ಹೊತ್ತಾರೆ

ಹೊತ್ತಾರೆ

ಅಮ್ಮನೂರಿನ ನೆನಪುಗಳು ಅಮೇರಿಕಾದಿಂದ ಅಶ್ವಥ್ ಬರೆಯುತ್ತಾರೆ ಅಶ್ವಥ್ ರಂಗ ತಿಮ್ಮರಿಗೆ ನಿಯಂತ್ರಣದ ಅಥವಾ ಮೇಲ್ವಿಚಾರಣೆಯ ಅವಶ್ಯಕತೆಯೂ ಇರಲಿಲ್ಲ. ಗುಡ್ಡದಂತಿದ್ದ ನಮ್ಮ ಊರಿನಲ್ಲಿ ನೀರಿನ ವ್ಯವಸ್ಥೆಗೆ ಇದ್ದದ್ದು ಎರಡು ಕೈಪಂಪು (ಬೋರ್ ವೆಲ್) ಮತ್ತೊಂದು ಸೇದುವಬಾವಿ.  ನಮ್ಮ ಮನೆ ಗುಡ್ಡದ ತುದಿಯಲ್ಲಿದ್ದ ಮತ್ತು ಊರಿನ ಹಿಂಭಾಗದಲ್ಲಿದ್ದ ಕಡೇ ಮನೆ.  ಬಾವಿ ಮತ್ತು ಬೋರ್ ವೆಲ್ ಗಳು ಊರಿನ ಮುಂದಿನ ಭಾಗದಲ್ಲಿದ್ದವು. ನೀರು ಹೊರುವುದು ಒಂದು ಫಜೀತಿ. ಹಾಗಾಗಿ  ಗಾಡಿಯ ಮೇಲೆ ಬ್ಯಾರೆಲ್ ಇರಿಸಿ ನೀರು ತರುವುದು ನಮ್ಮ ಮನೆಯ ರೂಢಿ. ತಿಮ್ಮ ರಂಗರ […]

ಉಯ್ಯಾಲೆ

ಟಿ.ಎಸ್.ಶ್ರವಣಕುಮಾರಿ ಉಯ್ಯಾಲೆ ಉಯ್ಯಾಲೆ ಈಗಾರು ತಿಂಗಳಿನಿಂದಲೂ ಸೀತಕ್ಕನಿಗೆ ಅಷ್ಟು ಅರಾಮಿಲ್ಲ. ದಿನಕ್ಕೊಂದೊಂದು ತೊಂದರೆ. ಡಾಕ್ಟರಿಗೆ ತೋರಿಸಿಯೂ ಏನೂ ಪ್ರಯೋಜನವಾಗಿಲ್ಲ. ಅವರ ಪ್ರಕಾರ ವಯಸ್ಸಾಗಿರುವುದನ್ನು ಬಿಟ್ಟರೆ ಬೇರೇನೂ ಇಲ್ಲ. ಆದರೆ ಸೀತಕ್ಕನಿಗೆ ಮಾತ್ರಾ ದಿನದಿಂದ ದಿನಕ್ಕೆ ನಿತ್ರಾಣ. ಐವತ್ತು ಜನ ಬಂದರೂ ಹೆದರದೆ ಅಡುಗೆ ಮಾಡುತ್ತಿದ್ದವಳಿಗೆ ಈಗ ಐದು ಜನಕ್ಕೂ ಮಾಡಲೂ ಸಾದ್ಯವಾಗದಂತಾಗಿದೆ. ಈಗೊಂದು ತಿಂಗಳಿನಿಂದಂತೂ ಪೂರಾ ಹಾಸಿಗೆ ಹಿಡಿದು ಬಿಟ್ಟಿದ್ದಾಳೆ. ಶಾಮಿ, ಸರಳನೂ ತಮ್ಮ ಕೈಲಾದ್ದೆಲ್ಲಾ ಮಾಡುತ್ತಿದ್ದಾರೆ. ಸೀತಕ್ಕನಿಗೋ, ಹುಶಾರು ತಪ್ಪಿದಾಗಿನಿಂದಾಗಲೂ ಮಕ್ಕಳಿಗಾಗಿ ಹಂಬಲಿಸುವಂತಾಗಿದೆ. ಅವರೇನು ಹತ್ತಿರ […]

ನೇಣಿಗೇರಿದ ನೈತಿಕ ಮೌಲ್ಯ.

ದೀಪಾಜಿ ನಾನು ಕೂಗುತ್ತಲೆ‌ ಇದ್ದೆ ಯಾರಾದರೂ ಬಂದು ಉಳಿಸಿಯಾರೆಂದು ಓಡುತ್ತಲೆ ಇದ್ದೆ ಯಾರಾದರೂ ಹಿಡಿದು ನಿಲ್ಲಿಸಿ ಆಸ್ಪತ್ರೆಯ ಬೆಡ್ಡಿನವರೆಗೆ ತಂದು ಬಿಟ್ಟಾರೆಂದು. ಬದುಕುವ ಆಸೆಗಲ್ಲ ಜೀವದ ಹಂಗಿಗೂ ಅಲ್ಲ ನೋವಿನ ನರಳಿಕೆಗಂತೂ ಅಲ್ಲವೇ ಅಲ್ಲ ಅದೆಲ್ಲವ ಅಂದೆ ಕೈಬಿಟ್ಟಿದ್ದೆ ಅತ್ಯಾಚಾರಕೆ ಸಿಲುಕಿ ಪೋಲೀಸ್ ಠಾಣೆ ನ್ಯಾಯಾಲಯ ಮಾಧ್ಯಮಗಳ ಮುಂದೆ ಬಂದ ದಿನವೆ ನಾನು ಸತ್ತು ಹೋಗಿದ್ದೆ ಇಲ್ಲಿ ಉಳಿದದ್ದು ವರ್ಷಾನುಗಟ್ಟಲೆ‌ ಚಪ್ಪಲಿ ಸವೆಯುವಂತೆ ತಿರುಗುತ್ತಿದ್ದದ್ದು ಕೇವಲ ಅಳಿದುಳಿದ ನಂಬಿಕೆ ಎಂಬ ಭರವಸೆಯ ಮೇಲೆ ತಪ್ಪಿದಸ್ತರ ಪೊಗರು ಕಳಚಿ […]

ಮತ್ತೆಂದೂ ಬರೆಯಲಾರೆ

ನಾನಿನ್ನು ಕಾಯಲಾರೆಮುರಿದ ಮೌನದೊಳಗೆ ತೇಲಿಬರುವನಿನ್ನ ಮಾತಿನೊಂದು ಹೆಣಕ್ಕಾಗಿನಾನಿನ್ನು ಕಾಯಲಾರೆಕುಸಿದುಬಿದ್ದ ನಂಬಿಕೆಯೊಂದುಮತ್ತೊಮ್ಮೆ ಚಿಗುರುವ ಚಣಕ್ಕಾಗಿನಾನಿನ್ನು ಕಾಯಲಾರೆ ಎಂದೂ ಅರಳಲಾರೆನೆಂದು ಮುನಿಸಿಕೊಂಡಹೂವು ಬಿರಿಯುವಾ ಕ್ಷಣಕ್ಕಾಗಿನಾನಿನ್ನು ಕಾಯಲಾರೆಸ್ವರ್ಗದ ನಿರೀಕ್ಷೆಯಲಿನಿತ್ಯ ನರಕದ ಬಾಗಿಲು ಕಾಯುವಯಾತನಾದಾಯಕ ಬದುಕಿನಂಗಳದಲ್ಲಿನಾನಿನ್ನು ಕಾಯಲಾರೆಹೊರದಾರಿಗಳೇ ಇರದೀ ನರಕದೆಡೆಗೆನಡೆದು ಬರುವೆಂಬ ನಂಬಿಕೆಯಲ್ಲಿ ನಾನಿನ್ನು ಬರೆಯಲಾರೆಬರೆದದ್ದೆಲ್ಲ ವ್ಯರ್ಥಪ್ರಲಾಪವಾಗಿಲೋಕನಿಂದಿತನಾದವನ ಕಂಡುನಗುವ ಜನರ ಬಾಯಿಗೆ ಅನ್ನವಾಗಿನರಳುವ ಕುನ್ನಿಯಾಗಿ! ಕಾಯಲಾರೆಬೇಡಲಾರೆಮರುಗಲಾರೆಮತ್ತೆಂದೂಬರೆಯಲಾರೆ.

ರಾಜಕಾರಣ

ಪಕ್ಷ ರಾಜಕಾರಣಕ್ಕೊಂದು ಪರ್ಯಾಯ ಗಣೇಶ ಭಟ್, ಶಿರಸಿ ಕೊಳೆತು ನಾರುತ್ತಿರುವ ಪಕ್ಷ ರಾಜಕಾರಣಕ್ಕೊಂದು ಪರ್ಯಾಯ…… ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದಕ್ಕಿಂತ ಹೆಚ್ಚು ಪಕ್ಷಗಳಿದ್ದಾಗ, ಆಡಳಿತ ಪಕ್ಷದ ತಪ್ಪು, ಒಪ್ಪುಗಳನ್ನು ವಿರೋಧ ಪಕ್ಷಗಳು ವಿಶ್ಲೇಷಿಸುತ್ತವೆಂದು ಭಾವಿಸಲಾಗಿತ್ತು. ಜನಹಿತವೇ ಆಡಳಿತದ ಉದ್ದೇಶವಾಗಿದ್ದರೂ ಅದನ್ನು ಸಕಾರಗೊಳಿಸುವುದಕ್ಕಾಗಿ ಪ್ರತಿಯೊಂದು ಪಕ್ಷಕ್ಕೂ ತನ್ನದೇ ಆದ ಸಿದ್ದಾಂತ, ಪ್ರಣಾಳಿಕೆ, ಕಾರ್ಯವಿಧಾನವಿರುತ್ತದೆಂಬ ಭಾವನೆಯಿಂದ ಪಕ್ಷ ಆಧಾರಿತ ಚುನಾವಣೆ, ಸರ್ಕಾರ ರಚನೆಗಳಿಗೆ ನಮ್ಮ ಸಂವಿಧಾನ ಅವಕಾಶ ಕಲ್ಪಿಸಿದೆ. ಪಾಶ್ಚಾತ್ಯ ಪ್ರಜಾಪ್ರಭತ್ವ ದೇಶಗಳಲ್ಲಿರುವಂತೆ ನಮ್ಮಲ್ಲಿಯೂ ಸೀಮಿತ ಸಂಖ್ಯೆಯ ರಾಜಕೀಯ ಪಕ್ಷಗಳು ನಮ್ಮ […]

ಪಯಣ

ಸಂಜಯ ಮಹಾಜನ್ ಅಳಿದು ಹೋಗುವ ಮಾನವ ನಿರ್ಮಿತ ಕಟ್ಟಡಗಳ ಮಧ್ಯ ಅಳಿಯದೆ ಮುಂದೆ ಸಾಗಿದೆ ಹಸಿರೆಲೆಗಳ ಪಯಣ ಸದ್ದಿಲ್ಲದೆ ಮಾಸಿ ಹೋಗುವ ದೇಹಕ್ಕೆ ಚೈತನ್ಯ ತುಂಬುವ ಹೃದಯಾಂತರಾಳದ ನೆನಪುಗಳ ಪಯಣ ಪಚ್ಚೆಯಾಗಸದಿ ಸುರಿವ ಮಳೆಹನಿ ಕಪ್ಪು ಹಂಚಿನ ಹಸಿರ ಹಾಸಿನ ಮಧ್ಯ ಮಳೆಹನಿಗಳ ಪಯಣ ಮೊಳಕೆಯೊಂದು ಬೇರೂರಿ ಆಗಸಕ್ಕೆ ಕೈಚಾಚಲು ಗಟ್ಟಿ ಕಾಂಕ್ರೀಟು ಮೇಲೆ ನಡೆಸಿದೆ ಸೆನಸಾಟದ ಪಯಣ ಭೂವಿಯಲ್ಲಿ ಹೆಜ್ಜೆಯುರಿದ ಕಬ್ಬಿಣದ ಸರಳುಗಳು ಬಿಡುಗಡೆಗೆ ನಡೆಸಿವೇ ಕನಸುಗಳ ಪಯಣ ಈ ಪಯಣಗಳ ಮಧ್ಯ ಚಂಚಲ ನನ್ನ […]

ಕವಿತೆ ಕಾರ್ನರ್

ಆತ್ಮಸಾಕ್ಷಿ ನನ್ನ ಮುಂದೆ ನಡೆಎಂದು ನಾನು ಕೇಳುವುದಿಲ್ಲ ನನ್ನ ಹಿಂದೆ ಬಾಎಂದು ನಾನು ಹೇಳುವುದಿಲ್ಲ ನನ್ನ ಎಡಕ್ಕೆ ಇಲ್ಲಾ ಬಲಕ್ಕೆಬಾಎಂದು ನಾನು ಭೇಡುವುದಿಲ್ಲ! ನಾ ನಕ್ಕಾಗನನ್ನೊಡನೆ ನಗು ನಾ ಅತ್ತಾಗನನ್ನೊಡನೆ ಅಳು ನಾ ನಡೆವಾಗ ನನ್ನ ನೆರಳಾಗಿರುನಾ ನುಡಿವಾಗ ನನ್ನ ಕೊರಳಾಗಿರುಎಂದೂ ಕೇಳುವುದಿಲ್ಲ! ಹೇಗೆ ನಾನುನಡೆಯುತ್ತೇನೆಯೊನನ್ನ ಆತ್ಮಸಾಕ್ಷಿಯ ಹಾಗೆ! ನೀನೂ ನಡೆನಿನ್ನ ಆತ್ಮಸಾಕ್ಷಿಯ ಹಾಗೆಅಂತಲಾದರೂನಾನು ಯಾಕೆ ಹೇಳಲಿ?

ಅನಿಸಿಕೆ

ಹೆಣ್ಣಿನ ಮೇಲಿನ ನಿರಂತರ ಅತ್ಯಾಚಾರ ಐಶ್ವರ್ಯ ತನ್ನ ಮೂರು ವರ್ಷದ ಹೆಣ್ಣು ಮಗುಗೆ ಮನೆಯಿಂದಾಚೆ ಕಳಿಸ್ಬೆಕಾದ್ರೆ ಒಬ್ಬ ತಾಯಿ ಹಾಕಿದ್ದ ಕಾಲ್ ಗೆಜ್ಜೆ, ಕೈಬಳೆ, ಹೂವೆಲ್ಲ ತೆಗೆದು ಗಂಡ್ಮಕ್ಕಳ ತರ ತಲೆಗೆ ಎಣ್ಣೆ ಹಾಕಿ ಕ್ರಾಪ್ ಬಾಚಿ ಹುಡ್ಗುರ ಬಟ್ಟೆ ಹಾಕಿದ್ದು ನೋಡಿ ನಾನ್ ಅನ್ಕೊಂಡೆ ಅವರಿಗೆ ಪಾಪ ಗಂಡ್ಮಗು ಅಂದ್ರೆ ಇಷ್ಟ ಅನ್ಸತ್ತೆ ಅವರಿಗೆ ಗಂಡು ಮಗು ಇಲ್ಲ ಅನ್ಕೊಳ್ತಿದ್ದ ಹಂಗೆನೆ ಮನೆಯಿಂದ ಆಚೆ ಅಳುತ್ತ ಅವರ ಮಗ ಬಂದು ನನ್ ಬಟ್ಟೆ ಯಾಕೆ ಅವಳಿಗೆ […]

ಯಾತನೆಯ ದಿನಗಳು

ಇವು ಯಾತನೆಯ ದಿನಗಳುರಾಜಕೀಯ ಪರಿಬಾಷೆಯಲ್ಲಿ ಬಣ್ಣಿಸಲಾಗದಂತಹ,ಕವಿತೆಗಳನ್ನಾಗಿಸಲೂ ಸಾದ್ಯವಿರದಂತಹ-ಕತೆಗಳನ್ನಾಗಿಸಲೂ ಸಂಯಮವಿರದಂತಹ ಕಾಲ! ಅದೆಲ್ಲೊ ಆಧಾರ್ ಲಿಂಕ್ ಇರದೆಹಸಿವಿನಿಂದ ಹೆಣ್ಣು ಮಗುವೊಂದು ಸಾಯುತ್ತದೆಅದೆಲ್ಲೋ ಹೆಣ್ಣೊಬ್ಬಳನ್ನುಅತ್ಯಾಚಾರ ಮಾಡಿ ಯೋನಿಗೆ ಸಲಾಕೆ ತೂರಿಸಿ ಕೊಲ್ಲುತ್ತಾರೆಅದೆಲ್ಲೋ ತುಂಬು ಬಸುರಿಯ ಗರ್ಭಸೀಳಿಹುಟ್ಟಬೇಕಿರುವ ಮಗುವ ಕೊಲ್ಲುತ್ತಾರೆ ಹಸಿದವಳೊಬ್ಬಳು ತುಂಡು ರೊಟ್ಟಿಕದ್ದಿದ್ದಕ್ಕೆ ಬೆತ್ತಲು ಮಾಡಿಮೆರವಣಿಗೆಮಾಡುತ್ತಾರೆಅದೆಲ್ಲೊ ಸತ್ತ ದನದ ಚರ್ಮಸುಲಿದ ತಪ್ಪಿಗೆ ದಲಿತ ಯುವಕರನ್ನುಥಳಿಸಲಾಗುತ್ತದೆಅದೆಲ್ಲೋ ಅವರುಗಳನ್ನೆದುರಿಸಿಮಾತಾಡಿದವರನ್ನು ಹತ್ಯೆಗಯ್ಯಲಾಗುತ್ತದೆ ಇವೆಲ್ಲವನ್ನೂ ಅದೆಲ್ಲೋಅಂತಂದುಕೊಂಡುಮೌನಕ್ಕೆ ಮುಗಿಬಿದ್ದ ನನ್ನಷಂಡತನಕ್ಕೆ ಸಾಕ್ಷಿಯಾಗಿಹೊಟ್ಟೆತುಂಬ ಉಂಡು ತೇಗುತ್ತೇನೆ ಗೆಳೆಯರೊಂದಿಗೆ ಹೊಸದೊಂದುವಾದವಿವಾದಕ್ಕಾಗಿ ಹೊಸಆಯುಧಗಳನ್ನು ಅನ್ವೇಷಿಸಲುಮುಂದಾಗುತ್ತೇನೆ,ಸವಕಲಾದ ಅವೇ ಹಳೆಯ ಶಬುದಗಳಮತ್ತೆ ಮಸೆದು ಮಚ್ಚಾಗಿಸಿಹಲ್ಲು […]

ಪ್ರೀತಿಯೆನಲು ಹಾಸ್ಯವೇ

ಚಂದ್ರಪ್ರಭ ಅದು ಜಗಳವೆ.. ಕದನವೆ.. ಶೀತಲವೆ.. ಮುಕ್ತವೆ? ಯಾವುದೂ ಅಲ್ಲ. ಆದರೆ ಅವರು ಕಾಯಂ ಗುದ್ದಾಡುವುದಂತೂ ಸತ್ಯ. ಒಮ್ಮೊಮ್ಮೆ ತೆರೆದ ಗುದ್ದಾಟ.. ಒಮ್ಮೊಮ್ಮೆ ಮುಸುಕಿನ ಗುದ್ದಾಟ.. ಕಾಲನ ಪ್ರವಾಹದ ಬಿಸಿ. ಭಿನ್ನ ಭಿನ್ನ ತೀರಗಳಲ್ಲಿದ್ದೇ ದಿನ ದೂಡುವುದು ಸಹಜ ರೂಢಿಯಾಗಿದೆ ಅವರಿಗೆ. ಅದನ್ನು ಆಧುನಿಕತೆ ತಂದ ವಿಪತ್ತು, ನೀವು ಬಲಿಪಶು ಎಂದರೆ ಅವರಿಗೆ ಬೇಸರಾಗುತ್ತದೆ.. ಮಾಡರ್ನ್ ಯುಗದ ಪ್ರೊಡಕ್ಟ್ ಅಂದಾಗ ಕೊಂಚ ಸಮಾಧಾನ. ಸಂತಾನದೆದುರು ಮಾದರಿಯಾಗಿರಲು ಹರಸಾಹಸಪಡುತ್ತಾರೆ ಅವರು.. ಆದರೂ ಎಳೆಯ ಜೀವಗಳಿಗೆ ಇವರ ಜಗ್ಗಾಟದ ವಾಸನೆ […]

Back To Top