ಕವಿತೆ ಕಾರ್ನರ್

ಕವಿತೆ ಕಾರ್ನರ್

ಆತ್ಮಸಾಕ್ಷಿ ನನ್ನ ಮುಂದೆ ನಡೆಎಂದು ನಾನು ಕೇಳುವುದಿಲ್ಲ ನನ್ನ ಹಿಂದೆ ಬಾಎಂದು ನಾನು ಹೇಳುವುದಿಲ್ಲ ನನ್ನ ಎಡಕ್ಕೆ ಇಲ್ಲಾ ಬಲಕ್ಕೆಬಾಎಂದು ನಾನು ಭೇಡುವುದಿಲ್ಲ! ನಾ ನಕ್ಕಾಗನನ್ನೊಡನೆ ನಗು ನಾ ಅತ್ತಾಗನನ್ನೊಡನೆ ಅಳು ನಾ ನಡೆವಾಗ ನನ್ನ ನೆರಳಾಗಿರುನಾ ನುಡಿವಾಗ ನನ್ನ ಕೊರಳಾಗಿರುಎಂದೂ ಕೇಳುವುದಿಲ್ಲ! ಹೇಗೆ ನಾನುನಡೆಯುತ್ತೇನೆಯೊನನ್ನ ಆತ್ಮಸಾಕ್ಷಿಯ ಹಾಗೆ! ನೀನೂ ನಡೆನಿನ್ನ ಆತ್ಮಸಾಕ್ಷಿಯ ಹಾಗೆಅಂತಲಾದರೂನಾನು ಯಾಕೆ ಹೇಳಲಿ?

ಅನಿಸಿಕೆ

ಹೆಣ್ಣಿನ ಮೇಲಿನ ನಿರಂತರ ಅತ್ಯಾಚಾರ ಐಶ್ವರ್ಯ ತನ್ನ ಮೂರು ವರ್ಷದ ಹೆಣ್ಣು ಮಗುಗೆ ಮನೆಯಿಂದಾಚೆ ಕಳಿಸ್ಬೆಕಾದ್ರೆ ಒಬ್ಬ ತಾಯಿ ಹಾಕಿದ್ದ ಕಾಲ್ ಗೆಜ್ಜೆ, ಕೈಬಳೆ, ಹೂವೆಲ್ಲ ತೆಗೆದು ಗಂಡ್ಮಕ್ಕಳ ತರ ತಲೆಗೆ ಎಣ್ಣೆ ಹಾಕಿ ಕ್ರಾಪ್ ಬಾಚಿ ಹುಡ್ಗುರ ಬಟ್ಟೆ ಹಾಕಿದ್ದು ನೋಡಿ ನಾನ್ ಅನ್ಕೊಂಡೆ ಅವರಿಗೆ ಪಾಪ ಗಂಡ್ಮಗು ಅಂದ್ರೆ ಇಷ್ಟ ಅನ್ಸತ್ತೆ ಅವರಿಗೆ ಗಂಡು ಮಗು ಇಲ್ಲ ಅನ್ಕೊಳ್ತಿದ್ದ ಹಂಗೆನೆ ಮನೆಯಿಂದ ಆಚೆ ಅಳುತ್ತ ಅವರ ಮಗ ಬಂದು ನನ್ ಬಟ್ಟೆ ಯಾಕೆ ಅವಳಿಗೆ […]

ಯಾತನೆಯ ದಿನಗಳು

ಇವು ಯಾತನೆಯ ದಿನಗಳುರಾಜಕೀಯ ಪರಿಬಾಷೆಯಲ್ಲಿ ಬಣ್ಣಿಸಲಾಗದಂತಹ,ಕವಿತೆಗಳನ್ನಾಗಿಸಲೂ ಸಾದ್ಯವಿರದಂತಹ-ಕತೆಗಳನ್ನಾಗಿಸಲೂ ಸಂಯಮವಿರದಂತಹ ಕಾಲ! ಅದೆಲ್ಲೊ ಆಧಾರ್ ಲಿಂಕ್ ಇರದೆಹಸಿವಿನಿಂದ ಹೆಣ್ಣು ಮಗುವೊಂದು ಸಾಯುತ್ತದೆಅದೆಲ್ಲೋ ಹೆಣ್ಣೊಬ್ಬಳನ್ನುಅತ್ಯಾಚಾರ ಮಾಡಿ ಯೋನಿಗೆ ಸಲಾಕೆ ತೂರಿಸಿ ಕೊಲ್ಲುತ್ತಾರೆಅದೆಲ್ಲೋ ತುಂಬು ಬಸುರಿಯ ಗರ್ಭಸೀಳಿಹುಟ್ಟಬೇಕಿರುವ ಮಗುವ ಕೊಲ್ಲುತ್ತಾರೆ ಹಸಿದವಳೊಬ್ಬಳು ತುಂಡು ರೊಟ್ಟಿಕದ್ದಿದ್ದಕ್ಕೆ ಬೆತ್ತಲು ಮಾಡಿಮೆರವಣಿಗೆಮಾಡುತ್ತಾರೆಅದೆಲ್ಲೊ ಸತ್ತ ದನದ ಚರ್ಮಸುಲಿದ ತಪ್ಪಿಗೆ ದಲಿತ ಯುವಕರನ್ನುಥಳಿಸಲಾಗುತ್ತದೆಅದೆಲ್ಲೋ ಅವರುಗಳನ್ನೆದುರಿಸಿಮಾತಾಡಿದವರನ್ನು ಹತ್ಯೆಗಯ್ಯಲಾಗುತ್ತದೆ ಇವೆಲ್ಲವನ್ನೂ ಅದೆಲ್ಲೋಅಂತಂದುಕೊಂಡುಮೌನಕ್ಕೆ ಮುಗಿಬಿದ್ದ ನನ್ನಷಂಡತನಕ್ಕೆ ಸಾಕ್ಷಿಯಾಗಿಹೊಟ್ಟೆತುಂಬ ಉಂಡು ತೇಗುತ್ತೇನೆ ಗೆಳೆಯರೊಂದಿಗೆ ಹೊಸದೊಂದುವಾದವಿವಾದಕ್ಕಾಗಿ ಹೊಸಆಯುಧಗಳನ್ನು ಅನ್ವೇಷಿಸಲುಮುಂದಾಗುತ್ತೇನೆ,ಸವಕಲಾದ ಅವೇ ಹಳೆಯ ಶಬುದಗಳಮತ್ತೆ ಮಸೆದು ಮಚ್ಚಾಗಿಸಿಹಲ್ಲು […]

ಪ್ರೀತಿಯೆನಲು ಹಾಸ್ಯವೇ

ಚಂದ್ರಪ್ರಭ ಅದು ಜಗಳವೆ.. ಕದನವೆ.. ಶೀತಲವೆ.. ಮುಕ್ತವೆ? ಯಾವುದೂ ಅಲ್ಲ. ಆದರೆ ಅವರು ಕಾಯಂ ಗುದ್ದಾಡುವುದಂತೂ ಸತ್ಯ. ಒಮ್ಮೊಮ್ಮೆ ತೆರೆದ ಗುದ್ದಾಟ.. ಒಮ್ಮೊಮ್ಮೆ ಮುಸುಕಿನ ಗುದ್ದಾಟ.. ಕಾಲನ ಪ್ರವಾಹದ ಬಿಸಿ. ಭಿನ್ನ ಭಿನ್ನ ತೀರಗಳಲ್ಲಿದ್ದೇ ದಿನ ದೂಡುವುದು ಸಹಜ ರೂಢಿಯಾಗಿದೆ ಅವರಿಗೆ. ಅದನ್ನು ಆಧುನಿಕತೆ ತಂದ ವಿಪತ್ತು, ನೀವು ಬಲಿಪಶು ಎಂದರೆ ಅವರಿಗೆ ಬೇಸರಾಗುತ್ತದೆ.. ಮಾಡರ್ನ್ ಯುಗದ ಪ್ರೊಡಕ್ಟ್ ಅಂದಾಗ ಕೊಂಚ ಸಮಾಧಾನ. ಸಂತಾನದೆದುರು ಮಾದರಿಯಾಗಿರಲು ಹರಸಾಹಸಪಡುತ್ತಾರೆ ಅವರು.. ಆದರೂ ಎಳೆಯ ಜೀವಗಳಿಗೆ ಇವರ ಜಗ್ಗಾಟದ ವಾಸನೆ […]

ನನ್ನೊಳು ಸುನಾಮಿಯೊ

ನನ್ನ ಕೊಳಲು ಚಂದ್ರಪ್ರಭ ಬಿದಿರ ರಂಧ್ರಗಳಲಿ ತೂರಿ ತುಳುಕುವಾಗ ನೀನು ಕೊಳಲ ಮಾಧುರ್ಯ.. ಇಂಪು ಸೊಂಪಿನ ಅದೇ ಮೋಡಿ ಬೀಸಿ ಬಂದ ಬಿರುಗಾಳಿಯಲಿ ಬೆರೆವಾಗ ಅಲುಗುವುದೇಕೆ ಅಸ್ತಿತ್ವದ ಸೌಧ..! ಮತ್ತದೇ ಗಾಳಿ ಭೋರ್ಗರೆವ ಸುನಾಮಿಯಲಿ ಬೆರೆವಾಗ ನನ್ನೊಳು ಸುನಾಮಿಯೊ ಸುನಾಮಿಯೊಳು ನಾನೊ..!! ನಿನ್ನ ಹೊರತು ಸಾಗದ ಉಸಿರು.. ಅಳವಿಗೇ ಸಿಕ್ಕದ ನಿನ್ನ ಗಾಳಿ ಎಂದವರಾರು..?

ಪುಸ್ತಕ ಸಂಗಾತಿ

ಕೃತಿ-ಮುಳುಗದಿರಲಿ ಬದುಕು(ಅನುವಾದಿತ) ಲೇ:-ಡಾ.ಸುಭಾಷ್ ರಾಜಮಾನೆ ಎಪಿಕ್ಟೆಟಸ್ ನ ‘ ದಿ ಆರ್ಟ್ ಆಫ್ ಲಿವಿಂಗ್’ ಕೃತಿಯ ಬಗ್ಗೆ ಒಂದು ಟಿಪ್ಪಣಿ ಡಾ.ಮಹಾಲಿಂಗ ಪೋಳ ದಿನಾಂಕ ೦೮-೧೨-೨೦೧೯ ರಂದು ಭಾನುವಾರ ಬಿಡುಗಡೆಯಾಗುತ್ತಿರು ‘ಮುಳುದಿರಲಿ ಬದುಕು’ ಡಾ.ಸುಭಾಷ್ ರಾಜಮಾನೆಯವರ ೪ ನೇ ಕೃತಿ. ೩ ನೇ ಅನುವಾದದ ಕೃತಿ.ಈಗಾಗಲೆ ಸಿನಿಮಾಕ್ಕೆ ಸಂಬಂಧಿಸಿದ ‘ ದಿ ಆರ್ಟಿಸ್ಟ್’ ಮತ್ತು ವಿಕ್ಟರ್ ಪ್ರ್ಯಾಂಕಲ್ ನ ‘ ಬದುಕಿನ ಅರ್ಥ ಹುಡುಕುತ್ತಾ’ ಎಂಬ ಕೃತಿಗಳನ್ನು ಅನುವಾದಿಸಿದ್ದಾರೆ. ಕನ್ನಡದಲ್ಲಿ ಇಲ್ಲದ ವಿಶಿಷ್ಟವಾದ ವಸ್ತುವುಳ್ಳ ಪುಸ್ತಕವನ್ನು ಆಯ್ದುಕೊಂಡು […]

ಯಾರೂ ಓದದೆಯೇ ಹೋದ ಕತೆ…

ಟಿ.ಎಸ್.ಶ್ರವಣ ಕುಮಾರಿ ಯಾರೂ ಓದದೆಯೇ ಹೋದ ಕತೆ… ಇದೋ ಅತ್ಯಂತ ಜನನಿಬಿಡವಾದ ಮಾರುಕಟ್ಟೆ ಪ್ರದೇಶ. ಈ ಮಾರುಕಟ್ಟೆ ಸಂಕೀರ್ಣ ಮತ್ತು ಅದರ ಸುತ್ತಮುತ್ತಲಿನ ಅಂಗಡಿಗಳಲ್ಲಿ ಮಾರದ, ಸಿಗದ ವಸ್ತುವೇ ಇಲ್ಲ ಎಂದುಕೊಳ್ಳಿ.  ಸಣ್ಣ ಪುಟ್ಟ ಸಾಸುವೆ, ಪಿನ್ನು ಇಂತಹ ವಸ್ತುಗಳನ್ನು ಮಾರುವ ಅಂಗಡಿಗಳಿಂದ ಹಿಡಿದು ಕಾರು, ರಿಯಲ್ ಎಸ್ಟೇಟ್ ಏಜೆನ್ಸಿಯಂತ ದೊಡ್ಡ ವಹಿವಾಟುಗಳೂ ಇಲ್ಲಿವೆ. ಇವೆಲ್ಲವೂ ಇಲ್ಲಿದೆ ಎಂದ ಮೇಲೆ ಇವನ್ನೆಲ್ಲಾ ಮಾರುವವರು, ಕೊಳ್ಳುವ ಗಿರಾಕಿಗಳು, ಸರಕನ್ನು ಹೊರುವ ಹಮಾಲಿಗಳು, ಸಾಗಿಸುವ ಚಾಲಕರು, ವ್ಯವಹಾರವನ್ನು ಕುದುರಿಸುವ ದಲ್ಲಾಳಿಗಳು, ಪಾರ್ಕಿಂಗ್ ಕಾಸು ವಸೂಲಿ ಮಾಡುವ ಹುಡುಗರು, ಇವೆಲ್ಲ ವ್ಯವಹಾರಗಳನ್ನು ನೋಡಿ ಮಜಾ ತೆಗೆದುಕೊಳ್ಳುವ, ಅಂದಿನ […]

ಶಿವಮೊಗ್ಗ ಜಿಲ್ಲೆಯ ಚಳುವಳಿಗಳು

ಡಾ.ಸಣ್ಣರಾಮ ಕಳೆದ ಸಂಚಿಕೆಯಿಂದ…       ಅಕ್ಕ ಕೂಡಲ ಸಂಗಮವನ್ನು ಪ್ರವೇಶಿಸುತ್ತಲೇ ಮತ್ತೊಂದು ಅಗ್ನಿ ಪರೀಕ್ಷೆ ಅವಳಿಗೆ ಕಾದಿತ್ತು. ಅನುಭವ ಮಂಟಪದ ಅಧ್ಯಕ್ಷರಾಗಿದ್ದ ಅಲ್ಲಮ ಪ್ರಭು ಯಾರೇ ಬರಲಿ ಪರೀಕ್ಷಿಸದೇ ಅನುಮತಿಯನ್ನು ಕೊಡುತ್ತಿರಲಿಲ್ಲ. ಶರಣೆ ಅಕ್ಕಮಹಾದೇವಿಯನ್ನು ಕಂಡು ದಿಗ್ಭ್ರಮೆಗೊಂಡ ಅಲ್ಲಮ ಅವಳನ್ನು ಪರೀಕ್ಷಿಸಲು ಮುಂದಾಗಿ                              “ಸತಿ ನೀನು ಇತ್ತಲೇಕೆ ಬಂದೆಯವ್ವಾ ಸತಿಯೆಂದರೆ ಮುನಿವರು   ನಮ್ಮ ಶರಣರು ನಿನ್ನ ಪತಿಯ ಕುರುಹು ಹೇಳಿದರೆ ಬಂದು ಕುಳ್ಳಿರು     ಇಲ್ಲದಿದ್ದರೆ ತೊಲಗು ತಾಯಿ” ಅಕ್ಕ; “ಹರನೇ ನೀನೆನಗೆ ಗಂಡನಾಗಬೇಕೆಂದು […]

ಕವಿತೆ ಕಾರ್ನರ್

ಮತ್ತೆಂದೂ ಮಂಡಿಗೆ ಮೆಲ್ಲಲಿಲ್ಲ ಕತ್ತಲಾಗಲೆಂದೆ ಬೆಳಗಾಗುವುದು ಆರಲೆಂದೇ ದೀಪ ಉರಿಯುವುದು ಬಾಡಲೆಂದೇ ಹೂವು ಅರಳುವುದು ಕಮರಲೆಂದೆ ಕನಸು ಹುಟ್ಟುವುದು ಗೊತ್ತಿದ್ದರೂ  ಹಣತೆ ಹಚ್ಚಿಟ್ಟಳು ಬರಲಿರುವ ಸಖನಿಗಾಗಿ. ಮಲ್ಲೆ ಮೊಗ್ಗ ಮಾಲೆ ಹೆರಳಿಗೆ ಮುಡಿದು ನಿಂತಳು ಬರಲಿರುವ ಸಖನ ಮೂಗಿಗೆ ಘಮಿಸಲೆಂದು ಬರಡು ಎದೆಗೆ ವಸಂತನ ಕನವರಿಸಿ ಹೊಸ ಕನಸು ಚಿಗುರಿಸಿಕೊಂಡಳು ಬರುವ ಸಖನಿಗೊಂದಿಗೆ ಹಂಚಿಕೊಳ್ಳಲೆಂದು ಮುಸ್ಸಂಜೆಗೆ ಬಂದ ಸಖ ಹಚ್ಚಿಟ್ಟ ಹಣತೆ ಆರಿಸಿದ ಮಲ್ಲೆ ಮಾಲೆಯ ಹೊಸಕಿಹಾಕಿದ ಅದಾಗತಾನೆ ಚಿಗುರೊಡೆದಿದ್ದ ಕನಸುಗಳ ಚಿಗುರ  ಚಿವುಟಿ ಹಸಿಯೆದೆಯ ಮತ್ತೆ ಬರಡಾಗಿಸಿ ನಡೆದ ಮತ್ತೊಂದು ಎದೆಬಯಲ ಅರಸಿ ಅದೇ ಕಡೆ ಮತ್ತವಳೆಂದು ಹಣತೆ ಹಚ್ಚಿಡಲಿಲ್ಲ ಗಿಡದಿಂದ ಮಲ್ಲಿಗೆಯ ಬಿಡಿಸಿ ತರಲಿಲ್ಲ ಒಣಗಿದೆದೆಗೆ ನೀರು ಹಾಯಿಸಲಿಲ್ಲ ಕನಸಿರಲಿ ಮನಸಲ್ಲೂ ಮಂಡಿಗೆ ತಿನ್ನಲಿಲ್ಲ

Back To Top