ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಕಾವ್ಯಯಾನ

ಇನ್ನೇನು ಬೇಕಿದೆ. ಪ್ರಮಿಳಾ ಎಸ್.ಪಿ. ಇನ್ನೇನು ಬೇಕಿದೆ. ಒಡೆದ ಹಿಮ್ಮಡಿಯೂರಿ ನಿಂತು ಎನ್ನ ಹೆಗಲಮೇಲಿರಿಸಿ ತಾನು ಕಾಣದ ಪರಪಂಚವ ನನಗೆ ತೋರಿಸಿದವ ನನ್ನಪ್ಪ. ಕುದಿಯುವ ಸಾರಿನೊಂದಿಗೆ  ಕುಳಿತ ಹೆಂಡತಿಯನು ತಣ್ಣೀರಿನೊಂದಿಗಾಡುವ ಮಕ್ಕಳನು ಮುದ್ದಾಡಿ ಬೆಳೆಸಿದ್ದ ನನ್ನಪ್ಪ. ಮಕ್ಕಳನು ಓದಿಸಲೇಬೇಕೆಂದು ಹಠಹಿಡಿದವಳು ….ನಾವು ಓದಿಕೊಂಡದ್ದು ಏನೆಂದು ತಿಳಿಯದವಳು ನನ್ನವ್ವ. ಕವಿತೆ ಬರೆಯಲು ಬಾರದವಳು ಮಕ್ಕಳ ಬದುಕನ್ನೇ ಸುಂದರ ಕವಿತೆಯಾಗಿಸಲು  ಭಾವವಾದವಳು ನನ್ನವ್ವ. ಹೀಗೆಲ್ಲಾ ಹೊಗಳಿ ಬರೆದ ನನ್ನ ಪ್ರಾಸವಿರದ ಕವಿತೆಗಳು ಬೇಕಿಲ್ಲಾ ಈಗ ಅವರಿಗೆ…! ಪಿಂಚಣಿ ಬಂದಿತೆ ಮಧುಮೇಹ ಮರೆಯಾಯಿತೆ ರಕ್ತದೊತ್ತಡ ಹೇಗಿದೆ ಎಂದೆಲ್ಲಾ  ಜಂಗಮ ಗಂಟೆ ಭಾರಿಸುವದು ಬೇಕಿಲ್ಲ ಅವರಿಗೆ…! ಇಳಿ ವಯಸ್ಸಿನವರ ಸನಿಹ  ಕುಳಿತು ಒಡಲಾಳದ ಮಾತನಾಡಿ ಮೊಮ್ಮಕ್ಕಳ ನಗುವಿಗೆ ನಗುವ ಬೆರೆಸಲು ನನ್ನುಪಸ್ಥಿತಿ ಬೇಕಿದೆ ಅವರಿಗೆ. ಕಾಣಬೇಕಿದೆ ನಾನು ಅವರಿಗೆ ಬೇಕಾಗಿದ್ದಾದರೂ ಇನ್ನೇನು!? ********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಭರವಸೆ ನಾಗಶ್ರೀ ಸಾವಿರ ಬಾರಿ ಸೋತರು ಭರವಸೆಯೊಂದಿದೆ ಕಾಯುವ ಕನವರಿಕೆಯಲು ನಿನ್ನದು ಬರೀ ಹುಂಬತನ ಅರಿವಾಗುವುದು ಅಂತರ ಕಾಯ್ದುಕೊಳ್ಳಲು ಅದೆಷ್ಟು ಚಡಪಡಿಕೆಯೆಂದು ಅರಿಯಬೇಕಿತ್ತು ಅಂತರಾತ್ಮವ ಕಾದು ಕಾದು ಬೆಂಡಾದ ಭಾವನೆಗಳಿಗೆ ಸಮಯವೂ ಸೊಪ್ಪಾಕುತಿದೆ ನನ್ನ ನಾ ಅರಿಯದ ಇರಾದೆಗೆ ಅರ್ಥೈಸಲು ನೂರು ಬಾರಿ ಹೇಳುವ ಅವಶ್ಯಕತೆಯಾದರೂ ಇಲ್ಲವಲ್ಲ ಅರ್ಥಮಾಡಿಕೊಳ್ಳಲು ಒಂದು ಘಳಿಗೆ ಸಾಕಲ್ಲ ನಂಬಿಕೆಯ ಕವಲೊಳಗೆ ಅಪನಂಬಿಕೆಯ ಟಿಸಿಲುಗಳು ಮತ್ತೆದೆ ಹುಸಿಯ ನಂಬುವ ಹಂಬಲದತ್ತ ವಾಲುವ ಮನ ಕರುಳಿನ ನೋವು ಕಣ್ಣವರೆಗೂ ತಲುಪಿ ಕಣ್ಣರೆಪ್ಪೆಗೂ ನೋವಂತೆ ಕಣ್ತೆರೆಯಲಾಗದ ಮೋಸದ ಪ್ರಪಂಚಾವ ನೋಡಲು….. *******

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಧನಿಕನ ರಿಮೋಟ್ ಕಂಟ್ರೋಲ್ .. ಕೆ.ಜಿ.ಸರೋಜಾ ನಾಗರಾಜ್ ಹಸಿವಿನಿಂದ ಸತ್ತೋರಿಗೆ ಹಬ್ಬ ಸಡಗರಗಳೆಂತು ಹೊಟ್ಟೆ ಬಟ್ಟೆ ಕಟ್ಟಿದೋರು ಬಡವರು ಅನ್ನವೆಂದು ನರಳುತ್ತಾ ಬದುಕುವರು..! ಕೋಟಿ ಕೋಟಿ ಕನಸುಗಳೊಂದಿಗೆ ಉರಿಯುವ ಮನಸ್ಸುಗಳ ಭೂಕಂಪ ಹೆಣವಾಗಿಸುವ ಸೂಚನೆಗೆ ಹೊರಗೆ ಬಿದ್ದವರು ಬಡವರೇ..! ಹಸಿವಿನ ಕಣ್ಣುಗಳ ಮೇಲೆ ಹೊಂದಿದವರು ದೌಲತ್ತು ಗೋಳಿನ ಕಡಲನು ಬತ್ತಿಸಲು ಬಡವನ ಗುಡಿಸಿಲಿಗೆ ಬರಲೇ ಇಲ್ಲ..! ಕಳಂಕ ರಹಿತ ಧರಣಿಗೆ ಬಡವನ ಹಸಿವೇ ಚರಿತ್ರೆಯಾಗಿರುವಂತೆ ಶತಮಾನದ ಬಡತನಕ್ಕೆ ನೂರಾರು ಸಾಕ್ಷಿಗಳು ಗುಡಿಸಿಲಿನಲ್ಲಿ..! ಬಡವನ ತಲೆಗೆ ಧನಿಕರ ರಿಮೋಟ್ ಕಂಟ್ರೋಲ್ ಹೆಬ್ಬೆರಳೊತ್ತುವನೆಂದು ಕನಸು ಉಪವಾಸ ಮುರಿದು ಧನಿಕನ ಮನೆಯ ಮಗುವಿನ ಹೆಸರಿಟ್ಟ ಮೇಲೆ ಚೆಲ್ಲಾಡಿ ಬಿಟ್ಟ ಆಗುಳ ತಿನ್ನುವವರು… ********

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗಝಲ್ ಜಗತ್ತೇ ತನ್ನ ಸುತ್ತ ಸುತ್ತುತಿದೆ ಎಂದಾಗ ಹೊರಟು ಬಿಡಬೇಕು ಎಲ್ಲೆಲ್ಲೂ ಪ್ರೀತಿ ನೋಟವಿದೆ ಎಂದಾಗ ಹೊರಟು ಬಿಡಬೇಕು ಇಂದ್ರಚಾಪ ಮೂಡಿಸುವ ಹಗಲಿರುಳುಗಳೇನು ನಿರಂತರವೇ ಇಂದಿಗಿಂದಿನ ಬದುಕು ರಂಗೇರಿದೆ ಎಂದಾಗ ಹೊರಟು ಬಿಡಬೇಕು ಸುಖ ಸಂತಸಗಳು ಪ್ರತಿ ವರುಷ ಬರುವ ವಸಂತನ ತರವೇನು ಹರುಷ ನಲಿ ನಲಿದು ಉಕ್ಕುತಿದೆ ಎಂದಾಗ ಹೊರಟು ಬಿಡಬೇಕು ಎದೆಗೂಡ ಭಿತ್ತಿಯಲಿ ಒಲುಮೆ ಉಲಿವಾಗ ಸ್ವರ್ಗವೂ ನಾಚದೇನು ಸಮುಲ್ಲಾಸದಿ ಜೀವ ಗಂಧ ತೀಡುತಿದೆ ಎಂದಾಗ ಹೊರಟು ಬಿಡಬೇಕು ಇನಿಯನ ಉಸುರುಸಿರ ಬಿಸುಪು ಬೀಗಿ ಮೈ ಮನ ಮರೆಸದಿರದೇ ಕನಸು ಕಚಗುಳಿಯಿಟ್ಟು ಮಾಗುತಿದೆ ಎಂದಾಗ ಹೊರಟು ಬಿಡಬೇಕು ಹೊಸತನವ ತುಂಬುವ ಸೂರ್ಯನ ಪ್ರತಿ ಹುಟ್ಟೂ ವಿಸ್ಮಯಾತೀತ  ಬೆಳಕು ತರುವ ಬೆಳಗಲ್ಲಿ ಬೆಡಗಿದೆ ಎಂದಾಗ ಹೊರಟು ಬಿಡಬೇಕು ಲೋಕದ ಲೇಸರ್ ಕಣ್ಣುಗಳಲ್ಲಿ ಸದಾ ಮುಂಚೂಣಿಯಲ್ಲಿರಲು ಹೇಗೆ ಸಾಧ್ಯ ತನ್ನಿರುವೇ ಸುತ್ತಲೂ ಖುಷಿ ತರುತಿದೆ ಎಂದಾಗ ಹೊರಟು ಬಿಡಬೇಕು  ಮನ ಮನಗಳಲ್ಲಿ ಮನೆ ಮಾಡಿ ಮುದವನ್ನೇ ಸೂಸಬೇಕು ಸಹೃದಯದಿ ಸೌಖ್ಯ, ಸ್ವಾಸ್ಥ್ಯ, ಭಾಗ್ಯ ಬಾಚಿ ತಬ್ಬುತಿದೆ ಎಂದಾಗ ಹೊರಟು ಬಿಡಬೇಕು “ಸುಜೂ” ಳ ಬಾಳು ಸೊಗದಿ ಭವ ಭಾವದೊಳು ಬೆರೆತು ಜಿಗಿಯುತಿದೆ ಇನ್ನೇನು ಸಕಲವೂ ಇಲ್ಲಿಲ್ಲೇ ಒದಗಿದೆ ಎಂದಾಗ ಹೊರಟು ಬಿಡಬೇಕು. ************ ಸುಜಾತಾ ಲಕ್ಮನೆ

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಅಪ್ಪ ಅಪ್ಪ ಎಂದರೆ ನನ್ನಾಸರೆಯ ಹೆಗಲು ಕಡುಗಪ್ಪಿನಂತಹ ಮುಗಿಲು ಬಯ್ಬಿರಿದ ಭೂಮಿಗೆ ಸುರಿವ ಮಳೆಯ ಹನಿಯ ಮುತ್ತಿನ ಸಾಲು ಅಪ್ಪ ಎಂದರೆ ಪ್ರೀತಿಯ ಹೊನಲು ಸವಿಜೇನಿಗೆ ಬೆರೆತ ಹಾಲು ಮಗಳ ಕಾಯುವ ಒಡಲು ಜೊತೆಗಿದ್ದರೆ ಜಗದಲಿ ನನ್ನ ಕೈಯೇ ಮೇಲು ಅಪ್ಪ ಎಂದರೆ ನಗುವ ದ್ವನಿಯ ಕೊರಳು ಸದಾ ಜೊತೆಗಿರುವ ನೆರಳು ಹಿಡಿದು ಹೊರಟರೆ ಅಪ್ಪನ ಕಿರುಬೆರಳು ಖುಷಿಯ ಬುಗ್ಗೆಯಲಿ ಮೆರವಣಿಗೆ ಹಗಲಿರುಳು ಅಪ್ಪನಿಲ್ಲದಾ ಈ ಕ್ಷಣವು ಹೃದಯದಲವಿತಿದೆ ನಿರಾಸೆಯು ಯಾರಲ್ಲಿ ಹುಡುಕಲಿ ಅಪ್ಪನೊಲವು ಅಪ್ಪನ ಕಳೆದುಕೊಂಡ ಈ ಬದುಕು ಕಣ್ಣೀರ ಮಡುವು. ******** ನಿರ್ಮಲಾ ಆರ್.

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಸಂಕ್ರಾಂತಿ

ಸಂಕ್ರಮಣ ಅದ್ಭುತವ ತಂದರೆ ತರಲಿ ಈ ಸಂಕ್ರಮಣ ಬೇಡವೆನ್ನಲು ಯಾರು ನಾನು ಬದುಕು ತಂದ ಅಷ್ಟಿಷ್ಟು ನೆಮ್ಮದಿ ಜೊತೆಗೆ ಸಿಕ್ಕರೆ ಸಿಗಲಿ ಜೇನು ಸುಳಿಯಲ್ಲೋ ಮಕರದ ಬಾಯಲ್ಲೋ ಸಿಗದೆ ಸಾಗುತಿರಲಿ ಪಯಣ ಮಮಕಾರ ಕರ ಪಿಡಿದು ಸಂತಸದ ಸೆಲೆ ಹರಿದು ಆಗುತಿರಲಿ ಗಮನ …ಉದ್ದಕ್ಕೂ ಇರಲಿ ಅವನ ಕರುಣ ********** ಡಾ.ಗೋವಿಂದ ಹೆಗಡೆ

ಕಾವ್ಯಸಂಕ್ರಾಂತಿ Read Post »

ಕಾವ್ಯಯಾನ

ಕಾವ್ಯಸಂಕ್ರಾಂತಿ

ಸಾಕೊಂದಿಷ್ಟು ಕವಿತಾ ಸಾರಂಗಮಠ ಉತ್ತರಾಯಣನ ಪುಣ್ಯ ಕಾಲಕೆ ಗದ್ದಲದ ಅಂಧರ ಮಂಡಿಪೇಟೆಯಲ್ಲಿ ಸಂಕ್ರಮಣ ಕಾಲಕೆ ಕಣ್ಣಾವೆಗಳಾದರೂ ಸಂಧಿಸಿವೆ ಸಾಕೊಂದಿಷ್ಟು ಈ ಕಾಲಕೆ..! ಹ್ಯಾಪಿ ಪೊಂಗಲ್ ಡೇ ಎಂಬ ಜಾಹೀರಾತಿಗೆ ಸಂತೋಷ ಉಕ್ಕಿ ಮೋಬೈಲ್ ಮಾತಲಿ ತೊಡಗಿದವರ ನಡುವೆಯೂ ಕುಂಟರಿಬ್ಬರ ತೆವಳುವಿಕೆಗೆ ಗಾಳಿಯಾದರೂ ಬೀಸಿದೆಯಲ್ಲ ಸಾಕೊಂದಿಷ್ಟು ಈ ಕಾಲಕೆ..! ಭವಿಷ್ಯ ಕೇಳಿ ಮದುವೆಯಾಗಬಾರದು ಎಂಬ ನುಡಿಗೆ,ಕಣ್ಣುಗಳ ಒದ್ದೆಮಾಡಿಕೊಂಡಿದ್ದೇನಿಲ್ಲಿ ಬಿಕ್ಕಿಸಿ ಅತ್ತಾಗ ಬೀದಿ ನಾಯಿಯಾದರೂ ನಲುಗಿತಲ್ಲ ಸಾಕೊಂದಿಷ್ಟು ಈ ಕಾಲಕೆ..! ಹಬ್ಬವೆಂದರೆ ಕಿಬ್ಬದಿಯ ಕೀಲು ಮುರಿಸಿಕೊಂಡು,ಗೇಣು ಭೂಮಿಗೆ ಕಾದಾಡಿ ನ್ಯಾಯ ಕೋರ್ಟಿನಲ್ಲಿ ಹೊಟ್ಟೆಗೆ ಅಂಬಲಿಯಾದರೂ ಸಿಕ್ಕಿತಲ್ಲ ಸಾಕೊಂದಿಷ್ಟು ಈ ಕಾಲಕೆ..! ಬೇಡಿದ್ದಿಲ್ಲಿ ದೊರಕದೆ ಹಿಡಿಚೆಲ್ಲಿ ಬೊಗಸೆ ಬಾಚಿಕೊಂಡವನ ನಡುವೆ,ಮಣ್ಣು ಸಿಗದವನಿಗೂ ಹೊನ್ನು ಸಿಕ್ಕಿದೆಯಲ್ಲ ಸಾಕೊಂದಿಷ್ಟು ಈ ಕಾಲಕೆ..! ಎಳ್ಳು-ಬೆಲ್ಲ, ಕುಸುರೆಳ್ಳು-ಅರಷಿಣ ತಿರುವಿ,ಮಂಡಿಪೇಟೆಯೆಂದರೆ ಭಿಕ್ಷೆಯೆಂದಲ್ಲ,ದೇವರಿಗೆ ಹೂವಾದರು ಸಿಕ್ಕಿತಲ್ಲ ಹಿತ್ತಲಿನ ಗಿಡದಲ್ಲಿ.. ಸಾಕೊಂದಿಷ್ಟು ಈ ಕಾಲಕೆ..! *********

ಕಾವ್ಯಸಂಕ್ರಾಂತಿ Read Post »

ಕಾವ್ಯಯಾನ

ಕಾವ್ಯಯಾನ

ರಥ ಸಪ್ತಮಿ ಹೊಸ ಪಥದಿ ಮೂಡಿ ಬಂದ ಮಂಜಿನ ತೆರೆ ಸರಿಸಿ ನಕ್ಕಳಿವಳು ಎಳ್ಳು ಬೆಲ್ಲವ ನೀಡಿ ‘ಒಳ್ಳೆಯ ಮಾತಾಡು’ಅಂದಳು ಸೂರ್ಯ ನಕ್ಕಿದ್ದುಂಟೇ! ಸಿಡಿ ಮಿಡಿ ಅನ್ನುತ್ತಲೇ ಬಿಸಿ ತೋಳುಗಳ ಬಳಸಿ ಅಪ್ಪಿಕೊಂಡ. ******** ಪ್ರೇಮಲೀಲಾ ಕಲ್ಕೆರೆ

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಸಂಕ್ರಾಂತಿ

ಪರಿವರ್ತನೆಯ ಪರ್ವಕಾಲ  ಅವ್ಯಕ್ತ ಅನಂತ ಆಗಸದಿ ಸ್ವಚ್ಛಂದ ಕ್ರಮಿಸುವನು, ಆದಿತ್ಯ ಸ್ನೇಹರಾಶಿಗಳ ಮನೆಯಿಂದ ಮನೆಗೆ, ಧನುವಿಗೆ ಕೈಬೀಸಿ ಮಕರನಿಗೆ ಕೈಚಾಚುತಲಿ, ಕಾಯದ ನಾಡಿಗಳಿಗೆ ಉತ್ತರಾಯಣಾಗಮನದ ಸಂಭ್ರಮ… ಜೀವಲೋಕದ ದಿನಕರನ ಕಣಕಣದ ಆಟದ ಪರಿಯೋ ! ರಾತ್ರಿ ಮಾಗಿ ಹಗಲು ಹಿಗ್ಗಿ, ವಿರಸ ಕಳೆದು ಸರಸ ಬೆಳೆದು, ಶೀತ ಕರಗಿ ಶಾಖವರಳಿ, ಬಂಜೆ ಬಾಡಿ ಭೂ ರಮೆಯಾಗಿರಲು, ರವಿತೇಜನ ತಂಪಿಗೆ ಹಬ್ಬಿತೆಲ್ಲೆಡೆ ಸಂಕ್ರಮಣದ ಸಡಗರ… ಸ್ವಾಗತಿಸುವ ಸಂಭ್ರಮದಿ ಸಂತಸವ ಹಂಚುತಲಿ, ಎಳ್ಳು ಬೆಲ್ಲ ಕಡಲೆ ಕೊಬ್ಬರಿ ಕಬ್ಬು ಬಾಳೆ ಅಚ್ಚು ಮೆಚ್ಚು, ವೃದ್ಧಿಸಲು ನಾಲಿಗೆಗೆ ಸವಿರುಚಿ ಆರೋಗ್ಯದ ಅಭಿರುಚಿ, ಮುತ್ತಿನ ಮಾತುಗಳು ಮಾಗಿಸುತಲಿ ಮನದ ದುಗುಡವ… ಪಂಜಾಬಲಿ ಲೋರಿ, ಆಂದ್ರದ ಭೋಗಿ, ತಮಿಳರ ಪೊಂಗಲ್, ಅಸ್ಸಾಮಿನ ಮಾಗಬಿಹು, ಝಾರ್ಖಂಡಲಿ ಸಂಕ್ರಾತ್, ಉತ್ತರಪ್ರದೇಶದ ಕಿಚರಿ, ಗುಜರಾತಿಯರ ಉತ್ತರಾಯಣ್, ರಾಜಸ್ಥಾನಿಯರಿಗೆ ಪಟದ ಹಬ್ಬ, ಕನ್ನಡಿಗರಿಗೆ ಸಂಕ್ರಮಣದ ಹಬ್ಬ. ಬನ್ನಿ ಎಲ್ಲರೂ ಒಂದುಗೂಡಿ ಎಳ್ಳು ಬೆಲ್ಲ ಹುಗ್ಗಿಯ ಹಂಚಿ, ಸದ್ಭಾವನೆಯ ಅಮೃತವ ಲೋಕದೆಲ್ಲೆಡೆ ಹರಡುವ, ಒಳಿತಿನ ಪಥದಲಿ ಶುಭವ ಅರಸುತ ಹಾರೈಸುವ, ಸಾಧನೆ ಸಹನೆ ಸರಸ ಸಾಮರಸ್ಯದ ಬಾಂಧವ್ಯ ಮೆರೆಯುವ… ********

ಕಾವ್ಯಸಂಕ್ರಾಂತಿ Read Post »

ಕಾವ್ಯಯಾನ

ಕಾವ್ಯಸಂಕ್ರಾಂತಿ

ಸಂಕ್ರಾಂತಿ ಪ್ರಮಿಳಾ ಎಸ್.ಪಿ. ಪಥ ಬದಲಿಸುವ ನೇಸರನನ್ನು ಶರಶೆಯ್ಯಯ ಮೇಲೆ ಮಲಗಿ ಕಾದಿದ್ದನಂತೆ ಗಾಂಗೇಯ…. ಪುಣ್ಯಕಾಲಕ್ಕಾಗಿ! ಪೃಥ್ವಿಯ ತಿರುಗುವಿಕೆಯಲಿ ದಿನಕರನ ಮೇಲಾಟದಲಿ ಋತುಗಳ ಓಡಾಟದಲಿ ಇಳೆಯ ಜೀವಿಗಳ ಹೊಸ ವರುಷದ ಹುರುಪಿನಲಿ ವರುಷಕ್ಕೊಮ್ಮೆ ಬರುವುದೇ ಸಂಕ್ರಾಂತಿ ಉಳುವ ಯೋಗಿಯು ಬೆಳೆದ ಹುಲುಸಾದ ಫಸಲು ಮನ ತುಂಬಿ ಮನೆ ತುಂಬುವ ತವಕದಲಿರೆ ದುಡಿದ ದನಕರುಗಳ ಮಜ್ಜನಕ್ಕಿಳಿಸಿ ಮೈದಡವಿ ಹಿಗ್ಗು ತರುವುದೇ ಸಂಕ್ರಾಂತಿ ಕುಗ್ಗಿದ ಕೊರಗಿದ ಅಹಂ ಒಳಗೆ ಬೀಗಿದ ಮನಗಳು ಎಳ್ಳು ಬೆಲ್ಲ ನೀಡಿ-ಪಡೆದು ಹಗುರಾಗುವ ಘಳಿಗೆಯೇ ಸಂಕ್ರಾಂತಿ ಮೇಲೇರಿದವ ಕೆಳಗಿಳಿಯಲೇ ಬೇಕೆಂಬುದ ಆಡದೇ ತೋರಿಸುವ ಉದಯನು ತಂಪುಣಿಸುವ ಗಾಳಿ ನಿಲ್ಲಿಸಿ ಬಿರುಬಿಸಿಲಿಗೆ ಮುನ್ನುಡಿ ಬರೆಯುವ ದಿನವೇ ಸಂಕ್ರಾಂತಿ. *********

ಕಾವ್ಯಸಂಕ್ರಾಂತಿ Read Post »

You cannot copy content of this page

Scroll to Top