ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ, ರಂಗಭೂಮಿ

“ಪೌರಾಣಿಕ ನಾಟಕ ನಿರ್ದೇಶಕರು ನಟ ಕೇಶವ ಜಿ. ಜಿ. ಗರೀಘಟ್ಟ.”‌ ಗೊರೂರು ಅನಂತರಾಜು

ರಂಗ ಸಂಗಾತಿ ಗೊರೂರು ಅನಂತರಾಜು “ಪೌರಾಣಿಕ ನಾಟಕ ನಿರ್ದೇಶಕರು ನಟ ಕೇಶವ ಜಿ. ಜಿ. ಗರೀಘಟ್ಟ.”‌ ಮೊನ್ನೆ ಭಾನುವಾರ ಅರಕಲಗೂಡಿನಲ್ಲಿ ಶ್ರೀ ವೇಣುಗೋಪಾಲ ಕೃಪಾಪೋಷಿತ ನಾಟಕ ಮಂಡಳಿ ಕಲಾವಿದರು ಹಾರ್ಮೋನಿಯಂ ಮಾಸ್ಟರ್ ಜಿ..ಜಿ.. ಕೇಶವ ಗರಿಘಟ್ಟ ಇವರ ನಿರ್ದೇಶನದಲ್ಲಿ ಕುರುಕ್ಷೇತ್ರ ನಾಟಕ ಪ್ರದರ್ಶಿಸಿದರು.  ನಾಟಕ ವೀಕ್ಷಿಸಲು ಹೋಗಿದ್ದ ನನಗೆ ಸೂತ್ರಧಾರಿ ಪಾತ್ರಧಾರಿ ಹಾಡಿದ ರಂಗಗೀತೆ ಅದೇ ಪ್ರಥಮ ಬಾರಿ ಕೇಳಿ ಬಹಳ ಇಷ್ಟವಾಯಿತು. ಪ್ರೇಕ್ಷಕರು ಕೂಡ ಸೂತ್ರದಾರಿ ಹಾಡಿUÉ ಚಪ್ಪಾಳೆ ಬಾರಿಸಿ ಮೆಚ್ಚುಗೆ  ವ್ಯಕ್ತಪಡಿಸಿದರು. ಈ ಗೀತೆಯಲ್ಲಿ ಏನೆಲ್ಲಾ ಕನ್ನಡ ಕಲಾ ಸಾರಸ್ವತ ಲೋಕವನ್ನು ತೆರೆದಿಟ್ಟಿದ್ದಾರೆ  ಕವಿ ಎಂದರೆ..  ಕನ್ನಡ ನಾಡಿನ ಕಲೆ ಮಕ್ಕಳೇ ಅಳಿಯದೆ ಉಳಿಯಲಿ ನಮ್ಮೀ ಕಲೆಎ¯Éèಲ್ಲೂ ಬೆಳಗಲಿ ನಮ್ಮೀಕಲೆ ಪಂಪ ರನ್ನ ಜನ್ಮ ಪೊನ್ನರಾಮಾನುಜ ತೀರ್ಥಂಕರ ಬೇಲೂರುಹಳೇಬೀಡು ಕಲೆಗಳ ತವರೂರುಸುಬ್ಬಯ್ಯ  ನಾಯ್ಡುವಿನ ನಟನಾ ಕಲೆ ನಾಟಕ ರತ್ನ ಗುಬ್ಬಿ ವೀರಣ್ಣ ನಟಸಾರ್ವಭೌಮ ರಾಜಕುಮಾರ ಅಭಿನವ  ಭಾರ್ಗವ ಶಿರೋಮಣಿ ಮಲ್ಲಪ್ಪ  ನಟನಾ ಕಲೆ..   ಶ್ರೀ ಕೇಶವರವರು ಸಾಕ್ಷರತಾ ಆಂದೋಲನದಲ್ಲಿ ಕೆಲಸ ಮಾಡಿದ ವಿಚಾರ ಕೂಡ ಶಿಕ್ಷಕರು ಪಿ. ನಂದಕುಮಾರರಿಂದ ತಿಳಿಯಿತು. 1997ರ ಕಾಲಘಟ್ಟದಲ್ಲಿ ನಾನು (ಗೊರೂರು ಅನಂತರಾಜು) ಸಾಕ್ಷರತಾ ಆಂದೋಲನದಲ್ಲಿ ತೊಡಗಿಸಿಕೊಂಡು ಅಕ್ಷರ ಅಭಿಷೇಕ ನವ ಸಾಕ್ಷರರ ಪಠ್ಯ ಪುಸ್ತಕ ರಚನಾ ಸಮಿತಿಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದೆ.. ಈ ಒಂದು ಆಸಕ್ತಿಯಲ್ಲಿ ಕೇಶವರವರಿಗೆ ತಮ್ಮ ಒಂದು ಕಲಾ ಪರಿಚಯವನ್ನು ಬರೆಯಲು ಬಯಸಿ ಸಂಪರ್ಕಿಸಿದೆ.. ಅವರು ಹೇಳಿದರು. ಅನಂತರಾಜ್ ಸಾರ್,, ನಾನು ನಿಮ್ಮನ್ನು ಬಲ್ಲೆನು. ಆದರೆ ನನ್ನ ಪರಿಚಯ ನಿಮಗಿಲ್ಲ ಅಷ್ಟೇ..ನಾನು ಕೇಶವ ಜಿ. ಜಿ.  ಹುಟ್ಟಿದ ಊರು ಗರೀಘಟ್ಟ.ಇದು ಅರಕಲಗೋಡು ತಾಲೂಕಿಗೆ  ಸೇರಿದೆ.  ಹಾಸನ ಜಿಲ್ಲೆಯಲ್ಲಿ ಬರುತ್ತದೆ. ನನ್ನ    ಜನ್ಮ ದಿನಾಂಕ 04.06.1979. ನಾನು    ಪ್ರಾಥಮಿಕ ಶಿಕ್ಷಣವನ್ನುಗರೀಘಟ್ಟದಲ್ಲಿ  ಹಾಗೂ ಹೊನ್ನವಳ್ಳಿಯ ಹೇಮಾವತಿ ಪ್ರೌಢಶಾಲೆಯಲ್ಲಿ ಹೈಸ್ಕೂಲು ವ್ಯಾಸಂಗ ªÀÄÄV¹ ಪಿ.ಯು.ಸಿ ಮತ್ತು  ಬಿ.ಎ. ಪದವಿ ಸರ್ಕಾರಿ ಕಲಾ ಕಾಲೇಜು ಹಾಸನ ಇಲ್ಲಿ ಮಾಡಿದೆ. ವಿದ್ಯಾಭ್ಯಾಸದ ಜೊತೆಯಲ್ಲಿಯೇ ಸಮಾಜ ಸೇವೆಯಲ್ಲಿ ಪಾಲ್ಗೊಳ್ಳುವಿಕೆ, ರಾಜ್ಯ ಸರ್ಕಾರದ ಸಾಕ್ಷರತಾ ಆಂದೋಲನದಲ್ಲಿ ಸ್ವಯಂಸೇವಕನಾಗಿ ಸೇವೆ.   2005-06ನೇ ಸಾಲಿನಲ್ಲಿ ಪ್ರಾರಂಭವಾದ ಸಾಕ್ಷರತಾ ಮುಂದುವರಿಕೆ ಶಿಕ್ಷಣ ಕಾರ್ಯಕ್ರಮದಲ್ಲಿ ಕ್ರಮವಾಗಿ ಪ್ರೇರಕ ಹಾಗೂ ನೋಡಲ್ ಪ್ರೇರಕ, ಜಿಲ್ಲಾ ಸಂಪನ್ಮೂಲ ವ್ಯಕ್ತಿಯಾಗಿ  ಸಾಕ್ಷರತಾ ಕಲಾವಿದನಾಗಿ ಸೇವೆ, ಅರಿವು ಕಾರ್ಯಕ್ರಮದಲ್ಲಿ ಬೀದಿ ನಾಟಕ ಹಾಗೂ ಕಲಾಜಾಥಾ ಕಾರ್ಯಕ್ರಮದ ನಿರ್ದೇಶಕನಾಗಿ ಸೇವೆ ಸಲ್ಲಿಕೆ, ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸ್ತ್ರೀಶಕ್ತಿ ಗುಂಪುಗಳ ಸದಸ್ಯರಿಗೆ ತರಬೇತಿ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ ಸಲ್ಲಿಕೆ, ರಾಜ್ಯ ಹಾಗೂ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ವಿವಿದ ಕಾರ್ಯಕ್ರಮದಲ್ಲಿ ನಿರೂಪಕನಾಗಿ 2014ರಲ್ಲಿ ರಂಗಭೂಮಿ ಕ್ಷೇತ್ರಕ್ಕೆ ಪ್ರವೇಶ ಮಾಡಿದೆ.  ಅರಕಲಗೂಡು ಪಟ್ಟಣದಲ್ಲಿ ತಾಲ್ಲೂಕಿನ ವಿವಿಧ ವಿಕಲಚೇತನರನ್ನೊಳಗೊಂಡ ವಿಕಲಚೇತನರ ಸಂಘವನ್ನು ರಚಿಸಿ ವಿಕಲಚೇತನರಿಂದಲೇ ದಾನಶೂರಕರ್ಣ  ನಾಟಕ ಪ್ರದರ್ಶನದಲ್ಲಿ ಕರ್ಣನ ಪಾತ್ರದ ಮೂಲಕ ರಂಗಭೂಮಿಗೆ ಪ್ರವೇಶ ಮಾಡಿದೆ.  ಶ್ರೀಕೃಷ್ಣ, ಅರ್ಜುನ, ಧರ್ಮರಾಯ, ಸತ್ಯವ್ರತ, ಬೀಷ್ಮ, ದ್ರೋಣ, ದೃತಾರಾಷ್ಟ್ರ, ನಾರದ, ವಿಧುರ, ಭರತ, ವಿಭಿಷಣ, ವಸಿಷ್ಠ ಮುಂತಾದ ಪಾತ್ರಗಳಲ್ಲಿ ಅಭಿನಯಿಸಿದೆ. ಗುರುಗಳ ಕೈ ನೋಡಿಕೊಂಡು ಹಾರ್ಮೋನಿಯಂ ಕಲಿಕೆ ಪ್ರಾರಂಭಿಸಿದೆ. ಯಾವ ಗುರುಗಳ ಬಳಿಯೂ ಅಭ್ಯಾಸ ಮಾಡದೆ ತರಬೇತಿಯೂ ಇಲ್ಲದೇ ಸ್ವತಃ ಹಾರ್ಮೋನಿಯಂ ನುಡಿಸುವುದನ್ನು ಅಭ್ಯಾಸ ಮಾಡಿಕೊಂಡು ಮೊದಲಬಾರಿಗೆ 2023ರಲ್ಲಿ ರಾಜ ವಿಕ್ರಮ ನಾಟಕದ ನಿರ್ದೇಶನ ಮಾಡಿ  ಆ ದಿನದಿಂದ ಈವರೆಗೆ ರಾಜಾವಿಕ್ರಮ, ರಾಜ ಸತ್ಯವ್ರತ, ದಾನಶೂರಕರ್ಣ, ಕುರುಕ್ಷೇತ್ರ ಹೀಗೆ 12 ನಾಟಕಗಳ ನಿರ್ದೇಶನ ಮಾಡಿರುವೆ. ಹರಿಕಥೆ ಕಲಾವಿದನಾಗಿಯೂ ಸೇವೆ ಸಲ್ಲಿಸುತ್ತಿರುವೆ .  ನನ್ನ ಈ ಸೇವೆ ಗಮನಿಸಿ ಕೆಲವು ಸಂಘ ಸಂಸ್ಥೆಗಳು ರಂಗರತ್ನ, ಹೊಯ್ಸಳರತ್ನ, ಕಲಾಬೀಷ್ಮ, ರಂಗ ಕುಸುಮ, ರಂಗರತ್ನಾಕರ  ಹೀಗೆ ಪ್ರಶಸ್ತಿ ನೀಡಿ ಗೌರವಿಸಿರುತ್ತಾರೆ. ಇದುವರೆಗೂ ಸರಿಸುಮಾರು 400ಕ್ಕೂ ಹೆಚ್ಚು ಸ್ವ ಸಹಾಯ ಸಂಘಗಳನ್ನು ರಚನೆ ಮಾಡಿ ಮಾಹಿತಿ ನೀಡಿ  ಮಾರ್ಗದರ್ಶನ ಮಾಡಿರುತ್ತೇನೆ, ಗ್ರಾಮೀಣ ಭಾಗದ ವಿಕಲಚೇತನರಿಗೆ ಗ್ರಾಮ ಮಟ್ಟದಲ್ಲಿ ಸರ್ಕಾರಿ ಸವಲತ್ತುಗಳ ಮಾಹಿತಿ ನೀಡುವ ಸಂಬಂಧ ಗ್ರಾಮ ಪಂಚಾಯಿತಿ ಮಟ್ಟದ ಗ್ರಾಮೀಣ ಪುನರ್ವಸತಿ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿರುವೆ. ಕಲೆ ಮತ್ತು ಸಂಸ್ಕೃತಿಯನ್ನು ಉಳಿಸುವ ಸಲುವಾಗಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಕಲಾ ಮತ್ತು ಸಾಂಸ್ಕೃತಿಕ ಸಂಘ ಸ್ಥಾಪಿಸಿ ಅ ಮೂಲಕ  ರಂಗ ಕಲೆಯನ್ನು ಉಳಿಸುವ ಪೋಷಿಸುವ ಸಲುವಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ಸಂಘಟಿಸಿರುವೆ.   ಇವರ ಸಂಪರ್ಕ ವಿಳಾಸ:ಕೇಶವ ಜಿ. ಜಿ. ರಂಗನಿರ್ದೇಶಕರು,  ಗರೀಘಟ್ಟ, ಕಸಬಾ ಹೋಬಳಿ, ಅರಕಲಗೂಡು ತಾ. ಹಾಸನ ಜಿಲ್ಲೆ. ಮೊ  ಸಂಖ್ಯೆ 9880183485 ಗೊರೂರು ಅನಂತರಾಜು

“ಪೌರಾಣಿಕ ನಾಟಕ ನಿರ್ದೇಶಕರು ನಟ ಕೇಶವ ಜಿ. ಜಿ. ಗರೀಘಟ್ಟ.”‌ ಗೊರೂರು ಅನಂತರಾಜು Read Post »

ಇತರೆ, ಪ್ರಬಂಧ

ಚಹಾಯಣ…ದ ರಾಮಾಯಣ(ಕಿರು ಪ್ರಬಂಧ) ಡಾ.ವೈ ಎಂ.ಯಾಕೊಳ್ಳಿ

ಪ್ರಬಂಧ ಸಂಗಾತಿ ಡಾ.ವೈ ಎಂ.ಯಾಕೊಳ್ಳಿ ಚಹಾಯಣ…ದ ರಾಮಾಯಣ ಇಂದು ೨೦/೦೫/೨೦೨೬ಚಹಾದ ದಿನವಂತೆ..ಚಹಾ ಇಲ್ಲದೆ ಸೂರ್ಯೋದಯವೇ ಆಗದ ನಮಗೆ ಅಂದರೆ ಉತ್ತರ ಕರ್ನಾಟಕದ ಮಂದಿಗೆ ಚಹಾಕ್ಕೊಂದು ದಿನವಿದೆಯಂದರೆ ನಗೆ ಬರುತ್ತದೆ.ಹಾಗೆ ನೋಡಿದರೆ ನಮ್ಮ ಜನಕ್ಕೆ ಯಾಕೊ ಕಾಫಿ ಕಂಡರೆ ಅಷ್ಟಕ್ಕಷ್ಟೇ. ನಮ್ಮಪ್ರಕಾರ ಎಲ್ಲದಕ್ಕೂ ದಿವ್ಯೌಷಧಿ ಚಹಾನೆ.ಅಂತೆಯೆ ಅದನ್ನು ದೇವಲೋಕದ ಅಮೃತ ಎಂದು‌ ಕರೆಯುವದೂ ಇದೆ.ಮನೆಗಳಿಗೆ ಬಂದಾಗ ಅತಿಥಿಗಳಿಗೆ ಕೊಡಮಾಡುವ ಕನಿಷ್ಟ ಪಕ್ಷದ ಆತಿಣಥ್ಯ ಎಂದರೆ ಚಹಾನೇ ಆಗಿದೆ.”ಬರ್ರಿ ಬರ್ರಿ ಅರ್ಧ ಕಪ್ ಚಹಾ ಕುಡದ ಹೋಗರಿ” ಎಂದು ನಾವು ಅತಿಥಿಗಳಿಗೆ ಒತ್ತಾಯ ಮಾಡುವದೂ ಇದೆ.ಬಂದ ಅತಿಥಿಗಳಿಗೆ ನಾವು ಏನು‌ಕೊಡದಿದ್ದರೂ ಪರ್ವಾ ಇಲ್ಲ ಒಂದು ಕಪ್ ಚಹಾನಾದರೂ ಕೊಡಲೇ ಬೇಕು.ಒಂದು ವೇಳೆ ಚಹಾನೂ ಆಫರ್ ಮಾಡದವರನ್ನು ಕಂಡು ” ಏನ್ ಜಿಪುಣರೆಪಾ,ಅವರ ಮುಖಕ್ಕ ಅರ್ಧ ಕಪ್  ಚಹಾ ಹುಟ್ಟಲಿಲ್ಲ” ಎಂದು ಬೈಯುವವರೂ ಇದ್ದಾರೆ. ಚಹಾ ಅಂಗಡಿಗಳೆಂದು ನಾವು ಹೋಟೆಲ್ ನ್ನು ಹೆಸರಿಸುತ್ತೇವೆ.ಅಲ್ಲಿ ಏನೆಲ್ಲ ಖಾದ್ಯಗಳನ್ನು‌ ಮಾಡಬಹುದಾದರೂ ಅವುಗಳ ಸೇವನೆಯ ನಂತರ ಅರ್ಧ ಕಪ್ ಚಹಾ ಸೇವನೆ ಇರಲೇಬೇಕು.ಇರದಿದ್ದರೆ ಏನೇ ತಿಂದರೂ ಅದು ಅಪೂರ್ಣ.ಅದು ಒಂದುರೀತಿಯಲ್ಲಿ ಕಾರ್ಯಕ್ರಮಗಳಲ್ಲಿ ವಂದನಾರ್ಪಣೆ ಇದ್ದಂತೆ.ಎಂಥ ದೆ ಭಾಷಣ ನಡೆದರೂ ಕಡೆಗೆ ಒಂದು ಸಾಲಿನದಾದರೂ ವಂದನಾರ್ಪಣೆ ಯಾಗದಿದ್ದರೆ ಅದೆಂತಹ ಕಾರ್ಯಕ್ರಮ ಎನ್ನುವ ಹಾಗೆ ಏನೆ ಲ್ಲ ತಿಂಡಿ ತಿಂದರೂ ಚಹಾ ಇರದಿದ್ದರೆ ಅರ್ಧ ಆದಂತೆಯೆ ಎಂದು ತಿಳಿವಳಿಕೆ ಸರ್ವೇ ಸಾಮಾನ್ಯ.ನಮ್ಮಲ್ಲಿ ಊರುಗಳ ಸಿರಿತನವೂ ಈ ಹೊಟೆಲ್ ಗಳ ಆಧಾರದ ಮೇಲೆಯೆ ನಿರ್ಣಯವಾಗುವದುಂಟು.ಒಂದು ಚಹಾದಂಗಡಿಯೂ ಇರದೆ‌ ಇದ್ದರೆ” ಅದೆಂಥ ಹಿಂದುಳಿದ ಊರು ” ಎಂದು ಅಸಹ್ಯ ಮಾಡುವವರೂ ಇದ್ದಾರೆ. ಎಂಥ ಹಿರಿತನಗಳೂ  ನ್ಯಾಯನಿರ್ಣಯಗಳೂ ಚಹಾ ಸೇವನೆ ಯಿಂದಲೇ  ಆರಂಭ ಮತ್ತು‌ ಮುಕ್ತಾಯ ಎಂಬುದು ಉತ್ತರಕರ್ನಾಟದ ಒಂದು ನಿಯಮವೇ ಆಗಿದೆ. ಎಲ್ಲ ಸಮಾರಂಭಗಳ ಆರಂಭಕ್ಕೆ ಚಹಾ ಕೊಟ್ಟೇ ಕಾರ್ಯಕ್ರಮ ಆರಂಭಿಸೋದು ನಮ್ಮ‌ ಪದ್ಧತಿ. ಪೂರ್ತಿ ಚಹಾ ಕುಡಿಯುವವರಿಗಿಂತ ಅರ್ಧ ಚಹಾ ಕುಡಿಯುವವರೆ ಜಾಸ್ತಿ.ಗೆಳೆಯರು ಸೇರಿಕೊಂಡು ಅರ್ಧ ತಾಸಿಗೊಂದು ಬೈಟೂ ಚಹಾ ಕುಡಿಯುತ್ತ ಇಡಿ ದಿನವನ್ನೆಲ್ಲ ಊರ ಚಹಾದಂಗಡಿಗಳ ಕಟ್ಟೆಯ ಲ್ಲಿಯೇ ಕಳೆಯುವ ಯಜಮಾನರನ್ನು ನಾವು ಕಾಣುತ್ತೇವೆ.ಇಂಥ ಜಿಗರಿ ದೋಸ್ತರನ್ನು ಬೈಟೂ ದೋಸ್ತರು ಎಂತಲೂ‌ ಕರೆಯಬಹುದು.  ನಮ್ಮ ಹಳ್ಳಿಗಳಲ್ಲಿ ಕೆಲವರಂತೂ ಎಷ್ಟು ಚಹಾದಂಗಡಿಯ ಚಹಾದ ಮೇಲೆ ಜೀವ ಇಟ್ಟಿರುತ್ತಾರೆಂದರೆ ಎದ್ದೊಡನೆ ಅವರ ಮುಂಜಾನೆಗಳಾಗುವದೆ ಹೊಟೆಕಿನ ಮುಂದೆ.ಅಲ್ಲಿ ಬಂದು‌ಮುಖಮಾರ್ಜನ ಕಾರ್ಯಕ್ರಮ ಮುಗಿಸಿ ಒಂದಾದ‌ ಮೇಲೊಂದರಂತೆ  ಚಹಾ ಕುಡಿದು ಅಂಗಡಿಯವನ ಖಾತೆಗೇರಿಸಿ ಮುಂದಿನ ಕಾರ್ಯಕ್ಕೆ ತೆರಳೂವ ಭೂಪರಿಗೇನೂ ಕಡಿಮೆಯಿಲ್ಲ. ಹಿರಿಯ ಪ್ರಭಂಧಕಾರರಾದ ವಿರೇಂದ್ರ ಶಿಂಪಿ ಯವರು ಬರೆದ ನಮ್ಮೂ ರ ಚಹಾ ಹೊಟೆಲು ಎಂಬ ಪ್ರಬಂಧದಲ್ಲಿ ಈ ಚಹಾ ಹೊಟೆಲುಗಳನ್ನು “ಹಳ್ಳಿಯ ಪಾರ್ಲಿಮೆಂಟ್ ” “ವಿಧಾನ ಸೌಧ”ಗಳೆಂದು ಕರೆಯುತ್ತಾರೆ.ಏಕೆಂದರೆ ಊರಿನ ಎಲ್ಲ ಸುದ್ದಿಗಳೂ ಅಲ್ಲಿ ಬಂದು ಹೋಗುವದರಿಂದ ಅವು ವಾರ್ತಾ ಇಲಾಖೆಗಳಂತೆಯೂ ಕೆಲಸ ಮಾಡುವದುಂಟು. ನಿಮಗೆ ಊರಿನ ಯಾವ ಮೂಲೆಯ ಎಂಥದೆ ತಾಜಾ ಸುದ್ದಿ ಬೇಕಾದರೂ ನೀವು ಚಹಾದಂಗಡಿಯ ಒಂದು‌ ಮೂಲೆ ಹಿಡಿದು ಮೌನ ಕುಳಿತರೆ ಸಾಕು ನಿಮಗೆ ಎಲ್ಲವೂ ತಿಳಿಯುತ್ತಾ ಹೋಗುತ್ತದೆ. ಈಚೆಗಂತೂ ಸಕ್ಕರೆ ಖಾಯಿಲೆ ಭಾರತದ ಬಹು ದೊಡ್ಡ ಖಾಯಿಲೆಯಾದ ಮೇಲೆ ಸಕ್ಜರೆ ಹಾಕಿದ ಚಹಾ  ಕುಡಿಯುವರ ಸಂಖ್ಯೆ ಕಡಿಮೆಯಾಗಿ ಊರಿಗೂರಿಗೆ ಗಲ್ಲಿ ಗಲ್ಲಿಗಳಲ್ಲಿ ಬೆಲ್ಲದ ಚಹಾ ಎಂಬ ಹೆಸರಿನ ಗುಲ್ಪಿ ಚಹಾದಂಗಡಿಗಳೂ,ಕೇಸರ ಚಹಾದಂಗಡಿಗಳೂ ತಲೆಯೆತ್ತಿರುವದನ್ನು ಕಾಣುತ್ತವೆ. ಇನ್ನು ಸಕ್ಕರೆ ಖಾಯಿಲೆ ಗೆ ತುತ್ತಾದವರು ಸುಗರ್ ಲೆಸ್ ಚಹಾ ಸೇವನೆ ಮಾಡಿಯಾದರೂ ಚಹಾದ ಚಟ ತೀರಿಸಿಕೊಳ್ಳುತ್ತಾರೆ. ಈಚಿಚೆಗೆ ಅವರದೆ ಸಂಖ್ಯೆ ಜಾಸ್ತಿಯಾದುದರಿಂದ ಸುಗರ್ ಲೆಸ್ಸಾ ಎಂದು ಅಂಗಡಿಯವರೆ ಕೇಳಿ ಖಂಡಿತ ಮಾಡಿಕೊಳ್ಳುವದುಂಟು. ಸರಕಾರಿ ಕಛೇರಿಗಳಲ್ಲಿ ಚಹಾದ ವಿರಾಮ ಎಂದು ಒಂದು ಬಗೆಯ ವಿರಾಮ ಕಾಲವೇ ನಿರ್ಣಯವಾಗಿರುತ್ತದೆ. ಬೆಂಗಳೂರಿನಂತಹ ದೊಡ್ಡ ನಗರಗಳಿರಲಿ, ಚಿಕ್ಕ ನಗರಗಳಿರಲಿ ಸರಕಾರಿ ಇಲಾಖೆಯ ಅಧಿಕಾರಿಗಳು ಖಾಯಂ ಮ್ಮಾಗಿ ಅಂತರ್ಧಾನ ಆಗಿರುವದು..ಕೇಳಿದರೆ ಚಹಾಕ್ಕೆ ಹೋಗಿದ್ದಾರೆ ಎಂದು ಹೇಳುವದು ಸಾನಾನ್ಯವಾಗಿದೆ.ಕಛೇರಿಯ ನಿರ್ಣಯವಾಗದ ಕೆಲವು ಕೇಸಗಳ ಪರೊಹಾರೋಪಾಯವನ್ನು ಚಹಾದಂಗಡಿಯ ಟೇಬಲ್ ಬಳಿಯೆ ಕೇಸ್ ವರ್ಕರ್ ಗಳು ಮುಗಿಸಿಕೊಳ್ಳು ವದೂ ಅನುಭವಸ್ತರ ಎಷ್ಟು ಬರೆದರೂ ಈ ಚಹಾಯಣ ಮುಗಿಯಲಾರದು.ಎಲ್ಲ ಚಹಾಪ್ರಿಯರ ಅನುಭವಗಳು ಒಬ್ಬರಿಗಿಂತ ಒಬ್ಬರವು ಭಿನ್ನ‌ಮತ್ತು ಶ್ರೀ ಮಂತ ಆಗಿರುವದು ಕಾಣಬರುತ್ತದೆ. ಚಹಾಯಣವಂತೂ ರಾಮಾಯಣ ಕ್ಕಿಂತ ದೀರ್ಘವಾಗುತ್ತದೆ. ಚಹಾ ಕುಡಿಯುವದನ್ನು ಒಂದು ಬಗೆಯ habit ಎನ್ನುವ ಇಂಗ್ಲಿಷರ ಅದು ತೀರಾ ಕನಿಷ್ಟತಮ ಚಟ ಎನ್ನುತ್ತಾರೆ. ಅಂದರೆ ಯಾವ ಚಟವಿ ರದಿದ್ದರೂ ಚಹಾ ಚಟವಾದರೂ ಇದ್ದೇ ಇರುತ್ತದೆ ಎನ್ನುದದಕ್ಕೆ ಚಮತ್ಕಾರಿಕವಾಗಿ ಹೇಳುವದಿದೆ .habit ಪದದಲ್ಲಿ h ಹೋದರೆ a bit (ಸ್ವಲ್ಪ) ಉಳಿಯುವದಂತೆ .a ಹೋದರೆ bit (ತೀರ ಸ್ವಲ್ಪ) ಉಳಿಯುವದಂತೆ.b ಹೋದರೆ  it (ಇದು) ಉಳಿಯುತ್ತದೆ.I ಹೋದ‌ಮೇಲೆ t ( ಚಹಾ) ಉಳಿದೆ ಉಳಿಯುತ್ತದೆ ಎನ್ನುತ್ತಾರೆ. ಕಡೆಗೆ t ಕುಡಿಯುವ ಚಟವಂತೂ ಕನಿಷ್ಟ ಇದ್ದೇ ಇರುತ್ತದೆ ಎಂಬ ಭಾವನೆ ಅಲ್ಲಿ ಹೊರಹೊಮ್ಮುತ್ತದೆ. ಚಹಾ ಬೇರೆ ದೇಶದಿಂದ ಬಂದ ಪೇಯ ಎಂದು ವಿಜ್ಞಾನಿಗಳು ಹೇಳುತ್ತಾರೆ.ಆದರೆ ಅದು ಭಾರತೀಯರ ಅತ್ಯಂತ ಪ್ರಿಯ ಪೇಯವಾಗಿರುವದಂತೂ ಸತ್ಯ.ತಲೆ ನೋಯುವವರಿಗೆ, ಜ್ವರ ಬಂದ ರೋಗಿಗಳಿಗೆ ಇದು ದಿವ್ಯೌಷಧಿ. ದಿನಕ್ಕೆ ಎಷ್ಟು ಸಲ ಚಹಾ ಕುಡಿಯಬೇಕು ವೈದ್ಯರು ಏನೆಲ್ಲ ನಿಯಮ ಹೇಳಿದರೂ ನಾಲ್ಕಾರು ಸಲ ಅರ್ಧ ಕಪ್ ಚಹಾ ಸೇವನೆ ನಮ್ಮ ರೂಢಿಯಾಗಿದೆ ಎನ್ನುವವರ ಸಂಖ್ಯೆಯೇನೂ ಕಡಿಮೆಯಿಲ್ಲ. ಅಂತೂ ಚಹಾ ಇಲ್ಲದೆ ಬದುಕುವ ಭಾರತಿಯರ ಸಂಖ್ಯೆ ತೀರಾ ಕಡಿಮೆ..ಚಹಾ ಕುಡಿಯುವ ಚಟ ಇಲ್ಲದವರು ಒಂದು ರೀತಿಯಲ್ಲಿ ನಮಗೆ ದೇವತೆಗಳ ಹಾಗೆ ಕಾಣಿಸುವದು ಸುಳ್ಳಲ್ಲ.ಎಲ್ಲರಿಗೂ ಚಹಾ ದಿನದ ಶುಭಾಶಯಗಳು ಇಂದು ೨೦/೦೫/೨೦೨೬ಚಹಾದ ದಿನವಂತೆ..ಚಹಾ ಇಲ್ಲದೆ ಸೂರ್ಯೋದಯವೇ ಆಗದ ನಮಗೆ ಅಂದರೆ ಉತ್ತರ ಕರ್ನಾಟಕದ ಮಂದಿಗೆ ಚಹಾಕ್ಕೊಂದು ದಿನವಿದೆಯಂದರೆ ನಗೆ ಬರುತ್ತದೆ.ಹಾಗೆ ನೋಡಿದರೆ ನಮ್ಮ ಜನಕ್ಕೆ ಯಾಕೊ ಕಾಫಿ ಕಂಡರೆ ಅಷ್ಟಕ್ಕಷ್ಟೇ. ನಮ್ಮಪ್ರಕಾರ ಎಲ್ಲದಕ್ಕೂ ದಿವ್ಯೌಷಧಿ ಚಹಾನೆ.ಅಂತೆಯೆ ಅದನ್ನು ದೇವಲೋಕದ ಅಮೃತ ಎಂದು‌ ಕರೆಯುವದೂ ಇದೆ.ಮನೆಗಳಿಗೆ ಬಂದಾಗ ಅತಿಥಿಗಳಿಗೆ ಕೊಡಮಾಡುವ ಕನಿಷ್ಟ ಪಕ್ಷದ ಆತಿಣಥ್ಯ ಎಂದರೆ ಚಹಾನೇ ಆಗಿದೆ.”ಬರ್ರಿ ಬರ್ರಿ ಅರ್ಧ ಕಪ್ ಚಹಾ ಕುಡದ ಹೋಗರಿ” ಎಂದು ನಾವು ಅತಿಥಿಗಳಿಗೆ ಒತ್ತಾಯ ಮಾಡುವದೂ ಇದೆ.ಬಂದ ಅತಿಥಿಗಳಿಗೆ ನಾವು ಏನು‌ಕೊಡದಿದ್ದರೂ ಪರ್ವಾ ಇಲ್ಲ ಒಂದು ಕಪ್ ಚಹಾನಾದರೂ ಕೊಡಲೇ ಬೇಕು.ಒಂದು ವೇಳೆ ಚಹಾನೂ ಆಫರ್ ಮಾಡದವರನ್ನು ಕಂಡು ” ಏನ್ ಜಿಪುಣರೆಪಾ,ಅವರ ಮುಖಕ್ಕ ಅರ್ಧ ಕಪ್  ಚಹಾ ಹುಟ್ಟಲಿಲ್ಲ” ಎಂದು ಬೈಯುವವರೂ ಇದ್ದಾರೆ. ಚಹಾ ಅಂಗಡಿಗಳೆಂದು ನಾವು ಹೋಟೆಲ್ ನ್ನು ಹೆಸರಿಸುತ್ತೇವೆ.ಅಲ್ಲಿ ಏನೆಲ್ಲ ಖಾದ್ಯಗಳನ್ನು‌ ಮಾಡಬಹುದಾದರೂ ಅವುಗಳ ಸೇವನೆಯ ನಂತರ ಅರ್ಧ ಕಪ್ ಚಹಾ ಸೇವನೆ ಇರಲೇಬೇಕು.ಇರದಿದ್ದರೆ ಏನೇ ತಿಂದರೂ ಅದು ಅಪೂರ್ಣ.ಅದು ಒಂದುರೀತಿಯಲ್ಲಿ ಕಾರ್ಯಕ್ರಮಗಳಲ್ಲಿ ವಂದನಾರ್ಪಣೆ ಇದ್ದಂತೆ.ಎಂಥ ದೆ ಭಾಷಣ ನಡೆದರೂ ಕಡೆಗೆ ಒಂದು ಸಾಲಿನದಾದರೂ ವಂದನಾರ್ಪಣೆ ಯಾಗದಿದ್ದರೆ ಅದೆಂತಹ ಕಾರ್ಯಕ್ರಮ ಎನ್ನುವ ಹಾಗೆ ಏನೆ ಲ್ಲ ತಿಂಡಿ ತಿಂದರೂ ಚಹಾ ಇರದಿದ್ದರೆ ಅರ್ಧ ಆದಂತೆಯೆ ಎಂದು ತಿಳಿವಳಿಕೆ ಸರ್ವೇ ಸಾಮಾನ್ಯ.ನಮ್ಮಲ್ಲಿ ಊರುಗಳ ಸಿರಿತನವೂ ಈ ಹೊಟೆಲ್ ಗಳ ಆಧಾರದ ಮೇಲೆಯೆ ನಿರ್ಣಯವಾಗುವದುಂಟು.ಒಂದು ಚಹಾದಂಗಡಿಯೂ ಇರದೆ‌ ಇದ್ದರೆ” ಅದೆಂಥ ಹಿಂದುಳಿದ ಊರು ” ಎಂದು ಅಸಹ್ಯ ಮಾಡುವವರೂ ಇದ್ದಾರೆ. ಎಂಥ ಹಿರಿತನಗಳೂ  ನ್ಯಾಯನಿರ್ಣಯಗಳೂ ಚಹಾ ಸೇವನೆ ಯಿಂದಲೇ  ಆರಂಭ ಮತ್ತು‌ ಮುಕ್ತಾಯ ಎಂಬುದು ಉತ್ತರಕರ್ನಾಟದ ಒಂದು ನಿಯಮವೇ ಆಗಿದೆ. ಎಲ್ಲ ಸಮಾರಂಭಗಳ ಆರಂಭಕ್ಕೆ ಚಹಾ ಕೊಟ್ಟೇ ಕಾರ್ಯಕ್ರಮ ಆರಂಭಿಸೋದು ನಮ್ಮ‌ ಪದ್ಧತಿ. ಪೂರ್ತಿ ಚಹಾ ಕುಡಿಯುವವರಿಗಿಂತ ಅರ್ಧ ಚಹಾ ಕುಡಿಯುವವರೆ ಜಾಸ್ತಿ.ಗೆಳೆಯರು ಸೇರಿಕೊಂಡು ಅರ್ಧ ತಾಸಿಗೊಂದು ಬೈಟೂ ಚಹಾ ಕುಡಿಯುತ್ತ ಇಡಿ ದಿನವನ್ನೆಲ್ಲ ಊರ ಚಹಾದಂಗಡಿಗಳ ಕಟ್ಟೆಯ ಲ್ಲಿಯೇ ಕಳೆಯುವ ಯಜಮಾನರನ್ನು ನಾವು ಕಾಣುತ್ತೇವೆ.ಇಂಥ ಜಿಗರಿ ದೋಸ್ತರನ್ನು ಬೈಟೂ ದೋಸ್ತರು ಎಂತಲೂ‌ ಕರೆಯಬಹುದು.  ನಮ್ಮ ಹಳ್ಳಿಗಳಲ್ಲಿ ಕೆಲವರಂತೂ ಎಷ್ಟು ಚಹಾದಂಗಡಿಯ ಚಹಾದ ಮೇಲೆ ಜೀವ ಇಟ್ಟಿರುತ್ತಾರೆಂದರೆ ಎದ್ದೊಡನೆ ಅವರ ಮುಂಜಾನೆಗಳಾಗುವದೆ ಹೊಟೆಕಿನ ಮುಂದೆ.ಅಲ್ಲಿ ಬಂದು‌ಮುಖಮಾರ್ಜನ ಕಾರ್ಯಕ್ರಮ ಮುಗಿಸಿ ಒಂದಾದ‌ ಮೇಲೊಂದರಂತೆ  ಚಹಾ ಕುಡಿದು ಅಂಗಡಿಯವನ ಖಾತೆಗೇರಿಸಿ ಮುಂದಿನ ಕಾರ್ಯಕ್ಕೆ ತೆರಳೂವ ಭೂಪರಿಗೇನೂ ಕಡಿಮೆಯಿಲ್ಲ. ಹಿರಿಯ ಪ್ರಭಂಧಕಾರರಾದ ವಿರೇಂದ್ರ ಶಿಂಪಿ ಯವರು ಬರೆದ ನಮ್ಮೂ ರ ಚಹಾ ಹೊಟೆಲು ಎಂಬ ಪ್ರಬಂಧದಲ್ಲಿ ಈ ಚಹಾ ಹೊಟೆಲುಗಳನ್ನು “ಹಳ್ಳಿಯ ಪಾರ್ಲಿಮೆಂಟ್ ” “ವಿಧಾನ ಸೌಧ”ಗಳೆಂದು ಕರೆಯುತ್ತಾರೆ.ಏಕೆಂದರೆ ಊರಿನ ಎಲ್ಲ ಸುದ್ದಿಗಳೂ ಅಲ್ಲಿ ಬಂದು ಹೋಗುವದರಿಂದ ಅವು ವಾರ್ತಾ ಇಲಾಖೆಗಳಂತೆಯೂ ಕೆಲಸ ಮಾಡುವದುಂಟು. ನಿಮಗೆ ಊರಿನ ಯಾವ ಮೂಲೆಯ ಎಂಥದೆ ತಾಜಾ ಸುದ್ದಿ ಬೇಕಾದರೂ ನೀವು ಚಹಾದಂಗಡಿಯ ಒಂದು‌ ಮೂಲೆ ಹಿಡಿದು ಮೌನ ಕುಳಿತರೆ ಸಾಕು ನಿಮಗೆ ಎಲ್ಲವೂ ತಿಳಿಯುತ್ತಾ ಹೋಗುತ್ತದೆ. ಈಚೆಗಂತೂ ಸಕ್ಕರೆ ಖಾಯಿಲೆ ಭಾರತದ ಬಹು ದೊಡ್ಡ ಖಾಯಿಲೆಯಾದ ಮೇಲೆ ಸಕ್ಜರೆ ಹಾಕಿದ ಚಹಾ  ಕುಡಿಯುವರ ಸಂಖ್ಯೆ ಕಡಿಮೆಯಾಗಿ ಊರಿಗೂರಿಗೆ ಗಲ್ಲಿ ಗಲ್ಲಿಗಳಲ್ಲಿ ಬೆಲ್ಲದ ಚಹಾ ಎಂಬ ಹೆಸರಿನ ಗುಲ್ಪಿ ಚಹಾದಂಗಡಿಗಳೂ,ಕೇಸರ ಚಹಾದಂಗಡಿಗಳೂ ತಲೆಯೆತ್ತಿರುವದನ್ನು ಕಾಣುತ್ತವೆ. ಇನ್ನು ಸಕ್ಕರೆ ಖಾಯಿಲೆ ಗೆ ತುತ್ತಾದವರು ಸುಗರ್ ಲೆಸ್ ಚಹಾ ಸೇವನೆ ಮಾಡಿಯಾದರೂ ಚಹಾದ ಚಟ ತೀರಿಸಿಕೊಳ್ಳುತ್ತಾರೆ. ಈಚಿಚೆಗೆ ಅವರದೆ ಸಂಖ್ಯೆ ಜಾಸ್ತಿಯಾದುದರಿಂದ ಸುಗರ್ ಲೆಸ್ಸಾ ಎಂದು ಅಂಗಡಿಯವರೆ ಕೇಳಿ ಖಂಡಿತ ಮಾಡಿಕೊಳ್ಳುವದುಂಟು. ಸರಕಾರಿ ಕಛೇರಿಗಳಲ್ಲಿ ಚಹಾದ ವಿರಾಮ ಎಂದು ಒಂದು ಬಗೆಯ ವಿರಾಮ ಕಾಲವೇ ನಿರ್ಣಯವಾಗಿರುತ್ತದೆ. ಬೆಂಗಳೂರಿನಂತಹ ದೊಡ್ಡ ನಗರಗಳಿರಲಿ, ಚಿಕ್ಕ ನಗರಗಳಿರಲಿ ಸರಕಾರಿ ಇಲಾಖೆಯ ಅಧಿಕಾರಿಗಳು ಖಾಯಂ ಮ್ಮಾಗಿ ಅಂತರ್ಧಾನ ಆಗಿರುವದು..ಕೇಳಿದರೆ ಚಹಾಕ್ಕೆ ಹೋಗಿದ್ದಾರೆ ಎಂದು ಹೇಳುವದು ಸಾನಾನ್ಯವಾಗಿದೆ.ಕಛೇರಿಯ ನಿರ್ಣಯವಾಗದ ಕೆಲವು ಕೇಸಗಳ ಪರೊಹಾರೋಪಾಯವನ್ನು ಚಹಾದಂಗಡಿಯ ಟೇಬಲ್ ಬಳಿಯೆ ಕೇಸ್ ವರ್ಕರ್ ಗಳು ಮುಗಿಸಿಕೊಳ್ಳು ವದೂ ಅನುಭವಸ್ತರ ಎಷ್ಟು ಬರೆದರೂ ಈ ಚಹಾಯಣ ಮುಗಿಯಲಾರದು.ಎಲ್ಲ ಚಹಾಪ್ರಿಯರ ಅನುಭವಗಳು ಒಬ್ಬರಿಗಿಂತ ಒಬ್ಬರವು ಭಿನ್ನ‌ಮತ್ತು ಶ್ರೀ ಮಂತ ಆಗಿರುವದು ಕಾಣಬರುತ್ತದೆ. ಚಹಾಯಣವಂತೂ ರಾಮಾಯಣ ಕ್ಕಿಂತ ದೀರ್ಘವಾಗುತ್ತದೆ. ಚಹಾ ಕುಡಿಯುವದನ್ನು ಒಂದು ಬಗೆಯ habit ಎನ್ನುವ ಇಂಗ್ಲಿಷರ ಅದು ತೀರಾ ಕನಿಷ್ಟತಮ ಚಟ ಎನ್ನುತ್ತಾರೆ. ಅಂದರೆ ಯಾವ ಚಟವಿ ರದಿದ್ದರೂ ಚಹಾ ಚಟವಾದರೂ ಇದ್ದೇ ಇರುತ್ತದೆ ಎನ್ನುದದಕ್ಕೆ ಚಮತ್ಕಾರಿಕವಾಗಿ ಹೇಳುವದಿದೆ .habit ಪದದಲ್ಲಿ h ಹೋದರೆ a bit (ಸ್ವಲ್ಪ) ಉಳಿಯುವದಂತೆ .a ಹೋದರೆ bit (ತೀರ ಸ್ವಲ್ಪ) ಉಳಿಯುವದಂತೆ.b ಹೋದರೆ  it (ಇದು) ಉಳಿಯುತ್ತದೆ.I ಹೋದ‌ಮೇಲೆ t ( ಚಹಾ) ಉಳಿದೆ ಉಳಿಯುತ್ತದೆ ಎನ್ನುತ್ತಾರೆ. ಕಡೆಗೆ t ಕುಡಿಯುವ ಚಟವಂತೂ ಕನಿಷ್ಟ ಇದ್ದೇ ಇರುತ್ತದೆ ಎಂಬ ಭಾವನೆ ಅಲ್ಲಿ ಹೊರಹೊಮ್ಮುತ್ತದೆ. ಚಹಾ ಬೇರೆ ದೇಶದಿಂದ ಬಂದ ಪೇಯ ಎಂದು ವಿಜ್ಞಾನಿಗಳು ಹೇಳುತ್ತಾರೆ.ಆದರೆ ಅದು ಭಾರತೀಯರ ಅತ್ಯಂತ ಪ್ರಿಯ ಪೇಯವಾಗಿರುವದಂತೂ ಸತ್ಯ.ತಲೆ ನೋಯುವವರಿಗೆ, ಜ್ವರ ಬಂದ ರೋಗಿಗಳಿಗೆ ಇದು ದಿವ್ಯೌಷಧಿ. ದಿನಕ್ಕೆ ಎಷ್ಟು ಸಲ ಚಹಾ ಕುಡಿಯಬೇಕು ವೈದ್ಯರು ಏನೆಲ್ಲ ನಿಯಮ ಹೇಳಿದರೂ ನಾಲ್ಕಾರು ಸಲ ಅರ್ಧ ಕಪ್ ಚಹಾ ಸೇವನೆ ನಮ್ಮ ರೂಢಿಯಾಗಿದೆ ಎನ್ನುವವರ ಸಂಖ್ಯೆಯೇನೂ ಕಡಿಮೆಯಿಲ್ಲ.

ಚಹಾಯಣ…ದ ರಾಮಾಯಣ(ಕಿರು ಪ್ರಬಂಧ) ಡಾ.ವೈ ಎಂ.ಯಾಕೊಳ್ಳಿ Read Post »

ಇತರೆ

“ಅಮ್ಮನ ಸೆರಗು” ಕವಿತಾ ಶ್ರೀನಿವಾಸ ನಾಯಕ್

ವಿಶೇಷ ಸಂಗಾತಿ ಅಮ್ಮನ ಸೆರಗು ಕವಿತಾ ಶ್ರೀನಿವಾಸ ನಾಯಕ್ ​ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ಕಣ್ಣಾಡಿಸುವ ಸಂದರ್ಭದಲ್ಲಿ ಒಬ್ಬ ವಿದ್ಯಾರ್ಥಿ ಬರೆದ ಪ್ರಬಂಧವೊಂದು ನನ್ನ ಗಮನ ಸೆಳೆಯಿತು. ಶಿಕ್ಷಕರು ಕೊಟ್ಟ ವಿಷಯಕ್ಕೆ ಆ ಮಗು ತನ್ನ ತಾಯಿಯ ಸೆರಗಿನ ಮಹತ್ವವನ್ನು ತನ್ನದೇ ಆದ ಮುಗ್ಧ ತಿಳುವಳಿಕೆಯಲ್ಲಿ ಬರೆದಿತ್ತು. ಆ ಸಾಲುಗಳು ನನ್ನ ಹೃದಯಕ್ಕೆ ಎಷ್ಟು ಆಳವಾಗಿ ನಾಟಿದವೆಂದರೆ, ಇಂದು ನನ್ನ ಲೇಖನಿಗೆ ಅದೇ ಪ್ರೇರಣೆಯಾಯಿತು. ಹೌದು, ಅಮ್ಮನ ಸೆರಗನ್ನು ವರ್ಣಿಸಲು ಈ ಜಗದ ಪದಗಳೇ ಸಾಲದು; ಅದು ಕೇವಲ ಒಂದು ಬಟ್ಟೆಯ ತುಂಡಲ್ಲ, ಮಗುವಿನ ರಕ್ಷಣೆಯ ಮೊದಲ ಗೂಡು!​ವಿಶೇಷವಾಗಿ 70 ಮತ್ತು 80 ರ ದಶಕದ ಮಕ್ಕಳಿಗೆ ಅಮ್ಮನ ಸೆರಗಿನ ಸುಖ ಏನೆಂಬುದು ಚೆನ್ನಾಗಿ ಗೊತ್ತು. ಆದರೆ ಇಂದಿನ ಕಾಲಘಟ್ಟದಲ್ಲಿ ಕ್ರಮೇಣ ಆ ಸೀರೆಯ ಸೆರಗು ಮಾಯವಾಗಿ, ಎಲ್ಲೆಡೆ ನೈಟಿಗಳು ಆವರಿಸಿಬಿಟ್ಟಿವೆ. ಆ ಬದಲಾವಣೆಯೊಂದಿಗೆ ನಾವೇನೋ ಆಧುನಿಕತೆಯತ್ತ ಸಾಗಿದ್ದೇವೆ ನಿಜ, ಆದರೆ ಆ ಸೆರಗಿನಲ್ಲಿದ್ದ ಬೆಚ್ಚಗಿನ ಪ್ರೀತಿ, ಆಪ್ತತೆ ಎಲ್ಲೋ ಒಂದು ಕಡೆ ಕಳೆದುಹೋಗುತ್ತಿದೆ ಅನಿಸುವುದು ಸುಳ್ಳಲ್ಲ.​ಅಮ್ಮನ ಸೆರಗು ಆ ದಿನಗಳಲ್ಲಿ ಕೇವಲ ಮಗುವಿಗೆ ಮಾತ್ರವಲ್ಲ, ಇಡೀ ಮನೆಗೇ ಒಂದು ರಕ್ಷಣಾ ಕವಚವಾಗಿತ್ತು. ಮನೆಯ ಒಳಗೆ ಅಮ್ಮ ಅಡುಗೆಮನೆಯಿಂದ ಹಿಡಿದು ಹಿತ್ತಲವರೆಗೂ ಕೆಲಸ ಮಾಡುವಾಗ ಆಕೆಯ ಸೊಂಟಕ್ಕೆ ಸುತ್ತಿಕೊಂಡಿರುತ್ತಿದ್ದ ಸೀರೆಯ ಸೆರಗಿನಲ್ಲಿ ಇಡೀ ಸಂಸಾರದ ನೆಮ್ಮದಿ ಅಡಗಿರುತ್ತಿತ್ತು.​ಮಕ್ಕಳಿಗೆ ಅಮ್ಮನ ಸೆರಗೇ ಸರ್ವಸ್ವ:ಮಕ್ಕಳಿಗೆ ಅಮ್ಮನ ಸೆರಗು ಹಲವು ರೂಪಗಳಲ್ಲಿ ಆಸರೆಯಾಗುತ್ತಿತ್ತು. ಆಟ ಆಡಿ ಬಂದ ಮಗು ಮುಖ ಒರೆಸಿಕೊಳ್ಳಲು ಮೊದಲು ಹುಡುಕುತ್ತಿದ್ದುದೇ ಅಮ್ಮನ ಸೆರಗನ್ನು. ಬೇಸಿಗೆಯ ಸೆಕೆಗೆ ಬೀಸಣಿಕೆಯಾಗುತ್ತಿದ್ದದ್ದೂ ಅದೇ, ಚಳಿಗಾಲದ ನಡುಕಕ್ಕೆ ಬೆಚ್ಚಗಿನ ಹೊದಿಕೆಯಾಗುತ್ತಿದ್ದದ್ದೂ ಅದೇ. ಅಷ್ಟೇ ಏಕೆ, ಮನೆಗೆ ಯಾರಾದರೂ ನೆಂಟರು ಬಂದಾಗ ನಾಚಿಕೆಯಿಂದ ಓಡಿಹೋಗಿ ಅಮ್ಮನ ಸೆರಗಿನ ಮರೆಯಲ್ಲಿ ಅಡಗಿ ನಿಲ್ಲುತ್ತಿದ್ದ ಆ ಕ್ಷಣಗಳೇ ಒಂದು ಸುಂದರ ಕಾವ್ಯ. ತಾಯಿಯ ಸೆರಗನ್ನು ಗಟ್ಟಿಯಾಗಿ ಹಿಡಿದುಕೊಂಡರೆ ಸಾಕು, ಈ ಜಗತ್ತಿನ ಯಾವುದೇ ಶಕ್ತಿ ತನ್ನನ್ನು ಏನೂ ಮಾಡಲು ಸಾಧ್ಯವಿಲ್ಲ ಎಂಬ ಅದಮ್ಯ ಧೈರ್ಯ ಮತ್ತು ಸುರಕ್ಷತೆಯ ಭಾವ ಆ ಪುಟಾಣಿ ಹೃದಯದಲ್ಲಿ ಮೂಡುತ್ತಿತ್ತು.​ಮನೆಯವರಿಗೂ ಅದೊಂದು ಭರವಸೆ:ಕೇವಲ ಮಕ್ಕಳಿಗಷ್ಟೇ ಅಲ್ಲ, ಮನೆಯ ಹಿರಿಯರಿಗೂ ಅಮ್ಮನ ಸೆರಗು ಭರವಸೆಯ ಸಂಕೇತವಾಗಿತ್ತು. ಅಡುಗೆಮನೆಯಲ್ಲಿ ಸದಾ ದುಡಿಯುವ ತಾಯಿಯ ಸೆರಗಿನ ಅಂಚಿಗೆ ಮನೆಯ ಬೀಗದ ಕೈಗಳು ಕಟ್ಟಲ್ಪಟ್ಟಿರುತ್ತಿದ್ದವು. ಅದು ಕೇವಲ ಬೀಗದ ಕೈಯಲ್ಲ, ಇಡೀ ಮನೆಯ ಜವಾಬ್ದಾರಿ, ಸಂಸ್ಕಾರ ಮತ್ತು ತಾಯಿ ಮುನ್ನಡೆಸುವ ಸಂಸಾರದ ದಾರಿದೀಪ. ತಂದೆ ಆಯಾಸದಿಂದ ಕೆಲಸ ಮುಗಿಸಿ ಬಂದಾಗ, ಕಷ್ಟದ ದಿನಗಳಲ್ಲಿ ಅಮ್ಮ ಅದೇ ಸೆರಗಿನಿಂದ ತನ್ನ ಕಣ್ಣೀರನ್ನು ಮರೆಮಾಚಿ, ಎಲ್ಲರಿಗೂ ಧೈರ್ಯ ತುಂಬುತ್ತಿದ್ದಳು.​ಕಾಲ ಬದಲಾಗಿದೆ. ಇಂದು ಉಡುಗೆ-ತೊಡುಗೆಗಳು ಬದಲಾಗಿರಬಹುದು, ಬದುಕಿನ ಶೈಲಿ ಆಧುನಿಕವಾಗಿರಬಹುದು. ಆದರೆ ಅಮ್ಮನ ಸೆರಗು ನೀಡುತ್ತಿದ್ದ ಆ ನಿಷ್ಕಲ್ಮಷ ಪ್ರೀತಿ, ಮಮತೆ ಮತ್ತು ಸುರಕ್ಷತೆಯ ಭಾವ ಇಂದಿಗೂ ಶಾಶ್ವತ. ಬಟ್ಟೆಗಳು ಬದಲಾಗಬಹುದು, ಆದರೆ ತಾಯಿಯ ಮಡಿಲ ಒಲವು ಎಂದಿಗೂ ಬದಲಾಗಲಾರದು. ನಮ್ಮ ಬಾಲ್ಯದ ಆ ಸುಂದರ ದಿನಗಳನ್ನು ನೆನಪಿಸಿಕೊಳ್ಳುತ್ತಾ, ತಾಯ್ತನದ ಆ ಪರಮ ಸುಖಕ್ಕೆ ಮನದಲ್ಲೇ ನಮಿಸೋಣ. ​ಕವಿತಾ ಶ್ರೀನಿವಾಸ್ ನಾಯಕ್​ಕಾರ್ಕಳ, ಉಡುಪಿ ಜಿಲ್ಲೆ.

“ಅಮ್ಮನ ಸೆರಗು” ಕವಿತಾ ಶ್ರೀನಿವಾಸ ನಾಯಕ್ Read Post »

ಇತರೆ, ಜೀವನ

“ಒಂದು ನಿರ್ಧಾರದ ಸುತ್ತಾ”‌ ಡಾ.ಭಾರತಿ ಅಶೋಕ್

ವಿಶೇಷ ಸಂಗಾತಿ ಡಾ.ಭಾರತಿ ಅಶೋಕ್ “ಒಂದು ನಿರ್ಧಾರದ ಸುತ್ತಾ”‌  ಯಾವುದಾದರೂ ಒಂದು ವಿಷಯದ ಬಗೆಗೆ ಆಳವಾಗಿ ಯೋಚಿಸದೇ ಅದರ  ಹರವಿನ ಬಗೆಗೆ ತಿಳಿಯದೇ  ದಿಡೀರ್ ಎಂದು ನಿರ್ಧಾರಗಳನ್ನು ತೆಗೆದುಕೊಳ್ಳುವುದು ತುಂಬಾ ಅಪಾಯಕಾರಿ. ಹಾಗೆ ತೆಗೆದುಕೊಂಡ ನಿರ್ಧಾರದಿಂದ ತುಂಬಾ ನಷ್ಟವನ್ನು ಅನುಭವಿಸಬೇಕಾಗುತ್ತದೆ, ಮತ್ತು ಕೆಲವೊಮ್ಮೆ ಈ ನಿರ್ಧಾರಗಳು ಕೌಟುಂಬಿಕ, ಸಾಂಸ್ಥಿಕವಾಗಿರಬಹುದು, ಸಾಮಾಜಿಕವಾಗಿರಬಹುದು. ಈ ಯಾವ ನೆಲೆಯಲ್ಲೂ ಅದು ಒಳ್ಳೆಯದಲ್ಲ. ಕೆಲವು ಸಲ ಅವುಗಳಿಂದ  ಅನಾಹುತ ಸಂಭವಿಸಬಹುದು. ಆದ್ದರಿಂದ ನಿರ್ಧಾರ ತೆಗೆದುಕೊಳ್ಳಲು ಹತ್ತಾರು ಬಾರಿ ಯೋಚಿಸಿಬೇಕು. ಆ ನಿರ್ಧಾರದ ಸುತ್ತಲೂ  ಧನಾತ್ಮಕ, ಋಣಾತ್ಮಕ ಫಲಿತಾಂಶದ ಬಗೆಗೆ ತಿಳುವಳಿಕೆ ಇರಬೇಕು. ಒಂದು ವೇಳೆ ಧನಾತ್ಮಕ ಪರಿಣಾಮವಾದರೆ ತೆಗೆದುಕೊಂಡ ನಿರ್ಧಾರಕ್ಕೆ ಬೆಲೆ ಇರುತ್ತದೆ. ಅದು ಸರ್ವಕಾಲಿಕ ಸತ್ಯವಾಗಿದ್ದು, ಮತ್ತು ಅದು ಅನುಸರಿಸರಣೀಯವಾಗಿರುತ್ತದೆ.             ತೆಗೆದುಕೊಂಡ ನಿರ್ಧಾರದಿಂದ ವ್ಯತಿರಿಕ್ತ ಪರಿಣಾಮಗಳಾದರೆ  ಅದು ಕ್ಷಣಿಕ ನಿರ್ಧಾರ, ಚಿಂತನೆ ಇಲ್ಲದೇ ತೆಗೆದುಕೊಂಡುದರ ಪರಿಣಾಮವಾಗಿದ್ದು, ಅದು ಸಾರ್ವತ್ರಿಕವಾಗಿರದೆ, ಸರ್ವಕಾಲಿಕವೂ ಆಗಿರದೇ ಅಪಾಯಗಳಿಂದ ಕೂಡಿರುತ್ತದೆ. ಆದ್ದರಿಂದ ವ್ಯಕ್ತಿಗೆ, ಸಮಷ್ಟಿಗೆ ತತ್ ಕ್ಷಣವೇ ತೆಗೆದುಕೊಂಡ ನಿರ್ಧಾರದ ಪರಿಣಾಮವಾಗಿ ಆಗುವ ಅನಾಹುತಕ್ಕೆ ಉದಾಹರಣೆಯಾಗುತ್ತದೆ, ಆಗ ಅಂತಹ ನಿರ್ಧಾರವು ವರ್ಜಿಸಲ್ಪಡುತ್ತದೆ.             ನಿರ್ಧಾರ ವೈಯುಕ್ತಿಕ ನೆಲೆಯಲ್ಲಿದ್ದರೆ ಅದಕ್ಕೆ ಉದಾಹರಣೆಯಾಗಿ : ಇಂದಿನ ಯುವ ಜನಾಂಗ ಮಾಡಿಕೊಳ್ಳುವ ಅನಾಹುತಗಳು ಒಂದೆ ಎರಡೇ… ನೋಡಿದಾಕ್ಷಣ ಆಕ಼ರ್ಷಣೆಗೆ ಒಳಗಾಗಿ ತಮ್ಮ ಬದುಕನ್ನು ಸಂಪೂರ್ಣವಾಗಿ ನಾಶ ಮಾಡಿಕೋಳ್ಳುವುದು ಹೀಗೆಯೇ. ಯುವಕ ಯುವತಿಯರು  ಆಕರ್ಷಿತರಾಗುತ್ತಿದ್ದಂತೆಯೇ ಅದನ್ನು ಪ್ರೀತಿ ಎಂದು ನಂಬಿ ಸಮಾಜದ ಒಪ್ಪಿಗೆ ಎಂಬಂತೆ ವಿವಾಹ ಬಂಧನಕ್ಕೆ ಒಳಗಾಗುವುದು ನಿಜಕ್ಕೂ ಅದು ಪ್ರೀತಿನಾ ಅದು ಕೊನೆಯವರೆಗೂ ಉಳಿಯುತ್ತಾ ಎಂದು ಯೋಚಿಸಲು ಸಹ ಅವಕಾಶವಿಲ್ಲದಂತೆ ತಮ್ಮನ್ನು ತಾವು ಬದುಕಿನ/ಪ್ರೀತಿಯ ಪರೀಕ್ಷೆಗೆ ಒಡ್ಡಿ ಕೊಳ್ಳುತ್ತಾರೆ. ಆಕರ್ಷಣೆ ಮುಗಿಯುತ್ತಿದ್ದಂತೆ ಬದುಕು ಅಸಹನೀಯವಾಗುತ್ತದೆ ಯಾಕೆಂದರೆ ಅವರದು ವಯೋ ಸಹಜ ಆಕರ್ಷಣೆ. ಬದುಕಿಗೆ ಪ್ರೀತಿ ಬೇಕು ಪ್ರೀತಿಯೊಂದೆ ಬದುಕಲ್ಲ ಎನ್ನುವುದರ ಅರಿವು ಇರುವುದಿಲ್ಲ. ಬದುಕಲು ಹಣ ಬೇಕು, ಹಣ ಬೇಕೆಂದರೆ ದುಡಿಯಬೇಕು, ದುಡಿಯುವ ಮಾರ್ಗವೇ ತಿಳಿದಿಲ್ಲ ಆಗಲೇ ಬದುಕು ಕಟ್ಟಿಕೊಳ್ಳುತ್ತೇವೆ ಜೊತೆಯಾಗಿ ಎಂದರೆ ಸಾಧ್ಯವಾಗದು. ತಾವು ಜೊತೆಯಾಗುತ್ತೇವೆ ಎಂದುಕೊಂಡು ಮನೆಯಿಂದ ಪೋಷಕರಿಂದ ದೂರ ಹೋಗುವಾಗ ಮನೆಯಿಂದ ಕೊಂಡ್ಯೊಯ್ದ ಪುಡಿಗಾಸು ಮುಗಿಯುತ್ತಿದ್ದಂತೆ. ಬದುಕು ಇಷ್ಟೇ ಎನ್ನಿಸಿಬಿಡುತ್ತದೆ. ಪ್ರೀತಿ ಎಂದುಕೊಂಡದ್ದುಅಸಹನೀಯವಾಗುತ್ತದೆ.  ಕಾರಣ ಬದುಕಿನ ಬಗೆಗೆ ಕಲ್ಪನೆಯೇ ಇಲ್ಲ. ಅದು ಪ್ರೀತಿ ಅಲ್ಲ ಕೇವಲ ಆಕರ್ಷಣೆ ಎಂದು ಅರ್ಥ ಮಾಡಿಕೊಳ್ಳುವ ಹೊತ್ತಿಗೆ ಎಲ್ಲವೂ ಮುಗಿದೇ ಹೋಯ್ತು ಎನ್ನುವಂತಹ ಅನುಭವವಾಗುವುದು. ಆಗ ಆ ಬಂಧ(ನ)ದಿಂದ ಮುಕ್ತಿಗಾಗಿ ವಿಚ್ಛೇದನ, ಆತ್ಮ ಹತ್ಯೆಯಂತಹ ಗಂಭೀರ ಸ್ವರೂಪದ ನಿರ್ಧಾರಕ್ಕೆ ಬರುತ್ತಾರೆ. “ಬದುಕು ಬದುಕಲಾರದಷ್ಟು ಭೀಕರವಲ್ಲ, ಅಂದುಕೊಂಡಷ್ಟು ಸರಳವೂ ಅಲ್ಲ” ಎನ್ನುವ ಸತ್ಯದ ಅರಿವಾಗಬೇಕು ಅಂಥ ಅರಿವನ್ನು ಮೂಡಿಸುವ ಕೆಲಸ ಆಗಬೇಕಿದೆ.  ಹೌದು ವಿವಾಹ ಅದರ ನಂತರದ ಬದುಕು ಅವುಗಳ ಬಗೆಗೆ ನಮ್ಮ ಯುವ ಜನಾಂಗಕ್ಕೆ ಸರಿಯಾದ ತಿಳುವಳಿಕೆ ಇಲ್ಲದಿರುವುದು ನಮ್ಮಂಥ ಸಾಂಪ್ರದಾಯಿಕ ಸಮಾಜದಲ್ಲಿ ನಿರೀಕ್ಷೆಯೂ ಸರಿಯಲ್ಲ. ಇಷ್ಟು ಮಾತ್ರವಲ್ಲದೇ ಅವರ ನಿರ್ಧಾರಗಳಿಗೆ ಇಂಬು ದೊರೆಯಲು ಅವರ ಆರ್ಥಿಕ ಭದ್ರತೆಯೂ ಪೂರಕವಾಗಿರಬೇಕು. ಅದು ಸರಿಯಾಗಿದ್ದರೆ  ಕಷ್ಟದಲ್ಲೂ ಸೈರಿಣೆಯಿಂದ ಬದುಕುವ ಸಾಧ್ಯತೆಗಳನ್ನು ಒದಗಿಸಿದಂತಾಗುತ್ತದೆ. ಹಾಗಿದ್ದಾಗಲೂ ನಿರ್ಧಾರಗಳು ಚಿಂತನೆಯನ್ನು ನಿರೀಕ್ಷಿಸುತ್ತವೆ.             ಇಂಥ ಕ್ಷಣಿಕ ನಿರ್ಧಾರಗಳನ್ನು ನಮ್ಮ ಯುವ ಜನತೆ ಮಾತ್ರ ತೆಗೆದುಕೊಳ್ಳುತ್ತದೆ ಎಂದು ಭಾವಿಸುವುದು ಸಹ ನಮ್ಮ ಕ್ಷಣಿಕ ನಿರ್ಧಾರವಾದೀತು. ಏಕೆಂದರೆ ನಮಗೆ ಇತಿಹಾಸವಿದೆ. ಅದರ ಪರಿಪಾಠ ನಮ್ಮಲ್ಲೂ ಮೈಗೂಡಿದೆ. ‘ನಭೂತೋ ನಭವಿಷ್ಯತೆ” ಎನ್ನುವಂತೆ ನಮ್ಮ ಭೂತ ನಮ್ಮನ್ನು ಬೆನ್ನಟ್ಟಿ ಭವಿಷ್ಯದಲ್ಲೂ ಜೊತೆಗಿರುತ್ತದೆ.  ಹೇಗೆ ಎನ್ನುವುದನ್ನು ನೋಡೋಣ ನಮ್ಮ ಬಾದಷಹ “ಮೊಹಮ್ಮದ್ ಬೀನ್ ತುಘಲಕ್” ತೆಗೆದುಕೊಳ್ಳುತ್ತಿದ್ದ ತತ್ ಕ್ಷಣದ ನಿರ್ಧಾರಗಳಿಂದ ಜನತೆ ಎದುರಿಸಿದ ಸಮಸ್ಯೆಗಳು ಒಂದೆರಡಲ್ಲ. ರಾಜಧಾನಿಯನ್ನು ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ(ದೆಹಲಿಯಿಂದ ದೇವಗಿರಿಗೆ, ದೇವಗಿರಿಯಿಂದ ದೆಹಲಿಗೆ)ಸ್ಥಳಾಂತರಿಸಿದಾಗ ಜನ, ದನ, ಪಶು, ಪಕ್ಷಿಗಳು ಅನುಭವಿಸಿದ ನೋವಿನ ತೀವ್ರತೆಯನ್ನು ಹೇಳಿದರೆ ಪರಿಮಕಾರಿಯಾಗಿರುವುದಿಲ್ಲ. ಅನುಭವಿಸಿದವರೇ ಬಲ್ಲರು. ಸುಲ್ತಾನನಿಗೆ ಬುದ್ಧಿ ಇರಲಿಲ್ಲ ಎಂದುಕೊಂಡರೆ ಅದು ನಮ್ಮ ಮೂರ್ಖತನವಾದೀತು. ಆತನೋ ಭಯಂಕರ ಮೇಧಾವಿ. ಪರ್ಷಿಯನ್ ಅರೇಬಿಕ್ ಭಾಷೆಗಳಲ್ಲಿ ಪಂಡಿತ. ಸಾಹಿತ್ಯ ಧರ್ಮ ಖಗೋಳ ಶಾಸ್ತ್ರ ತರ್ಕಶಾಸ್ತ್ರ,ತತ್ವಶಾಸ್ತ್ರ ಗಣಿತಶಾಸ್ತ್ರಗಳಲ್ಲಿ ಆಳವಾದ ಜ್ಞಾನವನ್ನು ಪಡೆದಿದ್ದನು. ಆತನ ಜ್ಞಾನ ನಾಲ್ಕು ಐದು ಶತಮಾನದಷ್ಟು ಮುಂದಿತ್ತು ಎಂದರು ಸರಿಯೆ. ಅಂಥಹ ಚಾಣಾಕ್ಷ.       ಯಾಕೆ ನಾನು ಇತಿಹಾಸದಿಂದ ಇಂಥ ಮೇಧಾವಿಯನ್ನು ಉದಾಹರಿಸಿದೆ ಎಂದರೆ ಆತನ ನಿರ್ಧಾರಗಳು, ಯೋಜನೆಗಳನ್ನು ಜಾರಿಗೊಳಿಸುವ ಕ್ರಮ, ಅಂದಿನ ಪರಿಸ್ಥಿತಿಯ ಕುರಿತು ಕುಳಿತು ಸರಿಯಾದ ರೀತಿಯಲ್ಲಿ ಚಿಂತನೆ ಮಾಡಿ ನಿರ್ಧಾರ ತೆಗೆದುಕೊಳ್ಳುವ ತಾಳ್ಮೆ  ಆತನಲ್ಲಿ ಇರಲಿಲ್ಲ. ಬುದ್ಧಿವಂತಿಕೆ ವ್ಯವಹಾರ ನೈಪುಣ್ಯತೆಯ ಕೊರತೆಯಿಂದಾಗಿ  ಏಕಾಏಕೀ ನಿರ್ಧಾರ ಕೈಕೊಳ್ಳುತ್ತಿದ್ದುದರ ಪರಿಣಾಮವಾಗಿತ್ತು. ಅದರೆ ಅಂದಿನ ರಾಜಕೀಯ ಸ್ಥಿತಿಗತಿಗಳಿಗೆ  ಅದು ಅನಿವಾರ್ಯವಾಗಿತ್ರು, ಬದಲಾವಣೆ ಪೂರ್ವನಿರ್ಧಾರಿತವಾಗಿದ್ದರೆ,ವ್ಯವಸ್ಥಿತವಾಗಿದ್ದರೆ..‌..ಉತ್ತಮ ಆಡಳಿತ ವ್ಯವಸ್ಥೆಯನ್ನು ಕೊಟ್ಟ ಕೀರ್ತಿ ಆತನದಾಗಿರುತ್ತಿತ್ತು      ಅಂದರೆ ಒಂದು ನಿರ್ಧಾರ ಅದು ಬಹುಮುಖ ಚಿಂತನೆಯಿಂದಕೂಡಿರಬೇಕು. ಅದರಿಂದ ವಿರುದ್ಧ ಪರಿಣಾಮಗಳಾದರೂ ಅವು ಆಶಾಶ್ವತವಾಗಿದ್ದು ವೈರುದ್ಯಗಳಿಗೂ ಶಾಶ್ವತ ಪರಿಹಾರಗಳನ್ನು ಕಂಡುಕೊಳ್ಳುವಂತಹ ನಿರ್ಧಾರಗಳನ್ನು ಮೊದಲೆ  ಮಾಡಿಕೊಂಡರೆ ಅದು ಯಶಸ್ವಿಯಾಗುತ್ತದೆ. ಹಾಗೆ ಅದರ  ಬಗೆಗೆ ವಿವರವಾದ ಆಲೋಚನೆಗಳು  ವಿಭಿನ್ನ ಆಯಾಮಗಳಿಂದ ನಡೆದು ಅದಕ್ಕೆ ತಕ್ಕುದಾದ ಅನುಸರಣೀಯ  ಮಾರ್ಗೋಪಾಯಗಳನ್ನು ಕಂಡುಕೊಂಡೇ  ನಿರ್ಧಾರ ಕೈಕೊಂಡರೆ, ಅಂದರೆ , ಒಂದು ನಿರ್ಧಾರದ ಹಿಂದೆ ಅದರ ಒಳಿತು ಕೆಡುಕುಗಳನ್ನು ನಾವು ಸ್ವೀಕರಿಸುವ  ಪರಿಸ್ಥಿತಿಯನ್ನು ಸಹ ಅರಿತುಕೊಂಡು  ನಿರ್ಧರಿಸಿದಾಗ  ಅದು ಸಹಜವಾದ ನಿರ್ಧಾರವಾಗುತ್ತದೆ. ಪರಿಣಾಮ ಯಾವಾಗಲೂ ಒಳ್ಳೆಯವೆ ಆಗಿರುತ್ತವೆ.  ಯೋಚಿಸಿ ಕೈಕೊಂಡಿದ್ದರಿಂದ ಅದಕ್ಕೆ  ಅಗತ್ಯವಾದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿರುತ್ತದೆ, ಇದು ಕಷ್ಟವೆನಿಸದು. ಇನ್ನು ರಾಜಕೀಯ ಕ್ಷೇತ್ರದಲ್ಲಂತು ಇದು ಅತ್ಯಂತ ಮಹತ್ವದ ಪಾತ್ರವಹಿಸುತ್ತದೆ.             ಇಂದಿನ ತಾಂತ್ರಿಕ ಯುಗದಲ್ಲಿ ಇದು ತುಂಬ ಅತ್ಯಗತ್ಯ.. ಕಾರಣ  ನಿರ್ಧಾರಗಳು ಸಾರ್ವತ್ರಿಕವಾಗಿರುವುದರಿಂದ  ಅದರ ಪರಿಣಾಮಗಳು ಇನ್ನು ಭೀಕರವಾಗಿರುವುದರಿಂದ  ನಿರ್ಧಾರದ ಹಿಂದಿನ ಪರಿಣಾಮಗಳ ಆಳವಾದ ಜ್ಞಾನ  ಚಿಂತನೆ ಅಗತ್ಯ. ಡಾ. ಭಾರತಿ ಅಶೋಕ್

“ಒಂದು ನಿರ್ಧಾರದ ಸುತ್ತಾ”‌ ಡಾ.ಭಾರತಿ ಅಶೋಕ್ Read Post »

ಇತರೆ

ವನಜಾ ಮಹಾಲಿಂಗಯ್ಯ “ಪ್ರೀತಿ ವಿವಾಹದ ನೆರಳು”

ಪ್ರೀತಿ ಸಂಗಾತಿ ವನಜಾ ಮಹಾಲಿಂಗಯ್ಯ “ಪ್ರೀತಿ ವಿವಾಹದ ನೆರಳು” ಪ್ರೀತಿ ಅಂದ್ರೆ ಕನಸು. ಮದುವೆ ಅಂದ್ರೆ ವಾಸ್ತವ. ಕನಸು ಕಾಣೋದು ತುಂಬಾ ಸುಂದರ. ಆದ್ರೆ ಆ ಕನಸನ್ನೇ ಮನೆ ಮಾಡ್ಕೊಂಡು ವಾಸ್ತವದ ನೆಲದ ಮೇಲೆ ಕಾಲೂರದೆ ಬದುಕೋಕೆ ಹೊರಟಾಗ, ಬದುಕು ಕಚ್ಚೋಕೆ ಶುರು ಮಾಡುತ್ತೆ. ಅದೇ ಪ್ರೀತಿ ವಿವಾಹದ ನೋವು.ಪ್ರೀತಿ ಮಾಡುವ ದಿನಗಳಲ್ಲಿ ಜಗತ್ತೇ ಬೇರೆ. ಫೋನ್ ಕರೆ, ಮೆಸೇಜ್, ಸಣ್ಣ ನಗು, ಸಣ್ಣ ಕೋಪ, ಎಲ್ಲವೂ ಸಿಹಿ. ಆಗ ನಾವು ಇಬ್ಬರೇ ಜಗತ್ತು. ಬೇರೆ ಯಾರೂ ಬೇಕಿಲ್ಲ ಅನಿಸುತ್ತೆ. ಕುಟುಂಬ, ಸಮಾಜ, ಜಾತಿ, ಹಣ, ಭವಿಷ್ಯ – ಯಾವುದೂ ಕಣ್ಣಿಗೆ ಕಾಣಲ್ಲ. ಕಾಣೋದು ಕೇವಲ ಅವನು ಅಥವಾ ಅವಳು. ಆ ಭಾವನೆಯ ಜೋಶಲ್ಲಿ ಕೈ ಹಿಡಿದು ಮದುವೆ ಮಂಟಪದ ಕಡೆ ನಡೆಯುತ್ತೇವೆ.ಆದ್ರೆ ಮಂಟಪದಿಂದ ಹೊರಗೆ ಬಂದ ಕೂಡಲೇ ಹೊಸ ಜಗತ್ತು ಶುರುವಾಗುತ್ತೆ. ಇಲ್ಲಿಯವರೆಗೆ ಇಬ್ಬರ ಜಗತ್ತಾಗಿದ್ದ ಬದುಕು, ಈಗ ಮನೆ, ಕುಟುಂಬ, ಜವಾಬ್ದಾರಿ, ಬಿಲ್, ಕೆಲಸದ ಒತ್ತಡಗಳಿಂದ ತುಂಬಿರುತ್ತೆ. ಪ್ರೀತಿ ಮಾತಾಡುವಾಗ ಟೈಮೇ ಸಿಗದಷ್ಟು ಕೆಲಸ ಇರುತ್ತೆ. ಮೊನ್ನೆ ಮೊನ್ನೆ “ನೀನೇ ನನ್ನ ಉಸಿರು” ಅಂದವನು, ಇವತ್ತು “Office ಕೆಲಸ ಇದೆ, ಮಾತಾಡೋಕೆ ಆಗಲ್ಲ” ಅಂತಾನೆ. ನಿನ್ನೆ “ನಿನ್ನ ನಗು ಸಾಕು” ಅಂದವಳು, ಇವತ್ತು “ಮನೆ ಬಾಡಿಗೆ ಕಟ್ಟಿದ್ದೀಯಾ?” ಅಂತ ಕೇಳ್ತಾಳೆ. ಆಗ ಮನಸ್ಸು ಮೊದಲೇ ಹೀಗಿರಲಿಲ್ಲವಲ್ಲ ಅಂತ ಕೊರಗುತ್ತೆ. ಪ್ರೀತಿ ಕಡಿಮೆ ಆಗಿಲ್ಲ, ಜವಾಬ್ದಾರಿ ಜಾಸ್ತಿ ಆಗಿದೆ ಅನ್ನೋದನ್ನ ಅರ್ಥ ಮಾಡ್ಕೊಳ್ಳೋ ತಾಳ್ಮೆ ನಮ್ಮಲ್ಲಿ ಇರಲ್ಲ.ಪ್ರೀತಿ ವಿವಾಹದ ದೊಡ್ಡ ನೆರಳು ಕುಟುಂಬ. ಅಜ್ಜ-ಅಜ್ಜಿ ನೋಡಿ ಮಾಡೋ ಮದುವೆಯಲ್ಲಿ ಎರಡು ಮನೆ ಒಂದಾಗುತ್ತೆ. ಪ್ರೀತಿ ವಿವಾಹದಲ್ಲಿ ಕೆಲವೊಮ್ಮೆ ಎರಡು ಮನೆ ಎದುರಿಗೆ ನಿಲ್ಲುತ್ತೆ. “ನಮ್ಮ ಮನೆತನಕ್ಕೆ ತಕ್ಕವಳಲ್ಲ”, “ನಮ್ಮ ಹುಡುಗನಿಗೆ ಯೋಗ್ಯನಲ್ಲ” ಅನ್ನೋ ಮಾತುಗಳು ಚೂರಿ ತರ ಇರುತ್ತೆ. ತಾಯಿ-ತಂದೆಯ ಆಶೀರ್ವಾದ ಇಲ್ಲದ ಮದುವೆ, ಎಷ್ಟು ಸಂತೋಷವಾಗಿದ್ದರೂ ಮನಸ್ಸಿನ ಒಂದು ಮೂಲೆಯಲ್ಲಿ ಸದಾ ಕೊರೆಯುತ್ತಿರುತ್ತೆ. ಹಬ್ಬ, ಹರಿದಿನ, ಮನೆ ಕಾರ್ಯ – ಎಲ್ಲಾ ಕಡೆ “ಅವರ ಮನೆಯವರು ಬರಲಿಲ್ಲ” ಅನ್ನೋ ಕೊರತೆ ಕಾಡುತ್ತೆ. ಆ ನೋವನ್ನ ಹುಡುಗ-ಹುಡುಗಿ ಒಬ್ಬರ ಮೇಲೆ ಒಬ್ಬರು ತೀರಿಸ್ಕೊಳ್ಳೋದು ಶುರು.ಮತ್ತೊಂದು ವಿಷಯ ಹಣ. ಪ್ರೀತಿ ಮಾಡುವಾಗ “ನೀನು ಇದ್ರೆ ಸಾಕು, ಕಾಡಲ್ಲಿ ಆದ್ರೂ ಇರ್ತೀನಿ” ಅಂತೀವಿ. ಆದ್ರೆ ಮದುವೆ ಆದ ಮೇಲೆ ಕಾಡು ಬೇಡ, ಒಂದು ಚಿಕ್ಕ ಮನೆ ಬಾಡಿಗೆ ಕಟ್ಟೋಕೂ ಆಗಲ್ಲ. ಸಾಲ, EMI, ಮೆಡಿಕಲ್ ಖರ್ಚು, ಮಕ್ಕಳ ಶಾಲೆ – ಲೆಕ್ಕಗಳು ಬರೋಕೆ ಶುರುವಾಗುತ್ತವೆ. ದಾರಿದ್ರ್ಯ ಬಾಗಿಲು ತಟ್ಟಿದಾಗ ಪ್ರೀತಿ ಕಿಟಕಿಯಿಂದ ಜಾರಿ ಹೋಗುತ್ತೆ ಅಂತ ಹಿರಿಯರು ಸುಮ್ನೆ ಹೇಳಿಲ್ಲ. ಹಣಕಾಸಿನ ಜಗಳ, ಪ್ರೀತಿಯ ಬುನಾದಿಯನ್ನೇ ಅಲುಗಾಡಿಸಿಬಿಡುತ್ತೆ.ಇದಕ್ಕೆಲ್ಲಾ ಕಾರಣ ನಾವು ಪ್ರೀತಿನೇ ದೇವರು ಅಂತ ಪೂಜೆ ಮಾಡೋದು. ಪ್ರೀತಿ ದೇವರು ಅಲ್ಲ , ಪ್ರೀತಿ ಒಂದು ಭಾವನೆ. ಮದುವೆ ಅಂದ್ರೆ ಆ ಭಾವನೆಯ ಜೊತೆಗೆ ಹೊಂದಾಣಿಕೆ, ತ್ಯಾಗ, ಕ್ಷಮೆ, ಸಂಭಾಷಣೆ ಇವೆಲ್ಲಾ ಬೆರೆಸಿ ಮಾಡೋ ಅಡುಗೆ. ಉಪ್ಪು ಕಡಿಮೆ ಆದ್ರೆ ಊಟ ರುಚಿ ಇರಲ್ಲ. ಹೊಂದಾಣಿಕೆ ಕಡಿಮೆ ಆದ್ರೆ ಸಂಸಾರ ರುಚಿ ಇರಲ್ಲ.ಪ್ರೀತಿ ವಿವಾಹದವರು ಒಂದು ತಪ್ಪು ಮಾಡ್ತಾರೆ. “ನಾನೇ ಆಯ್ಕೆ ಮಾಡಿಕೊಂಡಿದ್ದು, ನನಗೆ ಗೊತ್ತು” ಅನ್ನೋ ಗರ್ವ. ಹಾಗಾಗಿ ಸಣ್ಣ ಜಗಳ ಆದ ಕೂಡಲೇ “ಬೇಡ ಬಿಡು” ಅಂತ ಮಾತು ಬರುತ್ತೆ. ಹೊಂದಾಣಿಕೆ ಮಾಡಿಕೊಳ್ಳೋ ಬದಲು ಬೇರ್ಪಡೋದು ಸುಲಭ ಅನಿಸುತ್ತೆ. Arranged Marriage ನಲ್ಲಿ “ಮಾಡಿದ್ದೇ ಆಯ್ತು, ನಿಭಾಯಿಸೋಣ” ಅನ್ನೋ ಭಾವ ಇರುತ್ತೆ. ಇಲ್ಲಿ ಆ ಭಾವ ಇರಲ್ಲ.ಪ್ರೀತಿ ವಿವಾಹ ತಪ್ಪು ಅಲ್ಲ. ಆದ್ರೆ ಅದು ಮಕ್ಕಳಾಟ ಅಲ್ಲ. ಕಣ್ಣು ಮುಚ್ಚಿ ಆಡೋ ಜೂಜು ಅಲ್ಲ. ಕಣ್ಣು ತೆರೆದು, ಕುಟುಂಬವನ್ನ ಒಪ್ಪಿಸಿ, ಆರ್ಥಿಕವಾಗಿ ಸದೃಢರಾಗಿ, “ನಾನು ಬದಲಾಗ್ತೀನಿ, ನೀನೂ ಬದಲಾಗು” ಅಂತ ಪ್ರಾಮಿಸ್ ಮಾಡ್ಕೊಂಡು ಮಾಡೋ ಒಪ್ಪಂದ. ಇಲ್ಲ ಅಂದ್ರೆ ಆ ಪ್ರೀತಿ ಮದುವೆ ಮಂಟಪದವರೆಗೆ ಮಾತ್ರ. ಆಚೆ ಬದುಕಿನ ಬಿಸಿಲಿಗೆ ಬಾಡಿ ಹೋಗುತ್ತೆ. ಪ್ರೀತಿ ಮಾಡಿ. ಮನಸಾರೆ ಮಾಡಿ. ಆದ್ರೆ ಮದುವೆ ಅಂದ್ರೆ ಕೇವಲ ಪ್ರೀತಿ ಅಲ್ಲ, ಅದು ಬದುಕು ಅನ್ನೋದನ್ನ ಮರೆಯಬೇಡಿ. ಬದುಕನ್ನ ನಿಭಾಯಿಸೋ ಶಕ್ತಿ ಇದ್ರೆ ಮಾತ್ರ ಪ್ರೀತಿಮಾಡಿ ಮದುವೆ ಮಾಡಿಕೊಳ್ಳಿ. ಇಲ್ಲದೆ ಹೋದರೆ ಹಿರಿಯರಿಗೆ ಬಿಡಿ ಅವರು ನಿಮಗೆ ಅನ್ಯಾಯ ಮಾಡಲ್ಲ. ವನಜಾ ಮಹಾಲಿಂಗಯ್ಯ

ವನಜಾ ಮಹಾಲಿಂಗಯ್ಯ “ಪ್ರೀತಿ ವಿವಾಹದ ನೆರಳು” Read Post »

ಇತರೆ

“ಹಿಂದೂ ಮುಸ್ಲಿಂ ಸೌಹಾರ್ದತೆಯ ತಾಣ ಶಿಶುವಿನಹಾಳ”ವಿಶೇಷ ಲೇಖನ, ಜಯಲಕ್ಷ್ಮಿ ಕೆ

ಸೌಹಾರ್ದ ಸಂಗಾತಿ ಜಯಲಕ್ಷ್ಮಿ ಕೆ “ಹಿಂದೂ ಮುಸ್ಲಿಂ ಸೌಹಾರ್ದತೆಯ ತಾಣ ಶಿಶುವಿನಹಾಳ”   “ಲೋಕದ ಕಾಳಜಿ ಮಾಡುತ್ತೀನಂತಿ.. ನಿಂಗ್ಯಾರು ಬ್ಯಾಡಂದೋರು ಮಾಡಪ್ಪ ಚಿಂತಿ .. ಆನೆ ಅಂಬಾರಿ ಏರಬೇಕಂತಿ.. ಮಣ್ಣಲ್ಲಿ ಇಳಿಯುದ ತಣ್ಣಗ ಮರತಿ…”   ಖ್ಯಾತ ಗಾಯಕ  ಲುಂಗಿ ರಾಕ್ ಸ್ಟಾರ್ ರಘು ದೀಕ್ಷಿತ್ ರವರ ಕಂಠಸಿರಿಯಿಂದ ಮೂಡಿಬಂದು ಜನಮನ ಗೆದ್ದ ಈ ತತ್ವ ಪದದ ರಚನೆಕಾರರ ಊರೇ ಶಿಶುವಿನಹಾಳ. “ಕನ್ನಡದ ಕಬೀರ” ಎಂದೇ ಖ್ಯಾತರಾದ ಸಂತ ಶಿಶುನಾಳ ಶರೀಫರ ಸನ್ನಿಧಿ ಇರುವುದು  ಹಾವೇರಿ ಜಿಲ್ಲೆಯ ಶಿಗ್ಗಾಂವಾ ತಾಲೂಕಿನ ಶಿಶುವಿನಹಾಳದಲ್ಲಿ. ಹಿಂದೂ ಮುಸ್ಲಿಂ ಭಾವೈಕ್ಯದ ಹರಿಕಾರರಾದ ಶರೀಫರ ನಾಡಿನಲ್ಲಿ ಒಂದೇ ಮಂದಿರದಲ್ಲಿ ಎರಡು ಧರ್ಮಿಯರು   ನಡೆಸುವ ಪೂಜಾ ಕೈಂಕರ್ಯ  ನೋಡುವುದೇ ಚೆನ್ನ! ಗುರು ಗೋವಿಂದ ಭಟ್ಟರ ಮೂರ್ತಿ ಒಂದೆಡೆ.. ಶಿಶುನಾಳ ಶರೀಫರ ಮೂರ್ತಿ ಇನ್ನೊಂದೆಡೆ.  ಈ ಎರಡು ಮೂರ್ತಿಗಳ ನಡುವೆ ಶ್ವೇತ ಶಿಲೆಯಲ್ಲಿ ಕೆತ್ತಿದ    ಆಶೀರ್ವಾದ ನೀಡುವ ಭಂಗಿಯಲ್ಲಿ  ನಿಂತ ನಂದಿ, ಶಿವಲಿಂಗ. ಒಂದೆಡೆ ಹಣ್ಣು ಕಾಯಿ ಸೇವೆ, ಇನ್ನೊಂದೆಡೆ ಸಕ್ಕರೆ ಪ್ರಸಾದ ವಿತರಣೆ! ಹಿಂದೂ ಮುಸ್ಲಿಂ ಭಾವೈಕ್ಯತೆಯ ಜೊತೆ ಜೊತೆಗೆ ಗುರು ಶಿಷ್ಯ ಸಂಬಂಧದ ಪಾವಿತ್ರ್ಯತೆಯನ್ನು ಸಾರುವ  ಅಪೂರ್ವ ಚಿತ್ರಣ ! ಎಂಥವರೂ ಭಾವಪರವಶರಾಗಬೇಕು  ಹುಲಗೂರ  ಶರೀಫರ ಈ ಸನ್ನಿಧಿಯಲ್ಲಿ. ವಿಜ್ಞಾನ ತಂತ್ರಜ್ಞಾನದಲ್ಲಿ ಪಳಗಿ  ಆಧುನಿಕತೆಯ ತುತ್ತ ತುದಿಯನ್ನು ತಲುಪಿದ್ದೇವೆ ಎನ್ನುವ ಭ್ರಮೆಯಲ್ಲಿರುವ, ಜಾತಿ ಮತ ಪಂಥಗಳು ಎಂಬ ತ್ರಿಶಂಕುವಿನಿಂದ ಹೊರಬರಲಾಗದ ಸಂಕುಚಿತ ಮನೋಭಾವದವರು ಈ ದಿವ್ಯ ಕ್ಷೇತ್ರಕ್ಕೆ ಹೋಗಲೇಬೇಕು. ಅಲ್ಲಿನ ಪೂಜಾ ವಿಧಿ ವಿಧಾನಗಳನ್ನು, ಅಲ್ಲಿನ ಜನರು  ಹೊಂದಿಕೊಂಡು ಬಾಳುವ  ಪರಿಯನ್ನು ಕಣ್ತುಂಬಿಕೊಳ್ಳಲೇಬೇಕು.  ಐದರಿಂದ ಆರು ಸಾವಿರದಷ್ಟು ಜನಸಂಖ್ಯೆಯನ್ನು ಹೊಂದಿರುವ ಪುಟ್ಟ ಊರದು.  “ದೇಹವೇ ಮಸೀದಿ,ದೇಹವೇ ದೇಗುಲ ” ಎಂದು ಸಾರಿದ, ಸಾರಿದಂತೆಯೇ ಬದುಕಿ ಬಾಳಿದ  ಸಂತ ಶರೀಫರ ನೆಲದಲ್ಲಿ ನಿಂತರೆ ಸಾಕು, ಕೋಮು ಸೌಹಾರ್ದತೆ ಸಾರುವ ಅವರ ತತ್ವಪದಗಳು, ಮಾನವ ಧರ್ಮ ಸಾರುವ  ಅವರ ಪದಗಳ  ಸಾರಗಳು, ಸ್ಮೃತಿ  ಪಟಲದಲ್ಲಿ ಹಾಗೇ ತೇಲಿ ಬರುತ್ತವೆ. ಲೌಕಿಕ ದೃಶ್ಯಗಳ ಮೂಲಕ  ಪಾರಮಾರ್ಥಿಕ ಸತ್ಯಗಳನ್ನು ಸರಳ ಸುಂದರ ಆಡು ಭಾಷೆಯಲ್ಲಿ  ನಿರೂಪಿಸಿರುವ  ಶರೀಫರು  ಮೊದಲ ಸೂಫಿ ಕವಿ. ಆಕರ್ಷಕ ತತ್ವಪದಗಳ ಮೂಲಕ ಜನಮಾನಸದಲ್ಲಿ ಉಳಿದ ಸಿದ್ಧಪುರುಷ ಶರೀಫ  ಇಸ್ಲಾಂ ಧರ್ಮದಲ್ಲಿ ಹುಟ್ಟಿ, ಹಿಂದೂ ಗುರುವನ್ನು ಪಡೆದು ಜಾತಿ ಮತಗಳ ಎಲ್ಲೆ ಮೀರಿ ಬೆಳೆದು ನಿಂತವರು. ” ಕೆಲಸವಿಲ್ಲದೆ ಅಲೆಯುವ ತಿರುಕ ” ಎಂದ ಹಿಂದೂ ಧರ್ಮೀಯರ ಮಾತಿಗಾಗಲಿ, ” ಕಾಫಿರ್ ” ಎಂದ ಮುಸಲ್ಮಾನರ ತೆಗಳಿಕೆಗಾಗಲಿ ಸಂತ ಶರೀಫರ ಮನ ವಿಚಲಿತಗೊಳ್ಳಲಿಲ್ಲ. ಏಕ ತಂತಿಯ ತಂಬೂರಿ ಹಿಡಿದು ತನ್ನ ತತ್ವಗಳನ್ನು ಪದಗಳ ಮೂಲಕ ಬೀದಿಬೀದಿಯಲ್ಲಿ ಸಾರಿದರು. ಯಾವ ಖಲೀಫನಿಂದಲೂ ನಿರ್ಮಿಸಲು ಸಾಧ್ಯವಾಗದ ಮತೀಯ ಸಾಮರಸ್ಯದ ದೇಗುಲದ ನಿರ್ಮಾಣಕ್ಕೆ ಕಾರಣಕರ್ತರಾದರು. ಗೂಢಾರ್ಥದಲ್ಲಿ, ರೂಪಕಗಳನ್ನು ಬಳಸಿ ಇವರು ರಚಿಸಿರುವಂತಹ  ಕೋಡಗನ ಕೋಳಿ ನುಂಗಿತ್ತಾ, ಸೋರುತಿಹುದು ಮನೆಯ ಮಾಳಿಗಿ, ಬಿದ್ದಿಯಬ್ಬೇ ಮುದುಕಿ , ಹಾವು ತುಳಿದೇನೇ ಮಾನಿನಿ, ಇತ್ಯಾದಿ ತತ್ವಪದಗಳು ಕನ್ನಡಿಗರ ನಾಲಿಗೆಯಲ್ಲಿ ಸದಾ ಹರಿದಾಡುವ ನೀತಿ ಸಂಹಿತೆಗಳೇ ಸರಿ.      ಸಮಯ ಸಂದರ್ಭಗಳಿಗೆ ಅನುಗುಣವಾಗಿ ಉಪಮೆಗಳನ್ನು ಬಳಸುತ್ತಾ ಪದ ರಚಿಸಿ ಹಾಡುತ್ತಿದ್ದ ಈ ಸಂತ  ಮತೀಯ ಸಾಮರಸ್ಯದ ಹರಿಕಾರನಾಗಿ ನಮ್ಮೆಲ್ಲರ ಮನದಲ್ಲಿ ನೆಲೆ ನಿಂತ ಧೀಮಂತ. ಶಿಶುನಾಳ ಶರೀಫರು ಮತ್ತು ಅವರ ಗುರು ಗೋವಿಂದ ಭಟ್ಟರ ಸಮಾಧಿಗೆ ಜಾತಿ ಮತಗಳ ಹಂಗಿಲ್ಲದೆ ಪ್ರತಿದಿನ ಪೂಜೆ ನಡೆಯುತ್ತಿದ್ದು ಅದೊಂದು ಪವಿತ್ರ ಯಾತ್ರಾ ಸ್ಥಳವಾಗಿದೆ.  ಶಿಶುನಾಳ ಶರೀಫರ ದೇಗುಲಕ್ಕೆ ಹೋಗುವವರು  ಅಲ್ಲಿಂದ ಸುಮಾರು 20 -30 ಕಿಲೋ ಮೀಟರ್ ಅಂತರದಲ್ಲಿರುವ 11 ನೇ ಶತಮಾನದ ಚಾಲುಕ್ಯ ಶೈಲಿಯಲ್ಲಿ ನಿರ್ಮಾಣಗೊಂಡಿರುವ ಸಿದ್ಧೇಶ್ವರ ದೇವಾಲಯ, ಮುಕ್ತೇಶ್ವರ ದೇವಾಲಯಗಳನ್ನು ನೋಡಬಹುದು. ಸಮೃದ್ಧ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿರುವ ಈ ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಕಲ್ಯಾಣ ಚಾಲುಕ್ಯರ ಕಾಲದ ತಾರಕೇಶ್ವರ ದೇಗುಲ,  ಹುಕ್ಕೇರಿ ಮಠ,  ಬಂಕಾಪುರದ ನಗರೇಶ್ವರ   ದೇಗುಲ ಬಂಕಾಪುರದ ಕೋಟೆ ಇತ್ಯಾದಿ ಪ್ರೇಕ್ಷಣೀಯ  ಸ್ಥಳಗಳಿವೆ. ಸಂತ ಕನಕದಾಸರ ಹುಟ್ಟೂರಾದ ಕಾಗಿನೆಲೆ ಇರುವುದೂ ಇಲ್ಲಿಯೇ.   ‘ ಏಲಕ್ಕಿ ಕಂಪಿನ ನಾಡು ‘ ಎಂದೇ ಹೆಸರಾದ ಈ ನಾಡಿನಲ್ಲಿ ಎತ್ತ ಸಂಚರಿಸಿದರೂ ರಸ್ತೆಯ ಇಕ್ಕೆಲಗಳಲ್ಲಿರುವ ಹೊಲಗಳಲ್ಲಿನ ಬ್ಯಾಡಗಿ ಕೆಂಪು ಮೆಣಸಿನಕಾಯಿ  ಮತ್ತು ಕುಸಬಿ  ಎಣ್ಣೆ ಬೀಜದ ಹೊಲಗಳು ಕಣ್ಮನ ಸೆಳೆಯುವ ಆಕರ್ಷಣೆಗಳೇ ಸರಿ . ಆಧ್ಯಾತ್ಮಿಕ ಐತಿಹಾಸಿಕ ಮಹತ್ವದಿಂದ ಕೂಡಿರುವ  ಕರ್ನಾಟಕದ ಪ್ರಸಿದ್ಧ ಪ್ರೇಕ್ಷಣೀಯ ಸ್ಥಳವಿದು. ಜಯಲಕ್ಷ್ಮಿ ಕೆ

“ಹಿಂದೂ ಮುಸ್ಲಿಂ ಸೌಹಾರ್ದತೆಯ ತಾಣ ಶಿಶುವಿನಹಾಳ”ವಿಶೇಷ ಲೇಖನ, ಜಯಲಕ್ಷ್ಮಿ ಕೆ Read Post »

ಇತರೆ, ಜೀವನ

“ಬೂದಿ ಮುಚ್ಚಿದ ಕೆಂಡ” ವಿಶೇಷ ಲೇಖನ ಕವಿತಾ ಶ್ರೀನಿವಾಸ್‌ ನಾಯಕ್

ವಿಶೇಷ ಸಂಗಾತಿ ಕವಿತಾ ಶ್ರೀನಿವಾಸ್‌ ನಾಯಕ್ “ಬೂದಿ ಮುಚ್ಚಿದ ಕೆಂಡ” ನಿಮ್ಮೊಳಗಿನ ಸುಪ್ತ ಚೈತನ್ಯದ ಅನ್ವೇಷಣೆ​”ಬೂದಿ ಮುಚ್ಚಿದ ಕೆಂಡ” ಎಂಬುದು ಕೇವಲ ಒಂದು ಗಾದೆಯಲ್ಲ, ಅದು ಮನುಷ್ಯನ ವ್ಯಕ್ತಿತ್ವದ ಆಳವನ್ನು ಅಳೆಯುವ ಒಂದು ಸುಂದರ ರೂಪಕ.​ಕೆಂಡವು ಬೂದಿಯ ಅಡಿಯಲ್ಲಿ ಅಡಗಿದ್ದರೂ ತನ್ನ ಶಾಖವನ್ನು ಕಳೆದುಕೊಂಡಿರುವುದಿಲ್ಲ. ಹಾಗೆಯೇ, ಪ್ರತಿಯೊಬ್ಬ ಮನುಷ್ಯನಲ್ಲೂ ಜನ್ಮಜಾತವಾದ ಒಂದು ಪ್ರತಿಭೆ ಅಥವಾ ಕೌಶಲ ಇರುತ್ತದೆ. ಕೆಲಸದ ಒತ್ತಡ, ಕೌಟುಂಬಿಕ ಜವಾಬ್ದಾರಿ ಅಥವಾ ಆತ್ಮವಿಶ್ವಾಸದ ಕೊರತೆಯಿಂದಾಗಿ ಆ ಪ್ರತಿಭೆಯ ಮೇಲೆ ‘ಬೂದಿ’ ಮುಚ್ಚಿರುತ್ತದೆ. ನಮ್ಮನ್ನು ನಾವು ಅರಿತುಕೊಂಡಾಗ ಮಾತ್ರ ಆ ಕೆಂಡವನ್ನು ಮತ್ತೆ ಪ್ರಜ್ವಲಿಸಲು ಸಾಧ್ಯ.​ವ್ಯಕ್ತಿತ್ವ ವಿಕಸನದಲ್ಲಿ ‘ಮೌನ’ಕ್ಕೆ ದೊಡ್ಡ ಸ್ಥಾನವಿದೆ. ಬೂದಿ ಮುಚ್ಚಿದ ಕೆಂಡದಂತೆ ಇರುವ ವ್ಯಕ್ತಿ ಅತಿ ಹೆಚ್ಚು ಪ್ರಚಾರ ಬಯಸುವುದಿಲ್ಲ.ಅವರು ಸದ್ದಿಲ್ಲದೆ ತಮ್ಮ ಗುರಿಯತ್ತ ಕೆಲಸ ಮಾಡುತ್ತಾರೆ.ಅತಿಯಾಗಿ ಮಾತನಾಡಿ ಶಕ್ತಿಯನ್ನು ವ್ಯರ್ಥ ಮಾಡುವ ಬದಲು, ಆ ಶಕ್ತಿಯನ್ನು ಒಳಗಡೆ ಶೇಖರಿಸಿಟ್ಟುಕೊಂಡು ಸರಿಯಾದ ಸಮಯ ಬಂದಾಗ ತಮ್ಮ ಸಾಧನೆಯ ಮೂಲಕ ಉತ್ತರ ನೀಡುತ್ತಾರೆ.​ಪರಿಸ್ಥಿತಿಗಳೇ ಬೂದಿಯಿದ್ದಂತೆ​ಜೀವನದಲ್ಲಿ ಬರುವ ಸೋಲುಗಳು, ಅವಮಾನಗಳು ಅಥವಾ ಟೀಕೆಗಳು ನಮ್ಮ ವ್ಯಕ್ತಿತ್ವದ ಮೇಲೆ ಬೂದಿಯಂತೆ ಬಂದು ಬೀಳುತ್ತವೆ. ಆಗ ನಾವು ನಿಸ್ತೇಜರಾದಂತೆ ಕಾಣಬಹುದು.ಆದರೆ ನೆನಪಿಡಿ, ಬೂದಿ ಕೆಂಡವನ್ನು ತಾತ್ಕಾಲಿಕವಾಗಿ ಮುಚ್ಚಬಹುದೇ ಹೊರತು ಆರಿಸಲು ಸಾಧ್ಯವಿಲ್ಲ. ಒಳಗೆ ಹಂಬಲದ ಕಿಚ್ಚು ಜೀವಂತವಾಗಿದ್ದರೆ,ಎಂತಹ ಕಠಿಣ ಪರಿಸ್ಥಿತಿಯನ್ನೂ ಮೆಟ್ಟಿ ನಿಂತು ಮತ್ತೆ ಪುಟಿದೇಳಬಹುದು.​ಕೆಂಡ ಹೊರಬರಬೇಕಾದರೆ ಗಾಳಿಯ ಅವಶ್ಯಕತೆ ಇದೆ.ವ್ಯಕ್ತಿತ್ವ ವಿಕಸನದಲ್ಲಿ ಆ ಗಾಳಿಯೇ ‘ನಿರಂತರ ಪ್ರಯತ್ನ’.​ನಿಮ್ಮ ಒಳಗೆ ಸಾಧನೆಯ ಕಿಚ್ಚಿದೆ. ಸಂದರ್ಭಗಳು ಅದನ್ನು ಮುಚ್ಚಿರಬಹುದು.ಆದರೆ ನಿಮ್ಮ ಪ್ರತಿಭೆಯನ್ನು ನೀವು ನಂಬಿ,ಶ್ರಮದ ಗಾಳಿಯನ್ನು ಬೀಸಿದರೆ ಖಂಡಿತವಾಗಿಯೂ ನೀವು ಜಗತ್ತು ಬೆರಗಾಗುವಂತೆ ಪ್ರಕಾಶಿಸುತ್ತೀರಿ. ನಿಮ್ಮ ಅಸ್ತಿತ್ವ ಬೂದಿಯಂತಿರಲಿ, ಆದರೆ ನಿಮ್ಮ ವ್ಯಕ್ತಿತ್ವ ಕೆಂಡದಂತೆ ಪ್ರಖರವಾಗಿರಲಿಕವಿತಾ ಶ್ರೀನಿವಾಸ್ ನಾಯಕ್ ಕಾರ್ಕಳ,ಉಡುಪಿ ಜಿಲ್ಲೆ

“ಬೂದಿ ಮುಚ್ಚಿದ ಕೆಂಡ” ವಿಶೇಷ ಲೇಖನ ಕವಿತಾ ಶ್ರೀನಿವಾಸ್‌ ನಾಯಕ್ Read Post »

ಇತರೆ

ಕವಿತಾ ಶ್ರೀನಿವಾಸ್ ನಾಯಕ್ ಅವರ “ನಿರ್ಗಮಿಸುವ ಮುನ್ನ….”

ಲಹರಿ ಸಂಗಾತಿ ಕವಿತಾ ಶ್ರೀನಿವಾಸ್ ನಾಯಕ್ “ನಿರ್ಗಮಿಸುವ ಮುನ್ನ….” ​ನಾನು ಮಲಗುವ ಕೋಣೆಯಲ್ಲಿ ವಿಶಾಲವಾದ ಗಾಜಿನ ಬಾಲ್ಕನಿ ಇದೆ. ಬಾಲ್ಕನಿಯಿಂದ ಪ್ರತಿದಿನ ಉದಯಿಸುವ ಸೂರ್ಯನನ್ನು ನೋಡಲು ಸಾಧ್ಯವಾಗದಿದ್ದರೂ, ದಿನದ ಕೊನೆಯಲ್ಲಿ ಮೌನವಾಗಿ ನಿರ್ಗಮಿಸುವ ಸೂರ್ಯ ಮಾತ್ರ ಅದ್ಭುತವಾಗಿ ಕಾಣುತ್ತಾನೆ.​ಆದರೆ, ಆ ಸುಂದರ ಸಂಜೆಯ ಕೆಂದಾವರೆ ಬಣ್ಣವನ್ನು ಕಣ್ತುಂಬಿಕೊಳ್ಳುವ ಮೊದಲು, ಸೂರ್ಯನ ತೀಕ್ಷ್ಣವಾದ ಕಿರಣಗಳ ಶಾಖವನ್ನು ಸಹಿಸಿಕೊಳ್ಳಲೇಬೇಕು. ಆ ತಾಪ ಮೈಗೆ ತಾಗಿದಾಗ ದೇಹಕ್ಕೆ ಕೊಂಚ ಘಾಸಿಯಾದ್ದದಂತು ನಿಜ. ಆದರೆ ಆ ಸುಡುವ ಹೊತ್ತನ್ನು ತಾಳ್ಮೆಯಿಂದ ಕಳೆದರೆ ಮಾತ್ರ, ಆನಂತರ ಬರುವ ತಂಪಾದ, ಪ್ರಶಾಂತವಾದ ಸೂರ್ಯಾಸ್ತದ ಕ್ಷಣಗಳನ್ನು ಅನುಭವಿಸಲು ಸಾಧ್ಯ.​ನಮ್ಮ ಬದುಕು ಕೂಡ ಹೀಗೆಯೇ ಅಲ್ಲವೇ? ನೆಮ್ಮದಿಯ ನಾಳೆಗಳಿಗಾಗಿ ಇಂದಿನ ಸುಡುವ ಕಷ್ಟಗಳನ್ನು ನಾವು ಸಹಿಸಲೇಬೇಕು. ಆ ತೀಕ್ಷ್ಣವಾದ ಹೋರಾಟದ ನಂತರ ಸಿಗುವ ಸುಖವೇ ಅತಿ ಹೆಚ್ಚಿನ ಮೌಲ್ಯವನ್ನು ಹೊಂದಿರುತ್ತದೆ. ಸುಂದರವಾದದ್ದನ್ನು ಪಡೆಯಲು ಸ್ವಲ್ಪ ನೋವನ್ನು ಅನುಭವಿಸುವುದು ಪ್ರಕೃತಿಯ ಅಲಿಖಿತ ನಿಯಮ.​​”ವಾಸ್ತವವಾಗಿ, ಆ ಸೂರ್ಯನ ತೀಕ್ಷ್ಣತೆ ನಮ್ಮನ್ನು ದಣಿಸುವುದಕ್ಕಲ್ಲ, ಬದಲಾಗಿ ನಮ್ಮ ತಾಳ್ಮೆಯನ್ನು ಪರೀಕ್ಷಿಸುವುದಕ್ಕೆ. ಕಿಟಕಿಯ ಗಾಜಿನಿಂದ ನುಗ್ಗಿ ಬರುವ ಆ ಉರಿ ಬೆಳಕು, ಕತ್ತಲಾಗುವ ಮೊದಲು ನಾವೆಷ್ಟು ಗಟ್ಟಿಯಾಗಿ ನಿಲ್ಲಬಲ್ಲೆವು ಎಂದು ಕೇಳುವಂತಿದೆ.​ಆ ನೋವನ್ನು ದಾಟಿ ನಿಂತಾಗಲೇ, ಆಕಾಶವು ಬಣ್ಣಗಳ ಹಬ್ಬವನ್ನು ಆಚರಿಸುವುದು. ನಮಗೂ ಅಷ್ಟೇ, ಕಷ್ಟದ ಬಿಸಿ ತಾಕಿದಾಗ ಕುಗ್ಗದೆ ಕುಳಿತರೆ, ದಿನದ ಕೊನೆಯಲ್ಲಿ ನೆಮ್ಮದಿಯ ತಂಗಾಳಿ ಮೈದಡವುವುದು ಖಚಿತ. ಒಮ್ಮೊಮ್ಮೆ ಸುಂದರವಾದದ್ದನ್ನು ಅನುಭವಿಸಲು, ನಮಗೆ ಇಷ್ಟವಿಲ್ಲದಿದ್ದರೂ ಅನಿವಾರ್ಯವಾದ ನೋವನ್ನು ಪ್ರೀತಿಯಿಂದಲೇ ಸ್ವೀಕರಿಸಬೇಕಾಗುತ್ತದೆ.” ಕವಿತಾ ಶ್ರೀನಿವಾಸ್ ನಾಯಕ್

ಕವಿತಾ ಶ್ರೀನಿವಾಸ್ ನಾಯಕ್ ಅವರ “ನಿರ್ಗಮಿಸುವ ಮುನ್ನ….” Read Post »

ಇತರೆ

“ಹೊಗಳಿ ಹೊನ್ನ ಶೂಲಕ್ಕೇರಿಸದಿರಿ…. ಅಮ್ಮ ಕೂಡ ಸ್ವತಂತ್ರ ವ್ಯಕ್ತಿತ್ವ” ವೀಣಾ ಹೇಮಂತ್ ಗೌಡ ಪಾಟೀಲ್

ವೀಣಾ ಹೇಮಂತ್ ಗೌಡ ಪಾಟೀಲ್ “ಹೊಗಳಿ ಹೊನ್ನ ಶೂಲಕ್ಕೇರಿಸದಿರಿ…. ಅಮ್ಮ ಕೂಡ ಸ್ವತಂತ್ರ ವ್ಯಕ್ತಿತ್ವ” ( ಆಕೆಯ ವ್ಯಕ್ತಿತ್ವದ ಅದುಮಿಟ್ಟ ಭಾವವನ್ನು ಸಂಭ್ರಮಿಸಲು ಅವಕಾಶ ಕಲ್ಪಿಸಿ) ಈ ದಿನ ಅಮ್ಮಂದಿರ ದಿನ. ವಿಶ್ವದಾದ್ಯಂತ ಅಮ್ಮಂದಿರ ದಿನವನ್ನು ಎಲ್ಲರೂ ಆಚರಿಸುತ್ತಾರೆ. ಅಮ್ಮನ ಮಮತೆ, ಪ್ರೀತಿ, ತ್ಯಾಗ, ಕರ್ತವ್ಯಪರತೆಯನ್ನು ಹಾಡಿ ಹೊಗಳುತ್ತಾರೆ. ಆಕೆಯನ್ನು ದೇವತೆಯ ಸ್ಥಾನದಲ್ಲಿ ಇಟ್ಟು ಪೂಜಿಸುತ್ತಾರೆ. ಆಕೆಯ ಗುಣಗಾನ ಮಾಡಿ, ಹಾಡಿ ಹೊಗಳುತ್ತಾರೆ.ಝೆನ್ ಜಿ ಮಕ್ಕಳಿಂದ ಹಿಡಿದು ಇಂದಿನ ಸಾಮಾಜಿಕ ಜಾಲತಾಣಗಳ ಬಳಕೆದಾರರೆಲ್ಲರೂ ತಮ್ಮ ತಮ್ಮ ಮೊಬೈಲ್ನ ಸ್ಟೇಟಸ್ಗಳಲ್ಲಿ ತಾಯಿಯ ಚಿತ್ರವನ್ನು ಹಾಕಿ ನನ್ನ ಹಿಂದಿನ ಶಕ್ತಿ, ನನ್ನ ಸರ್ವಸ್ವ ಎಂದು ಹೇಳುವ ಮಕ್ಕಳ ಸಂಖ್ಯೆ ಕೋಟಿ ಇದ್ದರೆ ಅಯ್ಯೋ ಅಲ್ಲಿ ಹಾಕಿದ್ರೆ ಮಾತ್ರ ತಾಯಿಯ ಮೇಲೆ ಪ್ರೀತಿ ಇರುತ್ತದೆಯೇ ಎಂದು ತಾವು ಸ್ಟೇಟಸ್ ಗಳಲ್ಲಿ ಏನನ್ನೂ ಹಾಕದೆ ಇರುವ ಕಾರಣವನ್ನು ಹೇಳುವ ಮಕ್ಕಳು ಕೂಡ ಇದ್ದಾರೆ.ಅಮ್ಮನಿಗೆ ಒಂದು ಹೂವನ್ನು ಅರ್ಪಿಸುವ, ಒಂದು ಕಾಣಿಕೆಯನ್ನು ತಂದು ಕೊಡುವ, ಒಂದು ಸೀರೆಯನ್ನು ಗಿಫ್ಟ್ ನೀಡುವ ಮಕ್ಕಳು ಇದ್ದಾರೆ.ತಾಯಿ ತಮಗೆ ನೀಡಿದ ಸಮಯದ ಸಾವಿರಾರು ಘಂಟೆಗಳಲ್ಲಿ ಕೇವಲ ಒಂದು ಗಂಟೆ ಆಕೆಗೆ ನೀಡದ ಮಕ್ಕಳು ಕೇವಲ ಸ್ಟೇಟಸ್ ಹಾಕಿ ಸಂಭ್ರಮಿಸುವುದು ಯಾವ ನ್ಯಾಯ? ತನ್ನಿಡಿ ಬದುಕನ್ನು ಗಂಡ ಮನೆ ಮಕ್ಕಳು ಕೌಟುಂಬಿಕ ಜವಾಬ್ದಾರಿ ಎಂದು ಎಲ್ಲವನ್ನು ತನ್ನ ತಲೆ ಮೇಲೆ ಹೇರಿಕೊಳ್ಳುವ ಹೆಣ್ಣುಮಗಳನ್ನು ಗೌರವಿಸುವ ರೀತಿ ಇದಲ್ಲ?ನಮ್ಮೆಲ್ಲರ ನಿರೀಕ್ಷೆಗಳ ಭಾರಕ್ಕೆ ಯಾರದೋ ಮಗಳು, ಯಾರದೋ ಪತ್ನಿ, ಯಾರದ್ದೋ ಪುತ್ರಿ, ಯಾರದೋ ಸಹೋದರಿಯಾಗಿ ಬಾಳುವ ಹೆಣ್ಣು ಮಗಳಿಗೆ ತನ್ನದು ಎನ್ನುವ ಸ್ವಂತ ಮನೆ ಇಲ್ಲ. ಆಸೆ ಆಕಾಂಕ್ಷೆಗಳಿಗೆ ಬೆಲೆ ಇಲ್ಲ. ಕನಸುಗಳಿಗೆ ಬೆಂಬಲವಿಲ್ಲ. ನನಸಾಗಿಸಿಕೊಳ್ಳಲು ಸಾಧ್ಯವಾಗದಂತೆ ಆಕೆಯ ಕನಸಿನ ಹಕ್ಕಿಯ ರೆಕ್ಕೆಯನ್ನು ಮುರಿದು ಬಿಡುವರಲ್ಲ. ಆಕೆಯಿಂದಲೇ ಇಹ ಪರವನ್ನು ಕಾಣುವ, ಬೆಳಗಿನಿಂದ ಬೈಗಿನವರೆಗೂ ತಮ್ಮೆಲ್ಲ ಕೆಲಸಗಳಿಗೆ ಆಕೆಯ ಮೇಲೆ ಭಾವನಾತ್ಮಕವಾಗಿ, ಕೌಟುಂಬಿಕವಾಗಿ, ಧಾರ್ಮಿಕವಾಗಿ ಸಾಮಾಜಿಕವಾಗಿ ಅವಲಂಬಿತರಾಗಿರುವ ನಾವು ಕೇವಲ ಆರ್ಥಿಕ ಅವಲಂಬನೆಯನ್ನು ಆಕೆ ನಮ್ಮ ಮೇಲೆ ಹೊಂದಿರುವ ಕಾರಣ ಆಕೆಯನ್ನು ಅವಲಂಬಿತಳು ಎಂಬಂತೆ ಬಿಂಬಿಸುವುದು ಯಾವ ನ್ಯಾಯ? ನಿಜವಾಗಿಯೂ ಇಲ್ಲಿ ಯಾರ ಮೇಲೆ ಯಾರು ಅವಲಂಬಿತರಾಗಿದ್ದಾರೆ ಎಂಬುದು ಪ್ರಶ್ನೆಯಾಗಿಯೇ ಉಳಿಯುತ್ತದೆ ?.. ನೂರಕ್ಕೆ ನೂರರಷ್ಟು ಹೆಣ್ಣು ಮಕ್ಕಳ ಮೇಲೆ ಅವಲಂಬಿತರಾಗಿರುವ ಬಹುತೇಕ ಎಲ್ಲರೂ ಕೇವಲ ಒಂದು ಶೇಕಡ ಆಕೆ ತಮ್ಮ ಮೇಲೆ ಆರ್ಥಿಕವಾಗಿ ಅವಲಂಬಿತಳಾಗಿರುವುದನ್ನೇ ದೊಡ್ಡದಾಗಿಸುವುರು ಹೆಣ್ಣು ಮಕ್ಕಳ ಶೋಚನೀಯ ಪರಿಸ್ಥಿತಿಯನ್ನು, ಪಿತೃ ಸತ್ತಾತ್ಮಕ ವ್ಯವಸ್ಥೆಯ ಕ್ರೌರ್ಯವನ್ನು ತೋರಿಸುತ್ತದೆ.ಇಲ್ಲಿ ಹೆಣ್ಣಾಗಲಿ ಗಂಡಾಗಲಿ ಪರಸ್ಪರಾವಲಂಬಿಗಳು… ಅನಾದಿಕಾಲದಿಂದಲೂ ಸಾಮಾಜಿಕವಾಗಿ ತಮಗೆ ಕೊಡಮಾಡಿದ ಜವಾಬ್ದಾರಿಗಳನ್ನು ನಿರ್ವಹಿಸುತ್ತಾ ಬಂದವರು ಆದರೆ ನಂತರದ ದಿನಗಳಲ್ಲಿ ಹೆಣ್ಣು ಮಕ್ಕಳನ್ನು ಕ್ಷುಲ್ಲಕವಾಗಿ ಕಾಣುವ ಅವರ ಅಸ್ಮಿತೆಯನ್ನು ಕಡೆಗಣಿಸುವ ಅವರನ್ನು ತೇಜೋವಧೆ ಮಾಡುವ ಹುನ್ನಾರಗಳು ಆರಂಭವಾದವು. ಭಾರತೀಯ ಸಮಾಜದ ಪಿತೃ ಸತ್ತಾತ್ಮಕ  ದೃಷ್ಟಿಕೋನವು ಇದಕ್ಕೆ ಪೂರಕವಾಗಿ ಹೆಣ್ಣು ಮಕ್ಕಳನ್ನು ಎರಡನೆಯ ದರ್ಜೆಯ ಪ್ರಜೆಯನ್ನಾಗಿಸಿತು. ಅವರನ್ನು ಅಕ್ಷರಶಃ ತೊತ್ತಿನ ಸ್ಥಾನಕ್ಕೆ ಇಳಿಸಿತು. ಆಗಾಗ ಅಲ್ಲಲ್ಲಿ ಇದರ ವಿರುದ್ಧವಾಗಿ ಒಬ್ಬಿಬ್ಬರು ಹೆಣ್ಣು ಮಕ್ಕಳು ಧ್ವನಿ ಎತ್ತಿದರಾದರೂ ಅದನ್ನು ವ್ಯವಸ್ಥಿತವಾಗಿ ಸಂಪ್ರದಾಯದ ಹೆಸರಿನಲ್ಲಿ ಅಲ್ಲಲ್ಲಿಯೇ ಅಡಗಿಸಲಾಯಿತು. ಇದನ್ನು ಮೀರಿ ತಮ್ಮ ವೈಯಕ್ತಿಕ ಹಿತಾಸಕ್ತಿಗಳನ್ನು ನೋಡಿಕೊಂಡವರನ್ನು ಕೆಟ್ಟದಾಗಿ ನಡೆಸಿಕೊಂಡರು.ತಮಗಿರುವ ಜವಾಬ್ದಾರಿಗಳು, ತ್ಯಾಗಗಳು, ಕುಟುಂಬವೇ ಮೊದಲು ಎಂಬ ಸಾಮಾಜಿಕ ಒತ್ತಡಗಳ ನಡುವೆ ಹೆಣ್ಣು ಮಕ್ಕಳು ತಣ್ಣಗಿನ ಕ್ರೌರ್ಯವನ್ನು ಎದುರಿಸುತ್ತಾ ವಿರೋಧಿಸುವ ಗುಣವನ್ನೇ ಕಳೆದುಕೊಂಡರು. ತಮ್ಮ ಕನಸುಗಳನ್ನು ಬದಿಗೊತ್ತಿ, ಕುಟುಂಬದ ಮರ್ಯಾದೆಯ ದೃಷ್ಟಿಯಿಂದ ಸರಿ ಎಂದು ತೋರಿದ್ದನ್ನೇ ಮಾಡುವ ಮೂಲಕ ತಮ್ಮತನವನ್ನು ಕಳೆದುಕೊಂಡರು. ಬದುಕಿನಿಂದ ಹೆಚ್ಚಿನದನ್ನು ಅಪೇಕ್ಷಿಸದೆ ತಮ್ಮ ಕುಟುಂಬ, ತಮ್ಮ ಮಕ್ಕಳು ಎಂದು ಎಲ್ಲರ ಬದುಕನ್ನು ನೇರ್ಪಡಿಸುವ ನಿಟ್ಟಿನಲ್ಲಿ ತಮ್ಮನ್ನು ತಾವು ಗಾಣಕ್ಕೆ ಕಟ್ಟಿದ ಎತ್ತಿನಂತೆ ಭಾವಿಸಿ ಕಾರ್ಯನಿರ್ವಹಿಸಿದರು. ತಮ್ಮ ವೈಯುಕ್ತಿಕ ಆಸೆ ಆಕಾಂಕ್ಷೆಗಳು ಅವರಿಗೆ ನಗಣ್ಯವಾಗಿ ಕನಿಷ್ಠ ಪಕ್ಷ ತಮ್ಮ ಮಕ್ಕಳಾದರೂ ಚೆನ್ನಾಗಿ ತಮ್ಮ ಬದುಕನ್ನು ರೂಪಿಸಿಕೊಳ್ಳಲಿ ಎಂದು ಭಾವಿಸಿ ಗಂಧದ ಕೊರಡಿನಂತೆ ತಮ್ಮನ್ನು ತಾವು ಸವೆಸಿಕೊಂಡು ಉಳಿದವರ ಬದುಕಿಗೆ ಸುಗಂಧವಾದರು. ತನ್ನನ್ನು ತಾನುರಿಸಿಕೊಂಡು ಇತರರಿಗೆ ಬೆಳಕಾಗುವ ದೀಪವಾಗಿ ಬೆಳಗಿದರು.ಸಾಕು…. ಇನ್ನಾದರೂ ಹೆಣ್ಣು ಮಕ್ಕಳನ್ನು ಕಡೆಗಣಿಸುವ ಅವರ ಆಸೆ-ಆಕಾಂಕ್ಷೆಗಳಿಗೆ ತಣ್ಣೀರೆರಚುವ ಮತ್ತು ವರ್ಷದ ಯಾವುದೋ ಒಂದು ದಿನ ಅವರ ತ್ಯಾಗವನ್ನು, ಪ್ರೀತಿಯನ್ನು ಕರ್ತವ್ಯ ಪ್ರಜ್ಞೆಯನ್ನು  ಅಮ್ಮಂದಿರ ದಿನವನ್ನಾಗಿ ಆಚರಿಸುವ ಈ ಪದ್ಧತಿಯನ್ನು ಬಿಟ್ಟುಬಿಡೋಣ.ನಮ್ಮ ತಾಯಿಯೂ ಕೂಡ ಓರ್ವ ಹೆಣ್ಣು ಮಗಳು. ಓರ್ವ ಸ್ವತಂತ್ರ ವ್ಯಕ್ತಿ, ತನ್ನದೇ ಆದ ವೈಯಕ್ತಿಕ ಆಸೆ ಆಕಾಂಕ್ಷೆಗಳನ್ನು ಹೊಂದಿದ್ದ ವ್ಯಕ್ತಿ ಎಂಬುದನ್ನು ಮೊದಲು ಗುರುತಿಸೋಣ. ಆಕೆಯ ವ್ಯಕ್ತಿತ್ವವನ್ನು ಸಂಭ್ರಮಿಸುವುದರ ಜೊತೆ ಜೊತೆಗೆ  ಚಿಕ್ಕಂದಿನಿಂದ ಕಂಡಿರುವ ಕನಸನ್ನು ಈಗಲಾದರೂ ನನಸಾಗಿಸುವ ಪ್ರಯತ್ನಕ್ಕೆ ನಾವು ನಮ್ಮ ಕೈಲಾದಷ್ಟು ಸಹಾಯ ಮಾಡೋಣ. ಮಮತೆಯ, ಮಾತೃತ್ವದ ಪ್ರತೀಕವಾದ ಆಕೆಯೂ ಕೂಡ ಒಂದೊಮ್ಮೆ ಹೊಂದಿರಬಹುದಾದ ತನ್ನದೇ ಆದ ಆಸೆ ಆಕಾಂಕ್ಷೆಗಳನ್ನು ಅರಿತು ಅವುಗಳನ್ನು ಈಡೇರಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಪಡೋಣ.ಅಮ್ಮ ಎಂದರೆ ಕೇವಲ ತ್ಯಾಗವಲ್ಲ, ಪ್ರೀತಿ, ವಾತ್ಸಲ್ಯಗಳ ಹಾಗೂ ಮಮತೆಯ ಮೂರ್ತಿಯಲ್ಲ. ಎಲ್ಲಕ್ಕೂ ಮುನ್ನ ಆಕೆ ಓರ್ವ ಹೆಣ್ಣು ಮಗಳು ನಮ್ಮ ನಿಮ್ಮೆಲ್ಲರಂತೆ ಆಕೆಯಲ್ಲಿಯೂ ಇರಬಹುದು. ಆಕೆಯ ಚಿಕ್ಕ ಪುಟ್ಟ ಆಸೆಗಳು,ಆಕಾಂಕ್ಷೆಗಳು, ಅದುಮಿಟ್ಟಿರುವ ಕನಸುಗಳನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಆಕೆಗೆ ಜೊತೆಯಾಗೋಣ. ಅತ್ಯಂತ ಪ್ರೀತಿಯಿಂದ ಆಕೆಯನ್ನು ತಬ್ಬಿಕೊಂಡು ಐ ಲವ್ ಯು ಅಮ್ಮ ಎಂದು ಹೇಳುವುದು ನಿಜವಾದ ಪ್ರೀತಿಯ ಅಭಿವ್ಯಕ್ತಿ ಎಂದು ನಾವು ಭಾವಿಸುವುದು ಬೇಕಿಲ್ಲ… ನಿಜವಾದ ಪ್ರೀತಿಯೆಂದರೆ ನಿಸ್ವಾರ್ಥದಿಂದ ತಮ್ಮೆಲ್ಲವನ್ನು ನಮಗಾಗಿ ಬಿಟ್ಟು ಕೊಟ್ಟಿರುವ ನಮ್ಮ ತಾಯಂದಿರದು. ತಾಯಂದಿರ ದಿನದಂದು ಭಾವನಾತ್ಮಕವಾಗಿ ತಾಯಿಯ ಬಗ್ಗೆ ಹೇಳುತ್ತಾ ತಾಯ್ತನ ತಂದು ಕೊಡುವ ನೂರೆಂಟು ತ್ಯಾಗ ಬಲಿದಾನದ ಕಥೆಗಳ ಮೂಲಕ ಜಾಹೀರು ಮಾಡುವ ಬದಲಾಗಿ ಹೆಣ್ಣು ಮಕ್ಕಳನ್ನು ಅವರವರ ಪಾಡಿಗೆ ಬಿಟ್ಟುಬಿಡಬೇಕು. ಅವರದ್ದೇ ರೀತಿಯಲ್ಲಿ ಅವರು ತಮ್ಮ ಬದುಕನ್ನು ರೂಪಿಸಿಕೊಳ್ಳಲು ಸಹಾಯ ಮಾಡಬೇಕು. ಅತ್ಯಂತ ಅಸಹಾಯಕ ಸ್ಥಿತಿಯಲ್ಲಿದ್ದ ತನ್ನ ಮಗುವನ್ನು , ಇಂದಿನ ಈ ಸ್ವಾವಲಂಬಿ ಬದುಕಿಗೆ ಸಿದ್ದ ಮಾಡಲು ಅವರನ್ನು ಪಾಲಿಸಿ ಪೋಷಿಸಿ ಸದಾ ಅವರ  ಕೈ ಹಿಡಿದು ಇಲ್ಲಿಯತನಕ ನಡೆಸಿರುವ ತಾಯಂದಿರನ್ನು ಪರಾವಲಂಬಿಯಾಗಿಸದೆ, ಈ ಹಿಂದೆ ನಮ್ಮಲ್ಲಿ ಆಕೆ ತುಂಬಿದ ಮಾನಸಿಕ, ಭಾವನಾತ್ಮಕ ಕೌಟುಂಬಿಕ ಹಾಗೂ ವಾಸ್ತವಿಕವಾದ ಆರ್ಥಿಕ ಬೆಂಬಲವನ್ನು ನಾವು ನೀಡಲೇಬೇಕು.ಆ ಮೂಲಕ ತಾಯಂದಿರು ಮತ್ತಷ್ಟು ಸಶಕ್ತರಾಗಿ, ಸಚೇತನರಾಗಿ ನಮ್ಮ ಬಾಳಿನ ಬೆಳಕಾಗಿ ಪ್ರಖರವಾಗಿ ಬೆಳಗುವಂತೆ ಪೋಷಿಸಬೇಕು. ಅವರಿಗೆ ತಮ್ಮ ಕುರಿತು ಯೋಚಿಸುವಂತೆ ಪ್ರೇರೇಪಿಸಬೇಕು. ಎಲ್ಲರಿಗೂ ಎಲ್ಲವನ್ನೂ ಮಾಡುವ ತಾಯಿ ತನ್ನ ವೈಯಕ್ತಿಕ ಕಾಳಜಿಯನ್ನು ಮಾಡಿಕೊಳ್ಳಬೇಕು. ಹಾಗೆ ತನ್ನ ಕಾಳಜಿಯನ್ನು  ಮಾಡಿಕೊಳ್ಳದೆ ಆತ್ಮ ದ್ರೋಹ ಮಾಡಿಕೊಳ್ಳಬಾರದು.  ನಿಜ! ಪೋಷಣೆಯ ಅಗತ್ಯ ಕೇವಲ ಮಕ್ಕಳಿಗೆ ಮಾತ್ರವಲ್ಲ…. ತಾಯಂದಿರಿಗೂ ಇದೆ ಎಂಬ ಸತ್ಯವನ್ನು ಅರಿತು ಅವರ ಸಂತೋಷಕ್ಕೆ ಕಾರಣವಾಗಬೇಕು. ಆಗಲೇ ತಾಯಂದಿರ ದಿನಾಚರಣೆಗೆ ನಿಜವಾದ ಸಾರ್ಥಕತೆ ಹಾಗೂ ಅರ್ಥಪೂರ್ಣತೆ ದೊರೆಯುವುದು…ಏನಂತೀರಾ ಸ್ನೇಹಿತರೇ ? ವೀಣಾ ಹೇಮಂತ್ ಗೌಡ ಪಾಟೀಲ್

“ಹೊಗಳಿ ಹೊನ್ನ ಶೂಲಕ್ಕೇರಿಸದಿರಿ…. ಅಮ್ಮ ಕೂಡ ಸ್ವತಂತ್ರ ವ್ಯಕ್ತಿತ್ವ” ವೀಣಾ ಹೇಮಂತ್ ಗೌಡ ಪಾಟೀಲ್ Read Post »

ಇತರೆ

ಡಾ.ಭಾರತಿ‌ ಅಶೋಕ್ ವಿಶೇಷ ಬರಹ “ಅಮ್ಮಾ….”

ಅಮ್ಮನ ಸಂಗಾತಿ ಡಾ.ಭಾರತಿ‌ ಅಶೋಕ್ “ಅಮ್ಮಾ….” ಅಮ್ಮಾ…. ಅವಳು ಅವಳನ್ನೇ ಮರೆತುಮಗುವ ಮೆರೆಸುವವಳುಅರ್ಥಪೂರ್ಣ ಮಾಂತ್ರಿಕಳುಅವಅಮ್ಮಾ,ಮಾ, ಮಾತೃ, ತಾಯಿ  ತಾಳ್ಮೆಯೇ ಮೈವೆತ್ತವಳು. “ದೇವರೇ  ಧನ್ಯವಾದಗಳು ನಮ್ಮನ್ನು ಮಾತ್ರ ನಿನ್ನ ಅನುವಾದಕರನ್ನಾಗಿ ಆಯ್ಕೆ ಮಾಡಿಕೊಂಡದ್ದಕ್ಕೆ” ಎನ್ನುವ ಕವಿಯ ಕೃತಜ್ಞತೆಗೆ ಅರ್ಥವಿದೆ. ಒಡಲುರಿಯ ಕತ್ತರಿಸಿ ಬೊಗಸೆಯಲ್ಲಿಟ್ಟು ಸದಾ ಕಣ್ಗಾವಲಿರಿಸಿ, ಕಾಯುವ ಜೀವ ಅಮ್ಮಾ. ಗರ್ಭದಲಿ ಮೂಡಿದ ಕ್ಷಣವೇ ಶುರುವಾಗುವುದು ಅಮ್ಮನ ಮಮಕಾರದ ತುಡಿತ.ಒಂದಿನಿತು ಕದಲದ ಚಿತ್ತ. ಮೂಡಿದ ಮಾಂಸ ಮುದ್ದೆಯೊಂದಿಗಿನ ಸಂವಾದ ಸದಾ. ಹೃದಯದ ಜೋಡಿ ಮಿಡಿತ ನವಮಾಸವೂ. ಪ್ರಸವದಲಿ  ಅವಳು  ಮರು ಹುಟ್ಟುವಳು ಮಗುವಿನೊಂದಿಗೆ.  ಇಲ್ಲಿಂದ ಎಲ್ಲ ಮಗುವಿಗೆ. ಪ್ರಸವದ ನೋವ ನುಂಗಿದವಳು ಈಗ ಹಸಿವ ನುಂಗುವಳು.ಜಗದ ನೋವೆನಗಿರಲೆಂದು ಅದರ ನಲಿವೆಲ್ಲ ಮಗುವಿಗಿಟ್ಟು ತಣ್ಣನೆ ನಗುವಳು – ಮಗುವ ಚಲನೆ ಕಂಡು. ಮಗು ಅತ್ತರೆ ತಾನು ಅತ್ತು, ನಕ್ಕರೆ ಸುಖಿಸಿ ನೋವ ಮರೆವಳು. ಬೆಳೆದ ಮಗು ಸಮಾಜಮುಖಿಯಾದರೆ ಕಿರೀಟ ಅಪ್ಪನಿಗೆ, ಇಲ್ಲದಿರೆ ನಿಂದೆಗೆ ಸದಾ ಸಖಿ. ಅನವರತ ತನ್ನವರ ಒಳಿತಿಗೆ ಮಿಡಿವ ಅಮ್ಮನ  ಒಳಿತು ಕೇಳುವ ಕಿವಿಗಳಿಗೆ ಬರ.ಅದ್ಯಾವುದ ಲೆಕ್ಕಿಸದ ಅವಳು  ಸದಾ ಹಸನ್ಮುಖಿ. ಜಗದ ಜನನಿ ತಾಯಿ.ನಿತ್ಯದ ಬದುಕು ಅವಳ ಛಾಯೆ, ಇಲ್ಲದಿಹ ಬದುಕಿಗೆಲ್ಲಿ ಠಾವು.ಅವಳು ಸದಾ ವಂದಿತಳು ಜಗದಿ ಪೂಜಿಪಳು. ಡಾ. ಭಾರತಿ ಅಶೋಕ್

ಡಾ.ಭಾರತಿ‌ ಅಶೋಕ್ ವಿಶೇಷ ಬರಹ “ಅಮ್ಮಾ….” Read Post »

You cannot copy content of this page

Scroll to Top