ಸಂಪ್ರದಾಯದ ಸೊಬಗು

ಸಂಪ್ರದಾಯದ ಸೊಬಗು

ಅರುಣ್ ಕೊಪ್ಪ ಊರ ಬಾಗಿಲು ಮುಂದೆ ಭಯಭಕ್ತ ಕಲ್ಲುಗಳು, ತೀರಾ ಹಳೆಯವು ಅಲ್ಲಲ್ಲಿ ಹಾಲು ಸೋಕುವ ಮರಗಳು, ಮುಗಿದರೆ ಕೈ ದೇವರು, ಹಾಗೋ ಹೀಗೋ ಗಾಳಿ ಬಂದಾಗ ಬುಡಸಡಿಲವಾಗುವ ಭಯ ಮಹಾಮಯ ! ಮುಂಗಾರಮುಂದೆ ಮಾತು ಕಥೆ, ಅಂತೂ ಕುದುರಿಸಿಯೇ ಬಿಟ್ಟರು ಮಾರಿ ಹಬ್ಬವಂತೆ, ಕುರಿ ಕೋಳಿಯ ಜಾತ್ರೆ ಊರೊಳಗೆ, ಮುಟ್ಟು ಮೈಲಿಗೆ ಹೆಂಗಸರ ಸ್ಥಳಾಂತರ ಒಪ್ಪ, ವಾಗತಿಯಲಿ ಹಬ್ಬ ಸಜ್ಜು ಊರ ಹಬ್ಬದ ಸಲುವಾಗೆ ಶಣ್ಣಿ ಮದುವಿ ಮುಂದಾತು ಕಿವಿಗಿಲ್ಲ ಮೂಗಿಗಿಲ್ಲ ಎಲ್ಲ ದುಬಾರಿಮಯ.. ಇದ್ದದ್ದು […]

ಮುಖವಾಡ

ದಾಕ್ಷಾಯಣಿ ನಾಗರಾಜ್ ಮತ್ತೆ ಮುಸ್ಸಂಜೆಯಲಿ ಮುಸುಕಿನ ಗುದ್ದಾಟ ಆಗಷ್ಟೇ ಮುದ್ದೆಯಾದ ಹಾಸಿಗೆಯಲಿ ನಲುಗಿದ ಹೂಗಳ ಅಘ್ರಾಣಿಸಿ ತಡಕಾಡುತ್ತೇನೆ ಒಂದಷ್ಟಾದರೂ ನಿನ್ನ ಪ್ರೀತಿ ಘಮಲು ಉಳಿದಿದೆಯೇ ? ಪ್ರತಿಸಾರಿಯಂತೆಯೇ, ರವಷ್ಟು ಕೂಡ ಮುಲಾಜಿಲ್ಲದೆ ರಾಚುತ್ತದೆ ಮೂಗಿಗೆ ತುಸು ಕಾಮ ಮತ್ತಷ್ಟು ಗೆದ್ದೆನೆಂಬ ನಿನ್ನ ಅಹಂ,, ಜಾರಿದ ಕಣ್ಣಹನಿಗೆ ಜತನದಿಂದ ನಗುವಿನ ಮುಖವಾಡ ತೊಡಿಸಿಬಿಡುತ್ತೇನೆ ನೀನಿಲ್ಲದ ಮತ್ತೊಂದು ಮುಸ್ಸಂಜೆಯಲಿ ಮುಖವಾಡ ಕಳಚಿಟ್ಟು ನಿಂದಿಸುತ್ತೇನೆ ಹೇ ನಿರ್ದಯಿ ಬದುಕೇ ಅದೆಷ್ಟು ಮುಖವಾಡಗಳ ತೊಡಿಸುವೆ? ಜಾರಿಸುತ್ತಾ ಕಂಬನಿಗಳ ,,,, ದಾಕ್ಷಾಯಣಿ ನಾಗರಾಜ್ ಕವಿ […]

ಕಾವ್ಯನಮನ

ಕೆ.ಬಿ.ಸಿದ್ದಯ್ಯ ನಮ್ಮನ್ನು ಅಗಲಿದ ಕವಿ ಮತ್ತು ಅದ್ಭುತ ಸಂಘಟನಾಕಾರರಾದ ಹಿರಿಯ ಚೇತನ ಶ್ರೀ ಕೆ.ಬಿ.ಸಿದ್ದಯ್ಯನವರಿಗೆ ಸಂಗಾತಿ ಬಳಗ ಶ್ರದ್ದಾಂಜಲಿ ಸಲ್ಲಿಸುತ್ತಿದೆ ಕವಿಮಿತ್ರ ಶ್ರೀಬಿದಲೋಟಿರಂಗನಾಥ್ ಅವರ ಕವಿತೆಯ ನುಡಿ ನಮನ ಹೊಳೆದು ಉರುಳಿದ ನಕ್ಷತ್ರ ಕೆ ಬಿ ಸಿದ್ದಯ್ಯ ಕತ್ತಲೊಡನೆ ಮಾತಾಡುತ್ತ ದಕ್ಲದೇವಿ ಕಥೆಗಳನ್ನು ಹೇಳುತ್ತ ಗಲ್ಲೆಬಾನಿಯಲಿ ನೆನಪುಗಳ ಕಲೆಸಿದ ಬಕಾಲ ಮುನಿಯೇ… ನಿಮ್ಮದು ಚಿಟ್ಟೆಗೆ ಜೀವ ತುಂಬಿದ ಜೀವ. ಮೌನದಲಿದ್ದು ನಲುಗಿ ಒಂದು ಮಾತೂ ಹೇಳದೆ ಎದ್ದೋದ ಕರುಳು ಬಂಧುವೇ… ಇಷ್ಟು ಬೇಗ ಹೋಗಬೇಕಿತ್ತೆ ? ನಿಮ್ಮ […]

ಪ್ರಬಂದ

ಶ್ರಮಜೀವಿ ಜೇನ್ನೊಣಗಳು ನಾಗರಾಜ ಮಸೂತಿ ಶ್ರಮಜೀವಿಗಳಲ್ಲಿ ಒಂದಾದ ಜೇನುಹುಳು ಶ್ರಮದಿಂದಲೇ ತನ್ನ ಆಯಸ್ಸನ್ನು ಕಡಿಮೆ ಮಾಡಿಕೊಳ್ಳುವಂತೆ ಶ್ರಮವಹಿಸಿ ದುಡಿಮೆ ಮಾಡುತ್ತದೆ. ಇದರ ಆಯಸ್ಸು ಸುಮಾರು ಒಂದು ತಿಂಗಳು ಅಥವಾ ಮೂವತ್ತು ದಿನಗಳು ಮಾತ್ರ. ಚಗಳಿ ಇರುವೆಯ ಜೀವನ ಶೈಲಿಯನ್ನು ಹೋಲುವ ಜೇನುಹುಳು ಎಲ್ಲರ ಕೋಪಕ್ಕೆ ತುತ್ತಾದರೆ ಅದರ ಶ್ರಮದ ಫಲ ಜೇನು ಹನಿ ಮಾತ್ರ ಎಲ್ಲರ ಪ್ರೀತಿಗೆ ಪಾತ್ರವಾಗಿದೆ. ಬಹುಶಃ ಜೇನುತುಪ್ಪ ಇಷ್ಟ ಪಡದ ವ್ಯಕ್ತಿ ಭೂಮಿಯ ಮೇಲೆ ಇರಲಿಕ್ಕಿಲ್ಲ. ಈ ಜೇನುಹನಿಯನ್ನ ಪೇರಿಸಲು ಅದು ಪಡುವ […]

ಅಂಕಣ

ಮುಟ್ಟು! ಚಂದ್ರಪ್ರಭ ಮುಟ್ಟು .. ಮುಟ್ಟು.. ಮುಟ್ಟು.. ಪ್ರಜಾವಾಣಿ ಭಾನುವಾರದ ಪುರವಣಿ (೨೩/೧೦/೧೯) ಯಲ್ಲಿ ಬಾನು ಮುಷ್ತಾಕ್ ರವರ ಲೇಖನ  “ಮುಟ್ಟು ಮುಟ್ಟೆಂದೇಕೆ..?”  ಓದುವಾಗ ‘ಮುಟ್ಟು’ ಕುರಿತು ಹತ್ತಾರು ಸಂಗತಿಗಳು ತಲೆಯಲ್ಲಿ ಸುಳಿದಾಡತೊಡಗಿವೆ. ನಮ್ಮ ಬಾಲ್ಯ ಕಾಲಕ್ಕಿಂತ ಈಗ ಸ್ವಲ್ಪ ಮಟ್ಟಿಗೆ ಧೋರಣೆಗಳು ಬದಲಾಯಿಸಿದಂತೆ ತೋರುವುದಿದೆ. ಆಗ ಅದನ್ನು ಕುರಿತು ಹೆಣ್ಮಕ್ಕಳು ತಮ್ಮ ತಮ್ಮಲ್ಲಿಯೂ ಮುಕ್ತವಾಗಿ ಮಾತನಾಡಲು ಹಿಂಜರಿಕೆಯಿತ್ತು. ಆಗ ಆ ಸಂಗತಿ ಮಕ್ಕಳು, ಇತರರ ತಿಳಿವಳಿಕೆಗೆ ಬರುವ ಸಂಭವನೀಯತೆ ಇದ್ದುದು ತೀರ ಕಡಿಮೆ. ತರಗತಿಯಲ್ಲಿ ಅಂಡಾಣು, […]

ಅಂಕಣ

ನೋಟ! ಕಮಲಾ ಹೆಮ್ಮಿಗೆ ಮೂರು ಬೆಟ್ಟದ ತಪ್ಪಲ ಮದ್ಯದಲ್ಲಿ ಆಡುವ ಹಿಡಿದು ಮೇಯಿಸುತ್ತಿರಲಾಗಿ ಅಡ್ಡ ಬೆಟ್ಟದಲ್ಲಿ ದೊಡ್ಡ ಹುಲಿ ಹುಟ್ಟಿ ಹಾಯಿತ್ತು ಹಸುವ ಉದ್ದಿಹ ಬೆಟ್ಟದಲ್ಲಿ ಭದ್ರ ಗಜ ಬಂದು ಎಸೆದಿತ್ತು ಎತ್ತ ಮಧ್ಯದ ಬೆಟ್ಟದಲ್ಲಿತೋಳ ಕೋದಿತ್ತು  ಕರುವಿನ ಕರುಳ ಕಿತ್ತು ಹುಲಿ,ಗಜ,ತೋಳನ ಉಡ ನುಂಗಿದ್ದ ಕಂಡೆ ಗೋಪತಿನಾಥ ವಿಶ್ವೇಶ್ವರ ಲಿಂಗವನರಿಯಲಾಗಿ……      ಹನ್ನೆರಡನೆಯ ಶತಮಾನದ ತಳಮಟ್ಟದಿಂದ ಬಂದು ಜ್ಞಾನ ಪ್ರಸಾರ ಮಾಡಿದ  ಅಂಬಿಗರ ಚೌಡಯ್ಯ,ನುಲಿಯ ಚಂದಯ್ಯ,ಹೆಂಡದ ಮಾರಯ್ಯ, ಉರಿಲಿಂಗ ಪೆದ್ದಿ,ಕದಿರ  ರೇಮವ್ವೆ, ಕಾಳವ್ವೆ ಮುಂತಾದವರ ಗುಂಪಿನಲ್ಲಿ […]

ಅನುವಾದ

ತೆಲುಗು ಮೂಲ- ಡಾ.ಕತ್ತಿ ಪದ್ಮಾರಾವು ಕನ್ನಡಕ್ಕೆ ನಾರಾಯಣಮೂರ್ತಿ ಬೂದುಗೂರು ಯಾರು ಕೊಲೆಪಾತಕರು? ಸಮುದ್ರ ಹಿಮದಿಂದ ಗಾಢವಾಗಿ ಗಡ್ಡೆಕಟ್ಟಿದೆ ನಡುವೆ ಒಂದು ನೀರಿನ ಝರೀ ತಿಮಿಂಗಲಗಳು ಈಜುತ್ತಾ ಸಾಗುತ್ತಿವೆ ಹೆಚ್ಚಾಗಿ ಇಬ್ಬನಿ ಸುರಿದಾಗ, ಅವಕ್ಕೆ ಉಸಿರಾಡಲು ಕಷ್ಟವೆನಿಸುತ್ತದೆ ಈಗ ತಿಮಿಂಗಲಗಳದೇ ಬೇಟೇ ಬಲೆಗಳೆಲ್ಲಾ ಖಾಲೀ,ಖಾಲೀ ಬಿದ್ದಿವೆ ಇತ್ತೀಚೆಗೆ ಮೀನುಗಳೂ… ಬಲೆಯನ್ನು ಗುರ್ತು ಹಚ್ಚುತ್ತಿವೆ. ಆ ಕಾಲುವೆ ಬದಿಯಲ್ಲಿ ತುಂಬಾ ನಾಯೀಕೊಡೆಗಳ ಸಾಲು ರಸ್ತೆ ಒದ್ದೆ ಒದ್ದೆಯಾಗಿ ಕಿರುಪಾದಗಳ ಸಪ್ಪಳಕೆ ನೀರು ಚೆಲ್ಲುತಿದೆ. ಮನುಷ್ಯನಿಗೆ  ಈ ಚಳೀಯಲ್ಲೂ ಬೆವರು ಕಿತ್ತುಬರುತ್ತಿದೆ […]

ಮಕ್ಕಳ ವಿಭಾಗ

ಕೆಂಚಬೆಕ್ಕಿಗೆ ಏನಾಯ್ತು? ವಿಜಯಶ್ರೀ ಹಾಲಾಡಿ ಕೆಂಚಬೆಕ್ಕಿಗೆ ಏನಾಯ್ತು ಬಾಲವು ಪೂರಾ ಮಣ್ಣಾಯ್ತು ಗಡಗಡ ಚಳಿಗೆ ಬಿಸಿಬಿಸಿ ಬೋಂಡಾ ಪಾಕಂಪಪ್ಪನು ತಿಂದಾಯ್ತು ಕೆಂಚಬೆಕ್ಕಿಗೆ ಏನಾಯ್ತು ಬಾಲವು ಪೂರಾ ಮಣ್ಣಾಯ್ತು ಮೀನಿನ ಮುಳ್ಳು ದೊಂಡೆಗೆ ಸಿಕ್ಕಿ ಕೆಮ್ಮಿ ಕೆಮ್ಮಿ ಸುಸ್ತಾಯ್ತು ಕೆಂಚಬೆಕ್ಕಿಗೆ ಏನಾಯ್ತು ಬಾಲವು ಪೂರಾ ಮಣ್ಣಾಯ್ತು ಗಡವ ಬೆಕ್ಕು ಹೊಯ್ ಕಯ್ ಮಾಡಿ ಕಾಲಿನ ಮೂಳೆ ಮುರಿದಾಯ್ತು ಕೆಂಚಬೆಕ್ಕಿಗೆ ಏನಾಯ್ತು ಬಾಲವು ಪೂರಾ ಮಣ್ಣಾಯ್ತು ಟ್ರಾಫಿಕ್ ಜಾಮಲಿ ರಸ್ತೆಯ ಕಾದು ಬೋರು ಬೋರು ಹೊಡೆದಾಯ್ತು ಕೆಂಚಬೆಕ್ಕಿಗೆ ಏನಾಯ್ತು ಬಾಲವು […]

ಶಾನಿಯ ಡೆಸ್ಕಿನಿಂದ…

ಚಂದ್ರಾವತಿ ಬಡ್ಡಡ್ಕ ನಾನು- ಛೇ ನೀವು ಎಲ್ಲಿ ಹೋದ್ದು? ಸಚಿನ್ ಸರೀ ಹೊಡ್ದ, ನೋಡ್ಬೇಕಿತ್ತು… ಅಮ್ಮ- ಹೊಡ್ದನಾ…. ಯಾರಿಗೆ ಹೊಡ್ದಾ? ಆಚೆ ಪಾರ್ಟಿಯವನಿಗೆ ಹೊಡ್ದದ್ದದ್ದಾ…. ಯಾಕೆ ಹೊಡ್ದದ್ದು…? ಶ್ರೀಪತಿ- ಅಲ್ಲಮ್ಮಾ ರನ್ ಬಾರಿಸಿದ. ಅಮ್ಮ- ಹ್ಞಾ.. ಹಾಗಾ…. ನಾನು ಆಚೆ ಪಾರ್ಟಿಗೆ ಹೊಡ್ಡದ್ದದ್ದಾ ಅಂತ ನೆನ್ಸಿದೆ. ನಾನು- ಹ್ಹೋ…. ವೋ….. ವಿಕೆಟ್…. ಇಲ್ಲ ಥರ್ಡ್ ಅಂಪಾಯರ್ ಅಮ್ಮ- ಏನಾಯ್ತು….ಏನಾಯ್ತು… ನಾನು- ಸ್ವಲ್ಪ ಇರಿ…. ಧರ್ಡ್ ಅಂಪಾಯರ್‌ಗೆ ಹಾಕಿದ್ದಾರೆ ಅಮ್ಮ- ಅದ್ಯಾರು? ನಾನು- ವಿವರಿಸಿ ಎಂಬಂತೆ ಇವರತ್ತ ನೋಡಿದೆ. […]

ಅಂತರಂಗದ ಅಲೆಗಳು

                         ಸುಜಾತ ರವೀಶ್ ಹೌದು. ಮನವೆಂಬುದು ಅದೆಷ್ಪೋ ಲಕ್ಷ GBಗಳಾಗಿಂತ ಶಕ್ತಿಯುತ ಚಿಪ್. ಅಂತರಾಳದ ಪದರ ಪದರಗಳಲ್ಲಿ ಅಸಂಖ್ಯಾತ ನೆನಪಿನಲೆಗಳೇಳುತ್ತಲೇ ಇರುತ್ತವೆˌ ಈ ಭರತಕ್ಕೆ ಹುಣ್ಣಿಮೆ ಅಮಾವಾಸ್ಯೆಗಳ ಹಂಗಿಲ್ಲ. ಅವಿರತ ನಿರಂತರ ಅನಂತ.ಎಂದೋ ಎಲ್ಲೋ ಆದ ಅನುಭವದ ನೆನಹು ಇನ್ನೆಂದೋ ಇನ್ನೆಲ್ಲೋ ಧುತ್ತನೆ ಮನದಂಗಳದಲಿ ಪ್ರತ್ಯಕ್ಷ.ಕವಿವಾಣಿ ನುಡಿದಂತೆ “ಹಿಂದೆ ಯಾವ ಜನ್ಮದಲ್ಲೋ ಮಿಂದ ಪ್ರೇಮಜಲದಾ ತಂಪು” ಇಂದಿಗೂ ತಾಜಾ ತಾಜಾ ಹಸಿ ಹಸಿ. ಇವತ್ತು ಬರೆಯಹೊರಟಿರುವ ವಿಷಯ ತುಂಬಾ ದಿನದಿಂದ ಮನದಲ್ಲಿತ್ತು. ಮುಂದೂಡೂತ್ತಲೇ  ಇದ್ದೆ. ಹಾಗಾಗಿ ಈಗ […]

Back To Top