿಕರು ಎಂಟು ಟೋಲ್ ಗೇಟ್‌ಗಳ ಮೂಲಕ ಹಾದುಹೋಗಬೇಕಾಗಿತ್ತು, ಪ್ರತಿಯೊಂದೂ ತೆರಿಗೆಯನ್ನು ಸಂಗ್ರಹಿಸುತ್ತದೆ. ಅವರು ಯಾವುದೇ ಹಣವನ್ನು ಸಾಗಿಸದ ಕಾರಣ, ಗಣೇಶ್ ಮಲ್ಯ ಅವರು ಪ್ರತಿ ಟೋಲ್ ಗೇಟ್‌ನಲ್ಲಿ ಎರಡು ತೆಂಗಿನಕಾಯಿಗಳನ್ನು ಹಂಚಿಕೊಳ್ಳಬೇಕಾಯಿತು, ಒಂದನ್ನು ತೆರಿಗೆ ಮತ್ತು ಇನ್ನೊಂದನ್ನು ಅಧಿಕಾರಿಗೆ ಉಡುಗೊರೆಯಾಗಿ ನೀಡಲಾಯಿತು. ನಗರದ ಪ್ರವೇಶ ದ್ವಾರದಲ್ಲಿ ಎರಡು ತೆಂಗಿನಕಾಯಿ ಸಹ ಪಾವತಿಸಿದರು. ಎಲ್ಲಾ ಟೋಲ್‌ಗಳಿಂದ ನಿರಾಶೆಗೊಂಡ ಮಲ್ಯ ಅವರು ಧೈರ್ಯದಿಂದ ತಮ್ಮದೇ ಆದ ಟೋಲ್ ಗೇಟ್ (ಒಂಬತ್ತನೇ ಟೋಲ್ ಗೇಟ್) ಸ್ಥಾಪಿಸಿದರು ಮತ್ತು ತಮ್ಮ ಸ್ವಂತ ರಿಜಿಸ್ಟರ್‌ನಲ್ಲಿ ನಗರಕ್ಕೆ ಬರುವ ಪ್ರಯಾಣಿಕರ ಸಂಪೂರ್ಣ ವಿವರಗಳನ್ನು ನೋಂದಾಯಿಸಿದ ನಂತರ ಟೋಲ್ ಸಂಗ್ರಹಿಸಿದರು. ಟೋಲ್‌ಗೆ ಪ್ರತಿಯಾಗಿ, ಗಣೇಶ್ ಮಲ್ಯ ಅವರು ಹದಿನೆಂಟು ತೆಂಗಿನಕಾಯಿಗಳಿಗೆ ಹೊಸ ಕಸ್ಟಮ್ ಸ್ಟೇಷನ್, ಕುಮಟಾದ ಗಣೇಶಯ್ಯ ರಾಜರ ಸಹಿಯೊಂದಿಗೆ ಚೀಟಿಯನ್ನು ನೀಡಿದರು . ಇದು ಹದಿನೆಂಟು ತಿಂಗಳುಗಳ ಕಾಲ ರಾಜ ಶಿವಪ್ಪ ನಾಯಕನಿಗೆ ಕೇಳುವ ಮೊದಲು ಯಾರೂ ಗಮನಿಸಲಿಲ್ಲ. ರಾಜನು ಕರೆಸಿದಾಗ, ಜೀವನೋಪಾಯಕ್ಕಾಗಿ ಅಕ್ರಮ ಜಕಾತು ತೆರಿಗೆ ಸಂಗ್ರಹಿಸಿದ್ದಾಗಿ ಗಣೇಶ್ ಮಲ್ಯ ಒಪ್ಪಿಕೊಂಡಿದ್ದಾನೆ. ಅವರ ಪ್ರಾಮಾಣಿಕತೆ ಮತ್ತು ವ್ಯವಹಾರ ಕುಶಾಗ್ರಮತಿಯಿಂದ ಪ್ರಭಾವಿತರಾದ ಶಿವಪ್ಪ ನಾಯಕ ಗಣೇಶ್ ಮಲ್ಯರನ್ನು ತಮ್ಮ ಸೇವೆಗೆ ತೆಗೆದುಕೊಂಡರು.  ಶಿವಪ್ಪ ನಾಯಕನ ನಂತರ 1660 ರಲ್ಲಿ ಅವನ ಕಿರಿಯ ಸಹೋದರ ಚಿಕ್ಕ ವೆಂಕಟಪ್ಪ ನಾಯಕನು ಸಿಂಹಾಸನವನ್ನು ಅಲಂಕರಿಸಿದನು. ಶಿವಪ್ಪ ನಾಯಕ ಕೆಳದಿ ಅರಸರ ಮೊದಲ ದೊರೆ. ಇವನ ಕಾಲದ ಸಾಮ್ರಾಜ್ಯವು ದಕ್ಷಿಣ ಭಾರತದಲ್ಲಿ ಹಲವು ಭಾಗಗಳಲ್ಲಿ ಕಾಣುತ್ತೇವೆ.  ಇಂತಹ ಜನಪರ ಅರಸು ಸಾಮಾಜಿಕ ಬದಲಾವಣೆಯ ಕನಸುಗಾರ ಶ್ರೀ ಶಿವಪ್ಪ ನಾಯಕ ಇವರಿಗೆ ಅನಂತ ಕೋಟಿ ನಮನಗಳು ಡಾ ಶಶಿಕಾಂತ ಪಟ್ಟಣ ರಾಮದುರ್ಗ

ಸಾವಿಲ್ಲದ ಶರಣರು ಮಾಲಿಕೆ,”ದಕ್ಷ ಆಡಳಿತಗಾರ ಪರಾಕ್ರಮಿ ಅರಸು ಶಿವಪ್ಪ ನಾಯಕ” ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಪುಣೆ Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಸಾವಿಲ್ಲದ ಶರಣರು ಮಾಲಿಕೆ,”ಸಂಚಾರಿ ಸಂಗೀತ ಸಾಮ್ರಾಟ  ಶ್ರೀ  ಪಂಚಾಕ್ಷರಿ ಗವಾಯಿಗಳು” ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ

ಶರಣರ ಸಂಗಾತಿ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಸಾವಿಲ್ಲದ ಶರಣರು ಮಾಲಿಕೆ, ಸಂಚಾರಿ ಸಂಗೀತ ಸಾಮ್ರಾಟ  ಶ್ರೀ  ಪಂಚಾಕ್ಷರಿ ಗವಾಯಿಗಳು” ನನ್ನ ತಾಯಿಯ ತವರೂರು ಗದಗ ಜಿಲ್ಲೆಯ ಮುಳಗುಂದ .ಬಾಲಲೀಲಾ ಮಹಾಂತ ಸ್ವಾಮಿಗಳು ,ದಾವಲ ಮಲಿಕ್ ಶಿರಹಟ್ಟಿ ಫಕೀರೇಶ್ವರ ಹೀಗೆ ಬೇರೆ ಬೇರೆ ಮಹಾತ್ಮರ ಪರಿಸರದಲ್ಲಿ ನನ್ನ ತಾಯಿ ಲಿಂಗೈಕ್ಯ ಸರೋಜಾ ರುದ್ರಪ್ಪ ಪಟ್ಟಣ ಲಿಂಗೈಕ್ಯ ಶ್ರೀ ವೀರಭದ್ರಪ್ಪ ವಾಲಿ ಮತ್ತು ಲಿಂಗೈಕ್ಯ ಶ್ರೀಮತಿ ಚೆನ್ನವೀರವ್ವ ಅವರ ಉದರದಲ್ಲಿ ಜನಿಸಿದ ಹಿರಿಯ ಮಗಳು. ಐವತ್ತು ವರುಷದ ಹಿಂದೆ ನಾನು ಬಾಲಕನಾಗಿದ್ದಾಗ ನನ್ನ ಅಜ್ಜ ಲಿಂಗೈಕ್ಯ  ಶ್ರೀ ವೀರಭದ್ರಪ್ಪ ವಾಲಿ ಅವರು ನನಗೆ ನಿತ್ಯ ಸಂಜೆ  ರಾತ್ರಿ  ಕಥೆ ಹೇಳುತ್ತಿದ್ದರು ಅವರು ಹೇಳಿದ ಒಂದು ಸಹಜ ಪ್ರಕರಣದ ಭಾಗವನ್ನು ಇಲ್ಲಿ ಸ್ಮರಿಸುತ್ತೇನೆ. ಮುಳಗುಂದ ವ್ಯಾಪಾರಸ್ಥರು  ಒಮ್ಮೆ ಶ್ರೀ  ಪಂಚಾಕ್ಷರಿ ಗವಾಯಿಗಳನ್ನು   ಜಾತ್ರಾ ಮಹೋತ್ಸವಕ್ಕೆ ಮುಳಗುಂದಕ್ಕೆ ಕರೆಸಿದರಂತೆ ಕಾರ್ಯಕ್ರಮ ಮುಗಿದ ಮೇಲೆ ಶ್ರೀ   ಶ್ರೀ  ಪಂಚಾಕ್ಷರಿ ಗವಾಯಿಗಳು ತಾವು ತಂದ ಧೋತರ ಅಲ್ಲಿನವರು ಬೇರೆಯವರ ಧೋತರಗಳ ಜೊತೆಗೆ ಬೆರೆಸಿ ಇಟ್ಟಿದ್ದರಂತೆ ,ಇವರ ತೀಕ್ಷ್ಣತೆ ಪರೀಕ್ಷೆ ಮಾಡಲು, ಇಪ್ಪತ್ತು ದೋತುರಗಳಲ್ಲಿ ಶ್ರೀ  ಪಂಚಾಕ್ಷರಿ ಗವಾಯಿಗಳು ತಮ್ಮ ದೋತುರವನ್ನೇ ಆಯ್ಕೆ ಮಾಡಿಕೊಂಡರಂತೆ. ಅದೇ ರೀತಿ ಅವರ ಉಣ್ಣುವ ಗಂಗಾಳ ಮತ್ತು ಚರಿಗೆಯನ್ನು ಅವರು ಪತ್ತೆ ಹಚ್ಚಿ ಜನರಿಗೆ ಆಶ್ಚರ್ಯವನ್ನು   ಉಂಟು ಮಾಡುತ್ತಿದ್ದರಂತೆ ,ಇದನ್ನು ನನ್ನ ಅಜ್ಜ ಸ್ವತಹ ಕಣ್ಣಿಂದ  ಕಂಡ ದೃಶ್ಯವೆಂದರೆ ಶ್ರೀ  ಪಂಚಾಕ್ಷರಿ ಗವಾಯಿಗಳು ಎಷ್ಟು ತೀಕ್ಷ್ಣಮತಿಗಳಾಗಿದ್ದರು ಎಂದು ತಿಳಿಯುತ್ತದೆ. ಇಂತಹ ಅಪ್ರತಿಮ ಸಂಗೀತ ಸಾಮ್ರಾಟನ ಪರಿಚಯ ಮಾಡುವುದು ನನ್ನ ಸೌಭಾಗ್ಯವೆಂದೇ ಭಾವಿಸಿದ್ದೇನೆ.  ಕರ್ನಾಟಕವು ಅದರಲ್ಲೂ ಉತ್ತರ ಕರ್ನಾಟಕವು ಸಂಗೀತ ಸಾಹಿತ್ಯ ದಿಗ್ಗಜರನ್ನು ನಾಡಿಗೆ ಸಮರ್ಪಿಸಿದೆ .ಅಂತಹ ಸಾಧಕರಲ್ಲಿ ನಮ್ಮ ಪಂಚಾಕ್ಷರಿ ಗವಾಯಿಗಳು. ಶ್ರೀ ಪಂಚಾಕ್ಷರ ಗವಾಯಿಗಳು  ಗದುಗಿನಲ್ಲಿರುವ ಪ್ರಸಿದ್ಧ ಸಂಗೀತ ಆಶ್ರಮವಾದ “ಶ್ರೀ ವೀರೇಶ್ವರ ಪುಣ್ಯಾಶ್ರಮ”ದ ಸಂಸ್ಥಾಪಕರು. ಇವರು ಜನಿಸಿದ್ದು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಾಡಶೆಟ್ಟಿಹಳ್ಳಿಯಲ್ಲಿ, ದಿನಾಂಕ: ೨, ಫೆಬ್ರುವರಿ ೧೮೯೨ರಂದು. ಇವರ ತಾಯಿ ನೀಲಮ್ಮ ಹಾಗು ತಂದೆ ಗುರುಪಾದಯ್ಯ ಚರಂತಿಮಠ. ಗದಿಗೆಯ್ಯ ಇವರ ಹುಟ್ಟು ಹೆಸರು. ಗದಿಗೆಯ್ಯ ಹಾಗು ಇವರ ಅಣ್ಣ ಗುರುಬಸಯ್ಯ ಇಬ್ಬರೂ ಹುಟ್ಟು ಕುರುಡರು. ಸ್ಥಳೀಯವಾಗಿ ಸಾಧ್ಯವಿದ್ದ ಸಂಗೀತ ಶಿಕ್ಷಣವನ್ನು ಪಡೆದಿದ್ದರು. ಒಮ್ಮೆ ಶ್ರೀ ಹಕ್ಕಲ ಬಸವೇಶ್ವರ ಜಾತ್ರೆಯಲ್ಲಿ ಹಾಡುತ್ತಿದ್ದ ಈ ಕುರುಡು ಬಾಲಕರ ಹಾಡು ಕೇಳಿದ ಪೂಜ್ಯ ಹಾನಗಲ್ ಕುಮಾರಸ್ವಾಮಿಯವರು ಈ ಎಳೆಯರನ್ನು ತಮ್ಮ ಉಡಿಯಲ್ಲಿ ಹಾಕಿಕೊಂಡರು.ಹಾನಗಲ್ ಕುಮಾರಸ್ವಾಮಿಗಳು ಇವರಿಗೆ ಸಂಗೀತ ಶಿಕ್ಷಣಕ್ಕೆ ಪ್ರೋತ್ಸಾಹಿಸಿದರು. ಸಂಗೀತ ಶಿಕ್ಷಣ ಅಣ್ಣತಮ್ಮಂದಿರಿಬ್ಬರಿಗೂ ಅನೇಕ ಗುರುಗಳಿಂದ ಸಂಗೀತ ಶಿಕ್ಷಣ ದೊರೆಯಿತು. ಶ್ರೀ ಕುಮಾರಸ್ವಾಮಿಗಳು ಹಳ್ಳಿಹಳ್ಳಿಗಳಲ್ಲಿ ಭಿಕ್ಷೆ ಎತ್ತಿ ನೆಲವಿಗಿಯಲ್ಲೊಂದು ಶಿವಯೋಗ ಮಂದಿರ ಸ್ಥಾಪಿಸಿದ್ದರು. ಅಲ್ಲಿ ಇತರ ಹುಡುಗರ ಜೊತೆಗೆ ಈ ಹುಡುಗರೂ ಸಹ ಸಂಗೀತಾಭ್ಯಾಸ ಮಾಡುತ್ತಿದ್ದಾಗ ಅಣ್ಣ ಗುರುಬಸಯ್ಯ ಕಾಲರಾ ರೋಗದಿಂದ ಮರಣವನ್ನಪ್ಪಿದ. ಗದಿಗೆಯ್ಯನಿಗೆ ಹದಿನೆಂಟು ವರ್ಷವಾದಾಗ ಮೈಸೂರಿನಲ್ಲಿ ಗೌರಿಶಂಕರ ಸ್ವಾಮಿಗಳಲ್ಲಿ ಕರ್ನಾಟಕ ಸಂಗೀತ ವಿದ್ಯಾಭ್ಯಾಸವಾಯಿತು. ನಾಲ್ಕು ವರ್ಷ ಮೈಸೂರಿನಲ್ಲಿ ಜೋಳಿಗೆ ಹಿಡಿದು ಹೊಟ್ಟೆ ತುಂಬಿಸಿಕೊಂಡ ಗದಿಗೆಯ್ಯನವರು, ಆ ಬಳಿಕ ಬಾಗಲುಕೋಟೆಯಲ್ಲಿ ನಡೆಯುತ್ತಿದ್ದ ಅಖಿಲ ಭಾರತ ವೀರಶೈವ ಮಹಾಸಭೆಯ ಅಧಿವೇಶನದಲ್ಲಿ ಶ್ರೀ ಕುಮಾರಸ್ವಾಮಿಗಳಿಂದ “ಪಂಚಾಕ್ಷರಿ ಗವಾಯಿ” ಎಂದು ಉದ್ಘೋಷಿತರಾದರು. ಆ ಬಳಿಕ ಸಹ ಮತ್ತೆ ನಾಲ್ಕು ವರ್ಷ ಹಿಂದುಸ್ತಾನಿ ಸಂಗೀತವನ್ನು ಅಭ್ಯಸಿಸಿ ಉಭಯ ಸಂಗೀತ ಪಂಡಿತರಾದರು. ಸಂಗೀತದ ಮೂಲಕವೆ ಸಮಾಜಸೇವೆ ಮಾಡಲು ಬಯಸಿದ್ದ ಪಂಚಾಕ್ಷರಿ ಗವಾಯಿಗಳು ಕಂಚಗಲ್ ಬಿದಿರೆ ಗ್ರಾಮದ ಪ್ರಭುಕುಮಾರ ಶಿವಾಚಾರ್ಯರಿಂದ ಶಿವದೀಕ್ಷೆ ಪಡೆದು ಆಧ್ಯಾತ್ಮಮಾರ್ಗದಲ್ಲೂ ಮುನ್ನಡೆದರು. *ಸಂಗೀತ ಪ್ರಚಾರ* _________________ ಪಂಚಾಕ್ಷರಿ ಗವಾಯಿಗಳು ನಾಡಿನಲ್ಲೆಲ್ಲ ಸಂಚರಿಸುತ್ತ ಒಂದು ಸಂಚಾರೀ ಪಾಠಶಾಲೆಯನ್ನು ಪ್ರಾರಂಭಿಸಿದರು. ೧೯೧೪ರಲ್ಲಿ ಗದಗ ಜಿಲ್ಲೆಯ ರೋಣ ತಾಲೂಕಿನ ನಿಡಗುಂದಿಕೊಪ್ಪದಲ್ಲಿ ಶಿವಯೋಗ ಮಂದಿರದಲ್ಲಿ ಹಾನಗಲ್ಲ ಕುಮಾರಸ್ವಾಮಿಗಳವರು ಬಸವ ಜಯ೦ತಿಯ೦ದು ಸ್ಥಾಪಿಸಿಕೊಟ್ಟರು. ಶಾಖೆಯಾಗಿ ಸಂಗೀತ ಶಾಲೆಯೊಂದನ್ನು ಪ್ರಾರಂಭಿಸಿದರು. ಈ ಸಂಗೀತಶಾಲೆಗಳಲ್ಲಿ ಕನ್ನಡ ಮತ್ತು ಸಂಸ್ಕೃತಗಳನ್ನು ಸಹ ಹೇಳಿಕೊಡಲಾಗುತ್ತಿತ್ತು. ಇವರ ಶಿಷ್ಯರಲ್ಲಿ ಇವರ ಉತ್ತರಾಧಿಕಾರಿಯಾಗಿ ದೊರೆತ, ಪ್ರಸಿದ್ಧ ಗವಾಯಿ ಪುಟ್ಟರಾಜರೂ ಸಹ ಕುರುಡರೇ! ಸಂಗೀತಶಾಲೆಗಳ ಖರ್ಚು ತೂಗಿಸಲು ನಾಟಕ ಕಂಪನಿಯೊಂದನ್ನು ಪ್ರಾರಂಭಿಸಿ ಕೈಸುಟ್ಟುಕೊಂಡದ್ದೂ ಆಯಿತು. ಈ ನಡುವೆ ೧೯೩೦ರಲ್ಲಿ ಪಂಚಾಕ್ಷರಿ ಗವಾಯಿಗಳ ರೂವಾರಿಯಾಗಿದ್ದ ಹಾನಗಲ್ ಕುಮಾರಸ್ವಾಮಿಗಳು ಲಿಂಗೈಕ್ಯರಾದರು. ಇದೇ ಸಮಯದಲ್ಲಿ ಬರಗಾಲ ಬಿದ್ದದ್ದರಿಂದ ಪಂಚಾಕ್ಷರಿ ಗವಾಯಿಗಳು ತಮ್ಮ ಶಿಷ್ಯರಿಗಾಗಿ ಪಟ್ಟ ಪಾಡು ಅಷ್ಟಿಷ್ಟಲ್ಲ. ಆಗ ಮುಂದೆ ಬಂದು ನೆರವು ನೀಡಿದವರು ಬಸರಿಗಿಡದ ವೀರಪ್ಪನವರು. ಇವರು ಗವಾಯಿಗಳಿಗಾಗಿ ಗದಗಿನಲ್ಲಿಯೇ ತಮ್ಮ ಜಾಗದಲ್ಲಿ ಒಂದು ತಗಡಿನ ಪಾಠಶಾಲೆ ಕಟ್ಟಿಸಿಕೊಟ್ಟು, ಧನ-ಧಾನ್ಯದ ಸಹಾಯವನ್ನು ಸಹ ನೀಡಿದರು. ಈ ಸಂಗೀತಶಾಲೆಗೆ ಗವಾಯಿಗಳು “ ಶ್ರೀ ವೀರೇಶ್ವರ ಪುಣ್ಯಾಶ್ರಮ” ಎಂದೇ ಹೆಸರಿಟ್ಟರು. *ಕನ್ನಡ ಪ್ರೇಮಿ ____________ ಎಚ್.ಎಮ್.ವಿ. ಕಂಪನಿಯವರು ಖ್ಯಾತ ಕಲಾವಿದರ ಗಾನಮುದ್ರಿಕೆಗಳನ್ನು ಹೊರತರುವ ಸಲುವಾಗಿ ಅನೇಕ ಕಲಾವಿದರನ್ನು ಮುಂಬಯಿಗೆ ಕರೆಸಿದ್ದರು. ಕನ್ನಡದಲ್ಲಿಯೇ ಗಾಯನ ಮಾಡುವದಾಗಿ ಹಟ ಮಾಡಿದ ಪಂಚಾಕ್ಷರಿ ಗವಾಯಿಗಳು ಕಾರ್ಯಕ್ರಮ ಬಹಿಷ್ಕರಿಸಿ ಹೊರನಡೆದಾಗ, ಕಂಪನಿಯವರು ಗವಾಯಿಗಳ ಆಗ್ರಹಕ್ಕೆ ಮಣಿಯಲೇ ಬೇಕಾಯಿತು. *ಸ್ವದೇಶಾಭಿಮಾನಿ ಗ್ರಾಮ್ಯ ಸಂಸ್ಕೃತಿ* —————————————— ಪಂಚಾಕ್ಷರಿ ಗವಾಯಿಗಳು ಖಾದಿಯನ್ನೇ ತೊಡುತ್ತಿದ್ದರು. ಉದರ ರೋಗದಿಂದ ಬಳಲುತ್ತಿರುವಾಗ ಆಯುರ್ವೇದದ ಹೊರತಾಗಿ, ಇಂಗ್ಲಿಷ್ ವೈದ್ಯಕೀಯಕ್ಕೆ ಗವಾಯಿಗಳು ಒಪ್ಪಿಕೊಳ್ಳಲಿಲ್ಲ. ಕೊನೆಗೂ ಇದೇ ರೋಗಕ್ಕೆ ಗವಾಯಿಗಳು ಬಲಿಯಾದರು. *ಲಿಂಗೈಕ್ಯ* ——————- ಸುಮಾರು ನಾಲ್ಕು ವರ್ಷಗಳವರೆಗೆ ಗವಾಯಿಗಳು ಉದರ ರೋಗದಿಂದ ಬಳಲಿದರು. ಕೊನೆಗೆ ದಿನಾಂಕ ೧೧, ಜೂನ್ ೧೯೪೪ರಂದು ಪಂಚಾಕ್ಷರ ಗವಾಯಿಗಳು ವಿಶ್ವಸಂಗೀತದಲ್ಲಿ ಲೀನರಾದರು ಮತ್ತು ನಿಧನರಾದರು. ತಮ್ಮ ಜೀವಿತ ಐವತ್ತೆರಡು ವರುಷಗಳಲ್ಲಿ ಸಂಗೀತ ಸಾಮ್ರಾಜ್ಯವನ್ನು ಕಟ್ಟಿದರು. ಡಾ ಶಶಿಕಾಂತ ಪಟ್ಟಣ ರಾಮದುರ್ಗ

ಸಾವಿಲ್ಲದ ಶರಣರು ಮಾಲಿಕೆ,”ಸಂಚಾರಿ ಸಂಗೀತ ಸಾಮ್ರಾಟ  ಶ್ರೀ  ಪಂಚಾಕ್ಷರಿ ಗವಾಯಿಗಳು” ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

“ಸಾವಿರದ ಶರಣರು ಮಾಲಿಕೆ” ಗುರುವಿನ ಗುರು ಯಳಂದೂರು ಶ್ರೀ ಬಸವಲಿಂಗ ಶಿವಯೋಗಿಗಳು

ಶರಣರ ಸಂಗಾತಿ ಸಾವಿಲ್ಲದ ಶರಣರು ಶಶಿಕಾಂತ್‌ ಪಟ್ಟಣ ರಾಮದುರ್ಗಾ ಗುರುವಿನ ಗುರು ಯಳಂದೂರು ಶ್ರೀ ಬಸವಲಿಂಗ ಶಿವಯೋಗಿಗಳು  ಯಳಂದೂರು ಶ್ರೀ  ಬಸವಲಿಂಗ ಶಿವಯೋಗಿಗಳು ಚಾಮರಾಜನಗರ ಜಿಲ್ಲೆಯ ಕಾರಾಪುರದ ಗ್ರಾಮದ. ಮಧ್ಯಮ ವ್ಯಾಪಾರ ಕಾಯಕದ ಲಿಂಗಾಯತ ಬಣಜಿಗ ಕುಟುಂಬದಲ್ಲಿ ಜನಿಸಿದರು.  ಬಾಲ್ಯದಲ್ಲಿ ಶ್ರೀ ಯಳಂದೂರು ಬಸವಲಿಂಗ ಶಿವಯೋಗಿಗಳು ಶ್ರೀ ಸಿದ್ಧಾರೂಢರ ಕೃಪೆ ಕಟಾಕ್ಷಕ್ಕೆ ಒಳಗಾದರು. ಮುಂದೆ ಗದುಗಿನ ತೋಂಟದಾರ್ಯ ಮಠದ ಅಧಿಪತಿಯಾದರು.  ಒಬ್ಬ ಪ್ರಮುಖ ಲಿಂಗಾಯತ  ಆಧ್ಯಾತ್ಮಿಕ ನಾಯಕರು ಮತ್ತು ವ್ಯಕ್ತಿ, ಹಾನಗಲ್ ಶ್ರೀ ಕುಮಾರ ಶಿವಯೋಗಿಗಳ ಗುರುಗಳು  ಮತ್ತು ಪೂಜ್ಯರು, ತಮ್ಮ ಆಧ್ಯಾತ್ಮಿಕ ಕೊಡುಗೆಗಳಿಂದ ಶ್ರೀ ಹಾನಗಲ್ ಕುಮಾರ ಸ್ವಾಮೀಜಿಗೆ ಚೈತನ್ಯ ದೀಕ್ಷೆ ನೀಡಿ ತಮ್ಮ ಬಳಿಗೆ 12 ವರುಷ ವಿದ್ಯಾರ್ಜನೆಗೆ ಇಟ್ಟು ಕೊಂಡಿದ್ದರು.  ಶ್ರೀ ಶಿವಯೋಗ ಮಂದಿರ ಮತ್ತು ಲಿಂಗಾಯತ  ಧರ್ಮದ ಬೆಳವಣಿಗೆಗೆ ಕಾರಣರಾದರು, ಇವರನ್ನು “ಗುರುವಿನ ಗುರು” ಎಂದು ಗೌರವಿಸಲಾಗುತ್ತದೆ.   *ಬದುಕು ಮತ್ತು  ಕೊಡುಗೆಗಳು:* _____________________ ಆಧ್ಯಾತ್ಮಿಕ ನಾಯಕತ್ವ: ಯಳಂದೂರು ತಾಲ್ಲೂಕಿನ ಕಾರಾಪುರ ವಿರಕ್ತಮಠದ ಪ್ರಮುಖ ಗುರುಗಳಾಗಿದ್ದರು. ಹಾನಗಲ್ ಶ್ರೀ ಕುಮಾರ ಶಿವಯೋಗಿಗಳ ಗುರುಗಳಾಗಿ, ಅವರ ಆಧ್ಯಾತ್ಮಿಕ ಪರಂಪರೆಯನ್ನು ಮುಂದುವರಿಸಿದರು. ಮಹಾಸಭೆಯಲ್ಲಿ ಪಾತ್ರ: ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರಾಗಿ ಮಹಾಸಭೆಯ ಸ್ಥಾಪನೆ ಮತ್ತು ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದರು. ಶ್ರೀ ಶಿವಯೋಗ ಮಂದಿರ:  ಶ್ರೀ ಶಿವಯೋಗ ಮಂದಿರದ ರಕ್ಷಣೆ ಮತ್ತು ಅಭಿವೃದ್ಧಿಯಲ್ಲಿ ಅವರ ಕೊಡುಗೆ ಮಹತ್ವದ್ದು. ಮಂದಿರದ ತಾಳೆ ಗ್ರಂಥಗಳ ರಕ್ಷಣೆ ಮತ್ತು ಗ್ರಂಥಾಲಯ ಸ್ಥಾಪನೆಯಲ್ಲಿ ಅವರ ಪ್ರಭಾವವಿತ್ತು. *ಧಾರ್ಮಿಕ ಮತ್ತು ಸಾಮಾಜಿಕ ಕೊಡುಗೆ:*  ತಮ್ಮ ಆಧ್ಯಾತ್ಮಿಕ ಶಕ್ತಿಯಿಂದ ಧಾರ್ಮಿಕ ಚಟುವಟಿಕೆಗಳನ್ನು ನಡೆಸುತ್ತಾ, ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಮಹತ್ತರ ಕೊಡುಗೆ ನೀಡಿದರು.  , ಯಳಂದೂರು ಬಸವಲಿಂಗ ಶಿವಯೋಗಿಗಳು ಲಿಂಗಾಯತ  ಧರ್ಮದ ಜಾಗೃತಿ ಮತ್ತು ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಒಬ್ಬ ಮಹಾನ್ ಶಿವಯೋಗಿಗಳು.  ಪರಮ ಪೂಜ್ಯ ಯಳಂದೂರು ಬಸವಲಿಂಗ ಶಿವಯೋಗಿಗಳು. * *ಅಖಿಲ ಭಾರತ ವೀರಶೈವ ಮಹಾಸಭೆ ಸ್ಥಾಪನೆ*  ಅಖಿಲ ಭಾರತ ವೀರಶೈವ ಮಹಾಸಭಾ ಸ್ಥಾಪನೆ  ಹಾನಗಲ್ಲ ಶ್ರೀ ಕುಮಾರಸ್ವಾಮಿಗಳು ಶ್ರೀ ಬಿದರಿ  ಸದಾಶಿವ ಮಹಾಸ್ವಾಮಿಗಳು  ಪರಮ ಪೂಜ್ಯ ಯಳಂದೂರು ಬಸವಲಿಂಗ ಶಿವಯೋಗಿಗಳು. ವೈರಾಗ್ಯದ ಮಲ್ಲಣ್ಣಾರ್ಯರ ನಿರಂತರ ಪ್ರಯತ್ನ ಮತ್ತು ವಾರದ ಮಲ್ಲಪ್ಪನವರ ಆರ್ಥಿಕ ಸಹಾಯ ಅರಟಾಳ ರುದ್ರಗೌಡರ ನಿರಂತರ ಯೋಜನೆ ಮುಖ್ಯ ಕಾರಣ.   *ಗುರುವಿನ ಗುರು ಶ್ರೀ ಯಳಂದೂರು ಬಸವಲಿಂಗ ಶಿವಯೋಗಿಗಳು* ಯಳಂದೂರು ಶ್ರೀ ಬಸವಲಿಂಗ ಶಿವಯೋಗಿಗಳು  ಕಾರಾಪುರ ವಿರಕ್ತಮಠ ಚಾಮರಾಜನಗರ ಜಿಲ್ಲೆ ಅಂದು ಶ್ರೀ  ಹಾನಗಲ್ ಕುಮಾರ ಸ್ವಾಮೀಜಿ ಅವರು  ಯಳಂದೂರು ಶ್ರೀ ಬಸವಲಿಂಗ  ಶಿವಯೋಗಿಗಳ ಲಿಂಗ ಹಸ್ತದಿಂದ ಗುರು ಕಾರುಣ್ಯ ಚೈತನ್ಯ ದೀಕ್ಷೆ ಪಡೆದರು. ಮುಂದೆ ಹಾನಗಲ್ ಶ್ರೀ  ಕುಮಾರ ಶಿವಯೋಗಿಗಳು ಶಿವಯೋಗ ಮಂದಿರ ನಿರ್ಮಾಣಕ್ಕೆ ಮುಂದಾಗಿ ತಮ್ಮ ದೀಕ್ಷಾ ಗುರುಗಳಾದ ಯಳಂದೂರು ಶ್ರೀ ಬಸವಲಿಂಗ ಶಿವಯೋಗಿಗಳ ಆಶ್ರಯಕ್ಕೆ ನಿಂತರು. ಶಿವಯೋಗ ಮಂದಿರದ ವಟುಗಳಿಗೆ ಶ್ರೀ ಹಾನಗಲ್ ಶ್ರೀ ಕುಮಾರ ಶಿವಯೋಗಿಗಳ ಸಾಕ್ಷಾತ್ ದೇವರು ಅರುವಿನ ಗುರು.ಹೀಗಾಗಿ  ಇಂತಹ ದೊಡ್ಡ ಕುಮಾರ ಶಿವಯೋಗಿಗಳ ಗುರುಗಳು ಭಕ್ತ ವರ್ಗದ ಯಳಂದೂರು ಶ್ರೀ ಬಸವಲಿಂಗ ಶಿವಯೋಗಿಗಳು   ಯಳಂದೂರು ತಾಲ್ಲೂಕಿನ ಶ್ರೀ ಕಾರಾಪುರ ವಿರಕ್ತಮಠವು ಕರ್ನಾಟಕ ಧಾರ್ಮಿಕ ಇತಿಹಾಸಕ್ಕೆ ಮಹತ್ತರ ಕೊಡುಗೆ ನೀಡಿದೆ  *ಯಳಂದೂರು ಶ್ರೀ ಬಸವಲಿಂಗ ಶಿವಯೋಗಿಗಳ ಲಿಂಗ ಸಮಾಧಿ* ಮೂವತ್ತಾರು  ವರ್ಷಗಳ ಹಿಂದೆ ನಾನು  ಯಳಂದೂರು ಶ್ರೀ ಬಸವಲಿಂಗ ಶಿವಯೋಗಿಗಳ ಚರಿತ್ರೆ ಹುಟ್ಟು ಬಾಲ್ಯ ಮತ್ತು ಅವರ ಶಿಷ್ಯ ಪರಂಪರೆಯನ್ನು ಹುಡುಕುತ್ತಾ ಮೊದಲು ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಮಠಕ್ಕೆ ಹೋಗಿದ್ದೆ. ಅಲ್ಲಿನ ಅನೇಕ ಹಿರಿಯರ ಮೌಖಿಕ ಚರ್ಚೆಗಳನ್ನು ಆಧರಿಸಿ ಗದಗ ತೋಂಟದಾರ್ಯ ಮಠದಲ್ಲಿ ಅವರ ಚರಿತ್ರೆಗೆ ಶೋಧ ನಡೆಸಿದೆ. ಆಶ್ಚರ್ಯ ಎಂದರೆ  ಯಳಂದೂರು ಶ್ರೀ ಬಸವಲಿಂಗ ಶಿವಯೋಗಿಗಳು ಗದಗ ತೋಂಟದಾರ್ಯ ಮಠದ ಜಗದ್ಗುರುಗಳಾಗಿದ್ದರು.  ಇವರ ಲಿಂಗೈಕ್ಯವಾದ ಸಮಾಧಿಯ ಕುರುಹು ನನಗೆ ಸಿಗಲಿಲ್ಲ ಆಗ ಒಬ್ಬ ವಯೋವೃದ್ಧರು ನನಗೆ ಸರ್ ಅಣ್ಣಿಗೇರಿಯಲ್ಲಿ ಒಬ್ಬ ಒಂದು ಲಿಂಗಾಯತ ಧರ್ಮದ ಗದ್ದುಗೆ ಇದೆಯೆಂದು ಹೇಳಿದರು. ಅವರ ಮಾತಿನ ಜಾಡು ಹಿಡಿದುಕೊಂಡು ಅಣ್ಣಿಗೇರಿಗೆ ಹೋಗುವ ಪ್ರಯತ್ನ ಮಾಡಿದೆ.  ನನ್ನ ತಾಯಿಯ ತವರು ಮನೆ ಮುಳುಗುಂದ ವಾಲಿ ಮನೆತನ. ಅಲ್ಲಿಂದ ನಾನು ಶ್ರೀ ಬಸವರಾಜ ವಾಲಿ ಎಂಬ ನನ್ನ ಮಾವನವರೊಂದಿಗೆ ಅಣ್ಣಿಗೇರಿಗೆ ಬಂದೆನು. ಆಗ ತೋಂಟದಾರ್ಯ ಮಠದ ಒಂದು ಗದ್ದುಗೆ ಕಣ್ಣಿಗೆ ಬಿತ್ತು. ಆ ಗದ್ದುಗೆಯ ಗುಡಿಯ ಸುತ್ತಲೂ ಕುರುಳು ಬೆರಣಿ ಉರುವಲು ತಟ್ಟುತ್ತಿದ್ದರು. ಅಣ್ಣಿಗೇರಿ ಗ್ರಾಮಸ್ಥರು ಇದು ನಮ್ಮ ಹಿಂದಿನ ಅಜ್ಜಾರ ಗದ್ದುಗೆ ಎಂದು ಹೇಳಿದರು. ಗ್ರಾಮೀಣ ಭಾಗದ ಜನರಿಗೆ ಅಷ್ಟೊಂದು ಹೆಸರುಗಳು ನೆನಪಿಗೆ ಇರಲಿಲ್ಲ. ಆಗ ನನಗೆ ಇವರು ಗದುಗಿನ ತೋಂಟದಾರ್ಯ ಮಠದ ಪರಂಪರೆ ಜಗದ್ಗುರು ಆಗಿದ್ದರು ಎಂಬ ಸಾಕ್ಷಿ ಸಿಕ್ಕಿತ್ತು. ಇದನ್ನು ಅವಲಂಬಿತವಾಗಿ ಇಟ್ಟು ಕೊಂಡು ಇದು ತೋಂಟದಾರ್ಯ ಮಠದ ಪರಂಪರೆ ಯಳಂದೂರು ಶ್ರೀ ಬಸವಲಿಂಗ ಶಿವಯೋಗಿಗಳ ಗದ್ದುಗೆ ಎಂದು ತೀರ್ಮಾನ ಮಾಡಲು ಅನುಕೂಲವಾಯಿತು. ಇದನ್ನು ಗದುಗಿನ ಅಂದಿನ ಜಗದ್ಗುರುಗಳು ಅಪ್ಪಟ ಬಸವ ಪ್ರೇಮಿ  ಶ್ರೀ ಡಾ ಸಿದ್ಧಲಿಂಗ ಸ್ವಾಮೀಜಿ ಅವರಿಗೆ  ಯಳಂದೂರು ಶ್ರೀ ಬಸವಲಿಂಗ ಶಿವಯೋಗಿಗಳ ಗದ್ದುಗೆ ವಿಷಯ ಪ್ರಸ್ತಾಪ ಮಾಡಿದೆ. ಆಗ ಶ್ರೀ ಡಾ ಸಿದ್ಧಲಿಂಗ ಸ್ವಾಮೀಜಿ ಅವರು ಅಣ್ಣಿಗೇರಿಯ ಯಳಂದೂರು ಶ್ರೀ ಬಸವಲಿಂಗ ಶಿವಯೋಗಿಗಳ ಗದ್ದುಗೆ ಸ್ವಚ್ಛ ಮಾಡಲು ಹೇಳಿ ಮುಂದೆ ಬೋರ್ಡ್ ಹಚ್ಚಿಸುವ ವ್ಯವಸ್ಥೆ ಮಾಡಿ ಐತಿಹಾಸಿಕ ಪ್ರಜ್ಞೆಯನ್ನು ಮೆರೆದರು. ಇದನ್ನು ಮುಂದೆ ತೋಂಟದಾರ್ಯ ಮಠದ ಶ್ರೀ ಎಸ್ ಎಸ್ ಪಟ್ಟಣಶೆಟ್ಟಿ ಆಡಳಿತಾಧಿಕಾರಿಗಳು ಅವರಿಗೆ ಹೇಳಿದ್ದು ನೆನಪಿದೆ. ಇದನ್ನು ಸ್ವತಃ  ಎಸ್ ಎಸ್ ಪಟ್ಟಣಶೆಟ್ಟಿ ಆಡಳಿತಾಧಿಕಾರಿಗಳು ನನಗೆ ಹೇಳಿದರು.  ಅಸ್ಪಷ್ಟವಾಗಿದ್ದ ಸಂಗತಿ ಮತ್ತು ಕೆಲವರಿಗೆ ಮಾತ್ರ ಗೊತ್ತಿದ್ದ ಯಳಂದೂರು ಶ್ರೀ ಬಸವಲಿಂಗ ಶಿವಯೋಗಿಗಳ ಗದ್ದುಗೆ ಅಧಿಕೃತವಾಗಿ ದಾಖಲಾಗುವಲ್ಲಿ ಲಿಂಗೈಕ್ಯ ಡಾ ಸಿದ್ಧಲಿಂಗ ಸ್ವಾಮಿಗಳು ಮತ್ತು ಅದನ್ನು ಮುಕ್ತ ಮನಸ್ಸಿನಿಂದ ಹೇಳಿಕೊಳ್ಳುತ್ತಿದ್ದರು. ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

“ಸಾವಿರದ ಶರಣರು ಮಾಲಿಕೆ” ಗುರುವಿನ ಗುರು ಯಳಂದೂರು ಶ್ರೀ ಬಸವಲಿಂಗ ಶಿವಯೋಗಿಗಳು Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಸಾವಿಲ್ಲದ ಶರಣರು ಮಾಲಿಕೆ,”ಕನ್ನಡದ ಕಟ್ಟಾಳು ಗಡಿ ಕಾಯ್ದ ಯೋಧ ಡೆಪ್ಯೂಟಿ  ಚನ್ನಬಸಪ್ಪನವರು”-ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

ಶರಣ ಸಂಗಾತಿ ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ ಸಾವಿಲ್ಲದ ಶರಣರು ಮಾಲಿಕೆ, “ಕನ್ನಡದ ಕಟ್ಟಾಳು ಗಡಿ ಕಾಯ್ದ ಯೋಧ ಡೆಪ್ಯೂಟಿ  ಚನ್ನಬಸಪ್ಪನವರು”- ಕಿತ್ತೂರು ಸಂಸ್ಥಾನ ಪೇಶ್ವೆ ಮರಾಠರು ಹೀಗೆ ಕರ್ನಾಟಕ ಮಹಾರಾಷ್ಟ್ರ ರಾಜ್ಯಗಳ ಸಾಂಸ್ಕೃತಿಕ ಸಂಬಂಧ ಹಲವು ಶತಮಾನಗಳಿಂದ ನಿರಂತರ ಸಾಗಿ ಬಂದಿವೆ. ಒಂದು ಅರ್ಥದಲ್ಲಿ ಮಹಾರಾಷ್ಟ್ರದ ಕುಲ ದೇವತೆ ಪಂಡರಾಪುರದ  ವಿಠ್ಠಲ ಹಂಪಿಯುವನು. ಹೀಗಾಗಿ ಮಹಾರಾಷ್ಟ್ರದ ಜನರು ಮತ್ತು  ವಾರಕರಿ ಪಂಥ ಈಗಲೂ ಕೂಡ ವಿಠಲನನ್ನು ಕಾನಡೋ ವಿಠ್ಠಲ.ಅಂದರೆ ಕನ್ನಡದ ವಿಠ್ಠಲ ಎನ್ನುತ್ತಾರೆ. ಅನೇಕ ಕರ್ನಾಟಕದ  ಅರಸು ಮನೆತನಗಳು  ಮಹಾರಾಷ್ಟ್ರದಲ್ಲಿ ತಮ್ಮ ಸಾಮ್ರಾಜ್ಯವನ್ನು ಸ್ಥಾಪಿಸಿವೆ.  ರಾಷ್ಟ್ರಕೂಟರ  ದಂತಿದುರ್ಗ ಅಜಂತಾ ಎಲ್ಲೋರ ಕೈಲಾಸ ದೇವಾಲಯವನ್ನು. ಮಹಾರಾಷ್ಟ್ರದಲ್ಲಿ ಸ್ಥಾಪಿಸಿದರು. ರಾಮದುರ್ಗ ನರಗುಂದ ಜಮಖಂಡಿ ಸಂಸ್ಥಾನಗಳನ್ನು ಮರಾಠಿ ಮೂಲದ ಕೊಂಕಣಿ ಬ್ರಾಹ್ಮಣರು ಸ್ಥಾಪಿಸಿದರು.ಮುಧೋಳ ಘೋರ್ಪಡೆ ಮನೆತನದ ಮರಾಠರು ಆಳಿದರು. ಹೀಗೆ ಮುಂದುವರೆದ ಕನ್ನಡ ಮರಾಠಿ ಭಾಷೆಗಳ ಸಾಂಸ್ಕೃತಿಕ ಸಂಬಂಧ ಕನ್ನಡ ಭಾಷೆ ಸಾಹಿತ್ಯ ಸಂಸ್ಕೃತಿಗೆ ಒಮ್ಮೆ ಕುತ್ತು ತರುವ ಹಾಗಾಯಿತು. ಇಂತಹ ಆಪತ್ತನ್ನು ಮುಕ್ತ ಗೊಳಿಸಿದ ದಿಟ್ಟ ಯೋಧ ಡೆಪ್ಯುಟಿ ಚೆನ್ನಬಸಪ್ಪನವರು. 19ನೆಯ ಶತಮಾನದ ಉತ್ತರಾರ್ಧವು ಮುಂಬೈ ಕರ್ನಾಟಕದಲ್ಲಿ ಮರಾಠಿಯ ಪ್ರಾಬಲ್ಯದ ಹಾಗೂ ಇಂಗ್ಲೀಷಿನ ಪ್ರಾರಂಭದ ಕಾಲ.  ಆಗ ಕನ್ನಡ ಭಾಷೆ, ಶಿಕ್ಷಣ, ಸಾಹಿತ್ಯ ಮತ್ತು ಸಂಸ್ಕೃತಿಗಳನ್ನು ಉಳಿಸಿ ಬೆಳೆಸುವ ಮಹಾ ಕಾರ್ಯಕ್ಕೆ ನಾಂದಿ ಹಾಡಿದವರು ಡೆಪ್ಯುಟಿ ಚನ್ನಬಸಪ್ಪನವರು.  ಜನನ  ಚನ್ನಬಸಪ್ಪನವರು 1834 ವರ್ಷದ ನವೆಂಬರ್ 1ರಂದು ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ಜನಿಸಿದರು.  ತಂದೆ ಬಸಲಿಂಗಪ್ಪನವರು ಮತ್ತು ತಾಯಿ ತಿಮ್ಮಮ್ಮನವರು (ತಿಪ್ಪವ್ವ). ಚೆನ್ನಬಸಪ್ಪನವರ ತಂದೆಯವರು ತಮ್ಮ ಮನೆತನದ ಮೂಲ ಕಾಯಕವಾದ ವ್ಯಾಪಾರಕ್ಕಾಗಿ  ಧಾರವಾಡಕ್ಕೆ ಬಂದರು. ಶಿಕ್ಷಣ ಅವರ ಪ್ರಾರಂಭಿಕ ಶಿಕ್ಷಣ ನಡೆದಿದ್ದು ಧಾರವಾಡದಲ್ಲಿ.  ಕಲಿತದ್ದು ಕನ್ನಡ, ಮರಾಠಿ ಮತ್ತು ಗಣಿತ.  ಬಾಲಕ ಚನ್ನಬಸಪ್ಪನವರು ಇಂಗ್ಲಿಷ್ ಕಲಿಯುವ ಹಂಬಲದಿಂದ ಯಾರಿಗೂ ಹೇಳದೆ ಕೇಳದೆ, ಧಾರವಾಡದಿಂದ ಗೋಕಾಕಕ್ಕೆ ಬರಿಗಾಲಿನಿಂದ ನಡೆದುಕೊಂಡು ಹೋಗಿ ಅಲ್ಲಿ ತಮ್ಮ ಸಂಬಂಧಿಗಳ ಹತ್ತಿರ ಐವತ್ತು ರೂಪಾಯಿ ಕೂಡಿಸಿಕೊಂಡು ಮತ್ತೆ ಕಾಲ್ನಡಿಗೆಯಲ್ಲಿ   ಪುಣೆ ತಲುಪಿದರು. ಪುಣೆಯಲ್ಲಿ ಅವರಿಗೆ ಆಶ್ರಯ ನೀಡಿದವರು ಗೋವಿಂದರಾವ್ ಮೆಹಂಡಳೇಕರ ಅವರು. ಓದಿನಲ್ಲಿ ಪಾರಂಗತರೆನಿಸಿದ ಡೆಪ್ಯುಟಿ ಚೆನ್ನಬಸಪ್ಪನವರು ಅವರಿಗೆ  ಪ್ರತಿ ತಿಂಗಳೂ ಹತ್ತು ರೂಪಾಯಿ ವಿದ್ಯಾರ್ಥಿ ವೇತನ ಪಡೆಯುತ್ತಿದ್ದರಂತೆ.  ಅಂದಿನ ದಿನದಲ್ಲಿ ಕೆಲಸದಲ್ಲಿದ್ದವರಿಗೆ ಸಂಬಳ ಅಷ್ಟು ಬರುತಿದ್ದರೆ ಹೆಚ್ಚಿರುತ್ತಿದ್ದ ಕಾಲ.  ಈ ಸಮಯದಲ್ಲಿ ತಮ್ಮ  ತಾಯಿಯನ್ನು ತಮ್ಮ ಬಳಿ ವಾಸಕ್ಕೆ ಪುಣೆಗೆ ಕರೆಸಿಕೊಂಡಾಗ ತಿಪ್ಪಮ್ಮನಿಗೆ  ಅಪರಿಮಿತ ಸಂತೋಷ ಖುಷಿ ಆಗಿತ್ತು. ಚನ್ನಬಸಪ್ಪನಾವರು ಇಂಗ್ಲೆಂಡಿನಲ್ಲಿ ಅದೇ ತಾನೇ ತೆರೆದ ಕೂಪರ್ಸ್‌ಹಿಲ್ ಇಂಜಿನಿಯರಿಂಗ್ ಕಾಲೇಜಿಗೆ ಸೇರಲು ಆಯ್ಕೆಯಾದ ಐವರು ಪ್ರತಿಭಾವಂತ ವಿದ್ಯಾರ್ಥಿಗಳಲ್ಲೊಬ್ಬರಾಗಿದ್ದರು.  ದಾದಾಬಾಯಿ ನವರೋಜಿಯವರ ಈ ಯೋಜನೆ ಅಯಶಸ್ವಿಯಾಗಿ ಇಂಗ್ಲೆಂಡ್ ಪ್ರಯಾಣ ರದ್ದುಗೊಂಡಿತು.  ಆಗ ಅವರು ವಿಧಿಯಿಲ್ಲದೆ  1855ರಲ್ಲಿ ಮತ್ತೆ ಧಾರವಾಡಕ್ಕೆ ವಾಪಸ್ಸು ಬಂದರು.   ವೃತ್ತಿ ಜೀವನ ಕೆಲಕಾಲ ಅಂಚೆ ಕಚೇರಿಯಲ್ಲಿ ಕೆಲಸ ಮಾಡಿದರು.  ಅಷ್ಟರಲ್ಲಿ ಧಾರವಾಡದಲ್ಲಿ ನೂತನವಾಗಿ ಆರಂಭಗೊಂಡ ನಾರ್ಮಲ್ ಶಾಲೆಯ ಮುಖ್ಯೋಪಾಧ್ಯಾಯರಾಗಿ ಆಯ್ಕೆಗೊಂಡರು.  ಶಿಕ್ಷಣ ಇಲಾಖೆಯನ್ನು ಪ್ರವೇಶಿಸಿ 1861ರಲ್ಲಿ  ಬೆಳಗಾಂ ಜಿಲ್ಲೆಯ ಡೆಪ್ಯೂಟಿ ಇನ್‌ಸ್ಪೆಕ್ಟರೆನಿಸಿದರು.  ಹೀಗಾಗಿ ಅವರ ಹೆಸರಿಗೆ  ಡೆಪ್ಯೂಟಿ  ವಿಶೇಷಣ ಅಂಟಿಕೊಂಡಿತು.  ಚನ್ನಬಸಪ್ಪನವರು ಅಧಿಕಾರಕ್ಕೆ ಬರುವ ಮುನ್ನ ಧಾರವಾಡ, ಬೆಳಗಾವಿ, ಬಿಜಾಪುರ ಜಿಲ್ಲೆಯ ಕನ್ನಡ ಶಾಲೆಯ ಸಂಖ್ಯೆ ಕೇವಲ 34 ಇತ್ತು.  ಚನ್ನಬಸಪ್ಪನವರ ಹತ್ತು ವರುಷದ ಆಡಳಿತದಲ್ಲಿ ಕನ್ನಡ ಶಾಲೆಗಳ ಸಂಖ್ಯೆ 668ಕ್ಕೆ ಏರಿತು.  ಚನ್ನಬಸಪ್ಪನವರು, ತಮ್ಮ ಸ್ನೇಹಿತರಾದ  ರಾಮಚಂದ್ರ ಚುರಮುರಿ, ಗಂಗಾಧರ ಮಡಿವಾಳೇಶ್ವರ ತುರಮರಿ ಮೊದಲಾದ ಕನ್ನಡ ಭಕ್ತರಿಗೆ ಕನ್ನಡದಲ್ಲಿ ಗ್ರಂಥ ರಚಿಸಲು  ಪ್ರೇರಣೆ, ಪ್ರೋತ್ಸಾಹ, ಬೆಂಬಲಗಳನ್ನು ಒದಗಿಸಿದರು. ಸ್ವಯಂ ತಾವೇ ಪಠ್ಯ ಪುಸ್ತಕಗಳನ್ನು ರಚಿಸಿದರು.  ಉಚಿತ ವಿದ್ಯಾರ್ಥಿ ನಿಲಯದ ಸ್ಥಾಪನೆ  ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಚಿತ್ರದುರ್ಗದ ನಿರಂಜನ ಜಗದ್ಗುರು ಬೃಹನ್ಮಠದ ಮಹಾಲಿಂಗ ಸ್ವಾಮಿಗಳ ( ಶಿರಸಂಗಿ) ಮನವೊಲಿಸಿ ಬೆಳಗಾವಿಯಲ್ಲಿ ವೀರಶೈವ ಉಚಿತ ವಿದ್ಯಾರ್ಥಿನಿಲಯವನ್ನು ತೆರೆದರು. ಸ್ವಾಮಿಗಳ ನಿಧನಾನಂತರ ತಾವೇ ಇದರ  ಆರ್ಥಿಕ ಹೊಣೆ ಹೊತ್ತರು.  ಹೆಂಡತಿ ಮೈಮೇಲಿನ ನಗ, ಆಭರಣ ಒಡವೆ ಮಾರಿದರು. ಸಾಲದ ಬಾಧೆಗೆ  ಮನೆ-ಮಠಮಾರಿ ವಿದ್ಯಾರ್ಥಿ ನಿಲಯದ ನಿರ್ವಹಣೆ ಮಾಡಿದರಂತೆ. ಸಾಹಿತ್ಯ ಕೃತಿಗಳು ಚನ್ನಬಸಪ್ಪನವರು ‘ಕಾಮೆಡಿ ಆಫ್ ಎರರ್ಸ್‌’ (ನಗದವರನ್ನು ನಗಿಸುವ ಕಥೆ) ಮತ್ತು ‘ಮ್ಯಾಕ್‌ಬೆತ್’ ಕೃತಿಗಳನ್ನು ಪ್ರಕಟಿಸಿದರು. ‘ಮ್ಯಾಕ್‍ಬೆತ್’ ಕೃತಿಯ ಮೂಲಕ ಶೇಕ್ಸಪಿಯರ್ ಅನ್ನು ಮೊದಲು ಕನ್ನಡಕ್ಕೆ ತಂದವರು ಚನ್ನಬಸಪ್ಪನವರು. ಚನ್ನಬಸಪ್ಪಾ ಇವರು ಹುಟ್ಟು ಹಾಕಿದ ಮತ್ತು ಶತಮಾನೋತ್ಸವವನ್ನು ಆಚರಿಸಿದ ಕನ್ನಡದ ಏಕಮೇವ ಶೈಕ್ಷಣಿಕ ಮಾಸಿಕ “ಜೀವನ ಶಿಕ್ಷಣ” ಪತ್ರಿಕೆ. ಈ ಪತ್ರಿಕೆ ಸ್ಥಾಪಕರಾಗಿ ಹಲವು ಆರ್ಥಿಕ ಸಂಕಷ್ಟಕೆ ಈಡಾದರೂ  ಮಕ್ಕಳ ಕಲಿಕೆಗೆ ತಮ್ಮ ಸರ್ವಸ್ವವನ್ನು ಮಾರಿದ ಸದಾ ಸ್ಮರಣೀಯರು.  ಮಕ್ಕಳ ಶಿಕ್ಷಣಕ್ಕಾಗಿ ತಮ್ಮನ್ನೇ ಅರ್ಪಿಸಿಕೊಂಡಿದ್ದ ಚನ್ನಬಸಪ್ಪನವರಿಗೆ ಜೀವನವೇ ಶಿಕ್ಷಣ ಶಾಲೆಯಾಗಿದ್ದರಲ್ಲಿ ಅಚ್ಚರಿಯಿಲ್ಲ. ಡೆಪ್ಯುಟಿ ಚೆನ್ನಬಸಪ್ಪನವರು ಧಾರವಾಡ ಟಿಸಿಏಚ್ ಕಾಲೇಜನ್ನು ಸ್ಥಾಪಿಸಿ ಕನ್ನಡ ಶಾಲಾ ಶಿಕ್ಷಕರ ತರಬೇತಿ ಕೇಂದ್ರ ಸ್ಥಾಪಿಸಿ ಅದರ ಪ್ರಾಚಾರ್ಯರಾಗಿ ಕಾರ್ಯ ನಿರ್ವಹಿಸಿದ ಮಹಾನುಭಾವರು. ಡೆಪ್ಯುಟಿ ಚನ್ನಬಸಪಪ್ನವರು 1881 ವರ್ಷದ ಜನವರಿ 4 ರಂದು ಈ ಲೋಕವನ್ನಗಲಿದರು.  1981 ವರ್ಷದಲ್ಲಿ ಚನ್ನಬಸಪ್ಪನವರು ನಿಧನರಾದ ನೂರು ವರ್ಷಗಳಾದ ಸಂದರ್ಭದಲ್ಲಿ ಡೆಪ್ಯೂಟಿ ಚನ್ನಬಸಪ್ಪ ಪ್ರಾಥಮಿಕ ಶಿಕ್ಷಣ ಪ್ರತಿಷ್ಠಾನವನ್ನು ಸ್ಥಾಪಿಸಲಾಯಿತು. ಇದು ಪ್ರಾಥಮಿಕ ಶಿಕ್ಷಣ ಹಾಗೂ ಶಿಕ್ಷಕ ತರಬೇತಿ ರಂಗದಲ್ಲಿ ಕಾರ್ಯನಿರ್ವಹಿಸುವ ಸೇವಾಸಂಸ್ಥೆಯಾಗಿದೆ. ಕನ್ನಡದ ಪುನರುಜ್ಜೀವನ ಮತ್ತು ಶಿಕ್ಷಣ ಪ್ರಸಾರ ಕಾರ್ಯದ ಶಕಪುರುಷಕ್ಕಾಗಿ ತಮ್ಮನ್ನೇ ಅರ್ಪಿಸಿಕೊಂಡ ಡೆಪ್ಯೂಟಿ ಚನ್ನಬಸಪ್ಪನವರ ನೆನಪು ಎಲ್ಲಕಾಲಕ್ಕೂ ಸ್ಪೂರ್ತಿದಾಯಕ. ತಮ್ಮ ಬದುಕಿನ ಕೇವಲ 47 ನೆಯ  ವಯಸ್ಸಿನಲ್ಲಿ ಅಗಾಧವಾದ ಕಾರ್ಯ ಮಾಡಿ ಗಡಿ ನಾಡು ವಿಜಯಪುರ ಧಾರವಾಡ ಬೆಳಗಾವಿ ಕಾರವಾರ ಬೀದರ ಮುಂತಾದ ರಾಜ್ಯಗಳಲ್ಲಿ ಕನ್ನಡ ಶಾಲೆಗಳನ್ನು ತೆರೆದು ಕನ್ನಡವ ಉಳಿಸಿ ಬೆಳೆಸಿದ ಕನ್ನಡದ ಕಟ್ಟಾಳು ಮತ್ತು ಗಡಿ ರಕ್ಷಣೆಗೆ ನಿಂತ ದಿಟ್ಟ ಯೋಧರು. ಕರ್ನಾಟಕ ರಾಜ್ಯ ಸರ್ಕಾರ ಇವರ ಹೆಸರಿನಲ್ಲಿ ಪ್ರತಿಷ್ಠಾನ ಮಾಡಲಿ ಮತ್ತು ಕರ್ನಾಟಕ ವಿಶ್ವ ವಿದ್ಯಾಲಯದ ಆವರಣದಲ್ಲಿ ಡೆಪ್ಯುಟಿ ಚೆನ್ನಬಸಪ್ಪನವರ ಅಧ್ಯಯನ ಪೀಠ ತೆರೆಯ ಬೇಕು. ಅಪ್ಪಟ ಬಸವ ಭಕ್ತ ಲಿಂಗಾಯತ ಧರ್ಮದ ಅನುಯಾಯಿ ತಮ್ಮ ನಿಸ್ವಾರ್ಥ ಸೇವೆಗೆ ಕನ್ನಡಿಗರ ಮನದಲ್ಲಿ ಚಿರಾಯುವಾಗಿದ್ದಾರೆ. ಇಂತಹ ಶರಣರಿಗೆ ನಮ್ಮ ಭಕ್ತಿ ಪೂರ್ವಕ ಶತ ಕೋಟಿ ನಮನಗಳು. __________________________ ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

ಸಾವಿಲ್ಲದ ಶರಣರು ಮಾಲಿಕೆ,”ಕನ್ನಡದ ಕಟ್ಟಾಳು ಗಡಿ ಕಾಯ್ದ ಯೋಧ ಡೆಪ್ಯೂಟಿ  ಚನ್ನಬಸಪ್ಪನವರು”-ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಸಾವಿಲ್ಲದ ಶರಣರು ಮಾಲಿಕೆ-“ಹಳ್ಳಿಯಿಂದ ದಿಲ್ಲಿ ದರ್ಬಾರಕ್ಕೆ ಹೋದ ಶ್ರೀ ಬಸಪ್ಪ ದಾನಪ್ಪ ಜತ್ತಿ”

ಶರಣ ಸಂಗಾತಿ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಸಾವಿಲ್ಲದ ಶರಣರು ಮಾಲಿಕೆ- “ಹಳ್ಳಿಯಿಂದ ದಿಲ್ಲಿ ದರ್ಬಾರಕ್ಕೆ ಹೋದ ಶ್ರೀ ಬಸಪ್ಪ ದಾನಪ್ಪ ಜತ್ತಿ” ಒಬ್ಬ ಹಳ್ಳಿಯ ಸಾಧಾರಣ ಲಿಂಗಾಯತ ವ್ಯಾಪಾರಸ್ಥ ಮನೆತನದಲ್ಲಿ ಹುಟ್ಟಿ ಭಾರತದ ಪರಮೋಚ್ಚ ಅಧ್ಯಕ್ಷ ಸ್ಥಾನಕ್ಕೆ ಹೋದ ಅಪ್ರತಿಮ ರಾಜಕೀಯ ಮುತ್ಸದ್ಧಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಬಸಪ್ಪ ದಾನಪ್ಪ ಜತ್ತಿ ಅವರ ಬದುಕು ಒಂದು ಸಂಘರ್ಷವೇ ಆಗಿದೆ. ಒಂದು ಅವಿಸ್ಮರಣೀಯ ಪ್ರಸಂಗ _______________________ ಸಾವಳಗಿ ಇವತ್ತಿನ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಒಂದು ಪುಟ್ಟ ಗ್ರಾಮ. ಆ ಊರಿನಲ್ಲಿ ದಾನಪ್ಪ ಎಂಬ ವ್ಯಾಪಾರಿ ಮನೆತನದ ಮಧ್ಯಮ ವರ್ಗದ ವ್ಯಕ್ತಿ ಅಥಣಿಯ ಶ್ರೀ ಮುರುಗೇಂದ್ರ ಶಿವಯೋಗಿಗಳ ಪರಮ ಶಿಷ್ಯರಾಗಿದ್ದರು. ಒಂದು ದಿನ ದಾನಪ್ಪನವರು ತಮ್ಮ ಕಿಡಿಗೇಡಿ ಬಾಲಕ ಬಸಪ್ಪನನ್ನು ಕರೆದು ಕೊಂಡು ಅಥಣಿಯ ಶ್ರೀ ಗಚ್ಚಿನ ಮಠಕ್ಕೆ ಪರಮ ಪೂಜ್ಯರ ದರ್ಶನಕ್ಕೆ ಹೋದರು.  ಪರಮ ಪೂಜ್ಯ ಶ್ರೀ ಅಥಣಿಯ ಮುರುಗೇಂದ್ರ ಶಿವಯೋಗಿಗಳು ಲಿಂಗ ಪೂಜೆ ಮುಗಿಸಿ ಮಠದ ಆವರಣದಲ್ಲಿ ಭಕ್ತರ ದರ್ಶನ ನೀಡಲು ಬಂದು ಕುಳಿತು ಕೊಳ್ಳುತ್ತಾರೆ. ಆಗ ಮಠದಲ್ಲಿ ಆಡುತ್ತಿದ್ದ ಬಾಲಕ ಓಡಿ ಹೋಗಿ ಪರಮ ಪೂಜ್ಯ ಶ್ರೀ ಅಥಣಿಯ ಮುರುಗೇಂದ್ರ ಶಿವಯೋಗಿಗಳ ತೊಡೆಯ ಮೇಲೆ ಕುಳಿತು ಕೊಳ್ಳುತ್ತಾನೆ. ಮಗನ ಶಿಕ್ಷಣ ಮತ್ತು ವಿದ್ಯೆಗಾಗಿ ಪೂಜ್ಯ ಶ್ರೀ ಶಿವಯೋಗಿಗಳ ಆಶೀರ್ವಾದಕ್ಕಾಗಿ ಬಂದ ಶ್ರೀ ದಾನಪ್ಪನಿಗೆ ಒಂದು ರೀತಿಯ ಮುಜುಗರ ಉಂಟಾಗಿತ್ತು. ಅವಸರದಲ್ಲಿ ಓಡಿ ಹೋಗಿ ಶ್ರೀಗಳ ತೊಡೆಯ ಮೇಲೆ ಕುಳಿತ ಬಾಲಕ ಬಸಪ್ಪನನ್ನು ಕರೆದು ಕೊಳ್ಳಲು ಹೋದಾಗ  ಪರಮ ಪೂಜ್ಯ ಶ್ರೀ ಅಥಣಿಯ ಮುರುಗೇಂದ್ರ ಶಿವಯೋಗಿಗಳು ದಾನಪ್ಪ ಇರಲಿ ಬಿಡು ಈ ಹುಡುಗ ಮುಂದ ದಿಲ್ಲಿ ದರ್ಬಾರದಾಗ ಮೆರೆತನ ಎಂದು ಆಶೀರ್ವಾದ ಮಾಡಿದರಂತೆ. ಬಾಲ್ಯದಲ್ಲಿಯೇ ಇಂತಹ ಮಹಾತ್ಮರ ಕೃಪೆಗೆ ಒಳಗಾದ ಬಾಲಕ ಬಸಪ್ಪ ದಾನಪ್ಪ ಜತ್ತಿ ಎಂಬ ಹಳ್ಳಿಯ ಹುಡುಗ ಸಾವಳಗಿ ಗ್ರಾಮ ಪಂಚಾಯತಿ ಸದಸ್ಯರಿಂದ ಹಿಡಿದು ಜಮಖಂಡಿ ನಗರ ಸಭೆ ಅಧ್ಯಕ್ಷ ನಂತರ ಮುಂಬೈ ಸರಕಾರದಲ್ಲಿ ಬೇರೆ ಬೇರೆ ಖಾತೆ ನಿರ್ವಹಣೆ ಉಪಮುಖ್ಯಮಂತ್ರಿ ಸಂಸದೀಯ ಸಚಿವ ಕಾರ್ಯದರ್ಶಿ ರಾಜ್ಯ ವಿಂಗಡಣೆ ಆದ ಮೇಲೆ    ಕರ್ನಾಟಕ ರಾಜ್ಯ ಸರ್ಕಾರದ ಹಲವು ಖಾತೆ ಮತ್ತು  ಮುಖ್ಯ ಮಂತ್ರಿ ಎರಡು ರಾಜ್ಯಗಳ ಗವರ್ನರ್ ಕೊನೆಗೆ ರಾಜ್ಯ ಸಭಾ ಸದಸ್ಯ ಉಪರಾಷ್ಟ್ರಪತಿ ಹಂಗಾಮಿ ರಾಷ್ಟ್ರಪತಿ ಆಗಿ ಉತ್ತರ ಕರ್ನಾಟಕದ ಅಪರೂಪದ ಪ್ರಬುದ್ಧ ಪ್ರಾಮಾಣಿಕ ರಾಜಕೀಯ ಮುತ್ಸದ್ಧಿ ಎಂದು ಹೆಸರು ವಾಸಿಯಾದರು. ಡಾ ಬಸಪ್ಪ ದಾನಪ್ಪ ಜತ್ತಿ _________________________ ( ಬಿ.ಡಿ.ಜತ್ತಿ) (ಸೆಪ್ಟೆಂಬರ್ 10,1912 – ಜೂನ್ 7, 2002) – ಭಾರತದ ಮಾಜಿ ಉಪರಾಷ್ಟ್ರಪತಿಗಳಲ್ಲೊಬ್ಬರು ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಲ್ಲೊಬ್ಬರು. ಸ್ವಲ್ಪ ದಿನಗಳ ಕಾಲ ಹಂಗಾಮಿ ರಾಷ್ಟ್ರಪತಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. ಕರ್ನಾಟಕದ ಇವತ್ತಿನ  ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮ ಪಂಚಾಯತಿಯಿಂದ ದೇಶದ ಹಂಗಾಮಿ ರಾಷ್ಟ್ರಪತಿ ಹುದ್ದೆಯವರೆಗೆ ತಲುಪಿದ ಏಕೈಕ ರಾಜಕಾರಣಿ ಬಿ.ಡಿ.ಜತ್ತಿ.  ವಿಜಯಪುರ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಹತ್ತಿರದ ಕುರಗೊಡ(ತಾಯಿಯ ಊರು) ಎಂಬ ಚಿಕ್ಕ ಗ್ರಾಮದಲ್ಲಿ 1912ರ ಸೆಪ್ಟಂಬರ್ 10ರಂದು ಜನಿಸಿದರು. ತಂದೆ ದಾನಪ್ಪ ಜತ್ತಿ, ತಾಯಿ ಭಾಗವ್ವ. ದಾನಪ್ಪ ಜತ್ತಿಯವರು ಒಬ್ಬ ವ್ಯಾಪಾರಿ, ಅವರ ಮೂವರು ಗಂಡುಮಕ್ಕಳಲ್ಲಿ ಬಸಪ್ಪನವರು ಒಬ್ಬರು.ಗ್ರಾಮವು ಅಂದು ಮುಂಬೈ ಪ್ರಾಂತದ ಜಮಖಂಡಿ ಸಂಸ್ಥಾನಕ್ಕೆ ಸೇರಿತ್ತು.  ತಂದೆ ದಾನಪ್ಪ, ತಾಯಿ ಭಾಗವ್ವ- ಇಬ್ಬರೂ ಶ್ರಮ ಜೀವಿಗಳು, ದೈವ ಭಕ್ತರು, ಗುರು ಹಿರಿಯರಲ್ಲಿ ಅಪಾರ ಗೌರವುಳ್ಳವರು. ಇವರ ಸದ್ಗುಣಗಳು ಬಸಪ್ಪನವರಿಗೆ ಬಳುವಳಿಕೆಯಾಗಿ ಬಂದವು. ವಿದ್ಯಾಭ್ಯಾಸ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢಶಾಲೆಗಳಲ್ಲಿ ಅಭ್ಯಾಸದ ಅನಂತರ ಕೊಲ್ಲಾಪುರದ ರಾಜಾರಾಂ ಕಾಲೇಜಿನಲ್ಲಿ ವ್ಯಾಸಂಗಮಾಡಿ ಕಲಾ ಪದವಿಯನ್ನು   ಮುಂದೆ   ಲಾ ಕಾಲೇಜಿನಲ್ಲಿ ಎಲ್‍ಎಲ್.ಬಿ. ಪದವಿಯನ್ನೂ ಗಳಿಸಿ (1940) ಜಮಖಂಡಿಯಲ್ಲಿ ವಕೀಲರಾಗಿ ಜೀವನ ಆರಂಭಿಸಿದರು (1940-45). 1948ರಲ್ಲಿ ಜಮಖಂಡಿಯು ಮುಂಬಯಿಗೆ ಸೇರಿದ ನಂತರ ಮತ್ತೆ ಕಾನೂನು ವೃತ್ತಿಗೆ ವಾಪಸಾದರು ವೃತ್ತಿಯಲ್ಲಿ ವಕೀಲರು 1940 ರಲ್ಲಿ ನ್ಯಾಯವಾದಿಯಾಗಿ ಬದುಕು ಆರಂಭಿಸಿದ ಅವರು ರಾಜಕಾರಣಿಯಾಗಿ ಜೀವನವನ್ನು ಸಮಾಜ ಸೇವೆಗೆ ಅರ್ಪಿಸಿಕೊಂಡರು. ಬಸಪ್ಪನವರು 10 ವರ್ಷದ ಬಾಲಕನಾಗಿದ್ದಾಗಲೇ 5 ವರ್ಷದ ಬಾಲಕಿ ಸಂಗವ್ವಳೊಂದಿಗೆ ವಿವಾಹವಾಯಿತು.  ತಂದೆಯ ಮರಣದ ನಂತರ ಕುಟುಂಬ ನಿರ್ವಹಣೆಯ ಹೊಣೆ ತಮ್ಮ ಮೇಲೆ ಬಿದ್ದುದರಿಂದ, ಬಸಪ್ಪನವರು ಕಾನೂನು ಶಿಕ್ಷಣವನ್ನು ಕೈಬಿಟ್ಟು ಸ್ವಗ್ರಾಮಕ್ಕೆ ಮರಳಿದರು. ಕುಟುಂಬದ ಹೊಣೆಯ ಜೊತೆಗೆ ತಮ್ಮ ಹಳ್ಳಿಯ ಸಾರ್ವಜನಿಕ ಸಮಸ್ಯೆಗಳನ್ನು ಬಿಡಿಸುವ ಹೊಣೆಯನ್ನೂ ವಹಿಸಿಕೊಂಡರು.ಗ್ರಾಮ ಪಂಚಾಯಿತಿ ಸ್ಥಾಪಿಸಿ, ಅದರ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾಗಿ ಮೂರೂವರೆ ವರ್ಷ ಅದನ್ನು ಮುನ್ನಡೆಸಿದರು. ಇದು ಅವರ ಸಮಾಜ ಸೇವಾ ಕಾರ್ಯದ ಮೊದಲ ಹಂತ. ಗಾಂಧೀಜಿಯವರ ಆದರ್ಶಗಳಿಂದ ತುಂಬ ಪ್ರಭಾವಿತರಾಗಿದ್ದ ಬಸಪ್ಪನವರು ರಾಜಕೀಯ ಬೆಳವಣಿಗೆಗಳ ಬಗ್ಗೆ ಸದಾ ಜಾಗರೂಕರಾಗಿರುತ್ತಿದ್ದರು. ಸುಧೀರ್ಘ ರಾಜಕೀಯ ಅನುಭವ ______________________ ಮುಂಬಯಿ ರಾಜ್ಯ ಶಾಸನ ಸಭೆಗೆ ಅವರನ್ನು ನಾಮ ನಿರ್ದೇಶನ ಮಾಡಲಾಗಿತ್ತು. ಒಂದೇ ವಾರದಲ್ಲಿ ಅವರನ್ನು ಸಂಸದೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. 1952ರ ಸಾರ್ವತ್ರಿಕ ಚುನಾವಣೆಯಾದ ನಂತರ ಜತ್ತಿಯವರನ್ನು ಮುಂಬಯಿ ಸರ್ಕಾರದಲ್ಲಿ ಆರೋಗ್ಯ ಮತ್ತು ಕಾರ್ಮಿಕ ಮಂತ್ರಿಯನ್ನಾಗಿ ನೇಮಿಸಲಾಯಿತು. ಭಾಷಾವಾರು ಪ್ರಾಂತ್ಯಗಳು ರಚನೆಯಾದ ನಂತರ ಜತ್ತಿಯವರು ಮೈಸೂರಿ ಶಾಸನಸಭೆಯ ಅಧ್ಯಕ್ಷರೂ ಮತ್ತು ಭೂ ಸುಧಾರಣಾ ಸಮಿತಿಯ ಅಧ್ಯಕ್ಷರೂ ಆಗಿದ್ದರು. 3ನೇ ಸಾರ್ವತ್ರಿಕ ಚುನಾವಣೆಯಲ್ಲಿ ಜಮಖಂಡಿ ಕ್ಷೇತ್ರದಿಂದ ಮರು ಚುನಾಯಿತರಾದರು.  1962ರಲ್ಲಿ ನಿಜಲಿಂಗಪ್ಪನವರ ಸಚಿವ ಸಂಪುಟದಲ್ಲಿ ಹಣಕಾಸು ಮಂತ್ರಿಯಾದರು. ಅದೇ ಕ್ಷೇತ್ರದಿಂದ ನಾಲ್ಕನೆಯ ಶಾಸನಸಭೆಗೆ ಮರು ಚುನಾವಣೆಯಲ್ಲಿ ಆಯ್ಕೆಯಾದರು ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಂತ್ರಿಯಾದರು. ನಂತರ ಅವರು ರಾಷ್ಟ್ರ ರಾಜಕಾರಣಕ್ಕೆ ತೊಡಗಿಸಿಕೊಂಡು 1968ರಲ್ಲಿ ಪಾಂಡಿಚೆರಿಯ ಲೆಫ್ಟಿನೆಂಟ್‌ ಗವರ್ನರ್‌ ಆಗಿ ನೇಮಕಗೊಂಡರು. 1973ರಲ್ಲಿ ಒರಿಸ್ಸಾದ ರಾಜ್ಯಪಾಲರಾಗಿ, ನಂತರ 1974ರಲ್ಲಿ ಭಾರತದ ಉಪರಾಷ್ಟ್ರಾಧ್ಯಕ್ಷರಾಗಿ 1980ರ ವರೆಗೆ ಸೇವೆ ಸಲ್ಲಿಸಿದರು. ರಾಜ್ಯದಲ್ಲಿ ಸಚಿವರಾಗಿ, ನಂತರ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿ, ಪಾಂಡಿಚೇರಿಯಲ್ಲಿ ಲೆ.ಗೌವರನರ್ ಆಗಿ ಸೇವೆ ಸಲ್ಲಿಸಿ, ಮುಂದೆ ಉಪರಾಷ್ಟ್ರಪತಿ ಮತ್ತು ಫಕ್ರುದ್ದಿನ್ ಅಹ್ಮದ್ ಅವರ ಅಕಾಲ ಮೃತ್ಯುವಿನ ನಂತರ ಕೆಲಕಾಲ ಹಂಗಾಮಿ ರಾಷ್ಟ್ರಪತಿಯಾಗಿ ಇವರು ಸೇವೆ ಸಲ್ಲಿಸಿದರು. ಉತ್ತಮ ಆಡಳಿತಗಾರ, ಸರಳ ಜೀವಿ ಮತ್ತು ರಾಜಕೀಯ “ಜಟ್ಟಿ”ಎಂದು ಜತ್ತಿ ಹೆಸರು ಗಳಿಸಿದ್ದಾರೆ. ಜಮಖಂಡಿಯ ಪೌರಸಭೆಯ ಸದಸ್ಯರಾಗಿ ಎರಡುಬಾರಿ ಆಯ್ಕೆ ಹೊಂದಿದರಲ್ಲದೆ ಅದರ ಅಧ್ಯಕ್ಷರಾಗಿಯೂ ಇದ್ದರು (1940-45). ಜಮಖಂಡಿ ಸಂಸ್ಥಾನದ ಪ್ರಜಾ ಪರಿಷತ್ತಿನ ಪ್ರಮುಖ ಕಾರ್ಯಕರ್ತರಲ್ಲಿ ಇವರೂ ಒಬ್ಬರಾಗಿದ್ದರು. ಜಮಖಂಡಿಯಲ್ಲಿ ಪ್ರಜಾಪ್ರತಿನಿಧಿ ಸರ್ಕಾರ ಸ್ಥಾಪನೆಯಾದಾಗ ಮಂತ್ರಿಮಂಡಳ ರಚಿಸುವ ಹೊಣೆ ಇವರದಾಯಿತು. 1947ರಲ್ಲಿ ಭಾರತ ಸ್ವತಂತ್ರವಾದಾಗ ಸಂಸ್ಥಾನಗಳ ಭವಿಷ್ಯದ ಬಗ್ಗೆ ಚರ್ಚೆ ನಡೆಯುತ್ತಿದ್ದಾಗ ದಕ್ಷಿಣ ಸಂಸ್ಥಾನಗಳ ಒಕ್ಕೂಟರಚನೆಯ ಪ್ರಯತ್ನಗಳು ನಡೆದಿದ್ದುವು. ಜತ್ತಿಯವರು ಜಮಖಂಡಿ ಸಂಸ್ಥಾನಿಕರ ಮನವೊಲಿಸಿ ಭಾರತ ಒಕ್ಕೂಟದಲ್ಲಿ ಆ ಸಂಸ್ಥಾನ ವಿಲೀನಗೊಳ್ಳುವಂತೆ ಮಾಡಲು ಶ್ರಮಿಸಿದರು. ವಿಲೀನಗೊಂಡ ಪ್ರದೇಶಗಳ ಪ್ರನಿನಿಧಿಯಾಗಿ ಜತ್ತಿಯವರು ಮುಂಬಯಿ ವಿಧಾನಸಭೆಗೆ ನಾಮಕರಣ ಹೊಂದಿದರು ಮತ್ತು ಅಲ್ಲಿಯ ಮುಖ್ಯಮಂತ್ರಿ ಬಿ.ಜಿ ಖೇರರ ಸಂಸದೀಯ ಕಾರ್ಯದರ್ಶಿಯಾಗಿ ನೇಮಕಗೊಂಡರು (1948). 1952ರ ಚುನಾವಣೆಯಲ್ಲಿ ಮುಂಬಯಿ ವಿಧಾನಸಭೆಗೆ ಚುನಾಯಿತರಾಗಿ ಆ ರಾಜ್ಯದ ಆರೋಗ್ಯ ಮತ್ತು ಕಾರ್ಮಿಕ ಉಪಮಂತ್ರಿಯಾದರು. 1956ರಲ್ಲಿ ರಾಜ್ಯ ಪುನರ್ರಚನೆಯಾದ ಅನಂತರ ಜತ್ತಿಯವರು ನೂತನ ಮೈಸೂರು ರಾಜ್ಯದ (ಈಗ ಕರ್ನಾಟಕ) ಭೂಸುಧಾರಣಾ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡರು.  ರಾಜ್ಯದ ಭೂಸುಧಾರಣಾ ಕಾಯಿದೆಗಳಿಗೆ ಜತ್ತಿ ಸಮಿತಿಯ ವರದಿ ತಳಹದಿಯಾಯಿತು.  1957 ಮತ್ತು 1967ರ ಚುನಾವಣೆಗಳಲ್ಲಿ ಅವರು ರಾಜ್ಯವಿಧಾನಸಭೆಗೆ ಆಯ್ಕೆಯಾದರು. ಮುಖ್ಯಮಂತ್ರಿಯಾಗಿ ಆಯ್ಕೆ 1958ರ ಜತ್ತಿಯವರು ಮೈಸೂರಿನ ವಿಧಾನ ಮಂಡಲ ಕಾಂಗ್ರೆಸ್ ಪಕ್ಷದ ನಾಯಕರಾಗಿ ಆಯ್ಕೆಯಾಗಿ ರಾಜ್ಯದ ಮುಖ್ಯಮಂತ್ರಿಯಾದರು. ಅನಿರೀಕ್ಷಿತವಾಗಿ ಬಂದ ಹೊಣೆಯನ್ನು ಜತ್ತಿಯವರು ದಕ್ಷತೆಯಿಂದ ನಿರ್ವಹಿಸಿದರು.  1962ರ ಚುನಾವಣೆಗಳ ಅನಂತರ ರಚಿತವಾದ ಶ್ರೀ ಎಸ್  ನಿಜಲಿಂಗಪ್ಪನವರ  ಮಂತ್ರಿಮಂಡಲದಲ್ಲಿ ಶ್ರೀ ಜತ್ತಿಯವರು ಹಣಕಾಸಿನ ಮಂತ್ರಿಯಾದರು-1965ರ ವರೆಗೆ ಆ ಹುದ್ದೆಯಲ್ಲಿದ್ದರು.  ಅನಂತರ 1968ರ ವರೆಗೆ ಅವರು ಆಹಾರ ಮಂತ್ರಿಯಾಗಿದ್ದರು. ಒರಿಸ್ಸಾದಲ್ಲಿ  1973-74ರಲ್ಲಿ ಆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಬಂದಾಗ ಜತ್ತಿಯವರು ಅದರ ಆಡಳಿತವನ್ನು ಯಶಸ್ವಿಯಾಗಿ ನಿರ್ವಹಿಸಿದರು. ಉಪರಾಷ್ಟ್ರಪತಿ ಮತ್ತು ಹಂಗಾಮಿ ರಾಷ್ಟ್ರಪತಿ 1977 ಫೆಬ್ರವರಿ 11ರಿಂದ ಜುಲೈ 25 1977ರ ವರೆಗೂ ಭಾರತದ ಹಂಗಾಮಿ ರಾಷ್ಟ್ರಪತಿಗಳಾಗಿದ್ದರು ಹಾಗೂ 5ನೇ ಉಪ ರಾಷ್ಟ್ರಪತಿಗಳಾಗಿದ್ದರು. ತುರ್ತು ಪರಿಸ್ಥಿತಿಯ ನಂತರ ನಡೆದ ಚುನಾವಣೆಯಲ್ಲಿ ಜನತಾ ಪಕ್ಷ ಬಹುಮತದಿಂದ ಜಯಗೊಳಿಸಿದರೂ, ಮುರಾರ್ಜಿ ದೇಸಾಯಿಯವರನ್ನು ಪ್ರಧಾನಿ ಮಂತ್ರಿ ಹುದ್ದೆ ಸ್ವೀಕರಿಸಲು ಆಹ್ವಾನಿಸಲು, ಆಗ ಹಂಗಾಮಿ ರಾಷ್ಟ್ರಪತಿಗಳಾಗಿದ್ದ ಜತ್ತಿಯವರು ತಡ ಮಾಡಿದರೆಂದು ಅವರ ವಿರುದ್ಧ ದೆಹಲಿಯಲ್ಲಿ ಭಾರಿ ಪ್ರತಿಭಟನೆ ನೆಡೆದಿತ್ತು.ಇದರಿಂದಾಗಿ, ಶ್ರೀ ಎಸ್ ನಿಜಲಿಂಗಪ್ಪನವರು ರಾಷ್ಟ್ರಪತಿಯಾಗಲು ನಿರಾಕರಿಸಿದ ನಂತರ ಬಹುದಿನಗಳ ನಂತರ ಜತ್ತಿಯವರಿಗೆ ದೊರೆತಿದ್ದ ರಾಷ್ಟ್ರಪತಿ ಹುದ್ದೆ ಅವಕಾಶವು ಕೊನೆಗೆ ನೀಲಂ ಸಂಜೀವ ರೆಡ್ಡಿಯವರ ಪಾಲಾಯಿತೆಂದು ಆಗ ರಾಜಕೀಯ ಚರ್ಚೆ ನೆಡೆದಿತ್ತು. ಅದರ ಸತ್ಯಾಸತ್ಯತೆಗಳೇನೇ ಇರಲಿ, ಕನ್ನಡಿಗರಿಗೆ ರಾಷ್ಟ್ರಪತಿಯಾಗುವ ಅವಕಾಶ ದೂರವಾಗಿದ್ದು ಮಾತ್ರ ಸತ್ಯವಾಗಿದೆ. ಅಧ್ಯಾತ್ಮ ಒಲವು ___________________ ಬಸವೇಶ್ವರರ ಉಪದೇಶ ಮತ್ತು ವಿಚಾರಗಳ ಪ್ರಚಾರದ ಉದ್ದೇಶದಿಂದ ರಚಿತವಾಗಿರುವ ಬಸವ ಸಮಿತಿಗೆ ಜತ್ತಿಯವರು ಪ್ರಾರಂಭದಿಂದಲೂ ಅಧ್ಯಕ್ಷರಾಗಿದ್ದಾರೆ. ಸಣ್ಣ ವಯಸ್ಸಿನಿಂದಲೂ ಅವರು ಆಧ್ಯಾತ್ಮದಲ್ಲಿ ಒಲವು ಬೆಳೆಸಿಕೊಂಡವರು. ಬಸವ ಸಮಿತಿಯು 1964 ರಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಡಾ. ಬಿ.ಡಿ. ಜತ್ತಿ ಅವರಿಂದ ಸ್ಥಾಪನೆಗೊಂಡು, 12 ನೇ ಶತಮಾನದ ಬಸವಣ್ಣವರ ಹಾಗು ಅವರ ಸಮಕಾಲೀನ ಶರಣರ ತತ್ವ ಸಂದೇಶಗಳನ್ನು ಪ್ರಪಂಚದಾದ್ಯಂತ ಸಾರುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಭಾರತದ ಮಾಜಿ ರಾಷ್ಟ್ರಪತಿ ಡಾ|| ಬಸಪ್ಪ ದಾನಪ್ಪ ಜತ್ತಿ ಅವರು ಬಸವಣ್ಣವರ ಹಾಗೂ ಶರಣರ ತತ್ವಗಳನ್ನು, ಶರಣ ಸಂಸ್ಕೃತಿಯನ್ನು ಶರಣರ ಸಮಾನತೆಯ ತತ್ವವನ್ನು ಸಾರುವ ಉದ್ದೇಶದಿಂದ 1964 ರಾಲಿ  ಬಸವ ಸಮಿತಿಯನ್ನು ಸ್ಥಾಪಿಸಿದರು. ಅಂದಿನಿಂದ ಇಂದಿನವರೆಗೆ ಪಕ್ಷ, ಜಾತಿ ಭೇದವಿಲ್ಲದೆ, ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುತ್ತ ಬಸವ ಸಂದೇಶಗಳನ್ನು ಹಾಗೂ ಶರಣರ ತತ್ವಗಳನ್ನು ಪ್ರಚಾರ ಮಾಡುತ್ತಿದೆ. ಬಸವ ಸಮಿತಿಯು ಶರಣರ ಸಂಸ್ಕೃತಿಯನ್ನು ಪ್ರಚಾರ ಮಾಡುವ ಮತ್ತು ಎಲ್ಲಾ ಮಾನವರ ಕಲ್ಯಾಣಕ್ಕಾಗಿ (ಉದ್ಧಾರಕ್ಕಾಗಿ) ಶರಣರ ಕೊಟ್ಟ ಸಂದೇಶಗಳನ್ನು ಕಲುಷಿತಗೊಳಿಸದೆ ಇಂದಿನ ಆಧುನಿಕ ಸಮಾಜಕ್ಕೆ ಒಪ್ಪುವಂತೆ ನವೀಕರಿಸುವ ಉದ್ದೇಶ ಹೊಂದಿದೆ. ಅನ್ನದಾನಯ್ಯಪುರಾಣಿಕ,ಕೆ.ಎಂ.ನಂಜಪ್ಪ,ವೈ.ಸಿ.ಬಸಪ್ಪ,ಗಂಗಪ್ಪ,ಬಿ.ಎಸ್.ಶಂಕರಪ್ಪಶೆಟ್ಟಿ, ಡಾ ಡಿ ಸಿ ಪಾವಟೆ ಮೊದಲಾದ ಗಣ್ಯರ ಜೊತೆಗೂಡಿ, ಮಾನ್ಯ ಶ್ರೀ ಎಸ್ ನಿಜಲಿಂಗಪ್ಪನವರ ಮಾರ್ಗದರ್ಶನದಲ್ಲಿ  ಬೆಂಗಳೂರಿನಲ್ಲಿ ಅಖಿಲ ಭಾರತ ಬಸವ ಸಮಿತಿ ಸ್ಥಾಪಿಸಿದರು. ಬಸವತತ್ವ ಪ್ರಚಾರಕ್ಕಾಗಿ ಮೀಸಲಾದ ಈ ಸಂಸ್ಥೆಯ ಅಭಿವೃದ್ಧಿಗಾಗಿ ಅಧ್ಯಕ್ಷರಾಗಿ ಜತ್ತಿ ಮತ್ತು 27 ವರ್ಷಗಳ ಕಾಲ ಗೌರವ ಕಾರ್ಯದರ್ಶಿಯಾಗಿ ಅನ್ನದಾನಯ್ಯ ಪುರಾಣಿಕ ನಿರಂತರ ಮತ್ತು ನಿಸ್ಪಾರ್ಥ ಸೇವೆ ಸಲ್ಲಿಸಿದ್ದಾರೆ. ಇಂದು ಡಾ ಅರವಿಂದ ಜತ್ತಿ ಅವರು ಬಸವ ಸಮಿತಿ ಅಧ್ಯಕ್ಷರಾಗಿ ಶರಣರ ವಚನಗಳನ್ನು ರಾಷ್ಟ್ರೀಯ ಇತರ ಭಾಷೆಗಳಿಗೆ ಮತ್ತು ಫ್ರೆಂಚ್ ಇಂಗ್ಲಿಷ್ ಐರಿಶ್ ಜರ್ಮನಿ ಚೀನೀ ಭಾಷೆಗಳಿಗೆ ಭಾಷಾಂತರ ಮಾಡುತ್ತಿದ್ದಾರೆ. ನಿರ್ವಹಿಸಿದ ಪ್ರಮುಖ  ಹುದ್ದೆಗಳು ಅವರು ಹೊಂದಿದ್ದ ಪ್ರಮುಖ ಹುದ್ದೆಗಳಲ್ಲಿ ಕೆಲ ಮಾಹಿತಿಗಳನ್ನು ಇಲ್ಲಿ ನೀಡುತ್ತಿದ್ದೇವೆ. ಸಾವಳಗಿಯ ಗ್ರಾಮ ಪಂಚಾಯ್ತಿ ಸದಸ್ಯ (1943) ಮುಂಬಯಿ ವಿಧಾನಸಭೆಯ ಶಾಸಕ (1949) ಮುಂಬಯಿ ರಾಜ್ಯದ

ಸಾವಿಲ್ಲದ ಶರಣರು ಮಾಲಿಕೆ-“ಹಳ್ಳಿಯಿಂದ ದಿಲ್ಲಿ ದರ್ಬಾರಕ್ಕೆ ಹೋದ ಶ್ರೀ ಬಸಪ್ಪ ದಾನಪ್ಪ ಜತ್ತಿ” Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಕನ್ನಡ ಸಾಹಿತ್ಯ ದಿಗ್ಗಜೆ ಶಾಂತಾದೇವಿ ಮಾಳವಾಡ

ಸಾವಿಲ್ಲದಶರಣರು ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಕನ್ನಡ ಸಾಹಿತ್ಯ ದಿಗ್ಗಜೆ ಶಾಂತಾದೇವಿ ಮಾಳವಾಡ ಮಹಿಳಾ ಸಾಹಿತ್ಯದ ಚರಿತ್ರೆ ಎಂದರೆ ಮಹಿಳೆಯರು ತಮ್ಮ ಅನುಭವಗಳು, ಸಮಾಜದ ಸ್ಥಿತಿ, ರಾಜಕೀಯ ಅಭಿಪ್ರಾಯಗಳನ್ನು ಸಾಹಿತ್ಯದ ಮೂಲಕ ವ್ಯಕ್ತಪಡಿಸಿದ ಪಯಣವಾಗಿದ್ದು, ಇದು ಪ್ರಾಚೀನ ಕಾಲದಿಂದಲೂ ಇದ್ದು, ಅಮೇರಿಕಾದ ಕ್ರಾಂತಿಯಂತಹ ಸಂದರ್ಭಗಳಲ್ಲಿ ತೀವ್ರಗೊಂಡಿತು; ಇವರು ಮನೆ, ಸಮಾಜ ಮತ್ತು ಪ್ರಕೃತಿಯೊಂದಿಗಿನ ಸಂಬಂಧಗಳನ್ನು ಕಾದಂಬರಿ, ಕವಿತೆಗಳ ಮೂಲಕ ನಿರೂಪಿಸಿ, ಮಹಿಳೆಯರ ಸ್ಥಾನಮಾನದ ಸಮಸ್ಯೆಗಳನ್ನು ಎತ್ತಿ ತೋರಿಸಿದ್ದಾರೆ, ಇದು ಮುಖ್ಯವಾಗಿ ಸ್ತ್ರೀವಾದಿ ಚಿಂತನೆಗಳನ್ನು ಜಗತ್ತಿಗೆ ಪರಿಚಯಿಸಿದೆ.ಮಹಿಳಾಪರ ಚಿಂತನೆ ಆಲೋಚನೆಗಳು ಕಥೆ ಕಾದಂಬರಿ ಕಾವ್ಯ ಸಾಹಿತ್ಯ ರಚನೆಯಲ್ಲಿ ಮುಕ್ತವಾಗಿ ಬರೆಯಲು ಆರಂಭಿಸಿದರು ಕನ್ನಡತಿಯರು. 12 ನೆಯ ಶತಮಾನದ ಶ್ರೇಷ್ಠ ವಚನಕಾರ್ತಿಯರು ವರ್ಗ ವರ್ಣ ಲಿಂಗ ಭೇದ ಆಶ್ರಮ ರಹಿತ ಸಾಂಸ್ಥಿಕರಣವಲ್ಲದ ಸಮಸಮಾಜ ಕಟ್ಟಿದರು.ನವ್ಯ ನವೋದಯ ಪ್ರಗತಿಶೀಲ ಬಂಡಾಯ ದಲಿತ ಸಾಹಿತ್ಯ ಹೀಗೆ ಎಲ್ಲಾ ಘಟ್ಟಗಳಲ್ಲಿವಚನ ಸಾಹಿತ್ಯ ಮತ್ತು ಶರಣೆಯರ ಸಾಹಿತಿಕ ಸಾಂಸ್ಕೃತಿಕ ಸಾಮಾಜಿಕ ಕಾರ್ಯಗಳನ್ನು ಮರೆಯಲಾಗದು. ಕನ್ನಡ ಸಾಹಿತ್ಯದಲ್ಲಿಜಯದೇವಿ ತಾಯಿ ಲಿಗಾಡೆ ನಂತರ ಉತ್ತರ ಕರ್ನಾಟಕ ಭಾಗದಲ್ಲಿ ಮತ್ತು ಸಮಗ್ರ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಅನುಪಮವಾಗಿ ದುಡಿದವರು ಶಾಂತಾದೇವಿ ಮಾಳವಾಡ ಅವರು. ಶಾಂತಾದೇವಿ ಮಾಳವಾಡ ಇವರು 1922 ಡಿಸೆಂಬರ್ 10 ರಂದು ಬೆಳಗಾವಿ ಯಲ್ಲಿ ಜನಿಸಿದರು. ತಾಯಿ ಜಯವಂತಿದೇವಿ; ತಂದೆ ಕರ್ಜಗಿ ಮುರಿಗೆಪ್ಪ ಶೆಟ್ಟರು. ತವರು ಮನೆ ಹೆಸರು ಕರ್ಜಗಿ ದಾನಮ್ಮ. ಎರಡು ವರ್ಷದವಳಿದ್ದಾಗ ತಂದೆಯನ್ನು ಹಾಗು ಹತ್ತು ವರ್ಷದವಳಿದ್ದಾಗ ತಾಯಿಯನ್ನು ಕಳೆದುಕೊಂಡ ದಾನಮ್ಮ ಅಜ್ಜಿಯ ಮಡಿಲಲ್ಲಿ ಬೆಳೆದಳು. ವನಿತಾ ವಿದ್ಯಾಲಯದಲ್ಲಿ ಹೈಸ್ಕೂಲ ಎರಡನೆಯ ತರಗತಿಯವರೆಗೆ ಅಂದರೆ ಒಂಬತ್ತನೆಯ ತರಗತಿ ಕಲಿತು, ವಿದ್ಯಾಭ್ಯಾಸವನ್ನು ನಿಲ್ಲಿಸಬೇಕಾಯಿತು. ಮದುವೆಶಾಂತಾದೇವಿ ಮಾಳವಾಡ ಅವರು ತಮ್ಮ 15 ನೆಯ ವಯಸ್ಸಿನಲ್ಲಿ1937 ನೆಯ ಇಸವಿಯಲ್ಲಿ ಪ್ರೊ. ಸ.ಸ. ಮಾಳವಾಡರ ಜೊತೆ ಮದುವೆ ಆಯಿತು. ಮುಂದೆ ತಮ್ಮ ಪತಿಯ ಒತ್ತಾಸೆಯಿಂದಾಗಿ ಶಾಂತಾದೇವಿಯವರು ಮನೆಯಲ್ಲಿಯೆ ಇಂಗ್ಲೀಷ್,ಹಿಂದಿ, ಪ್ರಾಚೀನ ಕನ್ನಡ ಸಾಹಿತ್ಯ ಹಾಗು ವಚನ ಸಾಹಿತ್ಯದ ಅಧ್ಯಯನ ಮಾಡಿದರು. 1940 ರಲ್ಲಿ ಕನ್ನಡ ಜಾಣ ಪರೀಕ್ಷೆಯಲ್ಲಿ ತೇರ್ಗಡೆಯಾದರು. ಪತಿಯ ಪ್ರೋತ್ಸಾಹದಿಂದ 1938ರಲ್ಲಿ ಅಕ್ಕನ ಬಳಗ ವೆಂಬ ಮಹಿಳಾ ಸಂಘಟನೆಯನ್ನು ಹುಟ್ಟು ಹಾಕಿದರು.ಶಾಂತಾದೇವಿ ತಾಯಿಯ ಮಮತೆ ತಂದೆಯ ಪ್ರೀತಿ ಕಾಣದ ಮುಗ್ಧ ಬಾಲಕಿಸುಮಾರು ಹತ್ತು ಸಲ ಅವರಿಗೆ ಗರ್ಭಪಾತವಾಯಿತು.ಮಕ್ಕಳಿಲ್ಲದ ಕೊರಗು ಬಿಟ್ಟು ಸಂಪೂರ್ಣ ಸಾಹಿತ್ಯ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿದರು.ಅರಿವು (ಜ್ಞಾನ, ಅರಿವು), ಆಚಾರ (ಅಭ್ಯಾಸ) ಅನುಭವ (ಆಧ್ಯಾತ್ಮಿಕ ಅನುಭವ), ಕಾಯಕ (ದೈಹಿಕ ದುಡಿಮೆಯಿಂದ ಗಳಿಸುವುದು), ಸತ್ಯ ಮತ್ತು ಪರಿಶುದ್ಧತೆಯನ್ನು ಕಾಪಾಡುವುದು, ದಾಸೋಹ (ಯಾವುದೇ ಅಹಂ’ ಇಲ್ಲದೆ ದುಡಿದವರಿಗೆ ನೀಡುವುದು ಶರಣ ಸಂಸ್ಕೃತಿಯ ತತ್ವಗಳು.ಬಾಲ್ಯದಿಂದಲೂ ಇಂತಹ ಅಪೂರ್ವ ಶರಣ ಸಂಸ್ಕೃತಿ ಮೈಗೂಡಿಸಿಕೊಂಡ ಶಾಂತಾದೇವಿ ಮುಂದೊಂದು ದಿನ ನಾಡಿನ ಅಗ್ರ ಲೇಖಕಿ ಸಾಹಿತಿ ಲೇಖಕಿಯಾಗುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಸಾರ್ವಜನಿಕ ಸಾಮಾಜಿಕ ಸೇವೆ ಅಕ್ಕನ ಬಳಗ ಸ್ಥಾಪನೆ ( 1940)ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯರು (1965)ಕೇಂದ್ರ ಸಾಹಿತ್ಯ ಅಕಾಡೆಮಿ ಕನ್ನಡ ಸಲಹಾ ಸಮಿತಿಯ ಸದಸ್ಯರು (1974-1978)ರಾಜ್ಯ ಸಾಹಿತ್ಯ ಅಕಾಡೆಮಿ ಸದಸ್ಯರು (1979)ಧಾರವಾಡ ಆಕಾಶವಾಣಿ ಆಡಿಶನ್ ಕಮಿತಿ ಸದಸ್ಯರು(1961-1962)ಗಾಂಧಿ ಶಾಂತಿ ಪ್ರತಿಷ್ಠಾನದ ಮಹಿಳಾವಿಭಾಗದ ಕಾರ್ಯಾಧ್ಯಕ್ಷರು(1967-1970)ಕರ್ನಾಟಕ ವಿದ್ಯಾವರ್ಧಕ ಸಂಘ,ಧಾರವಾಡ ದ ಉಪಾಧ್ಯಕ್ಷರು (1974-1978)ಉತ್ತರ ಕರ್ನಾಟಕ ಲೇಖಕಿಯರ ಸಂಘ (ಹುಬ್ಬಳ್ಳಿ-ಧಾರವಾಡ) ದ ಆಜೀವ ಗೌರವಾಧ್ಯಕ್ಷರು ಸಾಹಿತ್ಯ ಕೃತಿಗಳು ಕಥಾಸಂಕಲನ ಮೊಗ್ಗೆಯ ಮಾಲೆಕುಂಕುಮ ಬಲ ಗದ್ಯ ಸಾಹಿತ್ಯ ಹಚ್ಚೇವು ಕನ್ನಡದ ದೀಪ.ಕನ್ನಡದ ತಾಯಿ.ಮಹಿಳೆಯರ ಅಲಂಕಾರಸೊಬಗಿನ ಮನೆಮಹಿಳೆಯರ ಆತ್ಮಶ್ರೀ.ರಸಾಪಾಕಸಾರ್ವಜನಿಕ ರಂಗದಲ್ಲಿ ಮಹಿಳೆ.ದಾಂಪತ್ಯಯೋಗವಧುವಿಗೆ ಉಡುಗೊರೆ.ಜನನೀ ಜನ್ಮ ಭೂಮಿಶ್ಚ.ಮಹಿಳಾ ಚೇತನ.ಸಮುಚ್ಚಯ. ಕಾದಂಬರಿಬಸವ ಪ್ರಕಾಶ.ದಾನದಾಸೋಹಿ ದಾನಮ್ಮ.ವೀರ ಶೂರರಾಣಿ ಕೆಳದಿ ಚೆನ್ನಮ್ಮ ಮಕ್ಕಳ ಸಾಹಿತ್ಯಬೆಳವಡಿ ಮಲ್ಲಮ್ಮ.ಕೆಳದಿ ಚೆನ್ನಮ್ಮ.ನಾಗಲಾಂಬಿಕೆ.ನೀಲಾಂಬಿಕೆಕುಟುಂಬ.ಬಸವಯುಗದ ಶಿವಶರಣೆಯರುಭಾರತದ ಮಾನಸಪುತ್ರಿಯರುಗಂಗಾಂಬಿಕೆಶಿವಯೋಗಿಣಿಎಣ್ಣೆ ಹೊಳೆಯ ನಂದಾದೀಪಪುರಾತನ ಶರಣರುದಾನದಾಸೋಹಿ ದಾನಮ್ಮ. ಪ್ರಶಸ್ತಿ ಗೌರವಗಳು ಜ.ಚ.ನಿ. ಪೀಠಾರೋಹಣ ಬೆಳ್ಳಿಹಬ್ಬ ‘ ಸಾಹಿತ್ಯಸುಮ ‘ ಬಂಗಾರದ ಪದಕಸಾಹಿತ್ಯ ಅಕಾಡೆಮಿ ಪ್ರಶಸ್ತಿ (1973)ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (1983)ಸಾವಿತ್ರಮ್ಮ ದೇ.ಜ.ಗೌ. ಪ್ರಶಸ್ತಿ (1991)ಷಷ್ಟ್ಯಬ್ದಿ ಸಮಾರಂಭ (‘ ಪ್ರಶಾಂತ’ ಆಭಿನಂದನ ಗ್ರಂಥ ಸಮರ್ಪಣೆ:1982) 1999 ರಲ್ಲಿ ಬಾಗಲಕೋಟೆಯಲ್ಲಿ ನಡೆದ 68 ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೇಷ್ಠ ಸಾಹಿತಿ ಶಾಂತಾದೇವಿ ಮಾಳವಾಡ ಅವರು 7 ಆಗಸ್ಟ್ 2005 ರಲ್ಲಿ ಬಯಲಲ್ಲಿ ಬಯಲಾದರು.ಸರಳ ಸಜ್ಜನಿಕೆಯ ಸಾಕಾರ ಮೂರ್ತಿ ಸ್ನೇಹ ಪ್ರೀತಿ ಮತ್ತು ಆತ್ಮ ಸ್ಥೈರ್ಯದ ಸಂಕೇತವಾದ ಕನ್ನಡ ಸಾಹಿತ್ಯದ ದಿಗ್ಗಜೆ ಶಾಂತಾದೇವಿ ಮಾಳವಾಡ ಅವರು ಕನ್ನಡ ಭಾಷೆ ಸಾಹಿತ್ಯ ಸಂಸ್ಕೃತಿಗೆ ಕೊಟ್ಟ ಕೊಡುಗೆ ಅಪಾರವಾಗಿದೆ. ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

ಕನ್ನಡ ಸಾಹಿತ್ಯ ದಿಗ್ಗಜೆ ಶಾಂತಾದೇವಿ ಮಾಳವಾಡ Read Post »

You cannot copy content of this page

Scroll to Top