ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಮಧು ‌ವಸ್ತ್ರದ ಮುಂಬಯಿ “ವಸಂತನ ಅಳಲು”

ಕಾವ್ಯ ಸಂಗಾತಿ ಮಧು ‌ವಸ್ತ್ರದ ಮುಂಬಯಿ “ವಸಂತನ ಅಳಲು” ಮಾಮರದ ಚಿಗುರೆಲೆ ಅದೇಕೋ ಅತ್ತಿತ್ತಅಲ್ಲಾಡದಾಗಿಹುದುಮಧು ಹೀರಿ ಹಾರುವ ದುಂಬಿ ಝೇಂಕಾರಮಾಡದಾಗಿಹುದುಕೋಗಿಲೆ ಹಾಡುವುದ ಮರೆತು ಮೌನದಲಿಕುಳಿತಿಹುದುನವಿಲು ನರ್ತಿಸದೆ ಮುಗಿಲೆಡೆ ದೈನ್ಯದಿಂದನೋಡುತಿಹುದು ತೆಂಗು ಬಾಳೆ ಅಡಿಕೆ ಶುಭಕಾರ್ಯಗಳಿಲ್ಲದೆಮಂಕಾಗಿಹವುಮಲ್ಲಿಗೆ ಸಂಪಿಗೆ ಹೂಗಳು ಒಣಗಿ ಮೊಗವಬಾಡಿಸಿಹವುಪ್ರಾಣಿಸಂಕುಲ ಮನುಜನಾಟಕೆ ಸಿಕ್ಕಿ ತತ್ತರಿಸಿಹೋಗಿಹುದುಪಶುಗಳೆಲ್ಲವೂ ನಿನ್ನ ಕ್ರೂರ ಆರ್ಭಟಕೆ ಬೆದರಿಕಂಗಾಲಾಗಿಹವು ಬೀಸುಗಾಳಿಯಲಿ ಕಲುಷಿತ ವಿಷದ ದುರ್ಗಂಧಬರುತಿಹುದುಹರಿವ ನದಿಗಳಲಿ ಮನುಜ ಬಿಸುಟಿದ ಕೊಚ್ಚೆಕಸ ಬೆರೆತಿಹುದುಮಲಿನ ಕೆಸರು ನೀರಿನಲ್ಲಿ  ಜಲಚರಗಳ ಜೀವಬರಡಾಗಿಹುದುಹಕ್ಕಿ ಪಕ್ಷಿಗಳ ಚಿಲಿಪಿಲಿ ಕಲರವವಿಲ್ಲದೆ ಕಾಡುಬರಿದಾಗಿಹುದು. ಪ್ಲಾಸ್ಟಿಕ್, ಕಸ, ಕಾಗದ ಉರಿದು ಹೊಗೆ ಏರಿಬಾನು ಕಪ್ಪಾಗಿಹುದುನಿನ್ನ ಸ್ವಾರ್ಥದಾಟಕೆ ಸಿಲುಕಿ ಹಸಿರು ಕಾನನ ಬೋಳಾಗಿಹುದುನಿನ್ನಹಂಕಾರ ನೋಡಿ ಸಹಿಸದೆ ಸಮುದ್ರರಾಜ ಕೋಪದಿ ಗರ್ಜಿಸಿಹನುತನ್ನಲೆಗಳ ಬೀಸಿ ಭೂತಾಯಿಯ ಬಾಚಿ ತಬ್ಬುತ ಸಾಂತ್ವನ ನೀಡಿಹನು ಇಳೆಯ ಸಿಂಗರಿಸಿ ನಲಿಯಲು ಬಂದ ಋತುವಸಂತ ಬೆಚ್ಚಿಹನುಪೃಥ್ವಿಯ ಮೇಲಿನ ದಾರುಣ ಸ್ಥಿತಿಯ ಕಂಡುಮರುಗಿ ಹೋಗಿಹನುಸ್ವಚ್ಛತೆ ನಿರ್ಮಲತೆ ಕಾಪಾಡುತ ಎಚ್ಚರದಿಂದಇರಿ ಎಂದಿಹನುನಿಸರ್ಗದ ಕಾಳಜಿ ವಹಿಸುತ ಸುಖದಿ ಬಾಳಿರಿಎಂದು ಹರಸಿಹನು.. ಮಧು ‌ವಸ್ತ್ರದ ಮುಂಬಯಿ

ಮಧು ‌ವಸ್ತ್ರದ ಮುಂಬಯಿ “ವಸಂತನ ಅಳಲು” Read Post »

ಕಾವ್ಯಯಾನ

ವಿಮಲಾರುಣ ಪಡ್ಡಂಬೈಲು “ಬಣ್ಣದ ಧಿರಿಸು”

ಕಾವ್ಯ ಸಂಗಾತಿ ವಿಮಲಾರುಣ ಪಡ್ಡಂಬೈಲು “ಬಣ್ಣದ ಧಿರಿಸು” ಬಚ್ಚಿಟ್ಟ ಬಣ್ಣದ ಧಿರಿಸಿಗೆಹಚ್ಚಿಟ್ಟ ಹಣತೆಯ ಕಣ್ಣವನುಸಾಲು ದೀಪಗಳಹೊನ್ನ ಕಿರಣದ ತಾರೆ ತಂದವನುತನ್ನ ಮನದಲ್ಲಿ ಭಿತ್ತಿದ ಭಾವಗಳ ಹಸೆಗೆಸಾವಿರ ಚುಕ್ಕೆಗಳ ಇಟ್ಟವನು. ಹಸಿರುಸಿರ ಸೀರೆಯೊಳುನೂತ ನೂಲುಗಳೇ ಸಾಕುಚಿತ್ತಾರ ತಂದಭಾವಭಿತ್ತಿಯ ಬಣ್ಣಗಳ ಹೇಳಲು. ಬಿದ್ದ ಮಳೆಗೆ ಮೊಳೆತ‌ ನೆಲದಹಸಿ ಪ್ರೀತಿಯಂಥವನಮೋಹಕ್ಕೋ ಮೋದಕ್ಕೋಒಲುಮೆಗೋ ನಲುಮೆಗೋಪ್ರೀತಿ ಪ್ರೇಮದ ಅರ್ಥವ ಹೇಳಲುಯಾವ ಹೆಸರಿಡಲಿ? ಸುಳಿ ಮಿಂಚ ಮಿಣುಕು ಕಂಗಳಮಾಯಕಾರನಮೊಗದಲ್ಲಡಗಿದ ಕೋಲ್ಮಿಂಚಮುಗುಳು ನಗೆಯನೇನೆಂದು ಬಣ್ಣಿಸಲಿ? ಉಜ್ವಲ ಬದುಕಿನಅನಂತ ಕ್ಷಣಗಳ ಸಾಕ್ಷೀಕರಿಸಲುಸಂತಸ ಹಂಚಿಸಮೀಪ ಬರಲು ತವಕಿಸುವಜೀವದುಜ್ಜೀವದಲಿನಾನಿರುವೆನೆಂದುಹೇಗೆ ಹೇಳಲಿ? ಉಟ್ಟ ಸೀರೆಯ‌ ಅಂಚಿನಲಿಸೆರಗ‌ ಸಿಕ್ಕಿಸಿಕೊಂಡಂತಿರುವಮುಚ್ಚಿಟ್ಟ ಮನ ನನ್ನದುಎಲ್ಲವು ಬಚ್ಚಿಟ್ಟ ಭಾವದೊಳಡಗಿವೆಎಂದು ಹೇಳದಿದ್ದರೂಜೊತೆಗಿರುವ ಭಾವ ಕೊಡುವ ಭರದಲಿಸೋತು ಹೋದವಳು…. ವಿಮಲಾರುಣ ಪಡ್ಡoಬೈಲು

ವಿಮಲಾರುಣ ಪಡ್ಡಂಬೈಲು “ಬಣ್ಣದ ಧಿರಿಸು” Read Post »

ಕಾವ್ಯಯಾನ

ನಾಗರಾಜ ಬಿ. ನಾಯ್ಕ “ಮನಸ್ಸಿನ ಸೇತುವೆ”

ಕಾವ್ಯ ಸಂಗಾತಿ ನಾಗರಾಜ ಬಿ. ನಾಯ್ಕ “ಮನಸ್ಸಿನ ಸೇತುವೆ” ನಮ್ಮದೆನ್ನುವ ಪುಟ್ಟಮನಸ್ಸು ಪುಟ್ಟ ದೋಣಿಯಂತೆವಿಹಾರ ಹೊರಡುತ್ತದೆಬದುಕಿನುದ್ದಕ್ಕೂಎಲ್ಲರ ಮನದಿ ಮಲ್ಲಿಗೆಯಾಗಿಬಳ್ಳಿಯಂತೆ ಹಬ್ಬಿನಿಂತಿರುವ ಬದುಕಿಗೆಚಲನೆಯಾಗುತ್ತದೆವಿಶಾಲ ಆಗಸದ ಬಾನಂಚುಮುಟ್ಟುವ ಹಕ್ಕಿಯರೆಕ್ಕೆಯ ಬಡಿತವಾಗಿಮನಸ್ಸು ತುಂಬುತ್ತದೆಗೂಡಂಗಡಿಯ ಮರದಬೆಂಚುಗಳ ಮೇಲೆಕುಳಿತು ಅವಲಕ್ಕಿತಿನ್ನುವಾಗ ಅರಿವಿನ ಮೂಲಕ್ಕೊಂದು ಅಡಿಪಾಯದಚಿತ್ರ ಬರೆಯುತ್ತದೆಹೂವಿನಂದದ ಮಗುವಿನ ನಗುಕವಿತೆಯಾಗಿ ಸಾಲುಗಳಬರೆದು ಬೆಟ್ಟವಾಗುತ್ತದೆಬೆಟ್ಟದ ತುದಿಯಿಂದಹರಿದು ಬಂದ ಝರಿಯೊಂದುಜೀವವಾಗಿ ಊರತುಂಬಾ ಹರಿಯುತ್ತದೆಬೆಳಗು ನಗುವ ಹೂಗಳಕಂಪಿನ ನಡುವೆ ನಿಂತುಗಾಳಿಯಲ್ಲಿ ಸುಳಿದಾಡುತ್ತದೆಮನಸಿನ ಸೇತುವೆ ಮೇಲೆಅನ್ನ ನೀರಿನ ಘನತೆಮನಸು ಮುಟ್ಟುತ್ತದೆಸುಮ್ಮನೇ ಸೈಕಲ್ ಮೇಲೆಕುಳಿತು ಹೋದ ಹಿರಿಯನಹಿಂದೆ ಇರುವ ಭತ್ತದ ಸಸಿಗಳಲ್ಲಿ ಮತ್ತೊಂದುಸೇತುವೆಯ ಮಾತುನೆಲದನಿಯಾಗಿ ಕೇಳುತ್ತದೆಮನಸಿನ ಮನಸಿಗೆಮಾತೇ ಸೇತುವೆಯಾಗಿಮನಸ್ಸು ದಾಟಿಸುತ್ತದೆಮನದ ಖುಷಿಗೆಬಣ್ಣ ತುಂಬಿಮಾಯವಾಗುತ್ತದೆ…….. ನಾಗರಾಜ ಬಿ. ನಾಯ್ಕ

ನಾಗರಾಜ ಬಿ. ನಾಯ್ಕ “ಮನಸ್ಸಿನ ಸೇತುವೆ” Read Post »

ಕಾವ್ಯಯಾನ

ಕಲ್ಪನಾ ಎಸ್‌ ಪಾಟೀಲ “ನಾಚಿದ ಬೆಳದಿಂಗಳು”

ಕಾವ್ಯ ಸಂಗಾತಿ ಕಲ್ಪನಾ ಎಸ್‌ ಪಾಟೀಲ “ನಾಚಿದ ಬೆಳದಿಂಗಳು” ಅಸುನೀಗುತಿದ್ದ ಬೆಳದಿಂಗಳಿಗೆನನ್ನವಳ ಕುರಿತಾಗಿ ಹೇಳುತಿದ್ದೆಒಂಚೂರು ನಗದೆ ಇತ್ತು ಕೊಂಚವೂ ಆಸೆ ತೋರದೆನನ್ನನೇ ನಿರ್ಲಕ್ಷ್ಯ ಮಾಡುತಿತ್ತುಇವನೊಬ್ಬ! ಎನ್ನುತಿತ್ತು ನನ್ನದೇ ನನಗೆ ಹೇಳುವುದೆಷ್ಟೋಉಳಿದಿದೆ ಕೇಳಿಸಿಕೊಳ್ಳುವರಿಲ್ಲಕಗ್ಗತ್ತಲೆಯು ಹಂಗಿಸಿ ನಗುತಿದೆ ಬೆಳದಿಂಗಳ ಮನದಮಾತಿಗೆ ಕಿವಿಯಾದರೂ ಚಂದಿರನಬರುವಿಕೆಯತ್ತಲೆ ಅದರೊಲವಿತ್ತು ನಾನು ನನ್ನ ಒಲವಿನ ದಾರಿ ಹಿಡಿದೆಬೆಳದಿಂಗಳು ನೋವ ಮರೆತುನಸುನಗುತಿತ್ತು ನಾಚುತಿತ್ತು. ಕಲ್ಪನಾ ಎಸ್ ಪಾಟೀಲ

ಕಲ್ಪನಾ ಎಸ್‌ ಪಾಟೀಲ “ನಾಚಿದ ಬೆಳದಿಂಗಳು” Read Post »

ಕಾವ್ಯಯಾನ

ಮಧು ವಸ್ತ್ರದ ಮುಂಬಯಿ “ಮಾನವನಾಗು”

ಕಾವ್ಯಸಂಗಾತಿ ಮಧು ವಸ್ತ್ರದ ಮುಂಬಯಿ “ಮಾನವನಾಗು” ಪುಟ್ಟ ಗಲ್ಲಿಯಾಗು, ಚಿಕ್ಕ, ಚೊಕ್ಕ ಹಳ್ಳಿಯಾಗು, ಹೃದಯಹೀನ ನಗರವಾಗದಿರುಎಳೆಯ ಬಿಸಿಲಾಗು, ನಗುವ ಮುಸ್ಸಂಜೆಯಾಗು,ನೆತ್ತಿ ಉರಿಸುವ ಬಿಸಿಲಾಗದಿರುಹರಿವ ನದಿಯಾಗು, ಭೋರ್ಗರೆವ ಅಬ್ಧಿಯಾಗು, ನಿಂತ ನೀರಂತೆ ಜಡ ಆಗದಿರುಸುಗಂಧದ ಧೂಪವಾಗು, ಬೆಳಕಿನ ದೀಪವಾಗು, ಅಜ್ಞಾನದ ಅಂಧಕಾರ ಆಗದಿರುಹೂವನೀವ ಗಿಡವಾಗು, ತಂಪನೀವ ವೃಕ್ಷವಾಗು, ಕಡಿಯುವ ಕೊಡಲಿ ಆಗದಿರುಪಥಿಕನಾಗು, ಮಾರ್ಗದರ್ಶಿಯಾಗು ಗುರಿಯನು ಹೊಂದದ ಅಲೆಮಾರಿ ಆಗದಿರುಕೋಪವಾಗು, ಮೌನವಾಗು ಮಾತಾಗು ಕಠೋರ ಮಾತಿನ ಪರನಿಂದಕ ಆಗದಿರುಶಕ್ತನಾಗು ಭಕ್ತನಾಗು,ಸಾತ್ವಿಕ ಹೃದಯವಂತನಾಗುನಯವಂಚಕ ಆಗದಿರುಶ್ರಮಿಕನಾಗು ಪ್ರಾಮಾಣಿಕನಾಗು, ಮಾನವನಾಗು, ಅಹಂಕಾರಿ ದಾನವನಾಗದಿರು.. ಮಧು ವಸ್ತ್ರದಮುಂಬಯಿ

ಮಧು ವಸ್ತ್ರದ ಮುಂಬಯಿ “ಮಾನವನಾಗು” Read Post »

ಕಾವ್ಯಯಾನ

“ಬೈಸಿಕಲ್ಲು” ವಿಶ್ವ ಸೈಕಲ್ ದಿನಕ್ಕೊಂದು ಕವಿತೆ ಸುಜಾತಾ ರವೀಶ್ ಮೈಸೂರು

ಕಾವ್ಯ ಸಂಗಾತಿ “ಬೈಸಿಕಲ್ಲು” ವಿಶ್ವ ಸೈಕಲ್ ಸುಜಾತಾ ರವೀಶ್ ಮೈಸೂರು ಹಿಂದೊಂದು ಕಾಲದ ಪ್ರತಿಷ್ಠೆಯ ಲಾಂಛನಇಂದು ಹೆಸರೇ ಇದರದು ಬಡವರ ವಾಹನಗಾಲಿಯ ಆವಿಷ್ಕಾರದೊಂದಿಗೆ ಇದರ ಉಗಮಸೈಕಲೇರಿದರೆ ಎಷ್ಟು ಮಜಾ! ಆಹಾ ಆರಾಮ! ಬೇಡದು ಹೆಚ್ಚಿನ ಖರ್ಚಿನ ಇಂಧನಕೇಳದು ದುಬಾರಿ ಸರ್ವೀಸು ಉಸ್ತುವಾರಿಗಳತುಳಿದು ತುಳಿದು ರಟ್ಟೆ ಕಾಲುಗಳಿಗೆ ಬಲಹತ್ತಿರ ಸುಳಿಯದು ಬೊಜ್ಜು ರೋಗ ರುಜಿನ ಇಲ್ಲ ಸೈಕಲ್ ಸವಾರಿ ಮಾಡಲು ಬಯಸದ ಮನಸುಕೆಲವರಿಗಂತೂ ಉಳಿದೇ ಬಿಟ್ಟಿದೆ ಇದಾಗಿ ಕನಸುಅಗೆಯುತ್ತಾ ಹೋದರೆ ಬಾಲ್ಯದ ನೆನಪುಗಳ ಗಣಿಸಿಗುವುದು ಎಲ್ಲರಿಗೂ ಸೈಕಲ್ ಕಲಿಕೆಯ ಮೆಲುಕ ಮಣಿ ಆಗುತ್ತಾ ಹೋದಂತೆ ಮನುಜರು ಸೋಮಾರಿವಿರಳವಾಯಿತು ಸೈಕಲ್ ಉಪಯೋಗ ಸವಾರಿವ್ಯಾಯಾಮ ಆರೋಗ್ಯ ನೀಡುತ್ತಿದ್ದ ಆ ಉಪಕಾರಿಈಗ ತುಕ್ಕು ಹಿಡಿದ ಕಂಬಿಗಳ ಆಸ್ತಿಪಂಜರ ಬರೀ. ಸಮಯದ ಪರಿವರ್ತನೆಯ ನಿಯಮಗಳಸಾರುವಂತಿದೆ ನಶ್ವರ ಜೀವನದ ತತ್ವಗಳಹೇಳುತ್ತಲಿದೆ ಏಳು ಬೀಳುಗಳ ಪಾಠಗಳವಿಪರ್ಯಾಸಗಳ ವೈಚಿತ್ರ್ಯ ವೈರುಧ್ಯಗಳ ಕಥೆಗಳ ಹೆಚ್ಚುತ್ತಿರುವ ಪರಿಸರ ಮಾಲಿನ್ಯಕ್ಕೆ ಇದು ವರಕಾಣದ ಕೇಳದ ರೋಗಗಳಿಗೆ ಕೊಡುವ ಉತ್ತರಬನ್ನಿ ಎಲ್ಲಾ ಉಪಯೋಗಿಸೋಣ ಸೈಕಲ್ಲುಕಡಿಮೆ ಮಾಡೋಣ ಪೆಟ್ರೋಲು ಡಾಕ್ಟರ ಬಿಲ್ಲು ಸುಜಾತಾ ರವೀಶ್ ಮೈಸೂರು

“ಬೈಸಿಕಲ್ಲು” ವಿಶ್ವ ಸೈಕಲ್ ದಿನಕ್ಕೊಂದು ಕವಿತೆ ಸುಜಾತಾ ರವೀಶ್ ಮೈಸೂರು Read Post »

ಕಾವ್ಯಯಾನ

ಡಾ. ಹೆಚ್. ನಟರಾಜ್ ಆರ್ಯ ಅವರ ಕವಿತೆ “ಎದೆ ಹಾಲು”

ಕಾವ್ಯ ಸಂಗಾತಿ ಡಾ. ಹೆಚ್. ನಟರಾಜ್ ಆರ್ಯ “ಎದೆ ಹಾಲು” ನವಮಾಸ ಕತ್ತಲೊಳಗೆರಕ್ತ ದೀಪ ಹೊತ್ತಿತು,ಕರುಳು ಬಳ್ಳಿಯ ಸೇತುವೆಯಲಿಜೀವ ಹನಿ ತೇಲಿತು. ಪ್ರಸವ ನೋವಿನ ಅಲೆಗಳಲಿಸಾವಿನ ಬಾಗಿಲ ತಟ್ಟಿತು,ಮೊದಲ ಅಳುವ ನಾದದೊಡನೆಮಮತೆ ಹೊಳೆ ಹರಿಯಿತು. ಎದೆ ಹಾಲಿನ ಬಿಳಿಹರಿವುಕರಗಿದ ರಕ್ತ ಜ್ಯೋತಿ,ಮಗುವ ತುಟಿ ನಗುವಿನಲಿಮತ್ತೆ ಮೊಳೆದ ಜೀವಶಕ್ತಿ. ಕನ್ನಡಿ ಮಿಂಚಿನ ಮೋಹದಲಿಮಡಿಲ ಜೋಗುಳ ಮಂಕಾಯಿತು,ಮೊಬೈಲಿನ ನೀಲಿ ಕಣ್ಣಲಿಬಾಲ್ಯ ಮೌನವಾಗಿ ಕರಗಿತು. ಕರುಳು ಬಳ್ಳಿಯ ನoಟ್ಟಿoದುಕಸಬುಟ್ಟಿ ದಾರಿ ಹಿಡಿಯಿತು,ಕಣ್ಣೀರ ಹನಿಯ ಆಳದಲಿಮಮತೆ ದೀಪ ಉಳಿಯಿತು. ತಾಯಿಯೆಂದರೆ  ಚಂದ್ರನಲ್ಲ,ಸುಟ್ಟು ಕರಕಾದ ದೀಪ,ಕರಗಿದ ಉಸಿರ ಬೂದಿಯಲಿಬಾಲ್ಯ ದಾರಿಯ ರೂಪ. ಡಾ. ಹೆಚ್. ನಟರಾಜ್ ಆರ್ಯ.

ಡಾ. ಹೆಚ್. ನಟರಾಜ್ ಆರ್ಯ ಅವರ ಕವಿತೆ “ಎದೆ ಹಾಲು” Read Post »

ಕಾವ್ಯಯಾನ

ಡಾ ಶಶಿಕಾಂತ ಪಟ್ಟಣ ರಾಮದುರ್ಗ “ಇಳಿದುಬಿಡು”

ಕಾವ್ಯ ಸಂಗಾತಿ ಡಾ ಶಶಿಕಾಂತ ಪಟ್ಟಣ ರಾಮದುರ್ಗ “ಇಳಿದುಬಿಡು“ ಇಳಿದು ಬಿಡು ಮಳೆ  ಬೇಗನೆ, ಸುಡುವ ಧರೆಗೆ ತಂಪು ನೀಡು.ಕಾದು ಕುಳಿತಿವೆ  ಜೀವ ಜಾಲ,ಕಾಯುತ್ತಿವೆ ಸಿಹಿ ಹನಿಗಳ ಮುತ್ತು ರತ್ನ . ಬತ್ತಿದ ಕೆರೆ ತೊರೆಗಳ ತುಂಬಿಸು,ನಗೆ ಅರಳಲಿ ಗಿಡ.ಮರ ಬಳ್ಳಿಗಳಲಿ ಒರೆಸು  ಕಣ್ಣೀರು ಸರಿಸಿ ಸಾಲದ ಮೂಟೆ,ಹಸಿರ ಹಂದರವ ಎಲ್ಲೆಡೆ ಕಟ್ಟಿ. ಚಲಿಸುವ ಕಾರ್ಮೋಡಗಳು ಒಂದಾಗಿ ಬನ್ನಿ,ತೆಪ್ಪನೆ ಮಳೆ  ಸುರಿದು ಜಗವ ನಲಿಸಿ.ಮಣ್ಣು ಹುಡಿ ಭಂಡಾರ ತೂರಿ  , ಜನ್ಮ ಆಸೆಯ ಮತ್ತೆ ಚಿಗುರಿಸಿ. ನಿನ್ನ ತಂಪ ಆ ಸಿಹಿ ಸಿಂಚನ,ಸೃಷ್ಟಿಯ ಒಡಲಿಗೆ ಜೀವ ಗಾನ!ಸದ್ದಿಲ್ಲದೆ  ಹೊರಟು ಬಿಡುನಿನ್ನ ದಾರಿ  ಬದುಕು ಪಾವನ ಡಾ ಶಶಿಕಾಂತ ಪಟ್ಟಣ ರಾಮದುರ್ಗ

ಡಾ ಶಶಿಕಾಂತ ಪಟ್ಟಣ ರಾಮದುರ್ಗ “ಇಳಿದುಬಿಡು” Read Post »

ಕಾವ್ಯಯಾನ

ಭಾರತಿ ರವೀಂದ್ರ ಅವರ ಹಾಯ್ಕುಗಳು

ಕಾವ್ಯ ಸಂಗಾತಿ ಭಾರತಿ ರವೀಂದ್ರ ಹಾಯ್ಕುಗಳು ಅನುದಿನವುನವ ನವೀನ ಕಂದನಲಿಯುವಾಗ ಆಟ ಚಂದವು,ತೋದಲ್ನುಡಿ ಸಂಗೀತಮಗು ಆಡಲು ಇರುವಂತಿಗೆಅರಳಿದಾಗ, ಮನಮನೆ ಸೌರಭ. ಈಶ ಗೌರೀಶರಕ್ಷಿಸು ಭಗವಂತಬಿಸಿಲ ಬೇಗೆ ಉತ್ತರ ಇದೆಪ್ರತಿ ಗೂಢ ಪ್ರಶ್ನೆಗೆಅರಿಸು ನೋಡು ಊಸರವಳ್ಳಿಬಣ್ಣವು ಕೆಲವರನಡೆ ನುಡಿಲಿ ಎದೆಯಾಳದಿದಾವನಲ, ನಯನನಗುತಿರಲು, ಏಕೆ ಮನಸ್ಸೆ?ನಿನ್ನದಲ್ಲದ ಸಿರಿಯುಎಂದೂ ಸಿಗದು ಐಶ್ವರ್ಯ ಅಂಧಕಾಣನು ಯಾವದನ್ನೂದೇವರೇ ಗತಿ ಒಲವೇ ಸಿರಿಅರಿತ ಮನಗಳುಜೊತೆ ಸಾಗಲು ಓರೆ ನೋಟಕೆಸೋತು ಶರಣು, ನವ್ಯಪ್ರೇಮ ಕವನ ಔಷಧ ನೋಡುನಿನ್ನ ನಗು ಕಂಡಾಗನೋವು ಶಮನ ಭಾರತಿ ರವೀಂದ್ರ

ಭಾರತಿ ರವೀಂದ್ರ ಅವರ ಹಾಯ್ಕುಗಳು Read Post »

ಕಾವ್ಯಯಾನ

ಸುಮನಾ ರಮಾನಂದ,ಕೊಯ್ಮತ್ತೂರು “ಮುಸ್ಸಂಜೆ ನೋಟ”

ಕಾವ್ಯ ಸಂಗಾತಿ ಸುಮನಾ ರಮಾನಂದ,ಕೊಯ್ಮತ್ತೂರು “ಮುಸ್ಸಂಜೆ ನೋಟ” ಅಂದದ ವರ್ಷಧಾರೆ ಬರುತಿದೆಚೆಂದದ ಈ ಮುಸ್ಸಂಜೆಯಲಿ!ನೊಂದ ಬುವಿಯದನಪ್ಪಿ..ಮಿಂದಂತಿದೆ ಮಣ್ಣ ಘಮಲಿನಲಿ!! ಬಂಗಾರ ಬಣ್ಣದ ಬೆಳಕಿಂದರಂಗಾಗಿದೆ ಧರೆ ಹಸಿರಿನಲಿ!ಹಿಂಗಾರಿನ ಮುಸಲಧಾರೆಯ..ಗುಂಗಿನಲಿದೆ ಇಳೆ ಹರುಷದಲಿ!! ತೆಂಗಿನ ಗರಿಗಳ ಓಲಾಟದಿರಂಗಿನ ಚಿತ್ತಾರ ಗಗನದಲಿ!ಭೃಂಗವದು ಹೂವನ್ನು ಕಾಡುವಂತೆ..ತಂಗಾಳಿ ತೀಡಿದೆ ಸಂಜೆಯಲಿ!! ಬೆರಗಿನ ಚಟಪಟ ಮಳೆಹನಿಯುಮೆರುಗಿನಿಂದಾಗಮಿಸಿ ಅವನಿಯಲಿ!ಮೂಡಿಸಿ ಚಿತ್ತಾರವನಾಗಸದಿ..ಸೊಬಗು ತಂದಿದೆ ಬೈಗಿನಲಿ!! ಸುಮನಾ ರಮಾನಂದ,ಕೊಯ್ಮತ್ತೂರು

ಸುಮನಾ ರಮಾನಂದ,ಕೊಯ್ಮತ್ತೂರು “ಮುಸ್ಸಂಜೆ ನೋಟ” Read Post »

You cannot copy content of this page

Scroll to Top