ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಗಝಲ್ ಮರುಳಸಿದ್ದಪ್ಪ ದೊಡ್ಡಮನಿ ನನ್ನೆದೆಯ ಒಳಗ ನೋವು ತಂದಿರುವೆ ಹೇಳಿ ಹೋಗುಕಾರಣ ಸತ್ತ ಕನಸುಗಳ ಹೊತ್ತು ಹರದಾರಿ ನಡೆದಿರುವೆ ಹೇಳಿಹೋಗುಕಾರಣ ಜೀವ ಪ್ರೀತಿಯ ಒಡಲೊಳಗೆ ತುಂಬಿಕೊಂಡಿದ್ದೆನೆ ಗಂಜಿಯಾದರು ಕುಡಿದು ಬದುಕಿಸುವೆ ಹೇಳಿ ಹೋಗುಕಾರಣ ಸಂದುಕದಲ್ಲಿದ್ದ ಒಂಕಿ ಡಾಬು ಜೂಲ್ಪಿಹೂ ತೋಳ್ ಬಂದಿ ತೊಡಿಸಿರುವೆ ರೇಶ್ಮಿ ಇಳಕಲ್ಲ ಜರತಾರಿ ಸಿರೆ ಉಡಿಸಿರುವೆ ಹೇಳಿ ಹೋಗುಕಾರಣ ನನ್ನೊಂದಿಗೆ ಒಮ್ಮೆಯೂ ಮಾತನಾಡಲಿಲ್ಲ ಮೌನ ಮುರಿದು ನಿನ್ನೊಳಗೆ ಎನು ತುಂಬಿಕೊಂಡಿರುವೆ ಹೇಳಿ ಹೋಗುಕಾರಣ ಅನುಮಾನಗಳಿದ್ದರೆ ಬಿಡು ಅಗ್ನಿ ಪರಿಕ್ಷೆಯ ನೇಪ ಮಾತ್ರ ಬೇಡ ಮರುಳ ನಿನ್ನ ಜೊತೆಯಾಗಿ ಹೆಜ್ಜೆ ಹಾಕ ಬೇಕೆಂದಿರುವೆ ಹೇಳಿ ಹೋಗುಕಾರಣ ******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಪ್ರಕೃತಿ ಆಚರಿಸುತಿದೆ ಹಬ್ಬ ಶಾಲಿನಿ ಆರ್. ಮಾನವನ ತಗ್ಗು ದಿಬ್ಬಗಳ ಲೀಲೆಗೆ, ನಲಿದಿದೆ  ಪ್ರಕೃತಿ ಈ ಸೋಜಿಗೆ, ಹಲವು ಜೀವನವ ಕಸಿದ ಕರೋನಾ, ಪ್ರಕೃತಿಗೆ ಇದುವೇ ವರವಾಯಿತೇನಾ? ಮನುಜನ ವಿಪರೀತಗಳನ್ನೆಲ್ಲ ಅಳಿಸಿ ಪ್ರಕೃತಿ ತನ್ನತನದ ಪ್ರೀತಿ ಉಳಿಸಿ ಹರಸಿ, ಹಾಡುವ ಹಕ್ಕಿಗಳೆಲ್ಲ ಹಾರುತಿವೆ ಮನಸಾರೆ ಖುಷಿಯಾಗಿ, ನಭದ ನೀಲಿಯಲಿ ನೀಲವಾಗಿ, ಬೀಸುವ ತಂಪೆಲರಿಗು ಬಂದಿದೆ ಅಭಿಮಾನ, ನಾ ನಾಗಿಹೆನೆಂಬ ಸಮ್ಮಾನ, ಹರಿವ ನದಿಯದು ಈಗ ಶುದ್ದ ಸ್ಪಟಿಕವಂತೆ, ಝುಳು ಝುಳು ನಿನಾದಕದು ಗೆಜ್ಜೆ ಕಟ್ಟಿ ಸಡಗರಿಸುತಿಹದಂತೆ, ಪ್ರಾಣಿ ಪಕ್ಷಿಗಳೆಲ್ಲ ಸೇರಿ ನಡೆಸಿದೆ ವನಮೋಹತ್ಸವ, ಮರೆತು  ಮಾನವನ ದಬ್ಬಾಳಿಕೆಯ ರಣೋತ್ಸವ, ಪಕೃತಿಯ ಈ ಉತ್ಸವ ನಿತ್ಯೋತ್ಸವವಾಗಲಿ, ಪರಿಸರದಲಿ ಸದಾ ಶುದ್ದತೆಯ ಹಸಿರು ತೂಗಲಿ. *****

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಕನಸು ಶ್ವೇತಾ ಮಂಡ್ಯ ದಿಟ್ಟಿಸುತ ನೀ ನನ್ನ ತುಸುವೇ ಒತ್ತರಿಸಿ ಬಂಧಿಸಿ ಬಾಹುವಿನೊಳು … ನಿನ್ನೊಲವಿನ ಗಾಳಿಯೊಳು ಸುಳಿದಾಡಿದ ಮುಂಗುರಳ ಮೆಲ್ಲನೆ ಸರಿಸಿ…. ರವಾನಿಸಿ ಎನ್ನೆದೆಗೆ ನಿನ್ನೊಲುಮೆ ನಿಂತ ನೆಲವನೆ ಮರೆಸಿ ಹರಸಿ ಅನೂಹ್ಯ ಪ್ರೀತಿ… ಭಾವದ ಮಳೆಯಲಿ ನೆನೆ ನೆನಸಿ ಅವಿಚ್ಛಿನ್ನ ಅನುಭಾವದ ಸಾಂಗತ್ಯ ಕನಸಲಷ್ಟೇ ನಿನ್ನೊಂದಿಗೆ ಒಂದಾಗಿಸಿದೆ. ******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಕೆ.ಮಹದೇವನಾಯಕ ನವಿರಾಗಿ ಬಾ ಬಾ ನನ್ನುಸಿರ ಬಾರಕ್ಕೆ ಜೀವ ರಸ ತುಂಬಿ ನಗು ನಗುತ ಬಾಡಿರುವ ಹೃದಯಕ್ಕೆ ಭಾವ ತುಂಬು ದಿಕ್ಕುತಪ್ಪದಂತೆ ಮೆಲ್ಲನೆ ನಗುತ ಕಮರಿದ ಕನಸಿಗೆ ನೆನಪುಗಳ ಸೂರು ಮುಗಿಲಗಲ ಬೆಳಕಿನ ಪಥದಂತೆ ಬಾ ಕಲ್ಪನೆಗಳ ಸ್ವಾರ್ಥದ ದುಃಖ ಸವೆಸಿ ಜೊತೆ ಜೊತೆಯಾಗು ನಗುತ ಮಲೆತು ಮರೆಯಾದ ನೊರಜು ನೆನಪ ನೆಲಬಾನಿನಂಚಿನಲಿ ಹೂತುಬಿಡು ಒಡಲಾಳದ ಸಾಗರದ ಅಲೆಯಲ್ಲಿ ತೂಗಿ ಗಗನ ಚುಂಬನದಂತೆ ನಗುತ ಕಾನನದ ಸೊಬಗು ನಿನ್ನ ಸರಸವಿಲ್ಲದೆ ಬೀಕೋ ಎಂದು ಗಾಳಿ ತೂರಿದೆ ಮನದ ಒಲುಮೆ ತೊರೆಯು ಮೊರೆದು ಸರಿ ಸರಿಗೆ ಸರಿದಿದೆ ನಗುತ ಇದು ಇರುಳೋ ಹಗಲೋ ಕಾಡೋ ಬಾನೋ ಭುವಿಯೋ ನಾನರಿಯೇ ನೀ ಬಂದು ಎಚ್ಚರಿಸು ‘ಪ್ರಜ್ಯೋಮ’ನ ಒಳ ಮನಸ ನಗುತ *******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಸ್ಮಿತಾ ರಾಘವೇಂದ್ರ ಬಿಂದುವೊಂದು ಸರಳ ರೇಖೆಯಮುಂದೆ ಸಾಗುತ್ತಿದೆ ಎಂದರೇನರ್ಥ ಲೋಕದೊಳಗೆ ಸಕಲವೂ ಸನ್ಮಾರ್ಗ ನೀಗುತ್ತಿದೆ ಎಂದರೇನರ್ಥ ಲೋಭ,ಮೋಹಾದಿಗಳೊಳಗೆ ಬಂಧಿಯಾಗುವೆವು ಈ ಭವದೊಳಗೆ ಬಾಳಿನರ್ಥವ ಸಾರಿದವನ ತ್ಯಾಗವೇ ಸಂಶಯವಾಗುತ್ತಿದೆ ಎಂದರೇನರ್ಥ ಲೋಕ ಬಿಡಲೂ ಬೇಕು, ಅಳಲೂ ಬೇಕು ಅಂತರಂಗವು ಕದಡಿ,ಅವನೆಲ್ಲಿ ಮುಕ್ತ ಮೆಚ್ಚಿ ಆಡಿದ,ಅಚ್ಚೊತ್ತಿದ ಅಭಿನಯವೇ ಮರೆಯುತ್ತಿದೆ ಎಂದರೇನರ್ಥ. ಒಬ್ಬನೇ ನಿರ್ಗಮಿಸುವಾಗ ಯಾರೂ ಹತ್ತಿರವಿರೆ,ಇಲ್ಲದಿರೆ ಏನು ಅಂತರ? ಮುಗಿಯಲಾರದ್ದು,ಮುಗಿಯಾಬಾರದ್ದು,ಮುಗಿದಂತೆ ತೋರುತ್ತಿದೆ ಎಂದರೇನರ್ಥ ಅಗಲಿಕೆಯ ಸಂಕಟವ ಹೆಚ್ಚಿಸುವುದು ಜೊತೆಯಾದ ಬಂಧ ಏಕಾಂಗಿ ಬಯಲಿನಲಿ ಮರವೊಂದು ರೋದಿಸುತ್ತಿದೆ ಎಂದರೇನರ್ಥ . ದೌರ್ಬಲ್ಯಗಳು ಇಲ್ಲದೆಯೇ ಬದುಕು ಚಲಿಸದ ಪಯಣ “ಸ್ಮಿತ” ಹೃದಯದ ಭಾಷೆ ಅರಿಯಲು ಅಶಕ್ತವಾಗುತ್ತಿದೆ ಎಂದರೇನರ್ಥ ********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಡಾ.ಸುಜಾತ ಲಕ್ಷ್ಮೀಪುರ. ಕತ್ತಲೆ ಗರ್ಭ ಸೀಳಿ ಅರಿವಿನ ಬೆಳಕು ತಂದ ಈ ಭೀಮ ಅಸ್ಪರ್ಶ ಕೊಳಕು ತೊಳೆಯುವ ಜಲವಾಗಿ ಬಂದ ಈ ಭೀಮ ಬಡತನ ಹಸಿವು ನಮ್ಮ‌ನ್ನು ರೂಪಿಸುತ್ತದೆಯಂತೆ ಗುಡಿಸಿಲಿನಿಂದಲೇ ಅಸಮಾನತೆಯಲ್ಲೇ ಮೂಡಿದ ಈ ಭೀಮ ಕೊರೆತೆಯಲ್ಲೆ ಕೊರಗಿ ಕೂತವರು ಏನು ಸಾಧಿಸುವರು ಅಸಮಾನತೆ ವಿಷಗಾಳಿಯಲಿ ಸಮಾನತೆಯ ಉತ್ತಿ ಬೆಳೆದ ಈ ಭೀಮಾ ಜ್ಣಾನವೊಂದೆ‌ ಮುಕ್ತಿಗೆ ಮಾರ್ಗ ವೆಂಬುದು ಸತ್ಯವಲ್ಲವೆ ಅಜ್ಞಾನದ ಆಲಯದಿ ಬೆಳಕಿನ ಬಯಲು ಸುರಿದ ಈ ಭೀಮಾ ನನ್ನ ಜನ ನನ್ನ ನಾಡು ಎನ್ನದವರ ಎದೆ ಬೆಂಗಾಡು ಜನರ ಹಸಿವು ನೋವಿಗೆ ಮಿಡಿದು ದುಡಿದ ಈ ಭೀಮಾ ಪ್ರಜಾಪ್ರಭುತ್ವದ ಜೀವಾಳವೆ ಮತದಾನ ಅಲ್ಲವೇ ಹಕ್ಕು ಬಾಧ್ಯತೆಗಳ‌ನು ಕಾನೂನಿನ ಮೂಲಕವೆ ಕೊಡಿಸಿದ ಈ ಭೀಮಾ ಸರ್ವೋದಯ ಸಮಾನತೆ ಸಾಮಾಜಿಕ ನ್ಯಾಯ ಇದ್ದೆಡೆ ಸ್ವರ್ಗ ಎಲ್ಲರ ಅಭ್ಯದಯಕಾಗಿ ಸಂವಿಧಾನ ರೂಪಿಸಿದ ಈ ಭೀಮಾ ಶಿವೆ,ಬಾಬಾ ಸಾಹೇಬರ ಅಂಬೇಡ್ಕರ್ ಬಗೆಗೆ ಎಷ್ಟು ಹೇಳಿದರೂ ಅಪೂರ್ಣವೆ ದೇಶದ ಜನತೆಗೆ ಬದುಕು ಕೊಟ್ಟ ಭಾರತ ಭಾಗ್ಯವಿದಾತ ಆದ ಈ ಭೀಮ. *********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಹೌದು ; ನಿನಗಾಗಿ… ನಾಗರಾಜ ಹರಪನಹಳ್ಳಿ ನೀ ಮನೆಯೊಳಗೆ ಹೋದ ಮೇಲೆ ನಾವಾಡಿದ ಮಾತುಗಳನ್ನೇ ನೆನಪಿಸಿಕೊಳ್ಳುತ್ತಿದ್ದೆ…. ಎಷ್ಟೊಂದು ಕನಸುಗಳು.. ನೂರಾರು ಬಯಕೆಗಳು ಸಾವಿರಾರು ರೆಕ್ಕೆ ಕಟ್ಟಿಕೊಂಡು ಹಾಡುವ, ಹಾರುವ ಮನಸುಗಳು ಒಂದೊಂದು ಮಾತಿಗೂ ಸಹಿ ಸವಿ ನೆನಪು ಪ್ರತಿಮಾತು ಒಂದೊಂದು ವರ್ಷ ನಮ್ಮ ಆಯಸ್ಸು ಹೆಚ್ಚಿ ಅದೇ ಕಾಲಕ್ಕೆ ನಾವು ಯುವ ಜೋಡಿಗಳಾಗುವ ಹುಮ್ಮಸ್ಸು … ಬರೆಯುವ ,ಓದುವ ಹೆಬ್ಬಯಕೆ ಜೊತೆಗೊಂದಿಷ್ಟು ಪ್ರೇಮ ಬದುಕಿಗೆ ಉಸಿರಿಗೂ ಈಗ ಕನಸಿನ ಕಾಲ ಬಂಧನವೂ ಬಿಡುಗಡೆಯೂ ಏಕಕಾಲಕ್ಕೆ ಇನ್ನೂ ಕಾಯುವುದೋ ಅನಿವಾರ್ಯ ಸೊಗಸು ಬೆಳಗು ಮಧ್ಯಾಹ್ನ ಅಪರಾಹ್ನ ಇಳಿಸಂಜೆ, ಮುಸ್ಸಂಜೆ ಗೋಧೂಳಿ ಸಮಯಗಳ ಬೆಸೆದ ಬೆಸುಗೆಯ ಪ್ರೇಮ ಇನ್ನೇನು ಈ‌ ಬದುಕಿಗೆ ಮುದ್ದು ; ಬಂದಾಯಿತು ಇನಿ ಇನಿಯ ರೋಮಾಂಚನಕೆ ಹೊಸ‌ ಭಾಷ್ಯ ಬರೆದಾಯಿತು ತೇರಾ ಸಹರಾ ಮಿಲ್ಗಯಾ ಯೇ ಜಿಂದಗಿ ಗಲೇ ಲಗ್ಜಾ ಯೇ ಜಿಂದಗಿ ಗಲೇ ಲಗ್ಝಾ … ******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಸಾಹಿತ್ಯ ಶ್ವೇತಾ ಮಂಡ್ಯ ಸಾಹಿತ್ಯ, ಒಳಿತ ಉಣಿಸಿ ಕೆಡುಕ ಅಳಿಸಿ ಮನವ ಅರಳಿಸಿ ಸರ್ವರ ಹಿತ ಬಯಸುವ ಸಾಹಿತ್ಯ; ಅಂತ:ಕರಣವ ತಟ್ಟಿ ಮಾನವೀಯತೆಯ ಮುಟ್ಟಿ ಕರ್ತವ್ಯಪ್ರಜ್ಞೆಯ ಎಚ್ಚರಿಸಿ ಬದುಕಿನುದ್ದ ದಾರಿದೀಪವಾಗುವ ಸಾಹಿತ್ಯ, ಸರ್ವಜನ ಸರ್ವ ಭಾವಗಳ ಶುದ್ದೀಕರಿಸಿ ಮನುಕುಲದ ಕಲ್ಮಶಗಳ ತೊಳೆಯುವ ಸಾಹಿತ್ಯ; ನಿನ್ನ ಮೆಚ್ಚಿ ನಿನ್ನಪ್ಪಿ ಕೊಂಡವರೆಲ್ಲಾ ನಡೆಯುತ್ತಿದ್ದರೆ ನಿನ್ನಾಶಯದಂತೆಯೇ ಬದುಕುತ್ತಿದ್ದರೆ ತಾವು ಬರೆಯುವಂತೆ…..!!! ********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ನಮ್ಮ ಅಂತರಂಗ ವೀಣಾ ರಮೇಶ್ ಮೌನದಲಿ ಅದೆಷ್ಟೋ ಮಾತುಗಳನು ಕಟ್ಟಿ ಹಾಕಿದ್ದೇನೆ ಗೆಳತಿ ಏಕಾಂತದಲ್ಲಿ ಒಂದಷ್ಟು ಪದಗಳಿಗೆ ಮೌನದಲ್ಲೆ ತಿವಿದಿದ್ದೇನೆ ಗೆಳತಿ ಕಣ್ಣುಗಳು ಹೊಳೆಯಾಗಿವೆ ಹರಿದು ಬಿಡಲೆ ದೋಣಿ ನಿನ್ನ ನೆನಪಿನ ಹುಟ್ಟು ಹಾಕಿ ಉಸಿರು ಕಟ್ಟಿದೆ ಪ್ರೀತಿ ಎದೆಯ ಪಂಜರದಲಿ, ಉಸಿರು ಬಿಡಲು ತತ್ವಾರ ಎದೆಯ ಬಡಿತವೊಂದೇ ಉಳಿದಿದೆ ಮೌನ ಪರದೆಯ ಹಿಂದೆ ನಿನ್ನ ತುಂಟ ನಗು ಅಣಕಿಸುತ್ತಿದೆ ಈ ಕತ್ತಲೆಯ ನೀರಸ ಮೌನ ಒಂದಷ್ಟು ನಕ್ಷತ್ರಗಳ ನುಂಗ ಬಾರದೆ ಒಂದು ಸಿಹಿಮುತ್ತು, ಒಂದು ಸಿಹಿ ನಗುವಿಗೆ ಬಾಚಿ ತಬ್ಬಿಕೊಳ್ಳಲು, ನೆನಪಿನ ಕಂಬಳಿ ಯೊಳಗೆ ಬಚ್ಚಿಟ್ಟು ಕೊಳ್ಳಲು ಯಾವ ಅಂತರದ ಗೊಡವೆಯು ಇದು? ******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಕಾಡಿಗೆಯ ಹೆಜ್ಜೆ ಪೂರ್ಣಿಮಾ ಸುರೇಶ್ ಹುಣ್ಣಿಮೆಯಂತಹ ಹೆಣ್ಣೊಂದು ಶುಕ್ಲ-ಕೃಷ್ಣ ಪಕ್ಷಗಳಲಿ ಹೊರಳಿ ತುಸುತುಸುವೇ ಅರಳಿ ಒಂದಿಷ್ಟು ಬಾಡಿ,ಕರಗಿ ಮತ್ತೆ ಹುಡುಹುಡುಕಿ ಅಮಾವಾಸ್ಯೆಯಂತಹ ಗಂಡನ್ನು ಪ್ರೇಮಿಸಿದಳು! ಕಪ್ಪು- ಎಲ್ಲಿರಿಸುವೆ ಕುಹಕಕೆ ಉತ್ತರಿಸುವಂತೆ ಬಚ್ಚಿಟ್ಟುಕೊಂಡಳು ಕಣ್ಣೊಳಗೆ ಅವನನ್ನು ಕಾಡಿಗೆಯಾಗಿಸಿ! ಅವನೀಗ ಅವಳ ನಗುವಿಗೆ ನೀಲ ಆಗಸವಾಗುತ್ತಾನೆ. ಅವಳ ನೋವಿಗೆ ಕರಿನೀರಾಗಿ ಧುಮುಕಿ ಜಲಪಾತವಾಗುತ್ತಾನೆ ಕಡಲಾಗಿ ಸುಯ್ಲಿಟ್ಟು ಆವಿಯಾಗಿ ಮಳೆಯಾಗಿ ಅವಳ ತೋಯಿಸುತ್ತಾನೆ. ಜಗಕೆ ಕಾಣುವ ಕಣ್ಣಿನ ಬೆಳಕು, ಮೊರೆವ ಕಡಲಲೆಯ ಸುಯ್ಲು ಸುರಿವ ಮಳೆ ಹನಿಗಳು ಅರ್ಥವಾಗುವುದೇ ಇಲ್ಲ. *******

ಕಾವ್ಯಯಾನ Read Post »

You cannot copy content of this page

Scroll to Top