ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ, ಜೀವನ

ನಮ್ಮ ಮಕ್ಕಳು ಮಕ್ಕಳಲ್ಲ

ಸರಿತಾ ಮಧು ಮಕ್ಕಳಿಗಾಗಿ ಹಂಬಲ ಎಲ್ಲರದು. ಅಂದಿನಿಂದ ಇಂದಿನವರೆಗೂ ಮಕ್ಕಳು ಮನೆಯ ನಂದಾದೀಪ. ಮಕ್ಕಳಿರಲವ್ವ ಮನೆತುಂಬ ಎನ್ನುವ ಕಾಲ ಸರಿದು ಆರತಿಗೊಬ್ಬಳು ಕೀರ್ತಿ ಗೊಬ್ಬ , ತದನಂತರ ನಾವಿಬ್ಬರು ನಮಗೊಂದು ಮಗು ಅನ್ನುವ ಕಾಲಘಟ್ಟದಲ್ಲಿದ್ದೇವೆ. ಇದೆಲ್ಲವೂ ಸರಿಯಷ್ಟೇ ಆಧುನಿಕತೆಯ ಬೆನ್ನನೇರಿದ ಈಗಿನವರು ಮಗುವಿನ್ನೂ ಗರ್ಭದಲ್ಲಿರುವಾಗಲೇ ವಿದ್ಯಾಭ್ಯಾಸದ ವಿಚಾರಕ್ಕೆ ತಲೆಬಿಸಿ ಮಾಡಿಕೊಳ್ಳುತ್ತಾರೆ.ಮೊದಲೆಲ್ಲಾ ಹೀಗಿರುತ್ತಿತ್ತೇ? ಅವಿಭಕ್ತ ಕುಟುಂಬಗಳಲ್ಲಿ ಅನೌಪಚಾರಿಕವಾಗಿ ಪ್ರಾಥಮಿಕ ಶಿಕ್ಷಣ ಆರಂಭವಾಗುತ್ತಿತ್ತು.ಐದುವರ್ಷಗಳು ಪೂರ್ಣ ತುಂಬುವವರೆಗೂ ಬಾಲ್ಯಾವಸ್ಥೆಯ ಎಲ್ಲಾ ಸುಖಗಳನ್ನು ಸಂಪೂರ್ಣ ಬಾಚಿಕೊಳ್ಳುತ್ತಿದ್ದೆವು. ಮನೆಯ ಅಜ್ಜ ಅಜ್ಜಿ, ದೊಡ್ಡಪ್ಪ ದೊಡ್ಡಮ್ಮ, ಮಾವ ಅತ್ತೆ, ಚಿಕ್ಕಪ್ಪ ಚಿಕ್ಕಮ್ಮ ,ಅಣ್ಣ ಅಕ್ಕ , ಅಪ್ಪ ಅಮ್ಮ ರೊಂದಿಗೆ ನಲಿವಿನ ಸಮಯ ಕಳೆಯಲು ಅವಕಾಶವಿತ್ತು. ಹಗಲಿನಲ್ಲಿ ಹಾಡುವ ಹಕ್ಕಿಯೂ,ಓಡುವ ಎಳೆಗರುವೂ, ಮೂಡಣದ ಸೂರ್ಯ, ಹಸಿರೆಲೆಯ ಗಿಡಮರಗಳು, ಬಣ್ಣ ಬಣ್ಣದ ಹೂಗಳು, ಮಕರಂದ ಹೀರುವ ದುಂಬಿಗಳು ಒಂದಲ್ಲ ಎರಡಲ್ಲ . ಎಂಥ ಚಂದವಿತ್ತು ನಮ್ಮ ಬಾಲ್ಯ.ಸಂಜೆಯಾದೊಡನೆ ತಿಂಗಳ ಬೆಳಕಿನ ಅಂಗಳದಲ್ಲಿ ಅಜ್ಜನೇ ಮೇಷ್ಟ್ರು. ಅವನ ಬಾಯಿ ಲೆಕ್ಕಾಚಾರದ ಮುಂದೆ ಈಗಿನ ಕ್ಯಾಲ್ಕುಲೇಟರ್ ಸಹಾ ಹಿಂದೆಬೀಳುತ್ತಿತ್ತು.ಎಷ್ಟು ಸರಾಗವಾಗಿ ಮಗ್ಗಿಗಳನ್ನು ನನ್ನಜ್ಜ ಹೇಳುತ್ತಿದ್ದ. ಅಜ್ಜಿಯೇ ಕಥೆಯ ನಿರೂಪಕಿಯಾಗಿ ಲಾಲಿ ಹಾಡುವವರೆಗೂ ರಾತ್ರಿಯ ಸಮಯ ಕಳೆದದ್ದೇ ತಿಳಿಯುತ್ತಿರಲಿಲ್ಲ.    ಟಿವಿ, ಮೊಬೈಲ್ ಗಳ  ಹಾವಳಿಯಿಲ್ಲದ ನಿರಾತಂಕ ಜೀವನ. ಐದು ವರ್ಷಗಳ ನಂತರವೇ ಊರಿನ ಕನ್ನಡ ಶಾಲೆಗೆ ಹೋಗುವುದು. ಹೆಚ್ಚಿನ ಹೊರೆಯಿಲ್ಲದ ಸರಳ ಕಲಿಕೆ ಆದರೂ ಶಾಶ್ವತ ಕಲಿಕೆಯಾಗಿತ್ತು.   ಬದಲಾದ ಕಾಲಕ್ಕೆ ಎಲ್ಲವೂ ಮರೆಯಾಯಿತು.ಈಗಂತೂ ಹುಟ್ಟುವ ಮೊದಲೇ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗೆ ಹೆಸರು ನೊಂದಾಯಿಸಿ ತಮ್ಮ ಮಗುವಿಗೆ ಸೀಟೊಂದನ್ನು ಕಾಯ್ದಿರಿಸಲಾಗುತ್ತದೆ. ರಾತ್ರಿಯಿಡೀ ಸರತಿಸಾಲಿನಲ್ಲಿ ನಿಂತು ತಾವು ಕಷ್ಟಪಟ್ಟ ಅನೇಕ ವರ್ಷಗಳ ದುಡಿಮೆಯನ್ನು ಕೇವಲ ಒಂದು ವರ್ಷದ ಶಾಲಾ ಶುಲ್ಕಕ್ಕಾಗಿ ಖರ್ಚುಮಾಡುತ್ತೇವೆ. ಎರಡೂವರೆ ಮೂರು ವರ್ಷದ ಮಕ್ಕಳ ಬೆನ್ನಿಗೆ ಬಣ್ಣದ ಬ್ಯಾಗನ್ನು ಏರಿಸಿ, ಕೈಗೊಂದು ಊಟದ ಬ್ಯಾಗನ್ನು ಇಳಿಬಿಟ್ಟು, ಹಳದಿ ಬಣ್ಣದ ಬಸ್ಸನ್ನು ಅವಸರದಿಂದಲೇ ಹತ್ತಿಸಿ ಟಾಟಾ, ಬೈಬೈ ಹೇಳಿ ನಿಟ್ಟುಸಿರು ಬಿಡುತ್ತೇವೆ. ಅಲ್ಲಿಗೆ ಒಂದು ದಿನದ ಮಗುವಿನ ಪಯಣ ಯಶಸ್ವಿಗೊಳಿಸಿದ ನಿರಾಳತೆ. ಆದರೆ ಒಲ್ಲದ ಮನಸ್ಸಿನಿಂದ ಶಾಲೆಗೆ ಹೊರಟ ಮಗುವಿನ ಮನಸ್ಸು ಅರಿಯಲು ನಾವು ವಿಫಲವಾದೆವಲ್ಲ! ಬಾಲ್ಯದ ಚಿಗುರುವ ಕನಸುಗಳ ಅಲ್ಲಿಯೇ ಹೊಸಕಿಹಾಕಿಬಿಟ್ಟೆವಲ್ಲ.ನಮ್ಮ ನಿರೀಕ್ಷೆಗಳಿಗಾಗಿ ಅವರ ಕನಸುಗಳನ್ನು ಸೀಲ್ ಮಾಡಿಬಿಟ್ಟೆವಲ್ಲ. ಖಲೀಲ್ ಗಿಬ್ರಾನ್ ಒಬ್ಬ ಅಮೆರಿಕದ ಕವಿ ತನ್ನ ಕವಿತೆಯೊಂದರಲ್ಲಿ ಹೇಳುವಂತೆ:    Your children are not children   They are the sons and daughters of life’s longing for itself   They come through you but not from you   And though they are with you ,   Yet they belong not to you “     ಹೀಗೆ ಸಾಗುವ ಪದ್ಯವೊಂದರಲ್ಲಿ “ನಿಮ್ಮ ಮಕ್ಕಳು , ಮಕ್ಕಳಲ್ಲ ಜೀವದ ಸ್ವಪ್ರೇಮದ ಪುತ್ರ ಪುತ್ರಿಯರು ಅವರು ನಿಮ್ಮ ಮೂಲಕ ಬಂದಿದ್ದಾರೆಯೇ ನಿಮ್ಮಿಂದಲ್ಲ ನಿಮ್ಮ ಜೊತೆ ಇರುವುದಾದರೂ ನಿಮಗೆ ಸೇರಿದವರಲ್ಲ”   ಹೌದು ಮಕ್ಕಳ ಮೇಲೆ ನಮ್ಮ ನಿರೀಕ್ಷೆ ಎಂದೂ ಅತಿಯಾಗಬಾರದು.ನಮ್ಮ ಕನಸುಗಳ ಈಡೇರಿಕೆಗೆ ಅವರನ್ನು ಬಳಸಿಕೊಳ್ಳಬಾರದು.ನಾವೆಂದೂ ಅವರನ್ನು ನಮ್ಮಂತೆ ಮಾಡಲು ಪ್ರಯತ್ನಿಸಬಾರದು.ಕಾರಣ ಅವರ ಕನಸಿನೊಳಗೆ ನಮ್ಮ ಪ್ರವೇಶವಿರಕೂಡದು.ನಮ್ಮ ಪ್ರೀತಿಯನ್ನು ಮಕ್ಕಳಿಗೆ ನೀಡಬೇಕೇ ಹೊರತು ಆಲೋಚನೆಗಳನ್ನಲ್ಲ.   ಡಾ||ಸಿ.ಆರ್.ಚಂದ್ರಶೇಖರ್ ರವರು ತಮ್ಮ ಮನಸ್ಸೇ ನೀ ಪ್ರಶಾಂತವಾಗಿರು ಪುಸ್ತಕದಲ್ಲಿ(ಪು.74) ಹೇಳುತ್ತಾರೆ ನಿರೀಕ್ಷೆಗಳನ್ನು ತಗ್ಗಿಸಿ, ಸಾಧ್ಯವಾದರೆ ನಿವಾರಿಸಿಕೊಳ್ಳಿ. ಅವರ ಮಾತಿನಂತೆ ಖಂಡಿತವಾಗಿ ನಿರೀಕ್ಷೆಗಳಿಂದ ನಿರಾಸೆಯೂ, ನಿರ್ಲಿಪ್ತತೆಯಿಂದ ನೆಮ್ಮದಿಯೂ ದೊರೆಯುತ್ತದೆ. ಮಕ್ಕಳ ಪಾಲನೆ, ಪೋಷಣೆ, ವಿದ್ಯಾಭ್ಯಾಸ,ಮದುವೆ, ಉದ್ಯೋಗ ಎಲ್ಲವೂ ನಮ್ಮ ಕರ್ತವ್ಯ. ಆದರೆ ಇದಕ್ಕೆ ಪ್ರತಿಫಲವಾಗಿ ಪ್ರೀತಿ, ಆಸರೆ,ಹಣ,ವೃದ್ಧಾಪ್ಯದಲ್ಲಿ ನೆರವನ್ನು ನಿರೀಕ್ಷಿಸಬೇಡಿ ಎನ್ನುತ್ತಾರೆ ಡಾಕ್ಟರ್. ಹಾಗಿದ್ದರೆ ಮಕ್ಕಳನ್ನು ಹೆತ್ತು ಹೊತ್ತು ಸಾಕಿದ್ದಕ್ಕೆ ನಿರೀಕ್ಷೆ ಇರಬಾರದೇ?        ಇರಲಿ, ಆದರದು ಒತ್ತಾಯಕ್ಕಲ್ಲ.ನಿಮ್ಮ ಆಸೆ ಆಕಾಂಕ್ಷೆಗಳನ್ನು ,ಗುರಿಗಳನ್ನು ಬಲವಂತವಾಗಿ ಅವರ ಮೇಲೆ ಹೇರಬೇಡಿ. ಅವರ ಹುಟ್ಟು ನಿಮಗೆ ಅದೃಷ್ಟ ತಂದಿತೆಂದು , ಸಂಪತ್ತಿಗೆ ಅಧಿಪತಿಯಾದರೆಂದು ಯಾವುದೇ ಮಗುವನ್ನು ಮೆರೆಸುವುದಾಗಲೀ ಅಥವಾ ಉಂಟಾದ ಸಾಲ ನಷ್ಟಗಳಿಗೆ ಹುಟ್ಟಿದ ಮಗುವಿನ ಜಾತಕವೇ ಕಾರಣವೆಂದು ಹೀಗಳೆಯುವುದಾಗಲೀ ಸಲ್ಲದು. ಮಕ್ಕಳಿಗೆ ಅವರ ಆಸೆ ಆಕಾಂಕ್ಷೆಗಳಿಗೆ ಅನುಗುಣವಾದ ಶಿಕ್ಷಣ ನೀಡಿ, ಆದರೆ ಸಮಾಜದ ಇತರೆ ಮಕ್ಕಳೊಂದಿಗೆ ಹೋಲಿಕೆ ಖಂಡಿತಾ ಬೇಡ. ಜೀವನೋಪಾಯಕ್ಕಾಗಿ ಅವಶ್ಯಕವಾಗಿ ನ್ಯಾಯಯುತವಾದ ದುಡಿಮೆಯೊಂದನ್ನು ಮಾಡುವಂತಿರಲಿ. ದುಡಿಯದೇ ಅಥವಾ ಕೆಲಸ ಮಾಡದೇ ಸುಲಭ ಮಾರ್ಗದಲ್ಲಿ ಹಣ ಗಳಿಸುವುದನ್ನು ತಪ್ಪು ಎಂಬ ಅರಿವು ನೀಡಿದರೆ ಸಾಕು. ಮಕ್ಕಳೆಂದಿಗೂ ನಿಮ್ಮ ಹಣವನ್ನು ಹಿಂತಿರುಗಿಸುವ ಯಂತ್ರಗಳಲ್ಲ. ಬಂಡವಾಳ ಹೂಡಿ ಲಾಭವನ್ನು ನಿರೀಕ್ಷಿಸುವ ವ್ಯವಹಾರವಲ್ಲ.ಬದಲಾಗಿ ಪ್ರೀತಿ, ಸಂಸ್ಕಾರ , ಜವಾಬ್ದಾರಿ , ಶಿಕ್ಷಣ , ಮಾನವೀಯತೆ ನೀಡಿ ನಿರ್ಲಿಪ್ತವಾಗಿ ನೆಮ್ಮದಿಯಿಂದ ನಿಂತು ಬಿಡಿ ಕಾರಣ ಮಕ್ಕಳು ನಿಮ್ಮ ಮಕ್ಕಳಲ್ಲ, ನಿಮ್ಮ ಮೂಲಕ ಬಂದ ದೈವ ಸೃಷ್ಟಿಗಳು. ****************************************

ನಮ್ಮ ಮಕ್ಕಳು ಮಕ್ಕಳಲ್ಲ Read Post »

ಇತರೆ

ವರ್ಧಮಾನ ಸಾಹಿತ್ಯ ಪ್ರಶಸ್ತಿ

ವರ್ಧಮಾನ ಸಾಹಿತ್ಯ ಪ್ರಶಸ್ತಿ ಡಾಕ್ಟರ್ ಬಾಳಾ ಸಾಹೇಬ ಲೋಕಾಪುರ ಮತ್ತು ಡಾ ರಾಜಶೇಖರ ಹಳೆಮನೆ ಅವರಿಗೆ ವರ್ಧಮಾನ ಸಾಹಿತ್ಯ ಪ್ರಶಸ್ತಿ ಕಳೆದ ಮೂವತ್ತೊಂಬತ್ತು ವರ್ಷಗಳಿಂದ ಪ್ರತಿಷ್ಠಿತ ವರ್ಧಮಾನ ಸಾಹಿತ್ಯ ಪ್ರಶಸ್ತಿಯನ್ನು ನೀಡುತ್ತಾ ಬಂದಿರುವ ಮೂಡಬಿದಿರೆಯ ವರ್ಧಮಾನ ಪ್ರಶಸ್ತಿ ಪೀಠವು ೨೦೧೯ರ ಸಾಲಿನ ಪ್ರಶಸ್ತಿಗಳನ್ನು ನಿರ್ಣಯಿಸಿದ್ದು ಅಥಣಿಯ ಡಾ ಬಾಳಾಸಾಹೇಬ ಲೋಕಾಪುರ ಅವರಿಗೆ ವರ್ಧಮಾನ ಸಾಹಿತ್ಯ ಪ್ರಶಸ್ತಿ ಮತ್ತು ಉಜಿರೆಯ ಡಾ ರಾಜಶೇಖರ ಹಳೆಮನೆ ಅವರಿಗೆ ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿಯನ್ನು ಘೋಷಿಸಿದೆ . ವರ್ಧಮಾನ ಸಾಹಿತ್ಯ ಪ್ರಶಸ್ತಿಗೆ ರೂ .ಇಪ್ಪತ್ತೈದು ಸಾವಿರ ಮತ್ತು ವರ್ಧಮಾನ ಉದಯೋನ್ಮುಖ ಪ್ರಶಸ್ತಿಗೆ ರೂ. ಹದಿನೈದು ಸಾವಿರಗಳ ಗೌರವ ಸಂಭಾವನೆ ಇದ್ದು ತಾಮ್ರ ಪತ್ರದ ಜೊತೆ ಸನ್ಮಾನವನ್ನು ಇವು ಒಳಗೊಂಡಿವೆಈಚೆಗೆ ಮೂಡಬಿದ್ರೆಯಲ್ಲಿ ಪೀಠದ ಕಾರ್ಯಾಧ್ಯಕ್ಷರಾದ ಎಸ್.ಡಿ. ಸಂಪತ್ ಸಾಮ್ರಾಜ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯಾದ್ಯಂತದಿಂದ ಬಂದ ಶಿಫಾರಸುಗಳನ್ನು ಆಧರಿಸಿ ಡಾಕ್ಟರ್ ಎಸ್ ಪಿ ಪದ್ಮಪ್ರಸಾದ್ ಡಾಕ್ಟರ್ ಬಿ. ಜನಾರ್ದನ ಭಟ್ ಮತ್ತು ವಿಭಾವರಿ ಭಟ್ ಅವರು ನೀಡಿದ ತೀರ್ಪಿನ ಆಧಾರದ ಮೇರೆಗೆ ಈ ಇಬ್ಬರ ಜೀವಮಾನದ ಸಾಧನೆಯ ಆಧಾರದಲ್ಲಿ ಈ ಪ್ರಶಸ್ತಿಗಳನ್ನು ನಿರ್ಣಯಿಸಲಾಗಿದೆ ಎಂದು ಪೀಠದ ಪ್ರಧಾನ ನಿರ್ದೇಶಕ ಡಾ ನಾ ಮೊಗಸಾಲೆ ತಿಳಿಸಿದ್ದಾರೆ. ಪರಿಚಯಬಾಳಾಸಾಹೇಬ ಲೋಕಾಪುರ ಬೆಳಗಾವಿ ಜಿಲ್ಲೆ ಅಥಣಿಯ ಶಿರಹಟ್ಟಿಯವರಾದ ಬಾಳಾ ಸಾಹೇಬರು ಭೂಗೋಳಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರು ಮತ್ತು ಹಂಪಿ ವಿವಿಯಿಂದ ಪಿಎಚ್ ಡಿ ಪಡೆದವರು. ಬಾಗಲಕೋಟೆಯಲ್ಲಿ ಪ್ರಾಧ್ಯಾಪಕರಾಗಿ ನಿವೃತ್ತರು. ಕನ್ನಡದ ಮಹತ್ವದ ಕತೆಗಾರ ಮತ್ತು ಕಾದಂಬರಿಕಾರರು ಮತ್ತು ವಿಮರ್ಶಕರು ಎಂದು ಮಾನ್ಯರು. ಅವರಿಗೆ ಈಗಾಗಲೆ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಚದುರಂಗ ಪ್ರಶಸ್ತಿ, ಗೊಮ್ಮಟೇಶ್ವರ ವಿದ್ಯಾಪೀಠ ಪ್ರಶಸ್ತಿ ಗಳಗನಾಥ ಕಾದಂಬರಿ ಪ್ರಶಸ್ತಿ ಮತ್ತು ಮಾಸ್ತಿ ಕಾದಂಬರಿ ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ . ಡಾ ರಾಜಶೇಖರ ಹಳೆಮನೆ ಡಾ ರಾಜಶೇಖರ ಹಳೆಮನೆ ಅವರು ಸೂಕ್ಷ್ಮ ಸಂವೇದನೆಯ ಕಥೆಗಾರ. ಅಪರೂಪದ ಒಳನೋಟಗಳುಳ್ಳ ವಿಮರ್ಶಕರೆಂದು ಮಾನ್ಯರು ಅವರು ಈ ತನಕ ಪ್ರಕಟಿಸಿದ ಮೂರು ಕೃತಿಗಳಿಂದ ಭರವಸೆಯ ಲೇಖಕರೆಂದು ಗುರುತಿಸಲ್ಪಟ್ಟಿದ್ದಾರೆ. ವಿಜಯ ಕರ್ನಾಟಕ ಅಕ್ಷಯ ಮತ್ತು ಕರ್ಮವೀರ ಕಥಾ ಸ್ಪರ್ಧೆಗಳಲ್ಲಿ ಅವರು ಬಹುಮಾನಿತರಾಗಿದ್ದಾರೆ. ರಾಜ್ಯ ಮತ್ತು ರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡಿಸಿದ್ದಾರೆ ಕೇಂದ್ರ ಸಾಹಿತ್ಯ ಅಕಾಡೆಮಿಯು ಸಂಯೋಜಿಸಿದ ಸಮಾವೇಶದಲ್ಲಿ ಅವರು ಕರ್ನಾಟಕವನ್ನು ಪ್ರತಿನಿಧಿಸಿದ್ದಾರೆ.

ವರ್ಧಮಾನ ಸಾಹಿತ್ಯ ಪ್ರಶಸ್ತಿ Read Post »

ಇತರೆ

ಕೊಂಕಣಿ ಕವಿಗಳ ಪರಿಚಯ

ಕೊಂಕಣಿ ಕವಿಗಳ ಪರಿಚಯ ಪರಿಚಯಿಸಿದವರು ಶ್ರೀಯುತ ಗುರುದತ್ ಬಂಟ್ವಾಳಕಾರ್.(ಗುರು ಬಾಳಿಗಾ) ಕರ್ನಾಟಕದ ಕೊಂಕಣಿ ಕವಿಗಳನ್ನು ಪರಿಚಯಿಸುವ ಒಂದು ಜವಾಬ್ದಾರಿಯನ್ನು ಸಂಗಾತಿ ಪತ್ರಿಕೆ ನನಗೆ ಕೊಟ್ಟಿದೆ. ಮೊದಲಿಗೆ ನಾನು ಪರಿಚಯಿಸಲು ಇಚ್ಛಿಸುವ ಕವಿ ಶ್ರೀಯುತ ಗುರುದತ್ ಬಂಟ್ವಾಳಕಾರ್. ಗುರು ಬಾಳಿಗಾ ಎಂಬ ಕಾವ್ಯನಾಮದಿಂದ ಬರೆಯುವ ಇವರ ಕವಿತೆಗಳು ಸರಳ ಶಬ್ದಗಳಲ್ಲಿ ಆಳವಾದ ವಿಚಾರಗಳನ್ನು ಮಂಡಿಸುವುದರಲ್ಲಿ ಯಶಸ್ವಿಯಾಗುತ್ತವೆ. ಪ್ರಸ್ತುತ ಮಂಗಳೂರಿನ ಶಕ್ತಿನಗರದಲ್ಲಿರುವ “ವಿಶ್ವ ಕೊಂಕಣಿ ಕೇಂದ್ರ” ದಲ್ಲಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಗುರುದತ್ ಬಂಟ್ವಾಳಕಾರ್ ಅವರು ಅಲ್ಲಿನ ಕೊಂಕಣಿ ಭಾಷಾ ಸಂಶೋಧನಾ ವಿಭಾಗದ ಮುಖ್ಯಸ್ಥರೂ ಆಗಿದ್ದಾರೆ. ಅವರ ಆಯ್ದ ಎರಡು ಕೊಂಕಣಿ ಕವಿತೆಗಳನ್ನು ನಿಮ್ಮ ಓದಿಗಾಗಿ ಕನ್ನಡದಲ್ಲಿ ಅನುವಾದಿಸಿದ್ದೇನೆ. ———— ಫುಲಾಂ ಪಾವ್ಸ್ ಫುಲಾಂ ಪಾವ್ಸ್ದಿವಳೆ ಪರಬೇಚೊತುಮಿ ಜಾಣಾಫುಲಾಂಚೊ ನ್ಹಯ್ಉಜ್ಯಾಚೊಉಜ್ಯಾ ಫುಲಾಂಚೊ ಜೆನ್ನಾ ತೆರಾವೆಳಾರ್ಕಸ್ತೂರ್ ಮೊಗ್ರ್ಯಾಕ್ಮೋಲ್ ಚಡತಾತೆನ್ನಾ ಮ್ಹಜೀ ಆವಯ್ ಮ್ಹಣತಾಹಾತ್ ಲಾಸತಾ! ಬೊದಿಲೇರಾಚಿ ಪ್ರೇಮಿಕಾಜೀನ್ ದುವಾಲ್ಆನಿಮ್ಹಜೀ ಬಾಯಲ್:ಏಕಲಿ ಉಜ್ಯಾಂತೂಲಿ ಫೂಲ್ದುಸರಿಫುಲಾಚೊ ಉಜೊ. — ಗುರು ಬಾಳಿಗಾ. ——– ಹೂ ಮಳೆ. ಮತಾಪಿನ ಹೂಮಳೆದೀಪಾವಳಿಯದುಹೂವಿನದಲ್ಲಬೆಂಕಿಯದುಬೆಂಕಿಯ ಹೂಗಳದು. ನಮ್ಮೂರ ತೇರಿಗೆ..ದುಬಾರಿ ಹೂಚಂಡುಕೈ ಸುಡುತ್ತೆಂದುಅಮ್ಮನ ಅಲವತ್ತು. ಬೋದಿಲೇರನ ಪ್ರೇಯಸಿಜೀನ್ ದುವಾಲ್ಹಾಗೂ ನನ್ನ ಮಡದಿ..ಅವಳು ಬೆಂಕಿಯ ಹೂವುಇವಳು ಹೂವಿನ ಬೆಂಕಿ. — ಶೀಲಾ ಭಂಡಾರ್ಕರ್. ——– ವೇಳ್ ಮೆಗೆಲೆ ಘರಾಚೆಚಾರ ಕುಡಾಂತೂಯ್ಏಕೇಕ್ ಘಡಿಯಾರ ಆಸಾ.ಏಕ ಪಾಂಚ ಮಿನಿಟ ಮುಖಾರ್ ಆಸಾದುಸರೆ ತೀನ ಮಿನಿಟ ಮಾಕಶಿಉರಲೆ ದೋನಿ ಬ್ಯಾಟರಿ ಸರ್ನ್ಬಂದ್ ಪಡಲಾ.ದೆಕೂನ ಆಮಿ ಬಾಯಲ ಬಾಮೂಣದೊಗಾನಯ್ಆಮಚೆ ಮೊಬಾಯಲಾಂತೂಚ್ವೇಳ ಚೊವಪ. ಆಮಚೆ ದೊಗಾಂಚೇಯ್ ಮೊಬಾಯಲ್ಎಕಾಮೆಕಾಂಕ ಪಾಂಚ ಮಿನಿಟಾಂಮಾಕಶಿ ಮುಖಾರ ಆಸಾತ.ತೇ ದೆಕೂನಆಮಿ ಎಕಾಮೆಕಾಂಕ ಕೆನ್ನಾಯ್ಸಾರಕೆ ವೆಳಾರ ಮೆಳಚೇಚ್ ನಾ. ಮ್ಹಜೆ ಆವಯ್ ಬಾಪಯ್ಆಮಚೆ ಲಾಗಶಿಲ್ಯಾ ಘರಾಂತವಸ್ತಿ ಕರೂನ ಆಸಾತ್.ಮ್ಹಜೆ ಬಾಪಯ್ ಕಂಪ್ಯೂಟರಾಂತ್ವೇಳ ಪಳಯತಾಮ್ಹಜೆ ಆವಯ್ ಟೀವೀಂತ್ಆಮಿ ಸಾಂಜೆರ್ ಗೆಲ್ಯಾರ್ತಾಂಚೆ ಸೀರಿಯಲ್ ಆಸತಾನಾಸತಾನಾ ಆಮಕಾವೇಳ ಮೇಳನಾ ಆಮಚೊ ಸ ವರಸಾ ಪೂತಆಮಚೆ ದೋನ ಘರಾಂಚೆ ಮಧೇಂತ್ಯೇವನ ವಚೂನ ವೇಳ ಖೆಳಯತಾ.ದೆಕೂನ್ಆಮಿ ಸಕಡಾನಯ್ತಾಕಾ ಚೋಯತಚ್ ವೇಳ ಸಮಜೂವಚೆ.ಆನಿ ಆಖೇರೀಕ್ ತಾಕಾಚ್ಬೆಸ್ಟಾವಚೆ ತೋವೇಳ ಪಾಡ ಕರತಾ ಮ್ಹಣೂನ. -ಗುರು ಬಾಳಿಗಾ ——- ಸಮಯ ನಮ್ಮ ಮನೆಯ ನಾಲ್ಕೂಕೊಣೆಯೊಳಗಿನಒಂದೊಂದು ಗಡಿಯಾರಗಳು.ಒಂದು ಐದು ನಿಮಿಷಮುಂದಿದ್ದರೆ.. ಇನ್ನೊಂದುಮೂರು ನಿಮಿಷ ಹಿಂದೆ.ಇನ್ನೆರಡು ಬ್ಯಾಟರಿ ಮುಗಿದುನಿಂತು ಹೋಗಿವೆ.ಹಾಗಾಗಿ ನಾವಿಬ್ಬರೂಗಂಡ ಹೆಂಡತಿಸಮಯ ನೋಡಿಕೊಳ್ಳುವುದುನಮ್ಮ ನಮ್ಮ ಮೊಬಾಯಿಲ್‍ಗಳಲ್ಲೇ. ನಮ್ಮಿಬ್ಬರ ಮೊಬೈಲ್‍ನಸಮಯ ಐದು ನಿಮಷಹಿಂದೆ ಮಂದೆ ಇರುವುದರಿಂದನಾವಿಬ್ಬರೂಒಂದೇ ಸಮಯದಲ್ಲಿಎಂದೂ ಸಿಗುತ್ತಿಲ್ಲ. ನಮ್ಮ ತಂದೆ ತಾಯಿನಮ್ಮ ಪಕ್ಕದಲ್ಲಿರುವಮನೆಯಲ್ಲಿ ವಾಸವಾಗಿದ್ದಾರೆ.ಅಪ್ಪ ತನ್ನ ಕಂಪ್ಯೂಟರ್ ಲ್ಲಿಸಮಯ ನೋಡಿಕೊಂಡರೆಅಮ್ಮ ಟಿವಿಯೊಳಗೆ.ನಾವು ಸಂಜೆಯ ಹೊತ್ತುಅವರ ಬಳಿ ಹೋದಾಗಅವರಿಗೆ ಸೀರಿಯಲ್ ಗಳಿರುತ್ತವೆ.ಅದಿಲ್ಲದಾಗ ನಮಗೆಸಮಯವಿರುವುದಿಲ್ಲ. ನಮ್ಮ ಆರು ವರ್ಷದ ಮಗಎರಡೂ ಮನೆಗಳಲ್ಲಿಓಡಾಡುತ್ತಾ ಸಮಯ ಕಳೆಯುತ್ತಾನೆ.ಅವನನ್ನು ನೋಡುತ್ತಲೇನಾವು ಸಮಯವನ್ನುತಿಳಿಯುತ್ತೇವೆ. ಕೊನೆಯಲ್ಲಿ..ಸಮಯ ಹಾಳುಮಾಡುತ್ತಾನೆಂದುಅವನನ್ನೇ ಬೈಯುತ್ತೇವೆ. *********************************************

ಕೊಂಕಣಿ ಕವಿಗಳ ಪರಿಚಯ Read Post »

ಇತರೆ, ಜೀವನ

ಕ್ಷಮಯಾ ಧರಿತ್ರೀ …

ಕ್ಷಮಯಾ ಧರಿತ್ರೀ … ಲಕ್ಷ್ಮಿ ನಾರಾಯಣ ಭಟ್ ಜೀವನ ಪ್ರವಾಹ ನಿಂತ ನೀರಲ್ಲ; ಅದು ಚಿರಂತನ. ನಿರಂತರವಾಗಿ ಹರಿಯುತ್ತಲೇ ಇರುವುದು ಅದರ ಸ್ವ-ಭಾವ. ಯಾವುದು ವ್ಯಕ್ತಿ/ವಸ್ತುವೊಂದಕ್ಕೆ ಸಹಜ ಭಾವವಾಗಿರುತ್ತದೋ ಅದೇ ಅದರ ಸ್ವಭಾವ. ಆದರೆ ಸ್ವಭಾವವನ್ನು ಪರಿಶ್ರಮ, ಚಿಂತನೆಗಳಿಂದ ಪರಿಷ್ಕರಿಸಿಕೊಳ್ಳಬಹುದು. ಇದು ಮನುಷ್ಯನಾದವನಿಗೆ ಮಾತ್ರ ಪ್ರಕೃತಿಯೇ ಕರುಣಿಸಿದ ವಿಶೇಷ ಕರ್ತೃತ್ವ. ಇದರಿಂದ ಆತ ಪ್ರಕೃತಿಯನ್ನೂ ಮಣಿಸಬಲ್ಲ! ಉದಾಹರಣೆಗೆ, ಎತ್ತರದಿಂದ ತಗ್ಗಿಗೆ ಹರಿಯುವುದು ನೀರಿನ ಸ್ವಭಾವವಲ್ಲವೇ? ಆ ಸ್ವಭಾವವನ್ನು ನಮ್ಮ ಅಗತ್ಯಕ್ಕೆ ತಕ್ಕಂತೆ ಪರಿರ್ತಿಸಿದಾಗ, ಜೋಗದಲ್ಲಿ ಜಲಪಾತವಾಗಿ ಧುಮುಕುವ ಶರಾವತಿ ನದಿ ನಮಗೆ ಅತ್ಯಾವಶ್ಯಕವಾದ ವಿದ್ಯುಚ್ಛಕ್ತಿಯನ್ನು ಕೊಡುವ ಅಪಾರ ಸಂಪನ್ಮೂಲವಾಗಿ ಬದಲಾಗುತ್ತಾಳೆ. ಸರ್.ಎಂ. ವಿಶ್ವೇಶ್ವರಯ್ಯನವರ ದೂರದೃಷ್ಟಿಯ ಪರಿಷ್ಕರಣವಿಲ್ಲದೇ ಹೋಗುತ್ತಿದ್ದರೆ ಶರಾವತಿ ಹಾಗೆ ಹರಿದು, ಹೀಗೆ ಧುಮ್ಮಿಕ್ಕಿ ಸಾಗರವನ್ನು ಸೇರಿ ನಿರ್ಲಿಪ್ತ ಭಾವದಿಂದಿರುತ್ತಿದ್ದಳಲ್ಲವೇ? (ಮಹಾತ್ಮಾ ಗಾಂಧೀಜಿ ಶಿವಮೊಗ್ಗಕ್ಕೆ ಬಂದೂ ಜೋಗ ಜಲಪಾತ ನೋಡಲು ಹೋಗಿರಲಿಲ್ಲ! ಕಲೆ ಮತ್ತು ಪ್ರಕೃತಿ ಸೌಂರ್ಯದ ಬಗ್ಗೆ ಅವರ ನಿಲುವು ಬೇರೆಯೇ ಇತ್ತು; ಅದನ್ನು ವಿವರವಾಗಿ ಪ್ರಸ್ತಾಪಿಸಲು ಇದು ಸೂಕ್ತ ವೇದಿಕೆಯಲ್ಲ, ಅಷ್ಟೇ.) ಮನುಷ್ಯನ ಸ್ವಭಾವವೂ ಇದಕ್ಕೆ ವ್ಯತಿರಿಕ್ತವಾಗಿಲ್ಲ! ‘ಮಂಗನಿಂದ ಮಾನವ’ ಎಂಬ ಮಾತೊಂದಿದೆಯಲ್ಲವೇ? ಇದು ಸ್ಥೂಲವಾಗಿ ನಮ್ಮ ಬದುಕಿನ ರೀತಿಯನ್ನೇ ನರ್ದೇಶಿಸುತ್ತದೆ. ಬಾಲ್ಯದಿಂದ ತೊಡಗಿ ಹರೆಯದ ವರೆಗೂ – ಕೆಲವೊಮ್ಮೆ ಕೊನೆಗಾಲದ ವರೆಗೂ – ಚಿತ್ತ ಚಾಂಚಲ್ಯ, ಜಿಹ್ವಾ ಚಾಪಲ್ಯ, ಇಂದ್ರಿಯ ದೌರ್ಬಲ್ಯಗಳನ್ನು ಹದ್ದುಬಸ್ತಿನಲ್ಲಿಡದೇ ಹೋದರೆ ನಾವು ‘ಮರ್ಕಟ’ ಹಂತದಿಂದ ‘ಮಾನ’ವುಳ್ಳ – ಅಂದರೆ ಹದವರಿತು ಬಾಳಬಲ್ಲ ಮನುಷ್ಯತ್ವವನ್ನು ಪಡೆಯುವುದು ಅಸಾಧ್ಯ ಎಂದು ನನ್ನ ನಂಬಿಕೆ. ಇದು ಮಾನವೀಯತೆಯೆಡೆಗೆ ನಮ್ಮ ಮೊದಲ ದೃಢ ಹೆಜ್ಜೆ. ಮಾನವೀಯತೆಯ ಲಕ್ಷಣಗಳೆಂದರೆ ಪಕ್ವತೆ ಮತ್ತು ಆರ್ದ್ರತೆ. ಇದನ್ನೇ “ತನ್ನಂತೆ ಪರರ ಬಗೆದೊಡೆ ಕೈಲಾಸ ಬಿನ್ನಾಣವಕ್ಕು” ಎಂದು ಸರ್ವಜ್ಞ ಹೇಳಿದ್ದು. ಆದರೆ ಇದು ಬಡಪೆಟ್ಟಿಗೆ ಸಾಧಿತವಾಗುವುದಿಲ್ಲ. ಜೀವನದಲ್ಲಿ ಅನೇಕ ಅನುಭವಗಳ ಮೂಲಕ, ಪ್ರಾಯ ಸಂದಂತೆ ನಿಧಾನವಾಗಿ ಬರಬೇಕಾದದ್ದೇ ಹೊರತು ರಾತ್ರಿ ಬೆಳಗಾಗುವುದರೊಳಗೆ “ಓ ನಾನು ಈಗ ಪರಿಪಕ್ವತೆಯನ್ನು ಪಡೆದೆ” ಎಂದಂತಲ್ಲ. ಅದು ಅಕಾಲಿಕವಾಗಿ ಬರಲೂ ಬಾರದು. ಅದು ಲೋಕ ವ್ಯವಹಾರಕ್ಕೆ ವಿರುದ್ಧವಾದದ್ದು ಮತ್ತು ಜನಸಾಮಾನ್ಯರಾದ ನಮ್ಮ ನಿಮ್ಮಂತಹವರಿಗಲ್ಲ. ವಿರಳಾತಿವಿರಳವಾಗಿ ಮಹಾತ್ಮರಿಗೆ ಮಾತ್ರ ದಕ್ಕುವಂತದ್ದು. ಉದಾಹರಣೆಗೆ ಬುದ್ಧ: “ಜಗವೆಲ್ಲ ಮಲಗಿರುವಾಗ ಅವನೊಬ್ಬ ಎದ್ದ” ಅದಕೆಂದೇ ಅವನು “ಬುದ್ಧ”. ಎಲ್ಲರೂ ಹಾಗೆ ಮಾಡಕೂಡದು. ಹಾಗಾಗಿ ನಮ್ಮ ಭಾರತೀಯ ಪರಂಪರೆಯಲ್ಲಿ ಸನ್ಯಾಸಿಯಾಗಬೇಕಾದರೆ ಮದುವೆಯ ಮೊದಲು ತಾಯಿಯ ಒಪ್ಪಿಗೆ, ಮದುವೆಯ ಬಳಿಕವಾದರೆ ಹೆಂಡತಿಯ ಒಪ್ಪಿಗೆ ಕಡ್ಡಾಯ. ಒಬ್ಬನೇ ಮಗ ಸನ್ಯಾಸಿಯಾಗುವುದು ಶಂಕರರ ತಾಯಿಗೆ ಇಷ್ಟವಿರಲಿಲ್ಲ; ಆ ತಾಯಿಯ ಒಪ್ಪಿಗೆಯನ್ನು ಪಡೆಯಲು ಒಂದು ಮೊಸಳೆಯ ಕಥೆ ಬರುತ್ತದೆ. ಇದು ನಿಮಗೆಲ್ಲರಿಗೂ ತಿಳಿದ ವಿಷಯವೇ. ಮೊಸಳೆ ಶಂಕರರ ಕಾಲನ್ನು ಹಿಡಿದಿದೆ ಎಂಬಾಗ ಶಂಕರರು ತಾಯಿ ಆರ್ಯಾಂಭ ಅವರಲ್ಲಿ “ತಾಯೇ, ನಾನು ಸನ್ಯಾಸಿಯಾಗಲು ನೀನು ಒಪ್ಪಿಗೆ ಕೊಟ್ಟರೆ ಈ ಮೊಸಳೆ ನನ್ನನು ಬಿಟ್ಟು ಬಿಡುವುದಂತೆ” ಎಂದಾಗ ತಾಯಿ ಕರುಳು ಚುರುಕ್ ಅಂದಿರಬೇಕು. ಮಗ ಬದುಕಿದರೆ ಸಾಕು ಎಂದ ತಾಯಿ ಒಪ್ಪಿಗೆ ಕೊಟ್ಟರಂತೆ. ಈ ಕಥೆಯ ಸತ್ಯಾಸತ್ಯತೆ ಇಲ್ಲಿ ಪ್ರಸ್ತುತವಲ್ಲ. ‘ಸನ್ಯಾಸತ್ವಕ್ಕೆ ತಾಯಿಯ ಒಪ್ಪಿಗೆ’ ಎಂಬ ತಾತ್ವಿಕತೆ ಮುಖ್ಯ, ಅಷ್ಟೇ. ಈ ಪದ್ಧತಿಯನ್ನು ಮಾಡಿದ ಉದ್ದೇಶವೆಂದರೆ ಯಾರೂ ಉಡಾಳರಾಗಿ ಸಂಸಾರದ ಜವಾಬ್ದಾರಿಯಿಂದ ಸುಖಾ ಸುಮ್ಮನೆ ಓಡಿ ಹೋಗಬಾರದು ಎನ್ನುವುದಷ್ಟೇ ಎಂದು ನನ್ನ ಅಭಿಪ್ರಾಯ. ಇರಲಿ. ಅದಕ್ಕೆ ಹೇಳಿದ್ದು ಅಕಾಲಿಕವಾಗಿ ವೈರಾಗ್ಯ ಬರಬಾರದು. ವಾತ್ಸಾಯನನನ್ನು ಓದುವ ಪ್ರಾಯದಲ್ಲಿ ವೇದಾಂತ, ಭಗವದ್ಗೀತೆ ಸಲ್ಲ. ಅಂದರೆ ಅದನ್ನು ಓದಲೇ, ಕಲಿಯಲೇ ಬಾರದು ಎಂಬ ನಿರ್ಬಂಧವಿಲ್ಲ; ಆದರೆ ಅದರಲ್ಲೇ ಮುಳುಗಿ ಹೋಗಬಾರದು ಎನ್ನುವ ಭಾವ. ಹಾಗಾದರೆ ಪಕ್ವತೆ, ಆರ್ದ್ರತೆಯನ್ನು ಸಾಧಿಸುವ ಬಗೆ ಹೇಗೆ? ಮನುಷ್ಯನ ಜೀವನದಲ್ಲಿ ಬಹುಶಃ ಕ್ಷಮಾಗುಣಕ್ಕಿಂತ ದೊಡ್ಡ ಮಾನವೀಯತೆ ಇಲ್ಲವೇನೋ! ಹಾಗಾಗಿ ವ್ಯಕ್ತಿತ್ವದ ಪಕ್ವತೆ,ಆರ್ದ್ರತೆಗಳ ಒಂದು ವಿಶೇಷ ಲಕ್ಷಣ ಅಂದರೆ ಕ್ಷಮಾಗುಣ ಎಂದು ನಾವು ತಿಳಿಯಬಹುದು. ತನ್ನ “ಶ್ರೀ ರಾಮಾಯಣ ದರ್ಶನಂ” ನಲ್ಲಿ ಕವಿ ಕುವೆಂಪು ಅವರು ಈ ಮಾತು ಹೇಳುತ್ತಾರೆ: “ಪಾಪಿಗುದ್ಧಾರಮಿಹುದೌ ಸೃಷ್ಟಿಯ ಈ ಮಹದ್ವ್ಯೂಹದೋಳ್” ಹೃದಯ ವೈಶಾಲ್ಯವನ್ನು ಬೆಳೆಸಿಕೊಳ್ಳದೆ ಕ್ಷಮಾಗುಣವನ್ನು ರೂಢಿಸಿಕೊಳ್ಳಲು ಅಸಾಧ್ಯ. ಶಿರಚ್ಛೇಧದ ಮೂಲಕ ಮರಣದಂಡನೆಯನ್ನು ಜಾರಿಗೊಳಿಸುವ ದೇಶದಲ್ಲೂ ಕ್ಷಮಾಗುಣಕ್ಕೆ ಆದ್ಯತೆ ಇದೆಯೆಂಬುದನ್ನು ನಾವು ಮರೆಯಬಾರದು. ಮತ್ತು ಈ ಕ್ಷಮಾದಾನದ ಪರಮಾಧಿಕಾರ ಕೊಡಲ್ಪಟ್ಟಿರುವುದು ಪ್ರಭುತ್ವಕ್ಕಲ್ಲ, ಬದಲಾಗಿ ಅನ್ಯಾಯಕ್ಕೊಳಗಾದ ವ್ಯಕ್ತಿ ಅಥವಾ ಆತನ ನಿಕಟ ಕುಟುಂಬ-ಸಂಬಂಧಿಗೆ ಮಾತ್ರ. [ಇದನ್ನು ಈಗ ಅಪರಾಧ ಶಾಸ್ತ್ರ ದಲ್ಲಿ  ಎಂಬ ಹೆಸರಿನಲ್ಲಿ ಅಧ್ಯಯನ ಮಾಡಲಾಗುತ್ತಿದೆ. ಇದು ಈ ಅಧ್ಯಯನ ಕ್ಷೇತ್ರವೊಂದರ ಇತ್ತೀಚಿಗಿನ ಹೊಸ ಬೆಳವಣಿಗೆ.] ಇದೊಂದು ಸತ್ಯ ಘಟನೆ. ಕೊಲ್ಲಿ ರಾಷ್ಟ್ರವೊಂದರಲ್ಲಿ ಒಂದು ಕುಟುಂಬದ ನಾಲ್ಕೈದು ಮಂದಿಯನ್ನು ಬರ್ಬರವಾಗಿ ಹತ್ಯೆಗೈದುದಕ್ಕಾಗಿ ಅಪರಾಧಿಗೆ ಮರಣದಂಡನೆ ವಿಧಿಸಲಾಗಿತ್ತು. ಆ ದೇಶದ ಪದ್ಧತಿಯಂತೆ ಸಾರ್ವಜನಿಕವಾಗಿ ಅಪರಾಧಿಯ ತಲೆ ಕಡಿದು ಮರಣದಂಡನೆಯನ್ನು ವಿಧಿಸುವುದು ರೂಢಿ. ಅಲ್ಲಿ ನೆರೆದಿದ್ದವರಲ್ಲಿ ಆ ಕುಟುಂಬದ ನಿಕಟ ಸಂಬಂಧಿಯೂ ಇದ್ದ. ಆತನಿಗೆ ಅಪರಾಧಿಯ ಬಗ್ಗೆ ಅತ್ಯಂತ ದ್ವೇಷ, ತಿರಸ್ಕಾರ, ಜಿಗುಪ್ಸೆ ಎಲ್ಲವೂ ಇತ್ತು. ಇದು ಸಹಜ ತಾನೇ? ಇನ್ನೇನು ಶಿಕ್ಷೆ ಜಾರಿಯಾಗಬೇಕೆನಿಸುವಷ್ಟರಲ್ಲಿ ಅಪರಾಧಿ ಆ ಕುಟುಂಬ ಸದಸ್ಯನ ಕಾಲಿಗೆ ಬಿದ್ದು ತನ್ನನ್ನು ಕ್ಷಮಿಸುವಂತೆ ಬಗೆ ಬಗೆಯಾಗಿ ಬೇಡಿಕೊಂಡ. ಯಾಕೋ ಏನೋ ಆ ಕ್ಷಣದಲ್ಲಿ ಆತನ ಮನ ಕರಗಿ ಕ್ಷಮಾದಾನ ಮಾಡಿದನಂತೆ. ಆ ಬಳಿಕ ಆತ ಹೇಳಿದ ಮಾತು ತುಂಬಾ ಅರ್ಥಪೂರ್ಣ ಮಾರ್ಮಿಕವಾಗಿತ್ತು: “ನನ್ನ ಹೃದಯದ ಕಹಿಯೆಲ್ಲಾ ಈಗ ಬತ್ತಿ ಹೋಗಿದೆ. ನನ್ನೊಳಗೆ ಅನಿರ್ವಚನೀಯ ಶಾಂತಿ ತುಂಬಿದ ಧನ್ಯತಾ ಭಾವ ಅರಳಿದೆ. ಕ್ಷಮಾಗುಣಕ್ಕೆ ಇಂತಹ ಶಕ್ತಿ ಇದೆಯೆಂದು ನನಗೆ ಈ ವರೆಗೂ ತಿಳಿದಿರಲಿಲ್ಲ! ಅಪರಾಧಿಯನ್ನು ಕ್ಷಮಿಸಲು ನನಗೆ ಪ್ರೇರಣೆ ನೀಡಿದ ಪರಮ ದಯಾಳು ದೇವರಿಗೆ ನಾನು ಚಿರಋಣಿ.” ಈ ತೃಪ್ತ ಭಾವವನ್ನು ಕಿಂಚಿತ್ ಪ್ರಮಾಣದಲ್ಲಾದರೂ ಅರ್ಥೈಸಿಕೊಳ್ಳಬೇಕಿದ್ದರೆ ನಾವೂ ಯಾರನ್ನಾದರೂ ಕ್ಷಮಿಸಿದ್ದರೆ ಮಾತ್ರ ಸಾಧ್ಯ ಎಂಬುದನ್ನು ಪ್ರಾಮಾಣಿಕವಾಗಿ ವಿನಮ್ರತೆಯಿಂದ, ಸ್ವಾನುಭವದಿಂದ ನಾನು ಹೇಳಬಲ್ಲೆ. (ನನ್ನ ಅನುಭವ ಬಹಳ ದೊಡ್ಡ ಮಟ್ಟದ್ದು ಎಂದಾಗಲಿ, ನಾನು ಕ್ಷಮಾಗುಣದ ಸಾಕಾರಮೂರ್ತಿ ಎಂಬ ಅಹಂಕಾರವಾಗಲಿ ಒಂದಿಷ್ಟೂ ಇಲ್ಲದೆ ಈ ಮಾತನ್ನು ಬಹಳ ಸಂಕೋಚದಿಂದ ಹೇಳುತ್ತಿದ್ದೇನೆ. ಆ ಘಟನೆಯ ವಿವರಗಳನ್ನು ಮಾತ್ರ ಇಲ್ಲಿ ಈಗ ಹೇಳುವ ಸ್ಥಿತಿಯಲ್ಲಿ ನಾನಿಲ್ಲ, ಕ್ಷಮಿಸಿ.) ತನಗೆ ಕೇಡು ಬಗೆದವರಿಗೂ ಮನಸಾರೆ ಒಳಿತನ್ನು ಹಾರೈಸುವುದು ಮಾನವೀಯತೆಯ ಪರಾಕಾಷ್ಠೆಯಲ್ಲದೆ ಮತ್ತಿನ್ನೇನು? ನನಗೆ ತಿಳಿದಿರುವ ಎರಡು ಬದ್ಧ ದ್ವೇಷಿ ಕುಟುಂಬದ ಓರ್ವ ಹಿರಿಯ ಮರಣ ಹೊಂದಿದಾಗ ಜೀವನದುದ್ದಕ್ಕೂ ಆತನ ಕಡು ವೈರಿಯಾಗಿದ್ದಾತ ಶವ ಸಂಸ್ಕಾರಕ್ಕೆ ಬಂದು ಬಿಕ್ಕಿ ಬಿಕ್ಕಿ ಅತ್ತು (ಅದು ನಾಟಕವಾಗಿರಲಿಲ್ಲ ಎಂದು ನಾನು ನಿಸ್ಸಂಶಯವಾಗಿ ಹೇಳಬಲ್ಲೆ) ಕುಗ್ಗಿ ಹೋದ ಘಟನೆ ನನ್ನ ಮನಸ್ಸಿನಲ್ಲಿದೆ. ಅದನ್ನು ಆ ಸತ್ತ ವ್ಯಕ್ತಿ ಜೀವಂತವಾಗಿರುವಾಗಲೇ ಮಾಡಿದ್ದರೆ ಒಳಿತಿತ್ತು ಎನ್ನುವ ವ್ಯಾವಹಾರಿಕ ಮಾತು ಬೇರೆ. ಅದು ವ್ಯಕ್ತಿ ಬಹಳ ಆಳವಾಗಿ ಯೋಚಿಸಿ     ಮಾಡಿದ ಕೆಲಸವಾದ್ದರಿಂದ  ಮಹತ್ವದ್ದು ಎಂದು ನನ್ನ ಭಾವನೆ. ಸಾಯಿಸಲೆತ್ನಿಸಿದ ರಾಕ್ಷಸಿ ಪೂತನಿಗೂ ಶ್ರೀ ಕೃಷ್ಣ ಮೋಕ್ಷವನ್ನು ಕರುಣಿಸಿದ. ಆಕೆಯದು ತೋರಿಕೆಯ ಕಪಟ ಮಾತೃತ್ವವಾಗಿದ್ದರೂ ಕೃಷ್ಣ ಅದನ್ನು ನೋಡಿದ ಬಗೆ ಬೇರೆ. ಹಾಗೆಯೇ ತನ್ನನ್ನು ಶಿಲುಬೆಗೇರಿಸಿದವರ ಬಗ್ಗೆ “ಮರಣವೃಕ್ಷದೊಳಮೃತ ಫಲದಂತೆ” (‘ಗೊಲ್ಗೊಥಾ’ – ಮಂಜೇಶ್ವರ ಗೋವಿಂದ ಪೈ) ಕಾಣುತ್ತಿದ್ದ ಯೇಸುಸ್ವಾಮಿಯೂ “ತನ್ನ ಕಡಿರ್ಗೆ ತಣ್ಣೆಳಲೀವ ಮರದಂತೆ” (‘ಗೊಲ್ಗೊಥಾ’) ಈ ಮಾತನ್ನು ಹೇಳಿದ: “ತಂದೆಯೇ, ಅವರ ಅಪರಾಧಗಳನ್ನು ಕ್ಷಮಿಸು; ತಾವೇನು ಮಾಡುತ್ತಿದ್ದೇವೆ ಎಂಬುದನ್ನರಿಯರು” ಕ್ಷಮಾಗುಣದ ಚರಮ ಸೀಮೆ ಇದು ಎಂಬುದಕ್ಕೆ ಬೇರೆ ಉದಾರಹರಣೆ ಬೇಕೇ? ನೀವು ಹೇಳಬಹುದು ಇದು ಅಂತಹ ದೈವಾಂಶ ಸಂಭೂತರಿಗೆ ಮಾತ್ರ ಸಾಧ್ಯ. ನಮ್ಮಂತಹ ಹುಲು ಮಾನವರಿಗಲ್ಲ. ಒಪ್ಪಿದೆ. ನನ್ನ ಯೋಚನೆಯೂ ಇದಕ್ಕಿಂತ ಭಿನ್ನವಾಗಿರಲಿಲ್ಲ. ಆದರೆ ಇನ್ನೊಂದು ಸತ್ಯ ಘಟನೆಯನ್ನು ನಾನು ನಿಮ್ಮ ಮುಂದೆ ಇಡುತ್ತಿದ್ದೇನೆ. ಆ ಘಟನೆ ಹೀಗಿದೆ: ಒಮ್ಮೆ ನಮ್ಮ ಕಾಲೇಜಿಗೆ ಓರ್ವ ಅಮೇರಿಕನ್ ಮಹಿಳೆ ಬಂದಿದ್ದರು. ಇದು ನಮ್ಮ ಕಾಲೇಜಿಗೆ ವಿಶೇಷವೇನೂ ಅಲ್ಲ. ಅವರ ಭಾಷಣ ಪೂರ್ವಸೂಚನೆ ಇಲ್ಲದೆ ನಿಗದಿಯಾಯಿತು. ಎಲ್ಲರೊಂದಿಗೆ ನಾನೂ ಆ ಭಾಷಣ ಕೇಳಲು ಹೋಗಿದ್ದೆ. ಅವರು ಒಂದು ಘಟನೆಯನ್ನು ವಿವರಿಸಿದರು. ಅಮೇರಿಕಾದಲ್ಲಿ ಸಾಮಾನ್ಯವಾಗಿ ಎಲ್ಲರೂ ವಾರಾಂತ್ಯದಲ್ಲಿ ಸಕುಟುಂಬವಾಗಿ ಅವರು ಮನೆಯಿಂದ ದೂರ ಸಂಚಾರಕ್ಕೆ ಹೋಗುತ್ತಾರೆ. ಹಾಗೆಯೇ ಒಂದು ಕುಟುಂಬ ತನ್ನ ಐವರು ಮಕ್ಕಳೊಂದಿಗೆ ಊರ ಹೊರಗೆ ಹೋಗಿ ರಾತ್ರಿ ಕಾಲದಲ್ಲಿ ತೆರೆದ ಬಯಲಲ್ಲಿ ತಮ್ಮ ತಮ್ಮ ಸ್ಲೀಪಿಂಗ್ ಬ್ಯಾಗ್ ನಲ್ಲಿ ಮಲಗಿ ನಿದ್ರೆ ಮಾಡುತ್ತಿದ್ದರು. ಬೆಳಗ್ಗೆ ಎದ್ದು ನೋಡುವಾಗ ಅವರ ಕೊನೆಯ ಮಗಳು ಸುಮಾರು ಹದಿಮೂರು ವಯಸ್ಸಿನ ಹುಡುಗಿ ಕಾಣೆಯಾಗಿದ್ದಳು. ಎಲ್ಲೆಲ್ಲೋ ಹುಡುಕಿ ಸೋತ ಅವರಿಗೆ ಕೊನೆಗೆ ಆ ಹುಡುಗಿಯ ಮೃತ ದೇಹ ಒಂದು ಪೊದೆಯಲ್ಲಿ ಎರಡು ದಿನಗಳ ಬಳಿಕ ಸಿಕ್ಕಿತು. ಆಕೆಯನ್ನು ಅಮಾನುಷವಾಗಿ ಬಲಾತ್ಕರಿಸಿ ಕೊಂದು ಬಿಟ್ಟಿದ್ದ ಓರ್ವ ಪಾತಕಿ. ಆ ಕುಟುಂಬ ತನ್ನ ಶಾಂತಿ, ನೆಮ್ಮದಿಯನ್ನು ಕಳೆದುಕೊಂಡು ದು:ಖದಲ್ಲಿ ಮುಳುಗಿತ್ತು. ಆ ಮೇಲೆ ಗೊತ್ತಾಯಿತು ಇದು ಓರ್ವ ವಿಕೃತ ಕಾಮಿಯ ಕೆಲಸ; ಆತ ಈಗಾಗಲೇ ಸುಮಾರು ಹದಿನೈದು ಮಂದಿ ಅಮಾಯಕ ಹೆಣ್ಣುಮಕ್ಕಳನ್ನು ಇದೇ ರೀತಿ ಬಲಾತ್ಕರಿಸಿ ಕೊಂದು ಹಾಕಿದ್ದ. ಸರಿ! ಕಾನೂನಿನ ಕೈಗಳಿಂದ ಅಪರಾಧಿ ಧೀರ್ಘ ಕಾಲ ತಪ್ಪಿಸಿಕೊಳ್ಳಲಾರ ಎಂಬುದು ಅಪರಾಧ ಶಾಸ್ತ್ರದ ಒಂದು ಪ್ರಮೇಯ. ಸ಼ುಮಾರು ಇಪ್ಪತ್ಮೂರು ವಯಸ್ಸಿನ ಓರ್ವ ಯುವಕ ಈ ಕೃತ್ಯ ಮಾಡಿದವನು ಎಂದು ಪೊಲೀಸರು ಸಾಕ್ಷ್ಯಾಧಾರಗಳ ಮೂಲಕ ಕಂಡು ಹಿಡಿದು ಆತನಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಯಿತು. ಇತ್ತ ಮಗಳನ್ನು ಕಳೆದುಕೊಂಡ ಆ ತಾಯಿ ಮಾನಸಿಕ ರೋಗಿಯಾಗಿ ಚಿಕಿತ್ಸೆ ಪಡೆಯಬೇಕಾಯಿತು. ಚಿಕಿತ್ಸೆಯ ಭಾಗವಾಗಿ ನೊಂದು, ಬೆಂದ ಆ ಮಹಿಳೆಗೆ ಮಾನಸಿಕ ತಜ್ಞರು ಆ ಅಪರಾಧಿಯನ್ನು ಕ್ಷಮಿಸಿದರೆ ಆಕೆಗೆ ಮಾನಸಿಕ ನೆಮ್ಮದಿ ಸಿಕ್ಕರೂ ಸಿಗಬಹುದು ಎಂದು ಹೇಳಿದರು. ಹಾಗೆ ಆಕೆಯ ಪತಿ ಆಕೆಯನ್ನು ಇದಕ್ಕೆ ಒಪ್ಪಿಸಿದರಂತೆ. ಆಗ ಆ ಮಹಿಳೆ ಆ ಬಗ್ಗೆ ಯೋಚಿಸಿ, “ನೋಡೋಣ. ಪ್ರಯತ್ನ ಪಡುವೆ” ಎಂಬ ಪ್ರಾಮಾಣಿಕತೆಯಿಂದ ಆ ಯುವಕನನ್ನು ಜೈಲಿನಲ್ಲಿ ಭೇಟಿಯಾಗುತ್ತಾಳೆ. ಮೊದಲಿಗೆ ಅವಳ ಮನವಿಯನ್ನು ತಿರಸ್ಕರಿಸಿದ ಅಪರಾಧಿ ಕೊನೆಗೂ ಮನಸ್ಸು ಬದಲಿಸಿ ಆಕೆಯನ್ನು ಭೇಟಿಯಾಗಲು ಒಪ್ಪುತ್ತಾನೆ. ಈ ಮಹಿಳೆ ಅಲ್ಲಿಗೆ ಹೋಗಿ ಆತನಲ್ಲಿ ಮಾತನಾಡಿ “ನಾನು ನಿನ್ನನ್ನು ಮನ:ಪೂರ್ವಕವಾಗಿ ಕ್ಷಮಿಸಿದ್ದೇನೆ” ಎಂದು ಹೇಳಿದರೂ ಆತ ಅದನ್ನು ನಿರ್ಭಾವುಕವಾಗಿ ಕೇಳಿಸಿಕೊಂಡನಂತೆ. ಅವನಲ್ಲಿ ಯಾವ ಬದಲಾವಣೆಯನ್ನೂ ಆ ತಾಯಿ ಕಾಣಲಿಲ್ಲವಂತೆ. ಆದರೆ ಆಕೆ ಆತನನ್ನು ಮನ:ಪೂರ್ವಕವಾಗಿ ಕ್ಷಮಿಸಿ ಹಿಂತಿರುಗಿ ಬಂದ ಮೇಲೆ ನಿಧಾನವಾಗಿ ಆಕೆಯ ಮಾನಸಿಕ ಸ್ವಾಸ್ಥ್ಯ ಮರುಕಳಿಸಿತಂತೆ. ಇಷ್ಟು ಹೇಳಿ ಆ ಅಮೇರಿಕನ್ ಮಹಿಳೆ ತನ್ನ ಮಾತು ಮುಗಿಸಿ “ಈ ಬಗ್ಗೆ ನಿಮ್ಮ ಅಭಿಪ್ರಾಯವೇನು ನಿಸ್ಸಂಕೋಚವಾಗಿ ತಿಳಿಸಿ: ಎಂದಾಗ ಸಭೆಯಲ್ಲಿ ಒಂದು ಮೌನ ಆವರಿಸಿತ್ತು. ಆಗ ನಾನು ಹೇಳಿದೆ: “ಇದು ಕೇಳಲಿಕ್ಕೇನೋ ಬಹಳ ಚೆನ್ನಾಗಿದೆ. ಆದರೆ ನಿಜ ಜೀವನದಲ್ಲಿ ಹೀಗಾಗುವುದು ಸಾಧ್ಯವೇ ಎಂಬ ಬಗ್ಗೆ ನನಗೆ ಸಂದೇಹವಿದೆ” ಆ ಅಮೇರಿಕನ್ ಮಹಿಳೆ ತಕ್ಷಣ ಯಾವ ಉತ್ತರವನ್ನೂ ಕೊಡದೆ ಉಳಿದವರ ಅಭಿಪ್ರಾಯಗಳನ್ನು ಕೇಳತೊಡಗಿದರು. ವಿದ್ಯಾರ್ಥಿಗಳೂ, ಅಧ್ಯಾಪಕರೂ

ಕ್ಷಮಯಾ ಧರಿತ್ರೀ … Read Post »

ಇತರೆ, ಲಹರಿ

ನೀ ಒಂದು ಸಾರಿ ನನ್ನ ಮನ್ನಿಸು

ನೀ ಒಂದು ಸಾರಿ ನನ್ನ ಮನ್ನಿಸು ಜಯಶ್ರೀ ಜೆ.ಅಬ್ಬಿಗೇರಿ ಪ್ರೀತಿ ಪ್ರೇಮದ ವಿಷಯದಲ್ಲಿ ತಿರಸ್ಕರಿಸಲ್ಪಟ್ಟರೆ ಅದೆಂಥ ಭಯಂಕರ ನೋವು ಆಗುತ್ತದೆ ಅನ್ನೋದು ಅನುಭವಿಸಿದವರಿಗೆ ಗೊತ್ತು. ಅದೊಂಥರ ಹಲ್ಲು ನೋವಿದ್ದ ಹಾಗೆ. ಎಂಥ ಹುಲಿಯಂಥ ಮನುಷ್ಯನನ್ನೂ ನರಮ್ ಮಾಡಿಬಿಡುತ್ತದೆ. ಈ ಸಾಲುಗಳು ನಿನ್ನ ಭಾವ ಪ್ರಪಂಚವನ್ನು ತಟ್ಟುತ್ತವೆ ಅಂದುಕೊಂಡಿದೀನಿ. ಇವು ಕೇವಲ ಪದಗಳಲ್ಲ. ನಿನಗಾಗಿ ಬರೆದ ಮೌನ ಮಿಲನದ ಮುದ್ದು ಮನವಿ ಪತ್ರ. ಪ್ರೀತಿಯ ಭಾವದಲ್ಲಿ ವಿರಹದ ಉರಿ ಸಣ್ಣಗೆ ಮನಸ್ಸನ್ನು ಸುಡುತ್ತಿದೆ. ಒಂದೇ ಒಂದು ಸಾರಿ ಎದೆಗವಚಿಕೊಂಡು ಸಾಲು ಸಾಲು ಮುತ್ತಿಕ್ಕಿದರೆ ಸಾಕು. ಹೃದಯದಲ್ಲಿ ನೀ ಮಾಡಿದ ಆಳವಾದ ಗಾಯ ಮಾಯ. ಹರಿಯುವ ನೀರಿನಂತೆ ಸುಡುವ ಬೆಂಕಿಯಂತೆ ಅರಳಿದ ಪ್ರೀತಿಯನ್ನು ಬಚ್ಚಿಡುವುದು ಅಸಾಧ್ಯ. ಪ್ರೀತಿಯಲ್ಲಿ ಸಾವು ಬಂದರೂ ಲೆಕ್ಕಕ್ಕಿಲ್ಲ. ಸಾವಿನ ಭಯವೂ ನನಗಿಲ್ಲ.ಭಯದ ನೆರಳಲ್ಲಿ ಬದುಕುವುದು ಒಂದು ಬದುಕೇ?  ಪ್ರೀತಿಯಿಲ್ಲದ ಜೀವನ, ಜೀವನವೂ ಅಲ್ಲ. ನೀನು ಒಲಿದಾಗ ಇಷ್ಟಿಷ್ಟೇ ಬದಲಾಗಿದ್ದೆ. ತಡೆ ಹಿಡಿದ ಮನದ ಎಲ್ಲ ಬಯಕೆಗಳನು ಮೆರವಣಿಗೆಗೆ ಸಜ್ಜುಗೊಳಿಸಿದ್ದೆ. ನಾನು ಮಾತಿನಲ್ಲಿ ಒರಟ ಎಂದು ಎಲ್ಲರಿಗೂ ಗೊತ್ತು ಆದರೆ ಹೃದಯ ಮೆತ್ತನೆಯ ಹತ್ತಿಯಂತೆ ಬಲು ಮೃದುವಾಗಿದೆ ಕಣೆ.  ಕಾವ್ಯ ಸಾಲಿನಲಿ ಧುಮ್ಮಿಕ್ಕಿ ಹರಿಯುವ ಜಲಧಾರೆಯಂತೆ. ನನ್ನ ಪ್ರೀತಿಗೆ ಮನಸೋತು ನನ್ನ ಬಲಿಷ್ಟ ತೋಳುಗಳಲ್ಲಿ ನಿನ್ನ ನೀನೇ ಬಂಧಿಸಿಕೊಂಡು ಸುಖಿಸಿದ ಪರಿಯನು ಬಣ್ಣಿಸಲು ಪದಕೋಶದ ಪದಗಳು ಸಾಲವು. ನಾನು ನೀನು ಜೊತೆ ಸೇರಿ ಓಡಾಡುತ್ತಿದ್ದಾಗ ಕ್ಷಣ ಕ್ಷಣವೂ ಲವ ಲವಿಕೆ ಪುಟಿದೇಳುತ್ತಿತ್ತು. ಎದೆ ಸೇರಿದ ಹಿತಾನುಭವ ಗುಪ್ತವಾಗಿ ಇರುಳಿನಲ್ಲಿ ಎದ್ದು ನಲಿಯುತ್ತಿತ್ತು. ಅದರಲ್ಲೇ ಮೈ ಮರೆಯುತ್ತಿದ್ದೆ.  ಈಗ ನಿನ್ನ ಮುಂದೆ ನನ್ನ ಮನದ ತೊಳಲಾಟ ಹೇಳದಿದ್ದರೆ ಉಳಿಗಾಲವಿಲ್ಲವೆಂದು ಈ ಓಲೆ ಬರೆಯುತಿರುವೆ. ಪ್ರೇಮ ನಿವೇದನೆಯ ಸಂದರ್ಭದಲ್ಲಿ ನಾನು ಒರಟಾಗಿ ನಡೆದುಕೊಂಡೆ ಎಂಬುದು ನನಗೂ ಅನ್ನಿಸಿದೆ ಗೆಳತಿ. ಅಷ್ಟೊಂದು ಆಪ್ತಳಾದ ನಿನ್ನ ಮುಂದೆ ಇನ್ನೇನು ಮುಚ್ಚು ಮರೆ ಎಂದು ಹಾಗೆ ನಡೆದುಕೊಂಡೆ ಹೊರತು, ಮತ್ತೆ ಬೇರೆ ಯಾವ ಕಾರಣಗಳೂ ಇಲ್ಲ. ಪ್ರೇಮ ಪ್ರಸ್ತಾಪವನ್ನು ಸಾರಾಸಗಟಾಗಿ ತಿರಸ್ಕರಿಸಿ ನಡೆದದ್ದು ನನ್ನನ್ನು ತೀವ್ರವಾಗಿ ಕಾಡುತ್ತಿದೆ. ನಿನ್ನನ್ನು ನನ್ನ ಜೀವದಂತೆ ಕಂಡ ನನಗೆ ಈ ರೀತಿ ಶಿಕ್ಷಿಸುವುದು ತರವೇ? ನೀನೇ ಪ್ರಶ್ನಿಸಿಕೋ ಗೆಳತಿ. ನನ್ನುಸಿರಲ್ಲಿ ಉಸಿರಾಗಿ ನೀನಿರುವಾಗ, ಉಸಿರಿನ ಕೊನೆಯವರೆಗೂ ಜೊತೆಯಲ್ಲೇ ಜೊತೆಗಿರುವೆ. ಈಗಷ್ಟೇ ಕಲೆತಿರುವ ನವಿರಾದ ಮನವನು ಒರಟಾದ ಮಾತುಗಳಿಂದ ಘಾಸಿಗೊಳಿಸಿರುವೆ. ನಿನ್ನೆದೆಯ ಮೃದು ಭಾವಗಳ ಸಂತೈಸಬೇಕು. ಹೃದಯಾಳದಿಂದ ಆರಾಧಿಸುವ ನಿನ್ನನು ನೆನೆದರೆ ಸಾಕು ಭಾವ ಕೋಶವೆಲ್ಲ ಬೆಚ್ಚಗಾಗುವುದು.  ನೀನೇ ನಿನ್ನ ಕೈಯಾರೆ ಹೆಣೆದ ಸ್ವೆಟರ್‌ನ್ನು ನನ್ನ ಜನುಮ ದಿನದಂದು ಉಡುಗೊರೆಯಾಗಿ ನೀಡಿದೆ. ಅದರ ಮೇಲಿರುವ ಕೆಂಗುಲಾಬಿ ನನ್ನನ್ನು ಮುದ್ದಿಸಲು ಕೆದಕಿ ಕರೆಯುತ್ತದೆ. ಈ ಬಿರು ಬೇಸಿಗೆಯಲ್ಲೂ ನಿನ್ನೊಲವಿನ ಉಡುಗೊರೆ ಮೈಗಂಟಿಸಿಕೊಂಡೇ ಹೊರ ಬೀಳುವೆ. ಗೆಳೆಯರೆಲ್ಲ ಕಾಲೆಳೆದರೂ ಕಿವಿಗೊಡುವುದಿಲ್ಲ. ನೀನೇ ನನ್ನನ್ನು ಗಟ್ಟಿಯಾಗಿ ತಬ್ಬಿದ ಭಾವ ನನ್ನನ್ನು  ಸಣ್ಣನೆಯ ನಶೆಗೊಳಗಾದವನಂತೆ ಆಡಿಸುತ್ತದೆ. ಅದೊಮ್ಮೆ ಇಡೀ ದಿನ ಕಾಡು ಮೇಡು ಬೆಟ್ಟ ಗುಡ್ಡ ಕೈ ಕೈ ಹಿಡಿದು ತಿರುಗಿ ಇಬ್ಬರಿಗೂ ಸುಸ್ತಾಗಿತ್ತು. ಸುಂದರ ಹೂದೋಟದ ಪುಟ್ಟ ಗುಡಿಲಿನ ಮುಂದೆ ಸಂಜೆ ಬಾನಿನ ರಂಗಿಗೆ ಮೈ ಮರೆತಿದ್ದೆ. ಹೃದಯದಲ್ಲಿ ಅವಿತಿದ್ದ ಪ್ರೇಮವು ಕಾರ್ಮೋಡಗಳ ನಡುವೆ ಝಗ್ಗನೇ ಬೆಳಗುವ ಮಿಂಚಂತೆ ನಿನ್ನ ಕಂಗಳಲ್ಲಿ ಮಿಂಚಿದ್ದನ್ನು ಕಂಡೆ. ಜಗದ ಪ್ರೇಮವನ್ನೆಲ್ಲ ನಿನ್ನ ಹೃದಯಕ್ಕಿಳಿಸಿಹರೇನೋ ಎನ್ನುವಂತೆ ಮುಖಭಾವ. ಅಲ್ಲಿರುವ ಕಲ್ಲು ಬಂಡೆಯ ಮೇಲೆ ಸುಖಾಸೀನನಾದೆ.  ನನ್ನ ಬೆರಳುಗಳನು ನವಿರಾಗಿ ಸವರಿದೆ. ಮೊದಲ ಸಲ ಇಂಥ ಒಲವ ಪರಿ ಕಂಡು ಅಚ್ಚರಿಗೊಂಡೆ. ಒಲುಮೆಯಿಂದ ನನ್ನ ಬೆನ್ನಿಗೆ ನಿನ್ನ ಎದೆಯನು ತಾಗಿಸಿದೆ. ಮೈ ನರ ನಾಡಿಗಳೆಲ್ಲ ಒಮ್ಮೆಲೇ ರೋಮಾಂಚನಗೊಂಡವು. ನನ್ನ ಭುಜದ ಮೇಲೊರಗಿ ಕೆನ್ನೆಗೆ ಮುತ್ತಿಕ್ಕಿದೆ.ಅದ್ಯಾವಾಗ ನಿನ್ನ ಕೋಮಲ ಬೆರಳುಗಳ ಸಂದುಗಳನು ನನ್ನ ಒರಟಾದ ಬೆರಳುಗಳು ತುಂಬಿದವೋ ಅರಿವಿಗೆ ಬರಲೇ ಇಲ್ಲ. ಆಲಿಂಗನದಲ್ಲಿ ತುಟಿಗೆ ತುಟಿ ಸೇರಿಸಿ ದೀರ್ಘವಾಗಿ ಚುಂಬಿಸಿದ ಹಿತ ಒಂದು ಅದ್ಭುತ ಕಾವ್ಯ ಓದಿದ ರೀತಿಯಂತಿತ್ತು. ಬಲು ಹುಮ್ಮಸ್ಸಿನಿಂದ ಕಾಮದ ಕುದುರೆಯನು ಓಡಿಸಲು ಉತ್ಸುಕನಾದೆ.  ಪ್ರೇಮೋತ್ಸವದ ಸಂಭ್ರಮದಲ್ಲಿ ಮೀಯಲು ಅಣಿಯಾಗಿದ್ದೆ. ಪ್ರೀತಿಯ ಮಳೆಗರೆದು ದಾಹ ತೀರಿಸಲು ಮುಂದಾಗಿದ್ದೆ ಎಷ್ಟಾದರೂ ಹೆಣ್ಣು ಜೀವವಲ್ಲವೇ? ಬಯಲಲ್ಲಿ ಬೆತ್ತಲಾದರೆ ಮುಂದಾಗುವ ಆಗು ಹೋಗುಗಳಿಗೆ ಈ ಮಿಲನವೇ ಮುಳುವಾಗುವ ಯೋಚನೆ ಕಾಡಿದಾಕ್ಷಣ ನಿನ್ನ  ನಡುವಲ್ಲಿ ಸಣ್ಣಗೆ ನಡುಕ ಶುರುವಾಯಿತು. ಗುಡಿಸಲಿನಿಂದಾಚೆ ಹೆಜ್ಜೆಯಿಟ್ಟು ಹುಲಿಯಿಂದ ತಪ್ಪಿಸಿಕೊಂಡ ಹರಿಣಿಯಂತೆ ಕಾಡನ್ನು ದಾಟಿ ಊರು ತಲುಪಿದೆ.ಅಂದಿನಿಂದ ನನ್ನ ಈ ಬದುಕಿಗೆ ಮಳೆ ಚಳಿ ಬಿಸಿಲಿನ ಲೆಕ್ಕವೇ ಇಲ್ಲ. ದೇಹ ಸಮೀಪಿಸಿದರೂ ಮನಸ್ಸು ಗೆಲ್ಲಲಾಗಲಿಲ್ಲ ಎನ್ನುವ ನೋವು ಕಾಡುತ್ತಿದೆ. ಅರಿಯದೇ ಮಾಡುತ್ತಿದ್ದ ತಪ್ಪಿಗೆ ತೆರೆ ಎಳೆದು ದೊಡ್ಡ ತಪ್ಪನು ತಪ್ಪಿಸಿದೆ. ನಿನಗೆ ಅದೆಷ್ಟು ಕೃತಜ್ಞತೆ ಸಲ್ಲಿಸಿದರೂ ಸಾಲದು. ನೀನು ನನ್ನಿಂದ ದೂರವಾದ ಮೇಲೆ ಬದುಕು ಅದೆಷ್ಟೋ ಅನುಭವಗಳನು ಹೇಳಿ ಕೊಟ್ಟಿದೆ. ಬಯಲಲ್ಲಿ ಬೆತ್ತಲೆಯ ಕೋಟೆ ಏರಿದ್ದರೆ ಬದುಕಿನ ಹಳಿ ತಪ್ಪಿ ಹೋಗುತ್ತಿತ್ತು ಎನ್ನುವ ಅರಿವು ಬಂದಿದೆ. ಹೀಗೆ ಮನೆಯ ನಾಲ್ಕು ಗೋಡೆಗಳ ಮಧ್ಯೆ ಬಂಧಿಯಾಗಿಸಿಕೊಂಡು ನಿನಗೆ ನೀನು ಶಿಕ್ಷಿಸಿಕೊಳ್ಳದಿರು. ರಾಜ ಬೀದಿಯಲ್ಲಿ ನನ್ನ ಪಟ್ಟದ ರಾಣಿಯಾಗಿ ನಿನ್ನ ಸ್ವೀಕರಿಸುವ ಕಾಲ ಬಂದಿದೆ. ‘ನೀ ಒಂದು ಸಾರಿ ನನ್ನ ಮನ್ನಿಸು. ನನ್ನ ಮೇಲೆ ದಯೆ ತೋರಿಸು ಓ ಚಿನ್ನ ರನ್ನ ನನ್ನ ಪ್ರೀತಿಸು.’ ಎಂದು ಹಾಡುತ್ತ ಅದೇ ಗುಡಿಸಲಿನ ಮುಂದೆ ಕಾದು ಕುಳಿತಿರುವೆ. ನಮ್ಮೀರ್ವರ ಹೆತ್ತವರನೂ ಒಪ್ಪಿಸಿರುವೆ. ನನ್ನೊಂದಿಗೆ ಜೀವನ ಪಯಣ ಬೆಳೆಸಲೋ ಬೇಡವೋ ಎನ್ನುವ ಹೊಯ್ದಾಟದಲ್ಲಿ ಬೀಳಬೇಡ. ನಿನ್ನ ಮನಸ್ಸನ್ನು ಗೆದ್ದ ಮೇಲೆಯೇ ಮೈಗೆ ಮೈ ತಾಗಿಸುವೆ ಗೆಳತಿ. ಮೋಡ, ಮಳೆ, ಹಗಲು, ರಾತ್ರಿ, ಮುಸ್ಸಂಜೆ, ಮುಂಜಾವು, ಸಾಗರ, ನದಿ, ತೊರೆ, ಹಳ್ಳ, ಕೊಳ್ಳದ ದಂಡೆಗಳು  ಇನ್ನು ಮೇಲೆ ನಮ್ಮ ಪ್ರೀತಿ ತುಳುಕಾಡಿ ಹೊರಚೆಲ್ಲುವುದಕ್ಕೆ ಸಾಕ್ಷಿಯಾಗಿಸೋಣ. ***************************************                                                  

ನೀ ಒಂದು ಸಾರಿ ನನ್ನ ಮನ್ನಿಸು Read Post »

ಇತರೆ, ಲಹರಿ

ಕಾಡುವ ವಿಚಾರ…

ಕಾಡುವ ವಿಚಾರ… ವಸುಂಧರಾ ಕದಲೂರು               ಆ ದಿನ ನಿಜಕ್ಕೂ ಬಹಳ ಕಳವಳಪಟ್ಟಿದ್ದೆ. ಏನು ಮಾಡಿದರೂ ನನಗೆ ನಂಬಿಕೆ ಮೂಡುತ್ತಿರಲಿಲ್ಲ. ಏಕೋ ಎದೆಯಾಳದಲಿ ತೀವ್ರ ನೋವಾಗುತ್ತಿರುವ ಅನುಭವ. ಆ ಕ್ಷಣಕ್ಕೆ ಆಶಾಭಂಗದ ಅರ್ಥವೂ, ದಿಗ್ಭ್ರಮೆ ಎಂಬುದರ ಪರಿಚಯವೂ ಆಗಿಹೋಯಿತು. ಎಳೆ ಮನದ ಭಿತ್ತಿಯಲಿ  ಉದಿಸಿದ ದುಃಖ ಹಸಿ ನೆಲದಲ್ಲಿ ಬೇರೂರಿದ ಬೀಜದಂತಾಯ್ತು.       ಹೌದು, ಮೊದಲ ಬಾರಿಗೆ ಪ್ರೀತಿಯ ‘ಗಾಂಧಿ’ ಅವರ ಸಾವು ಹೇಗಾಯಿತೆಂದು ತಿಳಿದಾಗ ನನಗಾದ ಅನುಭವವೇ ಈ ಮೇಲಿನದ್ದು. ‘ಮಹಾತ್ಮ ಗಾಂಧೀಜೀ’ ಅಂತಹವರನ್ನೂ ಹೇಗೆ ಕೊಲ್ಲುವುದಕ್ಕೆ ಸಾಧ್ಯ? ಅದೂ ನಾವು ಭಾರತದವರೇ!ಬೆಚ್ಚಿ ಬಿದ್ದಿದ್ದೆ.       ದಿನಗಳು ಉರುಳುರುಳಿ ಸಾವಕಾಶದ ಪರದೆ ಸರಿದು ಅಗೋಚರ ಸಟೆಗಳೂ, ಉಳಿದ ಹಲವು ಸತ್ಯಗಳೂ ದೃಗ್ಗೋಚರವಾಗುತ್ತಾ ಆಗುತ್ತಾ ನನ್ನನ್ನು ಕಂಗೆಡಿಸಿದವು. ಸಮಾಧಾನ ಪಡೆಯುವ ಹಂಬಲಕೆ ಯಾರೂ ದಾರಿ ತೋರುತ್ತಿಲ್ಲ. ಹತಾಶೆ ಗೊಂದಲದ ಗೊಂಡಾರಣ್ಯ ಹೊಕ್ಕು ಸಿಕ್ಕ ಸಿಕ್ಕ ಸಿಕ್ಕುಗಳನು ಬಿಡಿಸುತ್ತಾ ಮತ್ತೆ ಹೆಣೆಯುತ್ತಾ ಅಬ್ಬೇಪಾರಿಯಾಗಿ ನಿಂತ ಭಾವ ನನ್ನದಾಗಿತ್ತು.      ಗಾಂಧಿ ಮಾತ್ರವೇ ಅಲ್ಲ, ಕೃಷ್ಣ(?), ಕ್ರಿಸ್ತ, ಬಸವಣ್ಣ…..!! ಏಕೆ ಈ ಜಗತ್ತು ನ್ಯಾಯಪರವಾಗಿರುವುದಿಲ್ಲ? ಬೆಳಕನ್ನು ಕಾಣಬಯಸದೇ ಕತ್ತಲಿನಲ್ಲಿ  ಕಡಲ ದಡದ ಬಂಡೆಗೆ ಅದೆಷ್ಟು ನಿರಂತರದ ಅಲೆಗಳ ಬಡಿದಂತೆ. ಕಣ್ಣ ಮುಂದೆಯೇ ಒಂದು ಸೊಗಸಾದ ಚಿತ್ರವನು ತಿರುಚಿ ಮುರುಟಿ ತಿಪ್ಪೆಗೆಸೆದಂತೆ. ಆಗ ತಿಳಿದ ಸತ್ಯಗಳೂ… ಆಮೇಲಿನ ದೊಂದಿ ಹಚ್ಚಿ ಕಾಣಿಸುವ ಸುಳ್ಳುಗಳೂ… ಈಗಲೂ ನನ್ನನ್ನು ಕಾಡುತ್ತಲೇ ಇವೆ. ಇದಾವುದರ ಗೊಡವೆಗೆ ಹೋಗದೇ ನಿರಾಳದಲ್ಲಿ ಸಮಾಧಿ ಆಗಿಹೋದ ನನ್ನ ಹಿರೀಕರು ನೆನಪಾಗುತ್ತಾರೆ. ಎಂಥಾ ನೆಮ್ಮದಿಯ ಬದುಕು ಅವರದ್ದಿತ್ತೆಂದು ಯಾವಾಗಲೂ ಅನಿಸುತ್ತದೆ. ಆದರೆ, ಬೆಳಕ ಕಿಡಿ ಕಂಡ ಮೇಲೂ ಅದಕ್ಕೆ ಬೆನ್ನು ತಿರುಗಿಸಿ ಪಾತಾಳದ ಆಳದಲಿ ಬದುಕುವುದು ನನಗೆ ಸಾಧ್ಯವಾದೀತೆ!?            ಸತ್ಯವು ತಿಳಿಯಲಾರದೆಂದಲ್ಲ, ತಿಳಿಯಾಗಲಾರದ ರಾಡಿಯಲ್ಲೇ ಈಗ ಬದುಕುತ್ತಿರುವಾಗ ಕನಸು ಹುಟ್ಟದ  ಕತ್ತಲಲ್ಲಿ ಸೊಗಸಾದ ನಿದ್ರೆಗಳನು ಕಾಣುವುದು ಹೇಗೆ?  ಅಪಾರ ನೆಮ್ಮದಿಯ ರಾತ್ರಿಗಳನ್ನು ಕಂಡಿದ್ದ ಪೂರ್ವಿಕರು  ಹೆಚ್ಚು ಒಳ್ಳೆಯ ಅಭಿರುಚಿ ಇದ್ದವರೆಂದೂ, ಸುಖಿಗಳೆಂದೂ, ಸಿರಿವಂತರೆಂದೂ ನಾನು ಗಟ್ಟಿಯಾಗಿ ನಂಬುತ್ತೇನೆ.       ನನ್ನನ್ನು ಕಾಡುವ ಇತಿಹಾಸಗಳು ನನ್ನ ಕನಸಿಗೂ ಕನ್ನ ಹಾಕುತ್ತಿವೆ. ಹಾಗಾದರೆ ಇತಿಹಾಸ ಓದಲೇ ಬಾರದೆ?  ಅಥವಾ ಓದಬಾರದ ಚರಿತ್ರೆಗಳೂ ಇವೆಯೇ?! ಗೊತ್ತಿಲ್ಲ. ಏಕೆಂದರೆ ಗಾಂಧಿ, ಬಸವಣ್ಣ ಅಂತಹವರ ಸಾವು ಹಾಗೂ ಅದರ ಕಾರಣಗಳು ಆಗ ನಾನು ಪಾಠ ಓದುವ ಹುಡುಗಿಯಾಗಿದ್ದಾಗ ಅಪಾರ ವೇದನೆಯೊಡನೆ ದಿಗ್ಭ್ರಮೆ ತಂದಿದ್ದರೆ, ಈಗ ಈ ನೆಲದ ಮೇಲೆ ಜವಾಬ್ದಾರಿಯುಳ್ಳ ಪ್ರಜೆಯಾಗಿ ಬದುಕಬೇಕೆಂದು ನಿಶ್ಚಯಿಸಿರುವಾಗ, ಇಲ್ಲಿ ಕಂಡುಬರುತ್ತಿರುವ ಹಲವು ಸಾಮಾಜಿಕ ಸನ್ನಿವೇಶಗಳ ಹಿನ್ನೆಲೆಯಲ್ಲಿ ಹೆಚ್ಚು ಕಾಡುತ್ತಿವೆ. ***********************************

ಕಾಡುವ ವಿಚಾರ… Read Post »

ಇತರೆ

ನೆಲೆ ಸಂಭ್ರಮ – 2020

ನೆಲೆ ಸಂಭ್ರಮ – 2020 ಫೇಸ್ಬುಕ್ ನಲ್ಲಿ ಕಾವ್ಯ ಓದುವುದರ ಮೂಲಕ ಕತೆ ಕೇಳುತ್ತಲೇ ಚಿಂತನೆಗಳನ್ನು ಮೆಲುಕು ಹಾಕುವುದರ ಜೊತೆಗೆ ನೆಲೆ ಸಂಭ್ರಮವನ್ನು ಆಚರಿಸೋಣ ಬನ್ನಿ…… ಎನ್ನುತ್ತಲೇ ಆರಂಭವಾದ ಸಿಂದಗಿಯ ನೆಲೆ ಪ್ರಕಾಶನ ಸಂಸ್ಥೆಗೆ ಇದೀಗ ನಾಲ್ಕು ದಶಕಗಳನ್ನು ಪೂರೈಸುತ್ತಿದೆ. ಇದರ ಹುಟ್ಟಿಗೆ ಪ್ರಮುಖ ಕಾರಣರು ಇದರ ಜೋಡಿ ಸ್ಥoಭದಂತಿರುವ ಡಾ. ಎಂ ಎಂ ಪಡಶೆಟ್ಟಿ ಹಾಗೂ ಡಾ. ಚನ್ನಪ್ಪ ಕಟ್ಟಿಯವರು. ಹವ್ಯಾಸಕ್ಕಾಗಿ ಹುಟ್ಟಿಕೊಂಡ ಸಂಸ್ಥೆ ಸ್ಥಳೀಯ ಲೇಖಕರ ಹಾಗೂ ಮಹಿಳೆಯರ ಕೃತಿಗಳ ಪ್ರಕಟಣೆಗೆ ಆದ್ಯತೆ ನೀಡುವುದರ ಜೊತೆಗೆ ಸಾಹಿತ್ಯದ ವಿವಿಧ ಪ್ರಕಾರಗಳಿಗೆ ಸಂಬಂಧಿಸಿದಂತೆ ಭಿನ್ನ ಭಿನ್ನ ಪ್ರಾದೇಶಿಕ ನೆಲೆಯಿಂದ ಸಾಹಿತ್ಯ ಪರಿಚಾರಿಕೆಯ ಕೆಲಸವನ್ನು ಮಾಡುತ್ತ ಬಂದಿದೆ. ಇದೀಗ ಕೊರೋನಾ ಪರಿಣಾಮವಾಗಿ ಪ್ರತಿವರ್ಷವೂ ಕಾರ್ಯಕ್ರಮ ಆಯೋಜನೆ ಮಾಡುತ್ತಿದ್ದ ನೆಲೆ ಸಂಸ್ಥೆ ಈ ಬಾರಿ ಫೇಸ್ಬುಕ್ ಲೈವ್ ನ ಮೂಲಕ ಕಾರ್ಯಕ್ರಮ ಆಯೋಜಿಸಿದ್ದು ರಾಜ್ಯ, ದೇಶ ಹಾಗೂ ದೇಶದಾಚೆಗೂ ಪಸರಿಸಿದ್ದು ಇದರ ಯಶಸ್ಸಿಗೆ ಸಾಕ್ಷಿಯಾಗಿ ನಿಂತಿದೆ. ಆಕರ್ಷಕ ಮಾದರಿಯಲ್ಲಿ ಆರಂಭವಾದ ನೆಲೆ ಸಂಭ್ರಮವು ವಿವಿಧ ಹಿರಿಯ ಚಿಂತಕರಾದ ಜಯಂತ್ ಕಾಯ್ಕಿಣಿ(ಹಿರಿಯ ಕವಿ, ಕತೆಗಾರರು ), ಪ್ರೊ. ಸಿ ಎಸ್. ಭೀಮರಾಯ (ಸಿ ಎಸ್ಪಿ- ಕವಿ ವಿಮರ್ಶಕರು), ಡಾ. ರಾಜಶೇಖರ ಮಠಪತಿ (ರಾಗಂ – ಹಿರಿಯ ಕವಿಗಳು ), ಡಾ. ಶ್ರೀರಾಮ ಇಟ್ಟಣ್ಣವರ ( ನಿಕಟಪೂರ್ವ ಅಧ್ಯಕ್ಷರು, ಕರ್ನಾಟಕ ಬಯಲಾಟ ಅಕಾಡೆಮಿ ಬೀಳಗಿ ), ಡಾ. ಬಾಳಾಸಾಹೇಬ ಲೋಕಾಪುರ(ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯರು – ನವದೆಹಲಿ) ಮುಂತಾದವರ ಆಶಯ ನುಡಿಗಳೊಂದಿಗೆ ಕಾರ್ಯಕ್ರಮದ ರಂಗೇರಿಸಿತು. ಜುಲೈ 19 ರಿಂದ ಆಗಸ್ಟ್ 11 ರವರೆಗೆ ನಿರಂತರವಾಗಿ ಫೇಸ್ಬುಕ್ ಲೈವ್ ಮೂಲಕ ಅಚ್ಚುಕಟ್ಟಾದ ನಿರ್ವಹಣೆಯೊಂದಿಗೆ ಆರಂಭವಾದ “ನೆಲೆ ಸಂಭ್ರಮ -2020” ಅತ್ಯಂತ ಯಶಸ್ವಿಯಾಗಿ ನಡೆದು ಇದರಲ್ಲಿ ಭಾಗವಹಿಸಿದ ಎಲ್ಲಾ ಉತ್ಕೃಷ್ಟ ಕವಿಮನಸುಗಳ ಸವಿನೆನಪುಗಳನ್ನು ಶಾಶ್ವತವಾಗಿಸಲು ಇದೀಗ ಮೂರು ಕೃತಿಗಳನ್ನು ಕೂಡ ಕನ್ನಡ ಸಾರಸ್ವತ ಲೋಕಕ್ಕೆ ಕೊಡುಗೆಯಾಗಿಸಲು ಅಣಿಗೊಳಿಸಲಾಗುತ್ತಿದೆ. ಕ್ರಮವಾಗಿ “ಬಯಲ ರೆಕ್ಕೆಗಳು”, “ಕಥಾ ಕಾಲಕ್ಷೇಪ”‘ ಹಾಗೂ “ಸಂಕಥನ” ಎಂಬ ಬಹುಕಾಲ ಗಟ್ಟಿಯಾಗಿ ಉಳಿಯಬಲ್ಲ ಮೂರು ಮಹತ್ವದ ಕೃತಿಗಳನ್ನು ದೇವು ಮಾಕೊಂಡ, ಮನು ಪತ್ತಾರ ಹಾಗೂ ಡಾ. ಶ್ರೀಶೈಲ ನಾಗರಾಳ ರವರುಗಳು ಸಂಪಾದಿಸಿದ್ದಾರೆ. ನೆಲೆ ಸಾಹಿತ್ಯ ಸಂಭ್ರಮ-2020 ಕಾವ್ಯ ಕಂತು, ಕಥಾ ಸಪ್ತಾಹ ಹಾಗೂ ಚಿಂತನಾ ಸಪ್ತಾಹವೆಂದು ಮೂರು ಹಂತಗಳಲ್ಲಿ ನಡೆಯಿತು. ಕಾವ್ಯಸಪ್ತಾಹವು 7 ಕಂತುಗಳಲ್ಲಿ ನಡೆದು ನಾಡಿನ ವಿವಿಧ ಮೂಲೆಗಳಿಂದ ಹಾಗೂ ಅನ್ಯ ರಾಜ್ಯ, ಅನ್ಯ ದೇಶದಿಂದಲೂ ಒಟ್ಟು 41ಕ್ಕೂ ಹೆಚ್ಚು ಕವಿಗಳು ಇದರಲ್ಲಿ ಭಾಗವಹಿಸಿದ್ದು ವಿಶೇಷ. ಇದರಲ್ಲಿ ಒಂದು ಗಜಲ್ ಗೋಷ್ಠಿಯನ್ನು ಕೂಡ ಆಯೋಜಿಸಲಾಗಿತ್ತು. ಜುಲೈ 19 – 2020 ರಿಂದ ಆರಂಭವಾದ ಕಾವ್ಯಗೋಷ್ಠಿಯ ಜೊತೆಜೊತೆಗೆ “ಕಾವ್ಯದಲ್ಲಿ ಶೋಧದ ದಾರಿ” ಕುರಿತು ಡಾ. ರಾಜಶೇಖರ ಮಠಪತಿಯವರು, “ಸಾಮಾಜಿಕ ಜವಾಬ್ದಾರಿ ಮತ್ತು ಕಾವ್ಯ” ಕುರಿತು ಪ್ರೊ. ಎಲ್. ಎನ್. ಮುಕುಂದರಾಜ್ ರವರು, “ವರ್ತಮಾನದ ಕಾವ್ಯದ ಅನುಸಂಧಾನ” ಕುರಿತು ಡಾ. ದೇವೇಂದ್ರಪ್ಪ ಜಾಜಿಯವರು, “ಗಂಗಾಧರ ಚಿತ್ತಾಲರ ಕಾವ್ಯದಲ್ಲಿ ರೂಪಕ ಮತ್ತು ಪ್ರತಿಮೆ” ಗಳ ಕುರಿತು ಡಾ. ಸುರೇಶ ನಾಗಲಮಡಿಕೆಯವರು, “ಕಾವ್ಯದ ಸ್ವರೂಪ -ಓದುವ ಬಗೆಗಳು” ಕುರಿತು ಡಾ.ಎನ್ ದುಂಡಪ್ಪ ರವರು, “ಸರಕು ಸಮಾಜದಲ್ಲಿ ಕಾವ್ಯ ವ್ಯವಸಾಯ” ಕುರಿತು ಪ್ರೊ. ಕಮಲಾಕರ ಭಟ್ ಅಹ್ಮದ್ ನಗರ ಹಾಗೂ “ಗಾಲಿಬ್ ಗಜಲ್ ನಲ್ಲಿ ವಸ್ತು ವೈವಿದ್ಯತೆ” ಕುರಿತಾಗಿ ಗಿರೀಶ್ ಜಕಾಪುರೆಯವರು ಹೀಗೆ ಅತ್ಯಂತ ಮಹತ್ವದ ಸಂಗತಿಗಳನ್ನು ಹಂಚಿಕೊಂಡರು. ತದನಂತರ ಕಥಾ ಸಪ್ತಾಹದ ಸರಣಿಯಲ್ಲಿ ಹಲವಾರು ಪ್ರಸಿದ್ಧ ಕತೆಗಾರರು ಭಾಗವಹಿಸಿದ್ದರು.. ಅವರಲ್ಲಿ ಡಾ. ಕೇಶವ ಮಳಗಿಯವರು “ಕನ್ಯಾಗತ ಕತೆ”, ಡಾ. ಬಸು ಬೇವಿನಗಿಡದರವರು “ನೆರಳಿಲ್ಲದ ಮರ” ಕತೆಯನ್ನು, ನಟ ಮಂಡ್ಯ ರಮೇಶ್ ರವರು ಚದುರಂಗ ಅವರ “ಸಾವಿನ ಮನೆ” ಕತೆಯನ್ನು, ದೀಪ್ತಿ ಭದ್ರಾವತಿಯವರು “ನೆರಳಿನಾಚೆ” ಕತೆಯನ್ನು, ಅನುಪಮಾ ಪ್ರಸಾದ್ ರವರು “ಸೈತಾನನ ಬಲೆ” ಕತೆಯನ್ನು, ರಾಜಶೇಖರ ಹಳೆಮನೆ ಅವರು ” ಗೋಡೆಯ ಚಿತ್ರ”, ಚೀಮನಹಳ್ಳಿ ರಮೇಶಬಾಬು ಅವರು “ಹುಣಸೆ ಮರ”, ಆನಂದ ಕುಂಚನೂರು ಅವರು “ಗಂಧರ್ವ ಪಟ್ಟಣ” ಮತ್ತು ಕೊನೆಯದಾಗಿ ಕಪಿಲ್ ಹುಮನಾಬಾದ್ ರವರು “ನಿರೋಷ”.. ಹೀಗೆ ಎಲ್ಲಾ ಕಥೆಗಳು ವಿಭಿನ್ನ ಕಥಾವಸ್ತುಗಳನ್ನು ಒಳಗೊಂಡಿದ್ದು ಕತೆಗಾರರು ಮನೋಜ್ಞವಾಗಿ ಮನ ಮುಟ್ಟುವಂತೆ ವಾಚಿಸಿದರು. ನಂತರದಲ್ಲಿ ಚಿಂತನಾ ಸಪ್ತಾಹದಲ್ಲೂ ಮೇರು ಚಿಂತಕರು ಪಾಲ್ಗೊಂಡು ವಿವಿಧ ಆಯಾಮಗಳಲ್ಲಿ ತಮ್ಮ ಚಿಂತನಾ ಲಹರಿಗಳನ್ನು ಹರಿಯಬಿಟ್ಟರು. ಅವರಲ್ಲಿ ಡಾ. ರಹಮತ್ ತರೀಕೆರೆಯವರು “ತತ್ವಪದದಲ್ಲಿ ಅರಿವಿನ ನೆಲೆ”, ಡಾ. ಜಿ. ಪಿ. ಬಸವರಾಜುರವರು “ಬೊಗಸೆಯಲ್ಲಿ ಬುದ್ಧ”, ಡಾ. ಬಾಳಾಸಾಹೇಬ ಲೋಕಾಪುರರವರು “ಪ್ರಪ್ರಾಚೀನ ಜೈನ ಕಥೆಗಳು ಮತ್ತು ಲೋಕಪ್ರಜ್ಞಪ್ತಿ”, ಡಾ. ನಟರಾಜ್ ಬೂದಾಳ್ ರವರು “”ನಾಗಾರ್ಜುನನೆಂಬ ಜ್ಞಾನಸೂರ್ಯ” ಕುರಿತು, ಡಾ. ಪುರುಷೋತ್ತಮ ಬಿಳಿಮಲೆಯವರು “ತುಳು ಜಾನಪದ”, ಡಾ. ಬಸವರಾಜ ಡೋಣೂರ ಅವರು “ಬೇಂದ್ರೆ -ಕೀಟ್ಸ್ ತೌಲನಿಕ ಅಧ್ಯಯನ” ಕುರಿತಾಗಿ, ಡಾ. ಶ್ರೀಶೈಲ ನಾಗರಾಳ ಅವರು “ಜಾನಪದ ಲೋಕರೂಢಿ”… ಹೀಗೆ ವಿವಿಧ ವಸ್ತುವಿಷಯಗಳನ್ನು ಒಳಗೊಂಡು ಚಿಂತನೆಗೆ ಹಚ್ಚಿದರು. ಇಷ್ಟೂ ದಿನಗಳು ನಡೆದಂತಹ ಸಾಹಿತ್ಯಸುಗ್ಗಿಯ ಸಂಭ್ರಮವನ್ನು ಕುರಿತು, ನೆಲೆ ಪ್ರಕಾಶನ ಸಂಸ್ಥೆಯ ಹುಟ್ಟಿನಿಂದ ಹಿಡಿದು ಇಲ್ಲಿಯವರೆಗೆ ನಡೆದುಬಂದ ಪಯಣ, ನೆಟ್ಟ ಹೆಜ್ಜೆಗಳು ಮುಂತಾದ ವಿಷಯಗಳ ಕುರಿತು ಡಾ. ಶ್ರೀರಾಮ ಇಟ್ಟಣ್ಣನವರ ಅವರು ತಮ್ಮ ಸಮಾರೋಪ ನುಡಿಗಳಲ್ಲಿ ಸವಿಸ್ತಾರವಾಗಿ ಹೇಳಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸರ್ವರಿಗೂ ಕೃತಜ್ಞತಾ ನುಡಿಗಳನ್ನು ಈ ಸಂಸ್ಥೆಯ ಆಧಾರ ಸ್ಥoಭಗಳಾದ ಡಾ. ಎಂ. ಎಂ ಪಡಶೆಟ್ಟಿ ಹಾಗೂ ಡಾ. ಚನ್ನಪ್ಪ ಕಟ್ಟಿಯವರು ತಿಳಿಸಿದರು. ಯಾವುದೇ ಒಂದು ಕಾರ್ಯಕ್ರಮವನ್ನು ಆಯೋಜನೆ ಮಾಡಿ ಯಶಸ್ವಿಗೊಳಿಸುವುದೆಂದರೆ ಅಷ್ಟು ಸುಲಭದ ಮಾತಲ್ಲ. ಅಂತೆಯೇ ಒಂದು ಯಶಸ್ವಿ ಕಾರ್ಯಕ್ರಮದ ಹಿಂದೆ ಹಲವಾರು ಕಾಣದ ಕೈಗಳ ಸಹಕಾರ, ಪರಿಶ್ರಮವಿರುತ್ತದೆ, ಗೆಳೆಯರ ಬಳಗವಿರುತ್ತದೆ, ಹಿರಿಯರ ಮಾರ್ಗದರ್ಶನವಿರುತ್ತದೆ. ಹೀಗೆ ಎಲ್ಲವನ್ನೂ ಒಗ್ಗೂಡಿಸಿ ದೇಶದೆಲ್ಲೆಡೆ ಮಹಾಮಾರಿಯಾಗಿ ಹರಡಿ ಜನರನ್ನು ಕಾಡುತ್ತಿರುವ ಈ ಕೊರೋನಾ ಕಾಲದಲ್ಲೂ ಸಾಮಾಜಿಕ ಜಾಲತಾಣಗಳ ಮೂಲಕ ಆಯೋಜಿಸಲಾಗಿದ್ದ ನೆಲೆ ಸಂಭ್ರಮ -2020 ಸಾಹಿತ್ಯಾತ್ಮಕ ಕಾರ್ಯಕ್ರಮವು ಈಗ ಮಗದೊಂದು ಹೆಜ್ಜೆಗುರುತನ್ನು ಮೂಡಿಸಿರುವುದು ಸ್ತುತ್ಯಾರ್ಹ. ಇನ್ನು ಈ ಕಾರ್ಯಕ್ರಮದ ನಿರ್ವಹಣೆಯ ಜವಾಬ್ದಾರಿ ಹೊತ್ತ ದೇವು ಮಾಕೊಂಡ ರವರು ಕಾರ್ಯಕ್ರಮದ ಆದಿಯಿಂದ ಅಂತ್ಯದವರೆಗೆ ಎಲ್ಲವನ್ನೂ ಅಚ್ಚುಕಟ್ಟಾಗಿ ಮೂಡಿಬರುವಂತೆ ಕಾಳಜಿ ವಹಿಸಿ, ಇಂತಹ ಒಂದು ಕಾರ್ಯಕ್ರಮವನ್ನು ಸವಿಯಲು ಅನುವು ಮಾಡಿಕೊಟ್ಟು ಹಲವು ಪ್ರತಿಭೆಗಳಿಗೆ ಆನ್ಲೈನ್ ಮೂಲಕವೇ ವೇದಿಕೆ ಒದಗಿಸಿಕೊಟ್ಟು ಯಶಸ್ವಿಗೊಳಿಸಿದ್ದು ಆದರ್ಶನೀಯ. ಇಂತಹ ನೂರಾರು ಸಾವಿರಾರು ಕಾರ್ಯಕ್ರಮಗಳು ಇನ್ನು ಮುಂದೆಯೂ ಜರುಗಲಿ.. ಕನ್ನಡಮ್ಮನ ಸೇವೆ ನಿರಂತರವಾಗಿರಲಿ ಎಂದು ಆಶಿಸುತ್ತಾ ನನ್ನೆರಡು ಅಭಿಮಾನದ ನುಡಿಗಳಿಗೆ ವಿರಾಮ ನೀಡುತ್ತಿದ್ದೇನೆ. ********************************** ತೇಜಾವತಿ ಹೆಚ್.ಡಿ.

ನೆಲೆ ಸಂಭ್ರಮ – 2020 Read Post »

ಇತರೆ

ನನ್ನ ಇಷ್ಟದ ಕವಿತೆ

ಪೂಜಾ ನಾಯಕ್ ಬೆಳಗು ಜಾವ ರಚನೆ :ದ. ರಾ. ಬೇಂದ್ರೆ ಏಳು ಚಿನ್ನ, ಬೆಳಗಾಯ್ತು ಅಣ್ಣ, ಮೂಡಲವು ತೆರೆಯೆ ಕಣ್ಣ, ನಕ್ಷತ್ರ ಜಾರಿ, ತಮವೆಲ್ಲ ಸೋರಿ, ಮಿಗಿಲಹುದು ಬಾನ ಬಣ್ಣ ಜೇನ್ನೊಣದ ಹೆದೆಗೆ, ಹೂಬಾಣ ಹೂಡಿ, ಜುಮ್ಮೆಂದು ಬಿಟ್ಟ ಮಾರ ಗುಡಿಗೋಪುರಕ್ಕು, ಬಲೆ ಬೀಸಿ ಬಂದ, ಅಗೋ ಬೆಳಕು-ಬೇಟೆಗಾರ. ನಿಶೆಯಿಳಿದ ಉಷೆಯ, ಎಳನಗೆಯ ಬಗೆಗೆ, ಸೋತಿರಲು ಜಗವು ಸವಿಗೆ ಕಣ್ಣಿದಿರು ಒಂದು, ಕಟ್ಟಿತ್ತು ಕನಸು; ಕೂಗೊಂದು ಬಂತು ಕಿವಿಗೆ. ಮಕ್ಕಳಿರ ಕೇಳಿ, ರಸ ಕುಡಿಯಲೇಳಿ, ಹುಸಿನಿದ್ದೆಗಿದ್ದೆ ಸಾಕು ಈ ತುಂಬಿಬಾಳು, ತುಂಬಿರುವ ತನಕ, ತುಂತುಂಬಿ ಕುಡಿಯಬೇಕು. ಯಾವಾಗೊ ಕೋಳಿ ಕೂಗಿಹುದು ಏಳಿ, ತಡವೇಕೆ ಪಾನಕೇಳಿ ಮೊದಲಾಗಲೀಗ, ಅಂಗಡಿಯ ಕದವ ಈ ಕ್ಷಣಕೆ ತೆರೆಯ ಹೇಳಿ ಜೀವನದ ನದಿಗೆ ಸೆಳವಿಹುದು, ಮರಣ ಬಂದೀತು ಕ್ಷಣವು ಉರುಳಿ ಹೋದವರು ತಿರುಗಿ ಬಂದಾರೆ, ಅವರು ಬರಲಿಕ್ಕು ಇಲ್ಲ ಮರಳಿ. ಬಾನ್ ಹೊಗರಲುಂಟು, ಮರ ಚಿಗುರಲುಂಟು, ಬರಲುಂಟೆ ಸುಗ್ಗಿ ಮತ್ತೆ? ಮುಳುಗಿರಲಿ ಮುಪ್ಪು ಚಿಂತನದಿ, ತಾನು ಹರಯಕ್ಕೆ ಬೇರೆ ಹೊತ್ತೆ?    ನಿಜವಾದ ಕವಿತೆಯೆಂಬುದು ತನ್ನಷ್ಟಕ್ಕೆ ತಾನೇ ಇಂದಿನವರೆಗೆ ಉಳಿದಿದೆ ಮತ್ತು ಎಂದೆಂದಿಗೂ ಉಳಿಯುತ್ತದೆ ಎಂಬುದಕ್ಕೆ ಆಧುನಿಕ ಕನ್ನಡ ಸಾಹಿತ್ಯದ ಅಪೂರ್ವ ಪ್ರತಿಭೆಗಳಲ್ಲಿ ಒಬ್ಬರಾದ ದ. ರಾ. ಬೇಂದ್ರೆಯವರ ‘ಬೆಳಗು ಜಾವ’ ಕವಿತೆಯೇ ಒಂದು ಉತ್ತಮ ನಿದರ್ಶನವಾಗಿ ಇಂದಿಗೂ ನಮ್ಮ ಮುಂದೆ ಇದ್ದು ಈ ಕವಿತೆಯನ್ನು ಓದಿದ ಎಷ್ಟೋ ಯುವಕರ ಬಾಳನ್ನು ಹಸನಾಗಿಸಿದೆ ಎಂದರೆ ತಪ್ಪಾಗಲಿಕ್ಕಿಲ್ಲ . ಈ ಕವಿತೆಯನ್ನು ನಾನು ಮೊಟ್ಟಮೊದಲ ಬಾರಿ ಓದಿದ್ದು ನಾನು ದ್ವಿತೀಯ ಪಿಯುಸಿ  ಇರುವಾಗ ನಮ್ಮ ಕಾಲೇಜಿನ ಪಠ್ಯದಲ್ಲಿ.  ಅದ್ಯಾಕೋ ಗೊತ್ತಿಲ್ಲ ನನಗೆ ಈ ಕವಿತೆಯನ್ನು ಓದಿದಾಗ, ಒಂದು ಸಾರಿಯ ಓದಿಗೆ ಕೊನೆಗೊಳಿಸಬೇಕು ಎಂದೆನಿಸದೇ ಮಗದೊಮ್ಮೆ ಓದಬೇಕು ಎಂದೆನಿಸಿತು. ಆದರೆ ಮೊದಲ ಬಾರಿ ಓದಿದಾಗ ದ. ರಾ ಬೇಂದ್ರೆಯವರು ಕೇವಲ ಈ ಕವಿತೆಯಲ್ಲಿ ಮುಂಜಾನೆಯ ನಿಸರ್ಗದ ಸೌಂದರ್ಯವನ್ನಷ್ಟೇ ವರ್ಣನೆ ಮಾಡಿದ್ದಾರೆ ಎಂದು ಭಾವಿಸಿದ್ದೆ ತದನಂತರ ಈ ಕವಿತೆಯಲ್ಲಿ ಕೇವಲ ಬೆಳಗು ಜಾವದ ವರ್ಣನೆಯನ್ನಷ್ಟೇ ಮಾಡಿದ್ದಲ್ಲ, ಅದರಲ್ಲಿ ಯೌವನಿಗರಿಗೆ ನೀಡಿದ ಅದ್ಬುತವಾದ ಸಂದೇಶವನ್ನು ಕೂಡಾ ಕವಿ ತಮ್ಮ ಕವಿತೆಯೊಳಗೆ ಹುದುಗಿಸಿಟ್ಟಿದ್ದಾರೆ ಎಂದು ತಿಳಿದ ಬಳಿಕ ನನಗೆ ಈ ಕವಿತೆ ಇನ್ನೂ ಹೆಚ್ಚು ಇಷ್ಟವಾಯಿತು. ನವೋದಯ ಕವಿಗಳು ಪ್ರಕೃತಿ ಸೌಂದರ್ಯವನ್ನು ವರ್ಣಿಸುವ ಕೆಲವು ಪರಿಗಳನ್ನು ಇಲ್ಲಿ ಗಮನಿಸುವುದರ ಮುಖಾಂತರ ಬೆಳಗು ಜಾವದ ಅತ್ಯದ್ಭುತ  ಕಲ್ಪನೆ ಮತ್ತು ಅದರ ಮಹತ್ವವನ್ನು ನಾವು ಅರಿತುಕೊಳ್ಳಬಹುದು. ಮೊದಲಿಗೆ ಸೂರ್ಯೋದಯದ ಸರಳ ಸುಂದರ ವರ್ಣನೆ ನೋಡಿ : ಏಳು ಚಿನ್ನ, ಬೆಳಗಾಯ್ತು ಅಣ್ಣ, ಮೂಡಲವು ತೆರೆಯೆ ಕಣ್ಣ, ನಕ್ಷತ್ರ ಜಾರಿ, ತಮವೆಲ್ಲ  ಸೋರಿ, ಮಿಗಿಲಹುದು ಬಾನ ಬಣ್ಣ ಜೇನ್ನೊಣದ ಹೆದೆಗೆ, ಹೂಬಾಣ ಹೂಡಿ, ಝಂ ಎಂದು ಬಿಟ್ಟ ಮಾರ ಗುಡಿಗೋಪುರಕ್ಕು, ಬಲೆ ಬೀಸಿ ಬಂದ, ಅಗೋ ಬೆಳಕು ಬೇಟೆಗಾರ. ಇದು ಸುತ್ತಣ ನಿಸರ್ಗದಲ್ಲಿ ಒಂದು ಬೆಳಗಿನ ಸೌಂದರ್ಯಾನುಭವವನ್ನು ಪಡೆದ ಕವಿಯ ಉಲ್ಲಾಸದ ಕರೆಯನ್ನು ನೀಡಿದರೆ, ಮತ್ತೊಂದೆಡೆ ಯೌವನಿಗರಿಗೆ ಎಚ್ಚರಿಸುವ ಕರೆ! ಏನು ಸೋಜಿಗ ಈ ಕವಿಯ ರೀತಿ! ಪುಟ್ಟ-ಪುಟ್ಟ ಸಂಗತಿಯ ಸೌಂದರ್ಯವೂ ಕೂಡ ಇಲ್ಲಿ ಕವಿಗೆ ಸೋಜಿಗವಾಗಿ ಕಾಡಿದಂತಿದೆ. ಪ್ರಕೃತಿಯ ಅದ್ಭುತ ಸೌಂದರ್ಯ ತುಂಬಿ ತುಳುಕುವ ‘ಬೆಳಗು ಜಾವ’ ಕವನ ಮುಂಜಾನೆಯ ಚೈತನ್ಯ,ಶಾಂತಿ, ಉಲ್ಲಾಸ, ಆಹ್ಲಾದಗಳನ್ನು ಚೇತೋಹಾರಿಯಾಗಿ ವ್ಯಕ್ತ ಪಡಿಸುತ್ತದೆ. ಮೂಡಲ ಮನೆಯ ತೆರೆದ ಬಾಗಿಲಿನಿಂದ  ಹರಿದ ಹೊಂಬೆಳಕು ಜಗವನ್ನೆಲ್ಲಾ ಬೆಳಗಿರುವ ಇಲ್ಲಿನ ಕಲ್ಪನೆ ರಮೋಜ್ವಲವಾದುದು. ನಮ್ಮ ದ. ರಾ. ಬೇಂದ್ರೆಯವರು ಅಲೆ ಅಲೆಯಾಗಿ ಹೊಮ್ಮುವ ಪ್ರಕೃತಿ ಸೌಂದರ್ಯದ ಸಾಗರದೊಳಕ್ಕೆ ಮುಳುಗಿ ರಸಾನುಭವವನ್ನು ಪಡೆದಿದ್ದಾರೆ. ಅವರಿಗೆ ಈ ಒಂದು ಅನುಭವ ಕೇವಲ ಐಂದ್ರಿಕವಾಗಿರದೆ ಅಧ್ಯಾತ್ಮದ ಔನತ್ಯಕ್ಕೇರುವ  ಸ್ವರ್ಣ ಸೋಪಾನವೂ ಆಗಿದೆ ಎನ್ನಬಹುದು. ಬೆಳಗು ಜಾವ ಆನಂದಮಯವೆಂದೂ,  ಇದು ಪ್ರಕೃತಿ ನಮಗೆ ನೀಡಿದ ವರವೆಂದೂ ತಿಳಿದು ಆನಂದಿಸಿದ ಕವಿಗೆ ಅದರ ಇನ್ನೊಂದು ಮಗ್ಗಲು ತಿಳಿದಿತ್ತು. ಪ್ರಕೃತಿಯ ವರವಾದ ಬೆಳಗು ಜಾವದಲ್ಲಿ ಸೌಂದರ್ಯವಿರುವಂತೆ ಯೌವನಿಗರ ಬದುಕಿಗೆ ಅದಮ್ಯ ಚೈತನ್ಯವನ್ನು ತುಂಬುವ ಅಪಾರ ಶಕ್ತಿಯೂ ಕೂಡಾ ಇರುವುದು ಕವಿಗೆ ಕಾಣಿಸದೇ ಹೋಗಿಲ್ಲ. ಹಾಗಾಗಿಯೇ ಕವಿ ಅದನ್ನು ಗುರುತಿಸಿ ತನ್ನ ಕಾವ್ಯದಲ್ಲಿ ಚಿತ್ರಿಸಿದ್ದಾನೆ: ನಿಶೆಯಿಳಿದ ಉಷೆಯ, ಎಳನಗೆಯ ಬಗೆಗೆ, ಸೋತಿರಲು ಜಗವು ಸವಿಗೆ ಕಣ್ಣಿದಿರು ಒಂದು, ಕಟ್ಟಿತ್ತು ಕನಸು; ಕೂಗೊಂದು ಬಂತು ಕಿವಿಗೆ. ಮಕ್ಕಳಿರ ಕೇಳಿ, ರಸಕುಡಿಯಲೇಳಿ, ಹುಸಿನಿದ್ದೆಗಿದ್ದೆ ಸಾಕು ಈ ತುಂಬಿಬಾಳು, ತುಂಬಿರುವ ತನಕ, ತುಂತುಂಬಿ ಕುಡಿಯಬೇಕು. ತಮ್ಮ ಮೂರನೆಯ ಚೌಪದಿಯಲ್ಲಿ ಕವಿ ಇಂದಿನ ಯುವ ಪೀಳಿಗೆಗೆ, ತಮ್ಮ ಯೌವನದ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡಿಕೊಳ್ಳದಿರಲಿ ಎಂದು ಎಚ್ಚರಿಕೆಯ ಗಂಟೆಯನ್ನು ಬಾರಿಸಿದಂತಿದೆ. ಜೀವನವೆಂಬ ನದಿಗೆ ಪ್ರವಾಹ ಬರಬಹುದು ಎಂದಿದ್ದಾರೆ ಅಂದರೆ ಯಾವಾಗ ಬೇಕಾದರೂ ಸಾವು ಪ್ರವಾಹದ ರೀತಿಯಲ್ಲಿ ಬಂದು ನಮ್ಮನ್ನು  ಎಳೆದೊಯ್ಯಬಹುದು. ಮರಣ ಬಂದ ಮೇಲೆ ಬದುಕಲು ಅವಕಾಶವಂತು ಇಲ್ಲವೇ ಇಲ್ಲ ಎಂದಾದ ಮೇಲೆ ಬದುಕಿರುವಾಗಲೇ ಯೌವನವನ್ನು ಸಾರ್ಥಕ ಪಡಿಸಿಕೊಳ್ಳಲು ದುಡಿಮೆಯಲ್ಲಿ ತೊಡುಗುವುದು ಉತ್ತಮವಲ್ಲವೇ? ಎಂದು ಹೇಳುವ ಮೂಲಕ ಇಂದಿನ ಎಷ್ಟೋ ಕರ್ತವ್ಯ ರಹಿತ ಯುವಕರನ್ನು ಸರಿ ದಾರಿಗೆ ತರುವ ಪ್ರಯತ್ನವನ್ನು ಕವಿ ತಮ್ಮ ಕವಿತೆಯ ಮೂಲಕವೇ ಮಾಡಿದ್ದಾರೆ. ಹಾಗೆಯೇ ಕವಿ ವಸ್ತುವಿನ ಪೂರ್ತಿ ತಿರುಳನ್ನು ತಮ್ಮ ಕೊನೆಯ ಎರಡು ಚರಣಗಳಲ್ಲಿ ಈ ರೀತಿ ಚಿತ್ರಿಸಿದ್ದಾರೆ : ಬಾನ್ ಹೊಗರಲುಂಟು, ಮರ ಚಿಗುರಲುಂಟು, ಬರಲುಂಟೆ ಸುಗ್ಗಿ ಮತ್ತೆ? ಮುಳುಗಿರಲಿ ಮುಪ್ಪು ಚಿಂತನದಿ, ತಾನು ಹರಯಕ್ಕೆ ಬೇರೆ ಹೊತ್ತೇ? ಆಕಾಶದಲ್ಲಿ ಒಮ್ಮೆ ಮೋಡ ಕವಿದು ಮಬ್ಬು ಆವರಿಸಿದ್ದರು ಕೂಡ ಮೋಡ ಸರಿದ ಮೇಲೆ ಮತ್ತೆ ಪ್ರಕಾಶಿಸಬಹುದು, ಒಂದು ಋತುವಿನಲ್ಲಿ ತನ್ನ ಪೂರ್ತಿ ಎಲೆಯನ್ನು ಉದುರಿಸಿ ಒಣಗಿದ ಮರ ಕೂಡ ಪುನಃ ಮತ್ತೆ ವಸಂತ ಋತುವಿನಲ್ಲಿ ಚಿಗುರಬಹುದು ಆದರೆ ಮನುಷ್ಯನ ಯೌವನದ ಕಾಲ ಕಳೆದು ಹೋದರೆ ಎಂದಿಗೂ ಹಿಂದಿರುಗಿ ಬರಲಾರದು ಆದ್ದರಿಂದ ಮುಪ್ಪು ಬಂದು ಆವರಿಸುವ ಚಿಂತೆ ಇರಲಿ ಹಾಗೆಯೇ ಯೌವನವು ಇನ್ನೊಮ್ಮೆ ಸಿಗುವುದಿಲ್ಲವೆಂಬ ಎಚ್ಚರವಿರಲಿ. ಈಗ ಹರೆಯ ಇರುವುದರಿಂದ ಎಲ್ಲ ಚಿಂತೆಯನ್ನು ಬದಿಗೊತ್ತಿ ದುಡಿಯಲು ಮುಂದಾಗಿ, ಯೌವನದ ಸಾರ್ಥಕತೆಯನ್ನು ಅನುಭವಿಸಿ ಎಂದು ಕರೆ ನೀಡಿದ್ದಾರೆ. ಈ ಕವಿತೆ ಇಂಗ್ಲಿಷಿನ ಸಾನೆಟ್ ಪ್ರಕಾರಕ್ಕೆ ಸಂವಾದಿಯಾಗಿ ಬಂದ ಸುನೀತ ಪ್ರಕಾರದಲ್ಲಿದ್ದು ಷೇಕ್ಸ್‌ಪಿರಿಯನ್ ಮಾದರಿಯಲ್ಲಿದೆ. ಈ ಮಾದರಿಯ ಸುನೀತಗಳಲ್ಲಿ ಹನ್ನೆರಡು ಚರಣಗಳು ಮೂರು ಚೌಪದಿಗಳಿಂದ ಕೂಡಿದ್ದು ಕೊನೆಯ ಎರಡು ಚರಣಗಳು ದ್ವಿಪದಿಯ ರೂಪದಲ್ಲಿವೆ. ಹಾಗೆಯೇ ಚೌಪದಿಯ ಮೊದಲ ಎರಡು ಸಾಲುಗಳು ಒಂದು ಪ್ರಾಸದಿಂದ ಕೂಡಿದ್ದರೆ ಕೊನೆಯ ಎರಡು ಸಾಲುಗಳು ಇನ್ನೊಂದು ಪ್ರಾಸವನ್ನು ಹೊಂದಿರುತ್ತವೆ. ಕಡೆಯ ದ್ವಿಪದಿ ಒಂದೇ ಪ್ರಾಸದಲ್ಲಿ ಮುಕ್ತಾಯವಾಗುತ್ತದೆ. ಈ ಪ್ರಾಸ ವಿನ್ಯಾಸದಲ್ಲಿ ರಚನೆಯಾದ ವಿಶಿಷ್ಟ ಕವನವಿದು. ಈ ಕವಿತೆ ಯುವ ಪೀಳಿಗೆಗೆ ಎಚ್ಚರಿಸಲು ಹೇಳಿ ಮಾಡಿಸಿದ ಕವಿತೆಯಂತಿದೆ ಯಾಕೆ ಕೇಳಿದರೆ ಇಂದಿನ ಯುವ ಪೀಳಿಗೆ ಆಧುನಿಕತೆ,ವಿಜ್ಞಾನದ ಅತಿಯಾದ ಮುಂದುವರಿಕೆ,ನಾನಾ ಹೊಸ ಶೈಲಿಯ ಕಲಿಕಾ ಕ್ರಮದಲ್ಲಿ ಮೈಮರೆತು ಹಕ್ಕಿಯಂತೆ ಕೃತಕವಾಗಿ ಹಾರಾಡಿ, ಮೀನಿನಂತೆ ಕೃತಕವಾಗಿ ಈಜಿ, ಒಂದು ಗ್ರಹದಿಂದ ಇನ್ನೊಂದು ಗ್ರಹಕ್ಕೆ ಕಾಲೂರಿ ಇನ್ನೂ ಅನೇಕಾನೇಕ ಸಾಹಸವನ್ನು ಮಾಡಿರಬಹುದು ಆದರೆ ಪ್ರಕೃತಿಯೇ ನಮಗೆ ನಿಸರ್ಗದತ್ತವಾಗಿ ನೀಡಿದ ಬೆಳಗು ಜಾವದ ಅದ್ಭುತ ಕ್ಷಣವನ್ನು ಅನುಭವಿಸುವುದರಲ್ಲಿ ಇರುವ ನೆಮ್ಮದಿ, ಸಂತೋಷ ಆಧುನಿಕತೆಯಲ್ಲಿ ಎಂದಿಗೂ ಸಿಗಲಾರದು ಹಾಗೆಯೇ ಮನುಷ್ಯನ ಬದುಕಿಗೆ ಬೇಕಾದ ಚೈತನ್ಯವನ್ನು ಸಹ ಆಧುನಿಕತೆ ಎಂದಿಗೂ ಕೊಡಲಾರದು. ಮನುಷ್ಯರೇ(ಯುವಕರೇ) ಯೌವನದ ಅವಧಿಯನ್ನು ಸರಿಯಾಗಿ ಬಳಸಿಕೊಳ್ಳಿ ಎಂದು ಅವರನ್ನು ಬಡಿದೆಬ್ಬಿಸಿ, ಬೆಳಗು ಜಾವದ ಮಹತ್ವವನ್ನು ಸಾರಿ ಹೇಳಿದ ದ. ರಾ. ಬೇಂದ್ರೆಯವರ ಈ ಕವಿತೆ ಎಂದೆಂದಿಗೂ ನನ್ನ ಅಚ್ಚುಮೆಚ್ಚು. ***************************

ನನ್ನ ಇಷ್ಟದ ಕವಿತೆ Read Post »

ಇತರೆ, ಮಕ್ಕಳ ವಿಭಾಗ

ಮಕ್ಕಳ ಕವಿತೆ

ಧೂರ್ತ ಆಮೆ ನೀ.ಶ್ರೀಶೈಲ ಹುಲ್ಲೂರು ಹಂಸವೆರಡು ಕೊಳದ ಬಳಿನೀರನರಸಿ ಬಂದವುನೀರು ಕುಡಿದು ತಣಿದ ಮೇಲೆಆಮೆ ನೋಡಿ ನಿಂದವು ಹರಟೆ ಮಲ್ಲ ಆಮೆ ತಾನೆಕೊಳದ ರಾಜನೆಂದಿತುಅದನು ಇದನು ಏನೊ ಹೇಳಿಅವುಗಳ ತಲೆ ತಿಂದಿತು ಸರಿ,ನಾವು ಬರುವೆವಿನ್ನುಮತ್ತೆ ಸಿಗುವೆವೆಂದವುಬಿಡದ ಆಮೆ ನಡೆಯ ನೋಡಿಮನದಿ ತಾವೆ ನೊಂದವು ನನಗೆ ಕೊಳದ ಸಂಗ ಸಾಕುನದಿಯಲೀಜಬೇಕುಹಾಡಿ ಜಿಗಿದು ಕುಣಿದು ತಣಿದುಜಲದಿ ತೇಲಬೇಕು ದಮ್ಮಯ್ಯ ಎನುವೆ ನಾನುಮಾಡಿ ನೀವ್ ಉಪಾಯವಏನೆ ಬಂದರೂ ಸರಿಯೆಗೆಲುವೆ ನಾ ಅಪಾಯವ ಹಂಸವೆರಡು ಬಡಿಗೆ ತಂದುಆಚೆ ಈಚೆ ಹಿಡಿದವುನಡುವೆ ಆಮೆ ಬಡಿಗೆ ಕಚ್ಚಲೆರಡು ಹಾರಿ ನಡೆದವು ತುಸು ದೂರ ಸಾಗಿದೊಡನೆಕಂಡಿತೊಂದು ಊರುಮಕ್ಕಳೆಲ್ಲ ಆಮೆ ಕಂಡುಕೂಗಿದರು ಜೋರು ಕಲ್ಲನೆಸೆದು ಗೇಲಿ ಮಾಡೆಆಮೆ ಕೋಪ ಸಿಡಿಯಿತುಬೈಯ್ಯಲೆಂದು ಬಾಯಿ ತೆರೆಯೆಕೆಳಗೆ ಬಿದ್ದು ಮಡಿಯಿತು ಹಮ್ಮು ಬಿಮ್ಮು ಬೇಡ ನಮಗೆಬೇಡ ಕೋಪ ತಾಪಮನಗಾಣಿರಿ ಮಕ್ಕಳೆಲ್ಲಅವುಗಳೆಮಗೆ ಶಾಪ ******************

ಮಕ್ಕಳ ಕವಿತೆ Read Post »

ಇತರೆ, ಪ್ರಬಂಧ

ನಾನು ಈಜು ಕಲಿತ ಪ್ರಸಂಗ:

ಪ್ರಬಂದ ನಾನು ಈಜು ಕಲಿತ ಪ್ರಸಂಗ: ಲಕ್ಷ್ಮಿನಾರಾಯಣ್ ಭಟ್ ಪಿ. ಚಿಕ್ಕಂದಿನಲ್ಲಿ ನನಗೆ ಈಜು ಕಲಿಯುವ ಉಮೇದು. ಅದಕ್ಕೆ ಮನೆಯಲ್ಲಿ ಯಥಾಪ್ರಕಾರ ಅಡ್ಡಿ – ‘ಮಾಣಿಗೆ ಏನಾದ್ರೂ ಹೆಚ್ಚು-ಕಮ್ಮಿ’ (ನೇರ ಮಾತಲ್ಲಿ ‘ಗೊಟಕ್!’) ಆದರೆ ಎಂಬ ಭಯ! ಅದಕ್ಕೆ ಸರಿಯಾಗಿ ಅದೇ ಸಮಯಕ್ಕೆ ನಮ್ಮ ಮನೆ ಪಕ್ಕದ ಸುಬ್ರಾಯ ದೇವಸ್ಥಾನದ ಚಿಕ್ಕ, ಅಷ್ಟೇನೂ ಆಳವಿಲ್ಲದಿದ್ದ ಕೆರೆಯಲ್ಲಿ ಈಜು ಕಲಿಯುವಾಗ ಓರಗೆಯ ಹುಡುಗನೊಬ್ಬ ಮುಳುಗಿ ಪ್ರಾಣಬಿಟ್ಟಿದ್ದ. ಅವನು ಮುಳುಗುವುದನ್ನು ನೋಡಿ ಉಳಿದ ಚಿಳ್ಳೆಪಿಳ್ಳೆಗಳೆಲ್ಲಾ ಹೆದರಿ ಪದ್ರಾಡ್! ( ತುಳು ಭಾಷೆಯಲ್ಲಿ ‘ಪದ್ರಾಡ್’ ಅಂದರೆ ‘ಸದ್ದಿಲ್ಲದೆ ತಪ್ಪಿಸಿಕೊಂಡು ಓಡಿಹೋಗುವುದು’ ಎಂದು ಅರ್ಥ; ಅಲ್ಲದೇ ಅದು ಅಂಕೆ 12 ರ ಸಂಖ್ಯಾವಾಚಕ ಶಬ್ದವೂ ಹೌದು). ಹಿರಿಯರಿಗೆ ತಿಳಿಸಲೂ ಭಯ. ಆ ವಯಸ್ಸೇ ಅಂತಹ ಹುಚ್ಚಾಟದ್ದು. ಹೀಗಾಗಿ ನನಗೆ ಈಜು ಕಲಿಯಲು ಹಸಿರು ನಿಶಾನೆ ಸಿಗುವ ಸಂಭವವೇ ಇರಲಿಲ್ಲ. ನಮ್ಮ ಊರಿನ ಕೋಟಿಕೆರೆ ಬಹು ದೊಡ್ಡದು. ಮನೆಯಿಂದ ಒಂದು ಕಿ.ಮಿ. ದೂರದಲ್ಲಿ ಹಸಿರು ಗದ್ದೆಗಳ ನಡುವೆ ವಿಸ್ತಾರವಾಗಿ ಹರಡಿತ್ತು. ಆ ಕೆರೆ ವಿಶ್ವವಿಖ್ಯಾತ — ಆ ಕಾಲಕ್ಕೆ ‘ನಮ್ಮ ಊರೇ ನಮ್ಮ ವಿಶ್ವ, ಸರ್ವಸ್ವ’ — ಆಗಿದ್ದರೂ ಮೊತ್ತಮೊದಲ ಬಾರಿಗೆ ನಮ್ಮ ಊರಿನವರೇ ಆದ ಪರಮೇಶ್ವರ ಹೊಳ್ಳರನ್ನು ನ್ಯಾಶನಲ್ ಚಾಂಪಿಯನ್ ಮಟ್ಟದವರೆಗೆ ತರಬೇತುಗೊಳಿಸಿದ ಮಹಾನ್ ಕೆರೆ ಎಂಬಭಿದಾನದಿಂದ ಕಂಗೊಳಿಸುತ್ತಿರ್ಪ ಒಂದು ಶುಭಮುಹೂರ್ತದಲ್ಲಿ ನನ್ನ ಪಾಲಿಗೂ ಅದು ಅನುಕೂಲವಾಗಿಯೇ ಒದಗಿ ಬಂತು. ಅದೇ ಪರಮೇಶ್ವರ ಹೊಳ್ಳರನ್ನು ತಯಾರು ಮಾಡಿದ ನಮ್ಮ ಹೈಸ್ಕೂಲಿನ ವ್ಯಾಯಾಮ ಶಿಕ್ಷಕರಾಗಿದ್ದ ಶ್ರೀ ಸುಬ್ರಾಯ ಶೆಟ್ಟಿಗಾರ್ ನನಗೂ ಈಜು-ಗುರುಗಳು. ಆದರೆ ಮನೆಯಲ್ಲಿ ಗೊತ್ತಾಗದಂತೆ ಈಜು ಕಲಿಯುವುದು ಹೇಗೆ? ಮನೆಯಿಂದ ಹೆಚ್ಚುವರಿ ಬಟ್ಟೆ ತರುವಂತೆಯೂ ಇಲ್ಲ. ಅದಕ್ಕಿದ್ದದ್ದೊಂದೇ ಪರಿಹಾರ. ಹಾಕಿದ್ದ ಅಂಗಿ ಚಡ್ದಿಯನ್ನೇ ಪುನರ್ಬಳಕೆ ಮಾಡುವುದು – ಮೈ, ತಲೆ ಒಣಗಿದ ಬಳಿಕ! ಆ ಕೋಟಿಕೆರೆ ಎಂದರೆ ಸಾಮಾನ್ಯವೇನಲ್ಲ. ಅದರ ಸುತ್ತಲೂ ಹಲವು ಮನೆಗಳೂ ಇದ್ದುವು. ಹಳ್ಳಿಮನೆ ಎಂದ ಮೇಲೆ ಜನರಿಗಿಂತ ಹೆಚ್ಚು ಜಾನುವಾರುಗಳೂ – ಹಸು, ಎಮ್ಮೆ, ಕೋಳಿ, ನಾಯಿ, ಬೆಕ್ಕು ಇವೆಲ್ಲ ಸೇರಿ ಒಂದು ಪ್ರಪಂಚ – ಇದ್ದುವು. ಅವುಗಳಿಗೂ ಜಳಕವಾಗಬೇಕಲ್ಲ. ಕೋಟಿಕೆರೆಯ ಒಂದು ತುದಿಯಲ್ಲಿ ದನಗಳೂ, ಹೆಚ್ಚಾಗಿ ಎಮ್ಮೆಗಳೂ ಅಲ್ಲಿ ಜಲವಿಹಾರದಲ್ಲೋ ಜಲಕೇಳಿಯಲ್ಲೋ – ಹಾಲುಕರೆಯುವ ಸಮಯವೊಂದನ್ನು ಬಿಟ್ಟು – ಸದಾ ತೊಡಗಿರುತ್ತಿದ್ದವು. ಜೊತೆಗೆ ಹಳ್ಳಿಯ ಹೆಣ್ಣುಮಕ್ಕಳ ಬಟ್ಟೆಬರೆ ತೊಳೆಯುವ ಕೆಲಸ, ಮೈ…(!) ತೊಳೆಯುವ ಕೆಲಸ – ಮರೆಯಲ್ಲಿ ‘ಸ್ನಾನ’ ಎಂಬುದು ಎಲ್ಲೋ ಕೆಲವರಿಗಷ್ಟೇ ಲಭ್ಯವಿದ್ದ ಘನಕಾರ್ಯ; ಹಾಗೆಯೇ ಮುಸುರೆಪಾತ್ರೆಗೆ ಬೂದಿ ಬಳಿದು ಶುದ್ಧೀಕರಿಸುವ ಕೆಲಸ, ಸ್ವಲ್ಪ ಮಟ್ಟಿಗೆ ಕೃಷಿಗಾರಿಕೆಗೂ – ಹೀಗೆ ಹಲವು ಹನ್ನೊಂದು ಕೆಲಸಗಳಿಗೆ ಈ ಕೋಟಿಕೆರೆಯೇ ಆಧಾರ. ಇವೆಲ್ಲದರ ಜೊತೆಗೆ ಕೋಟಿಕೆರೆಯ ಇನ್ನೊಂದು ತುದಿ ಈಜುವುದಕ್ಕೆ ಮೀಸಲು. ಹೀಗೆ ಕ್ಷೇತ್ರ ವಿಂಗಡಣೆಯ ವಿಷಯ ಸರ್ವರಿಗೂ ತಿಳಿದಿದ್ದ ಕಾರಣದಿಂದ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಅವರವರ ಕೆಲಸ-ಕಾರ್ಯಗಳು ಅದರದರ ಪಾಡಿಗೆ ಸ್ವಯಂಚಾಲಿತ ಕ್ರಿಯೆಯಂತೆ ನಡೆದುಕೊಂಡು ಹೋಗುತ್ತಿತ್ತು. ಯಾರೂ ತಮ್ಮ ತಮ್ಮ ಕ್ಷೇತ್ರ ವ್ಯಾಪ್ತಿಯನ್ನು ಮೀರುವಂತಿಲ್ಲದ ಒಂದು ಅಲಿಖಿತ ನಿಯಮ ಜಾರಿಯಲ್ಲಿತ್ತು ಮತ್ತು ಇದು ಎಲ್ಲರಿಗೂ ತಿಳಿದಿದ್ದ ಗುಟ್ಟು. ಈಜು ಕಲಿಯುವ ಪ್ರಾಥಮಿಕ ಪಾಠ ಕೆರೆದಂಡೆಯ ಕಲ್ಲುಗಳನ್ನು ಆಧಾರಕ್ಕೆ ಹಿಡಿದುಕೊಂಡು ಕೈ ಕಾಲು ಬಡಿಯುವುದು. ಆಗ ಈಜಿನಲ್ಲಿ ಪರಿಣತಿ ಹೊಂದಿದ್ದ ಇತರ ಗೆಳೆಯರು ಸುಬ್ರಾಯ ಶೆಟ್ಟಿಗಾರ್ ಅವರ ಸುಪರ್ದಿನಲ್ಲಿ ಪ್ರಾಕ್ಟೀಸ್ ಮಾಡುತ್ತಿದ್ದರು ಮತ್ತು ಶೆಟ್ಟಿಗಾರ್ ಮಾಸ್ತರ್ ತಮ್ಮ ಸ್ಟಾಪ್-ವಾಚ್ ಹಿಡಿದು ಟೈಮ್ ನೋಡುತ್ತಿದ್ದರು. ನನಗೋ ಇದನ್ನು ನೋಡಿ ಒಂಥರಾ ಹೊಟ್ಟೆಯುರಿ. ನಾನು ಅವರಂತೆ ಈಜುವುದು ಯಾವಾಗ? ಶೆಟ್ಟಿಗಾರ್ ಮಾಸ್ಟರ್ ಅವರ ಹೆಚ್ಚಿನ ಗಮನ ಆ ವಿದ್ಯಾರ್ಥಿಗಳ ಮೇಲೆ. ನನಗೆ ನನ್ನ ಮೇಲೂ, ನನ್ನಂತೆ ಕೈ ಕಾಲು ಬಡಿಯುತ್ತಿದ್ದ ಇನ್ನಿತರ ಬಾಲಪಾಠದ ವಿದ್ಯಾರ್ಥಿಗಳ ಮೇಲೂ ಒಂದು ಥರಾ ಅಸಹನೆ ಮೂಡುತ್ತಿತ್ತು. ಆದರೆ ವಿಧಿಯಿಲ್ಲ. ಬಹುಶಃ ಮಾಸ್ತರಿಗೆ ಇದು ಗೊತ್ತಾಯಿತೇನೋ ‘ಇರಿ ಮಾಡುತ್ತೇನೆ’ ಎಂದು ಎರಡನೆ ಬಾಲಪಾಠ –- ಲೆಸನ್ ನಂಬರ್ ೨ – ಶುರು ಮಾಡಿದರು: ಹಾಗೆಯೇ ಕೈಕಾಲು ಬಡಿಯುತ್ತಾ ಅರ್ಧತಲೆಯನ್ನು ನೀರಿಗೆ ಮುಳುಗಿಸಿ ಉಸಿರು ತೆಗೆದುಕೊಳ್ಳಲು ಮಾತ್ರ ಮುಖ ಒಂದು ಬದಿಗೆ ವಾಲಿಸಿ ಉಸಿರೆಳೆದುಕೊಂಡು ತಕ್ಷಣ ಮತ್ತೆ ಅರ್ಧತಲೆ ಮುಳುಗಿಸಿ ಇನ್ನೊಂದು ದಿಕ್ಕಿಗೆ ತಲೆ ವಾಲಿಸಿ ಉಸಿರೆಳೆದುಕೊಳ್ಳುವುದು. ಆಗ ಕೈಕಾಲು ಬಡಿಯುವುದನ್ನು ನಿಲ್ಲಿಸುವಂತಿಲ್ಲ! ಇದನ್ನು ಒಂದೆರಡು ಬಾರಿ ಮಾಡುವಷ್ಟರಲ್ಲಿ ನಾನು ಸಾಕಷ್ಟು ನೀರು ಕುಡಿದದ್ದಾಯಿತು, ಅಲ್ಲದೆ ತಲೆ ಮುಳುಗಿಸುವಾಗ ಕೈಕಾಲು ಬಡಿಯುವುದು ನಿಲ್ಲುತ್ತಿತ್ತು; ಕೈಕಾಲು ಬಡಿಯುತ್ತಿದ್ದರೆ ತಲೆ ಮುಳುಗುತ್ತಿರಲಿಲ್ಲ.ಒಳ್ಳೇ ಪೇಚಾಟಕ್ಕೆ ಬಂತು. ಆದರೇನು ಮಾಡುವುದು? ಬೇರೆ ವಿಧಿಯಿಲ್ಲ. ಇದನ್ನು ಆದಷ್ಟು ಬೇಗನೆ ಕಲಿಯದಿದ್ದರೆ ಈಜಲು ಸಾಧ್ಯವಿಲ್ಲ ಎಂಬ ಜ್ಞಾನೋದಯವಾಗಿ ತಕ್ಕ ಮಟ್ಟಿಗೆ ಅಭ್ಯಾಸ ಮಾಡಿದ ಮೇಲೆ ಮಾಸ್ತರಿಗೆ ದುಂಬಾಲು ಬಿದ್ದು ಮುಂದಿನ ಪಾಠ ಹೇಳಿ ಕೊಡಿ ಅಂತ ಅವರನ್ನು ಪೀಡಿಸಿದೆ. ಮೊದಲಿನಿಂದಲೂ ನನಗೆ ತಾಳ್ಮೆ ಸ್ವಲ್ಪ ಕಡಿಮೆಯೇ. ಎಲ್ಲವೂ ಬೇಗ ಬೇಗ ಆಗಬೇಕು. ಆಗೆಲ್ಲಾ ‘ಏನು ಆರು ತಿಂಗಳಿಗೆ ಹುಟ್ಟಿದ ಹಾಗೆ ಮಾಡುತ್ತಿ?’ ಎನ್ನುವ ವಾಡಿಕೆಯ ಚುಚ್ಚುಮಾತು ನನ್ನೆದೆಗೆ ಚುಚ್ಚಿದರೂ ನಾನದನ್ನು ‘ಡೋಂಟ್ ಕೇರ್’ ಮಾಡುತ್ತಿದ್ದೆ! ಸರಿ ಮುಂದಿನ ಪಾಠ: ಎರಡು ಪೊಟ್ಟು ತೆಂಗಿನಕಾಯಿಗಳನ್ನು ಒಟ್ಟಿಗೆ ಚಿಕ್ಕ ಹಗ್ಗದ ಸಹಾಯದಿಂದ ಜೋಡಿಸಿ ಹೊಟ್ಟೆಗೆ ಆಧಾರವಾಗಿಟ್ಟುಕೊಂಡು (ಇವು ನಮ್ಮನ್ನು ನೀರಲ್ಲಿ ಮುಳುಗದಂತೆ ತಡೆಯುತ್ತವೆ ಮತ್ತು ಇದು ಈಜು ಕಲಿಯಲು ಎಲ್ಲರೂ ಬಳಸುತ್ತಿದ್ದ ಅತೀ ಸಾಮಾನ್ಯ ಸಾಧನ, ಅದಿಲ್ಲದಿದ್ದರೆ ಉದ್ದದ ಬಾಳೆದಿಂಡೂ ಇದೆ ರೀತಿ ಆಸರೆಯಾಗುತ್ತಿತ್ತು.) ಕಡಿಮೆ ಆಳದ ನೀರಿನಲ್ಲಿ ಈಜುವ ಅಭ್ಯಾಸ ಮಾಡುವುದು. ಆಗ ಚೆನ್ನಾಗಿ ಈಜು ಗೊತ್ತಿದ್ದ ಇತರ ಮಕ್ಕಳು ನಮ್ಮ ಸುತ್ತ ಈಜುತ್ತಾ ಹುರಿದುಂಬಿಸುತ್ತಿದ್ದರು. ಕೆಲವೊಮ್ಮೆ ನಮಗೆ ಅರಿವೇ ಆಗದಂತೆ ಈ ಪೊಟ್ಟು ತೆಂಗಿನಕಾಯಿಗಳನ್ನು ತಪ್ಪಿಸಿ ನಾವು ಈಜುವಂತೆ ಮಾಡುತ್ತಿದ್ದರು. ಆದರೆ ಈ ಆಸರೆ ತಪ್ಪಿದೆ ಎಂದು ತಿಳಿದ ತಕ್ಷಣ ಕೈಕಾಲು ಬಡಿಯುವುದು ನಿಂತು ಮುಳುಗುವ ಭಯದಲ್ಲಿ ಇನ್ನಷ್ಟು ನೀರು ಕುಡಿದು ದಡದ ಕಡೆಗೆ ಈಜುವುದಲ್ಲ, ಹಾರುವುದು ಎಂದರೂ ಸರಿಯೇ – ಆಗುತ್ತಿತ್ತು. ಹೀಗೆ ನಿಧಾನವಾಗಿ ಈಜುವುದು ಅಭ್ಯಾಸವಾಯಿತು. ಆಮೇಲೆ ಕೇಳಲುಂಟೇ! ‘ಭಳಿರೇ ಪರಾಕ್ರಮ ಕಂಥೀರವ’ ಎಂದು ‘ಡೈವ್’ ಮಾಡುವುದರಿಂದ ಹಿಡಿದು ಫ್ರೀ-ಸ್ಟೈಲ್, ಬ್ಯಾಕ್ ಸ್ಟ್ರೋಕ್ ಇತ್ಯಾದಿಗಳಲ್ಲಿ ಪಳಗಿದ್ದುಂಟು. ಆದರೆ ಇದನ್ನು ಸ್ಪರ್ಧೆಯ ಮಟ್ಟಕ್ಕೆ ಮುಂದುವರಿಸುವುದಕ್ಕಾಗಲಿಲ್ಲ. ಇದರಿಂದ ಊರೇನೂ ಮುಳುಗಿಹೋಗಿಲ್ಲ ಅಥವಾ ದೊಡ್ಡ ನಷ್ಟ ಯಾರಿಗೂ ಏನೂ ಇಲ್ಲ. ಇರಲಿ ಬಿಡಿ. ನನ್ನ ಜೊತೆ ಈಜಿಗೆ ಸಾಥ್ ಕೊಡುತ್ತಿದ್ದ ಒಬ್ಬ ಸಹಪಾಠಿ ಶೇಕ್ ಹಸನ್ ಸಾಹೇಬ್. ಹೀಗೆ ಹೇಳಿದರೆ ಹೆಚ್ಚಿನವರಿಗೆ ತಿಳಿಯಲಾರದು. ‘ವಿಟ್ಲ ಹಸನ್’ ಎಂದರೆ ಎಲ್ಲರಿಗೂ ತಿಳಿಯುತ್ತದೆ. ನಾನು ಅವನ ಮನೆಗೆ, ಅವನು ನಮ್ಮ ಮನೆಗೆ ಬಂದು ಹೋಗುವುದು ಮಾಮೂಲಾಗಿತ್ತು. ಅವನ ತಾಯಿ ನನ್ನನ್ನು ತುಂಬಾ ಪ್ರೀತಿಯಿಂದ ಮಾತನಾಡಿಸುತ್ತಿದ್ದರು. ಆ ಕಾಲದಲ್ಲಿ ನಮ್ಮಿಬ್ಬರಿಗೂ ಬಡತನ ಹಾಸಿ ಹೊದೆಯುವಷ್ಟು ಇದ್ದರೂ ಪರಸ್ಪರ ಪ್ರೀತಿ, ವಿಶ್ವಾಸಗಳು ಸಾಮಾಜಿಕ ಕಟ್ಟುಪಾಡುಗಳನ್ನು ಮೀರಿ ನಿಂತದ್ದು ಒಂದು ಸುಖಾನುಭವ. ಜೊತೆಗೆ ಹಸನ್ ಕೂಡಾ ನನ್ನೊಂದಿಗೆ ನಾಟಕಗಳಲ್ಲಿ ಬಣ್ಣ ಹಚ್ಚುತ್ತಿದ್ದ. ನಾವು ರಿಹರ್ಸಲ್-ಗೂ ಜೊತೆಯಲ್ಲೇ ಹೋಗುತ್ತಿದ್ದೆವು. ನಾವು ಹತ್ತನೇ ತರಗತಿಯಲ್ಲಿರುವಾಗ ಶಾಲಾ ವಾರ್ಷಿಕೋತ್ಸವದ ಸಂದರ್ಭದಲ್ಲಿ (ಆಗೆಲ್ಲಾ ರಾತ್ರಿಪೂರ್ತಿ ಬೆಳಗಾಗುವ ತನಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದವು. ರಾತ್ರಿ ಎರಡರ ಬಳಿಕ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ ಹೀಗೆ ನಡೆಯುತ್ತಿತ್ತು. ಹಳ್ಳಿಯ ಜನರು ಇದಕ್ಕೆ ತಯಾರಾಗಿಯೇ ಬರುತ್ತಿದ್ದರು.) ನಮ್ಮ ಮಾಸ್ತರ್ ಮಹಾಬಲ ರೈ ಅವರು ಬರೆದು ನಿರ್ದೇಶಿಸಿದ ತುಳು ನಾಟಕ ‘ಲಾಟ್ರಿ ಲಕ್ಕಪ್ಪೆ ದಿವಾಳಿ ದೂಮಪ್ಪೆ’ ದಲ್ಲಿ ನನ್ನದು ಲಕ್ಕಪ್ಪನ ಪಾತ್ರ. ದೂಮಪ್ಪನ ಪಾತ್ರ ಬಹುಶಃ ಹಸನ್ ಮಾಡಿದ್ದ ಅಂತ ನೆನಪು. ಇರಲಿ, ತಿರುಗಿ ಮತ್ತೆ ನನ್ನ ಈಜು ಪುರಾಣಕ್ಕೆ ಬರೋಣ. ನಾನು ಕೆಲವೊಮ್ಮೆ ಬೆಳ್ಳಂ ಬೆಳಗ್ಗೆ 5 ಗಂಟೆಗೆ ಹಸನ್ ಮನೆಗೆ ಬಂದು (ನಮ್ಮ ಮನೆಯಲ್ಲಿ ಏನೋ ಒಂದು ಸುಳ್ಳು ಹೇಳಿ; ಏನದು ಸುಳ್ಳು ಸಬೂಬು ಈಗ ನೆನಪಾಗುತ್ತಿಲ್ಲ) ಇನ್ನೂ ಮಲಗಿಯೇ ಇರುತ್ತಿದ್ದವನನ್ನು ಎಬ್ಬಿಸಿ, ಬಳಿಕ ಕಾರಿನ ಹಳೆ ಟ್ಯೂಬ್ (ಅದು ಅವನ ಮಾವನ ಕಾರಿನದ್ದು) ಹಿಡ್ಕೊಂಡು ನಿದ್ದೆಗಣ್ಣಿನಲ್ಲಿ ಒಂದು ಕಿಲೋ ಮೀಟರ್ ನಡ್ಕೊಂಡು ಹೋಗಿ ಈಜು ಕ್ಲಾಸಿಗೆ ಮೊದಲು ಹಾಜರು ಹಾಕುತ್ತಿದ್ದೆವು. ಪೊಟ್ಟು ತೆಂಗಿನ ಕಾಯಿ, ಬಾಳೆದಿಂಡುಗಳಿಂದ ಮೇಲ್-ಬಡ್ತಿ ಕಾರಿನ ಹಳೆ ಟ್ಯೂಬ್. ಇದರ ಮಧ್ಯದಲ್ಲಿ ಕೂತರೆ ಯಾವ ಭಯ, ಸುಸ್ತು ಇಲ್ಲದೆ ಬೇಕಾದಷ್ಟು ಹೊತ್ತು ನೀರಿನಲ್ಲಿ ಖುಷಿ ಬಂದಂತೆ ವಿಹರಿಸಬಹುದಾಗಿತ್ತು. ಆದರೆ ನಮ್ಮ ಶೆಟ್ಟಿಗಾರ್ ಮಾಸ್ತರಿಗೆ ಇದನ್ನು ಕಂಡರೆ ಅಷ್ಟಕ್ಕಷ್ಟೇ. ಮಕ್ಕಳು ಈಜು ಕಲಿಯುವುದು ಬಿಟ್ಟು ಜಲವಿಹಾರ ಮಾಡುತ್ತಾ ಕಾಲಕಳೆಯುತ್ತಾರೆ ಎಂದು ಅವರಿಗೆ ಅನಿಸುತ್ತಿತ್ತು. ಮತ್ತು ಅದು ಸತ್ಯವೂ ಆಗಿತ್ತು.ಅಜಿತ್ ಕುಮಾರ್ ರೈ ಕೂಡಾ ಈ ಈಜು ಕ್ಲಾಸಿನ ಸದಸ್ಯನೇ. ಇವರಿಬ್ಬರು ಮತ್ತು ಗಣಪತಿ ಭಟ್ (ಉಳಿದವರ ಹೆಸರು ನೆನಪಾಗುತ್ತಿಲ್ಲ) ಮೈಸೂರು ದಸರಾ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ಟ್ರೋಫಿ ಹಿಡಿದು ಮೆರೆದ ಘಟನೆ ಒಂದು ರೋಚಕ ಕಥೆ. ಈ ಕೋಟಿಕೆರೆಗೆ ಬರಬೇಕಾದರೆ ನನಗೆ ಎರಡು ದಾರಿಗಳಿದ್ದವು. ಒಂದು ಜಟಾಧಾರಿ ಕೆರೆದಂಡೆ ಮೇಲೆ ಸಾಗಿ ಸದಾ ನೀರು ಹರಿಯುವ ಒಂದು ಸಣ್ಣ ತೋಡಿನಲ್ಲಿ ಸ್ವಲ್ಪ ದೂರ ನಡೆದು ದಾಟಿ ಬರುವುದು – ಇದು ಮಳೆಗಾಲದಲ್ಲಿ ಸಾಧ್ಯವಿಲ್ಲದ ಮಾತು – ಮಳೆ ಬರುತ್ತಿದ್ದ ದಿನಗಳಲ್ಲೂ ಎಷ್ಟೋ ಬಾರಿ ನಾನು ಈಜು ಹೊಡೆಯುತ್ತಿದ್ದೆ. ಆಗೆಲ್ಲಾ ಸಾಮಾನ್ಯವಾಗಿ ನಾನು ಒಂಟಿಯೇ. ಇನ್ನೊಂದು ದಾರಿ ನಮ್ಮ ಹೈಸ್ಕೂಲ್ ಬದಿಯಿಂದ ಗದ್ದೆಗಳನ್ನು ಹಾದು ನನ್ನ ಸಹಪಾಠಿ ಸುಬ್ರಹ್ಮಣ್ಯ ಹೊಳ್ಳನ (ಪರಮೇಶ್ವರ ಹೊಳ್ಳರ ಖಾಸಾ ತಮ್ಮ – ಈತ ಪ್ರಾಥಮಿಕ ಶಾಲಾ ಶಿಕ್ಷಕನಾಗಿ, ಮುಖ್ಯೋಪಾಧ್ಯಾಯನಾಗಿ ಕೆಲಸ ನಿರ್ವಹಿಸುತ್ತಿದ್ದಾಗಲೇ ದುರದೃಷ್ಟವಶಾತ್ ಬೈಕ್ ಆಕ್ಸಿಡೆಂಟ್-ನಲ್ಲಿ ತೀರಿಹೋದ) ಮನೆಗೆ ಬಂದು ಅವನೊಂದಿಗೆ ಕೋಟಿಕೆರೆಗೆ ಬರುವ ಬಳಸು ದಾರಿ. ಅವನು ನನ್ನೊಂದಿಗೆ ಬರುತ್ತಾನೆ ಎನ್ನುವ ಕಾರಣಕ್ಕೆ ನಾನು ಈ ಬಳಸು ದಾರಿಯನ್ನೇ ಹೆಚ್ಚು ನೆಚ್ಚಿದ್ದೆ. ಈಜುವಿಕೆಯಲ್ಲಿ ಸಾಧನೆ ಮಾಡಿದ ನನ್ನ ಇನ್ನೊಬ್ಬ ಸಹಪಾಠಿ ಕಾಶೀಮಟದ ಗಣಪತಿ ಭಟ್. ಇವನೊಂದಿಗೆ ತಳುಕುಹಾಕಿಕೊಂಡ ನೆನಪು ನಾನು ಏಳನೆಯ ತರಗತಿಯಲ್ಲಿ ಇದ್ದಾಗ ಜೀವಂಧರ ಮಾಷ್ಟ್ರ ನಿರ್ದೇಶನದ ‘ಕುರುಕ್ಷೇತ್ರ’ ನಾಟಕ. ಅದರಲ್ಲಿ ಗಣಪತಿಯದ್ದು ಕೌರವನ ಪಾತ್ರ, ನನ್ನದು ಬಲರಾಮನ ಪಾತ್ರ. ನಾಟಕದ ತರಬೇತಿ ಸಮಯದಲ್ಲಿ ಮಾತು ಮರೆತರೆ ಜೀವಂಧರ ಮಾಸ್ತರಿಗೆ (ನಮ್ಮ ಊರಿನ ಎರಡೋ ಮೂರೋ ಜೈನ ಮನೆಗಳಲ್ಲಿ ಇವರದೂ ಒಂದು; ಇನ್ನೊಂದು ಜೈನ ಬಸದಿಯ ಇಂದ್ರ ಅವರದು.) ಅಸಾಧ್ಯ ಸಿಟ್ಟು. ಕೌರವನ ಗದೆ, ಬಲರಾಮನ ಹಲಾಯುಧಗಳನ್ನು ನಾವು ನಮ್ಮ ನಮ್ಮ ಕೈಯಲ್ಲಿ ಇದೆ ಎಂದೇ ಭಾವಿಸಿಕೊಂಡು ರಿಹರ್ಸಲ್ ನಡೆಸುತ್ತಿದ್ದೆವು. ನಾಟಕದ ದಿನ ನನಗೆ ಸಣ್ಣಗೆ ಜ್ವರ. ಇದು ಮಾಸ್ತರಿಗೆ ಗೊತ್ತಾದರೆ ಫಜೀತಿ ಎಂದು ಸಾಧ್ಯವಾದಷ್ಟು ಉಮೇದು ತೋರಿಸುತ್ತಿದ್ದೆ. ಮೇಕಪ್ ಎಲ್ಲಾ ಮುಗಿದು ನಾಟಕ ನಡೆಯುತ್ತಿದೆ. ಆದರೆ ನನ್ನ ಹಲಾಯುಧ ಮಾತ್ರ ಕಾಣೆಯಾಗಿದೆ; ಅದನ್ನು ತಂದೇ ಇಲ್ಲವೋ ಅಥವಾ ಉಳಿದ ಪರಿಕರಗಳೆಡೆಯಲ್ಲಿ ಎಲ್ಲಿ ಮರೆಯಾಗಿತ್ತೋ

ನಾನು ಈಜು ಕಲಿತ ಪ್ರಸಂಗ: Read Post »

You cannot copy content of this page

Scroll to Top