ಬೆಳೆಯೋಣ ಬನ್ನಿ..
ಕವಿತೆ ಸುಜಾತ ಲಕ್ಷ್ಮೀಪುರ. ಮನುಜ ಮನುಜನೆದೆಯಲಿಪ್ರೀತಿ ನೀತಿಯ ಸಸಿ ನೆಟ್ಟುಸಹಕಾರ ಸಮಾನತೆ ನೀರೆರೆದುಮನುಷ್ಯತ್ವದ ಹೂ ಹಣ್ಣು ಕಾಯಿ ಬೆಳೆದುಬಯಲ ಮಕ್ಕಳೆಲ್ಲಾ ಸೇರಿ ಸವಿಯೋಣ ಬನ್ನಿ. ನಿತ್ಯ ನಡೆ ನುಡಿ ಆಚಾರದಲಿಸದ್ಭಾವನೆಯ ಸಿಂಪಡಿಸಿಸರ್ವೋದಯದ ಸಕಾರವನೆ ಉಸಿರಾಡುತ್ತಾಸಕಲ ಜೀವರಾಶಿಯ ಲೇಸು ಬಯಸೋಣ ಬನ್ನಿ ಕಟ್ಟೋಣ ನಾವುಎಲ್ಲರ ಹೃದಯಗಳಿಗೂಅಂತಃಕರಣದ ಸ್ನೇಹ ಸೇತುವೆನಾನು ನೀನಳಿದು ನಾವು ಆದಸಮಷ್ಟಿಯ ಸರ್ವಹಿತದಲಿ. ಸದಾ ಜೀಕೋಣ ಬನ್ನಿಒಬ್ಬರಿಗೊಬ್ಬರು ಕೈ ಕೈಯಿಡಿದು.ನಾವೆಲ್ಲಾ ಒಂದೇ ನಾವು ಜೀವ ಚೈತನ್ಯರು.ಸಾರಿ ಸಾರಿ ಘೋಷಿಸುತ್ತಾಸುತ್ತೋಣ ಬನ್ನಿಮಾನವಪ್ರೇಮದ ನಂದನವನ. *****************************









