ಕಥಾಗುಚ್ಛ

ಕಥಾಗುಚ್ಛ

ನನ್ನ ಅಪ್ಪ ಹೇಡಿಯಾಗಿಬಿಟ್ಟಿದ್ದ..! ವೇಣುಗೋಪಾಲ್ ನನ್ನ ಅಪ್ಪ ಹೇಡಿಯಾಗಿಬಿಟ್ಟಿದ್ದ..! ಬಡತನವನ್ನೇ ಬುನಾದಿಯಾಗಿ ಮೆಟ್ಟಿ ಸಿರಿತನದ  ಒಂದೊಂದು ಇಟ್ಟಿಗೆಯನ್ನು ಹೆಕ್ಕಿತಂದು ಬೆವರರಿಸಿ ನೆಮ್ಮದಿಯ ಬದುಕನ್ನು ಕಟ್ಟಿಕೊಡುತ್ತಿದ್ದ ಅಪ್ಪ ಹೇಡಿಯಾಗಿಬಿಟ್ಟಿದ್ದ..! ನಾ ಕಂಡ ಅಪ್ಪ ಹೀಗಿರಲಿಲ್ಲ.! ಉರಿಯುವ ಸೂರ್ಯನಂತೆ ಎಂತಹ ಕಷ್ಟಗಳ ಮೋಡಗಳನ್ನ ಕರಗಿಸಿ ಬಿಡುತ್ತಿದ್ದ.. ಅವನ ಪ್ರೀತಿಯು ಅಷ್ಟೇ ಆಗತಾನೆ ಕರೆದ ಹಾಲಿನಂತಹ ಸಿಹಿ ನಿಷ್ಕಲ್ಮಶವಾದ ತ್ಯಾಗವೆತ್ತ ಸಾಕಾರಮೂರ್ತಿ.. ಅಮ್ಮನ ಪ್ರಿತೆಯೇ ಕಾಣದ ನನಗೆ ಅವನ ಬೆಚ್ಚನೆಯ ತೋಳುಗಳೇ ಎಲ್ಲವೂ ಆಗಿತ್ತು ಮರಿಗುಬ್ಬಿಗೆ ಗೂಡಿನಂತೆ..! ಅವನಿಗೂ ಅಷ್ಟೇ ನಾನೆಂದರೆ […]

ಲಹರಿ

ಬೆಂಗಳೂರು ಬ್ಯಾಚುಲರ್ ಹುಡುಗರ ಡೇ ಡ್ರೀಮು ದೇವರಾಜ್ ಹೆಂಡ್ತಿ ಹೇಗಿರಬೇಕು…? ಹೆಂಡ್ತಿ ಆಗಿದ್ರೆ ಸಾಕ… ಜೀವನದ ಜೋಕಾಲಿಯಲ್ಲಿ ಮಗು ತರ ಇರ್ಬೇಕಲ್ವಾ. ಬ್ಯಾಚುಲರ್ ಜೀವನ ಒಂತರ ಬೋನ್ ಲೆಸ್ ಬೋಟಿ ಆಗೋಗಿದೆ .ಬ್ಯಾಚುಲರ್ ಅಂದ್ರೆ ಭಗವಂತ ಕೇರ್ ತಗೊಳಲ್ಲ. ಊರು ಮನೆ ಅಪ್ಪ ಅಮ್ಮ ತಂಗಿ ತಮ್ಮ ಅಕ್ಕ ನೆಂಟ್ರು ನಿಷ್ಠರು ಎಲ್ಲರನ್ನು ಬಿಟ್ಟು ಬಂದು ಬೆಂಗಳೂರಿನನಲ್ಲಿ ಬಂದು ಸಿಂಹದಂತೆ ಬದುಕವರು ಬ್ಯಾಚುಲರ್ ಹುಡುಗ್ರು. ತಿಂಗಳಿಗೊಂದು ಸಲ ಸಂಬಳ .ಮನೆ ರೆಂಟು ವಾಟರ್ ಬಿಲ್ಲು ಚೀಟಿ ಬಟ್ಟೆ […]

ಕಾವ್ಯಯಾನ

ಆನಿ ಜಯಾ ಮೂರ್ತಿ ಪಂಜರದ ಹಕ್ಕಿ ಅಲ್ಲ ನೀನು ಸ್ವತಂತ್ರ ಹಕ್ಕಿ ನೀ ಹಾರುವೆ ಎಲ್ಲಿಬೇಕಲ್ಲಿ ಒಡೆಯ ನ ಭುಜದಲ್ಲಿ ಒಡತಿಯ ಕೈಯಲ್ಲಿ ಮನೆಯ ಮೂಲೆಯಲ್ಲಿ ನೀನು ಸಾಮಾನ್ಯ ಹಕ್ಕಿಯಲ್ಲ ಎಲ್ಲಿಂದ ಧರೆಗಿಳಿದೆ ವಾಸಿಸಲು ಇಲ್ಲಿ? ಇಂದ್ರನ ಸ್ವರ್ಗದಿಂದ ಇಳಿದೆಯಾ? ಅಪ್ಸರೆ ಗಂಧರ್ವರಿಂದ ಹಾಡಲು ಕಲಿತೆಯ? ನಾರದರ ತಂಬೂರಿ ಶ್ರುತಿ  ಜೊತೆಯ? ನಿನ್ನ ಹಾಡಿನ ಶೈಲಿ ಪುರಂದರ ತ್ಯಾಗರಾಜ ಶಯ್ಲಿ ನಿನ್ನ ಸ್ವರ ಹೋಲುವುದಿಲ್ಲಿ ಆಲಾಪನೆ, ಪಲ್ಲವಿ, ಚರಣ ದಲ್ಲಿ ಸ್ವರ ಆ ದೇವನ ಪ್ರಾರ್ಥನೆ ರೀತಿಯಲ್ಲಿ […]

ಪ್ರಸ್ತುತ

ಕ್ಯಾಂಪಸ್ ಕೋಲಾಹಲ…… ಗಣೇಶ್ ಭಟ್ ಶಿರಸಿ ದೆಹಲಿಯ ಜವಾಹರಲಾಲ ನೆಹರೂ ವಿಶ್ವವಿದ್ಯಾಲಯ (ಜೆಎನ್‍ಯು) ಪುನಃ ಸುದ್ಧಿಯಲ್ಲಿದೆ. ವಿವಿಧ ಶುಲ್ಕಗಳ ಏರಿಕೆಯ ವಿರುದ್ಧ ಪ್ರತಿಭಟನೆ ನಡೆಸಿ, ಕೆಲವು ವಾರಗಳ ಹಿಂದೆ ಮಾಧ್ಯಮಗಳಿಗೆ ಆಹಾರವಾಗಿದ್ದ ಜೆಎನ್‍ಯುನಲ್ಲಿ ಮುಸುಕುಧಾರಿಗಳು ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಹೊಡೆದು ಬಡಿದಿದ್ದಾರೆಂಬ ವಿಷಯ ಬಿತ್ತರವಾಗುತ್ತಿದೆ. ಕ್ಯಾಂಪಸ್‍ನಲ್ಲೇ ವಿದ್ಯಾರ್ಥಿಗಳಿಗೆ ರಕ್ಷಣೆ ಇಲ್ಲವೆಂಬ ವಿಷಯ ದೇಶದಾದ್ಯಂತ ಹಲವು ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳನ್ನು ಕೆರಳಿಸಿ, ಪ್ರತಿಭಟನೆ ನಡೆಸಲು ಕಾರಣವಾಗಿದೆ. ನಾಲ್ಕಾರು ದಶಕಗಳ ಹಿಂದೆ ವಿಶ್ವವಿದ್ಯಾಲಯಗಳಲ್ಲಿ ಸೈದ್ಧಾಂತಿಕ ಚರ್ಚೆಗಳು ಇರುತ್ತಿದ್ದವು. ಅಭಿಪ್ರಾಯ ಭೇದಗಳು ಇದ್ದವು. ಆದರೆ […]

ಕಾವ್ಯಯಾನ

ಗ್ರಹಣಕ್ಕೆ ಮುನ್ನ ಪ್ರಮಿಳಾ ಎಸ್.ಪಿ ಗ್ರಹಣಕ್ಕೆ ಮುನ್ನ ಕೋಣೆ ಕಿಟಕಿಯ ಸರಳುಗಳ ನಡುವೆ ಚಂದ್ರಮನ ಚಿತ್ರ ಮನದಲ್ಲಿ ಆತುರದ ಕಾವು… ಗ್ರಹಣ ಪ್ರಾರಂಭ ಆಗುವುದಕ್ಕೆ ಮುನ್ನ ಮನೆ ಮಂದಿಗೆಲ್ಲಾ ಊಟ ಬಡಿಸಬೇಕಿದೆ.. ಎದೆಯೊಳಗಿನ ನೋವುಗಳ ಬಚ್ಚಿಟ್ಟು…ಪರದೆ ಮುಂದೆ ಕುಳಿತು ಪುಂಗಿ ಮಾತು ಆಲಿಸಿ ಆಕಳಿಸುವ ಅರಮನೆಯ ಮನಸ್ಸುಗಳ ನಡುವೆ ಆತುರಕ್ಕೆ ಆಟ ವಾಡ ಬೇಕಿದೆ ನಾನು… ಬಳಲಿದ ಕಾಲುಗಳ… ಮೇಲೆ ನಿಂತು ನಿಟ್ಟುಸಿರು ಸೆರಗು ಸುತ್ತಿ ಪ್ರತಿ ಕ್ಷಣಕ್ಕೂ ಬೇಡುತಿದ್ದೇನೆ ಹೊರಗೆ ಹೋದವರು ಹುಷಾರಾಗಿ ವಪಸ್ಸಾಗಲಿ.. ಪರದೆಯಲ್ಲಿ […]

ಶ್ರದ್ದಾಂಜಲಿ

ನಮ್ಮನ್ನಗಲಿದ ಸಾಹಿತಿ, ಸಂಶೋಧಕ, ಪ್ರೋ. ಎಂ.ಚಿದಾನಂದಮರ್ತಿ..! ಕೆ.ಶಿವು ಲಕ್ಕಣ್ಣವರ ಪ್ರೋ. ಎಂ.ಚಿದಾನಂದಮರ್ತಿ..! ಸಾಹಿತಿ, ಸಂಶೋಧಕ ಪ್ರೋ. ಎಂ.ಚಿದಾನಂದಮೂರ್ತಿ ಅವರ ಬಗೆಗೆ ಇತ್ತೀಚಿನ ಎಡಪಂಥೀಯರ ಏನೇ ತಕರಾರಿದ್ದರು. ಅದನ್ನೆಲ್ಲ ಬದಿಗಿರಿಸಿ ಅವರು ಕೊನೆ ಉಸಿರೆಳದ ಈ ಗಳಿಗೆಯಲ್ಲಿ ಅವರ ಕುರಿತು ಈ ಪುಟ್ಟ ಲೇಖನ ಸ್ಮರಣೆ… ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಸಂಶೋಧಕ, ಪ್ರೋಫೆಸರ್​ ಚಿದಾನಂದ ಮೂರ್ತಿಯವರು ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇವತ್ತು ಬೆಳಗಿನ ಜಾವ 3.30ರ ಸುಮಾರಿಗೆ ಚಿಕಿತ್ಸೆ […]

ಕಾವ್ಯಯಾನ

ನಭದ ಕೌತುಕದ ಕಡೆಗೆ ನಾರಾಯಣಸ್ವಾಮಿ ವಿ ನಭದ ಕೌತುಕದ ಕಡೆಗೆ ಮನವ್ಯಾಕೋ ಯೋಚನಲಹರಿಯ ಕಡೆಗೆ ತಿರುಗುತಿದೆ, ಅಜ್ಞಾನದಿಂದ ವಿಜ್ಞಾನದ ಕಡೆ ಸಾಗಿದ ಮನುಜ ಮತ್ತೆಕೊ ಮರಳಿ ಅಜ್ಞಾನದ ಗೂಡಿನ ಸುತ್ತ ಸುಳಿಯುತಿರುವನೆಂದು…….. ಪ್ರಕೃತಿಯ ವಿಸ್ಮಯಕ್ಕೆ ಹೆದರಿ ದೇಗುಲ-ಗೃಹಗಳ ಕದವನೆ ಮುಚ್ಚಿ,ದೂರದರ್ಶನದ ಪರದೆಯೊಳಗೆ ನಭದ ಕೌತುಕವನು ವೀಕ್ಷಣೆ ಮಾಡುತಿಹನು……. ಆಗಸದಲಿ ಘಟಿಸುವ ಸೂರ್ಯಚಂದ್ರರ ವಿಸ್ಮಯ ರೂಪವನು ಕನ್ನಡಿಯೊಳಗಿಂದ ನೋಡಬಹುದೆಂದು,ವಿಜ್ಞಾನಿಗಳು ಸಾರಿ ಸಾರಿ ಹೇಳಿದರೂ ನಂಬಲೇ ಇಲ್ಲ ವಿಜ್ಞಾನವನು…… ಟಿವಿ ಪರದೆಯೊಳಗೆ ಕುಳಿತು ಕಟ್ಟುಕಥೆ ಸಾರುವ ಮಾತಿನಮಲ್ಲರ ಭಾಷಣವು ಹುಟ್ಟಿಸಿತು […]

ಕಾವ್ಯಯಾನ

ಸ್ತ್ರೀ ಹೆಜ್ಜೆ ಕವಿತಾ ಸಾರಂಗಮಠ ಸ್ತ್ರೀ ಹೆಜ್ಜೆ ಲಂಗ ದಾವಣಿ ತೊಟ್ಟ ಬಾಲೆಯರು ವಿರಳ.. ಹಿಡಿದಿದೆ ಫ್ಯಾಶನ್ನಿನ ಮರುಳ.. ಮಾಯವಾಗಿವೆ ಉದ್ದ ಜಡೆ ಮೊಗ್ಗುಗಳ.. ಕೇಶ ಕತ್ತರಿಸಿ ನಡೆಯುವರು ಸರಳ..! ಅನುಕರಣೆ ಹೆಸರಲಿ ನಡೆದಿದೆ ಅಂಧರ ಆಟ.. ತೋರುತಿದೆ ತೆಳು ಧಿರಿಸಿನಲಿ ಅವಳ ಮೈಮಾಟ.‌. ಹಗಲಿರುಳೂ ಅವಳ ಪೀಡಿಸುತ್ತಿದೆ ಕಾಮುಕರ ಕೂಟ..! ಮಾಧ್ಯಮಗಳಲ್ಲಿ ಜಾಹಿರಾತುಗಳ ದರಬಾರು.. ಮಹಿಳೆಯರ ಮನೆ-ಮನಗಳಲ್ಲಿ ಅವುಗಳದ್ದೇ ಸಂಚಾರು.. ಹೋಗುತಿರುವ ಅವಳದೇ ಮಾನಕೆ ಇಲ್ಲವೇ ಇಲ್ಲ ಕೊಂಚ ವಿಚಾರ..! *********

ಪ್ರಸ್ತುತ

16ನೇಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನ ಕಲ್ಕುಳಿ ವಿಠಲ ಹೆಗಡೆಯವರ ಅಧ್ಯಕ್ಷ ಬಾಷಣ [15:50, 1/10/2020] H C. 2: ನಮ್ಮ ಶೃಂಗೇರಿಯ ಆದಿಕವಿ ಬಾಹುಬಲಿಯನ್ನು ಸ್ಮರಿಸುತ್ತಾ ನನ್ನ ಭಾಷಣವನ್ನು ಪ್ರಾರಂಭಿಸುತ್ತಿದ್ದೇನೆ. ಜಿಲ್ಲಾ ೧೬ನೇ ಕನ್ನಡ ಸಾ ಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಪದವಿಯ ಈ ಗೌರವವನ್ನು ನಾನು ಬಯಸಿರಲಿಲ್ಲ; ನಿರೀಕ್ಷಿಸಿಯೂ ಇರಲಿಲ್ಲ. ಆದರೂ ನೀವೆಲ್ಲರೂ ಪ್ರೀತಿಯಿಂದ ಈ ಗೌರವ ನೀಡಿದ್ದೀರಿ. ಇದಕ್ಕಾಗಿ ನಾನು ನಿಮಗೆಲ್ಲರಿಗೂ ಅಭಾರಿಯಾಗಿದ್ದೇನೆ.. ನಾನು ಈ ಮೊದಲು ಸ್ಮರಿಸಿದ ಬಾಹುಬಲಿ ಎಂಬ ಜೈನ ಕವಿಯು, ಶೃಂಗೇರಿಯೂ […]

ಕಾವ್ಯಯಾನ

ಸೀರೆಯ ಸಹವಾಸ ತ್ರಿವೇಣಿ ಜಿ.ಹೆಚ್ ಸೀರೆಯ ಸಹ ವಾಸ. ಸೆರಗು ನಿರಿಗೆಗಳ ಸಮೀಕರಿಸಿ ಉಬ್ಬಿದೆದೆ ಕಂಡೂ ಕಾಣಿಸದಂತೆ ಮಣಿಸಿ ನಡುವೆ ‌”ನಡು”ವಿನ ಆಕಾರವ ಅಂದಗಾಣಿಸಿದರೂ ಜಗ್ಗುವ ಬೊಜ್ಜು. ಒಂದೊಂದು ಸೀರೆ ಉಟ್ಟಾಗಲೂ ಮತ್ತೆಷ್ಟೋ ನೆನಪುಗಳ ಕದ ಬಡಿದು ಅಳಿಸಲಾಗದವನ್ನಲ್ಲೇ ಮುಚ್ಚಿಟ್ಟು… ಕಣ್ಣ ಕನಸುಗಳನ್ನೂ ಬೆಚ್ಚಗಿಟ್ಟು… ಜರಿ ಅಂಚಿನ ಸೀರೆ, ಅಲ್ಲಲ್ಲಿ ಸಣ್ಣ ಹೂಬಳ್ಳಿಯಂಚು, ನವಿರು ಭಾವ ಒಲವ ಮೆಲುಕು. ಚಿತ್ತಾಕರ್ಷಕ ಚಿತ್ತಾರ. ಉಟ್ಟು ತೊಟ್ಟು ಸಂಭ್ರಮಿಸಿದ ಆ ಘಳಿಗೆ. ಅಷ್ಟೊಂದು ಸುಲಭವಲ್ಲ ಸೆರಗ ತುದಿಯಲ್ಲಿ ಕನಸು ಕಟ್ಟಿಕೊಂಡೇ […]

Back To Top