ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

ಚರ್ಚೆ

ಶ್ರೀ ಬಸವರಾಜ ಕಾಸೆ ಅವರ ಪಲುಕುಗಳು ಝಲಕುಗಳು ಲೇಖನಕ್ಕೆ ಡಾ.ಗೋವಿಂದ ಹೆಗಡೆಯವರ ಪ್ರತಿಕ್ರಿಯೆ ಶ್ರೀ ಬಸವರಾಜ ಕಾಸೆ ಅವರ ಪಲುಕುಗಳು ಝಲಕುಗಳು ಲೇಖನಕ್ಕೆ ಸಂಬಂಧಿಸಿ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ಶ್ರೀ ಕಾಸೆ ಅವರನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಸುಮಾರು ಎರಡು ವರ್ಷಗಳಿಂದ ಬಲ್ಲೆ. ಅವರೊಬ್ಬ ಉತ್ಸಾಹಿ. ತುಂಬ ಬರೆಯುವ, ಏನಾದರೂ ಸಾಧಿಸಬೇಕೆಂಬ ತಹತಹವುಳ್ಳ ಲೇಖಕ. ಆದರೆ ಈ ಸಂದರ್ಭದಲ್ಲಿ ಅವರು ತಮ್ಮ ಮನೆಗೆಲಸವನ್ನು- ಹೋಂವರ್ಕ್-ಸರಿಯಾಗಿ ಮಾಡಿದಂತಿಲ್ಲ. ಮೊದಲನೆಯದಾಗಿ ಅವರು ಹೇಳುವ ಈ “ಫಲಕುಗಳು- ಝಲಕುಗಳು” ಪದಪುಂಜವನ್ನು ನೋಡೋಣ. ಕನ್ನಡದಲ್ಲಂತೂ ಫಲಕು ಎಂಬ ಪದವಿಲ್ಲ ಅದು ಪಲುಕು ಆಗಬೇಕು. ಪಲುಕು ಶಬ್ದಕ್ಕೆ ನುಡಿ, (ಧ್ವನಿಯ) ಬಳುಕು, ಹಾಡು ಹೇಳುವಿಕೆ, ಅಂತರಾರ್ಥ ಕಲ್ಪನೆ, (ಸಂಗೀತದಲ್ಲಿ) ಧ್ವನಿಯ ಬಳುಕು ಎಂಬ ಅರ್ಥಗಳನ್ನು ನಿಘಂಟು ಕೊಡುತ್ತದೆ. ಇನ್ನು ಝಲಕ್ ಎಂದರೆ ಲಹರಿ ,ಹೊಳಹು, (ಆಲೋಚನೆಯ)ಮಿಂಚು ಇಂದು ಅನುವಾದಿಸಿ ಕೊಳ್ಳಬಹುದು ಎಂದು ತೋರುತ್ತದೆ. ಆಂಗ್ಲದಲ್ಲಿ ಝಲಕ್ ಪದಕ್ಕೆ flash, gleam, Dawn, flavour ಮೊದಲಾದ ಪದಗಳನ್ನು ಅರ್ಥವಾಗಿ ನೀಡಲಾಗಿದೆ. ಕಾಸೆ ಅವರು ಈ ಪಲುಕಗಳು ಮತ್ತು ಝಲಕುಗಳು ಯಾವ ಮೂಲದವು ಎಂಬುದನ್ನು ಸ್ಪಷ್ಟಪಡಿಸಿಲ್ಲ.”ಕನ್ನಡದಲ್ಲಿ ಇವು ಹೆಚ್ಚಾಗಿ ಬಂದಿಲ್ಲ”,”ಪೂರ್ಣಪ್ರಮಾಣದ ಕೃತಿ ಇನ್ನೂ ಬರಬೇಕಿದೆ”ಎನ್ನುತ್ತಾರೆ.ಅಲ್ಲಿಗೆ ಇದು ಕನ್ನಡಕ್ಕೆ ಆಮದಾದ ಪ್ರಕಾರ ಎಂದು ತಿಳಿಯಬೇಕೇ? ಎಲ್ಲಿಂದ ಅವರು ಇದನ್ನು ತಂದಿದ್ದಾರೆ? ಆ ಭಾಷೆಯಲ್ಲಿ ಇದು ಎಷ್ಟರಮಟ್ಟಿಗೆ ಪ್ರಾಚುರ್ಯ ಪಡೆದಿದೆ? ಅಲ್ಲಿ ಯಾವ ಮಹತ್ವದ ಕವಿಗಳು ಈ “ಪ್ರಕಾರ”ದಲ್ಲಿ ಕೃಷಿ ಮಾಡಿದ್ದಾರೆ? ಎಷ್ಟು ಪುರಾತನವಾದ ಕಾವ್ಯ ಪ್ರಕಾರ ಇದು? ಈ ಯಾವ ವಿವರಗಳನ್ನೂ ಅವರು ನೀಡಿರುವುದಿಲ್ಲ. ಇನ್ನು ಅವರು ಈ ಪ್ರಕಾರ ದ ನಿಯಮ ಗುಣಲಕ್ಷಣಗಳನ್ನು ವಿವರಿಸಿದ್ದಾರೆ. ನಾಲ್ಕೈದು ಸಾಲುಗಳ ಲಹರಿಗಳು, ಅಂತಹ ಲಹರಿಗಳನ್ನು -ಝಲಕ್ ಗಳನ್ನು-ಹತ್ತಕ್ಕೆ ಕಡಿಮೆ ಇಲ್ಲದಂತೆ ಹೊಂದಿರಬೇಕು ಎನ್ನುವುದನ್ನು ಅವರು ಪ್ರಮುಖವಾಗಿ ಹೇಳಿದ್ದಾರೆ. ವಸ್ತು ಯಾವುದೇ ಇರಬಹುದು ಎಂಬುದು ಅವರ ಮಾತು. ಆದರೆ ಸಾಲುಗಳ ಬಂಧಕ್ಕೆ ಸಂಬಂಧಿಸಿ ಅವರು ಏನನ್ನೂ ಹೇಳಿಲ್ಲ ಎನ್ನುವುದು ಗಮನಾರ್ಹ. ಅಂದರೆ ಆ ಲಹರಿಗಳು ನಮ್ಮ ಹನಿಗವನಗಳಂತೆ, ಮುಕ್ತಕಗಳಂತೆ, ಛಂದೋಮುಕ್ತವಾಗಿ ಬರೆಯುವ ಅವಕಾಶ ಇರುವಂತೆ ತೋರುತ್ತದೆ. ಇಂದಿನ ಮಾತುಗಳಲ್ಲಿ ಇಂತಹ ಮುಕ್ತಕಗಳನ್ನು “ಶಾಯರಿ” ಎನ್ನುವುದಿದೆ. ಆ ದೃಷ್ಟಿಯಲ್ಲಿ ಇದನ್ನು ಶಾಯರಿಗಳ ಮಾಲಿಕೆ ಎನ್ನಬಹುದು. ಇರಲಿ. ಕಾಸೆ ಅವರು ಹೇಳಿದ ಈ ಲಕ್ಷಣಗಳಿಂದಲೇ ಇದೊಂದು ವಿಭಿನ್ನವಾದ ಕಾವ್ಯಪ್ರಕಾರವಾಗುತ್ತದೆ ಎಂದು ನನಗನಿಸುತ್ತಿಲ್ಲ. ಗಜಲ್, ನಜಮ್, ರುಬಾಯಿ, ಫರ್ದ್, ಹಾಯ್ಕುಗಳಂತೆ ಸ್ವತಂತ್ರ ಕಾವ್ಯಪ್ರಕಾರ ಇದು ಎಂದು ಕಾಸೆಯವರು ವಿವರಿಸಿದ ನಿಯಮ ಲಕ್ಷಣಗಳಿಂದಷ್ಟೇ ಹೇಳಲಾಗದು. ಒಂದು ವಿಷಯ ವಸ್ತುವನ್ನು ಹಲವಾರು ಹನಿಗಳ/ಕಿರು ಕವನಗಳ ಮೂಲಕ ಕಟ್ಟುವ ಕ್ರಮ ಕನ್ನಡದಲ್ಲಿ ಹಲವಾರು ವರ್ಷಗಳಿಂದ ಇದೆ. ಜಯಂತ ಕಾಯ್ಕಿಣಿಯವರ ಕೊಡೈ: ಕೆಲವು ಪದ್ಯಗಳು ಮತ್ತು ರಾಮಚಂದ್ರ ಶರ್ಮರ ಬೀದರ್: ಕೆಲವು ಭಗ್ನ ಪ್ರತಿಮೆಗಳು ಈಗ ನನಗೆ ನೆನಪಿಗೆ ಬರುತ್ತಿರುವ ಎರಡು ಉದಾಹರಣೆಗಳು. ಪಲುಕುಗಳು ಝಲಕುಗಳು ಕೂಡ ಅಂತಹ ಒಂದು ಪ್ರಯತ್ನ, ಪ್ರಯೋಗ ಅಷ್ಟೇ ಎಂದು ನನಗನಿಸುತ್ತದೆ. ಕಾಸೆಯವರು ತಮ್ಮ ಈ ಲೇಖನಕ್ಕೆ ಬೇರೆ ಭಾಷೆಯಲ್ಲಿನ ಈ ಪ್ರಕಾರದಲ್ಲಿನ ಕೃಷಿಯನ್ನು ಆಕರವಾಗಿ, ಆಧಾರವಾಗಿ ಹೊಂದಿದ್ದರೆ ಅದನ್ನು ಅವರು ವಿವರಿಸಬೇಕೆಂದೂ, ಉಲ್ಲೇಖಿಸಬೇಕೆಂದೂ ಕೋರುತ್ತೇನೆ. ಆಗ ಈ ಸಂಗತಿಯನ್ನು ಇನ್ನೂ ಹೆಚ್ಚು ವಿವರವಾಗಿ, ಆಳವಾಗಿ ಗಮನಿಸಲು ಸಾಧ್ಯವಾದೀತು. ಕೊನೆಯ ಟಿಪ್ಪಣಿ: ಅವರು ಇಲ್ಲಿ ಉಲ್ಲೇಖಿಸಿದ ಪಲುಕಿಗೆ ಸಂಬಂಧಿಸಿದಂತೆ. “ಬಿತ್ತಿ ಉತ್ತಿದ ಬೀಜದ ಫಲ” ಎಂಬ ಸಾಲಿದೆ. ಅದು “ಉತ್ತು ಬಿತ್ತಿದ” ಎಂದಾಗಬೇಕು ಅಂತ ಅನಿಸುತ್ತಿದೆ. ಉಳುಮೆ ಮಾಡಿದ ಮೇಲೆ, ಉತ್ತಮೇಲೆ ಬಿತ್ತುವುದು. ಉಲ್ಟಾ ಅಲ್ಲ.

ಚರ್ಚೆ Read Post »

ಇತರೆ

ಅಭಿನಂದನೆ

ಕೆ.ಶಿವು.ಲಕ್ಕಣ್ಣವರ ಸಾಹಿತಿ, ರಂಗಭೂಮಿ ಕಲಾವಿದೆ, ಪತ್ರಕರ್ತೆ ಡಾ.ವಿಜಯಮ್ಮನವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದ್ದು ಸಮಂಜಸವಾಗೇ ಇದೆ..! ಸಾಹಿತಿ, ಲೇಖಕಿ, ರಂಗಭೂಮಿ ಕಲಾವಿದೆ ಡಾ.ವಿಜಯಾ (ವಿಜಯಮ್ಮ) ಅವರಿಗೆ 2019 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನಾನ್ ಪಿಕ್ಸನ್ ನ ಕನ್ನಡ ಭಾಷಾ ವಿಭಾಗದಲ್ಲಿ ಅವರ ‘ಕುದಿ ಎಸರು’ ಆತ್ಮಕಥೆಗೆ ಈ ಪ್ರಶಸ್ತಿ ಸಂದಿದೆ… ಕೇಂದ್ರ ಸಾಹಿತ್ಯ ಅಕಾಡೆಮಿಯು ತನ್ನ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದೆ. ಇವರ ಜೊತೆ ದೇಶದ 21 ಭಾಷೆಯ 23 ಲೇಖಕರು, ಸಾಹಿತಿಗಳು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮೂಲತಃ ದಾವಣಗೆರೆ ಜಿಲ್ಲೆಯವರಾದ ವಿಜಯಮ್ಮ ಅವರು ಬೆಂಗಳೂರಿನಲ್ಲಿ ನೆಲಸಿದ್ದಾರೆ. ಇಳಾ ಎಂಬ ಪುಸ್ತಕ ಪ್ರಕಾಶನ ಮೂಲಕ 200 ಕ್ಕೂ ಹೆಚ್ಚು ಲೇಖಕರ ಪುಸ್ತಕಗಳನ್ನು ಪ್ರಕಟಿಸಿದ್ದಾರೆ… ಶ್ರೀರಂಗರ ನಾಟಕಗಳ ಕುರಿತು ಪಿ ಎಚ್ ಡಿ ಪಡೆದಿರುವ ವಿಜಯಮ್ಮ, ರಂಗಭೂಮಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿವರು… ಈಗ ದೊರೆತಿರುವ ಈ ಪ್ರಶಸ್ತಿಯೂ 1 ಲಕ್ಷ ರುಪಾಯಿ ನಗದು ಹಾಗೂ ಸ್ಮರಣಿಕೆ ಒಳಗೊಂಡಿರುತ್ತದೆ. ಫೆಬ್ರುವರಿ 25, 2020 ರಂದು ನವದೆಹಲಿಯಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ಸದ್ಯ ಕನ್ನಡಿಗ, ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ… ಡಾ.ವಿಜಯಾ(ವಿಜಯಮ್ಮ)ರ ಬದಕು-ಬರಹದ ಬಗೆಗೆ ನೋಡೋಣ… ಡಾ.ವಿಜಯಾರವರು ಸಾಮಾಜಿಕ ಅಸಮಾನತೆ, ಶೋಷಣೆ, ದಬ್ಬಾಳಿಕೆ, ಅನ್ಯಾಯಗಳ ವಿರುದ್ಧ ದನಿ ಎತ್ತುವ, ಮಹಿಳೆಯರ ಸಮಸ್ಯೆಗಳು, ಭಾಷಾ ಚಳವಳಿ ಮುಂತಾದ ಚಳವಳಿಗಳಲ್ಲಿ ಕ್ರಿಯಾಶೀಲರಾಗಿ ತೊಡಗಿಸಿಕೊಳ್ಳುವ ದಿಟ್ಟ ಪರ್ತಕರ್ತೆ. ಡಾ.ವಿಜಯಾರವರು ಹುಟ್ಟಿದ್ದು ದಾವಣಗೆರೆಯಲ್ಲಿ ೧೯೪೨ರ ಮಾರ್ಚ ೧೦ರಂದು. ಇವರ ತಂದೆ ಶಾಮಣ್ಣ, ತಾಯಿ ಸರೋಜ. ಪ್ರಾರಂಭಿಕ ಶಿಕ್ಷಣ ದಾವಣಗೆರೆ, ಹೊಸಪೇಟೆಯ ಅಮರಾವತಿ ನಂತರ ಬೆಂಗಳೂರಿನಲ್ಲಿ ಬಿ.ಎ.ಪದವಿ ಮುಗಿಸಿದರು. ಹಾಗೂ ‘ಶ್ರೀರಂಗರ ನಾಟಕಗಳು: ಒಂದು ಅಧ್ಯಯನ’ ಕುರಿತು ಪ್ರೌಢ ಪ್ರಬಂಧ ಮಂಡಿಸಿ ಪಡೆದ ಪಿಎಚ್‌ಡಿ ಪದವಿ ಪಡೆದರು… ಹದಿನಾರರ ಹರೆಯದಲ್ಲಿಯೇ ವಿವಾಹಬಂಧನಕ್ಕೊಳಗಾದರೂ ಕುಟುಂಬದ ಕರ್ತವ್ಯಗಳಿಗಷ್ಟೇ ಸೀಮಿತಗೊಳಿಸಿಕೊಳ್ಳದೆ, ಅರ್ಥಪೂರ್ಣ ಬದುಕನ್ನು ತಮ್ಮದಾಗಿಸಿಕೊಳ್ಳುವ ಛಲದಿಂದ ಸಾಧನೆಯಲ್ಲಿ ತೊಡಗಿಸಿಕೊಂಡು ಪದವಿ ಮತ್ತು ಡಾಕ್ಟರೇಟ್‌ಗಳನ್ನು ಪಡೆದದ್ದು ವಿವಾಹದ ನಂತರವೇ… ಪತ್ರಕರ್ತೆಯಾಗಿ ವೃತ್ತಿ ಪ್ರಾರಂಭಿಸಿದ್ದು ಪ್ರಜಾಮತ ಪತ್ರಿಕೆಯಲ್ಲಿ. ಪತ್ರಿಕೋದ್ಯಮಿಯಾದವರು ೧೯೬೮ರಲ್ಲಿ. ನಂತರ ಮಲ್ಲಿಗೆ, ತುಷಾರ, ರೂಪತಾರ ಪತ್ರಿಕೆಗಳ ಸಹಾಯಕ ಸಂಪಾದಕಿಯಾಗಿ ಹೊತ್ತ ಜವಾಬ್ದಾರಿಗಳು. ಚಲನಚಿತ್ರ ಸುದ್ದಿಗಳಿಗಷ್ಟೇ ಸೀಮಿತವಾಗಿದ್ದ ‘ರೂಪತಾರ’ ಪತ್ರಿಕೆಯಲ್ಲಿ ಅನೇಕ ಪ್ರಖ್ಯಾತ ಸಾಹಿತಿಗಳ ಸಾಹಿತ್ಯಕ ವಿಚಾರಗಳನ್ನು ಪ್ರಕಟಿಸಿ ಪತ್ರಿಕೆಗೊಂದು ಸಾಹಿತ್ಯಕ ಮೌಲ್ಯವನ್ನು ತಂದು ಕೊಟ್ಟವರು ಡಾ.ವಿಜಯಮ್ಮನವರು… ಉದಯವಾಣಿ ಪತ್ರಿಕೆಯ ಅಂಕಣ ಬರಹಗಳ ಮೂಲಕ ತಮ್ಮ ಸೃಜನಾತ್ಮಕ ಬರವಣಿಗೆಯಿಂದ ಬಹಳ ಬುದ್ಧಿಜೀವಿಗಳ ಗಮನ ಸೆಳೆದರು. ‘ಅರಗಿಣಿ’ ಚಲನಚಿತ್ರ ಪತ್ರಿಕೆಯ ಸಾಪ್ರಾಹಿಕದ ಗೌರವ ಸಂಪಾದಕಿಯಾಗಿ, ‘ಬೆಳ್ಳಿಚುಕ್ಕಿ’ ವಿಡಿಯೋ ಮ್ಯಾಗಜಿನ್ ಸಮಾಲೋಚಕ ಸಂಪಾದಕಿಯಾಗಿ, ‘ನಕ್ಷತ್ರಲೋಕ’ ಚಲನಚಿತ್ರ ಸಾಪ್ತಾಹಿಕದ ಸಂಪಾದಕಿಯಾಗಿ, ಪ್ರತಿಷ್ಠಿತ ‘ಕರ್ಮವೀರ’ ಪತ್ರಿಕೆಯ ಸಾಪ್ತಾಹಿಕದ ಸಲಹೆಗಾರ್ತಿಯಾಗಿ, ‘ನಮ್ಮಮಾನಸ’ ಮಹಿಳಾ ಪತ್ರಿಕೆಯ ಸಲಹೆಗಾರ್ತಿಯಾಗಿ ‘ಹೊಸತು’ ಮಾಸ ಪತ್ರಿಕೆಯ ಸಲಹಾಮಂಡಲಿಯ ಸದಸ್ಯೆಯಾಗಿ – ಹೀಗೆ ಸುಮಾರು ನಾಲ್ಕು ದಶಕಗಳಿಗೂ ಹೆಚ್ಚು ಕಾಲದಿಂದಲೂ ಪತ್ರಿಕೋದ್ಯಮದಲ್ಲಿದ್ದು ಆಗಾಗ್ಗೆ ಬರೆದ ತಮ್ಮ ವಿಶಿಷ್ಟ ರೀತಿಯ ಬರಹಗಳಿಂದ ಜನಪ್ರಿಯ ಲೇಖಕಿ ಎನಿಸಿದ್ದಾರೆ ಡಾ.ವಿಜಯಮ್ಮ… ೧೯೭೦ರಲ್ಲಿ ಸ್ಥಾಪಕ ಸದಸ್ಯೆಯಾಗಿ ಎ.ಎಸ್.ಮೂರ್ತಿ, ಎ.ಎಲ್. ಶ್ರೀನಿವಾಸಮೂರ್ತಿ ಮುಂತಾದವರುಗಳೊಡನೆ ಸೇರಿ ಸ್ಥಾಪಿಸಿದ್ದು ‘ಪಪೆಟ್ ‌ಲ್ಯಾಂಡ್’ ಹೆಣ್ಣು ಮಕ್ಕಳೇ ಬೊಂಬೆಗಳನ್ನು ತಯಾರಿಸಿಕೊಂಡು, ವಿಶಿಷ್ಟ ರೀತಿಯ ಚಲನಗತಿಯನ್ನು ಕೊಟ್ಟು ಹಲವಾರು ಘಟನೆಗಳಿಗೆ ಹಿನ್ನೆಲೆಯಲ್ಲಿ ಧ್ವನಿಮೂಡಿಸಿ, ನಡೆಸಿಕೊಟ್ಟ ಬೊಂಬೆಯಾಟದ ಪ್ರದರ್ಶನಗಳು ಕರ್ನಾಟಕದಾದ್ಯಂತ ಮನೆ ಮಾತಾಗಿತ್ತು. ಇದಕ್ಕೆ ಅಂದು ಪ್ರಜಾವಾಣಿಯಲ್ಲಿದ್ದ ಟಿ.ಎಸ್.ರಾಮಚಂದ್ರರಾವ್ ರವರು ಆಸಕ್ತಿ ತೋರಿಸಿದ್ದರಿಂದ ರಾಷ್ಟ್ರಾದ್ಯಂತ ಪ್ರಚಾರ ಸಿಕ್ಕಿ ಚಂದ್ರಶೇಖರ ಕಂಬಾರರ ‘ಕಿಟ್ಟಿಕತೆ’, ಗಿರೀಶ್‌ಕಾರ್ನಾಡರ ‘ಮಾನಿಷಾದ’, ಚಂದ್ರಶೇಖರ ಪಾಟೀಲರ ‘ಟಿಂಗರ ಬುಡ್ಡಣ್ಣ’ ಮತ್ತು ಗಿರಡ್ಡಿ ಗೋವಿಂದ ರಾಜರ ‘ಕನಸು’ಗಳನ್ನು ಬೊಂಬೆಯಾಟಕ್ಕೆ ಅಳವಡಿಸಿ ಪಡೆದ ಪ್ರಸಿದ್ಧಿ ಪಡೆದರು… ನಾಟಕ ಗೃಹಗಳಿಗೆ ಸೀಮಿತವಾಗಿದ್ದ ನಾಟಕಗಳನ್ನು ಜನ ಸಾಮಾನ್ಯರ ಬಳಿಗೆ ಕೊಂಡೊಯ್ಯುವಲ್ಲಿ ಕ್ರಾಂತಿಕಾರಕ ಬದಲಾವಣೆ ತಂದು, ‘ಚಿತ್ರ ಗೆಳೆಯರ ಗುಂಪು’ ೧೯೭೩ರಲ್ಲಿ ಪ್ರಾರಂಭಿಸಿದ್ದು ಬೀದಿ ನಾಟಕಗಳ ಪ್ರದರ್ಶನ… ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಮೂಲಭೂತ ಹಕ್ಕುಗಳಿಗೆ ಚ್ಯುತಿ ಬಂದಾಗ ಚಳವಳಿಯ ರೂಪ ಪಡೆದು ಇವರು ರಚಿಸಿದ ತೀಕ್ಷ್ಣ ವಿಡಂಬನೆಯ ನಾಟಕಗಳು ‘ಬಂದರೋ ಬಂದರು’, ‘ಉಳ್ಳವರ ನೆರಳು’, ‘ಕೇಳ್ರಪ್ಪೋ ಕೇಳ್ರೀ…’, ಮುಖವಿಲ್ಲದವರು, ಕುವೆಂಪುರವರ ‘ಧನ್ವಂತರಿ ಚಿಕಿತ್ಸೆ’ (ರೂಪಾಂತರ) ನಾಟಕಗಳು ರಾಜ್ಯಾದ್ಯಂತ ಪ್ರದರ್ಶನಗೊಂಡು ಪುಸ್ತಕರೂಪದಲ್ಲಿಯೂ ಪ್ರಕಟವಾಗಿವೆ… ಇವರ ಮತ್ತೊಂದು ಸಾಹಸದ ಕೆಲಸವೆಂದರೆ ಕಲೆಗಾಗಿಯೇ ಪ್ರಾರಂಭಿಸಿದ ಪತ್ರಿಕೆ. ಕಲೆಯ ಎಲ್ಲ ಕ್ಷೇತ್ರಗಳು, ಇತರ ಶಾಸ್ತ್ರಗಳು ಒಬ್ಬಾಗಿ ಕೆಲಸಮಾಡುವ ಪ್ರಕ್ರಿಯೆಯ ಶೋಧ ಮತ್ತು ಅವುಗಳನ್ನು ಅನುಭವಿಸುವ, ಅರ್ಥೈಸುವ ಮಾರ್ಗಗಳನ್ನು ಕಂಡುಕೊಳ್ಳುವ ಉದ್ದೇಶದಿಂದ ೧೯೯೩ರ ನವಂಬರ್‌ನಲ್ಲಿ ದ್ವೈಮಾಸಿಕವಾಗಿ ಪ್ರಾರಂಭಿಸಿದ ಡಾ.ವಿಜಯಮ್ಮ ‘ಸಂಕುಲ’ ಪತ್ರಿಕೆಯು ಆಯಾಯ ಕ್ಷೇತ್ರದ ವಿದ್ವಾಂಸರುಗಳ ಸಲಹೆ, ಸಹಕಾರಗಳಿಂದ ಹಲವಾರು ಆಕರ ವಿಷಯಗಳ ಸಮೃದ್ಧ ಮಾಹಿತಿಯ ಪ್ರೌಢ ಲೇಖನಗಳಿಂದ ಕೂಡಿದ್ದು, ಕಲೆಗಾಗಿಯೇ ಮೀಸಲಾಗಿದ್ದ ಪತ್ರಿಕೆಯು ಐದು ವರ್ಷಗಳ ನಂತರ ಕಾರಣಾಂತರದಿಂದ ನಿಂತು ಹೋದದ್ದು ಕಲಾಪ್ರಿಯರಿಗಾದ ನಷ್ಟವಾಯಿತು ಆಗ… ಹಲವಾರು ಸಂಘ ಸಂಸ್ಥೆಗಳೊಡನೆ ಒಡನಾಟ ಹೊಂದಿರುವ ವಿಜಯಾರವರು ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿ, ಅಧ್ಯಕ್ಷೆಯಾಗಿ; ಕಲಾಮಂದಿರ ಕಲಾ ಶಾಲೆ, ಸುಚಿತ್ರ ಫಿಲಂ ಅಕಾಡಮಿ ಮುಂತಾದವುಗಳ ಉಪಾಧ್ಯಕ್ಷೆಯಾಗಿ, ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಿತಿ, ರಾಷ್ಟ್ರೀಯ ಚಲನಚಿತ್ರ ತೀರ್ಪುಗಾರರ ಮಂಡಲಿ, ಕೇಂದ್ರ ಸಾಹಿತ್ಯ ಅಕಾಡಮಿ ಸಲಹಾ ಮಂಡಳಿ, ಕರ್ನಾಟಕ ಸರಕಾರದ ಪುಟ್ಟಣ ಕಣಗಾಲ್ ಪ್ರಶಸ್ತಿ ಆಯ್ಕೆ ಸಮಿತಿ, ಬೆಂಗಳೂರು ದೂರದರ್ಶನ ಚಲನಚಿತ್ರ ಸೆನ್ಸಾರ್‌ ಸಮಿತಿ, ಕರ್ನಾಟಕ ಲೇಖಕಿಯರ ಸಂಘದ ಅನುಪಮ ಪ್ರಶಸ್ತಿ ಆಯ್ಕೆ ಸಮಿತಿ, ಮೈಸೂರು ವಿಶ್ವವಿದ್ಯಾಲಯದ ಮಹಿಳಾ ವಿಷಯಕ ಅಧ್ಯಯನ ಕೇಂದ್ರ ಸಲಹಾ ಮಂಡಲಿ ಮುಂತಾದ ಸಮಿತಿಗಳ ಸದಸ್ಯೆಯಾಗಿ – ಹೀಗೆ ಹಲವಾರು ಸಂಘ ಸಂಸ್ಥೆಗಳಲ್ಲಿ ಸಮಿತಿಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡಿದರು ಡಾ.ವಿಜಯಮ್ಮನವರು… ಕನ್ನಡ ಪುಸ್ತಕ ಪ್ರಕಾಶನದಲ್ಲಿ ಮುದ್ರಣದ್ದೇ ದೊಡ್ಡ ಸಮಸ್ಯೆಯ ಎನಿಸಿದಾಗ ಸಣ್ಣ ಪ್ರಮಾಣದಲ್ಲಿ ಪ್ರಾರಂಭಿಸಿದ ‘ಇಳಾ’ ಪ್ರಕಾಶನವು ಪ್ರತಿಷ್ಠಿತ ಪ್ರಕಾಶನ ಸಂಸ್ಥೆಯಾಗಿ ರೂಪಗೊಂಡು ಪ್ರಖ್ಯಾತ ಬರಹಗಾರರದಷ್ಟೇ ಅಲ್ಲದೆ ಅನೇಕ ಉದಯೋನ್ಮುಖ ಬರಹಗಾರರನ್ನು ಬೆಳಕಿಗೆ ತಂದರು. ಸುಮಾರು ೨೦೦ಕ್ಕೂ ಹೆಚ್ಚು ಮೌಲಿಕ ಕೃತಿಗಳನ್ನು ಪ್ರಕಟಿಸಿದರು… ಆಗಾಗ್ಗೆ ಪತ್ರಿಕೆಗೆ ಬರೆದ ಲೇಖನಗಳು, ಕಾಲಂ ಬರಹಗಳು ಎಲ್ಲವೂ ಪುಸ್ತಕ ರೂಪದಲ್ಲಿ ಪ್ರಕಟಗೊಂಡಿಲ್ಲದಿದ್ದರೂ ‘ಮಾತಿನಿಂದ ಲೇಖನಿಗೆ’, ‘ಸುದ್ದಿ ಕನ್ನಡಿ’, ‘ನಿಜ ಧ್ಯಾನ’ – ಲೇಖನಗಳ ಸಂಗ್ರಹ; ಸತ್ಯಜಿತ್ ರಾಯ್ ಮತ್ತು ಅ.ನ.ಸುಬ್ಬರಾವ್ – ವ್ಯಕ್ತಿ ಚಿತ್ರಣ; ಶ್ರೀರಂಗ-ರಂಗ-ಸಾಹಿತ್ಯ-ಸಂಪ್ರಬಂಧ; ನೇಮಿಚಂದ್ರ – ಕರ್ನಾಟಕ ಸಾಹಿತ್ಯ ಅಕಾಡಮಿಯಿಂದ – ಹೀಗೆ ಹಲವಾರು ಕೃತಿಗಳ ಪ್ರಕಟಣೆಯ ಜೊತೆಗೆ ಬಹಳಷ್ಟು ಕೃತಿಗಳನ್ನು ಸಂಪಾದಿಸಿದ್ದಾರೆ ಡಾ.ವಿಜಯಮ್ಮ… ಪರ್ವ – ಒಂದು ಸಮೀಕ್ಷೆ, ಇನಾಂದಾರ್‌, ಇಂದಿನ ರಂಗ ಕಲಾವಿದರು, ಕನ್ನಡ ಸಿನಿಮಾ ಸ್ವರ್ಣ ಮಹೋತ್ಸವ, ಮಕ್ಕಳ ಸಿನಿಮಾ, ಕಿರಿಯರ ಕರ್ನಾಟಕ, ಪದ್ಮಾತರಂಗ (ಆಕಾಶವಾಣಿ ಕಲಾವಿದೆ ಎಸ್.ಕೆ. ಪದ್ಮಾದೇವಿಯವರ ಜೀವನ-ವೃತ್ತಿ) ‘ಅಕ್ಕರೆ’ (ವ್ಯಾರಾಯ ಬಲ್ಲಾಳರ ಅಭಿನಂದನ ಗ್ರಂಥ), ಕನ್ನಡ ಚಲನಚಿತ್ರ ಇತಿಹಾಸ, ಸ್ವಾತಂತ್ಯ್ರೋತ್ತರ ಕನ್ನಡ ಸಾಹಿತ್ಯ-ಸಂಸ್ಕೃತಿ, ಬೆಂಗಳೂರು ದರ್ಶನ, ಕರ್ನಾಟಕ ಕಲಾದರ್ಶನ ಮುಂತಾದವು ಪ್ರಮುಖವಾದವುಗಳು… ಹೀಗೆ ಚಲನಚಿತ್ರ, ನಾಟಕ ಸಾಹಿತ್ಯದಲ್ಲಿ ತೊಡಗಿಸಿಕೊಂಡಿರುವ ಇವರಿಗೆ ಸಂದ ಪ್ರಶಸ್ತಿಗಳು ಹಲವಾರು. ಬಂದರೋ ಬಂದರು (ಬೀದಿನಾಟಕ) ನಾಟಕಕ್ಕೆ ರಾಜ್ಯ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಸಂಕುಲ (ಲೇಖನ ಸಂಕಲನ) ಕೃತಿಗೆ ಗೀತಾ ದೇಸಾಯಿ ಪ್ರಶಸ್ತಿ; ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಸಂದೇಶ ಪ್ರಶಸ್ತಿ, ಆರ್‌.ಎನ್.ಆರ್‌. ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡಮಿ ಪ್ರಶಸ್ತಿ, ಲೋಕ ಶಿಕ್ಷಣ ಟ್ರಸ್ಟ್ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡಮಿ ಫೆಲೊಶಿಪ್, ಮಾಸ್ತಿ ಪ್ರಶಸ್ತಿ, ಹಾರ್ನಳ್ಳಿ ಟ್ರಸ್ಟ್ ಪ್ರಶಸ್ತಿ ಮುಂತಾದ ಪ್ರಶಸ್ತಿ ಗೌರವಗಳು ಡಾ.ವಿಜಯಮ್ಮನವರಿಗೆ ದೊರೆತವು… ಈ ಪ್ರಶಸ್ತಿಗಳ ಜೊತೆ ಬಂದ ಹಣವನ್ನು ಅನೇಕ ಸಂಘ ಸಂಸ್ಥೆಗಳಿಗೆ ಕೊಡುಗೆಯಾಗಿ ನೀಡಿದಂತೆ ಹಾರ್ನಳ್ಳಿ ರಾಮಸ್ವಾಮಿ ಟ್ರಸ್ಟ್ ಪ್ರಶಸ್ತಿಯ ಜೊತೆಗೆ ಕೊಡ ಮಾಡಿದ ಒಂದು ಲಕ್ಷ ರೂ. ಹಣವನ್ನು ನಾಲ್ಕು ಜನ ಲೇಖಕರು ತರಲು ಉದ್ದೇಶಿಸಿರುವ ನಾಲ್ಕು ಗ್ರಂಥಗಳ ಪ್ರಕಟಣೆಗೆ ನೆರವು ನೀಡಿರುವುದಲ್ಲದೆ ಮಾಸ್ತಿ ಪ್ರಶಸ್ತಿಯಿಂದ ಬಂದ ೨೫೦೦೦ ರೂಪಾಯಿಗಳನ್ನು ಗಾರ್ಮೆಂಟ್ಸ್ ಟೆಕ್ಸ್‌ಟೈಲ್ ವರ್ಕರ್ಸ್ ಯೂನಿಯನ್‌ಗೆ ನೀಡಿ ಶ್ರಮ ಜೀವಿಗಳ ಹೋರಾಟದ ಬದುಕಿಗೆ ಬೆನ್ನೆಲುಬಾಗಿದರು ಡಾ.ವಿಜಯಮ್ಮನವರು..! ಹೀಗೆಯೇ ತಮ್ಮನ್ನು ತಾವು ಬರಹ, ನಾಟಕ, ಹಲವಾರು ಕೆಲಸಗಳಲ್ಲಿ ತೊಡಗಿಸಿಕೊಂಡರು ಡಾ.ವಿಜಯಮ್ಮ. ಈಗ ಈ ವಿಜಯಮ್ಮನವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯೂ ದೊರೆತಿದ್ದು ಸಮಂಜಸವಾಗೇ ಇದೆ..! ‌‌ ————– ಡಾ.ವಿಜಯಮ್ಮ ಬದುಕು-ಬರಹ

ಅಭಿನಂದನೆ Read Post »

ಇತರೆ

ಫಲಕುಗಳು-ಝಲಕುಗಳು

*ಫಲುಕುಗಳು ಮತ್ತು ಅದರ ಝಲಕ್ಕುಳು* ಬಸವರಾಜ ಕಾಸೆ ಸಾಹಿತ್ಯದ ಪ್ರಕಾರ ಅದೆಷ್ಟೋ ಇದ್ದರೂ ಅಪರೂಪಕ್ಕೊಮ್ಮೆ ಹೊಸ ಹೊಸ ಪ್ರಕಾರಗಳು ಸೃಷ್ಟಿಯಾಗುತ್ತಲೇ ಸಾಗುತ್ತವೆ. ಅದೆಲ್ಲವನ್ನೂ ತನ್ನೊಳಗೆ ಹುದುಗಿಸಿಕೊಳ್ಳುತ್ತಲೇ ಕುತೂಹಲವನ್ನು ಹೆಚ್ಚಿಸಿ ಹೊಸ ಹೊಸ ಓದುಗರನ್ನು ತನ್ನೆಡೆಗೆ ಸೆಳೆದುಕೊಳ್ಳುವ ಮೂಲಕ ನಿರಂತರವಾಗಿ ಬೆಳವಣಿಗೆ ಹೊಂದುವುದು ಸಾಹಿತ್ಯಕ್ಕೆ ಇರುವ ಹಿರಿಮೆ ಮತ್ತು ಗರಿಮೆ. ಫಲುಕುಗಳು ಎನ್ನುವುದು ಅಂತದ್ದೇ ಒಂದು ಸಾಹಿತ್ಯದ ನೂತನ ಪ್ರಕಾರ. ಹೆಸರು ಮತ್ತು ಶೀರ್ಷಿಕೆಗಳು ವಿಭಿನ್ನವಾಗಿ ಇರುವುದರಿಂದ ಮೊದಲ ನೋಟದಲ್ಲಿಯೇ ಆಕರ್ಷಿಸಿ ಬಿಡುತ್ತೆ ಈ ಬರಹ. ಇನ್ನೂ ಫಲುಕುಗಳ ಓದು ಒಂದು ಓದಿನಲ್ಲಿಯೇ ಓದುಗರನ್ನು ತನ್ನೊಳಗೆ ಹಿಡಿದಿಟ್ಟುಕೊಂಡು ಮತ್ತೆ ಮತ್ತೆ ಓದಿಸಿಕೊಳ್ಳುವ ಸಾಮರ್ಥ್ಯ ಇರುವ ಬರಹ. ಹಾಗಾದರೆ ಫಲುಕುಗಳು ಅಂದರೆ ಏನು, ಅದರ ಗುಣ ಲಕ್ಷಣಗಳು ಮತ್ತು ನಿಯಮಗಳು ಹಾಗೂ ಅದರ ಬರಹ ಹೇಗೆ ಬನ್ನಿ ತಿಳಿದುಕೊಳ್ಳೋಣ. ಯಾವುದಾದರೂ ಒಂದು ನಿರ್ದಿಷ್ಟ ಸನ್ನಿವೇಶವನ್ನು ಆರಿಸಿಕೊಂಡು ಅದನ್ನು ಗಾಢವಾಗಿ ಪರಿಣಾಮ ಬೀರುವಂತೆ ನಮ್ಮದೇ ಪದಗಳಲ್ಲಿ ೨ ರಿಂದ ೪ ೫ ಸಾಲುಗಳಲ್ಲಿ ಚಿತ್ರಿಸುವ ಸಣ್ಣ ಸಣ್ಣ ಬರಹಗಳೇ ಫಲುಕುಗಳು. ವಿಶೇಷವೆಂದರೆ ಇಲ್ಲಿ ಶೀರ್ಷಿಕೆಯ ಹೆಸರು ಸನ್ನಿವೇಶವೇ ಆಗಿರುತ್ತದೆ. ಯಾವ ಸಂದರ್ಭದ ಕುರಿತು ಆ ಫಲುಕುಗಳನ್ನು ಬರೆದಿರಲಾಗಿರುತ್ತದೆಯೋ ಆ ಸಂದರ್ಭವನ್ನು ಸ್ಪಷ್ಟವಾಗಿ ಶೀರ್ಷಿಕೆಯಲ್ಲಿ ಸೂಚಿಸಿರಬೇಕಾಗುತ್ತದೆ. ಒಂದು ಸನ್ನಿವೇಶದ ಮೇಲಿನ ಇಂತಹ ಪ್ರತಿ ಫಲುಕುಗಳು ಕನಿಷ್ಠ ೧೦ ಝಲಕ್ಕುಗಳನ್ನು ಸ್ವಾತಂತ್ರ್ಯವಾಗಿ ಮತ್ತು ಕಡ್ಡಾಯವಾಗಿ ಹೊಂದಿರಬೇಕು, ಇಲ್ಲಿಯೇ ಒಬ್ಬ ಬರಹಗಾರನ ಶಕ್ತಿ ಅನಾವರಣಗೊಳ್ಳುವುದು. ಇಲ್ಲಿ ಝಲಕ್ಕುಗಳು ಎಂದರೆ ಒಂದು ಸ್ವಾತಂತ್ರ್ಯವಾದ ಚರಣ. ಅದಕ್ಕೆ ಇನ್ನೊಂದು ಚರಣದ ಜೊತೆಗೆ ಯಾವುದೇ ಸಂಬಂಧ ಇರುವುದಿಲ್ಲ ಮತ್ತು ಪ್ರತಿ ಝಲಕ್ಕುಗಳು ಸಂದರ್ಭದ ತೀವ್ರತೆಯನ್ನು ಹೆಚ್ಚಿಸುತ್ತಾ ಸಾಗಬೇಕು. ಆದ್ದರಿಂದ ಆ ಎಲ್ಲಾ ಹತ್ತು ಝಲಕ್ಕುಗಳನ್ನು ಒಂದಾದ ನಂತರ ಒಂದು ಕ್ರಮ ಸಂಖ್ಯೆಯ ಮೂಲಕ ಸೂಚಿಸುತ್ತಾ ಹೋಗಬೇಕು. ಪ್ರತಿಯೊಂದು ಝಲಕ್ಕುಗಳು ಸಹ ಆ ಕುರಿತು ವಿಭಿನ್ನ ಭಾವವನ್ನು, ತರಹೇವಾರಿ ದೃಷ್ಟಿಕೋನವನ್ನು ಹೊಂದಿರಬೇಕು. ಇನ್ನೂ ಸಾಲುಗಳ ಮಿತಿ ಕನಿಷ್ಠ ಎರಡು ಮತ್ತು ಗರಿಷ್ಠ ಐದನ್ನು ಮೀರುವಂತಿಲ್ಲ. ಆದಷ್ಟು ಕಡಿಮೆ ಸಾಲುಗಳಲ್ಲಿ ಹೆಚ್ಚಿನ ಭಾವವನ್ನು ಹೊರ ಹೊಮ್ಮಿಸಬೇಕು. ಅನವಶ್ಯಕ ಪದಗಳ ತಾಕಲಾಟ ಇಲ್ಲಿ ಸಲ್ಲದು. ಹಾಗೆಂದು ಬರಹವೇನು ಕಷ್ಟವೇನಲ್ಲ. ಸಂದರ್ಭಗಳ ಕುರಿತ ಜ್ಞಾನ, ವಿಭಿನ್ನ ಬಗೆಯ ಚಿಂತನೆ ಇದ್ದರೆ ಒಮ್ಮೆ ಪ್ರಯತ್ನಿಸಬಹುದು. ಒಂದೇ ಬರಹಕ್ಕೆ ಪರಿಪೂರ್ಣವಾಗದ ಇದನ್ನು ಮತ್ತೆ ಮತ್ತೆ ಓದಿ ತಿದ್ದಿ ತೀಡಿ ಪೂರ್ಣಗೊಳಿಸಬಹುದು. ವಿಷಯದ ನಿರೂಪಣೆಯ ಕುರಿತು ಹೆಚ್ಚಿನ ಜಾಗೃತಿ, ಸ್ಪಷ್ಟ ಕಲ್ಪನೆ, ವಾಸ್ತವಿಕ ಆಗು ಹೋಗುಗಳ ಬಗ್ಗೆ ಈ ಬರಹ ಹೆಚ್ಚಿನ ಜ್ಞಾನವನ್ನು ಅಪೇಕ್ಷಿಸುತ್ತದೆ. ಹಾಗಿದ್ದರೆ ಕನ್ನಡದಲ್ಲಿ ಫಲುಕುಗಳ ಬಗ್ಗೆ ಕೃತಿಗಳು ಬಂದಿದ್ದಾವಾ? ಇದಕ್ಕೆ ಇಲ್ಲ ಎಂದೇ ಹೇಳಬೇಕು. ಇದುವರೆಗೂ ಈ ಪ್ರಕಾರದಲ್ಲಿ ಯಾವುದೇ ಕೃತಿಗಳು ಹೊರ ಬಂದಿಲ್ಲ, ಇನ್ನಷ್ಟೇ ಹೊರ ಬರಬೇಕು. ಆದರೆ ಈ ಪ್ರಕಾರದಲ್ಲಿ ಬೆರಳಣಿಕೆಯಷ್ಟು ಕವಿಗಳು ಮಾತ್ರ ಬರೆಯುತ್ತಿರುವುದರಿಂದ ಇನ್ನೂ ತಡವಾಗಬಹುದು ಅನಿಸುತ್ತೆ.ಈ ಮಾದರಿ ಇನ್ನೂ ಹೆಚ್ಚು ಪ್ರಚಾರದಲ್ಲಿ ಇರದ ಕಾರಣ, ಇದ್ದರೂ ಕೂಡ ಈ ಬಗ್ಗೆ ಮಾಹಿತಿ ಲಭ್ಯವಿರದ ಕಾರಣ ಮತ್ತು ಹೊಚ್ಚ ಹೊಸ ಬಗೆಯ ಪ್ರಕಾರವಾದರಿಂದ ಕೃತಿಗಳು ಹೊರ ಬಂದಿಲ್ಲ. ಅತಿ ಶೀಘ್ರದಲ್ಲೇ ಹೊರ ಬರಲಿ ಎಂದು ಆಶಿಸುತ್ತಾ ನನ್ನದೇ ಫಲುಕುಗಳನ್ನು ಉದಾಹರಣೆಗೆ ನೀಡುತ್ತಿರುವೆ. ಫಲುಕುಗಳು ಸನ್ನಿವೇಶ- ಕೊಟ್ಟು ತೆಗೆದುಕೊಳ್ಳಲಾಗದ ಸಂದರ್ಭ ೧ ಬಪ್ಪರೇ ಮಗನೇ ಚಾಲಾಕಿ ಅಂದರೆ ನೀನೇ ತೆಗೆದುಕೊಂಡಿರುವುದಾ ಮರೆತು ನಾ ಮರೆಯುವಂತೆ ಮರೆಸುವ ನಿನಗೆ ಎಷ್ಟೆಂದು ಉಘೇ ಉಘೇ ಎನ್ನಲಿ ೨ ಕೊಟ್ಟಿರುವದಾ ಕೊಟ್ಟು ಕೂಡಬೇಕು ತೇಲುತ್ತಾ ನಂಬಿಕೆ ವಿಶ್ವಾಸಗಳ ಅಲೆಯಲ್ಲಿ ಇಲ್ಲದಿದ್ದರೆ ಮತ್ತೆ ಮುಖ ತೋರಿಸುವುದು ಹೇಗೆ ಹೇಳಿ ಕೊಡು ನಾಚಿಕೆ ಬಿಟ್ಟು ೩ ಕೊಡುವುದನ್ನು ಕೊಟ್ಟು ಬಿಟ್ಟರೆ ಮುಗಿಯುವುದು ಹೇಗೆ ಎಲ್ಲಾ ಅಲ್ಲಿಗೆ ಬಂಧಗಳು ಗಟ್ಟಿಯಾದಗಲೇ ಚಿಗುರು ಬೆಸೆದು ಹೆಚ್ಚೆಚ್ಚು ಆತ್ಮೀಯತೆ ಅಂಟಂಟು ೪ ಸಂಬಂಧಗಳಲ್ಲಿ ವ್ಯವಹಾರ ಬೇಡ ಎನ್ನುವ ಮನಸ್ಥಿತಿವನಲ್ಲ ನಾನು ಆದರೆ ಸಂಬಂಧಗಳು ವ್ಯವಹಾರ ಅಲ್ಲ ಗೆಳೆಯ ವ್ಯವಹರಿಸುವುದೇ ಸಂಬಂಧವಾದರೆ ಅದು ಕೇವಲ ಲಾಭ ನಷ್ಟಗಳ ವ್ಯಾಪಾರ ೫ ಕೊಡು ತಗೊಳ್ಳುವುದು ಎಲ್ಲಾ ಕಡೆ ಇದ್ದದ್ದೆ ಕೊಟ್ಟು ತಗೋಬೇಕು ಎನ್ನುವರು ಅದಕ್ಕೆ ಮೋಡ ಮಳೆ ನೀಡಿದರೆ ಇಳೆಗೆ ಹಸಿರಾಗಿ ಹರಿದು ಮುಂದೆ ಆವಿಯಾಗಿ ನೀಡುವುದು ತಾ ಪಡೆದುಕೊಂಡಿರುವುದನ್ನು ೬ ಮನುಷ್ಯ ಎಂದ ಮೇಲೆ ಕಷ್ಟ ನೋವುಗಳು ಸಹಜವೇ ಅಲ್ಲವೇ ಗೆಳೆಯ ಒಬ್ಬರಿಗೊಬ್ಬರು ಸಮಯಕ್ಕಾದರೆ ತಾನೇ ಉಳಿಯುವುದು ಅನುರಾಗ ಬಿತ್ತಿ ಉತ್ತಿದಂತೆ ಬೀಜದ ಫಲ ೭ ಚಿಂತಿಸದಿರು ಹೆಚ್ಚಿಗೆ, ನಾನಂತೂ ಚಿಂತಿಸಲಾರೆ ನೀ ಎಲ್ಲಿಯೂ ಹೋಗಲಾರೆ, ನಾನು ಸಹ ಮತ್ತೆ ಆಗುವುದಿದೆ ಮುಖಾಮುಖಿ ನಿನಗಾಗಿ ಆಗ ಕಾದಿರಲಿದೆ ಸರಿಯಾದ ಉತ್ತರ ೮ ಅಯ್ಯೋ ಪಾಪ ಎನಿಸುವ ಯೋಗ್ಯತೆ ಅನುಕಂಪ ಗಿಟ್ಟಿಸಿಕೊಳ್ಳುವಾಗ ಥೂ ಪಾಪಿ ಎನ್ನುವುದಕ್ಕೂ ನಾಲಾಯಕ್ಕು ಅತಿರೇಕಕ್ಕೆ ಏರಿದಾಗ ಪರ್ಯಾಯ ದುರ್ವ್ಯಸನ ೯ ನನ್ನಲ್ಲಿಯೂ ಇದ್ದವು ನಿರೀಕ್ಷೆಗಳು ಅನುಭವ ಬದಲಿಸಿದೆ ಮನೋಭಾವ ನನಗೀಗ ನನಗಾಗುವವರಿಗೆ ಮಾತ್ರ ನಾನಾಗಬೇಕು ಎಂದೆನಿಸಿದೆ ನಿನ್ನಿಂದ ೧೦ ತಲೆ ತಪ್ಪಿಸಿ ತಿರುಗುವವರ ತಲೆ ಕೆಡಿಸುವ ಚುಕ್ತಾಗಳಿಗೆ ತಲೆ ಹಾಕಲಾರೆ ತಲೆಯಿಂದಲೇ ತೆಗೆದ ಮೇಲೆ ನೀನು ಯಾರೋ, ಅದು ಯಾವುದೋ ಈಗೆಲ್ಲವೂ ಬರೀ ಗಾಂಧಿ ಲೆಕ್ಕ

ಫಲಕುಗಳು-ಝಲಕುಗಳು Read Post »

ಇತರೆ

ಸಂಗೀತ ಸಂಗಾತಿ

ಸಂಗೀತದ ಹಿರಿಮೆ ರತ್ನಾ ಬಡವನಹಳ್ಳಿ ಪ್ರತಿ ಮಾನವನಲೂ ಒಂದೊಂದು ಕಲೆ ತನಗರಿಯದೆ ಅಡಗಿ ಕುಳಿತೇ ಇರುತ್ತದೆ.ಅದನ್ನು ಗುರುತಿಸಿ ಬೆಳಕಿಗೆ ತರುವ ಸಾಮರ್ಥ್ಯ ಕೆಲವರಲ್ಲಿ‌ ತಕ್ಷಣ ಮೂಡುವುದಿಲ್ಲ. ಅದನ್ನು ಗ್ರಹಿಸಿ ಹೊರತರುವ ಗುರು,ಹಾಗೂ ಕಲಾಪೋಷಕರೂ ಸಿಗಬೇಕು. ಎಂತಹ ಕಠಿಣ ಮನಸಿನ ಮನುಜನಾದರೂ ಸಂಗೀತದ ರಾಗಕ್ಕೆ ಒಮ್ಮೆಯಾದರೂ ತಲೆದೂಗದೆ ಇರಲಾರ. ಎಂದಾದರೂ ಒಂದಲ್ಲ ಒಂದು ಹಾಡಿಗೆ ಕಾಲು ,ಕೈ ಬೆರಳು ತಾಳ ಹಾಕಿ ತಲೆದೂಗಿಯೇ ಇರುತ್ತಾನೆ ಆ ಸೆಳೆಯುವ ಶಕ್ತಿ ಸಂಗೀತಕ್ಕಿದೆ.ಒಬ್ಬೊಬ್ಬರಿಗೆ ಒಂದೊಂದು ರಾಗ ಇಷ್ಟವಾಗಬಹುದು. ರಚ್ಚೆ ಇಳಿದು ಅಳುವ ಮಗುವೂ ಸಹ ಅಮ್ಮನ ಜೋಗುಳ ಕೇಳಿ ಅಳು ನಿಲ್ಲಿಸುವುದ ಕಂಡಿಲ್ಲವೇ .ಎಲ್ಲ ತಾಯಂದಿರೂ ಸಂಗೀತ ,ಹಾಡು ಕಲಿತವರೇ ಇರುವುದಿಲ್ಲ ಆದರೂ ಮಗು ಅಳುತಿರಲು ಮಲಗಿಸುವಾಗ “ನನ್ನ ಬಂಗಾರೀ ಮುದ್ದೂ ಚಿನ್ನುಮರೀ,ಜಾಣ ಪಾಚೋ ಪುಟ್ಟೂ ” ಎಂದು ರಾಗವಾಗಿ ಹೇಳುತ್ತಾ ಮಲಗಿಸುವುದಿಲ್ಲವೇ ಹಾಗೆ ಸಂಗೀತ ಎಲ್ಲ ವಿಧದ ಧ್ವನಿಗಳಲಿ ಅಡಗಿದೆ. ಕೊಂಚ ಭಾವಜೀವಿಯಾಗಿ ಕಲೆಯ ಬಲೆ ಮನದಿ ಹರಡಿದ್ದರಂತೂ ಶಬ್ದಗಳಲೂ ಮಧುರ ಲಯಬದ್ದ ರಾಗ ಅನುಭವಿಸುವುದು ನಿಜ. ಮಳೆ ಸುರಿಯುವ ಮತ್ತೆ ಮಳೆ ನಿಂತು ಹೆಂಚಿನ ಅಥವಾ ಮನೆಯ ಚಪ್ಪರದ ತುದಿಯಿಂದ ಬೀಳುವ,ಮಳೆಬಂದಾಗ ಹಳ್ಳಿಯ ಮಣ್ಣಿನ ಮನೆ ಸೋರುವಾಗ ಪಾತ್ರೆ ಇಟ್ಟು ಅದರಲ್ಲಿ ಬೀಳುವ ಹನಿ ಹನಿ ನೀರಿನ ದನಿಯಲೂ ಲಯಬದ್ದ ರಾಗ ಆಲಿಸಬಲ್ಲದು. ಹಾಲು ಕರೆಯುವಾಗ ಖಾಲಿ ತಂಬಿಗೆಯಲಿ ಬೀಳುವ ಹಾಲಿನ ಸೊರ್ ಸೊರ್ ಶಬ್ದ ತುಂಬುತ್ತಾ ಬಂದಾಗ ನೊರೆಯ ಮೇಲೆ ಬೀಳುವ ಶಬ್ದವೇ ಬೇರೆ ಹಳ್ಳಿ ಮನೆಗಳಲ್ಲಿ ಹಸು,ದನಕರುಗಳು ಕಟ್ಟುವ ಜಾಗ ಮನೆಯಪಕ್ಕ ಇದ್ದರೆ ರಾತ್ರಿ ಮಲಗಿದಾಗ ಅವುಗಳು ಮೆಲುಕು ಹಾಕುತ್ತಾ ಜೋರು ಉಸಿರು ಬಿಡುತ್ತಾ ಅತ್ತ ಇತ್ತ ತಿರುಗುವಾಗ ಗೊರಸಿನ ಶಬ್ದ , ಎತ್ತಿನ ಬಂಡಿ ಹೊರಟಾಗ ಕೊರಳ ಗೆಜ್ಜೆಯ ಹಾಗೂ ಬಂಡಿಯ ಚಕ್ರದ ಸಪ್ಪಳ ಮಧ್ಯೆ ಮಧ್ಯೆ ಎತ್ತಗಳನ್ನು ಓಡಿಸಲು ಹೇ ಹೇ ಎನುವ ಸವಾರನ ಧ್ವನಿ ಹೀಗೆ ಎಲ್ಲವೂ ನಾದ ಮಯ ಅನುಭವಿಸಿ ಆಸ್ವಾದಿಸುವ ಮನಸಿದ್ದರೆ ಮಾತ್ರ ಹೀಗೆ ರೈಲಿನಲಿ ಕುಳಿತಾಗ ಅದರ ಒಂದೇ ಸಮನಾಗಿ ಉಂಟಾಗುವ ಶಬ್ದ ಜೋಗುಳ ಹಾಡಿದಂತೇ ಆಗುವುದು. ಹಾಗೆ ಕೆಲವರ ಕೈ ಬೆರಳು ಬಸ್ಸಿನ ಕಂಬಿ ಹಿಡಿದು ನಿಂತಾಗಲೂ ತಾಳ ಹಾಕುವುದ ಕಂಡಿದ್ದೇವೆ. ಮಾನವ ತನ್ನ ಭಾವನೆಯನ್ನು ಅಭಿವ್ಯಕ್ತಪಡಿಸುವ ಮಾಧ್ಯಮವೇ ಕಲೆ.ಕಲೆಯು ಮಾನವನ ಮನಸನ್ನು ಸಂಸ್ಕರಿಸುತ್ತದೆ.ಕಲೆಯ ಮೂಲವೇ ಪ್ರಕೃತಿ. ಇದರ ಸೌಂದರ್ಯೋಪಾಸನೆಯ ಮೂಲಕ ಮಾನವನ ಪ್ರತಿಭೆ ಅನಾವರಣಗೊಳ್ಳುತ್ತದೆ. ಅರವತ್ನಾಲ್ಕು ಕಲೆಗಳನ್ನು ಭಾರತೀಯ ಗ್ರಂಥಗಳು ತಿಳಿಸುತ್ತವೆ.ಅವುಗಳಲ್ಲಿ ಲಲಿತಕಲೆ,ವಿಜ್ಞಾನ,ವಾಣಿಜ್ಯ ಹೀಗೆ ವಿಂಗಡಿಸಿದ್ದಾರೆ ಅದರಲ್ಲಿ ಲಲಿತ ಕಲೆ ಸಂಸ್ಕಾರ,ಪ್ರತಿಭೆಯ ಮೂಲಕ ತೆರೆದುಕೊಳ್ಳುತ್ತದೆ ಸಂಗೀತ,ನೃತ್ಯ,ಸಾಹಿತ್ಯ,ನಾಟಕ,ಶಿಲ್ಪ,ಚಿತ್ರ ಇವೆಲ್ಲ ಲಲಿತಕಲೆಗಳೆನಿಸುತ್ತವೆ. ಈ ಲಲಿತ ಕಲೆಗಳಲ್ಲಿ ಸಂಗೀತ ಪ್ರಮುಖ ಸ್ಥಾನ ಪಡೆದಿದೆ ನಾದದ ಮೂಲಕ ಅಂತರೀಕ ಸೌಂದರ್ಯವ ಕಿವಿಯ ಮೂಲಕಹರಿಸಿ ಲೌಕಿಕ ಜಗದ ಜಂಜಾಟವ ಮರೆಸಿ ಕಲಾವಿದ ಹಾಗೂ ಶ್ರೋತೃವಿನ ಮನವ ತಣಿಸುವುದೇ ಸಂಗೀತ ಗೀತ ಎಂದರೆ ಹಾಡು. ಸಂಗೀತವೆಂದರೆ ಒಳ್ಳೆಯ ಹಾಡು .ಕಿವಿಗೆ ಹಿತವ ತಂದು ಮನದ ಮುಟ್ಟಿ ಮಾನಸಿಕ ಉದ್ವೇಗಶಮನ ಮಾಡಿ ಶಾಂತರಸದಲಿ ನೆಲೆಗೊಳಿಸುವುದು ಶಾಸ್ತ್ರೀಯ ಸಂಗೀತ ಮತ್ತಷ್ಟು ಮುಂದಿನವಾರ ತಿಳಿಯೋಣ

ಸಂಗೀತ ಸಂಗಾತಿ Read Post »

ಇತರೆ

ಮಾನವ ಹಕ್ಕುಗಳು

ಡಿಸೆಂಬರ್ – 10 ಮಾನವ ಹಕ್ಕುಗಳ ರಕ್ಷಣಾ ದಿನ. ಈ ಹಕ್ಕುಗಳ ರಕ್ಷಣೆ ಅರ್ಥಪೂರ್ಣವಾಗಿ ಸಾಕಾರಗೊಳುತ್ತಿದೆಯೇ..? ಅಲ್ಲದೇ ಭಾರತದಲ್ಲಿ ‘ಮಾನವ ಹಕ್ಕು’ಗಳ ಸ್ಥಿತಿ‌ ಹೇಗಿದೆ..!? ಕೆ.ಶಿವು.ಲಕ್ಕಣ್ಣವರ ಇದೇ ಡಿಸೆಂಬರ್ 10ರಂದೇ ಈ ಮಾನವ ಹಕ್ಕುಗಳ ರಕ್ಷಣಾ ದಿನದ ಈ ಲೇಖನ ಬರೆಯಬೇಕಾಗಿತ್ತು ನಾನು. ಅಲ್ಲದೇ ಇನ್ನೂ ಒಂದಿಷ್ಟು ಸಾಂದರ್ಭಿಕ ಲೇಖನಗಳನ್ನೂ ಬರೆಯಬೇಕಾಗಿತ್ತು. ಆದರೆ ಈ ಯಾವುದೋ ಲೇಖನಗಳ ಮಾಹಿತಿ ಸಂಗ್ರಹಕ್ಕಾಗಿ ಹೀಗೆಯೇ ಸಿರಿಗೆರೆ ಹೋಗಿದ್ದೆ. ಹಾಗಾಗಿ ಈ ಡಿಸೆಂಬರ್ ‌10ರ ಈ ಮಾನವ ಹಕ್ಕುಗಳ ರಕ್ಷಣಾ ದಿನದ ಮಾಹಿತಿ ಲೇಖನ ಬರೆಯಲಾಗಲಿಲ್ಲ. ಅದಕ್ಕಾಗಿ ಈಗ ಬರೆಯುತ್ತಿದ್ದೇನೆ… ಪ್ರಪಂಚದ ಎಲ್ಲಾ ನಾಗರಿಕರಿಗೆ ಮಾನವ ಹಕ್ಕುಗಳು ದೊರಕುವುದನ್ನು ಖಾತ್ರಿಪಡಿಸುವ ಹೊಣೆ ವಿಶ್ವಸಂಸ್ಥೆಯದು. ಈ ಹಕ್ಕುಗಳು ಎಲ್ಲರಿಗೂ ದೊರಕಿವೆಯೆ? ಮನುಷ್ಯರು ಇರುವ ಎಲ್ಲಾ ಕಡೆ ಅವರಿಗೆ ಹಕ್ಕುಗಳು ಇರುತ್ತವೆ. ಇಂದಿನ ಸಮಾಜದಲ್ಲೂ ಮನುಷ್ಯರ ಹಕ್ಕುಗಳಿಗೆ ಮಾನ್ಯತೆಯನ್ನು ಕೊಡಲಾಗಿದೆ… ಪ್ರಪಂಚದಲ್ಲಿ ಡಿಸೆಂಬರ್ ಹತ್ತನೇ ತಾರೀಖನ್ನು ವಿಶ್ವಾದ್ಯಂತ ‘ಮಾನವ ಹಕ್ಕುಗಳ ದಿನ’ ಎಂದು ಆಚರಿಸಲಾಗುತ್ತಿದೆ. ಡಿಸೆಂಬರ್ 10, 1948ರಂದು ವಿಶ್ವಸಂಸ್ಥೆಯು ಮಾನವ ಹಕ್ಕುಗಳ ಚಾರ್ಟರ್‍ಗೆ ಮನ್ನಣೆಯನ್ನು ನೀಡಿತು. ಇದನ್ನು ವಿಶ್ವಸಂಸ್ಥೆಯು ತನ್ನ ಎಲ್ಲಾ ಸದಸ್ಯ ದೇಶಗಳನ್ನು ಕಡ್ಡಾಯಗೊಳಿಸಿದೆ. ಈ ಹಕ್ಕುಗಳ ಬಗ್ಗೆ ಎಲ್ಲಾ ಸದಸ್ಯ ರಾಷ್ಟ್ರಗಳು ತಮ್ಮಲ್ಲಿನ ವಿದ್ಯಾರ್ಥಿ ಸಮುದಾಯಕ್ಕೆ, ಯುವಜನರಿಗೆ ತಿಳುವಳಿಕೆ ನೀಡಬೇಕೆಂದು ಕಡ್ಡಾಯಗೊಳಿಸಿದೆ… ಮಾನವ ಹಕ್ಕುಗಳ ದಿನ ಆಚರಿಸುವುದರ ಹಿಂದಿನ ಪ್ರಮುಖ ಉದ್ದೇಶ ಎಂದರೆ, ಪ್ರಪಂಚದಲ್ಲಿ ಮನುಷ್ಯರು ಮೂಲಭೂತ ಸೌಲಭ್ಯಗಳನ್ನು, ನ್ಯಾಯವನ್ನು ಮತ್ತು ಶಾಂತಿಯನ್ನು ಪಡೆದುಕೊಳ್ಳಲು ಹುಟ್ಟಿದಾಗಿನಿಂದಲೇ ಹಕ್ಕುಳ್ಳವರಾಗಿದ್ದಾರೆ; ಈ ಹಕ್ಕುಗಳನ್ನು ಹೊಸಕಿ ಹಾಕುವ ಅಧಿಕಾರವು ಪ್ರಪಂಚದ ಯಾವ ಶಕ್ತಿಗೂ ಇಲ್ಲ. ಎಲ್ಲಾ ದೇಶಗಳ ನಾಗರಿಕರಿಗೆ ಮಾವನ ಹಕ್ಕುಗಳು ಕಡ್ಡಾಯವಾಗಿ ದೊರಕಬೇಕು ಎಂಬುದನ್ನು ತಿಳಿಸಿ ಕೊಡುವುದು… ಮಾನವ ಹಕ್ಕುಗಳ ಚಾರ್ಟರ್‍ನಲ್ಲಿ ಅನುಚ್ಛೇದ-1, ಪ್ರತಿಯೊಬ್ಬ ಮನುಷ್ಯರಿಗೆ ಗೌರವ ಮತ್ತು ಹಕ್ಕು ಸಮಾನವಾಗಿ ದೊರಕಬೇಕು ಎಂದು ಹೇಳುತ್ತದೆ. ಅನುಚ್ಛೇದ-2, ಎಲ್ಲಾ ಮನುಷ್ಯರಿಗೆ ಅವರ ಬಣ್ಣ, ಜಾತಿ, ವಂಶ, ಲಿಂಗ, ಭಾಷೆ, ಪ್ರದೇಶ ಮತ್ತು ರಾಜಕೀಯ ವಿಚಾರಗಳ ಆಧಾರದಲ್ಲಿ ತಾರತಮ್ಯ ಮಾಡದೆ, ಮಾನವ ಹಕ್ಕುಗಳನ್ನು ಒದಗಿಸತಕ್ಕದ್ದು ಎಂದು ಹೇಳುತ್ತದೆ. ಅನುಚ್ಛೇದ-5, ಮನುಷ್ಯರ ವಿಷಯದಲ್ಲಿ ಅಮಾನವೀಯವಾಗಿ ಯಾರೂ ವರ್ತಿಸತಕ್ಕದ್ದಲ್ಲ ಎನ್ನುತ್ತದೆ. ಅನುಚ್ಛೇದ-12, ವ್ಯಕ್ತಿಯ ವೈಯಕ್ತಿಯ ಮತ್ತು ಸಾಂಸಾರಿಕ ಜೀವನದಲ್ಲಿ ಯಾವುದೇ ಅಡ್ಡಿಯನ್ನು ಯಾರೂ ಉಂಟು ಮಾಡತಕ್ಕದ್ದಲ್ಲ ಎನ್ನುತ್ತದೆ. ಈ ಪ್ರಕಾರ, ಒಟ್ಟು 30 ಅನುಚ್ಛೇದಗಳಲ್ಲಿ ಮನುಷ್ಯರಿಗೆ ಮುಕ್ತವಾಗಿ, ಸಮಾನವಾಗಿ ಮತ್ತು ಗೌರವದಿಂದ ಬದುಕುವ ಎಲ್ಲಾ ಹಕ್ಕುಗಳನ್ನು ಒದಗಿಸಲಾಗಿದೆ… ಇಷ್ಟೆಲ್ಲಾ ಹಕ್ಕುಗಳನ್ನು ಮನುಷ್ಯರಿಗೆ ಒದಗಿಸಿದ್ದರೂ, ಪ್ರಪಂಚಾದ್ಯಂತ ಇಂದು ಅನ್ಯಾಯ, ಅಶಾಂತಿ, ಆಕ್ರಮಣ ಎಡೆಬಿಡದೆ ನಡೆಯುತ್ತಿರುವುದು ಅತ್ಯಂತ ಕಳವಳದ ವಿಷಯವಾಗಿದೆ. ವಿಶ್ವದಲ್ಲಿ ಮಾನವ ಹಕ್ಕುಗಳ ಸಂಘಟನೆಗಳು ಮಾನವ ಹಕ್ಕುಗಳ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ನಾಗರಿಕ ಸಂಘಟನೆಗಳು ಮೇಣದ ಬತ್ತಿ ಹಚ್ಚಿ, ಸರ್ಕಾರಗಳು ವಿಚಾರ ಸಂಕಿರಣಗಳನ್ನು ಏರ್ಪಡಿಸುವ, ಜಾಹೀರಾತು ನೀಡುವ, ಭಾಷಣ ಏರ್ಪಡಿಸುವುದು, ನ್ಯಾಯ ಮತ್ತು ಶಾಂತಿ ಎಲ್ಲೆಡೆ ಖಾಯಂ ಆಗಿ ಇರಬೇಕು ಎಂದು ಪ್ರತಿಪಾದಿಸುವುದು, ಮಾನವ ಹಕ್ಕುಗಳ ರಕ್ಷಣೆ ಮಾಡಬೇಕೆಂಬ ಭರವಸೆ ನೀಡುವುದು… ಇತ್ಯಾದಿಗಳು ನಡೆಯುತ್ತವೆ. ಆದರೂ, ಪ್ರಸ್ತುತ ಸಮಾಜ ಅನೇಕ ರೀತಿಯಲ್ಲಿ ಅಭಿವೃದ್ಧಿ ಹೊಂದಿದ್ದರೂ, ಸಾಮಾನ್ಯ ಜನರಿಗೆ ಮಾತ್ರ ಯಾವ ಮಾನವ ಹಕ್ಕುಗಳೂ ದೊರಕುತ್ತಿಲ್ಲವಲ್ಲ. ಪ್ರಪಂಚದಲ್ಲಿ ಎಲ್ಲರೂ ನಿರ್ಭಯವಾಗಿ ಜೀವಿಸಬೇಕು. ಜೀವನಾವಶ್ಯಕ ವಸ್ತುಗಳನ್ನು ಅಂದರೆ ಆಹಾರ, ಬಟ್ಟೆ, ವಸತಿ ಪಡೆದುಕೊಳ್ಳಬೇಕು; ಆದರೆ, ಬಹುಸಂಖ್ಯೆ ಜನರಿಗೆ ಇವುಗಳು ಯಾವುವೂ ಸಿಕ್ಕುತ್ತಿಲ್ಲ. ಅದೇ ರೀತಿ, ಮನುಷ್ಯರು ಮುಕ್ತವಾಗಿ ಯೋಚಿಸುವ ಮತ್ತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯ ಕೂಡ ಮಾನವ ಹಕ್ಕುಗಳಲ್ಲಿ ಸೇರಿದೆ. ಆದರೆ, ಇದಕ್ಕೂ ಕೂಡ ವಿಶ್ವದಲ್ಲಿ ಯಾವುದೇ ಅವಕಾಶ ಇಲ್ಲ… ನಮ್ಮ ದೇಶದಲ್ಲೂ ಮಾನವ ಹಕ್ಕುಗಳ ಸ್ಥಿತಿ ಹೀನಾಯ ಮಟ್ಟ ಮುಟ್ಟಿದೆ. ದೇಶದ ನೂರಾರು ಹಳ್ಳಿಗಳಲ್ಲಿ ಕೋಟ್ಯಂತರ ಜನರು ಇಂದಿಗೂ ಮೂಲಹಕ್ಕುಗಳಿಂದ ವಂಚಿತರಾಗಿದ್ದಾರೆ. ವಿಶ್ವಸಂಸ್ಥೆಯ ಅನುಚ್ಛೇದ-5ರ ಪ್ರಕಾರ, ಮನುಷ್ಯರ ಮೇಲೆ ದೌರ್ಜನ್ಯ ಅಥವಾ ಅಮಾನುಷ ಕೃತ್ಯಗಳಿಗೆ ಮನುಷ್ಯರನ್ನು ಗುರಿಪಡಿಸುವುದು ಅಪರಾಧ. ಆದರೆ, ಪ್ರಪಂಚದ ಹಲವಾರು ದೇಶಗಳನ್ನು ಅಮೆರಿಕಾ ಭೀತಿಯಲ್ಲಿ ಇಟ್ಟಿದೆ; ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಚಾರ್ಟರ್‍ನಲ್ಲಿ ಇರುವ ಎಲ್ಲಾ ಹಕ್ಕುಗಳನ್ನು ಅಮೆರಿಕಾ ಉಲ್ಲಂಘಿಸಿಕೊಂಡೇ ಬಂದಿದೆ. ಈ ಕುರಿತು ವಿಶ್ವಸಂಸ್ಥೆ ಕೂಡ ಏನು ಕ್ರಮ ಕೈಗೊಳ್ಳಬೇಕೊ, ಅದನ್ನು ಕೈಗೊಂಡಿಲ್ಲದಿರುವುದು ವಿಷಾದದ ವಿಷಯವೇ ಸರಿ… ಬಂಡವಾಳಶಾಹಿ ವ್ಯವಸ್ಥೆ, ಜಾತಿ ವ್ಯವಸ್ಥೆ, ಜಮೀನ್ದಾರಿ ವ್ಯವಸ್ಥೆ ಮತ್ತು ಪೊಲೀಸ್ ವ್ಯವಸ್ಥೆ ಇಲ್ಲಿನ ನಾಗರಿಕರಲ್ಲಿ ಭೀತಿಯನ್ನು ಹುಟ್ಟಿಸಿವೆ; ಅಮಾಯಕರ ಮೇಲೆ ದೌರ್ಜನ್ಯಗಳನ್ನು ನಡೆಸುತ್ತಿವೆ. ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು, ಬಡವರು ಮತ್ತು ಮಹಿಳೆಯರು ಭಾರತದಲ್ಲಿ ಗೌರವದಿಂದ ಬದುಕುವುದು ದುಸ್ತರವಾಗಿದೆ. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಚಾರ್ಟರ್‍ನ ಅನುಚ್ಛೇದ -25ರ ಪ್ರಕಾರ, ಇಲ್ಲಿ ಎಲ್ಲಾ ಮಾನವರಿಗೆ ತಮ್ಮ ಕುಟುಂಬ ಸಮೇತ ಆಹಾರ, ಆರೋಗ್ಯ, ಗೌರವದೊಂದಿಗೆ ಜೀವಿಸುವ ಹಕ್ಕು ದೊರಕಿದೆ. ಎಲ್ಲಾ ನಾಗರಿಕರಿಗೆ ಈ ಮೂಲಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಕರ್ತವ್ಯ. ನಮ್ಮ ದೇಶವು ಕೂಡ ಮಾನವ ಹಕ್ಕುಗಳನ್ನು ಉಳಿಸುವ ನಿಟ್ಟಿನಲ್ಲಿ ತನ್ನ ದಾಖಲೆಯನ್ನು ಸುಧಾರಿಸಿಕೊಳ್ಳಬೇಕಿದೆ… ಮತ್ತದೇ ಇಂದು ವಿಶ್ವ ಮಾನವ ಹಕ್ಕುಗಳ ದಿನವನ್ನು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ. ಪ್ರಜಾಪ್ರಭುತ್ವದ ಜೀವಂತಿಕೆ ಇರುವುದೇ ನಾಗರಿಕ ಸಮಾಜದ ಸ್ವತಂತ್ರ ಬದುಕಿನಿಂದ. ಹಾಗಾಗಿ ಸಂವಿಧಾನ ಹಾಗೂ ಕಾನೂನು ನೀಡಿರುವ ಮಾನವ ಹಕ್ಕುಗಳನ್ನು ಬೆಂಬಲಿಸಿ, ಬಾಳಬೇಕಿದೆ. ಇನ್ನೋರ್ವರ ಸ್ವಾತಂತ್ರಯವನ್ನು ಗೌರವಿಸಿ ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯಲು ಈ ದಿನದ ಸಂದೇಶ ಪೂರಕವಾಗಲಿ ಎಂಬುದೇ ಸದಾಶಯ… ಹುಟ್ಟಿದ ಪ್ರತಿಯೊಬ್ಬ ಮನುಷ್ಯನು ಸ್ವತಂತ್ರವಾಗಿ ಜೀವಿಸುವ ಹಕ್ಕು ಹೊಂದಿದ್ದಾನೆ. ಪ್ರತಿಯೊಬ್ಬ ವ್ಯಕ್ತಿಯನ್ನು ಗೌರವ ಮತ್ತು ಆದರದಿಂದ ಕಂಡರೆ ಅದೇ ನಾವು ಮಾನವ ಹಕ್ಕುಗಳಿಗೆ ನೀಡುವ ಗೌರವ. ಸಮಾಜದಲ್ಲಿ ದುರ್ಬಲರು, ಶೋಷಿತರನ್ನು ರಕ್ಷಿಸುವಲ್ಲಿ ಮಾನವ ಹಕ್ಕುಗಳು ಅತ್ಯಂತ ಗಮನಾರ್ಹ ಪಾತ್ರ ವಹಿಸಿವೆ… ಜಗತ್ತಿನಾದ್ಯಂತ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಅದರ ರಕ್ಷಣೆಗಾಗಿ ದಿನನಿತ್ಯ ಹೋರಾಟಗಳು ನಡೆಯುತ್ತಲೇ ಇವೆ. “ಜನರ ಹಕ್ಕುಗಳನ್ನು ನಿರಾಕರಿಸಿದರೆ ಅದು ಅವರ ಮನುಷ್ಯತ್ವವನ್ನು ತಿರಸ್ಕರಿಸಿದಂತೆ’ ಎಂದು ದಕ್ಷಿಣ ಆಫ್ರಿಕಾದ ಗಾಂಧಿ ಎಂದು ಕರೆಸಿಕೊಳ್ಳುವ ನೆಲ್ಸನ್‌ ಮಂಡೇಲಾ ಮಾನವ ಹಕ್ಕುಗಳ ಕುರಿತು ಹೇಳಿದ್ದಾರೆ… ವಿಶ್ವದಲ್ಲಿ ಮಾನವ ಹಕ್ಕುಗಳ ಜಾರಿ– 1948ರ ಜಾಗತಿಕ ಮಹಾಯುದ್ಧದಲ್ಲಿ ಸಂಭವಿಸಿದ ಆಪಾರ ಸಾವುನೋವಿನಿಂದ ಮನನೊಂದು ಜಗತ್ತು ಹಿಂಸೆಯನ್ನು ತ್ಯಜಿಸಬೇಕು ಎಂಬ ನಿಲುವಿಗೆ ಬಂತು. ಈ ವಿಚಾರವಾಗಿ ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳು ಮಾನವ ಹಕ್ಕುಗಳನ್ನು ಜಾರಿಗೊಳಿಸಲು ಒಮ್ಮತ ಸೂಚಿಸಿದವು. ಇದರ ಪರಿಣಾಮವಾಗಿ 1948ರ ಡಿ. 10ರಂದು ವಿಶ್ವ ಸಂಸ್ಥೆಯಲ್ಲಿ ಮಾನವ ಹಕ್ಕುಗಳನ್ನು ಘೋಷಣೆ ಮಾಡಲಾಯಿತು. ಇದರ ಮುಖ್ಯ ಕಚೇರಿ ಜಿನೆವಾದಲ್ಲಿದೆ. ಅಂದಿನಿಂದ ವಿಶ್ವಾದ್ಯಂತ ವರ್ಣ, ಧರ್ಮ, ಲಿಂಗ, ಭಾಷೆ, ಅಂತಸ್ತು, ಸಾಮಾಜಿಕ, ರಾಷ್ಟ್ರೀಯತೆ ಹಿನ್ನೆಲೆಯಲ್ಲಿ ನಡೆಯುವ ತಾರತಮ್ಯ, ದೌರ್ಜನ್ಯ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿವೆ. ಘೋಷಣೆಯಾಗಿ 71 ವರ್ಷಗಳು ಕಳೆದರೂ ಇಂದಿಗೂ ತನ್ನ ಪ್ರಾಮುಖ್ಯವನ್ನು ಉಳಿಸಿಕೊಂಡಿರುವುದು ಗಮನಾರ್ಹ ಸಂಗತಿ… ಆಯೋಗ‌ದ ಕಾರ್ಯಗಳು– 1 ವಿಶ್ವದ 78 ರಾಷ್ಟ್ರಗಳ 40,000 ಜನ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲಾಗಿದೆ. 2 27 ರಾಷ್ಟ್ರಗಳಿಂದ 10,000 ಜನರಿಗೆ ಗುಲಾಮಗಿರಿ ಯಿಂದ ಮುಕ್ತಿ 3 2,101 ಬಂಧನ ಸ್ಥಳಗಳಿಗೆ ಭೇಟಿ ನೀಡಿದೆ. 4 7,504 ವಿಶ್ವಾದ್ಯಂತ ಮಾನವ ಹಕ್ಕುಗಳ ಪರಿಸ್ಥಿತಿ ತನಿಖೆ ಮತ್ತು ದಾಖಲೆಗಾಗಿ ಸ್ಥಾಪಿಸಲಾದ ಮೇಲ್ವಿಚಾರಣೆ ಮಿಶನ್‌ಗಳು. 5 692 ದಾಖಲಾದ ಹೊಸ ಆರೋಪಗಳು… 1 2016ರಿಂದ 2019ರಲ್ಲಿ ಭಾರತದಲ್ಲಿ ಮಾನವ ಹಕ್ಕುಗಳ ಆಯೋಗಕ್ಕೆ ಅಲ್ಪಸಂಖ್ಯಾಕರು ಹಾಗೂ ದಲಿತರ ಮೇಲೆ ಗುಂಪು ಥಳಿತ ಮತ್ತು ದೌರ್ಜನ್ಯದ ಬಗ್ಗೆ ದಾಖಲಾದ ಅಪರಾಧಗಳ ಸಂಖ್ಯೆ -2,008. ಅತೀ ಹೆಚ್ಚು ಉ.ಪ್ರದೇಶ- 869 2 ಭಾರತದಲ್ಲಿ ಒಟ್ಟು 25 ರಾಜ್ಯಗಳಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗ ರಚಿಸಲಾಗಿದೆ. 3 ಅಸ್ಸಾಂ ಮೊದಲ ರಾಜ್ಯವಾಗಿದೆ (ಜನವರಿ 19, 1996) 4 ಕರ್ನಾಟಕದಲ್ಲಿ ಜೂನ್‌ 25, 2005ರಂದು ರಚನೆಯಾಗಿದೆ. 5 ರಾಜ್ಯದಲ್ಲಿ ಇದುವರೆಗೆ ಏಳು ಜನ ಅಧ್ಯಕ್ಷರು ಕಾರ್ಯನಿರ್ವಹಿಸಿದ್ದಾರೆ. ನ್ಯಾ| ರಂಗನಾಥ್‌ ಮಿಶ್ರಾ ಮೊದಲಿಗರು… ಪ್ರಮುಖವಾಗಿ ಪ್ರಜ್ಞಾವಂತರು ಜನರಲ್ಲಿ ಮಾನವ ಹಕ್ಕುಗಳ ಬಗ್ಗೆ ಅರಿವು ಮೂಡಿಸುವ ಕೆಲಸದಲ್ಲಿ ತೊಡಗಬೇಕಿದೆ; ಸರ್ಕಾರಗಳ ಮೇಲೆ ಒತ್ತಡ ಹೇರಿ, ಜನರಿಗೆ ಮಾನವ ಹಕ್ಕುಗಳು ದೊರಕುವಂತೆ ನೋಡಿಕೊಳ್ಳಬೇಕು. ಈ ಮೂಲಕ ಮಾನವ ಹಕ್ಕುಗಳ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕು… ಆಗ ಮಾತ್ರ ವಿಶ್ವ ಮಾನವ ಹಕ್ಕುಗಳ ದಿನಾಚರಣೆಗೆ ನಿಜವಾದ ಅರ್ಥ ಬರುವುದು… ಹೀಗೆಯೇ ಈಗ ಭಾರತದಲ್ಲಿ ‘ಮಾನವ ಹಕ್ಕು’ಗಳ ಸ್ಥಿತಿಯ ಬಗೆಗೆ ನೋಡೋಣ… ಭಾರತದಲ್ಲಿ ‘ಮಾನವ ಹಕ್ಕು’ಗಳು– ಭಾರತದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿಯು (ವಸ್ತುಸ್ಥಿತಿ) ಬಹಳ ಸಂಕೀರ್ಣ ರಚನೆಯಾಗಿದೆ. ಕಾರಣವೆಂದರೆ ದೇಶದ ವಿಶಾಲವಾದ ಭೂ ಭಾಗ ಮತ್ತು ಅತ್ಯದ್ಭುತ ವೈವಿಧ್ಯತೆಯ ಪರಿಣಾಮವಾಗಿ, ಇದರ ಸ್ಥಾನವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರದ ನೀತಿ ಮತ್ತು ಈ ದೇಶದ ಸಾರ್ವಭೌಮತ್ವ, ಸಾಮಾಜಿಕ ಸಮಾನತೆ, ಪ್ರಜಾತಂತ್ರ ಗಣರಾಜ್ಯ ರಾಷ್ಟ್ರವಾಗಿದ್ದು, ಮತ್ತು ಇತಿಹಾಸವನ್ನು ದಾಖಲಿಸಿದ್ದ ಹಳೆಯ ವಸಾಹತುಶಾಹಿ ಪ್ರಾಂತ್ಯಗಳಂತಿದೆ. ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳ ನೀಡಿಕೆಯ ಜೊತೆ, ಧಾರ್ಮಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಟ್ಟಿದೆ. ವಾಕ್ಯಾಂಗದ ಉಪ ನಿಯಮಗಳು ಮಾತನಾಡುವ (ಹಕ್ಕು)ಸ್ವಾತಂತ್ರ್ಯತೆಯನ್ನು ಒದಗಿಸಿದೆ. ಕಾರ್ಯಾಂಗ ಮತ್ತು ನ್ಯಾಯಾಂಗ ಬೇರೆ ಬೇರೆಯಾಗಿದ್ದು, ದೇಶದ ಒಳಗೆ ಮತ್ತು ಹೊರಗೆ ಎಲ್ಲಾ ರೀತಿಯ ಚಲನೆಯ ಸ್ವಾತಂತ್ರ್ಯವನ್ನೂ ನೀಡಲಾಗಿದೆ… ಮತ್ತೆ ಮತ್ತೆ ಹೇಳುವಂತೆ, ಅದರಲ್ಲಿಯೂ ಭಾರತೀಯ ಮಾನವ ಹಕ್ಕುಗಳ ತಂಡವು ಮತ್ತು ಕ್ರಿಯಾಶೀಲರು ಹೇಳುವಂತೆ, ದಲಿತ ಸಂಘದ ಸದಸ್ಯರು ಅಥವಾ ಅಸ್ಪೃಶ್ಯರು ಬಹಳ ಕಷ್ಟ ಅನುಭವಿಸಿದ್ದು, ಈಗಲೂ ಅನುಭವಿಸುತ್ತಿದ್ದು, ಗಣನೀಯ ತಾರತಮ್ಯದ ವಿವೇಚನೆಯಿಂದ ಇನ್ನೂ ತೊಳಲಾಡುತ್ತಿದ್ದಾರೆ. ಭಾರತದಲ್ಲಿ ಮಾನವ ಹಕ್ಕುಗಳು ಸಮಸ್ಯೆಯನ್ನು ಎದುರಿಸುತ್ತಿದ್ದರೂ, ಈ ದೇಶವು ಸಾಮಾನ್ಯವಾಗಿ ಮಾನವ ಹಕ್ಕುಗಳಿಗೆ ಸಂಬಂಧಪಟ್ಟಂತೆ ಗಮನಕೊಡುವಂತಹದ್ದಲ್ಲ,ಬೇರೆ ದೇಶಗಳಲ್ಲಿರುವಂತೆ ದಕ್ಷಿಣ ಏಷ್ಯದಲ್ಲಿ . ಈ ವಿಷಯಗಳನ್ನು ಪರಿಗಣನೆಗೆ ತೆಗೆದುಕೊಂಡು, ವಿಶ್ವ ೨೦೦೬ರ ಸ್ವಾತಂತ್ರ್ಯ ವರದಿಯ ಅನ್ವಯ, ಸ್ವಾತಂತ್ರ್ಯದ ಮನೆಯು, ಭಾರತಕ್ಕೆ ರಾಜಕೀಯ ಹಕ್ಕಿಗೆ ೨ನೇ ಸ್ಥಾನವನ್ನು ಹಾಗೂ ನಾಗರೀಕ ಸ್ವಾತಂತ್ರಕ್ಕೆ ೩ನೇ ಸ್ಥಾನವನ್ನು ಕೊಟ್ಟು , ಸ್ವಾತಂತ್ರತೆಯಲ್ಲಿ ಅತ್ಯಂತ ಉನ್ನತ ದರ್ಜೆಯ ಸ್ಥಾನವನ್ನು ಪಡೆಯಿತು… ಭಾರತದಲ್ಲಿ ಮಾನವ ಹಕ್ಕುಗಳ ಕಾಲಗಣನೆಯ ಘಟನೆಗಳು– ೧೮೨೯ – ಸಾಂಪ್ರದಾಯಿಕ ಹಿಂದೂ ಅಂತ್ಯ ಸಂಸ್ಕಾರದ ಆಚರಣೆಯ ವಿರುದ್ಧ, ಅಂದರೆ ಗಂಡನ ಸಾವಿನ ನಂತರ ವಿಧವೆಯರು ಸ್ವತಃ ಅಗ್ನಿಗಾಹುತಿಗೆ ಒಳಗಾಗುವ ಅಥವಾ ಸತಿ ಸಹಗಮನದಂತಹ ಕೆಟ್ಟ ಸಂಪ್ರದಾಯವನ್ನು ತೊಡೆದು ಹಾಕುವ ನಿಟ್ಟಿನಲ್ಲಿ,ಹಿಂದೂ ಧರ್ಮ ಸುಧಾರಣಾ ಚಳುವಳಿಗಳಂತಹ, ಬ್ರಹ್ಮಸಮಾಜದ ಸ್ಥಾಪಕರಾದ ರಾಜಾ ರಾಮ್ ಮೋಹನ್ ರಾಯರ ನೆರವಿನಿಂದ, ಬದಲಾವಣೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ, ಅಂದಿನ ಗವರ್ನರ್ ಜನರಲ್ ವಿಲಿಯಂ ಬೆಂಟಿಂಕ್‌ನು ಭಾರತದ ಹಿಂದೂ ಧರ್ಮದಲ್ಲಿ ಜಾರಿಯಲ್ಲಿದ್ದ ‘ಸತಿ’ ಪದ್ಧತಿಯನ್ನು, ಆಡಳಿತಾತ್ಮಕವಾಗಿ, ತೊಡೆದು ಹಾಕಿದನು/ ರದ್ದುಗೊಳಿಸಿದನು. ೧೯೨೯ – ಬಾಲ್ಯ ವಿವಾಹ ನಿಷೇಧ ಕಾಯಿದೆ , ೧೪ ವರ್ಷ ತುಂಬಿದ ಎಲ್ಲಾ ಚಿಕ್ಕ ವಯಸ್ಸಿನವರ ವಿವಾಹವನ್ನು ನಿಷೇಧಿಸುವುದು… ೧೯೪೭ – ಬ್ರಿಟಿಷ್ ರಾಜರಿಂದ ರಾಜಕೀಯ ಸ್ವತ್ರಂತ್ರವನ್ನು ಭಾರತ ಪಡೆಯಿತು. ೧೯೫೦ – ಭಾರತದ ಸಂವಿಧಾನದ ರಚನೆಯಿಂದಾಗಿ, ಪ್ರಜಾಪ್ರಭುತ್ವದ ಸಾರ್ವಭೌಮತ್ವದ ಗಣರಾಜ್ಯವಾಗಿ ಶ್ರೀಸಾಮಾನ್ಯರಿಗೆ ಮತದಾನ ಮಾಡುವ ಹಕ್ಕು. ಸಂವಿಧಾನದ ೩ನೇ

ಮಾನವ ಹಕ್ಕುಗಳು Read Post »

ಇತರೆ

ಕಾವ್ಯ ಪರಂಪರೆ

ಬನ್ನಿ ನಮ್ಮ ಜೊತೆಗೂಡಿ…….. ಪ್ರತಿ ತಿಂಗಳ ಕಾರ್ಯಕ್ರಮ ಹಳಗನ್ನಡ ವಾಚನ ಮತ್ತು ವ್ಯಾಖ್ಯಾನ ದಿನಾಂಕ:15/12/2019 ಭಾನುವಾರ ಬೆಳಿಗ್ಗೆ 11ಕ್ಕೆ. ಮಹಿಳಾ ವಿಶ್ರಾಂತಿ ಕೊಠಡಿ ರವೀಂದ್ರ ಕಲಾಕ್ಷೇತ್ರ, ಬೆಂಗಳೂರು. ಬನ್ನಿ ನಮ್ಮ ಜೊತೆಗೂಡಿ……..

ಕಾವ್ಯ ಪರಂಪರೆ Read Post »

ಇತರೆ

ಲಹರಿ

ಸಂಬಂಧಗಳ ಸಂಭ್ರಮ ದೀಪಾಜಿ ಪುಟ್ಟ ಪುಟ್ಟ ಸಂಭ್ರಮಗಳನ್ನು ಬದುಕಿನುದ್ದಕ್ಕೂ ಹಿಡಿದಿಟ್ಟುಕೊಳ್ಳುವುದು ತುಂಬ ಮುಖ್ಯ. ಹೀಗೆ ಹಿಡಿದಿಟ್ಟುಕೊಂಡ ಆ ಮಧುರ ಕ್ಷಣಗಳನ್ನ ಆಗಾಗ ಮೆಲಕು ಹಾಕುತ್ತ ಅಂತ ಸಂದರ್ಭಕ್ಕೆ ಸಾಕ್ಷಿಯಾದ ಸಂಬಂಧಿಗಳನ್ನು, ಸ್ನೇಹಬಳಗವನ್ನು ನೆನೆಯುತ್ತ, ಅವಕಾಶ ಸಿಕ್ಕಾಗ ಮತ್ತೆ ಮತ್ತೆ ಭೇಟಿ ಮಾಡುತ್ತ, ಕಡಿಮೆ‌ ವೆಚ್ಚದ ಕೂಟಗಳನ್ನ ಏರ್ಪಡಿಸುತ್ತ , ಸಂಬಂಧಗಳನ್ನ ಹಸಿರಾಗಿಟ್ಟುಕೊಳ್ಳುವ ಅನಿವಾರ್ಯತೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ದಿನ ದಿನಕ್ಕೆ ಬದುಕು ನಾವು ಉಹಿಸಿದ್ದಕ್ಕಿಂತಲೂ ಹೆಚ್ಚು ದುರ್ಬರವಾಗುತ್ತ ನಡೆದಿದೆ. ಸಣ್ಣ ಪುಟ್ಟ ಮಾತುಗಳು ದೊಡ್ಡ ದೊಡ್ಡ ಸಂಬಂಧಗಳ ಕತ್ತು ಹಿಸುಕಿ ಕೊಂದು ಮತ್ತೆಂದೂ ಒಬ್ಬರಿಗೊಬ್ಬರು ಎದುರಾಬದುರು‌ ನಿಂತು ಅಕ್ಕರೆಯಿಂದ ಮಾತನಾಡಿಸದಂತೆ ಒಂದು ದೊಡ್ಡ ಅಡ್ಡ ಗೋಡೆಯನ್ನೆ ನಿರ್ಮಿಸುತ್ತಿವೆ. ಎದುರಿಗಿರುವವ ಕೂಡಿ ಆಡಿದವ, ಒಂದೇ ವೇದಿಕೆಯ ಮೇಲೆ ದನಿ ಕುಗ್ಗಿದಾಗ ತನ್ನ ದನಿ ಏರಿಸಿ ಹಾಡಿ ಅಂದದ ರಾಗ ಸಂಯೋಜಿಸಿದವ, ನಾಟಕದ ಡೈಲಾಗ್ ಮರೆತಾಗ “ಏಲವೋ ವೈರಿ ಮತ್ತಿನ್ನೆನೋ ಚಿಂತಿಸುತ್ತ ನಿಂತೆ!? ಹೇಳು ಹೇಳು ನಿನ್ನೊಳಗಿನ ಅಂತರಂಗದ ಮಾತು ಬಯಲು ಮಾಡು” ಎಂದು ನೂರಾರು ಮಂದಿಯ ಮುಂದೆ‌ ಬಾಯಿಪಾಠ ಮರೆತು ಹೋದನೆಂಬ ಗೊಂದಲ ಸೃಷ್ಟಿಯಾಗದಂತೆ ತನ್ನ ಪಾತ್ರದ ಜೊತೆ ನಿನ್ನ ಪಾತ್ರವನೂ ಎತ್ತಿ ಹಿಡಿದ ಗೆಳೆಯ, ಮುಟ್ಟಾದ ದಿನಗಳಲ್ಲಿ ನೀನು ಕ್ಲಾಸುಬಿಟ್ಟೆದ್ದು ಬಾರದೆ ಇದ್ದ ಫಜೀತಿ ಕಂಡು ತಾನು ನಿನ್ನೊಡನೆಯ ಉಳಿದುಕೊಂಡ ಗೆಳತಿ, ಓಡಲಾಗದೆ ಬಿದ್ದ ಅಣ್ಣನನ್ನು ಹಿಂದೆ ಬಂದು ಅವನ ಪಾಠಿಚೀಲದೊಂದಿಗೆ ನಿನ್ನ ಪಾಠಿಗಂಟನ್ನು ಮನೆತನಕ ಹೊತ್ತು ತಂದ ತಮ್ಮ, ನಿನ್ನೋದಿಗಾಗಿ ತನ್ನ ಓದು-ಬದುಕು ಎರಡನ್ನು ಮೊಟಕುಗೊಳಿಸಿ ಕುಳಿತಿರುವ ಅಕ್ಕ. ಗದ್ದದ‌ಮೇಲೆ ಗಡ್ಡಮೊಳಕೆ ಒಡೆಯುತ್ತಿದ್ದ ಕಾಲದಲ್ಲಿ ಪಕ್ಕಡಿಗೆ ತಿವಿದು ಮೊಟ್ಟಮೊದಲ ರೋಮಾಂಚನಕ್ಕೆ ನಾಂದಿಹಾಡಿದ ಗೆಳತಿ, ಹೀಗೆ ಅಂತ್ಯವೇ ಇರದ ಖುಷಿಗಳನ್ನ ಕೊಟ್ಟ ಸಂಬಂಧಗಳ ಪಟ್ಟಿ ಬೆಳೆಯುತ್ತಲೆ ಹೋಗುತ್ತದೆ.. ‌‌‌ ‌‌‌ ಅಪ್ಪ ಅಮ್ಮರಂತೂ ನಮ್ಮ ನಿಮ್ಮ ಚೋಟುದ್ದದ ಬದುಕು ಕಟ್ಟಿಕೊಡಲು ತಮ್ಮ ಬೆವರಿನೊಂದಿಗೆ ರಕ್ತವನ್ನು ಬಸಿದಿದ್ದಾರೆ. ಆದರೂ ಈ ಸ್ವಾವಲಂಬಿ ಬದುಕಿಗಾಗಿ ನಾನು ಅದೆಷ್ಟು ಕಷ್ಟಪಟ್ಟಿದ್ದೇನೆ ಗೊತ್ತಾ ಎಂಬ ಉದ್ಘಾರವಾಚಕ ಉಸುರುವಾಗ ಇವರೆಲ್ಲ ನೆನಪಾಗುವುದೆ ಇಲ್ಲ. ನಾವ್ಯಾರು ಆಕಾಶದಿಂದ ಉದುರಿ ಬಿದ್ದಿಲ್ಲ ಬದಲಾಗಿ ಹೊಸೆದು ಕೊಂಡ ಕರುಳ ಬಳ್ಳಿ ಕತ್ತರಸಿ ರಕ್ತ ಜೀನುಗದಂತೆ ಗಂಟಾಕಿಸಿಕೊಂಡು ಬಾಣಂತಿಕೊಣೆಯಿಂದ ಆಚೆ ಬಂದವರು. ಬೆಳೆಯುವಾಗಲು ಅಷ್ಟೆ ಅಲ್ಲೆಲ್ಲೊ ನದಿ ಆಚೆಯ ಜುಯ್ಯಗುಡುವ ಕಾಡಿನೊಳಗೆ ಒಬ್ಬೊಬ್ಬರೆ ಹಾಡಿಕೊಂಡು ಕುಣಿದುಕೊಂಡು ಬೆಳೆದವರಲ್ಲ.. ಒಂದೆ ಪೆನ್ಸಿಲ್ಲು, ಅದೆ ಕಂಪಾಸು, ಟಿವಿ ರಿಮೋಟು ಆಶಾ ಚಾಕ್ಲೆಟು, ಪಾಪಡಿ, ಇಂತವಕ್ಕೆಲ್ಲ ಜುಟ್ಹಿಡಿದು ಕಿತ್ತಾಡಿಕೊಂಡು ಕಡೆಗೆ ಅಮ್ಮನಿಂದಲೊ ಸೋದರತ್ತೆಯಿಂದಲೊ ಬಾಸುಂಡೆ ಬರುವಂತೆ ಬಡಿಸಿಕೊಂಡು ಬೆಳೆದವರು. ಬೆಳೆಬೆಳೆಯುತ್ತಲೆ ಬದುಕಿನ ಸಂಬಂಧದ ಕೊಂಡಿಗಳಿಗೆ ಜೋತು ಬಿದ್ದುಕೊಂಡು ಇರುವುದರಲ್ಲೆ ಹಂಚಿಊಣ್ಣುವುದ ಹತ್ತನೇತ್ತ ಬರುವುದರೊಳಗೆ‌ ಕಲಿತು ಇವತ್ತಿನ ಈ ಹೊತ್ತಿಗೆ ಮರೆತು ಕುಳಿತವರು. ‌‌ ಒಂದೊಂದು ಅಕ್ಷರ ಬರೆಯುವಾಗಲೂ‌ ಸಾವಿರಾರು ರೂಪಾಯಿಯ ಚೆಕ್ಕು,ಡ್ರಾಫ್ಟು, ನೆಫ್ಟು ಬರೆಯುವಾಗಲೂ ಆ ಅಕ್ಷರಗಳ ಹಿಂದೆ ಅವಿತು ಕುಳಿತ ಮೇಷ್ಟ್ರು ಗುರು ಶಿಕ್ಷ-ಕರು ಕಲಿಸಿದ ತತ್ವ ಆದರ್ಶಗಳನ್ನ ಅಲ್ಲೆ ಶಾಲೆಯ ಕಾಂಪೊಂಡಿಗೆ ಆನಿಸಿಬಂದವರು ನಾವು. ಅಂಕಿ ಅಕ್ಷರಗಳನ್ನಷ್ಟೆ ಬದುಕಿನುದ್ದಕ್ಕೂ ತಂದವರು ನಾವು. ಅಕ್ಷರ ತಿಡುವಾಗ ತಿಂದ ಏಟಿನ ರುಚಿಯ ಮರೆತು ನಮ್ಮ ಚೆಂದದ ಬದುಕಿಗಾಗಿ ಶ್ರಮಿಸಿದ ಎಲ್ಲಾ ಸಂಬಂಧಗಳನ್ನು ಎತ್ತಿ ಗಾಳಿಗೆ ತೂರಿ ಹಾಯಾಗಿ ಕುಳಿತವರು ನಾವು. ಆದರೂ ಯಾರಾದರು ಸಿಕ್ಕು, ಅಥವಾ ಫೊನಾಯಿಸಿ ಹೇಗಿದ್ದಿ? ಹೇಗಿದೆ ಬದುಕು ಎಲ್ಲ ಅರಾಮಾ..? ಎಂಬ ಶಬ್ಧಗಳನ್ನ ಕೇಳಿದೊಡನೆ ಮೈಮೇಲೆ ಹಲ್ಲಿ -ಚೋಳು-ಜಿರಳೆ ಬಿದ್ದವರಂತೆ ಬೆದರಿ.. “ಅಯ್ಯೋ ನಿನ್ನಷ್ಟು ಚೆನ್ನಾಗಿಲ್ಲ ಬಿಡಪ್ಪ ಎನೋ ಸಣ್ಣ ಸ್ಯಾಲರಿಲಿ ಬದುಕಿನ ಬಂಡಿ ಏಳಿತಿದಿನಿ, ನಿನ್ನ ತರ ಸೆಂಟ್ರಲ್ ಗವರ್ನಮೆಂಟ್ ಸ್ಯಾಲರಿ ಅಲ್ಲ, ನಿನ್ನ ತರ ಸಾಫ್ಟವೇರ್ ಎಂಜಿನೀರ್ ಅಲ್ಲ, ನಿನ್ಮ‌ ತರ ದೊಡ್ಡ ಜಮೀನ್ದಾರ ಅಲ್ಲ, ನಿನ್ನ ತರ ಬಿಸನಸ್ಮನ್ ಅಲ್ಲ ನಿನ್ನ ತರ ಯುಜಿಸಿ ಸ್ಕೇಲ್ ಇಲ್ಲ, ನಿನ್ನ ತರ ವರುಷಕ್ಕೇರಡು ವಿದೇಶ ಪ್ರಯಾಣಗಳಿಲ್ಲ.. ಹೀಗೆ ಇಲ್ಲದರ ಅಲ್ಲದರ ಪಟ್ಟಿಗಳೂ ಬೆಳೆಯುತ್ತಲೆ ಹೋಗುತ್ತವೆಯೆ ಹೊರತು ಎಲ್ಲಿದ್ದೆ ಎಲ್ಲಿಗೆ ಬಂದು ತಲುಪಿದೆ ಬದುಕಿನ ಆರಂಭದಲ್ಲಿ ಎಷ್ಟು ಬಂಧನಗಳಿದ್ದವು ಈಗ ಎಷ್ಟೆಲ್ಲ ಗೆಳೆಯ, ಸಹೋದ್ಯೋಗಿ ನೆರೆ ಹೊರೆ ಬೆಳೆದುಕೊಂಡಿದೆ ಎಂಬುದರ ಲೆಕ್ಕಕ್ಕೆ ಅಪ್ಪಿತಪ್ಪಿಯು ಹೋಗುವುದಿಲ್ಲ. ‌‌‌‌ ಒಂದೊಮ್ಮೆ ನಮ್ಮದೆ ಬದುಕಿನ ಇತಿಹಾಸದ ಪುಟಗಳನ್ನ ಮಗುಚಿಹಾಕಿದಾಗ ಸಿಗುವ ಸತ್ಯ ಈ ದಿನಕ್ಕಾಗಿ,‌ಈ ತಿಂಗಳು ಸಿಗುತ್ತಿರುವ ಆದಾಯಕ್ಕಾಗಿ, ಈ ದಿನ ಕಟ್ಟಿಕೊಂಡಿರುವ ಪುಟ್ಟ ಗೂಡಿಗಾಗಿ ಅದೆಷ್ಟು ವರ್ಷ ನಿದ್ದೆಗೆಟ್ಟು ಕನಸುಕಂಡಿದ್ದೇವೆ..!? ಕನಸು ಕೈಗೂಡಿದ ದಿನ ಇಂತದೊಂದು ಪುಟ್ಟ ಕನಸು ನನ್ನದಾಗಿತ್ತು ಎಂಬುದನ್ನ ಮರೆತು. ಯಾರದೋ ಬದುಕಿನ ಸಾಧ್ಯತೆಗಳನ್ನ ನೋಡಿ ನಮ್ಮದೇನು ಅಲ್ಲ ಎಂಬ ನಿರ್ಧಾರಕ್ಕೆ ಬಂದು ಬಿಡುತ್ತೇವೆ. ಜೊತೆಗಿರುವ ಸಂಬಂಧಗಳಲ್ಲಿ ಹೊಂದಾಣಿಕೆ ಇಲ್ಲ ಅಥವಾ ಬೇಡವೊ..!? ಸಿಕ್ಕ ಅವಕಾಶಗಳಿಗಾಗಿ ಸಂತೃಪ್ತಿ ಇಲ್ಲ, ಇಡೇರಿದ ಕನಸುಗಳ ಕುರಿತು ನಿರಾಳತೆಯು ಇಲ್ಲ. ಮುಟ್ಟಿದ ಗುರಿಯ ಬಗ್ಗೆ ಹೆಮ್ಮೆ ಇಲ್ಲ. ಅರ್ಧ ಇಂಚು ಮುಂದಿರುವವನ ಕುರಿತು ಹೊಟ್ಟೆಕಿಚ್ಚಿನ ಹೊರತಾಗಿ ಮತ್ತೇನು ಸಾಧ್ಯವಿಲ್ಲದ ಮನಃಸ್ಥಿತಿಗೆ ಬಂದು ತಲುಪಿದ್ದೇವೆ. ‌‌‌ ‌‌‌‌ ಇದು ರೋಗಗ್ರಸ್ತ ಮನಃಸ್ಥಿತಿಯ ಲಕ್ಷಣವೆಂದೆನಿಸಿದರೆ ಇಂದೆ ಈ ಕೂಡಲೆ ಕಳೆದು ಹೋದ ಸಂಬಂಧಗಳ ಕೊಂಡಿ ಹುಡುಕಿ ಹೋಗಿ, ಉಳಿದು ಹೋದ ನಾಲ್ಕು ಮಾತು, ಎರಡು ನಗು, ಒಂದುರೊಟ್ಟಿ, ಒಟ್ಟಿಗೆ ಅರ್ದರ್ಧ ಕಪ್ ಚಹಾ ಇವಿಷ್ಟನ್ನು ಗಳಿಸಿ ಬಿಡಿ.. ನೆಮ್ಮದಿಯ ಬದುಕು ನಮ್ಮದಾಗಲೂ ಇನ್ನೇನು ಬೇಕು..

ಲಹರಿ Read Post »

ಇತರೆ

ರಾಜಕಾರಣ

ಪಕ್ಷ ರಾಜಕಾರಣಕ್ಕೊಂದು ಪರ್ಯಾಯ ಗಣೇಶ ಭಟ್, ಶಿರಸಿ ಕೊಳೆತು ನಾರುತ್ತಿರುವ ಪಕ್ಷ ರಾಜಕಾರಣಕ್ಕೊಂದು ಪರ್ಯಾಯ…… ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದಕ್ಕಿಂತ ಹೆಚ್ಚು ಪಕ್ಷಗಳಿದ್ದಾಗ, ಆಡಳಿತ ಪಕ್ಷದ ತಪ್ಪು, ಒಪ್ಪುಗಳನ್ನು ವಿರೋಧ ಪಕ್ಷಗಳು ವಿಶ್ಲೇಷಿಸುತ್ತವೆಂದು ಭಾವಿಸಲಾಗಿತ್ತು. ಜನಹಿತವೇ ಆಡಳಿತದ ಉದ್ದೇಶವಾಗಿದ್ದರೂ ಅದನ್ನು ಸಕಾರಗೊಳಿಸುವುದಕ್ಕಾಗಿ ಪ್ರತಿಯೊಂದು ಪಕ್ಷಕ್ಕೂ ತನ್ನದೇ ಆದ ಸಿದ್ದಾಂತ, ಪ್ರಣಾಳಿಕೆ, ಕಾರ್ಯವಿಧಾನವಿರುತ್ತದೆಂಬ ಭಾವನೆಯಿಂದ ಪಕ್ಷ ಆಧಾರಿತ ಚುನಾವಣೆ, ಸರ್ಕಾರ ರಚನೆಗಳಿಗೆ ನಮ್ಮ ಸಂವಿಧಾನ ಅವಕಾಶ ಕಲ್ಪಿಸಿದೆ. ಪಾಶ್ಚಾತ್ಯ ಪ್ರಜಾಪ್ರಭತ್ವ ದೇಶಗಳಲ್ಲಿರುವಂತೆ ನಮ್ಮಲ್ಲಿಯೂ ಸೀಮಿತ ಸಂಖ್ಯೆಯ ರಾಜಕೀಯ ಪಕ್ಷಗಳು ನಮ್ಮ ಸಂವಿಧಾಬನ ಕರ್ತರು ಊಹಿಸಿರಬಹುದು. ಈಗ 2 ಸಾವಿರಕ್ಕೂ ಹೆಚ್ಚು ಸಂಖ್ಯೆಯ ರಾಜಕೀಯ ಪಕ್ಷಗಳು ಚುನಾವಣಾ ಆಯೋಗದಲ್ಲಿ ನೋಂದಾಯಿತವಾಗಿವೆ. ಇನ್ನೂ ಹೊಸ ಹೊಸ ಪಕ್ಷಗಳು ಹುಟ್ಟಿಕೊಳ್ಳುತ್ತಲೇ ಇವೆ. ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ರಾಜಕೀಯ ಪಕ್ಷಗಳ ಅಸ್ತಿತ್ವಕ್ಕೆ ಬರಬಹುದೆಂಬ ಕಲ್ಪನೆ ಪ್ರಾಯಶಃ ಸಂವಿಧಾನ ಕರ್ತೃರಿಗೆ ಇಲ್ಲದಿರಬಹುದು. ಸಾವಿರಾರು ರಾಜಕೀಯ ಪಕ್ಷಗಳ ಸಿದ್ಧಾಂತದಲ್ಲಿ ಮೂಲಭೂತ ವ್ಯತ್ಯಾಸವೇ ಇಲ್ಲ. ಇವುಗಳೆಲ್ಲವೂ ಬಂಡವಾಳವಾದದ ಚಿಂತನೆಯ ಚೌಕಟ್ಟಿನೊಳಗೇ ಸೀಮಿತವಾಗಿವೆ. ಭಾರತದ ಹತ್ತಾರು ಕಮ್ಯುನಿಸ್ಟ್ – ಪಕ್ಷಗಳು ಹೆಸರಿಗೆ ಮಾತ್ರ ಕಮ್ಯುನಿಸ್ಟ್ ಬೋರ್ಡ್ ಹಾಕಿಕೊಂಡಿವೆಯೇ ಹೊರತು ಕಮ್ಯುನಿಸ್ಟ್ ಸಿದ್ಧಾಂತಕ್ಕೆ ಅಂಟಿಕೊಂಡಿಲ್ಲ. ಕಮ್ಯುನಿಸ್ಟ್ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಹೊಂದಿಲ್ಲ. ಪಕ್ಷದ ಸರ್ವಾಧಿಕಾರಿ ಆಡಳಿತವೇ ಅವರ ಗುರಿ.ಇಡೀ ಅರ್ಥವ್ಯವಸ್ಥೆ ಸರ್ಕಾರದ ನಿಯಂತ್ರಣದಲ್ಲೇ ಇರಬೇಕೆಂಂಬ ಕಮ್ಯುನಿಸಂನ ವಾದವನ್ನು ಈ ಪಕ್ಷಗಳು ಹೇಳುವುದೂ ಇಲ್ಲ. ಅಂದ ಮೇಲೆ ಇಷ್ಟೊಂದು ಪಕ್ಷಗಳು ಯಾಕಿವೆ? ನಮ್ಮ ದೇಶದ ರಾಜಕೀಯ ಪಕ್ಷಗಳು ದೊಡ್ಡ ಅಥವಾ ಸಣ್ಣ ಪ್ರಮಾಣದ ಸ್ವಹಿತಾಸಕ್ತಿಯ ಗುಂಪುಗಳು. ಯಾವುದೋ ಒಂದು ಪಕ್ಷದಲ್ಲಿರುವ ವ್ಯಕ್ತಿಗೆ ಅಪೇಕ್ಷಿತ ಸ್ಥಾನಮಾನ ಸಿಗಲಿಲ್ಲವೆಂದರೆ ಬೇರೊಂದು ಪಕ್ಷದವರು ಆವ್ಹಾನಿಸಲಿಲ್ಲವೆಂದರೆ, ಕೈಯ್ಯಲ್ಲಿ ಸಾಕಷ್ಟು ಹಣವಿದ್ದರೆ, ಜಾತಿ, ಮತಗಳ ಬೆಂಬಲದ ಭರವಸೆ ಇದ್ದರೆ, ಕೂಡಲೇ ಹೊಸ ಪಕ್ಷವನ್ನು ಹುಟ್ಟುಹಾಕುತ್ತಾರೆ. ಇಂತಹ ಸಂದರ್ಭಗಳಲ್ಲಿ ಸಿದ್ದಾಂತವೆನ್ನುವುದು ಬರೀ ಬೂಟಾಟಿಕೆ ಮಾತ್ರ. ಪ್ರಾದೇಶಿಕ ಅಥವಾ ರಾಷ್ಟ್ರೀಯ ಪಕ್ಷಗಳಲ್ಲಿ ಹೈಕಮಾಮಡ್ ಸಂಸ್ಕೃತಿ ಗಟ್ಟಿಯಾಗಿ ಬೇರೂರಿದೆ. ಪ್ರತಿಯೊಂದು ಚಿಕ್ಕ ಪುಟ್ಟ ವಿಷಯಗಳಿಗೂ ಹೈಕಮಾಂಡ್ ಒಪ್ಪಿಗೆ ಪಡೆಯುವ ಪರಿಸ್ಥಿತಿಯಿಂದಾಗಿ ಸ್ಥಳೀಯ ಜನಪ್ರತಿನಿಧಿಯು ಯಾವುದೇ ಸ್ವಾತಂತ್ರ್ಯವಿಲ್ಲದ ಪಕ್ಷದ ಹೈಕಮಾಂಡ್ ಗುಲಾಮನಂತೆ ವರ್ತಿಸುವ ಸ್ಥಿತಿ ಇದೆ. ಕುಟುಂಬ ನಿಷ್ಠೆ, ಜಾತಿ, ಮತ, ಪಂಥಗಳ ಆಧಾರದ ಮೇಲೆ ಜನಸಾಮಾನ್ಯರನ್ನು ದಿಕ್ಕು ತಪ್ಪಿಸುವ ಚಿಂತನೆಗಳನ್ನೇ ಸಿದ್ಧಾಂತವೆಂದು ಬಿಂಬಿಸುವ ಪ್ರಯತ್ನವನ್ನು ಹಲವು ರಾಜಕೀಯ ಪಕ್ಷಗಳು ಮಾಡುತ್ತಿವೆ. ಹೇಗಾದರೂ ಮಾಡಿ ಅಧಿಕಾರದ ಗದ್ದುಗೆ ಹಿಡಿಯಬೇಕೆಂಬುದೇ ರಾಜಕಾರಣಿಗಳ ಗುರಿ. ಅಧಿಕಾರದ ಲಾಲಸೆಗಾಗಿ ಪಕ್ಷದಿಂದ ಪಕ್ಷಕ್ಕೆ ಜಿಗಿಯುವವರನ್ನೂ ನಿಯಂತ್ರಿಸುವ ಉದ್ದೇಶದಿಂದ ರೂಪುಗೊಂಡ ಪಕ್ಷಾಂತರ ನಿಷೇಧ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಹೊಸ ಹೊಸ ವಿಧಾನಗಳನ್ನು ಹುಟ್ಟಿ ಹಾಕಲಾಗುತ್ತಿದೆ. ಒಂದು ಪಕ್ಷದಿಂದ ಆಯ್ಕೆಯಾದವರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಇನ್ನೊಂದು ಪಕ್ಷ ಸೇರಿ ಪುನಃ ಚುನಾವಣೆಗೆ ಸ್ಪರ್ಧಿಸುವದು ಇತ್ತೀಚಿನ ವರ್ಷಗಳಲ್ಲಿ ಮಾಮೂಲಾಗಿದೆ. ಅಧಿಕಾರ ಮತ್ತು ಅದರೊಂದಿಗೆ ಬರುವ ಹಣದ ಹರಿವು ರಾಜಕಾರಣಿಗಳ ನೈತಿಕತೆ ಮತ್ತು ಮನಸ್ಸಾಕ್ಷಿಯನ್ನು ಪಾತಾಳಕ್ಕೆ ತಳ್ಳಿ ಬಿಟ್ಟಿದೆ. ಅಧಿಕಾರಕ್ಕಾಗಿ ಮಹಾರಾಷ್ಟ್ರದಲ್ಲಿ ಹಾಗೂ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಅಸಹ್ಯ ಹುಟ್ಟಿಸುತ್ತಿವೆ. ದುರ್ಜನರು ನಡೆಸುವ ದುರಾಚಾರಕ್ಕಿಂತ ಸಜ್ಜನರ ನಿಷ್ಕ್ರಿಯತೆಯೇ ಹೆಚ್ಚು ಅಪಾಯಕಾರಿ ಎಂಬ ಗಾದೆ ನಿಜವಾಗ ತೊಡಗಿದೆ. ಎಲ್ಲಿಯವರೆಗೆ ಮತದಾರರು ಹಣ, ಹೆಂಡ, ಜಾತಿ, ಮತ, ಪಂಥ, ಕೋಮುಭಾವನೆ , ಭಾವನಾತ್ಮಕ ವಿಷಯಗಳಿಗೆ ಮರುಳಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೋ ಅಲ್ಲಿಯವರೆಗೆ ರಾಜಕಾರಣಿಗಳ ಸಮಾಜ ಸೇವೆಯ ಸೋಗಿನ ಕಳ್ಳಾಟ ನಡೆಯುತ್ತಲೇ ಇರುತ್ತದೆ. ರಾಜಕೀಯ ಪಕ್ಷಗಳೆಂದರೆ ಅಧಿಕಾರಕ್ಕಾಗಿ ಹಪಹಪಿಸುವ ಸಮಾನ ಮನಸ್ಕರ ಗುಂಪು ಎನ್ನುವಂತಾಗಿದೆ. ಮತ ಖರೀದಿಗಾಗಿ ಚುನಾವಣೆಗಳಲ್ಲೂ ಹಣ ಚೆಲ್ಲುವುದು, ಗೆದ್ದ ನಂತರ ಖರ್ಚು ಮಾಡಿದ್ದರ ಜೊತೆಗೆ ಭವಿಷ್ಯದ ಚುನಾವಣೆ ಖರ್ಚಿಗಾಗಿ ಕೂಡಿ ಹಾಕುವುದಕ್ಕಾಗಿ ಭ್ರಷ್ಟಾಚಾರ ನಡೆಸುವ ವಿಷ ವರ್ತುಲದಲ್ಲಿ ಇಂದಿನ ರಾಜಕೀಯ ವ್ಯವಸ್ಥೆ ಬಳಲುತ್ತಿದೆ. ಈ ವಿಷ ವರ್ತುಲವನ್ನು ತುಂಡರಿಸಬೇಕೆಂದರೆ, ವಯಸ್ಸು ಆಧಾರಿತ ಸಾರ್ವತ್ರಿಕ ಮತದಾನದ ಹಕ್ಕನ್ನು ಬದಲಿಸಬೇಕು. ಆಡಳಿತ ನಡೆಸುವ ಅಧಿಕಾರ ಉಳ್ಳವರನ್ನು ಆಯ್ಕೆ ಮಾಡುವ ವ್ಯಕ್ತಿಗೆ ಸಾಮಾಜಿಕ, ಆರ್ಥಿಕ, ರಾಜಕೀಯ ವಿಷಯಗಳ ಕನಿಷ್ಟ ಮಟ್ಟದ ಜ್ಞಾನ ಇರಬೇಕಾದುದು ಅಗತ್ಯ. ಒಬ್ಬ ಪಂಚಾಯತ ಸದಸ್ಯನಿಂದ ಏನನ್ನು ನಿರೀಕ್ಷೆ ಮಾಡಬೇಕು, ಒಬ್ಬ ಜಿಲ್ಲಾ ಪಂಚಾಯತ್ ಸದಸ್ಯನ ಕರ್ತವ್ಯಗಳೇನು? ವಿಧಾನಸಭಾ ಸದಸ್ಯ , ಸಂಸದರ ಹೊಣೆಗಾರಿಕೆಯೇನು ಎಂಬ ಜ್ಞಾನ ಮತದಾರರ ಅರಿವಿನಲ್ಲಿ ಇರಬೇಕು. ಅರ್ಥವ್ಯವಸ್ಥೆಯ ಕುರಿತಾದ ಮೂಲಭೂತ ಜ್ಞಾನ, ರಾಜಕೀಯ ಪಕ್ಷಗಳ ಪ್ರಣಾಳಿಕೆಯನ್ನು ಅರ್ಥಮಾಡಿಕೊಳ್ಳುವ ಜಾಣ್ಮೆ ಇಲ್ಲದ ಮತದಾರರು ಮಾಡುವ ಆಯ್ಕೆ ಆಧಾರ ರಹಿತವಾಗುತ್ತದೆ. ಸ್ವಾರ್ಥಿಗಳು, ಅಯೋಗ್ಯರೇ ಆಯ್ಕೆಯಾಗಿಬಿಡುತ್ತಾರೆ. ಆದ್ದರಿಂದಲೇ ಸಾರ್ವತಿಕ ಮತದಾನದ ಹಕ್ಕನ್ನು ನೀಡುವ ಬದಲಿಗೆ ಪರೀಕ್ಷೆ ನಡೆಸಿದ ನಂತರವೇ ಉತ್ತೀರ್ಣರಾದವರನ್ನೂ ಮತದಾರರ ಯಾದಿಗೆ ಸೇರ್ಪಡೆ ಮಾಡುವಂತಾಗಬೇಕು. ಇದಕ್ಕಾಗಿ ಚುನಾವಣಾ ಆಯೋಗದಂತಹ ಸ್ವಾಯತ್ತ ಸಂಸ್ಥೆಗೆ ಮತದಾರರ ಸಮುದಾಯ ಸ್ಥಾಪಿಸುವ ಹೊಣೆಗಾರಿಕೆ ನೀಡಬೇಕು. ಸಾಮಾಜಿಕ , ಆರ್ಥಿಕ, ರಾಜಕೀಯ ವಿಷಯಗಳ ಕುರಿತು ಪ್ರಾಥಮಿಕ ಜ್ಞಾನವನ್ನು ಪಸರಿಸುವ , ಆಸಕ್ತರಿಗೆ ಶಿಕ್ಷಣ ನೀಡುವ, ಪರೀಕ್ಷೆಗಳನ್ನು ನಡೆಸುವ ಹೊಣೆಗಾರಿಕೆ ಚುನಾವಣಾ ಆಯೋಗಕ್ಕೆ ನಡೆಸುವ ಹೊಣೆಗಾರಿಕೆ ಚುನಾವಣಾ ಆಯೋಗಕ್ಕೆ ಇರಬೇಕು. ಅವರು ಕಾಲಕಾಲಕ್ಕೆ ನಡೆಸುವ ಪರೀಕ್ಷೆಗಳನ್ನು ಎದುರಿಸಿ ಉತ್ತೀರ್ಣರಾದ ವ್ಯಕ್ತಿಗಳನ್ನು ಅರ್ಹ ಮತದಾರರೆಂದು ಪೋಷಿಸಬೇಕು. ವಯಸ್ಕರಿಗೆ ಶಿಕ್ಷಣ ನೀಡುವ, ಮತದಾರರಾಗುವ ಅವಕಾಶ ನೀಡುವ ಪರೀಕ್ಷೆಗಳನ್ನು ನಡೆಸುವ ಕಾರ್ಯ ನಿರಂತರವಾಗಿ ನಡೆಯುತ್ತಿರಬೇಕು. ಒಬ್ಬ ವ್ಯಕ್ತಿ ಎಷ್ಟು ಬಾರಿ ಬೇಕಾದರೂ ಈ ಪ್ರವೇಶ ಪರೀಕ್ಷೆ ಬರೆಯುವ ಅವಕಾಶ ಇರಬೇಕು.

ರಾಜಕಾರಣ Read Post »

You cannot copy content of this page

Scroll to Top