ಹೊತ್ತಾರೆ

ಹೊತ್ತಾರೆ

ಅಮೇರಿಕಾದಿಂದ ಅಶ್ವಥ್ ಬರೆಯುತ್ತಾರೆ ಅಶ್ವಥ್ ಅಕ್ಕಯ್ಯನೆಂಬ ಯಶೋಧೆ ನಾನು ಆಗತಾನೇ ಬೈಕಿನಿಂದಿಳಿದು ಹೆಲ್ಮೆಟ್ ತೆಗೆಯುತ್ತಿದ್ದೆ. ಹೊಲದ ಕಡೆ ಹೊರಟಿದ್ದ ರಂಗಪ್ಪಣ್ಣ ನನ್ನನ್ನು ನೋಡಿ ತಕ್ಷಣ ಗುರುತಿಸಲಾಗದೇ, ಹಾಗೆಯೇ ಸ್ವಲ್ಪ ಹೊತ್ತು ನಿಂತರು. “ ಓಹೋಹೋಹೋಹೋ… ಏನ್ ಅಳಿಮಯ್ಯಾ, ಅಪ್ರೂಪದಂಗೆ….. ಎಷ್ಟೊಂದ್ ವರ್ಷ ಆಗಿತ್ತಲ್ಲ ನಿಮ್ಮನ್ನ ನೋಡಿ, ಹಾಂ?” ಅಂತ ತನ್ನದೇ ರಾಗದಲ್ಲಿ ರಂಗಪ್ಪಣ್ಣ ಮಾತಾಡಿಸಿ ಹೆಗಲಮೇಲೆ ಹೊತ್ತಿದ್ದ ನೇಗಿಲನ್ನೂ ಇಳಿಸದಂತೆ ಹಾಗೆಯೇ ನೋಡುತ್ತಾ ನಿಂತರು. “ಏನ್ ಮಾಡೋದು ರಂಗಪ್ಪಣ್ಣ? ಹೊಟ್ಟೆಪಾಡು, ಊರುಬಿಟ್ಟು ಊರಿಗೆ ಹೋದ ಮೇಲೆ ಅಪರೂಪವೇ […]

ಪ್ರಸ್ತುತ

ವಿವೇಕಾನಂದರ ಆಶಯ ಗಣೇಶಭಟ್ ಶಿರಸಿ ಸ್ವಾಮಿ ವಿವೇಕಾನಂದರ ಆಶಯಗಳು ವಾಸ್ತವವಾಗುವ ಬಗೆ…… ಪ್ರತಿವರ್ಷದಂತೆ ಈ ವರ್ಷವೂ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಆಚರಿಸಲಾಯಿತು. ಅವರ ಫೋಟೊ ಇಟ್ಟು, ಹೂ ಹಾಕಿ, ಅವರ ಆದರ್ಶಗಳನ್ನು ಪಾಲಿಸಿ ಎಂದು ಭಾಷಣಗಳ ಸುರಿಮಳೆಯೂ ಆಯಿತು. ಆದರೆ, ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ವಾಸ್ತವವಾಗಿಸುವ ಬಗೆ ಹೇಗೆಂದು ಯಾವೊಬ್ಬ ಭಾಷಣಕಾರರೂ ಹೇಳಲಿಲ್ಲ. ಅವರ ಹೆಸರಿನಲ್ಲಿ ತಮ್ಮ ಸಂಘಟನೆಗಳನ್ನು ಬಲಪಡಿಸಿಕೊಳ್ಳುತ್ತಿರುವವರೂ ಸಹ ಸ್ವಾಮೀಜಿಯ ಉನ್ನತ ಆದರ್ಶಗಳನ್ನು ಭೂಮಿಗಿಳಿಸುವ ವ್ಯವಹಾರಿಕ ಚಿಂತನೆಯ ಕುರಿತಾಗಿ ಎಂದೂ ಹೇಳುವುದಿಲ್ಲ. ಯಾಕೆಂದರೆ, ವಿವೇಕಾನಂದರ […]

ಗಝಲ್ ಸಂಗಾತಿ

ಗಝಲ್ ಡಾ.ಗೋವಿಂದ ಹೆಗಡೆ ನಿನ್ನ ಕಣ್ಣೋಟ ತಾಕಿ ಇಲ್ಲಿ ಬೆಳಕು ಹರಿದಿದೆ ನಿನ್ನ ಕರಸ್ಪರ್ಶದಲ್ಲಿ ಪುಲಕ ಹೊನಲಾಗಿದೆ ಮಿಂಚು ಗೂಳಿ ಮೈಯನಿಡೀ ಉತ್ತು ಬಿತ್ತಿದೆ ಫಸಲು ಹೇಗಿರಬಹುದು ಕಾತರ ಕುಡಿಯಾಗಿದೆ ಎಂತಹ ಕರಿ ದುಗುಡ ಮಡುವಾಗಿತ್ತಿಲ್ಲಿ ನಿನ್ನ ಕೈ ಸೋಕಿದ್ದೇ ತಡ ಎಲ್ಲ ಬದಲಾಗಿದೆ ಸುಧೆಯನುಂಡವರು ಮಾತ್ರ ಅಮರರೇನು ನೀನು ತಂದ ಅನುರಾಗಕ್ಕೆ ಸಾವೆಲ್ಲಿದೆ ಹಿಗ್ಗನ್ನು ಬಿತ್ತಿ ಸುಗ್ಗಿ ಮಾಡುವ ರೀತಿ ನಿನ್ನದೇ ಸೌದಾಮಿನಿ ನೀನು ಈಗ ಕಣಜ ತುಂಬಿದೆ ************

ಅವ್ಯಕ್ತಳ ಅಂಗಳದಿಂದ

ಅರಿವು ಅವ್ಯಕ್ತ ಎಲ್ಲಾ ಮಕ್ಕಳ ರಿಸಲ್ಟ್ ಗಳು ಒಂದಾದಮೇಲೊಂದು ಮೆಸೇಜ್ ಗಳಾಗಿ ನನ್ನ ಬಳಿ ಬರುತ್ತಿವೆ, ಕೆಲವು ಮೆಸೇಜ್ ಗಳು, ಕೆಲವು ಮುಖಗಳು, ಪ್ರಸನ್ನತೆಯ ಅಲೆಗಳು, ಸ್ವೀಟಿನ ಡಬ್ಬಗಳು, ಕೃತಜ್ಞತೆಗಳು,ಕಥೆಗಳು ಒಂದಾದಮೇಲೊಂದು ಸಿಹಿ ಸುದ್ದಿಗಳು ಎಳೆ ಎಳೆಯಾಗಿ ಹರಿದುಬಂದರೆ ನನಗೆ ಮಾತ್ರ ಮನಸ್ಸಿನಲ್ಲೊಂದು ಆತಂಕ! ಮುಖದಲ್ಲಿ ನಗುವಿದ್ದರೂ ಬಾಯಿ ತುಂಬಾ ಆಶೀರ್ವಾದಗಳಿದ್ದರೂ ಅವಳ ರಿಸಲ್ಟ್ ಏನಾಯ್ತು?! ಇನ್ನೂ ವಿಷಯ ಬರಲಿಲ್ಲವಲ್ಲ ಎಂಬುದು ಮಾತ್ರ ಮನಸಲ್ಲಿ ಬೇರೂರಿತ್ತು. ಬರುವ ಮಕ್ಕಳನ್ನೆಲ್ಲಾ ಕೇಳುವುದು “ಅವಳ ರಿಸಲ್ಟ್ ಏನಾಯ್ತು?” “ಯಾರಿಗಾದರೂ ಸಿಕ್ಕಿ […]

ಕಾವ್ಯಯಾನ

ಒಲವಿನಾಟ ಮಧುವಸ್ತ್ರದ್ ಕೃಷ್ಣಾ..ಒಲವಿನಾಟವ ಆಡು ಬಾ ಕಾದಿರುವಳು ಬೆಡಗಿ.. ಹೃದಯ ಕಸಿದು ಮನವ ಬೆಸೆದು ಎಲ್ಲಿರುವೆ ನೀ ಅಡಗಿ.. ಕರ್ಪೂರಗೊಂಬೆ ರೂಪಸಿ ರಂಭೆ ಕಾಯುತಿಹಳು ಸೊರಗಿ.. ಸೋಕಿದೊಡೆ ನಿನ್ನ ಪ್ರೇಮಜ್ವಾಲೆ ನೀರಾಗುವಳು ಕರಗಿ.. ಸನಿಹ ನೀನಿರೆ ಮೆಲ್ಲುಸಿರಾಯ್ತು ಪ್ರಣಯ ಕವನ‌.. ಸೂಸಿತು ತಂಗಾಳಿ ಹಾಡುತಲಿ ಒಲವಿನ ಸವಿಗಾನ.. ತರುಲತೆ ತೂಗಿಬಾಗಿ ನೀಡಿಹವು ಪ್ರೇಮ ಸಿಂಚನ‌‌.. ವನದೇವಿ ನಕ್ಕು ಹಾರೈಸಿಹಳು ನಮ್ಮ ಶುಭಮಿಲನ.. ತನುಮನ ಕಾತರದಿ ಕಾದಿಹವು ನಿನ್ನಾಗಮನದ ಕ್ಷಣ.. ಹೊಳೆದಿಹ ಕೆಂದಾವರೆ ಮೊಗಕೆ ಮುತ್ತಿನಾಭರಣ.. ಬಳುಕುವ ದೇಹಸಿರಿಗೆ […]

ಅನುವಾದ ಸಂಗಾತಿ

“ಗಂಡು ಪ್ರೇಮದಲ್ಲಿದ್ದಾಗ” ಸಿರಿಯನ್ ಕವಿ: ನಿಜಾರ್ ಕಬ್ಬಾನಿ ಕನ್ನಡಕ್ಕೆ:ಕಮಲಾಕರ ಕಡವೆ ಗಂಡಸು ಪ್ರೇಮದಲ್ಲಿದ್ದಾಗಹಳೆಯ ಶಬ್ದಗಳ ಹೇಗೆ ಉಪಯೋಗಿಸಿಯಾನು?ಪ್ರೇಮಿಯ ಅಪೇಕ್ಷೆಯಲ್ಲಿಇರುವ ಹೆಣ್ಣುಭಾಷಾತಜ್ಞರು, ವ್ಯಾಕರಣತಜ್ಞರುಗಳಜೊತೆ ಮಲಗ ಬೇಕೇನು? ನಾನು ಏನೂ ಹೇಳಲಿಲ್ಲನನ್ನ ಪ್ರೀತಿಯ ಹೆಣ್ಣಿಗೆ.ಬದಲಿಗೆ, ಪ್ರೇಮಕ್ಕೆ ಇರುವ ವಿಶೇಷಣಗಳನ್ನುಸೂಟಕೇಸಿನಲ್ಲಿ ತುಂಬಿಕೊಂಡುಎಲ್ಲ ಭಾಷೆಗಳಿಂದ ದೂರ ಓಡಿಹೋದೆ. ಮೂಲ: WHEN A MAN IS IN LOVE” When a man is in lovehow can he use old words?Should a womandesiring her loverlie down withgrammarians and […]

ಕಾವ್ಯಯಾನ

ನಿನ್ನ ನೆನಪಿನ ಮೀನು..! ಡಾ.ಜಯಪ್ಪ ಹೊನ್ನಾಳಿ(ಜಯಕವಿ) ನಿನ್ನ ನೆನಪಿನ ಮೀನು ಎಷ್ಟೊಂದು ಬಣ್ಣದಲಿ ಆಡುತಿವೆ ಎದೆಗೊಳದ ತಿಳಿಯಾಳದಲ್ಲಿ..! ಕನಸ ರೆಪ್ಪೆಯ ತೆರೆದು ಕನವರಿಕೆಯಲೆ ನೆರೆದು ಮಳೆಬಿಲ್ಲ ಮಿಂದಂತೆ ಮಧು ಮೇಳದಲ್ಲಿ..! ಹೊಸಿಲ ಚುಂಬಿಸುತಿಹುದು ಹೊಂಬಿಸಿಲಿನೊಡಗೂಡಿ ಹೊಸತೊಂದು ಹಾರೈಕೆ ಹಳೆ ನೋವ ಕೊಂದು..! ನಗುವ ನಂದನದೊಲವು ತಂಗಾಳಿ ತೊಟ್ಟಿಲಲಿ ಪರಿಮಳದಿ ತಾ ತುಂಬಿ ನವ ಭಾವ ತಂದು..! ಬಣಗುಡುವ ಬದುಕಲ್ಲಿ ನೀ ಬಂದು ನಕ್ಕಂದು ಮರಳಿ ಬಂದಿತು ಮನಕೆ ಮತ್ತೆ ಮಲೆನಾಡು..! ಜೀವವಾಯಿತು ಜಿಂಕೆ ರೆಕ್ಕೆ ಬಿಚ್ಚಿತು ನವಿಲು […]

ಕಾವ್ಯಯಾನ

ನೆನೆಯುವೆ ಕವಿತೆಯಲಿ ತ್ರಿವೇಣಿ ಜಿ.ಹೆಚ್. ಮಾತು ಮಾತಿಗೂ ಕೋಪ ಮನಸು ಮುನಿದ ರೂಪ.. ಈಗ ಕೇಳು! ರಾಧೆಯ ಮನದಲಿ ಪರಿತಾಪ… ಸರಿಸು ಮೌನವ ಕೊಳಲ ಆಲಾಪದಲಿ. ಆದರೀಗ, ರಾಧೆ ಒಲವ ಹಾಸಿ ನಿನ್ನ ಅರಸಿ ಭಜಿಸಿ ಪೂಜಿಪಳು… ಮರಳಿ ಬಿಡು ಬಿದಿರ ಕೊಳಲು ನುಡಿಸಲು.. ಹುಸಿ ಮುನಿಸು ತಣಿಸಲು ಮಾತು ಮೌನ ಬೆಸೆದು ಒಳಗೆ.. ಶರಣಾಗಲಿ ಮನದೊಳಗೆ. ಮಾಧವ, ಬಾರದೆ ಸರಿಯದಿರು… ಬರೆದು ನೆನೆಯುವೆ ಕವಿತೆಯಲಿ. **********

ದುರಿತ ಕಾಲದ ದನಿ

ರಣ ಹಸಿವಿನಿಂದ! ಮೊನ್ನೆ ಇವರೂ ಹಲವು ಯುದ್ದಗಳ ಗೆದ್ದಿದ್ದರುಗೆದ್ದ ರಾಜ್ಯದ ಹೆಣ್ನುಗಳ ಬೇಟೆಯಾಡಿದ್ದರುಇದೀಗ ಸಾಂತ್ವಾನ ಕೇಂದ್ರಗಳ ತೆರೆದು ಕೂತಿದ್ದಾರೆ! ಮೊನ್ನೆ ಇವರೂ ಊರೂರುಗಳಿಗೆ ಬೆಂಕಿ ಹಚ್ಚಿದ್ದರುಉರಿದ ಮನೆಗಳಲ್ಲಿ ಹೆಂಗಸರು ಮಕ್ಕಳೆನ್ನದೆ ತಲೆ ತರೆದಿದ್ದರುಇದೀಗ ಆನಾಥಾಶ್ರಮಗಳ ತೆರೆದು ಕೂತಿದ್ದಾರೆ! ಮೊನ್ನೆ ಇವರೂ ಕೋವಿ ಖಡ್ಘಗಳ ಹಿಡಿದಿದ್ದರುಇದೀಗ ಧರ್ಮಗ್ರಂಥಗಳ ಪಾರಾಯಣ ಮಾಡುತ್ತಿದ್ದಾರೆ! ಮೊನ್ನೆಮೊನ್ನೆಯವರೆಗೂ ನಡೆದ ಅಕಾರಣ ಯುದ್ದಗಳಿಗೀಗಸಕಾರಣಗಳ ಪಟ್ಟಿ ಮಾಡುತ್ತ ಕೂತಿದ್ದಾರೆ ತರಿದ ತಲೆಗಳಭೋಗಿಸಿದ ಯೋನಿಗಳಕಚ್ಚಿದ ಮೊಲೆಗಳಕಲಸಿಹಾಕಿದ ಭ್ರೂಣಗಳನಿಖರ ಅಂಕಿಅಂಶಗಳಿಗಾಗಿ ತಲೆ ಕೆರೆದುಕೊಳ್ಳುತ್ತಿದ್ದಾರೆ ಪ್ರತಿ ಮನುಷ್ಯನಿಗೂಇರಬಹುದಾದ ಮೃಗದ ಮುಖವಾಡವಕಳಚಲೆತ್ನಿಸಿದಷ್ಟೂ ಗೊಂದಲವಾಗುವುದು […]

ಕಾವ್ಯಯಾನ

ನೆನೆವರಾರು ನಿನ್ನ ಮಧು ವಸ್ತ್ರದ್ ಮುಂಬಯಿ ಓ ಅಂಬಿಗಾ..ಬೇಗ ಬೇಗನೆ ಮುನ್ನೆಡೆಸು ದೋಣಿಯ.. ತೀರದಾಚೆಯ ಹಳ್ಳಿ ಹೊಲದಲಿ‌ ಕಾಯುತಿಹನು ನನ್ನಿನಿಯ.. ಅಂಬಿಗಣ್ಣಾ ಶಾಲೆಯ ಸಮಯ ಆಯ್ತು ನಡೆ ಬೇಗ.. ಎಲವೋ ಅಂಬಿಗ ದಡದಾಚೆಯ ಜನರ ಓಟುಬೇಕು ನಡೆ ಈಗ.. ತಮ್ಮ ತಮ್ಮದೇ ಲೋಕದಲಿ ವಿಹರಿಸುತಿಹರು ಎಲ್ಲರು.. ಹೊಳೆಯ ದಾಟಿದ ನಂತರ ಬಡ ಅಂಬಿಗನ ನೆನೆವರಾರು.. ಬಿಸಿಲು ಮಳೆ ಗುಡುಗುಸಿಡಿಲು ಕತ್ತಲಾದರೆ ಸುತ್ತಲು.. ಈಜುಬಾರದವರಿಗೆಲ್ಲ ಆಧಾರ ನೀನೆ ಗುರಿ ಮುಟ್ಟಲು.. ಶಾಂತಚಿತ್ತದಿ ಹೊಣೆಯ ಹೊತ್ತಿದೆ ನಿನ್ನಯ ಬಾಗಿದ ಹೆಗಲು.. […]

Back To Top