ಅನುವಾದ ಸಂಗಾತಿ

ಅನುವಾದ ಸಂಗಾತಿ

ಮೂಲ: ಅರುಣ್ ಕೊಲ್ಜಾಟ್ಕರ್ ಮಹಾರಾಷ್ಟ್ರದ ದ್ವಿಭಾಷಾ ಕವಿ ಅನುವಾದ:ಕಮಲಾಕರ ಕಡವೆ ಮುದುಕಿ ಮುದುಕಿಅಂಗಿ ಅಂಚನು ಹಿಡಿದುಬೆನ್ನು ಬೀಳುತ್ತಾಳೆ. ಅವಳು ಬೇಡುತ್ತಾಳೆ ಎಂಟಾಣೆಕುದುರೆ ಲಾಳದ ಮಂದಿರ ನಿಮಗೆತೋರಿಸುವಳಂತೆ ನೀವದನ್ನು ಅದಾಗಲೇ ನೋಡಿದ್ದೀರಿಅಂದರೂ ಕುಂಟುತ್ತ ಬರ್ತಾಳೆ ಹಿಂದೆಬಿಗಿಯಾಗಿ ಹಿಡಿದು ಅಂಗಿ ಅಂಚನು ನಿಮಗೆ ಹೋಗಗೊಡುವುದಿಲ್ಲ ಅವಳುಗೊತ್ತಲ್ಲ, ಮುದುಕಿಯರ ಪರಿಹತ್ತಿ ಹೂವಂತೆ ಅಂಟಿಕೊಳ್ಳುವರು ತಿರುಗಿ ಎದುರಿಸುವಿರಿ ನೀವುಅವಳನ್ನು, ಈ ಆಟ ಮುಗಿಸುವಖಡಾಖಂಡಿತ ನಿಲುವಲ್ಲಿ ಅವಳಾಗ ಅನ್ನುತ್ತಾಳೆ: “ಇನ್ನೇನುಮಾಡಿಯಾಳು ಮುದುಕಿಯೊಂಟಿಇಂಥ ದರಿದ್ರ ಕಲ್ಲುಗುಡ್ಡಗಳಲ್ಲಿ?” ನೀವು ನೋಡುತ್ತೀರಿ. ನಿರಾಳ ಆಕಾಶಅವಳ ಗುಂಡು ಕೊರೆದ ತೂತಿನಂತಹಕಣ್ಣುಗಳ […]

ಪ್ರಬಂಧ

ಒಂದು ವಿಳಾಸದ ಹಿಂದೆ ಸ್ಮಿತಾ ಅಮೃತರಾಜ್. ಸಂಪಾಜೆ. ವಿಳಾಸವಿಲ್ಲದವರು ಈ ಜಗತ್ತಿನಲ್ಲಿ ಯಾರಾದರೂ ಇರಬಹುದೇ?. ಖಂಡಿತಾ ಇರಲಾರರು ಅಂತನ್ನಿಸುತ್ತದೆ. ಇಂತಹವರ ಮಗ, ಇಂತಹ ಊರು,ಇಂತಹ ಕೇರಿ,ಇಂತಹ ಕೆಲಸ..ಹೀಗೆ ಇಂತಹವುಗಳ ಹಲವು ಪಟ್ಟಿ  ಹೆಸರಿನ ಹಿಂದೆ ತಾಕಿಕೊಳ್ಳುತ್ತಾ ಹೋಗುತ್ತದೆ.  ವಿಳಾಸವೊಂದು ನಮ್ಮ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆಯೆಂಬ ಮಾತನ್ನು ನಾವ್ಯಾರು ಅಲ್ಲಗಳೆಯುವ ಹಾಗಿಲ್ಲ. ಯಾವುದೇ ಆಮಂತ್ರಣ ಪತ್ರವಾಗಲಿ, ದಾಖಲೆಗಳಾಗಲಿ ವಿಳಾಸವಿಲ್ಲದಿದ್ದರೆ ಅಪೂರ್ಣವಾಗುತ್ತದೆ.  ಪರಿಪೂರ್ಣ ವಿಳಾಸವಂತೂ ಇವತ್ತಿನ ಆಧುನಿಕ ಯುಗದ ಜರೂರು ಕೂಡ.  ನಮಗೆಲ್ಲ ಗೊತ್ತಿರುವಂತೆ  ಅಕ್ಷರಾಭ್ಯಾಸ ಮಾಡಿ ಶಾಲೆ […]

ಸ್ವಾತ್ಮಗತ

ರೈತ ದಿನಾಚರಣೆ ಕೆ.ಶಿವು ಲಕ್ಕಣ್ಣವರ್ ಬೆವರು ಕಂಬನಿ ರಕುತವ ಸುರಿಸಿ, ನೆಲವನು ತಣಿಸಿ, ಕೆಸರಿನಿಂದ ಅಮೃತಕಲಶನೆತ್ತಿ ಕೊಡುತಿರುವ ರೈತನ ದಿನಾಚರಣೆ ಇಂದು..! ಇಂದು ಡಿಸೆಂಬರ್ 23. ಅಂದರೆ ರೈತ ದಿನಾಚರಣೆ. ಈ ದಿನಾಚರಣೆ ನಮ್ಮೆಲ್ಲರ ಊಟವನ್ನು ಮಾಡಿಸುತ್ತಿರುವ ರೈತನ ನೆನೆ, ನೆನೆದು ಉಣ್ಣುವ ದಿನ… ಆ ನಿಮಿತ್ಯ ರೈತನನ್ನು ನೆನೆವ ಲೇಖನವಿದು… ಗದ್ದೆ ಕೆಸರನು ಕುಡಿದು ಕಾಡು ಮುಳ್ಳನು ಕಡಿದು, ಮುಂಜಾನೆಯಿಂದ ಸಂಜೆಯವರೆಗೆ ದುಡಿದುಡಿದು ಚಳಿಯೋ ಮಳೆಯೋ ಬಿಸಿಲೋ ಬೇಗೆಯಲ್ಲವ ಸಹಿಸಿ, ಬೆವರು ಕಂಬನಿ ರಕುತವ ಸುರಿಸಿ, […]

ಕಾವ್ಯಯಾನ

ಥೇಟ್ ನಿನ್ನ ಹಾಗೆ! ಸಂತೆಬೆನ್ನೂರು ಫೈಜ್ನಾಟ್ರಾಜ್ ಅದೇ ಹಾಡು ತುಟಿಗೆ ಬಂದು ವಾಪಾಸಾಯಿತು ಏಕೋ ಏನೋ ಹೀಗೆ ರಸ್ತೆಯ  ಕೊನೇ ತಿರುವಲ್ಲಿ ಕಾದಿರು ಈಗ ಬಂದೆ ಎಂದು ಮಾಯವಾದ ಥೇಟ್ ನಿನ್ನ  ಹಾಗೆ! * ಕಾಫಿಯ ಘಮವೋ ಮುಡಿದ ಮಲ್ಲಿಗೆ ಗಂಧವೋ… ಉಳಿದ ಮಾತುಗಳು ಹೇಳಲಾರದೇ ಖಾಲಿಯಾದವು…. ನಿನ್ನಂತೆ! * ನೂರು ಮಾತುಗಳು ಆಡಿದರೇನು ಬರಿದೆ; ಚಹ ಪುಡಿಯಿಲ್ಲದ ಚಹ ಕುಡಿದಂತೆ ಬರಿದೆ! * ಮುಳ್ಳ ಬೆನ್ನ ಮೇಲೆಯೇ ಗುಲಾಬಿ ಕೆಸರ ಸೊಂಟದ ಪಕ್ಕದಲ್ಲೇ ಕಮಲ ಮಣ್ಣ […]

ಕಾವ್ಯಯಾನ

ಗಝಲ್ ಅರುಣ್ ಕೊಪ್ಪ ನೀನು ನಗುತ್ತಿಲ್ಲ,ತಾರೆಯಾ ಹೊದ್ದು ಭೂಪನಂತಿದ್ದರೂ ಅಹಂಕಾರವಿಲ್ಲದ ನಿಗರ್ವಿ ನೀನು ನಿನಗಾಗಿ ಅಲ್ಲವೆ ನೀನು ಕಪ್ಪಾದ ಪಂಜರದಲ್ಲಿ ಮೌನ ಸಾಕಿ ಬೀಗುವದಿಲ್ಲ ಬಡಾಯಿ ಕೊಚ್ಚೊ ಬೊಗಳೇದಾಸನಾ ನೀನು ನಿನಗಾಗಿ ಅಲ್ಲವೆ ಮುಳ್ಳು ಮೈಗೆ ಆವರಿಸಿದರೂ ಮೊಗ ನಗು ಮೊಗ್ಗು ಹೂವುಗಳು ಕೆಲ ತಾವುಗಳಲಿ ಸುರಸುಂದರಿ ನೀನು ನಿನಗಾಗಿ ಅಲ್ಲವೆ ಸುತ್ಮೂರು ಹಳ್ಳಿಗಳ ಹಿಶೆ, ನ್ಯಾಯಕೆ ಜಗರಿ ಕೂರುವ ಒಂಟಿ ಸಲಗದಂತೆ ಬೇಕು ಬೇಡಗಳ ನುಂಗಿ, ತಂಪು ಚೆಲ್ಲುವ ತಂಗಾಳಿ ಆಲ ನೀನು ನಿನಗಾಗಿ ಅಲ್ಲವೆ […]

ಸ್ವಾತ್ಮಗತ

ಚಿಂದೋಡಿ ಲೀಲಾ ನಾಟಕರಂಗದ ಒಂದು ಸಾಹಸ ಪಯಣ ಕೆ.ಶಿವು ಲಕ್ಕಣ್ಣವರ್ ಸುಮಾರು ಎಂಟು ದಶಕಗಳ ಇತಿಹಾಸವುಳ್ಳ ಕನ್ನಡ ವೃತ್ತಿ ನಾಟಕ ಮಂಡಲಿಯ ಒಡತಿ. ಶತಮಾನೋತ್ಸವ, ಸಹಸ್ರಮಾನೋತ್ಸವಗಳನ್ನಾಚರಿಸಿದ ನಾಟಕಗಳ ಪ್ರಧಾನ ಅಭಿನೇತ್ರಿ ಚಿಂದೋಡಿ ಲೀಲಾ ಅವರು… ಕನ್ನಡ ವೃತ್ತಿರಂಗ ಭೂಮಿಯಲ್ಲಿ ಇನ್ನೂ ಸರಿಗಟ್ಟಲಾಗದ ದಾಖಲೆಗಳನ್ನು ಸ್ಥಾಪಿಸಿದ ಸಾಹಸಿ. ಜನ್ಮ ದಾವಣಗೆರೆಯಲ್ಲಿ 1941ರಲ್ಲಿ… ತಂದೆ ಚಿಂದೋಡಿ ವೀರಪ್ಪನವರು. ಪ್ರಖ್ಯಾತ ಗಾಯಕರು, ನಟರೂ ಆಗಿದ್ದವರು. ತಾಯಿ ಶಾಂತಮ್ಮ ಗೃಹಿಣಿಯಾಗಿದ್ದರು… ಚಿಂದೋಡಿ ವೀರಪ್ಪ ದಾವಣಗೆರೆಯಲ್ಲಿ ಸ್ಥಾಪಿಸಿದ್ದ ‘ಶ್ರೀಗುರು ಕರಿಬಸವ ರಾಜೇಂದ್ರ ನಾಟಕ’ ಮಂಡಳಿ […]

ಅನುವಾದ ಸಂಗಾತಿ

ಮೂಲ-ಜಯಂತ ಮಹಾಪಾತ್ರ ಒರಿಸ್ಸಾದ ಭಾರತೀಯ ಆಂಗ್ಲ ಕವಿ ಅನುವಾದ–ಕಮಲಾಕರ ಕಡವೆ “ಪುರಿಯಲ್ಲಿ ಬೆಳಗು” ಕೊನೆಯಿರದ ಕಾಗೆಗಲಭೆಪವಿತ್ರ ಮರಳಲ್ಲಿ ತಲೆಬುರುಡೆಯೊಂದುಹಸಿವಿನೆಡೆಗೆ ವಾಲಿಸುತ್ತದೆ ಖಾಲಿ ದೇಶವನ್ನು. ಬಿಳಿತಳೆದ ವಿಧವೆಯರುತಮ್ಮ ಬಾಳಿನ ಮಧ್ಯದಾಚೆಮಹಾಮಂದಿರದೊಳಗೆ ಹೊಗಲು ಕಾದಿದ್ದಾರೆ. ಅವರ ವಿರಕ್ತ ಕಣ್ಣುಗಳುಬಲೆಯಲ್ಲಿ ಸಿಕ್ಕಿಬಿದ್ದವರಂತೆ ದಿಟ್ಟಿಸುತ್ತವೆ,ಬೆಳಬೆಳಗ್ಗೆ ಶ್ರದ್ಧೆಯ ಬೆಳಗಿನೆಳೆಗೆ ಜೋತುಬಿದ್ದು. ನಿತ್ರಾಣ ಮುಂಜಾನೆ ಬೆಳಕಿಗೆ ಬಿದ್ದಿವೆಒಂದನಿನ್ನೊಂದು ಆತಿರುವ ಪಾಳು ತೊನ್ನುಭರಿತ ಚಿಪ್ಪುಗಳು,ಹೆಸರಿರದೆ ಕುಗ್ಗಿಹೋದ ಮುಖಗಳ ಮುಂದೆ, ತಟ್ಟನೆ ನನ್ನ ತೊಗಲೊಳಗಿಂದ ಹೊರಬೀಳುವ ಬಿಕ್ಕುಸೇರುತ್ತದೆ ಏಕಾಕಿ ಮಂಕು ಚಿತೆಯೊಂದರ ಹೊಗೆಯನನ್ನ ಮುದಿ ಅಮ್ಮನ ಕವಿಯುವ ಧಗೆಯ: […]

ಕಾವ್ಯಯಾನ

ಮೌನದ ಹಾಡು ದೇವು ಮಾಕೊಂಡ, ಸಿಂದ್ಗಿ ಇಳಿಸಂಜೆಯ ಒಬ್ಬಂಟಿತನದಲಿ ಮೈನೆರೆದು ನಿಂತ ಮುಳ್ಳುಕಂಟಿಗಳ ನಡುವೆ ಬೆಣ್ಣೆಯುಂಡೆಯಾಗಿದ್ದೇನೆ ಹೆಪ್ಪುಗಟ್ಟಿವೆ ಕ್ರೀಯೆಗಳು ಬಂಡೆಗಲ್ಲಿನ ಹಾಗೆ ಪತರಗುಟ್ಟುತ್ತಿವೆ ಭಾವಗಳು ಚಪ್ಪರದಂತೆ ನಿಷ್ಕ್ರೀಯಗೊಂಡಿದೆ ಚಲನೆ ಸೀಮೆಗಲ್ಲಿನಷ್ಟು ಮಧು ಕುಡಿದು ಎದೆಚುಚ್ಚುವ  ರಣಹದ್ದುಗಳದ್ದೇ ಕಾರುಬಾರುವಿಲ್ಲಿ ಅದಕ್ಕೆಂದೆ ಹೂವುಗಳು ರಾತ್ರಿಯೆದ್ದು ಹಗಲು ಮಲಗುತ್ತವೆ ಕರಾಳ ಬೆಳಕಿಗಂಜಿ ಹೆಪ್ಪುಗಟ್ಟಿದ ಬೆಳಕಿಗೆ ನೆರಳುಗಳಾಡಿಸುವ  ಹಗಲು ರಾತ್ರಿಗಳ ಪಂಜೆಗಳು ವಿಭೇದಿಸುವ ಕಪ್ಪು ನೆಲವೇ ರೂಪರೇಖೆ ನಮ್ಮೊಳಗಿನ ಮೌನದ ಹಾಡೆ ಸುಖದ ಹೆರಿಗೆ

ಅನುವಾದ ಸಂಗಾತಿ

ಲೋರ್ನ್ ಗುಡಿಸನ್(1947

ಜಮೈಕಾ ದೇಶದ ಕವಿಯಿತ್ರಿ

ಕೆರಿಬಿಯನ್ ಕಾವ್ಯ

ಅನುವಾದ-ಕಮಲಾಕರ ಕಡವೆ

ಗಝಲ್

ಗಝಲ್ ಸುಜಾತ ರವೀಶ್ ಬಾಳಬಾನಲಿ ಹೊಂಬೆಳಕಾಗಿ ಬಂದೆ ಏನಿರಲಿಲ್ಲ ಕಾರಣ ಇಂದೀಗ ಅಮಾವಾಸ್ಯೆಯ ಕಗ್ಗತ್ತಲು ತಿಳಿಯುತ್ತಿಲ್ಲ ಕಾರಣ ಜೀವನವನದಿ ಅರಳಿ ನಗುತ್ತಿದ್ದವು ಸುಂದರ ಹೂಗಳು ಈಗೆಲ್ಲಾ ಬರೀ ಬೋಳು ಬರಡು ಅರಿಯಲಾಗುತ್ತಿಲ್ಲ ಕಾರಣ ಜೀವ ವೀಣೆ ಮಿಡಿದು ಅಂದು ಹೊರಟಿತ್ತು ಒಂದು ಸುಶ್ರಾವ್ಯ ಗಾನ ತಂತಿ ಏಕೋ ಮುರಿದು ಅಪಸ್ವರ ಕೇಳಲಾಗುತ್ತಿಲ್ಲ ಕಾರಣ ಹೊಸ ಹೊಸ ಆಸೆ ತರಂಗಗಳು ಗಗನದೆತ್ತರ ವಿಸ್ತಾರ ಅಗಲಿಕೆಯ ಬಿರುಗಾಳಿ ಏಕೆ ಹೇಳಲಾಗುತ್ತಿಲ್ಲ ಕಾರಣ ಹಂಬಲಗಳ ನವ ಕನಸುಗಳು ಮೂಡಿಸಿದ್ದವು ಚಿತ್ತಾರ ದುಃಖಿತೆ […]

Back To Top