ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಹಬ್ಬ ಗೌರಿ.ಚಂದ್ರಕೇಸರಿ ನಾವು ಸಾಬೀತುಪಡಿಸಿದ್ದೇವೆ. ಪ್ರಾಣಕ್ಕಿಂತ ದೊಡ್ಡದು ಆಚರಣೆಗಳೆಂದು. ನೆತ್ತಿಯ ಮೇಲೆ ತೂಗುತ್ತಿದ್ದರೂ ಕತ್ತಿ ಬಾರಿಸುತ್ತಿದ್ದರೂ ಎಚ್ಚರಿಕೆಯ ಗಂಟೆ ನಡೆದು ಬಿಡುತ್ತೇವೆ ಚೀಲ ಹಿಡಿದು ಸಾವಿನ ಮನೆಯ ಕಡೆಗೆ ಮುಗಿ ಬೀಳುತ್ತೇವೆ ಹೂ ಕಾಯಿ ಹಣ್ಣುಗಳಿಗೆ ತುಂಬಿಕೊಳ್ಳತ್ತೇವೆ ಭವಿಷ್ಯವನ್ನೆಲ್ಲ ಭೂತವೆಂಬ ಚೀಲಗಳಿಗೆ ಹೊತ್ತು ನಡೆಯುತ್ತೇವೆ ತಪ್ಪಿಸಿ ಪೋಲೀಸರ ಕಣ್ಗಾವಲನ್ನು ಬಂದು ಸೇರಿ ಮನೆ ಬೀಗುತ್ತೇವೆ ಚಪ್ಪನ್ನೈವತ್ತಾರು ಕೋಟೆಗಳ ಗೆದ್ದಂತೆ ತಳಿರು ತೋರಣವಿಲ್ಲದ ಸಿಹಿಯಡುಗೆ ಮಾಡದ ನೆರೆಹೊರೆಯವರನ್ನು ನೋಡಿ ನಗುತ್ತೇವೆ ಜೀವವಿದ್ದಲ್ಲಿ ಮಾಡೇವು ನೂರು ಹಬ್ಬ ಹರಿದಿನ ಅವಿವೇಕಿಗಳು ನಾವು ಹಬ್ಬ ಮಾಡುವ ಹವಣಿಕೆಯಲ್ಲಿ ಆಗದಿರಲಿ ನಮ್ಮದೇ ಹಬ್ಬ ಆಗ ನಮ್ಮವರೇ ಬಾರದೆ ದೂರದಿ ನಿಂತು ನೋಡುವರು ನಮ್ಮ ದಿಬ್ಬಣ ಹಿಡಿ ಮಣ್ಣೂ ಹಾಕಿಸಿಕೊಳ್ಳದೆ ಭಾವನೆಗಳೇ ಇಲ್ಲದ ಯಂತ್ರ ತೋಡಿದ ಗುಂಡಿಯೊಳಗೆ ಹೂತು ಹೋಗಬೇಕಾದೀತು ಅನಾಥ ಶವದಂತೆ *******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಸಹದೇವ ಯರಗೊಪ್ಪ ಗದಗ ಹೊಲದ ಇಳಿಜಾರಿಗೆ ಅಡ್ಡ ನೇಗಿಲ ಸಾಲುಗಳ ತೆರೆದ ಮಣ್ಣಿನ ಮಗ| ಅಂಬರದ ಎದೆ ಸೀಳಿ ಮುಗಿಲ್ವನಿಗಳ ಗೂಡು ಕಟ್ಟಿದ ಮಣ್ಣಿನ ಮಗ|| ಒಕ್ಕಲುತನ ಕಲೆ ವಿಜ್ಞಾನ ವಾಣಿಜ್ಯಗಳ ಸಂಗಮ ಎಂದು ತೋರಿಸಿದ ಜಂಗಮ| ನೆಲದ ಜ್ವರದ ಪರಿಗೆ ವಲಸೆ ಹೋಗುವ ತಥಿಗಳಿಗೆ ಲಗಾಮ ಜಡಿದ ಮಣ್ಣಿನ ಮಗ|| ಆಗಮೆ ಮಾಡಿದರೂ ಬೀಯಕ್ಕೆ ಭತ್ತವಿಲ್ಲದೆ ಅಗುಳು ಅನ್ನಕ್ಕಾಗಿ ಚೀರಾಟ| ಮೋಡಗಳ ಮೈಥುನವನ್ನು ಕೆರೆ ಕಟ್ಟೆ ಬಾವಿಗಳಲ್ಲಿ ಸಂಗ್ರಹಿಸಿದ ಮಣ್ಣಿನ ಮಗ|| ಗಡಿಯಾರದಂತೆ ತಿರುಗುವ ಋತುಗಳ ಹಿಂದೆ ಮೇಟಿ ಹಿಡಿದು ತಿರುಗಿದವನು| ಕುದಿವ ಬರಡು ನೆಲಕೆ ಹಸಿರು ಕುಸುರಿ ಸೀರೆ ಉಡಿಸಿದ ಮಣ್ಣಿನ ಮಗ|| ಹಂಗಾಮುಗಳ ಜೂಜಾಟಕ್ಕೆ ಬೇಸತ್ತು ಹಳ್ಳಿಗಳಿಗೆ ಬೆನ್ನು ಮಾಡಿ ಅಲೆದವನು| ಆಧುನಿಕ ಕೃಷಿಯ ಕವಲುದಾರಿಗಳನ್ನು ಬೇಧಿಸಿ ಸಾಧಿಸಿದ ಮಣ್ಣಿನ ಮಗ|| ಬೆನ್ನಿಗೆ ಬೆನ್ನು ಹಚ್ಚಿ ಹಗಲಿರುಳು ದುಡಿದು ಮಣ್ಣಿಗೆ ಬೆವರು ಹನಿಗಳ ಹಿಂಡಿದವನು| ಬರ ನೆರೆಗೆ ತಾನೇ ತುತ್ತಾದರೂ ಜಗದ ತುತ್ತಿನ ಚೀಲ ತುಂಬಿದ ಮಣ್ಣಿನ ಮಗ|| ಮಣ್ಣಿಗೆ ವಿಷ ಬೆರೆಸಿ ಜಗಕೆಲ್ಲ ವಿಷವುಣಿಸುವ ಸಾಚಿ ಕೃಷಿಗೆ ದಿಕ್ಕಾರವಿರಲಿ| ಬಂಡಿ ಬಂಡಿ ಕುಂಡಿ ಗೊಬ್ಬರವ ಉಣಿಸಿ ಖಂಡುಗದ ರಾಶಿ ಬೆಳೆದ ಮಣ್ಣಿನ ಮಗ|| ***********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಋಜುವಾತು ಮಾಡಬೇಕಿದೆ ರೇಶ್ಮಾಗುಳೇದಗುಡ್ಡಾಕರ್ ನನ್ನೊಳಗಿನ ನಾನುಋಜುವಾತು ಮಾಡಬೇಕಿದೆ ನನ್ನೊಳಗಿನ ನಾನು ಋಜುವಾತುಮಾಡಬೇಕಿದೆಎದೆಗೆ ಇಟ್ಟ ಕೊಳ್ಳಿಅರುವ ಮುನ್ನಹರಳುಗಟ್ಟಿದ ನೆನಪುಗಳುಹನಿಯಾಗಿ ಹರಿಯುವ ಮುನ್ನಸೋಗಿನ ಕಡಲಲ್ಲಿ ಅಲೆಯಾಗುವ ಮುನ್ನನನ್ನೊಳಗಿನ ನಾನುಋಜುವಾತು ಮಾಡಬೇಕಿದೆ ….. ಬಣ್ಣ ಬಣ್ಣದ ನೋಟಗಳುಮನದ ಹಂದರ ಸೇರುವ ಮುನ್ನಮೋಹ ಸಲೆಗೆ ಅಡಿಯಾಳಾಗುವ ಮುನ್ನವಾಸ್ತವದ ತಳಹದಿಯ ಮರೆಮಾಚಿಭ್ರಮರ ಲೋಕಕೆ ಕಾಲಿಡುವ ಮುನ್ನಬಾಂಧವ್ಯ ದ ಆಚೆಗೊಸ್ನೇಹದ ಸೆಳೆತದಾಚೆಗೊ ನನ್ನ ನಾಋಜುವಾತು ಮಾಡಬೇಕಿದೆ …. ಏಳಿಗೆಯ ಬೇರುಗಳ ಕತ್ತರಿಸಿಹಿಂದೆ ಮುಂದೆ ನಿಂದನೆಗೆ ಆಹಾರಮಾಡಿ ನಾಜೂಕು ಮಾತುಗಳಾಡುತನಮ್ಮೊಳಗೆ ಬೇರೆತು ದೂರ ಇರುವವರುಕತ್ತಿಮಸೆಯುವ ಮುನ್ನ ನನ್ನೊಳಗಿನನಾನು ಋಜುವಾತು ಮಾಡಬೇಕಿದೆನನ್ನೂಳಗಿನ ನಾನು ಋಜುವಾತು ಮಾಡಬೇಕಿದೆ ***********                  

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಎ.ಹೇಮಗಂಗಾ ಬಾಳಿನೆಲ್ಲ ಏಳುಬೀಳುಗಳ ದಾಟಿದ್ದೇನೆ ಕಾಲವೇ ಮುನ್ನಡೆಸು ನನ್ನ ಗೋಳಿನೆಲ್ಲ ಸರಮಾಲೆಗಳ ಬಿಸುಟಿದ್ದೇನೆ ಕಾಲವೇ ಮುನ್ನಡೆಸು ನನ್ನ ನಂಜಾದ ಅವನ ಕಹಿನೆನಪುಗಳು ಅಸ್ತಿತ್ವವನ್ನೇ ಬಲಿಪಡೆಯುತ್ತಿವೆ ಅಂತರಾಳದಿ ನೋವನ್ನೆಲ್ಲ ಹೂಳಿದ್ದೇನೆ ಕಾಲವೇ ಮುನ್ನಡೆಸು ನನ್ನ ಹೂವಿಂದ ಹೂವಿಗೆ ಹಾರುವ ದುಂಬಿ ಅವನೆಂದು ತಿಳಿಯಲಿಲ್ಲ ತಪ್ಪಿನ ಅರಿವಾಗಿ ಎಚ್ಚೆತ್ತುಕೊಂಡಿದ್ದೇನೆ ಕಾಲವೇ ಮುನ್ನಡೆಸು ನನ್ನ ವಂಚನೆಯ ಕತ್ತಿಯೇಟಿಗೆ ಹೃದಯದ ಗಾಯವಿನ್ನೂ ಮಾಯಬೇಕಿದೆ ಸತ್ತ ಕನಸಿಗೆ ಜೀವ ತುಂಬಬೇಕೆಂದಿದ್ದೇನೆ ಕಾಲವೇ ಮುನ್ನಡೆಸು ನನ್ನ ಜೀವನಕ್ಕೆ ಬೆನ್ನು ತಿರುಗಿಸಿ ಹೇಡಿಯಂತೆ ಸಾವ ಬಯಸದಿರು ಹೇಮ ನನಗೆಂದೇ ನಾನಿನ್ನು ಬದುಕಬೇಕೆಂದಿದ್ದೇನೆ ಕಾಲವೇ ಮುನ್ನಡೆಸು ನನ್ನ ******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಇವನೊಂದಿಗೆ ಅವನನ್ನೂ ಧಾಮಿನಿ ಸತ್ತಂತಿದ್ದೆನು ನಾನುಅದಕೆ ಕಾರಣ ನೀನು ಏನೊಂದೂ ಅರಿವಾಗಲಿಲ್ಲತಿಳಿಯುವಷ್ಟರಲ್ಲಿ ಮುಗಿದಿತ್ತೆಲ್ಲ ಮೈ ತುಂಬಾ ಚೇಳುಅದಕಿಂತ ಸಾವೇ ಮೇಲು ಮೈಯೋ ಬೆಣ್ಣೆಯಂತೆ ಮೃದುಮನಸೋ ಕಲ್ಲಿನಂತೆ ಕಠಿಣ ತಾನಾಗಿ ಚಲಿಸಲಿಲ್ಲ ಒಂದೂ ಬೆರಳುಬಲವಂತಕ್ಕಾಗಿ ಚೀರಿದವುಎಲ್ಲಾ ನರಳು ಸತ್ತಂತಿದ್ದೆನು ನಾನುಅದಕೆ ಕಾರಣ ನೀನು. ಹುಚ್ಚಿಇವನನ್ನು ಅವನೆಂದು ತಿಳಿಯಬಾರದಿತ್ತೇಹಬ್ಬವೇ ಆಗಿಹೋಗುತಿತ್ತಲ್ಲೆ! ಬರೀ ಗಂಡಸರಷ್ಟೇ ಇವಳೊಂದಿಗೆ ಅವಳನ್ನುಹೋಲಿಸಿಕೊಳ್ಳುವುದೇ? ನಮಗೇನು ಹಕ್ಕಿಲ್ಲವೇಇವನೊಂದಿಗೆ ಅವನನ್ನೂ ಮುಡಿದುಕೊಳ್ಳುವುದು. ********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ನಿಸಾರ ನಮನ ಗಝಲ್ ರೇಮಾಸಂ ಹತ್ತನೇ ವಯಸ್ಸಲೇ ಮಿಂದೆದ್ದ ಕಾವ್ಯ ಕವಿ ಅಹ್ಮದ ನಿಸಾರ ನಿತ್ಯೋತ್ಸವ/ ಜಲಪಾತ ಪ್ರಥಮ ಭಾವಗೀತೆ ಪತ್ರಿಕೆಲಿ ಪ್ರಕಟಿಸಿದ ಹರಿಕಾರ ನಿತ್ಯೋತ್ಸವ// ಮೃದು ಮಾತಿನ ಭಾವುಕದ ಸಾಹಿತಿಯೇ ಮೋಡದಲೇಕೆ ಮರೆಯಾದಿರಿ/ ಬುದ್ದಿಜೀವಿ ಸಂವೇದನಾಶೀಲ ಭಾವದ ಚಿಂತನಕಾರ ನಿತ್ಯೋತ್ಸವ// ರಾಜಕೀಯ ಸಮರ್ಥ ವಿಡಂಬನೆಯಲಿ ಕುರಿಗಳು ಸಾರ್ ಕುರಿಗಳು ಎಷ್ಟು ಚಂದ/ ಬೆಣ್ಣೆ ಕದ್ದವ ಕೃಷ್ಣನೆಂದು ತೋರಿದ ಪ್ರತಿಭಾಕಾರ ನಿತ್ಯೋತ್ಸವ// ಭಾವೈಕ್ಯದ ರುವಾರಿ ಕರುನಾಡಿನ ರಾಯಭಾರಿಯು ನೀವಲ್ಲವೇ/ ಕನ್ನಡದಲ್ಲಿ ಸಾರೆ ಜಹಾಂಸೆ ಅಛ್ಛಾ ನುಡಿಸಿದ ಗೀತಕಾರ ನಿತ್ಯೋತ್ಸವ// ಬಿಗಿದು ನಿನ್ನ ನಲಿವಿನ ಕಾವ್ಯದಿ ಪಾಲುಗೊಳ್ಳು ಮನಸ್ಸದಿ ರೇಮಾಸಂ/ ಈ ಜಗವು ಬರಿದಾಗಿ ಕಾಣುತಿದೆ ನೀವಿಲ್ಲದ ಗ್ರಂಥಕಾರ ನಿತ್ಯೋತ್ಸವ// ******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಯಾನ ಪ್ರೊ.ಕವಿತಾ ಸಾರಂಗಮಠ ಲೋಕದಿ ಆವರಿಸಿದೆ ಕೊರೊನಾ ಛಾಯೆ ನಿತ್ಯೋತ್ಸವದ ಬೆಳಕು ಆರಿತಾವ ಮಾಯೆ! ನವ್ಯ ಕಾವ್ಯದ ನೇತಾರ ಕನ್ನಡದ ಕುರಿತ ಪ್ರೀತಿ ಅಪಾರ! ಕುರಿಗಳು ಸಾರ್ ಕುರಿಗಳು ರಾಜಕೀಯ ವಿಡಂಬನೆ ಮನದಲಿಲ್ಲ ನಾ ಸಾಹಿತಿ ಎಂಬ ಅಹಂಭಾವನೆ! ಪಡೆದದ್ದು ಪದವಿ ಭೂ ವಿಜ್ಞಾನದಲ್ಲಿ ಸ್ನಾತಕೋತ್ತರ ಕನ್ನಡ ಸಾಹಿತ್ಯದಲ್ಲಿ ಏರಿದರು ಶಿಖರ! ನಗುವಿನ ದಿನವೇ ನಿಧನ ಇದುವೇ ವಿಧಿಯ ವಿಧಾನ! ಕನ್ನಡ ಸಾಹಿತ್ಯದಲ್ಲಿ ಮಾಡಿದರು ಕ್ರಾಂತಿ ವಿಧಿವಶರಾದ ಇವರ ಆತ್ಮಕ್ಕೆ ದೊರೆಯಲಿ ಶಾಂತಿ! ಒಮ್ಮೆ ನಗು ಒಮ್ಮೆ ಅಳು ಜೀವನಕ್ಕಿರಲಿ ನಿಧಾನ ಇದೇ ಜೀವನದ ಬಹುಮೂಲ್ಯ ಸಮಾಧಾನ! *******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಜೀತ ಸ್ವಪ್ನ ಆರ್.ಎ. ಜೀತದಾಳು ಆಗಿ ಹುಟ್ಟಿ ಜೀತದ ಆಳಾಗಿ ದುಡಿ ಯೋ ಕಾಲ ನಮ್ಗೆ ಹೋಗಲಿಲ್ಲ ವ ಲ್ಲೋ ಕರ್ಮ ತಮ್ಮ ಹೋಗಲಿಲ್ಲ ವಲ್ಲೋ!!! ಜೀತ ಪದ್ದತಿ ಬೇಡ ಕಣೋ!! ನಮ್ಮ ರಕ್ತ ಸುರಿಸಿ ಅವ್ರು ಜಗ್ಗಿ ಕೂಳು ಕೊಡದೆ ಚಿತ್ರ ಹಿಂಸೆ ಕೊಡ್ತರಲ್ಲೋ ಶಿವನೇ ನಮ್ಮ ಕಷ್ಟ ದಿನಕ್ಕೆ ಕಷ್ಟ ಕೊಡ್ತಾರಲ್ಲೋ ಜೀತ ಪದ್ದತಿ ಬೇಡ ಕಣೋ!! ಬಟ್ಟೆ ಇಲ್ಲ ಬರೆ ಇಲ್ಲ ,ಸ್ನಾನ ಇಲ್ಲ ಮೈ ಮೈಲಿಗೆ ಎಲ್ಲ ನಮ್ಮ ಪಾಡು ನಾಯಿ ಗಿಂತ ಕೀಳು ಕಣೋ ಜೀತ ಪದ್ದತಿ ಬೇಡ ಕಣೋ!! ನಮ್ಗೆ ಮನೆಯಿಲ್ಲ,ನೆಲೆ ಇಲ್ಲ, ಬಂಧು ಇಲ್ಲ,ಭಗಿನಿ ಇಲ್ಲ ತಂದೆಯಿಲ್ಲ ತಾಯಿ ಇಲ್ಲ ಸಾಯೋವಾರ್ಗು ನಾವೇ ಕತ್ತೆ ತರ ದುಡಿಯೋ ಕರ್ಮ ನಮ್ದು ಜೀತ ಪದ್ದತಿ ಬೇಡ ಕಣೋ!! ಎಲ್ಲೋ ಹುಟ್ಟಿ ಎಲ್ಲೋ ಬೆಳೆದು ದೂರ ಹೋಗಿಲ್ಲ ನಮ್ಮ ಊರ ಜೀತ ದ ಎತ್ತುಗಳು ನಾವೇ ಕಣೋ , ರಕ್ತ ಮುಗಿಯೋ ವರ್ಗೂ ಜೀವ ಅಷ್ಟೆ ಕಣೋ ಜೀತ ಪದ್ದತಿ ಬೇಡ ಕಣೋ!! ಚಪ್ಲಿ ಇಲ್ಲ,ಚಂದ ಇಲ್ಲ ನಮ್ಮ ಗೋಳು ಕೇಳೋರು ಇಲ್ಲ ತುತ್ತು ಊಟ ಕೂಡ ನಟ್ಟ ಗೆ ಕೊಡುವ ಜೀವ,ಜೀವನ ನಮ್ಗಿ ಇಲ್ವಲ್ಲೋ ಸುಖ ಅನ್ನೋದು ನಮ್ಮ ಬಾಳಲ್ಲಿ ಬರಲ್ವಲ್ಲೋ. ಜೀತ ಪದ್ದತಿ ಬೇಡ ಕಣೋ *******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ರತ್ನರಾಯಮಲ್ಲ ನೆಮ್ಮದಿಯ ಜೀವನಕ್ಕಾಗಿ ಮನಸ್ಸನ್ನು ಮರೆತುಬಿಡು ಶಾಂತಿಯುತ ಬದುಕಿಗಾಗಿ ಬುದ್ಧಿಯನ್ನು ಮರೆತುಬಿಡು ಬಾಳೊಂದು ಸುಂದರ ಸ್ವಪ್ನ ಎಂಬುದನ್ನು ಮರೆಯದಿರು ನಿರ್ಮಲ ಸಹಯೋಗದ ಸಾಂಗತ್ಯವನ್ನು ಮರೆತುಬಿಡು ಪರಪಂಚದಲ್ಲಿ ಶೂನ್ಯ ಸಂಪಾದನೆ ಮಾಡಬೇಕಾಗಿದೆ ಎಲ್ಲಾ ಬಲ್ಲೆನೆಂಬ ಸಿಹಿಯಾದ ಭ್ರಮೆಯನ್ನು ಮರೆತುಬಿಡು ಮನುಷ್ಯ ಸಮಾಜ ಜೀವಿ ಎಂದು ಸಾರಲು ಹೋಗಬೇಡ ಜಿಂದಗಿಯ ಸವಿಯನುಣಲು ಸಂಸಾರವನ್ನು ಮರೆತುಬಿಡು ‘ಮಲ್ಲಿ’ ಮರೆವು ಪ್ರಜ್ಞಾವಂತ ಜಗತ್ತಿನ ಬಹುದೊಡ್ಡ ಆಸ್ತಿ ಶಾಶ್ವತವೆಂಬ ಮಾಯಾ ಜಿಂಕೆಯನ್ನು ಮರೆತುಬಿಡು ******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಯುದ್ದ ಮಲ್ನಾಡ್ ಮಣಿ ಮಾಯ ಜಾಲದ ಮಾಂತ್ರಿಕನೊಬ್ಬನ ಮಾಯೆಯಾಟದ ಛಾಯೆಯ ಕರಿನೆರಳು ಸುಡುತಿದೆ ಭೂಮಂಡಲವನ್ನು. ತುಪಾಕಿಗಳ ಗುಂಡಿನ ಘನಘೋರ ಶಬ್ದ ಗಗನ ಚುಂಬಿಯಾಗಿತ್ತು ನರ ಮಂಡಲದ ವಿಷವರ್ತುಲದಲ್ಲಿ ವಿಲವಿಲ ಒದ್ದಾಡಿ ಬೆತ್ತಲಾಗಿ ನಿಂತಿದೆ ಬದುಕು. ಅರೆಗಳಿಗೆಯ ಅಲ್ಪಸುಖದಲ್ಲಿ ತಲ್ಲೀನನಾಗಿದ್ದೆ, ಚಾಟಿಯ ಏಟು ಬೀಸಿ ಬರುತ್ತಿತ್ತು ನನ್ನೆಡೆಗೆ, ತಂಗಾಳಿಯಲ್ಲಿ ವಿಷ ಬೆರತದ್ದು‌ ಗೊತ್ತಾಗಲೆ ಇಲ್ಲ. ಯದ್ಧಕ್ಕೆ ಸಜ್ಜು ಮಾಡುತ್ತಿದ್ದೆ ತುಕ್ಕು ಹಿಡಿದ ಅಲಗನ್ನು ಮಸೆಯುತ್ತಿದ್ದೆ, ವೈರಿಯು ಅದನ್ನೆ ನಡೆಸಿರಬೇಕು. ನನಗೆ ಶತ್ರು ಭಯ, ಶತ್ರುವಿಗೆ ನನ್ನ ಭಯ, ಆದರು ಮೆರೆಯುತ್ತಿದ್ದೆವು ಐಶ್ವರ್ಯ ಮದದಿಂದ. ಯುದ್ಧಕ್ಕೆ ಕ್ಷಣಗಣನೆ,ಹುಮ್ಮಸ್ಸು, ಹುರುಪು, ಕತ್ತಿಗೆ ತಣಿಯದ ರಕ್ತ ದಾಹ. ಶತ್ರು ವಿನಾಶದಲ್ಲಿ ನನಗೆ ತಿಳಿಯಲಿಲ್ಲ ನನ್ನವರ ಹಸಿವು ಏಕೆ? ನನ್ನದು ತೋರಿಕೆಯ ಸಂಭ್ರಮ, ಶ್ರೀಮಂತಿಕೆಯ ತೋರು ನೋಟ. ಅಸ್ತ್ರ ಪ್ರಯೋಗಕ್ಕೆ ಸನ್ನದ್ದರಾಗಿದ್ದ ನಮ್ಮಿಬ್ಬರಿಗು ಅದಾವ ಮಾಟಗಾರ ಮಂತ್ರಿಸಿದನೊ…. ಆ ಮಾಯೆ ನಮ್ಮಿಬ್ಬರ  ದೇಹದ ರಕ್ತ ಹೀರುತ್ತಿರುವುದು ತಿಳಿಯಲೆ  ಇಲ್ಲ. ಆ ಮಾಯೆ ಅಮಾಯಕ ನನ್ನ ಜನರನ್ನು ಹೆಣಮಾಡುತ್ತಿರುವುದು ತಿಳಿಯಲೇ ಇಲ್ಲ. ಮದ್ದು ನನ್ನಲ್ಲಿರಲಿಲ್ಲ ನನ್ನಲ್ಲಿದ್ದ ಮದ್ದು‌ ರಕ್ತ ಸುರಿಸುವುದಕ್ಕೆ ಮಾತ್ರ.

ಕಾವ್ಯಯಾನ Read Post »

You cannot copy content of this page

Scroll to Top