ಪತ್ರ ಬರೆಯಬೇಕಿದೆ ಮಳೆಗೆ
ಪ್ರಜ್ಞಾ ಮತ್ತಿಹಳ್ಳಿ ಯಾರಿಗೂ ಹೇಳದೇ ಊರು ಬಿಟ್ಟಿದೆ ಮಳೆಹುಡುಕಿ ಕಂಗೆಟ್ಟ ಆಷಾಢ ಭುಸುಗುಡುತಿದೆಗಾಳಿಯ ಗಂಟಲಲಿ ವಿರಹದ ಶಹನಾಯಿಹಲಿವುಳಿದ ಮೋಡಕ್ಕೆ ಬಿಕ್ಕಲಾರದ ಬಾಯಿ ಎಲ್ಲಿ ಅಡಗಿದೆಯೊ ಮಳೆರಾಯಾಮುಖಗವಸಿನ ಜಗಕೆ ಹೆದರಿದೆಯಾಕಾಡು-ಕಣಿವೆ ಹೊಲ-ತೋಟಕ್ಕೆಹಸಿರುಗವಸು ತೊಡಿಸಲಾರೆಯಾಮುಟ್ಟುವುದನ್ನೇ ಬಿಟ್ಟು ಒಳಗೋಡಿಮುಚ್ಚಿದ ಕದದ ಹಿಂದೆ ಗುಟ್ಟಾಗಿದ್ದೇವೆ ಬಾಲ್ಯದಂಗಳದ ಸಿಹಿ ಒಗರಿನ ಗೇರು ಬೇಣಗೆಲ್ಲು ಗೆಲ್ಲಿಗೂ ತೂಗುವ ಹಣ್ಣು ಹಳದಿ ಕೆಂಪುಹೋದಷ್ಟೂ ಮುಗಿಯದ ತಂಪು ಕಾಲ್ದಾರಿಮುಗಿದದ್ದು ತಿಳಿವ ಮೊದಲೇ ಕವಲೊಡೆದ ಉರಿ ಶಂಕೆಯ ರಾವಣ ಕಾವಲಿದ್ದಾನೆಅಳುವೇ ನಿಲ್ಲುವುದಿಲ್ಲ ಸೀತೆಗೆ ಕದವಿಕ್ಕಿದ ರಾಮನರಮನೆಗೆ ವೈರಾಣು ಭೀತಿಮನದ ಗೆಲ್ಲು ಗೆಲ್ಲುಗಳಲೂಕುಣಿದು ಕುಪ್ಪಳಿಸುವ ಕಪಿಸೈನ್ಯತಾವೇ ಹಚ್ಚಿಕೊಂಡ ಉರಿಯ ಹಬ್ಬದಂತೆ ಹಬ್ಬಿಸುತ್ತಿದ್ದಾವೆ ಊರಿಗೆಲ್ಲ ಎಷ್ಟು ಬೈದರೂ ಸಿಟ್ಟಿಗೇಳುವುದಿಲ್ಲಪಟದೊಳಗಿನ ದೊಡ್ಡಪ್ಪಕನಸಿನ ಕಲ್ಯಾಣಿಯೊಳಗೆ ತಣ್ಣಗಿದ್ದಾನೆಸಣ್ಣ ತುಣುಕಿನ ಚಂದ್ರಾಮಕನಸು ನೇಯಬೇಕು ಹೊರ ಬರಲಿಕ್ಕೆಪತ್ರ ಬರೆಯ ಬೇಕು ಮಳೆಗೆ ಬೀಳಲಿಕ್ಕೆ *************
ಪತ್ರ ಬರೆಯಬೇಕಿದೆ ಮಳೆಗೆ Read Post »









