ಕಲ್ಪನಾ ಎಸ್ ಪಾಟೀಲ ಅವರ ಕವಿತೆ “ಮಣ್ಣಿಗೆ ಭೇದವಿಲ್ಲ”
ಕಾವ್ಯ ಸಂಗಾತಿ ಕಲ್ಪನಾ ಎಸ್ ಪಾಟೀಲ “ಮಣ್ಣಿಗೆ ಭೇದವಿಲ್ಲ” ಊರ ಬಿಟ್ಟು ದೂರಾಚೆ ಹಾಳು ಸುಡುಗಾಡಂತೆಅದ್ಯಾಕೋ ಯಾರಿಗೂ ಇಷ್ಟವಲ್ಲದ ಜಾಗವಂತೆಇಲ್ಲ್ಯಾರಿಗೂ ಯಾವುದೇ ಭೇದವಿಲ್ಲವಂತೆಹಾಸಿ ಹೊದ್ದಿಕೊಳ್ಳಲಿರುವುದೊಂದೆ ಮಣ್ಣಿನ ಮುದ್ದೆಯಂತೆ ಮನುಷ್ಯನ ಎಲ್ಲದಕ್ಕೂ ಪೂರ್ಣವಿರಾಮ ಇಲ್ಲಿಇದ್ದಾಗ ನಾನೇ ಎನ್ನುವ ಭರದಲ್ಲಿಬೀದಿಯು ನಮ್ಮದಲ್ಲ ಎನ್ನುತ ಉಗಿಯುವನಲ್ಲಿನಾನು ನನ್ನದೆನ್ನುವ ಸ್ವಾರ್ಥದ ವ್ಯಾಮೋಹದಲ್ಲಿ. ನಶ್ವರ ಕಾಯವ ಕಾಯಕಕ್ಕಾಗಿ ಮೀಸಲಿಡುಪರೋಪಕಾರಾರ್ಥಂ ಇದಂ ಶರೀರಂ ಮರೆಯದಿರುಸಮಾಜದ ಉಪಯೋಗಕ್ಕಾಗಿ ಜೀವಿಸಿ ನೋಡುಕಾಯಕದಲ್ಲೇ ಕೈಲಾಸವ ಕಾಣುತಿರು. ಪ್ರತಿಫಲ ಬಯಸದೆ ಸೇವೆಯ ಮಾಡುತಿರುಕಂಗಳ ಕೊಡದಿದ್ದರೂ ಅನ್ಯರ ಕಣ್ಗಳ ಕೀಳದಿರುನಡೆಸಲಾಗದಿದ್ದರೂ ಬೆಳಕಿನ ಮಾರ್ಗ ತೋರಿಸುಜೊತೆ ನಡೆಯಲಾಗದಿದ್ದರೂ ಎಡರು ತೊಡರಾಗದಿರು. ದೇಹವ ನಂಬಿ ಬದುಕು ನಡೆಸುವ ಮನುಜನುಮಣ್ಣಲಿ ಮಣ್ಣಾಗುವ ಮುನ್ನ ನಾಲ್ವರ ಬಾಯಲ್ಲಿರು ನೀನುಅಳಿಯದೆ ಉಳಿಯುವವು ಮಾನವೀಯ ಮೌಲ್ಯಗಳಲ್ಲವೇನು!ಸತ್ಯದ ಮಾರ್ಗದೊಳು ನಡೆ ಅರಿತು ನೈಜತೆಯನು. ಕಲ್ಪನಾ ಎಸ್ ಪಾಟೀಲ
ಕಲ್ಪನಾ ಎಸ್ ಪಾಟೀಲ ಅವರ ಕವಿತೆ “ಮಣ್ಣಿಗೆ ಭೇದವಿಲ್ಲ” Read Post »









