ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ, ಮಕ್ಕಳ ವಿಭಾಗ

ಮಕ್ಕಳ ಕವಿತೆ -ನನ್ನ ಶಾಲೆ

ಮಕ್ಕ:ಳ ಕವಿತೆ ನನ್ನ ಶಾಲೆ ಬಾಪು ಖಾಡೆ ಆಡಿ ಹಾಡಿ ಕೂಡಿ ಕುಣಿದುನಕ್ಕು ನಲಿದ ನನ್ನ ಶಾಲೆಗೆಳೆಯರೊಡನೆ ಆಟವಾಡಿಸೋತು ಗೆದ್ದ ನನ್ನ ಶಾಲೆ ಸ್ನೇಹ ಕರುಣೆ ವಿದ್ಯೆ ವಿನಯಬಿತ್ತಿ ಬೆಳೆದ ನನ್ನ ಶಾಲೆಸತ್ಯ ಶಾಂತಿ ನೀತಿ- ನಿಯಮಎತ್ತಿ ಹಿಡಿದ ನನ್ನ ಶಾಲೆ ಕೂಡಿ ಕುಳಿತು ಊಟ ಮಾಡಿಹಂಚಿ ತಿಂದ ನನ್ನ ಶಾಲೆಚಿತ್ರ ಬಿಡಿಸಿ-ವೀಣೆ ನುಡಿಸಿನೃತ್ಯ ಕಲಿಸಿದಂತ ಶಾಲೆ ಓದಿ ಬರೆದು ಅರಿತು ನಡೆವಬೆಳಕು ಕೊಟ್ಟ ನನ್ನ ಶಾಲೆಲೆಕ್ಕ ಬಿಡಿಸಿ ಜ್ಞಾನ ಉಣಿಸಿಅನ್ನ ಕೊಟ್ಟ ನನ್ನ ಶಾಲೆ ಅಳತೆ ತೂಕ ಎಣಿಕೆ ಲೆಕ್ಕಹೇಳಿ ಕೊಟ್ಟ ನನ್ನ ಶಾಲೆಶಿಸ್ತು ಸಮತೆ ಅರಿವು ನೀಡಿಬದುಕು ಕೊಟ್ಟ ನನ್ನ ಶಾಲೆ

ಮಕ್ಕಳ ಕವಿತೆ -ನನ್ನ ಶಾಲೆ Read Post »

ಇತರೆ, ಮಕ್ಕಳ ವಿಭಾಗ

ಕುದುರೆ ಸವಾರ

ಮಕ್ಕಳ ಕವಿತೆ ಕುದುರೆ ಸವಾರ ಸೋಮಲಿಂಗ ಬೇಡರ ಬಂದನೊಬ್ಬ ಸವಾರಬಿಳಿಯ ಕುದುರೆ ಹತ್ತಿಕೋರೆ ಮೀಸೆ ತಿರುವುತಓಣಿ ಓಣಿ ಸುತ್ತಿ ಓಣಿ ಮಕ್ಕಳೆಲ್ಲರುನೋಡುತವನ ಮೆಚ್ಚಿಕುದುರೆ ಹಿಂದೆ ನಡೆದರುಹಾಕುತವರು ಹೆಜ್ಜಿ ಊರ ಜಾತ್ರೆ ಮರುದಿನಕುಸ್ತಿ ಗೆದ್ದ ವೀರತಾನೇ ಎನುತ ಗತ್ತಲಿಸಾರುತ್ತಿದ್ದ ಧೀರ ಬೆಳಗುತ್ತಿದ್ದರಾರುತಿದೃಷ್ಟಿ ಬೊಟ್ಟು ಇಟ್ಟುನಗುತಲಿದ್ದ ಸವಾರಹೆಚ್ಚು ಹೆಮ್ಮೆ ಪಟ್ಟು ಢಂ! ಎಂದು ಒಮ್ಮೆಲೆಸಿಡಿಯಿತಲ್ಲಿ‌ ಮದ್ದುಕುದರೆ ಬೆಚ್ಚಿ ನೆಗೆಯಲುಬಿದ್ದನವ ಜಟ್ಟಿಯು ಕಣ್ಣು ಬಿಟ್ಟು ನೋಡಿದನಗುತಲಿದ್ದ ತಮ್ಮಮಂಚದಿಂದ ತಿಮ್ಮನುಬಿದ್ದು ಎದ್ದ ಸುಮ್ಮ!

ಕುದುರೆ ಸವಾರ Read Post »

ಇತರೆ, ಮಕ್ಕಳ ವಿಭಾಗ

ಪ್ರತಿಫಲ

ಮಕ್ಕಳ ಕಥೆ ಪ್ರತಿಫಲ ಬಸವರಾಜ ಕಾಸೆ ದಿನವೂ ಏನಾದರೂ ಒಂದು ಒಳ್ಳೆಯ ಕೆಲಸ ಮಾಡಿ ಅದನ್ನು ಬರೆದುಕೊಂಡು ಬರಬೇಕು ಎಂದು ಕ್ಲಾಸ್ ಟೀಚರ್ ಹೇಳುತ್ತಿದ್ದರು. ಆದರೆ ಅವಕಾಶ ಇದ್ದಾಗಲೂ ಅಂತಹ ಕೆಲಸವನ್ನು ಯಾವ ಮಕ್ಕಳು ಮಾಡುತ್ತಿರಲಿಲ್ಲ. ಅದರಲ್ಲಿ ವಿಶೇಷವಾಗಿ ಚೂಟಿ ಮಾಡುತ್ತಾನೆ ಇರಲಿಲ್ಲ. ಆದರೆ ದಿನವೂ “ಇಂದು ರಸ್ತೆಯಲ್ಲಿ ಬಿದ್ದ ಮುಳ್ಳು ತೆಗೆದು ಹಾಕಿದೆ”, “ಕಲ್ಲು ತೆಗೆದು ಹಾಕಿದೆ”, “ವೃದ್ಧರಿಗೆ ರಸ್ತೆ ದಾಟಲು ಸಹಾಯ ಮಾಡಿದೆ”, “ಮನೆ ಕಸ ಗುಡಿಸಿದೆ”, “ಅಮ್ಮನಿಗೆ ಅಡುಗೆಯಲ್ಲಿ ನೆರವಾದೆ” ಹೀಗೆ ಸುಮ್ಮಸುಮ್ಮನೆ ಏನಾದರೂ ಬರೆದುಕೊಂಡು ಹೋಗುತ್ತಿದ್ದಳು. ಚೂಟಿಯ ಗೆಳತಿಯಾದ ಪುಟ್ಟಿಯು ನಿಜವಾಗಿಯೂ ಮಾಡುವ ಮನಸ್ಸು ಹೊಂದಿದ್ದಳು ಮತ್ತು ಗಮನಕ್ಕೆ ಬಂದರೆ ಮಾಡುತ್ತಿದ್ದಳು. ಆದರೆ ಇದನ್ನೆಲ್ಲಾ ಎಷ್ಟೋ ಸಲ ಚೂಟಿಯೇ ತಡೆದಿದ್ದಳು. ಅವತ್ತು ಒಂದು ದಿನ ಚೂಟಿ ಮತ್ತು ಪುಟ್ಟಿ ರಸ್ತೆಯಲ್ಲಿ ಹೋಗುತ್ತಿದ್ದಾಗ ಯಾರೋ ಮಾವಿನ ಹಣ್ಣು ತಿನ್ನುತಿರುವದನ್ನು ಕಂಡು ಇವರಿಬ್ಬರಿಗೂ ತಿನ್ನಬೇಕು ಎನಿಸಿತು. ಆದರೆ ಇಬ್ಬರ ಬಳಿಯೂ ದುಡ್ಡು ಇರಲಿಲ್ಲ. ಹಾಗೆ ಆಸೆಗಣ್ಣಿನಲ್ಲಿ ಮುಂದೆ ಮುಂದೆ ಬರುವಾಗ ಅಲ್ಲಿ ಒಬ್ಬಳು ಅಜ್ಜಿ ರಸ್ತೆ ದಾಟಲಾಗದೆ ತಲೆ ಮೇಲೆ ಬುಟ್ಟಿ ಹೊತ್ತು ನಿಂತಿದ್ದಳು. ಒಂದಾದ ಮೇಲೆ ಒಂದು ವಿಪರೀತ ವಾಹನಗಳ ಓಡಾಟ. “ಪಾಪ, ನೋಡೇ… ಆ ಅಜ್ಜಿಗೆ ಸಹಾಯ ಮಾಡೋಣ, ಬಾ ಆ ಕಡೆ ಹೋಗೋಣ” ಎಂದರೂ “ಹೋಗೇ, ಯಾರು ಬರತಾರೆ” ಎಂದಳು. ಆಗ ಪುಟ್ಟಿ ಒಬ್ಬಳೇ ಹೋಗಿ ಮೆಲ್ಲಗೆ ಅಜ್ಜಿಯ ಕೈ ಹಿಡಿದು ರಸ್ತೆ ದಾಟಿಸಿದಳು. “ಸ್ವಲ್ಪ ಬುಟ್ಟಿ ಇಳಿಸು ಮರಿ ಹಾಗೆ” ಎಂದಾಗ ಅಜ್ಜಿ, ಪುಟ್ಟಿ ಇಳಿಸಿದಳು. ನೋಡಿದರೆ ಆ ಬುಟ್ಟಿ ತುಂಬಾ ಮಾವಿನ ಹಣ್ಣು “ತಗೋ, ತಿನ್ನು” ಅಂತ ಅಜ್ಜಿ ಕೊಟ್ಟರೂ “ಬೇಡ ಬೇಡ” ಎಂದು ಆಮೇಲೆ ತೆಗೆದುಕೊಂಡಳು. ದೂರದಲ್ಲಿಯೇ ನಿಂತು ನೋಡತಾ ಚೂಟಿ ಹೊಟ್ಟೆಕಿಚ್ಚು ಪಟ್ಟುಕೊಂಡು ಮುಖ ಉದಿಸಿಕೊಂಡಳು. “ಅಜ್ಜಿ ಅವಳು ನನ್ನ ಪ್ರೇಂಡ್” ಎಂದಾಗ ಅವಳನ್ನು “ಬಾ ಇಲ್ಲಿ, ಮಾವಿನ ಹಣ್ಣು ತಗೋ” ಎಂದಾಗ ಆಸೆಗಣ್ಣಿನಿಂದ ಓಡಿ ಬರಲು ಕಾಲಿಗೆ ಮುಳ್ಳು ಚುಚ್ಚಿತು. “ಯಾರಾದರೂ ಸೈಡಿಗೆ ಈ ಮುಳ್ಳು ಹಾಕಿದರೆ ನನ್ನ ಕಾಲಿಗೆ ಹೀಗೆ ಆಗ್ತಾ ಇರಲಿಲ್ಲ” ಎಂದು ಬೈಯಿಕೊಂಡಳು. ಹಾಗೆ ಕುಂಟುತ್ತಾ ಬಂದ ಅವಳಿಗೂ ಅಜ್ಜಿ ಮಾವಿನ ಹಣ್ಣು ನೀಡಿದಳು. ಅದರಿಂದ ಸಂತುಷ್ಟಳಾದ ಚೂಟಿ “ನಾವು ಇನ್ನೊಬ್ಬರಿಗೆ ಸಹಾಯ ಮಾಡಿದರೆ ನಮಗೂ ಮತ್ತೆ ಯಾರೋ ಸಹಾಯ ಮಾಡುತ್ತಾರೆ, ಒಳ್ಳೆಯ ಕೆಲಸಕ್ಕೆ ಒಳ್ಳೆಯ ಪ್ರತಿಫಲ” ಎಂದು ಖುಷಿಗೊಂಡು ತನ್ನ ನಡವಳಿಕೆಯನ್ನು ಬದಲಿಸಿಕೊಳ್ಳಬೇಕು ಎಂದು ನಿರ್ಧರಿಸಿ ಮಾವಿನ ಹಣ್ಣು ತಿಂದಳು ***********************************************

ಪ್ರತಿಫಲ Read Post »

ಮಕ್ಕಳ ವಿಭಾಗ

ಹೋಳಿ ಹಬ್ಬದಲ್ಲಿ ಹಕ್ಕಿಪುಕ್ಕ!

ಅನುಭವ ಕಥನ  ಹೋಳಿ ಹಬ್ಬದಲ್ಲಿ ಹಕ್ಕಿಪುಕ್ಕ! ವಿಜಯಶ್ರೀ ಹಾಲಾಡಿ ಹೋಳಿಹಬ್ಬ ಬರುವುದು ಬೇಸಗೆಯ ವಸಂತಮಾಸದಲ್ಲಿ… ಅಂದರೆ ಮಾವು, ಗೇರು ಮತ್ತು ಕಾಡಿನ ಬಹುತೇಕ ಮರಗಳು ಚಿಗುರು, ಹೂ ಬಿಡುವಕಾಲದಲ್ಲಿ. ವಿಜಿಯ ಮನೆ ಹತ್ತಿರದ ಕಾಡುಗಳಲ್ಲಿ ಕೆಲವು ಮಾವಿನಮರಗಳಿದ್ದವಲ್ಲ, ಅವು ಚಿಗುರು ಬಿಡುವುದನ್ನು ನೋಡಬೇಕು! ಇಡಿ ಮರವೇ ಹೊಳೆಯುವ ಕೆಂಪು ಬಣ್ಣವಾಗಿಬಿಡುತ್ತಿತ್ತು. ಇದೇ ಸಂದರ್ಭದಲ್ಲಿ ಹೋಳಿಹಬ್ಬವೂ ತನ್ನ ಬಣ್ಣ ಸೇರಿಸಿ ಕೆಂಪು, ಹಳದಿ, ಹಸಿರು, ಕಿತ್ತಳೆ ವರ್ಣಗಳಲ್ಲಿ ಅವರ ಊರು ಹೊಳೆಯುತ್ತಿತ್ತು. ಅಲ್ಲಿ ಕುಡುಬಿ ಜನಾಂಗದವರ ಮನೆಗಳು ಸಾಕಷ್ಟಿದ್ದವು. ಅವರ ಕುಂದಾಪುರ ತಾಲ್ಲೂಕಿನಲ್ಲಿ ಕುಡುಬಿಯರು ಬಹುಸಂಖ್ಯೆಯಲ್ಲಿದ್ದಾರೆ. ವಿಜಿಯ ಬಾಲ್ಯಕಾಲದಲ್ಲಿ ಕುಡುಬಿಯರ ದಿನನಿತ್ಯದ ವೇಷಭೂಷಣಕೂಡಾ ವಿಶಿಷ್ಟವಾಗಿತ್ತು. ಹೆಂಗಸರು ಸೀರೆ ಉಡುವ ರೀತಿಯೇ ಬೇರೆ. ‘ಗೇಂಟಿ’ ಹಾಕಿ ಸೀರೆಯುಟ್ಟು ಕೊರಳಿಗೆ ಹತ್ತಾರು ಮಣಿಸರಗಳನ್ನು ಹಾಕಿಕೊಳ್ಳುತ್ತಿದ್ದರು. ತಲೆತುಂಬ ಅಬ್ಬಲಿಗೆ ಹೂ ಮುಡಿದು ಮೂಗಿಗೆ ದೊಡ್ಡ ಹರಳಿನ ಮೂಗುತಿ, ಕಿವಿಗೆ ಬೆಂಡೋಲೆ, ಬುಗುಡಿ, ಕೈತುಂಬ ಗಾಜಿನ ಬಳೆಗಳನ್ನಿಟ್ಟು ಖುಷಿ ಖುಷಿಯಾಗಿ ಅವರು ನಡೆದುಬರುವುದೇ ಒಂದು ಜಾಪು! ಕುಡುಬಿಯರು ಪ್ರತಿವರ್ಷ ಆಚರಿಸುತ್ತಿದ್ದ ಹೋಳಿಹಬ್ಬವಂತೂ ವಿಶೇಷ. ವಿಜಿ ಮತ್ತು ಗೆಳತಿಯರು ಆ ಸಮಯದ ಹೋಳಿ ಕುಣಿತವನ್ನು ನೋಡಲು ಕಾತರದಿಂದ ಕಾಯುತ್ತಿದ್ದರು. ಸರಿಸುಮಾರು ಹತ್ತು-ಹದಿನೈದು ದಿನದ ಹಬ್ಬವಿದು. ಅಮಾವಾಸ್ಯೆಯ ನಂತರ ಶುರುವಾಗಿ ಹುಣ್ಣಿಮೆಯವರೆಗೆ ಇರುವ ಹಬ್ಬ. ಕುಡುಬಿಯರು ತಮ್ಮಲ್ಲೇ ನಾಲ್ಕೈದು ಮೇಳಗಳನ್ನು ಮಾಡಿಕೊಳ್ಳುತ್ತಿದ್ದರು. ಮನೆಮನೆಗೆ ಹೋಗಿ ನೃತ್ಯ, ಕೋಲಾಟವನ್ನು ಈ ಸಂದರ್ಭದಲ್ಲಿ ಮಾಡುತ್ತಿದ್ದರು. ಗಂಡಸರು ಮತ್ತು ಚಿಕ್ಕ ಗಂಡುಮಕ್ಕಳು ಬಣ್ಣಬಣ್ಣದ ಉಡುಪು ಧರಿಸಿ ಮಣಿಸರಗಳಿಂದ ತಲೆಗೆ ಮುಂಡಾಸು, ಹೂಗಳು, ಹಕ್ಕಿ ಗರಿಗಳಿಂದ ಅಲಂಕರಿಸಿ ಕೊಂಡಿರುತ್ತಿದ್ದರು. ಭುಜಕ್ಕೆ ಗುಮ್ಟಿ(ಗುಮ್ಮಟೆ) ಎಂಬ ವಾದ್ಯವನ್ನು ಹಾಕಿಕೊಂಡು, ಕಾಲುಗಳಲ್ಲಿ ದೊಡ್ಡ ದೊಡ್ಡ ಗೆಜ್ಜೆ ಧರಿಸಿ ಉದ್ದಾನುದ್ದಕ್ಕೆ ಅವರು ನಡೆದು ಬರುವಾಗ ಇಡೀ ಗದ್ದೆ ಬಯಲೇ ಸಂಗೀತ, ಬಣ್ಣಗಳಲ್ಲಿ ಮುಳುಗಿದಂತೆ ಭಾಸವಾಗುತ್ತಿತ್ತು. ವಿಜಿಗೆ ಆಶ್ರ‍್ಯವಾಗುತ್ತಿದ್ದ ವಿಷಯವೆಂದರೆ ಬೇರೆ ದಿನಗಳಲ್ಲಿ ಗದ್ದೆ, ಹೊಲಗಳಲ್ಲಿ ತುಂಡು ಬಟ್ಟೆಯುಟ್ಟು ದುಡಿಯುತ್ತಿದ್ದ ಆ ಪರಿಚಿತ ಜನರೆಲ್ಲ ಆವತ್ತು ಗುರ್ತವೇ ಸಿಗದಂತೆ ಕಾಣುತ್ತಿದ್ದುದು! ಅಬ್ಬ, ಆ ಹೊಸ ವೇಷದಲ್ಲಿ ಅವರೆಲ್ಲ ‘ಅವರೇಅಲ್ಲ’ ಎಂಬಷ್ಟು ಚಂದ ಕಾಣುತ್ತಿದ್ದರು. ಕೆಲವು ಸಲ ರಾತ್ರಿ ಹೊತ್ತುಕುಣಿಯಲು ಬಂದರಂತೂ ಲಾಟೀನು ಬೆಳಕಲ್ಲಿ ಅವರ ಕುಡುಬಿ ಭಾಷೆಯ ಹಾಡು ಮತ್ತು ನೃತ್ಯ ನಕ್ಷತ್ರಲೋಕಕ್ಕೆ ಕರೆದೊಯ್ಯುತ್ತಿತ್ತು! ಅವರು ತಲೆಗೆ ಸಿಂಗರಿಸಿದ್ದ ಸುರಗಿ ಹೂಗಳ ಮಾಲೆ ಪರಿಮಳಿಸುತ್ತಿದ್ದವು. ಗುಮ್ಮಟೆ ಬಡಿಬಡಿದು ಕುಣಿಯುವಾಗ, ಕೋಲಾಟ ಆಡುವಾಗ ಅವರೆಲ್ಲ ಎಷ್ಟು ಚುರುಕು! ಆ ವೇಷದಲ್ಲಿದ್ದಾಗಲೂ ಗಿಡ್ಡ, ಹೆರಿಯ, ಬಾಗ್ಡು, ಬುತ್ಯ ಮುಂತಾದವರು “ಪುಟ್ಟಮ್ಮ ಎಂತಾ ಮಾಡ್ತೆ?” ಎಂದು ಮಾತಾಡಿಸಿದಾಗ ಪುಟ್ಟ ವಿಜಿಗೆ ಏನೋ ಭಯಮಿಶ್ರಿತ ಸಂತೋಷ! ತನ್ನದೇ ವಯಸ್ಸಿನ ಕೆಲವು ಮಕ್ಕಳೂ ವೇಷ ಹಾಕಿಕೊಂಡು ಬಂದದ್ದನ್ನು ನಿಬ್ಬೆರಗಾಗಿ ನೋಡುತ್ತಿದ್ದಳು. ಅವರ ಊರಲ್ಲಿ ನೆಲೆಸಿದ್ದ ಕೆಲ ಮರಾಠರೂ ಹೋಳಿ ಕುಣಿತವನ್ನು ಮಾಡುತ್ತಿದ್ದರು. ಇವರ ಉಡುಪಿನಲ್ಲಿ ಬಣ್ಣಗಳು ತುಸು ಕಡಿಮೆ. ಆದರೆ ಇವರ ಕೋಲಾಟ ಮಾತ್ರ ಅದ್ಭುತ. ಮರಾಠಿ ಭಾಷೆಯ ಹಾಡುಗಳಂತೂ ಬೇರೆಯೇ ತರಹ. ಮತ್ತೊಂದು ವಿಶೇಷವೆಂದರೆ ಇವರ ಮೇಳದಲ್ಲಿ ಒಬ್ಬ ‘ಅಜ್ಜ’ ಇರುತ್ತಾನೆ! ಅಂದರೆ; ಒಬ್ಬ ಹುಡುಗನಿಗೆ ದೊಡ್ಡದಾದ ಬಿಳಿಗಡ್ಡ, ಕಣ್ಣಿಗೆ ಕಪ್ಪುಕನ್ನಡಕ, ಕೈಗೆ ಕೋಲು, ಗಂಟೆ ಕೊಟ್ಟು ವಿಶೇಷವಾಗಿ ‘ಹೋಳಿ ಅಜ್ಜನ ವೇಷ’ ಹಾಕಿಸುತ್ತಾರೆ. ಯಾಕೆಂದು ಇವತ್ತಿಗೂ ಗೊತ್ತಿಲ್ಲ; ಆ ಅಜ್ಜನನ್ನು ಕಂಡರೆ ವಿಜಿಗೆ ವಿಪರೀತ ಭಯವಾಗುತ್ತಿತ್ತು. ಕೊನೆಯಲ್ಲಿ ಅಕ್ಕಿ, ಕಾಯಿ, ದುಡ್ಡಿನ ಸಂಭಾವನೆಯನ್ನು ಆ ‘ಅಜ್ಜ’ನ ಕೈಯ್ಯಲ್ಲೇ ಕೊಡುವುದಾಗಿತ್ತು. ಆ ಅಜ್ಜನೋ ಕೀಟಲೆ ಮಾಡಿ, ಕುಮ್ಬೆಟ್ ಹಾರಿ ಎಲ್ಲರನ್ನೂ ನಗಿಸುತ್ತಿದ್ದ. ಹಾಗೇ ಮಕ್ಕಳನ್ನು ಹೆದರಿಸುತ್ತಲೂ ಇದ್ದ. ಅಜ್ಜ ಸಂಭಾವನೆ ಪಡೆಯುವುದು ಕುಣಿತದ ಕೊನೆಯ ಹಂತ. ಆಮೇಲೆ ಬಾಯಾರಿಕೆ ಕುಡಿದು ಸ್ವಲ್ಪ ದಣಿವಾರಿಸಿಕೊಂಡು ಮತ್ತೊಂದು ಮನೆಗೆ ಮೇಳ ಹೊರಟುಬಿಡುತ್ತಿತ್ತು. ವಿಜಿಯ ಊರಿನಲ್ಲಿ ಅವತ್ತೆಲ್ಲ ಹೋಳಿಹುಣ್ಣಿಮೆಯ ಆಸುಪಾಸಿನ ಆ ಕೆಲವು ದಿನಗಳು ಕಳೆದದ್ದೇ ತಿಳಿಯುತ್ತಿರಲಿಲ್ಲ. ಬಂದು ಹೋಗುವ ಹೋಳಿಮೇಳಗಳ ಕುಣಿತ ನೋಡುವುದರಲ್ಲಿ ಹೊರ ಪ್ರಪಂಚವೇ ಮರೆತುಹೋಗುತ್ತಿತ್ತು. ಆ ಸಮಯದಲ್ಲಿ ಶಾಲೆಯಲ್ಲಿ ಬೇಸಿಗೆ ರಜೆಕೊಡುವ ದಿನಗಳು ಹತ್ತಿರವಾಗುತ್ತಿತ್ತು. ಪರೀಕ್ಷೆಗಳು ಮುಗಿದಿರುತ್ತಿದ್ದವು. ಶಾಲೆಯಲ್ಲೂ ಈ ಹೋಳಿಹಬ್ಬದ ಕುರಿತು ಮಕ್ಕಳು ಚರ್ಚಿಸುತ್ತಿದ್ದರು. ಹಾಗೇ ಮನೆಯ ಸುತ್ತಮುತ್ತ ಗೆಳತಿಯರು ಸೇರಿದರೂ ಅದೇ ಮಾತು. ಹೋಳಿ ಮೇಳ ಬಂದಾಗ ಅವರ ಬೀಚುಬೆಕ್ಕು ಹೆದರಿ ಎಲ್ಲೋ ಅಟ್ಟದ ಸಂದಿಯಲ್ಲಿ ಅಡಗಿ ಕೂರುತ್ತಿದ್ದುದನ್ನು ಆಡಿಕೊಂಡು ನಗುತ್ತಿದ್ದರು. ವಿಜಿ, ನೀಲಿಮಾ, ಮಾಣಿಕ್ಯಳಿಗೆ ವಿಚಿತ್ರ ಕಾಣುತ್ತಿದ್ದುದು ಹೋಳಿ ಜನರು ತಲೆಗೆ ಸಿಕ್ಕಿಸಿಕೊಳ್ಳುತ್ತಿದ್ದ ಹಕ್ಕಿ ಗರಿಗಳು! ಮನೆಯ ಹತ್ತಿರದ ತೋಟದಲ್ಲಿ, ಕಾಡಿನಲ್ಲಿ ಹಾರಾಡುವ ‘ಬಾಲದ ಹಕ್ಕಿ’ಯಿಂದ ಆ ಉದ್ದನೆ ಗರಿಗಳನ್ನು ಕದಿಯುತ್ತಿದ್ದರು ಎಂದು ಅವರಿಗೆ ಗೊತ್ತು. ಕೊಂಬೆಗಳಿಗೆ ಮೇಣ ಹಚ್ಚಿಟ್ಟು, ಹಕ್ಕಿ ಬಂದು ಕುಳಿತಾಗ ಉದ್ದ ಗರಿಗಳನ್ನು ಕಿತ್ತುಕೊಂಡು ಮತ್ತೆ ಕಾಡಿಗೆ ಬಿಡುತ್ತಾರಂತೆ. “ಪಾಪದ್ದು ಆ ಬಾಲದ ಹಕ್ಕಿ, ಅದಕ್ಕೆ ಎಷ್ಟು ಹೆದರಿಕೆಯಾಗುತ್ತದೋ, ಏನೋ” ಎಂದು ಮಾತಾಡಿಕೊಳ್ಳುತ್ತಿದ್ದರು. `ಅಂತಹ ಹಕ್ಕಿಗಳು ಪುನಃ ಕಾಡಿಗೆ ಹೋದಾಗ ಉಳಿದ ಹಕ್ಕಿಗಳು ಅವನ್ನು ಸೇರಿಸಿಕೊಳ್ಳುತ್ತಾವಾ?’ ಮುಂತಾಗಿ ಯೋಚಿಸುತ್ತಿದ್ದರು. ಏಕೆಂದರೆ ಒಮ್ಮೆ ಮನುಷ್ಯರು ಮುಟ್ಟಿದರೆ ಅಂತಹ ಹಕ್ಕಿ, ಅಳಿಲು ಮುಂತಾದ ಪ್ರಾಣಿ ಪಕ್ಷಿಗಳನ್ನು ಪುನಹ ಅವುಗಳ ಗೂಡಿಗೆ ಸೇರಿಸಿಕೊಳ್ಳುವುದಿಲ್ಲ ಎಂದು ಅವರು ಪುಸ್ತಕದಲ್ಲಿ ಓದಿ ತಿಳಿದುಕೊಂಡಿದ್ದರು.  “ಕಾಡಿಗೆ ಬಿಟ್ಟ ಹಕ್ಕಿಗೆ ಪುನಃ ಬಾಲ ಬೆಳೆಯುತ್ತದಾ?” ವಿಜಿ ಕೇಳುತ್ತಿದ್ದಳು. “ಹೂಂ, ಮತ್ತೆ ಬಾಲ ಬಂದಾಗ, ಮುಂದಿನ ವರ್ಷದ ಹಬ್ಬಕ್ಕೆ ಕಿತ್ತುಕೊಳ್ಳುತ್ತಾರೆ” ಎಂದು ನೀಲಿಮಾ ಹೇಳುತ್ತಿದ್ದಳು. “ಹಾಗಾದರೆ ಈ ಬಾಲದ ಹಕ್ಕಿಗೆ ಬಾಲವೇ ಇರಬಾರದಿತ್ತು, ಪಾಪ” ಎಂದುಕೊಳ್ಳುತ್ತಿದ್ದಳು ವಿಜಿ. ಮನರಂಜನೆಗಳೇ ಕಮ್ಮಿಯಿದ್ದ ವಿಜಿಯ ಊರಿನಲ್ಲಿ ಹೋಳಿಹಬ್ಬ ಒಂದು ದೊಡ್ಡ ಕುತೂಹಲಕಾರಿ ವಿಷಯವಾಗಿತ್ತು; ಹೌದು ವರ್ಷಕ್ಕೊಮ್ಮೆಅದು ಮರಳುತ್ತಿತ್ತು! ******************************************************

ಹೋಳಿ ಹಬ್ಬದಲ್ಲಿ ಹಕ್ಕಿಪುಕ್ಕ! Read Post »

ಮಕ್ಕಳ ವಿಭಾಗ

ಕನ್ನಡ ಕಂದ

ಮಕ್ಕಳ ಪದ್ಯ ಕನ್ನಡ ಕಂದ ಮಲಿಕಜಾನ ಶೇಖ . ಕನ್ನಡ ನಾಡಿನ ಕಂದನು ನಾನುಕನ್ನಡವನ್ನೆ ಬೆಳಗುವೇನು..ಅ,ಆ,ಇ,ಈ ಎನ್ನುತ್ತಾ ನಾನುಕನ್ನಡವನ್ನೆ ಕಲಿಯುವೇನು. ಸಹ್ಯಾದ್ರಿಯ ಗಿರಿಕಂದರಗಳಕಾವೇರಿ ಕೃಷ್ಣೆ ತುಂಗೆ ತೀರದಲಿಶ್ರೀಗಂಧ ವನ್ಯಸಿರಿ ನಾಡಿನಲಿಸೌಗಂಧ ತುಂಬಿದ ಮಣ್ಣಿನಲಿಎಂದಿಗೂ ನಾನು ಮೆರೆಯುವೇನು.. ಹರಿಹರ ಕೃಷ್ಣರು ಕಟ್ಟಿದಚಾಲೂಕ್ಯ ಕದಂಬರು ಆಳಿದಚೆನ್ನಮ್ಮಾ ಓಬವ್ವಾ ಹೋರಾಡಿದವೀರರು ಧೀರರು ಮೆರೆದಿಹಶೌರ್ಯದ ಇತಿಹಾಸ ಕೇಳುವೇನು.. ಶರಣರು ದಾಸರು ಬದುಕಿದಸೂಫಿ ಸಂತರು ಬೆಳಗಿದಸತ್ಯ ಶಾಂತಿ ನಿತ್ಯ ನೀತಿಐಕ್ಯ ಮಂತ್ರ ಸಾರಿದಪಾವನ ನೆಲಕ್ಕೆ ನಮಿಸುವೇನು. ರನ್ನ ಪಂಪರ ಅಪಾರ ಪಾಂಡಿತ್ಯಕುವೆಂಪು ಬೇಂದ್ರೆಯ ಅಗಾಧ ಜ್ಞಾನದಿಜೆ.ಪಿ ಬಿಚಿ ಗಿರೀಶ ಕಂಬಾರರಭವ್ಯದ ಅಕ್ಷರ ಪಾಠವನುಕೇಳುತ ಓದುತ ನಲಿಯುವೇನು. ಎಲ್ಲೆ ಇರಲಿ ಹೇಗೆ ಇರಲಿಯಾರೆ ಇರಲಿ ಏನೇ ಬರಲಿಕನ್ನಡ ಬಾವುಟ ಹಾರಿಸುವೆಕನ್ನಡ ಡಿಂಡಿಂ ಬಾರಿಸುತಾಕನ್ನಡ ತೇರನು ಎಳೆಯು **************************

ಕನ್ನಡ ಕಂದ Read Post »

ಇತರೆ, ಮಕ್ಕಳ ವಿಭಾಗ

ಅಲಕ್ಷ್ಯಕ್ಕೊಳಗಾಗಿರುವ ಮಕ್ಕಳ ಸಾಹಿತ್ಯ

ಲೇಖನ ಅಲಕ್ಷ್ಯಕ್ಕೊಳಗಾಗಿರುವ ಮಕ್ಕಳ ಸಾಹಿತ್ಯ ವಿಜಯಶ್ರೀ ಹಾಲಾಡಿ ಕರ್ನಾಟಕದ ಸಾಹಿತ್ಯ ಜಗತ್ತಿನಲ್ಲಿ `ಮಕ್ಕಳ ಸಾಹಿತ್ಯ’ ಎಂಬೊಂದು ಪ್ರಕಾರ ಹೇಗಿದೆ ಎನ್ನುವ ಕಡೆಗೆ ಯೋಚನೆ ಹರಿಸಿದರೆ ಬಹಳ ಖೇದವೂ, ಆಶ್ಚರ್ಯವೂ ಉಂಟಾಗುತ್ತದೆ. ಖೇದ ಏಕೆಂದರೆ ಏಕಕಾಲದಲ್ಲಿ ನಮ್ಮ ವರ್ತಮಾನವೂ, ಭವಿಷ್ಯವೂ ಆಗಿರುವ ಮಕ್ಕಳಿಗಾಗಿ ಇರುವ ಸಾಹಿತ್ಯ ಅಲಕ್ಷ್ಯವಾಗಿರುವುದಕ್ಕೆ. ಆಶ್ಚರ್ಯವೇಕೆಂದರೆ ಇಂತಹ ತಿರುಳನ್ನೇ ನಿರ್ಲಕ್ಷಿಸಿ ಇಡೀ ಸಾಹಿತ್ಯಲೋಕ ನಿಶ್ಚಿಂತೆಯಿಂದ ಇದ್ದು ಬಿಟ್ಟಿರುವುದಕ್ಕೆ! ಸಾಹಿತ್ಯ ವಲಯದ ಹಲವರೂ, ಸಂಸ್ಥೆ-ಅಂಗಸಂಸ್ಥೆಗಳೂ, ಸ್ವತಃ ಬರಹಗಾರರೂ, ಓದುಗರು ಎಲ್ಲರೂ ಸೇರಿ ಪಕ್ಕಕ್ಕೆ ಎತ್ತಿಟ್ಟು ಮರೆತುಬಿಟ್ಟ ಒಂದು ಸೃಜನಶೀಲ ಮಾಧ್ಯಮವಿದು. ಆದರೆ ಈ ಸಾಹಿತ್ಯ ಪ್ರಕಾರವನ್ನು ಅಲಕ್ಷಿಸಿದರೆ ನಮ್ಮ ಬದುಕಿನ ಆಶಾವಾದವಾದ ಮಕ್ಕಳನ್ನು, ಅವರ ಕನಸುಗಳನ್ನು ತುಳಿದಂತೆ ಎನ್ನುವುದಂತೂ ಸತ್ಯ!  ಶಿಶುಸಾಹಿತ್ಯದ ಕುರಿತು ಚಿಂತಿಸುವಾಗ ಏಳುವ ಬಹುಮುಖ್ಯ ಪ್ರಶ್ನೆಗಳೆಂದರೆ ಮಕ್ಕಳ ಸಾಹಿತ್ಯ ಕಡಿಮೆಯಾಗುತ್ತಿದೆಯೇ? ಗುಣಮಟ್ಟದ ಮಕ್ಕಳ ಸಾಹಿತ್ಯ ಕಡಿಮೆಯಾಗುತ್ತಿದೆಯೆ? ಈ ಸಾಹಿತ್ಯವನ್ನು ಓದುವವರು ಕಡಿಮೆಯೆ ಅಥವಾ ಗಾಂಭೀರ್ಯದ ಹೆಸರಲ್ಲಿ ಮಕ್ಕಳ ಸಾಹಿತ್ಯವನ್ನು ಮೂಲೆಗುಂಪಾಗಿಸಲಾಗಿದೆಯೆ? ಇಷ್ಟಕ್ಕೂ `ಮಕ್ಕಳ ಸಾಹಿತ್ಯ’ ಎನ್ನುವುದಕ್ಕೆ ವ್ಯಾಖ್ಯೆ ಏನು? ಮುಂತಾದವು. ಇಂತಹ ಹತ್ತಾರು ಪ್ರಶ್ನೆಗಳನ್ನಿಟ್ಟುಕೊಂಡು ಯೋಚಿಸುತ್ತ ಹೊರಟರೆ ಕನಿಷ್ಟ ಉತ್ತರದ ಹಾದಿಗಾದರೂ ತಲುಪಿಕೊಳ್ಳಬಹುದು ಎಂಬ ಆಶಯ ನನ್ನದು.    `ಮಕ್ಕಳ ಸಾಹಿತ್ಯ’ ಎಂದರೆ ಪ್ರೌಢ ಬರಹಗಾರರು ಮಕ್ಕಳಿಗಾಗಿಯೇ ಬರೆದ ಸಾಹಿತ್ಯ. ನಮ್ಮ ಮಕ್ಕಳಿಗೆ ಏನನ್ನು ಕೊಡಬೇಕು ಎಂಬ ದೃಷ್ಟಿಯನ್ನಿಟ್ಟುಕೊಂಡು ಅವರಿಗೆ ಇಷ್ಟವಾಗುವಂತೆ ಹಿರಿಯರು ಬರೆಯುವ ಕವಿತೆ, ಕತೆ ಇನ್ನಿತರ ಗದ್ಯ ಪ್ರಕಾರವೇ ಮಕ್ಕಳ ಸಾಹಿತ್ಯ. ಹಾಗಾದರೆ ಮಕ್ಕಳೇ ಬರೆದ ರಚನೆಗಳಿವೆಯಲ್ಲ; ಅವು ಏನು ಎನ್ನುವುದಕ್ಕೆ ಉತ್ತರ – ಅದು `ಸಾಹಿತ್ಯ’. ಮಗುವೊಂದು ಬರೆದದ್ದು ಇತರ ಮಕ್ಕಳಿಗಾಗಿ ಬರೆದ ಸಾಹಿತ್ಯವಾಗಿರಬಹುದು ಅಥವಾ ಅಲ್ಲದೆಯೂ ಇರಬಹುದು. ಈ ವಿಷಯದ ಕುರಿತು ಈಗಾಗಲೇ ಚರ್ಚೆಗಳಾಗಿವೆ ಮತ್ತು ಸಂವಾದಗಳು ನಡೆಯುತ್ತಲೂ ಇವೆ. ಏನೇ ಆದರೂ `ಮಕ್ಕಳಿಗಾಗಿ ಹಿರಿಯರು ಬರೆದದ್ದು’ ಮತ್ತು `ಮಕ್ಕಳೇ ಬರೆದದ್ದು’ ಈ ಎರಡು ಬಗೆಯ ಬರಹಗಳನ್ನೂ ಪ್ರತ್ಯೇಕವಾಗಿ ಪರಿಗಣಿಸುವುದು ಒಳ್ಳೆಯದು.   ಮುಖ್ಯವಾಗಿ ನಮ್ಮ ವ್ಯವಸ್ಥೆಯಲ್ಲಿ ಮಕ್ಕಳು ಅಲಕ್ಷಿತರು. ಪ್ರಸ್ತುತ ದಿನಗಳಲ್ಲಿ ಅವರವರ ಒಂದೋ, ಎರಡೋ ಮಕ್ಕಳಿಗೆ ಜನರು ಬಹಳ ಪ್ರಾಮುಖ್ಯತೆ ಕೊಡುತ್ತಿದ್ದಾರೆ ಎಂದು ನಮಗನ್ನಿಸಿದರೂ ಹೀಗಿಲ್ಲದ ಪೋಷಕರೂ ಬಹು ಸಂಖ್ಯೆಯಲ್ಲಿದ್ದಾರೆ. ಅದಲ್ಲದೇ ಊಟ, ವಸತಿ, ಪ್ರೀತಿ ಎಲ್ಲದರಿಂದ ವಂಚಿತರಾಗಿ ಅಕ್ಷರಶಃ ತಬ್ಬಲಿಗಳಾದ ಮಕ್ಕಳ ಸಂಖ್ಯೆಯೂ ನಾವು ಗಾಬರಿಬೀಳುವ ಪ್ರಮಾಣದಲ್ಲಿದೆ! ಪ್ರಾಮುಖ್ಯತೆ ಕೊಡುತ್ತಿರುವ ಪಾಲಕರಾದರೂ ತಮ್ಮ ಮಕ್ಕಳ ಬೇಕು-ಬೇಡಗಳನ್ನು ಗಮನಿಸುತ್ತಾರೋ ಅಥವಾ ತಮ್ಮ ಇಷ್ಟ ಅನಿಷ್ಟಗಳನ್ನು ಮಕ್ಕಳ ಮೇಲೆ ಹೇರುತ್ತಿದ್ದಾರೋ ಎಂದು ಗಮನಿಸಿದರೆ ಎರಡನೆಯ ಅಂಶವೇ ಉತ್ತರವೆಂಬುದು ಕಣ್ಣಿಗೆ ರಾಚುತ್ತದೆ. ತಮ್ಮ ಆಸೆಯಂತೆ ತಮ್ಮ ಮಕ್ಕಳನ್ನು `ತಿದ್ದುವುದೇ’ ಹೆಚ್ಚಿನ `ಪ್ರಜ್ಞಾವಂತ’ರ ಕಾಳಜಿ! ಈ ಕಾಳಜಿಯಲ್ಲಿ ಮಕ್ಕಳ ವಿದ್ಯಾಭ್ಯಾಸ ಕೂಡ ಭವಿಷ್ಯದ ದೊಡ್ಡ ಹುದ್ದೆ, ದೊಡ್ಡ ಹಣದ ಮೇಲೆ ಅವಲಂಬಿತವಾಗಿದೆ ಎಂದಾಗ ಮಕ್ಕಳ ಹವ್ಯಾಸ, ಆಸಕ್ತಿಯ ಕುರಿತಾದ ಜಾಗ್ರತೆ ಬಹುತೇಕ ಶೂನ್ಯ! ತಮ್ಮ ಮಕ್ಕಳು ಅವರಿಷ್ಟದ ಸೃಜನಶೀಲ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲಿ; ಕತೆ, ಕವಿತೆ, ಕಾದಂಬರಿಗಳನ್ನು ಓದಲಿ ಎನ್ನುವವರು ಪ್ರಜ್ಞಾವಂತರಲ್ಲೂ ವಿರಳ. ಪರಿಸ್ಥಿತಿ ಹೀಗಿರುವಾಗ ಇನ್ನುಳಿದ ಮಂದಿ ಇಂಥವರ ಅನುಕರಣೆಯನ್ನು ಮಾತ್ರ ಮಾಡುವುದು ತಪ್ಪೆನ್ನಲಾಗದು! ಇದಕ್ಕೆ ಹೊರತಾಗಿ ಪೋಷಕರ ಆಸರೆಯೇ ಇಲ್ಲದೆ ಬದುಕುತ್ತಿರುವ ದೊಡ್ಡ ಸಂಖ್ಯೆಯ ಮಕ್ಕಳ ಅಭಿರುಚಿ, ಭಾವನೆಗಳನ್ನು ಕೇಳುವವರಾರು? ಹೀಗಾಗಿ ಮಕ್ಕಳ ಸಾಹಿತ್ಯ ಅಲಕ್ಷಿತವಾಗುವುದಕ್ಕೂ ಮಕ್ಕಳು ಅಲಕ್ಷಿತರಾಗಿರುವುದಕ್ಕೂ ಬಹು ಮುಖ್ಯ ಸಂಬಂಧವಿದೆ. ಇನ್ನು, ಮಕ್ಕಳ ಸಾಹಿತ್ಯವೇ ಕಡಿಮೆಯಾಗುತ್ತಿದೆಯೇ ಅಥವಾ ಗುಣಮಟ್ಟದ ಬರಹಗಳು ಕಡಿಮೆಯಾಗುತ್ತಿದೆಯೆ? ಎಂಬ ಎಳೆಯನ್ನಿಟ್ಟುಕೊಂಡು ಹೊರಟರೆ ಎರಡಕ್ಕೂ ‘ಹೌದು’ ಎನ್ನುವ ಉತ್ತರವೇ ದೊರಕುತ್ತದೆ. ಇದಕ್ಕೆ ಕಾರಣ, ಪರಿಸ್ಥಿತಿ, ಸಂದರ್ಭಗಳು ಹಲವು. ಈ ಕುರಿತುಅಧ್ಯಯನ ಮಾಡಿದ ವಿದ್ವಾಂಸರ ಪ್ರಕಾರ ನಮ್ಮರಾಜ್ಯದಲ್ಲಿ ಮಾತ್ರವಲ್ಲದೆ ಇತರ ಕಡೆಯೂ ಮಕ್ಕಳ ಸಾಹಿತ್ಯದ ಸ್ಥಿತಿ ಹೀಗೆಯೇ ಇದೆ. ಮಲಯಾಳಂ ಮತ್ತು ಹಿಂದಿಯಲ್ಲಿ ಬೇರೆಲ್ಲ ಭಾಷೆಗಿಂತ `ಅಡ್ಡಿಲ್ಲ’ ಎನ್ನುವ ವಾತಾವರಣಇದೆ ಅಷ್ಟೇ. ಅಮೇರಿಕಾದಂತಹ ದೇಶದಲ್ಲಿ ಮಕ್ಕಳ ಸಾಹಿತ್ಯಕ್ಕೆ ಬಹು ಬೇಡಿಕೆ, ಜನಪ್ರಿಯತೆ ಇರುವುದು ಹೌದಾದರೂ ಪ್ರೌಢ ಸಾಹಿತ್ಯಕ್ಕೆ ಹೋಲಿಸಿಕೊಂಡರೆ ಅಲ್ಲೂ ಮಕ್ಕಳ  ಸಾಹಿತ್ಯ ಒಂದು ಹೆಜ್ಜೆ ಹಿಂದೆಯೇ! ನಮ್ಮಲ್ಲಿ ಶಿಶು ಸಾಹಿತ್ಯದ ಪ್ರಮಾಣ ಪ್ರೌಢ ಸಾಹಿತ್ಯಕ್ಕಿಂತ ಕಮ್ಮಿ ಹೌದು. ಆದರೆ ಬರವಣಿಗೆ ಕಡಿಮೆ ಎನ್ನುವುದಕ್ಕಿಂತ ಗುಣಮಟ್ಟದ ಬರಹಗಳು ಕಮ್ಮಿ ಎಂಬ ಮಾತು ಮತ್ತಷ್ಟು ಸರಿಯೆನಿಸುತ್ತದೆ. ಮಕ್ಕಳ ಸಾಹಿತ್ಯವೆಂದರೆ `ಲಘು ಸಾಹಿತ್ಯ, ಯಾರೂ ಬರೆಯಬಹುದಾದದ್ದು, ಪಾಂಡಿತ್ಯ ತಿಳುವಳಿಕೆ ಬೇಡದಿರುವುದು’ ಎಂಬ ಅಭಿಪ್ರಾಯ ಸರ್ವೇಸಾಮಾನ್ಯವಾಗಿದೆ. ಹಾಗಾಗಿ ಹೊಸತನವೇ ಇಲ್ಲದ, ಅದೇ ಹಳೆಯ ಪ್ರಾಸಗಳಿಗೆ ಜೋತುಬಿದ್ದ, ಸಾಂಪ್ರಾದಾಯಿಕ ವಸ್ತು- ನಿರೂಪಣೆಗೆ ನಿಷ್ಠವಾದ ಶಿಶುಸಾಹಿತ್ಯ ಧಂಡಿಯಾಗಿ ರಚನೆಯಾಗುತ್ತಿದೆ. ಇಂತಹ ಸವಕಲು ಸರಕೇ ಈಚೆ ಯಾರೂ ಕಣ್ಣೆತ್ತಿ ನೋಡದಿರುವುದಕ್ಕೆ ಒಂದು ದೊಡ್ಡ ಕಾರಣವೂ ಆಗಿದೆ! `ಮಕ್ಕಳಿಗಾಗಿ ಪ್ರಕಟಿಸಿದ ಪುಸ್ತಕಗಳು ಮಾರಾಟವಾಗುವುದಿಲ್ಲ’  ಎಂದು ಪ್ರಕಾಶಕರು ಚಿಂತೆ ವ್ಯಕ್ತಪಡಿಸುವುದಕ್ಕೂ ಇದೊಂದು ಪ್ರಮುಖ ಕಾರಣ. ಆದರೆ ಈ ಹೊತ್ತಲ್ಲೇ ಹೇಳಬೇಕಾದ ಮಾತೆಂದರೆ ಇತ್ತೀಚಿನ ವರ್ಷಗಳಲ್ಲಿ ಕನ್ನಡ ಮಕ್ಕಳ ಸಾಹಿತ್ಯ ಬದಲಾವಣೆಗೆ ತೆರೆದುಕೊಳ್ಳುತ್ತಿದೆ; ಅನೇಕ ಹೊಸಬರ, ಸೃಜನಶೀಲ ಬರಹಗಾರರ ಕಲ್ಪನೆಯ ಮೂಸೆಯಲ್ಲಿ ರೂಪು ಪಡೆಯುತ್ತಾ ಸಾಗಿದೆ ಎಂಬುದು. ಮಕ್ಕಳಿಗಾಗಿ ಫ್ರೆಶ್‌ ಆದ ಗದ್ಯ, ಪದ್ಯಗಳನ್ನು ಕೊಡಬೇಕೆಂಬ ತುಡಿತದಲ್ಲಿ ಇಂತವರು ಗಂಭೀರವಾಗಿ ತೊಡಗಿಸಿಕೊಂಡಿದ್ದಾರೆ. ನವೋದಯದ ಕಾಲದಲ್ಲಿ ಪಂಜೇ ಮಂಗೇಶರಾಯರು, ಕುವೆಂಪು, ಶಿವರಾಮ ಕಾರಂತ, ಹೊಯ್ಸಳ, ಜಿ.ಪಿ ರಾಜರತ್ನಂ, ಸಿದ್ದಯ್ಯ ಪುರಾಣಿಕರು ಮೊದಲಾದ ಹಿರಿಯರನೇಕರು ಬಹಳ ಆಸ್ಥೆಯಿಂದ ಮಕ್ಕಳಿಗಾಗಿ ಬರೆದಿದ್ದರು. ಅದರ ನಂತರ ಸುದೀರ್ಘಕಾಲದ ಬಳಿಕ ಕಳೆದ ಶತಮಾನದ ಕೊನೆಯ ದಶಕಗಳಲ್ಲಿ ಮತ್ತೊಮ್ಮೆ ಮಕ್ಕಳ ಸಾಹಿತ್ಯ ಚಿಗುರಿತು. ಈಗ ಪುನಃ ಅಂತಹ ದಿನಗಳು ಬರಲಾರಂಭಿಸಿವೆ ಎಂಬ ಆಶಾವಾದವನ್ನು ಮಕ್ಕಳ ಕ್ಷೇತ್ರದಲ್ಲಿ ತೊಡಗಿಕೊಂಡ ತಜ್ಞರು ವ್ಯಕ್ತಪಡಿಸುತ್ತಿದ್ದಾರೆ ಎಂಬುದನ್ನು ಈ ಸಂದರ್ಭದಲ್ಲಿ ಉಲ್ಲೇಖಿಸಬೇಕಾಗಿದೆ.    ಮಕ್ಕಳ ಸಾಹಿತ್ಯಕ್ಷೇತ್ರದ ವಿಕಾಸಕ್ಕೆ ತಡೆಯಾಗಿರುವ ಇನ್ನೊಂದು ಮುಖ್ಯ ಸಮಸ್ಯೆ `ಶ್ರೇಷ್ತ್ರತೆಯ ವ್ಯಸನ’! ಬಹಳ ಓದಿಕೊಂಡವರು, ಚಿಂತಕರು, ಗಂಭೀರ ಸಾಹಿತ್ಯ ಬರೆಯುವವರು ಮಕ್ಕಳ ಸಾಹಿತ್ಯಕೃಷಿ ಮಾಡಿದರೆ ಬೆಲೆ ಕಮ್ಮಿ ಎಂಬ ಒಂದು ಮನಸ್ಥಿತಿ ಪ್ರಚಲಿತದಲ್ಲಿದೆ. ಇದರಿಂದಾಗಿ ಮಕ್ಕಳ ಸಾಹಿತ್ಯಕ್ಕೆ ನಷ್ಟವಾಗಿದೆ ಎಂದೇ ಹೇಳಬಹುದು. ಅಂತಹ ಬರಹಗಾರರ ಸೃಜನಶೀಲತೆ, ಯೋಚನೆಗಳು ನಮ್ಮ ಮಕ್ಕಳಿಗೆ ದೊರಕಲಿಲ್ಲ. ನವೋದಯಕಾಲದ ಹಿರಿಯ ಕವಿಗಳನ್ನು ನೆನಪಿಸಿಕೊಂಡು ಈ ವಿಷಯದಲ್ಲಿ ಇನ್ನಾದರೂ ನಾವು ಬದಲಾಗಬೇಕಾದ ತುರ್ತಿದೆ. ಮಕ್ಕಳಿಗಾಗಿ ಬರೆಯುವುದು, ಮಕ್ಕಳ ಸಾಹಿತ್ಯ ಓದುವುದು ಇವೆರಡೂ ಬದುಕಿನ ಪ್ರೀತಿ, ಸರಳ ಖುಷಿ ಎಂದು ಪರಿಗಣಿಸಬೇಕಾಗಿದೆ. “ಮಕ್ಕಳಿಗಾಗಿ ಬರೆಯಬೇಕೆಂದರೆ ಮಕ್ಕಳ ಮಟ್ಟಕ್ಕೆ ನಾವು ಏರಬೇಕು” ಎನ್ನುತ್ತಾರೆ. ಏರುವುದೋ, ಇಳಿಯುವುದೋ ಒಟ್ಟಿನಲ್ಲಿ ಬರಹಗಾರನೇ/ಳೇ ಮಗುವಾಗಬೇಕಾದದ್ದು ಮೊದಲ ಅಗತ್ಯ. ಮಗುವಿನ ಮುಗ್ಧತೆ, ಕುತೂಹಲ, ಪ್ರಾಮಾಣಿಕತೆ ಮೊದಲಾದವು ಈ ಬರಹಗಾರರಲ್ಲಿ ಹುದುಗಿರಬೇಕಾದ ಬಹು ಮುಖ್ಯ ಅಂಶ. ಹೀಗೆ ಮಗುವೇ ಆಗಿ ಪರಕಾಯ ಪ್ರವೇಶ ಮಾಡಿದಾಗ ಮಾತ್ರ ಒಂದೊಳ್ಳೆ ಪದ್ಯವೋ, ಕತೆಯೋ ಬರೆಯಲು ಸಾಧ್ಯ. ದಿನನಿತ್ಯದ ದಂದುಗದಲ್ಲಿ ಏಗಿ ಸೂಕ್ಷ್ಮತೆಯನ್ನು, ಮಗುತನವನ್ನು ಕಳೆದುಕೊಂಡು ಜಡ್ಡುಬಿದ್ದಿರುವ ನಮ್ಮಂತಹ ದೊಡ್ಡವರಿಗೆ ಇದು ಕಷ್ಟವೆ! ಈ ಕಾರಣಕ್ಕಾಗಿಯೂಗುಣಮಟ್ಟದ ಮಕ್ಕಳ ಸಾಹಿತ್ಯ ಕಡಿಮೆಯಾಗಿರಬಹುದು. ಇಲ್ಲಿಯೇ ಚರ್ಚಿಸಬೇಕಾದ ಮತ್ತೊಂದು ಅಂಶವೆಂದರೆ ಮಕ್ಕಳ ಸಾಹಿತ್ಯಎಂದೊಡನೆ ಅದು `ಸರಳ’ ಆಗಿರಬೇಕು ಎಂಬ ತೀರ್ಮಾನಕ್ಕೆ ಬಂದುಬಿಡುವುದು! ಕೇಳಿ ಕೇಳಿ ಬೇಸರ ತರಿಸಿರುವ ಮಾದರಿಯನ್ನೇ ಆಯ್ದುಕೊಂಡು ಸರಳತೆಯ ಹೆಸರಲ್ಲಿ ಏನೋ ಬರೆದು ಬಿಡುವುದು! ಪುಟಾಣಿ ಮಗುವಿನಿಂದ ಹಿಡಿದು ಹದಿನೈದು-ಹದಿನಾರು ವರ್ಷದವರೆಗಿನ ಮಕ್ಕಳೂ ಈ ಸಾಹಿತ್ಯದ ವ್ಯಾಪ್ತಿಯಲ್ಲಿ ಪರಿಗಣಿತವಾಗುವುದರಿಂದ ರಚನೆಗಳಲ್ಲೂ ವೈವಿಧ್ಯತೆ ಇರಬೇಕಾದದ್ದು ಸಹಜ. ಆದರೆ ಯಾವ ವಯಸ್ಸಿನ ಮಕ್ಕಳಿಗೆ ಬರೆದದ್ದೇ ಇರಲಿ; ಗುಣಮಟ್ಟದ್ದಾಗಿದ್ದರೆ ಅದು ದೊಡ್ಡವರೂ ಓದಿ ಖುಷಿಪಡುವಂತಿರುತ್ತದೆ! ಹೀಗಾಗಿ ಮಕ್ಕಳ ಸಾಹಿತ್ಯ ಎಂದು ಪ್ರತ್ಯೇಕಿಸುವುದು ಸಾಹಿತ್ಯದ `ಪ್ರಕಾರ’ ಗುರುತಿಸುವುದಕ್ಕಾಗಿ, ವಿಮರ್ಶೆಯ ಸವಲತ್ತಿಗಾಗಿ ಮತ್ತೂ ಹೆಚ್ಚೆಂದರೆ ಪ್ರಶಸ್ತಿಗಳ ಪ್ರವೇಶಾತಿಗಾಗಿ ಅಷ್ಟೇ. ಪೂರ್ಣಚಂದ್ರ ತೇಜಸ್ವಿ ಅವರ ವಿಸ್ಮಯ, ದೇಶ-ವಿದೇಶ ಸರಣಿಯ ಪುಸ್ತಕಗಳು, ಅಮೇರಿಕಾದ ಲಾರಇಂಗಲ್ಸ್ ವೈಲ್ಡರ್ ಬರೆದ ಕಾದಂಬರಿ ಸರಣಿ ಇಂತಹ ಸಾಹಿತ್ಯವನ್ನು ಗಮನಿಸಿದರೆ ದೊಡ್ಡವರು-ಮಕ್ಕಳು ಎಂಬ ಭೇದವಿಲ್ಲದೆ ಓದುವಿಕೆ ಇರುತ್ತದೆ ಎಂಬುದು ನಮ್ಮ ಗಮನಕ್ಕೆ ಬರುತ್ತದೆ. ಮಕ್ಕಳ ಸಾಹಿತ್ಯವೆಂದರೆ ಬರೀ ಪಂಚತಂತ್ರದ ಕತೆಗಳು, ಪ್ರಾಸಪದ್ಯಗಳು, ಕಥನಕವನಗಳು, ರಾಜರಾಣಿಯ ಕತೆಗಳು, ಪೌರಾಣಿಕ ವಿಷಯಗಳು ಅಲ್ಲ; ಇದರಾಚೆಗೆ ಅನೇಕ ವಸ್ತು-ವಿಷಯ-ನಿರೂಪಣೆಯ ಮಾಧ್ಯಮವಿದೆ ಎಂಬುದನ್ನು ಅರ್ಥೈಸಿಕೊಳ್ಳಬೇಕಾಗಿದೆ. ಅಳಿಲು, ಬೆಕ್ಕು, ನಾಯಿ, ಇರುವೆ, ಗೂಬೆ, ಬಸವನ ಹುಳು, ಇಲಿ, ಹೂವು, ಗಿಡಮರಗಳು, ಬದಲಾದ ಈ ಕಾಲದ ಮಗುವೊಂದರ ಖುಷಿ-ಸಂಕಷ್ಟಗಳು ಹೀಗೆ… ವಿಫುಲ ವಿಷಯಗಳಿವೆ. ಲಲಿತ ಪ್ರಬಂಧ, ಕಾದಂಬರಿ, ಪುಟಾಣಿಕತೆ, ಅನುಭವಕಥನ, ಫ್ಯಾಂಟಸಿಗಳು ಹೀಗೆ ವಿವಿಧ ಅಭಿವ್ಯಕ್ತಿಯ ಪ್ರಕಾರಗಳಿವೆ…..  ಈ ಸಂದರ್ಭದಲ್ಲಿ ಒಂದು ಮುಖ್ಯ ಪ್ರಶ್ನೆಯನ್ನು ಎತ್ತಿ ಈ ಬರಹವನ್ನು ಮುಗಿಸುತ್ತೇನೆ. `ಮಕ್ಕಳ ಸಾಹಿತ್ಯ’ ಒಂದು ಸಾಹಿತ್ಯ ಪ್ರಕಾರವಲ್ಲವೆ? ಸಣ್ಣಕತೆ, ಕವಿತೆ, ನಾಟಕ, ಕಾದಂಬರಿ, ಆತ್ಮಕಥೆ, ಜೀವನಚರಿತ್ರೆ, ವಿಚಾರಸಾಹಿತ್ಯ, ಪ್ರಬಂಧ ಹೀಗೆ ಇವೆಲ್ಲವೂ ವಿಮರ್ಶೆಗೆ, ಓದಿಗೆ, ಮರುಓದಿಗೆ ಒಳಪಡುತ್ತಿರುವ ಈ ಹೊತ್ತಿನಲ್ಲಿ ಮಕ್ಕಳ ಸಾಹಿತ್ಯವನ್ನೇಕೆ ಮೂಲೆಗುಂಪಾಗಿಸಲಾಗಿದೆ? ಕನಿಷ್ಠ ಒಂದು ಓದು, ವಿಮರ್ಶೆ, ಒಂದು ಗಮನಿಸುವಿಕೆಯನ್ನಾದರೂ ಈ ಸಾಹಿತ್ಯ ಕೃತಿಗಳು ಬಯಸಬಾರದೇ? ಕನಿಷ್ಠ ಒಂದು ಮೆಚ್ಚುಗೆಯ ಮಾತಾದರೂ ಮಕ್ಕಳ ಸಾಹಿತಿಗೆ ದೊರಕಬಾರದೆ? ಪ್ರೌಢ ಸಾಹಿತ್ಯದ ಮನ್ನಣೆಯ ಅಬ್ಬರದಲ್ಲಿ ನಿರ್ಲಕ್ಷಿತ ಮಕ್ಕಳ ಸಾಹಿತ್ಯ ಕೊಚ್ಚಿಹೋಗಬೇಕೆ? ಇದು ಖಂಡಿತಾ ಸರಿಯಲ್ಲ. ಪ್ರಜ್ಞಾವಂತ ಓದುಗರು, ವಿಮರ್ಶಕರು ಈ ಕುರಿತು ಗಮನ ಹರಿಸಲೇಬೇಕು. (ಪ್ರೋತ್ಸಾಹದದೃಷ್ಟಿಯಿಂದ ಸಾಹಿತ್ಯಅಕಾಡಮಿಯಿಂದ ತೊಡಗಿಇತರ ಕೆಲವು ಸಂಸ್ಥೆಗಳು ಕೊಡಮಾಡುವ ಕೆಲ ಪ್ರಶಸ್ತಿ, ಪುರಸ್ಕಾರಗಳು ಮಕ್ಕಳ ಸಾಹಿತ್ಯಕ್ಕಿವೆ ಎಂದು ಇಲ್ಲಿ ನೆನಪಿಸಿಕೊಳ್ಳುವೆ). ಮಕ್ಕಳ ಸಾಹಿತ್ಯ ಅಲಕ್ಷಿತವಾದರೆ ನಮ್ಮ ಮಕ್ಕಳು ಅಲಕ್ಷಿತವಾದಂತೆ, ಅವರು ಮೂಲೆಗುಂಪಾದರೆ ಇಡೀ ಸಮಾಜವೇ ಮೂಲೆಗುಂಪಾದಂತೆ ಎಂಬ ಎಚ್ಚರಿಕೆ ನಮ್ಮಲ್ಲಿರಬೇಕಾದದ್ದು ಅತ್ಯಗತ್ಯ.  ಪ್ರೌಢ ಸಾಹಿತ್ಯ ಮತ್ತು ಮಕ್ಕಳ ಸಾಹಿತ್ಯ ಎರಡರಲ್ಲೂ ಗಂಭೀರವಾಗಿ ತೊಡಗಿಕೊಂಡು ಉತ್ತಮ ಕೃತಿಗಳನ್ನು ನೀಡುತ್ತಿರುವ ಬರಹಗಾರರ ಸಂಖ್ಯೆ ಹೆಚ್ಚುತ್ತಿದೆ ಎಂಬುದು ಸಂತಸದ ಸಂಗತಿ. ಹಾಗೇ ಪುಸ್ತಕವನ್ನು ಕೊಂಡು ಓದುವ ಸಂಸ್ಕೃತಿಯೂ ಬೆಳೆಯಲಿ. ಮಕ್ಕಳ ಸಾಹಿತ್ಯ ಕೃತಿಗಳನ್ನು ಮಕ್ಕಳು, ದೊಡ್ಡವರು ಸಮಾನವಾಗಿ ಓದಬಲ್ಲ ಪೂರಕ ವಾತಾವರಣ ಸೃಷ್ಟಿಯಾಗಲಿ ಎನ್ನುವುದು ಪ್ರಜ್ಞಾವಂತರೆಲ್ಲರ ಆಶಯ. **************************************************

ಅಲಕ್ಷ್ಯಕ್ಕೊಳಗಾಗಿರುವ ಮಕ್ಕಳ ಸಾಹಿತ್ಯ Read Post »

You cannot copy content of this page

Scroll to Top