ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅಂಕಣ ಸಂಗಾತಿ, ಸ್ವಾತ್ಮಗತ

ಸ್ವಾತ್ಮಗತ

ಬಂಡಾಯ ಸಾಹಿತ್ಯದ ವಿವಿಧ ಮಜಲುಗಳು..! ಶಿವು ಲಕ್ಕಣ್ಣವರ ಬಂಡಾಯ ಸಾಹಿತ್ಯ ಆಧುನಿಕ ಕನ್ನಡ ಸಾಹಿತ್ಯದ ಈಚಿನ ಹಂತ… ನವೋದಯ, ಪ್ರಗತಿಶೀಲ, ನವ್ಯಗಳ ಅನಂತರದ ಸಾಹಿತ್ಯ ಚಳವಳಿ ಇದು. ಇದನ್ನು ನವೋತ್ತರ ಸಾಹಿತ್ಯವೆಂದೂ ಕರೆಯಲಾಗಿದೆ. ಎಪ್ಪತ್ತರ ದಶಕದ ಉತ್ತರಾರ್ಧದಲ್ಲಿ ಕನ್ನಡ ಸಾರಸ್ವತ ಪ್ರಪಂಚದಲ್ಲಿ ಕೇಳಿಬರುತ್ತಿರುವ, ಎಲ್ಲ ಪ್ರಗತಿಪರ ಹಾಗೂ ದಲಿತ ಬರಹಗಾರರಿಂದ ಸೃಷ್ಟಿಯಾದ ಮತ್ತು ಸೃಷ್ಟಿಗುತ್ತಿರುವ ಸಾಹಿತ್ಯವಿದು. ಬಂಡಾಯ ಸಾಹಿತ್ಯದ ಉಗಮ– 1970 ರ ದಶಕದಲ್ಲಿ ಅನೇಕ ಸಾಮಾಜಿಕ, ರಾಜಕೀಯ ಘಟನೆಗಳು ಜನಸಾಮಾನ್ಯರ ಬದುಕಿನಲ್ಲಿ ಬದಲಾವಣೆಗಳನ್ನು ತಂದವು. ಬದುಕಿನಲ್ಲಿ ಉಂಟಾದ ಕೋಲಾಹಲದಿಂದಾಗಿ ಸಾಹಿತ್ಯದಲ್ಲೂ ಬದಲಾವಣೆ ಅನಿವಾರ್ಯವೆನಿಸಿ ಬಂಡಾಯದ ದನಿ ಮೊಳಗಿತು. ಶತಶತಮಾನದಿಂದ ಸಾಮಾಜಿಕವಾಗಿ, ಆರ್ಥಿಕವಾಗಿ, ಶೋಷಣೆಗೆ, ಅಪಮಾನಕ್ಕೆ, ಕ್ರೌರ್ಯಕ್ಕೆ ಬಲಿಯಾದ ಪ್ರಜ್ಞಾವಂತ ಲೇಖಕರು ಬರೆದ ಪ್ರತಿಭಟನಾ ಸಾಹಿತ್ಯವೇ ನಿಜವಾದ ದಲಿತ ಸಾಹಿತ್ಯವೆನಿಸಿತು. ದಲಿತ ಸಾಹಿತ್ಯವನ್ನು ಒಳಗೊಂಡುದೇ ಬಂಡಾಯ ಸಾಹಿತ್ಯ. ಸಾಹಿತ್ಯ ಸೃಷ್ಟಿ ಖುಷಿಗಾಗಿ ಅಲ್ಲ. ಸಾಂಸ್ಕೃತಿಕ ಬದಲಾವಣೆಗಳಿಗಾಗಿ ಸಂಸ್ಕೃತಿಯಲ್ಲಿ ಪ್ರತಿಷ್ಠಾಪಿತ ಮೌಲ್ಯಗಳು ಜಡವಾದಾಗ, ಪ್ರತಿಗಾಮಿಯಾದಾಗ ಅವುಗಳ ವಿರುದ್ಧ ಹೋರಾಡುವುದೇ ಬಂಡಾಯವಾಗಿದೆ. ಅದು ಸಾಹಿತ್ಯದಲ್ಲಿ ಅಭಿವ್ಯಕ್ತಗೊಂಡಾಗ ಬಂಡಾಯ ಸಾಹಿತ್ಯವೆನಿಸಿದೆ. ಈ ದಿಸೆಯಲ್ಲಿ ಸಂಘಟನೆಗೊಂಡ ಬಂಡಾಯ ಸಾಹಿತಿಗಳ ಸಮ್ಮೇಳನ ಕನ್ನಡ ಸಾಹಿತ್ಯ ಸಮ್ಮೇಳನವನ್ನು ವಿರೋಧಿಸುತ್ತ, 1979 ಮಾರ್ಚ್ 10-11ರಂದು ಬೆಂಗಳೂರಿನಲ್ಲಿ ಸಮಾವೇಶಗೊಡು ಈ ಚಳವಳಿಗೆ ಒಂದು ಸ್ಪಷ್ಟರೂಪ ಕೊಡಲು ಯತ್ನ ನಡೆಸಿತು. ಪ್ರಜಾಪ್ರಭುತ್ವದ ರಕ್ಷಣೆಗೆ ಹಾಗೂ ವಿಸ್ತರಣೆಗೆ ಮತ್ತು ಶೋಷಣೆಯನ್ನು ಸಮರ್ಥಿಸುವ ಯಜಮಾನ ಸಂಸ್ಕೃತಿಯ ವಿರುದ್ಧ ಹೋರಾಟಕ್ಕೆ ಮತ್ತು ಶೋಷಿತ ಜನತೆಯ ಪರವಾದ ಹೋರಾಟದ ಸಾಹಿತ್ಯ ಸೃಷ್ಟಿಗಾಗಿ ಖಡ್ಗವಾಗಲಿ ಕಾವ್ಯ ಎಂಬ ಘೋಷಣೆಗಳನ್ನು ಮೊಳಗಿಸಿತು. ಇವರಲ್ಲಿ ಪ್ರಮುಖರಾದವರು ಪಿ.ಲಂಕೇಶ್ ರು. ಹೀಗಂದರೆ ತಪ್ಪಾಗಲಿಕ್ಕಿಲ್ಲ. ಇದರ ಗುರಿ , ನಿಲುವು– ಎಲ್ಲಿ ರಮ್ಯ-ನವ್ಯ ಪಂಥಗಳು ಸೋತಿವೆಯೋ ಅಲ್ಲಿ ಬಂಡಾಯ ಸಾಹಿತ್ಯ ತನ್ನ ಹೊಣೆಗಾರಿಕೆಯನ್ನು ಗುರುತಿಸಲು ಹೊರಟಿದೆ. ಬಂಡಾಯ ಸಾಹಿತ್ಯವೆಂದರೆ ಕೇವಲ ಸೌಂದರ್ಯೋಪಾಸನೆಯಲ್ಲ ಅಥವಾ ಬೌದ್ಧಿಕ ತುಡಿತವೂ ಅಲ್ಲ, ಅದೊಂದು ಸಾಮಾಜಿಕ ಹೊಣೆಗಾರಿಕೆಯಾಗಿದೆ. ಇಂದು ಸಮಾಜವನ್ನು ಕಿತ್ತು ತಿನ್ನುತ್ತಿರುವ ಅಧೋಗತಿಗೆ ತಳ್ಳಿರುವ ಯಜಮಾನ ಸಂಸ್ಕೃತಿಯ ಮುಖ್ಯ ಅಂಶಗಳಾದ ಜಾತಿ ಮತ್ತು ವರ್ಗಗಳ ವಿರುದ್ಧ ಮತ್ತು ಶೋಷಣೆಯ ವಿರುದ್ಧ ಶ್ರಮ ಜೀವಿಗಳನ್ನು ಬಂಡಾಯಕ್ಕೆ ಅನುಗೊಳಿಸುವುದೇ ಬಂಡಾಯ ಸಾಹಿತ್ಯದ ಗುರಿಯಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನಂಥ ಸಂಸ್ಥೆ ಸಾಂಪ್ರದಾಯಕ ಜಡತ್ವವನ್ನು ತೋರಿಸಿದಾಗ ಅದನ್ನು ವಿರೋಧಿಸುವ ಸಂಘಟನಾತ್ಮಕ ಹೋರಾಟ ಬಂಡಾಯದ್ದು. ಶೋಷಿತ ಜನತೆಯ ಪರವಾದ ನಿಲವನ್ನು ಸಾಂಸ್ಕೃತಿಕ ಕ್ಷೇತ್ರದಲ್ಲಿ ಭದ್ರವಾಗಿ ನೆಲೆಗೊಳಿಸುವುದು ಮತ್ತು ಸಾಹಿತಿ ತನ್ನ ಸಾಮಾಜಿಕ ರಾಜಕೀಯ ಪ್ರಜ್ಞೆಯಿಂದ ಅಸ್ಪೃಶ್ಯತೆ, ಜಾತಿಪದ್ಧತಿ, ಲಿಂಗಭೇದ, ವರ್ಗಭೇದ ನೀತಿಯನ್ನು ವಿರೋಧಿಸುವುದು ಎಂದು ತಿಳಿಸಿ ಬಂಡಾಯ ಸಾಹಿತ್ಯಕ್ಕೆ ತನ್ನದೇ ಆದ ಒಂದು ತಾತ್ವಿಕ ನೆಲೆಯಿದೆಯೆಂದು ಹೇಳಲಾಯಿತು. ಈ ಸಾಹಿತ್ಯ ಪರಂಪರೆಯನ್ನು ಒಟ್ಟಾಗಿ ವಿರೋಧಿಸುವುದಿಲ್ಲವಾದರೂ ಸಂಪ್ರದಾಯದ ಸ್ಥಗಿತತೆಯನ್ನೂ ಮಾನವ ವಿರೋಧಿ ನೀತಿಯನ್ನೂ ವಿರೋಧಿಸುತ್ತದೆ. ಪರಂಪರೆಯ ಜೊತೆಗೆ ಸಂಬಂಧ ಮತ್ತು ಮುಂದುವರಿಕೆ ಬಂಡಾಯದ ನಿಲುವಾಗಿದೆ. ಬಂಡಾಯ ಸಾಹಿತ್ಯ ಎಡಪಂಥೀಯ ವಿಚಾರಧಾರೆಗೆ, ಕಲಿತ ಕಾಳಜಿಗಳಿಗೆ ಬದ್ಧವಾದ ಸಾಹಿತ್ಯವೂ ಆಗಿದೆ. ಸಾಮಾಜಿಕ ಜವಾಬ್ದಾರಿ ಲೇಖಕನಿಗೆ ಇರಬೇಕು ಮತ್ತು ಕಾಲಕ್ಕೆ ಅವನು ಬದ್ಧನಾಗಿರಬೇಕಾಗಿರುವುದು ಮುಖ್ಯವಾಗಿದೆ ಎಂಬುದು ಬಂಡಾಯದ ಬಹು ಮುಖ್ಯ ಗುರಿಯಾಗಿದೆ. ಇದರಿಂದಾಗಿ ಲೇಖಕ ಆಯಾಕಾಲದ ಧೋರಣೆಗೆ ಪ್ರತಿಕ್ರಿಯಿಸುತ್ತಾನೆ. ಅಭಿವ್ಯಕ್ತಿಯಲ್ಲಿ ಯಾವ ಮಾರ್ಗವನ್ನೇ ಅನುಸರಿಸಲಿ ಕ್ರೂರ ವ್ಯವಸ್ಥೆಯ ವಿರೋಧಿ ನೆಲೆಯೊಂದು ಈ ಸಾಹಿತ್ಯದ ಹಿನ್ನೆಲೆಯಲ್ಲಿರುತ್ತದೆ. ‘ಬಂಡಾಯ ಸಾಹಿತಿಗಳು ಯಥಾಸ್ಥಿತಿವಾದದ ವಿರೋಧಿಗಳು ಸಮಾಜ ಬದಲಾವಣೆಯ ಧೋರಣೆಗೆ ಬದ್ಧರು. ಇದಲ್ಲದೇ ಜನಪರ ಹೋರಾಟಗಳೊಂದಿಗೆ ಕ್ರಿಯಾತ್ಮಕ ಸಂಬಂಧ ಬೆಳೆಸಲು ಮತ್ತು ಪ್ರಧಾನವಾಗಿ ಸಾಂಸ್ಕೃತಿಕ ಕ್ಷೇತ್ರದಲ್ಲಿ ಎಡಪಂಥೀಯ ವಿಚಾರಧಾರೆಯನ್ನು ನೆಲೆಗೊಳಿಸಲು ಬದ್ಧರಾದವರು. ಇಷ್ಟಾಗಿಯೂ ಈ ಸಾಹಿತ್ಯ ಯಾವೊಬ್ಬ ನಿರ್ದಿಷ್ಟ ವ್ಯಕ್ತಿಯ ಸಿದ್ಧಾಂತಗಳನ್ನು ನೆಚ್ಚಿ ನಿಂತಿಲ್ಲವೆಂದು ಹೇಳಲಾಗುತ್ತದೆ. ಕಾರ್ಲ್ ಮಾಕ್ರ್ಸ್, ಲೋಹಿಯಾ, ರಾಮಸ್ವಾಮಿ ನಾಯ್ಕರ್, ಅಂಬೇಡಕರ್, ಜಯಪ್ರಕಾಶ ನಾರಾಯಣ್ ಇನ್ನೂ ಅನೇಕವರೆಲ್ಲ ಈ ಸಾಹಿತ್ಯದ ವ್ಯಕ್ತಿ ಶಕ್ತಿಗಳು ಆಗಿದ್ದಾರೆ ಎನ್ನಲಾಗಿದೆ ಅನ್ನುವುದುಕಿಂತಲೂ ಹೌದು ಎಂಬುದೇ ಹೆಚ್ಚು ಸೂಕ್ತ. ಬಂಡಾಯ ಸಾಹಿತಿ ಸಾಮಾಜಿಕ ಸಂಬಂಧಗಳ ಹಿಂದಿರುವ ಮೋಸಗಳನ್ನು, ಅಮಾನವೀಯತೆಯನ್ನು ಗುರುತಿಸಿ ಸಮಾಜ ವ್ಯವಸ್ಥೆಯ ವಿರುದ್ಧ ಸ್ಫೋಟಿಸುತ್ತಾನೆ. ಈ ಸ್ಫೋಟನೆಯ ಆಳದಲ್ಲಿ ಹೊಸ ಸಮಾಜ ರಚನೆಯ ಕಳಕಳಿ, ಅಸ್ತಿತ್ವದಲ್ಲಿ ಇರುವ ಅಸಮಾನ ಸಮಾಜವನ್ನು ಕುರಿತು ಉಗ್ರವಾದ ಅಸಹನೆವು ಇದರೊಂದಿಗೆ ಒಂದರೊಡನೊಂದು ಬೆಸೆದುಕೊಂಡಿರುತ್ತವೆ. ಅಸಮಾನತೆ, ಅನ್ಯಾಯ, ಶೋಷಣೆಗಳನ್ನೇ ಮೂಲಧನ ಮಾಡಿಕೊಂಡು ಯುಗಯುಗಗಳಿಂದ ಬಡವರನ್ನು ಮತ್ತು ಜಾತಿಯ ದೃಷ್ಟಿಯಿಂದ ಹೀನರಾದವರನ್ನು ತುಳಿಯುತ್ತ ಬಂದ ಯಜಮಾನ ಸಂಸ್ಕೃತಿಯ ವಿರುದ್ಧ ಬಂಡೇಳುವ ಕೆಚ್ಚು ಮತ್ತು ಅಂಥ ಪ್ರತಿಭಟನೆಯ ಹಿಂದಿರುವ ಪ್ರಾಮಾಣಿಕತೆಯೇ ಬಂಡಾಯ ಸಾಹಿತ್ಯದ ಮೂಲ ನೆಲೆ ಎಂದೇ ಹೇಳಬೇಕು. ಈ ಮೇಲಿನ ಅಂಶಗಳು ಬಂಡಾಯ ಸಾಹಿತ್ಯದ ನೆಲೆ ಬೆಲೆಯನ್ನು ಸ್ಥೂಲವಾಗಿ ತಿಳಿಸುತ್ತವೆ. ಪ್ರಾಚೀನ ಸಾಹಿತ್ಯದಲ್ಲಿ ಬಂಡಾಯ– ಪ್ರಾಚೀನ ಸಾಹಿತ್ಯದಲ್ಲೂ ಬಂಡಾಯದ ದನಿಯನ್ನು ಗುರುತಿಸಲಾಗಿದೆ. ದಾಸ ಸಾಹಿತ್ಯ, ವಚನ ಸಾಹಿತ್ಯ, ನವೋದಯ ಸಾಹಿತ್ಯಗಳೂ ಅವುಗಳ ಮಿತಿಯಲ್ಲಿ ಸಾಮಾಜಿಕ ಪ್ರಜ್ಞೆಯನ್ನು ಬಂಡಾಯದ ಆಶಯವನ್ನು ವ್ಯಕ್ತಪಡಿಸಿರುವುದನ್ನು ಈ ಸಾಹಿತ್ಯ ಗಮನಿಸುತ್ತದೆ. ಮತ್ತು ಗಮನಿಸುತ್ತದೆ. ವಚನ ಸಾಹಿತ್ಯ– ವಚನ ಸಾಹಿತ್ಯ ಯಜಮಾನ ಸಾಹಿತ್ಯದ ವಿರುದ್ಧ ಬಂಡೆದ್ದ ಸಾಹಿತ್ಯ ಚಳವಳಿಯಾಗಿದೆ. ಹೊಸ ಬದುಕಿನ ತುಡಿತಕ್ಕೆ ಹಾತೊರೆದ ವಚನಕಾರರು ಇದ್ದ ವ್ಯವಸ್ಥೆಯನ್ನು ಸೀಳಿ ಅದರ ಒಡಲಲ್ಲೇ ಹೊಸ ವ್ಯವಸ್ಥೆಯನ್ನು ನಿರ್ಮಿಸಿದ್ದು ಸಾಮಾನ್ಯವಾದ ಸಾಧನೆಯಲ್ಲ. ಏಕದೇವೋಪಾಸನೆಯ ತಳಹದಿಯ ಮೇಲೆಯೇ ಎಲ್ಲರೂ ಸಂಘಟಿತರಾಗಿ ಜಾತಿ ಪದ್ಧತಿ, ಅಸಮಾನತೆ ಮತ್ತು ಮೂಢ ನಂಬಿಕೆಗಳನ್ನು ವಿರೋಧಿಸಿ ದುಡಿಯುವ ವರ್ಗಕ್ಕೊಂದು ಹೊಸ ಜಾಗೃತಿಯನ್ನು ತಂದುಕೊಟ್ಟರು. ಅಂದಿನ ಸಂದರ್ಭದ ಈ ಸಾಧನೆ ವಚನಕಾರರ ಬಂಡಾಯದ ಫಲವೇ ಆಗಿದೆ ಎನ್ನುತ್ತಾರೆ ನಮ್ಮ ಸಾಹಿತಿಗಳು. ದಾಸ ಸಾಹಿತ್ಯ– ದಾಸ ಸಾಹಿತ್ಯ ಪ್ರಗತಿ ಮನೋಭಾವದಿಂದ ರಚಿತವಾದುದು. ಸಾಮಾಜಿಕ ವಿಡಂಬನೆ, ಮಡಿವಂತಿಕೆಯ ವಿರೋಧಗಳನ್ನು ಪ್ರಕಟಿಸಿ ಸಾಮಾನ್ಯರ ಬದುಕನ್ನು ಹಸನು ಮಾಡಿದೆ. ಸರ್ವಜ್ಞ ತನ್ನ ತ್ರಿಪದಿಗಳಲ್ಲಿ ಬದುಕಿನ ಜಡತ್ವಕ್ಕೆ ಚಾಟಿ ಎಸೆದು, ಮೂಢನಂಬಿಕೆ, ಜಾತಿ ಪದ್ಧತಿಗಳನ್ನು ವೈಯಕ್ತಿಕ ನೆಲೆಯಲ್ಲೇ ವಿರೋಧಿಸಿ ಪ್ರಗತಿಪರ ಎನಿಸಿದ್ದಾನೆ. ನವೋದಯ, ನವ್ಯ ಸಾಹಿತ್ಯ– ಇತ್ತೀಚಿನ ನವೋದಯ, ನವ್ಯ ಸಾಹಿತ್ಯ ಚಳವಳಿಗಳೂ ತಮ್ಮ ಮಿತಿಯಲ್ಲೇ ಶೋಷಣೆ, ಜಡ ಸಂಪ್ರದಾಯಗಳ ವಿರೋಧಿ ನಿಲುವನ್ನು ಪ್ರಕಟಿಸಿವೆ. ನವೋದಯದ ಜೊತೆಯಲ್ಲೇ ಬಂದ ಪ್ರಗತಿಶೀಲ ಚಳವಳಿ ಜನತೆ ಸಾಮಾಜಿಕ ಹೊಣೆಗಾರಿಕೆಯ ಕಡೆ ಮುಖ ಮಾಡುವಂತೆ ಮಾಡಿದೆ. ಇಷ್ಟು ದೀರ್ಘ ಪರಂಪರೆಯನ್ನು ಪಡೆದ ಈ ಸಾಹಿತ್ಯ ಹೊಸ ಸಾಂಸ್ಕೃತಿಕ ಪರಂಪರೆಯ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿದೆ. ಪ್ರಮುಖ ಸಾಹಿತಿಗಳು ಮತ್ತು ಅವರ ಕೃತಿಗಳು– ಈ ಸಾಹಿತ್ಯದಲ್ಲಿ ಕೃಷಿ ನಡೆಸಿದ ಮತ್ತು ನಡೆಸುತ್ತಾ ಬಂದಿರುವ ಅಲ್ಲದೇ ನಡೆಸುತ್ತಿರುವ ಪ್ರಮುಖರಲ್ಲಿ ಬರಗೂರು ರಾಮಚಂದ್ರಪ್ಪನವರು ಒಬ್ಬರು. ನವ್ಯದ ಕಡೆಗಾಲದಲ್ಲಿ ಬರವಣಿಗೆ ಆರಂಭಿಸಿ ನವ್ಯದ ಪ್ರಭಾವಕ್ಕೆ ಒಳಗಾಗದ ಸ್ವಂತಿಕೆಯನ್ನು ಮೆರೆದರು. ನವ್ಯವೆಂದೇ ಹೇಳಬಹುದಾದ ‘ಮರಕುಟಿಗ’ ಎನ್ನುವ ಅವರ ಕವನ ಸಂಕಲನದಲ್ಲಿ ಸಾಮಾಜಿಕ ನಿಷ್ಠೆತೆಯ ಕುರಿತಂತೇ ಕವಿತೆಗಳಿವೆ. ತಮ್ಮ ಅಭಿವ್ಯಕ್ತಿಯ ಮಾಧ್ಯಮವಾಗಿ ಸಣ್ಣ ಕಥಾ ಕ್ಷೇತ್ರವನ್ನು ಆರಿಸಿಕೊಂಡ ಇವರು ‘ಸುಂಟರಗಾಳಿ’, ‘ಕಪ್ಪು ನೆಲದ ಕೆಂಪು ಕಾಲು’ ಕಥಾ ಸಂಕಲನಗಳನ್ನೂ, ಸೂತ್ರ ‘ಹುತ್ತ’, ‘ಒಂದು ಊರಿನ ಕಥೆ’, ‘ಸೀಳು ನೆಲ’ ಎಂಬ ಕಾದಂಬರಿಗಳನ್ನು ಪ್ರಕಟಿಸಿದ್ದಾರೆ. ಬಡತನ, ಶೋಷಣೆ, ಮೂಢನಂಬಿಕೆ ಇವಗಳನ್ನು ಕೇಂದ್ರವಾಗಿಟ್ಟುಕೊಂಡೇ ಸುಂಟರಗಾಳಿಯ ಕತೆಗಳು ರಚಿತವಾಗಿವೆ. ಸಾಮಾಜಿಕ ಮತ್ತು ಸಾಂಸ್ಕೃತಿಕ ವೈರುಧ್ಯಗಳು ಇವುಗಳ ಜೊತೆ ಮಾನವ ಸಂಬಂಧಗಳು ಇವುಗಳಿಂದ ಮೂಡಿ ಬರುವ ಬಂಡಾಯದ ವಿವಿಧ ಮಜಲುಗಳನ್ನು ‘ಕಪ್ಪು ನೆಲದ ಕೆಂಪು ಕಾಲು’ ಕಥಾ ಸಂಕಲನದಲ್ಲಿ ನಾವು ಕಾಣಬಹುದು. ಬರಗೂರರ ಕಾದಂಬರಿಗಳು ಸ್ವಾತಂತ್ರ್ಯೋತ್ತರ ಹಳ್ಳಿಗಳನ್ನೂ, ನಗರಗಳನ್ನೂ ಕೇಂದ್ರವಾಗಿರಿಸಿಕೊಂಡ ಪ್ರಯತ್ನಗಳಾಗಿವೆ. ಅವರು ತಮ್ಮ ಕಾದಂಬರಿಗಳಲ್ಲಿ ಸಮಾಜದ ಕೊಳಕುಗಳನ್ನು ತೋರಿಸಿ. ಶೋಷಣೆ ದಬ್ಬಾಳಿಕೆಗಳ ಮುಖಾಮುಖಿ ಸಂಘರ್ಷವನ್ನು ಕಲಾತ್ಮಕವಾಗಿ ಮುಂದಿಡುತ್ತಾರೆ. ‘ಒಂದು ಊರಿನ ಕತೆ’ ಅವರೇ ಹೇಳುವಂತೆ ಜೀವನಾನುಭವ ಮತ್ತು ವಾಸ್ತವದ ಗ್ರಹಿಕೆಗಳ ಆಧಾರದ ಮೇಲೆಯೇ ನಿಂತಿದೆ. ತ್ರಿಕೋನಾಕಾರದ ಜಾತಿ ವ್ಯವಸ್ಥೆ ಪಂಚಾಯ್ತಿಯ ಅಧಿಕಾರ ಗ್ರಹಣಕ್ಕಾಗಿ ಒಳಗೊಳಗೇ ತಿಕ್ಕಾಡುವುದು. ಶ್ರೀಮಂತವರ್ಗ ಪಂಚಾಯ್ತಿಯಲ್ಲಿ ಸ್ಥಾನ ಗಿಟ್ಟಿಸಲು ಹೆಣಗಾಡುವುದು. ಅದಕ್ಕಾಗಿ ಮುಗ್ಧ ಹಾಗೂ ದರಿದ್ರ ದಲಿತರನ್ನೇ ಬಲಿಕೊಡಲು ಮುಂದಾಗುವುದು ಈ ಇದು ಸ್ವತಂತ್ರ ಭಾರತದ ಹಳ್ಳಿಗಳ ದೊಡ್ಡದುರಂತವೇ ಆಗಿದೆ. ಈ ದುರಂತದ, ಹೊಲಸು ರಾಜಕೀಯದ ನೈಜ ಚಿತ್ರಣ ಈ ಕಾದಂಬರಿಯಲ್ಲಿ ದಟ್ಟವಾಗಿ ಮೂಡಿಬಂದಿದೆ. ವ್ಯವಸ್ಥೆಯ ಒಳತಿಕ್ಕಾಟಗಳು ಇವರ ಕಾದಂಬರಿಗಳಲ್ಲಿ ತಮ್ಮಷ್ಟಕ್ಕೆ ತಾವೇ ವ್ಯಕ್ತವಾಗುವ ಬಗೆ ಕನ್ನಡದಲ್ಲಿ ಹೊಸದು ಎಂದೇ ಹೇಳಬಹುದು. ಬಂಡಾಯ ಸಾಹಿತಿಗಳಲ್ಲಿ ಮುಖ್ಯರಾದ ಇನ್ನೊಬ್ಬ ಲೇಖಕರೆಂದರೆ ದೇವನೂರು ಮಹಾದೇವ ಅವರು. ‘ದ್ಯಾವನೂರು’ ಎಂಬ ಕಥಾ ಸಂಕಲನ ಮತ್ತು ‘ಒಡಲಾಳ’ ಎಂಬ ಕಿರು ಕಾದಂಬರಿಯನ್ನು ಪ್ರಕಟಿಸಿರುವ ಇವರು ಅಸಮಾನತೆ. ಶೋಷಣೆ, ಅಮಾನವೀಯತೆಗಳ ಬಗ್ಗೆ ವಿಷಾದದಿಂದ ಮತ್ತು ನೋವಿನಿಂದ ತಮ್ಮ ಪ್ರತಿಭಟನೆಯ ಧ್ವನಿ ಎತ್ತಿದ್ದಾರೆ. ಇವರು ತಾತ್ತ್ವಿಕವಾಗಿ ಶೋಷಣೆಯ ವಿರೋಧಿ ಎಂಬುದು ನಿಜವಾದರೂ ಇವರ ಕತೆಗಳಲ್ಲಿ ಸಂಘರ್ಷಕ್ಕಿಂತ ಶೋಷಣೆಗೀಡಾದವರ ಅಸಹಾಯಕ ಸ್ಥಿತಿಗತಿಗಳನ್ನು ಹೇಳುವ ಕಾಳಜಿ ಹೆಚ್ಚು. ‘ಅಮಾಸ’ ‘ಮಾರಿಕೊಂಡವರು’ ‘ಮೂಡಲಸೀಮೇಲೆ ಕೊಲೆಗಿಲೆ’ ಮುಂತಾದ ಕತೆಗಳು ಕಲೆಗಾರಿಕೆ, ವಸ್ತುವಿನ ದೃಷ್ಟಿಯಿಂದ ಉತ್ತಮ ಕತೆಗಳಾಗಿವೆ. ‘ಒಡಲಾಳ’ ಅದರ ವಿವರಣೆಯ ಸಮಗ್ರ ರೂಪ ಹಾಗೂ ತಂತ್ರದಿಂದಾಗಿ ಹೆಚ್ಚು ಗಮನಾರ್ಹ ಕೃತಿಯಾಗಿದೆ. ಕ್ರೌರ್ಯ ಹಾಗೂ ಅಧಿಕಾರಿಶಾಹಿಯಿಂದ ಒಂದು ಕುಟುಂಬದ ಮೇಲಾಗುವ ಪರಿಣಾಮವನ್ನು ಅತ್ಯಂತ ಪರಿಣಾಮಕಾರಿಯಾಗಿ ಈ ಕೃತಿ ಚಿತ್ರಿಸುತ್ತದೆ. ಮೇಲಿನ ಲೇಖಕರಷ್ಟೇ ಪ್ರಮುಖರಾದ ಮತ್ತೊಬ್ಬ ಬರಹಗಾರರೆಂದರೆ ಕವಿ ಸಿದ್ಧಲಿಂಗಯ್ಯನವರು, ‘ಹೊಲೆಮಾದಿಗರ ಹಾಡು’, ‘ಸಾವಿರಾರು ನದಿಗಳು’, ‘ಪಂಚಮ’, ‘ನೆಲಸಮ’ ಮುಂತಾದ ಕೃತಿಗಳನ್ನು ಪ್ರಕಟಿಸಿರುವ ಈ ಕವಿ ಆವೇಶದಿಂದ ಕಾವ್ಯ ಕ್ರಿಯೆಯಲ್ಲಿ ತೊಡಗುತ್ತಾರೆ. ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳು ಎಂಬ ಸಂಘಟನಾತ್ಮಕ ಧೋರಣೆಯುಳ್ಳ ಈ ಕವಿಯ ಕಾವ್ಯದ ಛಂದೋ ವೈವಿಧ್ಯ ಅಪೂರ್ವವಾದುದು. ‘ಅಲ್ಲೇ ಕುಂತವರೆ’ ಖಂಡ ಕಾವ್ಯ ವಿಶೇಷವಾಗಿ ಉಲ್ಲೇಖಾರ್ಹವಾದುದು. ನವ್ಯ ಸಾಹಿತ್ಯದಲ್ಲಿ ಯಶಸ್ಸು ಪಡೆದು ಪರಂಪರೆಯ ಜೊತೆ ಜೊತೆಯಲ್ಲೇ ಚಿಂತನ ಶೀಲತೆಯನ್ನು ದಕ್ಕಿಸಿಕೊಂಡ ಕವಿ ಚಂದ್ರಶೇಖರ ಪಾಟೀಲರು. ತುರ್ತುಪರಿ ಸ್ಥಿತಿಯನ್ನು ವಿರೋಧಿಸಿ ಜೈಲನ್ನೂ ಕಂಡು ಇವರು ವರ್ತಮಾನಕ್ಕೆ ತೆರೆದ ಹೃದಯದವರಾಗಿ ಹೊಸ ಸಾಹಿತ್ಯ ಚಳವಳಿಯಲ್ಲಿ ತಮ್ಮನ್ನು ಗುರುತಿಸಿಕೊಂಡು ‘ಗಾಂಧೀಸ್ಮರಣೆ’, ‘ಓ ಎನ್ನ ದೇಶಬಾಂಧವರೆ’ ಮುಂತಾದ ಕವನ ಸಂಕಲಗಳನ್ನು ಪ್ರಕಟಿಸಿದರು. ಅಲ್ಲದೇ ಇವರೇ ಸಂಪಾದಿಸಿದ ‘ಗಾಂಧಿ’ ಮತ್ತು ‘ಜೂನ್ 24 ಮಾರ್ಚ್ 22’ ಎಂಬ ಕವನ ಸಂಕಲನಗಳು ರಾಜಕೀಯ ಜಾಗೃತಿಯ ಪ್ರತೀಕಗಳಾಗಿವೆ. ಸಮಾಜದ ಕೆಡಕುಗಳತ್ತ ಕಣ್ಣು ಹಾಯಿಸಿ, ಅವನ್ನು ಗೇಲಿಗೆಬ್ಬಿಸಿ ವಿಡಂಬನೆಗಳ ಮೂಲಕ ಚುಚ್ಚುವುದನ್ನು ಇವರ ಕೃತಿಗಳಲ್ಲಿ ಕಾಣಬಹುದು. ಅಲ್ಲದೇ ಮುಖ್ಯವಾಗಿ ಬೆಸಗರಹಳ್ಳಿ ರಾಮಣ್ಣ ಮತ್ತು ಕಾಳೇಗೌಡ ನಾಗವಾರ  ಇವರು ಬಂಡಾಯ ಸಾಹಿತ್ಯದ ಬಹು ಸತ್ತ್ವಶಾಲೀ ಲೇಖಕರು. ರಾಮಣ್ಣನವರ ‘ಒಂದು ಹುಡುಗನಿಗೆ ಬಿದ್ದ ಕನಸು’ ಶೋಷಣೆಯ ವಿವಿಧ ಮುಖಗಳನ್ನು ಚಿತ್ರಿಸುತ್ತದೆ. ಜನಪದ ಭಾಷೆಯನ್ನು ದುಡಿಸಿಕೊಳ್ಳುವುದರಲ್ಲಿ ಇವರ ಕತೆಗಳು ಯಶಸ್ವಿಯಾಗಿವೆ. ಗಾಂಧಿ, ಪ್ರಜಾಪ್ರಭುತ್ವ, ಗರ್ಜನೆ, ಕತೆಗಳು ತಮ್ಮ ಪ್ರತಿಭಟನೆಯ ಧೋರಣೆಯನ್ನು ವ್ಯಕ್ತಮಾಡಿವೆ. ಇನ್ನೂ ಕಾಳೇಗೌಡ ನಾಗವಾರರ ‘ಬೆಟ್ಟಸಾಲು ಮಳೆ’, ‘ಕರಾವಳಿಯಲ್ಲಿ ಗಂಗಾಲಗ್ನ’ ಎಂಬೆರಡು ಕೃತಿಗಳು ಸೃಜನಶೀಲ ಕೃತಿಗಳು. ಕಾಳೇಗೌಡ ನಾಗವಾರರು ಗ್ರಾಮೀಣ ಪರಿಸರದಿಂದ ಬಂದವರಾದ್ದರಿಂದ ಅಸಮಾನತೆಯ ವಿರುದ್ಧ ದನಿ ಎತ್ತಿದವರಾಗಿದ್ದಾರೆ. ‘ಬೆಟ್ಟಸಾಲು ಮಳೆ’ ಗ್ರಾಮೀಣ ಹಾಗೂ ನಗರ ಪರಿಸರಗಳೆರಡರ ಪ್ರಭಾವದಿಂದ ರಚಿತವಾಗಿರುವ ಕೃತಿಯಾಗಿದೆ. ಇದರಲ್ಲಿ ಬಂಡಾಯದ ಆಶಯಗಳನ್ನು ಹೊಂದಿರುವ ಕತೆಗಳಿರುವುದರಿಂದ ಈ ಕೃತಿಗೆ

ಸ್ವಾತ್ಮಗತ Read Post »

ಅಂಕಣ ಸಂಗಾತಿ, ಸ್ವಾತ್ಮಗತ

ಸ್ವಾತ್ಮಗತ

ಸುಭಾಷ್ ಪಾಳೇಕರರ ‘ಸಹಜ ಕೃಷಿ ಪದ್ದತಿ’ಯೂ..! ಮೈಸೂರಿನ ಆರ್.ಸ್ವಾಮಿ.ಆನಂದರ ‘ಸುಭಾಷ್ ಪಾಳೇಕರರ ಸಹಜ ಕೃಷಿ’ ಪುಸ್ತಕವೂ.!! ಕಳೆದ ಜುಲೈನಲ್ಲಿ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ರೈತರ ಆದಾಯವನ್ನು ದ್ವಿಗುಣಗೊಳಿಸಲು ‘ಶೂನ್ಯ ಬಂಡವಾಳದ (ನೈಸರ್ಗಿಕ) ಕೃಷಿ’ಯನ್ನು ಉತ್ತೇಜಿಸುವುದಾಗಿ ಉಲ್ಲೇಖಿಸಿದ್ದರು. ಇದಕ್ಕೂ ಮುಂಚೆಯೇ ಕರ್ನಾಟಕವೂ ಸೇರಿದಂತೆ ಆಂಧ್ರ ಪ್ರದೇಶ, ಛತ್ತೀಸ್ ಘಡ, ಹಿಮಾಚಲ ಪ್ರದೇಶ ಮತ್ತು ಮಣಿಪುರ ರಾಜ್ಯಗಳಲ್ಲೂ ಈ ಕೃಷಿ ಪದ್ದತಿಯನ್ನು  ಪ್ರೋತ್ಸಾಹಿಸುವ ಕಾರ್ಯಕ್ರಮಗಳನ್ನು ಆಯಾಯ ರಾಜ್ಯ ಸರ್ಕಾರಗಳು ಹಮ್ಮಿಕೊಂಡಿವೆ. ಈ ನಡುವೆ ನೈಸರ್ಗಿಕ ಕೃಷಿ ಪದ್ಧತಿಯ ಬಗ್ಗೆ ಅನೇಕ ಕೃಷಿ ಪಂಡಿತರು, ವಿಜ್ಞಾನಿಗಳು, ರೈತಪರ ಚಿಂತಕರು ಕೃಷಿ ವಿಶ್ಲೇಷಕರು ಒಳಗೊಂಡಂತೆ ರಾಷ್ಟ್ರವ್ಯಾಪಿ ಚರ್ಚೆಗಳು ನಡೆದಿವೆ. ಕಳೆದ ಕೆಲ ವಾರಗಳ ಹಿಂದೆ ರಮೇಶ್ ಮುಳಬಾಗಿಲುರವರು ಬರೆದ ‘ನೈಸರ್ಗಿಕ ಕೃಷಿಯೊಳಗಿನ ಬಲಪಂಥೀಯವಾದ’ ಲೇಖನಕ್ಕೆ ಚುಕ್ಕು ನಂಜುಡಸ್ವಾಮಿಯವರು ಪ್ರತಿಕ್ರಿಯೆ ನೀಡಿದ್ದರು. ‘ಶೂನ್ಯ ಬಂಡವಾಳ’– ನೈಸರ್ಗಿಕ ಕೃಷಿಯನ್ನು ವಿಮರ್ಶೆ ಮಾಡುತ್ತಿರುವ ಅನೇಕ ಕೃಷಿ ತಜ್ಞರಿಗೆ ನೈಸರ್ಗಿಕ ಕೃಷಿ ಬಗ್ಗೆ ಅನೇಕ ಅನುಮಾನಗಳು ಇದ್ದಂತಿವೆ. ಯಾವ ಬಂಡವಾಳವೂ ಹೂಡದ ಕೃಷಿ ಸಾಧ್ಯವೇ? ಈ ಪದ್ದತಿಯಿಂದ ದೇಶದ 130 ಕೋಟಿ ಜನರ ಹೊಟ್ಟೆ ತುಂಬಿಸಲು ಸಾಧ್ಯವೇ? ದೇಶದ ಎಲ್ಲ ಹವಾಮಾನ ವಲಯಗಳಲ್ಲಿ ಇದನ್ನು ಅಳವಡಿಸಲು ಸಾಧ್ಯವೇ. ಈ ಪದ್ಧತಿಯು ಕೃಷಿ ವಿಶ್ವ ವಿದ್ಯಾಲಯಗಳ ಮಾನ್ಯತೆ ಪಡೆದಿದೆಯೇ ಎಂಬ ಪ್ರಶ್ನೆಗಳನ್ನು ಎತ್ತಿದ್ದರು. ಈ ಕೃಷಿ ಪದ್ಧತಿಯನ್ನು ಸಂಶೋಧನೆಗೆ ಒಳಪಡಿಸಿ ಪರೀಕ್ಷಿಸಬೇಕೆಂದು ಇನ್ನೂ ಕೆಲವರು ಅಭಿಪ್ರಾಯಪಟ್ಟಿದ್ದರು. ಈ ದೇಶದ ಬಹು ಸಂಖ್ಯಾತರ ಭೂಮಿ ಮತ್ತು ಬದುಕನ್ನು ಜೋಪಾನ ಮಾಡುವ ಜವಾಬ್ದಾರಿಯನ್ನು ನಮ್ಮ ಕೃಷಿ ವಿಶ್ವವಿದ್ಯಾಲಯಗಳಿಗೆ ಕೊಡಲಾಗಿತ್ತು. ಆದರೆ ನಮಗೆ ಎದುರಾಗಿದ್ದ ಸವಾಲುಗಳಿಗೆ ನಮ್ಮಲ್ಲೇ ಉತ್ತರ ಹುಡಕುವ ಗೋಜಿಗೆ ಹೋಗಲಿಲ್ಲ ಈ ವಿಶ್ವವಿದ್ಯಾಲಯಗಳು. ಪಾಶ್ಚಿಮಾತ್ಯ ದೇಶಗಳಿಂದ ಎರವಲು ಪಡೆದ ‘ಹಸಿರು ಕ್ರಾಂತಿ’ಯನ್ನು ಪ್ರಚುರಪಡಿಸಿದ್ದಷ್ಟೇ ಇವುಗಳ ಸಾಧನೆಯಾಯಿತು. ಹಸಿರು ಕ್ರಾಂತಿಯ ನಂತರ ಭಾರತ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿತು ಎನ್ನುವುದೇನೋ ಸತ್ಯ. ಎರಡನೇ ಮಹಾಯುದ್ಧದ ನಂತರ ಶಸ್ತ್ರಾಸ್ತ್ರಗಳಿಗೆ ರಾಸಾಯನಿಕಗಳನ್ನು ತಯಾರಿಸುತ್ತಿದ್ದ ಕಂಪೆನಿಗಳಿಗೆ ಮಾರುಕಟ್ಟೆ ಇಲ್ಲದಂತಾಗಿತ್ತು. ಕೃಷಿ ಸಾಧನ ಸಲಕರಣೆಗಳು- ಬೀಜ ಗೊಬ್ಬರ ಕೀಟನಾಶಕಗಳ ತಯಾರಿಕೆಯಲ್ಲಿ ತಮ್ಮ ವ್ಯಾಪಾರವನ್ನು ಮುಂದುವರೆಸಲು ಈ ಎಲ್ಲ ಕಂಪೆನಿಗಳಿಗೆ ಹಸಿರು ಕ್ರಾಂತಿಯೇ ರತ್ನಗಂಬಳಿ ಹಾಸಿಕೊಟ್ಟಿತು ಎಂಬುದೂ ಅಷ್ಟೇ ಸತ್ಯ. ಹಸಿರು ಕ್ರಾಂತಿಗೂ ಮುಂಚೆ ಭಾರತದ ‘ಕೃಷಿ’ ಬದುಕಿನ ಭಾಗವಾಗಿತ್ತು. ಸಂಸ್ಕೃತಿಯ ನೆಲೆಯಾಗಿತ್ತು. ನಿಸರ್ಗದಲ್ಲಿರುವ ವೈವಿಧ್ಯತೆಯನ್ನು ಆರಾಧಿಸಿ ನಮ್ಮ ಹಿರಿಯರು ಮಾಡುತ್ತಿದ್ದುದು ಮಿಶ್ರ ಬೆಳೆ ಪದ್ಧತಿ. ಕರ್ನಾಟಕದಲ್ಲಿ ಅಕ್ಕಡಿ ಎಂದು ಕರೆದರೆ, ಉತ್ತರ ಭಾರತದಲ್ಲಿ `ಬಾರಾ ಅನಾಜ್” (ಹನ್ನೆರಡು ದವಸ ಧಾನ್ಯ) ಎಂದು ಕರೆದರು. ಮನೆಯ ಆಹಾರ ಭದ್ರತೆಗೆ ಬೇಕಾದ ಧವಸ, ಧಾನ್ಯ, ಬೇಳೆಕಾಳುಗಳು, ಎಣ್ಣೆಬೀಜಗಳನ್ನು ಒಂದಕ್ಕೊಂದು ಹೊಂದುವಂತೆ ಬಿತ್ತಿ ಬೆಳೆಯುವ ಪದ್ಧತಿ ನಶಿಸುತ್ತ ಬಂದು ಅದರ ಜಾಗವನ್ನು ಕಾಲಕ್ರಮೇಣ ಏಕ ಬೆಳೆಯ ಪದ್ಧತಿಯು ಆವರಿಸಿಕೊಂಡಿತು. ನಮ್ಮಲ್ಲಿದ್ದ ಕೋಟ್ಯಾಂತರ ತಳಿಗಳು ಕಾಣೆಯಾದವು. ಹೆಚ್ಚು ಹೆಚ್ಚು ಬೆಳೆ ಬೆಳೆಯಲು ರಾಸಾಯನಿಕ ಗೊಬ್ಬರಗಳು-, ಕ್ರಿಮಿನಾಶಕಗಳನ್ನು ಮನೆ ಬಾಗಿಲಿಗೆ ತಂದುಕೊಟ್ಟರು. ಇವುಗಳನ್ನು ಸುರಿದು ಭೂಮಿ ಬಂಜರಾಯಿತು. ಎಕರೆಗಟ್ಟಲೇ ಭೂಮಿಯಲ್ಲಿ ರೈತರು ಕಬ್ಬು, ಭತ್ತ, ಹತ್ತಿ, ಅಡಿಕೆಯಂತಹ ಬೆಳೆಗಳನ್ನು ಈ ದೇಶದ ಆಹಾರ ಸ್ವಾವಲಂಬನೆಗಾಗಿ ಬೆಳೆದರು. ಮಿಕ್ಕೆಲ್ಲದಕ್ಕೂ ಮಾರುಕಟ್ಟೆಯ ಮೊರೆ ಹೋಗುವಂತಾಯಿತು. ಆಹಾರದ ಉತ್ಪಾದನೆಯಲ್ಲಿ ದೇಶ ಸ್ವಾವಲಂಬಿಯಾಯಿತು. ರೈತ ತನ್ನ ಖುದ್ದು ಆಹಾರ ಭದ್ರತೆಗೆ ಪರಾವಲಂಬಿಯಾದ. ಬೇರೆಯವರಿಗೆ ಕೊಡುತ್ತಿದ್ದ ರೈತನ ಕೈ ಮೂರು ಕಾಸಿನ ಸಬ್ಸಿಡಿ ಬೇಡಿ ಚಾಚುವಂತಾಯಿತು. ಇದೆಲ್ಲದರ ಶ್ರೇಯಸ್ಸು ಈ ದೇಶದ ಕೃಷಿ ವಿಜ್ನಾನಿಗಳಿಗೇ ಸಲ್ಲಬೇಕು. ಇದರ ನಡುವೆ ತೊಂಬತ್ತರ ದಶಕದಲ್ಲಿ ಮುಕ್ತ ಮಾರುಕಟ್ಟೆ ನೀತಿ ಜಾರಿಯಾಯಿತು. ವಿದೇಶೀ ಕೃಷಿ ಉತ್ಪನ್ನಗಳು ಯಾವುದೇ ಆಮದು ಸುಂಕವಿಲ್ಲದೇ ಅಗ್ಗದ ದರದಲ್ಲಿ ದೇಶದೊಳಗೆ ಭಾರೀ ಪ್ರಮಾಣದಲ್ಲಿ ಸುರಿದವು. ನಮ್ಮ ದೇಶದ ರೈತರ ಗಾಯದ ಮೇಲೆ ಬರೆ ಎಳೆದವು. ನಮ್ಮ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಇಲ್ಲದಂತಾಯಿತು. ಇಂದಿಗೂ ಕೃಷಿ ಮಾರುಕಟ್ಟೆ ಜೂಜಾಟವಿದ್ದಂತೆಯಾಯಿತು. ಯಾರು ಯಾವಾಗ ಬಾಜಿ ಕಟ್ಟುತ್ತಾರೋ ಯಾರಿಗೂ ತಿಳಿಯದು. ಇಂದಿಗೂ ಬೆಳೆಗಳ ಬೆಲೆ ರಕ್ಷಣೆಗೆ ಸಂಬಂಧಿಸಿದಂತೆ ಈ ದೇಶದಲ್ಲಿ ಯಾವ ಶಾಸನವೂ ಇಲ್ಲ. ಬೆಂಬಲ ಬೆಲೆ ನೀತಿಗಾಗಿ ಪ್ರತಿ ವರ್ಷ ನಡೆಯುವ ರೈತರ ಹೋರಾಟಗಳು ಮತ್ತು ಕೃಷಿ ಕ್ಷೇತ್ರದಲ್ಲಿ ನಡೆಯುತ್ತಿರುವ ಲಕ್ಷಾಂತರ ರೈತರ ಆತ್ಮಹತ್ಯೆಗಳು ನಮ್ಮ ಕಣ್ಮುಂದೆಯೇ ಇವೆ. ಭಾರತ ಸರ್ಕಾರದ ಕೃಷಿ ಮಂತ್ರಾಲಯದ ಅಂಕಿಅಂಶಗಳ ಪ್ರಕಾರ 1951ರಲ್ಲಿ ಭಾರತದಲ್ಲಿ ಒಕ್ಕಲುತನದಲ್ಲಿ ತೊಡಗಿದ್ದ ಜನಸಂಖ್ಯೆಯ ಒಟ್ಟು ಶೇಕಡಾ 69.7%. ಈ ಪ್ರಮಾಣ 2011 ರಲ್ಲಿ 54.6% ಕ್ಕೆ ಕುಸಿಯಿತು. ಇಷ್ಟೆಲ್ಲಾ ಆದರೂ ಸರ್ಕಾರಗಳೇ ಆಗಲಿ, ಕೃಷಿ ವಿಶ್ವವಿದ್ಯಾಲಯಗಳೇ ಆಗಲಿ, ಕೃಷಿ ಒಂದು ಗಂಭೀರ ಬಿಕ್ಕಟ್ಟಿಗೆ ಸಿಲುಕಿದೆಯೆಂದು ಗುರುತಿಸುವ ಕನಿಷ್ಠ ಕೆಲಸವನ್ನು ಕೂಡ ಮಾಡಲಿಲ್ಲ. ಕೃಷಿಯಲ್ಲಾಗುತ್ತಿದ್ದ ಅನ್ಯಾಯ, ಮೋಸಗಳ ಕುರಿತು ಕಣ್ಣು ಬಾಯಿ ಕಿವಿ ಮುಚ್ಚಿಕೊಂಡವು. ಇದೇ ಸಮಯದಲ್ಲಿ ಅನೇಕ ವರ್ಷಗಳ ಸಂಶೋಧನೆಗಳ ನಂತರ ಹಸಿರು ಕ್ರಾಂತಿಯಿಂದಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ತಿಳಿ ಹೇಳುತ್ತಾ ನೈಸರ್ಗಿಕ ತತ್ವಗಳನ್ನಾಧರಿಸಿದ “ಶೂನ್ಯ ಬಂಡವಾಳದ ನೈಸರ್ಗಿಕ ಕೃಷಿ” ಎಂಬ ಹೆಸರಿನ ಒಂದು ಪರ್ಯಾಯವನ್ನು ದೇಶದ ರೈತರ ಮುಂದಿಟ್ಟವರು ಮಹಾರಾಷ್ಟ್ರದ ಸುಭಾಷ್ ಪಾಳೇಕರ್ ರವರು. ಸುಭಾಷ್ ಪಾಳೇಕರರ ಸಹಜ ಕೃಷಿ ಪದ್ಧತಿ– ಇದಕ್ಕೂ ಮುಂಚೆ ನೈಸರ್ಗಿಕ ತತ್ವಗಳನ್ನಾಧರಿಸಿ ಮಾಡಬಹುದಾದ ಕೃಷಿಯನ್ನು “ಶೂನ್ಯ ಉಳುಮೆ ಕೃಷಿ” (Zero Tillage Farming) ಎಂಬ ಹೆಸರಿನ ಸಹಜ ಕೃಷಿಯನ್ನು ಜಗತ್ತಿಗೇ ಪರಿಚಯಿಸಿದ್ದು ಜಪಾನಿನ ಕೃಷಿ ಸಂತ ಮಸನೊಬು ಫುಕುವೊಕಾ. ಆನಂತರ ನಮ್ಮವರೇ ಆದ ತಮಿಳುನಾಡಿನ ಶ್ರೀಯುತ ನಮ್ಮಾಳವರ್, ಗ್ರಾಮೀಣ ಗಾಂಧೀ ಎಂದೇ ಹೆಸರುವಾಸಿಯಾಗಿದ್ದ ಭಾಸ್ಕರ್ ಸಾವೆ ಹಾಗೂ ಇತ್ತೀಚೆಗೆ ನಮ್ಮನ್ನಗಲಿದ ನಾಡೋಜ ಡಾ.ನಾರಾಯಣರೆಡ್ಡಿಯವರು. 2002 ನೇ ಇಸವಿಯಲ್ಲಿ ಕರ್ನಾಟಕದ ರೈತ ಚಳವಳಿಯ ಹಿರಿಯ ಮುಖಂಡರಾಗಿದ್ದ ಬಸವರಾಜ್ ತಂಬಾಕೆಯವರು ಸುಭಾಷ್ ಪಾಳೇಕರ್ ರವರನ್ನು ಕರ್ನಾಟಕಕ್ಕೆ ಪರಿಚಯ ಮಾಡಿದರು. ಅಲ್ಲದೇ ನಮ್ಮ ಮೈಸೂರಿನ ಪತ್ರಕರ್ತರಾದ ಆರ್.ಸ್ವಾಮಿ ಆನಂದ ಅವರು ಈ‌ ಸುಭಾಷ್ ಪಾಳೇಕರ್ ರನ್ನು ಕಟ್ಟಿಕೊಂಡು ರಾಜ್ಯದ ಮೂಲೆಮೂಲೆಗಳಲ್ಲಿ ಸುತ್ತಾಡಿ ಸುಭಾಷ್ ಪಾಳೇಕರರ ಈ ಕೃಷಿ ಪದ್ದತಿಯನ್ನು ಪ್ರಚುರಪಡಿಸಿದರು. ಅಷ್ಟೇ ಅಲ್ಲ ರೈತರಿಗೆ ಸಹಜ ಕೃಷಿಯನ್ನು ಪದ್ದತಿ ಆಹಾರ ಉತ್ಪಾದನೆಗೆ ಎಷ್ಟು ಬಹುಮುಖ್ಯವೆಂದು ಸಾರಿಸಾರಿ ಹೇಳಿದರು. ಅಲ್ಲದೇ ನಮ್ಮ ‘ಅಗ್ನಿ’ ವಾರಪತ್ರಿಕೆಯಲ್ಲಿ ಅಂಕಣವೊಂದನ್ನು ಧಾರಾವಾಹಿಯಾಗಿ ‘ಸಹಜ‌ ಕೃಷಿ’ಯ ಬಗೆಗೆ ಕಂತುಗಟ್ಟಲೇ ಬರೆದು ರೈತರನ್ನು ಎಚ್ಚರಿಸುವ ಲೇಖನ ಮಾಲೆಯನ್ನು ಹೊರತಂದರು. ಈ ಸಹಜ ಕೃಷಿ ಕೃಷಿ ಬಗೆಗಿನ ಪುಸ್ತಕ ೩-೪ ಮುದ್ರಣ ಕಂಡಿತು. ಇರಲಿ… ಆರ್. ಸ್ವಾಮಿ ಆನಂದರ ಜೊತೆಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸುಭಾಷ್ ಪಾಳೇಕರರ ಅನೇಕ ತರಬೇತಿಗಳನ್ನು ಆಯೋಜಿಸಿತು. ಶಿಬಿರಕ್ಕೆ ಬರುತ್ತಿದ್ದ ರೈತರ ಊಟ, ವಸತಿಗೆ ಅನೇಕ ಪ್ರಗತಿಪರ ಮಠಾಧೀಶರುಗಳ ಸಹಕಾರ ದೊರಕಿತು. ಕರ್ನಾಟಕದಲ್ಲಿ ಮೊದಲಿಗೆ ಈ ಕೃಷಿ ಪದ್ಧತಿಯಲ್ಲಿ ರೈತ ಸಂಘದ ಕಾರ್ಯಕರ್ತ ಬನ್ನೂರಿನ ಕೃಷ್ಣಪ್ಪ ಅಳವಡಿಸಿ ಎಲ್ಲರೂ ಹುಬ್ಬೇರಿಸುವಂತೆ ಬಾಳೆ ಬೆಳೆದರು. ಆಗ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದ ಮೈಸೂರಿನ ಸ್ವಾಮಿ ಆನಂದ್ ರವರು ಕೃಷ್ಣಪ್ಪರವರ ಬಾಳೆಯ ಬಗ್ಗೆ ಲೇಖನ ಬರೆದರು. ನಂತರ ಹೀಗೆ ನೈಸರ್ಗಿಕ ಕೃಷಿಯ ಆಂದೋಲನ ಕರ್ನಾಟಕದಲ್ಲಿ ವ್ಯಾಪಕಗೊಳ್ಳುತ್ತಾ ಹೋಯಿತು. 2006 ಅಥವಾ 2007 ಇರಬೇಕು. ಕೂಡಲ ಸಂಗಮದಲ್ಲಿ ನಡೆದ ಪಾಳೇಕರ್ ರವರ ಏಳು ದಿನಗಳ ಶಿಬಿರದಲ್ಲಿ ಭಾಗವಹಿಸಿದ ರೈತರ ಸಂಖ್ಯೆ ಆರು ಸಾವಿರ ದಾಟಿತ್ತು. ಕರ್ನಾಟಕದಲ್ಲಿ ಮೌನವಾಗಿ ನಡೆಯುತ್ತಿದ್ದ ಈ ಚಳವಳಿಯನ್ನು ನೋಡಿದ ತಮಿಳುನಾಡಿನ ‘ಪಸುಮೈ ವಿಕಟನ್’ ಪತ್ರಿಕೆ ತಮಿಳುನಾಡಿನಲ್ಲೂ ಪಾಳೇಕರರ ಶಿಬಿರ ಆಯೋಜಿಸಿತು. ನಂತರ ಕೇರಳ, ಪಂಜಾಬ್, ಆಂಧ್ರ ಪ್ರದೇಶ, ರಾಜಸ್ಥಾನ ಹೀಗೆ ನೈಸರ್ಗಿಕ ಕೃಷಿಯ ಆಂದೋಲನ ವ್ಯಾಪಕವಾಗಿ ಬೆಳೆಯತೊಡಗಿತು. ವಿಶ್ವ ರೈತ ಚಳವಳಿಯಾದ ‘ಲಾ ವಿಯಾ ಕ್ಯಾಂಪೆಸಿನಾ’ದ ಮೂಲಕ ಶ್ರೀಲಂಕಾ, ನೇಪಾಳ ಮತ್ತು ಇಂಡೋನೇಷಿಯಾದಲ್ಲೂ ಅನೇಕ ರೈತರು ನೈಸರ್ಗಿಕ ಕೃಷಿಯನ್ನು ಅಳವಡಿಸಿ ಯಶಸ್ಸನ್ನು ಕಂಡಿದ್ದರು. ಆದರೆ, ಇದೆಲ್ಲದರ ನಡುವೆ ನಮ್ಮ ಯಾವೊಬ್ಬ ಕೃಷಿ ವಿಜ್ಞಾನಿಯೂ, ಕೃಷಿ ಅಧಿಕಾರಿಯೂ ಇದರ ಕಡೆ ತಿರುಗಿ ನೋಡಲಿಲ್ಲ. ಪಾಳೇಕರ್ ಪದ್ಧತಿ ಅವೈಜ್ಞಾನಿಕ ಅಥವಾ ಅರ್ಥಹೀನ ಎಂದು ತೀರ್ಮಾನಿಸಿದಂತಿತ್ತು ಅವರ ನಡೆ. ಇವರೆಲ್ಲರನ್ನೂ ಮೀರಿ ಅನೇಕ ರಾಜ್ಯ ಸರ್ಕಾರಗಳು ಮತ್ತು ಇತ್ತೀಚೆಗೆ ಕೇಂದ್ರ ಸರ್ಕಾರವೂ ಸೇರಿದಂತೆ ಶೂನ್ಯ ಬಂಡವಾಳ (ನೈಸರ್ಗಿಕ) ಕೃಷಿಗೆ ಒತ್ತು ನೀಡಲು ತೀರ್ಮಾನಿಸಿಯಾಗಿದೆ. ಆಂಧ್ರ ಪದೇಶದ ಸರ್ಕಾರ 2015ರಲ್ಲಿ ಈ ಕೃಷಿ ಪದ್ಧತಿಯನ್ನು ರಾಜ್ಯದಾದ್ಯಂತ ಒಯ್ಯಲು ಕೈಗೊಂಡ ತೀರ್ಮಾನವೇ ಇದೆಲ್ಲಕ್ಕೆ ನಾಂದಿ ಆಗಿತ್ತು. 2024 ರವರೆಗೆ ಇಡೀ ರಾಜ್ಯವನ್ನು ನೈಸರ್ಗಿಕ ಕೃಷಿಗೆ ಒಳಪಡಿಸಬೇಕೆಂದು ಆಂಧ್ರ ಈಗ ಪಣ ತೊಟ್ಟಿದೆ. ಇದಕ್ಕೆ ಮೀಸಲಿಟ್ಟಿರುವ ಹಣ ಹದಿನೇಳು ಸಾವಿರ ಕೋಟಿಗಳಷ್ಟು. ಇದರ ಬಗ್ಗೆ ಅನೇಕ ಟೀಕೆಗಳೂ ಕೇಳಿ ಬರುತ್ತಿವೆ. ಶೂನ್ಯ ಬಂಡವಾಳವೆಂದ ಮೇಲೆ ಹದಿನೇಳು ಸಾವಿರ ಕೋಟಿ ಏಕೆ? ಹದಿನೇಳು ಸಾವಿರ ಕೋಟಿ ಮೀಸಲಿಟ್ಟಿರುವುದು ಎಂಟರಿಂದ ಹತ್ತು ವರ್ಷಗಳ ಯೋಜನಾ ಅವಧಿಗೇ ಹೊರತು ಕೇವಲ ಒಂದು ವರ್ಷಕ್ಕಲ್ಲ. 2024 ರ ಒಳಗೆ ರಾಜ್ಯದ ಅರವತ್ತು ಲಕ್ಷ ರೈತರನ್ನು ತಲುಪಲು ಈ ಹಣವನ್ನು ಬಳಸಲಾಗುತ್ತಿದೆ. (http://apzbnf.in/an-open-letter-to-critics/). ಈ ಹಣ ಬಹುರಾಷ್ಟೀಯ ಕಂಪೆನಿಗಳಿಂದ ಅಥವಾ ಜಗತ್ತಿನ ದೈತ್ಯ ಕಂಪೆನಿಗಳಿಂದ ಬರುತ್ತಿದ್ದಲ್ಲಿ, ಅದನ್ನು ವಿರೋಧಿಸಬೇಕಾಗುತ್ತೆ. ಆದರೆ ಈ ಆಪಾದನೆಗಳಿಗೆ ಸದ್ಯ ಯಾವ ಪುರಾವೆಗಳೂ ಇಲ್ಲ. ಈಗ ವಿಮರ್ಶೆ ಮಾಡಿರುವ ಅನೇಕರು ‘ಶೂನ್ಯ ಬಂಡವಾಳ’ ಎಂಬುದನ್ನು ಯಥಾವತ್ ಅರ್ಥ ಮಾಡಿಕೊಂಡಂತಿದೆ. ಪಾಳೇಕರ್ ಅವರು ಹೇಳಿರುವುದು ಒಂದು ಬೆಳೆಯನ್ನು ಬೆಳೆಯಲು ತಗಲುವ ವೆಚ್ಚವನ್ನು ಬೆಳೆಯ ನಡುವೆ ಬೆಳೆಯಬಹುದಾದ ಅಂತರ ಬೆಳೆಯಿಂದ ಬರುವ ಆದಾಯದಿಂದ ಭರಿಸುವುದೆಂದು. ಅದಕ್ಕೂ ಮಿಗಿಲಾಗಿ ‘ಶೂನ್ಯ ಬಂಡವಾಳ’ ಎಂಬುದು ಒಂದು ಪರ್ಯಾಯ ಕೃಷಿ ಚಿಂತನೆಗೆ ಆಹ್ವಾನ ನೀಡುವ ಘೋಷಣೆಯೂ ಆಗಿದೆ. ಈಗ ಸುಭಾಷ್ ಪಾಳೇಕರ್ ರವರು ಹೆಸರನ್ನು ಬದಲಾಯಿಸಿದ್ದಾರೆ. ಅದಕ್ಕೆ ಅನೇಕರ ಸಹಮತ ಇಲ್ಲ. ಶೂನ್ಯ ಬಂಡವಾಳದ ಕೃಷಿಯಲ್ಲಿ ಹೊರಗಿನಿಂದ ಏನನ್ನೂ ತರುವುದಿಲ್ಲ. ಬೀಜ, ಜೀವಾಮೃತ, ಕ್ರಿಮಿನಾಶಕಗಳ ಸಿದ್ಧತೆಯಲ್ಲಿ ಪ್ರಕೃತಿದತ್ತವಾಗಿ ಸಿಗುವದನ್ನೇ ಬಳಸಲಾಗುತ್ತದೆ. ಇದನ್ನು ವೈಜ್ನಾನಿಕ ಪರೀಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸುತ್ತಿರುವ ವಿಜ್ಞಾನಿಗಳು ಕಾನೂನು ಬಾಹಿರವಾಗಿ ಮಾರಲಾಗುತ್ತಿರುವ ಬಿಟಿ ಬದನೆ ಬೀಜಗಳ ಬಗ್ಗೆ ಯಾಕೆ ಬಾಯಿ ಬಿಡುತ್ತಿಲ್ಲ? ಜಗತ್ತಿನ ಅನೇಕ ದೇಶಗಳಲ್ಲಿ ಈಗಾಗಲೇ ನಿಷೇಧಿಸಲಾಗಿದ್ದು ನಮ್ಮ ದೇಶದಲ್ಲಿ ರಾಜಾರೋಷವಾಗಿ ಮಾರಾಟ್ವಾಗುತ್ತಿರುವ ಹಾನಿಕಾರಕ Glyphosate ಅಥವಾ Round Up ಕಳೆ ನಾಶಕಗಳ ಬಗ್ಗೆ ಯಾವುದೇ ವಿಜ್ಞಾನಿ ಏಕೆ ಪ್ರಶ್ನೆ ಮಾಡುತ್ತಿಲ್ಲ? ನೈಸರ್ಗಿಕ ಕೃಷಿಗೆ ವೈಜ್ಞಾನಿಕ ಮಾನ್ಯತೆ ಇದೆಯೇ ಎಂಬ ಪ್ರಶ್ನೆ ಅಪ್ರಸ್ತುತವಾಗಿದೆ. ಈಗಾಗಲೇ ಹದಿನೈದು ವರ್ಷಗಳಿಂದ ನೈಸರ್ಗಿಕ ಕೃಷಿಯನ್ನು ಮಾಡುತ್ತಿರುವ ರೈತರೇ ಮಾನ್ಯತೆ ಕೊಟ್ಟಿರುವಾಗ, ವಿಶ್ವವಿದ್ಯಾಲಯಗಳ ಮಾನ್ಯತೆ ಪಡೆಯುವ ಅಗತ್ಯವಿದೆಯೇ? ಹಿಮಾಚಲದ ಸೇಬು ಬೆಳೆಗಾರರಿಂದ ಹಿಡಿದು ಬೀದರ ಜಿಲ್ಲೆಯ ಖುಷ್ಕಿ ಬೆಳೆಗಾರರು ನೈಸರ್ಗಿಕ ಕೃಷಿಯನ್ನು ಅಳವಡಿಸಿಕೊಂಡಿದ್ದಾರೆ. ಎಲ್ಲಾ ಹವಾಮಾನಗಳಿಗೂ ಹೊಂದುವುದಿಲ್ಲ ಎನ್ನುವವರಿಗೆ ಒಂದು ಸಲಹೆ– ದಯವಿಟ್ಟು ನೈಸರ್ಗಿಕ ಕೃಷಿ ಮಾಡುತ್ತಿರುವ ರೈತರನ್ನು ಭೇಟಿ ಮಾಡಿ ಮಾತನಾಡಿಸಿ. ವಿತಂಡ ವಾದಗಳನ್ನು ಮಾಡುತ್ತಿರುವವರಿಗೆ ಜಗತ್ತಿನ ಮುಂದೆ ನಿಂತಿರುವ ಅತಿ

ಸ್ವಾತ್ಮಗತ Read Post »

ಅಂಕಣ ಸಂಗಾತಿ, ಸ್ವಾತ್ಮಗತ

ಸ್ವಾತ್ಮಗತ

ಮರಗಳ ಮಹಾತಾಯಿ ನಾನು ಎಕೋ ಇಷ್ಟು ಬರಹವನ್ನು ಬರೆದರೂ ಅದ್ಯಾಕೋ ಈ ‘ಸಾಲು ಮರಗಳ ತಿಮ್ಮಕ್ಕ’ನ ಬಗೆಗೆ ಬರೆಯಲಾಗಿರಲಿಲ್ಲ. ಈ ತಿಮ್ಮಕ್ಕನ ಬಗೆಗೆ ಟಿಪ್ಪಣಿ ಬರೆದಿಟ್ಟುಕೊಂಡು ಬಹಳ ದಿನಗಳಾದವು. ಈಗ ಸಾಲು ಮರದ ಈ ತಿಮ್ಮನ ಬಗೆಗೆ ಬರೆಯಬೇಕು ಎಂಬ ತವಕ ಅದ್ಯಾಕೋ ಹೇಚ್ಚಾಯಿತು. ಅದಕ್ಕಾಗಿ ಇಂದು ಈ ಬರಹ ಬರೆದನು.ಅದೋ ಈ ಲೇಖನ ‘ಮರಗಳ ತಾಯಿ ತಿಮ್ಮಕ್ಕ’..! ಮರ ಎಂದಾಕ್ಷಣ ನಮ್ಮ ಮನದಲ್ಲಿ ಮೂಡಿ ಬರುವವರೇ ತಿಮ್ಮಕ್ಕನರವರು. ಬರೀ ತಿಮ್ಮಕ್ಕನೆಂದರೆ ಬಹುಶಃ ಯಾರಿಗೂ ಗೊತ್ತಾಗಲಾರದು. ಸಾಲು ಮರದ ತಿಮ್ಮಕ್ಕನೆಂದೇ ಕರೆಯಬೇಕು.ಇವರ ಬಗ್ಗೆ ತಿಳಿದೇ ಇಲ್ಲ ಅನ್ನೋ ಜನ ಬಹಳ ಕಡಿಮೆ. ನಮಗೆ ತಿಳಿದ ಪ್ರಕಾರ, ಸಾಲು ಮರದ ತಿಮ್ಮಕ್ಕ ಎಂದರೆ ನಾಲ್ಕು ಕಿಲೋಮೀಟರ್ ಉದ್ದಕ್ಕೂ ಮರ ನೆಟ್ಡಿದ್ದಾರೆ. ಪೃಕೃತಿ ಮಾತೆಯನ್ನೇ ಬೆಳೆಸಿ ಪೋಷಿಸುವ ಮಹತ್ಕಾರ್ಯ ಮಾಡಿರುವ ಸಾಲು ಮರದ ತಿಮಕ್ಕ. ಅವರು ನಮ್ಮೆಲ್ಲರ ಹೆಮ್ಮೆ ಹಾಗೂ ಆದರ್ಶವಾದ ಪರಿಸರವಾದಿ. ತಿಮ್ಮಕ್ಕ ಮೂಲತಃ ಬೆಂಗಳೂರು ಹತ್ತಿರದ, ಮಾಗಡಿ ತಾಲ್ಲೂಕಿನ ಹುಳಿಕಲ್ ಗ್ರಾಮದವರು. ತಿಮಕ್ಕನರವರು ಹೆಚ್ಚು ಓದಿಲ್ಲದ ಕಾರಣ ದಿನಗೂಲಿ ಕೆಲಸಕ್ಕೆ ಹೋಗುತ್ತಿದ್ದರು. ಚಿಕ್ಕಯ್ಯ ಎಂಬ ಒಬ್ಬ ದನಕಾಯುವವರನ್ನು ಮದುವೆಯಾಗಿದ್ದರು. ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ಮಕ್ಕಳಾಗದಿದ್ದರೆ ಎಂತವರಿಗೂ ಬೇಸರವಾಗುತ್ತದೆ. ಹಾಗೆಯೇ ತಿಮ್ಮಕ್ಕನವರಿಗೂ ಈ ಕೊರತೆ ಕಾಡುತ್ತಲೇ ಇತ್ತು. ಆದರೆ ತಿಮ್ಮಕ್ಕ ಕುಗ್ಗಲಿಲ್ಲ. ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಡಲಾರಂಭಿಸಿದರು. ಮರಗಳನ್ನೇ ಮಕ್ಕಳಂತೆ ಪ್ರೀತಿಯಿಂದ ಬೆಳೆಸಿದರು ಅವರ ಈ ಮಹಾನ್ ಕೆಲಸಕ್ಕೆ, ಪತಿ ಚಿಕ್ಕಯ್ಯ ಅವರೂ ಸಹ ಕೈ ಜೋಡಿಸಿದರು. ತಿಮ್ಮಕ್ಕ ಹುಟ್ಟುತ್ತಲೇ ಬಡತನವನ್ನು ಹಾಸಿ ಹೊದ್ದು ಬಂದವರು. ಬಡತನದ ಬೇಗೆಯ ನಡುವೆಯೂ ಆದರ್ಶಮಯ ಜೀವನ ನಡೆಸುತ್ತಿರುವ ಸಾರ್ಥಕ ಜೀವ ಅವರದು. ಮೊದಲ ವರ್ಷದಲ್ಲಿ ಹತ್ತು ಸಸಿಗಳನ್ನು ನೆರೆಯ ಕುದೂರು ಹಳ್ಳಿಯ ಬಳಿ 4 ಕಿ.ಮೀ. ಉದ್ದಳತೆಯ ದೂರ ನೆಡಲಾಯಿತು. ಹೀಗೆಯೇ ಎರಡನೇ ವರ್ಷ ಹದಿನೈದು ಮತ್ತು ಮೂರನೇ ವರ್ಷ 20 ಸಸಿಗಳನ್ನು ನೆಡಲಾಯಿತು. ಇವರು ಈ ಸಸಿಗಳನ್ನು ನೆಡಲು ತಮ್ಮ ಅತ್ಯಲ್ಪ ಆದಾಯವನ್ನೇ ಬಳಸಿದರು. ಸಸಿಗಳಿಗೆ ನೀರುಣಿಸಲು ಬಿಂದಿಗೆ ಕೊಳಗಗಳಲ್ಲಿ ನೀರನ್ನು ನಾಲ್ಕು ಕಿ.ಮೀ. ದೂರ ಸಾಗಿಸುತ್ತಿದ್ದರು. ಹಾಗೂ ಸಸಿಗಳನ್ನು ಮೇವಿನ ಜಾನುವಾರುಗಳ ಕಾಟದಿಂದ ತಪ್ಪಿಸಲು ಅವುಗಳ ಸುತ್ತ ಮುಳ್ಳು ಪೊದೆಗಳನ್ನು ಹೊದಿಸಿ ಕಾಪಾಡಿದರು. ಮಕ್ಕಳಿಲ್ಲದ ಕೊರಗು, ಬಡತನದಿಂದ ಬೆಂಡಾದ ಬಾಳ್ವೆಯ ನಡುವೆಯೂ ‘ನೆರಳು ನೀಡುವ ಮರಗಳೆ ನನ್ನ ಮಕ್ಕಳು, ಅವುಗಳನ್ನು ಬೆಳೆಸಿ ಪೋಷಿಸುವುದೇ ನನ್ನ ಜೀವನದ ಗುರಿ’ ಎಂದು ನಂಬಿ ನಡೆದ ಈ ವೃಕ್ಷ ಮಹಿಳೆ ತಿಮ್ಮಕ್ಕರವರಿಗೆ 100 ವರ್ಷ ತುಂಬಿದೆ. ತಮ್ಮ ಸಾಧನೆಗಾಗಿ ತಿಮ್ಮಕ್ಕ ಅವರಿಗೆ ಹಲವು ಸನ್ಮಾನಗಳು ಮತ್ತು ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದೆ. ಇವರಿಗೆ, ರಾಷ್ಟ್ರೀಯ ಪೌರ ಪ್ರಶಸ್ತಿ, ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ, ವೀರಚಕ್ರ ಪ್ರಶಸ್ತಿ, ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆರವರಿಂದ ಮಾನ್ಯತೆಯ ಪ್ರಮಾಣ ಪತ್ರ, ಭಾರತೀಯ ವೃಕ್ಷ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ ಕಡೆಯಿಂದ ಶ್ಲಾಘನೆಯ ಪ್ರಮಾಣ ಪತ್ರ, ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ, ಗಾಡ್‌ಫ್ರಿ ಫಿಲಿಪ್ಸ್ ಧೀರತೆ ಪ್ರಶಸ್ತಿ, ಪಂಪಾಪತಿ ಪರಿಸರ ಪ್ರಶಸ್ತಿ, ಬಾಬಾಸಾಹೇಬ್ ಅಂಬೇಡ್ಕರ್ ಪ್ರಶಸ್ತಿ, ವನಮಾತೆ ಪ್ರಶಸ್ತಿ, ಮಾಗಡಿ ವ್ಯಕ್ತಿ ಪ್ರಶಸ್ತಿ, ಶ್ರೀಮಾತಾ ಪ್ರಶಸ್ತಿ, ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ, ಕರ್ನಾಟಕ ಪರಿಸರ ಪ್ರಶಸ್ತಿ, ಮಹಿಳಾರತ್ನ ಪ್ರಶಸ್ತಿ, ನ್ಯಾಷನಲ್ ಸಿಟಿಜನ್ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಆರ್ಟ ಆಫ ಲೀವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ, 2010 ರ ಸಾಲಿನ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿಗಳು ಲಭಿಸಿವೆ. ಸಾಲು ಮರದ ತಿಮ್ಮಕ್ಕ ಅವರ ಸಾಧನೆಯಿಂದ ಸ್ಪೂರ್ತಿ ಪಡೆದಾದರೂ ನಾವು ಪರಿಸರವನ್ನು ಉಳಿಸುವಲ್ಲಿ ನಮ್ಮ ಕಾರ್ಯ ನಿರ್ವಹಿಸಬೇಕು. ಗಿಡ ಮರಗಳನ್ನು ನಮ್ಮ ಮನೆ ಸುತ್ತ ಬೆಳೆಸೋಣ. ಕಸ-ಕಡ್ಡಿ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಹಾಕೋದನ್ನು ನಿಲ್ಲಿಸೋಣ. ಶಬ್ದ ಮಾಲಿನ್ಯ ಕಡಿಮೆ ಮಾಡೋಣ. ಜಲಮಾಲಿನ್ಯ ಆದಷ್ಟು ತಡೆಯೋಣ. ನದಿ, ಭಾವಿ, ಕೆರೆ, ಕೊಳ್ಳಗಳನ್ನು ಉಳಿಸಿ ಮಾಲಿನ್ಯದಿಂದ ತಡೆಗಟ್ಟೋಣ. ನಮ್ಮ ಪರಿಸರವನ್ನು ಶುದ್ಧಿಯಾಗಿ ಉಳಿಸಲು ಇನ್ನು ಏನೇನು ಸಾಧ್ಯವೋ ಅದನ್ನು ಮಾಡೋಣ. ಇದೇ ನಾವು ಈ ಅಜ್ಜಿಗೆ ಸಲ್ಲಿಸುವ ಸನ್ಮಾನ- ಗೌರವ. ಸಾಲುಮರದ ತಿಮ್ಮಕ್ಕ ನಮಗೆಲ್ಲ ಮಾದರಿಯಾಗಲಿ. ********* ಕೆ.ಶಿವು.ಲಕ್ಕಣ್ಣವರ

ಸ್ವಾತ್ಮಗತ Read Post »

You cannot copy content of this page

Scroll to Top