ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅನುವಾದ, ಕಥಾಗುಚ್ಛ

ಕಥಾಯಾನ

ಒಂದು ವಿಶೇಷ ದಿನ ಮಲಯಾಳಂ ಮೂಲ: ಪೂನತಿಲ್ ಕುಞಬ್ದುಳ್ಳ ಕನ್ನಡಕ್ಕೆ ಚೇತನಾ ಕುಂಬ್ಳೆ ಹಲವು ವರ್ಷಗಳ ನಂತರ, ಅವನು ಚಂದ್ರಿಕಳ ಮನೆಗೆ ಬಂದ. ಕೇವಲ ಚಂದ್ರ ಎಂಬ ಹೆಸರು ಅವನಿಗಿದ್ದದ್ದರಿಂದ ಮಾತ್ರ ಚಂದ್ರಿಕ ಆತನನ್ನು ಧ್ಯಾನಿಸಿದ್ದಲ್ಲ.         ಅವನು ಸಿ.ಸಿ ಚಂದ್ರ. ಚಂದ್ರನ್ ಆಂಡ್ ಬ್ರದರ್ಸ್ ನ ಮ್ಯಾನೇಜಿಂಗ್ ಪಾರ್ಟ್ನರ್ ಆಗಿದ್ದ. ಅವರಿಗೆ ನೂರಾರು ಟ್ರಕ್ಕುಗಳೂ, ಹತ್ತಿ ಬಟ್ಟೆ ನೇಯುವ ಮೂರು ದೊಡ್ಡ ಮಿಲ್ಲುಗಳು ತಮಿಳುನಾಡಿನಲ್ಲಿವೆ. ವಿವಿಧ ವ್ಯಾಪಾರ ಸಂಘಟನೆಗಳ ನಾಯಕರನ್ನು ವಶೀಕರಿಸುವ ಮಾದಕ ವಸ್ತುಗಳಿವೆ. ಒಂದು ರಸತಂತ್ರ ಶಾಲೆ, ಎಲ್ಲೆಡೆಯೂ ವಿಷವನ್ನು ಬಿತ್ತರಿಸುವ ಒಂದು ಕಾರ್ಖಾನೆಯಿದೆ.    ಆಕೆಗೆ ಆತನಿಗಿಂತ ದೊಡ್ಡದಾದ ಸ್ನೇಹಿತರ ಬಳಗವೊಂದಿತ್ತು. ಅಲ್ಲಿ ಕವಿಗಳು, ಸಿನಿಮಾ ಹಾಡನ್ನು ಬರೆಯುವವರು,ಪಾಪದ ನಿರ್ಮಾಪಕರು, ನಟರು, ಚಿತ್ರಕಾರರು, ಎಂ.ಪಿ. ಡೆಪ್ಯೂಟಿ ಮಂತ್ರಿಗಳು, ಸೆಕ್ರೆಟರಿ, ಮಂತ್ರಿಗಳು ಹೀಗೆ ಎಲ್ಲ ವರ್ಗದವರೂ ಆಕೆಗೆ ಪರಿಚಿತರಾಗಿದ್ದರು.    ಆದರೂ ಚಂದ್ರಿಕಳಿಗೆ ಚಂದ್ರನ ಮೇಲೆ ಪ್ರೀತಿ. ಹಾಗೆ ಚಂದ್ರ ಅಕೆಯ ಮನೆಗೆ ಬಂದದ್ದು. ಕಾರಿನಿಂದಿಳಿದ ಚಂದ್ರ ಚಂದ್ರಿಕಳನ್ನು ನೋಡಿ ನಕ್ಕ. ಚಂದ್ರಿಕ ಆತನನ್ನು ಮನೆಯೊಳಗೆ ಆಹ್ವಾನಿಸಿದಳು. ಚಂದ್ರ ಮನೆಗೆ ಬಂದ ಸಂತೋಷಷದಲ್ಲಿ ಕ್ಷಣ ಹೊತ್ತು ಏನು ಹೇಳಬೇಕೆಂದೋ ಏನು ಮಾಡಬೇಕೆಂದೋ ಅವಳಿಗೆ ತೋಚದಾಯಿತು. ಆಕೆಯ ಬಹುದಿನಗಳ ಆಸೆಯೊಂದು ಈಡೇರಿದ ದಿನವಲ್ಲವೇ ಇಂದು.       ಕಾಲೇಜಿನಲ್ಲಿ ಕಲಿಯುತ್ತಿರುವಾಗಲೇ  ಚಂದ್ರಿಕಳ ಆರಾಧನಾ ಮೂರ್ತಿಯಾಗಿದ್ದ ಚಂದ್ರ. ಅಕೆಗೆ ಇತರ ಅನೇಕ ಸ್ನೆಹಿತರಿದ್ದರೂ, ವೈಟ್ ಲಿಫ್ಟರಾಗಿ ಮಾತ್ರ ಪ್ರಸಿದ್ಧನಾಗಿದ್ದ ಚಂದ್ರನನ್ನು  ಆರಾಧಿಸುತ್ತಿದ್ದಳು. ಚಂದ್ರನು ಅವಳೆದುರಿಗೆ ಬಂದಾಗಲೆಲ್ಲ ಆಕೆಗೆ ಗ್ರಹಣ ಬಡಿದಂತಾಗುತ್ತಿತ್ತು. ಮೂರು ವರ್ಷದೊಳಗೆ ಕಾಲೇಜಿನಾವರಣದ ವಿವಿಧ ಭಾಗಗಳಲ್ಲಿ ಅವರಿಬ್ಬರೂ ಭೇಟಿಯಾಗುತ್ತಿದ್ದರು. ಆದರೆ ಚಂದ್ರಿಕ ಚಂದ್ರನನ್ನು ನೋಡುತ್ತಿದ್ದಳಲ್ಲದೆ ಚಂದ್ರನು ಆಕೆಯನ್ನು ನೋಡುತ್ತಲೂ ಇರಲಿಲ್ಲ , ಗಮನಿಸುತ್ತಲೂ ಇರಲಿಲ್ಲ.          ಹಲವು ಹುಡುಗರು ಚಂದ್ರಿಕಳಿಗೆ ಪ್ರೇಮ ಪತ್ರ ಬರೆಯುತ್ತಿದ್ದ ಕಾಲ ಅದು. ಆದರೆ, ಚಂದ್ರಿಕ ಚಂದ್ರನ ಪ್ರೇಮ ಪತ್ರಕ್ಕಾಗಿ ಕಾಯುತ್ತಿದ್ದಳು. ಹಾಗೆ ಅವಳು ಚಂದ್ರನಿಗೆ ಅದೆಷ್ಟೋ ಪ್ರೇಮಪತ್ರಗಳನ್ನು ಬರೆದು ಕಳಿಸಿ ಉತ್ತರಕ್ಕಾಗಿ ಕಾದುಕುಳಿತರೂ ಅವನಿಂದ ಒಂದಕ್ಕೂ ಮರುಪತ್ರ ಬರಲೇ ಇಲ್ಲ.          ಕಾಲೇಜು ಜೀವನ ಮುಗಿಸಿ ಅವರಿಬ್ಬರೂ ತಮ್ಮದೇ ದಾರಿಯಲ್ಲಿ ಹೆಜ್ಜೆಹಾಕಿದರು. ಚಂದ್ರಿಕ ತನ್ನ ಕುಲಕಸುಬಿಗೆ ಸೇರಿದರೆ, ಚಂದ್ರ ತಮ್ಮ ಪೂರ್ವಜರು ನಡೆಸಿಕೊಂಡು ಬರುತ್ತಿರುವ ಕಂಪೆನಿಯಲ್ಲಿ ಸೇರಿಕೊಂಡನು.   ಚಂದ್ರನು ಕಂಪೆನಿಯ ಮ್ಯಾನೇಜಿಂಗ್ ಪಾರ್ಟ್ನರಾದಾಗ ಕ್ರಮೇಣ ಶ್ರೀಮಂತರಾದರು. ಬೇಕಾದಷ್ಟು ಆಸ್ತಿ ಪಾಸ್ತಿಗಳು ಕೈಸೇರಿದವು. ಚಂದ್ರಿಕ ಮನೆಗೆ ಬಂದಾಗ ಬಂಧುಬಳಗದವರ ಘನತೆ ಹೆಚ್ಚಿತು. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿತ ಚಂದ್ರಿಕಳಿಗೆ ಎಲ್ಲಾ ರೀತಿಯ ಜವಾಬ್ದಾರಿಗಳನ್ನು ಹೊರಲು ಸಾಮರ್ಥಳಾಗಿದ್ದಳು. ಆದ್ದರಿಂದಲೇ ಆಕೆಯ ಅಮ್ಮ ಎಲ್ಲಾ ಜವಾಬ್ದಾರಿಗಳನ್ನೂ ಚಂದ್ರಿಕಳ ಹೆಗಲ ಮೇಲೆ ಹೊರಿಸಿ ತಾವು ನಿಶ್ಚಿಂತೆಯಿಂದ ವಿಶ್ರಾಂತಿ ಜೀವನಕ್ಕೆ ಕಾಲಿರಿಸಿದರು.    ಆಂಗ್ಲ ಭಾಷೆಯ ಪತ್ರಿಕೆಗಳನ್ನು ಓದುವ ಚಂದ್ರಿಕ ಪ್ರತಿದಿನ ಮೊದಲು ಸ್ಪೋರ್ಟ್ಸ್ ಕಾಲಂ ನೋಡುವಳು. ಕಾರಣ, ವೈಟ್ ಲಿಫ್ಟಿಂಗಲ್ಲಿ ಚಂದ್ರನು ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಿದ್ದ ಕಾಲ ಅದಾಗಿತ್ತು.         ಹೀಗಿರುವಾಗ  ಒಂದುದಿನ ಚಂದ್ರನ ಕಾರು ಅಪಘಾತಕ್ಕೊಳಗಾಯಿತು. ಚಂದ್ರನು ಅಪ್ರಜ್ಞಾವಸ್ಥೆಯಲ್ಲಿ ತುಂಬ ದಿನ ಆಸ್ಪತ್ರೆಯಲ್ಲಿದ್ದ. ಪಕ್ಕದ ಕೋಣೆಯಲ್ಲೇ ಚಂದ್ರಿಕಳೂ ಅಪ್ರಜ್ಞಾವಸ್ಥೆಯಲ್ಲಿದ್ದಳು. ಪ್ರಜ್ಞೆ ಬಂದಾಗಷ್ಟೇ ಅವರಿಗೆ ತಿಳಿದದ್ದು ತಮ್ಮದೇ ಕಾರುಗಳು ಪರಸ್ಪರ ಢಿಕ್ಕಿ ಹೊಡೆದದ್ದೆಂದು.    ಮೊದಲು ಆಸ್ಪತ್ರೆ ಬಿಟ್ಟದ್ದು ಚಂದ್ರ. ಆತ ಚಂದ್ರಿಕಳನ್ನು ನೋಡಲು ಬಂದ. ಚಂದ್ರಿಕ ಗುಣಮುಖಳಾಗಿದ್ದರೂ ಒಂದು ವಾರ ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ತಿಳಿಸಿದ್ದರು. ಚಂದ್ರ ಅವತ್ತು ಮೊದಲ ಬಾರಿ ಚಂದ್ರಿಕಳನ್ನು ನೋಡಿದ. ಪರಸ್ಪರ ಕ್ಷೇಮಾನ್ವೇಷಣೆಯ ನಂತರ ಚಂದ್ರ ಕೇಳಿದ”ನಿಮಗಾಗಿ ನಾನೇನಾದರೂ ಮಾಡಬೇಕೇ?” ಚಂದ್ರಿಕಳು ಆತನನ್ನು ಮನೆಗೆ ಆಹ್ವಾನಿಸಲು ಆತ ಒಪ್ಪಿಕೊಂಡ.        ಹಾಗೆ ಚಂದ್ರನು ಚಂದ್ರಿಕಳ ಮನೆಗೆ ತಲುಪಿದ್ದು. ಎಲ್ಲವೂ ಒಂದು ಕಾರು ಅಪಘಾತ ತಂದಿಟ್ಟ ಭಾಗ್ಯ.   ಕುಡಿಯಲು ಪಾನೀಯ , ಕಲ್ಲುಸಕ್ಕರೆ ಸೇರಿಸಿದ ಹಾಲು, ಬದಾಮ್, ಮೊಸರು, ಬೇಯಿಸಿದ ಗೋಧಿಕಾಳು, ಕಾಯಿಸಿದ ಜೋಳ, ಸೂಪು, ದೊಡ್ಡ ತಟ್ಪೆಯಲ್ಲಿ ನೂಡಲ್ಸ್, ಎಲ್ಲವೂ ಊಟದ ಮೇಜನ್ನು ಅಲಂಕರಿಸಿದ್ದವು.   ಅಲ್ಲಿ ಗಾಢವಾದ ಮೌನವೊಂದಾವರಿಸಿತ್ತು. ತಲೆ ವಸ್ತ್ರಧರಿಸಿದ ಕೆಲಸದಾಳು ಒಂದು ಮೂಲೆಯಲ್ಲಿ ಅಪರಾಧಿಯಂತೆ ನಿಂತಿದ್ದನು. ಅವರಿಬ್ಬರೂ ಊಟಕ್ಕೆ ಬಂದು ಕುಳಿತರು. ಚಂದ್ರನು ಪಾನೀಯವನ್ನೂ ಚಂದ್ರಿಕ ಬೇಯಿಸಿದ ಗೋಧಿಕಾಳನ್ನೂ ತಿಂದು ಟಿಷ್ಯೂ ಪೇಪರಲ್ಲಿ ಕೈ ಒರೆಸುತ್ತಾ ಇಬ್ಬರೂ ಮಲಗುವ ಕೊಠಡಿಗೆ ಹೋದರು. ಇಬ್ಬರೂ  ಮಂಚದಲ್ಲಿ ಅಕ್ಕ ಪಕ್ಕದಲ್ಲಿ ಕುಳಿತು ಮಾತನಾಡಲು ತೊಡಗಿದರು. ” ನಿನಗೇನು ಬೇಕು” ಚಂದ್ರನು ಕೇಳಲು “ಕೇಳಿದ್ದೆಲ್ಲ ಕೊಡುತ್ತೀಯಾ?” ಎಂದು ಆಕೆ ಮರುಪ್ರಶ್ನೆ ಎಸೆದಳು. ಆತ ಕೊಡುವೆನೆಂದು ಒಪ್ಪಿದಾಗ ಚಂದ್ರಿಕ “ನೀವು ವೈಟ್ ಲಿಫ್ಟರಲ್ಲವೆ ಆದ್ದರಿಂದ ನನ್ನನ್ನು ನೀವು ಎತ್ತಬೇಕು. ನಿಮ್ಮ ಕೈಗಳಲ್ಲಿ ಒಂದು ಪುಟ್ಟ ಹಕ್ಕಿಯಂತೆ ನಾನು ಕುಳಿತುಕೊಳ್ಳಬೇಕೆಂಬ ಆಸೆಯಿದೆ” ಎಂದಳು. ಅದಕ್ಕೆ ಚಂದ್ರನು, “ಆದರೆ, ಇಲ್ಲಿ ಸ್ಥಳ ಸಾಕಾಗುವುದಿಲ್ಲ. ನಾವು ಕಡಲ ತೀರಕ್ಕೆ ಹೋಗುವ , ಅಲ್ಲಿ ನಾನು ನಿನ್ನನ್ನು ಮೇಲಕ್ಕೆತ್ತುತ್ತೇನೆ ಅದಾಗಿರಬಹುದು ನನ್ನ ಕೊನೆಯ ವೈಟ್ ಲಿಫ್ಟಿಂಗ್.” ಎಂದೊಡನೆ ಚಂದ್ರಿಕ ಒಪ್ಪಿದಳು.     ಆಕೆ ಬೇಗ ಬಟ್ಪೆ ಬದಲಾಯಿಸಿದಳು. ಖದರಿನ ಬಟ್ಟೆ, ಪಾದರಕ್ಷೆ ಧರಿಸಿದಳು. ಅಮೇರಿಕದಿಂದ ಗೆಳೆಯ ಕೊಟ್ಟು ಕಳುಹಿಸಿದ ಒಂದು ನೀಳವಾದ ಸ್ಕಾರ್ಫ್ ಇತ್ತು. ಮರಣಿಸಿದ ಆತನ ನೆನಪಿಗಾಗಿ ಅವಳು ಯಾವಾಗಲೂ ಜಾಗ್ರತೆಯಿಂದ ಅದನ್ನು ತೆಗೆದಿರಿಸಿದ್ದಳು.   ಅವರಿಬ್ಬರೂ ಕಾರು ಹತ್ತಿ ಹೊರಟರು. ಕಡಲ ತೀರದಲ್ಲಿ ಜನ ಕಡಿಮೆಯಿದ್ದ ಸ್ಥಳಕ್ಕೆ ಕಾರು ವೇಗವಾಗಿ ಓಡುತ್ತಿತ್ತು. ಚಂದ್ರಿಕ  “ಚಂದ್ರ ಒಂದು ಹಾಡು ಹಾಡುತ್ತೀಯಾ?” ಕೇಳಿದಳು. ಚಂದ್ರನು ಹಾಡಲು ತೊಡಗಿದ. I tried to sleep to kill the pain When I wake it’s still the same Cause am living in this world you left behind I just like a broken piece of glass You have swept me aside to pass Leaving shetterd dreams in my heart to stay I am  just a fool to sit and cry Washing years before I die In this lonely world This world you left behind ಅವಳು ಹಾಡಿನ ಗುಂಗಿನಲ್ಲಿದ್ದಳು. ಓಡುತ್ತಿರುವ ಕಾರಿನಿಂದ ಅವಳ ಸ್ಕಾರ್ಫ್ ನ ತುದಿಯೊಂದು ಹೊರಗೆ ಗಾಳಿಗೆ ಹಾರುತ್ತಿತ್ತು. ಹಾರುತ್ತಾ ಹಾರುತ್ತಾ ಅದು ಹಿಂದಿನ ಚಕ್ರಕ್ಕೆ ಸಿಕ್ಕಿಕೊಂಡರೆ, ಮತ್ತೊಂದು ತುದಿ ಅವಳ ಕುತ್ತಿಗೆಯನ್ನು ಬಂಧಿಸಿತು. ಆಕಗೆ ಉಸಿರುಗಟ್ಟಿದಾಗಲೇ ಪರಿಸರ ಪ್ರಜ್ಞೆ ಬಂದದ್ದು. ಕೈಕಾಲುಗಳನ್ನು ಅಲುಗಾಡಿಸಲು ಅವಳಿಂದ ಸಾಧ್ಯವಾಗಲಿಲ್ಲ. “ಚಂದ್ರಾ… ರಕ್ಷಿಸು” ಎಂದರೂ ಆಕೆಯ ಕಂಠದಿಂದ ಸ್ವರ  ಹೊರಬರಲೇ ಇಲ್ಲ. ಕ್ಷಣದೊಳಗೆ ಆಕೆಯ ಜೀವ ಸಂಗೀತ ಸಾಗರದಲ್ಲಿ ವಿಲೀನವಾಯಿತು. ಇದನ್ನೊಂದೂ ತಿಳಿಯದೆ ಆಗಲೂ ಚಂದ್ರ ಹಾಡುತ್ತಲೇ ಇದ್ದ. I am  just a fool to sit and cry Washing years before I die In this lonely world This world you left behind ……

ಕಥಾಯಾನ Read Post »

ಕಥಾಗುಚ್ಛ

ಕಥಾಯಾನ

  ಸರಸ್ವತಿ ಜಿ. ಹರೀಶ್ ಬೇದ್ರೆ ಸರಸ್ವತಿ ಮುಂಜಾನೆ ಬೇಗನೇ ಎದ್ದು ಗಂಡ ಮಕ್ಕಳಿಗೆ ಕಾಫಿ ತಿಂಡಿ ಮಾಡಿಕೊಟ್ಟು  ಅಂಗಡಿಯ ಬಳಿ ಬರುವ ಹೊತ್ತಿಗೆ ಎಂಟು ಗಂಟೆಯಾಗಿತ್ತು. ಆಗಲೇ  ಸಾಮಾಜಿಕ ಅಂತರ ಬಳಸಿ ನಿಂತಿದ್ದ ಕ್ಯೂ ಹೆಚ್ಚುಕಮ್ಮಿ ಅರ್ಧ ಕಿ.ಮೀ.ಗಿಂತ ಉದ್ದವಿತ್ತು. ಅಂಗಡಿ ತೆರೆಯಲು ಇನ್ನೂ ಒಂದು ಗಂಟೆ ಬಾಕಿ ಇತ್ತು. ಅಯ್ಯೋ ಏನಪ್ಪಾ ಮಾಡುವುದು ಎಂದು ಗೊಣಗುತ್ತಲೇ ಸರತಿಯಲ್ಲಿ ನಿಂತಳು. ಕ್ಷಣಕ್ಷಣಕ್ಕೂ ಕ್ಯೂ ಹನುಮಂತನ ಬಾಲದಂತೆ ಬೆಳೆಯುತ್ತಲೇ ಹೋಯಿತು. ಜನರನ್ನು ನಿಯಂತ್ರಿಸಲು ಒಂದಿಬ್ಬರು ಪೋಲಿಸರು ಬಂದರು. ಅವರು ಹಿಂದೆ ಮುಂದೆ ಓಡಾಡುವಾಗ ಸರಸ್ವತಿಯನ್ನು ನೋಡಿ,  ಆಶ್ಚರ್ಯವನ್ನು ತಡೆದುಕೊಳ್ಳಲಾರದೆ ನಿಮಗೂ ಬೇಕಾ ಎಂದು ಕೇಳಿದರು. ಇವಳು ಬೇಕು ಎನ್ನುವಂತೆ ತಲೆ ಆಡಿಸಿದಳು. ಸರಿ ಸರಿ ಮೊದಲು ಮುಖಕ್ಕೆ ಮಾಸ್ಕ್ ಹಾಕಿಕೊಳ್ಳಿ ಎಂದು, ಇವರಿಗೆ ಯಾವಾಗ ಏನು ಸಿಗುತ್ತೆ ಗೊತ್ತು, ಹೊರಗಡೆ ಹೇಗೆ ಬರಬೇಕು ಗೊತ್ತಿಲ್ಲ ಮುಂತಾಗಿ ಹೇಳುತ್ತಾ ಮುಂದೆ ಸಾಗಿದರು.  ಪೋಲಿಸರಷ್ಟೇ ಅಲ್ಲದೆ ಆ ದಾರಿಯಲ್ಲಿ ಹೋಗಿ ಬರುವವರು ಸರಸ್ವತಿಯನ್ನು ವಿಚಿತ್ರವಾಗಿ ನೋಡುತ್ತಾ, ಅವಳು ಬಗ್ಗೆಯೇ ಹಗುರವಾಗಿ ಮಾತನಾಡುತ್ತಾ ಸಾಗುತ್ತಿದ್ದರು. ಇದನ್ನು ಗಮನಿಸಿದರೂ ಸರಸ್ವತಿ ಕ್ಯೂನಲ್ಲಿ ಅಂಗಡಿ ತೆರೆಯುವುದನ್ನೇ ಕಾಯುತ್ತಾ ನಿಂತಳು. ಒಂಬತ್ತು ಗಂಟೆಗೆ ಹತ್ತು ನಿಮಿಷ ಇರುವಾಗಲೇ ಅಂಗಡಿ ಬಾಗಿಲು ತೆರೆಯಿತು. ಅಲ್ಲಿಯವರೆಗೆ ಸಂಯಮದಿಂದ ನಿಂತಿದ್ದ ಜನ ಸಾಮಾಜಿಕ ಅಂತರ ಮರೆತು ನುಗ್ಗಿದರು.  ಅವರಂತೆ ನುಗ್ಗಲು ಸಾಧ್ಯವಾಗದೆ, ಏನು ಮಾಡಬೇಕೆಂದು ತಿಳಿಯದೆ ಅಂಗಡಿ ಹತ್ತಿರದಲ್ಲೇ ಕಾಯುತ್ತಾ ನಿಂತಳು. ಜನರ ನುಗ್ಗಾಟ ಪೋಲಿಸರ ಹಿಡಿತಕ್ಕೂ ಬರಲಿಲ್ಲ.  ಇವಳು ಅಲ್ಲೇ ಹಾಗೆ ಕಾಯುತ್ತಲೇ ಇದ್ದಳು. ಇದನ್ನು ಗಮನಿಸಿದ ಪೋಲಿಸರು, ನೀವು ಇಲ್ಲಿ ನಿಂತಿದ್ದರೆ ನಿಂತೇ ಇರುತ್ತೀರಿ, ಏನು ಬೇಕು ಹೇಳಿ ಹಣಕೊಡಿ ತಂದುಕೊಡುತ್ತೇವೆ ಎಂದರು.  ಸರಸ್ವತಿ ಹೇಳಿ ಹಣ ಕೊಟ್ಟಳು. ಪೋಲಿಸಿನವರು ತಂದುಕೊಟ್ಟಿದ್ದನ್ನು ಹಿಡಿದು ಮನೆಗೆ ಬಂದವಳೇ , ಮನೆಯಲ್ಲೇ ಆಸೆಯಿಂದ ದಾರಿ ಕಾಯುತ್ತಿದ್ದ ಗಂಡನ ಮುಂದೆ ಇಟ್ಟಳು. ಒಂದುವರೆ ತಿಂಗಳಿಂದ ಒಂದು ಹನಿಯೂ ಸಿಗದೆ ಸತ್ತೇ ಹೋಗುವವನಂತೆ ಆಗಿದ್ದ ಅವನ ಮುಖದಲ್ಲಿ ಜೀವಕಳೆ ಮೂಡಿತು. ಇದನ್ನು ಕಂಡ ಸರಸ್ವತಿಗೆ, ಕ್ಯೂನಲ್ಲಿ ನಿಂತಾಗ ಇವಳನ್ನು ಅಸಹ್ಯವಾಗಿ ನೋಡಿ, ಮಾತನಾಡಿದ ಜನರ ಎಲ್ಲಾ ವಿಚಾರಗಳು ಮರೆತು ಹೋಯಿತು. **********

ಕಥಾಯಾನ Read Post »

ಕಥಾಗುಚ್ಛ

ಮಕ್ಕಳ ಕಥೆ

“ಕತ್ತೆಗೊಂದು ಕಾಲ”  ಅದು ಗಿರಿಕಂದರ ಪರ್ವತ ಶ್ರೇಣಿಗಳ ನಾಡು. ಅಲ್ಲಿ ಜಯದೇವ ಅರಸನು ರಾಜ್ಯ ಆಳುತಿದ್ದನು. ಆತ ತನ್ನ ಆಸ್ಥಾನದಲ್ಲಿ ಕುದುರೆಗಳ ಜೊತೆಗೆ ಕತ್ತೆಗಳನ್ನು ಸಾಕಿದ್ದನು. ಎಲ್ಲ ರಾಜರು ಕುದುರೆ ಸಾಕುತಿದ್ದರೆ, ಈತ ಮಾತ್ರ ಎರಡನ್ನು ಸಾಕುತಿದ್ದನು. ಈ ಮಾತು ರಾಜ್ಯದ ಎಲ್ಲ ಜನರಿಗೆ ಅಷ್ಟೆ ಅಲ್ಲ, ಕುದುರೆಗಳಿಗೂ ಆಶ್ಚರ್ಯವಾಗಿತ್ತು.                ಒಂದು ದಿನ ಸೇವಕರು ಕುದುರೆ ಮತ್ತು ಕತ್ತೆ ಒಟ್ಟಿಗೆ ಬಯಲಲ್ಲಿ ಮೈಯಲು ಬಿಟ್ಟರು. ಆಗ ಮೈಯುತ್ತಾ ಕುದುರೆ ಒಮ್ಮೇಲೆ ಹುಂಕರಿಸುತ್ತಾ ಕತ್ತೆಗೆ, “ಏ.. ಕತ್ತೆ, ನಿನ್ನದೇನೆ ಇಲ್ಲಿ ಕೆಲಸ..?” ಎಂದು ತೆಗಳಿ ನಕ್ಕಿತು. ಆಗ ಕತ್ತೆ, “ಕುದುರೆಯಣ್ಣಾ, ನಾವು  ಏನಾದರೂ ರಾಜನಿಗೆ ಉಪಯೋಗ ಬರುತ್ತಿರಬಹುದು, ಆ ಕಾರಣವೇ ಆತ ನಮಗೆ ಸಾಕಿರಬೇಕಲ್ಲ..!” ಎಂದು ಹೇಳಿ  ಸುಮ್ಮನೆ ಹುಲ್ಲು ತಿನ್ನುವದು. ಆದರೆ ಕುದುರೆ ಸುಮ್ಮನಾಗದೆ, “ ಏ.. ಮುರ್ಖ ಕತ್ತೆ, ನಿನಗೆ ತಿನ್ನುವದನ್ನು ಬಿಟ್ಟು ಮತ್ತೇನು ಬರುತ್ತೆ ಹೇಳು. ನೋಡು, ಯುದ್ಧ ಮಾಡಲು ನಾವು ಹೋಗುತ್ತೇವೆ, ಪ್ರಯಾಣ ನಮ್ಮಿಂದಲೆ, ಓಟದ ಸ್ಪರ್ಧೆಯಾಗಲಿ ಹಬ್ಬ ಉತ್ಸವ ಆಗಲಿ ನಮ್ಮನ್ನೆ ಬಳಿಸುವರು. ನಿನ್ನ ಒಂದಾದರೂ ಉಪಯೋಗ ಹೇಳು ನೊಡೋಣ..” ಎಂದು ಮತ್ತೆ ಕೆಣಕಿತು. ಆಗ ಅದು, “ಕುದುರೆಯಣ್ಣಾ ನೀನು ಜಾಣ ಎಂಬುದು ನನಗೆ ಗೊತ್ತು. ಆದರೆ ಪ್ರತಿಯೊಂದು ಪ್ರಾಣಿಗಳು ಹುಟ್ಟಿದ್ದು, ಏನಾದರೂ ಮಾಡಲಿಕ್ಕೆ. ನಮಗೂ ಒಂದು ಕಾಲ ಬರುತ್ತೆ..” ಎಂದು ಹೇಳಿ ಕತ್ತೆ ದೊಡ್ಡಿಗೆ, ಕುದುರೆ ಲಾಯಕ್ಕೆ ಹೋದವು.              ಕೆಲ ದಿನಗಳ ನಂತರ ವೈರಿ ರಾಜನು ಯುದ್ಧ ಸಾರಿ ಹೊರಟಾಗ ಜಯದೇವನು ಪ್ರತಿ ಹಲ್ಲೆಗಾಗಿ ಅಶ್ವದಳದ ಸಿದ್ಧತೆ ಮಾಡಿಕೊಳ್ಳಿ ಎಂದು ಅಪ್ಪಣೆ ಕೊಟ್ಟನು. ಆಗ ಸೇವಕರು ಕುದುರೆಗಳಿಗೆ ಹೆಚ್ಚಿನ ಶಕ್ತಿದಾಯಕ ಆಹಾರ ಕೊಡಲು ಪ್ರಾರಂಭ ಮಾಡುತ್ತಾರೆ. ಕುದುರೆ ಲಾಯ ಮತ್ತು ಕತ್ತೆಯ ದೊಡ್ಡಿಯ ಮಧ್ಯ ತಂತಿಯ ಸಂರಕ್ಷಣೆ ಅಷ್ಟೆ. ಆಗ ಕತ್ತೆಯನ್ನು ನೋಡಿ ಕುದುರೆ, “ನೋಡಿದಿಯಾ ಕತ್ತೆ, ನಾವು ಯುದ್ಧಕ್ಕೆ ಹೊರಟಿದ್ದೇವೆ. ಅದಕ್ಕೆ ನಮಗೆ ಒಳ್ಳೊಳ್ಳೆ ರುಚಿಕರ ಚಂದಿ, ನಿನಗೆ ಬರಿ ಹುಲ್ಲು..” ಎಂದು ಹುಂಕರಿಸಿ ನಗುತ್ತದೆ. ಆಗ ಅದು ಮರು ಏನು ಮಾತನಾಡದೆ, “ಶುಭಾಶಯ ಕುದುರೆಯಣ್ಣಾ, ಗೆಲುವು ನಿನ್ನದಾಗಲಿ..” ಎಂದು ಶುಭ ಕೋರುತ್ತದೆ.          ಕುದುರೆ ರಣರಂಗದಲ್ಲಿ ಭೀಮ ಪರಾಕ್ರಮದಿಂದ ಕಾದಾಡಿ ಯುದ್ಧ ಗೆದ್ದು ಬರುತ್ತದೆ. ಅಲ್ಲಿಂದ ಓಡುತ್ತಾ ಓಡುತ್ತಾ ತನ್ನ ಲಾಯಕ್ಕೆ ಬರುವಾಗ ಮತ್ತೆ ಕತ್ತೆಯನ್ನು ನೋಡಿ, “ಎಲೇ.. ಕತ್ತೆ, ನಾವು ಯುದ್ಧ ಗೆದ್ದು ಬಂದೇವು. ವೈರಿ ಸೈನ್ಯ ಕಾಲಲ್ಲಿ ಹಾಕಿ ತುಳಿದೇವು. ಇದರಿಂದ ಸಂತೋಷನಾದ ರಾಜ, ನಾಳೆ ನಮ್ಮ ಮೆರವಣಿಗೆ ಇಟ್ಟಿದ್ದಾನೆ..” ಎಂದು ಜೋರಾಗಿ ಹೇಳಿತು. ಅದಕ್ಕೆ ಕತ್ತೆ, “ಗೆಲುವಿಗಾಗಿ ಶುಭಾಶಯ, ಕುದುರೆಯಣ್ಣಾ..”ಎಂದು ಹೇಳಿ ಸುಮ್ಮನೆ ಹುಲ್ಲು ತಿನ್ನುತ್ತದೆ. ಆದರೆ ಕುದುರೆ ಮಾತ್ರ ಸುಮ್ಮನಾಗುವದಿಲ್ಲ, “ಇಲ್ಲಾ, ನಮ್ಮ ರಾಜನು ಎಷ್ಟು ಮುರ್ಖನಿರಬಹುದು. ನಿಮ್ಮಂತಹ ಮೂರ್ಖ ಪ್ರಾಣಿಗಳನ್ನು ಕಟ್ಟಿಕೊಂಡು ಸುಮ್ಮನೆ ರಾಜ್ಯದ ವೆಚ್ಚ ಹೆಚ್ಚಿಗೆ ಮಾಡಿಕೊಳ್ಳುತಿದ್ದಾನೆ..” ಎಂದಾಗಲೂ ಕತ್ತೆ ಏನು ಮಾತನಾಡದೆ ಸುಮ್ಮನಿರುತ್ತದೆ.                     ಮರುದಿನ ರಾಜಧಾನಿಯಲ್ಲಿ ರಾಜನ ಮೆರವಣಿಗೆ ಆಗುತ್ತದೆ. ಅಲ್ಲಿ ಕುದುರೆಗಳ ಹೊಗಳಿಕೆ ಆಗುತ್ತದೆ. ಎಲ್ಲ ಜನರು ರಾಜ ಮತ್ತು ಕುದುರೆಗಳ ಮೇಲೆ ಪುಷ್ಪಾರ್ಪಣೆ ಮಾಡುತ್ತಾರೆ. ಅಂದು ರಾಜ ವೈರಿ ಮುಕ್ತನು ಆಗಿರುತ್ತಾನೆ. ಆದರೂ ಆತ ದೂರದ ಶತ್ರುಗಳಿಂದ ಯಾವ ತೊಂದರೆ ಆಗಬಾರದೆಂದು ಸಮೀಪದ ಎತ್ತರ ಪರ್ವತದ ಮೇಲೆ ಕೋಟೆ ಕಟ್ಟುವದಾಗಿ ಘೋಷಣೆ ಮಾಡುತ್ತಾನೆ. ಕೋಟೆ ಕಟ್ಟಬೇಕಾದರೆ ಕಲ್ಲು, ಮಣ್ಣು, ಕಟ್ಟಿಗೆ, ಸಿಮೇಂಟ್‍ಗಳಂತಹ ಭಾರವಾದ ವಸ್ತುಗಳನ್ನು ಮೇಲೆ ತಲುಪಿಸಬೇಕಿತ್ತು. ಕುದುರೆಗಳಿಂದ ಈ ಕಾರ್ಯ ಅಸಾಧ್ಯ ಎಂಬುದು ರಾಜನಿಗೆ ಮಾತ್ರ ಗೊತ್ತಿರುತ್ತದೆ. ಅದಕ್ಕಾಗಿ ಆತ, ‘ಕೋಟೆಯ ಕೆಲಸಕ್ಕೆ ಕತ್ತೆಗಳನ್ನು ಬಳಿಸಿಕೊಳ್ಳಿ..’ಎಂದು ಅಪ್ಪಣೆ ಕೊಡುತ್ತಾನೆ. ಎಲ್ಲ ಜನರಿಗೆ ಇದು ವಿಚಿತ್ರ ಅನಿಸುವದು, ಆದರೂ ಸೇವಕರು ಬಂದು ಕತ್ತೆಗಳನ್ನು ಒಯ್ಯುವಾಗ ಮತ್ತೆ ಕುದುರೆ ಕತ್ತೆಯನ್ನು ನೋಡಿ, “ಹೋಗು ಕತ್ತೆ ಹೋಗು.. ಅದು ನಿಮ್ಮಿಂದ ಆಗದ ಕೆಲಸ. ರಾಜನಿಗೆ ನಾಳೆಯಿಂದ ಮತ್ತೆ ನಮ್ಮನ್ನೆ ಕರೆಸಬೇಕಾಗುತ್ತದೆ..” ಎಂದು ನಸು ನಕ್ಕಿತು.             ಕತ್ತೆಗಳೆಲ್ಲಾ ಹೋಗಿ ಸಂಯಮದಿಂದ ಭಾರ ವಸ್ತುಗಳನ್ನು ಅತ್ಯಂತ ಕಾಳಜಿಯಿಂದ ಒಯ್ದು ಪರ್ವತದ ಮೇಲೆ ಚೆಲ್ಲುತ್ತವೆ. ಆ ದಿನ ಕತ್ತೆಗಳ ಶ್ರಮ ಮತ್ತು ಪ್ರಾಮಾಣಿಕತೆ ನೋಡಿ ರಾಜನಿಗೆ ಬಹಳ ಸಂತೋಷವಾಯಿತು. ಆಗ ಆತ, “ನಮ್ಮ ಕೋಟೆಯ ಕೆಲಸ ಮುಗಿಯುವ ವರೆಗೆ ಕುದುರೆಗಳ ಆಹಾರ ಕಡಿಮೆ ಮಾಡಿ ಕತ್ತೆಗಳಿಗೆ ಕೊಡಿ..” ಎಂದು ಸೇವಕರಿಗೆ ಅಪ್ಪಣೆ ಮಾಡುತ್ತಾನೆ. ಅಂದು ಕತ್ತೆಗೆ ಬಹಳ ದಣಿವು. ಅದು ಹುಲ್ಲು, ಚಂದಿ ತಿಂದು ಸುಮ್ಮನೆ ಮಲಗಿ ಬಿಟ್ಟಿತು. ಆದರೆ ಕುದುರೆ ಮಾತ್ರ ಅದನ್ನು ನೋಡಿ ಮೂಗು ಮುರಿಯುತ್ತಿತ್ತು. ಪ್ರತಿ ದಿನ ಕುದುರೆ ಕತ್ತೆಯನ್ನು ಏನಿಲ್ಲಾ ಒಂದು ಮಾತು ಹೇಳಿ ಹಿಯಾಳಿಸುತ್ತಿತ್ತು. ಆದರೆ ಅದು ಮಾತ್ರ ಕೋಟೆಯ ಕೆಲಸ ಮುಗಿಯುವ ವರೆಗೆ ಕುದುರೆಯ ಯಾವ ಮಾತಿನತ್ತ ಗಮನ ಕೊಡಲಿಲ್ಲ.              ಕತ್ತೆಗಳ ಪರಿಶ್ರಮದಿಂದ ಬ್ರಹತ್ ಕೋಟೆ ನಿರ್ಮಾಣ ಆಯಿತು. ಇದರಿಂದ ಸಂತೋಷನಾದ ರಾಜನು ಅಲ್ಲಿಯೆ ಪಟ್ಟಾಭಿಷೇಕ ಮಾಡಿಕೊಳ್ಳುವದಾಗಿ ಡಂಗುರು ಸಾರಿದನು. ಸುತ್ತಲಿನ ರಾಜರಿಗೆ ಆಮಂತ್ರಣ ಕಳುಹಿಸಿದನು. ರಾಜನ ಸಿಂಹಾಸನ ಕೂಡ ಕತ್ತೆಗಳೆ ಮೇಲಕ್ಕೆತ್ತಿ ಒಯ್ದವು. ಅಲ್ಲಿ ಬಂದವರೆಲ್ಲಾ ಕೋಟೆಯ ಅದ್ಭುತತೆ ಮಾತನಾಡುತ್ತಿದ್ದರು. ಇಷ್ಟು ಎತ್ತರ ರಾಜ ಭಾರವಸ್ತು ಹೇಗೆ ತಂದನು ಎಂದು ಆಶ್ಚರ್ಯ ಪಟ್ಟರು. ಆಗ ಜಯದೇವನು ಇದರ ಎಲ್ಲ ಶ್ರೇಯ ಕತ್ತೆಗಳಿಗೆ ಕೊಡುತ್ತಾನೆ. ಅಲ್ಲಿ ಬಂದ ರಾಜರು ಸಹ ಕತ್ತೆಗಳ ಕೆಲಸವನ್ನು ಮೆಚ್ಚುತ್ತಾರೆ. ಅಂದು ಮಾತ್ರ ಅಲ್ಲಿಯ ಭವ್ಯ ಕಾರ್ಯಕ್ರಮಕ್ಕೆ ಕತ್ತೆಗಳ ಉಪಸ್ಥಿತಿ ಇತ್ತು ಆದರೆ ಕುದುರೆಗಳನ್ನು ಕೆಳಗಡೆಯ ಮೈದಾನದಲ್ಲಿ ಕಟ್ಟಲಾಗಿತ್ತು.               ಮರುದಿನ ಕತ್ತೆ ಬಂದು ಕುದುರೆಗೆ, “ನೋಡಿದಿಯಾ ಕುದುರೆಯಣ್ಣಾ, ನಾನು ಅಂದು ಹೇಳಿದಂತೆ ಈ ಜಗತ್ತಿನಲ್ಲಿ ಪ್ರತಿಯೊಬ್ಬನಿಗೂ ಒಂದು ಒಳ್ಳೆಯ ಕಾಲ ಬರುತ್ತದೆ. ಅದಕ್ಕೆ ಕಾಯಬೇಕು ಅಷ್ಟೆ. ಆದರೆ ಎಲ್ಲಕ್ಕಿಂತ ಮಹತ್ವದ್ದು ನಮಗೆ ಸಿಕ್ಕ ಅವಕಾಶವನ್ನು ನಾವು ಪರಿಶ್ರಮದಿಂದ ಪ್ರಾಮಾಣಿಕವಾಗಿ ಮಾಡಬೇಕು. ಆವಾಗ ಎಲ್ಲರು ಜಯಕಾರ ಹಾಕುತ್ತಾರೆ..” ಎಂದು ವಿನಯದಿಂದ ಹೇಳಿತು. ಕುದುರೆಗೆ ತನ್ನ ತಪ್ಪಿನ ಅರಿವಾಯಿತು. ಮುಂದೆ ಅದು ತನ್ನ ಅಹಂಕಾರ ಬಿಟ್ಟು ಸ್ನೇಹದಿಂದ ಬಾಳುತ್ತದೆ. ********* ಮಲಿಕಜಾನ ಶೇಖ

ಮಕ್ಕಳ ಕಥೆ Read Post »

ಕಥಾಗುಚ್ಛ

ಕಥಾಯಾನ

ಕೆಪ್ಪ ಅಂಜನಾ ಹೆಗಡೆ ಕೆಪ್ಪನ ಕಥೆ ಶುರುವಾಗುವುದು ನವರಾತ್ರಿಯಿಂದ. ನವರಾತ್ರಿಯೆಂದರೆ ಅದು ಅಂತಿಂಥ ನವರಾತ್ರಿಯಲ್ಲ. ಹಳೇಮನೆ ರಾಮಚಂದ್ರಣ್ಣನ ನವರಾತ್ರಿಯೆಂದರೆ ಯಲ್ಲಾಪುರ ತಾಲೂಕಿನಲ್ಲೆಲ್ಲ ಮನೆಮಾತಾದ ನವರಾತ್ರಿ ಅದು. ಚೌತಿ ಹಬ್ಬ ಮುಗಿದು ಇನ್ನೇನು ಹತ್ತೋ ಹದಿನೈದೋ ದಿನವಾಗುವಷ್ಟರಲ್ಲಿ ರಾಮಚಂದ್ರಣ್ಣನ ನವರಾತ್ರಿಯ ಧಾವಂತ ಶುರುವಾಗುತ್ತಿತ್ತು. ಅಟ್ಟದ ಮೇಲಿನ ಅಡಿಕೆ ಕಂಬಗಳನ್ನು ಒಂದೊಂದಾಗಿ ಕೆಳಗಿಳಿಸಿ ದೇವರಮನೆಯಲ್ಲಿ ನಿಲ್ಲಿಸುವುದರಿಂದ ಶುರುವಾಗುವ ನವರಾತ್ರಿ ಸಂಭ್ರಮ ಹಳೆಮನೆಯಲ್ಲಿ ವಿಜಯದಶಮಿಯವರೆಗೂ ಇರುತ್ತಿತ್ತು. ಅಲ್ಯೂಮಿನಿಯಂ ಬೋಗುಣಿಯೊಂದರಲ್ಲಿ ತಾನೇ ಕೈಯಾರೆ ತಯಾರಿಸಿಕೊಂಡ ಗೋಧಿಅಂಟಿನೊಂದಿಗೆ ಪ್ರತೀರಾತ್ರಿ ರಾಮಚಂದ್ರಣ್ಣ ಶಾರದೆಯ ಮಂಟಪ ರೆಡಿಮಾಡಲು ಕೂತುಬಿಡುತ್ತಿದ್ದ. ‘ಅಚ್ಯುತಂ ಕೇಶವಂ ರಾಮನಾರಾಯಣಂ’ ಎನ್ನುವ ತನ್ನ ಪ್ರೀತಿಯ ಭಜನೆಯೊಂದನ್ನು ಲಯಬದ್ಧವಾಗಿ ಹಾಡುತ್ತಾ ರಾಮಚಂದ್ರಣ್ಣ ಮಂಟಪ ಕಟ್ಟಲು ಕೂತನೆಂದರೆ ಇಡೀ ಹಳೇಮನೆ ಕೇರಿಯೇ ಅಲ್ಲಿ ನೆರೆಯುತ್ತಿತ್ತು. ಯೋಚಿಸಿದರೆ, ಕೆಪ್ಪನಿಗೂ ನನಗೂ ಅಂಥ ವ್ಯತ್ಯಾಸವೇನಿಲ್ಲ. ನಾನು ರಾಮಚಂದ್ರಣ್ಣನ ಮನೆ ಸೇರಿದಾಗ ನನಗೆ ಹನ್ನೊಂದು ವರ್ಷ. ಐದನೆಯ ಕ್ಲಾಸಿನವರೆಗೆ ಮಾತ್ರವೇ ಓದಲು ಅವಕಾಶವಿದ್ದ ಅಂಕೋಲೆಯ ಚಿಕ್ಕ ಹಳ್ಳಿಯೊಂದರಲ್ಲಿ ನಾನು ಹುಟ್ಟಿದ್ದು. ಅಮ್ಮನ ತಂಗಿ ಗಂಗಾಚಿಕ್ಕಿಯನ್ನು ರಾಮಚಂದ್ರಣ್ಣನ ತಮ್ಮನಿಗೆ ಮದುವೆ ಮಾಡಿಕೊಟ್ಟಿದ್ದರು. ರಾಮಚಂದ್ರಣ್ಣ ವಯಸ್ಸಿನಲ್ಲಿ ನನ್ನ ಅಪ್ಪನಿಗಿಂತ ದೊಡ್ಡವನಾಗಿದ್ದರೂ ನಾವೆಲ್ಲ ಅವನನ್ನು ಕರೆಯುತ್ತಿದ್ದದ್ದು ರಾಮಚಂದ್ರಣ್ಣ ಅಂತಲೇ. ರಾಮಚಂದ್ರಣ್ಣನಿಗೆ ಇದ್ದ ಒಬ್ಬನೇ ಮಗ ಹಾವು ಕಚ್ಚಿ ಸತ್ತುಹೋದನೆಂದು ಗಂಗಾಚಿಕ್ಕಿ ಯಾವಾಗಲೋ ಹೇಳಿದ್ದು ಬಿಟ್ಟರೆ, ಆ ವಿಷಯವನ್ನು ಯಾರೂ ಮಾತಾಡುತ್ತಿರಲಿಲ್ಲ. ರಾಮಚಂದ್ರಣ್ಣ ಮಾತ್ರ ಯಾವ ದುಃಖವೂ ಶಾಶ್ವತವಲ್ಲವೆಂಬ ನಿರ್ಲಿಪ್ತತೆಯಲ್ಲಿ ಊರಿನ ಮಕ್ಕಳನ್ನೆಲ್ಲ ವಿಶ್ವಾಸದಿಂದ ನೋಡುತ್ತಾ ತಾನಾಯಿತು ತನ್ನ ನವರಾತ್ರಿಯಾಯಿತು ಎಂಬಂತೆ ಇದ್ದುಬಿಡುತ್ತಿದ್ದ. ನಾನು ಐದನೇ ಕ್ಲಾಸು ಮುಗಿಸಿ ಬೇಸಿಗೆರಜೆಯ ಮಜವನ್ನೆಲ್ಲ ಚಿಕ್ಕಮ್ಮನ ಮನೆಯಲ್ಲಿಯೇ ಅನುಭವಿಸಿ ಮುಗಿದಮೇಲೆ, ಮನೆಗೆ ವಾಪಸ್ಸು ಕರೆದೊಯ್ಯಲು ಅಪ್ಪ ಬಂದಿದ್ದ. ಅಪ್ಪ, ಚಿಕ್ಕಪ್ಪ, ರಾಮಚಂದ್ರಣ್ಣ ಮಧ್ಯಾಹ್ನದ ಮೇಲೆ ಬಾಳೆಕಾಯಿ ಚಿಪ್ಸ್ ತಿನ್ನುತ್ತಾ ಚಾ ಕುಡಿಯುವಾಗ ನನ್ನ ಆರನೇ ಕ್ಲಾಸಿನ ಸಮಸ್ಯೆ ಧುತ್ತೆಂದು ಚಿಪ್ಸ್ ಪ್ಲೇಟಿಗೆ ಬಿತ್ತು. “ಅದೆಂಥ ಸಮಸ್ಯೆ, ಅವಳು ನಮ್ಮನೇಲೇ ಶಾಲೆಗೆ ಹೋಗಲಿ; ನಮ್ಮನೆಲ್ಲೂ ನವರಾತ್ರಿಗೊಂದು ದುರ್ಗೆ ಬೇಕು ಮಾರಾಯ” ಎಂದವನೇ ರಾಮಚಂದ್ರಣ್ಣ ಚಾ ಲೋಟಾ ತೊಳೆಯಲು ಎದ್ದುಹೋದ. ಆವತ್ತಿಂದ ಹಳೇಮನೆ ನವರಾತ್ರಿಯ ಪರ್ಮನೆಂಟ್ ದುರ್ಗೆ ಆದೆ ನಾನು. ನನಗೆ ನೆನಪಿದ್ದಂತೆ ಅದು ನನ್ನ ಏಳನೇ ಕ್ಲಾಸಿನ ನವರಾತ್ರಿಯಿರಬೇಕು. ವಿಜಯದಶಮಿಯ ದಿನ ಶಾರದೆಯನ್ನು ಕಳುಹಿಸಿ, ಕೇರಿಯ ಹೆಂಗಸರೆಲ್ಲ ‘ಹರಸಿದಳೆಲ್ಲರಿಗೂ ಶಾರದೆ ಒಲಿದು’ ಎಂದು ಹಾಡುತ್ತಿದ್ದ ಎಮೋಷನಲ್ ಸನ್ನಿವೇಶದಲ್ಲಿ ಈ ಕೆಪ್ಪ ಕೇರಿಗೆ ಕಾಲಿಟ್ಟಿದ್ದ. ಅವನು ತೊಟ್ಟಿದ್ದ ಬೆಳ್ಳನೆಯ ಬಟ್ಟೆಯಿಂದಲೂ ಇರಬಹುದು ತುಸು ಜಾಸ್ತಿ ಕಪ್ಪಗೆ ಕಾಣಿಸುತ್ತಿದ್ದ. ಹಳೇಮನೆ ಕೇರಿಯ ಮೊದಲ ಮನೆಯಾಗಿದ್ದ ರಾಮಚಂದ್ರಣ್ಣನ ಮನೆಯ ಅಂಗಳದ ಮೆಟ್ಟಿಲಮೇಲೆ ತನ್ನದೇ ಮನೆಯೆಂಬಂತೆ ಬಂದು ಕುಳಿತುಕೊಂಡ. ಬಸ್ ಸ್ಟಾಪಿಗೆ ಹತ್ತಿರದಲ್ಲೇ ಇದ್ದ ಹಳೇಮನೆಗೆ ಬಸ್ಸು ತಪ್ಪಿಸಿಕೊಂಡವರು ನೀರು ಕುಡಿಯಲೆಂದೋ ಅಥವಾ ಮುಂದಿನ ಬಸ್ಸಿನ ಸಮಯ ಕೇಳಲೆಂದೋ ಬರುತ್ತಿದ್ದದ್ದು ಸಾಮಾನ್ಯವಾಗಿತ್ತು. ಹಾಗೇ ಯಾರೋ ಬಂದಿರಬಹುದು ಎಂದುಕೊಂಡ ನಮಗೆಲ್ಲ ಅವನಿಗೆ ಮಾತು ಬರುವುದಿಲ್ಲ ಎನ್ನುವುದು ಅರ್ಥವಾಗಿದ್ದು ಅವನು ಅದೇನನ್ನೋ ಹೇಳಲು ಪ್ರಯತ್ನಿಸಿದಾಗಲೇ. ಅವನು ಪ್ರಯತ್ನಿಸಿದ ಮಾತುಗಳೆಲ್ಲ ವಿಚಿತ್ರ ಶಬ್ದಗಳನ್ನು ಹೊರಡಿಸಿದವಾದರೂ ಯಾವುದೂ ಅರ್ಥವಾಗಲಿಲ್ಲ. ರಾಮಚಂದ್ರಣ್ಣ ಆಗಷ್ಟೇ ಪೂಜೆ ಮುಗಿಸಿ, ಉಟ್ಟಿದ್ದ ಮಡಿ ಬಿಚ್ಚಿ ಲುಂಗಿ ಉಡುತ್ತ “ಯಾರೇ ಅದು, ಬಸ್ಸು ತಪ್ಪಿಸಿಕೊಂಡರಂತಾ ಏನು” ಎಂದು ಹೆಂಡತಿಯನ್ನು ಕೇಳುತ್ತ ಹೊರಬಂದಾಗ ಕೆಪ್ಪ ಅವನ ಮುಖ ನೋಡುತ್ತಾ ಏನೇನೋ ಶಬ್ದಗಳನ್ನು ಹೊರಡಿಸಿದ. ರಾಮಚಂದ್ರಣ್ಣ ಅವನನ್ನು ಮಧ್ಯದಲ್ಲಿ ತಡೆದು ಪ್ರಶ್ನೆ ಕೇಳಲು ಪ್ರಯತ್ನಿಸಿದನಾದರೂ ಯಾವುದಕ್ಕೂ ಸ್ಪಂದಿಸದ ಅವನಿಗೆ ಕಿವಿಯೂ ಕೇಳುವುದಿಲ್ಲ ಎನ್ನುವುದು ನಮಗೆಲ್ಲ ಖಚಿತವಾಯಿತು. ಮಾತೂ ಬರದ ಕಿವಿಯೂ ಕೇಳಿಸದ ಅವನಿಂದ ಯಾವ ವಿವರಗಳನ್ನೂ ಪಡೆದುಕೊಳ್ಳಲಾಗಲೇ ಇಲ್ಲ. ಪೆನ್ನು ಹಾಳೆಗಳನ್ನು ಕೊಟ್ಟರೆ ಅವು ತನಗೆ ಸಂಬಂಧಪಟ್ಟ ವಸ್ತುಗಳೇ ಅಲ್ಲವೆನ್ನುವಂತೆ ಅವುಗಳೆಡೆಗೆ ತಿರುಗಿಯೂ ನೋಡದ ಅವನಿಗೆ ಅಕ್ಷರಜ್ಞಾನ ಇದ್ದಿರಬಹುದಾದ ಯಾವ ಲಕ್ಷಣಗಳೂ ಕಾಣಿಸಲಿಲ್ಲ. ಅವನಿಗೆ ಹೆಸರೊಂದು ಇದ್ದಿರಬಹುದಾದರೂ ಅದನ್ನು ಕಂಡುಹಿಡಿಯುವ ಯಾವ ಮಾರ್ಗವೂ ಯಾರಿಗೂ ಗೋಚರಿಸಲಿಲ್ಲ. ಗಂಗಾಚಿಕ್ಕಿ ಬಡಿಸಿದ ಹಬ್ಬದೂಟ ಉಂಡವನೇ ತಟ್ಟೆ ಲೋಟಾಗಳನ್ನು ತೊಳೆದು ತನ್ನದೇ ಆಸ್ತಿ ಎಂಬಂತೆ ಜಗಲಿಯ ಮೂಲೆಯಲ್ಲಿಟ್ಟುಕೊಂಡ. ಅದೆಲ್ಲಿಂದ ಬಂದ, ಹಳೇಮನೆ ಕೇರಿಗೇ ಯಾಕೆ ಬಂದ, ಬಂಧುಬಳಗದವರು ಯಾರಾದರೂ ಇದ್ದಾರೋ ಇಲ್ಲವೋ ಎಂಬಿತ್ಯಾದಿ ಪ್ರಶ್ನೆಗಳಿಗೆ ಯಾರಲ್ಲಿಯೂ ಉತ್ತರವಿರಲಿಲ್ಲ. ನನಗೆ ಯಾವತ್ತಿಗೂ ಬಗೆಹರಿಯದ ಒಂದು ವಿಚಿತ್ರವೆಂದರೆ ಕೇರಿಯ ಯಾರೊಬ್ಬರೂ ಅವನನ್ನು ಸಂಶಯದ ದೃಷ್ಟಿಯಿಂದ ನೋಡಲೇ ಇಲ್ಲ. ರಾಮಚಂದ್ರಣ್ಣನ ಪ್ರೀತಿ ವಿಶ್ವಾಸ ನಂಬಿಕೆಗಳೆಲ್ಲ ಜಾಜಿ ಬಳ್ಳಿಯಂತೆ ಕೇರಿಯನ್ನೆಲ್ಲ ಹಬ್ಬಿದಂತೆ ನನಗೆ ಈಗಲೂ ಅನ್ನಿಸುತ್ತದೆ. ಹೀಗೆ ಕೆಪ್ಪ ಎಂಬ ಹೊಸ ಹೆಸರಿನೊಂದಿಗೆ ಕೆಪ್ಪ ರಾಮಚಂದ್ರಣ್ಣನ ಮನೆಯ ಖಾಯಂ ಸದಸ್ಯನಾದ. ಆದರೆ ಕೆಪ್ಪನ ವಾಸಕ್ಕೆ ತಕ್ಕ ಜಾಗ ಕೇರಿಯ ಯಾವ ಮನೆಯಲ್ಲೂ ಇರಲಿಲ್ಲ. ಹಳೇಮನೆಯ ಯಾವ ಕುಟುಂಬವೂ ಅಂಥ ಸ್ಥಿತಿವಂತ ಕುಟುಂಬವೇನೂ ಆಗಿರಲಿಲ್ಲ. ರಾಮಚಂದ್ರಣ್ಣನ ಅಪ್ಪನ ಕಾಲದಲ್ಲಿ ಖಾಂದಾನಿ ಎನ್ನಬಹುದಾಗಿದ್ದ ಕುಟುಂಬ, ಮಕ್ಕಳ ಕಾಲಕ್ಕೆ ಹೊಂದಾಣಿಕೆಯಾಗದೇ ಎಂಟು ಮನೆಗಳಾಗಿ ಒಡೆದುಹೋಗಿತ್ತು. ಅವರುಗಳ ಮಧ್ಯ ತಲೆಹೋಗುವಂತಹ ಜಗಳಗಳು ಆಗುತ್ತಿರಲಿಲ್ಲವಾದರೂ ಗದ್ದೆಕಾಯುವ ರಾತ್ರಿಪಾಳಿಯ ವಿಷಯಕ್ಕೋ, ಅವರ ಮನೆಯ ಬೆಕ್ಕು ಅರ್ಧತಿಂದುಬಿಟ್ಟ ಇಲಿ ಇವರ ಮನೆ ಅಟ್ಟದ ಮೇಲೆ ಕೊಳೆತು ವಾಸನೆ ಬರುತ್ತಿರುವ ವಿಷಯಕ್ಕೋ ಆಗಾಗ ಚಿಕ್ಕಪುಟ್ಟ ಮನಸ್ತಾಪಗಳಾಗುತ್ತಿದವು. ಈ ಮನಸ್ತಾಪಗಳೇನಾದರೂ ಜಗಳಕ್ಕೆ ತಿರುಗಿದರೆ ರಾಮಚಂದ್ರಣ್ಣ ಮಧ್ಯಸ್ಥಿಕೆ ವಹಿಸಿ ಸಮಸ್ಯೆಗೊಂದು ಜಾಣತನದ ಪರಿಹಾರ ಹುಡುಕುತ್ತಿದ್ದ. ಹೆಚ್ಚೇನೂ ಓದಿರದ ರಾಮಚಂದ್ರಣ್ಣ ತನ್ನ ಅಚ್ಚುಕಟ್ಟಾದ ಮಾತಿನಿಂದಲೇ ಕೇರಿಯವರಷ್ಟೇ ಅಲ್ಲದೇ ಊರಿನವರ ಗೌರವವನ್ನೂ ಗಳಿಸಿಕೊಂಡಿದ್ದ. ಯಾವತ್ತೂ ಧ್ವನಿ ಎತ್ತರಿಸಿ ಮಾತನಾಡದ ರಾಮಚಂದ್ರಣ್ಣ, ಏರುಧ್ವನಿಯಲ್ಲಿ ಮೂರೂ ಹೊತ್ತು ಹಲಬುತ್ತಲೇ ಇರುತ್ತಿದ್ದ ಕೆಪ್ಪನೊಂದಿಗೆ ಸೌಹಾರ್ದ ಬೆಳೆಸಿಕೊಳ್ಳಬಹುದಾದ ಯಾವ ನಿರೀಕ್ಷೆಯೂ ಕೇರಿಯವರ್ಯಾರಿಗೂ ಇರಲಿಲ್ಲವಾದರೂ ಕೆಪ್ಪನ ವಾಸಕ್ಕೊಂದು ಜಾಗ ಹುಡುಕುವ ಜವಾಬ್ದಾರಿ ರಾಮಚಂದ್ರಣ್ಣನ ತಲೆಗೇ ಬಂತು. ರಾಮಚಂದ್ರಣ್ಣನ ಮನೆ ಕೇರಿಯ ಮೊದಲ ಮನೆಯಾದದ್ದರಿಂದ ಜಾಗವನ್ನು ಕೊಂಚ ವಿಸ್ತರಿಸಿ ಮನೆಯನ್ನು ನವೀಕರಿಸುವ ಅವಕಾಶ ಮನೆಗಳೆಲ್ಲ ಹಿಸೆಯಾದ ಸಮಯದಲ್ಲೇ ರಾಮಚಂದ್ರಣ್ಣನಿಗೆ ಒದಗಿಬಂದಿತ್ತು. ಅಣ್ಣತಮ್ಮಂದಿರು ಒಟ್ಟಿಗೇ ಇದ್ದಿದ್ದರಿಂದ ಸ್ವಲ್ಪ ಅನುಕೂಲಸ್ಥನಾಗಿದ್ದ ರಾಮಚಂದ್ರಣ್ಣ ಮನೆ ಹಿಂದೆ ಇದ್ದ ಸೊಪ್ಪಿನ ಬೆಟ್ಟದ ಸ್ವಲ್ಪ ಜಾಗವನ್ನು ಸಮತಟ್ಟು ಮಾಡಿಸಿ ವಿಶಾಲವಾದ ಕೊಟ್ಟಿಗೆಯನ್ನು ಕಟ್ಟಿಸಿಕೊಂಡಿದ್ದ. ಆ ಕೊಟ್ಟಿಗೆಯಲ್ಲೇ ಸಣ್ಣದೊಂದು ಭಾಗದಲ್ಲಿ ಮಣ್ಣಿನ ಗೋಡೆಯನ್ನೆಬ್ಬಿಸಿ ಬಾಗಿಲು ಕಿಟಕಿಗಳಿಲ್ಲದ ರೂಮೊಂದನ್ನು ಕಟ್ಟಿಸಿ, ರಾಮಚಂದ್ರಣ್ಣ ಕೆಪ್ಪನ ಪಾಲಿನ ಆಪತ್ಬಾಂಧವನಾದ. ಎರಡೇ ದಿನದಲ್ಲಿ ರಾಮಚಂದ್ರಣ್ಣ ಮಾಡಿಸಿಕೊಟ್ಟ ಹಲಸಿನ ಮಂಚದ ಮೇಲೆ ಆಸೀನನಾದ ಕೆಪ್ಪ ಕೊಟ್ಟಿಗೆಯ ಒಡೆಯನೂ, ಕೇರಿಯ ಕಾವಲುಗಾರನೂ ಆಗಿಹೋದ. ಗಂಗಾಚಿಕ್ಕಿಯ ಕೊಟ್ಟಿಗೆಯ ಜವಾಬ್ದಾರಿಯನ್ನು ತಾನಾಗಿಯೇ ವಹಿಸಿಕೊಂಡ. ದಿನ ಬೆಳಗಾದರೆ ಒಂದು ಎಮ್ಮೆ, ಒಂದು ಹಸುವಿನ ಹಾಲು ಕರೆದು, ಸೊಪ್ಪು ಕಡಿದು ತಂದು, ಸಗಣಿ ತೆಗೆದು, ಹೊಸ ಸೊಪ್ಪು ಹಾಸುವವರೆಗೂ ಅವನಿಗೆ ಸಮಾಧಾನವಿರುತ್ತಿರಲಿಲ್ಲ. ರಾತ್ರಿಗಳಲ್ಲಿ ಗದ್ದೆ ಕಾಯುವ ಕೆಲಸವನ್ನೂ ತಾನೇ ವಹಿಸಿಕೊಂಡು ಕೇರಿಯವರ ನಿದ್ರೆಯನ್ನೂ ಸಲಹತೊಡಗಿದ. ಬೆಕ್ಕು ಕೂಡಾ ಯಾರ ಭಯವೂ ಇಲ್ಲದೇ ತಾನು ಹಿಡಿದ ಇಲಿಗಳನ್ನೆಲ್ಲ ತಂದು ಕೆಪ್ಪನ ರೂಮಿನಲ್ಲೇ ರಾಜಾರೋಷವಾಗಿ ತಿನ್ನತೊಡಗಿತು. ಅರ್ಥವಾಗದ ಭಾಷೆಯಲ್ಲಿ ಬೆಕ್ಕಿಗೋ, ಇಲಿಗೋ ಬಾಯ್ತುಂಬ ಬೈಯುತ್ತ ಅಳೆದುಳಿದ ಇಲಿಯ ಅವಶೇಷಗಳನ್ನು ಬಳಿದು ಗೊಬ್ಬರದ ಗುಂಡಿಗೆ ಎಸೆದು ಬೆಕ್ಕು ಓಡಾಡಿದ ಜಾಗವನ್ನೆಲ್ಲ ಸಗಣಿನೀರು ಹಾಕಿ ತೊಳೆದುಬಿಡುತ್ತಿದ್ದ. ಯಾರ ಮನೆಯ ಅಂಗಳವಾದರೂ ಸರಿಯೇ, ಒಂದು ಹುಲ್ಲುಕಡ್ಡಿ ಬಿದ್ದರೂ ಅದನ್ನೆತ್ತಿ ಬಿಸಾಕುತ್ತಿದ್ದ ಕೆಪ್ಪನ ಚೊಕ್ಕು, ಶಿಸ್ತು ನೆನಪಾದಾಗಲೆಲ್ಲ ನನಗೆ ಬಾಲ್ಯದ ಅದೆಷ್ಟೋ ಪಾಠಗಳನ್ನ ಮಾತೇ ಬರದ ಕೆಪ್ಪ ಕಲಿಸಿಕೊಟ್ಟಂತೆನ್ನಿಸುತ್ತದೆ. ಕಾಲಕಳೆದಂತೆ ಕೆಪ್ಪ ಊರಿನವರ ಬಾಯಲ್ಲಿ ‘ಹಳೇಮನೆ ಕೆಪ್ಪ’ನೇ ಆಗಿಹೋದ. ನಾನು ಏಳನೇ ಕ್ಲಾಸು ಮುಗಿಸಿ, ಹಳೇಮನೆಯಿಂದ ಮೂರು ಕಿಲೋಮೀಟರು ದೂರದ ಗೋಳಿಮಕ್ಕಿ ಹೈಸ್ಕೂಲಿಗೆ ಸೇರಿದೆ. ಬೆಳಿಗ್ಗೆ ನಾನು ಏಳುವಷ್ಟರಲ್ಲಿ ಬಚ್ಚಲ ಒಲೆಗೆ ಬೆಂಕಿ ಹಾಕಿ, ಬಾವಿಯಿಂದ ನೀರು ಸೇದಿ ಹದಮಾಡಿದ ನೀರು ಹಂಡೆ ತುಂಬಾ ಇದೆಯೆಂದು ಖಾತ್ರಿಯಾದ ಮೇಲೆಯೇ ಕೆಪ್ಪ ಕೊಟ್ಟಿಗೆ ಕೆಲಸಕ್ಕೆ ಹೋಗುತ್ತಿದ್ದ. ಈ ಕೆಪ್ಪನಿಗಿದ್ದ ಒಂದೇ ಒಂದು ಚಟವೆಂದರೆ ಬೀಡಿ. ಕೆಪ್ಪ ಹಳೇಮನೆ ಸೇರಿ ಒಂದು ವಾರವಾಗುತ್ತಿದ್ದಂತೆ ಒಂದಿನ ರಾಮಚಂದ್ರಣ್ಣ ಊಟ ಮಾಡಿ ಕೈ ತೊಳೆಯುತ್ತಿದ್ದಾಗ ಅವನ ಪಕ್ಕ ಬಂದು ಅದೇ ಏರುಧ್ವನಿಯಲ್ಲಿ ಮಾತಾಡತೊಡಗಿದನಂತೆ. ಅರ್ಥವಾಗದ ರಾಮಚಂದ್ರಣ್ಣ ಅವನ ಮುಖ ನೋಡಿದ್ದಕ್ಕೆ, ಬೀಡಿಕಟ್ಟು ಹೊರತೆಗೆದು ಕಟ್ಟಿನಲ್ಲಿದ್ದ ಕೊನೆಯ ಬೀಡಿಯನ್ನು ತೋರಿಸುತ್ತಾ ತಂದುಕೊಡುವಂತೆ ಕೈಸನ್ನೆ ಮಾಡಿದನಂತೆ. ಕೈ ಒರೆಸುತ್ತಾ ರಾಮಚಂದ್ರಣ್ಣ “ಇವನಿಗೆ ಬೀಡಿ ಬೇಕಂತೆ, ನಾಳೆ ಯಲ್ಲಾಪುರಕ್ಕೆ ಹೋಗಿಬರ್ತೀನಿ; ಮನೆ ಸಾಮಾನು ಪಟ್ಟಿ ಮಾಡಿಕೊಡು” ಎಂದಿದ್ದು ಯಲ್ಲಾಪುರ ಬಸ್ಸು ನೋಡಿದಾಗೆಲ್ಲ ನೆನಪಾಗುತ್ತದೆ ನನಗೆ. ಆ ಬೀಡಿಕಟ್ಟಿನ ಬಾಂಧವ್ಯ ಅವರಿಬ್ಬರನ್ನೂ ವಿಚಿತ್ರವಾಗಿ ಬೆಸೆದಿತ್ತು. ಬೀಡಿ ಸಿಗರೇಟು ಹಾಗಿರಲಿ, ಕವಳವನ್ನೂ ಹಾಕದ ರಾಮಚಂದ್ರಣ್ಣ ಪ್ರತೀಸಲ ಯಲ್ಲಾಪುರಕ್ಕೆ ಹೋದಾಗಲೂ ಕೆಪ್ಪನಿಗೆಂದು ಬೀಡಿಕಟ್ಟು ತರುತ್ತಿದ್ದ. ಮನೆಯಲ್ಲಿದ್ದ ಮಕ್ಕಳಲ್ಲೇ ದೊಡ್ಡವಳಾಗಿದ್ದ ನನ್ನ ಕೈಯಲ್ಲಿ ಹಳೇ ಪೇಪರಿನಲ್ಲಿ ಸುತ್ತಿದ ಬೀಡಿಪೊಟ್ಟಣವನ್ನು ಕೊಟ್ಟು ಕೆಪ್ಪನಿಗೆ ಕೊಡುವಂತೆ ಹೇಳುತ್ತಿದ್ದ. ಅದರಲ್ಲಿರುವುದು ಬೀಡಿಪೊಟ್ಟಣ ಎನ್ನುವುದು ನನಗಾಗ ಗೊತ್ತಾಗದೇ ಇದ್ದರೂ ಅದನ್ನು ನೋಡಿದ ತಕ್ಷಣ ಕೆಪ್ಪನ ಮುಖ ಅರಳಿದ್ದು ಮಾತ್ರ ಗೊತ್ತಾಗುತ್ತಿತ್ತು. ಕೇರಿಯ ಮಕ್ಕಳಿಗೆ ಕಾಣಿಸದಂತೆ ಬೆಟ್ಟದಮೇಲೋ, ಕೊಟ್ಟಿಗೆಯ ಮೂಲೆಯಲ್ಲೋ ಕುಳಿತು ಬೀಡಿ ಸೇದುತ್ತಿದ್ದ ಕೆಪ್ಪ ಉಳಿದ ಬೀಡಿಮೋಟನ್ನು ಮಾತ್ರ ಗೊಬ್ಬರದ ಗುಂಡಿಗೇ ಬಿಸಾಕುತ್ತಿದ್ದ. ನನಗೆ ಹೈಸ್ಕೂಲು ಮುಗಿಯುತ್ತಿದ್ದ ಸಮಯದಲ್ಲಿ ಕೆಪ್ಪನ ಬೀಡಿಪ್ರೇಮ, ಅವನು ಹಲಬುತ್ತಿದ್ದ ಕೆಲವು ಶಬ್ದಗಳೆಲ್ಲ ಅರ್ಥವಾಗತೊಡಗಿ, ‘ಪಾಪ ಕೆಪ್ಪ!’ ಅನ್ನಿಸುತ್ತಿತ್ತು. ಈಗಲೂ ಯಾರಾದರೂ ಯಾರಿಗಾದರೂ ಪಾಪ ಅಂದಾಗಲೆಲ್ಲ, ಬೀಡಿಕಟ್ಟು ಸಿಕ್ಕಿದಾಗ ಅರಳಿದ ಕೆಪ್ಪನ ಮುಖ ನೆನಪಾಗುತ್ತದೆ. ನಾನು ಹೈಸ್ಕೂಲು ಮುಗಿಸಿ ಕುಮಟಾದಲ್ಲಿ ಪಿಯುಸಿಗೆ ಸೇರಿ ಅಲ್ಲೇ ಡಿಗ್ರಿಯನ್ನೂ ಮುಗಿಸಿ, ಕಾರವಾರದ ರೆಸಾರ್ಟ್ ಒಂದರಲ್ಲಿ ಫ್ರಂಟ್ ಆಫೀಸ್ ಕೆಲಸಕ್ಕೆ ಸೇರಿಕೊಂಡೆ. ಪ್ರತೀವರ್ಷ ನವರಾತ್ರಿಯ ಹತ್ತು ದಿನವೂ ಕೆಲಸಕ್ಕೆ ರಜೆ ಹಾಕುತ್ತಿದ್ದ ನಾನು ರೆಸಾರ್ಟಿನ ಗಿಡಗಳನ್ನು ಮೆಂಟೇನ್ ಮಾಡುತ್ತಿದ್ದ ರಾಜಣ್ಣನ ಬಾಯಲ್ಲೂ ರಾಮಚಂದ್ರಣ್ಣನ ಮನೆಯ ದುರ್ಗೆಯೇ ಆಗಿದ್ದೆ. ಈ ಸಲ ನವರಾತ್ರಿಗೆ ಹಳೇಮನೆಗೆ ಹೋದಾಗ ಗಂಗಾಚಿಕ್ಕಿ, ಕಳೆದ ಮಳೆಗಾಲ ಕೆಪ್ಪ ತೀರಿಕೊಂಡ ಸುದ್ದಿಯನ್ನು ಹೇಳುತ್ತಾ ಕುಡಿಯಲು ಮಜ್ಜಿಗೆ ಬೆರೆಸಿಕೊಟ್ಟಳು. ಹೊಸ ಬಟ್ಟೆ ತಂದುಕೊಟ್ಟರೂ ಅದನ್ನು ಗೋಣೀಚೀಲದಲ್ಲಿ ಕಟ್ಟಿಟ್ಟು ರಾಮಚಂದ್ರಣ್ಣನ ಹಳೆಯ ಬಿಳಿ ಅಂಗಿಯನ್ನೇ ತೊಡುತ್ತಿದ್ದ ಕೆಪ್ಪ, ಸಾಯುವ ದಿನ ರಾಮಚಂದ್ರಣ್ಣ ಕಳೆದವರ್ಷ ನವರಾತ್ರಿಗೆ ತಂದುಕೊಟ್ಟ ಹಸಿರು ಅಂಗಿಯನ್ನು ತೊಟ್ಟಿದ್ದನಂತೆ. ಜೀವಹೋಗುವ ಅರ್ಧಗಂಟೆ ಮೊದಲು ರಾಮಚಂದ್ರಣ್ಣನನ್ನು ಕರೆದು ಹೊಸ ಅಂಗಿ ತೋರಿಸುತ್ತಾ ಅದೇನನ್ನೋ ಹೇಳಲು ಪ್ರಯತ್ನಿಸಿದನಂತೆ. ಮಳೆಗಾಲದ ದಿನಗಳಲ್ಲಿ ನಾವು ಶಾಲೆಯಿಂದ ಬರುವ ಹೊತ್ತಿಗೆ ಬಚ್ಚಲೊಲೆಯ ಬೆಂಕಿಯಲ್ಲಿ ಹಲಸಿನಬೀಜ ಸುಡುತ್ತಾ ನಮಗಾಗಿ ಕಾಯುತ್ತಿದ್ದ ಕೆಪ್ಪ ನೆನಪಾಗಿ, ಬಾಲ್ಯದ ಬೆಚ್ಚನೆಯ ನೆನಪೆಲ್ಲ ಹೇಳದೇಕೇಳದೇ ಕೆಪ್ಪನೊಂದಿಗೇ ಹೊರಟುಹೋದಂತೆನ್ನಿಸಿತು. ಶಾರದೆಗೆ ಸೀರೆ ಉಡಿಸುತ್ತಿದ್ದ ರಾಮಚಂದ್ರಣ್ಣನ ಕೈ ಸ್ವಲ್ಪ ನಡುಗುತ್ತಿರುವಂತೆನ್ನಿಸಿ ಗಂಗಾಚಿಕ್ಕಿಯ ಹತ್ತಿರ ವಿಚಾರಿಸಿದೆ. ರಾಮಚಂದ್ರಣ್ಣನ ಶುಗರ್ ಲೆವಲ್ ಕಡಿಮೆಯಾಗಿದ್ದು, ಈಗ ಕಿವಿಯೂ ಸ್ವಲ್ಪ ಮಂದವಾಗಿರುವುದು, ಕೆಪ್ಪ ಸತ್ತುಹೋದಮೇಲೆ ರಾಮಚಂದ್ರಣ್ಣ ಯಲ್ಲಾಪುರಕ್ಕೆ ಹೋಗುವುದನ್ನೇ ನಿಲ್ಲಿಸಿದ್ದು, ರಾಯ್ಸದ ಡಾಕ್ಟ್ರು ತಿಂಗಳಿಗೊಮ್ಮೆ ಮನೆಗೇ ಬಂದು ಚೆಕಪ್ ಮಾಡುವುದು ಎಲ್ಲವನ್ನೂ ಗಂಗಾಚಿಕ್ಕಿ ನಡುಗುವ ಧ್ವನಿಯಲ್ಲಿ ಹೇಳಿದಳು. ತಾನು ನೆಟ್ಟ ಮೌಲ್ಯಗಳನ್ನು ನೀರು ಗೊಬ್ಬರ ಹಾಕಿ ಪೊರೆಯುತ್ತಿದ್ದ ಕೆಪ್ಪ ಇಲ್ಲದೇ ರಾಮಚಂದ್ರಣ್ಣ ಅನಾಥನಾದಂತೆ ಎನ್ನಿಸಿತು. ಊರಿನ ಹೆಣ್ಣುಮಕ್ಕಳನ್ನೆಲ್ಲ ಸಾಲಾಗಿ ಕೂರಿಸಿ, ಹತ್ತು ರೂಪಾಯಿ

ಕಥಾಯಾನ Read Post »

ಕಥಾಗುಚ್ಛ

ಕಥಾಯಾನ

ಕಿರಿ ದೇವರಿಗೆ ಮರದ ಜಾಗಟೆ. ಕೆ.ಎನ್.ಮಹಾಬಲ ಹನ್ನೊಂದು  ಗಂಟೆಗೆ ಬಾಸ್ ನ ಕೋಣೆ ಒಳಗೆ ಹೋಗಿ ಬಂದ ಅಟೆಂಡರ್ ಸಿದ್ದಲಿಂಗು “ಬಾಸ್ ಸಿಟ್ಟಾಗಿದ್ದಾರೆ.’ಏನಯ್ಯ ನನಗೆ ಹುಷಾರಿಲ್ಲ .ನೆಗಡಿ,ತಲೆಭಾರ ಸ್ವಲ್ಪ ಜ್ವರನೂ ಬಂದಂತಿದೆ.ನೀನು ನೋಡಿದ್ರೆ ಇಷ್ಟೊಂದು ಫೈಲ್ ತಂದು ಕುಕ್ಕುತ್ತಿದ್ದೀಯಾ’ಎಂದು ರೇಗಿದರು  ಎನ್ನುತ್ತಾ ಹೊರಗೆ ಬಂದ ಸಿದ್ದಲಿಂಗು “ಈ ಸಾಹೇಬರಿಗೆ ಹುಷಾರಿಲ್ಲ  ಅಂತ ಯಾರಿಗಾದ್ರೂ ಕನಸು  ಬಿದ್ದಿರತ್ತಾ?’ ಎಂದು ಗೊಣಗಿಕೊಂಡ. ಆ ಬಾಸ್ ಗೆ ಹುಷಾರಿಲ್ವ? ಏನಂತೆ ?ಯಾವಾಗಿಂದ?ಡಿಪಾರ್ಟಮೆಂಟಿನಲ್ಲಿದ್ದ ಎಲ್ಲ ಉದ್ಯೋಗಿಗಳು ಒಟ್ಟಿಗೇ ಪ್ರತಿಕ್ರಿಯಿಸಿದರು. “ಬೆಳಿಗ್ಗೆ   ನಾನು ಅವರು ಬರೋ ಹೊತ್ತಲ್ಲಿ ಬೇರೆ ಡಿಪಾರ್ಟ್ ಮೆಂಟಿಗೆ ಹೋಗಿದ್ದೆ.ಅವರು  ಬಂದ ಮೇಲೂ ಅವರ ಕ್ಯಾಬಿನ್ಗೆ ಒಂದುಸಾರಿನೂಹೋಗಿಲ್ಲ .ಅದಕ್ಕೇನನಗೆವಿಷಯ  ಗೊತ್ತಾಗಿಲ್ಲ.”ಎಂದು ಹಲುಬಿದ  ಸೀನ.ಕೆಲಸವಿರಲಿ ಬಿಡಲಿ ಬಾಸ್ ನ ಕೋಣೆಗೆ ದಿನಕ್ಕೆ ಕೊನೇಪಕ್ಷ ನಾಲ್ಕೈದು ಸಾರಿ ಲಾಳಿ ಹೊಡೆಯುತ್ತಿದ್ದ ಅವನಿಗಂತೂ ಇದು ಆಘಾತಕಾರಿ ಸುದ್ಧಿ. ತಡಮಾಡಲೇ ಇಲ್ಲ .ದಢಾರನೆ ಬಾಸ್ ಕೋಣೆಗೆ ನುಗ್ಗಿ “ಏನ್ ಸಾರ್ ಹುಷಾರಿಲ್ವಂತೆ” ಎಂದು ಆರೋಗ್ಯ ವಿಚಾರಿಸಿದ. “ಹೌದ್ರೀ,ಬೆಳಗಿನಿಂದ ಸ್ವಲ್ಪ ನೆಗಡಿ,ಕೆಮ್ಮು ಜ್ವರವೂ ಇದೆಯೇನೋ?.ಕೆಲಸಕ್ಕೇನೂ ತೊಂದರೆಯಿಲ್ಲ” ಎಂದರು . “ಸಾರ್,ಡಾಕ್ಟರು ಏನಾದ್ರೂ ಬೇಕಾದ್ರೆ ಹೇಳಿ ಹಾಗೆಲ್ಲ ಅಲಕ್ಷ ಮಾಡಬಾರದು.””ಎನ್ನುತ್ತ ಹೊರಬಂದ. “ಇರಲಿ ನೋಡೋಣ “ ತಣ್ಣಗೆ ನುಡಿದರು ಬಾಸ್. ಬಾಸ್ ತನ್ನ ಮಾತಿಗೆ ಅವನು ನಿರೀಕ್ಷಿಸಿದ ಮಟ್ಟದಲ್ಲಿ ಪ್ರತಿಕ್ರಿಯೆ ನೀಡದಿದ್ದುದು ಅವನಿಗೆ ನಿರಾಸೆ ತಂದಿತ್ತು. ಸಹೋದ್ಯೋಗಿಗಳಿಗೆ “ಯಾರೂ ಸಧ್ಯಕ್ಕೆ ಒಳಗೆ ಹೋಗಬೇಡಿ ಬಾಸ್ ಸಿಟ್ಟಾಗಿದ್ದಾರೆ”ಎಂದು ಎಚ್ಚರಿಕೆ ನೀಡಿ ಮನಸ್ಸಿನ ದುಗುಡವನ್ನು ಹೊರಹಾಕಿದ. ಉಳಿದವರಿಗೆ ಈಗ ಸಂದಿಗ್ಧ. ಸೀನನ ಮಾತು ಕೇಳಿ ಸುಮ್ಮನಿರೋಣವೇ?ಅಥವಾ ಧೈರ್ಯ ತೊಗೊಂಡು ಒಂದು ಸಾರಿ ಒಳಕ್ಕೆ ಹೋಗೋಣವೇ ?ತಿಳಿಯದಾಯಿತು. ಬಾಸ್ ಎಂಬ ಹುಲಿ ಬೋನಿಗೆ ದಿನಾ ಸಲೀಸಾಗಿ ನುಗ್ಗುತ್ತಿದ್ದ ಸೀನನಿಗೇ ಈ ದುರ್ಗತಿಯಾದರೆ ಇನ್ನು ನಮ್ಮ ಪಾಡೇನು?ಎನ್ನುವುದು ಅವರ ಚಿಂತೆ ಕಛೇರಿಯಲ್ಲಿ ಈಗ ನೀರವ ಮೌನ.ಬಾಸ್ ಹುಷಾರಿಲ್ಲ ಅಂತ ಬೇಗ ಮನೆ ಹೋದರೆ ಹೆಂಡತಿ ಮಕ್ಕಳೊಡನೆ ವಂಡರ್ ಲಾ ಗೆ ಹೋಗಬಹುದೇ? ಸದಾನಂದನ ಚಿಂತೆ.ಹೀಗೆ ಒಬ್ಬೊಬ್ಬರಿಗೆ ಒಂದೊಂದು ಬಗೆಯ ಕಾರ್ಯಕ್ರಮದ ಸ್ಕೆಚ್ .ಅವರು ಹೋದದ್ದನ್ನು ನೋಡಿಕೊಂಡು  ಮನೆಗೆ ಹೋಗಿ ಸರ್ ಪ್ರೈಸ್ ಕೊಡೋಣ ಎಂದುಕೊಂಡವರು ಮತ್ತೆ  ಹಲವರು. ”ಸಿದ್ಲಿಂಗು ಮುಂದಿನ ಸಾರಿ ಒಳಗೆ ಯಾವುದಾದ್ರೂ ಫೈಲೋ ಫೋಲ್ಡರೋ ತೊಗೊಂಡು ಹೋಗೊದಿದ್ರೆ ನನ್ನ ಹತ್ರ ಕೊಡು .ನೀನು ಹೋಗಬೇಡ “ಎಂದು ಒಳಗೆ ಹೋಗುವುದನ್ನು ಅಡ್ವಾನ್ಸ್ ಬುಕಿಂಗ್ ಮಾಡಿದ ಮೂರ್ತಿ. “ಬಾಸ್ ಗಳಿಗೆ ಹುಷಾರಿಲ್ಲದಾಗ ಆರೋಗ್ಯ ವಿಚಾರಿಸುವ ಸದವಕಾಶ ತಪ್ಪಿಸಿಕೊಳ್ಳಲು ಯಾರಿಗೂ ಇಷ್ಟವಿರಲ್ಲ “ಅಂತ ಗೊಣಗಿಕೊಂಡ ಸದಾಶಿವ.”ಮೂರ್ತಿ ನೀನು ಹೋದಾಗ ಎಲ್ಲ ನೀನೇ ಮಾತನಾಡಿಬಿಡಬೇಡ.ನನಗೂ ಒಂದೆರಡು ಪಾಯಿಂಟ್ ಉಳಿಸು “ ಎಂದ ಕೋರಿದ. ಹೀಗೇ ಮುಂದುವರೆಯಿತು.”ಎದರುಗಡೆ ಇರುವ ಕ್ಲಿನಿಕ್ ನಿಂದ ಎಲ್ ಎಮ್ ಪಿ ಡಾಕ್ಟರ್ ಕರೆದುಕೊಂಡು  ಬರಲೆ ಎಂದೊಬ್ಬ,ಗೃಹವೈದ್ಯ,ಆಯುರ್ವೇದ,ಯುನಾನಿ,ರೇಖಿ, ಎಲ್ಲ ಪದ್ಧತಿಗಳೂ ಸಲಹೆಯಾದವು . ಜತೆಗೆ ರೋಗದ ಕಾರಣವೂ ಚರ್ಚೆಯಾಯಿತು.”ಸಾರ್ ನೀವು ಮೊನ್ನೆ ಹೆಡ್ ಆಫೀಸ್ ಏ ಸಿ ರೂಮ್ ನಲ್ಲಿ ಬೆಳಗಿನಿಂದ ಸಾಯಂಕಾಲದವರೆಗೆ ನಡೆದ ಮೀಟಿಂಗ್ ನಲ್ಲಿ ಇದ್ದ ಪರಿಣಾಮ ದು ” ಅಂತ ಒಬ್ಬ.”ಆ ಧೂಳಲ್ಲಿ ಅಷ್ಟೊಂದು ಹೊತ್ತು ಹೋಗಬಾರದಿತ್ತು ಇನ್ಸ್ಪೆಕ್ಷನ್  ಸಾರ್ .ಅಲರ್ಜಿಯಾಗಿಬಿಟ್ಟಿದೆ “ಅಂತ ಮತ್ತೊಬ್ಬ.ಅಂತೂ ಕಛೇರಿಯ ಪ್ರತಿಯೊಬ್ಬರೂ ಕಾಳಜಿಯ ಅಕ್ಷಯಪಾತ್ರೆಯನ್ನೇ ಸುರಿಸತೊಡಗಿದರು. ಅತಿಯಾದ ಸಲಹೆಗಳ ಪರಿಣಾಮವೋ ,ಮತ್ತೇನು ಕಾರಣವೋ ಏನೋ ಮಧ್ಯಾಹ್ನದ ಹೊತ್ತಿಗೆ ಬಾಸ್ ಅಸೌಖ್ಯ ಹೆಚ್ಚಾಯಿತು. ಡ್ರೈವರ್ ಶಿವಯ್ಯನನ್ನು ಕರೆತರಲು ಹೊರಟ ಸಿದ್ದಲಿಂಗನಿಂದ ಅವರು ಮನೆಗೆ ಹೋಗುವ ಸೂಚನೆ ಸಿಕ್ಕಿತು. ಲಗುಬಗೆಯಿಂದ ಎಲ್ಲರೂ  ತಂತಮ್ಮ ಯೋಜನೆಗಳ ಬಗ್ಗೆ ಚಿಂತಿಸಿದರು. ಮನೆಗೆ ಹೊರಟ ಬಾಸ್ ಗೆ “ಸಾರ್,ಹುಷಾರು”ಈಗಲೇ ಡಾಕ್ಟರರ ಹತ್ತಿರ ಹೋಗಿ””ರೆಸ್ಟ್ ತೊಗೊಳ್ಳಿ” ಮುಂತಾದ ಮಾತುಗಳ ಪುನರುಕ್ತಿಯಾಯಿತು. “‘ಮನೆ ತನಕ ಬರೋಣವೇ ಸಾರ್ “ ಎಂದು ಸೀನ ಕೇಳಿದಾಗ . “ಬೇಢ ನಿಮ್ಮ ಕೆಲಸ ಗಮನಿಸಿಕೊಳ್ಳಿ,ಸಾಧ್ಯವಾದರೆ ನಾಳೆ ವಾಪಸು ಬರ್ತೇನೇ” ಎನ್ನುತ್ತಾ  ಹೊರಟರು . “ಅರ್ಜೆಂಟ್ ಬೇಡ ಎರಡು  ದಿನ ರೆಸ್ಟ್ ತೊಗೊಂಡೇ ಬನ್ನಿ”ಸೀನ ತೀರ್ಪು ನೀಡುವಂತೆ ಹೇಳಿದ. ಬ್ರಹ್ಮಚಾರಿ ರಾಘವೇಶನಿಗೆ ತಾವೆಲ್ಲ ಹೋದಮೇಲೂ ಸ್ವಲ್ಪ ಹೊತ್ತು ಇರುವಂತೆ ಉಳಿದವರು ಕೇಳಿಕೊಂಡರು.ಪಾಪ!ಮದುವೆಯಾಗದೆ ಇದ್ದವರಿಗೆ ಇದೇ ಹಣೇಬರಹ. ಎಲ್ಲರೂ ತಾವು ಬೇಗ ಮನೆಗೆ ಬರುವ ವಿಷಯವನ್ನು ತಿಳಿಸಲು ಉತ್ಸುಕರಾದರು. —- ಬಾಸ್ ಹೋದದ್ದನ್ನು ನೋಡಿಕೊಂಡು ಪಕ್ಕದ ವಿಭಾಗದ ಅಟೆಂಡರ್  ಕೃಷ್ಣಪ್ಪ ಬಂದು ಸಿದ್ದಲಿಂಗುವಿನೊಡನೆ ಲೋಕಾಭಿರಾಮವಾಗಿ  ಮಾತಿಗೆ ನಿಂತ. “ಇವತ್ತು ನಿನಗೆ ಆರಾಮ ಬಿಡು ಸಿದ್ದಲಿಂಗು ಬೆಲ್ ಹೊಡೆದ್ರೆ ಹೋಗೋ ತೊಂದರೆಯಿಲ್ಲ” ಎಂದ. “ಹೌದು ಬಿಡಪ್ಪ ,ಹೋದ ವಾರ ನನಗೂ ಹುಷಾರಿರಲಿಲ್ಲ.ಜ್ವರ ,ಶೀತ ನಿದ್ದೆಯಿಲ್ದೆ ಕಣ್ಣು ಕೆಂಪಗಾಗಿತ್ತು.ಯಾರೂ ಕನಿಕರ  ತೋರ್ಸೋರು ಇಲ್ಲಿರಲಿಲ್ಲ.ಕಣ್ಣು ನೋಡಿ ಯಾಕೋ ನಿನ್ನೆ ಎಣ್ಣೆ ಪಾರ್ಟಿ ಜೋರಾ ?ಅಂತ ಲೇವಡಿ ಮಾತು ಬೇರೆ”. ಸಿದ್ದಲಿಂಗು ಬೇಸರದ ದನಿಯಲ್ಲಿ ಹೇಳಿದ. ಕೃಷ್ಣಪ್ಪ “ನಿಜ,ನಿಜ ಗಾದೆ ಕೇಳಿಲ್ವಾ ‘ಕಿರಿ ದೇವರಿಗೆ ಮರದ ಜಾಗಟೆ  ಅಂತ ;ಕಂಚಿನ ಜಾಗಟೆ ಬಾರಿಸೋದಕ್ಕೆ ನಾವೇನು ಹಿರೇದೇವ್ರು ಕೆಟ್ಟೋದ್ವಾ ?” ಎನ್ನುತ್ತ ಅಲ್ಲಿಂದ ಹೊರಟ. *********************

ಕಥಾಯಾನ Read Post »

ಕಥಾಗುಚ್ಛ

ಕಥಾಯಾನ

ಮನಸು ಮಂಜುಗಡ್ಡೆಯಲ್ಲ. ಜ್ಯೋತಿ ಗಾಂವಕರ್ “ಈಗೀಗ ಏನೂ ನಿರೀಕ್ಷೆಗಳೇ ಇಲ್ಲ ನೋಡು ಭಾವನಾತ್ಮಕ ಅವಲಂಬನೆಯೂ ಇಲ್ಲ ಆಪ್ತವಾಗಿ  ಏನೋ ಹೇಳ್ಕೊಬೇಕು ಅನ್ಸೋದೇ ಇಲ್ಲ ಎದೆ ಬಂಡೆಯಾಗ್ತಿದೆ ಅನ್ನಿಸ್ತಿದೆ “ ಅಂತ ಗೆಳತಿಯೊಬ್ಬಳು ನಿರ್ಭಾವುಕವಾಗಿ ಹೇಳಿಕೊಳ್ಳುತ್ತಿದ್ದರೆ ….. ” ಹಾಗಾದರೆ ಬಂಡೆಯ ಮೇಲಿಂದ ಇಳಿಯುವ ಜಲಪಾತದಂತಹ ಭೋರ್ಗರೆತವೇನು ? ಭಾವುಕತೆಗೆ ಹುಟ್ಟಿದ ಕಣ್ಣೀರಲ್ಲವಾ” ಅಂತ  ಹೇಳಿ ಅವಳನ್ನು ಆ ನಿರ್ಲಿಪ್ತ ಭಾವದಿಂದ ಹೊರತರುವದಕ್ಕೆ ಪ್ರಯತ್ನಿಸುತ್ತಿದ್ದೆ… “ನಿಜ ಬಿಡು ಎಷ್ಟೇ ಕಲ್ಲಾಗಿದ್ದೇವೆಂದರೂ ಈ ಹೆಣ್ಣುಮಕ್ಕಳಿಗೆ ಕರಗೋದು ಅಭ್ಯಾಸ ….ಅತಿ ಭಾವುಕತೆ ಅನ್ನೋದು ಶಾಪ ನೋಡು” …ಅನ್ನುತ್ತ  ಕಣ್ಣಂಚಲಿ ಜಿನುಗುತ್ತಿರುವ ನೀರನ್ನು ಪ್ರಯತ್ನಪೂರ್ವಕವಾಗಿ ಹತ್ತಿಕ್ಕುತ್ತಿದ್ದಳು … “ಇತ್ತೀಚೆಗೆ ತುಂಬಾ ಬದಲಾಗಿಬಿಟ್ಟೆ ನೀನು. ಭಾವನೆಗಳೇ ಇಲ್ಲ. ಎಲ್ಲಾ  ಯಾಂತ್ರಿಕ ಅನ್ನಿಸ್ತಿದೆ ನಂಗೆ ಸರಿಯಾಗಿ ಮಾತೇ ಆಡಲ್ಲ ಎಲ್ಲದಕ್ಕೂ ಸಣ್ಣ ಉತ್ತರ ಕೊಡ್ತಿ. ಊಟ ಮಾಡಿದ್ಯಾ ಅಂತನೂ ಕೇಳಲ್ಲ , ಬೇಜಾರಲ್ಲಿದ್ರೆ ಏನಾಯ್ತು ಅಂತನೂ ಕೇಳಲ್ಲ ಹೊಗ್ಲಿ ನೀನೂ ಏನೂ ಹೇಳ್ಕೊಳಲ್ಲ ನನ್ನತ್ರ. ನಾನೇ ಕೇಳ್ಕೊಂಡು ಬಂದಾಗ್ಲೂ ಅವಾಯ್ಡ್ ಮಾಡ್ತಿ ಎಲ್ಲಾ ಹೇಳ್ತಾ ಕೂರೋಕೆ ಟೈಮ್ ಇಲ್ಲ ಅಂತೀಯ  “ ಎನ್ನುತ್ತ ಅಳು ಮೋರೆ ಹಾಕಿಕೊಂಡು ಆಗಾಗ  ತಕರಾರು ತೆಗೆಯುತ್ತಿದ್ದ  ಅವಳಿಗೆ …”ಈ ಹೆಂಗಸರದ್ದು ಇದೇ ಆಯ್ತು ಕಿರಿಕಿರಿ  ..ಮಾಡೋಕೆ ಬೇರೆ ಕೆಲಸ ಇಲ್ವಾ?  ಮೂರೊತ್ತೂ ಇಂತದ್ದೇ ಆಯ್ತು  ಕೆಲಸಕ್ಕೆ ಬಾರದ ಭಾವನೆಗಳಂತೆ, ಅದಂತೆ ಇದಂತೆ ..ಹೇಳ್ಬೇಕಂತೆ ಕೇಳ್ಬೇಕಂತೆ , ಇವಳದ್ದೊಂದೇ ಪ್ರೀತಿ ಅಂತೆ ನಮಗಿಲ್ಲಿ ಸಾವ್ರ ಟೆನ್ಷನ್ನು. ಹುಷಾರಿಲ್ದಿದ್ರೆ ಟ್ಯಾಬ್ಲೆಟ್ ತಗೊಬೇಕು ಹಸಿವೆ ಆದ್ರೆ ಊಟ ಮಾಡ್ಬೇಕು ಏನು ಕಡಿಮೆ ಆಗಿದೆ  ನಿಂಗೆ ?  ಸರಿ ..ನನಗ್ಯಾವ ಭಾವನೆಯೂ ಇಲ್ಲ. ಒಪ್ಕೊತೀನಿ  ನಿನಗಿದೆಯಲ್ಲ ಏನು ಮಾಡ್ದೆ ? ಏನು ಸಾಧಿಸಿದೆ ಇಷ್ಟು ದಿನ ..? ಬೇಜಾರು ಮಾಡ್ಕೊಂಡು ಕೂತೆ , ಗಂಡ ಸತ್ತವರಂಗೆ ಮುಖ ಮಾಡ್ಕೊಂಡೆ. ನನಗೊಂದಿಷ್ಟು ಕಿರಿಕಿರಿ ಮಾಡ್ದೆ ಇಷ್ಟೇ ತಾನೇ …ಇನ್ನೇನಾದ್ರೂ ಆಯ್ತಾ .? ಹೋಗ್ಲಿ ಅಷ್ಟೊಂದು ಭಾವನೆ ಇರೊ ನೀನಾದ್ರೂ ಖುಷಿಯಿಂದ ಇದ್ಯಾ ? “ ಅಂತ ಮುಖಕ್ಕೆ ಹೊಡೆದಂತೆ ಹೇಳಿ ಹೋಗುವ ಅವನನ್ನು ನಿರ್ಭಾವುಕವಾಗಿ ಸಹಿಸದೇ ಅವಳಿಗೆ ಬೇರೆ ದಾರಿಯಿರಲಿಲ್ಲ ಮತ್ತದೇ ವಾಸ್ತವವೂ ಕೂಡಾ  ಆಗಿರುತ್ತದಲ್ಲ …!! “ಅರೇ ಹೌದಲ್ವಾ ..? ಅವನಂದಿದ್ದೇ ಸರಿ ಏನುಪಯೋಗವಿದೆ ಅದರಿಂದ ? ನನಗೇನು ಕಮ್ಮಿ ಆಗಿದೆ? ನಾನೇ ಸರಿ ಇಲ್ಲ ನನ್ ಮನಸ್ಸೇ ಸರಿ ಇಲ್ಲ ಸಣ್ಣಪುಟ್ಟದಕ್ಕೂ ಕೊರಗ್ತೀನಿ. ಅತಿಯಾಗಿ ನಿರೀಕ್ಷೆ ಮಾಡ್ತೀನಿ ನಾಳೆಯಿಂದ ಬದಲಾಗ್ಬೇಕು ನಾನೂ” ಎಂದುಕೊಳ್ಳುತ್ತ ಕಣ್ಣೊರೆಸಿಕೊಂಡು , ಮುಖ ತೊಳೆದು ಮತ್ತೆ ತನ್ನ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತಾಳೆ ಅವಳು .. ಹೌದು  ಭಾವುಕತೆ ಅನ್ನೋದು ಹೆಣ್ಣಿಗೆ ಶಾಪ..ಭಾವುಕ ಮನಸ್ಸಿಗೆ ತನ್ನ ಸುತ್ತಲಿನ ಸಂಭಂದಗಳಲ್ಲಿ  ವಿನಾಕಾರಣ ನಿರೀಕ್ಷೆಗಳು, ಪುಟ್ಟ ಪುಟ್ಟ ಆಸೆಗಳು .. ಪ್ರೀತಿಸಿದ ಜೀವಗಳ ಅನುನಯಿಸಿ ಅನುಸರಿಸಿ, ಕೇಳಿ, ಹೇಳಿ, ಕಾಳಜಿ ಮಾಡಿ, ಸಮಯ ಕೊಡುತ್ತಾಳೆ. ಎಲ್ಲರ ನೋವಿಗೂ ಮಡಿಲಾಗುತ್ತಾಳೆ, ಹೆಗಲಾಗುತ್ತಾಳೆ, ಸುಮ್ಮನೇ ಕಿವಿಯಾಗುತ್ತಾಳೆ. ಭರವಸೆಯಾಗುತ್ತಾಳೆ .  ಆಮೇಲೆ ತನಗೂ ಒಂದಿಷ್ಟು ಅದೆಲ್ಲವೂ ಅನಾಯಾಸವಾಗಿ ಸಿಕ್ಕಲಿ ಅನ್ನೋ ಸಣ್ಣ ನಿರುಪದ್ರವಿ ಸ್ವಾರ್ಥ ಅವಳದ್ದು ..ನಿಸ್ವಾರ್ಥಿಯಾಗಿರೋಕೆ ಅವಳೇನೂ ದೇವರಲ್ವಲ್ಲ..!ಸಾಮಾನ್ಯ ಮನುಷ್ಯಳೇ ತಾನೆ ..? ಯಾವುದೂ ಪ್ರತಿಯಾಗಿ ಸಿಗುತ್ತಿಲ್ಲ ಕೊಟ್ಟಿದ್ದಷ್ಟೇ ಬಂತು ಅಂದಾಗ ಸಣ್ಣಗೆ ಅಡರಿಕೊಳ್ಳುವ ನಿರಾಸೆ… ಬದುಕು ಇಷ್ಟೇ ಬಿಡು ಅನ್ನೊ ನಿರ್ಲಿಪ್ತತೆ.  “ಸರಿ ನಾಳೆಯಿಂದ ಪಕ್ಕಾ ಪ್ರಾಕ್ಟಿಕಲ್ ಆಗೋಣ. ಇವೆಲ್ಲ ಕೆಲಸಕ್ಕೆ ಬಾರದ ಭಾವಗಳು ನಿರೀಕ್ಷೆಗಳನ್ನು ಮೀರಬೇಕು. ಇಲ್ದಿದ್ರೆ ಖುಷಿಯಿಂದ ಇರೋಕೆ  ಆಗಲ್ಲ ನನ್ನಿಂದ ಎಲ್ರಿಗೂ ಬೇಜಾರು ”  ಅಂದುಕೊಳ್ಳುತ್ತ  ಒಳಗೊಳಗೇ ನಿರ್ಧರಿಸಿ ಮತ್ತೊಂದು ಹೊಸ ಮುಂಜಾವಿಗೆ ತರೆದುಕೊಳ್ಳುವ ಹೊತ್ತಿಗೆ ನಿರೀಕ್ಷಿಸದೇ, ಕೇಳದೇ, ಒಂದು ಪ್ರೀತಿಯ ಭಾವನಾತ್ಮಕ ಸ್ಪಂದನೆ ,ಮಾತು,  ಸಿಕ್ಕಿಬಿಟ್ಟಿರುತ್ತದೆ .. ಆವತ್ತಿನ ಮಟ್ಟಿಗೆ ಅವಳು ಆಕಾಶದಲ್ಲಿನ ಹಕ್ಕಿ ‌…. ಮತ್ತೆ ಕರಗಿಬಿಡುತ್ತಾಳೆ .. ಖುಷಿ ಪಡದೇ ಇರೋಕೆ ಅವಳಿನ್ನೂ ಕಲ್ಲಾಗಿರುವದೇ ಇಲ್ಲವಲ್ಲ …! ಎಲ್ಲವೂ ಅಂದುಕೊಂಡಿರುತ್ತಾಳೆ ಅಷ್ಟೇ ಅವತ್ತೇ ಹೊಸದಾಗಿ ಬದುಕುತ್ತಿದ್ದೇನೆ ಅನ್ನೊ ಭಾವ . ನಿನ್ನೆ ಅಂದುಕೊಂಡಿದ್ದೆಲ್ಲ ಸುಳ್ಳು ಇವತ್ತಿನದೇ ಖುಷಿ ಅವಳ ಪಾಲಿಗೆ .. ನಿಜ..ಅಪ್ಪಟ ಭಾವುಕ ಮನಸ್ಸು ಅದು ಮನಸ್ಸು ಕಲ್ಲಾಗುವದೆಂದರೆ ಕರಗಿದಷ್ಟು ಸಲೀಸಲ್ಲ ನಿರ್ಭಾವವೆನ್ನುವದು ಸುಖಾಸುಮ್ಮನೇ ಮೆತ್ತಿಕೊಳ್ಳುವದಿಲ್ಲ. ಸ್ಮಶಾನದಂತಹ ಮೌನವು ವಿನಾಕಾರಣ ಅಡರಿಕೊಳ್ಳುವದೂ ಇಲ್ಲ ಆದರೂ ಅವಳು ಆಗಾಗ  ಮನಸ್ಸು  ಕಲ್ಲಾಗಿಸಿ ಏನನ್ನೂ ನಿರೀಕ್ಷಿಸದೇ ನಮ್ಮವರಿಗೆ , ಪ್ರೀತಿಪಾತ್ರರಿಗೆ  ನಗುವನ್ನಷ್ಟೇ ಹಂಚುವ ಸಾಹಸಕ್ಕೆ ಇಳಿಯುತ್ತಾಳೆ . ಆದರೆ … ಅವಳ ನಿರ್ಧಾರದ  ಹಿಂದೆ ಎಷ್ಟೊಂದು  ನಿರಾಸೆಗಳ ಪಟ್ಟಿಯಿರುತ್ತದೆ. ಗೊತ್ತಾ? ಪುಟ್ಟ ಪುಟ್ಟ ಭಾವಗಳ ಒರತೆಯೆಲ್ಲ ದಿವ್ಯ ನಿರ್ಲಕ್ಷ್ಯದಲಿ ಇಂಗಿ ಹೋದದ್ದಿರುತ್ತೆ . ಸಣ್ಣ ವಂಚನೆಯಿಂದ ಬೀಸಿ ಬಡಿದದ್ದಿರುತ್ತೆ ಉಡಾಫೆಯ ಉತ್ತರದಲ್ಲಿ ಮಾತೆಲ್ಲ  ಅರ್ಧಕ್ಕೇ ಮುಗಿಸಿದ ಅಸಹನೀಯ ಮೌನವಿರುತ್ತೆ ಅನಾದರವೆಂಬ ಅಗ್ಗಿಷ್ಟಿಕೆಯ ಬಿಸಿ ಇರುತ್ತೆ. ಪ್ರತೀ ಕೊಡುವಿಕೆಯಲ್ಲೂ ..ಬರೀ ಪಡೆದುಕೊಂಡಷ್ಟೇ ಸುಮ್ಮನಾಗಿಬಿಡುವ  ಸುತ್ತಲಿನ ಅದೆಷ್ಟೋ ಮನಸುಗಳ  ನಿರಾಕರಣೆ ಇರುತ್ತೆ. “ಭಾವುಕತೆಗಳೆಲ್ಲ ಬಂಡೆಯಂತಾಗುವದು ಹೀಗೇ ನೋಡು  ಗೆಳತೀ  ಎಲ್ಲ ಭಾವಗಳ ಭೋರ್ಗರೆತವನ್ನೂ   ಮೀರಿ ಅರ್ಥಮಾಡಿಸಿ, ನಾವೂ ಅರ್ಥೈಸಿಕೊಂಡು,  ಬದಲಾಗುವ ಹೊತ್ತಿಗೆ  ನಮಗೇ ಯಾವುದೂ ಬೇಡವನ್ನುವ ಪ್ರಭುದ್ದತೆ ಬಂದುಬಿಡುತ್ತದೆ. ಎಲ್ಲಾ ಮೀರಿ ತುಂಬಾ ಮುಂದೆ ಬಂದಿರ್ತೀವಿ  ನೊಡು” ಎಂದು  ನಿಟ್ಟುಸಿರುಬಿಟ್ಟ ಅವಳಿಗೆ ಉತ್ತರ ಕೊಡಲಾಗದೇ ಸೋತೆ… ಅವಳಿಗೊಂದಿಷ್ಟು ವಿನಾಕಾರಣ ಪ್ರೀತಿ ಬೇಕು, ಸುಮ್ಮನೆ ಕಾಳಜಿ ಬೇಕು,  ಸಣ್ಣಪುಟ್ಟ ಭಾವನಾತ್ಮಕ ಸಂಭಂದಗಳೇ ಅವಳನ್ನು ದಿನನಿತ್ಯ ಜೀವಂತವಾಗಿಡುವುದು. ಯಾವುದೇ ಸಂಭಂದವಿರಲೀ ಹಣ, ಆಸ್ತಿ ಏನನ್ನೂ  ಖರ್ಚು ಮಾಡದೆಯೇ ,  ಎಲ್ಲಿಯೋ  ದೂರ ಹೋಗಿ  ಕರೀದಿಸದೆಯೇ , ಯಾರಲ್ಲಿಯೂ ಕೈ ಚಾಚದೆಯೇ, ತುಂಬಾ ಸಮಯ ವ್ಯರ್ಥ ಮಾಡದೆಯೇ  ನಮ್ಮೊಳಗೇ ಸಿಗುವ ಇಂತಹ ಸಣ್ಣಪುಟ್ಟ ಪ್ರೀತಿಯನ್ನು ಪ್ರೀತಿಸಿದ ಜೀವಗಳಿಗೆ  ನಿರ್ಲಕ್ಷ್ಯ ಮಾಡದೇ  ಪ್ರಾಂಜಲವಾಗಿ ಕೊಟ್ಟುಬಿಟ್ಟರೆ , ಅವಳೂ ಖುಷಿಯಾಗಿ ನಿಮಗೂ ಖುಷಿಯನ್ನೇ ಹಂಚುತ್ತಾಳೆ . “ಏಕೆಂದರೆ  ಒಂದು ಭಾವುಕ ಮನಸ್ಸಿಗೆ ಪಡೆದದ್ದಕ್ಕೆ ದುಪ್ಪಟ್ಟು ಕೊಡುವದು ಕರಗತ” ..

ಕಥಾಯಾನ Read Post »

ಕಥಾಗುಚ್ಛ

ಕಥಾಯಾನ

ಜುಗ್ಗ ರಾಮಣ್ಣ ಊರಲ್ಲಿ ಎಲ್ಲರೂ ರಾಮಣ್ಣನನ್ನು ಕರೆಯುತ್ತಿದ್ದುದು ಜುಗ್ಗ ರಾಮಣ್ಣ ಅಂತಲೆ. ಅವನ ಮನೆ ಇದ್ದ ಬೀದಿಯ ಉಳಿದ ಮನೆಗಳವರು ತಮ್ಮ ನೆಂಟರಿಗಾಗಲಿ, ಪರಿಚಯದವರಿಗಾಗಲಿ ಮನೆಯ ವಿಳಾಸ ಕೊಡಬೇಕಾದರೆ ಬಸ್ ಸ್ಟ್ಯಾಂಡಿನಿಂದ ದಾವಣಗೆರೆ ರಸ್ತೆಯ ಕಡೆ ನಾಲ್ಕು ಹೆಜ್ಜೆ ಬಂದು ಜುಗ್ಗ ರಾಮಣ್ಣನ ಬೀದಿ ಎಲ್ಲಿ ಬರುತ್ತೆ ಅಂತ ಯಾರನ್ನೇ ಕೇಳಿದರೂ ಸಾಕು ನಾವಿರುವ ಬೀದಿ ತೋರಿಸ್ತಾರೆ ಅಂತ. ಅಷ್ಟರಮಟ್ಟಿಗೆ ಆ ಊರಿನವರು ಆ ಹೆಸರಿಗೆ ಹೊಂದಿಕೊಂಡು ಬಿಟ್ಟಿದ್ದರು. ಇದು ರಾಮಣ್ಣನ ಮನೆಯವರಿಗಷ್ಟೆ ಅಲ್ಲದೆ ಸ್ವತ: ರಾಮಣ್ಣನಿಗು ಗೊತ್ತಿತ್ತು. ಅವನ ಮನೆಯವರಿಗೆ ಇದು ಸ್ವಲ್ಪ ಮುಜುಗರ ಎನಿಸಿದರೂ, ಸ್ವತ: ರಾಮಣ್ಣನಿಗೆ ಅದರಿಂದ ಯಾವ ಬೇಸರವಾಗಲಿ, ಮುಜುಗರವಾಗಲಿ ಇರಲಿಲ್ಲ. ತಾನು ಜುಗ್ಗ ಎನಿಸಿಕೊಳ್ಳುವ ನಿಟ್ಟಿನಲ್ಲಿನ ಆತನ ಪ್ರಯತ್ನ ಮುಂದುವರೆದಿತ್ತು. ಊರಲ್ಲಿ ತನ್ನ ಹೆಸರಿನ ಹಿಂದೆ ಸೇರಿಕೊಂಡ ಜುಗ್ಗ ಎನ್ನುವ ಶಬ್ದ ತನಗೆಸಿಕ್ಕ ಯಾವುದೊ ಪ್ರಶಸ್ತಿಯೇನೊ ಎಂಬಂತೆ ಒಳಗೊಳಗೆ ಖುಶಿ ಪಡುವಷ್ಟರ ಮಟ್ಟಿಗೆ ರಾಮಣ್ಣ ಅದಕ್ಕೆ ಒಗ್ಗಿ ಹೋಗಿದ್ದ. ಹಾಗೆ ನೋಡಿದರೆ ರಾಮಣ್ಣನೇನು ಹುಟ್ಟಾ ಶ್ರೀಮಂತನೇನಲ್ಲ. ಅವರ ಅಪ್ಪ ಆ ಕಾಲದಲ್ಲಿ ಒಂದು ಸೈಕಲ್ ಶಾಪ್ ಇಟ್ಟುಕೊಂಡು ಸುತ್ತಮುತ್ತಲಿನ ಹಳ್ಳಿಯ ಜನರಿಗೆ ಚಿರಪರಿಚಿತರಾಗಿದ್ದರು. ಹೈಸ್ಕೂಲು ದಾಟದ ರಾಮಣ್ಣನೂ ಕ್ರಮೇಣ ಸೈಕಲ್ ಶಾಪಿನ ಕೆಲಸಕ್ಕೆ ನಿಂತು ಬಿಟ್ಟ. ಪಂಕ್ಚರ್ ಹಾಕುವುದರಿಂದ ಹಿಡಿದು ವೀಲ್ ಬೆಂಡ್ ತೆಗಿಯೋವರೆಗಿನ ಅಷ್ಟೂ ಕೆಲಸಗಳನ್ನು ಕಲಿತುಕೊಂಡು ಸೈಕಲ್ ರಿಪೇರಿಯ ವಿಚಾರದಲ್ಲಿ ಪಂಟರ್ ಅನಿಸಿಕೊಂಡಿದ್ದ. ರಾಮಣ್ಣನಿಗೆ ಇಪ್ಪತ್ಕಾಲು ವರ್ಷವಾಗಿದ್ದಾಗ ಅವರ ಅಪ್ಪ ತುಮಕೂರಿನ ವ್ಯಾಪಾರಸ್ಥರೊಬ್ಬರ ಮಗಳುಸಾವಿತ್ರಮ್ಮನ ಜೊತೆ ಮದುವೆ ಮಾಡಿಸಿದ್ದರು..ರಾಮಣ್ಣನನ್ನು ಮದುವೆಯಾಗಿ ಬರುವಾಗ ಸಾವಿತ್ರಮ್ಮನೇನು ಬರಿಗೈಲಿ ಬಂದಿರಲಿಲ್ಲ. ಆ ಕಾಲದಲ್ಲಿಯೇ ಇಪ್ಪತ್ತು ಸಾವಿರ ರೂಪಾಯಿ ನಗದು ಕಾಲು ಕೆಜಿ ಬಂಗಾರ ಅರ್ದ ಕೆಜಿ ಬೆಳ್ಳಿ ಒಡವೆಗಳ ಗಂಟಿನೊಂದಿಗೆಯೇ ಬಂದಿದ್ದಳು. ಒಂದರ ಹಿಂದೆ ಒಂದರಂತೆ ನಾಲ್ಕು ಮಕ್ಕಳ ತಾಯಿಯಾದ ಸಾವಿತ್ರಮ್ಮನಿಗೆ ಮಾವ ಇರುವತನಕ ಯಾವ ಕಷ್ಟವೂ ಎದುರಾಗಿರಲಿಲ್ಲ. ಮನೆ ಮತ್ತು ಅಂಗಡಿಗಳ ವ್ಯವಹಾರಗಳನ್ನು ತನ್ನ ಕೈಲೇ ಇಟ್ಟುಕೊಂಡಿದ್ದ ರಾಮಣ್ಣನ ಅಪ್ಪ ತೀರಾ ದಾರಾಳಿಯಲ್ಲದಿದ್ದರು ಮನೆಗೆ ತಂದು ಹಾಕುವಲ್ಲಿ ಉಣ್ಣುವುದು ತಿನ್ನುವುದರಲ್ಲಿ ಜುಗ್ಗತನ ತೋರಿಸಿದವನಲ್ಲ. ಹೀಗಾಗಿ ರಾಮಣ್ಣನ ಮಕ್ಕಳು ತಾತನ ಆರೈಕೆಯಲ್ಲಿಯೇ ಬೆಳೆಯತೊಡಗಿದ್ದರು. ರಾಮಣ್ಣನ ಮೊದಲ ಮೂರೂ ಮಕ್ಕಳು ಗಂಡು ಮಕ್ಕಳಾಗಿದ್ದು ನಾಲ್ಕನೆಯದು ಮಾತ್ರ ಹೆಣ್ಣಾಗಿತ್ತು. ನಾಲ್ಕನೆಯದಾಗಿ ಹೆಣ್ಣು ಹುಟ್ಟಿದ ಮೂರನೆ ತಿಂಗಳಿಗೆ ರಾಮಣ್ಣನ ಅಪ್ಪ ಪಾಶ್ರ್ವವಾಯುವಿಗೆ ತುತ್ತಾಗಿ ಶಿವನ ಪಾದ ಸೇರಿಬಿಟ್ಟಿದ್ದರು. ಅಲ್ಲಿಂದಾಚೆಗೆ ರಾಮಣ್ಣನ ಯಜಮಾನಿಕೆ ಶುರುವಾಯಿತು. ಕೈಗೆ ವ್ಯವಹಾರ ಸಿಕ್ಕೊಡನೆ ರಾಮಣ್ಣ ಕೈ ಬಿಗಿಮಾಡತೊಡಗಿದ. ಸೈಕಲ್ಲು ಶಾಪಿಗೆ ಬರುತ್ತಿದ್ದ ಗಿರಾಕಿಗಳ ಕಷ್ಟ ಸುಖ ತಿಳಿದುಕೊಂಡಿರುತ್ತಿದ್ದ ರಾಮಣ್ಣ ನಿದಾನವಾಗಿ ಮನೆಯಲ್ಲಿದ್ದ ದುಡ್ಡನ್ನು ಬಡ್ಡಿಗೆ ಬಿಡತೊಡಗಿದ. ಮೊದಲು ಸಣ್ಣದಾಗಿ ಶುರು ಮಾಡಿಕೊಂಡ ಈಬಡ್ಡಿ ವ್ಯವಹಾರ ರಾಮಣ್ಣನ ಕೈ ಹಿಡಿಯತೊಡಗಿತು. ಮೊದಮೊದಲು ನಂಬಿಕೆಗೆ ಸೀಮಿತವಾಗಿ ನಡೆಯುತ್ತಿದ್ದ ವ್ಯವಹಾರ ಕ್ರಮೇಣ ಪತ್ರಗಳನ್ನು ಬರೆಸಿಕೊಳ್ಳುವ ಹಂತಕ್ಕೆ ಬಂದಿತ್ತು. ದಿನಕಳೆದಂತೆ ರಾಮಣ್ಣ ನಿದಾನವಾಗಿ ದೊಡ್ಡ ವ್ಯವಹಾರಗಳಿಗೆ ಕೈ ಹಾಕತೊಡಗಿದ್ದ. ಮನೆಪತ್ರ, ಹೊಲಗದ್ದೆಗಳ ಪತ್ರವನ್ನು, ಬಂಗಾರದ ಒಡವೆಗಳನ್ನು ಅಡವಿಟ್ಟುಕೊಂಡು ಸಾಲ ಕೊಡತೊಡಗಿದ. ಈ ಲೇವಾದೇವಿವ್ಯವಹಾರ ದೊಡ್ಡದಾಗುತ್ತಿದ್ದಂತೆ ಸೈಕಲ್ಲುಗಳ ಜಾಗದಲ್ಲಿ ಆಗತಾನೆ ಮಾರ್ಕೆಟ್ಟಿಗೆ ಬಂದ ಮೋಟಾರ್ ಸೈಕಲ್ಲುಗಳ ಹಾವಳಿ ಕಂಡ ರಾಮಣ್ಣ ತನ್ನದೇ ಆದ ಮೋಟಾರ್ ಸೈಕಲ್ ಮಾರಾಟದ ಶೋರೂಮನ್ನು ಪ್ರಾರಂಬಿಸಿದ. ಅದರಲ್ಲಿ ಭರ್ಜರಿಯಾಗಿ ವ್ಯಾಪಾರ ನಡೆಯ ತೊಡಗಿತು. ಈ ನಡುವೆ ತನ್ನ ಲೇವಾದೇವಿ ವ್ಯವಹಾರಗಳಲ್ಲಿ ಪೋಲೀಸರ ಕಿರಿಕಿರಿ ತಡೆಯಲಾಗದೆ ನಾಮಕಾವಸ್ಥೆಗೆ ಒಂದು ಫೈನಾನ್ಸ್ ಕಂಪನಿ ರಿಜಿಸ್ಟರ್ ಮಾಡಿಸಿ ತನ್ನ ವ್ಯವಹಾರದ ಇಪ್ಪತ್ತೈದರಷ್ಟನ್ನು ಅದರ ಮೂಲಕ ಮಾಡ ತೊಡಗಿ, ಸರಕಾರದ ಕಣ್ಣಿಗೆ ಮಣ್ಣೆರಚಿ ವ್ಯವಹಾರ ನಡೆಸ ತೊಡಗಿದ. ಊರೊಳಗೆ ನಷ್ಟದಲ್ಲಿ ನಡೆಯುತ್ತಿದ್ದ ಒಂದು ರೈಸ್ ಮಿಲ್ಲನ್ನು ಖರೀಧಿಸಿ ಅದನ್ನು ಅಭಿವೃದ್ದಿ ಪಡಿಸಿ ಲಾಭ ಬರುವಂತೆ ಮಾಡಿಕೊಂಡ. ಕೊಟ್ಟ ಸಾಲ ಹಿಂದಿರುಗಿಸಲಾಗದವರ ಹತ್ತಾರು ಏಕರೆ ಗದ್ದೆ, ಅಡಿಕೆ ತೋಟಗಳನ್ನು ತನ್ನ ಹೆಸರಿಗೆ ಮಾಡಿಸಿಕೊಂಡು ಜಮೀನ್ದಾರನೆಂಬ ಹೆಸರು ಗಳಿಸಿಕೊಂಡ. ಇಷ್ಟೆಲ್ಲ ಆದರೂಹೀಗೆ ಯಥೇಚ್ಚವಾಗಿ ಸೇರುತ್ತಲೇ ಹೋದ ದುಡ್ಡು ಮನೆಯಲ್ಲಿ ಅವನ ಹೆಂಡತಿ ಮಕ್ಕಳಿಗೆ ಯಾವುದೆ ಸುಖಸಂತೋಷ ತರಲೇಇಲ್ಲ. ಮನೆಯಲ್ಲಿ ಒಂದು ಅಡುಗೆಮಾಡುವ ವಿಚಾರದಲ್ಲೂ ರಾಮಣ್ಣನ ಅನುಮತಿ ಬೇಕಾಗಿತ್ತು. ಆತ ತಂದು ಕೊಟ್ಟ ದಿನಸಿಯಲ್ಲಿಯೇ ಸಾವಿತ್ರಮ್ಮ ಸಂಸಾರ ನಿಬಾಯಿಸಬೇಕಿತ್ತು. ಮಕ್ಕಳು ಆಸೆಯಿಂದ ಏನಾದರು ತಿಂಡಿ ಕೇಳಿದರೂ ರಾಮಣ್ಣ ಸಂತೋಷವಾಗಿರುತ್ತಿದ್ದ ಸಮಯ ನೋಡಿ ಕೇಳಿ ಆತನ ಅಪ್ಪಣೆ ಪಡೆದೆ ಮಾಡಿಕೊಡಬೇಕಾಗಿತ್ತು. ಅವನ ಗಂಡುಮಕ್ಕಳಿಗು ಅಪ್ಪನ ಜುಗ್ಗತನ ಅರ್ಥವಾಗಿ ತಮ್ಮ ಆಸೆಗಳನ್ನು ಅದುಮಿಟ್ಟುಕೊಂಡೇ ಬೆಳೆಯ ತೊಡಗಿದ್ದರು. ವರ್ಷದಲ್ಲಿ ಗೌರಿ ಹಬ್ಬ ಮತ್ತು ದೀಪಾವಳಿಗೆ ಬಟ್ಟೆ ತೆಗೆಯುವಾಗಲೂ ಮೂವರು ಗಂಡು ಮಕ್ಕಳಿಗು ಒಂದೇ ತರದ ಅಗ್ಗದ ಬಟ್ಟೆ ತೆಗೆಯುತ್ತಿದ್ದ. ಅವನ್ನು ಹೊಲಿಸುವಾಗಲು ಅವರ ಅಳತೆಗಿಂತ ಸ್ವಲ್ಪ ಹೆಚ್ಚೇ ಅನ್ನುವಷ್ಟು ದೊಡ್ಡದಾಗಿಹೊಲಿಸುತ್ತಿದ್ದ.ಇನ್ನು ತನ್ನ ಮನೆಗೆ ಯಾರೇ ನೆಂಟರು ಬಂದರೂ ನೆಟ್ಟಗವರು ಒಂದು ರಾತ್ರಿಯೂ ಇರಬಾರದ ರೀತಿಯಲ್ಲಿ ಕಟುಕಿಯಾಡಿ ಕಳಿಸಿಬಿಡುತ್ತಿದ್ದ.ಅವನ ಇಂತಹ ಜಿಪುಣತೆಯನ್ನು ಕಂಡ ಸಾವಿತ್ರಮ್ಮನ ತವರಿನವರು ಸಹ ಈ ಕಡೆ ತಲೆಹಾಕಿ ಮಲಗುವುದನ್ನು ನಿಲ್ಲಿಸಿಬಿಟ್ಟಿದ್ದರು.ಗಂಡು ಮಕ್ಕಳಿಗೆ ಹದಿನಾರು ವರ್ಷ ದಾಟಿದರೂ ಯಾವತ್ತೂ ಅವರು ಒಂದೇ ಒಂದು ರೂಪಾಯಿ ತೆಗೆದುಕೊಂಡು ಅಂಗಡಿಗೆ ಹೋಗಿ ಸಾಮಾನು ತಂದವರಲ್ಲ.ಅವರುಗಳು ಹೈಸ್ಕೂಲು ಮುಗಿಸುವಷ್ಟರಲ್ಲಿ ಒಬ್ಬೊಬ್ಬರನ್ನೇ ತನ್ನ ವ್ಯವಹಾರಗಳನ್ನು ನಡೆಸಲು ಬಳಸಿಕೊಳ್ಳತೊಡಗಿದ.ದೊಡ್ಡ ಮಗ ಶೋರೂಮಿನಲ್ಲಿ ಕೂತರೂ ದಿನಸಂಜೆ ಅಪ್ಪನಿಗೆ ಪೈಸೆಪೈಸೆಗೆ ಲೆಕ್ಕ ಒಪ್ಪಿಸಬೇಕಿತ್ತು.ಬಂದ ಗಿರಾಕಿಗಳಿಗೆ ಒಂದು ಲೋಟ ಕಾಫಿ ತರಿಸಿ ಕುಡಿಸಲು ಸ್ವಾತಂತ್ರವಿಲ್ಲದೆಯೆ ಅವನು ಶೋರೂಮಲ್ಲಿ ಕೂರಬೇಕಿತ್ತು ಎರಡನೆಯವನು ಫೈನಾನ್ಸ್ ಆಪೀಸಲ್ಲಿ ಕೂತು ಲೆಕ್ಕಾಚಾರ ನೋಡಿಕೊಳ್ಳಬೇಕಿತ್ತು. ಜೊತೆಗೆ ಸಾಲ ವಸೂಲಿ ಮಾಡಿ ಅಪ್ಪನಿಗೆ ತಂದು ಕೊಡುವುದಷ್ಟನ್ನೆ ಮಾಡಬೇಕಾಗಿತ್ತು. ಇನ್ನು ವಸೂಲಿಗೆ ಹೋಗಲು ಹಳೆಯಕಾಲದ ಸೈಕಲ್ಲನ್ನೇ ತುಳಿಯಬೇಕಿತ್ತೇ ಹೊರತು ಮೋಟಾರ್ ಬೈಕು ಇರಲಿಲ್ಲ. ತಮ್ಮದೇಆದ ಮೋಟಾರ್ ಬೈಕಿನ ಶೋರೂಮಿದ್ದರೂ ಮಕ್ಕಳು ಮಾತ್ರ ಸೈಕಲ್ಲು ತುಳಿದೆ ಕೆಲಸ ಮಾಡಬೇಕಾಗಿತ್ತು. ಯಾರಾದರೂಅವನ ಸರೀಕರು ರಾಮಣ್ಣನನ್ನು ಕೇಳಿದರೆ ಸಯಕಲ್ಲು ಅನ್ನೋದು ನಮಗೆ ಮನೆದೇವರಿದ್ದ ಹಾಗೆ. ಅದರ ಪುಣ್ಯದಿಂದಲೇ ನಾವಿವತ್ತು ಈ ಮಟ್ಟಿಗೆ ಬಂದಿರುವುದೆಂದು ತಿಪ್ಪೆ ಸಾರಿಸುತ್ತಿದ್ದ. ಮೂರನೆಯವನು ರೈಸುಮಿಲ್ಲಿಗೆ ಹೋಗುತ್ತಾ ಗದ್ದೆತೋಟಗಳ ನಿಗಾ ವಹಿಸಿ ಕೆಲಸ ಮಾಡಬೇಕಾಗಿತ್ತೇ ಹೊರತು ಐದೇ ಐದು ಪೈಸೆಯ ಮುಖ ಕೂಡಾ ನೋಡಿರಲಿಲ್ಲ. ಇನ್ನು ರಾಮಣ್ಣ ಸ್ವತ: ತಾನಾದರು ಸುಖ ಅನುಭವಿಸಿದನೆ ಅಂದರೆ ಅದೂ ಇಲ್ಲ. ಒಂದು ದಿನವೂ ಒಳ್ಳೆಯ ಊಟಮಾಡದೆ ಒಂದೊಳ್ಳೆಯ ಬಟ್ಟೆ ಹಾಕದೆ ಜಿಪುಣತನದಲ್ಲಿಯೇ ಬದುಕುತ್ತಿದ್ದ. ಇನ್ನು ಊರಲ್ಲಿನ ಯಾವುದೇ ಸಮಾರಂಭಗಳಿಗೂ ನಯಾಪೈಸೆ ಕೊಡುತ್ತಿರಲಿಲ್ಲ. ಹಾಗಾಗಿ ಆತನ ಮನೆಯ ಬಾಗಿಲಿಗೆ ಸಾಲ ಕೇಳುವವರ ಹೊರತಾಗಿ ಬೇರೆಯವರೂ ಬರುತ್ತಿರಲಿಲ್ಲ. ಹಬ್ಬ ಹರಿದಿನಗಳನ್ನು ಆಚರಿಸಿದರೆ ಖರ್ಚಾಗುತ್ತದೆ ಅಂತ ಸಾವಿತ್ರಮ್ಮನ ತವರು ಮನೆಗೆ ಹೆಂಡತಿ ಮಕ್ಕಳನ್ನು ಕಳಿಸಿ ತಾನೊಬ್ಬನೆ ಮನೆಯಲ್ಲಿ ಇದ್ದು ಬಿಡುತ್ತಿದ್ದ. ಅವರು ಹೋಗಲು ಮಾತ್ರ ರೈಲಿನ ಟಿಕೇಟಿಗೆ ದುಡ್ಡು ಕೊಡುತ್ತಿದ್ದರಿಂದ ವಾಪಾಸು ಬರುವಾಗ ಅವಳ ತವರು ಮನೆಯವರೆ ಅವರನ್ನು ಕರೆದುಕೊಂಡು ಬಂದು ಬಿಟ್ಟುಹೋಗಬೇಕಾಗಿತ್ತು.. ರಾಮಣ್ಣ ಜುಗ್ಗರಾಮಣ್ಣನಾಗಿ ಹೀಗೆ ಹೆಸರುಮಾಡಿರುವಾಗಲೆ ನಡೆದ ಘಟನೆಯೊಂದು ರಾಮಣ್ಣನ ಜಂಘಾಬಲವನ್ನೇ ಉಡುಗಿಸಿಬಿಟ್ಟಿತ್ತು. ರಾಮಣ್ಣನ ಮೂವರು ಗಂಡುಮಕ್ಕಳ ನಂತರ ಹಿಟ್ಟಿದ ಮಗಳು ಸುಮ ಪಿಯುಸಿ ಓದುತ್ತಿದ್ದಳು. ಒಂದು ದಿನ ಕಾಲೇಜಿಗೆ ಹೋದವಳು ಮನೆಗೆವಾಪಾಸು ಬರದೆಕಣ್ಮರೆಯಾಗಿ ಬಿಟ್ಟಿದ್ದಳು. ಹಾಗೆ ನೋಡಿದರೆ ರಾಮಣ್ಣನಿಗೆ ಮಗಳನ್ನು ಕಂಡರೆ ಬಹಳ ಪ್ರೀತಿ ಇತ್ತು. ಎಷ್ಟೇ ಜುಗ್ಗನಾದರೂ ಮನೆಯಲ್ಲಿ ಬೇರ್ಯಾರಿಗು ಕಾಣದಂತೆ ಆಕೆಗೆ ಗುಟ್ಟಾಗಿ ತುಂಬಾ ದುಡ್ಡು ಕೊಡುತ್ತಿದ್ದ. ಅವಳಿಗೆ ಏನು ಬೇಕಾದರು ತೆಗೆದುಕೊಳ್ಳಲು ನಡೆದುಕೊಳ್ಳಲು ಸ್ವಾತಂತ್ರ ಕೊಟ್ಟಿದ್ದ. ಆದರೆ ಅವಳ ಮೇಲೆ ತನಗಿರುವ ಪ್ರೀತಿಯನ್ನು ಅವನ್ಯಾವತ್ತು ಬಹಿರಂಗವಾಗಿ ತೋರಿಸಿಕೊಂಡವನಲ್ಲ. ಅಂತಹ ಮಗಳು ವಾರವಾದರು ಮನೆಗೆ ಬಾರದೆ ನಾಪತ್ತೆಯಾದಾಗ ರಾಮಣ್ಣ ಕುಸಿದು ಕುಳಿತು ಬಿಟ್ಟಿದ್ದ. ವಾರ ಕಳೆದರು ಅವನು ಮನೆಯಿಂದಾಚೆ ಬರಲೆ ಇಲ್ಲ. ಕೊನೆಗೆ ಗಂಡು ಮಕ್ಕಳೆ ಸ್ಟೇಷನ್ನಿಗೆ ಹೋಗಿಕಂಪ್ಲೇಟ್ ಕೊಟ್ಟು ಬಂದಿದ್ದರು. ಹತ್ತನೆ ದಿನದ ಹೊತ್ತಿಗೆ ಅವಳು ಅದೇ ಊರಿನ ಹುಡುಗನನ್ನು ಮದುವೆಯಾಗಿ ಬೆಂಗಳೂರಲ್ಲಿ ಮನೆ ಮಾಡಿಕೊಂಡು ಸಂಸಾರ ನಡೆಸುತ್ತಿರುವುದು ಗೊತ್ತಾಯಿತು. ಈ ವಿಷಯ ಕೇಳಿದ ಸಾವಿತ್ರಮ್ಮ ಹೆಂಚು ಹಾರಿಹೋಗುವಂತೆ ಕಿರುಚಾಡಿ ಅಳುವಾಗ ‘ಮುಚ್ಚೇ ಬಾಯಿ! ಅವಳಿಗಿಷ್ಟ ಬಂದವನನ್ನು ಮದುವೆ ಮಾಡಿಕೊಂಡು ಹೋಗಿದ್ದಾಳೆ. ಎಲ್ಲೋ ಸುಖವಾಗಿರಲಿ’ ಅಂತೇಳಿ ಎಲ್ಲರಲ್ಲು ಅಚ್ಚರಿ ಹುಟ್ಟಿಸಿದ್ದ. ಬೆಂಗಳೂರಿಗೆ ಹೋಗಿ ಅವಳನ್ನು ನೋಡಿಕೊಂಡು ಬರೋಣ ಅಂತ ಹೆಂಡತಿ ಮಕ್ಕಳು ಹೇಳಿದರೂ ರಾಮಣ್ಣ ಸುತಾರಂ ಒಪ್ಪದೇ ಹೋದ.ಅಷ್ಟರಲ್ಲಿ ಊರಲ್ಲಿ ಇನ್ನೊಂದಿಷ್ಟು ವಿವರಗಳು ಬಯಲಾಗ ತೊಡಗಿದ್ದವು ಸುಮಾ ಪ್ರೀತಿಸಿ ಮದುವೆಯಾದ ಹುಡುಗ ಬೇರೆ ಯಾರೂ ಆಗಿರದೆ ನಾಲ್ಕು ವರ್ಷಗಳ ಹಿಂದೆ ರಾಮಣ್ಣನ ಸಾಲ ತೀರಿಸಲಾಗದೆ ಮನೆ ಹರಾಜಿಗೆ ಬಂದಾಗ ಅವಮಾನ ಸಹಿಸಲಾಗದೆ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದ ಚಂದ್ರಪ್ಪನ ಮಗ ಎನ್ನುವ ವಿಷಯವೇಊರಲ್ಲಿ ಕುತೂಹಲದ ಕತೆಯಾಗಿ ಹರಡಿತ್ತು. ರಾಮಣ್ಣನ ಮೇಲಿನ ಸೇಡಿನಿಂದಲೇ ಆ ಹುಡುಗ ಸುಮಾಳನ್ನು ತಲೆ ಕೆಡಿಸಿ ಕರೆದುಕೊಂಡು ಹೋಗಿ ಮದುವೆಯಾಗಿದ್ದಾನೆಂದು, ಸ್ವಲ್ಪ ದಿನವಾದ ಮೇಲೆ ಅವಳನ್ನು ಕೈಬಿಟ್ಟು ತವರು ಮನೆಗೆ ಓಡಿಸುತ್ತಾನೆಂದು ಜನ ಮಾತಾಡಿಕೊಳ್ಳತೊಡಗಿದ್ದರು. ಈ ವಿಷಯ ರಾಮಣ್ಣನ ಕಿವಿಗೂ ಬಿದ್ದಿತ್ತು. ಇದನ್ನು ಕೇಳಿದ ಸಾವಿತ್ರಮ್ಮನಂತು ಅಯ್ಯೋ ಈ ಗಂಡಸಿನ ಜುಗ್ಗತನದಿಂದ ನನ್ನ ಮಗಳ ಜೀವನ ಹಾಳಾಯಿತಲ್ಲ ಎಂದು ಎದೆ ಬಡಿದುಕೊಂಡು ಮನೆತುಂಬಾ ಉರುಳಾಡಿ ಅತ್ತಳು. ಗಂಡು ಮಕ್ಕಳು ಅಪ್ಪನನ್ನು ಮಾತಾಡಿಸುವ ಧೈರ್ಯ ಸಾಲದೆ ಕೂತುಬಿಟ್ಟಿದ್ದರು. ಅಂತೂ ಗಂಡ ಏನಾದರು ಅಂದುಕೊಂಡು ಸಾಯಲಿ ಎಂದುಕೊಂಡ ಸಾವಿತ್ರಮ್ಮ ಅವತ್ತು ಸಾಯಂಕಾಲ ಮೂವರು ಗಂಡುಮಕ್ಕಳನ್ನು ಕರೆದು ರೂಮಿನಲ್ಲಿ ಕೂತಿದ್ದ ಗಂಡನಿಗೆ ಕೇಳುವಂತೆ ನಾಳೆ ಬೆಳಗ್ಗಿನ ರೈಲಿಗೆ ಬೆಂಗಳೂರಿಗೆ ಹೋಗಿ ಮಗಳು ಅಳಿಯನನ್ನು ನೋಡಿಕೊಂಡು ಬರೋಣ ಬೆಳಿಗ್ಗೆ ಬೇಗ ಎದ್ದು ರೆಡಿಯಾಗಿ ಎಂದು ಹೇಳಿದಾಗ ನಡುಮನೆಯಲ್ಲಿ ಸಾಲಾಗಿ ಕೂತಿದ್ದ ಗಂಡು ಮಕ್ಕಳು ಮೌನವಾಗಿ ತಲೆಯಾಡಿಸಿದ್ದರು. ಈ ಮಾತುಗಳನ್ನು ಕೇಳಿಸಿಕೊಂಡರಾಮಣ್ಣ ಏನೂ ಮಾತಾಡಿರಲಿಲ್ಲ. ರಾತ್ರಿ ಮಾಮೂಲಿಯಂತೆಎಂಟುಗಂಟೆಗೆ ಊಟಕ್ಕೆ ಕರೆದಾಗ ಹೊರಗೆದ್ದು ಬಂದ ರಾಮಣ್ಣ ಹೆಂಡತಿ, ಮೂರೂಮಕ್ಕಳನ್ನು ಮುಂದೆ ಕೂರಿಸಿಕೊಂಡು ತನ್ನ ಕೈಲಿದ್ದ ಸಣ್ನ ಪೆಟ್ಟಿಗೆಯನ್ನು ಸಾವಿತ್ರಮ್ಮನ ಕೈಲಿ ಕೊಟ್ಟು ಇದರಲ್ಲಿ ಮನೆ, ಶೋರೂಂ, ಪೈನಾನ್ಸ್ , ಸೈಟು-ಮನೆಗಳ ಪತ್ರಗಳು,ಬ್ಯಾಂಕುಗಳ ಪಾಸ್ ಬುಕ್ಕುಗಳು ಸೇರಿದಂತೆ ಎಲ್ಲ ಪತ್ರಗಳೂ ಇವೆ. ನೀವು ಬೆಂಗಳೂರಿಗೆ ಹೋಗುವ ಮುಂಚೆ ಈ ಆಸ್ತಿಯನ್ನು ನಾಲ್ಕು ಭಾಗವನ್ನಾಗಿ ಮಾಡಿ ನಾಲ್ಕೂ ಮಕ್ಕಳ ಹೆಸರಿಗೆ ಮಾಡಿಸಿಬಿಡು. ನಮ್ಮ ಲಾಯರ್ ವೆಂಕಟೇಶಯ್ಯ ನಾಳೆ ಬೆಳಿಗ್ಗೆ ಒಂಭತ್ತು ಗಂಟೆಗೆ ಮನೆಗೆ ಬರ್ತಾರೆ. ನೀವೆಲ್ಲ ಕೂತು ಮಾತಾಡಿ ಯಾರ್ಯಾರಿಗೆ ಏನೇನು ಅಂತ ನಿದರ್ಾರ ಮಾಡಿಕೊಳ್ಳಿ ಎಂದು ಯಾರೀಗೂ ಪ್ರಶ್ನೆ ಕೇಳುವ ಅವಕಾಶ ಕೊಡದೆ ರೂಮಿಗೆ ಹೋಗಿ ಬಾಗಿಲು ಹಾಕಿಕೊಂಡ. ಬೆಳಿಗ್ಗೆ ಒಂಭತ್ತು ಗಂಟೆಯಾದರು ಯಾಕೆ ಎದ್ದಿಲ್ಲವೆಂದು ಸಾವಿತ್ರಮ್ಮ ಗಂಡನ ರೂಮಿಗೆ ಹೋದರೆ ಅವನಲ್ಲಿರಲಿಲ್ಲ. ಎಂದಿನಂತೆ ಬೆಳಿಗ್ಗೆ ಎದ್ದು ಯಾವುದಾದರು ವಸೂಲಿಗೆ ಹೋಗಿರಬೇಕೆಂದು ಕೊಳ್ಳುವಷ್ಟರಲ್ಲಿ ಲಾಯರ್ ವೆಂಕಟೇಶಯ್ಯ ಬಂದರು. ರಾಮಣ್ಣನ ಅನುಪಸ್ಥಿತಿಯಲ್ಲಿಯೇ ಅವರುಗಳು ಆಸ್ತಿಯ ಪತ್ರಗಳನ್ನಿಟ್ಟುಕೊಂಡು ಮಾತಾಡತೊಡಗಿದರು. ಅವರೆಲ್ಲ ಒಂದು ತೀಮರ್ಾನಕ್ಕೆ ಬರುವಷ್ಟರಲ್ಲಿ ಮದ್ಯಾಹ್ನ ಎರಡು ಗಂಟೆಯಾಗಿತ್ತು. ಅಷ್ಟು ಹೊತ್ತಾದರು ರಾಮಣ್ಣ ಬರದೆ ಹೋದಾಗ ಎಲ್ಲರಿಗು ಆತಂಕ ಅನುಮಾನ ಶುರುವಾಗಿತ್ತು. ಮತ್ತೊಂದು ಸಲ ಅವನ ರೂಮಿಗೆ

ಕಥಾಯಾನ Read Post »

ಕಥಾಗುಚ್ಛ

ಕಥಾಯಾನ

ಮಧುವಂತಿ ಅಂಜನಾ ಹೆಗಡೆ “ನೀನ್ಯಾಕೆ ಮದ್ವೆ ಆದೆ?” ರಜನಿ ಅವಿನಾಶನನ್ನು ಭೇಟಿಯಾದಾಗ ಕೇಳಿದ ಮೊದಲನೇ ಪ್ರಶ್ನೆ ಇದು. ಬೆಂಗಳೂರಿನ ಲಾ ಕಾಲೇಜೊಂದರ ಉಪನ್ಯಾಸಕ ಅವಿನಾಶ ಅವನ ಅಸಂಬದ್ಧ ಮಾತುಕತೆಗಳಿಂದ, ನಡೆವಳಿಕೆಯಿಂದ ರಜನಿಗೆ ಉಪನ್ಯಾಸಕ ಅಂತ ಅನ್ನಿಸುತ್ತಲೇ ಇರಲಿಲ್ಲ. ವಾರದ ಐದೂ ದಿನ ಬೆಳಗಿನ ಕ್ಲಾಸು ಮುಗಿಸಿ, ಊಟ ಮಾಡಿ ಮಲಗಿ ಎದ್ದವ ರಜನಿಗೊಂದು ಫೋನ್ ಮಾಡುವುದು ಅವಿನಾಶನ ದಿನಚರಿಗಳಲ್ಲೊಂದು. ಇವತ್ತು ಕ್ಲಾಸಲ್ಲಿ ಹಾಗಾಯ್ತು ಹೀಗಾಯ್ತು , ಹುಡುಗಿಯೊಬ್ಬಳು ಪಾಠ ಮಾಡುವಾಗ ನನ್ನನ್ನೇ ನೋಡ್ತಾ ಇದ್ಲು ಅಂತೆಲ್ಲ ಅವಿನಾಶ ಹೇಳುತ್ತಿದ್ದರೆ, “ಕ್ಲಾಸಿನಲ್ಲಿ ಪಾಠ ಮಾಡುವವನನ್ನ ನೋಡುವುದು ಕ್ಲಾಸ್ ರೂಮಿನ ನಿಯಮ ಮಾರಾಯ; ಅದಕ್ಕೆ ಲ್ಯಾಂಡ್ ಮಾರ್ಕ್ ಕೇಸುಗಳು ಬೇಕಿಲ್ಲ” ಎಂದು ಅವನ ಗರಿಗೆದರಿದ ಕನಸಿಗೆ ಪೂರ್ಣವಿರಾಮ ನೀಡುವುದು ರಜನಿಯ ದಿನಚರಿಯ ಭಾಗವಾಗಿತ್ತು ಕೂಡಾ. ಫ್ಯಾಮಿಲಿ ಲಾ ಅರೆದು ಕುಡಿದವನ ಹಾಗೆ ಮಾತನಾಡುತ್ತಿದ್ದ ಅವಿನಾಶನಿಗೆ ಕುಟುಂಬ ವ್ಯವಸ್ಥೆಯ ಕುರಿತಾಗಲೀ ಅಥವಾ ತಾನು ಪೂಜಿಸುವ ದೇವರ ಮೇಲೇ ಆಗಲಿ ಜಾಸ್ತಿ ಅಭಿಮಾನ-ಗೌರವಗಳು ಇರುವಂತೆ ರಜನಿಗೆ ಯಾವತ್ತೂ ಅನ್ನಿಸದೇ ಇರಲಿಕ್ಕೆ ಕಾರಣ ಅವನ ಮಾತನಾಡುವ ದಾಟಿಯೂ ಇರಬಹುದು. ಅವಳ ಮಾತಿನಲ್ಲಿ ಸ್ವಲ್ಪ ಕುತೂಹಲ ಕಾಣಿಸಿದರೂ “ನೀನೇನಕ್ಕೆ ಎಲ್ಲವನ್ನೂ ಕೆದಕ್ತೀಯಾ, ಹೇಳಿದಷ್ಟು ಅರ್ಥ ಮಾಡಿಕೊಂಡರೆ ಬೇಕಾದಷ್ಟಾಯ್ತು” ಎಂದು ಪ್ರತಿಕ್ರಿಯಿಸುತ್ತಿದ್ದ ಅವಿನಾಶನ ಆಕ್ರಮಣಕಾರಿ ಮನಸ್ಥಿತಿ ರಜನಿಗೆ ಅರ್ಥವೇ ಆಗದೇ ಒಂದು ವರ್ಷ ಕಳೆದಿತ್ತು ಅವರ ಸ್ನೇಹಕ್ಕೆ. ಅವಿನಾಶ ಫೇಸ್ ಬುಕ್ ನಲ್ಲಿ ಮದುವೆಯ ಕುರಿತು ಬರೆದ ಲೇಖನವೊಂದು ಯಾವುದೋ ಗ್ರೂಪ್ ನಲ್ಲಿ ಹರಿದಾಡಿದಾಗ “ನಾವ್ಯಾಕೆ ಕಡುಸಂಪ್ರದಾಯದ ಮನಸ್ಥಿತಿಯಿಂದ ಹೊರಗೆ ಬಂದು ಸಮಕಾಲೀನ ದೃಷ್ಟಿಕೋನದಲ್ಲಿ ಮದುವೆ-ಕುಟುಂಬಗಳ ಬಗ್ಗೆ ಚರ್ಚಿಸಬಾರದು?” ಎಂದು ರಜನಿ ಪ್ರತಿಕ್ರಿಯಿಸಿದ್ದು ಅವಿನಾಶನಿಗೆ ಆಕ್ಷೇಪಾರ್ಹ ಎನ್ನಿಸಿದ್ದು ಇನ್ಯಾರದೋ ಮುಖಾಂತರ ಗೊತ್ತಾಗಿತ್ತು ರಜನಿಗೆ. ಆಗಲೇ ರಜನಿ ಅವಿನಾಶನ ಫೇಸ್ ಬುಕ್ ಪ್ರೊಫೈಲ್ ತೆಗೆದು ನೋಡಿದ್ದು. ಅವನ ಓದಿಗೂ, ಮಾಡುವ ಕೆಲಸಕ್ಕೂ, ಆಸಕ್ತಿ-ಅಭಿರುಚಿಗಳಿಗೂ, ಜೀವನದ ಸ್ಥಿತಿಗತಿಗಳಿಗೂ ಹೊಂದಾಣಿಕೆಯೇ ಆಗದಂತೆ ಚಲ್ಲಾಪಿಲ್ಲಿಯಾಗಿ ಪ್ರೊಫೈಲ್ ತುಂಬಾ ಬಿದ್ದಿದ್ದ ಫೋಟೋಗಳು, ಅಪ್ ಡೇಟ್ ಗಳು ಅವನನ್ನೊಬ್ಬ ವಿಲಕ್ಷಣ ಜೀವಿಯಂತೆ ಚಿತ್ರಿಸುವಲ್ಲಿ ಸಫಲವಾಗಿದ್ದವು. ಅನಾಸಕ್ತಿಯಿಂದ ಕಣ್ಣಾಡಿಸುತ್ತಿದ್ದವಳಿಗೆ ಗಮನ ಸೆಳೆದದ್ದು ಇವೆಲ್ಲವುಗಳ ಮಧ್ಯೆ ಶೇರ್ ಆಗಿದ್ದ ಒಂದು ಭೈರವಿ ಭಜನೆ. ಹತ್ತು ನಿಮಿಷದ ವಿಡಿಯೋ ನೋಡಿದವಳು, ಮೆಸೆಂಜರ್ ನಲ್ಲಿ ಅವಿನಾಶ್ ರಾವ್ ಎಂದು ಹುಡುಕಿ “ನಿಮ್ಮ ಭೈರವಿಯ ವಿಡಿಯೋ ತುಂಬಾ ಇಷ್ಟವಾಯ್ತು; ನಾನು ಮದುವೆಯ ಬಗ್ಗೆ ಪ್ರತಿಕ್ರಿಯಿಸಿದ್ದು ನಿಮಗೆ ಇಷ್ಟವಾದಂತಿಲ್ಲ ಕ್ಷಮಿಸಿ” ಎಂದು ಮೆಸೇಜ್ ಕಳಿಸಿ, ಜೊತೆಗೆ ರಿಕ್ವೆಸ್ಟ್ ಕಳಿಸಿ ಹಾಸಿಗೆಯ ಮೇಲೆ ಅಡ್ಡಾದವಳಿಗೆ ಎಚ್ಚರವಾಗಿದ್ದು ಅಮ್ಮನ ಫೋನ್ ಬಂದಾಗ. “ಇವತ್ತು ಮಾರುತಿ ದೇವಸ್ಥಾನದಲ್ಲಿ ನಿನ್ನ ಹೆಸರಿನ ಪೂಜೆ ಇತ್ತು; ಮೂವತ್ತು ವರ್ಷವಾಯಿತು ಕಣಮ್ಮ ನೀನು ಹುಟ್ಟಿ, ಇನ್ನಾದರೂ ಮದುವೆ ಬಗ್ಗೆ ಯೋಚನೆ ಮಾಡಬಾರದಾ?” ಎಂದಳು ಅಮ್ಮ. ಅಮ್ಮ ಕಳೆದ ವರ್ಷ ವೈಶಾಖ ಪಾಡ್ಯಕ್ಕೂ ‘ನಿನಗೆ ಇಪ್ಪತ್ತೊಂಬತ್ತು ತುಂಬಿತು ಇನ್ನಾದರೂ ಮದುವೆ ಆಗು’ ಅಂದಿದ್ದು ನೆನಪಿದೆ ರಜನಿಗೆ. ಓದು ಮುಗಿದ ದಿನದಿಂದ “ಇನ್ನು ರಜನಿಗೆ ಒಂದು ಒಳ್ಳೇ ಗಂಡು ಹುಡುಕಿ ಮದುವೆ ಮಾಡಿದರೆ ಜವಾಬ್ದಾರಿ ಕಳೀತು” ಅಂತ ಹೇಳುತ್ತಲೇ ಬಂದಿರುವ ಅಮ್ಮನಿಗೆ, “ನಾನೆಂದರೆ ಯಾಕೆ ಜವಾಬ್ದಾರಿ ನಿನಗೆ, ಪ್ರೀತಿ ಎಲ್ಲಿಗೆ ಹೋಯಿತು?” ಎಂದು ಕೇಳಿಬಿಡುವ ಮನಸ್ಸು ರಜನಿಗೆ. ಚಿಕ್ಕವಳಿದ್ದಾಗಲೇ ಅಪ್ಪನ ಕಣ್ಣು ತಪ್ಪಿಸಿ ರೊಮ್ಯಾಂಟಿಕ್ ಕಾದಂಬರಿಗಳನ್ನು ಓದುತ್ತಿದ್ದ ಅವಳಿಗೆ ಮದುವೆ, ಮಕ್ಕಳು, ಸಂಸಾರ ಎಲ್ಲ ಸಲೀಸು ಎಂಬ ಭ್ರಮೆ ತೀರಿದ್ದು ಕೆಲಸಕ್ಕೆ ಸೇರಿದಾಗಲೇ. ಹೊಸ ದಿನಕ್ಕೊಂದು ಹೊಸ ಸುಂದರ ಅನುಭೂತಿ ದೊರಕಿಸುತ್ತಿದ್ದ ಬದುಕು ಅಕ್ಕಪಕ್ಕದ ಬದುಕುಗಳ ಅನುಭವಗಳಿಗೆ ದಕ್ಕುತ್ತ ಜಡವಾಗುತ್ತ ಹೋಗಿದ್ದಕ್ಕೆ ಅವಳಿಗೆ ಬೇಸರವಿದೆ. ಎಂಟು ವರ್ಷಗಳಿಂದ ಅಮ್ಮನ ಅದೇ ಜವಾಬ್ದಾರಿಯ ಮಾತು ಕೇಳುತ್ತಾ ಬಂದಿರುವ ರಜನಿಗೆ ಈಗೀಗ ಸಂಬಂಧಗಳೆಲ್ಲವೂ ಬಣ್ಣ ಬದಲಾಯಿಸಿ, ಜವಾಬ್ದಾರಿಯಾಗಿ ರೂಪವನ್ನೂ ಬದಲಾಯಿಸಿ ಬರಿದಾಗುತ್ತವೆ ಎನ್ನುವ ಯೋಚನೆ ಭಯ ಹುಟ್ಟಿಸುತ್ತದೆ. ನನಗೆ ಮದುವೆ ಆಗುವ ಯಾವುದೇ ಉದ್ದೇಶವಿಲ್ಲ ಎಂದು ಅಮ್ಮನಿಗೆ ಹೇಳಿಬಿಡಬೇಕು ಅಂತ ಯೋಚಿಸುತ್ತಾ ಕುಳಿತಿದ್ದ ಒಂದು ಸಂಜೆ ಅವಿನಾಶನ ಮೆಸೇಜು, “ಬಿಡುವಿದ್ದಾಗ ಫೋನ್ ಮಾಡಿ, ಮಾತನಾಡೋಣ” ಎಂದು ನಂಬರ್ ಕೊಟ್ಟಿದ್ದ. ಹಾಗೆ ಶುರುವಾದ ಅವರಿಬ್ಬರ ಸ್ನೇಹ ವಿಚಿತ್ರವಾಗಿಯೇ ಓಡುತ್ತಿತ್ತು. ಪ್ರೀತಿಯ ಮಾತುಗಳಿಗೆಲ್ಲ ವ್ಯಂಗ್ಯವಾಗಿಯೋ, ಕುಹಕದಿಂದಲೋ ಪ್ರತಿಕ್ರಿಯಿಸುತ್ತಿದ್ದ ಅವಿನಾಶ ಯಾವುದೋ ನಿರಾಶೆ-ತಲ್ಲಣಗಳ ಸ್ಥಿತ್ಯಂತರಕ್ಕಾಗಿ ಹೋರಾಡುತ್ತಿರುವಂತೆ ಭಾಸವಾಗುತ್ತಿದ್ದ. “ಸಾಕು ಎನ್ನಿಸುವಷ್ಟು ಸಿಗದೇ ಇರುವುದರ ಮೇಲೆ ಮನುಷ್ಯನಿಗೆ ಸಾಯುವವರೆಗೂ ಆಸೆ ಇರುತ್ತೆ ಕಣೇ” ಎನ್ನುತ್ತಾ ಎಳೆಪ್ರಾಯದ ಹುಡುಗಿಯರ ಎದೆಯ ಬಗ್ಗೆ ಮಾತಾಡುತ್ತಿದ್ದ. ವಿದ್ಯಾರ್ಥಿನಿಯೊಬ್ಬಳು ಯಾವುದೋ ಕೇಸ್ ಬಗ್ಗೆ ಮಾಹಿತಿ ಬೇಕೆಂದು ತನ್ನ ಡೆಸ್ಕಿಗೆ ಬಂದಾಗ ತಾನವಳ ಎದೆ ನೋಡಿದ್ದು, ಅವಳಿಗೆ ಅದು ಗೊತ್ತಾಗಿ “ಏನ್ಸಾರ್, ಯಾವ ಬಣ್ಣದ ಬ್ರಾ ಹಾಕಿದೀನಿ ಅಂತ ನೋಡ್ತಾ ಇದೀರಾ ಅಂತ ಕಣ್ಣು ಮಿಟಕಿಸಿದಳು; ಈಗಿನ ಕಾಲದ ಹುಡುಗೀರು ತುಂಬಾ ಫಾಸ್ಟ್” ಅಂತೆಲ್ಲ ಕಿರಿಕಿರಿಯಾಗುವಂತೆ ಮಾತನಾಡುವಾಗ ಇವನಿಗೆ ಕೌನ್ಸೆಲಿಂಗ್ ಅಗತ್ಯವಿದೆ ಎನ್ನಿಸುತ್ತಿತ್ತು ರಜನಿಗೆ. ಮದುವೆಯಾಗಿ ಇಬ್ಬರು ಮಕ್ಕಳಿರುವ ಐವತ್ತು ವರುಷದ ಗಂಡಸೊಬ್ಬ ಹುಡುಗಿಯರ ಎದೆ, ಬ್ರಾ ಬಗ್ಗೆ ಮಾತನಾಡುವಾಗ ಮದುವೆಯ ಬಗ್ಗೆ ಇರುವ ಆಸಕ್ತಿ ಗೌರವಗಳೆಲ್ಲ ಇನ್ನಷ್ಟು ಕಡಿಮೆಯಾಗುತ್ತಿದ್ದವು. ಒಂದಿನ ಕ್ಲಾಸ್ ಮುಗಿಸಿದವನೇ ಫೋನ್ ಮಾಡಿ, “ಈ ವೀಕೆಂಡ್ ಚೌಡಯ್ಯದಲ್ಲೊಂದು ಒಳ್ಳೆ ಸಂಗೀತ ಕಾರ್ಯಕ್ರಮ ಇದೆ, ಎರಡು ಪಾಸ್ ಇದೆ; ಎಂಟಿಆರ್ ನಲ್ಲಿ ನಿಂಜೊತೆ ಊಟ ಮಾಡಬೇಕು ನಾನು; ಹೇಳೋದು ಮರೆತಿದ್ದೆ, ಆವತ್ತೊಂದು ವಾಟ್ಸಾಪ್ ಸ್ಟೇಟಸ್ ಹಾಕಿದ್ಯಲ್ಲ ಹಳದಿಸೀರೇದು, ಆ ಸೀರೆ ಉಟ್ಕೊಂಡು ಬಾ ಚೆನ್ನಾಗಿ ಒಪ್ಪುತ್ತೆ ನಿಂಗೆ; ಆ ಬಳೆ ಕೂಡಾ ಚೆನ್ನಾಗಿದೆ ಕಣೇ, ನೀ ಬಳೆ ಹಾಕಿದ್ದನ್ನು ನೋಡಿಯೇ ಇರಲಿಲ್ಲ ನಾನು” ಎಂದ. ಪರಿಚಯವಾಗಿ ಒಂದು ವರ್ಷವಾಗಿದ್ದರೂ ಒಮ್ಮೆಯೂ ಭೇಟಿಯಾಗಲು ಆಸಕ್ತಿ ತೋರಿಸದಿದ್ದ ಅವಿನಾಶ ಇದ್ದಕ್ಕಿದ್ದಂತೆ ಸಂಗೀತ ಕಾರ್ಯಕ್ರಮಕ್ಕೆ ಹೋಗೋಣ ಎಂದಿದ್ದು, ನಿಂಜೊತೆ ಊಟ ಮಾಡಬೇಕು ಎಂದಿದ್ದು, ತನ್ನ ಬಗ್ಗೆ ಯಾವತ್ತೂ ಒಳ್ಳೆಯ ಮಾತುಗಳನ್ನೇ ಆಡದ ಮನುಷ್ಯ ಸೀರೆ, ಬಳೆಗಳ ಬಗ್ಗೆ ಮಾತಾಡಿದ್ದು! ತಾನು ಗಮನಿಸಿಯೇ ಇರದ ಅವಿನಾಶನ ಇನ್ನೊಂದು ಮುಖವೆನ್ನಿಸಿತು ರಜನಿಗೆ. ಅಷ್ಟಕ್ಕೂ ನಾವು ಬದುಕಿನಲ್ಲಿ ಕಳೆದುಕೊಳ್ಳುವುದು ಗಮನಕ್ಕೆ ಬಾರದವುಗಳನ್ನೇ ಅಲ್ಲವೇ! ಫೋಟೋಗಳಲ್ಲಿ, ಮಾತುಗಳಲ್ಲಿ ಕಾಣಿಸಿಕೊಂಡಿದ್ದಕ್ಕಿಂತ ಸುಂದರವಾಗಿದ್ದಾನೆ ಅನ್ನಿಸಿತು ಭೇಟಿಯಾದಾಗ. ಅಲ್ಲಲ್ಲಿ ಬೆಳ್ಳಗಾದ ಗಡ್ಡದ ಮೇಲೆ ಕೈಯಾಡಿಸುತ್ತ ವಿಶ್ ಮಾಡಿದವನ ಕಣ್ಣುಗಳು ಹೊಳೆದವು. “ಹೋಗ್ಲಿ, ಹೆಂಡತಿ ಮಕ್ಕಳ ಫೋಟೋವನ್ನಾದರೂ ತೋರಿಸು ಮಾರಾಯ” ಎಂದಿದ್ದಕ್ಕೆ, ಮುದ್ದಾಗಿ ನಗುತ್ತ “ಯಾಕೆ ನನ್ನ ಮದ್ವೆ ಹಿಂದೆ ಬಿದ್ದಿದೀಯಾ, ನೀ ಯಾಕೆ ಮದ್ವೆ ಆಗಲಿಲ್ಲ ಅದನ್ನ ಹೇಳು” ಎಂದ. ನಿನ್ನಂಥ ಗಂಡಸು ಸಿಗಲಿಲ್ಲ ಎಂದು ರೇಗಿಸಬೇಕೆಂದುಕೊಂಡ ರಜನಿ, “ಯಾಕೋ ಬಂಧನಗಳ ಬಗ್ಗೆ ಆಸಕ್ತಿ ಉಳಿದಿಲ್ಲ” ಎಂದು ಸುಮ್ಮನಾದಳು. ಫ್ರೆಂಚ್ ಸಿನೇಮಾಗಳಿಂದ ಹಿಡಿದು ಪುರಂದರದಾಸರ ಕೀರ್ತನೆಗಳವರೆಗೆ ನಿರರ್ಗಳವಾಗಿ ಮಾತನಾಡುತ್ತ ಊಟ ಮುಗಿಸಿದ ಅವಿನಾಶ ಸಿಗರೇಟು ಅಂಟಿಸುತ್ತ, “ನಾನು ಮದುವೆಯಾದಾಗ ನನಗೆ ನಲವತ್ತು. ದೇಹಕ್ಕೆ ಒಂದು ಹೆಣ್ಣು ಬೇಕಿತ್ತು ಅದಕ್ಕೇ ಮದುವೆ ಆದೆ” ಎಂದ. ಬಣ್ಣದ ಮಾತುಗಳಿಲ್ಲದ ಅವನ ಕಣ್ಣುಗಳೊಳಗಿನ ಪ್ರಾಮಾಣಿಕತೆ ರಜನಿಯನ್ನು ಕಲಕಿತು; ಯಾರದೋ ಹೃದಯದ ಸತ್ಯದ ತುಣುಕೊಂದು ಇನ್ಯಾರದೋ ಫೇಸ್ ಬುಕ್ ಗೋಡೆಗೆ ಅಂಟಿಕೊಂಡಂತೆ! ಅವಿನಾಶ ಹುಟ್ಟಿದ್ದು ಶಿವಮೊಗ್ಗದ ಹತ್ತಿರದ ಹಳ್ಳಿಯೊಂದರಲ್ಲಿ. ಬಡತನಕ್ಕೆ ದಣಿದು ಅಮ್ಮ ತೀರಿಕೊಂಡಾಗ ಇವನಿನ್ನೂ ಹತ್ತನೇ ಕ್ಲಾಸು ಮುಗಿಸಿದ್ದ. ನಾಲ್ವರು ಹೆಣ್ಣುಮಕ್ಕಳ ಮದುವೆ ಮಾಡಿ ಸೋತಿದ್ದ ಅಪ್ಪ ಅವಿನಾಶನಿಗೂ, ಅವನ ಅಣ್ಣನಿಗೂ ಮುಂದೆ ಓದಿಸಲಾರದಷ್ಟು ಸಾಲದಲ್ಲಿದ್ದ. ಆಗ ಅವಿನಾಶನಿಗೆ ದಾರಿ ತೋರಿಸಿದ್ದು ಹೈಸ್ಕೂಲ್ ಹೆಡ್ ಮಾಸ್ಟರ್ ಅವಧಾನಿಯವರು. ಅವಧಾನಿಯವರ ವಯಸ್ಸಾದ ಅಕ್ಕನನ್ನು ನೋಡಿಕೊಳ್ಳಲೆಂದು ಬೆಂಗಳೂರಿಗೆ ಬಂದವ ಇಲ್ಲೇ ಕಾನೂನು ಪದವಿ ಮುಗಿಸಿ, ಸ್ಕಾಲರ್ ಶಿಪ್ ನಲ್ಲೇ ಮಾಸ್ಟರ್ಸ್ ಮುಗಿಸಿ ಕೆಲಸ ಹಿಡಿಯುವವರೆಗೂ ನೋಡಿದ್ದು ಸಾವು ನೋವುಗಳನ್ನ. ಅವಧಾನಿಯವರ ಅಕ್ಕ ತೀರಿಕೊಂಡಮೇಲೆ ಅಮೆರಿಕಾಲ್ಲಿದ್ದ ಮಗ ಬಂದು ಇಲ್ಲಿಯ ಆಸ್ತಿಗಳನ್ನೆಲ್ಲ ಮಾರಿ ರಾಜಾಜಿನಗರದ ಹಳೆಯ ಮನೆಯೊಂದನ್ನು ಅವಿನಾಶನಿಗೆ ಬಿಟ್ಟು ಹೋಗಿದ್ದ. ವಠಾರದಂತೆ ಅಂಟಿಕೊಂಡ ಮನೆಗಳ ಮಧ್ಯದ ಮನೆಯೊಂದರಲ್ಲಿ ಅವಳ ಅಮ್ಮನೊಂದಿಗೆ ವಾಸಿಸುತ್ತಿದ್ದವಳು ಸುಷ್ಮಾ. ಮೂವರು ಹೆಣ್ಣುಮಕ್ಕಳಲ್ಲಿ ಕೊನೆಯವಳಾಗಿದ್ದ ಸುಷ್ಮಾ ಚಿಕ್ಕಬಳ್ಳಾಪುರದ ಪ್ರಾಥಮಿಕ ಶಾಲೆಯೊಂದರ ಟೀಚರಾಗಿದ್ದವಳು ಮನೆಗೆ ಬರುತ್ತಿದ್ದದ್ದು ಶನಿವಾರದ ಸಂಜೆ. ಎರಡು ಬಿಯರ್ ಕುಡಿದು ಒಬ್ಬನೇ ಕುಳಿತು ಪುಸ್ತಕ ಓದುತ್ತಲೋ, ಸಿನೆಮಾ ನೋಡುತ್ತಲೋ ಕಾಲ ಕಳೆಯುತ್ತಿದ್ದ ಅವಿನಾಶನಿಗೆ ಅವಳಮ್ಮ ಕಳುಹಿಸುತ್ತಿದ್ದ ಒಬ್ಬಟ್ಟನ್ನೋ, ಕಜ್ಜಾಯವನ್ನೋ ಕೊಡಲಿಕ್ಕೆಂದು ಬಂದವಳು ಇವನಲ್ಲಿ ಆಸೆ ಹುಟ್ಟಿಸಲಾರಂಭಿಸಿದಳು. ಸುಷ್ಮಾ ಮೂವತ್ತೈದಾದರೂ ಮದುವೆಯಾಗದೇ ಉಳಿದಿದ್ದು ಅವಳ ಸಾಧಾರಣ ರೂಪದಿಂದಾಗಿ. ಅಕ್ಕಂದಿರ ಮದುವೆಗೆಂದು ಮಾಡಿದ್ದ ಸಾಲ ತೀರಿಸುವಷ್ಟರಲ್ಲಿ ಅವಳ ಅಪ್ಪ ತೀರಿಕೊಂಡಿದ್ದ. “ಅವಳ ಅಮ್ಮನಿಗೆ ನಾನು ಮಗಳಿಗೆ ತಕ್ಕ ವರ ಎನ್ನಿಸಿರಬಹುದು. ಇವಳು ನಮ್ಮನೆಗೆ ಬರುವಾಗ ಬ್ರಾ ಹಾಕ್ತಾನೇ ಇರಲಿಲ್ಲ ಗೊತ್ತಾ. ಒಬ್ಬಟ್ಟಿನ ನೆಪದಲ್ಲಿ ನನ್ನ ಮೈ ಕೈ ಮುಟ್ಟುತ್ತಾ ಅವಳು ನನ್ನ ಕೆರಳಿಸಲಿಕ್ಕೆ ಪ್ರಯತ್ನಿಸಿದ್ದು ನನಗೆ ತಿಳಿದಿಲ್ಲವೆಂದೇ ಈಗಲೂ ಅಂದುಕೊಂಡಿದ್ದಾಳೆ. ನಾನೂ ಹೇಳುವುದಿಲ್ಲ ಬಿಡು. ಸುಳ್ಳುಗಳೇ ಸಂಬಂಧವನ್ನು ಸಲಹುತ್ತವೆ ಒಮ್ಮೊಮ್ಮೆ. ಅವುಗಳಿಂದ ಬಿಡಿಸಿಕೊಂಡ ಕ್ಷಣಕ್ಕೆ ಸಂಬಂಧಗಳೂ ಬಿಡಿಸಿಕೊಂಡು ದೂರಾಗಿಬಿಡಬಹುದು. ಒಮ್ಮೆ ಬಂಧನಕ್ಕೆ ಬಿದ್ದ ಮನುಷ್ಯ ಎದ್ದು ಓಡುವುದಾದರೂ ಎಲ್ಲಿಗೆ ಹೇಳು. ನೀನೂ ಅಷ್ಟೇ ನನ್ನಿಂದ ತಪ್ಪಿಸಿಕೊಳ್ಳಲಾರೆ. ನಿನಗೆ ಮಧುವಂತಿ ಅಂತ ಹೆಸರಿಡಬೇಕಿತ್ತು ಕಣೇ. ಇನ್ನೊಂದಿನ ಹೇಳ್ತೀನಿ ನಿಂಗೆ ಮಧುವಂತಿ ರಾಗದ ಬಗ್ಗೆ. ಬಾ ಹೊರಡೋಣ” ಎನ್ನುತ್ತಾ ಹೆಗಲು ಬಳಸಿದ. ಮುಸ್ಸಂಜೆಯ ರಾಗಗಳೆಲ್ಲ ಒಂದೊಂದಾಗಿ ಹೆಜ್ಜೆಹಿಡಿದವು. ********

ಕಥಾಯಾನ Read Post »

ಕಥಾಗುಚ್ಛ

ಕಥಾಯಾನ

ಮನದ ಮುಗಿಲ ಹಾದಿ ರೇಶ್ಮಾ ಗುಳೇದಗುಡ್ಡಾಕರ್ ಕುಸುಮಾ- ಸರಳ ರೂಪ ,ಯಾವ ಹಮ್ಮು ಬಿಮ್ಮುಗಳಿಗೆ ಅವಳಲ್ಲಿ ಜಾಗವಿರಲಿಲ್ಲ  . ಬ್ಯಾಂಕ್ ಒಂದರ ಉದ್ಯೋಗ. ಪ್ರತಿಷ್ಠಿತ ಕಂಪನಿಯಲ್ಲಿ ಉನ್ನತ ಹುದ್ದೆ ಯ ಪತಿ ಅತ್ತೆ-ಮಾವನ ಒಬ್ಬನೇ ಮಗ. ಮುಂದಿನ ಬೀದಿಯಲ್ಲಿ ನಾದಿನ ಮನೆ ಸ್ಥಿತಿ ವಂತ ಕುಟುಂಬ . ಮದುವೆಯಾಗಿ ಹತ್ತು ವರ್ಷ ಕಳೆದರೂ ಅವಳಿಗೆ ಮಗುವಿನ ಭಾಗ್ಯ ಇರಲಿಲ್ಲ . ಇದಕ್ಕೆ ಅವಳಲ್ಲಿ ಯಾವ ದೋಷವು ಇರಲಿಲ್ಲ..!!! . ತನ್ನಲ್ಲಿ ಇಲ್ಲದ ತಪ್ಪಿಗೆ ಅವಳಲ್ಲಿ ಮಾಗಲಾರದ ಗಾಯವಾಗಿ  ಮನದಲ್ಲಿ ಜೀವಂತವಾಗಿತ್ತು ..‌‌   ಅವಳ ಈ ನೋವನ್ನು ಹಂಚಿಕೊಳ್ಳುವ , ಸಮಾಧಾನಿಸುವ ಯಾವ ಪ್ರಾಣಿಯು ಅವಳಿಗೆ ಮನೆಯಲ್ಲೂ ಆಫೀಸಿನಲ್ಲೂ ಇರಲಿಲ್ಲ …‌!!!??       ಸದಾ ಅವಳ ಸಂಬಳ ದ ಲೆಕ್ಕ ಚಾರ ಮಾಡುವ ಅತ್ತೆಮಾವ , ಹಂಗಿಸುವ ನಾದಿನಿ , ಇದನ್ನು  ಕಂಡುಕಾಣದಂತೆ ಇರುವ ಪತಿ.ಇನ್ನು ಆಫೀಸಿನಲ್ಲಿ ಇವಳ ಉದ್ಯೋಗ , ಗಂಡನ ಸಿರಿತನದ ಬಗ್ಗೆಯೇ ಮಾತು ಮತ್ತು ಉಚಿತ ಸಲಹೆ ಕೊಡುವವರ ಸಂಖ್ಯೆಇತ್ತೆ ಹೊರತು ಮನಕ್ಕೆ ಹತ್ತಿವಾಗುವ ಯಾವ ಜೀವಿಯೊ ಇರಲಿಲ್ಲ .> >    ಆದರೆ ಸರಳ ಮೃದು ಮನದ ಸ್ನೇಹಾಳ ಗೆಳತನಕ್ಕೆ ಯಾವುದೇ ಅಡ್ಡಿ ಇರಲಿಲ್ಲ .ಸಮಯ ಸಿಕ್ಕಾಗಲೇಲ್ಲ ಸ್ನೇಹಾಳ ಮನೆ ,ಪಾರ್ಕ್ , ವಾಕಿಂಗ್ ಎಂಬ ಹೆಸರಿನಿಂದ  ಸಮಯ ಕಳೆಯುತ್ತದ್ದಳು .ಇಲ್ಲವಾದರೆ ಅವಳು ಮೌನಿ …. ಒಂದು ಪ್ರೀತಿತುಂಬಿದ ಮಾತು ಸಾಕು ಬದುಕಿನಲ್ಲಿ ಭರವಸೆ ಬರಲು ಆದರೆ ಅಂತಹ ಮಾತು , ಮನಗಳು ಸಿಗುವದು ಈ ಜಗತ್ತಿನಲ್ಲಿ ಬಹಳ ದುಬಾರಿ … ಸದಾ ಹಣ ,ಅಧಿಕಾರ , ಕೆಲಸ, ಹೀಗೆ ಗೌರವಿಸುವ ಜಗತ್ತಿನಲ್ಲಿ ನಮಗಾಗಿ ಸ್ಪಂದಿಸುವ ನಿಷ್ಕಲ್ಮಷ ಸ್ನೇಹ ಸಂಬಂಧ ಬಹಳ ವಿರಳ .      ಕುಸುಮಾ ಲಘುಬಗೆಯಿಂದ ಮನೆಯ ಕೆಲಸ ಮುಗಿಸಿಬ್ಯಾಂಕ್ ಗೆ ಹೊರಡಲು ತಯಾರಾದಳು ಸಮಯ ಆಗಲೇ ಹತ್ತು ಆಗುತ್ತಾ ಬರುತ್ತಿತ್ತು . ಅತ್ತೆ  ಟಿ.ವಿ ನೋಡುವದರಲ್ಲಿ ಮಗ್ನರಾಗಿದ್ದರು .ಪತಿರಾಯ ಹೊರಡುವ ತಯಾರಿಯಲ್ಲಿದ್ದ ಇವಳು ಒಟ್ಟಿಗೆ ಹೊರಟರಾಯಿತು ಎಂದು ಹೊಬಂದಳು ಅಗಲೇ ಅವಳ ಅತ್ತೆ ಮಗನಿಗೆ ತನ್ನ ತಂಗಿಯ ಮನೆಗೆ ಹೊಗಿ ಆಫೀಸಿಗೆ ಹೋಗಲು ಆಜ್ಞೆ ಮಾಡಿದರು …!!  ಪತಿರಾಯ ಸಮ್ಮತಿಸಿ .ಕುಸುಮಾಳಿಗೆ ಕಣ್ಣಲ್ಲೆ ಬಾಯ್ ಹೇಳಿ ಹೊರಟು ಹೋದ .    ಕುಸುಮಾ ಇನ್ನು ಬಸ್ಸೇ ಗತಿ ಎಂದು  ಗೇಟಿನ ಬಳಿಬಂದಳು ಅಂಗಳದಲ್ಲಿ ತಾನು ಮುಂಜಾನೆ ಹಾಕಿದ ರಂಗೋಲಿ ಅರಳಿ ನಕ್ಕು ಮಾತಾಡಿಸಿದಂತೆ ಭಾಸವಾಯಿತು ಕುಸುಮಾ ಅದನ್ನು ನೋಡಿ ಸಂತೋಷದಿಂದ  ಬಸ್ ನಿಲ್ದಾಣ ಕ್ಕೆ ಬಂದಳು ..          ಬಸ್ಸು ತಂಗುದಾಣದ ಎದುರಿಗೆ ಸರ್ಕಾರಿ ಆಸ್ಪತ್ರೆ ಇತ್ತು. ಅಲ್ಲಿ ಜನಸಂಣಿ ತುಂಬಿ ರಸ್ತೆ ತುಂಬಾ ಜನರು ತುಂಬಿ ಅಳು ನರಳಾಟ ಕಂಡುಬಂತು .ಕುಸುಮಾ ಅದನ್ನು ನೋಡಿ ಕೊಂಚ ಗಲಿಬಿಲಿಗೊಂಡಳು ಇಷ್ಟು ಪ್ರಮಾಣದ ಜನ ಎಂದೋ ಅವಳು ಈ ದಾರಿಯಲ್ಲಿ ಕಂಡಿರಲಿಲ್ಲ .     ಜನರನ್ನು ಕೇಳಿದಳು …..ಸ್ಪಷ್ಟ ಮಾಹಿತಿ ಸಿಗಲಿಲ್ಲ ಅಷ್ಟರಲ್ಲಿ ಆಸ್ಪತ್ರೆಯ ನೌಕರರಾದ ಪರಿಚಿತ ಅಪ್ಪಣ್ಣ ಬರುತ್ತಿರುವದು ಕಂಡು ಕುಸುಮಾ ಅವರ ಬಳಿ  ತೆರಳಿ ಮಾತಾಡಿಸಿದಳು ಅವರು ರಾಜ್ಯದ ಹೆದ್ದಾರಿಯಲ್ಲಿ ನಸುಕಿಗೆ ಭೀಕರ ಅಪಘಾತವಾಗಿದ್ದು ಬೆಳಗಾವಿ ಸಮೀಪದ ತಾಂಡ ಜನರು ಕೂಲಿ ಕೆಲಸಕ್ಕಾಗಿ ಗುಳೆ ಹೋರಟಿದ್ದರುಅವರನ್ನು ತುಂಬಿಕೊಂಡು ಬಂದ ಟ್ಯಾಕ್ಟರ್ ಮತ್ತು ಎದುರಿಗೆ ಬರುತ್ತದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ತುಂಬಾ ಹೆಣಗಳು ಚೆಲ್ಲಾಪಿಲ್ಲಿಯಾಗಿದ್ದು ತೀವ್ರವಾಗಿ ಗಾಯಗೊಂಡವರನ್ನು ಆಸ್ಪತ್ರೆ ಗೆ ದಾಖಲಿಸಲಾಗಿದ್ದು ಅವರಿಗೆ ರಕ್ತ ದ ಮಾದರಿ ತರಲು ಸಾಯಿ ಮಲ್ಟಿಸ್ಪಷೇಲ್ ಆಸ್ಪತ್ರೆಗೆ ಹೊರಟಿರುವುದಾಗಿ ತಿಳಿಸಿದರು .  ಕುಸುಮಾ ತನ್ನದು “ಓ ನೇಗೆಟಿವ್ ಇದೆ ಬೇಕಾದರೆ ಹೇಳಿ ಕೊಡುತ್ತೆನೆ ಎಂದಳು” .ಅವರು ತುಂಬಾ ಸಂತೋಷಗೊಂಡು “ಹಲವು ರಕ್ತ ನಿಧಿಗೆ ಹೇಳಿದ್ದವು ಮುಂಜಾನೆಯಿಂದ ಬನ್ನಿ ನೋಡೋಣ ”  ಎಂದು ಹೇಳಿ ಅವಳನ್ನು ಕೊಡಲೆ ಆಸ್ಪತ್ರೆ ಯ ಒಳಗೆ ಕರೆದುಕೊಂಡು ಹೋದರು .          ಕುಸುಮಾ ಅಪಘಾತದ ತೀವ್ರ ತೆಯನ್ನು ಮೊದಲ ಬಾರಿಗೆ ಜೀವನದಲ್ಲಿ ಕಣ್ಣಲ್ಲಿ ಕಂಡಳು . ಮಕ್ಕಳು ವೃದ್ದರು ಎನ್ನದೆ ಎಲ್ಲರೋ ನರಳುತ್ತಿದ್ದರು . ಇಡೀ ಆಸ್ಪತ್ರೆ ರೋದನದಿದಂದ ತುಂಬಿತ್ತು ಕುಸುಮಾ ಭಾವಜೀವಿ ಅವಳ ಮನವು ದುಃಖಿಸಿತ್ತು ಮೂಕವಾಗಿ ……ಸಾವು ನೋವು ಸಕಲ ಚರಾಚರಗಳಿಗೊ ಒಂದೇ ಅಲ್ಲವೇ ತುತ್ತಿನ ಚೀಲತುಂಬಿಸಲು ಹೋಗಿದ್ದವರು ಜವರಾಯನ ಬಾಯಿಗೆ ತುತ್ತಾಗಿದ್ದರು!?       ಮೆಲ್ಲನೆ ಅವರಗಳನ್ನು ನೋಡುತ್ತಾ ಭಾರವಾದ ಹೆಜ್ಜೆ ಹಾಕುತ್ತಾ ವಾರ್ಡಿನತ್ತ ನಡೆದಳು  ಅಪ್ಪಣನವರು ಇದನ್ನು ಗಮನಿಸಿ “ಆಸ್ಪತ್ರೆ ಗಳಲ್ಲಿ ಇದು ನಿತ್ಯವು ಇರುವ ಸಾಮನ್ಯ ಸಂಗತಿ ಆದರೆ ಇಂದು  ಜನರ ನರಳಾಟ ಅಫಘಾತದ ಪರಿಣಾಮ ಹೆಚ್ಚಾಗಿದೆ . ನಿಮಗೆ ಇದು ಹೊಸದು ಬನ್ನಿ ತಾಯಿ ಈ ಜೀವ ನೀರಿನ ಮೇಲಿನ ಗುಳ್ಳೆಯಂತೆ .ಅದರೂ ಜನಗಳು ಈ ಸತ್ಯವ ಮರೆತು ನಾನು ,ನನ್ನದು ಎಂಬ ಸ್ವಾರ್ಥ ದ ಕೋಟೆಯಲ್ಲಿ ಬದುಕುತ್ತಾನೆ ” ಎಂದು ಹೇಳುತ್ತಾ ಅವಳನ್ನು ಸಾಮಾಧಾನಿಸುತ್ತಾ ಕರೆದುಕೊಂಡು ಹೋದರು ಅವರು ಸಾತ್ವಿಕ ನಿಷ್ಠಾವಂತ ನೌಕರರಾಗಿದ್ದರು ಇಡೀ ಆಸ್ಪತ್ರೆ ಯಲ್ಲೆ ಉತ್ತಮ ಕೆಲಸಗಾರ ಎಂಬ ನಂಬಿಕೆ ಗಳಿಸಿದರು .ಹಣ ಪಕ್ಷಪಾತದ ಯಾವ ಆಮಿಷ ಕ್ಕೆ ಒಳಗಾಗದೆ ಸೇವೆಯನ್ನು ಸಲ್ಲುಸುತ್ತಾ ಜೀವನ ನಡೆಸುತ್ತದ್ದರು. ಕುಸುಮಾಳ ಮುಂದಿನ ಬೀದಿಯ ಲ್ಲೆ ಇವರ ಮನೆಯೊ ಇತ್ತು .       ಕುಸುಮಾಳ ರಕ್ತ ದ ಮಾದರಿಯನ್ನು ಮತ್ತುಅವಳ ಆರೋಗ್ಯವನ್ನು ಪರೀಕ್ಷಿಸಿ. ಅವಳನ್ನು  ಒಂದು ಕೊಠಡಿ ಯಲ್ಲಿ ರಕ್ತ  ನೀಡಲು ಅವಕಾಶ ಮಾಡಕೊಟ್ಟರು  ಕುಸುಮಾ ಅಷ್ಟರಲ್ಲಿ ತನ್ನ ಸಹೋದ್ಯೋಗಿ ಗೆ ಕರೆಮಾಡಿಸಂಕ್ಷಪ್ತವಾಗಿ ವಿಷಯ ತಿಳಿಸಿ ರಜೆ ಪಡೆಯಲು ಹೇಳಿದಳುಪತಿಗೆ ಹೇಳುವ ಗೋಜಿಗೆ ಹೋಗಲಿಲ್ಲ .ಚಿಕ್ಕ ವಿಚಾರ ಇಗಲೇ ಹೇಳುವ ಅಗತ್ಯವಿಲ್ಲ ಅಗತ್ಯ ಬಂದರೆ ಹೇಳಿದರಾಯುತು ಎಂದು ಕೊಂಡು ಮೊಬೈಲ್ ಬ್ಯಾಗಿಗೆ ಹಾಕಿಕೊಂಡು ಕೊಠಡಿಗೆ ಬಂದಳು .            ಎಲ್ಲಾ ಮುಗಿದು  ಮಧ್ಯಾಹ್ನದ ಕಳೆಯುತ್ತಾ ಬಂದಿತು .ಅಪ್ಪಣ್ಣ ನವರು ಅವಳನ್ನು ಆಗಾಗ ಬಂದು ವಿಚಾರಿಸುತ್ತಾ  ಹೊಗುತ್ತಿದ್ದರು .      ಅವಳಿಗೆ ದಾಳಿಂಬೆ ಪಾನಕ ತಂದರು ” ಸ್ವಲ್ಪ ವಿರಮಿಸಿ ನಿಮ್ಮ ಪತಿಗೆ ಮಾಹಿತಿ ತಿಳಿಸಿರುವೆ ಅವರು ಇನ್ನೇನು ಬರುತ್ತಾರೆ ” ಎಂದು ತಿಳಿಸಿದರು. ” ತಮ್ಮಿಂದ ತುಂಬಾ ಉಪಕಾರವಾಯ್ತು ಎಂದು ಹೇಳಿ ಕೆಲಸ ತುಂಬಾ ಇದೆ ಹೊರಡುವಾಗ ಕೌಂಟರ್ ಅಲ್ಲಿ ಇರುತ್ತೇನೆ ಏನಾದರೊ ಬೇಕಾದರೆ ಸಂಕೋಚ ಪಡದೆ ಕೇಳಿ” ಎಂದು ಕುಸುಮಾಳಿಗೆ  ಹೇಳಿ  ಹೋದರು .ಅವಳು ಅಲ್ಲೆ ಮಂಚದ ಮೇಲೆ ವಿರಮಿಸುತ್ತಾ ಕುಳಿತಳು .ಅಷ್ಟರಲ್ಲಿ ಪತಿ ಅಭಯ್ ನ ಆಗಮನವಾಯಿತು .” ಅಪ್ಪಣ್ಣ ನನಗೆ ಕಾಲ್ ಮಾಡಿ ಹೇಳಿದರು ಇಗ ಹೇಗಿರುವೆ ? ಹೋಗೊಣವೇ ಮನೆಗೆ ? ” ಎಂದನು .      ಸರಿ ಎಂದು ಕುಸುಮ ಅಭಯ್ ಕೊಠಡಿ ಇಂದ ಹೊರನಡೆದರು ಆಸ್ಪತ್ರೆ ಯ ತುಂಬಾ ನರ್ಸ, ನೌರರು ,ಡಾಕ್ಟರ್ಗಳ ಗಡಿಬಿಡಿ ಓಡಾಟ , ಚಿತ್ಕಾರ, ನರಳಾಟ ಮುಗಿಲು ಮುಟ್ಟಿತ್ತು ಪೋಲಿಸರ ಉಪಸ್ಥಿತಿ, ಸಂಬಂಧಿಕರ ಹುಡುಕಾಟ , ಹೀಗೆ ಒಂದು ವಿಭಿನ್ನ ಲೋಕವೊಂದು ಅಲ್ಲಿ ಸೃಷ್ಟಿ ಯಾಗಿತ್ತು …..            ಕುಸುಮಾಳ ಮನದಲ್ಲಿ ಹಲವು ಪ್ರಶ್ನೆ ಉತ್ತರಗಳು ಈ ಹೊಸ ಅನುಭವಕ್ಕೆ ಸಾಕ್ಷಿ ಎಂಬಂತೆ ಉದ್ಬವಿಸುತ್ತಿದ್ದವು ಅಭಯ್  ಅವಳ ಮನದ ಇಂಗಿತ ಅರಿತು ಅವಳ ಕೈ ಹೀಡಿದು  ಕರೆದುಕೊಂಡು ಹೊರಬಂದನುಹೊರ ಬರುವಾಗ ಕೆಳಗಿನ ವಾರ್ಡ ಅಲ್ಲಿ ಸತ್ತ ತಾಯಿಯ ಶವದ ಮೇಲೆ ಹಾಲುಕುಡಿಯಲು ಹವಣಿಸುತ್ತಾ ಅಳುತ್ತಿದ್ದಒಂಭತ್ತುತಿಂಗಳ ಹೆಣ್ಣು ಮಗುವಿನ ದೃಶ್ಯ ಕುಸುಮಾಳ ಎದೆಯನ್ನು ಸೀಳಿಬಿಟ್ಟಿತ್ತು!     ಆ ಮನಕಲಕುವ ಸಂಗತಿಗೆ ಕುಸುಮಾಳ ಕಣ್ಣಾಲಿಗಳು ತುಂಬಿ ಬಂದವು .ಅಲ್ಲಿದ್ದ ಜನರಿಗೆ ಯಾರಿಗೊ ಇದರ ಪರಿವೆ ಇರಲಿಲ್ಲ .ಎಲ್ಲರಿಗೊ ಒಂದೊಂದು ನೋವು ಮನತುಂಬಿದ್ದವು .ತಮ್ಮಗಳ ನೋವಲ್ಲೆ ಜಗವ ಮರೆತಿದ್ದರು .    ಕುಸುಮಾ ಒಂದುಕ್ಷಣ ತನ್ನನ್ನೇ ತಾನು  ಆ ಮಗುವಿನಲ್ಲಿ ಕಂಡಳು ಹತ್ತು ವರ್ಷಗಳಿಂದ ಸತತ ನೋವು ,ಅವಮಾನಕ್ಕೆ ಶರಣಾಗಿ ಎಲ್ಲರೂ ಇದ್ದು ಇಲ್ಲದಂತೆ  ಬದುಕಿನಲ್ಲಿ ದಾರಿ ಕಾಣದೆ ನಿತ್ಯವು ದಹಿಸುತ್ತಿದ್ದಳು ಅಂತರಂಗದ ಬೆಂಕಿಯಲ್ಲಿ…!  ಇಂದು ಆ ಮಗು ವು ಇಷ್ಟು ಜನಗಳ ಮಧ್ಯ ತನ್ನವರ ಕಳೆದುಕೊಂಡು ಆನಾಥವಾಗಿತ್ತು …!!! .   ಕುಸುಮಾ   ಓಡಿ ಆ ಮಗುವನ್ನುಎತ್ತಿಕೊಂಡು ಸಂತೈಸುತ್ತಾ ಹೊರಬಂದಳು ಅವಳ ಈ ಅನೀರಿಕ್ಷತ  ನಡೆ ಪತಿ ಅಭಯ್ ಗೆ ಅಚ್ಚರಿಂದರು ಅವಳನ್ನು ಪ್ರಶ್ನಿಸುವ ದಿಟ್ಟತನ ಕ್ಕೆ ಅವನು ಕೈಹಾಕಲಿಲ್ಲ .ಸತ್ಯ ಅವನಿಗೋ ತಿಳಿದಿತ್ತು .    ಕುಸುಮಾ ಮಗುವನ್ನು ಎತ್ತಕೊಂಡು ಮನೆಗೆ ಬಂದಳು ಪತಿಯ ಜೊತೆಗೆ .ಮನೆಯಲ್ಲಿ ಇದ್ದ ಅತ್ತೆ – ಮಾವ  ನಾದಿನಿ ಮದ್ಯಾಹ್ನದ ಊಟ ಮುಗಿಸಿ ರಾತ್ರಿ ಗಾಗಿ ಸಂಬಾರ್ ತೆಗೆದುಕೊಂಡು ಹೋಗಲು ಸಿದ್ದತೆ ನಡೆಸುತ್ತಿದ್ದ ನಾದಿನಿ (ಇದು ಅವಳ ನಿತ್ಯದ ಕಾಯಕ …!!) ಎಲ್ಲರ ಮುಖದಲ್ಲೂ ಅಚ್ಚರಿ ಮತ್ತು ಪ್ರಶ್ನಾರ್ಥಕ ಚಿಹ್ನೆ ಉದ್ಬವಿಸಿದ್ದವು …!??   ತನ್ನ ಇಬ್ಬರು ಹೆಣ್ಣುಮಕ್ಕಳಲ್ಲಿ ಒಂದನ್ನು ಅಣ್ಣನಿಗೆ ದತ್ತು ಕೊಡುವ ಅದಮ್ಯ ಬಯಕೆ ಇತ್ತು  ನಾದಿನಿ ಗೆ .ಅಣ್ಣನ ಆಸ್ತಿ ತನಗೇ ಸೇರುತ್ತದೆ ಈ ಮೂಲಕ ಎಂಬ ಅದ್ಬುತ ಚಿಂತನೆಯಿಂದ !  ಅಭಯ್ ಗೆ ಒತ್ತಾಯ ಮಾಡುತ್ತಿದ್ದಳು ಇದಕ್ಕೆ ತನ್ನ ತಾಯಿಯ ಸಹಕಾರವು ಇತ್ತು . ಅದರೆ ಇದಕ್ಕೆ ಅಭಯ್ ಯಾವದೇ ಸೊಪ್ಪು ಹಾಕಿರಲಿಲ್ಲ  .ಆದರೆ ಈಗ ಎಲ್ಲ ಬುಡ ಮೇಲಾಗಿತ್ತು…..ಒಂದೇ ಹೊಡೆತಕ್ಕೆ .ಆ ಪುಟ್ಟ ಮಗುವನ್ನು ಕುಸುಮ ತಬ್ಬಿ ಹೀಡಿದು ಎತ್ತಿಕೊಂಡ ನೋಟವೇ ಅವರನ್ನು ಹೆಚ್ಚು ಕೆಣಕಿತ್ತು .ಕುಸುಮಳ ಮನದ ಇಂಗಿತ ಭಾವನಾತ್ಮಕವಾಗಿ ಅರಿವು ಮಾಡಿತ್ತು.     ಅತ್ತೆ ,ಮಾವ , ನಾದಿನಿ ಎಲ್ಲರೂ ಒಮ್ಮಲೇ ಅರ್ಭಟ ನಡೆಸಿದರು .  ಅಭಯ್ ಕುಸುಮಾ ಳ ಮೇಲೆ ಮಾತಿನ ಯುದ್ಧ.  ನಡೆಯಿತು ಆದರೆ ಕುಸುಮಾ ಳ ನಿರ್ಧಾರ ಬದಲಿಸುವ ಪ್ರಯತ್ನ ವಿಫಲವಾಯಿತು .ಕೊನೆಗೆ ಕುಸುಮಾ   ಮಗುನಿನೊಂದಿಗೆ ಒಬ್ಬಳೆ ಬದುಕುವ ನಿರ್ಧಾರ ವನ್ನು ಪ್ರಕಟಿಸಿದಳು .ಅಭಯ್ ಕ್ಷಣಮಾತ್ರದಲ್ಲಿ ಅದುರಿಹೋದ .ಕುಸುಮಾಳನ್ನು ತಡೆದು ನಿಧಾನವಾಗಿ ಹತ್ತು ವರ್ಷ ಮುಚ್ಚಿಟ್ಟ ಸತ್ಯ ಹೇಳಿದನು .ತನ್ನಿಂದ ಕುಸುಮಾಳಿಗೆ ಮಗು ನೀಡಲು ಸಾದ್ಯವಿಲ್ಲ .ಇದನ್ನು ಜಗತ್ತಿಗೆ ತಿಳಿಸಿ ಅವಮಾನ ಪಡುವದನ್ನು ತಪ್ಪಿಸಿಕೊಂಡು ನಿರಾತಂಕವಾಗಿ ಕುಸುಮಾಳ ಮೇಲೆ ಈ ಮಿಥ್ಯವನ್ನು ಹೊರಿಸಿದ್ದಾಗಿ , ಕುಸುಮಾಳನ್ನು ಬಿಟ್ಟು ಬದಕುಲು ಅಸಾದ್ಯವೆಂದು ಮೊದಲಬಾರಿಗೆ ಅಭಯ್ ಕುಸುಮಾಳ ನ್ನು ಹೀಡಿದು ಕ್ಷಮೆ ಯಾಚಿಸಿದನು ..!   ಅವನ ಮಾತುಗಳು ಮನದಾಳದಿಂದ ಹೊರಬಂದಿದ್ದವು ಕಂಗಳು ತುಂಬಿ ನಾಚಿಕೆಯಿಂದ ತಲೆತಗ್ಗಿಸಿದ್ದನು.ನಾದಿನಿ ರಭಸವಾಗಿ ಕ್ಯಾರಿಯರ್ ತೆಗೆದುಕೊಂಡು ಹೊರನಡೆದಳು …!!!?    ಅತ್ತೆಮಾವ ನಿಗೆ ಕುಸುಮಾಳ ಸಂಕಟಕ್ಕಿಂತ ಕುಸುಮಾಳ ಅವಮಾನ ನಿರಾಶೆಗಿಂತ . ಮಗಳಿಗಾದ ನಿರಾಶೆ ತೋಕವೇ ಹೆಚ್ಚಾಗಿ ಕಂಡಿತ್ತು …..!. ತಾವು ಇನ್ನು ಮುಂದೆ ಇಲ್ಲಿ ಇರುವದಿಲ್ಲ .  ಈ ಮಗು ನಮ್ಮ ರಕ್ತವಲ್ಲ ಇದು ನಮ್ಮದಲ್ಲ ನನ್ನ ಆಸ್ತಿಯಲ್ಲಿ ಒಂದು ಭಾಗವು ನಿನಗೆ ಇಲ್ಲ ಎಂದು ಘೋಷಿಸಿ ಹಳ್ಳಿಗೆ ಹೊರಡಲು ತಯಾರಾದರು.!!.  ಅಭಯ್ ಯಾರನ್ನು ಸಮಾಧಾನಿಸುವ ಗೋಜಿಗೆ ಹೊಗಲಿಲ್ಲ .ಮಗುವನ್ನು ಎತ್ತಿಕೊಂಡು ಕುಸುಮಾಳನ್ನು ಕರೆದುಕೊಂಡು ರೂಮಿಗೆ ಬಂದನು . ನಾಳೆ ವಕೀಲರನ್ನು ಕಂಡು ಮಗುವಿನ ಬಗ್ಗೆ ಮಾತುಕತೆ

ಕಥಾಯಾನ Read Post »

ಕಥಾಗುಚ್ಛ

ಕಥಾಯಾನ

ಸಂಬಂಧಗಳ ನವೀಕರಣ ಸುಧಾ ಹೆಚ್.ಎನ್ ನನ್ನಿಂದ ಆಗಲ್ಲ ಮೇಡಂ, ನನಗೆ ಅವನ ಜೊತೆ ಹೆಂಡತಿತರ ಸಂಸಾರ  ಮಾಡಕ್ಕೆ ಸಾಧ್ಯನೇ ಇಲ್ಲ,ನನಗೆ ಡೈವರ್ಸ್ ಬೇಕು” ಅಂದಳು ಹುಡುಗಿ. ಇಪ್ಪತ್ತೊಂದರ ಹರೆಯದ ಲಕ್ಷಣವಾದ ವಿದ್ಯಾವಂತೆ.       ತಾಯಿಯನ್ನು ಕಳೆದುಕೊಂಡು ತಂದೆಯ ಆನಾದಾರಕ್ಕೊಳಗಾಗಿ ಅನಾಥವಾಗಿದ್ದ ಎರಡು ವರ್ಷದ, ಈ ಹುಡುಗಿಯನ್ನು ಮೊಮ್ಮಗಳ ನಾಥೆಯಿಂದ ಮಡಿಲಿಗೆ ಹಾಕಿಕೊಂಡಿದ್ದಳು,ತಾಯಿಯ ತಾಯಿ ಅಂದರೆ ಅಜ್ಜಿ. ಅಜ್ಜಿ…ಮತ್ತವಳ ಹುಟ್ಟು ಕುರುಡ ಮಗನೇ ಇವಳ ಬಂದು-ಬಳಗ ಎಲ್ಲಾ,ಅಜ್ಜಿ ಹೊಲ, ಮನಿ ಚಾಕರಿ ಎಂದು ಬಿಡುವಿಲ್ಲದೆ ದುಡಿಯುತ್ತಿದ್ದರೆ,ಹುಡುಗಿಗಿಂತ ಏಳು ವರ್ಷ ದೊಡ್ಡವನಾದ ಸೋದರ ಮಾವಜತನದಿಂದ ಸೊಸೆಯ ನ್ನು ಸಂಬಾಳಿಸುತ್ತಿದ್ದ. ಅವಳನ್ನು ತೊಟ್ಟಿಲಲ್ಲಿಟ್ಟು ತೂಗುತ್ತಿದ್ದ. ಅವಳ ಪ್ರತಿ ಚಲನೆ ಅವಳರಿವನ್ನು ಆವರಿಸಿ ಒಳಗಣ್ಣು ತೆರೆದಿಟ್ಟು ಜೋಪಾನ ಮಾಡಿದ್ದ. ಈ ಹುಡುಗಿ ಸ್ವಲ್ಪ ದೊಡ್ಡವಳಾಗುತ್ತಿದ್ದಂತೆ,ಮಾವ-ಸೊಸೆ ಪರಸ್ಪರ ಅವಲಂಬಿತರಾಗಿ ಬದುಕತೊಡಗಿದ್ದರು. ಶಾಲೆ ಕಲಿಯ ತೊಡಗಿದ್ದು ಆ ಹುಡುಗಿಯಾದರೂ ಮಗ್ಗಿ,ಕತೆ,ಪದ್ಯ ಪಾಠ ವೆಲ್ಲಾ ಮಾವನಿಗೂ ಕಂಠಪಾಠವಾಗಿದ್ದವು. ಇವಳಿಗೆ ತಂದೆ ತಾಯಿಯ ಕೊರತೆ ಕಾಣಲೇ ಬಾರದು, ಅವನಿಗೆ ಕಣ್ಣು ಗಳಿಗೆ ಮುತ್ತಿದ್ದ ಕತ್ತಲ ಅರಿವು ಆಗಲೇ ಬಾರದು, ಎನ್ನುವುದನ್ನು ಪರಸ್ಪರರಿಗೆ ನಂಬಿಸುವ ಹಾಗೆ ಇವರಿಬ್ಬರ ಜೀವನ ನಡೆದಿತ್ತು. ಅದು ಮಾನವ ಸಹಜವಾದ ಪ್ರೀತಿಯೋ..ಅನಿವಾರ್ಯವೋ…ಅವಲಂಬನೆಯೋ ಅವರೆಂದೂ ಈ ಕುರಿತು ಯೋಚಿಸಲೇ ಇಲ್ಲ. ಹುಡುಗಿ ಆಗಲೇ ಕಾಲೇಜು ಮೆಟ್ಟಿಲು ಹತ್ತಿದ್ದಳು. ಇದ್ದಕ್ಕಿದ್ದಂತೆ ಅಜ್ಜಿ ಜಡ್ಡು ಬಂದು ಹಾಸಿಗೆ ಹಿಡಿದಿತ್ತು. ತನ್ನನ್ನೇ ನೆಚ್ಚಿಕೊಂಡ ಹರೆಯದ ಮೊಮ್ಮಗಳು ಕಣ್ಣು ಕಾಣದ ಮಗ ,ಊರಿನ ಹಳೆ ತಲೆಗಳು ಅಜಮಾಯಿಷಿ ಕೊಟ್ಟ ಸಲಹೆಯಂತೆ ನರಳುತ್ತಲೇ ಕುರುಡು ಮಗನೊಂದಿ ಗೆ ಮೊಮ್ಮಗಳ ಮದುವೆ ಮಾಡಿ ಮುಗಿಸಿತ್ತು ಅಜ್ಜಿ. ಮದುವೆ ನಂತರ ಮೂರರಿಂದ ನಾಲ್ಕು ತಿಂಗಳ ಕಾಲ ಅಜ್ಜಿಯ ಆರೈಕೆಯಲ್ಲಿ ಕಳೆದು ಹೋಗಿತ್ತು. ಅಜ್ಜಿಗೆ ಇದೆಲ್ಲ ರೇಜಿಗವನ್ನು ನೋಡಿ, ಅನುಭವಿಸುವ ಯೋಗ ಇದ್ದದ್ದ ಕ್ಕೋ ಏನೋ ಬದುಕಿ ಉಳಿದಿತ್ತು. ಈ ಮಧ್ಯೆಯೂ ಹುಡುಗಿ ವಿದ್ಯಾಭ್ಯಾಸ ಮುಂದುವರಿಸಿದ್ದಳು. ಮೂರು ತಿಂಗಳಿನಿಂದ ಕೆಲಸಕ್ಕೂ ಹೋಗತೊಡಗಿದ್ದಳು. ವರ್ಷ ದಿಂದ ತೊಡರುಗಾಲು ಹಾಕತೊಡಗಿದ್ದ ಇವರಿಬ್ಬರ ಸಂಬಂಧ ಇತ್ತೀಚೆಗೆ ಮುಗ್ಗರಿಸಿ ಬಿದ್ದಿತ್ತು. ಕುರುಡ ಗಂಡ ನಿಂದ ಡೈವರ್ಸ್ ಕೊಡಿಸಿ ಎಂದು ನನ್ನ ಬಳಿ ಬಂದಿದ್ದಳು ಹುಡುಗಿ. ” ಮೇಡಂ ಮಾವ ನಿನಗೆ ಏನು ಬೇಕೋ ಅದು ಬರ್ಕಂಡು ಬಾ ಸಹಿ ಮಾಡಿ ಕೊಡ್ತೀನಿ ಕೋರ್ಟೆಗೆಲ್ಲಾ ಹೋಗೋದೇ ನು ಬ್ಯಾಡ ಅಂದಿದಾನೆ.” ಅಂದಳು.” ನೋಡಮ್ಮ, ಹಾಗೆಲ್ಲಾ ಗಂಡ-ಹೆಂಡತಿ ನೀವು, ನೀವೇ ಕರಾರು , ಪತ್ರ ಅಂತ ಬರೆದುಕೊಂಡರೆ ಅದು ಕಾನೂನುಬದ್ಧ ವಿಚ್ಛೇದನ ಆಗಲ್ಲ. ಹಿಂದೂಗಳಲ್ಲಿ ವಿಚ್ಛೇದನ ನ್ಯಾಯಾಲಯದ ಮೂಲಕಾನೇ ಆಗಬೇಕು . ಸಾಮಾನ್ಯವಾಗಿ ಮದುವೆ ಯಾದ ಒಂದು ವರ್ಷ ಅದ್ಮೇಲೆ ಮಾತ್ರ ಡೈವೋರ್ಸ್ ಕೇಸ್ನ ಕೋರ್ಟಿಗೆ ಹಾಕಬಹುದು. ನಾವು ಕೇಸು ಹಾಕಬೇಕು ಅಂದ್ರೆ ಕಾರಣಗಳು ಬೇಕು. ನೀವು ಎರಡು ವರ್ಷಕ್ಕಿಂತ ಹೆಚ್ಚು ಸಂಸಾರ ಮಾಡದೆ ಬೇರೆ ಬೇರೆ ಇದ್ದಿರಬೇಕು. ಅವನು ನಿನಗೇನಾದರು ಹಿಂಸೆ ಕೊಟ್ಟಿರಬೇಕು , ಏನಾದರೂ ಕಾಯಿಲೆ ಇದ್ದಿರಬೇಕು. ಅವನು ನಿನ್ನ ಜೊತೆ ಅಲ್ಲದೆ ಬೇರೆ ಇನ್ನೊಂದು ಮದುವೆಯಾಗಿದ್ದರೆ,ಬೇರೆ ಧರ್ಮಕ್ಕೆ ಸೇರಿದ್ದರೆ ಹೀಗೆ ಯಾವುದಾದರು ಕಾರಣಗಳಿದ್ದ ರೆ ಅವನ ವಿರುದ್ಧ ಡೈವೋರ್ಸ್ ಕೇಳಿ ಕೇಸು ಹಾಕಬಹು ದು. ಡೈವೋರ್ಸ್  ಅಂದರೆ  ಹುಡುಗಾಟವಲ್ಲ . ತುಂಬಾ ಕಷ್ವ. ಕೋರ್ಟಿಗೆ ತುಂಬಾ ಸಮಯ ಓಡಾಡಬೇಕು.  ನಿನಗೆ ನಿನ್ನ ಗಂಡ  ಡೈವರ್ಸ್ ಕೊಡೋಕೆ ತಯಾರಿದಾನೆ ಅನ್ನೋದಾದ್ರೆ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ತಗೋಬಹುದು. ಒಂದು ಕೆಲಸ ಮಾಡು ನಿಮ್ಮಜ್ಜೀನ , ಸಾಧ್ಯವಾದರೆ ಗಂಡನ್ನೂ ಕರ್ಕೊಂಡು ಬಾ. ನಾನು ಮಾತಾಡ್ತೀನಿ “ಅಜ್ಜಿ,ಗಂಡ ಎಲ್ಲರನ್ನೂ ಕೂರಿಸಿ, ಮಾತಾಡಿ ಸಮಾಧಾನ ಹೇಳಿ ರಾಜಿ ಮಾಡಿ ಕಳಿಸುವ ಉದ್ದೇಶದಿಂದ ಹೇಳಿ ಕಳಿಸಿದ್ದಕ್ಕೆ ಅಜ್ಜಿ,ಗಂಡನೊಂದಿಗೆ ಬಂದು ‌ ನನ್ನೆದುರು   ಕೂತಿದ್ದಳು.   “ಏನಂತೀರಾ ಅಜ್ಜಿ”. ” ಏನ್ ಹೇಳದವ, ಸಣ್ಣಾಕಿದ್ದಾಗ ಅವನ ಜೊತೆ ಪಾಡಾಗೇ ಇದ್ಲು. ಅರಗಳಿಗೇನು ಅವನ್ನ ಬಿಟ್ಟುರ್ತಿಲಿಲ್ಲ. ಅವನ ಕೈ ಹಿಡ್ಕಂಡೇ ಇರಾಕಿ. ಅವನ ಎಲ್ಲಾ ಚಾಕ್ರಿ ತಾನೇ ಮಾಡಕಿ. ಅವನಿಗೊಂದು ಅಸರೆ ಆಗತೈತಿ ಅಂತ ಮದ್ವಿ ಮಾಡ್ದೆ”. ಅಜ್ಜಿ ತನ್ನ ಪರಿಮಿತಿಯಲ್ಲಿ ಪ್ರಾಮಾಣಿಕವಾಗಿಯೇ ನಡೆದುಕೊಂಡಿದ್ದಳು.” ಆ ವಯಸ್ಸಿನಲ್ಲಿ ನನಗೆ ಏನು ಗೊತ್ತಾಕತಿ ಅಜ್ಜಿ. ನೀನು, ಮಾವ ಬಿಟ್ಟರೆ ನನಗೆ ಬ್ಯಾರೆ ಯಾರೂ ದಿಕ್ಕಿದ್ರು?. ಅವನ ಜೊತೇನೆ ಇರ್ತಿದ್ದೆ. ನೀನು ಬ್ಯಾರೆ ಸಾಯಂಗಿದ್ದಿ. ಹಂಗಂತ ನನಗೆ ಸರಿ-ತಪ್ಪು ತಿಳೀದಿರೋ ವಯಸ್ಸಲ್ಲಿ ನೀನು ಕಣ್ಣು ಕಾಣ್ದವನ ಜೊತೆ ಮದುವೆ ಮಾಡಿಬಿಟ್ಟರೆ ನನಗೆ ಅನ್ಯಾಯ ಮಾಡಿದಂಗೆ ಆಗಾಕಿಲ್ವಾ ? ಸಾಯೋಗುಂಟ ಇವನ ಜೊತೆ ನಾ ಹೆಂಗೆ ಬಾಳ್ಲಿ. ನಂಗೂ ಆಸೆ ಅಂತ ಇರಾಕಿಲ್ವಾ”? ವಯಸ್ಸು , ಕಲಿತ ವಿದ್ಯೆಯ ಪರಿಣಾಮ ಬುದ್ಧಿ ಬಲಿತು ಹೊರಗಿನ ಬಣ್ಣದ ಪ್ರಪಂಚದ ಪರಿಚಯವಾಗಿ ಪ್ರಸ್ತುತ ಪರಿಸ್ಥಿತಿಗೆ ಒಗ್ಗಿಕೊಳ್ಳಲಾಗದ, ಸಂಬಂಧ ಹರಿದುಕೊಳ್ಳಲಾಗದ ಗೊಂದಲದ ಮನಸ್ಥಿತಿಗೆ ಬಲಿಯಾಗಿದ್ದಳು ಆ ಹುಡುಗಿ. “ಕಷ್ಟಪಟ್ಟು ಸಾಕಿ, ಸಲುವಿ, ಮೈಯನೆರೆದ್ದಿದ್ದೂ ನಿನಗ್ಯಾಕೆ ಅನ್ಯಾಯ ಮಾಡ್ಲೇ ತಾಯಿ ನನಗ್ಯಾರಿದಾರೆ? ನೀವಿಬ್ರೂ ಆವಾಗ ಚನ್ನಾಗಿದ್ರಿ,ನನಗೇನೋ ಬ್ಯಾನಿ ಅವಾಗಬಂದಿತ್ತು. ನಿಮ್ಮಿಬ್ಬರನ್ನೇ ಬಿಟ್ಟು ಸತ್ತೋಗಿಬಿಟ್ರೇ? ನೀವಿಬ್ರೂ ಅನಾಥ ಅಗೋಗ್ತೀರ ಅನ್ನೊದಿಗಿಲಿಂದ ಮದುವೆ ಮಾಡ್ಬಿಟ್ಟೆ ! ನಿಮ್ಮವ್ವನ್ನ ಆಣೇಗೂ ಮುಂದೆ ನಿನ್ನ ಜೀವನ ಈ ಮದುವಿಂದ ಹಾಳಾಗತೈತಿ ಅನ್ನೋದು ಅರುವಾಗಲಿಲ್ಲ ನಂಗೆ. ಇರಕ್ಕೆ ಮನೆ ಇತ್ತು ,ನಾಕು ಎಕ್ರಿ ಜಮೀನಿತ್ತು, ಹೆಂಗೋ ಇಬ್ರೂ ಜೀವನ ಮಾಡ್ಕಂಡು ಹೋಕಿರಿ ಅಂತ ಯೋಚ್ನಿ ಮಾಡ್ದೆ.” ಅಜ್ಜಿ ಕಣ್ಣೀರಾಯಿತು. ” ಈಗ ಏನು ಮಾಡೋಣ ಅಜ್ಜಿ” ನಾನು ಕೇಳಿದೆ. ” ಮತ್ತೇನ್ಮಾಡದೈತವಾ, ನನ್ನ ಮಗನಿಗೂ ಇದು ಹೊಂದಲ್ಲಬೇ . ಸುಮ್ಕೆ ಅಕಿ ಹೆಂಗೆ ಹೇಳ್ತಾಳೋ ಹಂಗೆ ಮಾಡಾನ . ದಿನಾ ಇದೇ ರೇಜಿಗ ನೋಡಿ ಸಾಕಾಗೇತಿ ಅಂತ ಹ್ವಾದ ದೀಪಾವಳಿಂದ ವರಾತ ಹಚ್ಚಿದ್ದ. ನಾನೆ ತಡ್ದಿದ್ದೆ. ಇಲ್ಲಿತನ ಬಂದಾಳೆ ಅಂದ್ರೆ ತೀರ್ತಲ್ಲ , ಅಕಿ ಹೆಂಗೆ ಹೇಳ್ತಾಳೆ ಹಂಗೆ ಮಾಡ್ರೀ. ನನ್ನ ಮಗನ ಹಣೆ ಬರದಾಗ ಇದ್ದಾಂಗ ಆಕತಿ.” ಅಜ್ಜಿ ಗಟ್ಟಿಯಾಗಿಯೇ ಹೇಳಿದಳು. “ನೀನೇನಂತಿಯಪ್ಪ “. ನನ್ನ ಗೊಂದಲದ ಪ್ರಶ್ನೆ. ” ನಮ್ಮಿಂದ ತಪ್ಪು ಆಗೇತಿ ಮೇಡಂ. ತಂದೆ,ತಾಯಿ ಇಲ್ದಿರೋ , ಇನ್ನು ಸರಿಯಾಗಿ ತಿಳುವಳಿಕಿ ಬಾರದ ಹುಡುಗಿ ಮದುವೀನ ನನ್ನಂಥ ಬದುಕು ಕತ್ತಲಾದವನ ಜೋಡಿ ನಮ್ಮವ್ವ ಮಾಡ್ತೀನಿ ಅಂದಾಗ ನಾನಾದ್ರೂ ಯೋಚನೆ ಮಾಡಿ ಒಲ್ಲೆ ಅನ್ನಬೇಕಾಗಿತ್ತು. ನಮ್ಮವ್ವ ಲೋಕ ತಿಳೀದವಳು. ಅವಳ ಮನಸ್ಸಿನಲ್ಲಿ ವಿಷ ಇರ್ಲಿಲ್ಲ. ನಾನೇ ದುರಾಸೆಗೆ ಬಿದ್ದೆ. ನಮ್ಮನ್ನೇ ನಂಬಿದ್ದವಳಿಗೆ ಮೋಸ ಮಾಡ್ದಂಗಾಗೈತಿ. ಇವತ್ತಿನತನಕ ಆಕಿ ನನ್ನ ಹಡದವ್ವನಷ್ಟೇ ಸಮ ಕಾಳಜಿಯಿಂದ ನೊಡ್ಕಂಡವಳೆ. ನನ್ನ ಚಾಕರಿ ಮಾಡ್ಯಾಳೆ,ಗೆಳತಿತರ ಒಂದಿಷ್ಟು ಜ್ಞಾನ ,ಬುದ್ದಿ ಕಲಿಸಿದಾಳೆ. ತಬಲ , ಸಂಗೀತದ ಹೊಸ ಜಗತ್ತು ನನಗೆ ತೋರಿಸಿದ್ದು ಆಕೀನೇ ತೀರಿಸಲಾರದಷ್ಟು ,ಆಕಿ ಋಣ ನನ್ನಮೇಲೈತೆ. ಮುಂದೆ ಆಕಿ ಸುಖವಾಗಿ ಬಾಳಿ, ಬದುಕಬೇಕು. ಅದಕ್ಕೆ ನಾನು ಏನು ಮಾಡಬೇಕು ಹೇಳಿರಿ ? .” ಹುಡುಗನ ಸಮತೂಕದ ಮಾತು,ಸಮರ್ಪಣಾ ಭಾವ,ಅಂತರಂಗದ ಶುದ್ಧತೆ , ಸಮಚಿತ್ತದ ನಿರ್ಧಾರ, ತಪ್ಪೊಪ್ಪಿಗೆಯೊಂದಿಗೆ ಋಣಸಂದಾಯದ ಆಶಯ. ನಾನು ನಿರೀಕ್ಷಿಸದ ಪರಿಪೂರ್ಣ ವ್ಯಕ್ತಿತ್ವದ ಅನಾವರಣ ನನ್ನ ಬಾಯಿ ಕಟ್ಟಿಸಿತು . ಪರಸ್ಪರರ ಒಳಿತಿಗೆ ತುಡಿಯುವ ಆ ಮೂರೂ ಜೀವಗಳಿಗೆ ಮನದೊಳಗೆ ಶರಣೆಂದೆ. ಎರಡು ಎಕರೆ ಜಮೀನನ್ನು ಶಾಶ್ವತ ಜೀವನಾಂಶವನ್ನಾಗಿ ಆಕೆಯ ಹೆಸರಿಗೆ ಬರೆದುಕೊಟ್ಟು ಹರಸಿದರು ತಾಯಿ. ಮಗ. ಈ ವೈವಾಹಿಕ ಬಂಧನದಿಂದ ಬಿಡುಗಡೆಯಾದ. ಅಜ್ಜಿ , ಮಾವ, ಮೊಮ್ಮಗಳ ಬಂಧ ಜವಬ್ದಾರಿಯನ್ನು ಗಟ್ಟಿಗೊಳಿಸಬೇಕೆಂದು ಮೂವರಿಗೂ ತಾಕೀತು ಮಾಡಿ, ವಿಚ್ಛೇದನದ ಅರ್ಜಿ ಗುಜರಾಯಿಸುವ ತಯಾರಿಯಲ್ಲಿ ತೊಡಗಿದೆ. ……….. ………..

ಕಥಾಯಾನ Read Post »

You cannot copy content of this page

Scroll to Top