ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ಪ್ರಭಾವತಿ ಎಸ್ ದೇಸಾಯಿ ಅವರ ಗಜಲ್

ಕಾವ್ಯ ಸಂಗಾತಿ ಪ್ರಭಾವತಿ ಎಸ್ ದೇಸಾಯಿ ಗಜಲ್ ಮುಂಗಾರಿನ ಕರಿ ಮುಗಿಲು ಜಲಧಾರೆಯ ಸುರಿಸುತಿದೆ ನೋಡಾಇಳೆಯ ಮೊಗದಿ ನಗೆ ಮೊಗ್ಗು ಬಿರಿದು ಕಂಪು ಹರಡುತಿದೆ ನೋಡಾ ನೀಲಿ ಆಕಾಶದಿ ನೇಸರ ಮೂಡಿಸಿದ ಹೊಂಬಣ್ಣದ ಹೊನಲುಪ್ರಕೃತಿ ಮಡಿಲಲಿ ಮುಂಜಾವು ಪಕ್ಷಿಗಳ ಗಾನ ಕೇಳುತಿದೆ ನೋಡಾ ಒಲವಿನ ಚೈತ್ರ ಬರುವಿಗೆ ಬನವು ಹಸಿರುಟ್ಟು ಹೂ ಅರಳಿಸಿದೆನಿಸರ್ಗದ ಸೊಬಗು ಪ್ರೇಮಿಯ ಎದೆಯವೀಣೆ  ಮಿಡಿಯುತಿದೆ ನೋಡಾ ಧಾರಿಣಿಯ ಹೃದಯ ಸೂರ್ಯ ಕೋಪಕೆ ನಲುಗಿ ನರಳುತಿದೆ  ಮೌನದಿಬಿದ್ದ ಮಳೆಯ ರಭಸಕೆ ನದಿಯು ಕಡಲಾಗಿ ಮೊರೆಯುತಿದೆ ನೋಡಾ ಬೀಸುವ ಸುಳಿಗಾಳಿ ಪಾರಿಜಾತದ  ಪರಿಮಳ ತರುತಿದೆ ಸಂಜೆಇರುಳು ತಿರುಗುವ ತಿರೆಯಲಿ ಚಂದ್ರ ಪ್ರಭೆಯು ಕಾಣುತಿದೆ‌ ನೋಡಾ ( ಸಂಜು ಕೋಳೂರ ಹಳಿಯಾಳ ರಾಗಸಂಯೋಜನೆ ಮಾಡಿದ್ದಾರೆ ) ಪ್ರಭಾವತಿ ಎಸ್ ದೇಸಾಯಿ

ಪ್ರಭಾವತಿ ಎಸ್ ದೇಸಾಯಿ ಅವರ ಗಜಲ್ Read Post »

ಕಾವ್ಯಯಾನ, ಗಝಲ್

ಡಾ ರೇಣುಕಾತಾಯಿ ಸಂತಬಾ ರೇಮಾಸಂತರವರ ಗಜಲ್

ಕಾವ್ಯ ಸಂಗಾತಿ ಡಾ ರೇಣುಕಾತಾಯಿ ಸಂತಬಾ  ರೇಮಾಸಂತರವರ ಗಜಲ್ ನೀ ಒಪ್ಪದಿದ್ದರೂ ನಾ ನಿನ್ನ ಬಯಸುತ್ತೇನೋ ಸಖಾ.ನೀ ಸುಮ್ಮನಿದ್ದರೂ ನಾ ನಿನ್ನ ಬಯಸುತ್ತೇನೋ ಸಖಾ.ll ಅಂತರಾತ್ಮ ನಿನ್ನ ಪ್ರೀತಿಗೆ ಶರಣಾಗಿ ಬಿಟ್ಟೇತಿ,ನೀ ಕಾಣದಿದ್ದರೂ ನಾ ನಿನ್ನ ಬಯಸುತ್ತೇನೋ ಸಖಾ.ll ರಾಧೆಯಾಗಿ ನಿನ್ನ ದನಿ ಪೂಜಿಸುತ್ತೇನಿ ಗೊತ್ತೇನ,ನೀ ನೋಡದಿದ್ದರೂ ನಾ ನಿನ್ನ ಬಯಸುತ್ತೇನೋ ಸಖಾ.ll ಸದ್ದಿಲ್ಲದ ಮನಸ್ಸಿನ್ಯಾಗ ಮೆತ್ತಗ ಬಂದಬಿಟ್ಟಿ,ನೀ ಒಲಿದಿದ್ದರೂ ನಾ ನಿನ್ನ ಬಯಸುತ್ತೇನೋ ಸಖಾ.ll ತಾಯಿಗೆ ಗೊತ್ತಿಲ್ಲದ ನಾ ಹೃದಯದೊಳಗಿಟ್ಟಿನಿ,ನೀ ದೂರವಿದ್ದರೂ ನಾ ನಿನ್ನ ಬಯಸುತ್ತೇನೋ ಸಖಾ.ll ಡಾ ರೇಣುಕಾತಾಯಿ ಸಂತಬಾ ರೇಮಾಸಂತ    

ಡಾ ರೇಣುಕಾತಾಯಿ ಸಂತಬಾ ರೇಮಾಸಂತರವರ ಗಜಲ್ Read Post »

ಕಾವ್ಯಯಾನ, ಗಝಲ್

ಅನುರಾಧಾ ರಾಜೀವ್ ಸುರತ್ಕಲ್ ಅವರ ಗಜಲ್

ಕಾವ್ಯ ಸಂಗಾತಿ ಅನುರಾಧಾ ರಾಜೀವ್ ಸುರತ್ಕಲ್ ಗಜಲ್ ಸಿಡಿಲು ಅಬ್ಬರಿಸಿದರೂ ಮಳೆಯು ಭರವಸೆಹುಟ್ಟಿಸಿದೆ ಗೆಳೆಯಾಮಿಡಿದು ಅಂತರಂಗದಲಿ ಮೂಡಿದ ಭಾವಗಳಮುಟ್ಟಿಸಿದೆ ಗೆಳೆಯಾ ಸುರಿದ ಧಾರೆಯೊಳಗೆ ಮಿಂದ  ಇಳೆಯಲಿತಂಪಿನ ಸಿಂಚನವಲ್ಲವೇಹರಿದು ಧಾರಾಕಾರವಾಗಿ ನದಿಯ ಸೇರುವಾಸೆಮೆಟ್ಟಿಸಿದೆ ಗೆಳೆಯಾ ವಸಂತ ತರುಲತೆಗಳಲಿ ಹಸಿರು ರಂಗವಲಿಎರಚುತ ಬಂದನುಹೊಸತು ಕನಸುಗಳ ಬಿತ್ತಲು ಆಸೆಗಳಕಟ್ಟಿಸಿದೆ ಗೆಳೆಯಾ ಕುಣಿದ ವಸುಂಧರೆಯ ಒಡಲು ಹರುಷದತೋರಣ ಬಿಡಿಸಿದೆತಣಿದ ರೈತಾಪಿವರ್ಗಕೆ ಮೂಡಿದ ಭಯವನುಅಟ್ಟಿಸಿದೆ ಗೆಳೆಯಾ ರಾಧೆಯ ಮನದಂಗಳದ ತೋಟದಿ ನಲಿದಿವೆಬಣ್ಣಬಣ್ಣದ ಹೂವುಗಳುಮಧುರ ಅನುಭೂತಿಯಲಿ ಬದುಕ ಮೌಲ್ಯವಗಿಟ್ಟಿಸಿದೆ ಗೆಳೆಯಾ ಅನುರಾಧಾ ರಾಜೀವ್ ಸುರತ್ಕಲ್

ಅನುರಾಧಾ ರಾಜೀವ್ ಸುರತ್ಕಲ್ ಅವರ ಗಜಲ್ Read Post »

ಕಾವ್ಯಯಾನ, ಗಝಲ್

 ವಾಣಿ ಭಂಡಾರಿ ಅವರ ಗಜಲ್

ಕಾವ್ಯ ಸಂಗಾತಿ  ವಾಣಿ ಭಂಡಾರಿ ಗಜಲ್ ಹಚ್ಚಿಟ್ಟ ಹಣತೆ ಎದೆಯನ್ನು ಸುಡುವಾಗ ಬೆಳಕಿನ ತಾಪವನ್ನು ಏನೆಂದು ಶಪಿಸಲಿಮಾತು ಕಳೆದುಕೊಂಡ ನಾಲಿಗೆ ಜೊತೆಗಿರುವಾಗ ಮೌನದ ನೋವನ್ನು ಏನೆಂದು ಕರೆಯಲಿ ಎಲ್ಲ ನಾಟಕ ಬರಿ ಪೊಳ್ಳು ಬಾಳ ಬಯಲಾಟದಲ್ಲಿ ನಡೆಯುತಿದೆ ತಾಲೀಮು ದಿಕ್ಕೆಟ್ಟುಇರುಳ ಬೆಳಕಿನಾಟದಲ್ಲಿ ರಾತ್ರಿ ಸಾವು ಹಗಲಿಗೆ ಹುಟ್ಟು ಕೂಡಿರುವಾಗ ಪ್ರೀತಿಯನ್ನು ಏನೆಂದು ಹೆಸರಿಸಲಿ ಹುಚ್ಚರ ಸಂತೆಯಲ್ಲಿ ತತ್ರಾಣಿ ಕನಸು ಸೋತು ಗೆಲುವಿನ ಕಂದೀಲು ಅಬ್ಬರಿಸುತ್ತಿದೆಜಾತಿ ಧರ್ಮ ಪ್ರೇಮಕ್ಕೆ ಕಾಮದ ಹಣೆಪಟ್ಟಿ ಕಟ್ಟಿರುವಾಗ ಬದುಕನ್ನು ಏನೆಂದು ಬಣ್ಣಿಸಲಿ. ಮೆಚ್ಚಿಸೊ ಹುಚ್ಚು ಹಂಗಿಸೊ ಆಸೆ ಇರದ ಭಾವಗಳು ಜನ್ನತ್ ಗೆ ಧಾವಿಸುತ್ತಿವೆಒಂದು ದಿನದ ಸಾವು ಸೋಲಾಗಿ ಕೈಹಿಡಿವಾಗ ಬಾಳ ಬಣ್ಣವನ್ನು ಏನೆಂದು ತಿಳಿಯಲಿ. ಮೂರ್ಖರ ಮಧ್ಯೆ ಸ್ವರ್ಗಕ್ಕೆ‌ ದಾರಿಕೇಳಬೇಡ ವಾಣಿ ಏಕತಾರಿ ನುಡಿಸುತ್ತ ಸಾಗುಆತ್ಮದ ಬಾಗಿಲು ಮುಕ್ತಿಯನ್ನೇ ಬೇಡುವಾಗ ಕುಹಕಿಗಳ‌ ಮನವನ್ನು ಏನೆಂದು ಚಿತ್ರಿಸಲಿ. ವಾಣಿ ಭಂಡಾರಿ                    

 ವಾಣಿ ಭಂಡಾರಿ ಅವರ ಗಜಲ್ Read Post »

ಕಾವ್ಯಯಾನ, ಗಝಲ್

ಡಾ ಅನ್ನಪೂರ್ಣ ಹಿರೇಮಠ ಅವರ ಗಜಲ್

ಕಾವ್ಯ ಸಂಗಾತಿ ಡಾ ಅನ್ನಪೂರ್ಣ ಹಿರೇಮಠ ಗಜಲ್ ಕೊರಳು ಕಂಪಿಸಿ ಬಿಗಿಯಾದರೆ ಪ್ರೇಮಕಣ್ಣೆರಡು ಮಿಳಿಸಿ ಹಸಿಯಾದರೆ ಪ್ರೇಮ ಮನದ ಬಯಲಲ್ಲೆಲ್ಲಾ ಅರಳಿ ಮಲ್ಲಿಗೆಜೀವ ಆಲಾಪಿಸಿ ಬಿಸಿಯಾದರೆ ಪ್ರೇಮ ದೇಹದರಮನೆಯ ತುಂಬಾ ಸಂಚಲನಭಾವ ಬಯಸಿ ಖುಷಿಯಾದರೆ ಪ್ರೇಮ ಹಂಬಲದಲೆ ಬೋರ್ಗರೆದು ಅಪ್ಪಳಿಸಿಆಸೆ ಅಂಕುರಿಸಿ ಹಸಿಯಾದರೆ ಪ್ರೇಮ ಬಯಕೆ ಬಾಂದಳ ಕುಣಿಕುಣಿದು ನಲಿದುಮಿಡಿವ ಎದೆ ಕಲಕಿ ತೃಷೆಯಾದರೆ ಪ್ರೇಮ ನರನಾಡಿಗಳಲಿ ನಾದಂತರಂಗ ಮೃದಂಗಹೃದಯ ಮಂಪರಿಸಿ ನಿಶೆಯಾದರೆ ಪ್ರೇಮ ಅನುಳ ಪ್ರೀತಿಯ ಶಿಶೆ ತುಂಬಿ ತುಳುಕುತ್ತಿರೆಬಾನು ಭುವಿ ರಮಿಸಿ ಒಂದಾದರೆ ಪ್ರೇಮ ಡಾ ಅನ್ನಪೂರ್ಣ ಹಿರೇಮಠ

ಡಾ ಅನ್ನಪೂರ್ಣ ಹಿರೇಮಠ ಅವರ ಗಜಲ್ Read Post »

ಕಾವ್ಯಯಾನ, ಗಝಲ್

ಕಲ್ಪನಾ ಎಸ್ ಪಾಟೀಲ ಅವರ ಗಜಲ್

ಕಾವ್ಯ ಸಂಗಾತಿ ಕಲ್ಪನಾ ಎಸ್ ಪಾಟೀಲ ಗಜಲ್ ಮುತ್ತಿನಂತೆ ಮಿನುಗುವ ನಗು ನಿನ್ನದು ಗೆಳೆಯಮನದಾಳದಿ ಮೂಡಿದ ಸೌಂದರ್ಯ ನೀ ಗೆಳೆಯ ಸಾಗರದ ಗರ್ಭದಿ ಹುಟ್ಟಿದ ಅಮೂಲ್ಯ ರತ್ನ ನೀನುನನ್ನ ಹೃದಯದೊಳಗಿನ ಪ್ರೀತಿಯಂತೆ ಶುದ್ಧ ನೀನು ಕನಸಿನ ಕಿರಣದಲ್ಲಿ ಹೊಳೆಯುವ ಮುತ್ತಿನ ಹೊಳೆನಿನ್ನ ಕಂಗಳಲ್ಲಿ ಕಾಣುವ ಪ್ರೀತಿಯ ಮುತ್ತಿನ ಮಳೆ ನಿಶ್ಶಬ್ದದ ಮಾತುಗಳಲ್ಲಿ ಮೂಡುವ ಸೊಗಸಿದುಮುತ್ತಿನ ಲೆಕ್ಕ ಬಾಕಿ ಇಟ್ಟಿಹುದೇನು ನಿನ್ನ ಮನಸದು ಜೀವನ ಸಾಗರದಿ ನೀನೇ ನನ್ನ ಮೊದಲ ಮುತ್ತುನಿನ್ನ ಜೊತೆಗಿದ್ದರದೆ ಕಾವ್ಯಧರೆಗೆ ಸತ್ಯ ಸುಖದ ಹೊತ್ತು ಕಲ್ಪನಾ ಎಸ್ ಪಾಟೀಲಕಾವ್ಯಧರೆ

ಕಲ್ಪನಾ ಎಸ್ ಪಾಟೀಲ ಅವರ ಗಜಲ್ Read Post »

ಕಾವ್ಯಯಾನ, ಗಝಲ್

ಜ್ಯೋತಿ ಮಾಳಿ ಬೆಳಗಾವಿ ಅವರ ಗಜಲ್

ಕಾವ್ಯ ಸಂಗಾತಿ ಜ್ಯೋತಿ ಮಾಳಿ ಬೆಳಗಾವಿ ಗಜಲ್ ಅಂದು ಹಸಿವಿನಿಂದ ಪರದಾಡಿದ ಪರದೇಶಿ ದಿನಗಳಿಂದುನಮ್ಮನ್ನು ಇಲ್ಲಿ ಹಿಡಿದಿಟ್ಟಿವೆಅಂತರಾಳದಲ್ಲಿಯ ಹಸಿ ಗಾಯಗಳ ರುಜು ಋಣಗಳಿಂದುನಮ್ಮನ್ನು ಇಲ್ಲಿ ಹಿಡಿದಿಟ್ಟಿವೆ ಕರೆದು ಕೂಲಿಗೆ ಕಾಸು ಚೆಲ್ಲಿ ಸುಮ್ಮನೆ ಮನೆಗೆ ಕಳುಹಿಸಿದ್ದರೂಮರೆಯಬಹುದಿತ್ತು ನಾವುಕಲ್ಲಿನೇಟು ನೀಡಿ ,ಮುಳ್ಳುಗಳಿಂದ ತಿವಿದ ಜೀತ ಕ್ಷಣಗಳಿಂದು  ನಮ್ಮನ್ನು ಇಲ್ಲಿ ಹಿಡಿದಿಟ್ಟಿವೆ ನಾಳೆಗಾಗಿ ಬರಿಗಾಲಲಿ ನಡೆದು ನೆತ್ತರು ಸುರಿಸಿ ಕಳೆದು ಹೋಗುತಿವೆನಿತ್ಯ ಕಂಡ ಕನಸುಗಳುಬೆತ್ತಲೆ ಪಾದಗಳು ಸೀಳಿ ರಕ್ತ ಒಸರಿ ಬಾಯ್ಬಿಟ್ಟ ಆರ್ತನಾದಗಳಿಂದು   ನಮ್ಮನ್ನು ಇಲ್ಲಿ ಹಿಡಿದಿಟ್ಟಿವೆ ಮಹಡಿ ಮನೆಗಳ ಮುಂಬಾಗಿಲಿಗೆ ಬಡವನನ್ನು ಸುಲಿದ ಚರ್ಮದತೋರಣ ಒಪ್ಪ ಓರಣವಾಗಿದೆಕನಸಿಗೆ ತೆರಿಗೆ ಹಾಕಿ,ಸಾವಿಗೂ ಸುಂಕ ಕಟ್ಟುವ ಹುನ್ನಾರುಗಳಿಂದುನಮ್ಮನ್ನು ಇಲ್ಲಿ ಹಿಡಿದಿಟ್ಟಿವೆ ನಿದ್ದೆ ಮಾಡುವವನು, ಕದ್ದು ಕರೆದರೂ ತುಸು ಎಚ್ಚರಗೊಳ್ಳುವನು ಅನಾಯಾಸವಾಗಿಆಳುವವರ ಮುಸುಕಿನಲ್ಲಿ ಸೋಗುಲಾಡಿತನದ ನಡೆಗಳಿಂದುನಮ್ಮನ್ನು ಇಲ್ಲಿ ಹಿಡಿದಿಟ್ಟಿವೆ ಎಷ್ಟಂತ ತೇಪೆ ಹಾಕಿ, ಚಿತ್ತಾರ ಮೂಡಿಸಿ ಮನವ ಹಗುರಾಗಿಸೋಣ ಮರ್ಯಾದೆಗೆ ಅಂಜಿಅಪವಾದ, ಅವಮಾನಗಳಿಂದ ನುಜ್ಜುಗುಜ್ಜಾದ ಆಕ್ರಂದನಗಳಿಂದು ನಮ್ಮನ್ನು ಇಲ್ಲಿ ಹಿಡಿದಿಟ್ಟಿವೆ ಯಾರನ್ನೋ ದ್ವೇಷಿಸಿ, ದೂಷಿಸಿ, ಹಿಡಿಶಾಪ ಹಾಕಿ, ಕಣ್ಣೀರು ಹರಿಸಿದರೆ ಏನು ಪ್ರಯೋಜನ ಜ್ಯೋತಿಖಂಡ, ಮಾಂಸ, ಬೆವರು, ಬಿಸಿರಕ್ತಗಳ ಅಸಂಖ್ಯ ಬಲಿದಾನಗಳಿಂದುನಮ್ಮನ್ನು ಇಲ್ಲಿ ಹಿಡಿದಿಟ್ಟಿವೆಜ್ಯೋತಿ ಮಾಳಿ ಬೆಳಗಾವಿ

ಜ್ಯೋತಿ ಮಾಳಿ ಬೆಳಗಾವಿ ಅವರ ಗಜಲ್ Read Post »

ಕಾವ್ಯಯಾನ, ಗಝಲ್

ವಾಣಿ ಯಡಹಳ್ಳಿಮಠ ಅವರ ಗಜಲ್

ಕಾವ್ಯ ಸಂಗಾತಿ ವಾಣಿ ಯಡಹಳ್ಳಿಮಠ ಗಜಲ್ ಅಳುವವರನು ನೋಡಿಯೂ ನಗುವವರಿದ್ದಾರಿಲ್ಲಿ ಅದ್ಯಾಕೆ ಹೀಗೆನೋಯುವರೆಂದು ತಿಳಿದೂ ಸತಾಯಿಸುವವರಿದ್ದಾರಿಲ್ಲಿ ಅದ್ಯಾಕೆ ಹೀಗೆ ತಮ್ಮ ಕಷ್ಟವನ್ನಷ್ಟೇ ಪುಂಖಾನುಪುಂಖವಾಗಿ ಊದುವರುಅನ್ಯರ ಅಳಲು ಕೇಳಲು ಒಲ್ಲೆನ್ನುವವರಿದ್ದಾರಿಲ್ಲಿ ಅದ್ಯಾಕೆ ಹೀಗೆ ನೀ ಬಯಸುವ ಪ್ರೀತಿ, ಗೌರವ ಬೇರೆಯವರಿಗೂ ನೀಡಬೇಕಲ್ಲವೇಕೊಡದದ್ದನ್ನು ಪಡೆಯುವ ಮನಸು ಹೊಂದಿರುವವರಿದ್ದಾರಿಲ್ಲಿ ಅದ್ಯಾಕೆ ಹೀಗೆ ಎಲ್ಲರಿಗೂ ಅವರವರ ಅಭಿಮಾನ ಎಲ್ಲದಕ್ಕಿಂತಲೂ ಮಿಗಿಲು ನಿಜನಾ ಸ್ವಾಭಿಮಾನದ ಮಾತಾಡಿದರೇ ಮುನಿಯುವವರಿದ್ದಾರಿಲ್ಲಿ ಅದ್ಯಾಕೆ ಹೀಗೆ ಜಗದ ರೀತಿ, ರಿವಾಜುಗಳು ಅದೇಕೋ ವಾಣಿಗೆ ತಿಳಿಯಲಾಗಲೇ ಇಲ್ಲನನ್ನೀ ಮನಸ್ಥಿತಿ ನೋಡಿ ನಿಂದಿಸುವವರಿದ್ದಾರಿಲ್ಲಿ ಅದ್ಯಾಕೆ ಹೀಗೆ… ವಾಣಿ ಯಡಹಳ್ಳಿಮಠ

ವಾಣಿ ಯಡಹಳ್ಳಿಮಠ ಅವರ ಗಜಲ್ Read Post »

ಕಾವ್ಯಯಾನ, ಗಝಲ್

ಎಮ್ಮಾರ್ಕೆ ಅವರ ಗಜಲ್

ಕಾವ್ಯ ಸಂಗಾತಿ ಎಮ್ಮಾರ್ಕೆ ಅವರ ಗಜಲ್ ಇಲ್ಲಿ ಮನುಷ್ಯತ್ವವನ್ನೂ ಮಣ್ಣು ಮಾಡಲಾಗಿದೆ ಮರುಳೇಕರುಣೆ ಕನಿಕರಾದಿಗಳನು ದೂರ ದೂಡಲಾಗಿದೆ ಮರುಳೇ ರಾತ್ರಿಗೆ ಸಿಮೀತವಾದ ಹೇಯಕೃತ್ಯಗಳೀಗ ಹಗಲಿಗಿಳಿದಿವೆಬದುಕಿದ್ದಾಗಲೇ ಚರಮಗೀತೆಯ ಹಾಡಲಾಗಿದೆ ಮರುಳೇ ಬಹುತೇಕರು ಹಡೆದವರ ಕಡೆಗಣಿಸಿ ಬದುಕುವವರೇ ಇಲ್ಲಿಸಂಬಂಧಗಳಿಗೆ ತಣ್ಣಗಿದ್ದೇ ತರ್ಪಣ ಬಿಡಲಾಗಿದೆ ಮರುಳೇ ಒಳಿತಿಗಿಂತ ಕೆಡುಕೇ ಕಿವಿಗೆ ಬೀಳುತಿಹ ಜಾಯಮಾನವಿದುಶಕುನಿಯನ್ನೇ ಮೀರಿಸುವ ದಾಳವ ಹೂಡಲಾಗಿದೆ ಮರುಳೇ ಮಾನವ ಧರ್ಮ ಊನಗೊಂಡ ಶ್ವಾನದಂತೆ ಬೊಗಳುತಿದೆಕಾಲನ ಬೇತಾಳ ಕುಂಬಾರನ ಹೆಗಲ ಏರಲಾಗಿದೆ ಮರುಳೇ ಎಮ್ಮಾರ್ಕೆ

ಎಮ್ಮಾರ್ಕೆ ಅವರ ಗಜಲ್ Read Post »

ಕಾವ್ಯಯಾನ, ಗಝಲ್

ಜಯಂತಿ ಸುನಿಲ್ ಅವರ ಗಜಲ್

ಕಾವ್ಯ ಸಂಗಾತಿ ಜಯಂತಿ ಸುನಿಲ್ ಗಜಲ್ ಒಂದು ಗೆರೆ ಕಡಿಮೆಯಿದೆ..ನಿನ್ನ ಪಡೆಯುವ ನಸೀಬಿಗೆಒಂದು ಹನಿ ಕಡಿಮೆಯಿದೆ..ನಿನ್ನ ಮರೆಸುವ ಮಧುಬಟ್ಟಲಿಗೆ..!! ನೋವಿಗೆ ಹಳೆಯ ಗಿರಾಕಿಯ ಹುಸಿನಗುವ ಮನಕೆ…ಒಂದು ಉನ್ಮಾದ ಬೇಕಿದೆ,ಪುನಃ: ನಿನ್ನ ಪ್ರೀತಿಸುವ ಚಾಳಿಗೆ!! ದಿನದ ಲೆಕ್ಕಹಚ್ಚಿಟ್ಟೆನಗೆ ಹೋದೆ ದೂರಯಾನಕೆ..ಒಂದು ಶರಧಿ ಬಾಕಿಯಿದೆ,ನಿನ್ನ ಸೇರುವ ಪರಿಧಿಗೆ..!! ಸಿಕ್ಕ ಘಳಿಗೆಯನ್ನು ಸಂಭ್ರಮಿಸಲು ಬಿಡಲಿಲ್ಲ ಬದುಕು..ಒಂದು ಏಕಾಂತ ಬೇಕಿದೆ,ನಿನ್ನ ಸ್ಮರಿಸುವ ಮನಸ್ಸಿಗೆ..!! ಸೀತಾ,ರಾಮ,ಲಕ್ಷ್ಮಣರ ವನವಾಸಕ್ಕಿಂತ ದೀರ್ಘವಾಯ್ತು ನೋವುಒಂದು ವಿರಾಮ ಬೇಕಿದೆ,ನಿನ್ನ ಕಾಡುವ ಮೌನಪಾಳಿಗೆ..!! ಬಂಧನಕ್ಕೆ ಬೆನ್ನು ಮಾಡಿ ತುದಿನಗುವ ಕದ್ದವನೇ,,ಒಂದು ನೂಲಿನ ಅಂತರವಿದೆ…ನಿನ್ನ ಕೂಡುವ ಹಾದಿಗೆ..!! ಕಂಬನಿ ಕುಡಿದು ಸಾಕಾಯ್ತು ಜಯಾ,ಕೇಳಿಲ್ಲಿ ಗೆಳೆಯಾ..ಒಂದು ಕಿಡಿ ಕಡಿಮೆಯಿದೆ,ನನ್ನ ನಿನ್ನ ಒಂದಾಗಿಸುವಅಗ್ನಿಸಾಕ್ಷಿಗೆ…!! ಜಯಂತಿ ಸುನಿಲ್

ಜಯಂತಿ ಸುನಿಲ್ ಅವರ ಗಜಲ್ Read Post »

You cannot copy content of this page

Scroll to Top