ಈಗ
ಕವಿತೆ ಈಗ ಆನಂದ ಆರ್.ಗೌಡ ತಾಳೇಬೈಲ್ ರವಿವಾರದ ಸಂಜೆಅಮಲು ಚೆಲ್ಲಿದ ಎಂಥೆಂಥಾದೋಕಸ ಪೌರ ಸೇವಕರ ಪೊರಕೆಶುಚಿಗೊಳಿಸುತ್ತಿತ್ತು ರಸ್ತೆಯ ಇಕ್ಕೆಲಗಳಲ್ಲಿಆಗ ತಾನೇ ಪ್ರಸವವಾದಹೊಂಗಿರಣ ಅವರ ವದನಕ್ಕೆಮುತ್ತನೀಯುತ್ತಿತ್ತು ಅಲ್ಲಿಯೇ ಸೃಷ್ಟಿಸಿದ ನೇರಳೆಲೆಗಳನೆರಳು ಬೆಳಕಿನಾಟ ಕಲೆಗಾರನಕುಂಚದ ಕಲೆಯ ನಾಚಿಸಿದೆ ಕಾರ್ಪೋರೇಟ್ ರಸ್ತೆ ನಡುವೆನೆಟ್ಟ ಪುಟ್ಟ ಗಿಡಗಳುಆರೈಕೆ ಮಾಡಲು ತೂಗು ಹಾಕಿದದೊಡ್ಡ ದೊಡ್ಡ ವ್ಯಕ್ತಿಗಳ ನಾಮಫಲಕರಾರಾಜಿಸುತ್ತಿದೆಚುನಾವಣೆ ಮುಗಿದರೂ ಅದರಂಚಿನಲಿ ಹಾಯ್ದುಹೋಗುವ ಚಿರಯೌವನೆಅಂಗೈ ಸೋಕಿದರೆ ಹಾಲುತೊಟ್ಟಿಕ್ಕುವ ಸೊಬಗುಇನ್ನೂ ಹೊಟ್ಟೆಕಿಚ್ಚು ತರಿಸುವತೊಟ್ಟುಡುಗೆಯ ಸಿರಿವಂತಿಕೆಮುಚ್ಚಿದೆದೆಯೊಡ್ನಿಅರಿವಿಲ್ಲದೇ ಇಳಿದುಚಿಗುರಿದೆಲೆಗಳ ಸವರಿಅಮಲೇರಿಸುವ ಆ ನೋಟಮನಸ ಕೊಲ್ಲುವ ಸಂಚಲತೆಪಡ್ಡೆ ಹೈಕಳ ಹೃದಯ ಬಡಿತಇಮ್ಮಡಿಸಿದೆ ಆ ರಸ್ತೆಕತ್ತಲೆಯಲಿ ಆಗಾಗ ಶವವಾಗಿಮಲಗಿದರೆಒಮ್ಮೊಮ್ಮೆ ಚಂದಮಾಮ ಇಣುಕಿಆಟವಾಡುತ್ತಾನೆ ರಸ್ತೆಯ ಹೃದಯ ಅಗೆದು ಬಗೆದುಈಗ ಅಲ್ಲಲ್ಲಿ ಟಾಕೀ ಕಟ್ಟುತ್ತಿದ್ದಾರೆಒಳಗೊಳಗೇ ಪೈಪ್ ಲೈನ್ಕಕ್ಕಸು ಕೊಳಚೆ ಹೊರಹಾಕಲು ಜನ ಹೈರಾಣಾಗಿದ್ದಾರೆಗಾಡಿಗಳು ನೀರಿನಲೆಗಳಮೇಲೆ ಸಾಗಿ ದಡ ಮುಟ್ಟುತ್ತಿವೆಧೂಳನ್ನು ನುಂಗಿ ಬದುಕುವಮಕ್ಕಳು ಮುದುಕರು ಮೂಕರಾಗಿಕೆಮ್ಮು ಸುಂಬಳ ಇಳಿಸುತ್ತಿದ್ದಾರೆಮನೆ ಒರೆಸುವ ಮನೆಯೊಡತಿಯಮೌನದ ಕಟ್ಟೆ ಒಡೆದಿದೆ ಆದರೂ ಕೋಟಿ ಕೋಟಿಗಳ ಟೆಂಡರ್ಪಡೆದ ಲೀಡರ್ ನೋಡುತ್ತಲೇ ಇದ್ದಾನೆಅಂಬುಲೆನ್ಸ್ ನ ತಿರುಗಾಟವನ್ನುಮಂದಿ ಮೂಗು ಮುರಿದು ಅವನ ಪ್ರತಿಕ್ರಿಯೆಗೆಕಾಯುತ್ತಿದ್ದಾರೆ ! **********************************************









