ಕಾವ್ಯ ಸಂಗಾತಿ ಡಾ ತಾರಾ ಬಿ ಎನ್ ಧಾರವಾಡ “ರಕ್ತದ ಮಳೆ” ಮಳೆ ಸುರಿಯಬೇಕಾದಆಕಾಶದಿಂದ ಇಂದುಸುರಿಯುತ್ತದೆ ರಕ್ತದ ಹನಿ,ಮಕ್ಕಳ ನಗು ಕೇಳಬೇಕಾದಬೀದಿಯಲ್ಲಿ, ಗುಂಡಿನ ಸದ್ದು ಧ್ವನಿ. ಅಮ್ಮನ ಮಡಿಲು ಇರಬೇಕಾದಜಾಗದಲ್ಲಿ ಬೂದಿಯಾಗಿದೆಕನಸಿನ ಮನೆ,ಬಾಲಕನ ಕೈಯಲ್ಲಿ ಪುಸ್ತಕ ಹಿಡಿದಿದೆ ಭಯದ ಕರಿ ನೆರಳು ಯಾವ ಧರ್ಮ? ಯಾವ ದೇಶ?ಯಾರಿಗಾಗಿ ಈ ಹೊತ್ತಿಉರಿಯುವ ಉರಿ ಬೆಂಕಿ?ಹೆಸರಿಲ್ಲದ ಶವಗಳ ಸಾಲಿನಲ್ಲಿಮಾನವೀಯತೆ ನಿಂತಿದೆ ಮಂಕಾಗಿ ಇಲ್ಲಿ ಗಾಳಿಯೇ ಕೇಳುತ್ತದೆ ಮೌನವಾಗಿಸಹೋದರತೆ ಸತ್ತು ಹೋಗಿದೆಭೂಮಿಯೇ ಅಳುತ್ತದೆ ಕಣ್ಣೀರಾಗಿ,“ನಿನ್ನ ಹೆಜ್ಜೆಗೆ ಕೆಂಪಾದ ಗಾಯ ಇದು?” ನಕ್ಷತ್ರಗಳು ಕೂಡ ಮಾಯವಾಗಿವೆ,ಅವುಗಳ ಹೊಳಪು ಕಣ್ಣೀರಿಗೆ ಕರಗಿದೆ,ಶಾಂತಿಯ ಹಕ್ಕಿ ಹಾರಲು ಹೆದರುತ್ತಿದೆಹಕ್ಕಿಯ ರೆಕ್ಕೆಗೂ ಹೊಗೆ ತಗಲಿದೆ. ಬೂದಿಯಿಂದ ನೋವು ಕೂಗುತ್ತಿದೆಕತ್ತಲಿನ ನಡುವೆ ಬೆಂಕಿ ಚಿಮ್ಮುತ್ತಿದೆರಕ್ತದ ಮಳೆಯನ್ನೇ ಹೊಳೆಯಂತೆ ಮಳೆಯಾಗಿ ಹರಿಯುತ್ತಿದೆ ಕೈ ಹಿಡಿದು ಕಣ್ಣೀರ ಒರೆಸಲೂಯಾರಿಲ್ಲ ಇಲ್ಲಿಮಾನವೀಯತೆಯನ್ನು ಮತ್ತೊಮ್ಮೆ ಜೀವಂತಗೊಳಿಸಲು ಸಾಧ್ಯವೇ??????? ಮಮತೆ ಕರುಣೆ ಕರಗಿಸತ್ತುಹೋಗಿದೆ.ಅಮಾಯಕ ಜೀವಗಳಬಲಿ ಏರುತ್ತಿದೆಯುದ್ಧ ಬೇಕಿತ್ತಾ??ಪರಿಣಾಮ ಘನಘೋರ ,, ಮರಗುತ್ತದೆ ಮನಕೊರಗುತ್ತದೆ ಜೀವ…. ಡಾ ತಾರಾ ಬಿ ಎನ್ ಧಾರವಾಡ