ಮೂಗಪ್ಪ ಗಾಳೇರ ಅವರ ಕವಿತೆ “ಗೆದ್ದಿದ್ದು ನನ್ನ ಬುದ್ಧನಲ್ಲದೇ ಮತ್ತಿನ್ಯಾರು….?”
ಕಾವ್ಯ ಸಂಗಾತಿ ಮೂಗಪ್ಪ ಗಾಳೇರ “ಗೆದ್ದಿದ್ದು ನನ್ನ ಬುದ್ಧನಲ್ಲದೇ ಮತ್ತಿನ್ಯಾರು….?” ಬಿದ್ದ ವೈರಿಗಳನ್ನಷ್ಟೇ ಅಲ್ಲಬದ್ಧ ವೈರಿಗಳಿಗೂ ಬೆಚ್ಚಿ ಬೀಳಿಸಿದ್ದ ಬುದ್ಧಮಾಡಿದ್ದು ರಕ್ತ ಹರಿಸುವ ಯುದ್ಧವನಲ್ಲಪ್ರೀತಿ ತುಂಬಿ ಸ್ನೇಹ ಬೆಳೆಸುವ ಧರ್ಮದ ನಡಿಗೆ ಬುದ್ಧ ನಡೆದ ಹಾದಿ ಉದ್ದಗಲಕ್ಕೂ ಜನಸಸಾಗರವೋ ಜನಸಾಗರನಿಮ್ಮ ಯುದ್ಧದ ಪಿರಿಂಗಿಗಳುಆಕಾಶದೆತ್ತರಕ್ಕೆ ಚಿಮ್ಮುತ್ತ ಬೆಂಕಿಯ ಕೆಂಡವನ್ನು ಉಗುಳುತಿದ್ದರೆಬುಧ್ದನ ಉಪದೇಶಗಳುಆ ಬೆಂಕಿಯ ಕೆಂಡದಲ್ಲಿ ಶಾಂತಿಯ ತೋಟವನ್ನು ಸೃಷ್ಟಿಸುತ್ತಿವೆ ಯುದ್ಧ ಗೆದ್ದಿತು ಎನ್ನುವುದಕ್ಕೆನಿಮ್ಮ ಪಿರಿಂಗಿಯ ಮದ್ದು ಗುಂಡುಗಳು ಹರಿಸಿದ ರಕ್ತದ ಚರಿತ್ರೆಗೆಸಡ್ಡು ಹೊಡೆದು ನಿಂತಿದ್ದುಮುಗಿಲೆತ್ತರಕ್ಕೂ ಚಿಮ್ಮಿ ಶಾಂತಿ ಮಳೆ ಸುರಿಸಿದ್ದುನನ್ನ ಬುದ್ಧನ ಮೌನ ಮತ್ತು ಅಹಿಂಸೆ ಅಗೋ ಅಲ್ಲೋಡಿನನ್ನ ಬುದ್ಧನ ಮೌನದ ಮಳೆಗೆನಿಮ್ಮ ಪಿರಂಗಿಯ ಅವಶೇಷಗಳುಸುಟ್ಟ ಇಟ್ಟಿಗೆಗಳಾಗಿವೆಹೆದರ ಬೇಡಿ ಅವುಗಳಿಗೆ ಒಂದಿಷ್ಟುಬುದ್ಧನ ನಾಲ್ಕು ಆರ್ಯ ಸತ್ಯಗಳನ್ನ ಲೇಪಿಸಿದರೆಮತ್ತೆ ಆಕಾಶದೆತ್ತರಕ್ಕೆ ನಿಮ್ಮ ಪಿರಿಂಗಿಗಳು ಸಿಡಿಯಬಹುದುಆಗ ಸಿಡಿಯುವ ಪಿರಿಂಗಿಗಳಿಂದ ಸುರಿಯುವುದು ಬೆಂಕಿ ಉಂಡೆಯಲ್ಲನನ್ನ ಬುದ್ಧನ ಶಾಂತಿ ಮತ್ತು ಅಹಿಂಸೆಯ ಮಳೆಆಗ ಯುದ್ಧದಲ್ಲಿ ಗೆದ್ದಿದ್ದು ನನ್ನ ಬುದ್ಧನಲ್ಲದೇ ಮತ್ತಿನ್ಯಾರು….? ಮೂಗಪ್ಪ ಗಾಳೇರ
ಮೂಗಪ್ಪ ಗಾಳೇರ ಅವರ ಕವಿತೆ “ಗೆದ್ದಿದ್ದು ನನ್ನ ಬುದ್ಧನಲ್ಲದೇ ಮತ್ತಿನ್ಯಾರು….?” Read Post »









