ಕಾವ್ಯ ಸಂಗಾತಿ ಡಾ. ಹೆಚ್. ನಟರಾಜ್ ಆರ್ಯ “ರೆಕ್ಕೆ ಮುರಿದ ಹಕ್ಕಿ” ಗುಡಿಸಿಲಿನ ಗುಬ್ಬಚ್ಚಿ ನಾನು.ತಂದೆ–ತಾಯಿಯ ಪ್ರೀತಿ,ಅಪ್ಪನ ದುಡಿಮೆ ದುಡ್ಡಿನಿಂದಮೃಷ್ಟಾನ್ನ ಭೋಜನ, ಅವ್ವನ ಬುದ್ಧಿಮಾತು— ನಿಧಾನವಾಗಿಹಾರಲು ಕಲಿತೆ. ಗೂಡು ಬಿಟ್ಟು,ಗುರುತಿಲ್ಲದ ಕಡೆಗೆ ಸಾಗುತ್ತಿದ್ದೆ;ಅಡೆತಡೆ ಇಲ್ಲದ ಸ್ವಚ್ಛಂದ ಹಾರಾಟ,ಎತ್ತರಕ್ಕೆ ಏರುತ್ತಿದ್ದೆ. ಗುಬ್ಬಚ್ಚಿಯ ಗೂಡಲ್ಲಿಬಡತನ ಇದ್ದರೂ ಬವಣೆ ಇರಲಿಲ್ಲ;ಹಣ ಇರಲಿಲ್ಲ, ಆದರೆ ಆನಂದ ಇತ್ತು.ನೋವಿತ್ತು, ನಂಜಿರಲಿಲ್ಲ;ಕೊಳಕು ಇತ್ತು, ಕತ್ತಲೆ ಇರಲಿಲ್ಲ. ಶುಭ್ರ ನೀಲಿ ಆಕಾಶ,ತಣ್ಣನೆಯ ಗಾಳಿ,ತಳಿರಿನ ತಂಪು,ಮಲ್ಲಿಗೆಯ ಕಂಪು—ಇವೆಲ್ಲಾ ನನಗೆ ಗುರಿಯಾಗಿ,ಗುರುವಾಗಿ,ಗುರಿಯವರೆಗೂ ಕರೆದೊಯ್ದವು. ಆಮೇಲೆ…ಅರಮನೆ ಸೇರಿದೆ.ಅಂದ–ಚಂದದ ಮೈಮಾಟ,ಮೋಹ–ಮಾಯೆಯ ಪಾಶ;ಅಲ್ಲಿ ರೆಕ್ಕೆ ಬಿಚ್ಚಲು ಆಗಲಿಲ್ಲ,ಹಾರಲು ಆಗಲಿಲ್ಲ. ಪಂಜರದೊಳಗೆ ರೆಕ್ಕೆ ಬಡಿಯುತ್ತಾ,ನಿದ್ರೆ ಬಾರದ ರಾತ್ರಿಯ ನರಳಾಟದಲ್ಲಿನಲಿವು ಕಾಣದೆಕಾದು ಕುಳಿತು ಕಂಗಾಲಾದೆ. ಹೊಸ ಪ್ರಪಂಚದಲ್ಲಿದಾರಿ ತಪ್ಪಿದೆ;ದಾರಿ ತೋರಿಸುವವರೇಕತ್ತಲಿನ ಪರದೆ ಕಟ್ಟಿದರು. ಹಾರಲೂ ಆಗದೆ,ಹೊರಳಲೂ ಆಗದೆ,ಮರುಗುತ, ಸೊರಗುತ, ಕೊರಗುತಕುಳಿತೆ—ರೆಕ್ಕೆ ಮುರಿದ ಹಕ್ಕಿಯಂತೆ. ಪಂಜರದಿಂದ ಬಿಡುಗಡೆ ಯಾವಾಗ?ನಾನು ಹಾರಬೇಕು—ಶುಭ್ರ ಗಾಳಿಯ ತಂಪಿನಲ್ಲಿ,ಸ್ವಚ್ಛ ನೀಲಿ ಆಕಾಶದ ಕಡೆಗೆ. ಮೌನವೇ ಮಾತಾಗಿದೆ.ಮಾಡಿದ ತಪ್ಪಿಗೆ ಪ್ರಾಯಶ್ಚಿತ ಯಾವಾಗ?ಒಂದು ದಿನ ಪಂಜರದ ಸರಳು ಮರುಗಿತು“ಬಿಡುಗಡೆ ನೀಡುವೆ ಹೋಗು ನೀನು” ಹಾರುವ ಚೈತನ್ಯ ಇಲ್ಲ;ಅದೇ ಆಕಾಶ, ಅದೇ ಗಾಳಿ—ರೆಕ್ಕೆ ಮುರಿದಿವೆ ನಾನಿನ್ನು ಹಾರಲು ಆಗದರೆಕ್ಕೆ ಮುರಿದ ಹಕ್ಕಿ. ಡಾ. ಹೆಚ್. ನಟರಾಜ್ ಆರ್ಯ