ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಮೌನಗೀತೆ ವಿಶಾಲಾ ಆರಾಧ್ಯ ನೀನಂದು ಬಳಿ ಸರಿದು ಒಲವಿಂದ ನಗು ತಂದು ಬೀಸುವ ಗಾಳಿಯೊಲು ಹಿತವೆನಿಸಿದೇ ನಾನದನು ಹೇಳದಲೆ ಗುಟ್ಟಾಗಿ ಬದಿಗಿಟ್ಟು ಎದೆಯ ಗೂಡಲಿ ಒಂದು ಗುಡಿ ಮಾಡಿದೆ ಗುಡಿಯ ಗರ್ಭದಿ ಅಲ್ಲಿ ಮೂರುತಿಯು ನೀನಾದೆ ಕಣ್ಣ ಭಕುತಿಗೆ ತಾನೇ ಪ್ರತಿಧ್ವನಿಸಿದೆ ವನವೆಲ್ಲಾ ಓಡಾಡಿ ಪತ್ರೆಯದು ಸಿಗದಾಗಿ ಮನದೊಲವ ಪತ್ರೆ ಯನೇ ನಿನಗಿರಿಸಿ ನೀನಾರೋ ನಾನಾರೋ ಒಂದು ನೋಟದಿ ಒಲಿದು ಹೃದಯದಂಗಳವೆಲ್ಲ ಬೆಳಕಾಗಿದೆ ಮತ್ತೊಮ್ಮೆ ನೀ ಸುಳಿದು ಮನದ ಭಾವವ ಉಲಿದು ಚಿತ್ತದಲಿ ದಿಟವನ್ನು ಅನುಗೊಳಿಸಿಡು || ******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಹೇಮಗಂಗಾ ಸಮ ಸಮಾಜದ ಭವ್ಯ ಮಂಟಪಕೆ ಬುನಾದಿಯಾದವರು ನೀವು ತಮ ತೊಡೆದು ಅಜ್ಞಾನಿಗಳ ಮನ ಬೆಳಗಿಸಿದವರು ನೀವು ಸೃಷ್ಟಿಯಲ್ಲಿರದ ಮೇಲು ಕೀಳೆಂಬ ದೃಷ್ಟಿ ಬೇಕೇಕೆ ಈ ಜಗದಿ? ಅಸ್ಪೃಶ್ಯತೆಯ ಪಿಡುಗ ಹೊಸಕಲು ದಾರಿ ತೋರಿದವರು ನೀವು ಸಮಾನತೆ ಎಂಬುದು ಉಳಿಯಬಾರದು ಬರಿಯ ನಿಘಂಟಿನಲ್ಲಿ ಶೋಷಿತರ ಅಡಗಿಹೋದ ದನಿಗೆ ಕೊರಳಾದವರು ನೀವು ನೆನೆವೆವು ನಿಮ್ಮ ನವರೂಪ ತಳೆದ ಸಂವಿಧಾನದ ಶಿಲ್ಪಿಯೆಂದು ಭವಿಷ್ಯದ ಪುಟಪುಟದಿ ಹೊಸ ಭಾಷ್ಯ ಬರೆದವರು ನೀವು ಭೇದಭಾವವಿಲ್ಲ ಸಾವಿಗೆ ಎಲ್ಲರೊಂದೇ ಮರಳಿ ಮಣ್ಣ ಸೇರಿರೆ ಅರಿವು ಮೂಡಿಸಿ ಅಜರಾಮರರಾಗಿ ಉಳಿದವರು ನೀವು ***********************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ನಿಜ ಜಗಕೆ ಧಾವಂತವಿಲ್ಲ… ದೇವಯಾನಿ ಧಾವಂತವಿರಲಿಲ್ಲ ಬೆಳಗಿಗೆ ಈ ಮೊದಲಿನಿಂದಲೂ ತನ್ನಷ್ಟಕ್ಕೆ ತಾನೇ ಮೂಡುವ ಸೂರ್ಯ ಚೆಂಬೆಳಕ ಚೆಲ್ಲುವುದಕ್ಕೆ ಚುರುಗುಟ್ಟಿಸುವ ಬಿಸಿಲಹೊಗೆ ಚಿಮ್ಮಿಸಲು ಗಡಿಯಾರ ಬೇಕಿರಲೇ ಇಲ್ಲ ಹಕ್ಕಿ ಚಿಲಿಪಿಲಿಯೂ ಹೂ ಹಣ್ಣುಗಳೂ ಎಲ್ಲವೂ ಕಾಯುತ್ತಿದ್ದುದು ಸೂರ್ಯ ತೇಜದ ಗಡಿಯಾರ ತಾನೆ? ಋತುವುರುಳಿ ಋತುವಾಗಮಿಸಿ ನಗುವ ವಸುಂಧರೆಗೆ ಆಗಾಗ ಹೊನ್ನ ಹೊದಿಕೆ , ಶ್ವೇತ ಚಾದರ ಮಳೆಹನಿಯ ತೋರಣ ಎಲ್ಲಕೂ ರವಿಕಿರಣವೇ ಕಾರಣ ಈಗಲೀಗೀಗ ಗಡಿಯಾರದ ಮುಳ್ಳುಗಳನೂ ಮೀರಿಸಿದ್ದಾಯ್ತು ಹುಲುಮಾನವ ಹಾರಾಟ ,ಧಾವಂತ ನಡೆಯದೆಲೆ ಗುರಿ ಸೇರುವ ಗಮ್ಯಕೆ ಸೂರ್ಯ ನಕ್ಕಿರಬೇಕು ನಿದ್ರಿಸುವ ರಾತ್ರಿಗಳ ಕೊಂದುದಕೆ ಚಂದ್ರ ತಾರೆ ಶಪಿಸಿರಬೇಕು ಈಗೀಗ ಸಾಗರ ಕುಡಿದಿಂಗಿಸಲು ಅಗಸ್ತ್ಯನೇ ಬರಬೇಕಿಲ್ಲ ಬೆಟ್ಟ ಸರಿಸಲು ಹನುಂತನೇ ಆಗಬೇಕಿಲ್ಲ… ಎಲ್ಲಾ ನನದೇ ಎಲ್ಲವೂ ನನಗಾಗೇ ಎಂದವನೀಗ ನಾಲ್ಕು ಗೋಡೆಯ ಬಂಧಿ ಗಡಿಯಾರ ನಗುತ್ತಿದೆ ಹಣದ ಕೇಕೆ ದನಿಗಳೆದುಕೊಂಡಿದೆ ಜಗ ಸ್ಥಬ್ಧವಾಗಿಲ್ಲ ಮರುಳೇ ಕೇಳಬಲ್ಲೆಯಾದರೆ ಕೇಳೊಮ್ಮೆ ರವಿರಥದ ಗಾಲಿಯುರುಳುವ ಸದ್ದು ವಸುಂಧರೆಯ ನಿಡಿಯುಸಿರಿನ ಸದ್ದು ಜಗದ ನಿಜ ಗಡಿಯಾರ ಹಗುರಾಗಿ ಓಡುತಿದೆ ನನ್ನ‌ ನಿಮ್ಮ ಬದುಕ ಗಡಿಯಾರಗಳು ಮಾತ್ರಾ ಓಡಲಾರದೇ ಕುಂಟುತ್ತಿವೆಯೀಗ

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಸಂವಿಧಾನ ಶಿಲ್ಪಿ ತೇಜಾವತಿ ಹೆಚ್. ಡಿ ರಾಮಜಿ ಭೀಮಾಬಾಯಿಯ ಹದಿನಾಲ್ಕನೆಯ ಪುತ್ರರತ್ನವಾಗಿ ಬೆಳಗುಬೈಗು ಧೋಹೆ ರಾಮಾಯಣ ಮಹಾಭಾರತ ಸಂಸ್ಕಾರವಾಗಿ ಹೋದಲ್ಲೆಲ್ಲಾ ಅಸ್ಪೃಶ್ಯತೆಯ ಬಿಸಿಯನ್ನೇ ನೀನುಂಡೆ ಸಹಪಾಠಿಗಳೆದುರು ದಲಿತನೆಂದು ಅವಮಾನಕ್ಕೀಡಾದೆ! ಫೆಂಡೆಸೆ ಅಂಬೇಡ್ಕರರ ಪ್ರೀತಿಯ ತುತ್ತಿಗೆ ಪಾತ್ರರಾಗಿ ಗುರುಗಳ ಕೈಯಲಿ ಭೀಮರಾವ್ ಅಂಬೇಡ್ಕರ್ ಆಗಿ ಅಸ್ಪೃಶ್ಯರ ವರ್ಗದಲ್ಲೇ ಮೊದಲು ಸನ್ಮಾನಕ್ಕೆ ಪಾತ್ರನಾದೆ ಭಗವಾನ್ ಬುದ್ಧನ ಚರಿತ್ರೆಯ ಹೊತ್ತಗೆಗೆ ಆಕರ್ಷಿತನಾದೆ ! ಹೆಜ್ಜೆ ಹೆಜ್ಜೆಗೂ ತಿರಸ್ಕಾರದ ಉರಿಯಲ್ಲಿ ಹೊಗೆಯಾಗಿ ಪಣತೊಟ್ಟೆ ದಲಿತವರ್ಗದವರ ಪಾಲಿಗೆ ಜಾಗೃತಿಯಾಗಿ ಬಹಿಷ್ಕೃತ ಭಾರತ ಪತ್ರಿಕೆಗೆ ಸಾಮಾಜಿಕ ಹೋರಾಟಗಾರನಾದೆ ಮಹಾಡದ ಚೌಡರ ಕೆರೆಯ ನೀರ ಮುಟ್ಟಲು ಚಳುವಳಿಯಾದೆ ! ಅನಿಶ್ಚಿತ ಹುಟ್ಟಿನ ಹಿಂದು ಧರ್ಮವ ತೊರೆಯುವ ಪ್ರತಿಜ್ಞೆಯಾಗಿ ನೆಹರೂರವರ ಪಂಚವಾರ್ಷಿಕ ಯೋಜನೆಗಳಿಗೆ ಮಾರ್ಗದರ್ಶಕರಾಗಿ ವಿದೇಶಿ ಗಣ್ಯರೆದುರು ಮಂತ್ರಿಮಂಡಲದ ವಜ್ರವಾದೆ ಭಾರತ ಸಂವಿಧಾನ ರಚಿಸಿ ಸಂವಿಧಾನ ಶಿಲ್ಪಿಯಾದೆ ! ಆಧುನಿಕ ಭಾರತದ ನಿರ್ಮಾಪಕ ಸಮಾಜ ಪ್ರವರ್ತಕನಾಗಿ ಹಲವು ಗೌರವ ಪದವಿ ಪುರಸ್ಕಾರಗಳಿಗೆ ಭಾಜನರಾಗಿ ಬೌದ್ಧ ಧರ್ಮ ಪ್ರಚಾರ ಆಚಾರಕ್ಕಾಗಿ ಜೀವನ ಅರ್ಪಿಸಿಕೊಂಡೆ ಹಿಂದುವಾಗಿ ಹುಟ್ಟಿ ಬೌದ್ಧ ಧರ್ಮ ಸ್ವೀಕರಿಸಿ ಕೊನೆಯುಸಿರೆಳೆದೆ ! ನೆಹರೂ ಮಂತ್ರಿಮಂಡಲದಲ್ಲಿ ಕಾನೂನು ಸಚಿವನಾಗಿ ಸಂವಿಧಾನ ರಚನಾ ಕರಡು ಸಮಿತಿಯ ಅಧ್ಯಕ್ಷನಾಗಿ ಹಸ್ತಪ್ರತಿಯ ಬೆಳ್ಳಿತಟ್ಟೆಯಲಿಟ್ಟು ಲೋಕಾರ್ಪಣೆಗೊಳಿಸಿದೆ ಬಾಬಾಸಾಹೇಬ ನೀ ಸಂವಿಧಾನದ ಶಿಲ್ಪಿಯಾದೆ ! ****************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಭೀಮ ದೀಪ ಎ ಎಸ್. ಮಕಾನದಾರ ಸಮ ಸಮಾಜದ ಕನಸುಗಾರ ಭಾರತ ಮಾತೆಯ ಕುವರ ಡಾ. ಬಿ ಆರ್. ಅಂಬೇಡ್ಕರ್ ! ಕಪ್ಪು ನೆಲದ ಕೆಂಪುಗಣ್ಣಿನ ಪಾರಿವಾಳ ಗುಣದ ಭೀಮ ! ಕೋಮುವಾದ ಬ್ರಾಮಣ್ಯ ಬಂಡವಾಳಶಾಹಿಗಳ ಬಣ್ಣ ಬಯಲು ಮಾಡಿದ ಸಮಾನತೆಯ ಮಂತ್ರ ಜಪಿಸಿ ಕಪ್ಪು ಜನರ ಸೂರ್ಯನಾದ ಬಿಳಿ ಕರಿಯರ ನಡುವಿನ ಅಡ್ಡಗೋಡೆಯ ಕೆಡವಿದ ಅಪ್ರತಿಮ ಚಿಂತಕ ದ್ವೀಪಗಳಾಗಿದ್ದ ಕೇರಿ ಮೊಹಲ್ಲಾ ಬಡಾವಣೆಗಳಲ್ಲಿ ಚೈತನ್ಯ ದೀಪ ಬೆಳಗಿಸಿದ ವರ್ಗ ವರ್ಣದ ವಿಷದ ಹಾವಿಗೆ ಹೆಡಮುರಿಗೆ ಕಟ್ಟಿದ ಲೋಕ ನಿಂದೆಗೆ ಬೆದರದ ಧರ್ಮ ದರ್ಪಕೆ ಹೆದರದ ಕೊಳೆತ ಹಣ್ಣಲ್ಲೂ ಬಿತ್ತಗಿ ಬೀಜ ತುಂಬಿದ ಬುದ್ಧ ಬಸವರನು ಪ್ರೀತಿಸಿದ ನೊಂದವರ ಕೊರಳಲಿ ಧ್ವನಿಸಿ ಕತ್ತಲ ಕೇಡು ಕಳೆದ ಭೀಮದೀಪ *******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಡಾ. ಬಿ.ಆರ್ ಅಂಬೇಡ್ಕರ್ ಸಿಂಧು ಭಾರ್ಗವ್ ಮಹಾರಾಷ್ಟ್ರದ ಅಂಬೇವಾಡದಲಿ ಅಂಬೆಗಾಲಿಡುತ ನೀ ಬಂದೆ ಭೀಮಬಾಯಿಯವರ ಕೊನೆಯ ‌ಮುದ್ದಿನ ಮಗನಾದೆ ಶೋಷಿತ ಜನರ ನೋವನು ಮರೆಸಲು ಮುಂದಾದೆ ಹಕ್ಕುಗಳಿಗಾಗಿ ಹೋರಾಟ‌ ನಡೆಸಿ ದನಿಯಾದೆ ಮುಗ್ಧ ಜನರಿಗೆ ದೀನದಯಾಳು ನೀನಾದೆ ಜ್ಞಾನದ ದೀಪವ ಮನದಲಿ ನೀ ಬೆಳಗಿಸಿದೆ ಸಂವಿಧಾನವ ರಚನೆಯ ಮಾಡಿ ಜನರಿಗೆ ನೀ ನೆಲೆ ನೀಡಿದೆ ಬುದ್ಧನ ಅನುಯಾಯಿಗಾಗಿ ಧೈರ್ಯದ ಗುಂಡಿಗೆಯ ಹೊಂದಿದೆ ಅಸ್ಪರ್ಶತೆಯ ಅಂಧಕಾರವ ನೀ ಹೊಡೆದೋಡಿಸಿದೆ ಸಮಾನತೆಯ ಸಾರುತ ಜನರ ಒಗ್ಗೂಡಿಸಿದೆ ಭಾರತಾಂಬೆಯ ಕುವರನಾಗಿ ದೇಶಕೆ ಹೆಮ್ಮೆಯ ನೀ ತಂದೆ ಇಂದಿಗೂ ಎಲ್ಲರ ಮನದಲಿ‌ ನೀವು ಅಮರರಾಗಿರುವಿರಿ *****

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಸಾವಿಲ್ಲದ ಸೂರ್ಯ ಸಾಯಬಣ್ಣ ಎಂ. ಮಾದರ ಸಾವಿಲ್ಲದ ಸೂರ್ಯ ಹುಟ್ಟಿ ಬಂದ ಕತ್ತಲು ಜಗದಲಿ ನಿಲ್ಲಲು ನೆಲವಿಲ್ಲ ಆಂತರಿಕ್ಷದಲ್ಲೂ ಜಾಗವಿಲ್ಲ ಅಂತದರಲ್ಲಿಯೇ ಹುಟ್ಟಿದ ಅಂಬೆವಾಡಿಯಲ್ಲಿ !! ಕಾಡಿಗೆ ತುಂಬಿರುವ ದೀಪಗಳ ನಾಡಲ್ಲಿ ಮುಟ್ಟಿದರೆ ಮೈಲಿಗೆ ಎನ್ನುವ ನೀರಿನ ನೆಲದಲ್ಲಿ ಹುಸಿ ನಾಮವ ಆಕ್ರಮಿಸಿದ ಮೂಲಿಗರ ನಾಡಲ್ಲಿ ಖಡ್ಗವಿಲ್ಲ ಕೈಯಲ್ಲಿ ಕಿರೀಟವಿಲ್ಲ ತಲೆಯಲಿ ರಥವೇರಿಯಂತೂ ಬರಲಿಲ್ಲ ಸಿರಿಯನ್ನೂ ಮೆಟ್ಟಲಿಲ್ಲ ಭಾರತಾಂಬೆಯನ್ನು ಹೊತ್ತು ಉದಯಿಸಿದನು ಕತ್ತಲೆ ಜಗದಲಿ !! ಮುಂಡುಕಗಳ ನಾಡಲ್ಲಿ ಗೋರಿಯ ಒಳಗೆ ಸೇರಿರುವ ಮಾನವೀಯತೆ ಮಸಣದಲಿ ಬಲಹೀನರ ಕಣ್ಣು ಕಿತ್ತಿ ನಾಲಿಗೆ ಸೀಳಿ ಬೆತ್ತಲೆ ಮಾಡಿ ಅಗ್ನಿ ಕುಂಡ ಹಾಕಿ ಸುರಪಾನದಲಿ ಸುರಿಯುವರನ್ನು ಕತ್ತು ಸೀಳಿದನಲ್ಲ ಸಂವಿಧಾನ ಅಸ್ತ್ರದಲಿ!! ಬುದ್ಧನ ಬಡಿದಟ್ಟಿದರು ಬಸವಗ ಕುತ್ತಿಗೆ ಕೊಡಲಿ ಹಾಕಿ ವಿವೇಕವಾಣಿ ಅಳಿಸಿ ಗಹಗಹಿಸಿ ನಗುತ್ತಿದ್ದರಲ್ಲ ಮೂಕ ದೇವರ ತಾಣದಲಿ ಹೊಟ್ಟೆ ಹೊರೆಯುವರ ಸಾಲಲಿ ನೆಲದ ಮಕ್ಕಳ ಕಣ್ಣೀರ ಹಸಿವಿನ ಆಸರೆಗಾಗಿ ಉದಯಿಸಿದರು ಕಾಮದೇನು ಕಲ್ಪವೃಕ್ಷವಾಗಿ!! ಮನುಸ್ಮೃತಿ ಸುಟ್ಟು ಸುಳ್ಳಿನ ಕಂತೆ ಪುರಾಣ ಮೆಟ್ಟಿಲಾಗಿ ಮೆಟ್ಟಿ ಸಕ್ಕರೆ ಮೇಯುವ ಸಾಲು ನಿಂತ ಕೆಂಪು ಕರಿ ಇರುವೆಗಳಿಗೂ ಅಭಯ ನೀಡಿ ಕಣ್ಣು ಕಾಣದ ಗಾವಿಲರಿಗೂ ದೀಪದಾರಿಯಾಗಿ ಅಖಂಡತೆಯ ಜೈಘೋಷ ಮೊಳಗಿಸಿ ಅಷ್ಟದಿಕ್ಕುಗಳಲ್ಲಿ ಉದಯಿಸಿದ ಭೀಮ ಜ್ಯೋತಿಯಾಗಿ !! ಸಾವಿಲ್ಲದ ಸೂರ್ಯನಾಗಿ.! ******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅನ್ನಪೂರ್ಣ .ಡೇರೇದ ಓ ಜ್ಞಾನಜ್ಯೋತಿಯೇ ಸಹನೆ ಸಿಂಧೂವೇ ಸಂವಿಧಾನ ಶಿಲ್ಪಿಯೇ ನಾನೆಂದು ನಿಮ್ಮ ಮರೆಯನು ಜಾತಿಬೇಲಿಯ ಮೇಲೆ ಅರಳಿದ ಕಮಲ ನೀವು ನಿಮ್ಮ ನೋವು ಎಂತದೆಂದು ಬಲ್ಲೆವು ನಾವು ದಿಟ್ಟತನದಿ ಜಾತಿ ಮೆಟ್ಟಿ ಭಾರತಾಂಬೆಯ ಕುಲಪುತ್ರ ಎಂಬುದ ಅರುಹಿದ ಮಹಾಪಂಡಿತರಾದ ನಿಮಗೆ ಶರಣು ಭಾರತಾಂಬೆಯ ಮುಕುಟ ಮಣಿಯೇ ನಿಮ್ಮ ಪಾದದಾಣೆ ನೀವು ಕಂಡ ಕನಸು ನನಸಾಗದೆ ಇರದು *********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

“ಭೀಮ” ರಾಮಾಂಜಿನಯ್ಯ ವಿ. ನನ್ನೆದೆಯ ಸಾಕ್ಷರ ಪ್ರೀತಿ ದಯೆಯ ಮರ ಹಕ್ಕಿ ಪಿಕ್ಕಿಗಳ ಆಸರೆಯ ಬಾಳ್ ಪಸರಿಸಿದೆ ಬಾನಗಲ ಕೇಳು. ಖಂಡ ಅಖಂಡ ಎದೆಗೂಡುಗಳ ನುಲಿಯುತ ಹರಿಯುತಿದೆ ನೆಲದಗಲ ಅರಿಯುತಿದೆ ಮನದಗಲ ಹೆಣ್ಮನಸ್ಸಿನ ಆ ಜೀವಜಲ “ಭೀಮ-ನನ್ನೆದೆಯ ಸಾಕ್ಷರ ಪ್ರೀತಿ ದಯೆಯ ಮರ”. ನಿನ್ನಡಿಯ ಕುಡಿಗಳು ನಿನ್ನರಿದ ಪಡೆಗಳು, ಸಾಲು ಸಾಲು ಈ ಜಗದ ಎಲ್ಲೆ ಎಲ್ಲೂ. ಗಡಿದಾಟಿದೆ ಮನವೊಕ್ಕಿದೆ ನೀ ಸುರಿಸಿದ ಪ್ರೀತಿ ಗುಂಡು! “ಭೀಮ-ನನ್ನೆದೆಯ ಸಾಕ್ಷರ ಪ್ರೀತಿಯ ಮರ”. ಬಿಳಿಯಕ್ಕಿ ಹಾರುತಿದೆ ಹಸಿರ ಹೆಳ್ಗೆಯ ಹೊತ್ತು ಶಾಂತಿ ಮಂತ್ರವ ಬಿತ್ತಿ. ಕೇಳರಿಯೆ ಈ ಲೋಕದಲ್ಲಿ ಭೀಮನಾದದ ಬಳ್ಳಿ ಪಸರಿಸಲಿ ಎಲ್ಲೆಲ್ಲೂ.. “ಭೀಮ-ನನ್ನೆದೆಯ ಸಾಕ್ಷರ ಪ್ರೀತಿ ದಯೆಯ ಮರ”. ******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಅಂಬೇಡ್ಕರ್ ನೀ ಅಮರ ಎಚ್. ಶೌಕತ್ ಆಲಿ ಭಾರತದ ಸಂವಿಧಾನ ಶಿಲ್ಪಿ ಡಾ||ಭೀಮರಾವ್ ಅಂಬೇಡ್ಕರ್ ಮಹಾಮಾನವವಾದಿ ಬಾಬಾ ಸಾಹೇಬ್ ಅಂಬೇಡ್ಕರ್ ಅಪರಿಮಿತ ಜ್ಞಾನ ಭಾರತ ದೇಶದ ಮಹಾನ್ ಮೇಧಾವಿ ಭಾರತೀಯ ಬೌದ್ಧ ಮಹಾಸಭಾದ ಸಂಸ್ಥಾಪಕ ಅಂಬೇಡ್ಕರ್ ಸಮಾನತೆಗಾಗಿ ಶಿಕ್ಷಣಕ್ಕಾಗಿ ಸಂಘಟನೆಗಾಗಿ ನಿಂತ ಶಕ್ತಿ ಶೋಷಣೆಗೆ ಒಳಗಾಗಿ ವರ್ಗಗಳ ದೀನ-ದಲಿತರ ದೇವಮಾನವ ದೌರ್ಜನ್ಯ ದಬ್ಬಾಳಿಕೆ ಅವಮಾನಗಳ ವಿರುದ್ಧ ಸಿಡಿದೆದ್ದ ಭೂಪ ನವ ಸಮಾಜದೊಂದಿಗೆ ನವಭಾರತ ನಿರ್ಮಾತೃ ವಾದ ಅಂಬೇಡ್ಕರ್ ತಿರಸ್ಕರಿಸಲ್ಪಟ್ಟ ಬಹಿಷ್ಕರಿಸಲ್ಪಟ್ಟ ಜನರ ನೋವಿಗೆ ಸ್ಪಂದಿಸಿ ಸಮಾಜದಲ್ಲಿ ಕಳಂಕಿತರ ಕಳಿಸಿ ಮಾನವೀಯತೆ ನೀಡಿದ ಮೌಢ್ಯ ಅಜ್ಞಾನ ಅಂಧಾನುಕರಣೆಯ ಬಾಳಿಗೆ ಅರಿವಿನ ಬೆಳಕಾಗಿ ನಿಂತ ರಾಷ್ಟ್ರೀಯ ನಾಯಕನಾಗಿ ವಿಶ್ವದ ಜನತೆಗೆ ದಾರಿದೀಪವಾದ ಅಲ್ಪಸಂಖ್ಯಾತರ ಅಸ್ಪೃಶ್ಯರ ಜಾತಿಗಳ ಸಮನ್ವಯಗೊಳಿಸಿದ ಹಕ್ಕು ಮತ್ತು ಸ್ವಾತಂತ್ರ್ಯದ ಬದುಕಿಗಾಗಿ ನಿರಂತರ ಹೋರಾಡಿದ ದೇಶ ಮತ್ತು ಸ್ವಾತಂತ್ರ್ಯದ ನಿಮ್ನ ವರ್ಗಗಳಿಗೆ ಪ್ರಾತಿನಿಧ್ಯ ಕಲ್ಪಿಸಿದ ಜಾತಿ ಧರ್ಮ ನೀತಿ ಕರ್ತವ್ಯಗಳಲ್ಲಿ ಸೌಹಾರ್ದ ಬಾವ ಸಮರ್ಪಿಸಿದ ಚಿಂತನೆ ಆಲೋಚನೆಯ ಮನಸ್ಸಿಗೆ ಭಾವನೆಗಳನ್ನೆಲ್ಲಾ ರಾಷ್ಟ್ರ ಪ್ರೇಮಕ್ಕಾಗಿ ಸಿದ್ಧಾಂತ ವಿಚಾರಲಹರಿ ಭಾಷಣ ಗಳೆಲ್ಲವೂ ಜನರ ಪ್ರಗತಿಗಾಗಿ ನೊಂದರು ಬೆಂದರು ಹಿಂಸೆ ಸಹಿಸಿದರು ಭಾರತೀಯರ ಭವಿಷ್ಯಕ್ಕಾಗಿ ಹೋರಾಟದ ಬದುಕು ಸಾರ್ಥಕತೆ ಕಂಡಿತು ದಲಿತರ ಏಳಿಗೆಗಾಗಿ ಸಮಗ್ರ ರಾಷ್ಟ್ರೀಯ ನಾಯಕರೆಲ್ಲರ ಜನಸಾಮಾನ್ಯರ ಹಿತ ನೀನು ಕೋಟ್ಯಂತರ ಭಾರತೀಯರ ಮನದಾಳದ ಮೌನದ ಭಾಷೆ ನೀನು ಸೋದರತೆ ಸಮಾನತೆ ಸೌಹಾರ್ದತೆಯ ವಿಶ್ವಾಸ ಗಳೆಲ್ಲವೂ ಇನ್ನೂ ನಿರಂತರ ಅಂಬೇಡ್ಕರ್ ನಿನ್ನ ಸಿದ್ಧಾಂತ ನೀ ತೋರಿದ ದಾರಿ ಎಂದು ಎಂದೆಂದಿಗೂ ಅಮರ ಮತ್ತೊಮ್ಮೆ ಹುಟ್ಟಿ ಬಾ ಈ ದೇಶದ ಅಂಬೇಡ್ಕರ್ ವಿಶ್ವಶಾಂತಿಗಾಗಿ ದೇಶ-ವಿದೇಶಗಳಲ್ಲಿ ದ್ವೇಷದ ಜ್ವಾಲೆ ಆರಿಸಿ ಪ್ರೀತಿಯ ಬೆಸುಗೆಗಾಗಿ ಮಾನವಕುಲದ ಮಹಾನ್ ಚೇತನವಾಗಿ ಸ್ನೇಹದ ಸೆಲೆಯಾಗಿ ಅವತರಿಸು ಮತ್ತೊಮ್ಮೆ ಅಂಬೇಡ್ಕರ್ ವಸುಂಧರೆಯ ಮಗುವಾಗಿ *****

ಕಾವ್ಯಯಾನ Read Post »

You cannot copy content of this page

Scroll to Top