ಕಲಿಗಾಲದ ಫಲ
ಕವಿತೆ ಅರುಣ್ ಕೊಪ್ಪ ಅಂದು ಖುಷಿಯನ್ನೆಲ್ಲ ಉಸುರಿಹಿಡಿದು ಮುಟ್ಟಿದ್ದಕ್ಕೂತಂತ್ರಜ್ಞಾನದ ಗುಲಾಬು ಜಾಮೂನಿನ ಚಪಲದಲ್ಲಿದ್ದೆವು.ಸ್ವಾರ್ಥದ ಕುದುರೆಯನ್ನೇ ಏರಿ ಸವಾರಿಕಾಂಚಾಣದ ಕರವಸ್ತ್ರವನ್ನೇ ಬಳಸುತ್ತಿದ್ದೆವು. ಪಾದ ಊರದ ನೆಲ ಮೌನದಲ್ಲಿಕಾಲು ದಾರಿಗಳನ್ನು ನುಂಗಿ ಹಾಕಿತ್ತುಬೀದಿ ದೀಪದಲ್ಲೂ ಕಣ್ಣು ಕಾಣದಮೋಜು ಮಸ್ತಿಯಲಿ ರಾತ್ರಿಯನ್ನುಹಗಲಿನಂತೆ ಅನುಭವಿಸುತ್ತಿದ್ದೆವು.ಸಮಯವನ್ನು ಹರಾಜು ಮಾಡಿಅಹಂ ಅಂಗಡಿಯಲ್ಲಿ ಮಾರಾಟಮಾಡುತ್ತಿದೆವು. ಹುಟ್ಟಿದ ಕಿಮ್ಮತ್ತಿಗೆ ಬೀದಿ ವಾಪಾರಿಗಳಮಂತ ಉರಿಸುತ್ತಿದ್ದೆವು.ನಾವೇ ಅನುಭೋಗಿಗಳುಎಂಬ ಸರ್ವ ಜಂಬದಲಿವೃದ್ಧರನ್ನು ಹೇಸಿಗೆಯಾಗಿ ನೋಡುತ್ತಿದ್ದೆವು. ವ್ಯಾಪಾರ ಜಗತ್ತಿನಲ್ಲಿಸಂಬಂಧಕ್ಕೂ ಮಾಪು ಹಿಡಿದುತಾವೇ ಸರಿ ಎಂದೆನುತಕಾಣುವ ಸೊಗದೊಳಗೆಭೂತಗನ್ನಡಿಯ ಹಿಡಿದುಮೊಸರಲ್ಲಿ ಕಲ್ಲು ಹುಡುಕುತ್ತಿದ್ದೆವು ಆದರೆ ಇಂದು ಎಲ್ಲಕಲಿಗಾಲದ ಫಲ ***********************









