ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ನಿಮ್ಮೊಂದಿಗೆ

ಆ ಪ್ರೀತಿಯನ್ನು

ಕವಿತೆ ಆ ಪ್ರೀತಿಯನ್ನು ಮೀನಾಕ್ಷಿ ಹರೀಶ್ ಅವ್ಯಕ್ತ ವಾದ ಇಚ್ಛೆ ಇದ್ದರೂವ್ಯಕ್ತ ಮಾಡದೆ, ಕ್ಷಣ ಕ್ಷಣಕ್ಕೂ ಮುಗುಳು ನಗುತ್ತಲೇದಿನಗಳು ಸವೆದವು ನಿರ್ಲಿಪ್ತತೆ ಯಿಂದ ಹಗಲಲ್ಲಿ ಮುಗುಳು ನಗುಇರುಳಲ್ಲಿ ಮೌನದ ನಗುಪ್ರೀತಿಗಾಗಿ ಹುಡುಕಿದವು ಕಣ್ಣುಗಳುನಿಂತಲ್ಲೇ ಕಡಲನಿರೀಕ್ಷೆಯೊಳು ಕಾಯುತ್ತಸರಿದು ಹೋದವು ಹಲವಾರು ವಸಂತಗಳು ಕಂಗಳು ತುಂಬಿದವು ಸೋಲಿನ ಹನಿಯಿಂದಮತ್ತೆ ಮತ್ತೆ ಸೋಲುತ್ತ ನಿರಾಸೆಯಲಿಹೃದಯದೆಲ್ಲಇಷ್ಟಗಳು ಕಷ್ಟಗಳಾದವುಕಾಮನೆಗಳು ವೈರಾಗ್ಯಕ್ಕೆ ವಾಲಿದವು ಅಂಗಳದಲ್ಲಿ ನೂರಾರು ದೀಪಗಳು ಒಮ್ಮೆಲೆ ಬೆಳಗಿದವುತಾಳದಾಯಿತು ಆ ವೈರಾಗ್ಯಕ್ಕೆ ಆ ಬೆಳಕು,ಹೋಗಿಬಿದಲೇ ಆ ಒಲವಿನತ್ತಬಿಗುಮಾನ ಬಿಟ್ಟುನಿಂತುಬಿಡಲೇ ಎನಿಸಿತು ಆ ಪ್ರೀತಿಯ ಉಸಿರಿನತ್ತಬಿಡಲೋಲ್ಲದು ನಾ ಕಟ್ಟಿದ ವೈರಾಗ್ಯವು ಆ ಉಸಿರಿನತ್ತ ಬೇಕೆನಿಸಿತು ಮನಕೆ ನಿರ್ಮಲವಾದ ಪ್ರೀತಿಯ ಆಸರೆಯೊಂದಸಿಗುವುದೇ ಆ ನಿರ್ಮಲ ಪ್ರೀತಿಯು ಆ ಕಡಲಿಂದನಿಂತಲ್ಲೇ ಕುಳಿತೆನು ವೈರಾಗ್ಯದನಿಟ್ಟುಸಿರಿನಿಂದಕಳೆದುಕೊಳ್ಳಲಾರೆನು ಆ ಪ್ರೀತಿಯನ್ನು ***********************************************

ಆ ಪ್ರೀತಿಯನ್ನು Read Post »

ನಿಮ್ಮೊಂದಿಗೆ

ಹೊಸಬರ ಎರಡುಕವಿತೆಗಳು

ಕವಿತೆ ವೈಷ್ಣವಿ ವಿನಯ್ ತಾಯಿ ಪ್ರತಿ ಹೆಣ್ಣಿನಲ್ಲೂ ಮಾತೃತ್ವಪ್ರೀತಿ ಇರುವುದುಕಷ್ಟಗಳನ್ನು ಮರೆತುಮಕ್ಕಳ ಸುಖ ಕಾಣುವಳು!!! ಕರುಳಿನ ಬಳ್ಳಿಯ ಸೃಷ್ಟಿಕರ್ತೆ ಅಮ್ಮಕಲ್ಪವೃಕ್ಷವಾಗಿ ನಿಂದಿಹಳು ಅಮ್ಮಹೊತ್ತು ಹೆತ್ತ ತಾಯಿಯನ್ನುಎಂದೆಂದು ಸ್ಮರಿಸಬೇಕು!!! ಅಳುವ ಕಂದನ ಕೊರಳಿನ ಧ್ವನಿಯಲ್ಲಿಮಧುರ ನುಡಿಯ ಸಿಂಚನದಲ್ಲಿಜೋಗುಳ ಹಾಡಿದತ್ಯಾಗ ಮೂರ್ತಿ “ಅಮ್ಮ”!!! ******************************* ನಗು ನಗುತಿರು ನೀನುನಗಿಸುತಿರುವೆ ನಾನುಆರೋಗ್ಯದ ಗುಟ್ಟು ನಗುಅಲಂಕಾರ ಎಷ್ಟಿದ್ದರೇನುನಗುತ ನಗಿಸುತ ಬಾಳೋಣ!!! ಚೆಲುವೆಯ ಮುಗ್ದ ನಗುವಿಗೆನಗಲು ಬೇಕಿಲ್ಲ ಕಾರಣನಗು ತುಂಬಿರಲಿ ಹೂವಿನ ಸುಗಂಧದಂತೆಅರಳಿದ ಗುಲಾಬಿ ಹೂವಿನಂತೆನಗುವೇ ನಿಮ್ಮ ಮೊಗದ ಆಭರಣವಾಗಲಿಸದಾ ನಗುವನ್ನು ಸ್ವಾಗತಿಸಲುಜಗವು ಕಾಯುತ್ತಿದೆ ನಿಮ್ಮ ಈ ನಗುವಿಗೆ *********************************

ಹೊಸಬರ ಎರಡುಕವಿತೆಗಳು Read Post »

ನಿಮ್ಮೊಂದಿಗೆ

ಮುಟ್ಟು .. ಮುಟ್ಟು.. ಮುಟ್ಟು..

ವಿಶೇಷ ಲೇಖನ ಮುಟ್ಟು .. ಮುಟ್ಟು.. ಮುಟ್ಟು.. ಚಂದ್ರಪ್ರಭ ನಮ್ಮ ಬಾಲ್ಯ ಕಾಲಕ್ಕಿಂತ ಈಗ ಸ್ವಲ್ಪ ಮಟ್ಟಿಗೆ ಧೋರಣೆಗಳು ಬದಲಾಯಿಸಿದಂತೆ ತೋರುವುದಿದೆ. ಆಗ ಅದನ್ನು ಕುರಿತು ಹೆಣ್ಮಕ್ಕಳು ತಮ್ಮ ತಮ್ಮಲ್ಲಿಯೂ ಮುಕ್ತವಾಗಿ ಮಾತನಾಡಲು ಹಿಂಜರಿಕೆಯಿತ್ತು. ಆಗ ಆ ಸಂಗತಿ ಮಕ್ಕಳು, ಇತರರ ತಿಳಿವಳಿಕೆಗೆ ಬರುವ ಸಂಭವನೀಯತೆ ಇದ್ದುದು ತೀರ ಕಡಿಮೆ. ತರಗತಿಯಲ್ಲಿ ಅಂಡಾಣು, ವೀರ್ಯಾಣು, ಗರ್ಭಧಾರಣೆ, ಋತುಚಕ್ರಗಳ ಕುರಿತು ಇದ್ದ ಅಧ್ಯಾಯವನ್ನು ಮಕ್ಕಳೆದುರು ಪಾಠ ಮಾಡಲು ಶಿಕ್ಷಕಿಯರೇ ಹಿಂದೇಟು ಹಾಕುತ್ತಿದ್ದುದನ್ನು ನಾನು ಹತ್ತಿರದಿಂದ ನೋಡಿರುವೆ. ಅದೊಂದು ನಿಸರ್ಗ ಸಹಜ ಕ್ರಿಯೆ, ಮನುಕುಲದ ಉಳಿವು, ಬೆಳವಣಿಗೆಯ ಮೂಲ ಸ್ರೋತ ಎಂಬ ಅದ್ಬುತ ಸತ್ಯವನ್ನು ಮಕ್ಕಳೆದುರು ಅನಾವರಣ ಮಾಡಲು ಇರುವ ಒಂದು ಸದವಕಾಶ ಅದು. ಅಂಥದೊಂದು ಅಧ್ಯಾಯ ಗೌಣವಾಗಿ ಬಿಡುವುದು ನಿಜಕ್ಕೂ ವಿಷಾದನೀಯ. ನನ್ನೂರು ಬನಹಟ್ಟಿ ನೇಕಾರರ ಬೀಡು. ಲಿಂಗ, ಜಾತಿ, ಮತ, ಪಂಥ ಮರೆತು ಎಲ್ಲ ಜೀವಗಳೂ ನೇಕಾರಿಕೆಯನ್ನು ವೃತ್ತಿ ಮಾಡಿಕೊಂಡ ಜನರು ನನ್ನವರು. ದಿನ ಬೆಳಗಾಗುವುದು, ಸಂಜೆಗತ್ತಲು ಕವಿಯುವುದು ನೂಲೆಳೆಯೊಂದಿಗೇ. ಅಲ್ಲಲ್ಲಿ ಕೆಲವರು ನೌಕರದಾರರು ಸಹ ಕಾಣಸಿಗುತ್ತಾರೆ. ತೀರ ಚಿಕ್ಕವಳಿದ್ದಾಗ ನನ್ನವ್ವ ಮುಟ್ಟಿನ ದಿನಗಳಲ್ಲಿ ತಲೆ ಮೇಲೆ ನೀರು ಹಾಕಿಸಿಕೊಂಡು ಕೆಲಸದಲ್ಲಿ ತೊಡಗುತ್ತಿದ್ದುದನ್ನು ನೋಡುತ್ತಿದ್ದರೂ ಅದೇಕೆ ಹಾಗೆ ಅಂತ ತಿಳಿದೇ ಇರಲಿಲ್ಲ. ಅವ್ವ ನನಗೆ ನೀರು ಹಾಕುವಂತೆ ಆಗುವವರೆಗೂ ಹೊತ್ತಲ್ಲದ ಹೊತ್ತಿನಲ್ಲಿ ಅಜ್ಜಿ ಅವ್ವನಿಗೆ ನೀರು ಹಾಕುವುದೇಕೆ ಎಂಬುದು ವಿಸ್ಮಯದ ಸಂಗತಿಯಾಗೇ ಉಳಿದಿತ್ತು! ಈ ದಿನದ ವರೆಗೂ ಆ ದಿನಗಳಲ್ಲಿ ಮೂಲೆ ಹಿಡಿದು ಕೂತವರನ್ನು ನಾ ಕಂಡಿಲ್ಲ. ಕೆಲವು ಸಮುದಾಯದವರು ಅದನ್ನು ಪಾಲಿಸುತ್ತಾರೆ ಎಂದು ಕೇಳಿ ಮಾತ್ರ ಗೊತ್ತು. ನೇಕಾರಿಕೆ ಪ್ರತಿ ದಿನದ ಪ್ರತಿ ಕ್ಷಣದ ದುಡಿಮೆ ಬಯಸುವ ಕಾಯಕ. ಮುಟ್ಟು ಕಾಣಿಸಿಕೊಂಡ ಕೂಡಲೇ ತಲೆ ಮೇಲೆ ನೀರು ಹಾಕಿಕೊಂಡು ಕೆಲಸಕ್ಕೆ ತೊಡಗುವುದು ಇವರಿಗೆ ಅನಿವಾರ್ಯ. ಮೂರು-ನಾಲ್ಕನೇ ದಿನ ಮತ್ತೊಮ್ಮೆ ನೀರು ಹಾಕಿಕೊಂಡರೆ “ಶುದ್ಧ” ಆದ ಹಾಗೆ. ಆ ದಿನಗಳಲ್ಲಿ ದೇವರ ಪೂಜೆ, ನೈವೇದ್ಯ ಇತ್ಯಾದಿಗಳಿಂದ ದೂರ ಉಳಿಯುವುದೇ  ಅವರು ಪಾಲಿಸುವ ‘ಮಡಿ’. ಅವರೇ ಹೇಳುವ ಕೆಲವು ಖಡಕ್ ದೇವರುಗಳ ವಿಶೇಷ ಆಚರಣೆ, ಜಾತ್ರೆಗಳ ಸಂದರ್ಭದಲ್ಲೂ ಅವರು ಅದರಿಂದ ದೂರ. ಇದು ಅವರು ಪಾಲಿಸುವ ಮಡಿಯ ಒಂದು ಭಾಗ. ಆರನೇ ತರಗತಿ ಕಳೆದ ನಂತರದ ರಜೆಯಲ್ಲಿ ನಾನು ಋತುಮತಿಯಾದ ನೆನಪು. ಆಗೆಲ್ಲ ಮೊದಲ ಋತುವನ್ನು ಸಂಭ್ರಮಿಸುವುದು ಜನಗಳಿಗೆ ಪ್ರಿಯವಾದ ಸಂಗತಿ. ೫ ದಿನ, ೯ದಿನ, ೧೧ ದಿನ ಹೀಗೆ ಹುಡುಗಿಯನ್ನು ಮಂಟಪದಲ್ಲಿ ಕೂರಿಸಿ ಸೋಬಾನೆ ಪದ ಹಾಡುವುದು. ದಿನಕ್ಕೊಂದು ರೀತಿಯ ಅಲಂಕಾರ ಮಾಡುವುದು.. ಆಕೆಗೆ ಬಗೆ ಬಗೆ ಊಟ, ಪೌಷ್ಟಿಕ ಆಹಾರ ತಿನ್ನಿಸುವುದು. ‘ಸಾಲಿಗಿ ಹೋಗೂ ಹುಡುಗಿ.. ಕುಂಡ್ಸೂದು ಏನೂ ಬ್ಯಾಡ’ ಅಂತ ನನ್ನಜ್ಜಿ ಫರ್ಮಾನು ಹೊರಡಿಸುದಳು. ಜನಗಳಿಗೆ ಗೊತ್ತಾದರೆ ಅಡುಗೆ ತಂದು ಕೊಟ್ಟು ಕಾರ್ಯ ಮಾಡುವುದು ಅನಿವಾರ್ಯ ಆದೀತೆಂದು ಗುಟ್ಟಾಗಿ ನನ್ನ ಒಳ ಮನೆಯಲ್ಲೇ ಇರಿಸಿದ ನೆನಪು. ಅವ್ವ ನನಗೆ ಸ್ರಾವದ ದಿನಗಳಲ್ಲಿ ಬಟ್ಟೆ ಉಪಯೋಗಿಸುವುದು ಹೇಗೆ ಅಂತ ಹೇಳಿ ಕೊಟ್ಟಳು. ಆದರೆ ಅದನ್ನೆಲ್ಲ ತೊಳೆದು ಸ್ವಚ್ಛ ಮಾಡುವುದು.. ಗುಟ್ಟಾಗಿ ಮುಟ್ಟಿನ ಬಟ್ಟೆ ಒಣಗಿಸಿಕೊಳ್ಳುವುದು ಎಲ್ಲ ಬೇಡದ ಸಂಗತಿಗಳಾಗಿದ್ದವು. ಒಬ್ಬೊಬ್ಬರಾಗಿ ಗೆಳತಿಯರು “ದೊಡ್ಡವ”ರಾಗ ತೊಡಗಿದರು. ಆದರೂ ನಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದುದು ಕಡಿಮೆ. ನಮ್ಮೂರಲ್ಲಿ ಆಗ ಇದ್ದುದು ಕೆಲವೇ ಕೆಲವು ಔಷಧಿ ಅಂಗಡಿ. ಶೋಕೇಸಿನಲ್ಲಿಟ್ಟ ವಸ್ತುಗಳನ್ನು ನೋಡುವುದೆಂದರೆ ನಮಗೆ ಖುಷಿ. ಅದೊಂದು ದಿನ ಸ್ನಾನದ ಸೋಪಿನ ಮಾದರಿಯಲ್ಲಿ ಸುತ್ತಿಟ್ಟ ಪ್ಯಾಕೆಟ್ ಒಂದನ್ನು ನಾನೂ ತಮ್ಮನೂ ಕುತೂಹಲದಿಂದ ನೋಡ ತೊಡಗಿದೆವು. ಅಷ್ಟು ದೊಡ್ಡ ಸಾಬೂನು ಇರುವುದೇ? ಅಂತ ಅಚ್ಚರಿ. ಕೊನೆಗೆ ಅದೇನೆಂದು ಅಂಗಡಿಯವರನ್ನೇ ಕೇಳಿದೆವು. ‘ನಿಮಗ ಗೊತ್ತಾಗೂದಿಲ್ಲ ಹೋಗರಿ’ ಅಂತ ಗದರಿ ಕಳಿಸಿ ಬಿಟ್ಟರು ಅವರು. ‘ಸುಧಾ’ ಆ ಕಾಲದ ಜನಪ್ರಿಯ ವಾರ ಪತ್ರಿಕೆ. ಅದರಲ್ಲಿ ವಸುಮತಿ ಉಡುಪ, ಅನುಪಮಾ ನಿರಂಜನ ಮೊದಲಾದವರ ಸ್ತ್ರೀ ಆರೋಗ್ಯ ಕುರಿತು ಲೇಖನಗಳು. ಮುಟ್ಟಿನ ದಿನಗಳಲ್ಲಿ ಅನುಸರಿಸಬೇಕಾದ ಸಂಗತಿಗಳ ಬಗ್ಗೆ ಕೊಟ್ಟ ಮಾಹಿತಿಯಲ್ಲಿ ಸ್ಯಾನಿಟರಿ ಪ್ಯಾಡ್ ಬಳಕೆ ಕುರಿತು ವಿವರ ಓದಿದ ನಂತರವಷ್ಟೇ ಅದೆಲ್ಲ ಅರ್ಥ ಆಗಿದ್ದು. ಹಾಗಿದ್ದೂ ದುಡ್ಡು ಕೊಟ್ಟು ಅದನ್ನು ಖರೀದಿಸುವ ಅವಕಾಶ ಇರಲಿಲ್ಲ. ಹೈಸ್ಕೂಲು ಮುಗಿಸಿ ಕಾಲೇಜಿಗೆ ಸೇರುವಾಗ ಅವರಿವರು ಕೊಟ್ಟ ಹತ್ತಿಪ್ಪತ್ತು ರೂಪಾಯಿಗಳನ್ನು ಉಳಿತಾಯ ಮಾಡಿ ಅದರಿಂದ ಸ್ಯಾನಿಟರಿ ಪ್ಯಾಡ್ ಕೊಳ್ಳಲು ಆರಂಭಿಸಿದೆ. ಬಳಸಿದ ಮೇಲೆ ಒಪ್ಪವಾಗಿ ಸುತ್ತಿ ಅದನ್ನು ಕಸದ ಡಬ್ಬಿಗೆ ಎಸೆಯುವುದು ಅಭ್ಯಾಸ ಆಯ್ತು. ಅಂಗಡಿಗೆ ಹೋಗಿ ಪ್ಯಾಡ್ ಕೇಳಿದರೆ ಸಾಕು, ಅಂಗಡಿಯಾತ ಗುಟ್ಟಾಗಿ ಅದನ್ನು ಕಾಗದದ ಹಾಳೆಯಲ್ಲಿ ಸುತ್ತಿಯೊ ಕಪ್ಪು ಬಣ್ಣದ ಪ್ಲಾಸ್ಟಿಕ್ ಹಾಳೆಯಲ್ಲಿ ಇರಿಸಿಯೊ ಕೊಡುವುದು ಈಗಲೂ ಕಾಣುವ ವಿದ್ಯಮಾನ. ತೀವ್ರ ಹೊಟ್ಟೆ ನೋವು ಕಾಡಿದಾಗ ವೈದ್ಯರ ಬಳಿ ಹೋಗಿ ಮಾತ್ರೆ ತರುವುದಿತ್ತು. ಬಟ್ಟೆ, ಪ್ಯಾಡ್ ಯಾವುದೇ ಆಗಿರಲಿ ಸ್ರಾವವುಂಡು ಒಣಗಿ ತೊಡೆಯ ಸಂದುಗಳಲ್ಲಿ ಉಂಟು ಮಾಡುತ್ತಿದ್ದ ಗಾಯಗಳದೇ ಒಂದು ಸಮಸ್ಯೆ. ಅದನ್ನು ನಿವಾರಿಸಲು ವೈದ್ಯರಲ್ಲಿಗೆ ತೆರಳಿ ಮುಲಾಮು ತರುವುದು. ಈ ತಿಂಗಳ ಗಾಯ, ನೋವು ಕಡಿಮೆಯಾಗುತ್ತಿದೆ ಎನ್ನುವಷ್ಟರಲ್ಲಿ ಮುಂದಿನ ತಿಂಗಳ ಋತು ಹಾಜರ್!! ಇದರೊಂದಿಗೆ ಅವ್ವ, ಅಜ್ಜಿ ಹಾಕುತ್ತಿದ್ದ ಅಲ್ಲಿ ಬರಬೇಡ, ಇಲ್ಲಿ ಬರಬೇಡ.. ಅದನ್ನು ಮಾಡಬೇಡ, ಇದನ್ನು ಮಾಡಬೇಡ ಇವೆಲ್ಲ ಕಿರಿಕಿರಿ ತಾಳಬೇಕಿತ್ತು. ಮದುವೆ, ವೃತ್ತಿ, ತಾಯ್ತನಗಳ ಮೂಲಕ ಹಾದು ಬರುವಾಗ ಅವ್ವ ನಮ್ಮೊಂದಿಗೆ ಹೊಂದಾಣಿಕೆ ಮಾಡಿಕೊಳ್ಳತೊಡಗಿದಳು. ಮುಟ್ಟು ಕಾಣಿಸಿಕೊಂಡ ತಕ್ಷಣ ತಲೆ ಸ್ನಾನ ಮಾಡಬೇಕಿರಲಿಲ್ಲ. ದೇವರು, ನೇಮಗಳ ವಿಷಯದಲ್ಲಿಯೂ ಅವಳು ಆಕ್ಷೇಪಿಸುವುದನ್ನು ನಿಲ್ಲಿಸಿದಳು. ಆದರೂ ನಮ್ಮಲ್ಲಿ ಮೊದಲಿನ ಭಯ ಹಾಗೇ ಉಳಿದಿತ್ತು. ಮುಟ್ಟು ನಿಲುಗಡೆಯ ಹೊಸ್ತಿಲಲ್ಲಿರುವ ಈ ಹೊತ್ತು ಮುಟ್ಟಿನ ಬಟ್ಟಲುಗಳ ಬಳಕೆ ವ್ಯಾಪಕವಾಗಿ ಕೇಳಿ ಬರುತ್ತಿದೆ. ಅರವತ್ತರ ದಶಕದಲ್ಲಿಯೇ ಶೋಧಿಸಲ್ಪಟ್ಟ ಮುಟ್ಟಿನ ಬಟ್ಟಲು ಮಾರುಕಟ್ಟೆಗೆ ಬರದಿರುವಂತೆ ತಡೆಯುವ ಹಿಂದೆ ಸ್ಯಾನಿಟರಿ ಪ್ಯಾಡ್ ಮಾರಾಟ ಮಾಡುವ ಕಂಪನಿಗಳ ಕೈವಾಡ ಇತ್ತೆಂಬುದನ್ನು ಪತ್ರಿಕೆಗಳು ವರದಿ ಮಾಡುವುದನ್ನು ಓದುವಾಗ ಆಘಾತವಾಗುತ್ತದೆ. ಮಣ್ಣಿನಲ್ಲಿ ಕರಗದ, ನಾಶವಾಗದ, ನೂರಾರು ವರ್ಷಗಳ ವರೆಗೆ ಇದ್ದ ಸ್ಥಿತಿಯಲ್ಲಿಯೇ ಉಳಿಯುವ, ಕ್ರಿಮಿಗಳ ಉತ್ಪಾದನೆಗೆ ಆಕರವಾದ ಅದೆಷ್ಟು ಪ್ಯಾಡ್ ಗಳನ್ನು ವರ್ಷಗಟ್ಟಲೇ ನಾವು ಎಸೆಯುತ್ತಲೇ ಬಂದಿದ್ದೇವೆ ಎಂದು ಊಹಿಸಲೂ ಭಯವಾಗುವದು. ಹೆಂಗಳೆಯರ ಸೌಕರ್ಯ, ಪರಿಸರ ಕಾಳಜಿ ಯಾವುದೂ ಇಲ್ಲದ ಕಂಪನಿಗಳಿಗೆ ತಮ್ಮ ಹಿತಾಸಕ್ತಿಗಳೇ ಮುಖ್ಯ ಆಗುವುದು ಆಗಲೂ ಇತ್ತು.. ಈಗಲೂ ಇದೆ.. ಮುಂದೆಯೂ ಇದ್ದರೆ ಅಚ್ಚರಿಯಿಲ್ಲ. ಮುಟ್ಟಿನ ಕುರಿತು ಮುಕ್ತವಾಗಿ ಮಾತನಾಡಲು ಹಿಂಜರಿಯದ ವಾತಾವರಣ ಇನ್ನೂ ನಿರ್ಮಾಣ ಆಗಿಲ್ಲ. ಅದು ಸಾಧ್ಯ ಆಗಬೇಕು. ಹಾಗಾಗುವುದು ಆರೋಗ್ಯವಂತ ಸಮಾಜದ ಲಕ್ಷಣ. ನಮ್ಮ ಮಕ್ಕಳಿಗೆ ಗಂಡು ಹೆಣ್ಣು ಭೇದವಿಲ್ಲದೆ ಇಬ್ಬರಿಗೂ ಈ ಕುರಿತ ವಾಸ್ತವಾಂಶಗಳ ಅರಿವಾಗಬೇಕು. ಅದು ಪರಸ್ಪರರ ಕುರಿತ ಮಾನವೀಯ ನಿಲುವು ವೃದ್ಧಿಸಲು ಸಹಕಾರಿ. ಮುಟ್ಟಿನ ಬಟ್ಟಲು ಬಳಕೆ ವ್ಯಾಪಕ ಆಗಬೇಕು. ಒಣ ಅನುಕಂಪ, ಸಹಾನುಭೂತಿಗೆ ಬದಲಾಗಿ ಅವಳ ‘ಆ ದಿನಗಳ’ಲ್ಲಿ ಆಕೆಗೆ ಇತರರ ಸಹಕಾರ, ಸಾಂತ್ವನ ಸಿಗುವಂತಾಗಬೇಕು. ಎಲ್ಲ ಹೆಣ್ಣು ಜೀವಗಳಲ್ಲಿ ನನ್ನದೊಂದು ವಿನೀತ ಪ್ರಾರ್ಥನೆ.. ಮುಟ್ಟು ಕುರಿತು ನಿಮ್ಮ ಅನುಭವವನ್ನು ಮುಕ್ತವಾಗಿ ಹಂಚಿಕೊಳ್ಳಲು ಆರಂಭಿಸಿ. ಒಂದು ಅಭಿಯಾನದ ರೀತಿಯಲ್ಲಿ ಅದು ಸಾಗಲಿ. ಅದರಿಂದ ಪುರುಷ ಜಗತ್ತಿನೆದುರು ಹೊಸತೊಂದು ಲೋಕದ ಅನಾವರಣವಾಗಲಿ. ಮಿಡಿಯುವ ಮನಗಳು ಮಿಡಿದಾವು ************************************

ಮುಟ್ಟು .. ಮುಟ್ಟು.. ಮುಟ್ಟು.. Read Post »

ಅಂಕಣ ಸಂಗಾತಿ, ಕಾಲಾ ಪಾನಿ, ನಿಮ್ಮೊಂದಿಗೆ

ಅಂಕಣ ಬರಹ

ಖ್ಯಾತ ಲೇಖಕಿ ಶೀಲಾ ಭಂಡಾರ್ಕರ್ ಅವರಿಂದ

ಅಂಡಮಾನ್ ಪ್ರವಾಸದ ವಿಶಿಷ್ಟ ಅನುಭವಗಳ

ಸರಣಿಬರಹ………..

ಅದ್ಯಾಯ—ಒಂದು

Read Post »

ನಿಮ್ಮೊಂದಿಗೆ

ಮನದ ಪುಟದಲಿ ಮುದ್ರೆಯೊತ್ತಿದ ಕಾದಂಬರಿ.

ಕಳೆದ ಎರಡು ,ಮೂರು ವರ್ಷಗಳಿಂದ ಕೊಡಗು ಮಹಾಮಳೆಯಿಂದ ತತ್ತರಿಸಿ ಎದುರಿಸಿದ ಜೀವಭಯವನ್ನೂ,ಕರಾಳ ದಿನಗಳನ್ನೂ ಕಾದಂಬರಿಯೊಳಗೆ ಹಿಡಿದಿಟ್ಟಿರುವುದು ನಿಜಕ್ಕೂ ವರ್ತಮಾನಕ್ಕೆ ಹಿಡಿದ ಕನ್ನಡಿ.

ಮನದ ಪುಟದಲಿ ಮುದ್ರೆಯೊತ್ತಿದ ಕಾದಂಬರಿ. Read Post »

ನಿಮ್ಮೊಂದಿಗೆ

ಭಾವ ಭುವನ

ಕವಿತೆ ಭಾವ ಭುವನ ಕಲಾ ಭಾಗ್ವತ್ ಕಾದ ನೆಲದ ಮೌನಮಡುಗಟ್ಟಿ ಮಳೆ ಸುರಿವಾಗಹೊಳಹು ಕೊಟ್ಟು ಹಾಯುವ ಮಿಂಚಿಗೆಒಮ್ಮೆ ನಿಂತು ಏನೆಂದು ಕೇಳಬಾರದೆ? ಹರಿವ ನದಿಯೊಡನೆ ಸೇರಿದ ಹನಿ ಮುತ್ತುಅಲೆ ಅಲೆಯಾಗಿ…ಹರಿವ ಮುಸ್ಸಂಜೆಗೆಮೆರುಗು ನೀಡಿ ಜಾರುವ ರಂಗಿಗೆಒಮ್ಮೆ ನಿಂತು ಪಿಸುಮಾತ ಆಲಿಸಬಾರದೇ? ಮೌನ ಮಥಿಸಿ ಪಕ್ವವಾಗಿದೆ ಈಗಮತ್ತೆಲ್ಲವೂ ಮುಚ್ಚಿಕೊಂಡಿದೆಶಿಶಿರದ ಇರುಳಿನಲಿ…ತಣ್ಣನೆ ಬಿಚ್ಚಿದೆ ಮನ ಮಾತ್ರಮುಂಜಾವು ಎಂದಿಗಿಂತಲೂ ಆರ್ದೃಬೆಚ್ಚಗೆ ಸಿಹಿಯ ಸವಿ ದೂರದಲ್ಲೇ ನಿಂತುಕಡಲ ತೆರೆಗಳ ಸೆಳೆವಾಗಹೊಳೆವ ಮುಖದಲ್ಲಿ ಅರಳುವಕನಸುಗಳು ನನಗಷ್ಟೇ ಸೀಮಿತವೀಗಬಿಗುಮಾನವೆನಗೆ ಇದಕ್ಕೆಲ್ಲ ಉತ್ತರವಹುಡುಕಲಾಗದು ನನಗೆಹುದುಗಿರುವ ಮಾತುಗಳುಸುಲಭದಲಿ ಅರ್ಥಕ್ಕೆ ದಕ್ಕದಂತೇ.. ತುದಿ ಮೊದಲಿಲ್ಲದ ಎಷ್ಟೋ ಪ್ರಶ್ನೆಗಳಕಣ್ಣಿನಾಳದಲಿ ಇಳಿದು ತಿಳಿದುಕೊಟ್ಟ ಮುಗುಳು ನಗುವಿನ ಉತ್ತರಅರ್ಥವಾಗಿದೆ ನನಗೆ ಮಾತ್ರಮಾತಾಗಿ ಬರದಿರುವುದನೆಲ್ಲಕವಿತೆಯಾಗಿ ಬರೆಯಲೇ…?ನಿನಗೆ ಮಾತ್ರ. *****************************************************

ಭಾವ ಭುವನ Read Post »

ನಿಮ್ಮೊಂದಿಗೆ

ಕಸಾಪ ಅದ್ಯಕ್ಷಸ್ಥಾನದ ಅಭ್ಯರ್ಥಿಗಳಿಗಷ್ಟು ಪ್ರಶ್ನೆಗಳು!

ಸಂಪಾದಕೀಯ ಕಸಾಪ ಅದ್ಯಕ್ಷಸ್ಥಾನದ ಅಭ್ಯರ್ಥಿಗಳಿಗಷ್ಟು ಪ್ರಶ್ನೆಗಳು! ಕನ್ನಡ ಸಾಹಿತ್ಯ ಪರಿಷತ್ತಿನ ಅದ್ಯಕ್ಷ ಸ್ಥಾನದ  ಅಭ್ಯರ್ಥಿಗ ಳಿಗೊಂದಿಷ್ಟು ಪ್ರಶ್ನೆಗಳು!              ಇನ್ನು ಕೆಲವೆ ತಿಂಗಳುಗಳಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ  ಅದ್ಯಕ್ಷ ಸ್ಥಾನಕ್ಕೆ ತಾವುಗಳು ಆಕಾಂಕ್ಷಿಗಳಾಗಿದ್ದು, ಖಾಸಗಿಯಾಗಿ ತಮ್ಮ ಆಪ್ತವಲಯದ ಮೂಲಕ ಸದ್ದಿರದೆ ಪ್ರಚಾರ ಕಾರ್ಯವನ್ನೂ ಶುರು ಮಾಡಿರುತ್ತೀರಿ. ಪ್ರಜಾಸತ್ತಾತ್ಮಕ ಆಡಳಿತ ವ್ಯವಸ್ಥೆಯನ್ನು ಒಪ್ಪಿಕೊಂಡಿರುವ  ಈ ನೆಲದಲ್ಲಿ ಇಂತಹ ಆಕಾಂಕ್ಷೆಗಳು- ಸಂಬಂಧಿಸಿದ ಪೂರ್ವ ಸಿದ್ದತೆಗಳು ಸಹಜವೇ ಸರಿ! ಈ ಬಗ್ಗೆ ನಮ್ಮ ತಕರಾರೆನಿಲ್ಲ. ಆದರೆ ಹಲವು ವರ್ಷಗಳಿಂದ ಈ ಚುನಾವಣೆಗಳು ಹೇಗೆ ನಡೆಯುತ್ತವೆ ಅಥವಾ ನಡೆಸಲ್ಪಡುತ್ತವೆ ಎಂಬುದನ್ನು ಕಂಡಿರುವ ನಮ್ಮಲ್ಲಿ ಕೆಲವು ಪ್ರಶ್ನೆಗಳು ಹುಟ್ಟಿದ್ದು ತಾವು ಸದರಿ ಪ್ರಶ್ನೆಗಳಿಗೆ ಉತ್ತರಿಸುತ್ತೀರೆಂದು ನಂಬುತ್ತೇನೆ.ಕಸಾಪದ ಮತದಾರನಾಗಿ ಈ ಪ್ರಶ್ನೆಗಳನ್ನು ಕೇಳುವುದು ನಮ್ಮ ಹಕ್ಕಾಗಿದ್ದು-ಉತ್ತರಿಸುವುದು ನಿಮ್ಮ ಕರ್ತವ್ಯವೆಂದು ನಾನಂತೂ ನಂಬಿದ್ದೇನೆ 1.ಸಾಹಿತ್ಯ ಪರಿಷತ್ತಿನ ಚುನಾವಣೆಗೆ ನಿಂತಿರುವ ಅಭ್ಯರ್ಥಿಗಳು ವೆಚ್ಚ ಮಾಡುವ ಹಣದ ಮಿತಿಯೇನಾದರು ಇದೆಯೇ? 2.ಹೋಗಲಿ ನಾಮಪತ್ರ ಹಾಕುವ ಮುಂಚೆ ರಾಜಕಾರಣಿಗಳಂತೆ ತಮ್ಮ  ಸ್ಥಿರ-ಚರಾಸ್ತಿಗಳನ್ನು ತಾವುಗಳು ಘೋಷಿಸಿಕೊಳ್ಳಬೇಕೆಂಬ ನಿಯಮವಿದೆಯೇ? 3. ಹಾಗೊಂದು ನಿಯಮವಿರದಿದ್ದ ಪಕ್ಷದಲ್ಲಿ ತಾವು ಸ್ವಯಂಪ್ರೇರಿತರಾಗಿ ಘೋಷಿಸುವ ಮೂಲಕ  ಪಾರದರ್ಶಕತೆ ಮರೆಯಲು ಸಿದ್ದರಿದ್ದೀರಾ? 4. ಗೆದ್ದಮೇಲೆ ಲೋಕಾಯುಕ್ತಕ್ಕೂ ಆಸ್ತಿವಿವರ ಸಲ್ಲಿಸಬೇಕೇ? 5.ಇವ್ಯಾವು ಇಲ್ಲವೆಂದಾದರೆ ತಾವುಗಳು ಈ ವಿಚಾರದಲ್ಲಿ ಯಾರಿಗೆ ಹೊಣೆಗಾರರಾಗಿರುತ್ತೀರಿ? 6.ಇನ್ನು ಮತದಾರರ ಸಂಖ್ಯೆ ಕನಿಷ್ಠ ಒಂದು ಲಕ್ಷವಿದೆ ಎಂದುಕೊಂಡರೂ,ನೀವು ಅವರಿಗೆ ಪತ್ರ ಬರೆಯಲೇ ಸುಮಾರು ೫ ಲಕ್ಷ ರೂಪಾಯಿ ಬೇಕಾಗುತ್ತದೆ. ಅಷ್ಟು ಹಣವನ್ನು ಎಲ್ಲಿಂದ ತರುತ್ತೀರಿ? 7. ಪ್ರತಿತಾಲೂಕಿಗೂ ನಿಮ್ಮ ಕಾರಲ್ಲಿ ಬೇಟಿಕೊಡುವುದೇ ಆದಲ್ಲಿ ಕನಿಷ್ಠ  ಹತ್ತರಿಂದ ಹದಿನೈದು ಲಕ್ಷ ರೂಪಾಯಿ ಬೇಕಾಗುತ್ತದೆ. ಈ ದುಡ್ಡಿಗೇನು ಮಾಡುತ್ತೀರಿ? 8.ಹೋಗಲಿ ಚುನಾವಣೆ ಖರ್ಚಿಗೆಂದು ನೀವುಗಳೇನಾದರು ಪಾರ್ಟಿಫಂಡ್ ರೀತಿಯಲ್ಲಿ ಹಣ ಸಂಗ್ರಹಿಸುತ್ತೀರಾ? 9.ಹಾಗೆ ಸಂಗ್ರಹಿಸಿದರೆ ಕೊಟ್ಟವರ ಹೆಸರುಗಳನ್ನು ಸಾರ್ವಜನಿಕವಾಗಿ ಪ್ರಕಟಿಸುತ್ತೀರಾ? 10.ಯಾವುದಾದರು ರಾಜಕೀಯ ಪಕ್ಷಗಳ ಬೆಂಬಲ ನಿಮಗೆ ಇದೆಯಾ? ಇದ್ದರೆ ಯಾವ ಪಕ್ಷ (ಯಾವ ಕಾರಣ) ವಿವರಿಸುತ್ತೀರಾ? 11.ಚುನಾವಣಾ ಪ್ರಚಾರದ ಸಮಯದಲ್ಲಿ ಯಾವುದೇ ಜಾತಿ-ಧರ್ಮದ ಮಠ,ಮಂದಿರ,ಮಸೀಧಿ, ಚರ್ಚುಗಳಿಗೆ  ಹೋಗಿ ಜಾತಿ ಧರ್ಮದ ಹೆಸರಿನಲ್ಲಿ ಮತ ಕೇಳುವುದಿಲ್ಲವೆಂದು ಬಹಿರಂಗವಾಗಿ ಹೇಳಲು ನಿಮಗೆ ಸಾದ್ಯವಿದೆಯೆ? 12.ಇಷ್ಟು ವರ್ಷಗಳ ಕಾಲ ಪುರುಷ ಪುಂಗವರೇ ಕಸಾಪದ ಅದ್ಯಕ್ಷರಾಗಿದ್ದು ಸಾಕು, ಈಗಲಾದರು ಮಹಿಳೆಯೊಬ್ಬರು ಆ ಸ್ಥಾನಕ್ಕೇರಲೆಂದು ನಿಮಗೀವರೆಗೂ ಅನಿಸಲಿಲ್ಲವಾ?ಅನಿಸಿದ್ದರೆ ಈ ದಿಸೆಯಲ್ಲಿ ನೀವೇನಾದರು ದನಿಯೆತ್ತಿದ್ದೀರಾ? 13. ಇಷ್ಟೆಲ್ಲಾ ಖರ್ಚು ಮಾಡಿ ಗೆದ್ದ ಮೇಲೆ ಕಳೆದುಕೊಂಡ ಹಣವನ್ನು ಮರಳಿ ಗಳಿಸಲು ಏನೆಲ್ಲಾ ಮಾಡುತ್ತೀರಿ?  ಕೊನೆಯ ಪ್ರಶ್ನೆಗೆ ಕ್ಷಮೆಯಿರಲಿ: ಯಾಕೆಂದರೆ ನೀವು ಚುನಾವಣೆಗೆ ಖರ್ಚು ಮಾಡುತ್ತಿರುವು ಕಡಲೆಬೀಜಗಳಲ್ಲ ಲಕ್ಷಲಕ್ಷ ರೂಪಾಯಿಗಳು! ಉತ್ತರ ಕೊಡಲೇ ಬೇಕೆಂಬ ಕಡ್ಡಾಯವೇನಿಲ್ಲ.  ಇಂತಹ ಪ್ರಶ್ನೆಗಳನ್ನು ರಾಜಕಾರಣಿಗಳಿಗೆ ಕೇಳಿಕೇಳಿ ನಮಗೆ ಅಭ್ಯಾಸವಾಗಿ ಹೋಗಿದೆ……..ಆದರೆ ಕನ್ನಡ ಸಾಹಿತ್ಯ ಪರಿಷತ್ತಿನಂತಹ  ಸಂಸ್ಥೆಗೆ ಕಾಲಿಡಲು ಹೊರಟಿರುವ ತಮಗೆ  ಈ ಪ್ರಸ್ನೆಗಳ ಹಿಂದಿರುವ ಕಾಳಜಿಯನ್ನು ಅರ್ಥ ಮಾಡಕೊಳ್ಳುವ ಸೂಕ್ಷ್ಮತೆ ಇದೆಯೆಂದು ನಾವಂತೂ ನಂಬಿದ್ದೇವೆ ಇವೆಲ್ಲದರ ನಡುವೆಯೂ ಕನ್ನಡದ ಸೇವೆ ಮಾಡುವ  ತಮ್ಮ  ಉದ್ದೇಶಕ್ಕೆ ಶರಣು-ಶರಣು! ತಮ್ಮ ವಿಶ್ವಾಸಿಯಾದ ಕಸಾಪ ಮತದಾರ ******************************************** ಕು.ಸ.ಮಧುಸೂದನರಂಗೇನಹಳ್ಳಿ

ಕಸಾಪ ಅದ್ಯಕ್ಷಸ್ಥಾನದ ಅಭ್ಯರ್ಥಿಗಳಿಗಷ್ಟು ಪ್ರಶ್ನೆಗಳು! Read Post »

ನಿಮ್ಮೊಂದಿಗೆ

ಕೊರೆವ ನಡುಕವಂತೆ!

ಕವಿತೆ ಕೊರೆವ ನಡುಕವಂತೆ! ಸುವಿಧಾ ಹಡಿನಬಾಳ ಅವನ್ಯಾವನೊ ತಲೆಕಟ್ಟ ಸ್ವಾಮಿಯಂತೆಸ್ವಯಂ ಘೋಷಿತ ದೇವ ಮಾನವನಂತೆಬಿತ್ತಿದ ಇವರ ತಲೆಯಲಿ ಮೌಢ್ಯದ ಕಂತೆಕಲಿಯುಗದ ಅಂತ್ಯವಂತೆ ಸತ್ಯ ಯುಗದ ಆರಂಭವಂತೆಅದಕೆ ಮಾಡಬೇಕು ಮಕ್ಕಳ ಬಲಿದಾನವಂತೆ ಮುಠ್ಠಾಳ ತಾಯಿಯಿಂದಲೇ ಕುಡಿಗಳ ಕಗ್ಗೊಲೆಯಂತೆಇದಕೆ ತಂದೆಯ ಮೌನ ಸಾಥ್ ಅಂತೆಹೆಣಗಳ ಬಾಯಲಿ ಕಲಶ ಹೂಡಿದ್ದರಂತೆ!!ಮರುದಿನ ಮಕ್ಕಳ ಮರುಹುಟ್ಟಿಗೆ ಕಾದರಂತೆಮರಣೋತ್ತರ ಪರೀಕ್ಷೆಗೆ ಪ್ರತಿರೋಧವಂತೆ ಆ ತಾಯಿ ಬೇರೆ ಗೋಲ್ಡ್ ಮೆಡಲಿಸ್ಟಂತೆ!!!ಮಕ್ಕಳೂ ಡಿಗ್ರಿ ಮೆಟ್ಡಿಲೇರಿದ್ದವಂತೆಪಕ್ಕಾ ಇವರೆಲ್ಲರ ತಲೆಯೆಂಬುದು ಅಜ್ಞಾನದ ಬೊಂತೆಎತ್ತ ಸಾಗುತ್ತಿದೆ ವಿದ್ಯೆ ವಿಜ್ಞಾನ ಎಂಬ ಚಿಂತೆಕೇಳಿದವರ ಎದೆಯಲಿ ಕೊರೆವ ನಡುಕವಂತೆ!! ***************

ಕೊರೆವ ನಡುಕವಂತೆ! Read Post »

You cannot copy content of this page

Scroll to Top